Tag: delhi highcourt

  • ಮೋದಿ ಪದವಿಯ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್

    ಮೋದಿ ಪದವಿಯ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಪದವಿಯ ವಿವರಗಳನ್ನು ಬಹಿರಂಗಪಡಿಸುವ ಅವಶ್ಯಕತೆ ಇಲ್ಲ ಎಂದು ದೆಹಲಿ ಹೈಕೋರ್ಟ್ (Delhi High Court) ತೀರ್ಪು ನೀಡಿದೆ. ಇದೇ ವೇಳೆ ಮಾಹಿತಿ ಬಿಡುಗಡೆಗೆ ನಿರ್ದೇಶನ ನೀಡಿದ್ದ ಕೇಂದ್ರ ಮಾಹಿತಿ ಆಯೋಗದ ಆದೇಶವನ್ನು ರದ್ದುಗೊಳಿಸಿದೆ.

    2016 ರಲ್ಲಿ ಕೇಂದ್ರ ಮಾಹಿತಿ ಆಯೋಗ (Central Information Commission) 1978 ರಲ್ಲಿ ದೆಹಲಿ ವಿವಿಯಲ್ಲಿ ಬಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ಅವಕಾಶ ನೀಡಿತ್ತು. ಇದೇ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಹೇಳಲಾಗಿತ್ತು. ದೆಹಲಿ ವಿಶ್ವವಿದ್ಯಾಲಯವು ಸಿಐಸಿ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ – 3 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

    ಸೋಮವಾರ ತನ್ನ ಅಂತಿಮ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಸಚಿನ್ ದತ್ತಾ ಅವರಿದ್ದ ಪೀಠ, ವೈಯಕ್ತಿಕ ಮಾಹಿತಿಯ ಬಹಿರಂಗಗೊಳಿಸುವಿಕೆಯು ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಬಹುದು ಎಂದು ಹೇಳಿದೆ. ಈ ಸಂದರ್ಭದಲ್ಲಿ, ಮಾಹಿತಿ ಬಹಿರಂಗಗೊಳಿಸುವುದು ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿಲ್ಲ ಎಂದು ಕೋರ್ಟ್ ಒತ್ತಿ ಹೇಳಿದೆ. ಇದನ್ನೂ ಓದಿ: ಶ್ರೀಮಂತ ಗಣಪನಿಗೆ ಈ ಬಾರಿ 474 ಕೋಟಿ ರೂ. ವಿಮೆ – ಏನಿದ್ರ ವಿಶೇಷತೆ ಅಂತೀರಾ?

    ದೆಹಲಿ ವಿಶ್ವವಿದ್ಯಾಲಯವು, ಪ್ರಧಾನಿ ಮೋದಿಯವರ ಶೈಕ್ಷಣಿಕ ದಾಖಲೆಗಳನ್ನು ಬಹಿರಂಗಪಡಿಸುವುದು ಗೌಪ್ಯತೆಯ ಉಲ್ಲಂಘನೆಯಾಗುತ್ತದೆ ಎಂದು ವಾದಿಸಿತು. ಈ ವಾದವನ್ನು ನ್ಯಾಯಾಲಯ ಒಪ್ಪಿಕೊಂಡಿದೆ. ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ, ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸುವುದು ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿರಬೇಕು ಎಂದು ನ್ಯಾಯಾಲಯ ತಿಳಿಸಿದೆ. ಈ ಪ್ರಕರಣದಲ್ಲಿ, ಅಂತಹ ಯಾವುದೇ ಹಿತಾಸಕ್ತಿ ಕಂಡುಬಂದಿಲ್ಲ ಎಂದು ಕೋರ್ಟ್ ಹೇಳಿದೆ.

  • ಕೇಜ್ರಿವಾಲ್ ಜಾಮೀನು ಅರ್ಜಿ ಸೆ. 5ಕ್ಕೆ ಮುಂದೂಡಿಕೆ

    ಕೇಜ್ರಿವಾಲ್ ಜಾಮೀನು ಅರ್ಜಿ ಸೆ. 5ಕ್ಕೆ ಮುಂದೂಡಿಕೆ

    – ಪ್ರಕರಣ ರಾಜಕೀಯಗೊಳಿಸಲು ಯತ್ನ, ಸಿಬಿಐ ಆರೋಪ

    ನವದೆಹಲಿ: ಸಿಬಿಐ ಬಂಧನ ಪ್ರಶ್ನಿಸಿ, ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supremecourt) ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಸಿಬಿಐ ಸಮಯ ಕೇಳಿದ ಹಿನ್ನಲೆ ಒಂದು ವಾರದ ಕಾಲಾವಕಾಶ ನೀಡಿದೆ.

    ಇದಕ್ಕೂ ಮುನ್ನ ಸಿಬಿಐ(Central Bureau Of Investigation)  ಪ್ರಕರಣಕ್ಕೆ ಸಂಬಂಧಿಸಿದಂತೆ ಕೌಂಟರ್ ಅಫಿಡವಿಟ್ ಸಲ್ಲಿಸಿದೆ. ಇದರಲ್ಲಿ ವಿವಾದಾತ್ಮಕ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ, ಕೇಜ್ರಿವಾಲ್ ಅವರ ಬಂಧನವು ಕಾನೂನುಬದ್ಧವಾಗಿದೆ, ದೆಹಲಿ ಹೈಕೋರ್ಟ್(Delhi Highcourt) ಈಗಾಗಲೇ ಕೇಜ್ರಿವಾಲ್ ಅವರ ರಿಟ್ ಅರ್ಜಿಯನ್ನು ವಜಾಗೊಳಿಸಿದೆ ಎಂದು ಹೇಳಿದೆ. ಇದನ್ನೂ ಓದಿ: ರಾಜಕೀಯ ಪ್ರವೇಶದ ಬಳಿಕವೂ ಯಶಸ್ವಿ ಆಪರೇಷನ್ – ಮಂಜುನಾಥ್ ಕೆಲಸಕ್ಕೆ ಮೆಚ್ಚುಗೆ

    ಪ್ರಕರಣದಲ್ಲಿ ಕೇಜ್ರಿವಾಲ್ ಅವರ ಒಳಗೊಳ್ಳುವಿಕೆಯನ್ನು ಸೂಚಿಸುವ ಗಣನೀಯ ಪುರಾವೆಗಳನ್ನು ನೀಡಲಾಗಿದೆ. ಅವರ ಕ್ರಮಗಳು ಕಾನೂನುಬಾಹಿರ ಮಾತ್ರವಲ್ಲ, ಗಮನಾರ್ಹ. ಹಣಕಾಸಿನ ಅಕ್ರಮಗಳು ಮತ್ತು ಸಾರ್ವಜನಿಕ ಕಚೇರಿಯ ದುರುಪಯೋಗವನ್ನು ಒಳಗೊಂಡಿರುವ ದೊಡ್ಡ ಪಿತೂರಿಯ ಭಾಗವಾಗಿದೆ ಎಂದು ಸಿಬಿಐ ಪ್ರತಿಪಾದಿಸಿದೆ. ಇದನ್ನೂ ಓದಿ: ಪಿತ್ರಾರ್ಜಿತ ಆಸ್ತಿ ವಿವಾದ: ತಮ್ಮಂದಿರಿಂದಲೇ ಅಣ್ಣನ ಕೊಲೆ

