Tag: Dena Bank

  • ಬ್ಯಾಂಕ್ ಆಫ್ ಬರೋಡಾದಲ್ಲಿ ಏ.1ರಂದು ದೇನಾ, ವಿಜಯಾ ಬ್ಯಾಂಕ್ ವಿಲೀನ: ಗ್ರಾಹಕರು ಏನು ಮಾಡಬೇಕು?

    ಬ್ಯಾಂಕ್ ಆಫ್ ಬರೋಡಾದಲ್ಲಿ ಏ.1ರಂದು ದೇನಾ, ವಿಜಯಾ ಬ್ಯಾಂಕ್ ವಿಲೀನ: ಗ್ರಾಹಕರು ಏನು ಮಾಡಬೇಕು?

    ಮುಂಬೈ: ಬ್ಯಾಂಕ್ ಆಫ್ ಬರೋಡಾದಲ್ಲಿ ಏಪ್ರಿಲ್ 1ರಂದು ದೇನಾ ಮತ್ತು ವಿಜಯಾ ಬ್ಯಾಂಕ್‍ಗಳು ವಿಲೀನಗೊಳ್ಳಲಿವೆ. ಈ ಎರಡು ಬ್ಯಾಂಕ್‍ಗಳಲ್ಲಿರುವ ಖಾತೆಗಳು ಬ್ಯಾಂಕ್ ಆಫ್ ಬರೋಡಾಗೆ ವರ್ಗಾವಣೆಗೊಳ್ಳಲಿವೆ. ಈ ಎರಡು ಬ್ಯಾಂಕ್‍ಗಳ ವಿಲೀನದಿಂದಾಗಿ ದೇಶದ ಮೂರನೇ ಅತಿದೊಡ್ಡ ಬ್ಯಾಂಕ್ ಆಗಲಿದೆ.

    ಪಸ್ತುತ 45.85 ಲಕ್ಷ ಕೋಟಿ ಮೌಲ್ಯದ ವ್ಯವಹಾರಗಳೊಂದಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೊದಲ ಸ್ಥಾನದಲ್ಲಿದೆ. 15.8 ಲಕ್ಷ ಕೋಟಿ ವ್ಯವಹಾರಗಳೊಂದಿಗೆ ಎಚ್‍ಡಿಎಫ್‍ಸಿ ಎರಡನೇ ಸ್ಥಾನದಲ್ಲಿ, 11.02 ಲಕ್ಷ ಕೋಟಿ ವ್ಯವಹಾರಗಳೊಂದಿಗೆ ಐಸಿಐಸಿಐ ಮೂರನೇ ಸ್ಥಾನದಲ್ಲಿವೆ. ದೇನಾ ಮತ್ತು ವಿಜಯಾ ಬ್ಯಾಂಕ್‍ಗಳ ವಿಲೀನದಿಂದಾಗಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರದ ಮೌಲ್ಯ 15.4 ಲಕ್ಷ ಕೋಟಿ ಆಗಲಿದೆ. ಐಸಿಐಸಿಐ ಬ್ಯಾಂಕ್ ನ್ನು ಹಿಂದೆ ತಳ್ಳಿ ಬ್ಯಾಂಕ್ ಆಫ್ ಬರೋಡಾ ಮೂರನೇ ಸ್ಥಾನವನ್ನ ಅಲಂಕರಿಸಲಿದೆ.

    ದೇನಾ, ವಿಜಯ ಬ್ಯಾಂಕ್ ಗ್ರಾಹಕರು ಏನು ಮಾಡಬೇಕು?
    1. ಗ್ರಾಹಕರಿಗೆ ಹೊಸ ಖಾತೆಯ ಸಂಖ್ಯೆ ಮತ್ತು ಕಸ್ಟಮರ್ ಐಡಿ ಸಿಗಲಿದೆ.
    2. ದೇನಾ ಮತ್ತು ವಿಜಯಾ ಬ್ಯಾಂಕ್ ಗ್ರಾಹಕರೆಲ್ಲರಿಗೂ ಹೊಸ ಖಾತೆ ನಂಬರ್ ದೊರೆತ ಕೂಡಲೇ, ಆದಾಯ ತೆರಿಗೆ ಇಲಾಖೆ, ವಿಮೆ, ಪಿಂಚಣಿಗಳಿಗೆ ಮಾಹಿತಿಯನ್ನು ನೀಡಬೇಕು.
    3. ಸಾಲಗಾರರು ಅಥವಾ ಇಎಂಐ ಗ್ರಾಹಕರು ಹೊಸ ಅರ್ಜಿಯನ್ನು ಭರ್ತಿ ಮಾಡಿ, ಸಂಬಂಧಪಟ್ಟ ದಾಖಲೆಗಳನ್ನು ಬ್ಯಾಂಕಿಗೆ ಸಲ್ಲಿಸಬೇಕು.
    4. ಬ್ಯಾಂಕ್ ಆಫ್ ಬರೋಡಾಗೆ ಸೇರ್ಪಡೆಯಾಗುವ ಎಲ್ಲ ಗ್ರಾಹಕರಿಗೆ ಹೊಸ ಡೆಬಿಟ್ ಕಾರ್ಡ್, ಚೆಕ್‍ಬುಕ್ ಮತ್ತು ಕ್ರೆಡಿಟ್ ಕಾರ್ಟ್ ನೀಡಲಾಗುತ್ತದೆ.
    6. ವಾಹನಗಳ ಮೇಲಿನ ಸಾಲ, ಗೃಹ ಸಾಲ, ವೈಯಕ್ತಿಕ ಸಾಲ ಪಡೆದ ಗ್ರಾಹಕರು ಪಾವತಿಸುತ್ತಿರುವ ಬಡ್ಡಿ ಮೊತ್ತದಲ್ಲಿ ಯಾವುದೇ ಬದಲಾವಣೆಗಳಿಲ್ಲ.
    7. ಬ್ಯಾಂಕ್‍ಗಳ ವಿಲೀನದಿಂದಗ ಕೆಲ ಶಾಖೆಗಳು ಬಂದ್ ಆಗಲಿವೆ. ಹಾಗಾಗಿ ಗ್ರಾಹಕರು ಸಮೀಪದ ಬ್ಯಾಂಕ್ ಬರೋಡಾ ಬ್ಯಾಂಕ್ ಸಂಪರ್ಕಿಸಬೇಕು.

