Tag: delivery

  • ವೈದ್ಯರಿಲ್ಲದೆ ಹೆರಿಗೆ ಮಾಡಿಸಿದ ನರ್ಸ್- ನವಜಾತ ಶಿಶು ಸಾವು

    ವೈದ್ಯರಿಲ್ಲದೆ ಹೆರಿಗೆ ಮಾಡಿಸಿದ ನರ್ಸ್- ನವಜಾತ ಶಿಶು ಸಾವು

    ಬೆಂಗಳೂರು: ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆಯೇ ನರ್ಸ್ ತಾನೇ ಹೆರಿಗೆ ಮಾಡಿಸಿದ ಹಿನ್ನೆಲೆಯಲ್ಲಿ ನವಜಾತ ಶಿಶು ಸಾವನ್ನಪ್ಪಿದ ಘಟನೆ ಆನೇಕಲ್ ತಾಲೂಕಿನ ಹಾರಗದ್ದೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

    ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಸಾವನ್ನಪ್ಪಿದೆ ಎಂದು ಪೋಷಕರು ಕಣ್ಣೀರಿಡುತ್ತಿದ್ದಾರೆ. ದಾವಣಗೆರೆಯಿಂದ ಬಂದು ವಡ್ಡರಪಾಳ್ಯದಲ್ಲಿ ನೆಲೆಸಿದ್ದ ದಂಪತಿ ಶಶಿಧರ್ ಮತ್ತು ರಂಜಿತಾ ಅವರ ಮಗು ಜೀವಕಳೆದುಕೊಂಡಿದೆ.

    ಭಾನುವಾರ ಹೆರಿಗೆ ನೋವು ಕಾಣಿಸಿಕೊಂಡು ರಂಜಿತಾರನ್ನು ಪತಿ ಶಶಿಧರ್ ಹಾರಗದ್ದೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿದ್ದರು. ಆದರೆ ಈ ವೇಳೆ ಆಸ್ಪತ್ರೆಯಲ್ಲಿ ವೈದ್ಯರು ಇರದ ಕಾರಣ ನರ್ಸ್ ಹೆರಿಗೆ ಮಾಡಿಸಿದ್ದಾರೆ. ಈ ವೇಳೆ ಮಗುವಿನ ಉಸಿರಾಟಕ್ಕೆ ತೊಂದರೆ ಆಗಿದೆ. ಕೂಡಲೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ನರ್ಸ್ ದಂಪತಿಗೆ ತಿಳಿಸಿದ್ದಾರೆ.

    ಆದರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮಗು ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಹೆರಿಗೆ ಮಾಡಿಸಿದ ಸರ್ಕಾರಿ ಆಸ್ಪತ್ರೆ ನರ್ಸ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಮಗುವಿನ ಕುಟುಂಬಸ್ಥರು ವೈದ್ಯರು ಹಾಗೂ ನರ್ಸ್ ನಿರ್ಲಕ್ಷ್ಯ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ರೈಲಿನಲ್ಲಿಯೇ ಹೆರಿಗೆ ಮಾಡಿಸಿದ ಟಿಟಿಇ- ಬೇಷ್ ಎಂದ ರೈಲ್ವೇ ಇಲಾಖೆ

    ರೈಲಿನಲ್ಲಿಯೇ ಹೆರಿಗೆ ಮಾಡಿಸಿದ ಟಿಟಿಇ- ಬೇಷ್ ಎಂದ ರೈಲ್ವೇ ಇಲಾಖೆ

    ನವದೆಹಲಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ ಟಿಟಿಇ (Travelling Ticket Examiner) ಯೊಬ್ಬರು ಹೆರಿಗೆ ಮಾಡಿಸಿ ಮಾನವೀಯತೆ ಮೆರೆದು ಬೇಷ್ ಎನಿಸಿಕೊಂಡಿದ್ದಾರೆ.

    ಹೌದು. ಬಸ್ ಹಾಗೂ ರೈಲ್ವೇ ನಿಲ್ದಾಣದಲ್ಲಿ ಹೆರಿಗೆಯಾಗಿರುವ ಬಗ್ಗೆ ಹಲವು ಸುದ್ದಿಗಳನ್ನು ನೋಡಿರಬಹುದು. ದೆಹಲಿ ವಿಭಾಗದ ರೈಲ್ವೇ ಟಿಟಿಇ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಎಚ್.ಎಸ್. ರಾಣಾ ಅವರು ಕಾರ್ಯಕ್ಕೆ ರೈಲ್ವೇ ಇಲಾಖೆ ಬೇಷ್ ಎಂದಿದೆ. ರೈಲಿನಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಹೆರಿಗೆ ನೋವು ಕಾಣಿಕೊಂಡಿತ್ತು. ಈ ವೇಳೆ ರೈಲಿನಲ್ಲಿ ವೈದ್ಯರು ಇಲ್ಲದ ಕಾರಣ ರಾಣಾ ಅವರೇ ಇತರೇ ಪ್ರಯಾಣಿಕರ ಸಹಾಯ ಪಡೆದು ಹೆರಿಗೆ ಮಾಡಿಸಿದ್ದಾರೆ.

    ಟಿಟಿಇ ಈ ಕೆಲಸವನ್ನು ಭಾರತೀಯ ರೈಲ್ವೆ ಇಲಾಖೆ ಮೆಚ್ಚಿದೆ. ರಾಣಾ ಅವರ ಮಾನವೀಯ ಮತ್ತು ಉದಾತ್ತ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ರೈಲ್ವೇ ಸಚಿವಾಲಯವು ಟ್ವೀಟ್ ಮಾಡಿ ಸಿಬ್ಬಂದಿ ಕೆಲಸವನ್ನು ಹೆಮ್ಮೆಯಿಂದ ಹೇಳಿಕೊಂಡಿದೆ.

