Tag: Delhi Police

  • 200 ಸಂಘಟನೆಗಳು, 20,000 ರೈತರಿಂದ ನಾಳೆ `ದೆಹಲಿ ಚಲೋ’ – ದೆಹಲಿ ಗಡಿ ಬಂದ್!

    200 ಸಂಘಟನೆಗಳು, 20,000 ರೈತರಿಂದ ನಾಳೆ `ದೆಹಲಿ ಚಲೋ’ – ದೆಹಲಿ ಗಡಿ ಬಂದ್!

    ನವದೆಹಲಿ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಸುಮಾರು 200 ರೈತ ಸಂಘಟನೆಗಳು ಮಂಗಳವಾರ (ಫೆ.13) ದೆಹಲಿ ಚಲೋಗೆ (Delhi Chalo) ಕರೆ ನೀಡಿವೆ.

    `ದೆಹಲಿ ಚಲೋ’ ನಲ್ಲಿ ಸುಮಾರು 20,000 ರೈತರು (Farmers) ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಹಲವು ಕಡೆ ಗಡಿಗಳನ್ನು ಬ್ಯಾರಿಕೇಡ್‌ಗಳಿಂದ ಬಂದ್ ಮಾಡಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಈ ಪ್ರತಿಭಟನೆಗೆ 200 ರೈತ ಸಂಘಟನೆಗಳು ಬೆಂಬಲ ನೀಡಿದ್ದು, ಸುಮಾರು 20,000 ರೈತರು ಪಾಲ್ಗೊಳ್ಳಲಿದ್ದಾರೆ ಎಂದು ಗುಪ್ತಚರ ಇಲಾಖೆ ಅಂದಾಜಿಸಿದೆ. ಇದನ್ನೂ ಓದಿ: ಪಾಕ್ ಚುನಾವಣೆ ಮತ ಎಣಿಕೆ ಅಂತ್ಯ; ಇಮ್ರಾನ್ ಖಾನ್ ಮುನ್ನಡೆ, ನವಾಜ್ ಷರೀಫ್‌ಗೆ ಸೇನೆ ಬೆಂಬಲ

    ಈ ಹಿನ್ನೆಲೆಯಲ್ಲಿ ರೈತರು ಅಂಬಾಲ-ಸಿಂಘು, ಕನೌರಿ-ಜಿಂದ್, ಮತ್ತು ದಬಾವಲಿ ಗಡಿಗಳ ಮೂಲಕ ರಾಜಧಾನಿ ಪ್ರವೇಶಕ್ಕೆ ರೈತರು ಯೋಜಿಸಿದ್ದಾರೆ. ಈಗಾಗಲೇ ಪಂಜಾಬ್ ಹಾಗೂ ಹರಿಯಾಣದ ಟ್ರ್ಯಾಕ್ಟರ್‌ಗಳಲ್ಲಿ ಹೊರಟಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೆಹಲಿಯ ಗಡಿ ಭಾಗಗಳನ್ನ ಬ್ಯಾರಿಕೇಡ್‌ಗಳಿಂದ (Barricading) ಬಂದ್ ಮಾಡಲಾಗಿದೆ. ಇದನ್ನೂ ಓದಿ: ಮುಸ್ಲಿಮರು ನಮ್ಮ ಹಿಂದುತ್ವ ಬೆಂಬಲಿಸುತ್ತಾರೆ.. ಬಿಜೆಪಿ ಹಿಂದುತ್ವ ತಿರಸ್ಕರಿಸುತ್ತಾರೆ: ಉದ್ಧವ್‌ ಠಾಕ್ರೆ

    ಗಡಿಗಳಲ್ಲಿ ಕ್ರೇನ್ ಮತ್ತು ಕಂಟೇನರ್‌ಗಳನ್ನು ತಂದಿಡಲಾಗಿದ್ದು, ರೈತರು ದೆಗಲಿ ಪ್ರವೇಶ ಮಾಡಲು ಯತ್ನಿಸಿದ್ರೆ ಹೆದ್ದಾರಿಯನ್ನೇ ಬಂದ್ ಮಾಡಲು ಪೊಲೀಸರು ಯೋಜಿಸಿದ್ದಾರೆ. ಇದರೊಂದಿಗೆ ಯಾವುದೇ ಅನಾಹುತಕಾರಿ ಘಟನೆಗಳನ್ನು ತಡೆಯಲು ಹೆಚ್ಚುವರಿ ಪೊಲೀಸ್ ಭದ್ರತೆಯನ್ನ ಆಯಕಟ್ಟಿನ ಸ್ಥಳಗಳಲ್ಲಿ ನಿಯೋಜಿಸಲಾಗಿದೆ. ಆದ್ರೆ ಬ್ಯಾರಿಕೇಡ್‌ಗಳ ಅಸ್ತ್ರವನ್ನು ಭೇದಿಸಲು ರೈತರು ತಮ್ಮ ಟ್ರ್ಯಾಕ್ಟರ್‌ಗಳನ್ನೇ ಹಿಟಾಚಿ ರೂಪಕ್ಕೆ ಪರಿವರ್ತಿಸಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಪತಿ-ಪತ್ನಿಯ ವೈಮನಸ್ಸಿನಿಂದ ನಡೆದೇಹೋಯ್ತು ಘೋರ ದುರಂತ – ಮಹಿಳೆ ಮೇಲೆ ಗ್ಯಾಂಗ್‌ ರೇಪ್‌ 

  • ಸಂಸತ್ ದಾಳಿ: ಮೈಸೂರಿನ ಮನೋರಂಜನ್‌ ಸೇರಿ ಐವರಿಗೆ ಮಂಪರು ಪರೀಕ್ಷೆ

    ಸಂಸತ್ ದಾಳಿ: ಮೈಸೂರಿನ ಮನೋರಂಜನ್‌ ಸೇರಿ ಐವರಿಗೆ ಮಂಪರು ಪರೀಕ್ಷೆ

    ನವದೆಹಲಿ: ಸಂಸತ್ತಿನ ಒಳಗೆ ಹೊಗೆ ಬಾಂಬ್ ಸಿಡಿಸಿ ದಾಳಿ ನಡೆಸಿದ ಪ್ರಕರಣದಲ್ಲಿ(Parliament Security Breach Probe) ಬಂಧಿತರಾಗಿರುವ 6 ಆರೋಪಿಗಳ ಪೈಕಿ ಐವರಿಗೆ ಶುಕ್ರವಾರ ಸುಳ್ಳುಪತ್ತೆ ಪರೀಕ್ಷೆ ಮತ್ತು ಮಂಪರು ಪರೀಕ್ಷೆ (Polygraph, Narco Tests) ನಡೆಸಲಾಗಿದೆ.

    ಮೈಸೂರಿನ ಡಿ. ಮನೋರಂಜನ್(Manoranjan), ನಾಲ್ವರು ಆರೋಪಿಗಳಾದ ಸಾಗರ್ ಶರ್ಮಾ, ಅಮೋಲ್ ಶಿಂಧೆ, ಲಲಿತ್ ಝಾ ಮತ್ತು ಮಹೇಶ್ ಕುಮಾವತ್ ಅವರಿಗೆ ಗುಜರಾತ್‌ ಗಾಂಧಿನಗರದ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಲಾಗಿದೆ. ಈ ವೇಳೆ ಮನೋರಂಜನ್ ಹಾಗೂ ಸಾಗರ್ ಅವರಿಗೆ ಹೆಚ್ಚುವರಿಯಾಗಿ ಟ್ರೈನ್ ಮ್ಯಾಪಿಂಗ್ ಪರೀಕ್ಷೆ ನಡೆಸಲಾಗಿದೆ.

    ಈ ಪ್ರಕರಣದ ಏಕೈಕ ಮಹಿಳಾ ಆರೋಪಿಯಾಗಿರುವ ನೀಲಂ ಮಂಪರು ಪರೀಕ್ಷೆಗೆ ತನ್ನ ಒಪ್ಪಿಗೆ ನೀಡದ್ದರಿಂದ ಐವರಿಗೆ ಮಾತ್ರ ಪರೀಕ್ಷೆ ನಡೆಸಲು ದೆಹಲಿ ನ್ಯಾಯಾಲಯ ಆದೇಶಿಸಿತ್ತು.

