Tag: Department of Defense

  • ಸಿಯಾಚಿನ್‍ನಲ್ಲಿ ರಾಜ್‍ನಾಥ್ ಸಿಂಗ್ – ಯೋಧರ ಕರ್ತವ್ಯಕ್ಕೆ, ಕುಟುಂಬಗಳಿಗೆ ಸೆಲ್ಯೂಟ್

    ಸಿಯಾಚಿನ್‍ನಲ್ಲಿ ರಾಜ್‍ನಾಥ್ ಸಿಂಗ್ – ಯೋಧರ ಕರ್ತವ್ಯಕ್ಕೆ, ಕುಟುಂಬಗಳಿಗೆ ಸೆಲ್ಯೂಟ್

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಕೇಂದ್ರ ರಕ್ಷಣಾ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ರಾಜ್‍ನಾಥ್ ಸಿಂಗ್ ಅವರು, ಇಂದು ವಿಶ್ವದ ಅತ್ಯಂತ ಎತ್ತರದ ಸೇನಾ ಶಿಬಿರವಾದ ಸಿಯಾಚಿನ್‍ಗೆ ಇಂದು ಭೇಟಿ ನೀಡಿದ್ದಾರೆ.

    ಯೋಧರನ್ನು ಭೇಟಿ ಮಾಡಿ ಅವರೊಂದಿಗೆ ಇರುವ ಫೋಟೋಗಳನ್ನು ಟ್ವೀಟ್ ಮಾಡಿರುವ ರಾಜ್‍ನಾಥ್ ಸಿಂಗ್ ಅವರು, ಇಂದು ಸಿಯಾಚಿನ್‍ಗೆ ಭೇಟಿ ನೀಡಿದ್ದೆ. ದೇಶದ ರಕ್ಷಣೆಗಾಗಿ ಕಾರ್ಯನಿರ್ವಹಿಸುವ ಯೋಧರ ಬಗ್ಗೆ ಹೆಮ್ಮೆಯಾಗುತ್ತದೆ. ಅಲ್ಲದೇ ಯೋಧರ ಪೋಷಕರ ಬಗ್ಗೆಯೂ ನನಗೆ ಹೆಮ್ಮೆ ಇದ್ದು, ದೇಶ ಸೇವೆಗಾಗಿ ಸೇನೆಗೆ ಸೇರಿಸುವ ಅವರ ಕಾರ್ಯಕ್ಕೆ ಹೆಮ್ಮೆ ಇದೆ. ವೈಯಕ್ತಿಕವಾಗಿ ನಾನು ಅವರಿಗೆ ಧನ್ಯವಾದ ತಿಳಿಸಿಲು ಇಚ್ಛಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ಇದೇ ವೇಳೆ ರಕ್ಷಣಾ ಸಚಿವರು ಸಿಯಾಚಿನ್ ನಲ್ಲಿ ಹುತಾತ್ಮರಾದ ಯೋಧರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು. ಇಲ್ಲಿಯವರೆಗೂ ಸುಮಾರು 1100 ಯೋಧರು ಸಿಯಾಚಿನ್ ನಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಹುತಾತ್ಮರಾಗಿದ್ದು, ದೇಶದ ಜನತೆ ಎಂದಿಗೂ ಅವರ ತ್ಯಾಗವನ್ನು ನೆನಪಿಸಿಕೊಳ್ಳುತ್ತದೆ ಎಂದು ಹೇಳಿದ್ದಾರೆ.

    ಈ ವೇಳೆ ದೇಶದ ಸೇನಾ ಮುಖ್ಯಸ್ಥರು ಕೂಡ ರಾಜ್‍ನಾಥ್ ಸಿಂಗ್ ಅವರಿಗೆ ಸಾಥ್ ನೀಡಿದ್ದರು. ಈ ವೇಳೆ ಸ್ಥಳದಲ್ಲಿ ನಡೆಯುವ ಪ್ರತಿನಿತ್ಯದ ಆಪರೇಷನ್‍ಗಳ ಬಗ್ಗೆ ಮುಖ್ಯಸ್ಥರು ಸಚಿವರಿಗೆ ವಿವರಿಸಿದರು.

