Tag: delivery boy

  • ಬ್ರೆಜಿಲ್ ಮೂಲದ ಮಾಡೆಲ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಡೆಲಿವರಿ ಬಾಯ್ ಅರೆಸ್ಟ್

    ಬ್ರೆಜಿಲ್ ಮೂಲದ ಮಾಡೆಲ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಡೆಲಿವರಿ ಬಾಯ್ ಅರೆಸ್ಟ್

    ಬೆಂಗಳೂರು: ಬ್ರೆಜಿಲ್ (Brazil) ಮೂಲದ ಮಾಡೆಲ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ ಮೇಲೆ ಡೆಲಿವರಿ ಬಾಯ್‌ನನ್ನು (Delivery Boy) ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    ಬಂಧಿತ ಆರೋಪಿಯನ್ನು ಕುಮಾರ್ ರಾವ್ ಎಂದು ಗುರುತಿಸಲಾಗಿದ್ದು, ಖಾಸಗಿ ಕಾಲೇಜಿನಲ್ಲಿ ಡಿಪ್ಲೋಮಾ ವ್ಯಾಸಂಗ ಮಾಡ್ತಿದ್ದ ಎಂದು ತಿಳಿದುಬಂದಿದೆ.ಇದನ್ನೂ ಓದಿ:ಪಶ್ಚಿಮ ಟರ್ಕಿಯಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ: ಕಟ್ಟಡಗಳು ನೆಲಸಮ

    ಈ ಸಂಬಂಧ ಸಂತ್ರಸ್ತೆ ಆರ್‌ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮನೆಯಲ್ಲಿ ಒಬ್ಬಂಟಿಯಾಗಿರುವುದನ್ನು ಗಮನಿಸಿದ ನಂತರ ಡೆಲಿವರಿ ಬಾಯ್ ತನ್ನೊಂದಿಗೆ ಕೆಟ್ಟದಾಗಿ ವರ್ತಿಸಿ, ಅನುಚಿತವಾಗಿ ಮುಟ್ಟಿದ್ದಾನೆ ಎಂದು ಆರೋಪಿಸಿದ್ದಾರೆ.

    ಅ.17ರಂದು ಬ್ರೆಜಿಲ್ ಮೂಲದ ಮಾಡೆಲ್ ಆ್ಯಪ್ ಒಂದರಲ್ಲಿ ದಿನಸಿ ವಸ್ತುಗಳನ್ನು ಆರ್ಡರ್ ಮಾಡಿದ್ದರು. ಈ ವೇಳೆ ದಿನಸಿ ತಂದ ಡೆಲಿವರಿ ಬಾಯ್ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ, ಮಾಡೆಲ್ ಜೊತೆ ಅನುಚಿತ ವರ್ತನೆ ತೋರಿದ್ದಾನೆ. ಆಕೆಯನ್ನು ಮಾತಿಗೆಳೆದು ಆಕೆಯ ಮೈ ಮುಟ್ಟಲು ಯತ್ನಿಸಿದ್ದಾನೆ. ಇದರಿಂದ ಆತಂಕಕ್ಕೀಡಾದ ಮಾಡೆಲ್ ಕಿರುಚಿಕೊಂಡು ಬಾಗಿಲು ಲಾಕ್ ಮಾಡಿದ್ದಾರೆ. ಕೂಡಲೇ ಡೆಲಿವರಿ ಬಾಯ್ ಅಲ್ಲಿಂದ ಪರಾರಿಯಾಗಿದ್ದಾನೆ. ಬಳಿಕ ಮಾಡೆಲ್ ತಾನು ಕೆಲಸ ಮಾಡುವ ಕಂಪನಿಗೆ ಮಾಹಿತಿ ನೀಡಿದ್ದು, ಅವರ ಸಹಾಯದಿಂದ ಆರ್‌ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತ ಕೆಲಸ ಮಾಡುತ್ತಿದ್ದ ಕಂಪನಿ ಕೂಡ ಆತನನ್ನು ಕೆಲಸದಿಂದ ವಜಾಗೊಳಿಸಿರುವುದಾಗಿ ಹೇಳಿದ್ದು, ತನಿಖೆಗೆ ಸಹಕರಿಸುವುದಾಗಿ ಹೇಳಿದೆ ಎನ್ನಲಾಗಿದೆ.ಇದನ್ನೂ ಓದಿ:ಗೋವಾ-ಮಾಜಾಳಿ ಗಡಿಯಲ್ಲಿ ತಪಾಸಣೆ ವೇಳೆ ಸಿಕ್ಕಿಬಿತ್ತು ಕೋಟಿ ಹಣ; ಇಬ್ಬರು ಪೊಲೀಸರ ವಶಕ್ಕೆ

  • ಅಡ್ರೆಸ್ ತಪ್ಪಾಗಿದ್ದಕ್ಕೆ ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿತ ಕೇಸ್ – ಡೆಲಿವರಿ ಬಾಯ್ ಅರೆಸ್ಟ್

    ಅಡ್ರೆಸ್ ತಪ್ಪಾಗಿದ್ದಕ್ಕೆ ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿತ ಕೇಸ್ – ಡೆಲಿವರಿ ಬಾಯ್ ಅರೆಸ್ಟ್

    ಬೆಂಗಳೂರು: ಅಡ್ರೆಸ್‌ನಲ್ಲಿ ಸಿಂಗಲ್ ಡಿಜಿಟ್ ತಪ್ಪಾಗಿದ್ದಕ್ಕೆ ಗ್ರಾಹಕನ ಮೇಲೆ ಡೆಲಿವರಿ ಬಾಯ್ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಸವೇಶ್ವರ ನಗರ (Basaveshwar Nagar) ಪೊಲೀಸರು ಡೆಲಿವರಿ ಬಾಯ್‌ನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ವಿಷ್ಣುವರ್ಧನ್ ಎಂದು ಗುರುತಿಸಲಾಗಿದ್ದು, ಗ್ರಾಹಕ ಶಶಾಂಕ್ ಅವರ ಮೇಲೆ ಹಲ್ಲೆ ನಡೆಸಿದ್ದ.ಇದನ್ನೂ ಓದಿ: ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್ – ಕ್ಷಮೆಯಾಚಿಸಿದ ಕಂಪನಿ

    ಆರೋಪಿಯನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದ್ದು, ಆರ್ಡರ್ ಡೆಲಿವರಿಗೆ ಹೋದಾಗ ಅದರಲ್ಲಿ ಪಕ್ಕದ ಮನೆ ಅಡ್ರೆಸ್ ಇತ್ತು, ಇದರಿಂದ ವಿಳಾಸ ಯಾಕೆ ತಪ್ಪಾಗಿ ನೀಡಿದ್ದೀರಿ ಎಂದು ಮಹಿಳೆಯನ್ನು ಕೇಳಿದ್ದೆ. ಈ ವೇಳೆ ಶಶಾಂಕ್ ಬಂದು ನನ್ನ ಜೊತೆ ಗಲಾಟೆ ಮಾಡಿದ್ದರು. ಹೀಗಾಗಿ ಕೋಪದಿಂದ ಅವರ ಮೇಲೆ ಹಲ್ಲೆ ಮಾಡಿದೆ ಎಂದು ಡೆಲಿವರಿ ಬಾಯ್ ಹೇಳಿಕೊಂಡಿದ್ದಾನೆ.

