Tag: Delhi High Court

  • ವಿಮಾನದೊಳಗೆ ಮಾಸ್ಕ್ ಧರಿಸಲು ನಿರಾಕರಿಸುವ ಪ್ರಯಾಣಿಕರನ್ನು ಹೊರಹಾಕಿ – DGCA

    ವಿಮಾನದೊಳಗೆ ಮಾಸ್ಕ್ ಧರಿಸಲು ನಿರಾಕರಿಸುವ ಪ್ರಯಾಣಿಕರನ್ನು ಹೊರಹಾಕಿ – DGCA

    ನವದೆಹಲಿ: ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಎಚ್ಚರಿಕೆ ನೀಡಿದ ನಂತರವೂ ವಿಮಾನದೊಳಗೆ ಮಾಸ್ಕ್ ಧರಿಸಲು ನಿರಾಕರಿಸಿದ್ರೆ ಅಂತಹ ಪ್ರಯಾಣಿಕರನ್ನು ವಿಮಾನಯಾನ ಸಂಸ್ಥೆಯು ಹೊರಹಾಕಬೇಕು ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ತಿಳಿಸಿದೆ.

    ಪ್ರಯಾಣಿಕರು ಮಾಸ್ಕ್ ಧರಿಸುವುದನ್ನು ವಿಮಾನಯಾನ ಸಂಸ್ಥೆಗಳು ಖಚಿತಪಡಿಸಿಕೊಳ್ಳಬೇಕು. ಜೊತೆಗೆ ವಿಶೇಷ ಸಂದರ್ಭದಲ್ಲಿ ಅನುಮತಿಯೊಂದಿಗೆ ಮಾತ್ರ ವಿನಾಯಿತಿ ನೀಡುವಂತೆ ಹೇಳಿದೆ. ಇದನ್ನೂ ಓದಿ: ಮಾಸ್ಕ್‌ ಧರಿಸಲ್ಲ ಎಂದ ಪ್ರಯಾಣಿಕ – ಅರ್ಧದಲ್ಲಿಯೇ ವಿಮಾನ ವಾಪಸ್‌

    ಮಾಸ್ಕ್ ಧರಿಸದವರಿಗೆ ದಂಡ ವಿಧಿಸಬೇಕು. ಮಾಸ್ಕ್ ನಿರಾಕರಿಸಿದರೆ ಅಥವಾ ಪ್ರಯಾಣದ ಮಧ್ಯದಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ, ಅಂತಹವರನ್ನು ಅಶಿಸ್ತಿನ ಪ್ರಯಾಣಿಕ ಎಂದು ಪರಿಗಣಿಸುವಂತೆ ತಾಕೀತು ಮಾಡಿದೆ.

    ಸಿಐಎಸ್‌ಎಫ್ ಮತ್ತು ಇತರೆ ಪೊಲೀಸ್ ಸಿಬ್ಬಂದಿ ಮಾಸ್ಕ್ ಧರಿಸದವರಿಗೆ ಒಳಗೆ ಪ್ರವೇಶಿಸಲು ಅನುಮತಿ ನೀಡಬಾರದು. ಟರ್ಮಿನಲ್‌ನ ಪ್ರಮುಖ ಸ್ಥಳಗಳಲ್ಲಿ ಹ್ಯಾಂಡ್ ಸ್ಯಾನಿಟೈಸರ್ ಒದಗಿಸಬೇಕು ಎಂದೂ ಸೂಚನೆ ನೀಡಿದೆ. ಇದನ್ನೂ ಓದಿ: ವಿಮಾನ ತುರ್ತು ಭೂಸ್ಪರ್ಶ – ನನ್ನ ಶಿಫ್ಟ್‌ ಮುಗಿಯಿತು ಮತ್ತೆ ಫ್ಲೈ ಮಾಡಲ್ಲ ಎಂದ ಪಾಕ್‌ ಪೈಲಟ್‌!

    ಇದೇ 3ರಂದು ದೆಹಲಿ ಹೈಕೋರ್ಟ್ ನೀಡಿದ್ದ ಆದೇಶದ ಮೇರೆಗೆ ಡಿಜಿಸಿಎ ಸುತ್ತೋಲೆ ಹೊರಡಿಸಿದೆ. ಮಾಸ್ಕ್ ಧರಿಸದವರು, ಸ್ವಚ್ಛತೆ ಕಾಪಾಡದವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗಳ್ಳಲು ಗಗನಸಖಿಯರು, ಕ್ಯಾಪ್ಟನ್‌ಗಳು, ಪೈಲಟ್‌ಗಳು, ವಿಮಾನ ನಿಲ್ದಾಣ ಹಾಗೂ ವಿಮಾನದಲ್ಲಿ ನಿಯೋಜಿಸಿರುವ ಸಿಬ್ಬಂದಿಗೆ ಡಿಜಿಸಿಎ ಪ್ರತ್ಯೇಕ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್ ಹೇಳಿತ್ತು.

  • ಅತ್ಯಾಚಾರ ಪ್ರಕರಣ ದಾಖಲಿಸಿ, ರದ್ದುಗೊಳಿಸಲು ನ್ಯಾಯಾಲಯಕ್ಕೆ ತರುವ ಪ್ರಕರಣಗಳಿಗೆ ಕಡಿವಾಣ ಹಾಕಬೇಕು – ಹೈಕೋರ್ಟ್‌

    ಅತ್ಯಾಚಾರ ಪ್ರಕರಣ ದಾಖಲಿಸಿ, ರದ್ದುಗೊಳಿಸಲು ನ್ಯಾಯಾಲಯಕ್ಕೆ ತರುವ ಪ್ರಕರಣಗಳಿಗೆ ಕಡಿವಾಣ ಹಾಕಬೇಕು – ಹೈಕೋರ್ಟ್‌

    ನವದೆಹಲಿ: ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿ, ಅವುಗಳನ್ನು ರದ್ದುಗೊಳಿಸಲು ನ್ಯಾಯಾಲಯಕ್ಕೆ ತರುವ ಪ್ರಕರಣಗಳಿಗೆ ಕಡಿವಾಣ ಹಾಕಬೇಕು ಎಂದು ದೆಹಲಿ ಹೈಕೋರ್ಟ್‌ ಹೇಳಿದೆ.

    ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 376 (ಅತ್ಯಾಚಾರ), 354 (ಮಹಿಳೆಯ ಮೇಲೆ ಹಲ್ಲೆ) ಮತ್ತು 498-A (ಮಹಿಳೆಯನ್ನು ಕ್ರೌರ್ಯಕ್ಕೆ ಒಳಪಡಿಸುವ ಪತಿ ಅಥವಾ ಪತಿಯ ಸಂಬಂಧಿ) ಅಡಿಯಲ್ಲಿ ದಾಖಲಾದ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಈ ಅಭಿಪ್ರಾಯ ಪಟ್ಟಿದೆ. ಇದನ್ನೂ ಓದಿ: ಕುತುಬ್ ಮಿನಾರ್ ಮಸೀದಿಯಲ್ಲಿ ನಮಾಜ್ ತಡೆಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಕೋರ್ಟ್ ನಕಾರ

    ಕಕ್ಷಿದಾರ ಮಹಿಳೆಯೊಬ್ಬರು ‌ಸೆಕ್ಷನ್‌ 376, 354 ಮತ್ತು 498-A ಅಡಿಯಲ್ಲಿ ತನ್ನ ಮಾವನ ವಿರುದ್ಧ ದಾಖಲಿಸಿದ್ದ FIR ಅನ್ನು ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ರದ್ದುಗೊಳಿಸಿದ ಈ ಅಭಿಪ್ರಾಯ ಪಟ್ಟಿದ್ದಾರೆ.

    ಸಾಮಾನ್ಯವಾಗಿ IPC ಸೆಕ್ಷನ್ 376ರ ಅಡಿಯಲ್ಲಿ ದಾಖಲಿಸಲಾದ ಪ್ರಕರಣಗಳನ್ನು ರದ್ದುಗೊಳಿಸಬಾರದು, ಅವರನ್ನು ಸಮಾಜದ ವಿರುದ್ಧ ಅಪರಾಧಿಗಳೆಂದು ಪರಿಗಣಿಸಬೇಕು. ಹೀಗಿದ್ದೂ ಮಹಿಳೆಯ ಭವಿಷ್ಯದ ಮೇಲೆ ಅವಲಂಬಿತವಾದಾಗ, ಆಕೆ ತನ್ನನ್ನು ಅತ್ಯಾಚಾರ ಎಸಗಿಲ್ಲ ಎಂದು ಹೇಳಿದಾಗ ಎಫ್‌ಐಆರ್‌ ರದ್ದುಗೊಳಿಸುವುದು ನಮ್ಮ ಹಿತಾಸಕ್ತಿಯಾಗಿದೆ ಎಂದು ಕೋರ್ಟ್ ಹೇಳಿದೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ಹಲವು ದೇಶಗಳಲ್ಲಿ ಬ್ಯಾನ್ : ಭಾರತದ ಹೆಸರು ಕೆಡಿಸುವ ಹುನ್ನಾರ ಎಂದ ನಿರ್ದೇಶಕ

    STOP RAPE

    ಐಪಿಸಿಯ ಸೆಕ್ಷನ್ 376, 377, 498-A ಅಡಿಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಇದೇ ಸೆಕ್ಷನ್‌ ಅಡಿಯಲ್ಲಿ ಚಾರ್ಜ್‌ ಶೀಟ್‌ ಸಹ ಸಲ್ಲಿಸಲಾಗಿದೆ. ಆದರೆ ಅಪರಾಧ ಪ್ರಕ್ರಿಯಾ ಸಂಹಿತೆಯ (CRPC) ಸೆಕ್ಷನ್ 164ರ ಅಡಿಯಲ್ಲಿ ನೀಡಿದ ಹೇಳಿಕೆಯಲ್ಲಿ ದೂರುದಾರರು ತನ್ನ ಮಾವ ಅತ್ಯಾಚಾರ ಪ್ರಯತ್ನ ಮಾತ್ರ ಮಾಡಿದ್ದಾರೆ ಅತ್ಯಾಚಾರ ಮಾಡಿಲ್ಲ ಎಂಬುದಾಗಿ ಹೇಳಿಕೆ ನೀಡಿದ್ದಾರೆ.

    ತನ್ನ ಸ್ವಂತ ಇಚ್ಛೆಯಿಂದ ಆಕೆ ರಾಜಿ ಮಾಡಿಕೊಂಡಿದ್ದಾರೆ. ಇದರಿಂದ ಎಫ್‌ಐಆರ್ ರದ್ದುಗೊಳಿಸಲು ಯಾವುದೇ ಅಭ್ಯಂತರವಿಲ್ಲ ಎಂದು ದೂರುದಾರರು ನ್ಯಾಯಾಲಯಕ್ಕೆ ತಿಳಿಸಿದರು. ಇದನ್ನೂ ಓದಿ: ಜೂನ್ 13 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ರಾಷ್ಟ್ರಪತಿ ರಾಮನಾಥ್ ಕೋವಿಂದ್

    court

    ದೂರುದಾರರು ರಾಜಿ ಮಾಡಿಕೊಳ್ಳಲು 10 ಲಕ್ಷ ರೂ. ಡಿಮ್ಯಾಂಡ್ ಡ್ರಾಫ್ಟ್ ಅನ್ನು ಸ್ವೀಕರಿಸಿದ್ದಾರೆ. ಹಾಗಾಗಿ ಪ್ರಕರಣವನ್ನು ರದ್ದುಗೊಳಿಸುವುದು ಸೂಕ್ತವೆಂದು ನ್ಯಾಯಾಲಯ ಪರಿಗಣಿಸಿತು. ಅಲ್ಲದೆ ಅರ್ಜಿದಾರರಿಗೆ ಒಂದು ವಾರದೊಳಗೆ ದೆಹಲಿ ಹೈಕೋರ್ಟ್ ವಕೀಲರ ಕಲ್ಯಾಣ ನಿಧಿಗೆ 12,500 ರೂ ಮೊತ್ತವನ್ನು ಠೇವಣಿ ಮಾಡುವಂತೆ ಸೂಚಿಸಿತು.

    ಯಾವುದೇ ಪ್ರಕರಣವು ಮುಕ್ತಾಯವಾಗುತ್ತಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಅಲ್ಲದೆ ಇದು ವಿಚಾರಣೆಯನ್ನು ಕಡಿಮೆ ಮಾಡುತ್ತದೆ ಎಂದು ನ್ಯಾಯಮೂರ್ತಿ ಶರ್ಮಾ ದೂರುದಾರರ ನಿಲುವನ್ನು ಶ್ಲಾಘಿಸಿದರು. ಅರ್ಜಿದಾರರ ಪರ ವಕೀಲರಾದ ಅಭಿಷೇಕ್ ಶರ್ಮಾ, ರಾಹುಲ್ ಶರ್ಮಾ ಮತ್ತು ಹಿರಿಯ ವಕೀಲ ಅರುಣ್ ಭಾರದ್ವಾಜ್ ವಾದ ಮಂಡಿಸಿದ್ದರು.