    ಸಂಸತ್‌ ಮೇಲೆ ದಾಳಿ ನಡೆಸಲು ವರ್ಷದ ಹಿಂದೆಯೇ ಮಾಸ್ಟರ್‌ ಪ್ಲಾನ್‌ ನಡೆದಿತ್ತು. ಸರ್ಕಾರದ ವಿರುದ್ಧ ಏನಾದರೂ ದೊಡ್ಡದು ಮಾಡಿ ಎಲ್ಲರ ಗಮನ ಸೆಳೆಯುವ ಕೆಲಸ ಮಾಡಬೇಕು ಎಂದು ಮೈಸೂರಿನಲ್ಲಿಯೇ ಮನೋರಂಜನ್‌ ಯೋಜನೆ ರೂಪಿಸಿದ್ದ ಎಂದು ಪೊಲೀಸ್‌ ಮೂಲಗಳು ತಿಳಿಸಿದ್ದವು. ಇದನ್ನೂ ಓದಿ: ಮೋದಿಯಿಂದ ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ – 2 ಗಂಟೆ ಪ್ರಯಾಣ 20 ನಿಮಿಷಕ್ಕೆ ಇಳಿಕೆ

    ಆರೋಪಿಗಳ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: Ayodhya Ram Mandir: ರಾಮಮಂದಿರಕ್ಕೆ 4 ಮಾರ್ಗ – ರಾಮನೂರಿಗೆ ಬರುವ ಭಕ್ತರಿಗಿದು ಮೋಕ್ಷದ ಹಾದಿ

    ಡಿ.13 ರಂದು ಸಾಗರ್ ಶರ್ಮಾ ಮತ್ತು ಮನೋರಂಜನ್ ಸಂಸತ್‌ನ ಒಳಗೆ ಹಳದಿ ಸ್ಮೋಕ್ ಬಾಂಬ್ ಸಿಡಿಸಿದರೆ ಸಂಸತ್ತಿನ ಹೊರಗೆ ನೀಲಂ ಮತ್ತು ಅಮೋಲ್ ಶಿಂಧೆ ಕೆಂಪು ಮತ್ತು ಹಳದಿ ಸ್ಮೋಕ್ ಬಾಂಬ್ ಸಿಡಿಸಿದ್ದರು. ಇನ್ನಿಬ್ಬರು ಆರೋಪಿಗಳಾದ ವಿಶಾಲ್ ಮತ್ತು ಲಲಿತ್ ಝಾ ಗುರ್ಗಾಂವ್ ಮೂಲದವರು. ಲಲಿತ್ ಝಾ ತಮ್ಮ ಮೊಬೈಲ್‌ನಲ್ಲಿ ಘಟನೆಯ ದೃಶ್ಯಾವಳಿಗಳನ್ನು ಸೆರೆಹಿಡಿದು ಮೊಬೈಲ್ ಜೊತೆಗೆ ಅಲ್ಲಿಂದ ಪರಾರಿಯಾಗಿದ್ದ. ಮನೋರಂಜನ್, ಇತರರು ಸಂಸತ್ತಿನ ಒಳಗೆ ಹಾಗೂ ಹೊರಗೆ ಹೊಗೆಬಾಂಬ್ ಸಿಡಿಸಿ, ನಿರುದ್ಯೋಗ ಸಮಸ್ಯೆ, ಸರ್ವಾಧಿಕಾರತ್ವಕ್ಕೆ ಬೇಸತ್ತು ಹೀಗೆ ಮಾಡಿದ್ದಾಗಿ ಹೇಳಿದ್ದರು.

     

  • ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ

    ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ

    ನವದೆಹಲಿ: ದೆಹಲಿಯ (New Delhi) ಚಾಣಕ್ಯಪುರಿಯಲ್ಲಿರುವ (Chanakyapuri) ಇಸ್ರೇಲ್ ರಾಯಭಾರಿ ಕಚೇರಿಗೆ (Israel Embassy) ಇಂದು ಬಾಂಬ್ ಬೆದರಿಕೆ ಕರೆ (Bomb Threat Call) ಬಂದಿದ್ದು, ದೆಹಲಿ ಪೊಲೀಸರು (Delhi Police) ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

    ಇಂದು ಸಂಜೆ 6 ಗಂಟೆ ಸುಮಾರಿಗೆ ದೆಹಲಿ ಪೊಲೀಸರಿಗೆ ಅಪರಿಚಿತ ಕರೆ ಬಂದಿದೆ. ಕರೆಯಲ್ಲಿ ಸ್ಫೋಟದ ಬಗ್ಗೆ ಅಧಿಕಾರಿಗಳಿಗೆ ವರದಿಯಾಗಿದೆ. ಇಸ್ರೇಲಿ ರಾಯಭಾರ ಕಚೇರಿಯ ಹಿಂದೆ ಖಾಲಿ ಜಾಗದಲ್ಲಿ ಸ್ಫೋಟ ಸಂಭವಿಸಿದೆ ಎಂದು ಕರೆ ಮಾಡಿದ ಅನಾಮಿಕ ವ್ಯಕ್ತಿ ತಿಳಿಸಿದ್ದಾನೆ. ಇದನ್ನೂ ಓದಿ: ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮವನ್ನು ಬಹಿಷ್ಕರಿಸಿದ ಸಿಪಿಎಂ

    ಬೆದರಿಕೆ ಕರೆ ಬಂದ ತಕ್ಷಣ ಬಾಂಬ್ ಸ್ಕ್ವಾಡ್‌ನೊಂದಿಗೆ ಪೊಲೀಸರ ವಿಶೇಷ ಸೆಲ್ ತಂಡ ಸ್ಥಳಕ್ಕೆ ಆಗಮಿಸಿ ಪರಿಶಿಲನೆ ನಡೆಸಿದೆ. ಅಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಕರೆ. ಕರೆ ಮಾಡಿದವರ ಗುರುತು, ಮತ್ತು ಉದ್ದೇಶವನ್ನು ತನಿಖೆ ಮಾಡಲಾಗುತ್ತಿದೆ. ಈ ಕುರಿತು ವಿವರವಾದ ತನಿಖೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮುಂಬೈನಲ್ಲಿ ಲ್ಯಾಂಡ್‌ ಆಯ್ತು ಫ್ರಾನ್ಸ್‌ ವಶದಲ್ಲಿದ್ದ 303 ಭಾರತೀಯರಿದ್ದ ವಿಮಾನ

  • ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ದಾಳಿಯ ಮಾಸ್ಟರ್‌ ಮೈಂಡ್‌ ಮೈಸೂರಿಗ ಮನೋರಂಜನ್‌: ದೆಹಲಿ ಪೊಲೀಸರು

    ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ದಾಳಿಯ ಮಾಸ್ಟರ್‌ ಮೈಂಡ್‌ ಮೈಸೂರಿಗ ಮನೋರಂಜನ್‌: ದೆಹಲಿ ಪೊಲೀಸರು

    ನವದೆಹಲಿ: ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಕೋಲಾಹಲ ಎಬ್ಬಿಸಿದ ಲೋಕಸಭಾ ಭದ್ರತಾ ಲೋಪ (Parliament Security Breach) ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಸ್ಮೋಕ್‌ ಬಾಂಬ್‌ ದಾಳಿ ಹಿಂದಿನ ಮಾಸ್ಟರ್‌ ಮೈಂಡ್‌ ಮೈಸೂರಿಗ ಮನೋರಂಜನ್‌ (Manoranjan) ಎಂಬ ಅಚ್ಚರಿದಾಯಕ ಅಂಶವನ್ನು ದೆಹಲಿ ಪೊಲೀಸ್‌ ಮೂಲಗಳು ಬಹಿರಂಗಪಡಿಸಿವೆ.

