Tag: Delhi High Court

  • ನಿರ್ಭಯಾ ಪ್ರಕರಣ- ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

    ನಿರ್ಭಯಾ ಪ್ರಕರಣ- ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

    ನವದೆಹಲಿ: ನಿರ್ಭಯಾ ಪ್ರಕರಣದ ದೋಷಿಗಳಿಗೆ ಶೀಘ್ರವೇ ಗಲ್ಲು ಶಿಕ್ಷೆಗೆ ಒಳಪಡಿಸಬೇಕೆಂದು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಬಳಿಕ ದೆಹಲಿ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

    ದೆಹಲಿ ಪೊಲೀಸರು ಮತ್ತು ಕೇಂದ್ರ ಗೃಹ ಸಚಿವಾಲಯ ಪಟಿಯಾಲ ಹೌಸ್ ಕೋರ್ಟ್ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದವು. ಪಟಿಯಾಲ ಕೋರ್ಟ್ ನಿರ್ಭಯಾ ಪ್ರಕರಣದ ದೋಷಿಗಳ ಡೆತ್ ವಾರೆಂಟ್ ಗೆ ತಡೆಯನ್ನು ನೀಡಿದೆ. ಈ ವೇಳೆ ವಾದ ಮಂಡಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೋಷಿಗಳು ಕಾನೂನಿನ ದುರಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

    ದೋಷಿಗಳು ತಮ್ಮ ಶಿಕ್ಷೆಯನ್ನು ಕಾನೂನಿನ ಮೂಲಕ ವಿಳಂಬಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಗಲ್ಲು ಶಿಕ್ಷೆಯನ್ನು ಮುಂದೂಡಲು ತಮ್ಮದೇ ವ್ಯೂಹ ರಚಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ದೋಷಿ ಪವನ್ ಗುಪ್ತಾ ಕ್ಷಮಾದಾನ ಅರ್ಜಿ ಸಲ್ಲಿಸಲು ಪ್ಲಾನ್ ಮಾಡಿಕೊಂಡಿದ್ದಾನೆ. ದೋಷಿಗಳು ನ್ಯಾಯ ವ್ಯವಸ್ಥೆಯೊಂದಿಗೆ ಆಟ ಆಡುವ ಮೂಲಕ ದೇಶದ ಜನತೆಯ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದಾರೆ. ಕಾನೂನ ಪ್ರಕಾರವೇ ಪ್ರಕಟವಾದ ಶಿಕ್ಷೆಯನ್ನು ಮುಂದೂಡಲು ವ್ಯವಸ್ಥಿತವಾದ ಜಾಲ ರಚಿಸಲಾಗಿದೆ ಎಂದು ತುಷಾರ್ ಮೆಹ್ತಾ ತಮ್ಮ ವಾದ ಮಂಡಿಸಿದರು.

    ದೋಷಿಗಳಾದ ಆಕ್ಷಯ್ ಸಿಂಗ್ (31), ವಿನಯ್ ಶರ್ಮಾ (26) ಮತ್ತು ಪವನ್ (25) ಪರವಾಗಿ ವಕೀಲ ಎ.ಪಿ.ಸಿಂಗ್ ವಾದ ಮಂಡಿಸಿದರು. ತಮ್ಮ ವಾದದಲ್ಲಿ ಕೇಂದ್ರ ಸರ್ಕಾರ ಅರ್ಜಿ ಮೂಲಕ ಸಲ್ಲಿಸಿರುವ ಮನವಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಮತ್ತೋರ್ವ ದೋಷಿ ಮುಖೇಶ್ ಪರವಾಗಿ ವಕೀಲ ರೆಬೆಕಾ ಜಾನ್ ವಾದ ಮಂಡಿಸಿದರು. ಎಲ್ಲರ ವಾದ ಮತ್ತು ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ.

  • ಡಿ.ಕೆ ಶಿವಕುಮಾರ್​ಗೆ ಮತ್ತೆ ಇಡಿ ಸಂಕಷ್ಟ

    ಡಿ.ಕೆ ಶಿವಕುಮಾರ್​ಗೆ ಮತ್ತೆ ಇಡಿ ಸಂಕಷ್ಟ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧ ವಿಚಾರಣೆ ಹಾಜರಾಗುವಂತೆ ಮಾಜಿ ಸಚಿವ, ಶಾಸಕ ಡಿ.ಕೆ ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ ನಮನ್ಸ್ ನೀಡಿದೆ. ದೆಹಲಿ ಹೈಕೋರ್ಟ್ ಜಾಮೀನು ನೀಡಿದ ಬಳಿಕ ಮೊದಲ ಬಾರಿ ಸಮನ್ಸ್ ನೀಡಿದ್ದು ಮತ್ತೆ ಡಿ.ಕೆ ಶಿವಕುಮಾರ್ ಇಡಿ ಸುಳಿಯಲ್ಲಿ ಸಿಲುಕಿದಂತಾಗಿದೆ.

    ಜನವರಿ 13 ರಂದು ವಿಚಾರಣೆಗೆ ಹಾಜರಾಗುಂತೆ ಸಮನ್ಸ್ ನೀಡಿದ್ದು, 2013-2014 ರಲ್ಲಿ ನಡೆಸಿರುವ ಆರ್ಥಿಕ ವ್ಯವಹಾರಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಇಡಿ ಅಧಿಕಾರಿಗಳು ಕೋರಿದ್ದಾರೆ ಎಂದು ಮೂಲಗಳು ಹೇಳಿವೆ.

