Tag: demand

  • ತಾಯಿ ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು – ದೇವರಲ್ಲಿ ಭಕ್ತನ ವಿಚಿತ್ರ ಕೋರಿಕೆ

    ತಾಯಿ ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು – ದೇವರಲ್ಲಿ ಭಕ್ತನ ವಿಚಿತ್ರ ಕೋರಿಕೆ

    ಚಿಕ್ಕಮಗಳೂರು: ಸಾಮಾನ್ಯವಾಗಿ ಒಳ್ಳೆ ವಿದ್ಯೆ, ಬುದ್ಧಿ, ಆರೋಗ್ಯ ಕೊಡು ಎಂಬಿತ್ಯಾದಿ ಹಲವು ಬೇಡಿಕೆಗಳನ್ನು (Demand) ಭಕ್ತರು (Devotees) ದೇವರ ಮುಂದೆ ಇಡುತ್ತಾರೆ. ಆದರೆ ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು ಎಂಬ ವಿಚಿತ್ರ ಕೋರಿಕೆಯನ್ನು ಭಕ್ತರೊಬ್ಬರು ದೇವರ ಮುಂದೆ ಇಟ್ಟಿರುವ ಘಟನೆ ಚಿಕ್ಕಮಗಳೂರಿನ (Chikkamagaluru) ಕಳಸ  (Kalasa) ತಾಲೂಕಿನಲ್ಲಿ ನಡೆದಿದೆ.

    ಕೇಳಲು ಆಶ್ಚರ್ಯವಾಗಿದ್ದರೂ ಇದು ನಿಜ. ಭಕ್ತರೊಬ್ಬರು ಕಳಸದ ಕಳಸೇಶ್ವರ ಸ್ವಾಮಿಯ ಕಾಣಿಕೆ ಹುಂಡಿಯಲ್ಲಿ ಈ ರೀತಿಯಾಗಿ ಪತ್ರ ಬರೆದು ಹುಂಡಿಯಲ್ಲಿ ಹಾಕಿದ್ದಾನೆ. ಗಿರಿಜಾದೇವಿಗೆ ಭಕ್ತರೊಬ್ಬರು ಪತ್ರ (Letter) ಬರೆದಿದ್ದು, ಭಕ್ತರ ವಿಚಿತ್ರ ಬೇಡಿಕೆಯನ್ನು ಓದಿದ ಹುಂಡಿ ಎಣಿಕೆ ಅಧಿಕಾರಿಗಳು ನಕ್ಕು ನಕ್ಕು ಸುಸ್ತಾಗಿದ್ದಾರೆ. ಇದನ್ನೂ ಓದಿ: Gruhajyothi Scheme: ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ ಸಿಎಂ

    ಪತ್ರದಲ್ಲಿ ಏನಿದೆ?
    ತಾಯಿ ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು. ನನ್ನ ಸೌಂದರ್ಯದ ಹೊಣೆ ನಿಮ್ಮ ಜವಾಬ್ದಾರಿ. ನಾನು ಜಗತ್ತಿನಲ್ಲೇ ಸುಂದರ ಎಂಬ ಖ್ಯಾತಿ ಗಳಿಸಬೇಕು. ನಾನು ಖ್ಯಾತ ನಟ, ಫ್ಯಾಷನ್ ಮಾಡೆಲ್ ಆಗಬೇಕು. ಸರ್ವ ಸುಂದರಿಯಾದ ಗಿರಿಜಾ ದೇವಿಯಿಂದ ಆಶೀರ್ವಾದ ಬಯಸುತ್ತೇನೆ. ನನ್ನ ಕನಸನ್ನು ನನಸು ಮಾಡುವ ಜವಾಬ್ದಾರಿ ನಿಮ್ಮದು. ಈ ನಿನ್ನ ಭಕ್ತನ ಬೇಡಿಕೆ, ಪ್ರಾರ್ಥನೆಯನ್ನು ಈಡೇರಿಸು ತಾಯಿ ಎಂದು ಪತ್ರದಲ್ಲಿ ಬರೆದು ಕಾಣಿಕೆ ಹುಂಡಿಯಲ್ಲಿ ಭಕ್ತ ಹಾಕಿದ್ದಾನೆ.  ಇದನ್ನೂ ಓದಿ: ಮೋದಿ ಮತ್ತೆ ಪ್ರಧಾನಿಯಾಗಲಿ: ಅಮರನಾಥ ಯಾತ್ರೆ ಮಾಡಿ ಶೋಭಾ ಕರಂದ್ಲಾಜೆ ವಿಶೇಷ ಪೂಜೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಎಂ, ಡಿಸಿಎಂ ಬಳಿ ಹಲವು ಮನವಿ ಇಟ್ಟ ಫಿಲ್ಮ್ ಚೇಂಬರ್

    ಸಿಎಂ, ಡಿಸಿಎಂ ಬಳಿ ಹಲವು ಮನವಿ ಇಟ್ಟ ಫಿಲ್ಮ್ ಚೇಂಬರ್

    ರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Film Chamber) ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ತಮ್ಮ ಅವಧಿಯಲ್ಲಿ ಚಲನಚಿತ್ರೋದ್ಯಮದ ಬೆಳವಣಿಗೆಗೆ ಬಹಳಷ್ಟು ಕೊಡುಗೆಯನ್ನು ನೀಡಿದ್ದು, ಯಾವತ್ತೂ ಚಿತ್ರೋದ್ಯಮವು ತಮ್ಮನ್ನು ಅತ್ಯಂತ ಪೂಜ್ಯ ಸ್ಥಾನದಲ್ಲಿ ಗೌರವಿಸುತ್ತಾ ಬಂದಿರುತ್ತದೆ. ತಮ್ಮ ಅಧಿಕಾರವಧಿಯಲ್ಲಿ ಚಲನಚಿತ್ರೋದ್ಯಮದ ಕೆಳಕಂಡ ಬೇಡಿಕೆಗಳನ್ನು ಈಡೇರಿಸಿಕೊಡುವ ಮೂಲಕ ಕನ್ನಡ ಚಿತ್ರರಂಗವು ಉಳಿದು, ಬೆಳೆಯಲು ಸಹಕರಿಸಬೇಕು’ ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ ಮಾ ಹರೀಶ್ (Bha.Ma. Harish) ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ. ಇದೇ ವೇಳೆ ಮಂಡಳಿಯ ಪದಾಧಿಕಾರಿಗಳಾದ ಹೆಚ್ ಸಿ ಶ್ರೀನಿವಾಸ, ಸುಂದರ್ ರಾಜ್, ಕುಶಾಲ್, ಮಾಜಿ ಅಧ್ಯಕ್ಷರಾದ ಚಿನ್ನೇಗೌಡ್ರು, ಕೆವಿ ಚಂದ್ರಶೇಖರ್ ಉಪಸ್ಥಿತರಿದ್ದರು.

