Tag: Delhi Women

  • ಹಸೆಮಣೆ ಏರಬೇಕಿದ್ದ ಮಹಿಳೆ ರೋಲರ್‌ ಕೋಸ್ಟರ್‌ ಆಡುವಾಗ ಕೆಳಗೆ ಬಿದ್ದು ಸಾವು

    ಹಸೆಮಣೆ ಏರಬೇಕಿದ್ದ ಮಹಿಳೆ ರೋಲರ್‌ ಕೋಸ್ಟರ್‌ ಆಡುವಾಗ ಕೆಳಗೆ ಬಿದ್ದು ಸಾವು

    ನವದೆಹಲಿ: ಹಸೆಮಣೆ ಏರಬೇಕಿದ್ದ ಮಹಿಳೆಯೊಬ್ಬರು ರೋಲರ್‌ ಕೋಸ್ಟರ್‌ ಅವಘಡದಲ್ಲಿ ದಾರುಣ ಅಂತ್ಯ ಕಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

    ದೆಹಲಿಯ ಹೊರವಲಯದಲ್ಲಿರುವ ಜನಪ್ರಿಯ ಮನೋರಂಜನಾ ಉದ್ಯಾನವನದಲ್ಲಿ 24 ವರ್ಷದ ಪ್ರಿಯಾಂಕಾ ಎಂಬಾಕೆ ತಮ್ಮ ಮದುವೆಗೆ ಕೆಲವೇ ತಿಂಗಳುಗಳ ಮೊದಲು ರೋಲರ್ ಕೋಸ್ಟರ್ ಅವಘಡದಲ್ಲಿ ಸಾವನ್ನಪ್ಪಿದ್ದಾರೆ.

    ನಿಶ್ಚಿತಾರ್ಥವಾದ ವರನೊಂದಿಗೆ ನೈಋತ್ಯ ದೆಹಲಿಯ ಕಪಶೇರಾ ಬಳಿಯ ಫನ್ ಎನ್ ಫುಡ್ ವಾಟರ್ ಪಾರ್ಕ್‌ಗೆ ಭೇಟಿ ನೀಡಿದ್ದರು. ರೋಲರ್‌ ಕೋಸ್ಟರ್‌ ಆಡುವಾಗ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

    ಪ್ರಿಯಾಂಕಾ ತನ್ನ ನಿಶ್ಚಿತ ವರ ನಿಖಿಲ್ ಜೊತೆ ವಾಟರ್ & ಅಮ್ಯೂಸ್‌ಮೆಂಟ್ ಪಾರ್ಕ್‌ಗೆ ಹೋಗಿದ್ದರು. ಸ್ವಿಂಗ್ ತರಹದ ರೈಡ್‌ನಲ್ಲಿ ಕುಳಿತಿದ್ದ ಪ್ರಿಯಾಂಕಾ, ಸ್ಟ್ಯಾಂಡ್ ಮುರಿದಾಗ ಎತ್ತರದಿಂದ ಕೆಳಗೆ ಬಿದ್ದರು. ಗಂಭೀರ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

    ಪ್ರಿಯಾಂಕಾ 2023ರ ಜನವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. 2026 ರ ಫೆಬ್ರವರಿಗೆ ಮದುವೆ ನಿಗದಿಯಾಗಿತ್ತು. ಪ್ರಿಯಾಂಕಾ ನೆರೆಯ ನೋಯ್ಡಾದ ಖಾಸಗಿ ಟೆಲಿಕಾಂ ಕಂಪನಿಯಲ್ಲಿ ಸೇಲ್ಸ್‌ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದರು.

  • ಬಿಕಿನಿ ತೊಟ್ಟು ಬಸ್‌ ಹತ್ತಿದ ಮಹಿಳೆ – ಮುಜುಗರದಿಂದ ಸೀಟು ಬಿಟ್ಟು ಹೋದ ಪ್ರಯಾಣಿಕ; ವೀಡಿಯೋ ಫುಲ್‌ ವೈರಲ್‌

    ಬಿಕಿನಿ ತೊಟ್ಟು ಬಸ್‌ ಹತ್ತಿದ ಮಹಿಳೆ – ಮುಜುಗರದಿಂದ ಸೀಟು ಬಿಟ್ಟು ಹೋದ ಪ್ರಯಾಣಿಕ; ವೀಡಿಯೋ ಫುಲ್‌ ವೈರಲ್‌

    ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ (Bikini), ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು (Delhi Women) ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯನ್ನು ವೇಶವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ.