  • ಕುತುಬ್ ಮಿನಾರ್ ಮಸೀದಿಯಲ್ಲಿ ನಮಾಜ್ ತಡೆಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಕೋರ್ಟ್ ನಕಾರ

    ಕುತುಬ್ ಮಿನಾರ್ ಮಸೀದಿಯಲ್ಲಿ ನಮಾಜ್ ತಡೆಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಕೋರ್ಟ್ ನಕಾರ

    ನವದೆಹಲಿ: ದೆಹಲಿಯ ಕುತುಬ್ ಮಿನಾರ್ ಸಂಕೀರ್ಣದಲ್ಲಿರುವ ಮೊಘಲ್ ಮಸೀದಿಯಲ್ಲಿ ನಮಾಜ್ ಮಾಡುವುದನ್ನು ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

    ಸದ್ಯಕ್ಕೆ ಮನವಿ ಆಲಿಸುವ ತುರ್ತು ಇಲ್ಲ ಎಂದು ನ್ಯಾಯಮೂರ್ತಿಗಳಾದ ಮನೋಜ್ ಕುಮಾರ್ ಓಹ್ರಿ ಹಾಗೂ ಪೂನಂ ಎ ಬಂಬಾ ಅವರಿದ್ದ ರಜೆ ಕಾಲೀನ ಪೀಠವು ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ಹಲವು ದೇಶಗಳಲ್ಲಿ ಬ್ಯಾನ್ : ಭಾರತದ ಹೆಸರು ಕೆಡಿಸುವ ಹುನ್ನಾರ ಎಂದ ನಿರ್ದೇಶಕ

    ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಮೇ 6ರಂದು ಕೇವಲ 5 ಮಂದಿಗೆ ಮಸೀದಿಯಲ್ಲಿ ನಮಾಜ್ ಮಾಡಲು ಅನುಮತಿಸುವ ಮೂಲಕ ಪ್ರಾರ್ಥನೆಗೆ ಭಾಗಶಃ ತಡೆಯೊಡ್ಡಿತು. ನಂತರ ಮೇ 13ರಂದು ಅಧಿಕಾರಿಗಳು ಪ್ರಾರ್ಥನೆ ಸಂಪೂರ್ಣವಾಗಿ ನಿಲ್ಲಿಸಿದರು ಎಂದು ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎಂ.ಸುಫಿಯಾನ್ ಸಿದ್ದಿಕಿ ತಿಳಿಸಿದರು. ಇದನ್ನೂ ಓದಿ: ಜೂನ್ 13 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ರಾಷ್ಟ್ರಪತಿ ರಾಮನಾಥ್ ಕೋವಿಂದ್

    ಯಾವುದೇ ಆದೇಶ ನೀಡದೆ ಮೌಖಿಕ ಸೂಚನೆಗಳ ಮೂಲಕವೇ ಜನರ ಪ್ರಾರ್ಥನೆಗೆ ತಡೆಯೊಡ್ಡಲಾಗಿದೆ. ಇದು ಮೂಲಭೂತ ಹಕ್ಕುಗಳ ಉಲ್ಲಂಘನೆಯೂ ಆಗಿದೆ. ಕಾನೂನಾತ್ಮಕ ಆಡಳಿತವನ್ನು ಎತ್ತಿಹಿಡಿದು ರಕ್ಷಿಸಬೇಕು ಎಂದು ಸಿದ್ದಿಕ್ಕೆ ಮನವಿ ಮಾಡಿದ್ದರು.

    Qutub Minar

    ಶುಕ್ರವಾರ ಹಂಗಾಮಿ ಮುಖ್ಯ ನ್ಯಾಯಮೂರ್ತಿ (ACJ) ವಿಪಿನ್ ಸಾಂಘಿ ಅವರಿದ್ದ ಪೀಠದೆದುರು ಅರ್ಜಿಯನ್ನು ಪ್ರಸ್ತಾಪಿಸಿದಾಗ ರಜೆಕಾಲೀನ ಪೀಠದೆದುರು ಮನವಿ ಸಲ್ಲಿಸುವಂತೆ ಪೀಠ ತಿಳಿಸಿತ್ತು.

    ನಂತರ ಮೊಘಲ್ ಮಸೀದಿಯು ದೆಹಲಿಯ ಮೊಘಲ್ ಉದ್ಯಾನದ ಎದುರು ಕುತುಬ್ ಸಂಕೀರ್ಣದ ಪ್ರವೇಶದ್ವಾರದಲ್ಲಿದೆ. ಕುತುಬ್ ಮಿನಾರ್ ಆವರಣದಲ್ಲಿರುವ ವಿವಾದಿತ ಕುವ್ವಾತ್-ಉಲ್-ಇಸ್ಲಾಂ ಮಸೀದಿಗೂ ಇದಕ್ಕೂ ಸಂಬಂಧವಿಲ್ಲ ಎಂದು ಪೀಠ ಹೇಳಿ ವಿಚಾರಣೆ ನಿರಾಕರಿಸಿತು. ಇದನ್ನೂ ಓದಿ: 21ನೇ ಶತಮಾನದ ಭಾರತವು ಜನಕೇಂದ್ರಿತ ಆಡಳಿತದೊಂದಿಗೆ ಮುನ್ನಡೆಯುತ್ತಿದೆ: ಮೋದಿ

    Qutub Minar

    ಹಿನ್ನೆಲೆ ಏನು?
    ಕುವ್ವಾತ್- ಉಲ್- ಇಸ್ಲಾಂ ಮಸೀದಿಯಲ್ಲಿ ಹಲವು ಹಿಂದೂ ದೇವತೆಗಳ ಪ್ರತಿಮೆಗಳಿವೆ ಎಂದು ವಿವಿಧ ಹಿಂದುತ್ವವಾದಿ ಗುಂಪುಗಳು ವಾದಿಸಿದ್ದು ಹಿಂದೂ ಮತ್ತು ಜೈನ ದೇಗುಲಗಳನ್ನು ಧ್ವಂಸಗೊಳಿಸಿ ಇದನ್ನು ನಿರ್ಮಿಸಲಾಗಿದೆ. ಹೀಗಾಗಿ ಅಲ್ಲಿ ತಮಗೆ ಪ್ರಾರ್ಥನೆ ಸಲ್ಲಿಸುವ ಹಕ್ಕು ನೀಡಬೇಕು ಎಂದು ಆಗ್ರಹಿಸಿದ್ದವು.