    ವರ್ಷದ ಹಿಂದೆಯೇ ಈ ಮಾಸ್ಟರ್‌ ಪ್ಲಾನ್‌ ನಡೆದಿತ್ತು. ಸರ್ಕಾರದ ವಿರುದ್ಧ ಏನಾದರು ದೊಡ್ಡದು ಮಾಡ್ಬೇಕು. ಎಲ್ಲರ ಗಮನ ಸೆಳೆಯುವ ಕೆಲಸ ಮಾಡಬೇಕು ಎಂದು ಮೈಸೂರಿನಲ್ಲಿಯೇ ಮನೋರಂಜನ್‌ ಯೋಜನೆ ರೂಪಿಸಿದ್ದ ಎಂದು ಪೊಲೀಸ್‌ ಮೂಲಗಳು ಹೇಳಿವೆ. ಇದನ್ನೂ ಓದಿ: ಸಂಸತ್‌ನಲ್ಲಿ ಭದ್ರತಾ ಲೋಪ ಕೇಸ್‌ – ತನಿಖೆಗೆ ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ವಿಶೇಷ ಸೆಲ್‌

    ಬಂಧನಕ್ಕೆ ಒಳಗಾಗಿರುವ 6 ಜನಕ್ಕೂ ಟಿಕೆಟ್ ಬುಕ್ ಮಾಡಿಸಿ ಮೈಸೂರಿಗೆ ಕರೆಸಿಕೊಂಡಿದ್ದ. ವಾಟ್ಸಾಪ್‌ನ ಮೂಲಕ ಟಿಕೆಟ್ ಕೊಡಿಸಿ ಮೈಸೂರಿಗೆ ಕರೆಸಿದ್ದ. ಮೈಸೂರಿನಲ್ಲಿ ಎಲ್ಲದರ ಪ್ಲಾನ್ ನಡೆದಿತ್ತು. ಈ ಮೂಲಕ ಇಡೀ ಕೇಸ್‌ನ ಮಾಸ್ಟರ್ ಮೈಂಡ್ ಮನೋರಂಜನ್ ಆಗಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.

    ಮನೋರಂಜನ್ ಎಲ್ಲರ ಮೈಂಡ್ ವಾಷ್ ಮಾಡಿದ್ದ. ಸಾಗರ್‌ಗೆ ಅತಿ ಹೆಚ್ಚಾಗಿ ಮೈಂಡ್ ವಾಷ್ ಮಾಡಿದ್ದು, ತನಿಖೆಯಲ್ಲಿ ಬಹಿರಂಗವಾಗಿದೆ. ನಿರುದ್ಯೋಗಿ ಆಗಿದ್ದರೂ ಕಾಂಬೋಡಿಯಾಗೆ ಹೇಗೆ ಹೋದಾ? ಕಾಂಬೋಡಿಯಾಗೆ ಕರೆಸಿಕೊಂಡಿದ್ದು ಯಾರು ಎಂಬ ಪ್ರಶ್ನೆಗಳು ಪೊಲೀಸಲ್ಲಿ ಉದ್ಭವಿಸಿದ್ದು, ಈ ಬಗ್ಗೆ ತನಿಖೆಯ ಜಾಡು ಹಿಡಿದಿದ್ದಾರೆ. ಇದನ್ನೂ ಓದಿ: ಸಂಸತ್‍ನಲ್ಲಿ ಸ್ಮೋಕ್ ಬಾಂಬ್ ಪ್ರಕರಣ ತನಿಖೆ ಆದ್ರೆ ಟೀಕೆ ಮಾಡ್ತಿರೋರೆ ಸಿಕ್ಕಿ ಬೀಳ್ತಾರೆ: ಯತ್ನಾಳ್

    ದೆಹಲಿ ಪೊಲೀಸರು ತನಿಖೆಯಲ್ಲಿ ಮಹತ್ವದ ಅಂಶಗಳು ಪತ್ತೆಯಾಗಿವೆ. ಮನೋರಂಜನ್ ಆಣತಿಯಂತೆ ಕೆಲಸ ನಡೆಸಿದ್ದಾರೆ ಎನ್ನುವುದು ಗೊತ್ತಾಗಿದೆ. ಈತನಿಗೆ ಹಣಕಾಸು ನೀಡುತ್ತಾ ಇದ್ದವರು ಯಾರು ಎಂಬುದನ್ನು ತಿಳಿದುಕೊಳ್ಳಲು ಪೊಲೀಸರು ಮುಂದಾಗಿದ್ದಾರೆ.

    ದಾಳಿ ಮಾಸ್ಟರ್‌ ಮೈಂಡ್‌ ಎನ್ನಲಾಗುತ್ತಿದ್ದ ಲಲಿತ್‌ ಝಾ, ಕೃತ್ಯದ ನಂತರ ಸಾಕ್ಷ್ಯವನ್ನು ನಾಶ ಮಾಡುವ ಕಾರ್ಯವನ್ನು ಮಾತ್ರ ವಹಿಸಿಕೊಂಡಿದ್ದ ಎಂಬುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಮೈಸೂರಿಗನೇ ಆದ ಮನೋರಂಜನ್‌ ಈ ದಾಳಿಯ ಮಾಸ್ಟರ್‌ ಮೈಂಡ್‌ ಎಂಬುದು ಪೊಲೀಸ್‌ ತನಿಖೆಯಲ್ಲಿ ಬಹಿರಂಗಗೊಂಡಿದೆ. ಇದನ್ನೂ ಓದಿ: ಸಂಸತ್‌ ಮೇಲಿನ ದಾಳಿ ಗಂಭೀರವಾದದ್ದು; ಚರ್ಚೆ ಬೇಡ, ವಿಸ್ತೃತ ತನಿಖೆಯಾಗಲಿ: ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯೆ

  • 60ರ ಮಹಿಳೆಯೊಂದಿಗೆ 31ರ ವ್ಯಕ್ತಿ ಸೆಕ್ಸ್‌ – ಆಕೆಯನ್ನೇ ಕೊಂದು ಶವವನ್ನು ಬೆಡ್‌ರೂಮ್‌ನಲ್ಲಿ ಬಚ್ಚಿಟ್ಟಿದ್ದ ಆರೋಪಿ ಅಂದರ್‌

    60ರ ಮಹಿಳೆಯೊಂದಿಗೆ 31ರ ವ್ಯಕ್ತಿ ಸೆಕ್ಸ್‌ – ಆಕೆಯನ್ನೇ ಕೊಂದು ಶವವನ್ನು ಬೆಡ್‌ರೂಮ್‌ನಲ್ಲಿ ಬಚ್ಚಿಟ್ಟಿದ್ದ ಆರೋಪಿ ಅಂದರ್‌

    ನವದೆಹಲಿ: 60 ವರ್ಷದ ಮಹಿಳೆಯೊಂದಿಗೆ (Woman) ದೈಹಿಕ ಸಂಪರ್ಕ (ಲೈಂಗಿಕ ಕ್ರಿಯೆಯೂ ಸೇರಿದಂತೆ) ಬೆಳೆಸಿ, ಆಕೆಯನ್ನೇ ಕೊಂದು ಶವವನ್ನು ಬೆಡ್‌ರೂಮಿನಲ್ಲಿ ಬಚ್ಚಿಟ್ಟಿದ್ದ 31 ವರ್ಷದ ವ್ಯಕ್ತಿಯನ್ನ ಬಂಧಿಸಿರುವ ಘಟನೆ ದೆಹಲಿಯಲ್ಲಿ (Delhi) ನಡೆದಿದೆ.

    ಆಶಾದೇವಿ ಕೊಲೆಯಾದ ಮಹಿಳೆ, 31 ವರ್ಷದ ದೇವೇಂದ್ರ ಅಲಿಯಾಸ್‌ ದೇವ್‌ ಕೊಲೆ ಆರೋಪಿ ಎಂದು ಗುರುತಿಸಲಾಗಿದೆ. 31 ವರ್ಷದ ದೇವೇಂದ್ರ 60 ವರ್ಷದ ಮಹಿಳೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಎಂದು ದೆಹಲಿ ಪೊಲೀಸರು (Delhi Police) ತಿಳಿಸಿದ್ದಾರೆ. ಮೃತ ಮಹಿಳೆಯು ದೇವೇಂದ್ರ ಬೇರೋಬ್ಬಾಕೆ ವಿವಾಹವಾಗುವುದನ್ನು ತಡೆದಿದ್ದಕ್ಕೆ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.