    ಟ್ವೀಟ್‍ನಲ್ಲಿ ಏನಿದೆ?
    ಭಾರತೀಯ ರೈಲ್ವೇ ಇಲಾಖೆ ಪ್ರಯಾಣಿಕರ ಮೊಗದಲ್ಲಿ ನಗು ಮೂಡಿಸಿದೆ. ದೆಹಲಿ ವಿಭಾಗದ ಟಿಟಿಇ ಎಚ್.ಎಸ್ ರಾಣಾ ಅವರು ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದ ಗರ್ಭಿಣಿಗೆ ರಾತ್ರಿ ಇತರೆ ಪ್ರಯಾಣಿಕರ ಸಹಾಯ ಪಡೆದು ಹೆರಿಗೆ ಮಾಡಿಸಿದ್ದಾರೆ. ರೈಲಿನಲ್ಲಿ ವೈದ್ಯರು ಇರದ ಕಾರಣ ಅವರೇ ಹೆರಗೆ ಮಾಡಿಸಿ ಮಾನವೀಯತೆ ಮೆರೆದಿದ್ದಾರೆ. ಸಿಬ್ಬಂದಿಯ ಈ ಕಾರ್ಯಕ್ಕೆ ನಾವು ಹೆಮ್ಮೆ ಪಡುತ್ತೇವೆ ಎಂದು ಬರೆದು ಟ್ವೀಟ್ ಮಾಡಿದೆ.

  • ಹೆರಿಗೆ ನೋವು ಕಡಿಮೆಯಾಗಲು ಆಸ್ಪತ್ರೆಯಲ್ಲಿ ಗಾಯತ್ರಿ ಮಂತ್ರ ಪ್ಲೇ!

    ಹೆರಿಗೆ ನೋವು ಕಡಿಮೆಯಾಗಲು ಆಸ್ಪತ್ರೆಯಲ್ಲಿ ಗಾಯತ್ರಿ ಮಂತ್ರ ಪ್ಲೇ!

    – ಚರ್ಚೆಗೆ ಗ್ರಾಸವಾದ ರಾಜಸ್ಥಾನ ಜಿಲ್ಲಾಸ್ಪತ್ರೆ ನಡೆ
    – ಗಾಯತ್ರಿ ಮಂತ್ರವನ್ನು ನಿಲ್ಲಿಸುವಂತೆ ಮುಸ್ಲಿಮರಿಂದ ಆಗ್ರಹ

    ಜೈಪುರ: ಹೆರಿಗೆ ನೋವು ಕಡಿಮೆಯಾಗಲು ರಾಜಸ್ಥಾನದ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯತ್ರಿ ಮಂತ್ರದ ಆಡಿಯೋ ಪ್ಲೇ ಮಾಡುತ್ತಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

    ಮಹಿಳೆಯು ಗಾಯತ್ರಿ ಮಂತ್ರವನ್ನು ಆಲಿಸಿದರೆ ಆಕೆಯ ಹೆರಿಗೆ ನೋವು ಕಡಿಮೆಯಾಗುತ್ತದೆ ಎಂಬ ನಂಬಿಕೆಯನ್ನು ಆಸ್ಪತ್ರೆಯ ಸಿಬ್ಬಂದಿ ಇಟ್ಟುಕೊಂಡಿದ್ದಾರೆ. ಆದ್ದರಿಂದ ಸಿರೋಹಿ ಜಿಲ್ಲಾಸ್ಪತ್ರೆಯ ಹೆರಿಗೆ ಕೋಣೆಯಲ್ಲಿ ಕಳೆದ ಒಂದು ವರ್ಷದಿಂದಲೂ ಗಾಯತ್ರಿ ಮಂತ್ರವನ್ನು ಪ್ಲೇ ಮಾಡಲಾಗುತ್ತಿದೆ.

    ಸರ್ಕಾರಿ ಆಸ್ಪತ್ರೆಗೆ ಕೇವಲ ಹಿಂದೂ ರೋಗಿಗಳು ಮಾತ್ರ ಬರುವುದಿಲ್ಲ. ಮುಸ್ಲಿಂ ಹಾಗೂ ಇತರೇ ಧರ್ಮದವರು ಕೂಡ ಬರುತ್ತಾರೆ. ಹೀಗೆ ಗಾಯತ್ರಿ ಮಂತ್ರವನ್ನು ಮಾತ್ರ ಪ್ಲೇ ಮಾಡುವುದು ಸರಿಯಲ್ಲ ಎಂದು ಆಕ್ಷೇಪ ಕೇಳಿಬಂದಿದೆ.

    ಮುಸ್ಲಿಂ ಸಮುದಾಯದ ಕೆಲವು ಮಂದಿ ಆಸ್ಪತ್ರೆಯ ನಿರ್ಧಾರದ ವಿರುದ್ಧ ಪ್ರತಿಭಟನೆಗೆ ನಿಂತಿದ್ದಾರೆ. ಇಸ್ಲಾಂ ಧರ್ಮದ ಪ್ರಕಾರ, ಹುಟ್ಟುವ ಮಗುವಿನ ಕಿವಿಗೆ ಮೊದಲು ಆಜಾನ್ ಎಂಬ ಪದ ಬೀಳಬೇಕು ಎಂದು ಪ್ರತಿಭಟನಾಕಾರ ಆಶ್ಫಾಕ್ ಕಾಯಂಖಾನಿ ಹೇಳಿದ್ದಾರೆ.

    ಜಿಲ್ಲಾಸ್ಪತ್ರೆಗಳ ಹೆರಿಗೆ ಕೊಠಡಿಗಳಲ್ಲಿ ನಾವು ಗಾಯತ್ರಿ ಮಂತ್ರವನ್ನು ಪ್ಲೇ ಮಾಡುತ್ತೇವೆ. ಜಿಲ್ಲೆಯ ಇತರ 20 ಆರೋಗ್ಯ ಕೇಂದ್ರಗಳ ಹೆರಿಗೆ ಕೊಠಡಿಗಳಿಗೂ ಈ ವ್ಯವಸ್ಥೆಯನ್ನು ವಿಸ್ತರಿಸುತ್ತೇವೆ ಎಂದು ಸವಾಯ್ ಮಾಧೋಪುರದ ಮುಖ್ಯ ವೈದ್ಯಾಧಿಕಾರಿ ಡಾ.ತೇಜರಾಮ್ ಮೀನಾ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

    ಜಿಲ್ಲಾ ಶಿಶು ಆರೋಗ್ಯಾಧಿಕಾರಿ ಡಾ.ಅಶೋಕ್ ಆದಿತ್ಯ ಅವರು ಉದಯಪುರದ ಸರ್ಕಾರಿ ಆಸ್ಪತ್ರೆಯಲ್ಲಿಯೂ ಈ ವ್ಯವಸ್ಥೆ ತರಲು ಸಿದ್ಧತೆಗಳು ನಡೆದಿದೆ ಎಂದು ತಿಳಿಸಿದ್ದಾರೆ.