    ಇತ್ತೀಚಿನ ದಿನಗಳಲ್ಲಿ ಸೋಶಿಯಲ್‌ ಮೀಡಿಯಾದಲ್ಲಿ ಟ್ರೆಂಡ್‌ ಸೃಷ್ಟಿಸೋದು ಕೆಲವರಿಗೆ ಅಭ್ಯಾಸ ಆಗಿಬಿಟ್ಟಿದೆ. ಅದರಲ್ಲೂ ದೆಹಲಿಯಂತಹ ಮಹಾನಗರದಲ್ಲಿ ಇದು ಹೆಚ್ಚಾಗಿಯೇ ನಡೆಯುತ್ತಿದೆ. ಈ ಹಿಂದೆ ದೆಹಲಿ ಮೆಟ್ರೋದಲ್ಲಿ ಕಂಡುಬರುತ್ತಿದ್ದ ಅಶ್ಲೀಲ ಕೃತ್ಯಗಳು ಈಗ ಸಾರ್ವಜನಿಕ ಬಸ್‌ನಲ್ಲೂ ಕಂಡುಬಂದಿದೆ. ಇದನ್ನೂ ಓದಿ: Delhi Metro Girl: ನಾನೂ ಸಂಪ್ರದಾಯಸ್ಥ ಹುಡ್ಗಿ, ಏನ್ ಬೇಕಾದ್ರೂ ಧರಿಸ್ತೀನಿ ಎಂದ ಬಿಕಿನಿ ಗರ್ಲ್

    ಹೌದು. ಜನದಟ್ಟಣೆಯ ಬಸ್‌ನಲ್ಲಿ ಬಿಕಿನಿ ತೊಟ್ಟಿರುವ ಮಹಿಳೆಯ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಮೂಡಿಸಿದೆ. 12 ಸೆಕೆಂಡುಗಳ ಈ ವೀಡಿಯೋದಲ್ಲಿ ಮಹಿಳೆ ಬಿಕಿನಿ ತೊಟ್ಟು ಬಸ್‌ ಬಾಗಿಲಿನ ಬಳಿ ನಿಂತಿದ್ದಾಳೆ, ಸಾರ್ವಜನಿಕರು ಆಕೆಯನ್ನ ಕಣ್ಣು ಮಿಟುಕಿಸದೇ ನೋಡುತ್ತಿದ್ದಾರೆ. ಇನ್ನೂ ಕೆಲವರು ಆಕೆ ಬಸ್‌ ಹತ್ತುತ್ತಿದ್ದಂತೆ ಮುಜುಗರದಿಂದ ತಾವಿದ್ದ ಸೀಟನ್ನು ಬಿಟ್ಟು ಮತ್ತೊಂದು ಸೀಟಿನಲ್ಲಿ ಕುಳಿತಿದ್ದಾರೆ. ಆದ್ರೆ ಇದ್ಯಾವುದನ್ನೂ ತಲೆಗೆ ಹಚ್ಚಿಕೊಳ್ಳದ ಮಹಿಳೆ ತನ್ನ ಪಾಡಿಗೆ ಬಸ್‌ ಸೀಟಿನಲ್ಲಿ ಕುಳಿತುಕೊಂಡು ಪ್ರಯಾಣಿಸಿದ್ದಾಳೆ.

    ಬಿಕಿನಿ ತೊಟ್ಟು ಬಸ್‌ ಹತ್ತಿದ ಮಹಿಳೆ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಇದು ಆಕೆಯ ಸ್ವಾತಂತ್ರ್ಯ ಎಂದು ಸಮರ್ಥಿಸಿಕೊಂಡಿದ್ದರೆ, ಮತ್ತೆ ಕೆಲವರು ಇದು ಸ್ವೇಚ್ಚಾಚಾರ, ಅಶ್ಲೀಲಕ್ಕೆ ಪ್ರಶೋದನೆ ನೀಡುವಂತಹ ಕೆಲಸ ಇಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಕೆಲವರು ಬೇಸಿಗೆ ಅಲ್ವಾ ಶೆಕೆ ಇರಬೇಕು ಅಂತ ಕಾಲೆಳೆದಿದ್ದಾರೆ. ಇದನ್ನೂ ಓದಿ: ಬಾಯಿಂದ ಬಾಯಿಗೆ ಎಂಜಲು ನೀರು ಉಗಿದುಕೊಂಡು ಚೆಲ್ಲಾಟ – ಪ್ರೇಮಿಗಳಿಗೆ ಶುರುವಾಯ್ತು ಪೀಕಲಾಟ