    ಜಾಮೀನು ಪಡೆದ ಬಳಿಕ ಸಮನ್ಸ್ ಜಾರಿಯಾದ ಹಿನ್ನೆಲೆ ನಿನ್ನೆ ದೆಹಲಿಯಲ್ಲಿ ವಕೀಲ ಅಭಿಷೇಕ ಮನುಸಿಂಘ್ವಿ ಅವರನ್ನ ಡಿ.ಕೆ ಶಿವಕುಮಾರ್ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಇಡಿ ವಿಚಾರಣೆಗೆ ಹಾಜರಾಗುವ ಬಗ್ಗೆ ಹಾಗೂ ಮುಂದಿನ ಕಾನೂನು ಹೋರಾಟ ಸಮಾಲೋಚನೆ ಮಾಡಿದ್ದಾರೆ ಎನ್ನಲಾಗಿದೆ.

    ವಿಚಾರಣೆ ಮುಂದೂಡಿಕೆ: ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ದಾಖಲಿಸಿದ್ದ 120 ಬಿ ರದ್ದು ಮಾಡುವಂತೆ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ಎರಡು ವಾರಕ್ಕೆ ಮುಂದೂಡಿಕೆಯಾಗಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎಸ್.ಎ ಬೊಬ್ಡೆ ನೇತೃತ್ವದ ತ್ರಿಸದ್ಯ ಪೀಠ, ಬದಲಿ ಪೀಠದಲ್ಲಿ ಇದೇ ಪ್ರಕರಣ ಮತ್ತೊಂದು ಕೇಸ್ ವಿಚಾರಣೆ ಹಂತದಲ್ಲಿರುವ ಕಾರಣ ಎರಡು ವಾರಕ್ಕೆ ವಿಚಾರಣೆ ಮುಂದೂಡಿಕೆ ಮಾಡಿತು. ಅಲ್ಲದೇ ಎರಡು ಕೇಸ್‍ಗಳನ್ನು ಒಟ್ಟು ಮಾಡಿ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.

  • ಇಡಿ ಸಮನ್ಸ್ – ಡಿಕೆಶಿ ಪತ್ನಿ ಉಷಾ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ

    ಇಡಿ ಸಮನ್ಸ್ – ಡಿಕೆಶಿ ಪತ್ನಿ ಉಷಾ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ

    ನವದೆಹಲಿ: ಜಾರಿ ನಿರ್ದೇಶನಾಲಯ(ಇಡಿ) ನೀಡಿರುವ ಸಮನ್ಸ್ ರದ್ದು ಮತ್ತು ಬೆಂಗಳೂರಿನಲ್ಲಿ ವಿಚಾರಣೆ ನಡೆಸಲು ಸೂಚಿಸುವಂತೆ ಕೋರಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಪತ್ನಿ ಉಷಾ ಅವರು ಸಲ್ಲಿಸಿರುವ ಅರ್ಜಿ ಇಂದು ವಿಚಾರಣೆಗೆ ಬರಲಿದೆ.

    ದೆಹಲಿ ಹೈಕೋರ್ಟಿನ ನ್ಯಾ. ಬ್ರಿಜೇಶ್ ಸೇಥಿ ನೇತೃತ್ವದ ಏಕ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಡಿ.ಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ ಡಿಕೆಶಿ ಅವರ ಪತ್ನಿ ಉಷಾ ಮತ್ತು ತಾಯಿ ಗೌರಮ್ಮ ಅವರಿಗೆ ದೆಹಲಿಗೆ ಬಂದು ವಿಚಾರಣೆ ಎದುರಿಸುವಂತೆ ಸಮನ್ಸ್ ಜಾರಿ ಮಾಡಿತ್ತು. ಇಡಿ ನೀಡಿದ್ದ ಸಮನ್ಸ್ ಪ್ರಶ್ನೆ ಮಾಡಿದ್ದ ಉಷಾ ಮತ್ತು ಗೌರಮ್ಮ ದೆಹಲಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

    ಗೌರಮ್ಮಗೆ 85 ವರ್ಷ ವಯಸ್ಸಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಿಚಾರಣೆ ನಡೆಸಲು ಇಡಿ ಅಧಿಕಾರಿಗಳು ಕಳೆದ ವಿಚಾರಣೆಯಲ್ಲಿ ಒಪ್ಪಿಕೊಂಡಿದ್ದರು. ಹೀಗಾಗಿ ಗೌರಮ್ಮ ಸಲ್ಲಿಸಿದ್ದ ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದು, ಉಷಾ ಸಲ್ಲಿಸಿರುವ ಅರ್ಜಿ ಇಂದು ವಿಚಾರಣೆ ಬರಲಿದೆ.

    ಕಳೆದ ವಿಚಾರಣೆಯಲ್ಲಿ ವಾದ ಮಂಡಿಸಿದ್ದ ಇಡಿ ಪರ ವಕೀಲರು, ಗೌರಮ್ಮ ಹೊರತುಪಡಿಸಿ ಪ್ರಕರಣಕ್ಕೆ ಸಂಬಂಧಿಸಿದವರು ದೆಹಲಿಗೆ ಬಂದು ವಿಚಾರಣೆ ಎದುರಿಸಲಿ ಯಾವುದೇ ಕಾರಣಕ್ಕೂ ಉಷಾ ಅವರನ್ನು ಬೆಂಗಳೂರಿನಲ್ಲಿ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಹೈಕೋರ್ಟ್ ಬೆಂಗಳೂರಿನಲ್ಲಿ ವಿಚಾರಣೆ ಅವಕಾಶ ನೀಡಿದ್ದಲ್ಲಿ ಇತರೆ ಪ್ರಕರಣದ ಆರೋಪಿಗಳು ತಮ್ಮ ಸ್ವಂತ ಸ್ಥಳಗಳಲ್ಲಿ ವಿಚಾರಣೆ ಪಟ್ಟು ಹಿಡಿಯುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದ್ದರು. ಉಷಾ ಅವರ ಪರ ವಾದ ಮಂಡಿಸಿದ್ದ ವಕೀಲರು ಮಾತ್ರ ಗೌರಮ್ಮ ಜೊತೆ ಉಷಾ ಅವರ ವಿಚಾರಣೆ ಕೂಡ ಆಗಲಿ ಅನ್ನೋ ಬೇಡಿಕೆ ಇಟ್ಟಿದ್ದರು.