    ಜಿಲ್ಲಾ ವೈದ್ಯಾಧಿಕಾರಿಗಳಿಗೆ ಆಸ್ಪತ್ರೆಗಳಲ್ಲಿ ಈ ರೀತಿ ಹಾಡನ್ನು ಪ್ಲೇ ಮಾಡಿ ಎಂಬ ಯಾವುದೇ ಸೂಚನೆ ನೀಡಿಲ್ಲ ಎಂದು ರಾಜ್ಯದ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ. ಆದರೆ ಹೆರಿಗೆ ಕೊಠಡಿಗಳಲ್ಲಿ ನೋವು ಕಡಿಮೆ ಮಾಡುವುದಕ್ಕೆ ಪೂರಕವಾದ ಹಾಡನ್ನು ಅಥವಾ ಆಡಿಯೋವನ್ನು ಮಾತ್ರವೇ ಪ್ಲೇ ಮಾಡುವಂತೆ ರಾಜ್ಯ ಸರ್ಕಾರ ಸೂಚಿಸಿರುವುದಾಗಿ ಆರೋಗ್ಯ ಇಲಾಖೆ ವಿಶೇಷ ಕಾರ್ಯದರ್ಶಿ ಡಾ.ಸಮಿತ್ ಶರ್ಮಾ ಹೇಳಿದ್ದಾರೆ.

    ಈ ನಿಟ್ಟಿನಲ್ಲಿ ಕೆಲವೊಂದು ಆಡಿಯೋಗಳನ್ನು ನಾವೇ ಕಳುಹಿಸಿದ್ದೇವೆ. ಅದನ್ನು ಬಳಸುವುದು ಅಥವಾ ಬಿಡುವುದು ಆಸ್ಪತ್ರೆ ಸಿಬ್ಬಂದಿಗೆ ಬಿಟ್ಟ ವಿಷಯ. ಆದರೆ, ಗಾಯತ್ರಿ ಮಂತ್ರ ಪ್ಲೇ ಮಾಡಿರುವ ವಿಷಯದ ಕುರಿತು ಪರಿಶೀಲನೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

  • ಮತದಾನ ಮಾಡಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆಯರು!

    ಮತದಾನ ಮಾಡಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆಯರು!

    ಮಂಗಳೂರು/ಮಂಡ್ಯ: ಮದುವೆ ಮಂಟಪಕ್ಕೆ ತೆರಳುವ ಮೊದಲೇ ವಧುಗಳು ಮತದಾನ ಮಾಡಿದ್ದರೆ, ಇತ್ತ ಮತದಾನ ಮಾಡಿದ ಬಳಿಕ ಇಬ್ಬರು ಮಹಿಳೆಯರು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.

    ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಮರಳಿ ಗ್ರಾಮದಲ್ಲಿ ನಡೆದಿದೆ. ಪುತ್ತೂರಿನ ಉರ್ಲಾಂಡಿ ನಿವಾಸಿ ಮೀನಾಕ್ಷಿ ಹಾಗೂ ಚಿಕ್ಕಮರಳಿ ಗ್ರಾಮದ ಮಂಗಳ ನವೀನ್ ಮತ ಚಲಾಯಿಸಿ ನಂತರ ಹೆರಿಗೆಗಾಗಿ ಆಸ್ಪತ್ರೆಗೆ ತೆರಳಿದ್ದಾರೆ.

    ಮೀನಾಕ್ಷಿಯವರು ಪುತ್ತೂರು ನಗರ ಕೋರ್ಟ್ ಬೂತ್ ನಲ್ಲಿ ಮತ ಚಲಾಯಿಸಿದ್ದಾರೆ. ಮತದಾನ ಬಳಿಕ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಇಬ್ಬರೂ ಆರೋಗ್ಯವಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

    ಸದೃಢ ಭಾರತಕ್ಕಾಗಿ ನವ-ವಧುಗಳು ಸರತಿ ಸಾಲಿನಲ್ಲಿಯೇ ನಿಂತು ಬೆಳಗ್ಗೆ ತನ್ನ ಹಕ್ಕು ಚಲಾಯಿಸಿದ್ದರು. ಬಂಟ್ವಾಳ ವಿಧಾನಸಭಾ ಕ್ಷೇತ್ರ ವಿಟ್ಲದ ಕುಡ್ಪಲ್ತಡ್ಕದಲ್ಲಿ ವಧು ಶ್ರುತಿ ಶೆಟ್ಟಿ ತನ್ನ ಮದುವೆಗೂ ಮುಂಚೆಯೇ ಮತದಾನ ಮಾಡಿದ್ದಾರೆ. ಇತ್ತ ಬೆಳ್ತಂಗಡಿಯಲ್ಲೂ ಮೂವರು ವಧುಗಳು ಒಂದೇ ಮತಗಟ್ಟೆಯಲ್ಲಿ ತಮ್ಮ ಮತವನ್ನು ಚಲಾಯಿಸಿದ್ದಾರೆ. ತಾಲೂಕಿನ ತಣ್ಣೀರುಪಂಥ ಬೂತ್ ನಲ್ಲಿ ಮದುವೆ ಶೃಂಗಾರದಲ್ಲೇ ಬಂದ ಅಕ್ಷತಾ, ಅಶ್ವಿನಿ ಹಾಗೂ ಹೇಮಲತಾ ಮದುವೆ ಮಂಟಪಕ್ಕೆ ತೆರಳುವ ಮುನ್ನವೇ ತಮ್ಮ ಅಮೂಲ್ಯ ಮತವನ್ನು ಹಾಕಿದ್ದಾರೆ.