    ದೆಹಲಿ ಬಸಸ್‌ ಎನ್ನುವ ಎಕ್ಸ್‌ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದು, ಇದನ್ನು ದೆಹಲಿ ಸಾರಿಗೆ ಅಧಿಕಾರಿಗಳಿಗೂ ಟ್ಯಾಗ್‌ ಮಾಡಿದ್ದಾರೆ. ಸದ್ಯ ಈ ಬಗ್ಗೆ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಹಿಂದೆ ದೆಹಲಿ ಮೆಟ್ರೋದಲ್ಲಿಯೂ ಇಂತಹದ್ದೇ ಘಟನೆ ನಡೆದಿತ್ತು. ಇದನ್ನೂ ಓದಿ: ‌ಫ್ಲೈಟ್‌ನಲ್ಲಿ ಹಾಟ್‌ ಡ್ರೆಸ್‌ ತೊಟ್ಟು ಡಾನ್ಸ್; ಪಡ್ಡೆ ಹುಡುಗರ ಹೃದಯ ಕದ್ದ ಯುವತಿಗೆ ನೆಟ್ಟಿಗರಿಂದ ಕ್ಲಾಸ್‌

  • 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. – ಆಪ್‌ ಸರ್ಕಾರದಿಂದ ಬಂಪರ್‌ ಕೊಡುಗೆ

    18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. – ಆಪ್‌ ಸರ್ಕಾರದಿಂದ ಬಂಪರ್‌ ಕೊಡುಗೆ

    ನವದೆಹಲಿ: ರಾಷ್ಟ್ರ ರಾಜಧಾನಿಯ ಮಹಿಳೆಯರಿಗಾಗಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ (Arvind Kejriwal Government) ನೇತೃತ್ವದ ಸರ್ಕಾರ ಬಂಪರ್ ಯೋಜನೆ ಪ್ರಕಟಿಸಿದೆ.

    ಸೋಮವಾರ ದೆಹಲಿ ವಿಧಾನಸಭೆಯಲ್ಲಿ ರಾಜ್ಯ ಹಣಕಾಸು ಸಚಿವೆ ಅತಿಶಿ 2024-25ನೇ ಸಾಲಿನ‌ ವರ್ಷದ ಬಜೆಟ್‌ ಮಂಡಿಸಿದ್ದಾರೆ. 76,000 ಕೋಟಿ ರೂ. ಗಾತ್ರದ ಬಜೆಟ್‌ ಮಂಡಿಸಿದ್ದು, ತಮ್ಮ ಚೊಚ್ಚಲ ಬಜೆಟ್‌ನಲ್ಲಿ ʻಮುಖ್ಯಮಂತ್ರಿ ಮಹಿಳಾ ಸಮ್ಮಾನ್ʼಯೋಜನೆ (Mukyamnatri Mahila Samman Yojana) ಘೋಷಿಸಿದರು.

    ಈ ಯೋಜನೆ ಅಡಿಯಲ್ಲಿ 18 ವರ್ಷ ಮೇಲ್ಪಟ್ಟ ಮಹಿಳೆಯರು (Delhi Women) ಪ್ರಸಕ್ತ ಆರ್ಥಿಕ ವರ್ಷದಿಂದ ಪ್ರತಿ ತಿಂಗಳು 1,000 ರೂ. ಆದಾಯ ಪಡೆಯಲಿದ್ದಾರೆ. ಮಹಿಳೆಯರನ್ನು ಸಬಲೀಕರಣಗೊಳಿಸುವ ಉದ್ದೇಶವೂ ಇದಾಗಿದೆ ಎಂದು ತಮ್ಮ ಬಜೆಟ್‌ ಭಾಷಣದಲ್ಲಿ ತಿಳಿಸಿದರು. ಇದನ್ನೂ ಓದಿ: ಮಮತಾ ಸವಾಲು ಸ್ವೀಕಾರ – ಸಕ್ರೀಯ ರಾಜಕಾರಣಕ್ಕೆ ಇಳಿದ ಕೋಲ್ಕತ್ತಾ ಹೈಕೋರ್ಟ್‌ ಜಡ್ಜ್‌ ಗಂಗೋಪಾಧ್ಯಾಯ