    ವಾದ ಪ್ರತಿವಾದ ಆಲಿಸಿದ್ದ ಪೀಠ ಉಷಾ ಪರ ವಕೀಲರಿಗೆ ಕಾನೂನು ವ್ಯಾಪ್ತಿಯಲ್ಲಿ ವಾದ ಮುಂದುವರಿಸುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಉಷಾ ಪರ ವಕೀಲರು ವಾದ ಮಂಡಿಸಲಿದ್ದಾರೆ. ಇದೇ ಪ್ರಕರಣದ ಮತ್ತೋರ್ವ ಆರೋಪಿ ಡಿ.ಕೆ ಶಿವಕುಮಾರ್ ಆಪ್ತ ಆಂಜನೇಯ ಸಂಬಂಧಿಗಳಿಗೂ ಇಡಿ ಸಮನ್ಸ್ ನೀಡಿದ್ದು, ಅವರು ಕೂಡ ಬೆಂಗಳೂರಿನಲ್ಲಿ ವಿಚಾರಣೆಗೆ ಬೇಡಿಕೆ ಇಟ್ಟಿದ್ದಾರೆ. ಉಷಾ ಅರ್ಜಿ ವಿಚಾರಣೆ ವೇಳೆ ಈ ಅರ್ಜಿಗಳು ಕೂಡ ವಿಚಾರಣೆಗೆ ಬರಲಿದೆ.

  • ದೆಹಲಿ ಹೈಕೋರ್ಟಿನಲ್ಲಿ ಡಿಕೆಶಿ ತಾಯಿ, ಪತ್ನಿಯ ಭವಿಷ್ಯ ನಿರ್ಧಾರ

    ದೆಹಲಿ ಹೈಕೋರ್ಟಿನಲ್ಲಿ ಡಿಕೆಶಿ ತಾಯಿ, ಪತ್ನಿಯ ಭವಿಷ್ಯ ನಿರ್ಧಾರ

    ಬೆಂಗಳೂರು: ಇಡಿ(ಜಾರಿ ನಿರ್ದೇಶನಾಲಯ) ನೀಡಿರುವ ಸಮನ್ಸ್ ರದ್ದು ಮಾಡಿ ಬೆಂಗಳೂರಿನಲ್ಲಿ ವಿಚಾರಣೆ ನಡೆಸುವಂತೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಪತ್ನಿ ಉಷಾ, ತಾಯಿ ಗೌರಮ್ಮ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ ನಡೆಯಲಿದೆ.

    ದೆಹಲಿ ಹೈ ಕೋರ್ಟಿನ ನ್ಯಾ. ಬ್ರಿಜೇಶ್ ಸೇಥಿ ನೇತೃತ್ವದ ಏಕ ಸದಸ್ಯ ಪೀಠ ಮಧ್ಯಾಹ್ನ 2:30ಕ್ಕೆ ವಿಚಾರಣೆ ನಡೆಸಲಿದ್ದು, ಡಿ.ಕೆ ಶಿವಕುಮಾರ್ ಆಪ್ತ ಸಹಾಯಕ ಆಂಜನೇಯ ಸಲ್ಲಿಸಿರುವ ಅರ್ಜಿಯನ್ನು ಈ ವೇಳೆ ಒಗ್ಗೂಡಿಸಿಕೊಳ್ಳಲಿದೆ. ಆಂಜನೇಯ ಅತ್ತೆ ಲಕ್ಷ್ಮಮ್ಮ, ಮಾವ ಹನುಮಂತಯ್ಯ ಸಂಬಂಧಿಗಳಾದ ಮೀನಾಕ್ಷಿ, ಜೈಶೀಲ ಅವರಿಗೂ ಇಡಿ ನೋಟಿಸ್ ನೀಡಿ ದೆಹಲಿ ಕಚೇರಿಗೆ ಬಂದು ಉತ್ತರಿಸುವಂತೆ ಸೂಚಿಸಿತ್ತು. ಈ ಸಮನ್ಸ್ ರದ್ದು ಮಾಡಿ ಬೆಂಗಳೂರಿನಲ್ಲಿ ವಿಚಾರಣೆ ನಡೆಸಲು ಇಡಿ ಅಧಿಕಾರಿಗಳಿಗೆ ಸೂಚಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು.

    ಈಗಾಗಲೇ ಉಷಾ ಮತ್ತು ಗೌರಮ್ಮ ಪರ ವಕೀಲರ ವಾದ ಮಂಡನೆ ಮುಕ್ತಾಯವಾದ ಹಿನ್ನೆಲೆ ಇಂದು ಆಂಜನೇಯ ಅತ್ತೆ, ಮಾವನ ಪರ ವಕೀಲರು ವಾದ ಮಂಡಿಸಲಿದ್ದಾರೆ. ಬಳಿಕ ಇಡಿ ಪರ ವಕೀಲರು ವಾದ ಮಂಡಿಸಲಿದ್ದು, ಬೆಂಗಳೂರಿನಲ್ಲೆ ವಿಚಾರಣೆಗೆ ದೆಹಲಿ ಹೈಕೋರ್ಟ್ ಅವಕಾಶ ನೀಡುತ್ತಾ ಕಾದು ನೋಡಬೇಕು.