  • ಋತುಮತಿ, ಹೆರಿಗೆಯಾದ್ರೆ 5 ತಿಂಗ್ಳು ಊರಿಂದ್ಲೇ ಹೊರಗಿರ್ಬೇಕು- ಕೊಪ್ಪಳದ ಸಜ್ಜಿಹೊಲದಲ್ಲಿ ಹೆಣ್ಮಕ್ಕಳ ನರಕಯಾತನೆ

    ಋತುಮತಿ, ಹೆರಿಗೆಯಾದ್ರೆ 5 ತಿಂಗ್ಳು ಊರಿಂದ್ಲೇ ಹೊರಗಿರ್ಬೇಕು- ಕೊಪ್ಪಳದ ಸಜ್ಜಿಹೊಲದಲ್ಲಿ ಹೆಣ್ಮಕ್ಕಳ ನರಕಯಾತನೆ

    ಕೊಪ್ಪಳ: ಹೈದ್ರಾಬಾದ್ ಕರ್ನಾಟಕದ ಅತ್ಯಂತ ಹಿಂದುಳಿದ ಜಿಲ್ಲೆ ಕೊಪ್ಪಳದಲ್ಲಿ ಇನ್ನೂ ಅಸ್ಪೃಶ್ಯತೆ ಎಂಬ ಪಿಡುಗು ಜೀವಂತವಾಗಿದೆ. ಅಸ್ಪೃಶ್ಯತೆ ಜೊತೆಗೆ ಕೊಪ್ಪಳ ನಗರದಲ್ಲಿ ಮತ್ತೊಂದು ಸಾಮಾಜಿಕ ಪಿಡುಗು ಬಯಲಿಗೆ ಬಂದಿದೆ. ಜಿಲ್ಲಾಡಳಿತದಿಂದ ಕೂಗಳತೆ ದೂರದಲ್ಲಿರೋ ಪ್ರದೇಶದಲ್ಲಿ ಅನಿಷ್ಠ ಪದ್ಧತಿಯೊಂದು ಜಾರಿಯಲ್ಲಿದ್ದು, ಯಾವೊಬ್ಬ ಅಧಿಕಾರಿಯೂ ಇದರ ಬಗ್ಗೆ ಗಮನ ಕೊಟ್ಟಿಲ್ಲ.

    ಪ್ರಪಂಚಕ್ಕೆ ಪ್ರಪಂಚವೇ ಬದಲಾವಣೆಯ ಗಾಳಿಯಲ್ಲಿ ತೇಲುತ್ತಿದೆ. ಆದರೆ ನಮಗೆ ಮಾತ್ರ ಇನ್ನೂ ದಶಕಗಳ ಹಿಂದಿನ ಪದ್ಧತಿಯಲ್ಲಿ ಕೊರಗುವಂತಿದೆ. ಹೌದು. ಕೊಪ್ಪಳ ನಗರದಿಂದ ಸುಮಾರು 3-4 ಕಿಲೋ ಮೀಟರ್ ದೂರದಲ್ಲಿರುವ ಸಜ್ಜಿಹೊಲ ಗ್ರಾಮದಲ್ಲಿ ಹೆಣ್ಮಕ್ಕಳು ತಿಂಗಳ ಋತುಮತಿಯಾದ್ರೆ ಅಥವಾ ಮಗುವಿಗೆ ಜನ್ಮ ನೀಡಿದ್ರೆ 5 ತಿಂಗಳ ಕಾಲ ಬಾಣಂತಿಯನ್ನು ಮುಟ್ಟಿಸಿಕೊಳ್ಳದೆ ಊರ ಹೊರಗಡೆ ಇಡ್ತಾರೆ ಎಂದು ಸ್ಥಳೀಯರಾದ ಗೌರಮ್ಮ ಹೇಳಿದ್ದಾರೆ.

    ಈ ಸಜ್ಜಿಹೊಲ ಗ್ರಾಮದಲ್ಲಿ ಸುಮಾರು 30 ಅಡವಿ ಬೆಂಚರ ಕುಟುಂಬ ವಾಸ ಮಾಡುತ್ತಿದೆ. ಆಸ್ಪತ್ರೆ ಮತ್ತು ಹೊರಜಗತ್ತಿನ ಪರಿಚಯವೇ ಇಲ್ಲದೆ ಹೆಣ್ಮಕ್ಕಳು ಗರ್ಭಿಣಿಯಾದರೆ ತಾವೇ ಹೆರಿಗೆಯನ್ನು ಮಾಡಿಕೊಳ್ಳಬೇಕಾದ ದುಸ್ಥಿತಿ. 5 ತಿಂಗಳು ಮಗುವಿನ ನಿತ್ಯಕರ್ಮ, ಲಾಲನೆಯನ್ನು ನೋಡಿಕೊಳ್ಳಬೇಕು. ಇವರಿಗೆ ಯಾರಾದರೂ ನೆರವಾದರೆ ಅಂತಹವರ ತಲೆಕೂದಲನ್ನು ತೆಗೆಯುವ ಪದ್ಧತಿಯೂ ರೂಢಿಯಲ್ಲಿಟ್ಟುಕೊಂಡಿದ್ದಾರೆ. ಮೂಲ ಸೌಕರ್ಯ ಇಲ್ಲದ ಸಣ್ಣ ಪುಟ್ಟ ಗುಡಿಸಲಿನಲ್ಲಿ ದಿನದೂಡುವಂತಹ ಸ್ಥಿತಿ ಇಲ್ಲಿನ ಹೆಣ್ಮಕ್ಕಳದ್ದಾಗಿದೆ ಎಂಂದು ನಗರಸಭೆ ಸದಸ್ಯ ರಮೇಶ್ ಹೇಳುತ್ತಾರೆ.

