Tag: demand

  • ಮೇ 15ರವರೆಗೂ ಲಾಕ್‍ಡೌನ್ ವಿಸ್ತರಣೆ ಸಾಧ್ಯತೆ – ರಾಜ್ಯಗಳ ಬೇಡಿಕೆ ಏನು?

    ಮೇ 15ರವರೆಗೂ ಲಾಕ್‍ಡೌನ್ ವಿಸ್ತರಣೆ ಸಾಧ್ಯತೆ – ರಾಜ್ಯಗಳ ಬೇಡಿಕೆ ಏನು?

    ನವದೆಹಲಿ: ಲಾಕ್‍ಡೌನ್ ವಿಸ್ತರಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿದ್ದು ಸಭೆ ಬಳಿಕ ಲಾಕ್‍ಡೌನ್ ಮುಂದುವರಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಮೂಲಗಳು ಹೇಳಿವೆ.

    ಮತ್ತಷ್ಟು ವಿನಾಯ್ತಿಗಳೊಂದಿಗೆ ಮೇ 15ರವರೆಗೂ ಲಾಕ್‍ಡೌನ್ ಮುಂದುವರಿಸುವ ಸಾಧ್ಯತೆ ಇದ್ದು, ಈ ಬಗ್ಗೆ ಅಧಿಕೃತ ಆದೇಶ ಹೊರ ಬರಬೇಕಿದೆ. ಈ ವಾರದ ಅಂತ್ಯದಲ್ಲಿ ಪ್ರಧಾನಿ ಮೋದಿ ದೇಶದ ಜನರನ್ನುದ್ದೇಶಿಸಿ ಐದನೇ ಬಾರಿ ಮಾತನಾಡಿಲಿದ್ದು, ಈ ವೇಳೆ ಲಾಕ್‍ಡೌನ್ ವಿಸ್ತರಣೆ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

    ಇಂದಿನ ಸಭೆಯಲ್ಲಿ ಒಂಭತ್ತು ರಾಜ್ಯಗಳಿಗೆ ಮಾತ್ರ ಪ್ರಧಾನಮಂತ್ರಿ ಜೊತೆಗೆ ಮಾತನಾಡಲು ಅವಕಾಶ ನೀಡಲಾಗಿತ್ತು. ಮೇಘಾಲಯ, ಮಿಜೋರಾಂ, ಪುದುಚೇರಿ, ಉತ್ತರಾಖಂಡ, ಹಿಮಾಚಲ ಪ್ರದೇಶ, ಒಡಿಶಾ, ಬಿಹಾರ, ಗುಜರಾತ್, ಹರಿಯಾಣ ಮುಖ್ಯಮಂತ್ರಿಗಳು ಸಭೆಯಲ್ಲಿ ಮಾತನಾಡಿದರು ಬಾಕಿ ಎಲ್ಲ ರಾಜ್ಯಗಳ ಸಿಎಂ ಗಳು ಪತ್ರ ಮೂಲಕ ತಮ್ಮ ವರದಿ ಮತ್ತು ಬೇಡಿಕೆಗಳನ್ನು ಕೇಂದ್ರ ಸರ್ಕಾರಕ್ಕೆ ನೀಡಿದರು.

    ಸಭೆಯಲ್ಲಿ ಮಾತನಾಡಿದ ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ ತುರ್ತು ಅವಶ್ಯಕತೆಗಳ ವಿನಾಯಿತಿಯೊಂದಿಗೆ ಲಾಕ್‍ಡೌನ್ ಮುಂದುವರಿಸಿ. ವೈದ್ಯಕೀಯ ಅವಶ್ಯಕತೆಗಳು ಹೊರತುಪಡಿಸಿ ಅಂತರ್ ಜಿಲ್ಲೆ, ರಾಜ್ಯಗಳ ಗಡಿ ಬಂದ್ ಮಾಡಿ ಎಂದು ಸಲಹೆ ನೀಡಿದರು. ಮೀಜೊರಾಂ ಸಿಎಂ ಕೇಂದ್ರ ಸರ್ಕಾರದ ನಿಯಮಗಳನ್ನು ಪಾಲಿಸುತ್ತೇವೆ ಎಂದರು.

    ಒಡಿಶಾದ ನವೀನ್ ಪಟ್ನಾಯಕ್ ಮಾತನಾಡಿ ಪ್ರಮುಖ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡಿ ಲಾಕ್‍ಡೌನ್ ಮುಂದುವರಿಸಬೇಕು. ಸಾರ್ವಜನಿಕ ಸಭೆಗಳು, ಧಾರ್ಮಿಕ ಮತ್ತು ಶಿಕ್ಷಣ ಸಂಸ್ಥೆಗಳ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಮತ್ತು ರಾಜ್ಯದ ಒಳಗಿನ ಆರ್ಥಿಕ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಬೇಕು. ಆರ್ಥಿಕತೆಯನ್ನು ಕಿಕ್‍ಸ್ಟಾರ್ಟ್ ಮಾಡಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

    ರೋಗದ ಲಕ್ಷಣಗಳನ್ನು ಹೊಂದಿರುವ ಜನರನ್ನು ಅಕ್ರಮಣಕಾರಿಯಾಗಿ ಪರೀಕ್ಷಿಸುತ್ತಿದ್ದೇವೆ. ಗಡಿ ರಾಜ್ಯಗಳು ಹೆಚ್ಚು ಪ್ರಕರಣಗಳನ್ನು ವರದಿ ಮಾಡಿವೆ. ಹಿಮಾಚಲದ 12 ಜಿಲ್ಲೆಗಳಿಗೆ ಯಾವುದೇ ಸಕಾರಾತ್ಮಕ ಪ್ರಕರಣಗಳಿಲ್ಲ. ಬಡ ಮತ್ತು ನಿರ್ಗತಿಕರಿಗೆ ಆರ್ಥಿಕವಾಗಿ ನೆರವು ನೀಡಲು ರಾಜ್ಯವು ಸಿದ್ಧವಾಗಿದೆ. ಆರ್ಥಿಕ ಚಟುವಟಿಕೆಗಳನ್ನು ಆರಂಭಿಸುವ ಸ್ಥಿತಿಯಲ್ಲಿದ್ದೇವೆ. ಇತರೆ ರಾಜ್ಯಗಳ ಅಭಿಪ್ರಾಯವನ್ನು ಸಂಗ್ರಹಿಸಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಿ ಎಂದು ಹಿಮಾಚಲ ಪ್ರದೇಶ ಸಿಎಂ ಜೈರಾಮ್ ಠಾಕೂರ್ ಹೇಳಿದರು.