    ಪ್ರಕರಣ ಏನು?
    ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಮೇ 21ರಂದು ಈ ಘಟನೆ ನಡೆದಿತ್ತು. ಆ್ಯಪ್‌ವೊಂದರಲ್ಲಿ ಹಲ್ಲೆಗೊಳಗಾದ ಶಶಾಂಕ್ ಪತ್ನಿ ಆರ್ಡರ್ ಮಾಡಿದ್ದರು. ಡೆಲಿವರಿ ಬಾಯ್ ಬಂದಾಗ ಶಶಾಂಕ್ ನಾದಿನಿ ಸಾಮಗ್ರಿ ತೆಗೆದುಕೊಳ್ಳಲು ಹೋಗಿದ್ದರು. ಈ ವೇಳೆ ಅಡ್ರೆಸ್ ವಿಚಾರವಾಗಿ ಬಾಯಿಗೆ ಬಂದಹಾಗೇ ಮಾತಾಡುತ್ತಿದ್ದ. ಇದನ್ನು ಕೇಳಿಸಿಕೊಂಡು ಶಶಾಂಕ್ ಹೊರಗಡೆ ಹೋಗಿ ಆತನೊಂದಿಗೆ ಸ್ವಲ್ಪ ಜೋರಾಗಿ ಮಾತನಾಡಿದ್ದರು. ಆಗ ಒಮ್ಮೆಲೆ ಡೆಲಿವರಿ ಬಾಯ್ ಹಲ್ಲೆ ನಡೆಸಿದ್ದು, ಕಣ್ಣಿಗೆ ಗಾಯವಾಗಿತ್ತು. ಹಲ್ಲೆ ನಡೆಸಿದ ದೃಶ್ಯಗಳು ಅದೇ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಗ್ರಾಹಕ ಶಶಾಂಕ್ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿತ್ತು. ಬಳಿಕ ಡೆಲಿವರಿ ಕಂಪನಿ ಶಶಾಂಕ್ ಅವರಿಗೆ ಕ್ಷಮೆ ಕೇಳಿತ್ತು.

    ಈ ಕುರಿತು ಶಶಾಂಕ್ ಮಾತನಾಡಿ, ಹಲ್ಲೆಯಿಂದಾಗಿ ನನ್ನ ಕಣ್ಣಿನ ಕೆಳಗಿನ ಮೂಳೆ ಕಟ್ ಆಗಿದೆ. ಹೀಗಾಗಿ ಡಾಕ್ಟರ್ ಇನ್ನೊಮ್ಮೆ ಚೆಕ್ ಮಾಡುತ್ತೇನೆ ಎಂದಿದ್ದು, ಒಂದು ವೇಳೆ ಸರಿಹೋಗದಿದ್ದರೆ ಆಪರೇಷನ್ ಮಾಡಬೇಕು ಎಂದು ಹೇಳಿದ್ದರು. ಸಂಬಂಧಪಟ್ಟ ಕಂಪನಿಯವರು, ಪೊಲೀಸರು ನನಗೆ ನ್ಯಾಯಕೊಡಿಸಬೇಕು ಎಂದು ಕೇಳಿಕೊಂಡಿದ್ದರು.ಇದನ್ನೂ ಓದಿ:ಅಡ್ರೆಸ್ ತಪ್ಪಾಗಿದ್ದಕ್ಕೆ ಗಲಾಟೆ – ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್!

  • ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್ – ಕ್ಷಮೆಯಾಚಿಸಿದ ಕಂಪನಿ

    ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್ – ಕ್ಷಮೆಯಾಚಿಸಿದ ಕಂಪನಿ

    ಬೆಂಗಳೂರು: ಅಡ್ರೆಸ್‌ನಲ್ಲಿ ಸಿಂಗಲ್ ಡಿಜಿಟ್ ತಪ್ಪಾಗಿದ್ದಕ್ಕೆ ಗ್ರಾಹಕನ ಮೇಲೆ ಡೆಲಿವರಿ ಬಾಯ್ (Delivery Boy) ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡೆಲಿವರಿ ಕಂಪನಿ ಗ್ರಾಹಕನಿಗೆ ಕ್ಷಮೆಯಾಚಿಸಿದೆ.

    ಡೆಲಿವರಿ ಬಾಯ್ ವಿಷ್ಣುವರ್ಧನ್ ಎಂಬಾತ ಗ್ರಾಹಕ ಶಶಾಂಕ್ ಅವರ ಮೇಲೆ ಹಲ್ಲೆ ನಡೆಸಿದ್ದ. ಬೆಂಗಳೂರಿನ (Bengaluru)ಬಸವೇಶ್ವರ ನಗರದಲ್ಲಿ (Basaveshwar Nagar) ಈ ಘಟನೆ ನಡೆದಿತ್ತು. ಮೇ 21ರಂದು ಆ್ಯಪ್‌ವೊಂದರಲ್ಲಿ ಶಶಾಂಕ್ ಪತ್ನಿ ಆರ್ಡರ್ ಮಾಡಿದ್ದರು. ಇದನ್ನೂ ಓದಿ: ಅಡ್ರೆಸ್ ತಪ್ಪಾಗಿದ್ದಕ್ಕೆ ಗಲಾಟೆ – ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್!