  • ಡಿಕೆಶಿಗೆ ಬಿಗ್ ರಿಲೀಫ್- ಇಡಿ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

    ಡಿಕೆಶಿಗೆ ಬಿಗ್ ರಿಲೀಫ್- ಇಡಿ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

    -ಡಿಕೆಶಿ ತಾಯಿ, ಪತ್ನಿಗೂ ನಿರಾಳ
    -ಇಡಿ ಪರ ವಕೀಲರಿಗೆ ಸುಪ್ರೀಂಕೋರ್ಟ್ ತರಾಟೆ

    ನವದೆಹಲಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನ ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

    ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಆರ್.ಎಫ್.ನಾರಿಮನ್ ನೇತೃತ್ವದ ದ್ವಿ ಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ನೀಡಿದೆ. ಇತ್ತ ಕರ್ನಾಟಕ ಹೈಕೋರ್ಟ್ ನ್ಯಾ. ಅರವಿಂದ್ ಕುಮಾರ್ ನೀಡಿದ ಆದೇಶವನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಡಿ.ಕೆ.ಶಿವಕುಮಾರ್ ಅರ್ಜಿ ವಿಚಾರಣೆ ಆಗುವರೆಗೂ ಹೊಸ ಸಮನ್ಸ್ ನೀಡುವಂತಿಲ್ಲ ಎಂದು ಇಡಿಗೆ ಸುಪ್ರೀಂಕೋರ್ಟ್ ಸೂಚಿಸಿದೆ.

    ಕರ್ನಾಟಕ ಹೈಕೋರ್ಟಿನಲ್ಲಿ ಡಿಕೆ ಶಿವಕುಮಾರ್ ಇಡಿ ಸಮನ್ಸ್ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಮತ್ತು ವಿಭಾಗೀಯ ಪೀಠವೂ ಅರ್ಜಿ ವಜಾ ಮಾಡಿತ್ತು. ಹೀಗಾಗಿ ಡಿ.ಕೆ.ಶಿವಕುಮಾರ್ ಹೈಕೋರ್ಟ್ ಆದೇಶ ಮರು ಪರಿಶೀಲಿಸುವಂತೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಇತ್ತ ಡಿ.ಕೆ.ಶಿವಕುಮಾರ್ ಅವರ ಪತ್ನಿ ಉಷಾ ಮತ್ತು ತಾಯಿ ಗೌರಮ್ಮರನ್ನು ಕೇವಲ ತನಿಖೆ ಮಾಡಬೇಕು ಹೊರತು ಬಂಧಿಸುವಂತಿಲ್ಲ ಎಂದು ಇಡಿಗೆ ಸುಪ್ರೀಂಕೋರ್ಟ್ ಸೂಚನೆಯನ್ನು ನೀಡಿದೆ.

    ಇಡಿಗೆ ಕ್ಲಾಸ್: ಎಲ್ಲ ಹೈಕೋರ್ಟ್ ಆದೇಶವನ್ನು ಅನುಮಾನಿಸಬೇಡಿ. ಅರ್ಜಿಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಮಾಜಿ ಗೃಹ ಸಚಿವ ಮತ್ತು ಹಣಕಾಸು ಸಚಿವ ಎಂದು ತಪ್ಪಾಗಿ ಉಲ್ಲೇಖಿಸಲಾಗಿದೆ. ಎಲ್ಲ ಪ್ರಕರಣಗಳನ್ನು ಒಂದೇ ಮನೋಭಾವದಿಂದ ಕಾಣೋದನ್ನು ಬಿಡಬೇಕು. ಸರರ್ಕಾದ ತನಿಖಾ ಅಧಿಕಾರಿಗಳು ಮನಸ್ಥಿತಿ ಬದಲಾಯಿಸಿಕೊಳ್ಳಿ. ಹೈಕೋರ್ಟ್ ಆದೇಶಗಳ ಮೇಲೆ ಅನುಮಾನಿಸುವುದು ಸರಿಯಲ್ಲ. ಪ್ರಕರಣವನ್ನು ಒಂದಕ್ಕೊಂದು ಜೋಡಿಸುವುದನ್ನು ಬಿಡಿ ಎಂದು ಇಡಿ ಪರ ವಾದ ಮಂಡಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರನ್ನು ನ್ಯಾಯಾಧೀಶರು ತರಾಟೆಗೆ ತೆಗೆದುಕೊಂಡರು.

    ಪ್ರತಿ ಹೈಕೋರ್ಟ್ ಆದೇಶಗಳನ್ನು ಈ ರೀತಿ ಪರಿಗಣಿಸುವುದು ಸರಿಯಲ್ಲ. ಶಬರಿಮಲೆ ತೀರ್ಪನ್ನು ಸರ್ಕಾರಕ್ಕೆ ಒದಲು ಹೇಳಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಚಾಟಿ ಬೀಸಿತು.

