Tag: denotification

  • ಗ್ರೇಟರ್ ಬೆಂಗಳೂರು ಸಮಗ್ರ ಟೌನ್‌ಶಿಪ್ ಜಮೀನು ಡಿನೋಟಿಫೈ ಮಾಡಿ BSY ರೀತಿ ಜೈಲಿಗೆ ಹೋಗಲು ಸಿದ್ಧನಿಲ್ಲ: ಡಿಕೆಶಿ

    ಗ್ರೇಟರ್ ಬೆಂಗಳೂರು ಸಮಗ್ರ ಟೌನ್‌ಶಿಪ್ ಜಮೀನು ಡಿನೋಟಿಫೈ ಮಾಡಿ BSY ರೀತಿ ಜೈಲಿಗೆ ಹೋಗಲು ಸಿದ್ಧನಿಲ್ಲ: ಡಿಕೆಶಿ

    ರಾಮನಗರ: ಬಿಡದಿ ಟೌನ್‌ಶಿಪ್ (Bidadi Township) ನಿರ್ಮಾಣಕ್ಕೆ ತೀರ್ಮಾನ ಮಾಡಿದ್ದು ಕುಮಾರಸ್ವಾಮಿ. ಇದನ್ನು ನಾನು ಡಿನೋಟಿಫಿಕೇಷನ್ ಮಾಡಿ ಯಡಿಯೂರಪ್ಪರಂತೆ (BS Yediyurappa) ಜೈಲಿಗೆ ಹೋಗಲು ತಯಾರಿಲ್ಲ. ಕಾನೂನು ಚೌಕಟ್ಟಿನಲ್ಲಿ ರೈತರಿಗೆ ನೆರವಾಗಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದರು.

    ಭೂಸ್ವಾಧೀನ ವಿರೋಧಿಸಿ ರಾಮನಗರದ (Ramanagara) ಜಿಲ್ಲಾಧಿಕಾರಿ ಕಚೇರಿ ಪ್ರತಿಭಟನಾ ನಿರತ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ಹೊರಗಡೆಯಿಂದ ಬಂದವನಲ್ಲ. ನಾನು ಕೂಡ ನಿಮ್ಮ ಜಿಲ್ಲೆಯವನೇ. ಬಿಡದಿ ಕೈಗಾರಿಕಾ ಪ್ರದೇಶ ಮಾಡಿದಾಗ ಯಾವ ಸರ್ಕಾರ ಅಧಿಕಾರದಲ್ಲಿತ್ತು ಎಂಬುದು ರೈತರಿಗೆ ತಿಳಿದಿದೆ. ಇದರಿಂದ 16 ಸಾವಿರ ಎಕರೆ ಭೂಮಿ ಹೋಯಿತು. ಟೊಯೋಟೊ ಸೇರಿದಂತೆ ಒಂದಷ್ಟು ಕಂಪನಿಗಳು ಈ ಭಾಗಕ್ಕೆ ಬಂದವು. ಈ ಹಿಂದೆ ಕೈಗಾರಿಕಾ ಪ್ರದೇಶವಾದಾಗ ನನ್ನದೂ ಸಹ 12 ಎಕರೆ ಜಮೀನು ಹೋಗಿದೆ. ಆಗ ಪರಿಹಾರವನ್ನು 8 ಲಕ್ಷಕ್ಕೆ ಮೀರಿ ನೀಡಿಯೇ ಇಲ್ಲ ಎಂದರು. ಇದನ್ನೂ ಓದಿ: ಸಮೀರ್‌ ವಿಡಿಯೋದಲ್ಲಿ ಬಳಸಿದ್ದ ಒಂದು ಪದಕ್ಕೆ ಸಂಬಂಧಿಸಿದ್ದಂತೆ ಪೊಲೀಸರು ಜಪ್ತಿ ಮಾಡಿದ್ದಾರೆ: ಮಟ್ಟಣ್ಣನವರ್‌

    ನಿಮಗೆ ಉತ್ತಮ ಪರಿಹಾರ ನೀಡಲು ಸುಮಾರು 10 ಸಾವಿರ ಕೋಟಿ ರೂ. ಸಾಲ ಮಾಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ನಿಮ್ಮ ಒಂದು ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅವಶ್ಯಕತೆ ನಮಗಿಲ್ಲ. ಸ್ವಾಧೀನವಾಗಿರುವ ಭೂಮಿಯನ್ನು ಕಾನೂನು ಚೌಕಟ್ಟು ಮೀರಿ ಕೈ ಬಿಡುವ ಹಂತದಲ್ಲಿ ನಾನಿಲ್ಲ. ಕುಮಾರಸ್ವಾಮಿ ಅವರ ಧರ್ಮಪತ್ನಿಯವರು ಹಾಗೂ ಮಗ ಸೇರಿದಂತೆ ಶೇ.70 ರಷ್ಟು ಮಂದಿ ಪರಿಹಾರ ನೀಡಿ ಎಂದು ಭೂಸ್ವಾಧೀನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಶೇ.30 ರಷ್ಟು ಮಂದಿ ಮಾತ್ರ ಒಪ್ಪಿಗೆ ನೀಡಿಲ್ಲ. ಆದರೆ ನಾನು ನಿಮ್ಮ ಪರವಾಗಿ ಏನು ತೀರ್ಮಾನ ತೆಗೆದುಕೊಳ್ಳಬೇಕು, ಯಾವ ರೀತಿ ಸಹಾಯ ಮಾಡಬೇಕು ಎಂದು ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಬಾಗಲಕೋಟೆಯ ಮಹಿಳೆಗೆ ಮದುವೆಯಾಗೋದಾಗಿ ಹೇಳಿ 5.50 ಲಕ್ಷ ವಂಚನೆ – ನೈಜೀರಿಯನ್‌ ಪ್ರಜೆ ಅರೆಸ್ಟ್‌

    ಈ ವೇಳೆ ಶಾಸಕ ಬಾಲಕೃಷ್ಣ ಅವರು ರೈತರ ಪರವಿಲ್ಲ ಎಂದು ಪ್ರತಿಭಟನಾ ನಿರತ ರೈತರು ಆಕ್ಷೇಪ ವ್ಯಕ್ತಪಡಿಸಿದಾಗ, ಬಾಲಕೃಷ್ಣ ನಿಮ್ಮ ಪರವಾಗಿ ಎಷ್ಟು ಹೋರಾಟ ಮಾಡಿದ್ದಾರೆ ಎಂಬುದು ನನಗೆ ತಿಳಿದಿದೆ. ನನ್ನ ಹಿಂದೆ ಬಿದ್ದು ರೈತರ ಪರವಾಗಿ ಮಾತನಾಡಿದ್ದಾರೆ. ನಿಮ್ಮ ಭೂಮಿಗಳನ್ನು ಸ್ವಾಧೀನ ಪಡಿಸಿಕೊಳ್ಳಲು ಹಿಂದೆ ಸಹಿ ಹಾಕಿದವರು ನಿಮ್ಮ ಪರವಾಗಿದ್ದಾರಾ? ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ 1 ಕೋಟಿ ರೂ. ಪರಿಹಾರ ನಿಗದಿ ಮಾಡಿದವರು ನಿಮ್ಮ ಪರವಾಗಿದ್ದಾರಾ? ಅವರುಗಳು ಯಾರೂ ನಿಮ್ಮ ಪರವಾಗಿಲ್ಲ. ರೈತರಿಗೆ ಉತ್ತಮ ಪರಿಹಾರ ದೊರೆಯಬೇಕು ಎಂದು ಹೋರಾಟ ಮಾಡುತ್ತಿರುವ ಶಾಸಕ ಬಾಲಕೃಷ್ಣ ನಿಮ್ಮ ಪರವಾಗಿದ್ದಾರೆ. ನಿಮ್ಮ ಪರವಾಗಿ ಇವರಷ್ಟು ಹೋರಾಟವನ್ನು ಬೇರೆ ಯಾರೂ ಸಹ ಮಾಡಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಡಿ.ಕೆ ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ – ಒಟ್ಟು ಆಸ್ತಿ ಎಷ್ಟು?