    ಒಟ್ಟಾರೆ ಓರ್ವ ಪುರುಷನ ಸರ್ವಸಮನಾಗಿ ನಿಂತಿರುವ ಮಹಿಳೆಗೆ ವಿಶ್ವವೇ ಗೌರವ ನೀಡುತ್ತಿದೆ. ಆದ್ರೆ ಈ ಗ್ರಾಮದಲ್ಲಿ ಮಾತ್ರ ಮಹಿಳೆ ತಾನು ಹೆಣ್ಣಾಗಿ ಹುಟ್ಟಿದ್ದೇ ತಪ್ಪು ಎಂದು ಕೊರಗುತ್ತಿದ್ದಾರೆ. ತಮಗೆ ಹೆಣ್ತನ ಕೊಟ್ಟ ದೇವರಿಗೆ ಶಪಿಸುತ್ತಿದ್ದಾರೆ. ಜನಪ್ರತಿನಿಧಿಗಳಾದರೂ ಈ ಜನಾಂಗಕ್ಕೆ ಹೊರಜಗತ್ತು ತೋರಿಸಿ ಅನಿಷ್ಠ ಪದ್ಧತಿ ತೊಲಗಿಸಿ ಬದಲಾವಣೆಯನ್ನು ತರಬೇಕಿದೆ.


    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹೆರಿಗೆ ವೇಳೆ ನರ್ಸ್ ನಿರ್ಲಕ್ಷ್ಯದಿಂದ ಮಗು 2 ಭಾಗ – ಹೊಟ್ಟೆಯಲ್ಲಿ ತಲೆ, ಉಳಿದಿದ್ದು ಹೊರಗೆ

    ಹೆರಿಗೆ ವೇಳೆ ನರ್ಸ್ ನಿರ್ಲಕ್ಷ್ಯದಿಂದ ಮಗು 2 ಭಾಗ – ಹೊಟ್ಟೆಯಲ್ಲಿ ತಲೆ, ಉಳಿದಿದ್ದು ಹೊರಗೆ

    ಜೈಪುರ: ಹೆರಿಗೆ ಮಾಡಿಸುತ್ತಿದ್ದ ಸಮಯದಲ್ಲಿ ಮಗುವನ್ನು ಹೊರತೆಗೆಯುವಾಗ ನರ್ಸ್ ನಿರ್ಲಕ್ಷ್ಯದಿಂದಾಗಿ ಈಗ ತಾಯಿ ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಘಟನೆ ರಾಜಸ್ಥಾನದ ರಾಮಗಢ ಜಿಲ್ಲೆಯಲ್ಲಿ ನಡೆದಿದೆ.

    ಸರ್ಕಾರಿ ವೈದ್ಯಕೀಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಪುರುಷ ನರ್ಸ್ ಎಡವಟ್ಟು ಮಾಡಿದ ಪರಿಣಾಮ ಮಗುವಿನ ಅರ್ಧ ಭಾಗ ಹೊಟ್ಟೆಯಲ್ಲಿದ್ದರೆ, ಉಳಿದ ಅರ್ಧ ಭಾಗ ಹೊರ ಬಂದಿದೆ.

    ನಡೆದಿದ್ದು ಏನು?
    ಗರ್ಭಿಣಿಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಹೆರಿಗೆ ಮಾಡಿಸುವ ಸಂದರ್ಭದಲ್ಲಿ ತಾಯಿಯ ಗರ್ಭದಿಂದ ಹಸುಗೂಸನ್ನು ಹೊರತೆಗೆಯುವಾಗ ಪುರುಷ ನರ್ಸ್ ಮಗುವನ್ನು ಜೋರಾಗಿ ಎಳೆದಿದ್ದಾನೆ. ಪರಿಣಾಮ ಮಗು ಎರಡು ತುಂಡಾಗಿದೆ. ಆದರೆ ಮಗುವಿನ ಕಾಲು ಮಾತ್ರ ಹೊರಬಂದಿದ್ದು, ತಲೆ ಹೊಟ್ಟೆಯಲ್ಲಿ ಉಳಿದುಕೊಂಡಿದೆ.

    ಇದಾದ ನಂತರ ನರ್ಸ್, ಆತನ ಸಹೋದ್ಯೋಗಿಗಳು ಸೇರಿಕೊಂಡು ಮಗುವಿನ ಅರ್ಧ ಭಾಗವನ್ನು ಆಸ್ಪತ್ರೆಯ ಶವಾಗಾರದಲ್ಲಿಟ್ಟು, ಈ ವಿಚಾರವನ್ನು ಮುಚ್ಚಿಟ್ಟಿದ್ದಾರೆ. ಅಷ್ಟೇ ಅಲ್ಲದೇ ಹೆಚ್ಚಿನ ಚಿಕಿತ್ಸೆಗಾಗಿ ತಾಯಿಯನ್ನು ಜೈಸಲ್ಮೇರ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಕುಟುಂಬದವರಿಗೆ ತಿಳಿಸಿದ್ದಾರೆ.

    ಡಾ.ರವೀಂದ್ರ ಸಂಖ್ಲಾ ನೇತೃತ್ವದ ತಂಡ ಮಹಿಳೆಯನ್ನು ಪರಿಶೀಲನೆ ಮಾಡಿದ್ದಾರೆ. ಆಗ ಹೊಟ್ಟೆಯಲ್ಲಿ ಮಗುವಿನ ತಲೆ ಭಾಗವಿರುವುದು ಪತ್ತೆಯಾಗಿದೆ. ತಕ್ಷಣ ಈ ಬಗ್ಗೆ ವೈದ್ಯರು ಗರ್ಭಿಣಿಯ ಕುಟುಂಬದವರಿಗೆ ತಿಳಿಸಿದ್ದಾರೆ. ಇದಲ್ಲದೇ ಗರ್ಭಿಣಿ ಹೊಟ್ಟೆಯಲ್ಲಿ ಪ್ಲೆಸೆಂಟಾ(ಜರಾಯು ಅಥವಾ ಹೆರಿಗೆ ಕಸ)ವನ್ನು ಕೂಡ ಬಿಟ್ಟಿದ್ದಾರೆ. ನಂತರ ಡಾ.ರವೀಂದ್ರ ತಂಡ ಮಹಿಳೆಗೆ ಚಿಕಿತ್ಸೆ ನೀಡಿ ಮಗುವಿನ ತಲೆಯನ್ನು ಹೊರ ತೆಗೆದಿದ್ದಾರೆ. ಸದ್ಯಕ್ಕೆ ತಾಯಿಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