    ಡೆಲಿವರಿ ಬಾಯ್ ಬಂದಾಗ ಶಶಾಂಕ್ ನಾದಿನಿ ಸಾಮಗ್ರಿ ತೆಗೆದುಕೊಳ್ಳಲು ಹೋದಾಗ ಅಡ್ರೆಸ್ ವಿಚಾರವಾಗಿ ಬಾಯಿಗೆ ಬಂದಹಾಗೇ ಮಾತಾಡುತ್ತಿದ್ದ. ಇದನ್ನು ಕೇಳಿಸಿಕೊಂಡು ಶಶಾಂಕ್ ಹೊರಗಡೆ ಹೋಗಿ ಆತನೊಂದಿಗೆ ಸ್ವಲ್ಪ ಜೋರಾಗಿ ಮಾತನಾಡಿದ್ದರು. ಆಗ ಒಮ್ಮೆಲೆ ಡೆಲಿವರಿ ಬಾಯ್ ಹಲ್ಲೆ ನಡೆಸಿದ್ದು, ಕಣ್ಣಿಗೆ ಗಾಯವಾಗಿದೆ. ಹಲ್ಲೆ ನಡೆಸಿದ ದೃಶ್ಯಗಳು ಅದೇ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಸದ್ಯ ಈ ಘಟನೆ ಕುರಿತು ಶಶಾಂಕ್ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ. ಇದೀಗ ಡೆಲಿವರಿ ಕಂಪನಿ ಶಶಾಂಕ್ ಅವರಿಗೆ ಕ್ಷಮೆ ಕೇಳಿದೆ.

    ಈ ಕುರಿತು ಶಶಾಂಕ್ ಮಾತನಾಡಿದ್ದು, ಹಲ್ಲೆಯಿಂದಾಗಿ ನನ್ನ ಕಣ್ಣಿನ ಕೆಳಗಿನ ಮೂಳೆ ಕಟ್ ಆಗಿದೆ. ಹೀಗಾಗಿ ಡಾಕ್ಟರ್ ಇನ್ನೊಮ್ಮೆ ಚೆಕ್ ಮಾಡುತ್ತೇನೆ ಎಂದಿದ್ದು, ಒಂದು ವೇಳೆ ಸರಿಹೋಗದಿದ್ದರೆ ಆಪರೇಷನ್ ಮಾಡಬೇಕು ಎಂದು ಹೇಳಿದ್ದಾರೆ. ಸಂಬಂಧಪಟ್ಟ ಕಂಪನಿಯವರು, ಪೊಲೀಸರು ನನಗೆ ನ್ಯಾಯಕೊಡಿಸಬೇಕು ಎಂದು ಕೇಳಿಕೊಂಡಿದ್ದರು.ಇದನ್ನೂ ಓದಿ: `ಯುವನಿಧಿ’ ಗ್ಯಾರಂಟಿ ಹಣದಿಂದ ಲ್ಯಾಪ್‌ಟಾಪ್‌ ಖರೀದಿಸಿದ ವಿದ್ಯಾರ್ಥಿನಿ ಇಶಾ ಆಸಿಫ್‌

  • ಅಡ್ರೆಸ್ ತಪ್ಪಾಗಿದ್ದಕ್ಕೆ ಗಲಾಟೆ – ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್!

    ಅಡ್ರೆಸ್ ತಪ್ಪಾಗಿದ್ದಕ್ಕೆ ಗಲಾಟೆ – ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್!

    ಬೆಂಗಳೂರು: ಅಡ್ರೆಸ್‌ನಲ್ಲಿ ಸಿಂಗಲ್ ಡಿಜಿಟ್ ತಪ್ಪಾಗಿದ್ದಕ್ಕೆ ಗ್ರಾಹಕನ ಮೇಲೆ ಡೆಲಿವರಿ ಬಾಯ್ (Delivery Boy) ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಬಸವೇಶ್ವರ ನಗರದಲ್ಲಿ (Basaveshwar Nagar) ನಡೆದಿದೆ.

    ಹಲ್ಲೆಗೊಳಗಾದ ಗ್ರಾಹಕ ಶಶಾಂಕ್ ಹಾಗೂ ಡೆಲಿವರಿ ಬಾಯ್‌ನ್ನು ವಿಷ್ಣುವರ್ಧನ್ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಗಡಿಯಲ್ಲಿ ಭಾರತಕ್ಕೆ ನುಸುಳಲು ಯತ್ನ – ಶಂಕಿತ ಪಾಕಿಸ್ತಾನಿ ಹೊಡೆದುರುಳಿಸಿದ ಬಿಎಸ್‌ಎಫ್‌

     ಮೇ 21ರಂದು ಆ್ಯಪ್‌ವೊಂದರಲ್ಲಿ ಶಶಾಂಕ್ ಪತ್ನಿ ಆರ್ಡರ್ ಮಾಡಿದ್ದರು. ಡೆಲಿವರಿ ಬಾಯ್ ಬಂದಾಗ ಶಶಾಂಕ್ ನಾದಿನಿ ಸಾಮಗ್ರಿ ತೆಗೆದುಕೊಳ್ಳಲು ಹೋದಾಗ ಅಡ್ರೆಸ್ ವಿಚಾರವಾಗಿ ಬಾಯಿಗೆ ಬಂದಹಾಗೇ ಮಾತಾಡುತ್ತಿದ್ದ. ಇದನ್ನು ಕೇಳಿಸಿಕೊಂಡು ಶಶಾಂಕ್ ಹೊರಗಡೆ ಹೋಗಿ ಆತನೊಂದಿಗೆ ಸ್ವಲ್ಪ ಜೋರಾಗಿ ಮಾತನಾಡಿದ್ದರು. ಆಗ ಒಮ್ಮೆಲೆ ಡೆಲಿವರಿ ಬಾಯ್ ಹಲ್ಲೆ ನಡೆಸಿದ್ದು, ಕಣ್ಣಿಗೆ ಗಾಯವಾಗಿದೆ. ಹಲ್ಲೆ ನಡೆಸಿದ ದೃಶ್ಯಗಳು ಅದೇ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಸದ್ಯ ಈ ಘಟನೆ ಕುರಿತು ಶಶಾಂಕ್ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ.