    ಪುದುಚೇರಿ ಸಿಎಂ ವಿ ನಾರಾಯಣಸ್ವಾಮಿ ಮಾತನಾಡಿ ಪಿಪಿಇ ಕಿಟ್ ಸೇರಿದಂತೆ ವೈದ್ಯಕೀಯ ಉಪಕರಣಗಳನ್ನು ಕೇಂದ್ರ ಸರ್ಕಾರ ಒದಗಿಸಬೇಕು. ಕೊರೊನಾ ವಿರುದ್ಧ ಹೋರಾಟಕ್ಕೆ ಹಣಕಾಸಿನ ನೆರವು ನೀಡಿ. ಮೇ 3ರ ಬಳಿಕ ಲಾಕ್‍ಡೌನ್ ಬಳಿಕ ಕೈಗಾರಿಕೆ ತೆರೆಯಲು ಅವಕಾಶ ನೀಡಿ ಎಂದು ಮನವಿ ಮಾಡಿದರೆ, ಉತ್ತರಾಖಂಡ ಸಿಎಂ ತಿವೇಂದ್ರ ಸಿಂಗ್ ರಾವತ್ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ವ್ಯಾಪಾರ ವಹಿವಾಟು ಆರ್ಥಿಕತೆ ಪುನಾರಂಭಕ್ಕೆ ಅವಕಾಶ ನೀಡಬೇಕು. ಸರ್ಕಾರ ಹಂತ ಹಂತವಾಗಿ ಸಾಮಾನ್ಯ ಸ್ಥಿತಿಗೆ ತರುವ ಪ್ರಯತ್ನ ಮಾಡಿ ಎಂದು ಕೇಳಿಕೊಂಡರು.

    ರಾಜ್ಯಗಳಿಗೆ ಲಾಕ್‍ಡೌನ್ ನಿರ್ಧಾರ?
    ಮೇಲಿನ ಎಲ್ಲ ರಾಜ್ಯಗಳ ಜೊತೆಗೆ ಬಹುತೇಕ ರಾಜ್ಯಗಳು ವಿನಾಯತಿ ಜೊತೆಗೆ ಲಾಕ್‍ಡೌನ್ ಮುಂದುವರೆಸಲು ಸೂಚಿಸಿದ ಹಿನ್ನೆಲೆ ಕೇಂದ್ರ ಸರ್ಕಾರ ಲಾಕ್‍ಡೌನ್ ಮುಂದುವರೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ ಈ ಬಾರಿ ಯಾವ ಪ್ರದೇಶದಲ್ಲಿ ಲಾಕ್‍ಡೌನ್ ಮುಂದುವರಿಸಬೇಕು ಮತ್ತು ವಿನಾಯತಿಗೆ ಒಳಪಡಬೇಕು ಎನ್ನುವುದು ರಾಜ್ಯ ಸರ್ಕಾರ ನಿರ್ಧರಿಸುವ ಸಾಧ್ಯತೆ ಇದೆ. ಹಸಿರು ಕಿತ್ತಳೆ ಮತ್ತು ಕೆಂಪು ವಲಯಗಳ ಆಧಾರ ಮೇಲೆ ರಾಜ್ಯ ಸರ್ಕಾರವೇ ಕ್ರಮ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಸೂಚಿಸುವ ಸಾಧ್ಯತೆಯಿದ್ದು ವಲಯವಾರು ಕೇವಲ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಮುಂದೆ ಪ್ರಕಟಿಸಲಿದೆ. ಇದಾದ ಬಳಿಕ ಎಲ್ಲಿ ಯಾವುದಕ್ಕೆ ವಿನಾಯಿತಿ ಸಿಗಲಿದೆ ಎನ್ನುವುದು ಸ್ಪಷ್ಟವಾಗಲಿದೆ.

  • ಲಾಕ್‍ಡೌನ್ ಎಫೆಕ್ಟ್, ಭಾರೀ ಬೇಡಿಕೆ – ಕೆಲ ದಿನಗಳಲ್ಲಿ ಖಾಲಿಯಾಗಲಿದೆ ಕಾಂಡೋಮ್

    ಲಾಕ್‍ಡೌನ್ ಎಫೆಕ್ಟ್, ಭಾರೀ ಬೇಡಿಕೆ – ಕೆಲ ದಿನಗಳಲ್ಲಿ ಖಾಲಿಯಾಗಲಿದೆ ಕಾಂಡೋಮ್

    ಮಲೇಷ್ಯಾ: ಕೊರೊನಾ ವೈರಸ್ ವಿಶ್ವವ್ಯಾಪಿ ಹರಡುತ್ತಿರುವ ಪರಿಣಾಮ ಹಲವು ದೇಶಗಳನ್ನು ಲಾಕ್‍ಡೌಮ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾಂಡೋಮ್ ಪೂರೈಕೆ ಕಡಿಮೆಯಾಗಿದೆ ಎಂದು ವಿಶ್ವದಲ್ಲಿ ದೊಡ್ಡ ಪ್ರಮಾಣದಲ್ಲಿ ಕಾಂಡೋಮ್ ಪೂರೈಕೆ ಮಾಡುವ ಸಂಸ್ಥೆ ಕಾರೆಕ್ಸ್ ಹೇಳಿಕೆ ನೀಡಿದೆ.