    ಕೇಜ್ರಿವಾಲ್ ಪ್ರಕರಣವನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿಬಿಐ ಆರೋಪಿಸಿದೆ. ಅವರು ಅಪರಾಧಗಳ ಆಯೋಗದ ಬಗ್ಗೆ ಪ್ರಾಥಮಿಕವಾಗಿ ತೃಪ್ತರಾಗಿರುವ ವಿವಿಧ ನ್ಯಾಯಾಲಯಗಳು ಪದೇಪದೆ ಆದೇಶಗಳನ್ನು ನೀಡಿದ್ದರೂ ಈ ಗೌರವಾನ್ವಿತ ನ್ಯಾಯಾಲಯದ ಮುಂದೆ ಪ್ರಕರಣವನ್ನು ರಾಜಕೀಯವಾಗಿ ಸಂವೇದನಾಶೀಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಈ ಬಂಧನವು ಯಾವುದೇ ಸಮರ್ಥನೀಯವಲ್ಲ ಎಂದು ಹೇಳಲಾಗುವುದಿಲ್ಲ ಎಂದು ಹೇಳಿದೆ. ಇದನ್ನೂ ಓದಿ: ಮುಡಾ ಸೈಟ್ ಪಡೆಯಲು ಸಿಎಂ ಪತ್ನಿ ಡಿಮ್ಯಾಂಡ್ – ಸಿಎಂ ವಿರುದ್ಧ ಹೆಚ್‌ಡಿಕೆ ಕಿಡಿ

    ಆರೋಪಿಗಳ ಹಾರ್ಡ್ ಡ್ರೈವ್‌ಗಳು ಮತ್ತು ಮೊಬೈಲ್ ಫೋನ್‌ಗಳಿಂದ ಪಡೆದ ಡೇಟಾವು ಕೇಜ್ರಿವಾಲ್ ಅವರ ಒಳಗೊಳ್ಳುವಿಕೆಯನ್ನು ದೃಢಪಡಿಸುತ್ತದೆ ಎಂದು ಅಫಿಡವಿಟ್ ಉಲ್ಲೇಖಿಸಿದೆ. ಇದರಲ್ಲಿ ವಾಟ್ಸಾಪ್ ಚಾಟ್‌ಗಳು, ಸ್ಕ್ರೀನ್‌ಶಾಟ್‌ಗಳು, ಕೇಜ್ರಿವಾಲ್ ಅವರನ್ನು ಹಣಕಾಸು ವಹಿವಾಟುಗಳಿಗೆ ಲಿಂಕ್ ಮಾಡುವ ಸಂಪರ್ಕ ವಿವರಗಳು ಮತ್ತು ಪರಿಶೀಲನೆಯಲ್ಲಿರುವ ನೀತಿ ನಿರ್ಧಾರಗಳು ಸೇರಿವೆ. ಈ ದಾಖಲೆಗಳು ಕೇಜ್ರಿವಾಲ್ ಮತ್ತು ಅಕ್ರಮ ಚಟುವಟಿಕೆಗಳ ನಡುವಿನ ನೇರ ಸಂಪರ್ಕವನ್ನು ಸೂಚಿಸುತ್ತವೆ ಎಂದು ಸಿಬಿಐ ಆರೋಪಿಸಿದೆ. ಇದನ್ನೂ ಓದಿ: ಮೋದಿ ಉತ್ತರಾಧಿಕಾರಿ ಯಾರು? ಅಮಿತ್‌ ಶಾ, ಗಡ್ಕರಿ, ಯೋಗಿ.. ಯಾರಿಗೆ ಹೆಚ್ಚು ಜನರ ಒಲವು?

  • ಜಾಮೀನು ಕೋರಿ ಕೇಜ್ರಿವಾಲ್ ಅರ್ಜಿ- ಸಿಬಿಐಗೆ ನೋಟಿಸ್ ನೀಡಿದ ದೆಹಲಿ ಹೈಕೋರ್ಟ್

    ಜಾಮೀನು ಕೋರಿ ಕೇಜ್ರಿವಾಲ್ ಅರ್ಜಿ- ಸಿಬಿಐಗೆ ನೋಟಿಸ್ ನೀಡಿದ ದೆಹಲಿ ಹೈಕೋರ್ಟ್

    ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಶುಕ್ರವಾರ ಕೇಂದ್ರ ತನಿಖಾ ದಳಕ್ಕೆ (CBI) ನೋಟಿಸ್ ಜಾರಿ ಮಾಡಿದೆ. ನ್ಯಾ. ನೀನಾ ಬನ್ಸಾಲ್ ಕೃಷ್ಣ ಸಿಬಿಐನ ಪ್ರತಿಕ್ರಿಯೆಯನ್ನು ಕೋರಿದ್ದು, ಪ್ರಕರಣದ ವಿಚಾರಣೆಯನ್ನು ಜುಲೈ 17 ಕ್ಕೆ ಮುಂದೂಡಿದ್ದಾರೆ.

    ಅರವಿಂದ್ ಕೇಜ್ರಿವಾಲ್ ಅವರು ಮೊದಲು ವಿಚಾರಣಾ ನ್ಯಾಯಾಲಯಕ್ಕೆ ತೆರಳುವ ಬದಲು ನೇರವಾಗಿ ಜಾಮೀನಿಗಾಗಿ ಹೈಕೋರ್ಟ್‌ (High Court) ಮೊರೆ ಹೋಗಿದ್ದಾರೆ ಎಂಬ ಅಂಶವನ್ನು ನ್ಯಾಯಾಲಯ ಗಮನಿಸಿದೆ. ಈ ಅಂಶವನ್ನು ಮುಂದಿನ ಹಂತದಲ್ಲಿ ಪರಿಗಣಿಸಲಾಗುವುದು. ಇದಕ್ಕೂ ಮೊದಲು ಸಿಬಿಐ ಒಂದು ವಾರದಲ್ಲಿ ಉತ್ತರವನ್ನು ನೀಡಬೇಕು ಎಂದು ಹೈಕೋರ್ಟ್ ಹೇಳಿದೆ.