    ಈ ಕುರಿತು ಶಶಾಂಕ್ ಮಾತನಾಡಿ, ಹಲ್ಲೆಯಿಂದಾಗಿ ನನ್ನ ಕಣ್ಣಿನ ಕೆಳಗಿನ ಮೂಳೆ ಕಟ್ ಆಗಿದೆ. ಹೀಗಾಗಿ ಡಾಕ್ಟರ್ ಇನ್ನೊಮ್ಮೆ ಚೆಕ್ ಮಾಡುತ್ತೇನೆ ಎಂದಿದ್ದು, ಒಂದು ವೇಳೆ ಸರಿಹೋಗದಿದ್ದರೆ ಆಪರೇಷನ್ ಮಾಡಬೇಕು ಎಂದು ಹೇಳಿದ್ದಾರೆ. ಸಂಬಂಧಪಟ್ಟ ಕಂಪನಿಯವರು, ಪೊಲೀಸರು ನನಗೆ ನ್ಯಾಯಕೊಡಿಸಬೇಕು ಎಂದು ಕೇಳಿಕೊಂಡಿದ್ದಾರೆ.ಇದನ್ನೂ ಓದಿ: Ramanagara | ಸರ್ಕಾರದ ಇ ಸ್ವತ್ತು ಸಾಫ್ಟ್‌ವೇರ್ ಹ್ಯಾಕ್ ಮಾಡಿ ದಾಖಲೆಗಳ ತಿದ್ದುಪಡಿ – ಮೂವರ ಬಂಧನ

     

  • ಕಾರಿಗೆ ಬೈಕ್ ತಾಗಿದ್ದಕ್ಕೆ ಅಪಘಾತವೆಸಗಿ ಡೆಲಿವರಿ ಬಾಯ್ ಹತ್ಯೆ – ದುಷ್ಕರ್ಮಿಗಳು ಅರೆಸ್ಟ್

    ಕಾರಿಗೆ ಬೈಕ್ ತಾಗಿದ್ದಕ್ಕೆ ಅಪಘಾತವೆಸಗಿ ಡೆಲಿವರಿ ಬಾಯ್ ಹತ್ಯೆ – ದುಷ್ಕರ್ಮಿಗಳು ಅರೆಸ್ಟ್

    ಬೆಂಗಳೂರು: ಕಾರಿಗೆ (Car)  ಬೈಕ್ (Bike) ತಾಗಿದ್ದಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿದ್ಯಾರಣ್ಯಪುರದಲ್ಲಿ ನಡೆದಿದೆ.

    ಮಹೇಶ್ (21) ಹತ್ಯೆಯಾದ ಯುವಕ. ಕೊಲೆಯಾದ ಮಹೇಶ್ ಡೆಲಿವರಿ ಬಾಯ್ (Delivery boy) ಆಗಿ ಕೆಲಸ ಮಾಡಿಕೊಂಡಿದ್ದ. ಬುಧವಾರ ರಾತ್ರಿ ಸುಮಾರು 7 ಗಂಟೆ ಸಮಯದಲ್ಲಿ ಜಿಕೆವಿಕೆ ಬಳಿ ಬೈಕ್‍ನಲ್ಲಿ ಸ್ನೇಹಿತರೊಂದಿಗೆ ತೆರಳುತ್ತಿದ್ದಾಗ ಆತನ ಬೈಕ್ ಕಾರೊಂದಕ್ಕೆ ತಾಗಿದೆ. ಈ ವೇಳೆ ಕಾರಿನಲ್ಲಿದ್ದ ಅರವಿಂದ್ ಹಾಗೂ ಕೇಶವ್ ಎಂಬವರು ಗಲಾಟೆ ಮಾಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗಿ ಹತ್ಯೆಗೆ ಕಾರಣವಾಗಿದೆ.

    ಗಲಾಟೆ ಬಳಿಕ ಮಹೆಶ್ ಬೈಕ್‍ನಲ್ಲಿ ಹೋಗುವಾಗ ಕಾರಿನಲ್ಲಿ ಕಿಲೋಮೀಟರ್‌ಗಟ್ಟಲೆ ಚೇಸ್ ಮಾಡಿ ಆರೋಪಿಗಳು ಬೈಕ್‍ಗೆ ಹಿಂದಿನಿಂದ ಅಪಘಾತವೆಸಗಿದ್ದಾರೆ. ಪರಿಣಾಮ ಬೈಕ್‍ನಲ್ಲಿದ್ದ ಮಹೇಶ್ ತಲೆ ರಸ್ತೆಯಲ್ಲಿದ್ದ ಪೋಲ್ ಹಾಗೂ ಗೋಡೆಗೆ ಬಡಿದಿದೆ. ಹೆಲ್ಮೆಟ್ ಹಾಕಿರದ ಕಾರಣ ಮೆದಳು ಹೊರಗಡೆ ಬಂದಿದ್ದು, ಸ್ಥಳದಲ್ಲೇ ಆತ ಮೃತಪಟ್ಟಿದ್ದಾನೆ.

    ಈ ಸಂಬಂಧ ವಿದ್ಯಾರಣ್ಯಪುರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು, ಅರವಿಂದ್ ಹಾಗೂ ಕೇಶವ್‍ನನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

  • ಶೂ ಕದ್ದವನ ಪರ ನಿಂತ ನಟ ಸೋನು ಸೂದ್: ಹೊಸ ಶೂ ನೀಡುವಂತೆ ಮನವಿ

    ಶೂ ಕದ್ದವನ ಪರ ನಿಂತ ನಟ ಸೋನು ಸೂದ್: ಹೊಸ ಶೂ ನೀಡುವಂತೆ ಮನವಿ

    ಸಾಕಷ್ಟು ಜನಪರ ಕೆಲಸಗಳ ಮೂಲಕ ನಿಜವಾದ ಹೀರೋ ಅನಿಸಿಕೊಂಡಿರುವ ಬಾಲಿವುಡ್ ನಟ ಸೋನು ಸೂದ್ (Sonu Sood), ಈ ಬಾರಿ ವಿಲನ್ ರೀತಿಯಲ್ಲಿ ಬಿಂಬಿತರಾಗಿದ್ದಾರೆ. ಶೂ ಕದ್ದವನ ಪರವಾಗಿ ಮಾತನಾಡಿದ್ದಕ್ಕೆ ಸೋನು ಅವರನ್ನು ಅನೇಕರು ಟೀಕಿಸಿದ್ದಾರೆ.

    ಗುರುಗ್ರಾಮ್ ದಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್ ಪಾರ್ಸಲ್ ಕೊಡಲು ಬಂದ ಮನೆಯಿಂದ ಶೂ ಕದ್ದಿದ್ದಾನೆ. ಆ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಡೆಲಿವರಿ ಬಾಯ್ ವಿರುದ್ಧ ಕ್ರಮ ತಗೆದುಕೊಳ್ಳಿ ಎಂದು ಹಲವರು ಕಾಮೆಂಟ್ ಮಾಡಿದ್ದರು. ಈ ವಿಡಿಯೋಗೆ ಸಂಬಂಧಿಸಿದಂತೆ ಸೋನು ಕಾಮೆಂಟ್ ಮಾಡಿದ್ದಾರೆ.