    ನಿರ್ಮಾಪಕರು ಚಿತ್ರ ತಯಾರಿಸಿ, ಪಕ್ಕದ ರಾಜ್ಯದದಲ್ಲಿ ಪ್ರದರ್ಶನಕ್ಕೆ ಬೇಕಾಗುವಂತಹ ಡಿಜಿಟಲ್ ಡಿಸಿಪಿ ಪಡೆಯಬೇಕಾಗಿದ್ದು, ಇಂದಿಗೂ ನಿರ್ಮಾಪಕರಿಗೆ ಕಷ್ಟಕರವಾಗಿದೆ. ವರ್ಷಕ್ಕೆ ಅಂದಾಜು 350 ಕನ್ನಡ ಚಲನಚಿತ್ರಗಳು ನಿರ್ಮಾಣಗೊಂಡು ಬಿಡುಗಡೆಗೊಳ್ಳುತ್ತಿವೆ. ಆದಕಾರಣ ಸರ್ಕಾರದಿಂದ ಸ್ಥಾಪಿತವಾಗಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿ ಈಗಾಗಲೇ ಪ್ರೊಜೆಕ್ಟರ್ ಥಿಯೇಟರ್ ಅಳವಡಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಡಿಯಲ್ಲಿ 20 ಕೋಟಿ ವೆಚ್ಚದಲ್ಲಿ ಡಿಜಿಟಲ್ ಯಂತ್ರೋಪಕರಣಗಳನ್ನು ಸ್ಥಾಪಿಸಲು ಆಯ ವ್ಯಯದಲ್ಲಿ ಹಣ ನಿಗದಿಪಡಿಸಿಕೊಡಬೇಕಾಗಿ ವಿನಂತಿಸುತ್ತೇವೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ತೆರಿಗೆ ರೂಪದಲ್ಲಿ ಹೆಚ್ಚಿನ ಆದಾಯ ಸಂಗ್ರಹವಾಗುತ್ತದೆ’ ಎಂದು ವಾಣಿಜ್ಯ ಮಂಡಳಿ ಮನವಿ ಮಾಡಿದೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ನಟಿ, ಡೆಲಿವರಿ ಆಗ್ತಿದ್ದಂತೆ ಶೂಟಿಂಗ್ ಹಾಜರಾದ ಮಮತಾ

    ರಾಜ್ಯದ ಚಿತ್ರಮಂದಿರಗಳಲ್ಲಿನ ಪ್ರೊಜೆಕ್ಟರ್‌ಗಳು ವಿದೇಶದಿಂದ, ಅದರಲ್ಲೂ ಒಬ್ಬರು ಇಬ್ಬರು. ಸರ್ವೀಸ್ ಪ್ರೊವೈಡರ್‌ನಿಂದ ಪಡೆಯಬೇಕಾಗಿದೆ. ಈ ಕ್ರಮದಿಂದ ಚಿತ್ರಮಂದಿರಗಳು ಇಂದಿಗೂ ಬಾಡಿಗೆ ರೂಪದಲ್ಲಿ ಪಡೆದು ಪ್ರದರ್ಶನ ನಡೆಸುತ್ತಿದ್ದು, ಸ್ವಂತ ಪ್ರೊಜೆಕ್ಟರ್ ಖರೀದಿಸಲು 40-50 ಲಕ್ಷ ರೂ. ಬಂಡವಾಳ ಹೂಡಬೇಕಾಗುತ್ತದೆ. ಈ ರೀತಿಯ ಪ್ರೋತ್ಸಾಹಕ್ಕೆ ತಲಾ ಒಂದು ಪ್ರೊಜೆಕ್ಟರ್ ಖರೀದಿಗೆ 10 ರಿಂದ 15 ಲಕ್ಷ ರೂಪಾಯಿ ಸಹಾಯಧನ ನೀಡಿದರೆ ಪ್ರದರ್ಶಕರು ಸ್ವಾವಲಂಬಿಯಾಗಿ ಉದ್ಯಮವನ್ನು ಬೆಳೆಸಲು ಸಹಾಯವಾಗುತ್ತದೆ. ಆದಕಾರಣ ಪ್ರಾರಂಭಿಕ ಹಂತದಲ್ಲಿ 20 ಕೋಟಿ ರೂಪಾಯಿ ಹಣವನ್ನು ನಿಗದಿಪಡಿಸಿ ಕೊಡಬೇಕಾಗಿ ಕೋರುತ್ತೇವೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ತೆರಿಗೆ ರೂಪದಲ್ಲಿ ಹೆಚ್ಚಿನ ಆದಾಯ ಸಂಗ್ರಹವಾಗುತ್ತದೆಂಬ ಅಂಶವನ್ನು ತಮ್ಮ ಗಮನಕ್ಕೆ ತರಬಯಸುತ್ತೇವೆ’ ಎಂದು ವಾಣಿಜ್ಯ ಮಂಡಳಿ ಅರ್ಜಿಯಲ್ಲಿ ತಿಳಿಸಿದೆ.

    ಎಲ್ಲಾ ಸಮಸ್ಯೆಗಳಿಗೂ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರು ಸ್ಪಂದಿಸಿದ್ದಾರೆ. ಕಲಪ ಮುಗಿದ ಬಳಿಕ ವಾಣಿಜ್ಯ ಚಲನಚಿತ್ರ ಮಂಡಳಿಯಲ್ಲಿಯೇ ಕುಳಿತು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಮೆಜಾನ್ ತೆಕ್ಕೆಗೆ ಕಬ್ಜ: ಭಾರೀ ಮೊತ್ತಕ್ಕೆ ಸೇಲ್ ಆಯಿತು ಆರ್.ಚಂದ್ರು ನಿರ್ದೇಶನದ ಚಿತ್ರ

    ಅಮೆಜಾನ್ ತೆಕ್ಕೆಗೆ ಕಬ್ಜ: ಭಾರೀ ಮೊತ್ತಕ್ಕೆ ಸೇಲ್ ಆಯಿತು ಆರ್.ಚಂದ್ರು ನಿರ್ದೇಶನದ ಚಿತ್ರ

    ಕೆಜಿಎಫ್ ಸಿನಿಮಾದ ನಂತರ ಮತ್ತೊಂದು ಕನ್ನಡದ ಭಾರೀ ಬಜೆಟ್ ಸಿನಿಮಾ ಭಾರೀ ಮೊತ್ತಕ್ಕೆ ಸೇಲ್ ಆಗಿದೆ. ಆರ್.ಚಂದ್ರು ನಿರ್ದೇಶನದ ಕಬ್ಜ (Kabzaa) ಸಿನಿಮಾವನ್ನು ನೂರಾರು ಕೋಟಿ ಕೊಟ್ಟು ಅಮೆಜಾನ್ ಪ್ರೈಮ್ ಖರೀದಿಸಿದ್ದು, ಬಲ್ಲ ಮೂಲಗಳ ಪ್ರಕಾರ ಕೆಜಿಎಫ್ 2 ಸಿನಿಮಾವನ್ನು ಖರೀದಿಸಿದಷ್ಟೇ ಈ ಸಿನಿಮಾವನ್ನೂ ಕೊಂಡುಕೊಳ್ಳಲಾಗಿದೆ. ಹಾಗಾಗಿ ಕನ್ನಡದ ಮತ್ತೊಂದು ಸಿನಿಮಾಗೆ ಡಿಮಾಂಡ್ ಕ್ರಿಯೇಟ್ ಆಗಿದೆ.

    ಅಮೆಜಾನ್ ಪ್ರೈಮ್ ನಲ್ಲಿ ಭಾರತೀಯ ಸಿನಿಮಾ ರಂಗದಲ್ಲೇ ಅತೀ ಹೆಚ್ಚು ಹಣಕೊಟ್ಟು ಖರೀದಿಸಿದ ಸಿನಿಮಾ ಕೆಜಿಎಫ್ 2 ಎಂದು ಬಣ್ಣಿಸಲಾಗಿತ್ತು. ಇದೀಗ ಕಬ್ಜ ಕೂಡ ಅದೇ ಸಾಲಿಗೆ ಸೇರಿದೆ. ಈ ಪ್ರಮಾಣದ ಮೊತ್ತಕ್ಕೆ ಕಬ್ಜ ಸಿನಿಮಾ ಸೇಲ್ ಆಗಿದ್ದಕ್ಕೆ ಮೇಕಿಂಗ್ ಮತ್ತು ಸ್ಟಾರ್ ಗಳ ಕಾಂಬಿನೇಷನ್ ಕಾರಣ ಎಂದು ಹೇಳಲಾಗುತ್ತಿದೆ. ಟೀಸರ್ ಬಿಡುಗಡೆಗೂ ಮುನ್ನವೇ ಹಲವು ಓಟಿಟಿ ವೇದಿಕೆಗಳು ನಿರ್ದೇಶಕರನ್ನು ಸಂಪರ್ಕಿಸಿದ್ದವು. ಆಗ ಹೇಳಿದ ಮೊತ್ತಕ್ಕೂ ಟೀಸರ್ ಬಿಡುಗಡೆಯಾದ ನಂತರ ಆಗಿರುವ ವ್ಯಾಪಾರಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದೂ ಹೇಳಲಾಗುತ್ತಿದೆ. ಇದನ್ನೂ ಓದಿ:ರೂಪೇಶ್‌ಗೆ ಕೊನೆಯುಸಿರು ಇರುವವರೆಗೂ ಪ್ರೀತಿ ಮಾಡುತ್ತೀನಿ ಎಂದ ಸಾನ್ಯ