    ಜಾರಿ ನಿರ್ದೇಶನಾಲಯ (ED) ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಕೇಜ್ರಿವಾಲ್ ಅವರನ್ನು ಜೂನ್ 26 ರಂದು ಸಿಬಿಐ ಬಂಧಿಸಿತ್ತು. ಜೂನ್ 20 ರಂದು ಇಡಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ವಿಚಾರಣಾ ನ್ಯಾಯಾಲಯದಿಂದ ಜಾಮೀನು ನೀಡಲಾಯಿತು. ಆದರೆ ನಂತರ ಜೂನ್ 25 ರಂದು ದೆಹಲಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿತು. ಇದನ್ನೂ ಓದಿ: ಅಮರನಾಥ ಯಾತ್ರೆಯ ಬಳಿಕ ಜಮ್ಮು ಕಾಶ್ಮೀರದಲ್ಲಿ ಚುನಾವಣೆ – ತಯಾರಿ ಆರಂಭಿಸಿದ ಬಿಜೆಪಿ

    ಈ ನಡುವೆ ಜೂನ್ 26ರಂದು ಸಿಬಿಐ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು, ಜೂನ್ 29ರವರೆಗೆ ಸಿಬಿಐ ಕಸ್ಟಡಿಗೆ ನೀಡಿದೆ. ಜೂನ್ 29 ರಂದು ಸಿಬಿಐ ಕಸ್ಟಡಿ ವಿಸ್ತರಣೆಯನ್ನು ಕೋರದ ಹಿನ್ನೆಲೆಯಲ್ಲಿ ಜುಲೈ 12 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು. ಸಿಬಿಐ ಬಂಧನ ಪ್ರಶ್ನಿಸಿ ಮತ್ತು ಜಾಮೀನು ಕೋರಿ ಕೇಜ್ರಿವಾಲ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

  • ಸಿಬಿಐ ಬಂಧನ- ಜಾಮೀನು ಕೋರಿ ಕೇಜ್ರಿವಾಲ್ ಅರ್ಜಿ

    ಸಿಬಿಐ ಬಂಧನ- ಜಾಮೀನು ಕೋರಿ ಕೇಜ್ರಿವಾಲ್ ಅರ್ಜಿ

    ನವದೆಹಲಿ: ಹೊಸ ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಪಟ್ಟಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ (Delhi Highcourt) ಅರ್ಜಿ ಸಲ್ಲಿಸಿದ್ದಾರೆ‌. ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠ ಹೇಳಿದೆ.

    ಜಾರಿ ನಿರ್ದೇಶನಾಲಯ (ED) ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಕೇಜ್ರಿವಾಲ್ ಅವರನ್ನು ಜೂನ್ 26 ರಂದು ಸಿಬಿಐ ಬಂಧಿಸಿತ್ತು. ವಿಚಾರಣೆ ಬಳಿಕ ಸಿಬಿಐ ಕೂಡಾ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

    ಮಹತ್ವದ ಬೆಳವಣಿಗೆಯಲ್ಲಿ ಕೇಜ್ರಿವಾಲ್ (Aravind Kejriwal) ನೇರವಾಗಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 439 ರ ಅಡಿಯಲ್ಲಿ ಜಾಮೀನಿಗಾಗಿ ನೇರವಾಗಿ ಹೈಕೋರ್ಟ್‌ಗೆ ಹೋಗಲು ಯಾವುದೇ ಅಡ್ಡಿ ಇಲ್ಲ ಎಂದು ವಕೀಲರು ಹೇಳಿದ್ದಾರೆ.

    ಸಿಬಿಐ ತನ್ನ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿಯ ಮನವಿ ಮತ್ತು ಅವರನ್ನು ಏಜೆನ್ಸಿಯ ಕಸ್ಟಡಿಗೆ ಒಪ್ಪಿಸುವ ವಿಚಾರಣಾ ನ್ಯಾಯಾಲಯದ ಆದೇಶವೂ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಜುಲೈ 12 ರಂದು ನಡೆಯುವ ವಿಚಾರಣೆ ಅರವಿಂದ್ ಕೇಜ್ರಿವಾಲ್ ಅವರಿಗೆ ಮಹತ್ವದಾಗಿದೆ.

  • ಚುನಾವಣೆಯಿಂದ 6 ವರ್ಷ ಮೋದಿ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ಚುನಾವಣೆಯಿಂದ 6 ವರ್ಷ ಮೋದಿ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ನವದೆಹಲಿ: ಹಿಂದೂ ಹಾಗೂ ಸಿಖ್ ದೇವರುಗಳು ಮತ್ತು ಆರಾಧನಾ ಸ್ಥಳಗಳ ಹೆಸರಿನಲ್ಲಿ ಭಾರತೀಯ ಜನತಾ ಪಕ್ಷಕ್ಕೆ (BJP) ಮತ ಯಾಚಿಸಿದ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ (Delhi High Court) ಸೋಮವಾರ ವಜಾಗೊಳಿಸಿದೆ.

    ವಕೀಲ ಆನಂದ್ ಎಸ್ ಜೊಂಧಳೆ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಚಿನ್ ದತ್ತಾ ನೇತೃತ್ವದ ಪೀಠ ಅರ್ಜಿದಾರರು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಊಹಿಸಿರುವುದರಿಂದ ಅರ್ಜಿಯನ್ನು ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲಾಗಿದೆ ಎಂದು ಗಮನಿಸಿ ಯಾವುದೇ ದೂರಿನ ಬಗ್ಗೆ ನಿರ್ದಿಷ್ಟ ಕ್ರಮ ತೆಗೆದುಕೊಳ್ಳುವಂತೆ ಆಯೋಗಕ್ಕೆ ಸೂಚಿಸಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ನೂರಾರು ಮಹಿಳೆಯರನ್ನು ಪ್ರಜ್ವಲ್ ಜೀವಂತ ಕೊಲೆ ಮಾಡಿದ್ದಾರೆ: ಲಕ್ಷ್ಮಿ ಹೆಬ್ಬಾಳ್ಕರ್

    ಆಯೋಗವು ಜೊಂಧಲೆ ಅವರ ದೂರನ್ನು ಕಾನೂನಿನ ಪ್ರಕಾರ ಪರಿಶೀಲಿಸುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗದ ಪರವಾಗಿ ವಕೀಲ ಸಿದ್ಧಾಂತ್ ಕುಮಾರ್ ಹೇಳಿದರು. ಆಯೋಗವು ನಿತ್ಯವು ಇಂತಹ ದೂರುಗಳನ್ನು ಸ್ವೀಕರಿಸುತ್ತದೆ, ಪರಿಶೀಲಿಸುತ್ತದೆ ಮತ್ತು ಕ್ರಮ ತೆಗೆದುಕೊಳ್ಳುತ್ತದೆ. ಆಯೋಗವು ಒಂದು ಸಾಂವಿಧಾನಿಕ ಸಂಸ್ಥೆ ಎಂದು ವಾದಿಸಿದರು.  ಇದನ್ನೂ ಓದಿ: ಜೆಡಿಎಸ್‍ನಿಂದ ಪ್ರಜ್ವಲ್ ರೇವಣ್ಣ ಅಮಾನತು