    ದೆಹಲಿ ಹೈಕೋರ್ಟ್ ನಲ್ಲಿ ಇಡಿ ಪರ ವಾದ ಮಂಡಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ ನಟರಾಜ್, ಡಿ.ಕೆ ಶಿವಕುಮಾರ್ ಒಬ್ಬ ಪ್ರಭಾವಿ ವ್ಯಕ್ತಿ, ಶಾಸಕ, ಮಾಜಿ ಸಚಿವರಾಗಿದ್ದವರು. ಪ್ರಕರಣ ಇನ್ನು ತನಿಖಾ ಹಂತದಲ್ಲಿರುವ ಕಾರಣ ಸಾಕ್ಷಿ ನಾಶ ಮಾಡುವ ಸಾಧ್ಯತೆಗಳಿದ್ದು, ಐಟಿ ವಿಚಾರಣೆ ವೇಳೆ ಇದು ಸಾಬೀತಾಗಿದೆ. ಅಲ್ಲದೇ ದೇಶವನ್ನು ತೊರೆಯುವ ಸಾಧ್ಯತೆಯೂ ಇದೆ. ಪ್ರಕರಣ ಸಾಕಷ್ಟು ಆಳವಾಗಿ ತನಿಖೆ ಆಗಬೇಕಿದ್ದು ಡಿ.ಕೆ ಶಿವಕುಮಾರ್ ಜೈಲಿಂದ ಹೊರಗಿದ್ದಲ್ಲಿ ತನಿಖೆಗೆ ತೊಂದರೆ ಆಗಬಹುದು ಅಂತಾ ಆರೋಪಿಸಿದ್ದರು.

    ಪ್ರತಿವಾದ ಮಂಡಿಸಿದ್ದ ಡಿ.ಕೆ.ಶಿವಕುಮಾರ್ ಪರ ವಕೀಲ ಅಭಿಷೇಕ ಮನುಸಿಂಘ್ವಿ, ಐವತ್ತು ದಿನಗಳ ಕಾಲ ಜೈಲಿನಲ್ಲಿ ಇಡಲಾಗಿದೆ. ಇನ್ನು ವಿಚಾರಣೆ ನಡೆಸುವ ಅಗತ್ಯ ಇಲ್ಲ. ಆರೋಗ್ಯ ದೃಷ್ಟಿಯಿಂದ ಜಾಮೀನು ನೀಡಬೇಕು. ಜಾಮೀನಿಗಾಗಿ ಯಾವುದೇ ಕಂಡಿಷನ್ ಫಾಲೋ ಮಾಡಲು ಸಿದ್ಧ ಅಲ್ಲದೇ ತನಿಖೆಗೆ ಪೂರ್ಣ ಪ್ರಮಾಣದ ಸಹಕಾರ ನೀಡುವ ಭರವಸೆ ನೀಡಿದ್ದರು.

    ವಾದ ಪ್ರತಿ ವಾದ ಆಲಿಸಿದ ದೆಹಲಿ ಹೈಕೋರ್ಟ್ ನ ನ್ಯಾ. ಸುರೇಶ್ ಕುಮಾರ್ ಕೈಟಾ ನೇತೃತ್ವದ ಏಕ ಸದಸ್ಯ ಪೀಠ ಆರೋಗ್ಯದ ಕಾರಣಗಳನ್ನು ಆಧರಿಸಿ ಜಾಮೀನು ನೀಡಿತ್ತು. ಅಲ್ಲದೇ ತನಿಖೆಗೆ ಸಹಕರಿಸಬೇಕು ವಿದೇಶಕ್ಕೆ ತೆರಳುವ ಅನಿವಾರ್ಯತೆ ಬಂದರೆ ಮೊದಲು ಕೋರ್ಟ್ ಗಮನಕ್ಕೆ ತರಬೇಕು ಎಂದು ಸೂಚಿಸಿ ಷರತ್ತು ಬದ್ದ ಜಾಮೀನು ನೀಡಿತ್ತು.

  • ಕನಕಪುರದ ಬಂಡೆಗೆ ಇಂದು ಸುಪ್ರೀಂ ಪರೀಕ್ಷೆ

    ಕನಕಪುರದ ಬಂಡೆಗೆ ಇಂದು ಸುಪ್ರೀಂ ಪರೀಕ್ಷೆ

    ನವದೆಹಲಿ: ದೆಹಲಿ ಹೈಕೋರ್ಟ್ ನಿಂದ ಜಾಮೀನು ಪಡೆದಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಇಂದು ಸುಪ್ರೀಂಕೋರ್ಟ್ ನಲ್ಲಿ ಮತ್ತೊಂದು ಪರೀಕ್ಷೆ ಎದುರಿಸಲಿದ್ದಾರೆ. ಇಡಿ ಸಲ್ಲಿಸಿರುವ ಮೇಲ್ಮನವಿಯನ್ನು ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.

    ಅಕ್ರಮ ಹಣ ವರ್ಗಾವಣೆ ಮತ್ತು ಬೇನಾಮಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಾಮೀನು ಪಡೆದು ಸದ್ಯ ರಿಲ್ಯಾಕ್ಸ್ ಮೂಡ್ ನಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ  ಇಂದು ಮಹತ್ವದ ದಿನ. ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನ ಪ್ರಶ್ನಿಸಿ ಇಡಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಮತ್ತು ಇಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಮಾಡುವಂತೆ ಡಿ.ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. ನ್ಯಾ. ಆರ್.ಎಫ್.ನಾರಿಮನ್ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ಈ ವಿಚಾರಣೆ ನಡೆಯಲಿದೆ.