  • ವೀಸಾ ಹಗರಣ – ನಿರೀಕ್ಷಣಾ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಾರ್ತಿ ಚಿದಂಬರಂ

    ವೀಸಾ ಹಗರಣ – ನಿರೀಕ್ಷಣಾ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಾರ್ತಿ ಚಿದಂಬರಂ

    ನವದೆಹಲಿ: ಅಕ್ರಮ ವೀಸಾ ನೀಡಿಕೆ ಆರೋಪದಡಿ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

    ಅಕ್ರಮ ವೀಸಾ ನೀಡಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ತಿ ಚಿದಂಬರಂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿಯ ವಿಶೇಷ ನ್ಯಾಯಾಲಯ ನಿನ್ನೆ ವಜಾಗೊಳಿಸಿತ್ತು. ಆ ಬಳಿಕ ಇದೀಗ ನಿರೀಕ್ಷಣಾ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದನ್ನೂ ಓದಿ: ವೀಸಾ ಹಗರಣ – ಕಾರ್ತಿ ಚಿದಂಬರಂಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

    ಪಿ. ಚಿದಂಬರಂ ಕೇಂದ್ರ ಗೃಹ ಮಂತ್ರಿಯಾಗಿದ್ದಾಗ 2011ರಲ್ಲಿ 263 ಚೀನಾ ಪ್ರಜೆಗಳಿಗೆ ವೀಸಾ ನೀಡಿದ ಆರೋಪದಲ್ಲಿ ಕಾರ್ತಿ ಚಿದಂಬರಂ ಮತ್ತು ಸಿಎ ಎಸ್.ಭಾಸ್ಕರ್ ರಾಮನ್ ಸೇರಿದಂತೆ ಮತ್ತಿತರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಇತ್ತೀಚೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ ಎಫ್‍ಐಆರ್‌ನ್ನು ಪರಿಗಣಿಸಿದ ಇಡಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕಾರ್ತಿ ನಂ.1 ಆರೋಪಿ ಎಂದು ಪ್ರಕರಣ ದಾಖಲಿಸಿಕೊಂಡಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಹುಚ್ಚ ಆತನಿಗೆ ಯಾವ ಆಸ್ಪತ್ರೆಯಲ್ಲೂ ಔಷಧಿ ಇಲ್ಲ: ಈಶ್ವರಪ್ಪ

  • ವಂದೇ ಮಾತರಂಗೂ ರಾಷ್ಟ್ರಗೀತೆಯಷ್ಟೇ ಗೌರವ ಕೋಡಿ – ದೆಹಲಿ ಹೈಕೋರ್ಟ್‌ಗೆ ಪಿಐಎಲ್

    ವಂದೇ ಮಾತರಂಗೂ ರಾಷ್ಟ್ರಗೀತೆಯಷ್ಟೇ ಗೌರವ ಕೋಡಿ – ದೆಹಲಿ ಹೈಕೋರ್ಟ್‌ಗೆ ಪಿಐಎಲ್

    ನವದೆಹಲಿ: ವಂದೇ ಮಾತರಂಗೂ ಜನ ಗಣ ಮನ ರಾಷ್ಟ್ರಗೀತೆಯಷ್ಟೇ ಗೌರವ ಸಿಗಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಬಿಜೆಪಿ ನಾಯಕ ಹಾಗೂ ಹಿರಿಯ ವಕೀಲ ಅಶ್ವಿನಿ ಉಪಾಧ್ಯಾಯ ದೆಹಲಿಯ ಹೈಕೋರ್ಟ್‌ಗೆ ಈ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

    ಎಲ್ಲ ಶಾಲೆ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಗೀತೆಯ ಜೊತೆಗೆ ವಂದೇ ಮಾತರಂ ಹಾಡುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸುವಂತೆ ಅವರು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕುತುಬ್ ಮಿನಾರ್ ಬಳಿ ಪೂಜೆ ಮಾಡುವ ಹಕ್ಕು ಯಾರಿಗೂ ಇಲ್ಲ – ASI ಖಡಕ್ ಉತ್ತರ

    ‘ವಂದೇ ಮಾತರಂ’ ನಮ್ಮ ಇತಿಹಾಸ, ಸಾರ್ವಭೌಮತೆ, ಏಕತೆ ಮತ್ತು ಹೆಮ್ಮೆಯ ಸಂಕೇತವಾಗಿದೆ. ಯಾವುದೇ ನಾಗರಿಕರು ಯಾವುದೇ ಬಹಿರಂಗ ಅಥವಾ ರಹಸ್ಯ ಕೃತ್ಯದಿಂದ ಅಗೌರವ ತೋರಿದರೆ ಅದು ಸಮಾಜ ವಿರೋಧಿ ಚಟುವಟಿಕೆ ಮಾತ್ರವಲ್ಲದೇ ನಮ್ಮ ಹಕ್ಕುಗಳ ವಿನಾಶವಾಗುತ್ತದೆ. ದೇಶದ ಸಾರ್ವಭೌಮ ಪ್ರಜೆಯಾಗಿರಲು ವಂದೇ ಮಾತರಂ ಗೀತೆಗೆ ಗೌರವ ನೀಡಬೇಕು. ಇದಕ್ಕೆ ಅಗೌರವ ಕಂಡು ಬಂದಲ್ಲಿ ತಡೆಯಬೇಕು ಎಂದು ಕೋರಿದ್ದಾರೆ.

    ದೇಶದಲ್ಲಿ ಎಲ್ಲೆಡೆ ವಂದೇ ಮಾತರಂ ನುಡಿಸಿದಾಗ ಎಲ್ಲರೂ ಎದ್ದುನಿಂತು ರಾಷ್ಟ್ರಗೀತೆಗೆ ನೀಡುವಂತೆ ಗೌರವ ನೀಡಬೇಕು, ಇದನ್ನು ನಾಟಕೀಯಗೊಳಿಸಬಾರದು. ಅಲ್ಲದೇ ವಾಣಿಜ್ಯ ಉಪಯೋಗಕ್ಕೆ ಗೀತೆಯನ್ನು ಬಳಸಿಕೊಳ್ಳಬಾರದು ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ರಹಸ್ಯ ಬಯಲಾಗುತ್ತೆಂಬ ಭಯಕ್ಕೆ ಮಾಜಿ ಚಾಲಕನ ಹತ್ಯೆಗೈದ YSRCP ಮುಖಂಡ

  • ಒಮ್ಮೆ ನಡೆಸುವ ವ್ಯಭಿಚಾರಕ್ಕಾಗಿ ಮಹಿಳೆಯನ್ನು ಜೀವನಾಂಶದಿಂದ ಹೊರಗಿಡುವಂತಿಲ್ಲ: ಹೈಕೋರ್ಟ್

    ಒಮ್ಮೆ ನಡೆಸುವ ವ್ಯಭಿಚಾರಕ್ಕಾಗಿ ಮಹಿಳೆಯನ್ನು ಜೀವನಾಂಶದಿಂದ ಹೊರಗಿಡುವಂತಿಲ್ಲ: ಹೈಕೋರ್ಟ್

    ನವದೆಹಲಿ: ಯಾವಾಗಲಾದರೂ ಒಮ್ಮೆ ಪ್ರತ್ಯೇಕವಾಗಿ ನಡೆಸುವ ವ್ಯಭಿಚಾರವು, ವ್ಯಭಿಚಾರದ ಜೀವನವೆಂದು (ಲಿವಿಂಗ್ ಇನ್ ಅಡಲ್ಟ್ರಿ) ಪರಿಗಣನೆಯಾಗುವುದಿಲ್ಲ. ಹಾಗಾಗಿ, ವಿಚ್ಛೇದನದ ಬಳಿಕವೂ ಮಹಿಳೆಯನ್ನು ಜೀವನಾಂಶದಿಂದ ದೂರವಿಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