    ಪ್ರಧಾನಮಂತ್ರಿಯವರು ಹಿಂದೂ ಮತ್ತು ಸಿಖ್ ದೇವತೆಗಳು ಮತ್ತು ಅವರ ಆರಾಧನಾ ಸ್ಥಳಗಳ ಹೆಸರಿನಲ್ಲಿ ಮತಗಳನ್ನು ಕೇಳಿದ್ದು ಮಾತ್ರವಲ್ಲದೆ, ವಿರೋಧಿ ರಾಜಕೀಯ ಪಕ್ಷಗಳು ಮುಸ್ಲಿಮರಿಗೆ ಒಲವು ತೋರುತ್ತಿದ್ದಾರೆ ಎಂದು ಭಾಷಣದಲ್ಲಿ ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣ, ಕರ್ತಾರ್‌ಪುರ ಸಾಹಿಬ್ ಕಾರಿಡಾರ್ ಅಭಿವೃದ್ಧಿ ಹಾಗೂ ಅಫ್ಘಾನಿಸ್ತಾನದಿಂದ ಗುರು ಗ್ರಂಥ ಸಾಹಿಬ್‌ನ ಪ್ರತಿಗಳನ್ನು ವಾಪಸ್ ತಂದಿರುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. ಇದನ್ನೂ ಓದಿ: ಗೌಡರ ಮನೆಗೆ ಕಪ್ಪು ಚುಕ್ಕಿ ತರಲು ದೂರು: ಸಂತ್ರಸ್ತೆಯ ವಿರುದ್ಧವೇ ಕುಟುಂಬಸ್ಥರಿಂದ ಆರೋಪ

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ಮತ್ತು ಪ್ರಜಾಪ್ರತಿನಿಧಿ ಕಾಯ್ದೆ 1951ರ ಅಡಿಯಲ್ಲಿ ಆರು ವರ್ಷಗಳ ಕಾಲ ಚುನಾವಣೆಯಿಂದ ಅನರ್ಹಗೊಳಿಸುವಂತೆ ಚುನಾವಣೆ ಆಯೋಗಕ್ಕೆ ನಿರ್ದೇಶನ ನೀಡಲು ಮನವಿ ಮಾಡಲಾಗಿತ್ತು. ಇದನ್ನೂ ಓದಿ: ಬೇರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕ ಅತ್ಯಂತ ಸುರಕ್ಷಿತವಾಗಿದೆ: ಮೋದಿ ಆರೋಪಕ್ಕೆ ಡಿಕೆಶಿ ತಿರುಗೇಟು

  • ಹಣಕಾಸು ಕೊರತೆಯ ನೆಪ ಬೇಡ; 6 ಮತ್ತು 7ನೇ ವೇತನ ಆಯೋಗ ಶಿಫಾರಸಿನನ್ವಯ ಶಿಕ್ಷಕರಿಗೆ ವೇತನ ನೀಡಿ: ಹೈಕೋರ್ಟ್‌ ಆದೇಶ

    ಹಣಕಾಸು ಕೊರತೆಯ ನೆಪ ಬೇಡ; 6 ಮತ್ತು 7ನೇ ವೇತನ ಆಯೋಗ ಶಿಫಾರಸಿನನ್ವಯ ಶಿಕ್ಷಕರಿಗೆ ವೇತನ ನೀಡಿ: ಹೈಕೋರ್ಟ್‌ ಆದೇಶ

    ನವದೆಹಲಿ: ಖಾಸಗಿ ಶಾಲೆಗಳು ಆರನೇ ಮತ್ತು ಏಳನೇ ಕೇಂದ್ರ ವೇತನ ಆಯೋಗಗಳ (CPC) ಶಿಫಾರಸುಗಳನ್ನು ಜಾರಿಗೊಳಿಸಬೇಕು ಮತ್ತು ತಮ್ಮ ಬೋಧಕ, ಬೋಧಕೇತರ ಸಿಬ್ಬಂದಿಗೆ ಕಡ್ಡಾಯ ವೇತನ ಮತ್ತು ಇತರ ಪ್ರಯೋಜನಗಳನ್ನು ನೀಡಬೇಕು ಎಂದು ದೆಹಲಿ ಹೈಕೋರ್ಟ್ (Delhi HighCourt) ಆದೇಶಿಸಿದೆ.

    ರಾಷ್ಟ್ರ ರಾಜಧಾನಿಯ ವಿವಿಧ ಖಾಸಗಿ ಶಾಲೆಗಳ (Private Schools) ಬೋಧಕ ಮತ್ತು ಬೋಧಕೇತರ ಉದ್ಯೋಗಿಗಳು 6ನೇ ಮತ್ತು 7ನೇ ವೇತನ ಆಯೋಗಗಳ ಪ್ರಯೋಜನಗಳನ್ನು ಮತ್ತು ಬಡ್ಡಿಯೊಂದಿಗೆ ತಮ್ಮ ಬಾಕಿಗಳ ಪಾವತಿಸುವಂತೆ ಮತ್ತು ಇತರ ಪ್ರಯೋಜನಗಳನ್ನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆದೇಶ ನೀಡಿದ ನ್ಯಾಯಮೂರ್ತಿ ಚಂದ್ರ ಧಾರಿ ಸಿಂಗ್ ಅವರು ವೇತನ ಆಯೋಗಗಳ (Planning Commission of India) ಶಿಫಾರಸಿನ ಪ್ರಕಾರ ಖಾಸಗಿ ಶಾಲೆಗಳ ನೌಕರರು ವೇತನ ಪಡೆಯುವ ಹಕ್ಕನ್ನು ಹೊಂದಿದ್ದಾರೆ, ಶಾಲೆಗಳು ತಮ್ಮ ಸಿಬ್ಬಂದಿಗೆ ಈ ಪ್ರಯೋಜನಗಳನ್ನು ನಿರಾಕರಿಸಲು ಹಣದ ಕೊರತೆಯ ನೆಪವನ್ನು ಉಲ್ಲೇಖಿಸಬಾರದು ಎಂದು ತಾಕೀತು ಮಾಡಿದೆ. ಇದನ್ನೂ ಓದಿ: ಮತ್ತೆ ಅವಕಾಶ ಸಿಕ್ಕರೆ ಬಿಗ್ ಬಾಸ್ ಮನೆಗೆ ಹೋಗ್ತೀನಿ : ಇಶಾನಿ

