Tag: Delhi Rains

  • ಅಪಾಯ ಮಟ್ಟ ಮೀರಿದ ಯಮುನಾ ನದಿ – ದೆಹಲಿ ಸಚಿವಾಲಯಕ್ಕೂ ನುಗ್ಗಿದ ಪ್ರವಾಹ ನೀರು

    ಅಪಾಯ ಮಟ್ಟ ಮೀರಿದ ಯಮುನಾ ನದಿ – ದೆಹಲಿ ಸಚಿವಾಲಯಕ್ಕೂ ನುಗ್ಗಿದ ಪ್ರವಾಹ ನೀರು

    – 10,000ಕ್ಕೂ ಅಧಿಕ ಮಂದಿ ಸ್ಥಳಾಂತರ

    ನವದೆಹಲಿ: ದೆಹಲಿಯಲ್ಲಿ ಉಕ್ಕಿ ಹರಿಯುತ್ತಿರುವ ಯಮುನಾ ನದಿಯಿಂದ ಬರುವ ಪ್ರವಾಹದ (Yamuna flood) ನೀರು ಹತ್ತಿರದ ಪ್ರದೇಶಗಳನ್ನು ಮುಳುಗಿಸಿವೆ. ಅಲ್ಲದೇ ಪ್ರವಾಹದ ನೀರು ದೆಹಲಿ ಸಚಿವಾಲಯಕ್ಕೂ ನುಗ್ಗಿದೆ.

    ಅಧಿಕೃತ ಮಾಹಿತಿಯ ಪ್ರಕಾರ, ನಸುಕಿನ ಜಾವ 2 ಗಂಟೆಯಿಂದ 5ರ ವರೆಗೆ ನೀರಿನ ಮಟ್ಟ 207.47 ಮೀಟರ್‌ನಲ್ಲಿ ಸ್ಥಿರವಾಗಿತ್ತು. ಬೆಳಗ್ಗೆ 6 ರಿಂದ 7ರ ವರೆಗೂ 207.48 ಮೀಟರ್‌ನಲ್ಲಿ ನೀರಿನ ಮಟ್ಟ ಇತ್ತು. ಬಳಿಕ ನೀರಿನ ಪ್ರಮಾಣ ಹೆಚ್ಚಾಗಿದ್ದು, ಯಮುನೆಯ ಆಕ್ರೋಶ ಕಟ್ಟೆಯೊಡೆದಂತಾಗಿದೆ. ಇದನ್ನೂ ಓದಿ: ವಿಜಯವಾಡದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಮೂತಿಗೆ ಹಕ್ಕಿ ಡಿಕ್ಕಿ

    ದೆಹಲಿ ಮುಖ್ಯಮಂತ್ರಿ (Delhi CM), ಸಂಪುಟ ಸಚಿವರು ಮತ್ತು ಪ್ರಮುಖ ಅಧಿಕಾರಿಗಳ ಕಚೇರಿಗಳನ್ನು ಹೊಂದಿರುವ ದೆಹಲಿ ಸಚಿವಾಲಯದ (Delhi Ministry) ಬಳಿಗೂ ಪ್ರವಾಹ ನೀರು ನುಗ್ಗಿದೆ. ವಾಸುದೇವ್ ಘಾಟ್ ಸುತ್ತಮುತ್ತಲಿನ ಪ್ರದೇಶಗಳು ಸಹ ಜಲಾವೃತಗೊಂಡವು. ಕಾಶ್ಮೀರಿ ಗೇಟ್ ಬಳಿಯ ಶ್ರೀ ಮಾರ್ಗಟ್ ವಾಲೆ ಹನುಮಾನ್ ಬಾಬಾ ಮಂದಿರಕ್ಕೂ ಪ್ರವಾಹ ನೀರು ಆವರಿಸಿದೆ. ಇದನ್ನೂ ಓದಿ: ಅಕ್ರಮ ಬೆಟ್ಟಿಂಗ್‌ ಆ್ಯಪ್ ಪ್ರಕರಣ – ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಶಿಖರ್‌ ಧವನ್‌ಗೆ ಇಡಿ ಸಮನ್ಸ್‌