    ಡಿಎಲ್‌ಎಫ್ ಕಂಪನಿಯವರು ಈ ಪ್ರದೇಶವನ್ನು ತೆಗೆದುಕೊಂಡರು. ಆ ನಂತರ ಇಲ್ಲಿನ ವೃಷಭಾವತಿ ನೀರು ಸೇರಿದಂತೆ ಇತರೆ ಸಂಗತಿಗಳನ್ನು ಗಮನಿಸಿ ನಮ್ಮಿಂದ ಟೌನ್‌ಶಿಪ್ ಮಾಡಲು ಸಾಧ್ಯವಿಲ್ಲ ಎಂದು ಯೋಜನೆ ಕೈ ಬಿಟ್ಟರು. 9,600 ಎಕರೆ ಪ್ರದೇಶದಲ್ಲಿ ಸುಮಾರು 912 ಎಕರೆ ಪ್ರದೇಶವನ್ನು ಕೈಗಾರಿಕೆಗೆ ಎಂದು ನೀಡಲಾಯಿತು. ಎಕರೆಗೆ 1 ಕೋಟಿ ರೂ. ಹಾಗೂ ಅದಕ್ಕಿಂತ ಹೆಚ್ಚು ಪರಿಹಾರ ಹಣವನ್ನು ನಿಗದಿಪಡಿಸಲಾಯಿತು. ಆಗ ಯಾರೂ ಸಹ ವಿರೋಧ ಮಾಡಲಿಲ್ಲ. ಈಗ ಏಕೆ ವಿರೋಧ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಯಾದಗಿರಿ | ಹವಾಮಾನ ಬದಲಾವಣೆ – ಮಕ್ಕಳಲ್ಲಿ ಹೆಚ್ಚಿದ ವೈರಲ್ ಫೀವರ್

    ಕುಮಾರಸ್ವಾಮಿ ಕೃಷ್ಣಾದಲ್ಲಿ ಸಭೆ ನಡೆಸಿ ಭೂಸ್ವಾಧೀನ ಕೈ ಬಿಡುವುದಾಗಿ ತಿಳಿಸಿದ್ದರು. ಅದರಂತೆ ನೀವು ಮಾಡಿ ಎಂದು ರೈತರು ಹೇಳಿದಾಗ, ಅವೆಲ್ಲ ಸುಳ್ಳು. ಯಾರೂ ಸಹ ಭೂಸ್ವಾಧೀನ ಕೈಬಿಡಲಿಲ್ಲ. ಈಗ ಅವರು ದೊಡ್ಡ ಸ್ಥಾನದಲ್ಲಿ ಇದ್ದಾರೆ. ಅವರಿಂದಲೇ ಭೂಸ್ವಾಧೀನವನ್ನು ಬಿಡಿಸಿಕೊಳ್ಳಿ ಎಂದರು. ಬಿಡಿಎಗೆ ಎಂದು ಭೂಸ್ವಾಧೀನ ಮಾಡಿಕೊಳ್ಳಲಾಯಿತು. ಈ ಪ್ರಕರಣ ಸುಪ್ರೀಂ ಕೋರ್ಟಿಗೆ ಹೋಗಿದೆ. ಆ ನಂತರ ಯಾವುದೇ ಬೆಳವಣಿಗೆ ಆಗಿಲ್ಲ. ನಾನು ಹೊಸದಾಗಿ ಭೂಸ್ವಾಧೀನ ಮಾಡಿಕೊಳ್ಳುತ್ತಿಲ್ಲ. ನೈಸ್ ಯೋಜನೆಯ ಭೂಮಿಯನ್ನು ಏಕೆ ವಜಾ ಮಾಡಲು ಆಗಲಿಲ್ಲ? ಏಕೆಂದರೆ ಕಾನೂನಿನ ಪ್ರಕಾರವೇ ನಾವು ಮುಂದುವರೆಯಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಜಿಎಸ್‌ಟಿ ಪರಿಷ್ಕರಣೆ ಬೆನ್ನಲ್ಲೇ ದುಬಾರಿಯಾಗಲಿದೆ ಆರ್‌ಸಿಬಿ ಟಿಕೆಟ್‌ ದರ

  • 14 ಸೈಟ್‌ ಕೇಸ್‌ಗಿಂತಲೂ ಇದು ದೊಡ್ಡ ಪ್ರಕರಣ – ಹಳೆಯ ಡಿನೋಟಿಫಿಕೇಶನ್‌ ಕೆದಕಿ ಸಿಎಂಗೆ ಹೆಚ್‌ಡಿಕೆ ಗುದ್ದು

    14 ಸೈಟ್‌ ಕೇಸ್‌ಗಿಂತಲೂ ಇದು ದೊಡ್ಡ ಪ್ರಕರಣ – ಹಳೆಯ ಡಿನೋಟಿಫಿಕೇಶನ್‌ ಕೆದಕಿ ಸಿಎಂಗೆ ಹೆಚ್‌ಡಿಕೆ ಗುದ್ದು

    ನವದೆಹಲಿ: ಚುನಾವಣಾ ಸಾಲಕ್ಕಾಗಿ ಸೈಟು ಮಾರಾಟ ಮಾಡಿದ್ದರಲ್ಲ ಅದು ಎಲ್ಲಿಂದ ಬಂತು? ಇದು 14 ಸೈಟ್‌ ಪ್ರಕರಣಕ್ಕಿಂತ ದೊಡ್ಡ ಪ್ರಕರಣ ಎಂದು ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಸಿದ್ದರಾಮಯ್ಯ (CM Siddaramaiah) ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೈಸೂರಿನ ಹಿನಕಲ್ ಗ್ರಾಮ ಪಂಚಾಯತ್‌ನಲ್ಲಿ ಬಡವರ ಮಕ್ಕಳ ವಸತಿ ಶಾಲೆ ನಿರ್ಮಾಣಕ್ಕಾಗಿ ಭೂಮಿ ಡಿನೋಟಿಫಿಕೇಷನ್ (Denotification) ಮಾಡಿಸಿಕೊಂಡು ಅದನ್ನು ಸಿದ್ದರಾಮಯ್ಯ ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿ. ಒಟ್ಟು 18 ಮಂದಿ ಆರೋಪಿಗಳಿದ್ದಾರೆ. ಕೆಳಹಂತದ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧ ತೀರ್ಪು ನೀಡಿತ್ತು. ಅಷ್ಟೇ ಅಲ್ಲದೇ ತನಿಖೆ ನಡೆಸುವಂತೆ ಆದೇಶಿಸಿತ್ತು ಎಂದು ಹೇಳಿದರು. ಇದನ್ನೂ ಓದಿ: MUDA Scam | ಒಡವೆ ಕದ್ದ ಕಳ್ಳ ವಾಪಸ್ ಕೊಟ್ಟರೆ ಕೇಸ್ ಮುಗಿಯುತ್ತಾ: ಪ್ರತಾಪ್‌ ಸಿಂಹ ಪ್ರಶ್ನೆ

    ಈ ಆದೇಶವನ್ನು ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ (High Court) ಪ್ರಶ್ನೆ ಮಾಡಿದ್ದರು. ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯನವರಿಗೆ ರಿಲೀಫ್‌ ಸಿಕ್ಕಿತ್ತು. ಈ ರಿಲೀಫ್‌ ಕೊಟ್ಟವರು ನ್ಯಾ. ಮೈಕೆಲ್ ಡಿ ಕುನ್ಹಾ. ನ್ಯಾಯಮೂರ್ತಿಗಳ ಆದೇಶದ ಬಗ್ಗೆ ನಾನು ಏನು ಮಾತನಾಡುವುದಿಲ್ಲ. ಈ‌ ನ್ಯಾಯಧೀಶರು ಈಗ ಕರ್ನಾಟಕದಲ್ಲಿನ ಕೋವಿಡ್ ಅಕ್ರಮದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

    ಈ ಪ್ರಕರಣ 14 ಸೈಟ್‌ಗಿಂತಲೂ ದೊಡ್ಡದು. ಊರಿಗೆ ಬುದ್ದಿ ಹೇಳುವವರು ಇಲ್ಲಿ ಏನೇನು ಮಾಡಿದ್ದೀರಿ. ಈಗ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗಿ ಕುಂಕುಮ ಇಟ್ಟುಕೊಂಡು ರಕ್ಷಣೆ ಪಡೆಯುತ್ತಿದ್ದಾರೆ. ಇದರ ಜೊತೆಗೆ ಇನ್ನು ಎರಡು ಪ್ರಕರಣಗಳಿವೆ. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ದೂರುದಾರರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ಈ ಸಂದರ್ಭದಲ್ಲಿ ಅರ್ಜಿದಾರರ ಒಬ್ಬರು ವಕೀಲರು ಮೃತಪಟ್ಟರೆ ಇನ್ನೊಬ್ಬರು ಜಡ್ಜ್‌ ಆಗಿ ನೇಮಕವಾಗಿದ್ದಾರೆ. ಸದ್ಯ ಈ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿದೆ ಎಂದು ಹೇಳಿದರು.