    ವೇತನ ಆಯೋಗಗಳ ಶಿಫಾರಸುಗಳ ಪ್ರಕಾರ ಅನುದಾನರಹಿತ ಅಲ್ಪಸಂಖ್ಯಾತ ಶಾಲೆಗಳು ಸಹ ತಮ್ಮ ಉದ್ಯೋಗಿಗಳಿಗೆ ವೇತನ ಮತ್ತು ಇತರ ಸೌಲಭ್ಯಗಳನ್ನು ಪಾವತಿಸಬೇಕು ಎಂದು ನ್ಯಾಯಮೂರ್ತಿ ಸಿಂಗ್ ಸ್ಪಷ್ಟಪಡಿಸಿದರು. 6ನೇ ಮತ್ತು 7ನೇ ವೇತನ ಆಯೋಗಗಳು ಸೂಚಿಸಿದ ಶಿಫಾರಸುಗಳು ಮತ್ತು ಮಾರ್ಗಸೂಚಿಗಳ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಉನ್ನತ ಅಧಿಕಾರದ ಸಮಿತಿಗಳನ್ನು (ಎಚ್‌ಪಿಸಿ) ರಚಿಸುವಂತೆ ನ್ಯಾಯಾಲಯವು ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಇದನ್ನೂ ಓದಿ: ದೆಹಲಿಯಲ್ಲಿ ತಗ್ಗಿದ ವಾಯು ಮಾಲಿನ್ಯ – ಶಾಲೆ, ಕಾಲೇಜುಗಳು ಪುನಾರಂಭ

    ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ಎಚ್‌ಪಿಸಿ ರಚನೆಯಾಗಲಿದೆ. ಕೇಂದ್ರ ಸಮಿತಿಯು ದೆಹಲಿಯ ಶಿಕ್ಷಣ ಕಾರ್ಯದರ್ಶಿಯ ನೇತೃತ್ವದಲ್ಲಿರುತ್ತದೆ. ಅಲ್ಲದೇ ಅದರ ಸದಸ್ಯರಲ್ಲಿ ಶಾಲೆಗಳ ಒಬ್ಬ ಪ್ರತಿನಿಧಿಯನ್ನು ಸಹ ಹೊಂದಿರುತ್ತದೆ. ವಲಯ ಸಮಿತಿಯು ವಲಯ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿದ್ದು, ಇದು ಶುಲ್ಕ ಹೆಚ್ಚಳ, ವೇತನಗಳು ಮತ್ತು ಇತರ ಪ್ರಯೋಜನಗಳ ಸಮಸ್ಯೆಯನ್ನು ಬಗೆಹರಿಸುತ್ತದೆ. ಈ ಸಮಿತಿಯು ತನ್ನ ಸಂಶೋಧನೆಗಳನ್ನು ಕೇಂದ್ರ ಸಮಿತಿಗೆ ಶಿಫಾರಸು ಮಾಡುತ್ತದೆ. ಇದನ್ನೂ ಓದಿ: ಗಾಜಾದ ಆಸ್ಪತ್ರೆಯನ್ನೇ ಉಗ್ರ ಚಟುವಟಿಕೆಗಳ ತಾಣವಾಗಿಸಿದ ಹಮಾಸ್- ಇಸ್ರೇಲ್ ವೀಡಿಯೋ ಸಾಕ್ಷಿ

    ವಿಚಾರಣೆ ವೇಳೆ ಖಾಸಗಿ ಶಾಲೆಗಳ ಮಾಲೀಕರು ವೇತನ ಆಯೋಗಗಳ ಶಿಫಾರಸಿನ ಪ್ರಕಾರ ಅರ್ಜಿದಾರರು ವೇತನ ಮತ್ತು ವೇತನಕ್ಕೆ ಅರ್ಹರಾಗಿದ್ದಾರೆ ಎಂದು ಒಪ್ಪಿಕೊಂಡಿದ್ದರೂ, ಹಣದ ಕೊರತೆಯಿಂದಾಗಿ ಪಾವತಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಶುಲ್ಕ ಹೆಚ್ಚಳದ ಪ್ರಸ್ತಾವನೆಯನ್ನು ಶಾಲೆಗಳು ಶಿಕ್ಷಣ ಇಲಾಖೆಗೆ ಕಳುಹಿಸಿದ್ದರೂ ಅದನ್ನು ತಿರಸ್ಕರಿಸಲಾಗಿದೆ ಎಂದು ವಾದಿಸಲಾಯಿತು. ಶುಲ್ಕ ಹೆಚ್ಚಿಸಲು ಅನುಮತಿ ನೀಡುವವರೆಗೆ ಶಿಕ್ಷಕರಿಗೆ, ಸಿಬ್ಬಂದಿಗೆ ಪರಿಷ್ಕೃತ ವೇತನ ನೀಡುವುದಿಲ್ಲ ಎಂದು ಅವರು ವಾದಿಸಿದರು. ಆದಾಗ್ಯೂ, ನ್ಯಾಯಾಲಯವು ಈ ವಾದಗಳನ್ನು ತಿರಸ್ಕರಿಸಿತು.

  • ಮಾಜಿ ಸಚಿವ ಸತ್ಯೇಂದ್ರ ಜೈನ್ ಜೈಲಲ್ಲಿ ಸ್ವಿಮ್ಮಿಂಗ್ ಪೂಲ್ ಕೇಳ್ತಿದ್ದಾರೆ – ಸುಪ್ರೀಂ ಕೋರ್ಟ್‌ಗೆ ED ಮಾಹಿತಿ

    ಮಾಜಿ ಸಚಿವ ಸತ್ಯೇಂದ್ರ ಜೈನ್ ಜೈಲಲ್ಲಿ ಸ್ವಿಮ್ಮಿಂಗ್ ಪೂಲ್ ಕೇಳ್ತಿದ್ದಾರೆ – ಸುಪ್ರೀಂ ಕೋರ್ಟ್‌ಗೆ ED ಮಾಹಿತಿ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಎಎಪಿ ಮಾಜಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ (Satyendar Jain) ಅವರಿಗೆ ಕೋರಲಾದ ಮಧ್ಯಂತರ ವೈದ್ಯಕೀಯ ಜಾಮೀನು (Medical Bail) ವಿಸ್ತರಣೆಯನ್ನು ಜಾರಿ ನಿರ್ದೇಶನಾಲಯ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೇ ಸತ್ಯೇಂದರ್ ಜೈನ್ ಅವರು ಜೈಲಿನ ಆವರಣದಲ್ಲಿ ಸ್ವಿಮ್ಮಿಂಗ್ ಪೂಲ್ ಬೇಕೆಂದು ಕೇಳುತ್ತಿದ್ದಾರೆ ಎಂಬುದಾಗಿ ಜಾರಿ ನಿರ್ದೇಶನಾಲಯ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ (Supreme Court) ತಿಳಿಸಿದೆ.