    ಮಲೇಷಿಯಾದಲ್ಲಿ ಕಾಂಡೋಮ್ ತಯಾರಿಕಾ ಕಂಪನಿ ಕಾರೆಕ್ಸ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಲಾಕ್‍ಡೌನ್ ಹಿನ್ನೆಲೆ ಕಳೆದ 10 ದಿನಗಳಿಂದ ಕಂಪನಿಯಲ್ಲಿ ಕಾಂಡೋಮ್ ಉತ್ಪಾದನೆ ಸ್ಥಗಿತಗೊಂಡಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಕೊರೊನಾ ಎಫೆಕ್ಟ್- ಸ್ಯಾನಿಟೈಜರ್‌ಗಿಂತಲೂ ಕಾಂಡೋಮ್‍ಗಳಿಗೆ ಭಾರೀ ಬೇಡಿಕೆ

    ಬೇಡಿಕೆ ಹೆಚ್ಚುತ್ತಿರುವ ಈ ಹೊತ್ತಿನಲ್ಲಿ ಪೂರೈಕೆ ಶೇ. 50ರಷ್ಟು ಕುಸಿದಿದೆ. ನಮ್ಮ ಬಳಿ ಇರುವ ದಾಸ್ತಾನು ಎರಡು ತಿಂಗಳಲ್ಲಿ ಖಾಲಿಯಾಗಲಿದೆ. ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ ಮಲೇಷಿಯಾದ್ಯಂತ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಹೀಗಾಗಿ ದೀರ್ಘಾವದಿಗೆ ಉತ್ಪಾದನೆ ನಿಲ್ಲಿಸಿದ್ದ ಕಾರೆಕ್ಸ್ ಶುಕ್ರವಾರವಷ್ಟೇ ಮತ್ತೆ ಕಾಂಡೋಮ್ ತಯಾರಿಕೆಯನ್ನು ಆರಂಭಿಸಿದೆ. ಆದರೆ ಕೊರೊನಾ ಭೀತಿ ಹಿನ್ನೆಲೆ ಅರ್ಧ ಸಿಬ್ಬಂದಿಯ ಲಭ್ಯತೆಯೊಂದಿಗೆ ಕಂಪನಿ ಕಾರ್ಯನಿರ್ವಹಿಸುತ್ತಿದೆ. ಇದನ್ನೂ ಓದಿ: ನಿಮ್ಮ ಮನೆ ಈಗ ‘ಕಾಂಡೋಮ್’ ಇದ್ದಂತೆ ‘ಎಸ್‍ಟಿಡಿ’ಯಿಂದ ರಕ್ಷಿಸಿಕೊಳ್ಳಿ – ಕಿವೀಸ್ ಕ್ರಿಕೆಟರ್

    ಮಲೇಷ್ಯಾವನ್ನು ಹೊರತುಪಡಿಸಿ ಚೀನಾ, ಭಾರತ ಮತ್ತು ಥೈಲ್ಯಾಂಡ್‍ನಂತಹ ದೇಶಗಳು ಅತಿ ಹೆಚ್ಚು ಪ್ರಮಾಣದಲ್ಲಿ ಕಾಂಡೋಮ್ ಉತ್ಪಾದನೆಯ ಕಾರ್ಖಾನೆಗಳನ್ನು ಹೊಂದಿದೆ. ಆದರೆ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ ಈ ದೇಶಗಳಲ್ಲಿ ಲಾಕ್‍ಡೌನ್ ಮಾಡಲಾಗಿದೆ. ಹೀಗಾಗಿ ಕಾಂಡೋಮ್ ಉತ್ಪಾದನೆ ಸ್ಥಗಿತಗೊಂಡಿದೆ ಎಂದು ಸಂಸ್ಥೆ ಹೇಳಿದೆ.

    ಸೋಂಕು ಹರಡುವುದನ್ನು ತಡೆಯಲು ಬಹುತೇಕ ರಾಷ್ಟ್ರಗಳು ಲಾಕ್‍ಡೌನ್ ಘೋಷಿಸಿ, ಜನರನ್ನು ಮನೆಗಳಲ್ಲೇ ಇರುವಂತೆ ಸೂಚಿಸಿದೆ. ಹೀಗಿರುವಾಗಲೂ ಕಾಂಡೋಮ್‍ಗೆ ಬೇಡಿಕೆ ಮಾತ್ರ ಕಡಿಮೆ ಆಗಿಲ್ಲ. ಆದರೆ ಅದರ ಉತ್ಪಾದನೆ ಮಾತ್ರ ಕುಸಿಯುತ್ತಿದೆ ಎಂದು ಕಾರೆಕ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ ಗೋಹ್ ಮೈಹ್ ಕೇತ್ ತಿಳಿಸಿದ್ದಾರೆ.

    ಕಾರೆಕ್ಸ್ ಸಂಸ್ಥೆ 10 ದಿನಗಳಲ್ಲಿ 100 ಮಿಲಿಯನ್(10 ಕೋಟಿ) ಅಷ್ಟು ಕಾಂಡೋಮ್‍ಗಳನ್ನು ಉತ್ಪಾದಿಸಬಲ್ಲದು. ಈ ಕಾಂಡೋಮ್‍ಗಳು ವಿಶ್ವಾದ್ಯಂತ ಅನೇಕ ಬ್ರ್ಯಾಂಡ್‍ಗಳ ಹೆಸರಿನಲ್ಲಿ ಮಾರಾಟವಾಗುತ್ತದೆ. ಸುಮಾರು 140 ರಾಷ್ಟ್ರಗಳಿಗೆ ಕಾಂಡೋಮ್ ಅನ್ನು ಕಾರೆಕ್ಸ್ ಕಂಪನಿ ರಫ್ತು ಮಾಡುತ್ತದೆ. ಆದರೆ ಲಾಕ್‍ಡೌನ್ ಹಿನ್ನೆಲೆ ರಫ್ತು ವ್ಯವಸ್ಥೆ ಸ್ಥಗಿತಗೊಂಡಿದ್ದು, ಬೇರೆ ರಾಷ್ಟ್ರಗಳಿಗೆ ಕಾಂಡೋಮ್‍ಗಳನ್ನು ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಗೋಹ್ ಮೈಹ್ ಕೇತ್ ಹೇಳಿದ್ದಾರೆ.