     

    ಕೃಷ್ಣ ಬೈರೇಗೌಡ ಮೇಧಾವಿಯಲ್ವ ಇದನ್ನು ಪರಿಶೀಲನೆ ಮಾಡಪ್ಪ. ನಾನು ಇಂತಹ ಕೆಲಸ ಮಾಡಿಲ್ಲ. ಸಮಸ್ಯೆ ಬಂದಿದ್ದಕ್ಕೆ ಚುನಾವಣಾ ಖರ್ಚಿನ ಹೆಸರಿನಲ್ಲಿ ಈ ಜಾಗವನ್ನು ಮಾರಾಟ ಮಾಡಿದ್ದಾರೆ. ತಾನೊಂದು ಬಗೆದರೆ ದೈವ ಮತ್ತೊಂದು ಬಗೆಯುವುದು. ಈಗ ಅಧಿಕಾರ ದುರ್ಬಳಕೆ ಮಾಡಿಕೊಂಡು ನಮ್ಮನ್ನು ಮುಗಿಸಲು ಬಂದಿದ್ದಾರೆ ಎಂದು ಕಿಡಿಕಾರಿದರು.

    1988ರಲ್ಲಿ ಮುಡಾ ವಿಜಯನಗರ 2ನೇ ಹಂತದ ಬಡಾವಣೆ ನಿರ್ಮಾಣಕ್ಕೆ ಹಿನಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದ 535 ಎಕರೆ ಪ್ರದೇಶವನ್ನು ವಶಪಡಿಸಿಕೊಂಡಿತ್ತು. 10 ವರ್ಷಗಳ ಬಳಿಕ ಬಡಾವಣೆ ರಚನೆಗೊಂಡು ನಿವೇಶನ ಹಂಚಿಕೆ ಮಾಡಿತ್ತು. ಈ ಹಂಚಿಕೆ ವೇಳೆ ಅಕ್ರಮ ನಡೆದ ವಿಚಾರವನ್ನು ಹೆಚ್‌ಡಿ ಕುಮಾರಸ್ವಾಮಿ ಇಂದಿನ ಸುದ್ದಿಗೋಷ್ಠಿಯಲ್ಲಿ ಪ್ರಸ್ತಾಪ ಮಾಡಿ ಸಿಎಂ ವಿರುದ್ಧ ಕಿಡಿಕಾರಿದ್ದಾರೆ.

     

  • ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಕೇಸ್‌ – ಲೋಕಾಯುಕ್ತ ವಿಚಾರಣೆ ಎದುರಿಸಿದ ಬಿಎಸ್‌ವೈ

    ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಕೇಸ್‌ – ಲೋಕಾಯುಕ್ತ ವಿಚಾರಣೆ ಎದುರಿಸಿದ ಬಿಎಸ್‌ವೈ

    ಬೆಂಗಳೂರು: ಗಂಗೇನಹಳ್ಳಿ ಡಿನೋಟಿಫಿಕೇಶನ್‌ (Gangenahalli Denotification) ಪ್ರಕರಣ ಸಂಬಂಧ ಮಾಜಿ ಸಿಎಂ ಯಡಿಯೂರಪ್ಪನವರು (BS Yediyurappa) ಲೋಕಾಯುಕ್ತ ವಿಚಾರಣೆ ಎದುರಿಸಿದ್ದಾರೆ.

    ಸುಮಾರು ಒಂದೂವರೆ ಗಂಟೆಗಳ ಕಾಲ ವಿಚಾರಣೆ ಎದುರಿಸಿದ ಬಳಿಕ ಯಡಿಯೂರಪ್ಪ ಲೋಕಾಯುಕ್ತ ಕಚೇರಿಯಿಂದ ನಿರ್ಗಮಿಸಿದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೂ ವಿಚಾರಣೆಗೆ ಬರುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್‌ ನೀಡುವ ಸಾಧ್ಯತೆಯಿದೆ. ಇದನ್ನೂ ಓದಿ: ಮಹಿಳಾ ಪಿಎಸ್‍ಐ ಮೇಲೆ ಹಲ್ಲೆಗೈದು ಪರಾರಿಯಾಗಲು ಯತ್ನ – ಕೊಲೆ ಆರೋಪಿಗೆ ಗುಂಡೇಟು

    ಈ ಸಂಬಂಧ ಗುರುವಾರ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದ ಸಚಿವರಾದ ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ಸಂತೋಷ್ ಲಾಡ್ 2015ರಲ್ಲಿ ಲೋಕಾಯುಕ್ತದಲ್ಲಿ (Lokayukta) ಕೇಸ್‌ ದಾಖಲಾದರೂ ಈವರೆಗೂ ತನಿಖೆ ಪೂರ್ತಿಯಾಗಿಲ್ಲ. 2021ರಿಂದ ಲೋಕಾಯುಕ್ತದಲ್ಲಿ ಈ ಕೇಸ್ ವಿಚಾರದಲ್ಲಿ ಯಾವುದೇ ಪ್ರಗತಿಯಾಗಿಲ್ಲ ಎಂದು ಕಿಡಿಕಾರಿದ್ದರು.

    ಕಾಂಗ್ರೆಸ್ ಆರೋಪ ಏನಿತ್ತು?
    1976 ರಲ್ಲಿ ಗಂಗೇನಹಳ್ಳಿಯಲ್ಲಿ ಬಿಡಿಎ (BDA) ನೋಟಿಫಿಕೇಶನ್ ಆಗಿದೆ. ಅದರಲ್ಲಿ 1.11 ಎಕ್ರೆ ಜಾಗ ಡಿನೋಟಿಫೈ ಮಾಡಲು 30 ವರ್ಷದ ನಂತರ ಅರ್ಜಿ ಸಲ್ಲಿಸಲಾಗಿದೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಡಿನೋಟಿಫೈಗೆ ರಾಜಶೇಖರಯ್ಯ ಎಂಬವರು ಅರ್ಜಿ ಸಲ್ಲಿಸಿದ್ದರು. ಆದರೆ ಈ ಜಮೀನಿಗೂ ರಾಜಶೇಖರಯ್ಯಗೂ ಯಾವುದೇ ಸಂಬಂಧ ಇಲ್ಲ.

    ಸಿಎಂ ಆಗಿದ್ದ ಕುಮಾರಸ್ವಾಮಿ ಅವರು ಡಿನೋಟಿಫಿಕೇಶನ್‌ಗೆ ಸೂಚನೆ ಕೊಡುತ್ತಾರೆ. ಸೆಪ್ಟೆಂಬರ್‌ 11, 2007 ರಲ್ಲಿ ಇದೇ ಜಮೀನನ್ನು ಅನಿತಾ ಕುಮಾರಸ್ವಾಮಿ ತಾಯಿ ವಿಮಲಾ ಅವರಿಗೆ ಜಿಪಿಎ ಮಾಡಲಾಗಿದೆ. ಜಿಪಿಎ ರಾಜಶೇಖರಯ್ಯ ಮಾಡಿಸಿಕೊಳ್ಳದೇ ಮೂಲ ಮಾಲೀಕರ 21 ಮಂದಿ ವಾರಸುದಾರರಿಂದ ಆಗುತ್ತದೆ. ನಂತರ ಆ ಭೂಮಿ ಕುಮಾರಸ್ವಾಮಿ ಬಾಮೈದ ಚನ್ನಪ್ಪ ಎಂಬುವವರ ಹೆಸರಿಗೆ ರಿಜಿಸ್ಟ್ರರ್‌ ಆಗುತ್ತದೆ. ಇದನ್ನೂ ಓದಿ: ಕಾಂಗ್ರೆಸ್‌ನವರಿಂದಲೇ ಪಕ್ಷಕ್ಕೆ ಸೋಲು: ಈಶ್ವರ್ ಖಂಡ್ರೆ

    2008ರಲ್ಲಿ ಸಿಎಂ ಆಗಿದ್ದ ಬಿಎಸ್‌ ಯಡಿಯೂರಪ್ಪನವರು ಡಿನೋಟಿಫೈಯಿಂದ ಕೈಬಿಡಿ ಅಂತ ಷರಾ ಬರೆಯುತ್ತಾರೆ. ಈ ರಾಜಶೇಖರಯ್ಯ ಎಂಬ ಬೇನಾಮಿ ಅರ್ಜಿ ಮೇರೆಗೆ ಈ ಷರಾ ಬರಯಲಾಗಿದೆ. 2015ರಲ್ಲಿ ಈ ಸಂಬಂಧ ಲೋಕಾಯುಕ್ತದಲ್ಲಿ ದೂರು ದಾಖಲಾಗುತ್ತದೆ. 2021 ರಲ್ಲಿ ಲೋಕಾಯುಕ್ತದಲ್ಲಿ ಕೊನೆಯ ಬಾರಿಗೆ ವಿಚಾರಣೆ ನಡೆಯುತ್ತದೆ.