    ಉಪೇಂದ್ರ (Upendra) ಮತ್ತು ಸುದೀಪ್ (Sudeep) ಕಾಂಬಿನೇಷನ್ ಕಬ್ಜ ಸಿನಿಮಾದ ಟೀಸರ್ ರಿಲೀಸ್ ಆದ ನಂತರ, ಈ ಸಿನಿಮಾವನ್ನೂ ಕೆಜಿಎಫ್ ಚಿತ್ರಕ್ಕೆ ಹೋಲಿಸಲಾಗುತ್ತಿದೆ. ಅದ್ಧೂರಿ ಮೇಕಿಂಗ್, ಸ್ಟಾರ್ ನಟರ ಸಮಾಗಮಾ, ಆರ್.ಚಂದ್ರು (R. Chandru) ಅವರ ಈವರೆಗೂ ಸಕ್ಸಸ್ ಮತ್ತು ಸಿನಿಮಾದ ಗುಣಮಟ್ಟದ ಕಾರಣದಿಂದಾಗಿ ದೇಶದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಕಬ್ಜಗೆ ಬೇಡಿಕೆ ಹೆಚ್ಚಾಗಿದೆ. ಈ ಕಾರಣದಿಂದಾಗಿಯೇ ಒಂಬತ್ತು ಭಾಷೆಗಳಲ್ಲಿ ಈ ಸಿನಿಮಾ ಮೂಡಿ ಬರಲಿದೆ.

    ಸಿನಿ ಪಂಡಿತರ ಲೆಕ್ಕಾಚಾರದಂತೆ ಕಬ್ಜ ಸಿನಿಮಾ ಕೂಡ ಭಾರತೀಯ ಸಿನಿಮಾ ರಂಗದಲ್ಲಿ ದಾಖಲೆ ಬರೆಯಲಿದೆ ಎಂದು ಅಂದಾಜಿಸಲಾಗಿದೆ. ದೇಶ ಮತ್ತು ವಿದೇಶಗಳಲ್ಲಿ ಸೇರಿ ಸಾವಿರಾರು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಕೂಡ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಹಲವು ಅಚ್ಚರಿಗಳನ್ನು ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ ನಿರ್ದೇಶಕರು. ಸಿನಿಮಾಗೆ ಭಾರೀ ಬೇಡಿಕೆ (Demand) ಬಂದ ಕಾರಣದಿಂದಾಗಿ ಸದ್ಯ ನಿರ್ದೇಶಕರು ಮುಂಬೈನಲ್ಲಿ ಬೀಡು ಬಿಟ್ಟಿದ್ದಾರಂತೆ.

    Live Tv
    [brid partner=56869869 player=32851 video=960834 autoplay=true]

  • ನಟಿ ಚೈತ್ರಾ ಹಳ್ಳಿಕೇರಿ 25 ಕೋಟಿ  ಬೇಡಿಕೆ ಇಟ್ಟರಾ? ನಟಿಯ ಆರೋಪಕ್ಕೆ ತಿರುಗೇಟು ನೀಡಿದ ಪತಿ ಬಾಲಾಜಿ

    ನಟಿ ಚೈತ್ರಾ ಹಳ್ಳಿಕೇರಿ 25 ಕೋಟಿ ಬೇಡಿಕೆ ಇಟ್ಟರಾ? ನಟಿಯ ಆರೋಪಕ್ಕೆ ತಿರುಗೇಟು ನೀಡಿದ ಪತಿ ಬಾಲಾಜಿ

    ನಿನ್ನೆಯಷ್ಟೇ ಸ್ಯಾಂಡಲ್ ವುಡ್ ನಟಿ ಚೈತ್ರಾ ಹಳ್ಳಿಕೇರಿ  ಸುದ್ದಿಗೋಷ್ಠಿ ನಡೆಸಿ, ಪತಿ ಬಾಲಾಜಿ ವಿರುದ್ಧ ಆರೋಪಗಳ ಮಳೆಯನ್ನೇ ಸುರಿಸಿದ್ದರು. ದೈಹಿಕ ಕಿರುಕುಳ ಮತ್ತು ತಮ್ಮ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆದು ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದರು. ಪತಿ ಮಾತ್ರವಲ್ಲ, ಮಾವ ಪೋತರಾಜ್ ಕೂಡ ತಮಗೆ ಹಿಂಸೆ ಕೊಡುತ್ತಿದ್ದಾರೆ ಎಂದು ಹೇಳಿದ್ದರು. ಇದನ್ನೂ ಓದಿ : 17 ವರ್ಷ ಲವ್, 2 ಮಕ್ಕಳಾದ ನಂತರ ಮದುವೆಯಾದ ನಿರ್ದೇಶಕ ಹನ್ಸಲ್ ಮೆಹ್ತಾ, ಸಫೀನಾ ಹುಸೇನ್

    ಪತ್ನಿ ಚೈತ್ರಾ ಪ್ರೆಸ್ ಮೀಟ್ ಮಾಡಿದ ಬೆನ್ನಲ್ಲೆ ಪತಿ ಬಾಲಾಜಿ ಕೂಡ ಇಂದು ಮಾಧ್ಯಮ ಗೋಷ್ಠಿ ಕರೆದಿದ್ದರು. ಪತಿ ಚೈತ್ರಾ ಮಾಡಿದ ಆರೋಪಗಳೆಲ್ಲವೂ ಸುಳ್ಳು ಎಂದು, ತಾವಷ್ಟು ಆರೋಪಗಳನ್ನು ಪತ್ನಿಯ ಮೇಲೆ ಮಾಡಿದರು. ಚೈತ್ರಾ ಮಾಡಿರುವ ಅಷ್ಟೂ ಆರೋಪಗಳಲ್ಲೂ ಯಾವುದೇ ಹುರುಳಿಲ್ಲ ಎಂದರು. ಅಲ್ಲದೇ, ನಾಲ್ಕು ವರ್ಷಗಳಿಂದ ತಾವಿಬ್ಬರೂ ದೂರ ಇರುವುದಾಗಿಯೂ ಅವರು ಹೇಳಿದರು. ಇದನ್ನೂ ಓದಿ : ಧನುಶ್ ನಟನೆಯ ಹಾಲಿವುಡ್ ಸಿನಿಮಾದ ಟ್ರೇಲರ್ ರಿಲೀಸ್ : ಎಲ್ಲಿದ್ದಾರೆ ಧನುಶ್?