    ಜೈನ್ ಅವರ ವೈದ್ಯಕೀಯ ಸಲಹೆಯನ್ನ ಉಲ್ಲೇಖಿಸಿ ಅವರ ಮಧ್ಯಂತರ ಜಾಮೀನು ವಿಸ್ತರಣೆ ಮಾಡುವಂತೆ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದರು. ಸತ್ಯೇಂದರ್ ಜೈನ್ ಅವರು ಮಹತ್ವದ ಬೆನ್ನುಹುರಿ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಕೆಲವು ಬಹುಮುಖ್ಯ ಚಿಕಿತ್ಸೆಗಳಿಗೆ ಒಳಗಾಗುತ್ತಿದ್ದಾರೆ. ಹೀಗಾಗಿ ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಬೇಕು ಎಂದು ಸಿಂಘ್ವಿ ಕೋರಿದ್ದರು.

    ಜೈನ್ ಅವರಿಗೆ ಮಧ್ಯಂತರ ಜಾಮೀನು ವಿಸ್ತರಣೆ ಮಾಡಲು ವೈದ್ಯರ ಸಲಹೆ ಸಾಲುವುದಿಲ್ಲ ಎಂದು ಪ್ರತಿಪಾದಿಸಿದ ಜಾರಿ ನಿರ್ದೇಶನಾಲಯ, ಜಾಮೀನು ವಿಸ್ತರಣೆ ನೀಡುವ ಮನವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಅವರು ಜೈಲಿನಲ್ಲಿ ಈಜುಕೊಳ ಬೇಕೆಂದು ಕೇಳುತ್ತಿದ್ದಾರೆ. ಎಲ್ಲರಿಗೂ ಇದು ಸಾಧ್ಯವಾಗಲ್ಲ ಎಂದು ಇಡಿ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ತಿಳಿಸಿದ್ದಾರೆ. ಇದನ್ನೂ ಓದಿ: ಹನಿಟ್ರ್ಯಾಪ್ ಭೀತಿ – ಯೂನಿಫಾರಂ ಧರಿಸಿ ಫೋಟೊ, ವೀಡಿಯೋ ಅಪ್ಲೋಡ್ ಮಾಡದಂತೆ ಅರೆಸೇನಾ ಪಡೆಗಳಿಗೆ ಸೂಚನೆ

    ಜೈನ್ ಅವರನ್ನು ಏಮ್ಸ್ ವೈದ್ಯರ ತಂಡ ಸ್ವತಂತ್ರವಾಗಿ ತಪಾಸಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ ರಾಜು, ಅಗತ್ಯಬಿದ್ದರೆ, ಜೈನ್ ಅವರಿಗೆ ಫಿಸಿಯೋ ಥೆರಪಿ ನೀಡಲು ಅವರು ಈಜುಕೊಳಕ್ಕೆ ಕರೆದೊಯ್ಯಬಹುದು ಎಂದು ಹೇಳಿದರು. ಈ ವೇಳೆ ಕೋರ್ಟ್, ಆದ್ರೆ ಏನ್ ಮಾಡೋದು ಅವರು ಫಿಸಿಯೋಥೆರಪಿಗೆ ಒಳಗಾದ್ರೆ ನೀವು ಫೋಟೋ ತೆಗೆದು ಅವುಗಳನ್ನೂ ಪ್ರಕಟಿಸಿಬಿಡ್ತೀರಿ ಎಂದು ಹೇಳಿತು. ಬಳಿಕ ಜೈನ್ ಅವರ ಮಧ್ಯಂತರ ವೈದ್ಯಕೀಯ ಜಾಮೀನು ಅವಧಿಯನ್ನ ಸೆಪ್ಟೆಂಬರ್ 1ರವರೆಗೂ ವಿಸ್ತರಿಸಲು ಕೋರ್ಟ್ ಒಪ್ಪಿಗೆ ಸೂಚಿಸಿತು.

    ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 2022ರಿಂದಲೂ ಜೈಲಿನಲ್ಲಿರುವ ಜೈನ್ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಏಪ್ರಿಲ್ 6ರಂದು ನಿರಾಕರಿಸಿತ್ತು. ಜಾಮೀನು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಯಾವುದೇ ಕಾನೂನುಬಾಹಿರ ಅಂಶ ಕಂಡುಬಂದಿಲ್ಲ ಎಂದು ಹೈಕೋರ್ಟ್ ಹೇಳಿತ್ತು. ಇದನ್ನು ಜೈನ್ ಅವರು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಗ್ನಿಪಥ್ ಯೋಜನೆ ರಾಷ್ಟ್ರೀಯ ಹಿತಾಸಕ್ತಿಗಾಗಿ ಪರಿಚಯಿಸಲಾಗಿದೆ – ದೆಹಲಿ ಹೈಕೋರ್ಟ್

    ಅಗ್ನಿಪಥ್ ಯೋಜನೆ ರಾಷ್ಟ್ರೀಯ ಹಿತಾಸಕ್ತಿಗಾಗಿ ಪರಿಚಯಿಸಲಾಗಿದೆ – ದೆಹಲಿ ಹೈಕೋರ್ಟ್

    ನವದೆಹಲಿ: ಅಗ್ನಿಪಥ್ ಯೋಜನೆಯನ್ನು (Agnipath Scheme) ರಾಷ್ಟ್ರೀಯ ಹಿತಾಸಕ್ತಿಗಾಗಿ ಪರಿಚಯಿಸಲಾಗಿದೆ. ಈ ಯೋಜನೆಯಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣಗಳಿಲ್ಲ ಎಂದು ದೆಹಲಿ ಹೈಕೋರ್ಟ್ (Delhi HighCourt) ಹೇಳಿದೆ.

    ಅಗ್ನಿಪಥ್ ಯೋಜನೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದು (ಫೆ.27) ತೀರ್ಪು ಪ್ರಕಟಿಸಿದೆ. ಇದನ್ನೂ ಓದಿ: ಸ್ಕೂಲ್‌ನಲ್ಲೇ ಆತ್ಮಹತ್ಯೆ ಮಾಡಿಕೊಳ್ಳೋಕೆ ಹೋಗಿದ್ದ ಪಿಯು ವಿದ್ಯಾರ್ಥಿನಿ- ಅಸಲಿ ಕಾರಣ ಬಯಲು

    ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರ ವಿಭಾಗೀಯ ಪೀಠವು ಈ ತೀರ್ಪು ನೀಡಿದೆ. `ನ್ಯಾಯಾಲಯವು ಈ ಯೋಜನೆಯಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣವನ್ನು ಕಂಡುಕೊಳ್ಳುವುದಿಲ್ಲ ಎಂದು ಹೇಳಿ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ನಾವು ಯೋಜನೆಯನ್ನು ರಾಷ್ಟ್ರೀಯ ಹಿತಾಸಕ್ತಿಯಿಂದ ಪರಿಚಯಿಸಲಾಗಿದೆ ಎಂದು ತೀರ್ಮಾನಿಸಬಹುದು’ ಎಂದು ನ್ಯಾಯಾಲಯ ಹೇಳಿದೆ. ಇದನ್ನೂ ಓದಿ: ಕೇಸರಿಮಯವಾದ ಕುಂದಾನಗರಿ ಬೆಳಗಾವಿ- ಗಲ್ಲಿ ಗಲ್ಲಿಗಳಲ್ಲಿ ಬಿಜೆಪಿ ಬಾವುಟ ಹಾರಾಟ