    ಕುಮಾರಸ್ವಾಮಿ ಇದ್ದಾಗ ಡಿನೋಟಿಫೈ ಮಾಡಲು ಮುಂದಾಗಿ ಯಡಿಯೂರಪ್ಪ ಸಿಎಂ ಆದಾಗ ಮಾಡಲು ಶಿಫಾರಸ್ಸು ಮಾಡಲಾಗಿದೆ. ಅಂದಿನ ಮುಖ್ಯ ಕಾರ್ಯದರ್ಶಿ ಡಿ‌‌ನೋಟಿಫೈ ಮಾಡಲು ಬರುವುದಿಲ್ಲ ಎಂದರೂ ಡಿನೋಟಿಫೈ ಮಾಡಲಾಗಿದೆ.

  • ಹೆಚ್‌ಡಿಕೆ, ಬಿಎಸ್‌ವೈಯಿಂದ ಜಂಟಿ ಡಿನೋಟಿಫೈ – ಕಾಂಗ್ರೆಸ್ ಸಚಿವರಿಂದ ಗಂಭೀರ ಆರೋಪ

    ಹೆಚ್‌ಡಿಕೆ, ಬಿಎಸ್‌ವೈಯಿಂದ ಜಂಟಿ ಡಿನೋಟಿಫೈ – ಕಾಂಗ್ರೆಸ್ ಸಚಿವರಿಂದ ಗಂಭೀರ ಆರೋಪ

    ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (Yediyurappa) ವಿರುದ್ಧ ಮತ್ತೆ ಡಿನೋಟಿಫಿಕೇಶನ್ (Denotification) ಆರೋಪ ಕೇಳಿಬಂದಿದೆ. 2007ರಲ್ಲಿ ಬೆಂಗಳೂರಿನ ಗಂಗೇನಹಳ್ಳಿಯ 1.11 ಎಕೆರ ಭೂಮಿಯನ್ನು ಸತ್ತವರ ಹೆಸರಲ್ಲಿ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಜಂಟಿಯಾಗಿ ಡಿನೋಟಿಫೈ ಮಾಡಿಸಿದ್ದರು ಎಂದು ಕಾಂಗ್ರೆಸ್ (Congress) ಆರೋಪಿಸಿದೆ.

    ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದ ಸಚಿವರಾದ ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ಸಂತೋಷ್ ಲಾಡ್ 2015ರಲ್ಲಿ ಲೋಕಾಯುಕ್ತದಲ್ಲಿ (Lokayukta) ಕೇಸ್‌ ದಾಖಲಾದರೂ ಈವರೆಗೂ ತನಿಖೆ ಪೂರ್ತಿಯಾಗಿಲ್ಲ. 2021ರಿಂದ ಲೋಕಾಯುಕ್ತದಲ್ಲಿ ಈ ಕೇಸ್ ವಿಚಾರದಲ್ಲಿ ಯಾವುದೇ ಪ್ರಗತಿಯಾಗಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಇನ್ಮುಂದೆ ಹಿಜ್ಬುಲ್ಲಾ ಹೋರಾಟಗಾರರು ಟಾಯ್ಲೆಟ್‌, ಆಹಾರ ಸೇವನೆಗೆ ಹೆದರಬೇಕು – ಮತ್ತೆ ಶಾಕ್‌ ಕೊಟ್ಟ ಇಸ್ರೇಲ್‌

    ಕಾಂಗ್ರೆಸ್ ಸಚಿವರ ಆರೋಪ ಏನು?
    1976 ರಲ್ಲಿ ಗಂಗೇನಹಳ್ಳಿಯಲ್ಲಿ ಬಿಡಿಎ (BDA) ನೋಟಿಫಿಕೇಶನ್ ಆಗಿದೆ. ಅದರಲ್ಲಿ 1.11 ಎಕ್ರೆ ಜಾಗ ಡಿನೋಟಿಫೈ ಮಾಡಲು 30 ವರ್ಷದ ನಂತರ ಅರ್ಜಿ ಸಲ್ಲಿಸಲಾಗಿದೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಡಿನೋಟಿಫೈಗೆ ರಾಜಶೇಖರಯ್ಯ ಎಂಬವರು ಅರ್ಜಿ ಸಲ್ಲಿಸಿದ್ದರು. ಆದರೆ ಈ ಜಮೀನಿಗೂ ರಾಜಶೇಖರಯ್ಯಗೂ ಯಾವುದೇ ಸಂಬಂಧ ಇಲ್ಲ.

    ಸಿಎಂ ಆಗಿದ್ದ ಕುಮಾರಸ್ವಾಮಿ ಅವರು ಡಿನೋಟಿಫಿಕೇಶನ್‌ಗೆ ಸೂಚನೆ ಕೊಡುತ್ತಾರೆ. ಸೆಪ್ಟೆಂಬರ್‌ 11, 2007 ರಲ್ಲಿ ಇದೇ ಜಮೀನನ್ನು ಅನಿತಾ ಕುಮಾರಸ್ವಾಮಿ ತಾಯಿ ವಿಮಲಾ ಅವರಿಗೆ ಜಿಪಿಎ ಮಾಡಲಾಗಿದೆ. ಜಿಪಿಎ ರಾಜಶೇಖರಯ್ಯ ಮಾಡಿಸಿಕೊಳ್ಳದೇ ಮೂಲ ಮಾಲೀಕರ 21 ಮಂದಿ ವಾರಸುದಾರರಿಂದ ಆಗುತ್ತದೆ. ನಂತರ ಆ ಭೂಮಿ ಕುಮಾರಸ್ವಾಮಿ ಬಾಮೈದ ಚನ್ನಪ್ಪ ಎಂಬುವವರ ಹೆಸರಿಗೆ ರಿಜಿಸ್ಟ್ರರ್‌ ಆಗುತ್ತದೆ. ಇದನ್ನೂ ಓದಿ: ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ – ಜಗನ್ ಅವಧಿಯಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ!

    2008ರಲ್ಲಿ ಸಿಎಂ ಆಗಿದ್ದ ಬಿಎಸ್‌ ಯಡಿಯೂರಪ್ಪನವರು ಡಿನೋಟಿಫೈಯಿಂದ ಕೈಬಿಡಿ ಅಂತ ಷರಾ ಬರೆಯುತ್ತಾರೆ. ಈ ರಾಜಶೇಖರಯ್ಯ ಎಂಬ ಬೇನಾಮಿ ಅರ್ಜಿ ಮೇರೆಗೆ ಈ ಷರಾ ಬರಯಲಾಗಿದೆ. 2015ರಲ್ಲಿ ಈ ಸಂಬಂಧ ಲೋಕಾಯುಕ್ತದಲ್ಲಿ ದೂರು ದಾಖಲಾಗುತ್ತದೆ. 2021 ರಲ್ಲಿ ಲೋಕಾಯುಕ್ತದಲ್ಲಿ ಕೊನೆಯ ಬಾರಿಗೆ ವಿಚಾರಣೆ ನಡೆಯುತ್ತದೆ.

    ಕುಮಾರಸ್ವಾಮಿ ಇದ್ದಾಗ ಡಿನೋಟಿಫೈ ಮಾಡಲು ಮುಂದಾಗಿ ಯಡಿಯೂರಪ್ಪ ಸಿಎಂ ಆದಾಗ ಮಾಡಲು ಶಿಫಾರಸ್ಸು ಮಾಡಲಾಗಿದೆ. ಅಂದಿನ ಮುಖ್ಯ ಕಾರ್ಯದರ್ಶಿ ಡಿ‌‌ನೋಟಿಫೈ ಮಾಡಲು ಬರುವುದಿಲ್ಲ ಎಂದರೂ ಡಿನೋಟಿಫೈ ಮಾಡಲಾಗಿದೆ.

     

  • 2 ಡಿನೋಟಿಫಿಕೇಷನ್‌ ಕೇಸ್‌ – ಬಿಎಸ್‌ವೈ ವಿರುದ್ಧ ತನಿಖೆ ಮುಂದುವರಿಸುವಂತೆ ಆದೇಶ

    2 ಡಿನೋಟಿಫಿಕೇಷನ್‌ ಕೇಸ್‌ – ಬಿಎಸ್‌ವೈ ವಿರುದ್ಧ ತನಿಖೆ ಮುಂದುವರಿಸುವಂತೆ ಆದೇಶ

    ಬೆಂಗಳೂರು: ಸಿಎಂ ಯಡಿಯೂರಪ್ಪ ಅವರಿಗೆ ಇಂದು ಡಿನೋಟಿಫಿಕೇಷನ್ ಭೂತ ಬೆನ್ನು ಬಿದ್ದಿದೆ. ಅದು ಕೂಡ ಒಂದೇ ದಿನ ಎರಡೆರಡು ಪ್ರಕರಣಗಳ ತನಿಖೆ ಮುಂದುವರೆಸುವಂತೆ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.