    ದೆಹಲಿ ಹೈಕೋರ್ಟ್ ನಲ್ಲಿ ಇಡಿ ಪರ ವಾದ ಮಂಡಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ ನಟರಾಜ್, ಡಿ.ಕೆ ಶಿವಕುಮಾರ್ ಒಬ್ಬ ಪ್ರಭಾವಿ ವ್ಯಕ್ತಿ, ಶಾಸಕ, ಮಾಜಿ ಸಚಿವರಾಗಿದ್ದವರು. ಪ್ರಕರಣ ಇನ್ನು ತನಿಖಾ ಹಂತದಲ್ಲಿರುವ ಕಾರಣ ಸಾಕ್ಷಿ ನಾಶ ಮಾಡುವ ಸಾಧ್ಯತೆಗಳಿದ್ದು, ಐಟಿ ವಿಚಾರಣೆ ವೇಳೆ ಇದು ಸಾಬೀತಾಗಿದೆ. ಅಲ್ಲದೇ ದೇಶವನ್ನು ತೊರೆಯುವ ಸಾಧ್ಯತೆಯೂ ಇದೆ. ಪ್ರಕರಣ ಸಾಕಷ್ಟು ಆಳವಾಗಿ ತನಿಖೆ ಆಗಬೇಕಿದ್ದು ಡಿ.ಕೆ ಶಿವಕುಮಾರ್ ಜೈಲಿಂದ ಹೊರಗಿದ್ದಲ್ಲಿ ತನಿಖೆಗೆ ತೊಂದರೆ ಆಗಬಹುದು ಅಂತಾ ಆರೋಪಿಸಿದ್ದರು.

    ಪ್ರತಿವಾದ ಮಂಡಿಸಿದ್ದ ಡಿ.ಕೆ.ಶಿವಕುಮಾರ್ ಪರ ವಕೀಲ ಅಭಿಷೇಕ ಮನುಸಿಂಘ್ವಿ, ಐವತ್ತು ದಿನಗಳ ಕಾಲ ಜೈಲಿನಲ್ಲಿ ಇಡಲಾಗಿದೆ. ಇನ್ನು ವಿಚಾರಣೆ ನಡೆಸುವ ಅಗತ್ಯ ಇಲ್ಲ. ಆರೋಗ್ಯ ದೃಷ್ಟಿಯಿಂದ ಜಾಮೀನು ನೀಡಬೇಕು. ಜಾಮೀನಿಗಾಗಿ ಯಾವುದೇ ಕಂಡಿಷನ್ ಫಾಲೋ ಮಾಡಲು ಸಿದ್ಧ ಅಲ್ಲದೇ ತನಿಖೆಗೆ ಪೂರ್ಣ ಪ್ರಮಾಣದ ಸಹಕಾರ ನೀಡುವ ಭರವಸೆ ನೀಡಿದ್ದರು.

    ವಾದ ಪ್ರತಿ ವಾದ ಆಲಿಸಿದ ದೆಹಲಿ ಹೈಕೋರ್ಟ್ ನ ನ್ಯಾ. ಸುರೇಶ್ ಕುಮಾರ್ ಕೈಟಾ ನೇತೃತ್ವದ ಏಕ ಸದಸ್ಯ ಪೀಠ ಆರೋಗ್ಯದ ಕಾರಣಗಳನ್ನು ಆಧರಿಸಿ ಜಾಮೀನು ನೀಡಿತ್ತು. ಅಲ್ಲದೇ ತನಿಖೆಗೆ ಸಹಕರಿಸಬೇಕು ವಿದೇಶಕ್ಕೆ ತೆರಳುವ ಅನಿವಾರ್ಯತೆ ಬಂದರೆ ಮೊದಲು ಕೋರ್ಟ್ ಗಮನಕ್ಕೆ ತರಬೇಕು ಎಂದು ಸೂಚಿಸಿ ಷರತ್ತು ಬದ್ದ ಜಾಮೀನು ನೀಡಿತ್ತು.

    ಡಿಕೆ ಶಿವಕುಮಾರ್ ಅವರಿಗೆ ಜಾಮೀನು ನೀಡಿದ ದೆಹಲಿ ಹೈ ಕೋರ್ಟ್ ಈ ಆದೇಶ ಪ್ರಶ್ನಿಸಿ ಇಡಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿಯನ್ನು ಸಲ್ಲಿಸಿದ್ರೆ, ಇಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಮಾಡುವಂತೆ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿದ್ದರು. ಈ ಎರಡು ಅರ್ಜಿಗಳನ್ನು ಒಗ್ಗೂಡಿಸಿರುವ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದ್ದು ಡಿ.ಕೆ ಶಿವಕುಮಾರ್ ಹೊರಗಿರಬೇಕಾ ಅಥಾವ ವಾಪಸ್ ಜೈಲಿಗೆ ಹೋಗಬೇಕಾ ಅನ್ನೋದನ್ನ ನಿರ್ಧರಿಸಲಿದ್ದು ಸುಪ್ರೀಂಕೋರ್ಟ್ ವಿಚಾರಣೆ ಕುತೂಹಲ ಮೂಡಿಸಿದೆ.

  • ನಾಳೆ ದೆಹಲಿ ಹೈಕೋರ್ಟಿನಲ್ಲಿ ಡಿಕೆಶಿ ತಾಯಿ, ಪತ್ನಿ ಅರ್ಜಿ ವಿಚಾರಣೆ

    ನಾಳೆ ದೆಹಲಿ ಹೈಕೋರ್ಟಿನಲ್ಲಿ ಡಿಕೆಶಿ ತಾಯಿ, ಪತ್ನಿ ಅರ್ಜಿ ವಿಚಾರಣೆ

    ಬೆಂಗಳೂರು: ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆ ನಡೆಸಲು ಸೂಚಿಸುವಂತೆ ಡಿ.ಕೆ ಶಿವಕುಮಾರ್ ಪತ್ನಿ ಉಷಾ, ತಾಯಿ ಗೌರಮ್ಮ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಶುಕ್ರವಾರ ದೆಹಲಿ ಹೈಕೋರ್ಟಿನಲ್ಲಿ ನಡೆಯಲಿದೆ.