     

    ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಸೋನು, ‘ಆ ಹುಡುಗನ ಮೇಲೆ ಯಾವುದೇ ಕ್ರಮ ಬೇಡ. ಕನಿಕರ ತೋರಿ. ಹಾಗೂ ಅವನಿಗೆ ಹೊಸ ಶೂ ಕೊಡಿಸಿ’ ಎಂದು ಅವರು ಬರೆದುಕೊಂಡಿದ್ದಾರೆ. ಕದ್ದವನ ಪರವಾಗಿ ಸೋನು ನಿಲ್ಲಬಾರದು ಎಂದು ಕೆಲವರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

  • ಐಫೋನ್‌ಗೆ ಕೊಡಲು ಹಣವಿಲ್ಲದೇ ಡೆಲಿವರಿ ಬಾಯ್ ಕತ್ತು ಕೊಯ್ದು ಕೊಲೆ

    ಐಫೋನ್‌ಗೆ ಕೊಡಲು ಹಣವಿಲ್ಲದೇ ಡೆಲಿವರಿ ಬಾಯ್ ಕತ್ತು ಕೊಯ್ದು ಕೊಲೆ

    ಹಾಸನ: ಬುಕ್ ಮಾಡಿದ್ದ ಐಫೋನ್‌ಗೆ (iPhone) ಕೊಡಲು ಹಣವಿಲ್ಲದೆ ಡೆಲಿವೆರಿ ಬಾಯ್‌ನ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಹಾಸನ (Hassan) ಜಿಲ್ಲೆ ಅರಸೀಕೆರೆ ಪಟ್ಟಣದ ಅಂಚೆಕೊಪ್ಪಲಿನಲ್ಲಿ ನಡೆದಿದೆ.

    ಫೆಬ್ರವರಿ 11 ರಂದು ಅಂಚೆಕೊಪ್ಪಲು ಸಮೀಪದ ರೈಲ್ವೆ ಟ್ರ‍್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಅರಸೀಕೆರೆ ನಗರ ಪೊಲೀಸರು (Arsikere City Police) ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಆಸ್ತಿ ವಿಷಯಕ್ಕೆ ರೈತನ ಮೇಲೆ ಮಾರಣಾಂತಿಕ ಹಲ್ಲೆ – ಸ್ವಾಮೀಜಿ, ಬೆಂಬಲಿಗರ ಮೇಲೆ ಎಫ್‌ಐಆರ್

    ಕೊಲೆ ಆರೋಪಿ ಹೇಮಂತ್ ದತ್ತ (20) ಸಿಕ್ಕಿಬಿದ್ದಿದ್ದು, ಹೇಮಂತ್ ನಾಯ್ಕ (23) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಆರೋಪಿ ಹೇಮಂತ್ ದತ್ತ ಕೊಲೆ ಮಾಡಿ ಮೃತದೇಹವನ್ನು ನಾಲ್ಕು ದಿನ ಮನೆಯಲ್ಲೇ ಇಟ್ಟುಕೊಂಡಿದ್ದ. ಸದ್ಯ ಈ ಘಟನೆ ಅರಸೀಕೆರೆ ಪಟ್ಟಣದ ಜನರನ್ನು ಬೆಚ್ಚಿಬೀಳಿಸಿದೆ.

    ಏನಿದು ಘಟನೆ?
    ಮೃತ ಹೇಮಂತ್ ನಾಯ್ಕ ಇ-ಕಾರ್ಟ್ ಎಕ್ಸ್‌ಪ್ರೆಸ್‌ ನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಆರೋಪಿ ಹೇಮಂತ್ ದತ್ತ ಇತ್ತೀಚೆಗೆ ಫ್ಲಿಪ್‌ಕಾರ್ಟ್‌ನಲ್ಲಿ (Flipkart) 46 ಸಾವಿರ ಮೌಲ್ಯದ ಸೆಕೆಂಡ್ ಹ್ಯಾಂಡ್ ಐಫೋನ್ ಬುಕ್ ಮಾಡಿದ್ದ. ಇದರಿಂದ ಹೇಮಂತ್ ನಾಯ್ಕ ಫೆಬ್ರವರಿ 7ರಂದು ಅರಸೀಕೆರೆ ಪಟ್ಟಣದ, ಲಕ್ಷ್ಮೀಪುರ ಬಡಾವಣೆಯಲ್ಲಿರುವ ಹೇಮಂತ್ ದತ್ತ ಮನೆಗೆ ಐಫೋನ್ ಡೆಲಿವರಿ ಕೊಡಲು ಬಂದಿದ್ದ. ಅಲ್ಲಿಗೆ ಬಂದೊಡನೆ ಹೇಮಂತ್ ದತ್ತ ಐಫೋನ್ ಬಾಕ್ಸ್‌ ಅನ್ನು ಪನ್ ಮಾಡುವಂತೆ ಹೇಳಿದ್ದ. ಅದಕ್ಕೆ ನಾಯ್ಕ ಓಪನ್ ಮಾಡಲು ಆಗಲ್ಲ. ಮಾಡಿದ್ರೆ ಹಿಂದಿರುಗಿಸಿಲು ಸಾಧ್ಯವಿಲ್ಲ, 46 ಸಾವಿರ ಹಣ ಕೊಡಿ ಎಂದು ಕೇಳಿದ್ದ.