    ವಿಚ್ಛೇದನದ ಬಳಿಕ ಸಿಆರ್‌ಪಿಸಿ (ಕ್ರಿಮಿನಲ್‌ ಪ್ರೊಸಿಜರ್‌ ಕೋಡ್‌) ಸೆಕ್ಷನ್ 125ರ ಅಡಿ ಪತ್ನಿಗೆ ಜೀವನಾಂಶ ನೀಡುವಂತೆ ಆದೇಶಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಬದಿಗೆ ಸರಿಸುವಂತೆ ಕೋರಿ ಪತಿಯೊಬ್ಬ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಚಂದ್ರ ಧಾರಿ ಸಿಂಗ್ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿದೆ. ಇದನ್ನೂ ಓದಿ: ಸಲಿಂಗಿಗಳ ಮದುವೆ ಮಾನ್ಯತೆ ಮನವಿ ತಿರಸ್ಕರಿಸಿದ ಹೈಕೋರ್ಟ್

    COURT (2)

    ನಿರಂತರವಾಗಿ ನಡೆಸುವ ವ್ಯಭಿಚಾರ ಅಥವಾ ವ್ಯಭಿಚಾರಕ್ಕಾಗಿಯೇ ಒಟ್ಟಾಗಿ ಇರುವುದಕ್ಕೆ ಕಠಿಣ ಸಿಆರ್‌ಪಿಸಿ ಸೆಕ್ಷನ್ 125 (4) ಅನ್ವಯಿಸುತ್ತದೆ ಎಂದು ದೇಶದ ಹಲವು ಹೈಕೋರ್ಟ್ಗಳು ಹೇಳಿವೆ ಎಂದು ನ್ಯಾಯಾಲಯ ಹೇಳಿದೆ.

    ವ್ಯಭಿಚಾರಕ್ಕೆ ಸಂಬಂಧಿಸಿದಂತೆ ವಿವಿಧ ಹೈಕೋರ್ಟ್ಗಳು ತೀರ್ಪನ್ನು ನೀಡಿದ್ದು, ಪತ್ನಿಗೆ ಜೀವನಾಂಶ ನೀಡುವುದಕ್ಕೆ ಸಂಬಂಧಿಸಿದ ವಿಚಾರವನ್ನು ಪರಿಹರಿಸಿವೆ. ಸಿಆರ್‌ಪಿಸಿ ಸೆಕ್ಷನ್ 125(4) ಅನ್ನು ಅನ್ವಯಿಸಲು ಪತಿಯು ಪತ್ನಿ ಪೂರ್ಣ ವ್ಯಭಿಚಾರದಲ್ಲಿ ಭಾಗಿಯಾಗಿದ್ದಾಳೆ ಎಂಬುದನ್ನು ಪತಿಯೂ ಸಾಕ್ಷಿಯಿಂದ ಸಾಬೀತುಪಡಿಸಬೇಕು. ಹೀಗಾಗಿ, ಯಾವಾಗಲಾದರೊಮ್ಮೆ ಏಕಾಂತದಲ್ಲಿ ನಡೆಸಿದ ವ್ಯಭಿಚಾರವು, ವ್ಯಭಿಚಾರದ ಬದುಕು ಆಗುವುದಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಇದನ್ನೂ ಓದಿ: ವೇಶ್ಯಾವಾಟಿಕೆ ಅಡ್ಡೆ ಮೇಲಿನ ದಾಳಿಯಲ್ಲಿ ಸಿಕ್ಕಿಬೀಳುವ ಗ್ರಾಹಕರನ್ನು ಬಂಧಿಸುವಂತಿಲ್ಲ: ಹೈಕೋರ್ಟ್‌

    COURT (1)

    ಸಿಆರ್‌ಪಿಸಿ ಸೆಕ್ಷನ್ 125 ಪತ್ನಿ, ಮಕ್ಕಳು ಮತ್ತು ಪೋಷಕರಿಗೆ ಜೀವನಾಂಶ ಪಡೆಯಲು ಅವಕಾಶ ಮಾಡಿಕೊಡುತ್ತದೆ. ಅದಾಗ್ಯೂ, ಪತ್ನಿಯು ಲಿವಿಂಗ್ ಇನ್ ವ್ಯಭಿಚಾರದಲ್ಲಿದ್ದರೆ, ಪ್ರತ್ಯೇಕವಾಗಿದ್ದರೆ ಅಥವಾ ಸಕಾರಣವಿಲ್ಲದೇ ತನ್ನ ಪತಿಯ ಜೊತೆ ನೆಲೆಸಲು ಪತ್ನಿ ನಿರಾಕರಿಸಿದರೆ ಆಗ ಆಕೆಯು ಪತಿಯಿಂದ ಜೀವನಾಂಶ ಪಡೆಯಲು ಅರ್ಹಳಾಗಿರುವುದಿಲ್ಲ ಎಂದು ಪ್ರಕಟಿಸಿದೆ. ಇದನ್ನೂ ಓದಿ: ಪಾಕ್‌ ಪರ ಘೋಷಣೆ ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಅಲಹಾಬಾದ್‌ ಹೈಕೋರ್ಟ್‌ ಜಾಮೀನು

    ಅರ್ಜಿದಾರರ ಪರ ವಕೀಲರಾದ ಅಣ್ಣು ನರುಲಾ, ವಿಶಾಲ್ ಸಿಂಗ್, ರವಿಕುಮಾರ್ ಮತ್ತು ಶಿವ ಚೌಹಾಣ್ ವಾದ ಮಂಡಿಸಿದರೆ, ಪ್ರತಿವಾದಿ ಪರ ವಕೀಲ ಎಂ ಶಮಿಖ್ ವಾದ ಮಂಡಿಸಿದ್ದರು.

  • ರತನ್‌ ಟಾಟಾಗೆ ಭಾರತ ರತ್ನ ನೀಡುವಂತೆ ಮನವಿ ಮಾಡಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

    ರತನ್‌ ಟಾಟಾಗೆ ಭಾರತ ರತ್ನ ನೀಡುವಂತೆ ಮನವಿ ಮಾಡಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

    ನವದೆಹಲಿ: ಖ್ಯಾತ ಉದ್ಯಮಿ ರತನ್‌ ಟಾಟಾ ಅವರಿಗೆ ಭಾರತ ರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾ ಮಾಡಿದೆ.

    ಒಬ್ಬ ವ್ಯಕ್ತಿಗೆ ಅತ್ಯುನ್ನತ ನಾಗರಿಕ ಗೌರವ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡುವುದು ನ್ಯಾಯಾಲಯಕ್ಕೆ ಸಂಬಂಧಿಸಿದ್ದಲ್ಲ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಪಿನ್ ಸಂಘಿ ನೇತೃತ್ವದ ಪೀಠ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಏನಿದು ಸಶಸ್ತ್ರ ಪಡೆಗಳ ವಿಶೇಷ ಕಾಯ್ದೆ? ಸೈನಿಕರಿಗೆ ಇರೋ ಅಧಿಕಾರ ಏನು? ವಿರೋಧ ಯಾಕೆ?