    ಕಂದಾಯ ಇಲಾಖೆಯ ಪ್ರಕಾರ, 8,018 ಜನರನ್ನ ಡೇರೆಗಳಿಗೆ ಸ್ಥಳಾಂತರಿಸಲಾಗಿದ್ದು, 2,030 ಜನರನ್ನು 13 ಶಾಶ್ವತ ಆಶ್ರಯಗಳಿಗೆ ಸ್ಥಳಾಂತರಿಸಲಾಗಿದೆ. ಪರಿಸ್ಥಿತಿಯ ಬಗ್ಗೆ ದೆಹಲಿ ಸರ್ಕಾರ 24/7 ನಿಗಾ ಇಡುತ್ತಿದೆ. ಇದನ್ನೂ ಓದಿ: ಇನ್ಮುಂದೆ ಜಿಎಸ್‌ಟಿಯಲ್ಲಿ 2 ಸ್ಲ್ಯಾಬ್‌ – ಸೆ.22 ರಿಂದ ಜಾರಿ| ಯಾವ ವಸ್ತುಗಳ ಬೆಲೆ ಇಳಿಕೆ? ಯಾವುದು ಏರಿಕೆ? ಇಲ್ಲಿದೆ ಪಟ್ಟಿ

  • ಮೊದಲ ಮಾನ್ಸೂನ್ ಮಳೆಗೆ ರಾಷ್ಟ್ರ ರಾಜಧಾನಿ ತತ್ತರ – ರಸ್ತೆಗಳಲ್ಲಿ ಉಕ್ಕಿ ಹರಿದ ನೀರು

    ಮೊದಲ ಮಾನ್ಸೂನ್ ಮಳೆಗೆ ರಾಷ್ಟ್ರ ರಾಜಧಾನಿ ತತ್ತರ – ರಸ್ತೆಗಳಲ್ಲಿ ಉಕ್ಕಿ ಹರಿದ ನೀರು

    ನವದೆಹಲಿ: ಬಿಸಿಲಿನ ಬೇಗೆಯಲ್ಲಿ ಬೆಂದಿದ್ದ ರಾಷ್ಟ್ರ ರಾಜಧಾನಿ ದೆಹಲಿಯ (New Delhi) ಜನರಿಗೆ ಈ ಬಾರಿ ಮಾನ್ಸೂನ್‌ನ ಮೊದಲ ಮಳೆ ದೊಡ್ಡ ರಿಲ್ಯಾಕ್ಸ್ ನೀಡಿದೆ. ಆದರೆ ನಿನ್ನೆ ರಾತ್ರಿ ಸುರಿದ ದಾಖಲೆ ಪ್ರಮಾಣದ ಮಳೆ ಇಡೀ ದೆಹಲಿಯನ್ನು ಸಂಕಷ್ಟಕ್ಕೆ ದೂಡಿದೆ. ಎಲ್ಲಾ ರಸ್ತೆಗಳಲ್ಲಿ ನೀರು ತುಂಬಿದೆ. ಇಡೀ ನಗರದಲ್ಲಿ ಟ್ರಾಫಿಕ್ ಜಾಮ್ ಆವರಿಸಿದ್ದು, ಜನರ ಆಕ್ರೋಶಕ್ಕೆ ಕಾರಣವಾಯಿತು.

    ಗುರುವಾರ ರಾತ್ರಿ ಸರಿ ಸುಮಾರು ಮೂರು ಗಂಟೆ ಸುರಿದ ಮಳೆಗೆ ಭಾಗಶಃ ದೆಹಲಿ ಜಲಾವೃತಗೊಂಡಿದೆ. ದೆಹಲಿ ವಿಮಾನ ನಿಲ್ದಾಣದ (Delhi Airport) ಟರ್ಮಿನಲ್ 1 ರ ಮೇಲ್ಛಾವಣಿಯ ಒಂದು ಭಾಗವು ಕುಸಿದುಬಿದ್ದು ಒಬ್ಬ ವ್ಯಕ್ತಿ ಸಾವನ್ನಪ್ಪಿ ಆರು ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ದೆಹಲಿ ಏರ್‌ಪೋರ್ಟ್‌ ಮೇಲ್ಛಾವಣಿ ಕುಸಿತ- ಮೃತನ ಕುಟುಂಬ, ಗಾಯಾಳುಗಳಿಗೆ ಪರಿಹಾರ