    ಡಿಸಿಪಿ ಜಾಯ್ ಟಿರ್ಕಿ ಪ್ರಕಾರ, ಆರೋಪಿಯನ್ನು ಉತ್ತರ ಪ್ರದೇಶದ (Uttar Pradesh) ಅಲಿಗಢದಲ್ಲಿ ಬಂಧಿಸಲಾಗಿದೆ. ಹತ್ಯೆಯಾದ ಐದು ದಿನಗಳ ನಂತರ ಶುಕ್ರವಾರ ಈಶಾನ್ಯ ದೆಹಲಿಯ ನಂದ ನಗರ ಪ್ರದೇಶದ ಅವರ ಮನೆಯಿಂದ ಆಶಾದೇವಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: ಜನವರಿಗೂ ಮೊದಲೇ ಕಾರವಾರದ ಕಡಲತೀರಕ್ಕೆ ಕಡಲ ಆಮೆ ಆಗಮನ: ಮೊಟ್ಟೆ ರಕ್ಷಣೆ

    ಆರೋಪಿ ದೇವೇಂದ್ರ 2015ರಲ್ಲಿ ಕೆಲಸ ಹುಡುಕಿಕೊಂಡು ಅಲಿಗಢಕ್ಕೆ ಬಂದು, ತಾಮ್ರದ ತಂತಿ ಪ್ಯಾಕಿಂಗ್‌ ಮಾಡುವ ಬಿಸಿನೆಸ್‌ ಆರಂಭಿಸಿದ್ದ. ಕೋವಿಡ್‌ ಕಾಲದಲ್ಲಿ ನಷ್ಟ ಅನುಭವಿಸಿದ್ದರಿಂದ 2 ವರ್ಷಗಳ ಕಾಲ ಉದ್ಯೋಗವಿಲ್ಲದೇ ಕುಳಿತಿದ್ದ. ಆದ್ರೆ ಜರ್ಮನಿಯಲ್ಲಿ ಓದುತ್ತಿರುವುದಾಗಿ ಹೇಳಿ ಅಲಿಗಢದಲ್ಲಿ ನೆಲೆಸಿರುವ ತಂದೆಯಿಂದ ಹಣ ಪಡೆದಿದ್ದ. ಹಣ ಹೊಂದಿಸಲು ಅವನ ತಂದೆ ತನ್ನ ಭೂಮಿಯನ್ನು ಮಾರಬೇಕಾಯಿತು ಎಂದು ಪೊಲೀಸ್‌ ತನಿಖೆಯಲ್ಲಿ ತಿಳಿದುಬಂದಿದೆ. ಇದನ್ನೂ ಓದಿ: ಮಸೀದಿ ಪಕ್ಕ ನಿಂತಿದ್ದ ಹುಡ್ಗಿಯನ್ನ ʻಹಾಟ್‌ʼ ಅಂತ ಕರೆದಿದ್ದ ವೃದ್ಧ – 7 ವರ್ಷಗಳ ಬಳಿಕ 3 ವರ್ಷ ಜೈಲು ಶಿಕ್ಷೆ

    ಕೊಲೆ ನಡೆದಿದ್ದು ಹೇಗೆ? 
    ಪೊಲೀಸರ ಪ್ರಕಾರ, 2019ರಲ್ಲಿ ಆರೋಪಿ ದೇವೇಂದ್ರ ನಂದ ನಗರಲ್ಲಿರುವ ಆಶಾದೇವಿ ಎಂಬಾಕೆಯ ಮನೆಯಲ್ಲಿ ಬಾಡಿಗೆದಾನಾಗಿ ವಾಸಿಸಲು ಪ್ರಾರಂಭಿಸಿದ್ದ. ಕೆಲ ಸಮಯಗಳಲ್ಲೇ ಆಕೆಯೊಂದಿಗೆ ಸ್ನೇಹ ಬೆಳೆಸಿದ್ದ. ಇಬ್ಬರ ನಡುವೆ ದೈಹಿಕ ಸಂಬಂಧವೂ ಬೆಳೆದಿತ್ತು. ಆದ್ರೆ ದೇವೇಂದ್ರ ಆಶಾದೇವಿ ಮನೆಯಲ್ಲಿ ಬಾಡಿಗೆದಾರನಾಗಿ ವಾಸಿಸುತ್ತಿದ್ದ ದೇವೇಂದ್ರ 2 ವರ್ಷಗಳ ಬಳಿಕ ಮತ್ತೊಬ್ಬಳು ಮಹಿಳೆಯನ್ನೂ ಭೇಟಿ ಮಾಡಿದ್ದ. ಆಕೆಯೊಂದಿಗೂ ದೈಹಿಕ ಸಂಪರ್ಕ ಬೆಳೆದಿದ್ದ. ಕೊನೆಗೆ ಇಬ್ಬರು ಮದುವೆಯಾಗಲು ನಿರ್ಧರಿಸಿ ಇದೇ ಡಿಸೆಂಬರ್‌ 4ರಂದು ಅಲಿಗಢದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.’

    ಈ ವಿಷಯ ತಿಳಿದ ಮನೆಯೊಡತಿ ಆಶಾದೇವಿ, ದೇವೇಂದ್ರನನ್ನು ಭೇಟಿಯಾಗಲು ಕರೆದಿದ್ದಳು. ದೇವೇಂದ್ರ ನಿಶ್ಚಿತಾರ್ಥ ಗೆಳತಿಯನ್ನೂ ಮನೆಗೆ ಕರೆದುಕೊಂಡು ಬಂದು ತಾವಿಬ್ಬರು ಮದುವೆಯಾಗುತ್ತಿರುವುದಾಗಿ ಹೇಳಿದ್ದಾನೆ. ಆದ್ರೆ ಆಶಾದೇವಿ ದೇವೇಂದ್ರನನ್ನು ಬೇರೆ ಮದುವೆಯಾಗಲು ಬಿಡುವುದಿಲ್ಲ ಎಂದು ಹೇಳಿದ್ದಾಳೆ. ಇದಕ್ಕೆ ಅವನು ವಿರೋಧಿಸಿದಾಗ ಆತನಿಗೆ ಕಪಾಳಮೋಕ್ಷ ಮಾಡಿದಾಳೆ. ಇದರಿಂದ ಕೋಪಗೊಂಡ ಆರೋಪಿ ಮಹಿಳೆಯ ತಲೆಗೆ ಇಟ್ಟಿಗೆಯಿಂದ ಹೊಡೆದಿದ್ದಾನೆ.

    ಮಹಿಳೆ ಪ್ರಜ್ಞಾಹೀನಳಾಗಿದ್ದರೂ ಆರೋಪಿ ಆಕೆಯ ತಲೆಗೆ ಹಲವಾರು ಬಾರಿ ಇಟ್ಟಿಗೆಯಿಂದ ಹೊಡೆದು, ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಇದಾದ ಬಳಿಕ ಆಶಾದೇವಿ ಬಳಿಯಿದ್ದ 13 ಸಾವಿರ ಹಣ, ಚಿನ್ನಾಭರಣ ದೋಚಿ ಅಲಿಗಢಕ್ಕೆ ಪರಾರಿಯಾಗಿದ್ದಾರೆ. ಈ ವಿಷಯ ಯಾರಿಗೂ ತಿಳಿದಿರಲಿಲ್ಲ. ಇದೇ ಡಿಸೆಂಬರ್‌ 5ರಂದು ಆಕೆಯ ಮನೆಯ ಕೊಠಡಿಯಿಂದ ದುರ್ವಾಸನೆ ಬರುತ್ತಿದ್ದುದ್ದನ್ನು ಗಮನಿಸಿ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬೆಡ್‌ರೂಮಿನಲ್ಲಿದ್ದ ಬಾಕ್ಸ್‌ ತೆರೆದು ನೋಡಿದಾಗ ಆಶಾದೇವಿಯ ಛಿದ್ರಗೊಂಡ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಮನೆ ಕ್ಲೀನ್‌ ಮಾಡು ಅಂತ ಹೇಳಿದ್ದಕ್ಕೆ ಜಗಳ – ಗಂಡನ ಕಿವಿ ಕಚ್ಚಿ ತುಂಡು ಮಾಡಿದ ಹೆಂಡ್ತಿ ವಿರುದ್ಧ ಕೇಸ್‌!

    ಮನೆ ಕ್ಲೀನ್‌ ಮಾಡು ಅಂತ ಹೇಳಿದ್ದಕ್ಕೆ ಜಗಳ – ಗಂಡನ ಕಿವಿ ಕಚ್ಚಿ ತುಂಡು ಮಾಡಿದ ಹೆಂಡ್ತಿ ವಿರುದ್ಧ ಕೇಸ್‌!

    ನವದೆಹಲಿ: ಮನೆ ಸ್ವಚ್ಛ ಮಾಡು ಅಂತ ಹೇಳಿದ್ದಕ್ಕೆ ಗಂಡ-ಹೆಂಡತಿ (Husband And Wife) ನಡುವೆ ಜಗಳವಾಗಿದೆ. ಈ ವೇಳೆ ಆಕ್ರೋಶದಿಂದ ಹೆಂಡತಿ ತನ್ನ ಬಲ ಕಿವಿಯನ್ನು ಕಚ್ಚಿ ತುಂಡುಮಾಡಿರುವುದಾಗಿ ಪತಿ ಪೊಲೀಸ್‌ ಕೇಸ್‌ ದಾಖಲಿಸಿರುವ ಘಟನೆ ದೆಹಲಿ ಸುಲ್ತಾನ್‌ಪುರಿ (Sultanpuri) ಪ್ರದೇಶದಲ್ಲಿ ನಡೆದಿದೆ.