    ಈ ಬಗ್ಗೆ ಮಾಹಿತಿ ತಿಳಿದ ಮಹಿಳೆಯ ಪತಿ ತಕ್ಷಣ ರಾಮಗಢ ಆಸ್ಪತ್ರೆಗೆ ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ್ದಾರೆ. ಆದರೆ ಪೊಲೀಸರು ಇದುವರೆಗೂ ಯಾರೊಬ್ಬರನ್ನು ಬಂಧಿಸಿಲ್ಲ ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ- ಬಯಲಲ್ಲೇ ಹೆಣ್ಣು ಮಗುವಿಗೆ ಜನ್ಮ

    ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ- ಬಯಲಲ್ಲೇ ಹೆಣ್ಣು ಮಗುವಿಗೆ ಜನ್ಮ

    – ಚಿತ್ರದುರ್ಗದಲ್ಲಿ ಅಮಾನವೀಯ ಘಟನೆ

    ಚಿತ್ರದುರ್ಗ: ಆರೋಗ್ಯ ಕೇಂದ್ರದ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಮಹಿಳೆಯೊಬ್ಬರು ಬಯಲಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಅಮಾನವೀಯ ಘಟನೆಯೊಂದು ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

    ಘಟನೆ ವಿವರ:
    ಸೋಮವಾರ 11 ಗಂಟೆ ಸುಮಾರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಪತಿ ಚೌಡಪ್ಪ ಕೂಡಲೇ ಗಂಗಮಲ್ಲಮ್ಮ(30) ಅವರನ್ನು ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ಆದ್ರೆ ಅಲ್ಲಿ ಮಧ್ಯಾಹ್ನದವರೆಗೆ ಕಾಯುವಂತೆ ಹೇಳಿದ್ದಾರೆ. ಅಲ್ಲದೇ ಸ್ವಲ್ಪ ಸಮಯದ ಬಳಿಕ ಬಂದು ಇದು ಊಟದ ಸಮಯವಾಗಿದೆ. ಹೀಗಾಗಿ ಮನೆಗೆ ತೆರಳಿ ಮಧ್ಯಾಹ್ನದ ನಂತರ ಬನ್ನಿ ಎಂದು ಆರೋಗ್ಯ ಕೇಂದ್ರದ ನರ್ಸ್ ಹಾಗೂ ವೈದ್ಯರು ಸೂಚಿಸುವ ಮೂಲಕ ಅಮಾನವೀಯತೆ ಮೆರೆದಿದ್ದಾರೆ ಎಂದು ಪತಿ ಚೌಡಪ್ಪ ಆರೋಪಿಸಿದ್ದಾರೆ.

    ವೈದ್ಯರ ಸೂಚನೆಯಂತೆ ಚೌಡಪ್ಪ, ತನ್ನ ಗರ್ಭಿಣಿ ಪತ್ನಿಯನ್ನು ಆರೋಗ್ಯ ಕೇಂದ್ರದಿಂದ ಮನೆಗೆ ಕರೆದೊಯ್ಯುತ್ತಿರುವಾಗ ಮಾರ್ಗ ಮಧ್ಯೆ ಗಂಗಮಲ್ಲಮ್ಮ ಅವರಿಗೆ ಪ್ರಸವ ನೋವು ಜಾಸ್ತಿಯಾಗಿದೆ. ಹೀಗಾಗಿ ಮಹಿಳೆಯರು ಬಯಲಲ್ಲೇ ಗರ್ಭಿಣಿ ಸುತ್ತ ಬಟ್ಟೆ ಹಿಡಿದು ನಿಂತು ಹೆರಿಗೆ ಮಾಡಿಸಿದ್ದಾರೆ. ನಂತರ ಬಾಣಂತಿ ಹಾಗೂ ಮಗುವನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

    ಈ ಘಟನೆ ಸುದ್ದಿಯಾಗುತ್ತಿದ್ದಂತೆಯೇ ಚಿತ್ರಹಳ್ಳಿ ಆರೋಗ್ಯ ಕೇಂದ್ರದ ಸಿಬ್ಬಂದಿ ವಿರುದ್ಧ ಸಂಬಂಧಿಕರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ನಿರ್ಲಕ್ಷ್ಯ ತೋರಿದ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಹೀಗಾಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನೀರಜ್ ಪಾಟೀಲ್ ಅವರು ಪ್ರತಿಕ್ರಿಯಿಸಿ, ಈ ಕುರಿತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 15 ವರ್ಷಗಳ ಹಿಂದಿನ `ದಿ ವಾಲ್’ ದ್ರಾವಿಡ್ ದಾಖಲೆ ಮುರಿದ ಪೂಜಾರ

    15 ವರ್ಷಗಳ ಹಿಂದಿನ `ದಿ ವಾಲ್’ ದ್ರಾವಿಡ್ ದಾಖಲೆ ಮುರಿದ ಪೂಜಾರ

    ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ 193 ರನ್ ಸಿಡಿಸಿ ಅತ್ಯುತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ಅನುಭವಿ ಆಟಗಾರ ಚೇತೇಶ್ವರ ಪೂಜಾರ ಆಸೀಸ್ ಸರಣಿಯಲ್ಲಿ ಒಟ್ಟು 1,258 ಎಸೆತಗಳನ್ನು ಎದುರಿಸುವ ಮೂಲಕ ರಾಹುಲ್ ದ್ರಾವಿಡ್ ದಾಖಲೆಯನ್ನು ಮುರಿದ್ದಾರೆ.