    ಅಲ್ಲದೇ ನೇಮಕಾತಿಗಾಗಿ ಜಾಹೀರಾತುಗಳಿಂದ ಯಾವುದೇ ಪ್ರಾಮಿಸರಿ ಎಸ್ಟೊಪೆಲ್ ಅಥವಾ ಕಾನೂನುಬದ್ಧ ನಿರೀಕ್ಷೆಯನ್ನು ಸೃಷ್ಟಿಸಲಾಗಿಲ್ಲ ಎಂದು ಪೀಠ ಹೇಳಿದೆ. ಕಳೆದ ಡಿಸೆಂಬರ್ 15 ರಂದು ಈ ಪ್ರಕರಣದ ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿತ್ತು.

    ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿ ದೇಶಾದ್ಯಂತ ಹೈಕೋರ್ಟ್‌ಗಳಲ್ಲಿ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿತ್ತು ಮತ್ತು ನೇಮಕಾತಿ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಲಾಯಿತು. ನಂತರ ಸುಪ್ರೀಂ ಕೋರ್ಟ್ (Supreme Court) ಈ ಎಲ್ಲಾ ವಿಷಯಗಳನ್ನು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸಿತು.

  • ಶ್ರದ್ಧಾ ವಾಕರ್ ಹತ್ಯೆ ಕೇಸ್- ಪೀಸ್ ಪೀಸ್ ಪ್ರೇಮಿಗೆ ಜೈಲು ಅವಧಿ ವಿಸ್ತರಣೆ

    ಶ್ರದ್ಧಾ ವಾಕರ್ ಹತ್ಯೆ ಕೇಸ್- ಪೀಸ್ ಪೀಸ್ ಪ್ರೇಮಿಗೆ ಜೈಲು ಅವಧಿ ವಿಸ್ತರಣೆ

    ನವದೆಹಲಿ: ಮುಂಬೈ ಮೂಲದ ಯುವತಿ ಶ್ರದ್ಧಾವಾಕರ್ ಹತ್ಯೆ ಪ್ರಕರಣದ (Shraddha Walker Murder Case) ಆರೋಪಿ ಅಫ್ತಾಬ್ ಅಮಿನ್ ಪೂನಾವಾಲಾ (Aftab Amin Poonawala) ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆ ಸಾಕೇತ್ ಜಿಲ್ಲಾ ನ್ಯಾಯಲಯದ (Court) ಮುಂದೆ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು.

    ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ (Court) ಮುಂದಿನ 14 ದಿನಗಳಿಗೆ ನ್ಯಾಯಂಗ ಬಂಧನವನ್ನು ವಿಸ್ತರಣೆ ಮಾಡಿತು. ಅಫ್ತಾಬ್ ಬುದ್ಧಿವಂತ ಯುವಕನಾಗಿದ್ದು ತನಿಖೆಯಲ್ಲಿ ಪೊಲೀಸರು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾನೆ. ಆಗಾಗ್ಗೆ ಹೇಳಿಕೆ ಬದಲಿಸುತ್ತಾನೆ ಮತ್ತು ಹೊಸ ಮಾಹಿತಿಯನ್ನು ನೀಡುತ್ತಿದ್ದಾನೆ ಇವುಗಳ ಆಧಾರದ ಮೇಲೆ ತನಿಖೆ ನಡೆಸಬೇಕಿದೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತರ ಹತ್ಯೆ ಮರು ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಜೈಲಿನಲ್ಲಿ ಇಬ್ಬರು ಕೈದಿಗಳ ಜೊತೆಗೆ ಅಫ್ತಾಬ್ ಇದ್ದು ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆಗಳಿಲ್ಲ, ಮಂಪರು ಪರೀಕ್ಷೆ ಮತ್ತು ಫಾಲಿಗ್ರಾಫ್ ಪರೀಕ್ಷೆ ಅಂತ್ಯವಾಗಿದ್ದು, ಅದನ್ನು ಆಧರಿಸಿ ನಡೆಯುತ್ತಿರುವ ತನಿಖೆ ಪ್ರಗತಿಯಲ್ಲಿದೆ. ತನಿಖೆಯ ದೃಷ್ಟಿಯಿಂದ ಅಫ್ತಾಬ್ ಅವಶ್ಯಕತೆ ಇದೆ ಎಂದು ದೆಹಲಿ ಪೊಲೀಸರ ಪರ ವಕೀಲರು ವಾದ ಮಂಡಿಸಿದರು. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್ – ನಾನು ಸಿಎಂ ಆಗ್ಬೋದು ಅಂದ ಪ್ರತಿಭಾ ಸಿಂಗ್

    ಅಫ್ತಾಬ್ ಅಮಿನ್ ಪೂನಾವಾಲಾ ತನ್ನ ಪ್ರೇಯಸಿ ಶ್ರದ್ಧಾವಾಕರ್ ಹತ್ಯೆ ಮಾಡಿ, ದೇಹವನ್ನು 35 ತುಂಡುಗಳಾಗಿ ಪೀಸ್ ಪೀಸ್ ಮಾಡಿ ದೆಹಲಿಯ ಕಾಡಿನಲ್ಲಿ ಎಸೆದಿದ್ದ, ಶ್ರದ್ಧಾ ಪೋಷಕರು ನೀಡಿದ ದೂರು ಆಧರಿಸಿ ತನಿಖೆ ನಡೆಸಿದ್ದ ಪೊಲೀಸರಿಗೆ ಅಫ್ತಾಬ್ ಭೀಕರವಾಗಿ ಹತ್ಯೆ ಮಾಡಿರುವುದು ತಿಳಿದುಬಂದಿತ್ತು.