    ಮತ್ತೊಂದು ಕಡೆ ಇಡೀ ನಗರದಲ್ಲಿ ಬಹುತೇಕ ಪ್ರದೇಶಗಳು ನೀರಿನಿಂದ ಜಲಾವೃತಗೊಂಡಿದೆ. ಐಟಿಓ, ಲೋಧಿ ಎಸ್ಟೇಟ್, ಕಮಲ ನಗರಾ, ಲಜ್‌ಪತ್ ನಗರ, ಏಮ್ಸ್ ಪ್ರದೇಶ, ಸಬ್ದರ್ ಜಂಗ್ ಎನ್ಕ್ಲೇವ್, ಮಾತೃವಾ ರಸ್ತೆ, ತೀನ್ ಮೂರ್ತಿ ಮಾರ್ಗ, ಮೂಲಚಂದ್, ಮಿಂಟೋ ರಸ್ತೆ, ಆನಂದ್ ವಿಹಾರ್, ಮೆಹ್ರೌಲಿ ಬದರ್‌ಪುರ್ ರಸ್ತೆ, ಮಂಡವಾಲಿ, ಭಿಕಾಜಿ ಕಾಮಾ ಪ್ಲೇಸ್, ಮಧು ವಿಹಾರ್, ಪ್ರಗತಿ ಮೈದಾನ, ಮುನಿರ್ಕಾ, ಧೌಲಾ ಕುವಾ, ಮೋತಿ ಬಾಗ್, ಐಟಿಒ ಮತ್ತು ನೋಯ್ಡಾದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಕಿಲೋಮೀಟರ್ ಉದ್ದಕ್ಕೂ ಎಲ್ಲೆಡೆ ಟ್ರಾಫಿಕ್ ಜಾಮ್ ಆಗಿ ಸಂಚಾರಕ್ಕೆ ತೊಂದರೆಯಾಯಿತು‌.

    ಭಿಕಾಜೀ ಕಾಮಾ ಮೆಟ್ರೋ ನಿಲ್ದಾಣದಲ್ಲಿ ನೀರು ನುಗ್ಗಿದೆ. ಆಗ್ನೇಯ ದೆಹಲಿಯ ಚಿತ್ತರಂಜನ್ ಪಾರ್ಕ್‌ನಲ್ಲಿರುವ ಮನೆಗಳಿಗೆ ನೀರು ನುಗ್ಗಿ ಗೃಹೋಪಯೋಗಿ ವಸ್ತುಗಳು ಮತ್ತು ಪೀಠೋಪಕರಣಗಳಿಗೆ ಹಾನಿಯಾಗಿದೆ. ಆಜಾದ್ ಮಾರ್ಕೆಟ್ ಅಂಡರ್ ಪಾಸ್‌ನಲ್ಲಿ ಪ್ರಯಾಣಿಕರ ಬಸ್ ಕೆಟ್ಟು ನಿಂತಿದ್ದು, ಪ್ರಯಾಣಿಕರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಯಿತು‌. ಐಟಿಓ ಪ್ಲೈವೋವರ್‌ ಬಳಿ ಬಸ್, ಕಾರುಗಳಲ್ಲಿ ನೀರು ನುಗ್ಗಿ ಕೆಟ್ಟು ನಿಂತವು. ಇದನ್ನೂ ಓದಿ: ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು 6 ಮಂದಿಗೆ ಗಾಯ

    ಈ ನಡುವೆ ನಿನ್ನೆ ಒಂದೇ ದಿನ ರಾತ್ರಿ 228 ಎಂಎಂ ಮಳೆ ದಾಖಲಾಗಿದೆ. 1936 ರಲ್ಲಿ 235.5 ಎಂಎಂ ಮಳೆ ದಾಖಲಾಗಿತ್ತು. ಇದಾದ ಬಳಿಕ ನಿನ್ನೆ ಅತಿ ಹೆಚ್ಚು ಮಳೆ ಒಂದೇ ದಿನ ಸುರಿದಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಹೇಳಿದೆ‌. ಇನ್ನೂ ಮುಂದಿನ ಒಂದು ವಾರ ಭಾರಿ ಮಳೆಯ ಎಚ್ಚರಿಕೆ ನೀಡಿದೆ.