    ಒಂದೆಡೆ ಬೇಡಿಕೆ ಹೆಚ್ಚುತ್ತಿದೆ, ಇನ್ನೊಂದೆಡೆ ಪೂರೈಕೆ ಕಡಿಮೆಯಾಗುತ್ತಿದೆ. ಇದರಿಂದ ಕಾಂಡೋಮ್ ಬೆಲೆ ಏರಿಕೆಯಾಗುತ್ತಿದೆ. ಬೇಡಿಕೆಯನ್ನು ಪೂರೈಸಲು ನಾವು ಉತ್ಪಾದನೆ ಹೆಚ್ಚಿಸಲು ನಮ್ಮ ಸಿಬ್ಬಂದಿಗೆ ಎಲ್ಲಾ ರೀತಿಯ ಸುರಕ್ಷಿತ ಸೌಲಭ್ಯಗಳನ್ನು ನೀಡುತ್ತಿದ್ದೇವೆ. ಆದರೆ ಕೊರೊನಾ ಭೀತಿಯಿಂದ ಸಿಬ್ಬಂದಿ ಕೆಲಸಕ್ಕೆ ಬರಲು ಹಿಂಜರಿಯುತ್ತಿದ್ದಾರೆ. ಆದ್ದರಿಂದ ಅರ್ಧದಷ್ಟು ಜನ ಮಾತ್ರ ಕೆಲಸಕ್ಕೆ ಹಾಜರಾಗುತ್ತಿರುವ ಪರಿಣಾಮ ಉತ್ಪಾದನೆಯೂ ಕುಸಿಯಲಿದೆ ಎಂದು ಕಾರೆಕ್ಸ್ ಸಂಸ್ಥೆ ಮಾಹಿತಿ ನೀಡಿದೆ.

  • ಕೊರೊನಾ ಭೀತಿ – ಕರಾವಳಿಯಲ್ಲಿ ಮೀನು, ಎಳನೀರಿಗೆ ಭಾರೀ ಬೇಡಿಕೆ

    ಕೊರೊನಾ ಭೀತಿ – ಕರಾವಳಿಯಲ್ಲಿ ಮೀನು, ಎಳನೀರಿಗೆ ಭಾರೀ ಬೇಡಿಕೆ

    ಮಂಗಳೂರು: ಕೊರೊನಾ ಭೀತಿಯಿಂದ ಜಗತ್ತು ನಲುಗಿದ್ದು, ಇಡೀ ವ್ಯಾಪಾರ ವಹಿವಾಟುಗಳು ಬಿದ್ದು ಹೋಗಿದೆ. ಹೋಟೆಲ್ ಗಳಲ್ಲಿ ಜನ ತಿನ್ನೋದು ಕಡಿಮೆ ಮಾಡಿ, ಮನೆ ಊಟದ ಕಡೆ ಮುಖ ಮಾಡಿದ್ದಾರೆ.

    ತಂಪು ಪಾನೀಯಗಳ ಬೇಡಿಕೆ ಕುಸಿದು ವ್ಯಾಪಾರ ತುಂಬಾ ಡಲ್ ಆಗಿದೆ. ಆದರೆ ಕಡಲತಡಿ ಮಂಗಳೂರಿನಲ್ಲಿ ಎಳನೀರಿಗೆ ಹಾಗೂ ಮೀನು ಮಾಂಸಕ್ಕೆ ಮಾತ್ರ ಭರ್ಜರಿ ಬೇಡಿಕೆ ಇದೆ. ಕರಾವಳಿ ಈಗಾಗಲೇ ಉಷ್ಣಾಂಶ ಏರಿಕೆ ಆಗಿದ್ದು, ತಂಪು ಪಾನೀಯಗಳ ಮೊರೆ ಹೋಗುವುದು ಸಾಮಾನ್ಯ. ಆದರೆ ಕೊರೊನಾ ಯಾವಾಗ ಆತಂಕ ಸೃಷ್ಟಿ ಮಾಡಿತೋ ಅಂದಿನಿಂದ ಜನರು ದೇಹ ತಣಿಸಲು ಎಳನೀರಿನ ಮೊರೆ ಹೋಗುತ್ತಿದ್ದಾರೆ.

    ಪ್ರಸ್ತುತ ಮಂಗಳೂರಿನಲ್ಲಿ 30 ರಿಂದ 35 ರೂಪಾಯಿಗೆ ಎಳನೀರು ಲಭ್ಯವಾಗುತ್ತಿದ್ದು, ಮುಂದೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೇ ಜನ ಕೊರೊನಾದ ಹೆದರಿಕೆಯಿಂದ ಕೋಳಿ ಮಾಂಸ ತಿನ್ನುವುದು ಬಿಟ್ಟ ಮೇಲೆ ಮೀನಿನ ಮಾಂಸಕ್ಕೆ ವಿಪರೀತ ಬೇಡಿಕೆ ಹೆಚ್ಚಾಗಿದೆ. ಒಂದೆಡೆ ಮತ್ಸ್ಯ ಕ್ಷಾಮ ಮತ್ತೊಂದು ಕಡೆ ಬೇಡಿಕೆ ಹೆಚ್ಚಳ ಇವುಗಳ ಪರಿಣಾಮ ಮೀನಿನ ಬೆಲೆ ಕೂಡ ಗಮನಕ್ಕೆ ಏರಿದೆ.

  • ಬೆಂಗ್ಳೂರಲ್ಲಿ ಪ್ರತಿಭಟನಾ ಕಾವು- ಸವಾರರಿಗೆ ತಟ್ಟಲಿದೆ ಟ್ರಾಫಿಕ್ ಸಮಸ್ಯೆ

    ಬೆಂಗ್ಳೂರಲ್ಲಿ ಪ್ರತಿಭಟನಾ ಕಾವು- ಸವಾರರಿಗೆ ತಟ್ಟಲಿದೆ ಟ್ರಾಫಿಕ್ ಸಮಸ್ಯೆ

    ಬೆಂಗಳೂರು: ಕನಿಷ್ಠ ವೇತನ, ಕಾಯಂ ನೌಕರಿ, ಪಿಂಚಣಿ ಸೌಲಭ್ಯ ಸೇರಿದಂತೆ ಹಲವು ಬೇಡಿಕೆಗಳನ್ನ ಮುಂದಿಟ್ಟುಕೊಂಡು ಬಿಸಿಯೂಟ ಕಾರ್ಯಕರ್ತರು ಇಂದು ಮತ್ತು ನಾಳೆ ಪ್ರತಿಭಟನೆ ಮಾಡಲು ಸಜ್ಜಾಗಿದ್ದಾರೆ.

    ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಿಸಿಯೂಟ ಕಾರ್ಯಕರ್ತರು ಆಗಮಿಸಿದ್ದಾರೆ. ಸಿಟಿ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನಾ ರ‍್ಯಾಲಿ ಮಾಡುವ ಮೂಲಕ ಪ್ರತಿಭಟನೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ಪ್ರತಿಭಟನಾ ರ‍್ಯಾಲಿ ಹಿನ್ನೆಲೆಯಲ್ಲಿ ಸಿಟಿ ರೈಲ್ವೆ ನಿಲ್ದಾಣ ಮುಖ್ಯ ರಸ್ತೆ ಹಾಗೂ ನೃಪತುಂಗ ರೋಡ್ ಸಂಪೂರ್ಣವಾಗಿ ವಾಹನ ಸವಾರಕ್ಕೆ ಬಂದ್ ಆಗಲಿದೆ.

    ಏಕಕಾಲದಲ್ಲಿ ಸಾವಿರಾರು ಕೆಂಪು ಮಹಿಳೆಯರು ರಸ್ತೆಯಲ್ಲಿ ಮೆರವಣಿಗೆ ಮಾಡುವುದರಿಂದ ಮೆಜೆಸ್ಟಿಕ್, ಕೆಜಿ ರೋಡ್, ನೃಪತುಂಗ ರೋಡ್, ಶೇಷಾದ್ರಿ ರೋಡ್ ಸೇರಿದಂತೆ ಸುತ್ತಮುತ್ತಲಿನ ರೋಡ್‍ಗಳು ಜಾಮ್ ಆಗೋ ಸಾಧ್ಯತೆಗಳಿವೆ. ಇದರಿಂದ ವಾಹನ ಸವಾರರು ಬೇರೆ ಮಾರ್ಗ ಬಳಸುವುದು ಉತ್ತಮ.

  • ಗಮನಿಸಿ: ಎರಡು ದಿನ ಬ್ಯಾಂಕ್ ಸೇವೆ ಸಿಗಲ್ಲ!

    ಗಮನಿಸಿ: ಎರಡು ದಿನ ಬ್ಯಾಂಕ್ ಸೇವೆ ಸಿಗಲ್ಲ!

    ಬೆಂಗಳೂರು: ಜನವರಿ 31 ರಿಂದ ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಬ್ಯಾಂಕ್ ಒಕ್ಕೂಟಗಳು ಕರೆ ನೀಡಿವೆ. ಹೀಗಾಗಿ ಜನವರಿ 31 ಹಾಗೂ ಫೆಬ್ರವರಿ 1 ರಂದು ಬ್ಯಾಂಕ್ ಸೇವೆ ಜನರಿಗೆ ಲಭ್ಯವಿರಲ್ಲ.

    ಒಂಬತ್ತು ಕಾರ್ಮಿಕ ಸಂಘಟನೆಗಳನ್ನು ಪ್ರತಿನಿಧಿಸುವ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಈ ಮುಷ್ಕರಕ್ಕೆ ಕರೆ ನೀಡಿದೆ. ವೇತನ ಪರಿಷ್ಕರಣೆ, ಐದು ದಿನ ಬ್ಯಾಂಕಿಂಗ್ ಸೇವೆ ಮತ್ತು ಹೊಸ ಪಿಂಚಣಿ ವ್ಯವಸ್ಥೆ ರದ್ದು ಸೇರಿದಂತೆ ಸುಮಾರು 12 ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ.

    ಒಂದು ವೇಳೆ ಕೇಂದ್ರ ಸರ್ಕಾರ ಸಕಾರತ್ಮಾಕವಾಗಿ ಸ್ಪಂದಿಸದೇ ಇದ್ದರೆ, ಏಪ್ರಿಲ್ 1 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವ ಎಚ್ಚರಿಕೆಯನ್ನು ಭಾರತೀಯ ಬ್ಯಾಂಕ್ ಅಸೋಸಿಯೇಷನ್ ಮುಖ್ಯಸ್ಥರು, ಹಣಕಾಸು ಸೇವಾ ಇಲಾಖೆಯ ಕಾರ್ಯದರ್ಶಿ ಹಾಗೂ ಕಾರ್ಮಿಕ ಆಯೋಗದ ಮುಖ್ಯ ಆಯುಕ್ತರಿಗೆ ಪತ್ರದ ಮೂಲಕ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.

  • ಚಳಿಗಾಲದಲ್ಲೂ ಹೆಚ್ಚಾಯ್ತು ಬೇಡಿಕೆ – ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಮೇಲೆ ಒತ್ತಡ

    ಚಳಿಗಾಲದಲ್ಲೂ ಹೆಚ್ಚಾಯ್ತು ಬೇಡಿಕೆ – ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಮೇಲೆ ಒತ್ತಡ

    ರಾಯಚೂರು: ಸಾಮಾನ್ಯವಾಗಿ ಚಳಿಗಾಲದಲ್ಲಿ ವಿದ್ಯುತ್ ಬೇಡಿಕೆ ಕಮ್ಮಿ ಇರುತ್ತದೆ. ಆದರೆ ಈ ವರ್ಷ ಬೇಡಿಕೆ ಅಧಿಕವಾಗಿದೆ. ಹೀಗಾಗಿ ರಾಜ್ಯದ ಶಾಖೊತ್ಪನ್ನ ವಿದ್ಯುತ್ ಕೇಂದ್ರಗಳ ಮೇಲೆ ಹೆಚ್ಚು ವಿದ್ಯುತ್ ಉತ್ಪಾದನೆಯ ಒತ್ತಡ ಬಿದ್ದಿದೆ.