    ಇದು ಯಾವ ರೀತಿಯ ಮನವಿ? ಭಾರತ ರತ್ನ ನೀಡುವಂತೆ ಸರ್ಕಾರಕ್ಕೆ ಕೋರ್ಟ್‌ ನಿರ್ದೇಶನ ನೀಡಲು ಸಾಧ್ಯವೆ ಎಂದು ಪೀಠ ಪ್ರಶ್ನಿಸಿದೆ.

    ಅರ್ಜಿದಾರರ ಪರ ವಕೀಲರು, ಕನಿಷ್ಠ ಪಕ್ಷ ಸರ್ಕಾರಕ್ಕೆ ಮನವಿ ಮಾಡಬಹುದು ಎಂದು ವಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಪಿನ್‌ ಸಂಘಿ, ಹೋಗಿ ವಿನಂತಿಯನ್ನು ಮಾಡಿ. ನ್ಯಾಯಾಲಯದ ಮೆಟ್ಟಿಲೇರುವ ಪ್ರಶ್ನೆ ಎಲ್ಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅವಿವಾಹಿತ ಮಗಳು ಪೋಷಕರಿಂದಲೇ ವಿವಾಹದ ವೆಚ್ಚ ಪಡೆಯಬಹುದು: ಹೈಕೋರ್ಟ್

    ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸುವುದಾಗಿ ಹೇಳಿದ ನಂತರ ಅರ್ಜಿದಾರರ ಪರ ವಕೀಲರು ಅರ್ಜಿಯನ್ನು ಹಿಂತೆಗೆದುಕೊಂಡರು.

    ಅರ್ಜಿದಾರರಾದ ಸಾಮಾಜಿಕ ಕಾರ್ಯಕರ್ತ ರಾಕೇಶ್‌, ರತನ್ ಟಾಟಾ ಅವರು ರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ನಿಷ್ಕಳಂಕ ಜೀವನವನ್ನು ಹೊಂದಿರುವುದರಿಂದ ಭಾರತ ರತ್ನಕ್ಕೆ ಅರ್ಹರು ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಇದನ್ನೂ ಓದಿ: ಪಾಕ್‌ ಪರ ಘೋಷಣೆ ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಅಲಹಾಬಾದ್‌ ಹೈಕೋರ್ಟ್‌ ಜಾಮೀನು

  • ಡಿಕೆಶಿ ವಿದೇಶಕ್ಕೆ ತೆರಳಲು ಅನುಮತಿ ನೀಡಿದ ದೆಹಲಿ ಹೈಕೋರ್ಟ್

    ಡಿಕೆಶಿ ವಿದೇಶಕ್ಕೆ ತೆರಳಲು ಅನುಮತಿ ನೀಡಿದ ದೆಹಲಿ ಹೈಕೋರ್ಟ್

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿದೇಶಕ್ಕೆ ತೆರಳಲು ವಿಧಿಸಿದ್ದ ನಿರ್ಬಂಧವನ್ನು ದೆಹಲಿ ಹೈಕೋರ್ಟ್ ರದ್ದು ಪಡಿಸಿದೆ.

    ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾದ ಬಳಿಕ ಡಿಕೆಶಿಗೆ ವಿದೇಶಕ್ಕೆ ತೆರಳಲು ನಿರ್ಬಂಧ ವಿಧಿಸಲಾಗಿತ್ತು. ಹಾಗಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ತೆರಳಲು ಅನುಮತಿ ಕೋರಿ ಡಿಕೆ ಶಿವಕುಮಾರ್, ವಕೀಲ ಮಯಾಂಕ್ ಜೈನ್ ಮೂಲಕ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಶೀಲಿಸಿದ ದೆಹಲಿ ಹೈಕೋರ್ಟ್, ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ತೆರಳಲು ಅನುಮತಿ ನೀಡಿದೆ. ಇದನ್ನೂ ಓದಿ: ರಾಜ್ಯ ಸರ್ಕಾರ ಹಿಜಬ್, ಹಲಾಲ್, ವ್ಯಾಪಾರ ನಿಷೇಧದ ಭಜನೆ ಮಾಡುತ್ತಿದ್ದು, ಬಿಜೆಪಿಯವರು ಧರ್ಮದ್ರೋಹಿಗಳು: ದಿನೇಶ್ ಗುಂಡೂರಾವ್

    ಮಾ. 31 ರಿಂದ ಏ.6ರ ನಡುವೆ ದುಬೈ ಮತ್ತು ಅಬುಧಾಬಿಗೆ ಪ್ರಯಾಣಿಸಲು ಅನುಮತಿ ನೀಡಿರುವ ಹೈಕೋರ್ಟ್, ಅಲ್ಲಿಂದ ಹಿಂದಿರುಗಿದ ವಿಷಯವನ್ನು ತನಿಖಾಧಿಕಾರಿಗೆ ತಿಳಿಸಲು ಸೂಚನೆ ನೀಡಿದೆ. ಸದ್ಯ ಡಿಕೆ ಶಿವಕುಮಾರ್ ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿದ್ದಾರೆ. ಇದನ್ನೂ ಓದಿ: ಅನ್ನ ನೀಡುವ ರೈತರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ: ರಾಹುಲ್ ಗಾಂಧಿ

    ಏನಿದು ಪ್ರಕರಣ?:
    ಐಟಿ ಅಧಿಕಾರಿಗಳು 2017 ಆಗಸ್ಟ್ 1ರಂದು ಡಿಕೆ ಶಿವಕುಮಾರ್ ಆಪ್ತರು, ಸಂಬಂಧಿಕರು, ಪಾಲುದಾರಿಕೆ ಹೊಂದಿರುವ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದರು. ಚೆನ್ನೈ, ದೆಹಲಿ, ಬೆಂಗಳೂರು, ಮೈಸೂರು, ಕನಕಪುರದ 60 ಸ್ಥಳಗಳ ಮೇಲೆ ದಾಳಿ ನಡೆದಿತ್ತು. ಚೆನ್ನೈ ಮೂಲದ ಎಲ್‍ಇಡಿ ಕಂಪನಿಯೊಂದರಲ್ಲಿ ಡಿಕೆಶಿ ಪಾಲುದಾರಿಕೆ ಇರುವ ಬಗ್ಗೆ ಅನುಮಾನ ಮೂಡಿದ ಹಿನ್ನೆಲೆಯಲ್ಲಿ ಆ ಕಂಪನಿಯನ್ನೂ ಐಟಿ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ವೇಳೆ ಡಿಕೆಶಿ 36 ಕೋಟಿ ರೂ. ಮೌಲ್ಯದ ಬೇನಾಮಿ ಆಸ್ತಿ ಹೊಂದಿದ್ದಾರೆಂದು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಜೈಲು ವಾಸ ಅನುಭವಿಸಿದ್ದರು. 2019ರಲ್ಲಿ ದೆಹಲಿ ಹೈಕೋರ್ಟ್ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