    Live Tv
    [brid partner=56869869 player=32851 video=960834 autoplay=true]

  • ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಬಾಲಕಿ ವಯಸ್ಕಳಾದ್ರೂ ಪೋಕ್ಸೋ ಅನ್ವಯ: ಹೈಕೋರ್ಟ್

    ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಬಾಲಕಿ ವಯಸ್ಕಳಾದ್ರೂ ಪೋಕ್ಸೋ ಅನ್ವಯ: ಹೈಕೋರ್ಟ್

    ನವದೆಹಲಿ: ಮುಸ್ಲಿಂ ವೈಯಕ್ತಿಕ ಕಾನೂನಿನ ಅಡಿಯಲ್ಲಿ ಬಾಲಕಿ ವಯಸ್ಕಳಾದರೂ ಆಕೆಯ ಮೇಲಿನ ದೌರ್ಜನ್ಯ ತಡೆಯಲು ಪೋಕ್ಸೋ ಅನ್ವಯವಾಗುತ್ತದೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

    ತಾನು ಲೈಂಗಿಕ ಸಂಬಂಧ ಹೊಂದಿದ್ದೆ ಎಂದು ಆರೋಪಿಸಲಾಗಿರುವ ಬಾಲಕಿಯು ಮೈನೆರೆದಿದ್ದು, ಆಕೆಯು ಮುಸ್ಲಿಂ ವೈಯಕ್ತಿಕ ಕಾನೂನಿನ ಅಡಿ ವಯಸ್ಕಳಾಗಿದ್ದಾಳೆ. ಹೀಗಾಗಿ ಪೋಕ್ಸೊ ಕಾಯ್ದೆ ತನಗೆ ಅನ್ವಯಿಸದು ಎಂದು ವಾದಿಸಿದ್ದ ಆರೋಪಿಯ ವಾದವನ್ನು ದೆಹಲಿ ಹೈಕೋರ್ಟ್ ಇತ್ತೀಚೆಗೆ ತಿರಸ್ಕರಿಸಿದೆ. ಇದನ್ನೂ ಓದಿ: `ಪವಿತ್ರ’ಪ್ರೇಮ ವಿಫಲ – ಯುವಕ ಕೈಕೊಟ್ಟನೆಂದು ಕಾಲೇಜಿನಲ್ಲೇ ವಿದ್ಯಾರ್ಥಿನಿ ನೇಣಿಗೆ ಶರಣು

    ಪೋಕ್ಸೊ ಕಾಯ್ದೆಗೆ ಸಂಪ್ರದಾಯದ ಕಾನೂನು ಅನ್ವಯಿಸುವುದಿಲ್ಲ. ಲೈಂಗಿಕ ದೌರ್ಜನ್ಯದಿಂದ ಮಕ್ಕಳನ್ನು ರಕ್ಷಿಸಲು ಈ ಕಾನೂನನ್ನು ಜಾರಿಗೊಳಿಸಲಾಗಿದೆ ಎಂದು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ನೇತೃತ್ವದ ಏಕಸದಸ್ಯ ಪೀಠ ಹೇಳಿದೆ. ಇದನ್ನೂ ಓದಿ: ಕಾಳಿ ಕೈಗೆ ಸಿಗರೇಟು : ಮಾಳವಿಕಾ ಅವಿನಾಶ್ ಛೀಮಾರಿ, ನಟ ಕಿಶೋರ್ ವಿಭಿನ್ನ ಪ್ರತಿಕ್ರಿಯೆ

    ಮಕ್ಕಳ ಎಳೆಯ ಪ್ರಾಯ ರಕ್ಷಿಸಿ, ಅವರ ಮೇಲಿನ ದೌರ್ಜನ್ಯ ಹಾಗೂ ದುರ್ಬಳಕೆ ತಪ್ಪಿಸಲು ಮತ್ತು ಅವರ ಯೌವ್ವನವನ್ನು ಶೋಷಣೆಯಿಂದ ಪಾರು ಮಾಡುವುದು ಕಾನೂನಿನ ಉದ್ದೇಶ. ಹೀಗಾಗಿ ಸಂತ್ರಸ್ತೆಯು ಮುಸ್ಲಿಂ ವೈಯಕ್ತಿಕ ಕಾನೂನಿನ ಅಡಿ ವಯಸ್ಕಳಾಗಿದ್ದು ಕಠಿಣವಾದ ಪೋಕ್ಸೊ ಕಾಯ್ದೆ ಅನ್ವಯಿಸದು ಎಂಬ ಅರ್ಜಿದಾರರ ವಾದವನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರಿದ್ದ ಪೀಠ ಹೇಳಿದೆ.

    ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 376 (ಅತ್ಯಾಚಾರ), 377 (ಅಸ್ವಾಭಾವಿಕ ಅಪರಾಧ), 506 (ಕ್ರಿಮಿನಲ್ ಬೆದರಿಕೆ), 406 (ನಂಬಿಕೆ ದ್ರೋಹ) ಹಾಗೂ ಪೋಕ್ಸೊ ಕಾಯ್ದೆಯ ಸೆಕ್ಷನ್ 6ರ ಅಡಿ ಎಫ್‌ಐಆರ್ ದಾಖಲಿಸಿರುವುದನ್ನು ವಜಾ ಮಾಡುವಂತೆ ಕೋರಿ ಆರೋಪಿ ಸಲ್ಲಿಸಿದ್ದ ಮನವಿಯ ವಿಚಾರಣೆಯ ನ್ಯಾಯಾಲಯ ಈಚೆಗೆ ನಡೆಸಿತು. ಇದನ್ನೂ ಓದಿ: ಫಸ್ಟ್ ನೈಟ್ ಅನ್ನೋದೇ ಇಲ್ಲ ಎಂದು ಹೇಳಿ ಪತಿಯನ್ನೇ ಬೆಚ್ಚಿ ಬೀಳಿಸಿದ ನಟಿ ಆಲಿಯಾ ಭಟ್

    ಏನಿದು ಘಟನೆ?
    ಈಚೆಗೆ ಬಾಲಕಿಯ ಮನೆಗೆ ತೆರೆಳಿದ್ದ ಆರೋಪಿಯು ಆಕೆಯನ್ನು ವಿವಾಹ ಮಾಡಿಕೊಡುವಂತೆ ಬಾಲಕಿಯ ಪೋಷಕರನ್ನು ಕೋರಿದ್ದ. ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದ ಬಳಿಕ ಆಕೆಯನ್ನು ವಿವಾಹ ಮಾಡಿಕೊಡುವ ಷರತ್ತಿನೊಂದಿಗೆ ಪೋಷಕರು ಒಪ್ಪಿಕೊಂಡಿದ್ದರು. ಅದಕ್ಕಾಗಿ ಬಾಲಕಿ ಕುಟುಂಬಸ್ಥರು ಹಲವು ಉಡುಗೊರೆಯ ಜೊತೆಗೆ 10 ಲಕ್ಷ ರೂಪಾಯಿಯನ್ನೂ ವರದಕ್ಷಿಣೆಗೆಂದು ನೀಡಿದ್ದರು. ಈನಡುವೆ ಆರೋಪಿಯು 16 ವರ್ಷದ ಬಾಲಕಿಯ ಜೊತೆ ಲೈಂಗಿಕ ಸಂಪರ್ಕ ಸಾಧಿಸಿದ್ದ ನಂತರ ಆಕೆಯನ್ನು ವಿವಾಹವಾಗಲು ನಿರಾಕರಿಸಿದ್ದ. ಇದರಿಂದಾಗಿ ಆತನ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

    Live Tv
    [brid partner=56869869 player=32851 video=960834 autoplay=true]