    ಬೆಂಗಳೂರಿನ ಗಂಗೇನಹಳ್ಳಿ ಬಳಿಯ ಮಠದಹಳ್ಳಿಯ 1 ಎಕರೆ 11 ಗುಂಟೆ ಜಮೀನನ್ನು ನಿಯಮ ಮೀರಿ 2007 ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಜಯಕುಮಾರ್ ಹಿರೇಮಠ ಲೋಕಾಯಕ್ತಕ್ಕೆ ದೂರು ನೀಡಿದ್ದು ಎಫ್‌ಐಆರ್‌ ದಾಖಲಾಗಿತ್ತು. ಈ ಎಫ್‌ಐಆರ್‌  ರದ್ದು ಮಾಡುವಂತೆ ಬಿಎಸ್ ಯಡಿಯೂರಪ್ಪ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

    ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ಏಕಸದಸ್ಯ ಪೀಠ ಅರ್ಜಿಯನ್ನು ವಜಾ ಮಾಡಿದ್ದು ಅಲ್ಲದೇ ಯಡಿಯೂರಪ್ಪ ಅವರಿಗೆ 25 ಸಾವಿರ ದಂಡ ಪಾವತಿಸುವಂತೆ ಆದೇಶ ನೀಡಿದೆ.

    ಮಠದಹಳ್ಳಿ ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕೂಡ ಎರಡನೆಯ ಆರೋಪಿಯಾಗಿದ್ದಾರೆ. ಜೊತೆಗೆ ಪ್ರಕರಣದ ತನಿಖೆ ನಡೆಸುವಂತೆ ಆದೇಶ ನೀಡಲಾಗಿದೆ.

    ನ್ನೊಂದು ಪ್ರಕರಣವಾದ ದೇವನಹಳ್ಳಿ ಡಿನೋಟಿಫಿಕೇಷನ್ ಪ್ರಕರಣದಲ್ಲೂ ಕೂಡ ಯಡಿಯೂರಪ್ಪ ಅವರಿಗೆ ಹಿನ್ನಡೆಯಾಗಿದೆ. ಸಾಮಾಜಿಕ ಹೋರಾಟಗಾರ ಅಲಂಪಾಷಾ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಪರಿಶೀಲಿಸಿ ತನಿಖೆಯನ್ನು ಮುಂದುವರೆಸಲು ಆದೇಶವನ್ನು ನೀಡಿದೆ.

    2016 ರಲ್ಲಿ ಈ ಪ್ರಕರಣವನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ರದ್ದು ಪಡಿಸಿತ್ತು. ಕೆಳಹಂತದ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದ ಆಲಂ ಪಾಷಾ. ದೇವನಹಳ್ಳಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುರುಗೇಶ್ ನಿರಾಣಿ ಮೊದಲ ಆರೋಪಿಯಾಗಿದ್ದರೆ ಯಡಿಯೂರಪ್ಪ ಅವರು ಎರಡನೆಯ ಆರೋಪಿಯಾಗಿದ್ದಾರೆ. 26 ಎಕರೆ ಭೂಮಿಯನ್ನು ಕಾನೂನು ಬಾಹಿರವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

  • ಸಿಎಂ ಯಡಿಯೂರಪ್ಪ ತಕ್ಷಣವೇ ರಾಜೀನಾಮೆ ನೀಡಬೇಕು- ಸಿದ್ದರಾಮಯ್ಯ ಒತ್ತಾಯ

    ಸಿಎಂ ಯಡಿಯೂರಪ್ಪ ತಕ್ಷಣವೇ ರಾಜೀನಾಮೆ ನೀಡಬೇಕು- ಸಿದ್ದರಾಮಯ್ಯ ಒತ್ತಾಯ

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

    ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ದತಿಗೆ ರಾಜ್ಯ ಹೈಕೋರ್ಟ್ ನಿರಾರಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಕ್ಷಣ ರಾಜೀನಾಮೆ ನೀಡಿ ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು. ಅವರು ಕಾನೂನುಬಾಹಿರವಾಗಿ ಜಮೀನನ್ನು ಡಿನೋಟಿಫೈ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು Cognizable offence ಆಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಡಿಸೆಂಬರ್ 22ರ ಆದೇಶದಲ್ಲಿ ಹೈಕೋರ್ಟ್ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಬರೆದಿದ್ದಾರೆ.

    ಕೆಐಎಡಿಬಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿಎಸ್‍ವೈ ಪಾತ್ರದ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2015ರಲ್ಲಿ ಎಫ್‍ಐಆರ್ ಸಲ್ಲಿಸಿದ್ದು, ಲೋಕಾಯುಕ್ತ ನ್ಯಾಯಾಲಯ ವಿಚಾರಣೆ ಕೂಡ ನಡೆಸಿತ್ತು. ಇದರಲ್ಲಿ ಯಡಿಯೂರಪ್ಪ ಅವರನ್ನು ಎರಡನೇ ಆರೋಪಿಯಾಗಿ ಮಾಡಿದ್ದರು. ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ತಮ್ಮ ವಿರುದ್ಧ ದೂರು ದಾಖಲಿಸಿರುವುದು ಕಾನೂನುಬಾಹಿರ ಕ್ರಮವಾಗಿರುವ ಕಾರಣ ಪ್ರಕರಣವನ್ನು ರದ್ದುಪಡಿಸಬೇಕೆಂಬ ಬಿಎಸ್‍ವೈ ಕೋರಿಕೆಯನ್ನು ಹೈಕೋರ್ಟ್ ತಿರಸ್ಕರಿಸಿರುವುದರಿಂದ ಬಿ.ಎಸ್.ಯಡಿಯೂರಪ್ಪನವರಿಗೆ ರಾಜೀನಾಮೆ ಹೊರತು ಬೇರೆ ದಾರಿ ಇಲ್ಲದಂತಾಗಿದೆ ಎಂದು ತಿಳಿಸಿದ್ದಾರೆ.

    ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿದರೆ ತನ್ನ ಅಧಿಕಾರದ ಬಲದಿಂದ ತನಿಖೆಯ ಹಾದಿ ತಪ್ಪಿಸುವ ಸಾಧ್ಯತೆಗಳಿವೆ. ತಾವು ಮುಖ್ಯಮಂತ್ರಿಯಾದ ಕೂಡಲೇ ಈ ಪ್ರಕರಣದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ಪಡೆದಿರುವುದೇ ಇದಕ್ಕೆ ಸಾಕ್ಷಿ. ಡಿನೋಟಿಫಿಕೇಷನ್ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ನ್ಯಾಯಾಲಯದ ಕಣ್ಗಾವಲಿನಲ್ಲಿ ನಡೆಸಬೇಕೆಂದು ಹೈಕೋರ್ಟ್ ನ್ಯಾಯಮೂರ್ತಿಗಳು ತಮ್ಮ ಆದೇಶದಲ್ಲಿ ತಿಳಿಸಿರುವುದು ಯಡಿಯೂರಪ್ಪನವರು ತನಿಖೆ ಮೇಲೆ ಪ್ರಭಾವ ಬೀರಬಹುದೆನ್ನುವ ಗುಮಾನಿಯೂ ಕಾರಣ ಎಂದು ದೂರಿದ್ದಾರೆ.

    ಯಡಿಯೂರಪ್ಪನವರ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದು, ಇದು ಸಾಮಾನ್ಯ ಡಿನೋಟೀಫಿಕೇಷನ್ ಪ್ರಕರಣ ಅಲ್ಲ. ಕೈಗಾರಿಕಾ ಸ್ಥಾಪನೆಗಾಗಿ ಸ್ವಾಧೀನ ಪಡಿಸಿಕೊಂಡಿದ್ದ ಜಮೀನನ್ನು ಉದ್ಯಮಿಗಳಿಗೆ ಹಂಚಿಕೆ ಮಾಡಿದ ನಂತರ ಡಿನೋಟೀಫಿಕೇಷನ್ ಮಾಡಲಾಗಿದೆ. ಪ್ರಕರಣದ ಗಂಭೀರತೆಯನ್ನು ನ್ಯಾಯಮೂರ್ತಿಗಳು ಕೂಡಾ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ ಎಂದು ಸಿದ್ದರಾನಮಯ್ಯ ಆರೋಪಿಸಿದ್ದಾರೆ.