  • ಏರ್‌ ಇಂಡಿಯಾ ಹರಾಜು – ಟಾಟಾ ಡೀಲ್‌ ಪ್ರಶ್ನಿಸಿ ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾ

    ಏರ್‌ ಇಂಡಿಯಾ ಹರಾಜು – ಟಾಟಾ ಡೀಲ್‌ ಪ್ರಶ್ನಿಸಿ ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾ

    ನವದೆಹಲಿ: ಸಾಲದ ಸುಳಿಯಲ್ಲಿರುವ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಯ ಹರಾಜು ಪ್ರಕ್ರಿಯೆಯಲ್ಲಿ ಟಾಟಾ ಸನ್ಸ್‌ ಸಲ್ಲಿಸಿರುವ ಬಿಡ್‌ಗೆ ಅನುಮೋದನೆ ಸಿಕ್ಕಿರುವುದನ್ನು ಪ್ರಶ್ನಿಸಿ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಅವರು ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾಗೊಳಿಸಿದೆ.

    18,000 ಕೋಟಿ ರೂ.ಗೆ ಟಾಟಾ ಕಂಪನಿ ಬಿಡ್‌ ಕೂಗಿದೆ. ಆದರೆ, ಏರ್‌ ಇಂಡಿಯಾ ಹೂಡಿಕೆ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಇದು ಅಸಾಂವಿಧಾನಿಕ, ಅನ್ಯಾಯ ಮತ್ತು ಟಾಟಾ ಪರವಾಗಿ ಕೆಲಸ ಮಾಡಲಾಗಿದೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ತನ್ನ ಹೆಸರನ್ನೇ ಬಿಟ್ಟು All-Time XI ಹೆಸರಿಸಿದ ಸಚಿನ್ – ಈ ಸ್ಟಾರ್ ಆಟಗಾರಿಗಿಲ್ಲ ಸ್ಥಾನ!

    ಹೂಡಿಕೆ ಹಿಂತೆಗೆದುಕೊಳ್ಳುವಿಕೆಯು ನೀತಿ ನಿರ್ಧಾರವಾಗಿದೆ. ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದಿಲ್ಲ. ರಾಷ್ಟ್ರೀಯ ವಿಮಾನಯಾನ ಸಂಸ್ಥೆಯು ಪ್ರತಿದಿನ ಸಾವಿರಾರು ಕೋಟಿಯಷ್ಟು ನಷ್ಟವನ್ನು ಅನುಭವಿಸುತ್ತಿದೆ ಎಂದು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು ಕೋರ್ಟ್‌ಗೆ ತಿಳಿಸಿದ್ದರು.

     

    ಸರ್ಕಾರಿ ಸ್ವಾಮ್ಯದ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಗೆ ಟಾಟಾ ಸನ್ಸ್‌ ಸಲ್ಲಿಸಿರುವ ಬಿಡ್‌ಗೆ 2021ರ ಅಕ್ಟೋಬರ್‌ 8ರಂದು ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್‌ ಸಮಿತಿಯು ಅನುಮೋದನೆ ನೀಡಿದೆ. ಇದನ್ನು ಪ್ರಶ್ನಿಸಿ ಸುಬ್ರಮಣಿಯನ್‌ ಸ್ವಾಮಿ ಅವರು ಕೋರ್ಟ್‌ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಪ್ರಧಾನಿಗೆ ಭದ್ರತಾ ವೈಫಲ್ಯ – ಸುಪ್ರೀಂ ಮೇಲ್ವಿಚಾರಣೆಯಲ್ಲಿ ತನಿಖೆಗೆ ಮನವಿ, ನಾಳೆ ಮಹತ್ವದ ವಿಚಾರಣೆ

    ಅರ್ಜಿ ವಜಾಗೊಂಡಿರುವುದಕ್ಕೆ ಪ್ರತಿಕ್ರಿಯಿಸಿದ ಸುಬ್ರಮಣಿಯನ್‌ ಸ್ವಾಮಿ ಅವರು, ನಮ್ಮ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾಗೊಳಿಸಿದೆ. ಅದರ ಆದೇಶವು ತರ್ಕಬದ್ಧವಾಗಿದೆ. ನಾವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ನಿರ್ಧರಿಸಿದ್ದೇವೆ ಎಂದು ಟ್ವೀಟ್‌ ಮಾಡಿದ್ದಾರೆ.

    ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷದವರೇ ಆದ ಸುಬ್ರಮಣಿಯನ್‌ ಸ್ವಾಮಿ ಅವರು, ಸರ್ಕಾರಿ ಸ್ವಾಮ್ಯದ ಸಂಸ್ಥೆಯೊಂದನ್ನು ಖಾಸಗಿ ಅವರಿಗೆ ನೀಡುವ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದ್ದಾರೆ.

  • 5ಜಿ ವಿರುದ್ಧ ಜೂಹಿ ಚಾವ್ಲಾ ಸಲ್ಲಿಸಿದ್ದ ಅರ್ಜಿ ವಜಾ- 20 ಲಕ್ಷ ದಂಡ ವಿಧಿಸಿದ ದೆಹಲಿ ಹೈ ಕೋರ್ಟ್

    5ಜಿ ವಿರುದ್ಧ ಜೂಹಿ ಚಾವ್ಲಾ ಸಲ್ಲಿಸಿದ್ದ ಅರ್ಜಿ ವಜಾ- 20 ಲಕ್ಷ ದಂಡ ವಿಧಿಸಿದ ದೆಹಲಿ ಹೈ ಕೋರ್ಟ್

    – ಪ್ರಚಾರಕ್ಕಾಗಿ ಅರ್ಜಿ ಸಲ್ಲಿಸಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡ ಕೋರ್ಟ್

    ನವದೆಹಲಿ: ಭಾರತದಲ್ಲಿ 5ಜಿ ನೆಟ್‍ವರ್ಕ್ ಸ್ಥಾಪನೆ ವಿರುದ್ಧ ನಟಿ, ಪರಿಸರ ಹೋರಾಟಗಾರ್ತಿ ಜೂಹಿ ಚಾವ್ಲಾ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈ ಕೋರ್ಟ್ ವಜಾಗೊಳಿಸಿದೆ. ಅಲ್ಲದೆ ಅರ್ಜಿದಾರರು ‘ಕಾನೂನನ್ನು ದುರುಪಯೋಗಪಡಿಸಿಕೊಂಡಿದ್ದಾರೆ’ ಎಂದು 20 ಲಕ್ಷ ರೂ.ಗಳ ದಂಡ ವಿಧಿಸಿದೆ.