    ನಂತರ ಹೇಮಂತ್ ದತ್ತ ಇಲ್ಲೇ ಕುಳಿತುಕೊ ಹಣ ಕೊಡುತ್ತೇನೆ ಎಂದು ಹೇಳಿ ಹೋಗಿದ್ದ. ಬಳಿಕ ಕೊಡಲು ಹಣವಿಲ್ಲದೇ ಮನೆಯೊಳಗೆ ಕುಳಿತು ಮೊಬೈಲ್ ನೋಡುತ್ತಿದ್ದ ಹೇಮಂತ್ ನಾಯ್ಕನನ್ನ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದ. ನಾಲ್ಕು ದಿನಗಳಾದರೂ ಮೃತದೇಹವನ್ನು ಮನೆಯಲ್ಲೇ ಇಟ್ಟುಕೊಂಡಿದ್ದ. ಫೆ.11 ರಂದು ಗೋಣಿಚೀಲದಲ್ಲಿ ಹೆಣ ತುಂಬಿಕೊಂಡು ಬೈಕ್‌ನಲ್ಲಿ ತೆಗೆದುಕೊಂಡು ಹೋಗಿ ಅಂಚೆಕೊಪ್ಪಲು ರೈಲ್ವೆ ಬ್ರಿಡ್ಜ್ ಬಳಿ ಪೆಟ್ರೋಲ್, ಸೀಮೆಎಣ್ಣೆ ಸುರಿದು ಮೃತದೇಹ ಸುಟ್ಟು ಹಾಕಿದ್ದ. ಈ ಸಂಬಂಧ ಅರಸೀಕೆರೆ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

    ಇದೇ ವೇಳೆ ಫೆ.7 ರಂದು ಕೆಲಸಕ್ಕೆ ಹೋಗಿದ್ದ ಸಹೋದರ ಮನೆ ಬಾರದ ಹಿನ್ನೆಲೆಯಲ್ಲಿ ಫೆ.8 ರಂದು ಹೇಮಂತ್ ನಾಯ್ಕ ಸಹೋದರ ಮಂಜ ನಾಯ್ಕ ಅರಸೀಕೆರೆ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ತನಿಖೆ ಆರಂಭಿಸಿದ ಪೊಲೀಸರು ಕೊನೆಗೂ ಪ್ರಕರಣ ಭೇದಿಸಿ, ಬೆಚ್ಚಿಬೀಳಿಸುವ ಸಂಗತಿಯನ್ನು ಬಯಲಿಗೆಳೆದಿದ್ದಾರೆ. ಇದನ್ನೂ ಓದಿ: ಕಾರಿನಲ್ಲಿ ಹೋಗುತ್ತಿದ್ದಾಗ ತನ್ನ ಅಜ್ಜಿಗೆ ಗುಂಡು ಹಾರಿಸಿದ 6ರ ಬಾಲಕಿ – ವೃದ್ಧೆ ಸಾವು

    ಆರೋಪಿ ಹೇಮಂತ್ ದತ್ತನನ್ನ ಬಂಧಿಸಿ ವಿಚಾರಣೆ ನಡೆಸಿದಾಗ, ಐಫೋನ್‌ಗೆ ಕೊಡಲು ಹಣವಿಲ್ಲದೇ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆರ್ಡರ್ ತಲುಪಿಸಲು ಹೋದ ಡೆಲಿವರಿ ಬಾಯ್‌ಗೆ ಮಹಿಳೆ ಚಪ್ಪಲಿ ಏಟು!

    ಆರ್ಡರ್ ತಲುಪಿಸಲು ಹೋದ ಡೆಲಿವರಿ ಬಾಯ್‌ಗೆ ಮಹಿಳೆ ಚಪ್ಪಲಿ ಏಟು!

    ಬೆಂಗಳೂರು: ಆರ್ಡರ್ ಮಾಡಿದ ವಸ್ತುಗಳನ್ನು ತಲುಪಿಸಲು ಹೋದಾಗ ತನಗೆ ಚಪ್ಪಲಿಯಿಂದ ಹೊಡೆದು ಅವಮಾನ ಮಾಡಿರುವುದಾಗಿ ಡೆಲಿವರಿ ಬಾಯ್ (Delivery Boy) ಒಬ್ಬರಿಂದ ಗಂಭೀರ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮಹಿಳೆ ವರ್ತನೆ ಖಂಡಿಸಿ ಡೆಲಿವರಿ ಬಾಯ್‌ಗಳು ಪ್ರತಿಭಟನೆ (Protest) ನಡೆಸಿದ್ದಾರೆ.

    ಹೆಬ್ಬುಗೋಡಿ ಪೊಲೀಸ್ ಠಾಣಾ (Hebbagodi Police Station) ವ್ಯಾಪ್ತಿಯ ಪ್ರೆಸ್ಟಿಜ್ ಸನ್‌ರೈಸ್ ಪಾರ್ಕ್ ನಾರ್ವುಡ್ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದೆ. ಆರ್ಡರ್ ಮಾಡಿದ ವಸ್ತುಗಳಿಗೆ ಹಣ ಕೊಡದೇ ಮಹಿಳೆ ಕ್ಯಾತೆ ತೆಗೆದಿದ್ದಾಳೆ. ಇದನ್ನ ಪ್ರಶ್ನೆ ಮಾಡಿದ್ದಕ್ಕೆ ಉತ್ತರ ಭಾರತ ಮೂಲದ ಮಹಿಳೆ (North India Women) ನನ್ನ ಮೇಲೆ ಹಲ್ಲೆ ಮಾಡಿದ್ರು ಎಂದು ಡೆಲಿವರಿ ಬಾಯ್ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ – ವಿಷ ಸೇವಿಸಿ ಟೆಕ್ಕಿ ಗೃಹಿಣಿ ಆತ್ಮಹತ್ಯೆ 

    ಅಪಾರ್ಟ್ಮೆಂಟ್‌ನ ಶ್ರೀನಿ ಎಂಬ ಮಹಿಳೆ ಗೃಹಪಯೋಗಿ ಸಾಮಾಗ್ರಿಗಳನ್ನ ಆರ್ಡರ್ ಮಾಡಿದ್ದರು. ಬುಕ್ ಮಾಡಿದ 8 ಸಾಮಾಗ್ರಿಗಳನ್ನ ಡೆಲಿವರಿ ಬಾಯ್ ತಲುಪಿಸಿದ್ದ. ಆದ್ರೆ ಮಹಿಳೆ ಆತನ ಮುಂದೆಯೇ ವಸ್ತುಗಳನ್ನ ಪರಿಶೀಲನೆ ಮಾಡಿಕೊಳ್ಳದೇ ಮನೆಯೊಳಗೆ ತೆಗೆದುಕೊಂಡು ಹೋಗಿ ಪರಿಶೀಲಿಸಿದ್ದಾಳೆ. ಬಳಿಕ 2 ವಸ್ತು ಕಡಿಮೆಯಾಗಿದೆ ಎಂದು ಖ್ಯಾತೆ ತೆಗೆದಿದ್ದಾಳೆ. ಆದ್ರೆ ಡೆಲಿವರಿ ಬಾಯ್ ವಸ್ತುಗಳನ್ನು ತಲುಪಿಸಿದ್ದೇನೆ ಎಂದು ಹೇಳಿದಾಗ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾಳೆ.