    ಅಂದಹಾಗೇ ಸಿಯಾಚಿನ್ ಸೇನಾ ನೆಲೆ ಸಮುದ್ರ ಮಟ್ಟದಿಂದ 20 ಸಾವಿರ ಅಡಿ ಎತ್ತರದಲ್ಲಿ ನಿರ್ಮಿಸಲಾಗಿದ್ದು, ವಿಶ್ವದ ಅತಿ ಹೆಚ್ಚು ಶೀತ ಸೇನಾ ವಲಯ ಎಂದೇ ಕರೆಯಲಾಗುತ್ತದೆ. 1984 ರಲ್ಲಿ ಪಾಕಿಸ್ತಾನ ಭಾರತದ ಪ್ರದೇಶವನ್ನು ಆಕ್ರಮಿಸಿಕೊಂಡ ಬಳಿಕ ಮೇಘಾದೂತ್ ಆಪರೇಷನ್ ಕೈಗೊಂಡು ಪಾಕ್ ಸೇನೆಯನ್ನು ಹಿಮ್ಮೆಟ್ಟಿಸಲಾಗಿತ್ತು. ಆ ಬಳಿಕ ಸಿಯಾಚಿನ್ ನಲ್ಲಿ ಸೇನಾ ನೆಲೆ ಸ್ಥಾಪಿಸಲಾಗಿತ್ತು.

     

  • ರಕ್ಷಣಾ ಸಚಿವಾಲಯಕ್ಕೆ ವಂದನೆ ಸಲ್ಲಿಸಿದ್ರು ಸಿಎಂ ಎಚ್‍ಡಿಕೆ

    ರಕ್ಷಣಾ ಸಚಿವಾಲಯಕ್ಕೆ ವಂದನೆ ಸಲ್ಲಿಸಿದ್ರು ಸಿಎಂ ಎಚ್‍ಡಿಕೆ

    ಬೆಂಗಳೂರು: ಏರೋ ಇಂಡಿಯಾ ಪ್ರದರ್ಶನ ಈ ಬಾರಿ ಬೆಂಗಳೂರಿನಲ್ಲೇ ನಡೆಯುವುದು ಅಧಿಕೃತವಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಕ್ಷಣಾ ಸಚಿವಾಲಯಕ್ಕೆ ವಂದನೆಗಳನ್ನು ಸಲ್ಲಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಏರೋ ಇಂಡಿಯಾ ಪ್ರದರ್ಶನ ಈ ಬಾರಿಯೂ ಬೆಂಗಳೂರಿನಲ್ಲಿಯೇ ಜರುಗಲಿದೆ. ಇದು ನನಗೆ ತುಂಬಾ ಸಂತೋಷ ತಂದಿದೆ. ಬೆಂಗಳೂರಿನಿಂದ ಬೇರೆಡೆಗೆ ಸ್ಥಳಾಂತರಿಸಲಾಗುವುದು ಎನ್ನುವ ವಿಷಯ ಆತಂಕ ತಂದಿತ್ತು. ಪ್ರತಿಷ್ಠಿತ ಏರ್ ಶೋ ಇಲ್ಲಿಯೇ ಮುಂದುವರಿಸುತ್ತಿರುವುದಕ್ಕಾಗಿ ರಕ್ಷಣಾ ಸಚಿವಾಲಯಕ್ಕೆ ವಂದನೆ ಸಲ್ಲಿಸುತ್ತೇನೆ ಅಂತ ಹೇಳಿದ್ದಾರೆ.

    2019ರ ಏರೋ ಇಂಡಿಯಾ ಏರ್ ಶೋ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಸಲು ಕೇಂದ್ರ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಲಕ್ನೋದಲ್ಲಿ ಏರ್ ಶೋ ನಡೆಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೇಂದ್ರದ ಮೇಲೆ ಒತ್ತಡ ಹಾಕಿದ್ದರು. ಹೀಗಾಗಿ ಕೇಂದ್ರ ಸರ್ಕಾರ ಲಕ್ನೋದಲ್ಲಿ ನಡೆಸಲು ಸಿದ್ಧತೆ ನಡೆಸಿದೆ ಎನ್ನುವ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಈ ಸುದ್ದಿ ಪ್ರಕಟವಾಗುತ್ತಿದ್ದಂತೆ ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಬೆಂಗಳೂರಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸಿದ್ದ ವೇಳೆ ಈ ಪ್ರಶ್ನೆ ಕೇಳಿದ್ದಕ್ಕೆ ವಿವಿಧ ರಾಜ್ಯಗಳು ಏರ್ ಶೋ ನಡೆಸುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿಸಿದರೇ ಹೊರತು ಬೆಂಗಳೂರಿನಲ್ಲೇ ನಡೆಯಲಿದೆ ಎನ್ನುವುದನ್ನು ತಿಳಿಸಿರಲಿಲ್ಲ. ಈ ಎಲ್ಲ ಕಾರಣದಿಂದ ಏರ್ ಶೋ ಬೆಂಗಳೂರಿನಲ್ಲಿ ನಡೆಯುತ್ತಾ ಎನ್ನುವ ಅನುಮಾನ ಎದ್ದಿತ್ತು.