    ಹೆಂಡತಿ ಕಿವಿ ಕಚ್ಚಿ ಎರಡು ತುಂಡಾಗಿದ್ದರಿಂದ 45 ವರ್ಷದ ಬಲಿಪಶು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಸ್ಥಳೀಯ ಪೊಲೀಸರು. ಸಂತ್ರಸ್ತ ಪತಿ ನೀಡಿದ ದೂರಿನ ಆಧಾರದ ಮೇಲೆ ಪತ್ನಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಸಿಡಿಲು ಬಡಿದು 20 ಮಂದಿ ದುರ್ಮರಣ – ಅಮಿತ್‌ ಶಾ ಸಂತಾಪ

    ಪತ್ನಿ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 324 (ಸ್ವಯಂಪ್ರೇರಿತವಾಗಿ ಅಪಾಯಕಾರಿ ಶಸ್ತ್ರಾಸ್ತ್ರಗಳು ಅಥವಾ ವಿಧಾನಗಳಿಂದ ಗಾಯ ಉಂಟುಮಾಡುವುದು) ಅಡಿಯಲ್ಲಿ FIR ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ.

    ಅಷ್ಟಕ್ಕೂ ನಡೆದಿದ್ದೇನು?
    ಇದೇ ತಿಂಗಳ ನವೆಂಬರ್‌ 20 ರಂದು ಬೆಳಗ್ಗೆ 9:20ರ ಸುಮಾರಿಗೆ ನನ್ನ ಹೆಂಡತಿಗೆ ಮನೆ ಸ್ವಚ್ಛಗೊಳಿಸುವಂತೆ ಹೇಳಿ, ಮನೆಯ ಹೊರಗೆ ಕಸ ಎಸೆಯಲು ಹೋಗಿದ್ದೆ. ನಾನು ಮನೆಗೆ ವಾಪಸ್‌ ಬಂದ ಕೂಡಲೇ ನನ್ನ ಹೆಂಡತಿ ಜಗಳ ತೆಗೆದಿದ್ದಾಳೆ. ಜಗಳದ ಮಧ್ಯೆ ಮಕ್ಕಳೊಂದಿಗೆ ಪ್ರತ್ಯೇಕವಾಗಿರಲು ಮನೆ ಮಾರಾಟ ಮಾಡಿ, ತನಗೂ ಪಾಲು ನೀಡುವಂತೆ ಪತ್ನಿ ಕೇಳಿದ್ದಾಳೆ. ಈ ವೇಳೆ ಪತಿ ಸಮಾಧಾನಪಡಿಸಿದರೂ ಬಗ್ಗದೇ ಮಾತಿನ ಚಕಮಕಿ ಮುಂದುವರಿದಿದೆ.

    ಇದರಿಂದ ಆಕೆಯ ಕೋಪ ಮಿತಿಮೀರಿ ನನ್ನನ್ನೇ ಹೊಡೆಯಲು ಬಂದಿದ್ದಳು. ಆಕೆಯನ್ನು ತಳ್ಳಿ, ನಾನು ಮನೆಯಿಂದ ಹೊರಹೋಗುತ್ತಿದೆ. ಆಗ ಹಿಂಬದಿಯಿಂದ ನನ್ನನ್ನ ಹಿಡಿದುಕೊಂಡು ಬಲ ಕಿವಿಯನ್ನು ಕಚ್ಚಿದಳು. ನನ್ನ ಕಿವಿ ಮೇಲಿನ ಭಾಗ ತುಂಡಾಗಿ ರಕ್ತಸ್ರಾವವಾಯಿತು ಎಂದು ದೂರಿನಲ್ಲಿ ಹೇಳಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ

    ಸದ್ಯ ಸಂತ್ರಸ್ತ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಆದ್ರೆ ಇನ್ನೂ ಹೇಳಿಕೆ ನೀಡುವ ಸ್ಥಿತಿಯಲ್ಲಿಲ್ಲ. ನವೆಂಬರ್‌ 22ರಂದು ಪೊಲೀಸರಿಗೆ ಲಿಖಿತ ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಪ್ರತ್ಯೇಕ ತಂಡ ಕಳುಹಿಸಲಾಗಿದೆ. ಇದನ್ನೂ ಓದಿ: ಚೀನಾದಲ್ಲಿ ಮತ್ತೊಂದು ವೈರಸ್; ಆಸ್ಪತ್ರೆಗಳಲ್ಲಿ ತುರ್ತುಕ್ರಮ ಪರಿಶೀಲಿಸುವಂತೆ ರಾಜ್ಯಗಳಿಗೆ ಖಡಕ್‌ ವಾರ್ನಿಂಗ್‌

  • ನ್ಯೂಸ್‌ಕ್ಲಿಕ್ ಆನ್‌ಲೈನ್ ಪೋರ್ಟಲ್ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸ್ ದಾಳಿ

    ನ್ಯೂಸ್‌ಕ್ಲಿಕ್ ಆನ್‌ಲೈನ್ ಪೋರ್ಟಲ್ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸ್ ದಾಳಿ

    ನವದೆಹಲಿ: ಚೀನಾ (China) ಜೊತೆಗೆ ಆರ್ಥಿಕ ಸಂಬಂಧ ಹೊಂದಿರುವ ಆರೋಪದ ಮೇಲೆ ನ್ಯೂಸ್‌ಕ್ಲಿಕ್ (NewsClick) ಆನ್‌ಲೈನ್ ಪೋರ್ಟಲ್‌ಗೆ (Online Portal) ಸಂಬಂಧಿಸಿದ ಪತ್ರಕರ್ತರು (Journalist) ಮತ್ತು ಉದ್ಯೋಗಿಗಳ ಮನೆಗಳ ಮೇಲೆ ಮಂಗಳವಾರ ಬೆಳಗ್ಗೆ ದೆಹಲಿ ಪೊಲೀಸರ ವಿಶೇಷ ತಂಡ ದಾಳಿ (Raid) ನಡೆಸಿದೆ. 100ಕ್ಕೂ ಹೆಚ್ಚು ಸ್ಥಳಗಳಲ್ಲಿ 500ಕ್ಕೂ ಹೆಚ್ಚು ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

    ಅಕ್ಟೋಬರ್ 2 ರಂದು ದೆಹಲಿ ಪೊಲೀಸ್ (Delhi Police) ವಿಶೇಷ ಕೋಶದ ಹಿರಿಯ ಅಧಿಕಾರಿಗಳ ಸಭೆ ನಡೆದಿದ್ದು, ಪ್ರಕರಣವನ್ನು ಮುಂದಕ್ಕೆ ಕೊಂಡೊಯ್ಯುವ ಬಗ್ಗೆ ನಿರ್ಧರಿಸಿತ್ತು. ಅಂತಯೇ ದೆಹಲಿ, ನೋಯ್ಡಾ, ಗಾಜಿಯಾಬಾದ್, ಗುರುಗ್ರಾಮ್ ಮತ್ತು ಮುಂಬೈನ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಲಾಯಿತು. ಇದನ್ನೂ ಓದಿ: ಬಾಲ್ಯ ವಿವಾಹದ ವಿರುದ್ಧ ಸಮರ – ಮತ್ತೆ 800ಕ್ಕೂ ಅಧಿಕ ಮಂದಿಯ ಬಂಧನ

    ಮೂಲಗಳ ಪ್ರಕಾರ ದಾಳಿಗೆ ಒಳಗಾದವರ ಹೆಸರುಗಳನ್ನು ಎ, ಬಿ, ಸಿ ಎಂದು ವರ್ಗಗಳಾಗಿ ವಿಂಗಡಿಸಲಾಗಿತ್ತು. ಎ ವರ್ಗಕ್ಕೆ ಸೇರಿದವರನ್ನು ಬಂಧಿಸಲಾಗಿದೆ. ಬಿ ಮತ್ತು ಸಿ ನ್ಯೂಸ್ ಪೋರ್ಟಲ್‌ನ ಪತ್ರಕರ್ತರ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳಿಂದ ಡೇಟಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನ್ಯೂಸ್‌ಕ್ಲಿಕ್‌ನ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರನ್ನು ವಿಚಾರಣೆಗಾಗಿ ದೆಹಲಿ ಪೊಲೀಸ್ ವಿಶೇಷ ಸೆಲ್ ಕಚೇರಿಗೆ ಕರೆತರಲಾಯಿತು. ಇದನ್ನೂ ಓದಿ: ಇರುವುದೊಂದೇ ಸನಾತನ ಧರ್ಮ, ಉಳಿದೆಲ್ಲವೂ ಪಂಥಗಳು: ಯೋಗಿ