    ನ್ಯಾ. ಬ್ರಿಜೇಶ್ ಸೇಥಿ ನೇತೃತ್ವದ ಏಕ ಸದಸ್ಯ ಪೀಠ ವಿಚಾರಣೆ ನಡೆಸಲಿದ್ದು ನಾಳೆ ಇಡಿ ಪರ ವಕೀಲರು ವಾದ ಮಂಡಿಸಲಿದ್ದಾರೆ. ನವೆಂಬರ್ ಏಳಕ್ಕೆ ವಾದ ಮಂಡಿಸಿದ್ದ ಉಷಾ ಮತ್ತು ಗೌರಮ್ಮ ಪರ ವಕೀಲ ದಯಾನ್ ಕೃಷ್ಣನ್, 15 ವರ್ಷದ ಕೆಳಗಿನ ಮತ್ತು 65 ವರ್ಷ ಮೇಲ್ಪಟ್ಟ ವಯಸ್ಸಿನವರನ್ನು ವಿಚಾರಣೆ ಕರೆಯಬಾರದು, ಒಂದು ವೇಳೆ ವಿಚಾರಣೆ ಅವಶ್ಯಕತೆ ಇದ್ದರೆ ಅವರಿರುವ ಸ್ಥಳದಲ್ಲಿ ವಿಚಾರಣೆ ಮಾಡಬೇಕು ಎಂದು ಮನವಿ ಮಾಡಿದ್ದರು.

    ಮಹಿಳೆಯರನ್ನು ಪೋಲಿಸ್ ಠಾಣೆಯಲ್ಲೇ ವಿಚಾರಣೆ ಮಾಡಬೇಕು ಎನ್ನುವ ನಿಮಯಗಳಿಲ್ಲ ಗೌರಮ್ಮ ಅವರಿಗೆ 85 ವರ್ಷ ಆಗಿದ್ದು ಉಷಾ ಅವರು ಗೃಹಿಣಿ. ಹೀಗಾಗಿ ದೆಹಲಿ ತನಕ ವಿಚಾರಣೆ ಬರಲು ಸಾಧ್ಯವಿಲ್ಲ. ಅಲ್ಲದೇ ನಾವು ವಿಚಾರಣೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನವೂ ಮಾಡಿಲ್ಲ. ಆರೋಗ್ಯ ಸಹಕರಿಸದ ಹಿನ್ನೆಲೆಯಲ್ಲಿ ಬೆಂಗಳೂರಿನ ನಮ್ಮ ನಿವಾಸದಲ್ಲಿ ವಕೀಲರ ಸಮ್ಮಖದಲ್ಲಿ ವಿಚಾರಣೆ ಮಾಡಬೇಕು ಎಂದು ಕೇಳಿಕೊಂಡಿದ್ದರು. ಅಂದು ಇಡಿ ಪರ ಹಿರಿಯ ವಕೀಲರು ಗೈರಾಗಿದ್ದ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಿಕೆಯಾಗಿತ್ತು.

    ಉಷಾ ಮತ್ತು ಗೌರಮ್ಮ ಪರ ವಕೀಲರ ವಾದಕ್ಕೆ ಇಡಿ ಪರ ವಕೀಲರು ಕೋರ್ಟ್ ಮುಂದೆ ಹಾಜರಾಗಿ ಪ್ರತಿವಾದ ಮಂಡಿಸಲಿದ್ದು ಆದೇಶ ಕಾಯ್ದಿರಿಸುವ ಸಾಧ್ಯತೆ ಇದೆ.

  • ದಿಲ್ಲಿ ಹೈಕೋರ್ಟಿನಲ್ಲಿ ಇಂದು ಡಿಕೆಶಿ ತಾಯಿ, ಪತ್ನಿ ಅರ್ಜಿ ವಿಚಾರಣೆ

    ದಿಲ್ಲಿ ಹೈಕೋರ್ಟಿನಲ್ಲಿ ಇಂದು ಡಿಕೆಶಿ ತಾಯಿ, ಪತ್ನಿ ಅರ್ಜಿ ವಿಚಾರಣೆ

    ನವದೆಹಲಿ: ಇಡಿ ಸಮನ್ಸ್ ರದ್ದು ಮತ್ತು ಬೆಂಗಳೂರಿನಲ್ಲಿ ವಿಚಾರಣೆ ನಡೆಸುವಂತೆ ಕೋರಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಪತ್ನಿ ಮತ್ತು ತಾಯಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆಗೆ ಬರಲಿದೆ.

    ದೆಹಲಿ ಹೈಕೋರ್ಟ್ ನ ನ್ಯಾ. ಬ್ರಿಜೇಶ್ ಸೇಥಿ ನೇತೃತ್ವದ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ಬರಲಿದ್ದು, ಇಂದು ನಿರ್ಣಾಯಕ ಆದೇಶ ಹೊರ ಬರುವ ಸಾಧ್ಯತೆ ಇದೆ. ನಾಳೆ ದೆಹಲಿಯ ಇಡಿ ಕಚೇರಿಗೆ ಬಂದು ವಿಚಾರಣೆ ಹಾಜರಾಗಬೇಕು ಅಂತಾ ಈಗಾಗಲೇ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದು, ಇಂದು ಹೈ ಕೋರ್ಟ್ ನೀಡುವ ಮಧ್ಯಂತರ ಆದೇಶ ಡಿ.ಕೆ ಕುಟುಂಬಕ್ಕೆ ಮಹತ್ವ ಆಗಲಿದೆ.