    ನಾ ಕಾವೂಂಗಾ, ನಾ ಕಾನೇ ದೂಂಗಾ ಎಂದು ಘೋಷಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವರದ್ದೇ ಪಕ್ಷದ ಮುಖ್ಯಮಂತ್ರಿಯವರ ಮೇಲಿನ ಈ ಗಂಭೀರ ಆರೋಪ ಕಣ್ಣಿಗೆ ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

    ದೇಶಪಾಂಡೆ ಮತ್ತು ಯಡಿಯೂರಪ್ಪ ವಿರುದ್ಧದ ಆರೋಪಗಳು ಭಿನ್ನವಾದವು. ಅವರ ವಿರುದ್ಧ ಅಕ್ರಮ ಡಿನೋಟಿಫೈ ಆರೋಪ ಇರಲಿಲ್ಲ. ಉದ್ದಿಮೆಗಳಿಗೆ ಜಮೀನು ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಖಾಸಗಿ ದೂರಿನಲ್ಲಿ ಆರೋಪಿಸಲಾಗಿತ್ತು. ಅದನ್ನು ಹೈಕೋರ್ಟ್ ಮಾನ್ಯ ಮಾಡಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

  • ಅರ್ಕಾವತಿ ಡಿನೋಟಿಫಿಕೇಷನ್: ಸಿಎಂ ಕುಮಾರಸ್ವಾಮಿಗೆ ಬಿಗ್ ರಿಲೀಫ್

    ಅರ್ಕಾವತಿ ಡಿನೋಟಿಫಿಕೇಷನ್: ಸಿಎಂ ಕುಮಾರಸ್ವಾಮಿಗೆ ಬಿಗ್ ರಿಲೀಫ್

    ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರಿಗೆ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆಯಿಂದ ಹೆಸರು ಕೈಬಿಡುವಂತೆ ಕೋರಿದ್ದ ಅರ್ಜಿಯನ್ನು ಸಂಸದರು, ಶಾಸಕರ ವಿರುದ್ಧ ಪ್ರಕರಣಗಳ ವಿಶೇಷ ನ್ಯಾಯಾಲಯ ಮಾನ್ಯ ಮಾಡಿದೆ.

    ಸಿಎಂ ಕುಮಾರಸ್ವಾಮಿ, ಭೂಮಾಲೀಕರಾದ ಶ್ರೀರಾಮ್, ರವಿ ಪ್ರಕಾಶ್ ಹಾಗೂ ರಾಮಲಿಂಗಂ ಅವರನ್ನು ನ್ಯಾಯಾಧೀಶ ಬಿ.ವಿ.ಪಾಟೀಲ್ ತನಿಖೆಯಿಂದ ಮುಕ್ತ ಮಾಡಿದ್ದಾರೆ. ಮಾಜಿ ಸಚಿವ ಚೆನ್ನಿಗಪ್ಪ ತನಿಖೆಯಿಂದ ಕೈಬಿಡುವಂತೆ ಅರ್ಜಿ ಸಲ್ಲಿಸಿರಲಿಲ್ಲ, ಹೀಗಾಗಿ ಚೆನ್ನಿಗಪ್ಪ ವಿರುದ್ಧ ಮಾತ್ರ ಇದೀಗ ಪ್ರಕರಣ ಉಳಿದುಕೊಂಡಿದೆ.

    ಡಿನೋಟಿಫಿಕೇಷನ್ ಆದ 4 ವರ್ಷದ ಬಳಿಕ ದೂರು ದಾಖಲಾಗಿದೆ. ಉದ್ದೇಶ ಪೂರ್ವಕವಾಗಿ ಅಥವಾ ಲಾಭದಾಯಕವಾಗಿ ಡಿನೋಟಿಫಿಕೇಷನ್ ಮಾಡಿರೋದಕ್ಕೆ ಪೂರಕ ಸಾಕ್ಷ್ಯಾಧಾರಗಳು ಇಲ್ಲ. ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೇ ದೂರು ದಾಖಲು ಮಾಡಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

    ವಿಶೇಷ ನ್ಯಾಯಾಲಯ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ವಿಚಾರಣೆ ಮುಂದುವರಿಸಬೇಕೆ ಅಥವಾ ಬೇಡವೇ ಎಂಬ ಪ್ರಕರಣದ ತೀರ್ಪನ್ನು ಆಗಸ್ಟ್ 27ಕ್ಕೆ ಕಾಯ್ದಿರಿಸಿತ್ತು.

    ಏನಿದು ಪ್ರಕರಣ?
    ಅರ್ಕಾವತಿ ಬಡಾವಣೆ ಅಭಿವೃದ್ಧಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ವಶಪಡಿಸಿಕೊಂಡಿದ್ದ ಜಮೀನಿನಲ್ಲಿ 3.8ಎಕರೆಯನ್ನು 2007ರಲ್ಲಿ ಡಿನೋಟಿಫೈ ಮಾಡಿದ ಆರೋಪ ಕುಮಾರಸ್ವಾಮಿ ಅವರ ಮೇಲಿತ್ತು. ಅಂದಿನ ಜೆಡಿಎಸ್, ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಸಿ.ಚೆನ್ನಿಗಪ್ಪ ಪ್ರಕರಣದಲ್ಲಿ 2ನೇ ಆರೋಪಿಯಾಗಿದ್ದರು. ಜಮೀನಿನ ಮಾಲೀಕ ಎವಿ ರವಿಪ್ರಕಾಶ್ ಹಾಗೂ ಎವಿ ಶ್ರೀರಾಮ್ ಅವರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಅಕ್ರಮವಾಗಿ ಡಿನೋಟಿಫೈ ಮಾಡಿಕೊಡಲಾಗಿದೆ ಎಂದು ಚಾಮರಾಜನಗರದ ಮಹದೇವಸ್ವಾಮಿ ಎಂಬವರು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಪ್ರಕರಣದಲ್ಲಿ ತಮ್ಮ ಹೆಸರನ್ನು ಕೈಬಿಡುವಂತೆ ಕೋರಿ ಕುಮಾರಸ್ವಾಮಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ಅವರ ಮನವಿ ವಜಾ ಆಗಿತ್ತು. ತನಿಖೆ ನಡೆಯುತ್ತಿರುವಾಗಲೇ ಪ್ರಕರಣವನ್ನು ಸಂಸದರು ಹಾಗೂ ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು.

    ಈ ಪ್ರಕರಣದ ತನಿಖೆಯಿಂದ ತನ್ನನ್ನು ಕೈಬಿಡುವಂತೆ ಕೋರ್ಟ್ ಗೆ ಕುಮಾರಸ್ವಾಮಿ ಜೊತೆ ರವಿಪ್ರಕಾಶ್, ಜ್ಯೋತಿ ರಾಮಲಿಂಗಂ ಮತ್ತು ಶ್ರೀರಾಮ್ ಕೂಡ ಅರ್ಜಿ ಸಲ್ಲಿದ್ದರು. ಆದರೆ ಮಾಜಿ ಸಚಿವ ಚೆನ್ನಿಗಪ್ಪ ಆರೋಪದಿಂದ ಕೈಬಿಡುವಂತೆ ಅರ್ಜಿ ಸಲ್ಲಿಸಿರಲಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿಎಂ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ಕೊಡ್ತಾರಾ ರಾಜ್ಯಪಾಲ ವಿ.ಆರ್.ವಾಲಾ?

    ಸಿಎಂ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ಕೊಡ್ತಾರಾ ರಾಜ್ಯಪಾಲ ವಿ.ಆರ್.ವಾಲಾ?

    ಬೆಂಗಳೂರು: ಭೂಪಸಂದ್ರದ ಬಳಿ ಸಿಎಂ ಸಿದ್ದರಾಮಯ್ಯ ಅಕ್ರಮ ಡಿನೋಟಿಫಿಕೇಶನ್ ಎಸಗಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯಪಾಲ ವಿ.ಆರ್.ವಾಲಾ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡುತ್ತಾರಾ ಎನ್ನುವ ಪ್ರಶ್ನೆ ಎದ್ದಿದೆ.

    ಕೇಂದ್ರ ಮಾನವ ಸಂಪನ್ಮೂಲ ಸಚಿವ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ಪ್ರಕಾಶ್ ಜಾವಡೇಕರ್ ಭಾನುವಾರ ರಾತ್ರಿ ಅರ್ಧಗಂಟೆಗಳ ಕಾಲ ಡಿನೋಟಿಫಿಕೇಶನ್  ಪ್ರಕರಣದ ಸಂಬಂಧ ಮಾತುಕತೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

    ಈ ವಿಚಾರದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಇದು ಬೋಗಸ್ ಜನತಾ ಪಾರ್ಟಿಯ ಬೋಗಸ್ ಆರೋಪ ಅಷ್ಟೇ. ಅವರ ಆರೋಪದ ದಾಖಲೆಗಳನ್ನು ನಾವು ಕಸದ ಬುಟ್ಟಿಗೆ ಹಾಕುತ್ತೇವೆ. ಚುನಾವಣೆಯ ಹೊಸ್ತಿಲಲ್ಲಿ ಸಿಎಂ ವಿರುದ್ಧ ಸುಳ್ಳು ಆರೋಪಗಳನ್ನ ಮಾಡ್ತಿದ್ದಾರೆ ಅಷ್ಟೇ ಎಂದು ವಾಗ್ದಾಳಿ ನಡೆಸಿದರು.