    ರಾಜ್ಯಕ್ಕೆ ಶೇಕಡಾ 40 ರಷ್ಟು ವಿದ್ಯುತ್ ನೀಡುವ ಪ್ರಮುಖ ಶಾಖೋತ್ಪನ್ನ ವಿದ್ಯುತ್ ಕೇಂದ್ರ ರಾಯಚೂರಿನ ಆರ್.ಟಿ.ಪಿ.ಎಸ್ (ರಾಯಚೂರು ಥರ್ಮಲ್ ಪವರ್ ಸ್ಟೇಷನ್) ಮೇಲೆ ಹೆಚ್ಚಿನ ಒತ್ತಡವಿದೆ. ಹೀಗಾಗಿ ಆರ್.ಟಿ.ಪಿ.ಎಸ್ ನ 8 ಘಟಕಗಳಲ್ಲಿ 7 ಘಟಕಗಳು ನಿರಂತರವಾಗಿ ದಾಖಲೆ ಪ್ರಮಾಣದ ವಿದ್ಯುತ್ ಉತ್ಪಾದನೆಗೆ ಮುಂದಾಗಿವೆ. ಕೃಷಿ, ನೀರಾವರಿ ಪಂಪ್ ಸೆಟ್ ಸೇರಿದಂತೆ ಇನ್ನಿತರ ಕಾರಣಗಳಿಗೆ ಹೆಚ್ಚು ವಿದ್ಯುತ್ ಬಳಕೆಯಿರುವುದರಿಂದ ಬೇಡಿಕೆಯೂ ಹೆಚ್ಚಾಗಿದೆ. ಹೀಗಾಗಿ ಮಳೆಗಾಲ, ಚಳಿಗಾಲದಲ್ಲಿ ವಾರ್ಷಿಕ ನಿರ್ವಹಣೆಗೆ ಒಳಪಡಬೇಕಾದ ಘಟಕಗಳು ನಿರಂತರವಾಗಿ ವಿದ್ಯುತ್ ಉತ್ಪಾದಿಸುತ್ತಿವೆ.

    ಆರ್.ಟಿ.ಪಿ.ಎಸ್ ನ 8 ಘಟಕಗಳಿಗೆ ಒಟ್ಟು 1,ಸ720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮಥ್ರ್ಯವಿದ್ದು, ಈಗ 7 ಘಟಕಗಳಿಂದ 1,083 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. 1,700 ಮೆಗಾ ವ್ಯಾಟ್ ಸಾಮಥ್ರ್ಯದ ಬಳ್ಳಾರಿ ಬಿಟಿಪಿಎಸ್ ನಲ್ಲಿ 453 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ.

    ರಾಜ್ಯದಲ್ಲಿ ಒಟ್ಟು 8,323 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಕಳೆದ ಎರಡು ದಿನಗಳ ಹಿಂದೆ 10,121 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇತ್ತು. ಈ ವರ್ಷ ಉತ್ತಮ ಮಳೆಯಾಗಿದ್ದರಿಂದ ಈ ಚಳಿಗಾಲದಲ್ಲಿ ಬೇಡಿಕೆ ಕಡಿಮೆ ಇರುತ್ತದೆ ಎನ್ನಲಾಗಿತ್ತು. ಆದರೆ ಚಳಿಗಾಲದಲ್ಲಿಯೇ ಅಧಿಕ ಬೇಡಿಕೆ ಇದೆ. ರಾಜ್ಯದ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಿಗೆ ಸದ್ಯ ಕಲ್ಲಿದ್ದಲು ಕೊರತೆಯಿಲ್ಲದ ಕಾರಣ ನಿರಂತರ ವಿದ್ಯುತ್ ಉತ್ಪಾದನೆ ಯಾವ ತೊಡಕಿಲ್ಲದೆ ನಡೆದಿದೆ.

  • ತಗ್ಗಿದ ವಿದ್ಯುತ್ ಬೇಡಿಕೆ- ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಐದು ಘಟಕಗಳ ಕಾರ್ಯ ಸ್ಥಗಿತ

    ತಗ್ಗಿದ ವಿದ್ಯುತ್ ಬೇಡಿಕೆ- ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಐದು ಘಟಕಗಳ ಕಾರ್ಯ ಸ್ಥಗಿತ

    ರಾಯಚೂರು: ರಾಜ್ಯದಲ್ಲಿ ಭಾರೀ ಮಳೆ ಹಿನ್ನೆಲೆ ವಿದ್ಯುತ್ ಬೇಡಿಕೆಯಲ್ಲಿ ಇಳಿಕೆಯಾಗಿದ್ದು ರಾಯಚೂರಿನ ಶಕ್ತಿ ನಗರದಲ್ಲಿರುವ ಆರ್‍ ಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಐದು ಘಟಕಗಳು ಕಾರ್ಯ ಸ್ಥಗಿತಗೊಳಿಸಿವೆ.

    ವಿದ್ಯುತ್ ಕೇಂದ್ರದ ಒಟ್ಟು ಎಂಟು ಘಟಕಗಳಲ್ಲಿ ಐದು ಸ್ಥಗಿತವಾಗಿವೆ. ಬೇಡಿಕೆ ಇಳಿಕೆ ಹಿನ್ನೆಲೆ ವಿದ್ಯುತ್ ಉತ್ಪಾದನೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಮಾಡಲಾಗಿದೆ. 1,720 ಮೆಗಾ ವ್ಯಾಟ್ ಸಾಮರ್ಥ್ಯದ ಆರ್ ಟಿಪಿಎಸ್ ವಿದ್ಯುತ್ ಕೇಂದ್ರದಿಂದ ಕೇವಲ 399 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.

    ಬಳ್ಳಾರಿಯ ಬಿಟಿಪಿಎಸ್ ಸಹ ವಿದ್ಯುತ್ ಉತ್ಪಾದನೆಯಲ್ಲಿ ಕಡಿತಗೊಳಿಸಿದ್ದು, 1,700 ಮೆಗಾ ವ್ಯಾಟ್ ಸಾಮರ್ಥ್ಯದ ಬಿಟಿಪಿಎಸ್ ಕೇವಲ 243 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದೆ. ಶರಾವತಿ, ನಾಗಜರಿ ಸೇರಿದಂತೆ ಜಲ ವಿದ್ಯುತ್ ಸ್ಥಾವರಗಳು ಹೆಚ್ಚು ಪ್ರಮಾಣದ ವಿದ್ಯುತ್ ಉತ್ಪಾದನೆ ಮಾಡುತ್ತಿರುವುದರಿಂದ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಮೇಲೆ ಒತ್ತಡ ಕಡಿಮೆಯಾಗಿದೆ. ರಾಜ್ಯದಲ್ಲಿ ಒಟ್ಟು 6,504 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆಯಿದ್ದು ಎಲ್ಲ ಮೂಲಗಳಿಂದ 6,503 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.