    ಆ ಮಹಿಳೆಯಿಂದ ಕ್ಷಮೆಗೆ ಆಗ್ರಹಿಸಿ ಡೆಲಿವರಿ ಬಾಯ್ ಗಳು ಅಪಾರ್ಟ್ಮೆಂಟ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಹಿಳೆ ಅಪಾರ್ಟ್ಮೆಂಟ್‌ನಿಂದ ಎಸ್ಕೇಪ್ ಆಗಿದ್ದಾಳೆ. ಇದನ್ನೂ ಓದಿ: ಯುವತಿ ಕೈಕೊಟ್ಟಳೆಂದು ಹಾಸನ ಯುವಕ ಆತ್ಮಹತ್ಯೆ – ಅವನು ಸತ್ರೆ ನಾನೂ ಸಾಯೋಕಾಗುತ್ತಾ ಅಂದ್ಳು ಸುಂದರಿ

    ಹಲ್ಲೆಗೊಳಗಾದ ಡೆಲಿವರಿ ಬಾಯ್ ನೀಡಿದ ದೂರು ದಾಖಲಿಸಿಕೊಳ್ಳಲು ಹೆಬ್ಬುಗೋಡಿ ಪೊಲೀಸರು ಹಿಂದೇಟು ಹಾಕಿದ್ದಾರೆ. ಡೆಲಿವರಿ ಬಾಯ್ ಗೆ ಹೆದರಿಸಿ, ಸಂಧಾನ ಮಾಡಿ ಕಳಿಸಿದ್ದಾರೆ ಎನ್ನಲಾಗಿದೆ. ಕನ್ನಡಪರ ಸಂಘಟನೆಗಳು ಠಾಣೆಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿವೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪತ್ನಿ ಮಹಾಲಕ್ಷ್ಮಿಗಾಗಿ ‘ಡೆಲಿವರಿ ಬಾಯ್’ ಆದರಂತೆ ರವೀಂದರ್: ಮನದಾಳ ಬಿಚ್ಚಿಟ್ಟ ಮನ್ಮಥ

    ಪತ್ನಿ ಮಹಾಲಕ್ಷ್ಮಿಗಾಗಿ ‘ಡೆಲಿವರಿ ಬಾಯ್’ ಆದರಂತೆ ರವೀಂದರ್: ಮನದಾಳ ಬಿಚ್ಚಿಟ್ಟ ಮನ್ಮಥ

    ಟಿ ಮಹಾಲಕ್ಷ್ಮಿ (Mahalakshmi) ಅವರನ್ನು ಮದುವೆಯಾದ ನಂತರ ನಿರ್ಮಾಪಕ ರವೀಂದರ್ (Ravinder Chandrasekaran) ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ತಾವು ಅನುಭವಿಸುತ್ತಿರುವ ಒಂದೊಂದೇ ಮಧುರ ಕ್ಷಣಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಮಹಾಲಕ್ಷ್ಮಿ ಅವರನ್ನು ಮದುವೆಯಾದ ನಂತರ ಅವರ ಬದುಕಿನಲ್ಲಿ ಆದ ಬದಲಾವಣೆಗಳನ್ನೂ ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ.

    ಈ ಹಿಂದೆ ಹೆಂಡತಿಯನ್ನು ತಮ್ಮ ಮನೆದೇವರಿಗೆ ಕರೆದುಕೊಂಡು ಹೋಗಿದ್ದರು. ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅಲ್ಲದೇ, ಹೆಂಡತಿಯೊಂದಿಗೆ ರೆಸಾರ್ಟ್ ನಲ್ಲಿ ಕಳೆದ ಕ್ಷಣಗಳನ್ನೂ ಅವರು ಫೋಟೋಗಳ ಸಮೇತ ತಿಳಿಸಿದ್ದರು. ಹೀಗೆ ತಮ್ಮ ಸುಖ ದಾಂಪತ್ಯ (Marriage) ಜೀವನದ ರಸಗಳಿಗೆಯನ್ನು ಗಂಭೀರವಾಗಿ ಒಂದೊಂದು ಸಲ ತಮಾಷೆಯಾಗಿ ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ. ಈ ಬಾರಿ ತಮಾಷೆಯ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಕರಾಳ ಅನುಭವ ಬಿಚ್ಚಿಟ್ಟ ನಟಿ ಶಮಾ ಸಿಕಂದರ್

    ಪತಿ ಮಹಾಲಕ್ಷ್ಮಿ ಈ ರವಿವಾರದಂದು ಶೂಟಿಂಗ್ ಗಾಗಿ ತೆರಳಿದ್ದರಂತೆ. ಅಲ್ಲದೇ, ಏನೆಲ್ಲ ತಮಗೆ ಊಟ ಬೇಕು ಎಂದು ಹೇಳಿಕೊಟ್ಟಿದ್ದರಂತೆ. ಊಟ ಆರ್ಡರ್ ಮಾಡಿ ಕಳುಹಿಸಬಹುದಿತ್ತು. ಆದರೆ, ನಾನೇ ಶೂಟಿಂಗ್ ಸ್ಪಾಟ್ ಗೆ ಅಡುಗೆ ತಗೆದುಕೊಂಡು ಹೋಗಿದ್ದೆ. ಅದೊಂದು ರೀತಿಯಲ್ಲಿ ಅನುಭವ ವಿಭಿನ್ನವಾಗಿತ್ತು. ರವಿವಾರದಂದು ಸಾಮಾನ್ಯವಾಗಿ ನಾನ್ ವೆಜ್ ಇರತ್ತೆ. ನನ್ನ ತಾಯಿ ಹೆಂಡತಿಗಾಗಿ ವೆಜ್ ಮಾಡಿದ್ದಳು ಎಂದು ಬರೆದುಕೊಂಡಿದ್ದಾರೆ.