    ಆಗಸ್ಟ್ 17ರಂದು ಕಟ್ಟುನಿಟ್ಟಾದ ಭಯೋತ್ಪಾದನಾ-ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾಖಲಾದ ಪ್ರಕರಣವನ್ನು ಆಧರಿಸಿ ದೆಹಲಿಯ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ದೆಹಲಿ ಮತ್ತು ನೋಯ್ಡಾ ಮತ್ತು ಗಾಜಿಯಾಬಾದ್‌ನ ನೆರೆಯ ಪ್ರದೇಶಗಳಲ್ಲಿ ದೆಹಲಿ ಪೊಲೀಸರ ವಿಶೇಷ ಸೆಲ್ ದಾಳಿ ನಡೆಸಿತು. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಆದರೆ ಕೆಲವು ಪತ್ರಕರ್ತರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬಿಹಾರ ಜಾತಿ ಸಮೀಕ್ಷೆ ವರದಿ ಬಿಡುಗಡೆ; ಜಾತಿ ಹೆಸರಲ್ಲಿ ದೇಶ ವಿಭಜಿಸುವ ಪ್ರಯತ್ನವೆಂದು ಮೋದಿ ವಾಗ್ದಾಳಿ

    ಮೂರು ವರ್ಷಗಳ ಅವಧಿಯಲ್ಲಿ ಚೀನಾದೊಂದಿಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ನ್ಯೂಸ್ ಪೋರ್ಟಲ್ 38.05 ಕೋಟಿ ರೂ.ಗಳನ್ನು ಪಡೆದಿದೆ ಎಂದು ಇಡಿ ಈ ಹಿಂದೆ ಆರೋಪಿಸಿತ್ತು. ಹೀಗೆ ಸ್ವೀಕರಿಸಿದ ಹಣವನ್ನು ಗೌತಮ್ ನವ್ಲಾಖಾ ಮತ್ತು ಹಕ್ಕುಗಳ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಸಹಚರರು ಸೇರಿದಂತೆ ಹಲವಾರು ವಿವಾದಾತ್ಮಕ ಪತ್ರಕರ್ತರಿಗೆ ಹಂಚಲಾಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಭಯೋತ್ಪಾದಕರಿಗೆ ಕಾಂಗ್ರೆಸ್‌ ಮುಕ್ತ ಅವಕಾಶ ಕೊಟ್ಟಿದೆ; ಉದಯಪುರ ಟೈಲರ್‌ ಹತ್ಯೆ ಖಂಡಿಸಿದ ಮೋದಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅವಕಾಶ ಸಿಕ್ಕಾಗೆಲ್ಲಾ ಲೈಂಗಿಕ ಕಿರುಕುಳಕ್ಕೆ ಯತ್ನ: ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸ್

    ಅವಕಾಶ ಸಿಕ್ಕಾಗೆಲ್ಲಾ ಲೈಂಗಿಕ ಕಿರುಕುಳಕ್ಕೆ ಯತ್ನ: ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸ್

    ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್ (WFI) ಮಾಜಿ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರು ಅವಕಾಶ ಸಿಕ್ಕಾಗಲೆಲ್ಲಾ ಮಹಿಳಾ ಕುಸ್ತಿಪಟುಗಳಿಗೆ (Wrestlers) ಲೈಂಗಿಕ ಕಿರುಕುಳ (Sexual Harassment) ನೀಡಲು ಪ್ರಯತ್ನಿಸಿದ್ದಾರೆ ಎಂದು ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

    ಹಲವು ಉನ್ನತ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಶನಿವಾರ ಕೋರ್ಟ್‌ಗೆ ಹಾಜರಾಗುವುದರಿಂದ ವಿನಾಯಿತಿ ನೀಡಿದೆ. ಈ ವೇಳೆ ಬ್ರಿಜ್ ಭೂಷಣ್ ವಿರುದ್ಧ ಗಂಭೀರ ಆರೋಪ ಮಾಡಿರುವ ದೆಹಲಿ ಪೊಲೀಸರು ಇದಕ್ಕೆ ಸಂಬಂಧಿಸಿದಂತೆ ಸಾಕಷ್ಟು ಪುರಾವೆಗಳಿವೆ ಎಂದು ವಾದಿಸಿದ್ದಾರೆ.

    ಮಹಿಳಾ ಕುಸ್ತಿಪಟುವೊಬ್ಬರ ದೂರನ್ನು ಉಲ್ಲೇಖಿಸಿ, ಹೇಳಿಕೆ ನೀಡಿದ ದೆಹಲಿ ಪೊಲೀಸರು, ತಜಕಿಸ್ತಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆರೋಪಿ ದೂರುದಾರರನ್ನು ಕೋಣೆಗೆ ಕರೆದು ಬಲವಂತವಾಗಿ ತಬ್ಬಿಕೊಂಡಿದ್ದಾರೆ. ದೂರುದಾರರು ಇದನ್ನು ವಿರೋಧಿಸಿದಾಗ ಬ್ರಿಜ್ ಭೂಷಣ್ ತಾನು ನಿಮ್ಮ ತಂದೆಯಂತೆ ಎಂದು ಹೇಳಿ ತಪ್ಪನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ. ಅವರಿಗೆ ತಮ್ಮ ಕೃತ್ಯಗಳ ಬಗ್ಗೆ ಸಂಪೂರ್ಣ ಅರಿವಿತ್ತು ಎಂಬುದು ಇಲ್ಲಿ ಸ್ಪಷ್ಟವಾಗಿ ತೋರುತ್ತದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಹೇಳಿದ್ದಾರೆ.

    ಮತ್ತೊಂದು ದೂರನ್ನು ಉಲ್ಲೇಖಿಸಿ, ತಜಕಿಸ್ತಾನದಲ್ಲಿ ನಡೆದ ಏಷ್ಯನ್ ಚಾಂಪಿಯನ್‌ಶಿಪ್ ಸಂದರ್ಭದಲ್ಲಿ, ಬ್ರಿಜ್ ಭೂಷಣ್ ಶರಣ್ ಸಿಂಗ್ ಅನುಮತಿಯಿಲ್ಲದೆ ತನ್ನ ಅಂಗಿಯನ್ನು ಮೇಲಕ್ಕೆತ್ತಿ, ಅನುಚಿತವಾಗಿ ತನ್ನ ಹೊಟ್ಟೆಯನ್ನು ಮುಟ್ಟಿದ್ದಾರೆ ಎಂದು ಮಹಿಳಾ ಕುಸ್ತಿಪಟು ಹೇಳಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಗುಜರಾತ್‌ನ ಸೊಹ್ರಾಬುದ್ದೀನ್ ಎನ್‌ಕೌಂಟರ್ ಪ್ರಕರಣವನ್ನು ಉಲ್ಲೇಖಿಸಿ, ಆ ಪ್ರಕರಣದಲ್ಲಿ ಹಲವಾರು ಎಫ್‌ಐಆರ್‌ಗಳನ್ನು ಪ್ರತ್ಯೇಕವಾಗಿ ದಾಖಲಿಸಲಾಗಿದೆ. ಆದರೆ ನ್ಯಾಯಾಲಯವು ಎಲ್ಲವನ್ನೂ ಒಂದೇ ಸ್ಥಳದಲ್ಲಿ ಆಲಿಸಿದೆ ಎಂದು ಹೇಳಿದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಆರೋಪಗಳ ತನಿಖೆಗಾಗಿ ಸರ್ಕಾರ ರಚಿಸಿದ್ದ ಮೇಲ್ವಿಚಾರಣಾ ಸಮಿತಿಯು ಅವರನ್ನು ದೋಷಮುಕ್ತಗೊಳಿಸಿಲ್ಲ ಎಂದು ದೆಹಲಿ ಪೊಲೀಸರು ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿದ್ದರು. ಇದನ್ನೂ ಓದಿ: ಬಿಜೆಪಿ ಜೊತೆ ದೋಸ್ತಿ – ಜೆಡಿಎಸ್‌ನಲ್ಲಿ ಅಸಮಾಧಾನ ಸ್ಫೋಟ