    ಇಲ್ಲಿಯವರೆಗೆ ದೆಹಲಿಯಲ್ಲಿ ಶ್ರೀಮಂತರ ಕುಟುಂಬದ ಮಕ್ಕಳು ಶ್ರೀಮಂತರಾಗಿ, ಬಡ ಕುಟುಂಬದ ಮಕ್ಕಳು ಬಡವರಾಗಿಯೇ ಉಳಿಯುತ್ತಿದ್ದರು. ಇದು ರಾಮರಾಜ್ಯದ ಪರಿಕಲ್ಪನೆಗೆ ವಿರುದ್ಧವಾಗಿತ್ತು. ಆದ್ರೆ ನಮ್ಮ ಸರ್ಕಾರ ರಾಮರಾಜ್ಯದ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಬಜೆಟ್‌ ಮಂಡಿಸಿದೆ ಎಂದು ಒತ್ತಿ ಹೇಳಿದರು. ಇದನ್ನೂ ಓದಿ: ನೌಕಾಪಡೆಗೆ ಎಂಹೆಚ್ 60ಆರ್ ಸೀಹಾಕ್ ಹೆಲಿಕಾಪ್ಟರ್ ನಿಯೋಜನೆಗೆ ಸಿದ್ಧತೆ – ಭಾರತಕ್ಕೆ ಭೀಮ ಬಲ

    ಕೇಜ್ರಿವಾಲ್ ಸರ್ಕಾರವು 2015 ರಿಂದ 22,711 ಹೊಸ ಶಾಲಾ ಕೊಠಡಿಗಳನ್ನು ನಿರ್ಮಿಸಿದೆ. ಶಿಕ್ಷಣವು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಈ ವರ್ಷ ಶಿಕ್ಷಣಕ್ಕಾಗಿ 16,396 ಕೋಟಿ ರೂ., ದೆಹಲಿಯ ಆರೋಗ್ಯ ಕ್ಷೇತ್ರಕ್ಕೆ 8,685 ರೂ.ಗಳನ್ನು ಮೀಸಲಿಡಲಾಗಿದೆ. ಈ ಅನುದಾನದ ಅಡಿಯಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ 6,215 ರೂ.ಗಳಷ್ಟು ಮೂಲ ಸೌಕರ್ಯಗಳ ಸೌಲಭ್ಯ ಸಿಗಲಿದೆ. ಅಲ್ಲದೇ ಹೊಸ ಆಸ್ಪತ್ರೆಗಳ ನಿರ್ಮಾಣಕ್ಕೆ 400 ಕೋಟಿ ರೂ. ಗಳನ್ನು ಮೀಸಲಿಡಲಾಗಿದೆ ಎಂದು ವಿವರಿಸಿದರು.

  • ಮದುವೆಯಾಗುವಂತೆ ಕೇಳಿದ್ದಕ್ಕೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಗೆಳತಿಯನ್ನ ಕೊಂದೇಬಿಟ್ಟ – ಮುಂದೇನಾಯ್ತು?

    ಮದುವೆಯಾಗುವಂತೆ ಕೇಳಿದ್ದಕ್ಕೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಗೆಳತಿಯನ್ನ ಕೊಂದೇಬಿಟ್ಟ – ಮುಂದೇನಾಯ್ತು?

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ (Live In Relationship) 25ರ ಮಹಿಳೆಯನ್ನ ಕತ್ತು ಹಿಸುಕಿ ಕೊಲೆಗೈದು, ಆಕೆಯ ಮೃತದೇಹವನ್ನು ಮನೆಯಿಂದ 12 ಕಿಮೀ ದೂರದಲ್ಲಿ ಎಸೆದಿರುವ ಘಟನೆ ಈಶಾನ್ಯ ದೆಹಲಿಯಲ್ಲಿ ನಡೆದಿದೆ.

    ಇದೇ ಏಪ್ರಿಲ್‌ 12ರ ತಡರಾತ್ರಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಹಿಳೆಯ (Women) ದೇಹದಲ್ಲಿ ಯಾವುದೇ ಗಾಯದ ಗುರುತುಗಳು ಕಂಡುಬಂದಿರಲಿಲ್ಲ, ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿದುಬಂದಿದೆ ಎಂದು ಉಪಪೊಲೀಸ್‌ ಆಯುಕ್ತ ಜಾರ್ಜ್‌ ಟರ್ಕಿ ತಿಳಿಸಿದ್ದಾರೆ. ಇದನ್ನೂ ಓದಿ: AisaCup: ಕೊನೆಗೂ ಭಾರತದ ಎದುರು ಮಂಡಿಯೂರಿದ ಪಾಕ್‌ – ICCಗೆ ಕಳಿಸಿರೋ ಪ್ರಸ್ತಾವನೆಯಲ್ಲಿ ಏನಿದೆ?