    ಅಲ್ಲದೇ, ಊಟ ತಗೆದುಕೊಂಡು ಹೋದ ಬಟ್ಟಲು, ಡಬ್ಬಿಗಳನ್ನು ವಾಪಸ್ಸು ತರುವಂತೆ ಹೆಂಡತಿಗೆ ಕೇಳಿಕೊಂಡಿದ್ದಾರೆ. ಅವುಗಳಿಗಾಗಿ ಅತ್ತೆ ಕಾಯುತ್ತಿರುತ್ತಾರೆ. ಯಾವುದೇ ಕಾರಣಕ್ಕೂ ಮಿಸ್ ಮಾಡದೇ ಎಲ್ಲವನ್ನೂ ತಗೆದುಕೊಂಡು ಬಾ ಎಂದು ಸೋಷಿಯಲ್ ಮೀಡಿಯಾ ಮೂಲಕವೇ ಹೆಂಡತಿಗೆ ಹೇಳಿದ್ದಾರೆ. ಆ ಒಂದು ದಿನ ಫುಡ್ ಡೆಲಿವರಿ ಬಾಯ್ (Delivery Boy) ಆದ ಅನುಭವನ್ನು ರವೀಂದರ್ ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಖದೀಮರು – ವೃದ್ಧೆ ಹಣೆಗೆ ಗನ್ ಇಟ್ಟ ದುಷ್ಕರ್ಮಿ

    ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಖದೀಮರು – ವೃದ್ಧೆ ಹಣೆಗೆ ಗನ್ ಇಟ್ಟ ದುಷ್ಕರ್ಮಿ

    ಹಾಸನ: ಹಾಡುಹಗಲೇ ಇಬ್ಬರು ದುಷ್ಕರ್ಮಿಗಳು ಪಿಸ್ತೂಲ್ ಕೈಯಲ್ಲಿ ಹಿಡಿದು ಬಿಜೆಪಿ ನಾಯಕನ ಮನೆಗೆ ನುಗ್ಗಿರುವ ಘಟನೆ ಹಾಸನ ನಗರ ಕೆ.ಆರ್.ಪುರಂನಲ್ಲಿ ನಡೆದಿದೆ.

    ಬಿಜೆಪಿ ನಾಯಕ ಡಿ.ಟಿ.ಪ್ರಕಾಶ್ ಮನೆಗೆ ಸೋಮವಾರ ಮಧ್ಯಾಹ್ನ ಮಾಸ್ಕ್ ಧರಿಸಿ ಬಂದಿರುವ ಇಬ್ಬರು ಕಿಡಿಗೇಡಿಗಳು ಮನೆಯ ಬೆಲ್ ಮಾಡಿದ್ದಾರೆ. ಮನೆಯಲ್ಲಿ ಪ್ರಕಾಶ್ ತಾಯಿ ರಂಗಮ್ಮ ಮಾತ್ರ ಇದ್ದು ಬಾಗಿಲು ತೆರೆದ ವೇಳೆ, ಇದು ಜಯರಾಯಪಟ್ಟಣ ಪ್ರಕಾಶ್ ಅವರ ಮನೆನಾ ಎಂದು ಕೇಳಿದ್ದಾರೆ. ನಾವು ಉದ್ದೂರಿನಿಂದ ಬಂದಿದ್ದೇವೆ. ಅವರಿಗೆ ಒಂದು ಪಾರ್ಸೆಲ್ ಎಂದು ರಂಗಮ್ಮ ಅವರಿಗೆ ಕವರ್ ಒಂದನ್ನು ನೀಡಿದ್ದಾರೆ. ಇದನ್ನೂ ಓದಿ: ಪ್ಲೀಸ್ ಬ್ರೇಕಪ್ ಮಾಡಬೇಡ, ನನ್ನನ್ನು ಬಿಡಬೇಡ – ನಡು ರಸ್ತೆಯಲ್ಲಿ ಗೆಳೆಯನ ಗೋಳಾಟ

    ರಂಗಮ್ಮ ಕವರ್ ಪಡೆದು ಮನೆಯೊಳಗೆ ಇಟ್ಟು ತಿರುಗುತ್ತಿದ್ದಂತೆ ಓರ್ವ ವೃದ್ದೆಯ ಕುತ್ತಿಗೆಗೆ ಕೈಹಾಕಿ ಹಣೆಗೆ ಪಿಸ್ತೂಲ್ ಇಟ್ಟಿದ್ದಾನೆ. ಇದರಿಂದ ಗಾಬರಿಗೊಂಡ ರಂಗಮ್ಮ ಜೋರಾಗಿ ಕಿರುಚಾಡಿದ್ದು, ಕೂಡಲೇ ಕಾಂಪೌಂಡ್ ಹಾರಿ ಇಬ್ಬರು ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಓರ್ವ ಚಪ್ಪಲಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. ನಂತರ ರಂಗಮ್ಮ ಕಿರುಚಾಟ ಕೇಳಿ ನೆರೆಹೊರೆಯವರು ಓಡಿ ಬಂದಿದ್ದಾರೆ. ಈ ವೇಳೆ ಡಿ.ಟಿ.ಪ್ರಕಾಶ್ ಪತ್ನಿ ಸೌಮ್ಯ ಮಕ್ಕಳಿಗೆ ಊಟ ಕೊಡಲು ಶಾಲೆಗೆ ಹೋಗಿದ್ದರು. ಆದರೆ ನಂತರ ಮನೆಗೆ ಬಂದು ಕವರ್ ತೆಗೆದು ನೋಡಿದಾಗ ಅದರಲ್ಲಿ ಇಟ್ಟಿಗೆ ಇರುವುದು ಗೊತ್ತಾಗಿದೆ. ಹಾಸನ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಹಾಡಹಗಲೇ ಡೆಲಿವರಿ ಬಾಯ್‍ಗಳ ರೂಪದಲ್ಲಿ ಗನ್ ಹಿಡಿದು ಮನೆಗೆ ನುಗ್ಗಿರುವುದು ಹಾಸನ ನಗರದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಡಿ.ಟಿ.ಪ್ರಕಾಶ್ ಜೆಡಿಎಸ್‍ನಿಂದ ನಾಲ್ಕು ಬಾರಿ ಗ್ರಾ.ಪಂ. ಸದಸ್ಯರಾಗಿ, ಎರಡು ಬಾರಿ ಕಂದಲಿ ಗ್ರಾ.ಪಂ. ಅಧ್ಯಕ್ಷರಾಗಿದ್ದರು. ನಂತರ ಬಿಜೆಪಿ ಪಕ್ಷಕ್ಕೆ ಸೇರಿ ಜಿ.ಪಂ. ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ರಾಜಕೀಯದ ಜೊತೆ ರಿಯಲ್ ಎಸ್ಟೇಟ್ ಕೂಡ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮುಸ್ಲಿಮರನ್ನು ಕೇಳಲು ತೊಡೆ ನಡುಗುತ್ತಾ: ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಪ್ರಶ್ನೆ

    Live Tv
    [brid partner=56869869 player=32851 video=960834 autoplay=true]