  • ಯೂತ್‍ಗೆ ಏನಾದ್ರು ಮಾಡಿ ಅಪ್ಪಾ- ಸಚಿವ ಕೋಟ ಮಕ್ಕಳಿಂದ ಫಸ್ಟ್ ಬೇಡಿಕೆ

    ಯೂತ್‍ಗೆ ಏನಾದ್ರು ಮಾಡಿ ಅಪ್ಪಾ- ಸಚಿವ ಕೋಟ ಮಕ್ಕಳಿಂದ ಫಸ್ಟ್ ಬೇಡಿಕೆ

    ಉಡುಪಿ: ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಗೆ ಮಿನಿಸ್ಟರ್ ಪಟ್ಟ ಒಲಿದಿದ್ದು, ಇಂದು ಬೆಳಗ್ಗೆ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೆ ಮಿನಿಸ್ಟರ್ ಕೋಟ ಅವರ ಮಕ್ಕಳು ಅಪ್ಪನಲ್ಲಿ ಮೊದಲ ದಿನವೇ ತಮ್ಮ ಮೊದಲ ಬೇಡಿಕೆ ಒಟ್ಟಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ ಪತ್ನಿ ಶಾಂತ, ರಾತ್ರಿ 11.30ಕ್ಕೆ ಸಿಎಂ ಯಡಿಯೂರಪ್ಪ ಅವರು ಫೋನ್ ಮಾಡಿದ್ದರು. ಆಗ ನಮಗೆ ವಿಷಯ ಗೊತ್ತಾಗಿದೆ. ಕಳೆದ ಬಾರಿ ಮಾಡಿದಷ್ಟೇ ಕೆಲಸ ಈ ಬಾರಿಯೂ ಮಾಡಬೇಕು. ಕಷ್ಟದಲ್ಲಿರುವ ಜನರ ಸಮಸ್ಯೆ ಬಗೆಹರಿಸಿ, ಜನರ ಬೇಡಿಕೆ ಈಡೇರಿಸಲಿ ಎಂದು ಹಾರೈಸಿದರು.

    ಮಕ್ಕಳಾದ ಶ್ರುತಿ ಮತ್ತು ಸ್ವಾತಿ ಖುಷಿ ವ್ಯಕ್ತಪಡಿಸಿದ್ದು, ಅಪ್ಪ ಯೂತ್‍ಗೆ ಏನಾದ್ರು ಮಾಡಬೇಕು. ಯುವಕರ ಶಿಕ್ಷಣಕ್ಕೆ ಸಹಾಯ ಆಗುವ ಕೆಲಸ ಮಾಡಲಿ. ಎಜುಕೇಶನ್‍ಗೆ ಸಂಬಂಧಪಟ್ಟ ಹಲವು ಕೆಲಸ ಮಾಡಲಿ ಎಂದು ಅಪ್ಪನಲ್ಲಿ ಬೇಡಿಕೆ ಇಟ್ಟಿದ್ದಾರೆ.

  • ರಾಂಧವನಿಗೆ ಪರಭಾಷೆಗಳಲ್ಲಿಯೂ ಬೇಡಿಕೆ!

    ರಾಂಧವನಿಗೆ ಪರಭಾಷೆಗಳಲ್ಲಿಯೂ ಬೇಡಿಕೆ!

    ಪೌರಾಣಿಕ ಹಾಗೂ ಆಧುನಿಕ ಕಥೆಗಳ ಮಹಾಸಂಗಮದ ಸುಳಿವಿನೊಂದಿಗೇ ಭರ್ಜರಿ ಟಾಕ್ ಕ್ರಿಯೇಟ್ ಮಾಡಿರೋ ಚಿತ್ರ ರಾಂಧವ. ಬಿಗ್ ಬಾಸ್ ಭುವನ್ ಪೊನ್ನಣ್ಣ ನಾಯಕನಾಗಿ ನಟಿಸಿರೋ ಈ ಚಿತ್ರ ಇದೇ ಆಗಸ್ಟ್ ಹದಿನೈದರಂದು ಬಿಡುಗಡೆಯಾಗುತ್ತಿದೆ. ಕನ್ನಡದ ಪ್ರೇಕ್ಷಕರಂತೂ ರಾಂಧವನ ಜೊತೆಗೇ ಸ್ವಾತಂತ್ರ್ಯದ ಸಂಭ್ರಮಾಚರಣೆ ಮಾಡಲು ನಿರ್ಧರಿಸಿದ್ದಾರೆ. ಇದೇ ಹೊತ್ತಿನಲ್ಲಿ ಪರಭಾಷೆಗಳಿಂದ ಡಬ್ಬಿಂಗ್ ಮತ್ತು ರೀಮೇಕ್ ಹಕ್ಕುಗಳಿಗಾಗಿ ಭಾರೀ ಬೇಡಿಕೆಯೂ ಶುರುವಾಗಿದೆ.

    ಕನ್ನಡದಲ್ಲಿ ಮಾತ್ರವಲ್ಲ, ಪರಭಾಷಾ ಚಿತ್ರರಂಗಗಳಲ್ಲಿಯೂ ಪೌರಾಣಿಕ ಕಥಾ ಹಂದರದ ಹತ್ತಿರ ಹೋಗೋ ಸಾಹಸ ಮಾಡುವವರು ಕಡಿಮೆ. ಆದರೆ ಅಂಥಾ ಚಿತ್ರಗಳಿಗಾಗಿ ಪ್ರೇಕ್ಷಕರು ಮಾತ್ರ ಸದಾ ಹಂಬಲಿಸುತ್ತಿರುತ್ತಾರೆ. ಈ ಕಾರಣದಿಂದಲೇ ರಾಂಧವ ಕನ್ನಡದ ಗಡಿ ದಾಟಿ ಬೇರೆ ಭಾಷೆಗಳಲ್ಲಿಯೂ ಹವಾ ಸೃಷ್ಟಿಸಿದೆ. ಈಗಾಗಲೇ ಇದರಲ್ಲಿ ಭುವನ್ ಪೊನ್ನಣ್ಣ ನಿರ್ವಹಿಸಿರೋ ಪಾತ್ರದ ಸುಳಿವು, ದೃಷ್ಯ ಶ್ರೀಮಂತಿಕೆ ಕಂಡು ಪರಭಾಷಾ ಚಿತ್ರರಂಗದ ಮಂದಿ ಬೆರಗಾಗಿದ್ದಾರೆ. ಬೇರೆ ಬೇರೆ ಬಾಷೆಗಳಿಂದ ನಿರ್ಮಾಪಕ ಸನತ್ ಕುಮಾರ್ ಅವರಿಗೆ ಕರೆಗಳು ಬರುತ್ತಿವೆ. ಆದರೆ ಸದ್ಯಕ್ಕವರು ಯಾವುದಕ್ಕೂ ಪ್ರತಿಕ್ರಿಯಿಸುತ್ತಿಲ್ಲ.