    ಅಕ್ರಮ ಹಣ ವರ್ಗಾವಣೆ ಮತ್ತು ಬೇನಾಮಿ ಆಸ್ತಿ ಗಳಿಕೆ ಪ್ರಕರಣದಡಿ ದೆಹಲಿ ಇಡಿ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಕಳೆದ ತಿಂಗಳು ಇಡಿ ಅಧಿಕಾರಿಗಳು ಡಿ.ಕೆ ಶಿವಕುಮಾರ್ ಪತ್ನಿ ಉಷಾ ಮತ್ತು ತಾಯಿ ಗೌರಮ್ಮ ಅವರಿಗೆ ಸಮನ್ಸ್ ನೀಡಿದ್ದರು. ಆದರೆ ವಯೋಸಹಜ ಆರೋಗ್ಯ ಸಮಸ್ಯೆಗಳ ಕಾರಣದಿಂದ ಗೌರಮ್ಮ ದೆಹಲಿಯಲ್ಲಿ ವಿಚಾರಣೆ ಹಾಜರಾಗಲು ಸಾಧ್ಯವಿಲ್ಲ ಜೊತೆಗೆ ಉಷಾ ಅವರನ್ನು ಬೆಂಗಳೂರಿನಲ್ಲೇ ವಿಚಾರಣೆ ಒಳ ಪಡಿಸಬೇಕು ಅಂತಾ ಮನವಿ ಮಾಡಿ ದಿಲ್ಲಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು.

    ಈಗಾಗಲೇ ನಾಲ್ಕು ಬಾರಿ ಈ ಅರ್ಜಿ ವಿಚಾರಣೆ ನಡೆಸಿರುವ ಪೀಠ ಇಂದು ನಿರ್ಣಾಯಕ ತಿರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ. ಉಷಾ ಮತ್ತು ಗೌರಮ್ಮ ಅವರ ಮನವಿಗೆ ಒಪ್ಪಿಕೊಂಡಲ್ಲಿ ಬೆಂಗಳೂರಿನಲ್ಲಿ ವಿಚಾರಣೆ ನಡೆಯಲಿದ್ದು, ಹೈ ಕೋರ್ಟ್ ಇವರ ಮನವಿ ತಿರಸ್ಕರಿದಲ್ಲಿ ನಾಳೆ ದೆಹಲಿಯಲ್ಲಿ ಇಡಿ ಅಧಿಕಾರಿಗಳ ಮುಂದೆ ವಿಚಾರಣೆ ಒಳಪಡಬೇಕಿದೆ.

  • ಡಿಕೆಶಿ ಜಾಮೀನು ಆದೇಶ ಪ್ರಶ್ನಿಸಿ ಇಡಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಕೆ

    ಡಿಕೆಶಿ ಜಾಮೀನು ಆದೇಶ ಪ್ರಶ್ನಿಸಿ ಇಡಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಕೆ

    ನವದೆಹಲಿ: ದೆಹಲಿ ಹೈಕೋರ್ಟ್ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ನೀಡಿದೆ. ಈಗ ಜಾರಿ ನಿರ್ದೇಶನಾಲಯ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಅರ್ಜಿ ಗುರುವಾರ ವಿಚಾರಣೆಗೆ ಬರುವ ಸಾಧ್ಯತೆಗಳಿವೆ.

    ದೆಹಲಿ ಹೈಕೋರ್ಟಿನ ನ್ಯಾ.ಸುರೇಶ್ ಕುಮಾರ್ ಕೈಟ್ ಜಾಮೀನು ಆದೇಶವನ್ನು ಇಂದು ಪ್ರಕಟಿಸಿದರು. ದೇಶಕ್ಕೆ ತೆರಳುವ ಮೊದಲು ಅನುಮತಿ ಪಡೆಯಬೇಕು, 25 ಲಕ್ಷ ರೂ. ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ನೀಡಬೇಕು ಎಂಬುದಾಗಿ ಷರತ್ತು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

    ಸೋದರ ಮತ್ತು ಸಂಸದರಾಗಿರುವ ಡಿ.ಕೆ.ಸುರೇಶ್ ಮತ್ತು ಸುರೇಶ್ ಅವರ ಆಪ್ತ ಸಹಾಯಕ ಜುಬಿನ್ ಇಬ್ಬರು ಶ್ಯೂರಿಟಿ ನೀಡಿದ್ದಾರೆ. ಪಾರ್ಲಿಮೆಂಟ್ ಭವನದ ಎಸ್ ಬಿಐ ಬ್ಯಾಂಕ್ ನಲ್ಲಿ ಡಿ.ಕೆ.ಸುರೇಶ್ ಮತ್ತು ಜುಬೇನ್ ಹೆಸರಲ್ಲಿ ಸೆಕ್ಯೂರಿಟಿ ಅಮೌಂಟ್ ಡೆಪಾಸಿಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

    ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ಸಂಬಂಧ ಸುಮಾರು ಗುರುವಾರ (ಅಕ್ಟೋಬರ್ 17) 3 ಗಂಟೆಗೂ ಅಧಿಕ ಕಾಲ ವಾದ-ಪ್ರತಿವಾದ ಆಲಿಸಿದ ದೆಹಲಿ ಹೈಕೋರ್ಟ್ ನ್ಯಾ. ಸುರೇಶ್ ಕುಮಾರ್ ಕೈಟ್ ಇಂದಿಗೆ ಆದೇಶವನ್ನು ಕಾಯ್ದಿರಿಸಿದ್ದರು.