    ಜೂಹಿ ಚಾವ್ಲಾ, ಸಾಮಾಜಿಕ ಕಾರ್ಯಕರ್ತರಾದ ವೀರೇಶ್ ಮಲಿಕ್ ಹಾಗೂ ಟೀನಾ ವಚನಿ ಅವರು 5ಜಿ ತಂತ್ರಜ್ಞಾನದ ವಿರುದ್ಧ ಹೈ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. 5ಜಿ ತಂತ್ರಜ್ಞಾನದಿಂದಾಗಿ ಅಪಾಯಕಾರಿ ರೇಡಿಯೇಶನ್ ಮಾನವರ ಮೇಲೆ ಗಂಭೀರ ಪರಿಣಾಮ ಬೀರಬಹುದು. ಅಲ್ಲದೆ ಪರಿಸರ ವ್ಯವಸ್ಥೆಯನ್ನು ಶಾಶ್ವತವಾಗಿ ಹಾನಿಗೊಳಿಸಬಹುದು ಎಂದು ಅರ್ಜಿಯಲ್ಲಿ ತಿಳಿಸಿದ್ದರು. ಇದನ್ನೂ ಓದಿ: 5ಜಿ ನೆಟ್‍ವರ್ಕ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಜೂಹಿ ಚಾವ್ಲಾ

    ಅರ್ಜಿದಾರರ ವಾದವು ಅಸಹ್ಯಕರವಾಗಿದ್ದು, ಏನು ಹೇಳುತ್ತಿದ್ದಾರೆ ಎಂಬುದರ ಕುರಿತು ಅವರಿಗೇ ಜ್ಞಾನವಿಲ್ಲ. ಕೇವಲ ಪ್ರಚಾರಕ್ಕಾಗಿ ಈ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ಏಕ ಸದಸ್ಯ ಪೀಠದ ನ್ಯಾಯಮೂರ್ತಿ ಜೆ.ಆರ್.ಮಿಧಾ ಅವರು ಚಾಟಿ ಬೀಸಿದರು.

    ನೇರವಾಗಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವ ಬದಲು ಟೆಲಿಕಾಂ ಇಲಾಖೆಯೊಂದಿಗೆ ಏಕೆ ಚರ್ಚಿಸಿಲ್ಲ ಎಂದು ನ್ಯಾಯಮೂರ್ತಿ ಮಿಧಾ ಅವರು ವಿಚಾರಣೆ ವೇಳೆ ಜೂಹಿ ಚಾವ್ಲಾ ಹಾಗೂ ಉಳಿದ ಇಬ್ಬರು ಅರ್ಜಿದಾರರನ್ನು ಪ್ರಶ್ನಿಸಿದರು. ಅಲ್ಲದೆ ನ್ಯಾಯಾಲಯಕ್ಕೆ ಬರುವ ಮೊದಲು ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು, ಚರ್ಚಿಸಿ ಎಂದು ಜೂಹಿ ಚಾವ್ಲಾ ಹಾಗೂ ಇತರ ಇಬ್ಬರು ಅರ್ಜಿದಾರರಿಗೆ ಸೂಚಿಸಿತು.

    ವೀಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಅರ್ಜಿದಾರರ ವಿಚಾರಣೆ ನಡೆಸಿದ್ದು, ಈ ವಿಚಾರಣೆಯ ಲಿಂಕ್‍ನ್ನು ಜೂಹಿ ಚಾವ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದರಿಂದಾಗಿ ಮೂರು ಬಾರಿ ವಿಚಾರಣೆಗೆ ಅಡ್ಡಿಯಾಗಿದೆ ಎಂದು ಕೋರ್ಟ್ ಹೇಳಿದೆ. ಅಲ್ಲದೆ ದೆಹಲಿ ಪೊಲೀಸರು ವ್ಯಕ್ತಿಗಳನ್ನು ಗುರುತಿಸಿ ಅಡ್ಡಿಪಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದೆ.

    ದೂರಿನಲ್ಲಿ ಏನಿದೆ?
    ಭಾರತದಲ್ಲಿ 5ಜಿಯನ್ನು ಜಾರಿಗೆ ತಂದರೆ ದೇಶದಲ್ಲಿರುವ ಯಾವುದೇ ವ್ಯಕ್ತಿ, ಪ್ರಾಣಿ, ಪಕ್ಷಿ, ಕೀಟ, ಸಸ್ಯ ಪ್ರಭೇದಗಳು 5ಜಿಯ ವಿಕಿರಣದಿಂದಾಗುವ ತೊಂದರೆಗಳನ್ನು ತಡೆದುಕೊಳ್ಳಲು ಸಾಧ್ಯವಿಲ್ಲ. ದಿನದ 24 ಗಂಟೆ, ವರ್ಷದ 365 ದಿನ, ಈಗಿರುವ ನೆಟ್‍ವರ್ಕ್ ವಿಕಿರಣಗಳಿಂದ ರೇಡಿಯೋ ಫ್ರಿಕ್ವೆನ್ಸಿ ವಿಕಿರಣ 10x ರಿಂದ 100x ಪಟ್ಟು ಹೆಚ್ಚಾಗಿರುತ್ತದೆ.

    5ಜಿ ಯೋಜನೆಗಳಿಂದಾಗಿ ಮನುಷ್ಯರ ಮೇಲೆ ಹಲವು ದುಷ್ಪರಿಣಾಮಗಳಿದ್ದು, ಮುಂದೆ ಬದಲಾಯಿಸಲು ಸಾಧ್ಯವಾಗದ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಮನುಷ್ಯರ ಮೇಲೆ ಮಾತ್ರವಲ್ಲದೇ ಭೂಮಿಯ ಮೇಲಿರುವ ಎಲ್ಲಾ ಪರಿಸರ ವ್ಯವಸ್ಥೆಗೆ ಇದರಿಂದ ತೊಂದರೆ ಎದುರಾಗುತ್ತದೆ.

    5ಜಿಯಿಂದ ಮಾನವಕುಲದ, ಪುರುಷ, ಮಹಿಳೆ, ಮಗು, ವಯಸ್ಕ, ಶಿಶು, ಪ್ರಾಣಿ ಮತ್ತು ಎಲ್ಲಾ ವಿದಧ ಜೀವಿಗಳಿಗೂ ಇದರಿಂದ ಯಾವುದೇ ದುಷ್ಟರಿಣಾಮಗಳಿಲ್ಲ ಎಂದು ಪರೀಕ್ಷಿಸುವಂತೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ಕೊಡಬೇಕೆಂದು ವಕೀಲರಾದ ದೀಪಕ್ ಖೋಸ್ಲಾ ಅವರ ಮೂಲಕ ಸಲ್ಲಿಸಲಾಗಿರುವ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.