    ಈಗಾಗಲೇ ನಾನು ಚೈತ್ರಾಗೆ ಕೋಟ್ಯಾಂತರ ರೂಪಾಯಿ ಕೊಟ್ಟಿರುವೆ. 5 ಕೋಟಿ ಮನೆ, 50 ಲಕ್ಷ ರೂಪಾಯಿ ಬೆಲೆಬಾಳುವ ಕಾರು ಕೊಟ್ಟಿರುವೆ. ಎರಡು ವರ್ಷಗಳ ಹಿಂದೆಯೇ ಅವರು ಡಿವೋರ್ಸ್ ಕೇಳಿದರು. ಹೆಚ್ಚು ಹಣಕ್ಕಾಗಿ ಡಿಮಾಂಡ್ ಕೂಡ ಮಾಡಿದರು. ಅವರು 25 ಕೋಟಿ ರೂಪಾಯಿ ಡಿಮಾಂಡ್ ಮಾಡುತ್ತಿದ್ದಾರೆ. ಅದನ್ನು ಕೊಡದೇ ಇದ್ದಾಗ ಮೀಡಿಯಾಗೆ ಹೋಗುವುದಾಗಿ ಬೆದರಿಸುತ್ತಾರೆ ಎಂದಿದ್ದಾರೆ ಬಾಲಾಜಿ. ಇದನ್ನೂ ಓದಿ : ಕನ್ನಡದ ಖ್ಯಾತ ನಟಿಯೊಬ್ಬಳು ನಿರ್ದೇಶಕನನ್ನೇ ಮಂಚಕ್ಕೆ ಕರೆದ ಕಥೆಗೆ ಮೆಗಾ ಟ್ವಿಸ್ಟ್

    ಎರಡು ಮಕ್ಕಳು ಆದ ನಂತರ ಚೈತ್ರಾ ಅವರೇ ಮಿಸಸ್ ಇಂಡಿಯಾ ಸ್ಪರ್ಧೆಗೆ ಹೋಗಬೇಕೆಂದು ಬಾಲಾಜಿ ಅವರಲ್ಲಿ ಕೇಳಿದರಂತೆ. ತಮಗೆ ಫ್ರಿಡಂ ಬೇಕು ಅಂತ ಬೇರೆ ಮನೆಗೆ ಬದಲಾದರಂತೆ. ನಂತರ ಅವರ ಡಿಮಾಂಡ್ ಗಳು ಜಾಸ್ತಿ ಆಗುತ್ತಲೇ ಹೋದವು ಎಂದು ಬಾಲಾಜಿ ಆರೋಪ ಮಾಡಿದರು. ಇಬ್ಬರ ಮಧ್ಯೆ ಸಣ್ಣ ಪುಟ್ಟ ಜಗಳ ಆಗಿದ್ದನ್ನು ಒಪ್ಪಿಕೊಂಡ ಬಾಲಾಜಿ, ಅದರಿಂದಾಗಿ ಚೈತ್ರಾ ಅವರಿಗೆ ತಾವೇನೂ ತೊಂದರೆ ಮಾಡಿಲ್ಲ ಎಂದರು. ಚೈತ್ರಾ ಅವರನ್ನು ಯಾರೋ ದಾರಿ ತಪ್ಪಿಸುತ್ತಿದ್ದಾರೆ ಎಂದೂ ಅವರು ಆರೋಪಿಸಿದರು.

  • ಎದೆ ಹಾಲಿನಿಂದ ಆಭರಣ ತಯಾರಿಸಿ ಮಾರಾಟ ಮಾಡುವ ಮಹಿಳೆ

    ಎದೆ ಹಾಲಿನಿಂದ ಆಭರಣ ತಯಾರಿಸಿ ಮಾರಾಟ ಮಾಡುವ ಮಹಿಳೆ

    ಲಂಡನ್: ಮಹಿಳೆಯರು ಆಭರಣ ಪ್ರಿಯರು, ಡ್ರೆಸ್‍ಗೆ ತಕ್ಕಂತೆ ಹೇರ್ ಸ್ಟೈಲ್, ಬಳೆ, ಮೆಕಪ್ ಮಾಡಿಕೊಳ್ಳುವ ಮಹಿಳೆಯರು ತಾವು ತೊಡುವ ಆಭರಣಗಳಿಗೂ ಅಷ್ಟೇ ಮಹತ್ವವನ್ನು ಕೊಡುತ್ತಾರೆ. ಗೋಲ್ಡ್, ಪ್ಲಾಸ್ಟಿಕ್ ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನು ಬಳಸಿಕೊಂಡು ಆಭರಣ ತಯಾರಿಸುವುದನ್ನು ನಾವು ಕೇಳಿದ್ದೇವೆ. ಆದರೆ ಇಲ್ಲೊಬ್ಬ ಮಹಿಳೆ ಎದೆ ಹಾಲಿನಿಂದ ಆಭರಣ ತಯಾರಿಸುತ್ತಾಳೆ.

    ತಾಯಿ ಎದೆ ಹಾಲಿನಿಂದ ಆಭರಣ ಮಾಡುವ ಹೊಸ ಟ್ರೆಂಡ್ ಒಂದು ಶುರುವಾಗಿದೆ. ಲಂಡನ್ ಮೂಲದ ಸಾಫಿಯಾ ರಿಯಾದ್ ಎದೆ ಹಾಲಿನಿಂದ ಆಭರಣ ತಯಾರಿ ಮಾಡುತ್ತಿದ್ದಾರೆ. ರಿಯಾದ್ ಮೂರು ಮಕ್ಕಳ ತಾಯಿಯಾಗಿದ್ದಾರೆ. ಆಭರಣ ತಯಾರಿಸುವ ನನ್ನ ಈ ಕೆಲಸಕ್ಕೆ ನನ್ನ ಪತಿ ಆದಂ ಅವರ ಬೆಂಬಲವೂ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೇಕಿದ್ರೆ ʻದಿ ಕಾಶ್ಮೀರ್‌ ಫೈಲ್ಸ್‌ʼನ್ನು ಯೂಟ್ಯೂಬ್‌ಗೆ ಹಾಕಲಿ: ತೆರಿಗೆ ವಿನಾಯಿತಿ ಕೇಳಿದ ಬಿಜೆಪಿಗೆ ಕೇಜ್ರಿವಾಲ್‌ ಟಾಂಗ್

    ವಿಶೇಷ ಸಂದರ್ಭದಲ್ಲಿ ನಾವು ತಾಯಿ ಎದೆ ಹಾಲನ್ನು ಗಟ್ಟಿಯಾಗಿಸಿ ಉಂಗುರುದ ಹರಳು, ಸರದ ಡಾಲರ್, ಕಿವಿ ಒಲೆ ಸೇರೆದಂತೆ ಅನೇಕ ರೀರಿತ ಆಭರಣ ಮಾಡಿದ್ದೇವೆ. ಇದರ ಬೆಲೆ ಬಹಳ ದುಬಾರಿಯಾಗಿದೆ. 2023ರ ಒಳಗಾಗಿ ಆಭರಣಗಳಿಂದ ಕನಿಷ್ಟ 15 ಕೋಟಿಯಾದರೂ ಗಳಿಸಬಹುದು ಎಂದು ಅಂದಾಜು ಇದೆ ಎಂದು ತಯಾರಕರು ಹೇಳಿದ್ದಾರೆ.

  • ಬೇಡಿಕೆ ಈಡೇರಿಸುವಂತೆ ಸಿಎಂ ಕಾಲಿಗೆ ಬಿದ್ದ ರೈತ

    ಬೇಡಿಕೆ ಈಡೇರಿಸುವಂತೆ ಸಿಎಂ ಕಾಲಿಗೆ ಬಿದ್ದ ರೈತ

    ಬೆಳಗಾವಿ: ಸಿಎಂ ಬಸವರಾಜ್ ಬೊಮ್ಮಾಯಿ ಬೆಳಗಾವಿ ಸುವರ್ಣಸೌಧದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ನಡೆಸುವ ಮುನ್ನ ರೈತ ಮುಖಂಡರೊಬ್ಬರು ಸಿಎಂ ಕಾಲಿಗೆ ಬಿದ್ದು, ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದ ಘಟನೆ ನಡೆಯಿತು.