    ಏನಿದು ಘಟನೆ?
    ರೋಹಿತಾ (25) ಎಂಬ ಮಹಿಳೆ, ವಿನೀತ್‌ ಎಂಬವನ ಜೊತೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿ ವಾಸಿಸುತ್ತಿದ್ದಳು. ಕಳೆದ 4 ವರ್ಷಗಳ ಹಿಂದೆ ಇವರಿಬ್ಬರು ಮನೆ ಬಿಟ್ಟು ಓಡಿಹೋಗಿದ್ದರು. ನಂತರ ರೋಹಿತಾ, ವಿನೀತ್‌ಗೆ ಮದುವೆಯಾಗುವಂತೆ (Marriage) ಒತ್ತಾಯಿಸುತ್ತಿದ್ದಳು. ಇದೇ ವಿಷಯಕ್ಕಾಗಿ ಇವರಿಬ್ಬರ ನಡುವೆ ಜಗಳ ನಡೆದಿತ್ತು. ಏಪ್ರಿಲ್‌ 12 ರಂದು ಸಹ ಜಗಳವಾಡಿದ್ದರು, ಈ ವೇಳೆ ಮಾತಿಗೆ ಮಾತು ಬೆಳೆದು, ವಿನೀತ್‌, ರೋಹಿತಾಳನ್ನ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ. ನಂತರ ತನ್ನ ಸ್ನೇಹಿತನ ಸಹಾಯದಿಂದ ಶವ ಎಸೆದು ಬಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಗೋಧ್ರಾ ರೈಲು ಬೋಗಿ ಸುಟ್ಟ ಪ್ರಕರಣ – 8 ದೋಷಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು

    ಮೃತದೇಹ ಪತ್ತೆಯಾದ ನಂತರ ಅರೋಪಿಗಳನ್ನ ಪತ್ತೆಹಚ್ಚಲು 50ಕ್ಕೂ ಹೆಚ್ಚು ಪೊಲೀಸರನ್ನೊಳಗೊಂಡ ವಿಶೇಷ ತಂಡವನ್ನ ರಚಿಸಲಾಗಿತ್ತು. ಶವ ಪತ್ತೆಯಾದ ಸ್ಥಳದಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸಿದಾಗ ಬೈಕ್‌ನಲ್ಲಿ ಇಬ್ಬರು ಪುರುಷರು ಮೃತದೇಹ ಎಸೆದು ಹೋಗಿರುವುದು ಕಂಡುಬಂದಿತ್ತು. ವೀಡಿಯೋದಲ್ಲಿ ಒಬ್ಬ ವ್ಯಕ್ತಿ ತನ್ನ ಭುಜದ ಮೇಲೆ ಮೃತದೇಹ ಹೊತ್ತುಕೊಂಡು ಹೋಗುತ್ತಿದ್ದನು, ಈ ವೇಳೆ ಆರೋಪಿಯ ಸಹೋದರಿ ಪಾರುಲ್‌, ಅವನ ಹಿಂದೆ ಹೋಗುತ್ತಿದ್ದಳು. ಅಲ್ಲದೇ ತನ್ನ ಸ್ಕಾಫ್‌ನಿಂದ ಶವವನ್ನ ಮರೆಮಾಚಲು ಸಹಾಯ ಮಾಡಿದ್ದಳು ಎಂಬುದು ಗೊತ್ತಾಯಿತು. ಆಕೆಯನ್ನು ವಿಚಾರಣೆಗೆ ಒಳಪಡಿಸಿದಾಗ ಸತ್ಯ ಒಪ್ಪಿಕೊಂಡಳು.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶವ ಸಾಗಿಸಿದ್ದ ಬೈಕ್‌ ವಶಪಡಿಸಿಕೊಂಡಿದ್ದಾರೆ. ಜೊತೆಗೆ ಆರೋಪಿಗಳಿಗೆ ಸಹಕರಿಸಿದ್ದ ಎರಡು ಮಕ್ಕಳ ತಾಯಿ ಪಾರುಲ್‌ ಎಂಬಾಕೆಯನ್ನ ಬಂಧಿಸಲಾಗಿದೆ. ವಿನೀತ್‌ ಹಾಗೂ ಸ್ನೇಹಿತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

    ವಿನೀತ್ ಮತ್ತು ಅವನ ತಂದೆ 2019 ರಲ್ಲಿ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಆದ್ರೆ ಆರೋಪಿ ವಿನೀತ್‌ ಕಳೆದ ವರ್ಷ ನವೆಂಬರ್‌ನಿಂದ ಜಾಮೀನಿನ ಮೇಲೆ ಹೊರಗಿದ್ದ.