    ಈ ಮೊದಲು ಸ್ಟೇಟ್ ಬ್ಯಾಂಕ್ ಆಫ್ ಜೈಪುರ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸ್ಟೇಟ್ ಬ್ಯಾಂಕ್ ಆಫ್ ತ್ರವಾಂಕೋರ್, ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಪಟಿಯಾಲಾ ಬ್ಯಾಂಕ್‍ಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿಲೀನಗೊಳಿಸಲಾಗಿತ್ತು.

  • ನಳಿನ್‍ಕುಮಾರ್ ಶವ ಸಂಸ್ಕಾರ ನಡೆಸೋದು ಮಾತ್ರ ಬಾಕಿಯಿದೆ: ರಮಾನಾಥ ರೈ

    ನಳಿನ್‍ಕುಮಾರ್ ಶವ ಸಂಸ್ಕಾರ ನಡೆಸೋದು ಮಾತ್ರ ಬಾಕಿಯಿದೆ: ರಮಾನಾಥ ರೈ

    ಮಂಗಳೂರು: ಸಂಸದ ನಳಿನ್‍ಕುಮಾರ್ ಕಟೀಲ್ ಶವ ಸಂಸ್ಕಾರ ನಡೆಸುವುದು ಮಾತ್ರ ಬಾಕಿಯಿದೆ ಎಂದು ಮಾಜಿ ಸಚಿವ ರಮಾನಾಥ ರೈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ನೋಟ್ ಬ್ಯಾನ್ ಆಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ನಗರದ ಜಿಲ್ಲಾ ಕಚೇರಿ ಎದುರಲ್ಲಿ ಪ್ರತಿಭಟನಾ ಸಭೆ ನಡೆಸಿದ್ದರು. ಈ ವೇಳೆ ಮಾತನಾಡಿದ ಮಾಜಿ ಸಚಿವರು, ಲಾಭದಲ್ಲಿರುವ ವಿಜಯ ಬ್ಯಾಂಕ್ ಜೊತೆಗೆ ನಷ್ಟದಲ್ಲಿರುವ ದೇನಾ ಬ್ಯಾಂಕನ್ನು ವಿಲೀನಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರ ಖಂಡನೀಯ ಎಂದು ಹರಿಹಾಯ್ದರು.

    ವಿಜಯ್ ಬ್ಯಾಂಕನ್ನು ನಮ್ಮ ಸಮುದಾಯದ ನಾಯಕರು ಸ್ಥಾಪಿಸಿ ಬೆಳೆಸಿದರು. ಅದು ರಾಷ್ಟ್ರೀಕೃತಗೊಂಡು ಲಾಭದಾಯಕ ಬ್ಯಾಂಕ್ ಆಗುತ್ತಿದೆ. ಆದರೆ ಈಗ ಅದರೊಂದಿಗೆ ನಷ್ಟದಲ್ಲಿರುವ ದೇನಾ ಬ್ಯಾಂಕ್ ವಿಲೀನಗೊಳಿಸಲಾಗುತ್ತಿದೆ. ಇದನ್ನು ತಡೆಯುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಬಿಜೆಪಿ ಶಾಸಕರು, ಸಂಸದರು ವಿಫಲರಾಗಿದ್ದಾರೆ. ಹೀಗಾಗಿ ಅವರು ಜೀವಂತ ಇದ್ದೂ ಸತ್ತ ಹಾಗೆ ಎಂದು ಗುಡುಗಿದರು.

    ಬ್ಯಾಂಕ್ ವಿಲೀನ ತಪ್ಪಿಸಲು ಸಾಧ್ಯವಾಗದೇ ಇದ್ದರೆ ಈ ಭಾಗದ ಸಂಸದ ನಳಿನ್ ಕುಮಾರ್ ಕಟೀಲ್ ಸತ್ತಿದ್ದಾರೆಯೇ ಅಂತ ಪ್ರಶ್ನೆ ಮಾಡುತ್ತೇನೆ ಎಂದ ಮಾಜಿ ಸಚಿವರು, ಸಂಸದರ ಶವ ಸಂಸ್ಕಾರ ನಡೆಸುವುದು ಮಾತ್ರ ಬಾಕಿಯಿದೆ ಅಂತಾ ವಿವಾದಾತ್ಮಕ ಹೇಳಿಕೆ ನೀಡಿದರು.

    ಲೋಕಪಾಲ್ ಜಾರಿಗೆ ತರುತ್ತೇವೆ ಎಂದು ಬಿಜೆಪಿಯವರು ಹೇಳಿದ್ದರು. ಆದರೆ ಗುಜರಾತಿನಲ್ಲೇ ಲೋಕಾಯುಕ್ತರು ಇಲ್ಲ. ಬೇರೆ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಬೋಧನೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/