    ಬೆಳಗಾವಿಯ ಸುವರ್ಣಸೌಧದಲ್ಲಿ ಕೋವಿಡ್ ಹಾಗೂ ಪ್ರವಾಹ ಪೀಡಿತ ಪರಿಹಾರ ಕಾರ್ಯಗಳ ಕುರಿತು ಸಭೆ ನಡೆಸಲು ಸುವರ್ಣಸೌಧಕ್ಕೆ ಆಗಮಿಸುತ್ತಿದ್ದಂತೆ ರೈತ ಮುಖಂಡರು ಸಿಎಂ ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಿದರು. ಸುವರ್ಣಸೌಧಕ್ಕೆ ಕಚೇರಿಗಳ ಸ್ಥಳಾಂತರ, ಶುಗರ್ ಕಮಿಷನರ್ ಕಚೇರಿ ಸ್ಥಳಾಂತರಕ್ಕೆ ಮನವಿ ಮಾಡಿದ ರೈತರು, ಬೆಳಗಾವಿಗೆ ಸಕ್ಕರೆ ಆಯುಕ್ತರ ಕಚೇರಿ ಸ್ಥಾಪಿಸುವಂತೆ ಒತ್ತಾಯಿಸಿ ರೈತ ಮುಖಂಡ ಪ್ರಕಾಶ್ ನಾಯಕ್ ಎಂಬವರು ಸಿಎಂ ಕಾಲಿಗೆ ಬಿದ್ದು ಸಿಎಂ ಗಮನ ಸೆಳೆದರು. ಇದನ್ನೂ ಓದಿ: ರಾಜ್ಯದಲ್ಲಿ ಕಳೆದ ಏಳು ತಿಂಗಳಲ್ಲಿ 2,139 ಮಂದಿಗೆ ಡೆಂಗ್ಯೂ

    ಕೆಲ ನಿಮಿಷಗಳ ಕಾಲ ರೈತರ ಜೊತೆ ಮಾತುಕತೆ ನಡೆಸಿದ ಬೊಮ್ಮಾಯಿ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು. ಇದೇ ವೇಳೆ ಸಿಎಂ ಸುವರ್ಣಸೌಧಕ್ಕೆ ಆಗಮಿಸುತ್ತಿದ್ದಂತೆ ಗೌರವ ವಂದನೆ ಸಲ್ಲಿಸಲು ಪೊಲೀಸ್ ಸಿಬ್ಬಂದಿ ಮುಂದಾಗಿದ್ದಕ್ಕೆ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು. ಪದೇ ಪದೇ ಗೌರವ ವಂದನೆ ಸಲ್ಲಿಸುವುದು ಬೇಡ. ದಿನಕ್ಕೆ ಒಮ್ಮೆ ಮಾತ್ರ ಸಾಕು ಎಂದು ಸಿಎಂ ಪೊಲೀಸ್ ಆಯುಕ್ತರ ವಿರುದ್ಧ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ನಿಮ್ಮ ಹೊಟ್ಟೆ ಇನ್ನೂ ಕಡಿಮೆಯಾಗಿಲ್ವಲ್ರಿ, ಈಗಲಾದರೂ ಜನ ಪರ ಕೆಲಸ ಮಾಡಿ- ಸ್ಲಂ ಬೋರ್ಡ್ ಸಿಇಒಗೆ ಸೋಮಣ್ಣ ತರಾಟೆ

  • ರಾಜ್ಯದಲ್ಲಿ ಇಂದಿನಿಂದ ಹೆಲ್ತ್ ಎಮರ್ಜೆನ್ಸಿ- ಕೋವಿಡ್ ಸೇರಿದಂತೆ ಯಾವುದೇ ಟ್ರೀಟ್‍ಮೆಂಟ್ ಕೊಡಲ್ಲ ಡಾಕ್ಟರ್ಸ್

    ರಾಜ್ಯದಲ್ಲಿ ಇಂದಿನಿಂದ ಹೆಲ್ತ್ ಎಮರ್ಜೆನ್ಸಿ- ಕೋವಿಡ್ ಸೇರಿದಂತೆ ಯಾವುದೇ ಟ್ರೀಟ್‍ಮೆಂಟ್ ಕೊಡಲ್ಲ ಡಾಕ್ಟರ್ಸ್

    ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಹೆಲ್ತ್ ಎಮೆರ್ಜೆನ್ಸಿ ಎದುರಾಗಲಿದೆ. ಕೊರೊನಾ ರಿಪೋರ್ಟ್ ಸೇರಿ ಬೇರೆ ಯಾವುದೇ ಆರೋಗ್ಯ ಸಂಬಂಧಿ ರಿಪೋರ್ಟ್ ಸಿಗಲ್ಲ. ಯಾಕಂದರೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರು, ಇಂದಿನಿಂದ ಆರೋಗ್ಯ ಸೇವೆಯಲ್ಲಿ, ಕೆಲಸಗಳಲ್ಲಿ ತೊಡಗಿಸಿಕೊಳ್ಳದಿರಲು ತೀರ್ಮಾನಿಸಿದ್ದಾರೆ.

    ಆರೋಗ್ಯ ವರದಿಗಳನ್ನ ಸರ್ಕಾರಕ್ಕೆ ಸಲ್ಲಿಸದೇ ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ. ಒಂದು ವಾರದೊಳಗೆ ಸರ್ಕಾರ ಎಚ್ಚೆತ್ತು ಬೇಡಿಕೆ ಈಡೇರಿಸದಿದ್ದರೆ ಸರ್ಕಾರಿ ಆಸ್ಪತ್ರೆ ಬಂದ್ ಮಾಡುತ್ತೇವೆ. ಕೇವಲ ಎಮರ್ಜೆನ್ಸಿ ಮಾತ್ರ ಓಪನ್ ಇರಲಿದೆ ಅನ್ನೋ ಎಚ್ಚರಿಕೆಯನ್ನು ವೈದ್ಯರು ನೀಡಿದ್ದಾರೆ.

    ಐಎಎಸ್ ಅಧಿಕಾರಿಗಳ ತಮ್ಮನ್ನು ಮುಕ್ತ ಮಾಡಬೇಕು. ನಂಜನಗೂಡು ಆಸ್ಪತ್ರೆ ವೈದ್ಯರ ಆತ್ಮಹತ್ಯೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ವೇತನ ಹೆಚ್ಚಿಸಬೇಕು ಎಂಬ ಬೇಡಿಕೆಯನ್ನು ರಾಜ್ಯ ವೈದ್ಯಕೀಯ ಸಂಘ ಸರ್ಕಾರದ ಮುಂದೆ ಇಟ್ಟಿದೆ.

    ಬೇಡಿಕೆಗಳು ಏನೇನು?
    * ಸರ್ಕಾರದಿಂದ ಡಾಕ್ಟರ್ಸ್ ಡೇ ಮಾಡುವಂತೆ ಬೇಡಿಕೆ
    * ಕೋವಿಡ್ ವೇಳೆ ಮೃತ ಪಟ್ಟ ವೈದ್ಯರಿಗೆ ಸರ್ಕಾರ ಪರಿಹಾರ ನೀಡಿಲ್ಲ, ಪರಿಹಾರ ನೀಡುವಂತೆ ಬೇಡಿಕೆ
    * ಪ್ರಮುಖವಾಗಿ ವೇತನ ಪರಿಷ್ಕರಣೆ ಮಾಡುವಂತೆ ಒತ್ತಾಯ
    * ಬಿಬಿಎಂಪಿಗೆ ನೀಡಿರುವ 48 ಪ್ರಾಥಮಿಕ ಆರೋಗ್ಯ ಚಿಕಿತ್ಸಾ ಕೇಂದ್ರಗಳನ್ನ ವಾಪಸ್ ನೀಡುವಂತೆ ಒತ್ತಾಯ
    * ಡಿಸಿ ಮತ್ತು ಸಿಇಓಗಳ ದಬ್ಬಾಳಿಕೆಯನ್ನ ತಪ್ಪಿಸಿಬೇಕು