    ಟೀಂ ಇಂಡಿಯಾ ಪರ ಆಸೀಸ್ ನೆಲದಲ್ಲಿ ಅತಿ ಹೆಚ್ಚು ಎಸೆತಗಳನ್ನು ಎದುರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪೂಜಾರ ಪಾತ್ರರಾಗಿದ್ದು, 2003-04 ರ ಆಸೀಸ್ ಸರಣಿಯೊಂದರಲ್ಲಿ 1,203 ಎಸೆತಗಳನ್ನು ಎದುರಿಸಿದ್ದ ರಾಹುಲ್ ದಾಖಲೆಯನ್ನು ಮುರಿದಿದ್ದಾರೆ. ಪಂದ್ಯದಲ್ಲಿ 130 ರನ್ ಗಳಿಂದ 2ನೇ ದಿನದಾಟ ಆರಂಭಿಸಿದ ಪೂಜಾರ 282 ಎಸೆತಗಳಲ್ಲಿ (18 ಬೌಂಡರಿ) 150 ರನ್ ಪೂರ್ಣಗೊಳಿಸಿದರು. ಅಂತಿಮವಾಗಿ 373 ಎಸೆತಗಳನ್ನು ಎದುರಿಸಿ 22 ಬೌಂಡರಿಗಳ ಸಹಾಯದಿಂದ 193 ರನ್ ಸಿಡಿಸಿ ದ್ವಿಶತಕ ಸಿಡಿಸುವ ಹಂತದಲ್ಲಿ ನಾಥನ್ ಲಯನ್ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು.

    ಟೀಂ ಇಂಡಿಯಾ ಒನ್ ಡೌನ್ ಬ್ಯಾಟ್ಸ್ ಮನ್ ಆಗಿರುವ ಪೂಜಾರ 1,702 ನಿಮಿಷ ಅಂದರೆ 28 ಗಂಟೆ, 22 ನಿಮಿಷಗಳ ಕಾಲ ಬ್ಯಾಟಿಂಗ್ ನಡೆಸಿದ್ದಾರೆ. ಅಲ್ಲದೇ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಪೂಜಾರ ಬ್ಯಾಟಿಂಗ್ ನಡೆಸಿದರೆ ಈ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಲಿದೆ. 32 ವರ್ಷದ ಪೂಜಾರ ಸದ್ಯ 15 ವರ್ಷಗಳ ಹಿಂದಿನ ರಾಹುಲ್ ದ್ರಾವಿಡ್‍ಯನ್ನು ಮುರಿದಿದ್ದು, ಈ ಪಟ್ಟಿಯಲ್ಲಿ 2014-15ರ ಟೂರ್ನಿಯಲ್ಲಿ 1,093 ಎಸೆತಗಳನ್ನು ವಿರಾಟ್ ಕೊಹ್ಲಿ 3ನೇ ಸ್ಥಾನದಲ್ಲಿದ್ದಾರೆ. 1977-78 ರ ಟೂರ್ನಿಯಲ್ಲಿ 1,032 ಎಸೆತಗಳನ್ನು ಎದುರಿಸಿದ ಸುನಿಲ್ ಗವಾಸ್ಕರ್ ನಂತರದ ಸ್ಥಾನವನ್ನು ಪಡೆದಿದ್ದಾರೆ.

    ಸರಣಿಯಲ್ಲಿ ಪೂಜಾರ 3 ಶತಕಗಳನ್ನು ಸಿಡಿಸಿದ್ದು, ಈ ಮೂಲಕ ಟೀಂ ಇಂಡಿಯಾ ಪರ ಆಸೀಸ್ ವಿರುದ್ಧ 500 ಪ್ಲಸ್ ರನ್ ಗಳಿಸಿದ 3ನೇ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದಾರೆ. ಈ ಹಿಂದೆ ರಾಹುಲ್ ದ್ರಾವಿಡ್ ಮತ್ತು ಕೊಹ್ಲಿ ಮಾತ್ರ 500 ಪ್ಲಸ್ ರನ್ ಸಿಡಿಸಿದ ಸಾಧನೆ ಮಾಡಿದ್ದಾರೆ. ಅಲ್ಲದೇ ತಂಡದ ಇತರೇ ಆಟಗಾರರೊಂದಿಗೆ ಉತ್ತಮ ಬ್ಯಾಟಿಂಗ್ ನಡೆಸಿದ್ದು, ಅಗರ್ವಾಲ್, ಕೊಹ್ಲಿ, ವಿಹಾರಿ, ಪಂತ್‍ರೊಂದಿಗೆ ಕ್ರಮವಾಗಿ 116, 54, 101, 89 ರನ್ ಜೊತೆಯಾತ ನೀಡಿ ಟೀಂ ಇಂಡಿಯಾ ಬೃಹತ್ ಮೊತ್ತ ಗಳಿಸಲು ಕಾರಣರಾಗಿದ್ದಾರೆ. ನಾಥನ್ ಲಯನ್ ಬೌಲಿಂಗ್‍ನಲ್ಲಿ ಪೂಜಾರ ಔಟ್ ಆಗುತ್ತಿದ್ದಂತೆ ಕ್ರೀಡಾಂಗಣದಲ್ಲಿ ನೆರೆದಿದ್ದ ಎಲ್ಲಾ ಅಭಿಮಾನಿಗಳು ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಗೌರವ ಸಲ್ಲಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜನವರಿ 1ರಂದು ಡೆಲಿವರಿಗಾಗಿ ಅಮ್ಮಂದಿರ ದುಂಬಾಲು- ಹೊಸ ವರ್ಷ ತೀರಾ ಸ್ಪೆಷಲ್

    ಜನವರಿ 1ರಂದು ಡೆಲಿವರಿಗಾಗಿ ಅಮ್ಮಂದಿರ ದುಂಬಾಲು- ಹೊಸ ವರ್ಷ ತೀರಾ ಸ್ಪೆಷಲ್

    ಬೆಂಗಳೂರು: ಹೊಸ ವರ್ಷಕ್ಕೆ ದಿನಗಣನೆ ಶುರುವಾಗಿದೆ. ಅತ್ತ ನವಮಾಸ ತುಂಬುತ್ತಿರುವ ಅಮ್ಮಂದಿರು ಹೊಸ ವರ್ಷಕ್ಕೆ ಹೆರಿಗೆ ಮಾಡಿಸಲು ದುಂಬಾಲು ಬೀಳುತ್ತಿದ್ದಾರೆ. ಕೇವಲ ಹೊಸ ವರ್ಷ ನಯಾ ದಿನ ಅನ್ನುವ ಕಾರಣವಲ್ಲ. ಆ ದಿನ ಹುಟ್ಟುವ ಮಗುವಿನ ಅದೃಷ್ಟವೇ ಬದಲಾಗುತ್ತೆ.