    ರಾಷ್ಟ್ರ ರಾಜಧಾನಿಯಲ್ಲಿ ತಮ್ಮ ಪ್ರತಿಭಟನೆಯ ನಂತರ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಮಾಡಿದ ಆರೋಪಗಳನ್ನು ತನಿಖೆ ಮಾಡಲು ಕೇಂದ್ರ ಕ್ರೀಡಾ ಸಚಿವಾಲಯವು ಭಾರತೀಯ ಬಾಕ್ಸರ್ ಎಂಸಿ ಮೇರಿ ಕೋಮ್ ನೇತೃತ್ವದ ಉಸ್ತುವಾರಿ ಸಮಿತಿಯನ್ನು ರಚಿಸಿತ್ತು. ಅದರ ವರದಿಯನ್ನು ಸಾರ್ವಜನಿಕಗೊಳಿಸಲಾಗಿಲ್ಲ. ಆದರೆ ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಆರೋಪಗಳನ್ನು ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರಿಗೆ ಪ್ರತಿಯನ್ನು ನೀಡಲಾಗಿದೆ.

    ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದರೆ ಗರಿಷ್ಠ 3 ವರ್ಷಗಳ ಜೈಲು ಶಿಕ್ಷೆಯಾಗುತ್ತದೆ. 6 ಬಾರಿ ಸಂಸದರಾಗಿದ್ದ ಅವರ ವಿರುದ್ಧ ಜೂನ್ 15 ರಂದು ಚಾರ್ಜ್ ಶೀಟ್ ಸಲ್ಲಿಸಿದ್ದರು. ಮುಂದಿನ ವಿಚಾರಣೆ ಅಕ್ಟೋಬರ್ 7 ರಂದು ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ನಡೆಯಲಿದೆ. ಇದನ್ನೂ ಓದಿ: ಬೆಂಗಳೂರು ಬಂದ್‌ನಿಂದ ಸಮಸ್ಯೆ ಪರಿಹಾರ ಆಗಲ್ಲ, ಬಂದ್ ಕೈಬಿಡಿ: ಪರಮೇಶ್ವರ್ ಮನವಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಮೆಜಾನ್ ಮ್ಯಾನೇಜರ್ ಹತ್ಯೆ ಕೇಸ್; ಪೊಲೀಸರನ್ನೇ ಬೆಚ್ಚಿ ಬೀಳಿಸಿದ್ದ 18ರ ಯುವಕನ `ಮಾಯಾ ಗ್ಯಾಂಗ್’

    ಅಮೆಜಾನ್ ಮ್ಯಾನೇಜರ್ ಹತ್ಯೆ ಕೇಸ್; ಪೊಲೀಸರನ್ನೇ ಬೆಚ್ಚಿ ಬೀಳಿಸಿದ್ದ 18ರ ಯುವಕನ `ಮಾಯಾ ಗ್ಯಾಂಗ್’

    – ಯುವಕನಿಗೆ ಬಾಲಿವುಡ್ ಸಿನಿಮಾ ಪ್ರೇರಣೆಯಾಗಿತ್ತು

    ನವದೆಹಲಿ: ಇಲ್ಲಿ ನಡೆದ ಅಮೆಜಾನ್ (Amazon) ಕಂಪನಿಯ ಸೀನಿಯರ್ ಮ್ಯಾನೇಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಸತ್ಯ ಬಯಲಾಗಿದೆ. ಫಿಲ್ಮಿ ಡೈಲಾಗ್ ಹೇಳ್ಕೊಂಡು, ಇನ್‌ಸ್ಟಾಗ್ರಾಮ್‌ನಲ್ಲಿ ಗನ್ ಹಿಡಿದುಕೊಂಡು ಫೋಸ್ ಕೊಡುತ್ತಾ ಏನೂ ಗೊತ್ತೇಯಿಲ್ಲ ಎನ್ನುವವರಂತೆ ತಿರುಗುತ್ತಿದ್ದ 18 ವರ್ಷದ ಯುವಕನ ಗ್ಯಾಂಗ್ ಈ ಹತ್ಯೆ ಮಾಡಿದೆ ಎಂಬುದು ತನಿಖೆಯಲ್ಲಿ ಗೊತ್ತಾಗಿದೆ.

    ಇನ್‌ಸ್ಟಾಗ್ರಾಮ್ (Instagram) ಖಾತೆಯಲ್ಲಿ 2 ಸಾವಿರ ಫಾಲೋವರ್ಸ್ಗಳನ್ನ ಹೊಂದಿರುವ 18ರ ಯುವಕ ಮೊಹಮ್ಮದ್ ಸಮೀರ್ ಅಲಿಯಾಸ್ ಮಾಯಾ, ನಾನು ಕುಖ್ಯಾತಿ, ಸ್ಮಶಾನವೇ ನನ್ನ ವಿಳಾಸ, ಇದು ನನಗೆ ಬದುಕುವ ವಯಸ್ಸು. ಆದ್ರೆ, ನಾನು ಸಾಯಲು ಬಯಸುತ್ತೇನೆ ಎಂದು ಆತ ಬರೆದುಕೊಂಡಿದ್ದಾನೆ. ಇದನ್ನೂ ಓದಿ: ಅಮೆಜಾನ್ ಸೀನಿಯರ್ ಮ್ಯಾನೇಜರ್‌ಗೆ ಗುಂಡಿಟ್ಟು ಹತ್ಯೆ!

    ಬಂದೂಕುಗಳನ್ನ ಹಿಡಿದುಕೊಂಡು ಫೋಟೋ ತೆಗೆಸಿಕೊಂಡು ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದ ಸಮೀರ್, ಬಾಲಿವುಡ್ ಸಿನಿಮಾಗಳಿಂದ ಪ್ರಭಾವಿತನಾಗಿ 12 ಮಂದಿ ಅಪ್ರಾಪ್ತರನ್ನೂ ಸೇರಿಸಿಕೊಂಡು ತನ್ನದೇ ಗ್ಯಾಂಗ್ ಕಟ್ಟಿಕೊಂಡಿದ್ದ. ಅದಕ್ಕೆ `ಮಾಯಾ ಗ್ಯಾಂಗ್’ (Maya Gang) ಎಂದೂ ಹೆಸರಿಟ್ಟಿದ್ದ. ಈ ಪ್ರಕರಣದಲ್ಲಿ ಸಿಕ್ಕಿಕೊಳ್ಳುವುದಕ್ಕೂ ಮುನ್ನವೇ ಹಿಂದೆ ನಾಲ್ಕು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಈಶಾನ್ಯ ದೆಹಲಿಯ ಪೊಲೀಸರೆ ಈ ಗ್ಯಾಂಗ್ ಕಂಡು ಭಯಭೀತರಾಗಿದ್ದರು ಎಂದು ಹೇಳಲಾಗಿದೆ. ಇದೀಗ ಮ್ಯಾನೇಜರ್ ಹತ್ಯೆಗೆ ಸಂಬಂಧಿಸಿದಂತೆ ಮಾಯಾ ಮತ್ತು ಅವನ 18 ವರ್ಷದ ಸಹವರ್ತಿ ಬಿಲಾಲ್ ಗನಿ ಎಂಬಾತನನ್ನ ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಆಸ್ಟ್ರೇಲಿಯಾ ನೀತಿಗೆ ಬೇಸತ್ತು ತಾಯಿ ಆತ್ಮಹತ್ಯೆ – ಮಕ್ಕಳನ್ನು ಭಾರತಕ್ಕೆ ಕರೆತರಲು ದೆಹಲಿಯಲ್ಲಿ ಪ್ರತಿಭಟನೆ