    ಪ್ರತಿಭಟನೆ ಯಾವ ರೀತಿ ಇರುತ್ತೆ ?
    * ಇಂದಿನಿಂದ ಸರ್ಕಾರಕ್ಕೆ ವರದಿಗಳನ್ನ ಸಲ್ಲಿಸದಿರಲು ನಿರ್ಧಾರ
    * ಆನ್‍ಲೈನ್ ಆಗಲಿ ಅಥವಾ ಆಫ್‍ಲೈನ್ ಆಗಲಿ ವರದಿಗಳನ್ನ ಸಲ್ಲಿಸದಿರಲು ನಿರ್ಧಾರ
    * ಕೋವಿಡ್ ರಿಪೋರ್ಟ್ ಗಳನ್ನು ಸಲ್ಲಿಸದಿರಲು ನಿರ್ಧಾರ
    * ರಾಷ್ಟ್ರೀಯ ಕಾರ್ಯಕ್ರಮಗಳ ವರದಿಗಳನ್ನ ಸಲ್ಲಿಸದಿರಲು ನಿರ್ಧಾರ
    * ಮಲೇರಿಯಾ, ಜಂತುಹುಳು, ಕುಷ್ಟರೋಗ ಸೇರಿದಂತೆ ಇನ್ನಿತರ ವರದಿಗಳನ್ನ ಸರ್ಕಾರಕ್ಕೆ ವರದಿಗಳನ್ನ ಸಲ್ಲಿಸದಿರಲು ನಿರ್ಧಾರ
    * ಡಿಸಿ ಮತ್ತು ಸಿಇಓ ಮೀಟಿಂಗ್ ಗಳಲ್ಲಿ ಭಾಗವಹಿಸದಿರಲು ನಿರ್ಧಾರ

    ಸರ್ಕಾರ ವೈದ್ಯರ ಪ್ರತಿಭಟನೆಯಿಂದ ಆಗುವ ಅನಾಹುತಗಳೇನು?
    * ಕೋವಿಡ್ ವರದಿಗಳನ್ನ ನೀಡದಿದ್ದರೆ ಮತ್ತಷ್ಟು ಕೋವಿಡ್ ಕೇಸ್ ಹೆಚ್ಚಾಗ್ತಾವೆ
    * ಜಿಲ್ಲಾ ಮಟ್ಟದಲ್ಲಿ ತಾಲೂಕು ಮಟ್ಟದಲ್ಲಿ ಆಸ್ಪತ್ರೆ ಕ್ಲೋಸ್ ಮಾಡಿದ್ರೆ ಕೋವಿಡ್ ಉಲ್ಬಣಗೊಳ್ಳುತ್ತೆ
    * ರಾಜ್ಯದಲ್ಲಿ ಸಾವು ನೋವು ಹೆಚ್ಚಾಗುವ ಸಾಧ್ಯತೆ
    * ರಾಷ್ಟ್ರೀಯ ಕಾರ್ಯಕ್ರಮಗಳ ವರದಿ ನೀಡದಿದ್ದರೆ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮರ್ಯಾದೆ ಹೋಗುತ್ತೆ
    * ವೈದ್ಯರ ಪ್ರತಿಭಟನೆಯಿಂದ ಆರೋಗ್ಯ ತುರ್ತು ಪರಿಸ್ಥಿತಿ ಉಲ್ಬಣಗೊಳ್ಳುತ್ತೆ
    * ಡಿಸಿ ಮತ್ತು ಸಿಇಓ ಮೀಟಿಂಗ್‍ಗಳಿಗೆ ವೈದ್ಯರು, ವೈದ್ಯಾಧಿಕಾರಿಗಳು ಅಟೆಂಡ್ ಆಗದಿದ್ದರೆ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಷ್ಟ

    ಇಂದಿನಿಂದ ಒಂದು ವಾರದ ಒಳಗೆ ಸರ್ಕಾರ ಎಚ್ಚೆತ್ತು ಬೇಡಿಕೆ ಈಡೇರಿಸದಿದ್ದರೆ ಸರ್ಕಾರಿ ಆಸ್ಪತ್ರೆಗಳನ್ನು ಕ್ಲೋಸ್ ಮಾಡಲು ವೈದ್ಯರು ನಿರ್ಧರಿಸಿದ್ದಾರೆ. ಇದೇ ತಿಂಗಳ 21 ರಿಂದ ಆಸ್ಪತ್ರೆ ಕ್ಲೋಸ್ ಮಾಡಲು ನಿರ್ಧಾರ ಮಾಡಲಾಗಿದ್ದು, ಎಮರ್ಜೆನ್ಸಿ ಮಾತ್ರ ಓಪನ್ ಮಾಡಲಾಗುತ್ತಿದೆ. ಅಲ್ಲದೇ ಸೆಪ್ಟೆಂಬರ್ 21 ರಿಂದ ಬೆಂಗಳೂರು ಚಲೋ ಆರಂಭ ಮಾಡಲಿದ್ದಾರೆ. ಬೆಂಗಳೂರು ಚಲೋ ಆರಂಭ ಮಾಡಿ ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ.

  • ವಿಶೇಷ ಗೋಪಿಚಂದನ ಗಣಪನಿಗೆ ಡಿಮ್ಯಾಂಡ್ – ಪರಿಸರ ಸ್ನೇಹಿಗಳಿಂದ ಹೆಚ್ಚಿದ ಬೇಡಿಕೆ

    ವಿಶೇಷ ಗೋಪಿಚಂದನ ಗಣಪನಿಗೆ ಡಿಮ್ಯಾಂಡ್ – ಪರಿಸರ ಸ್ನೇಹಿಗಳಿಂದ ಹೆಚ್ಚಿದ ಬೇಡಿಕೆ

    – ಇದರ ವಿಶೇಷತೆ ಏನು?

    ರಾಯಚೂರು: ಪ್ರತಿ ವರ್ಷದಂತೆ ಈ ವರ್ಷವೂ ಗಣೇಶ ಹಬ್ಬ ಬಂದಿದೆ. ಆದರೆ ಈ ಬಾರಿ ಸಾರ್ವಜನಿಕವಾಗಿ ಅದ್ಧೂರಿ ಗಣೇಶೋತ್ಸವ ಆಚರಿಸುವುದಕ್ಕೆ ಅವಕಾಶ ಇಲ್ಲ. ಕೊರೊನಾ ಮಹಾಮಾರಿ ಹಿನ್ನೆಲೆ ಬಹುತೇಕರು ಮನೆಯಲ್ಲಿ ಗಣೇಶನ ಪ್ರತಿಷ್ಠಾಪಿಸುತ್ತಾರೆ. ಹೀಗಾಗಿ ರಾಯಚೂರಿನ ಪರಿಸರ ಸ್ನೇಹಿ ಗೋಪಿಚಂದನದ ವಿಶೇಷ ಗಣೇಶ ಮೂರ್ತಿಗೆ ಈ ಬಾರಿ ಎಲ್ಲೆಡೆಯಿಂದ ಭಾರೀ ಬೇಡಿಕೆ ಬಂದಿದೆ.

    ನಗರದ ಜಯತೀರ್ಥದಾಸರ ಕುಟುಂಬ ಗೋಪಿ ಚಂದನದಿಂದ ಪರಿಸರ ಸ್ನೇಹಿ, ಸಾಂಪ್ರದಾಯಿಕ ಗಣೇಶನನ್ನ ಮಾಡಿ ಮಾರಾಟ ಮಾಡುತ್ತಿದ್ದಾರೆ. ಜಯತೀರ್ಥರ ಮಗ ರಘೋತ್ತಮದಾಸ್ ಇಂಟಿರಿಯರ್ ಡಿಸೈನ್ ಮಾಡುವ ಉದ್ಯೋಗ ಮಾಡುತ್ತಿದ್ದಾರೆ. ಆದರೆ ಗಣೇಶ ಮೂರ್ತಿ ತಯಾರಿಕೆಯಲ್ಲಿ ಆಸಕ್ತಿ ಬಂದು ಮೊದಲು ಮಣ್ಣಿನಲ್ಲಿ ಗಣೇಶ ಮೂರ್ತಿಗಳನ್ನು ತಯಾರಿಸೋಕೆ ಆರಂಭಿಸಿದರು. ಸಾಮಾನ್ಯವಾಗಿ ಮಣ್ಣಿನ ಗಣೇಶ ಮೂರ್ತಿಗಳನ್ನ ಎಲ್ಲರೂ ಮಾಡುತ್ತಾರೆ. ಆದರೆ ಧಾರ್ಮಿಕವಾಗಿ ಪ್ರಾಮುಖ್ಯತೆ ಹೊಂದಿರುವ ಗೋಪಿ ಚಂದನದಲ್ಲಿ ಯಾಕೆ ಗಣಪನ ತಯಾರಿಸಬಾರದು ಅಂತ ಕಳೆದ ವರ್ಷದಿಂದ ಪವಿತ್ರವಾದ ಗೋಪಿ ಚಂದನದಿಂದ ಗಣೇಶ ಮೂರ್ತಿಗಳನ್ನು ತಯಾರಿಸುತ್ತಿದ್ದಾರೆ.