    ದೆಹಲಿಯಲ್ಲಿ (Delhi Rains) ನೀರು ನುಗ್ಗುತ್ತಿದ್ದಂತೆ ಸೋಶಿಯಲ್ ಮೀಡಿಯಾಗಳಲ್ಲಿ ವೀಡಿಯೋ ಪೋಸ್ಟ್ ಮಾಡಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ನೀರು ತುಂಬಿದ್ದಕ್ಕೆ ಕೇಜ್ರಿವಾಲ್ ಸರ್ಕಾರವನ್ನು, ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತಕ್ಕೆ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ನಡುವೆ ಕಾಂಗ್ರೆಸ್ ಕೂಡಾ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. ಇದನ್ನೂ ಓದಿ: ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್‌ ಸೊರೇನ್‌ಗೆ ಜಾಮೀನು ಮಂಜೂರು

  • ದೆಹಲಿಯ ಕಟ್ಟಡವೊಂದರ 9ನೇ ಮಹಡಿ ಬೆಂಕಿಗಾಹುತಿ – ತಪ್ಪಿದ ದುರಂತ, ವರದಾನವಾಯ್ತು ವರುಣ

    ದೆಹಲಿಯ ಕಟ್ಟಡವೊಂದರ 9ನೇ ಮಹಡಿ ಬೆಂಕಿಗಾಹುತಿ – ತಪ್ಪಿದ ದುರಂತ, ವರದಾನವಾಯ್ತು ವರುಣ

    ನವದೆಹಲಿ: ಇಲ್ಲಿನ ಬರಾಖಂಬಾ ರಸ್ತೆಯಲ್ಲಿರುವ ಡಿಸಿಎಂ ಕಟ್ಟಡದ (DCM Building) 9ನೇ ಮಹಡಿಯಲ್ಲಿ ಶನಿವಾರ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಅನೇಕ ವಸ್ತುಗಳು ಸುಟ್ಟು ಭಸ್ಮವಾಗಿವೆ. ಸೂಕ್ತ ಸಮಯಕ್ಕೆ ಮಳೆಯೂ ಅಪ್ಪಳಿಸಿದ್ದರಿಂದ ಹಾನಿ ಪ್ರಮಾಣ ಕಡಿಮೆಯಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

    ಶನಿವಾರ ಸಂಜೆ 6:21ರ ಸುಮಾರಿಗೆ ಕಟ್ಟಡಕ್ಕೆ ಬೆಂಕಿ ಬಿದ್ದಿರುವ ಕುರಿತು ಕರೆ ಬಂದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 10 ಅಗ್ನಿಶಾಮಕ ವಾಹನಗಳು (Fire Engines) ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ಈವರೆಗೆ ಯಾವುದೇ ಸಾವು-ನೋವಿನ ವರದಿಯಾಗಿಲ್ಲ. ಇದನ್ನೂ ಓದಿ: ದೆಹಲಿ ಪ್ರವಾಹಕ್ಕೆ ಬಿಜೆಪಿಯೇ ಕಾರಣ – AAP ಆರೋಪ

    ಕನ್ನಾಟ್ ಸ್ಥಳಕ್ಕೆ ಸಮೀಪದಲ್ಲಿರುವ ಬಾರಾಖಂಬಾ ರಸ್ತೆಯಲ್ಲಿರುವ ಡಿಸಿಎಂ ಕಟ್ಟಡದ 9ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭಾರೀ ಪ್ರಮಾಣದಲ್ಲಿ ಧಗಧಗಿಸುತ್ತಿರುವುದನ್ನು ಕಂಡ ಕಟ್ಟಡದ ಮಾಲೀಕರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಗಿಳಿಯುತ್ತಿದ್ದಂತೆ ಮಳೆಯೂ ಸಹ ಅಪ್ಪಳಿಸಿದ್ದು, ಕಾರ್ಯಾಚರಣೆಗೆ ನೆರವಾಗಿದೆ.

    ಈ ಕುರಿತ ವೀಡಿಯೋ ಹಾಗೂ ಚಿತ್ರಗಳು ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಮದುವೆಯಾದ 2 ಗಂಟೆಯಲ್ಲೇ ಪತ್ನಿಗೆ ತಲಾಖ್ ನೀಡಿದ ಪತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]