    ರಾಂಧವ ಕನ್ನಡದ ಹೆಮ್ಮೆಯ ಚಿತ್ರವಾಗಿ ದಾಖಲಾಗುತ್ತದೆಂಬ ಲಕ್ಷಣ ಆರಂಭದಿಂದಲೂ ಕಾಣಿಸುತ್ತಿದೆ. ಇದೀಗ ಪರಭಾಷೆಗಳಿಂದ ಕೇಳಿ ಬರುತ್ತಿರುವ ಡಬ್ಬಿಂಗ್ ಮತ್ತು ರೀಮೇಕ್ ರೈಟ್ಸ್ ಗಾಗಿನ ಬೇಡಿಕೆ ಅದನ್ನು ನಿಜವಾಗಿಸುವ ಲಕ್ಷಣದಂತೆಯೂ ಕಾಣಿಸುತ್ತಿದೆ. ರಾಂಧವನನ್ನು ಹೊಸಬರೇ ಸೇರಿ ರೂಪಿಸಿದ್ದರೂ ಅದರ ಛಾಯೆ ಈವರೆಗಿನ ಕೆಲಸ ಕಾರ್ಯಗಳಲ್ಲಿ ಎಲ್ಲಿಯೂ ಕಾಣಿಸಿಲ್ಲ. ಅದೆಷ್ಟೋ ವರ್ಷಗಳಿಂದ ಚಿತ್ರರಂಗದಲ್ಲಿ ಪಳಗಿದವರಂತೆಯೇ ಸುನಿಲ್ ಆಚಾರ್ಯ ಈ ಸಿನಿಮಾವನ್ನು ಕಟ್ಟಿ ಕೊಟ್ಟಿದ್ದಾರೆ. ಅಂತೂ ರೀಮೇಕ್ ಮತ್ತು ಡಬ್ಬಿಂಗ್ ರೈಟ್ಸ್ ಗಳು ದೊಡ್ಡ ಮೊತ್ತಕ್ಕೆ ಮಾರಾಟವಾಗೋ ಸಾಧ್ಯತೆಗಳಿವೆ.

  • ಸರ್ಕಾರ ಯಾವುದೇ ಇರಲಿ, ನಮ್ಮ ಬೇಡಿಕೆ ಪೂರೈಕೆ ಆಗ್ಬೇಕು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ

    ಸರ್ಕಾರ ಯಾವುದೇ ಇರಲಿ, ನಮ್ಮ ಬೇಡಿಕೆ ಪೂರೈಕೆ ಆಗ್ಬೇಕು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ

    ದಾವಣಗೆರೆ: ಸರ್ಕಾರ ಯಾವುದೇ ಇರಲಿ. ನಮ್ಮ ಬೇಡಿಕೆ ಎರಡು ತಿಂಗಳಲ್ಲಿ ಪೂರೈಕೆ ಆಗಬೇಕು ಎಂದು ಮತ್ತೆ ಸರ್ಕಾರದ ವಿರುದ್ಧ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಗುಡುಗಿದ್ದಾರೆ.

    ಇಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಮ್ಮ ಬೇಡಿಕೆಯನ್ನು ನೆರವೇರಿಸುವಲ್ಲಿ ವಿಳಂಬವಾದರೆ ನಮ್ಮ 15 ಶಾಸಕರು ಪಕ್ಷಾತೀತವಾಗಿ ರಾಜೀನಾಮೆ ನೀಡಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

    ಕೆಲ ದಿನಗಳ ಹಿಂದೆ ಪರಿಶಿಷ್ಟ ಪಂಗಡಕ್ಕೆ ಈಗ ಇರುವ ಶೇ 3.5 ರಷ್ಟು ಮೀಸಲಾತಿಯನ್ನು ಕೇಂದ್ರ ಸರ್ಕಾರದ ಮಾದರಿಯಲ್ಲಿ ಶೇಕಡಾ 7.5ಕ್ಕೆ ಏರಿಸುವಂತೆ ಆಗ್ರಹಿಸಿ ಸ್ವಾಮೀಜಿ ಪಾದಯಾತ್ರೆ ಮಾಡಿದ್ದರು. ಅ ಸಮಯದಲ್ಲಿ ರಾಜ್ಯ ಸರ್ಕಾರ ಸ್ವಾಮೀಜಿ ಅವರ ಬಳಿ ಎರಡು ತಿಂಗಳು ಗಡುವು ಕೇಳಿತ್ತು. ಆದರೆ ಈಗ ಶಾಸಕರ ರಾಜೀನಾಮೆ ಇಂದ ಸರ್ಕಾರವೇ ಪತನವಾಗುತ್ತಿದೆ.

    ಈ ಸಮಯದಲ್ಲಿ ಸರ್ಕಾರ ಯಾವುದೇ ಇರಲಿ. ನಮ್ಮ ಬೇಡಿಕೆ ಪೂರೈಕೆ ಆಗಬೇಕು. ವಿಳಂಬವಾದರೆ ಮತ್ತೆ ಹೋರಾಟ ಮಾಡುತ್ತೇವೆ. ಇಲ್ಲದಿದ್ದರೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‍ನಲ್ಲಿ ಇರುವ ವಾಲ್ಮೀಕಿ ಸಮಾಜದ 15 ಜನ ಶಾಸಕರು ರಾಜೀನಾಮೆ ಕೊಡುವುದು ಶತಸಿದ್ಧ ಎಂದು ಎಚ್ಚರಿಕೆ ನೀಡಿದ್ದಾರೆ.