    ಗೋಪಿ ಚಂದನವನ್ನ ಶ್ರೀಕೃಷ್ಣನಿಗೆ ಗೋಪಿಕೆಯರು ಹಚ್ಚಿದ್ದರು ಎಂಬ ಪ್ರತೀತಿ ಇದೆ. ಪುರಾಣದಲ್ಲಿ ವಿಶ್ವಂಬರವಾದ ಪರಮಾತ್ಮ ಗಣೇಶನನ್ನು ಗೋಪಿಚಂದನದಲ್ಲಿ ಮಾಡಿದ್ದ ಎಂದೂ ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೋಪಿ ಚಂದನದಲ್ಲಿ ಗಣೇಶನನ್ನು ಪೂಜಿಸುವುದರಿಂದ ಒಳ್ಳೆಯದಾಗುತ್ತದೆ ಎಂಬ ಭಾವನೆ ಇದೆ. ಕಳೆದ ವರ್ಷದಿಂದ ಗೋಪಿ ಚಂದನದಲ್ಲಿ ಗಣೇಶನ ತಯಾರಿಸಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಲಾಗಿದೆ.

    ಈಗ ರಾಜ್ಯ ಹಾಗೂ ಹೊರರಾಜ್ಯದಲ್ಲಿ ಗೋಪಿಚಂದನ ಗಣಪನಿಗೆ ಬಹುಬೇಡಿಕೆ ಶುರುವಾಗಿದೆ. 350 ರೂ. ಹಾಗೂ 1,000 ರೂಪಾಯಿ ಬೆಲೆಯ ಎರಡು ಬಗೆಯ ಮೂರ್ತಿಗಳನ್ನ ಮಾರಾಟ ಮಾಡಲಾಗುತ್ತಿದೆ. ಈ ವರ್ಷ 300 ಗಣೇಶ ತಯಾರಿಸಿದ್ದು, ಗುಜರಾತ ಸೇರಿದಂತೆ ಹೊರರಾಜ್ಯದಿಂದ 2,000ಕ್ಕೂ ಅಧಿಕ ಮೂರ್ತಿಗಳ ಬೇಡಿಕೆ ಬಂದಿದೆಯಂತೆ. ಆದರೆ ಇಡೀ ಕುಟುಂಬ ಮೂರ್ತಿಗಳ ತಯಾರಿಕೆಗೆ ಮುಂದಾಗಿದ್ದರೂ ಬೇಡಿಕೆ ಪೂರೈಸುವುದು ಸಾಧ್ಯವಾಗಿಲ್ಲ.

    ಈ ಬಾರಿ ಪರಿಸರ ಸ್ನೇಹಿ ಗಣಪ ಪ್ರತಿಷ್ಠಾಪಿಸಲು ಹೆಚ್ಚು ಜನರು ಮುಂದಾಗಿದ್ದಾರೆ. ಅದರಲ್ಲಿ ಗೋಪಿ ಚಂದನವು ಪಕ್ಕ ಪರಿಸರ ಸ್ನೇಹಿಯಾಗಿದ್ದು, ಗಣೇಶ ಮೂರ್ತಿಯನ್ನ ಬಕೆಟ್‍ನಲ್ಲೆ ವಿಸರ್ಜನೆ ಮಾಡಿ ನಂತರ ಗೋಪಿ ಚಂದನ ಬಳಕೆ ಮಾಡಬಹುದಾಗಿದೆ.

  • ಚಪ್ಪಾಳೆ ಬೇಡ ಸೌಲಭ್ಯ ನೀಡಿ – ಮುಷ್ಕರಕ್ಕೆ ಸಿದ್ಧವಾದ ಕೊರೊನಾ ವಾರಿಯರ್ಸ್

    ಚಪ್ಪಾಳೆ ಬೇಡ ಸೌಲಭ್ಯ ನೀಡಿ – ಮುಷ್ಕರಕ್ಕೆ ಸಿದ್ಧವಾದ ಕೊರೊನಾ ವಾರಿಯರ್ಸ್

    – ಗುತ್ತಿಗೆ, ಹೊರ ಗುತ್ತಿದೆ ನೌಕರರ ಬೇಡಿಕೇನು?

    ಬೆಂಗಳೂರು: ನಮಗೆ ಚಪ್ಪಾಳೆ ಬೇಡ ಸೌಲಭ್ಯ ನೀಡಿ ಎಂದು ಕೊರೊನಾ ವಾರಿಯರ್ಸ್‍ಗಳು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ಸಿದ್ಧವಾಗಿದ್ದಾರೆ.

    ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಜೂನ್ ನಾಲ್ಕರಂದು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ಕರೆ ನೀಡಲಾಗಿದೆ. ಈ ಮೂಲಕ ಕೊರೊನಾ ಸಮಯದಲ್ಲೇ ಕರ್ನಾಟಕಕ್ಕೆ ಮಹಾ ಶಾಕ್ ಕಾದಿದೆ.

    ಕೊರೊನಾ ಸಮಯದಲ್ಲಿ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಕೆಲವು ಬೇಡಿಕೆಗಳನ್ನು ನೀಡಿ ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ವಿಚಾರವಾಗಿ ಮೇ 20ರಂದು ಆರೋಗ್ಯ ಸಚಿವ ಶ್ರೀರಾಮುಲು ಅವರ ನೇತೃತ್ವದಲ್ಲಿ ಸಭೆ ಕೂಡ ನಡೆದಿತ್ತು. ಈ ಬಗ್ಗೆ ಸಮಿತಿ ರಚನೆಯ ಮಾಡಿ ಬೇಡಿಕೆಗಳನ್ನು ಪರಿಶೀಲನೆಯ ಮಾಡುವ ಭರವಸೆ ನೀಡಿಲಾಗಿತ್ತು. ಆದರೆ ಈಗ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮುಷ್ಕರ ಮಾಡಲು ಸಂಘ ತೀರ್ಮಾನಿಸಿದೆ.

    ನಮ್ಮ ರಾಜ್ಯದಲ್ಲಿ 23 ಸಾವಿರಕ್ಕೂ ಅಧಿಕ ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಇದರಲ್ಲಿ ಡಾಕ್ಟರ್, ಸ್ಟಾಫ್ ನರ್ಸ್, ಅಂಬುಲೆನ್ಸ್ ಚಾಲಕರು ಸೇರಿ 180 ವಿವಿಧ ಹುದ್ದೆಯಲ್ಲಿ ಈ ನೌಕರರು ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿ ಒಟ್ಟು 1,500 ಸಿಬ್ಬಂದಿ ಕೆಲಸ ಮಾಡುತ್ತಿದ್ದು, ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ಕ್ವಾರಂಟೈನ್ ಸೆಂಟರ್ ಮತ್ತು ಫೀಲ್ಡ್‍ನಲ್ಲಿ ಈ ಸಿಬ್ಬಂದಿಯೇ ಪ್ರಮುಖವಾಗಿ ಕೆಲಸ ಮಾಡುತ್ತಿದ್ದಾರೆ.