    2019ರ ಫೆಬ್ರವರಿ 20-24ರ ವರೆಗೆ ಮೆಗಾ ಏರ್ ಶೋ ನಡೆಸಲು ಸಿದ್ಧತೆ ನಡೆದಿದೆ. 1996ರಿಂದ ಪ್ರತಿ ಎರಡು ವರ್ಷಕ್ಕೊಮ್ಮೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ಆಯೋಜನೆಯಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಕ್ಷಣಾ ಇಲಾಖೆ ವೆಬ್‍ಸೈಟ್ ಹ್ಯಾಕ್ – ಗೃಹ ಇಲಾಖೆಯ ವೆಬ್‍ಸೈಟ್ ಸ್ಥಗಿತ

    ರಕ್ಷಣಾ ಇಲಾಖೆ ವೆಬ್‍ಸೈಟ್ ಹ್ಯಾಕ್ – ಗೃಹ ಇಲಾಖೆಯ ವೆಬ್‍ಸೈಟ್ ಸ್ಥಗಿತ

    ನವದೆಹಲಿ: ರಕ್ಷಣಾ ಸಚಿವಾಲಯದ ವೆಬ್ ಸೈಟ್ ಶುಕ್ರವಾರ ಹ್ಯಾಕ್ ಆದ ಬೆನ್ನಲ್ಲೇ ಗೃಹ ಸಚಿವಾಲಯದ ವೆಬ್ ಸೈಟ್ ನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

    ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್‍ಐಸಿ) ಗೃಹ ಇಲಾಖೆಯ ಜಾಲತಾಣವನ್ನು ರಕ್ಷಣಾ ದೃಷ್ಟಿಯಿಂದ ಸ್ಥಗಿತಗೊಳಿಸಿದ್ದು, ವೆಬ್‍ಸೈಟ್‍ಗೆ ಮಾಡಬೇಕಾದ ಎಲ್ಲಾ ಸೆಕ್ಯೂರಿಟಿ ಆಪ್ ಗ್ರೇಡ್‍ಗಳನ್ನು ಮಾಡಲಾಗುತ್ತಿದೆ ಎಂದು ಸರ್ಕಾರದ ಪರ ಉನ್ನತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಗೃಹ ಇಲಾಖೆಯ ವೆಬ್‍ಸೈಟ್ ತೆರೆದ ವೇಳೆ ನೀವು ವಿನಂತಿಸಿದ ಸೇವೆಯು ತಾತ್ಕಾಲಿಕವಾಗಿ ಲಭ್ಯವಿಲ್ಲ. ಅಡಚಣೆಗಾಗಿ ಕ್ಷಮಿಸಿ, ಶೀಘ್ರದಲ್ಲಿಯೇ ಸೇವೆಯು ಪುನಾರಂಭವಾಗಲಿದೆ ಎಂಬ ಬರಹ ಕಾಣಿಸುತ್ತಿದೆ. ಇಲಾಖೆ ವಕ್ತಾರರು ನೀಡಿರುವ ಮಾಹಿತಿ ಪ್ರಕಾರ ಇಲಾಖೆಯ ಜಾಲತಾಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು ಭದ್ರತಾ ವ್ಯವಸ್ಥೆಯನ್ನು ನವೀಕರಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

    ಈ ಕುರಿತು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ರಕ್ಷಣಾ ಇಲಾಖೆ ವೆಬ್‍ಸೈಟ್ ಹ್ಯಾಕ್ ಆದ ಬಳಿಕ ಹೆಚ್ಚುವರಿ ಮುನ್ನೆಚ್ಚರಿಕೆಗಳ ಭಾಗವಾಗಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಶೀಘ್ರವೇ ವೆಬ್‍ಸೈಟ್ ಪುನಾರಂಭಗೊಳ್ಳಲಿದೆ ಎಂದು ಬರೆದುಕೊಂಡಿದ್ದಾರೆ.