    ಬಿಜೆಪಿ ಆರೋಪವೇನು?
    ಭೂಪಸಂದದ್ರದ ಸರ್ವೆ ನಂಬರ್ 20, 21ರಲ್ಲಿ ಸುಮಾರು 6 ಎಕರೆ 26 ಗುಂಟೆ ಅಕ್ರಮ ಡಿನೋಟಿಫಿಕೇಷನ್ ನಡೆದಿದೆ. ಆರ್‍ಎಂವಿ ಬಡಾವಣೆಗಾಗಿ ಅಕ್ರಮ ಡಿನೋಟಿಫಿಕೇಶನ್ ನಡೆದಿದೆ. ಸಿಎಂ ಸಿದ್ದರಾಮಯ್ಯ, ಸಚಿವ ಕೆಜೆ ಜಾರ್ಜ್ ವಿರುದ್ದ ದೂರು ನೀಡಿದ್ದರೂ ಎಸಿಬಿ, ಲೋಕಾಯುಕ್ತದಲ್ಲಿ ಸರಿಯಾದ ತನಿಖೆಯಾಗಿಲ್ಲ. ಹಾಗಾಗಿ ಸಿಎಂ ವಿರುದ್ಧ ಪ್ರಾಸಿಕ್ಯೂಶನ್‍ಗೆ ಅನುಮತಿ ಕೊಡಿ ಎಂದು ಡಿಸೆಂಬರ್ 20 ರಂದು ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಪುಟ್ಟಸ್ವಾಮಿ ನೇತೃತ್ವದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು.

  • ಸಿಎಂನಿಂದ 300 ಕೋಟಿ ರೂ. ಬೆಲೆ ಬಾಳುವ ಜಾಗ ಡಿನೋಟಿಫಿಕೇಶನ್

    ಸಿಎಂನಿಂದ 300 ಕೋಟಿ ರೂ. ಬೆಲೆ ಬಾಳುವ ಜಾಗ ಡಿನೋಟಿಫಿಕೇಶನ್

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತೊಂದು ಅಕ್ರಮ ಡಿನೋಟಿಫಿಕೇಶನ್ ಚಾರ್ಜ್ ಶೀಟ್  ಬಿಡುಗಡೆ ಮಾಡಿದೆ. ಸಿಎಂ ಆಪ್ತನ ಕಾರಣಕ್ಕಾಗಿ ನ್ಯಾಯಾಲಯದ ಆದೇಶವನ್ನೂ ಉಲ್ಲಂಘಿಸಿ 300 ಕೋಟಿ ಬೆಲೆಬಾಳುವ 6.26 ಎಕರೆ ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿದ್ದು, ಅದಕ್ಕೆ ಸಂಬಂಧಪಟ್ಟ ಕೆಲ ದಾಖಲೆಗಳನ್ನು ಬಿಡುಗಡೆ ಮಾಡಿದೆ.

    ಬಿಜೆಪಿ ಕಚೇರಿಯಲ್ಲಿ ಮೂವರು ಶಾಸಕರ ಜತೆ ಸುದ್ದಿಗೋಷ್ಠಿ ನಡೆಸಿದ ಪರಿಷತ್ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪಗಳ ಸುರಿಮಳೆಗೈದ್ರು. ಬೆಂಗಳೂರಿನ ಉತ್ತರ ವಲಯದ ಭೂಪಸಂದ್ರದ ಸರ್ವೆ ನಂ. 20 ಹಾಗೂ 21ರಲ್ಲಿ ಒಟ್ಟು 6.26 ಎಕರೆ ಭೂಮಿಯನ್ನ ಅಕ್ರಮವಾಗಿ ಡಿನೋಟಿಫಿಫೈ ಮಾಡಿದ್ದಾರೆ, ಡಿನೋಟಿಫೈ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸಹಿ ಮಾಡಿದ್ದಾರೆ, ಮುಖ್ಯಮಂತ್ರಿಗಳೇ ಇದಕ್ಕೆ ನೇರ ಹೊಣೆ ಅಂತಾ ಆರೋಪಿಸಿದ್ದಾರೆ.

    ಬೆಳ್ತಂಗಡಿ ಶಾಸಕ ವಸಂತ ಬಂಗೇರಾ ಅವರ ಡಿನೋಟಿಫೈ ಮಾಡುವಂತೆ ಮನವಿ ಮಾಡಿರುವ ಪತ್ರದ ಮೇಲೆ ಪರಿಶೀಲಿಸಿ ಕೂಡಲೇ ಚರ್ಚಿಸಿ ಅಂತಾ ಬರೆದು ಸಿಎಂ ಸಿದ್ದರಾಮಯ್ಯ ಸಹಿ ಹಾಕಿರುವ ಪತ್ರವನ್ನು ಕೂಡ ಬಿಡುಗಡೆ ಮಾಡಿದ್ದಾರೆ. ಆದ್ರೆ ಡಿನೋಟಿಫೈ ಮಾಡಿರುವ ಅಗತ್ಯ ದಾಖಲೆಯ ಮಾತ್ರ ರಿಲೀಸ್ ಆಗಿಲ್ಲದಿರೋದು ಕೂಡ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

    ಬಿಜೆಪಿ ಆರೋಪಗಳೇನು?
    1988ರಲ್ಲಿ ರಾಜಮಹಲ್ ವಿಲಾಸ್ 2ನೇ ಹಂತದ ಬಡಾವಣೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ಬೆಂಗಳೂರು ಉತ್ತರ ತಾಲೂಕು ಭೂಪಸಂದ್ರದ ಸ.ನಂ20ರಲ್ಲಿ 3.34 ಎಕರೆ, ಸ.ನಂ.21ರಲ್ಲಿ 2.32 ಎಕರೆ ನೋಟಿಫಿಕೇಶನ್ ಆಗಿತ್ತು. ಬಡಾವಣೆ ನಿರ್ಮಿಸಿ 22 ಮಂದಿಗೆ ಬಿಡಿಎ ಸೈಟ್ ಹಂಚಿಕೆ ಮಾಡಿತ್ತು. ಆದರೆ 1992ರಲ್ಲಿ ಅಂದಿನ ಸರ್ಕಾರ 6.26ಎಕರೆ ಭೂಮಿ ಡಿನೋಟಿಫಿಕೇಶನ್ ಮಾಡಿತ್ತು. ಈ ವೇಳೆ ಬಿಡಿಎಯಿಂದ ಜಾಗ ಪಡೆದವರು ಡಿನೋಟಿಫಿಕೇಶನ್ ರದ್ದು ಮಾಡುವಂತೆ ಹೈಕೋರ್ಟ್ ಮೊರೆ ಹೋಗಿದ್ದರು. 1996ರಲ್ಲಿ ಹೈಕೋರ್ಟ್ ಡಿನೋಟಿಫಿಕೇಶನ್ ರದ್ದು ಮಾಡಿತ್ತು. ಆದರೆ ಮೂಲ ಮಾಲೀಕರಲ್ಲಿ ಒಬ್ಬರಾದ ಸೈಯದ್ ಬಾಷಿದ್ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಕೆ ಮಾಡುತ್ತಾರೆ. ಅಲ್ಲೂ ಸೈಯದ್ ಬಾಷಿದ್ ಅರ್ಜಿ ತಿರಸ್ಕೃತವಾಗುತ್ತದೆ. ನಂತರ ಸುಪ್ರೀಂ ಕೋರ್ಟ್ ಮೊರೆ ಹೋದ್ರೂ ಅಲ್ಲೂ ಅರ್ಜಿ ವಜಾಗೊಳ್ಳುತ್ತದೆ.

    2015ರಲ್ಲಿ ಮತ್ತೊಬ್ಬ ಮೂಲ ಮಾಲೀಕರಾದ ಕೆ.ವಿ.ಜಯಲಕ್ಷ್ಮಮ್ಮ ಹೈಕೋರ್ಟ್ ಮೆಟ್ಟಿಲೇರುತ್ತಾರೆ. ಆದ್ರೆ ಹೈಕೋರ್ಟ್ ನಲ್ಲಿ ಜಯಲಕ್ಷ್ಮಮ್ಮ ಮನವಿ ಪುರಸ್ಕಾರವಾಗಿ ಡಿನೋಟಿಫಿಕೇಶನ್ ಯಥಾಸ್ಥಿತಿಗೆ ಆದೇಶ ನೀಡುತ್ತದೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಬಿಡಿಎ ಮೇಲ್ಮನವಿ ಸಲ್ಲಿಸುತ್ತದೆ. ಆದ್ರೆ ಮೇಲ್ಮನವಿಗೆ ಬಿಡಿಎ ಅರ್ಜಿ ಯೋಗ್ಯವಲ್ಲ ಎಂದು ಸರ್ಕಾರದ ಕಾನೂನು ಕೋಶ ಅಭಿಪ್ರಾಯ ವ್ಯಕ್ತಪಡಿಸುತ್ತದೆ. 2016ರ ಜೂನ್ 7 ರಂದು ಬಿಡಿಎ ಮನವಿ ಮೇರೆಗೆ ಮೇಲ್ಮನವಿಯನ್ನು ದ್ವಿಸದಸ್ಯ ಪೀಠ ರದ್ದುಗೊಳಿಸುತ್ತದೆ. ಆ ಬಳಿಕ 15-06-2016ರಂದು ಬಿಡಿಎ ಆಯುಕ್ತರು ಭೂ ಸ್ವಾಧೀನ ಪ್ರಕ್ರಿಯೆ ರದ್ದಾಗಿರುತ್ತದೆ ಎಂದು ಕೆ.ವಿ ಜಯಲಕ್ಷ್ಮಮ್ಮ ಮತ್ತು ಇತರರಿಗೆ ಹಿಂಬರಹ ನೀಡುತ್ತಾರೆ.

    ಈ ಆಸ್ತಿಯ ಇಂದಿನ ಮಾರುಕಟ್ಟೆ ಬೆಲೆ 300 ಕೋಟಿ ರೂ. ಆಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನಿಂದ ಉಳಿಸಿಕೊಂಡ ಆಸ್ತಿಯನ್ನು ಬಿಟ್ಟುಕೊಟ್ಟಿರುವುದರಲ್ಲಿ ಸರ್ಕಾರದ ನೇರ ಕೈವಾಡವಿದೆ. 37 ವರ್ಷದಿಂದ ಈ ವ್ಯವಹಾರದಲ್ಲಿ ಕಾಣಸಿದೇ ಇದ್ದ ಕೆ.ವಿ ಜಯಲಕ್ಷ್ಮಮ್ಮ ಮತ್ತು ಇತರರು ಸುಪ್ರೀಂ ಕೋರ್ಟ್ ತೀರ್ಪು ಬಂದ ಬಳಿಕ ನಂತರ ಹೈಕೋರ್ಟ್ ನಲ್ಲಿ ಅರ್ಜಿ ಹಾಕಿದ್ದು ಅನುಮಾನಕ್ಕೆ ಬರುತ್ತದೆ. ಜನತಾದಳದಲ್ಲಿ ಸಿದ್ದರಾಮಯ್ಯ ಜೊತೆಯಲ್ಲಿ ಆಪ್ತರಾಗಿದ್ದ ಪ್ರಬಲ ರಾಜಕಾರಣಿ ಜಯಲಕ್ಷ್ಮಮ್ಮ ರಿಂದ ಪವರ್ ಆಫ್ ಅಟಾರ್ನಿ ಪಡೆದು ಈ ಅವ್ಯವಹಾರದಲ್ಲಿ ಸಕ್ರಿಯರಾಗಿದ್ದರಿಂದಲೇ ಸರ್ಕಾರ ಬಿಡಿಎ ಸಲ್ಲಿಸಿದ್ದ ಮೇಲ್ಮನವಿಯನ್ನು ವಾಪಸ್ ಪಡೆಯಲು ಆದೇಶ ನೀಡಿದೆ. ಈ ಆರೋಪ ತಿರಸ್ಕರಿಸುವುದಾದರೆ ಸಿಎಂ ಸಿದ್ದರಾಮಯ್ಯ ಒಂದು ವಾರದಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿ ಆಸ್ತಿಯನ್ನು ಉಳಿಸಿಕೊಳ್ಳಬೇಕು. ಇಲ್ಲವಾದರೆ ಈ ಆರೋಪ ಸತ್ಯವಾಗುತ್ತದೆ ಎಂದು ಬಿಜೆಪಿ ಹೇಳಿದೆ.

    ಬ್ರಹ್ಮಾಂಡ ಭ್ರಷ್ಟಾಚಾರ: ಭೂಪಸಂದ್ರ ಡಿನೋಟಿಫಿಕೇಷನ್ ಹಗರಣದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ, ಸಿಎಂ ಬೇನಾಮಿ ಆಸ್ತಿ ಮಾಡಲು ಹೊರಟಿದ್ದಾರೆ, ಸಿಎಂ ವಿರುದ್ಧ ಬುಧವಾರ ಅಥವಾ ಗುರುವಾರ ಎಸಿಬಿ ಗೆ ದೂರು ಕೊಡುತ್ತೇವೆ. ಬಿಡಿಎ ಇದ್ದಿದ್ದು ಹಣ ಮಾಡೋಕಾ, ಮುಚ್ಚಿಬಿಡಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವನ್ನು, ಮಾನ ಮರ್ಯಾದೆ ಇದೆಯೇನ್ರಿ ನಿಮಗೆ ಎಂದು ಸಿಎಂ ವಿರುದ್ಧ ಕೆಂಡಕಾರಿದ್ದಾರೆ. ಅಷ್ಟೇ ಅಲ್ಲ, ಮಾನನಷ್ಟ ಮೊಕದ್ದಮೆ ಹೂಡುವ ಸಿಎಂ ಹೇಳಿಕೆಗೆ ಸವಾಲು ಹಾಕಿರುವ ಪುಟ್ಟಸ್ವಾಮಿ, ನಾಳೆನೇ ನನ್ನ ಮೇಲೆ ಮೊಕದ್ದಮೆ ಹೂಡಲಿ, ಇನ್ನಷ್ಟು ವಿಚಾರ ಹೊರತೆಗೆಯುತ್ತೇನೆ, ಮಾನನಷ್ಟ ಮೊಕದ್ದಮೆ ಹೂಡಿದರೆ ಎದುರಿಸಲು ಸಿದ್ಧ ಅಂತಾ ಹೇಳಿದರು.

     

  • ಬಿಎಸ್‍ವೈಗೆ ಮತ್ತೊಮ್ಮೆ ಬಿಗ್ ಶಾಕ್ ನೀಡಲು ಎಸಿಬಿ ತಯಾರಿ

    ಬಿಎಸ್‍ವೈಗೆ ಮತ್ತೊಮ್ಮೆ ಬಿಗ್ ಶಾಕ್ ನೀಡಲು ಎಸಿಬಿ ತಯಾರಿ

    ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಮತ್ತೊಮ್ಮೆ ಬಿಗ್ ಶಾಕ್ ನೀಡಲು ಎಸಿಬಿ ತಯಾರಿ ನಡೆಸುತ್ತಿದೆ.

    ಶಿವರಾಮ್‍ಕಾರಂತ್ ಬಡವಾಣೆಯ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲು ಎಸಿಬಿ ನಿರ್ಧರಿಸಿದೆ. ಈ ಬಗ್ಗೆ ಕಾನೂನು ಅಭಿಪ್ರಾಯ ಪಡೆದಿರೋ ಎಸಿಬಿ, ಮುಖ್ಯಮಂತ್ರಿಗಳು ಮತ್ತು ಗೃಹಸಚಿವರ ಬಳಿ ಒಂದು ಸುತ್ತಿನ ಮಾತುಕತೆ ನಡೆಸಿದೆ.

    ಇದೇ ವಾರದಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಹೈಕೋರ್ಟ್ ನೀಡಿರೋ ತಡೆಯಾಜ್ಞೆ ತೆರವುಗೊಳಿಸುವಂತೆ ಮೇಲ್ಮನವಿ ಸಲ್ಲಿಸಲಿದೆ. ಈಗಾಗಲೇ ಒಂದು ಹಂತದಲ್ಲಿ ತನಿಖೆ ಮಾಡಲಾಗಿದೆ. ಈ ಹಂತದಲ್ಲಿ ತಡೆಯಾಜ್ಞೆ ನೀಡಿರೋದು ಸರಿಯಲ್ಲ. ಅಷ್ಟೇ ಅಲ್ಲದೆ ಆರೋಪಿತರು ತುಂಬಾ ಪ್ರಭಾವಿ ವ್ಯಕ್ತಿ. ಸಾಕ್ಷಿಗಳಿಗೆ ಬೆದರಿಕೆ ಹಾಗು ದಾಖಲಾತಿಗಳನ್ನು ನಾಶ ಮಾಡೋ ಸಾಧ್ಯತೆಯಿದೆ. ಹಾಗಾಗಿ ಹೆಚ್ಚಿನ ತನಿಖೆ ಮಾಡೋ ಅಗತ್ಯವಿದೆ. ಕೂಡಲೇ ತಡೆಯಾಜ್ಞೆ ತೆರುವುಗೊಳಿಸಬೇಕು ಅಂತ ಅರ್ಜಿ ಸಲ್ಲಿಸಲಿದೆ.