    ನೌಕರರ ಬೇಡಿಕೆಯೇನು?
    1. ಕಡಿಮೆ ವೇತನ
    2. ಪರಿಷ್ಕೃತ ವೇತನ ಇಲ್ಲ
    3. ಭತ್ಯೆಗಳು ಇಲ್ಲ
    4. ವೈದ್ಯಕೀಯ ಸೌಲಭ್ಯವಿಲ್ಲ
    5. ರಜೆಗಳು ಇಲ್ಲ (ವರ್ಷಕ್ಕೆ 10 ಮಾತ್ರ)
    6. ಸೇವಾ ಭದ್ರತೆ ಇಲ್ಲ
    7. ವರ್ಗಾವಣೆ ಇಲ್ಲ (15 ವರ್ಷದಿಂದ ಒಂದೇ ಕಡೆ ಕೆಲಸ)
    8. ಬ್ಯಾಂಕಿನಲ್ಲಿ ಸಾಲ ನೀಡುವುದಿಲ್ಲ
    9. ಪದೋನ್ನತಿ ಇಲ್ಲ
    10. ಹೆಚ್‍ಆರ್ ಪಾಲಿಸಿ ಇಲ್ಲ
    11. ವಿಮೆ ಇಲ್ಲ
    12. ಡೆತ್ ಬೆನಿಫಿಟ್ ಇಲ್ಲ
    13. ಸಮಾನ ಕೆಲಸಕ್ಕೆ ಸಮಾನ ವೇತನವಿಲ್ಲ
    14. ಮಹಿಳಾ ಸಿಬ್ಬಂದಿಗೆ ಕುಟುಂಬ ಶಸ್ತ್ರಚಿಕಿತ್ಸೆಗೆ ರಜೆ ಇಲ್ಲ.
    15. ಕಡಿಮೆ ವೇತನವಿದ್ದರೂ ಸರ್ಕಾರಿ ಕೆಲಸ ಎಂದು ಬಿಪಿಎಲ್ ಕಾರ್ಡ್ ನೀಡುವುದಿಲ್ಲ
    16. ಹೊರಗುತ್ತಿಗೆ ಪದ್ದತಿ ಕೈಬಿಡಬೇಕು

    ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಜೂನ್ ನಾಲ್ಕರಂದು ನೌಕರರ ಸಂಘ ಪ್ರತಿಭಟನೆ ಮಾಡಲು ತೀರ್ಮಾನಿಸಿದೆ. ಜೊತೆಗೆ ನೌಕರಿರಿಗೆ ಜೂನ್ 4ರಂದು ಕೆಲಸಕ್ಕೆ ಹಾಜರಾಗಬೇಕು ಎಂದು ಸೂಚಿಸಿದೆ. ಕೊರೊನಾ ಹೆಚ್ಚಾಗುತ್ತಿರುವ ಸಮಯದಲ್ಲಿ ಕೊರೊನಾ ವಿರುದ್ಧ ಹೋರಾಡಬೇಕಾದ ವಾರಿಯರ್ಸ್ ಪ್ರತಿಭಟನೆ ಮಾಡುತ್ತಿರುವುದು ಸರ್ಕಾರಕ್ಕೆ ದೊಡ್ಡ ತಲೆನೋವು ತಂದಿಟ್ಟಿದೆ.

  • ರಾಯಚೂರು ಯುವಕನ ಪೆಡಲ್ ಸ್ಯಾನಿಟೈಸರ್ ಸ್ಟ್ಯಾಂಡ್‍ಗೆ ಫುಲ್ ಡಿಮ್ಯಾಂಡ್

    ರಾಯಚೂರು ಯುವಕನ ಪೆಡಲ್ ಸ್ಯಾನಿಟೈಸರ್ ಸ್ಟ್ಯಾಂಡ್‍ಗೆ ಫುಲ್ ಡಿಮ್ಯಾಂಡ್

    ರಾಯಚೂರು: ಪಾಸಾಗಿದ್ದು ಏಳನೇ ತರಗತಿಯಾದರೂ ತಲೆ ಮಾತ್ರ ಇಂಜಿನಿಯರಿಂಗ್ ವಿದ್ಯಾರ್ಥಿಯದ್ದು. ಹೌದು ರಾಯಚೂರಿನ ಯುವಕ ಚೇತನ್ ಪ್ರಸಾದ್ ವೆಲ್ಡಿಂಗ್ ಕೆಲಸ ಮಾಡುತ್ತಲೇ ಫುಟ್ ಪೆಡಲ್ ಡಿಸ್‍ಪ್ಯಾನ್ಸರ್ ಸ್ಯಾನಿಟೈಸರ್ ಸ್ಟ್ಯಾಂಡ್ ತಯಾರಿಸಿದ್ದಾನೆ.

    ಇದರಿಂದ ಕೈಯಿಂದ ಮುಟ್ಟದೇ, ಯಾರ ಸಹಾಯವೂ ಇಲ್ಲದೆ ಕಾಲಿನಿಂದ ಪೆಡಲ್ ಒತ್ತುವ ಮೂಲಕ ಸ್ಯಾನಿಟೈಸರ್ ನಿಂದ ಕೈ ಸ್ವಚ್ಛಗೊಳಿಸಿಕೊಳ್ಳಬಹುದು. ಸ್ಯಾನಿಟೈಸರ್ ಹಾಕಲು ವ್ಯಕ್ತಿ ಅವಶ್ಯಕತೆಯಿಲ್ಲ, ಸಮಯ ಉಳಿತಾಯ, ಕೈಯಲ್ಲಿ ಸ್ಯಾನಿಟೈಸರ್ ಬಾಟಲ್ ಮುಟ್ಟುವ ಹಾಗಿಲ್ಲ. ಈ ಉದ್ದೇಶ ಇಟ್ಟುಕೊಂಡು ಸ್ನೇಹಿತ ಅಮಿತ್ ದಂಡಿನ್ ಕೊಟ್ಟ ಐಡಿಯಾದಿಂದ ಚೇತನ್ ಈ ಯಂತ್ರ ತಯಾರಿಸಿದ್ದಾರೆ.

    ಇದಕ್ಕೆ ಬ್ಯಾಟರಿ ಅಗತ್ಯವಿಲ್ಲ. ಕಬ್ಬಿಣ ಹಾಗೂ ಸ್ಟೇನ್ ಲೆಸ್ ಸ್ಟೀಲ್ ನಿಂದ ಯಂತ್ರ ಮಾಡುತ್ತಾರೆ. ಬೇರೆ ಬೇರೆ ಕಡೆಗಳಲ್ಲಿ ಸ್ಯಾನಿಟೈಸರ್ ಯಂತ್ರಗಳನ್ನು ಗಮನಿಸಿ ಹೊಸ ರೀತಿಯ ಯಂತ್ರವನ್ನು ತಯಾರಿಸಿದ್ದಾರೆ. ಒಂದು ಯಂತ್ರತಯಾರಿಕೆಗೆ ಒಂದು ಸಾವಿರ ರೂಪಾಯಿವರೆಗೆ ಖರ್ಚು ತಗುಲುತ್ತಿದ್ದು ಆಸಕ್ತರಿಗೆ 1,400 ರೂಪಾಯಿವರೆಗೆ ಮಾರಾಟ ಮಾಡುತ್ತಿದ್ದಾರೆ. ಕೃಷಿ ವಿವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ, ಆರ್.ಟಿ.ಒ ಕಚೇರಿ ಸೇರಿದಂತೆ ಹಲವೆಡೆ ಇದೇ ಯಂತ್ರವನ್ನು ಬಳಸುತ್ತಿದ್ದಾರೆ. ಇನ್ನೂ 20 ಆರ್ಡರ್ ಗಳು ಸಹ ಬಂದಿವೆಯಂತೆ.