    ಏನಿದು ಕೇಸ್?
    ಅಮೆಜಾನ್ ಕಂಪನಿಯ ಸೀನಿಯರ್ ಮ್ಯಾನೇಜರ್ ಹರ್ಪ್ರೀತ್‌ ಗಿಲ್ (36) ಎಂಬಾತನನ್ನ ದುಷ್ಕರ್ಮಿಗಳು ಗುಂಡಿಟ್ಟು ಕೊಲೆಗೈದ ಘಟನೆ ದೆಹಲಿಯಲ್ಲಿ ನಡೆದಿತ್ತು. ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದರು. ಆರೋಪಿಗಳಾದ ಮಾಯಾ, ಗನಿ ಮತ್ತು ಅವರ ಸಹಚರರಾದ ಸೊಹೈಲ್ (23), ಮೊಹಮ್ಮದ್ ಜುನೈದ್ (23) ಮತ್ತು ಅದ್ನಾನ್ (19) ಎರಡು ಸ್ಕೂಟರ್‌ಗಳಲ್ಲಿ ಪಾರ್ಟಿ ಮುಗಿಸಿ ಹಿಂದಿರುಗುತ್ತಿದ್ದರು. ಅದೇ ರಸ್ತೆಯಲ್ಲಿ ಗಿಲ್ ಮತ್ತು ಅವನ ಚಿಕ್ಕಪ್ಪ ಗೋವಿಂದ್ ಬರುತ್ತಿದ್ದರು. ರಸ್ತೆಯಲ್ಲಿ ಇವರಿಬ್ಬರ ವಾಹನಗಳು ಮುಖಾಮುಖಿಯಾದ ನಂತರ ದಾರಿ ಬಿಡುವ ವಿಚಾರಕ್ಕೆ ಜಗಳ ಶುರುವಾಗಿದೆ. ಬಳಿಕ ವಿಕೋಪಕ್ಕೆ ತಿರುಗಿ ಮಾಯಾ ಗ್ಯಾಂಗ್ ಹರ್ಪ್ರೀತ್‌ ಗಿಲ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗಿಲ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವನ ಚಿಕ್ಕಪ್ಪ ಗೋವಿಂದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ನಂತರ ಕೆಲವು ಆರೋಪಿಗಳನ್ನ ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಲವರು ಸ್ಕೂಟರ್‌ನಲ್ಲಿ ತೆರಳುವಾಗ ಮುಖ ಮುಚ್ಚಿಕೊಂಡಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 14ರ ಬಾಲಕಿ ಮೇಲೆ ರೇಪ್ ಮಾಡಿದ ಅಧಿಕಾರಿಗೆ ಇಂದು ಸಾಮರ್ಥ್ಯ ಪರೀಕ್ಷೆ

    14ರ ಬಾಲಕಿ ಮೇಲೆ ರೇಪ್ ಮಾಡಿದ ಅಧಿಕಾರಿಗೆ ಇಂದು ಸಾಮರ್ಥ್ಯ ಪರೀಕ್ಷೆ

    – ಸಂತಾನಹರಣ ಚಿಕಿತ್ಸೆ ಪಡೆದವರಿಂದ ರೇಪ್ ಮಾಡಲು ಸಾಧ್ಯವಿಲ್ಲ – ಆರೋಪಿ ಪರ ವಕೀಲರ ವಾದ

    ನವದೆಹಲಿ: ಅಪ್ರಾಪ್ತ ಬಾಲಕಿ ಮೇಲೆ ತಿಂಗಳುಗಟ್ಟಲೇ ಅತ್ಯಾಚಾರ ಎಸಗಿ ಆಕೆಯನ್ನ ಗರ್ಭಧರಿಸುವಂತೆ ಮಾಡಿದ ಆರೋಪದ ಮೇಲೆ ಅಮಾನತುಗೊಂಡಿರುವ ದೆಹಲಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರೇಮೋದಯ್ ಖಾಖಾ (Premoday Khakha) ನನ್ನ ಮಂಗಳವಾರ (ಇಂದು) ಪುರುಷತ್ವ ಸಾಮರ್ಥ್ಯ ಪರೀಕ್ಷೆಗೆ ಒಳಪಡಿಸಲಾಗಿದೆ.

    ಆರೋಪಿಯು (Accused) ಲೈಂಗಿಕ ಕ್ರಿಯೆಗಳಲ್ಲಿ ತೊಡಗಿಸಿಕೊಳ್ಳಲು ಸಮರ್ಥನಾಗಿದ್ದಾನೆಯೇ? ಇಲ್ಲವೇ? ಎಂಬುದನ್ನ ತಿಳಿಯಲು ಪ್ರಮಾಣೀಕೃತ ಮೂತ್ರಶಾಸ್ತ್ರಜ್ಞರಿಂದ ಲೈಂಗಿಕ ದೌರ್ಜನ್ಯ ಅಥವಾ ಅತ್ಯಾಚಾರದ ಅಪರಾಧ ಪ್ರಕರಣದಲ್ಲಿ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಲು ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಯಿಂದ್ಲೇ 14ರ ಬಾಲಕಿ ಮೇಲೆ ರೇಪ್‌ – ಪತಿ, ಪತ್ನಿ ಅರೆಸ್ಟ್‌

    ಆರೋಪಿಗಳಾದ ಪ್ರಮೋದ್ ಖಾಖಾ ಮತ್ತು ಅವನ ಪತ್ನಿ ಸೀಮಾ ರಾಣಿ ಇಬ್ಬರನ್ನೂ ದೆಹಲಿ ನ್ಯಾಯಾಲಯಕ್ಕೆ (Delhi court) ಹಾಜರುಪಡಿಸಲಾಗಿತ್ತು. ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆರೋಪಿಗಳ ಪರ ವಕೀಲರು ಖಾಖಾ ವಿರುದ್ಧ ಹೊರಿಸಿರುವ ಆರೋಪಗಳು ನಿರಾಧಾರ ಎಂದು ಹೇಳಿದ್ದಾರೆ. ಅಲ್ಲದೇ ಪ್ರಮೋದ್ ಕಳೆದ 20 ವರ್ಷಗಳ ಹಿಂದೆಯೇ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಅವರಿಂದ ಅತ್ಯಾಚಾರ ಮಾಡಲು ಹೇಗೆ ಸಾಧ್ಯ? ಆದ್ದರಿಂದ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗುವ ಸಾಧ್ಯತೆಗಳಿಲ್ಲ ಎಂದು ವಾದಿಸಿದ್ದರು.

    ಈ ಮಧ್ಯೆ ಆರೋಪಿ ಚರ್ಚ್ನಲ್ಲಿಯೂ ತನಗೆ ಕಿರುಕುಳ ನೀಡುತ್ತಿದ್ದ ಬಗ್ಗೆ ಪೊಲೀಸರಿಗೆ ದೂರು ಬಂದಿತ್ತು. ಆರೋಪಿ ಅಧಿಕಾರಿ ಚರ್ಚ್ನಲ್ಲಿಯೂ ಉಪಕಾರ್ಯದರ್ಶಿ ಹುದ್ದೆ ಹೊಂದಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕಾಫಿ ಶಾಪ್‌ನಲ್ಲಿ ಶುರುವಾದ ಪ್ರೀತಿ – ಭಾರತದ ಪ್ರೇಮಿಗಾಗಿ ದಕ್ಷಿಣ ಕೊರಿಯಾದಿಂದ ಹಾರಿ ಬಂದ ಮಹಿಳೆ!

    ಏನಿದು ಪ್ರಕರಣ?
    ಅಮಾನತಿನಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಪ್ರೇಮೋದಯ್ ಖಾಖಾ ಎಂಬಾತ ತನ್ನ ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ (ಆಗ 14 ವರ್ಷ, ಈಗ 17 ವರ್ಷ) ತಿಂಗಳುಗಟ್ಟಲೇ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ. ಅಲ್ಲದೇ ಅಧಿಕಾರಿಯ ಪತ್ನಿ ಸೀಮಾ ರಾಣಿ ಬಾಲಕಿಗೆ ಗರ್ಭಪಾತದ ಮಾತ್ರೆಗಳನ್ನು ನೀಡಿದ ಆರೋಪದ ಮೇಲೆ ಅರೆಸ್ಟ್ ಆಗಿದ್ದಾಳೆ. ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಆದೇಶದ ಮೇರೆಗೆ ಸೋಮವಾರ ಅಧಿಕಾರಿಯನ್ನ ಹುದ್ದೆಯಿಂದ ಅಮಾನತುಗೊಳಿಸಲಾಗಿತ್ತು.

    ಆರೋಪಿ ವಿರುದ್ಧ ಪೋಕ್ಸೋ ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 376(2)(F), ಸೆಕ್ಷನ್ 509, 506, 323, 313, 120 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ತನಿಖೆ ಮುಂದುವರಿದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]