    ನವಮಾಸವೂ ತನ್ನ ಕಂದನಿಗಾಗಿ ಚಡಪಡಿಸುವ ಅಮ್ಮ ತನ್ನ ಕರುಳ ಕುಡಿ ಒಳ್ಳೆಯ ದಿನವೇ ಪ್ರಪಂಚ ನೋಡಬೇಕು ಅಂತಾ ಬಯಸುತ್ತಾರೆ. ಆದರೆ ಈಗ ಫ್ಯಾನ್ಸಿ ನಂಬರ್ ಗಳ ಸೆಳೆತ, ಒಳ್ಳೆಯ ದಿನ ನೋಡಿಯೇ ಡೆಲಿವರಿ ಡೇಟ್ ಅಡ್ಜೆಸ್ಟ್ ಮೆಂಟ್ ಮಾಡುವ ಟ್ರೆಂಡ್ ಸಿಕ್ಕಾಪಟ್ಟೆ ಜೋರಾಗಿದೆ. ಅದರಲ್ಲೂ ಹೆರಿಗೆಗೆ ಅಸುಪಾಸಿನಲ್ಲಿರುವವರು ಹೊಸ ವರ್ಷ ಜನವರಿ ಒಂದರಂದು ಡೆಲಿವರಿ ಮಾಡಿಸಲು ವೈದ್ಯರಿಗೆ ಡಿಮ್ಯಾಂಡ್ ಇಡುತ್ತಿದ್ದಾರೆ. ರಿಸ್ಕಿ ಇಲ್ಲದ ಡೆಲಿವರಿಗಳನ್ನು ಅವರಿಚ್ಚೆಯ ದಿನವೇ ಮಾಡಬಹುದು. ಆದರೆ ಸ್ವಾಭಾವಿಕವಾಗಿ ಹೆರಿಗೆ ನೋವು ಬಂದಾಗ ನಾವು ಏನೂ ಮಾಡಲು ಸಾಧ್ಯವಿಲ್ಲ ಎಂದು ವೈದ್ಯರು ಹೇಳುತ್ತಾರೆ.

    ಸಾಮಾನ್ಯವಾಗಿ ಮಂಗಳವಾರ ಡೆಲಿವರಿ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಾರೆ. ಆದರೆ ಈ ಬಾರಿ ಜನವರಿ ಒಂದು ಮಂಗಳವಾರ ಬಂದರೂ ಅಂದೇ ಆಗಬೇಕು ಅಂತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಜ್ಯೋತಿಷಿಗಳ ಸಲಹೆ. ಜನವರಿ ಒಂದರಂದು ಸ್ವಾತಿ ನಕ್ಷತ್ರ, ತುಲಾ ರಾಶಿ ಇರುವುದರಿಂದ ಅದೃಷ್ಟದ ಸಂಕೇತವಾಗಿರುತ್ತದೆ. ಹೀಗಾಗಿ ಈ ಡೇಟ್ ಗೆ ಡಿಮ್ಯಾಂಡ್ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.

    ಹೊಸ ವರ್ಷ ಅಂದರೆ ಒಂಥರ ಹೊಸ ಬದುಕಿನ ಪ್ರಾರಂಭ. ಆ ದಿನ ಕಂದನ ಆಗಮನಕ್ಕೆ ಕಾಯುವ ಅಮ್ಮಂದಿರು. ಅಮ್ಮನ ತವಕ ಗರ್ಭದೊಳಗಿನ ಕಂದಮ್ಮಗೆಲ್ಲ ಅರ್ಥವಾಗುತ್ತಾ? ಒಳ್ಳೆ ದಿನದ ಡೆಲಿವರಿಗೆ ಆಸೆಗೆ ಬಿದ್ದು ತೊಂದರೆ ತೆಗೆದುಕೊಳ್ಳಬಾರದು ಎಂದು ವೈದ್ಯರು ಸಲಹೆ ನೀಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಂಗ್ಳೂರಿಂದ ಪಾಟ್ನಾಗೆ ತೆರಳ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಗಂಡು ಮಗು ಜನನ

    ಬೆಂಗ್ಳೂರಿಂದ ಪಾಟ್ನಾಗೆ ತೆರಳ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಗಂಡು ಮಗು ಜನನ

    ಕೋಲಾರ: ಸಂಘಮಿತ್ರ ಎಕ್ಸ್ ಪ್ರೆಸ್ ರೈಲಿನಲ್ಲೇ ತಾಯಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಬಳಿ ನಡೆದಿದೆ.

    ಬೆಂಗಳೂರಿನಿಂದ-ಪಾಟ್ನಾಗೆ ತೆರಳುತ್ತಿದ್ದ ಸಂಘಮಿತ್ರ ಎಕ್ಸ್ ಪ್ರೆಸ್ ರೈಲಿನಲ್ಲಿ ಮಹಿಳೆಗೆ ಮಾಲೂರು ಬಳಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಟೇಕಲ್ ಬಳಿ ಪ್ರಸವ ಆಗಿದೆ. ತಮಿಳುನಾಡು ಕಾಟ್ ಪಡಿ ಮೂಲದ 25 ವರ್ಷದ ಮಾಲತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

    ಮಾಲತಿ ಹಾಗೂ ಮುನಿಸ್ವಾಮಿ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದಾರೆ. ಹೆರಿಗೆಗಾಗಿ ಬೆಂಗಳೂರಿನಿಂದ ಕಾಟ್ ಪಡಿಗೆ ತೆರಳುತ್ತಿದ್ದ ವೇಳೆ ಟೇಕಲ್ ಬಳಿ ರೈಲಿನಲ್ಲೇ ಹೆರಿಗೆಯಾಗಿದೆ. ತಾಯಿ ಮಗು ಆರೋಗ್ಯವಾಗಿದ್ದು, ಕೂಡಲೇ ಸಹ ಪ್ರಯಾಣಿಕರು 108 ಗೆ ಕರೆ ಮಾಡಿ ತಾಯಿ ಮಗು ಇಬ್ಬರನ್ನು ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews