Tag: Department of Education

  • ನರ್ಸರಿ ಆರಂಭಿಸಿ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಶಾಲೆ

    ನರ್ಸರಿ ಆರಂಭಿಸಿ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಶಾಲೆ

    – ಸರ್ಕಾರ ಆದೇಶ ನೀಡದಿದ್ದರೂ ಶಾಲೆ ಆರಂಭಿಸಿದ ಆಡಳಿತ ಮಂಡಳಿ
    – ಕೊರೊನಾ ತಾಂಡವಾಡುತ್ತಿದ್ದರೂ ನರ್ಸರಿ ಶಾಲೆ ಆರಂಭ
    – ಪೋಷಕರಿಂದ ಹಣ ವಸೂಲಿಯೂ ಪ್ರಾರಂಭ

    ವಿಜಯಪುರ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ಜನ ಜೀವ ಕೈಯ್ಯಲ್ಲಿ ಹಿಡಿದುಕೊಂಡು ಬದುವಂತಾಗಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿಯೂ ಖಾಸಗಿ ಶಾಲೆಯೊಂದು ಮಕ್ಕಳ ಜೀವದ ಜೊತೆ ಚಲ್ಲಾಟವಾಡುತ್ತಿದ್ದು, ನರ್ಸರಿ ಶಾಲೆಯನ್ನು ಆರಂಭಿಸಿ ಮಕ್ಕಳನ್ನು ಕೂಡಿ ಹಾಕಿದೆ.

    ಸರ್ಕಾರದ ಆದೇಶಕ್ಕೆ ಕಿಮ್ಮತ್ತು ನೀಡದೆ ವಿಜಯಪುರದ ರಹೀಂ ನಗರದಲ್ಲಿರುವ ರೋಜ್ ಲೈನ್ ನರ್ಸರಿ ಸ್ಕೂಲ್ ತರಗತಿಗಳನ್ನು ಆರಂಭಿಸಿದೆ. ಈ ಮೂಲಕ ಶಾಲೆ ತೆರೆಯಲು ಅನುಮತಿ ಇಲ್ಲದಿದ್ದರೂ ಪ್ರಾರಂಭ ಮಾಡಿದೆ. ಪುಟಾಣಿ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುತ್ತಿದೆ.

    ಶಾಲೆ ಪ್ರಾರಂಭಿಸಿ ಪೋಷಕರಿಂದ ಹಣ ವಸೂಲಿ ಶುರು ಮಾಡಿದ್ದು, ನರ್ಸರಿ ಶಾಲೆ ತೆರೆದು ಪೋಷಕರ ಬಳಿ ಆಡಳಿತ ಮಂಡಳಿ ಹಣ ಕೇಳುತ್ತಿದೆ. ಒಂದೆಡೆ ಕೊರೊನಾ ಭಯ, ಇನ್ನೊಂದೆಡೆ ಶಿಕ್ಷಣ ಸಂಸ್ಥೆ ಸುಲಿಗೆ ಮಾಡುತ್ತಿದೆ. ಇಷ್ಟಾದರೂ ಶಿಕ್ಷಣ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದ್ದು, ಈ ವರೆಗೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಆಡಳಿತ ಮಂಡಳಿ ಆದೇಶದ ಹಿನ್ನೆಲೆ ಪೋಷಕರ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ.

  • ಕೊರೊನಾ ಕರ್ತವ್ಯ ಮರೆತು ಇಸ್ಪೀಟ್ ಆಟ- ಶಿಕ್ಷಣ ಇಲಾಖೆಯ 7 ಜನ ಸಿಬ್ಬಂದಿ ಅಮಾನತು

    ಕೊರೊನಾ ಕರ್ತವ್ಯ ಮರೆತು ಇಸ್ಪೀಟ್ ಆಟ- ಶಿಕ್ಷಣ ಇಲಾಖೆಯ 7 ಜನ ಸಿಬ್ಬಂದಿ ಅಮಾನತು

    ದಾವಣಗೆರೆ: ಕೊರೊನಾ ಕರ್ತವ್ಯ ಮರೆತು ಇಸ್ಪೀಟ್ ಆಟ ಆಡಿದ್ದ ಉತ್ತರ ವಲಯದ ಬಿಇಒ ಕಚೇರಿಯ 7 ಜನ ಸಿಬ್ಬಂದಿಯನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆಯುಕ್ತ ಡಾ.ಕೆ.ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.

    ದಾವಣಗೆರೆ ಉತ್ತರ ವಲಯದ ಅಧೀಕ್ಷಕ ಎಚ್.ಎಸ್.ಬಸವರಾಜ್, ಪ್ರಥಮ ದರ್ಜೆ ಸಹಾಯಕ ಎಂ.ಸುಧಾಕರ್, ದ್ವಿತೀಯ ದರ್ಜೆ ಸಹಾಯಕ ಕೊಟ್ರೇಶ್, ದ್ವಿತೀಯ ದರ್ಜೆ ಸಹಾಯಕ ಬೆರಳಚ್ಚು ಗಾರ ಮಲ್ಲಿಕಾರ್ಜುನ್ ಮಠದ, ಶಿಕ್ಷಣ ಸಂಯೋಜಕ ಎಸ್.ಸೋಮಶೇಖರಪ್ಪ, ಡಿ.ಗ್ರೂಪ್ ನೌಕರ ಹರ್ಷವರ್ಧನ್, ಗುಮ್ಮನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಕೆ.ಎಂ.ವೃಷಬೇಂದ್ರಪ್ಪ ಅಮಾನತುಗೊಂಡವರು.

    ಕೊರೊನಾ ಕರ್ತವ್ಯಕ್ಕಾಗಿ ಜಿಲ್ಲಾಡಳಿತವು ಶಿಕ್ಷಣ ಇಲಾಖೆಯ ಕಳೆದ ಕೆಲ ದಿನಗಳ ಹಿಂದೆ ಸಿಬ್ಬಂದಿಯನ್ನು ನೇಮಕ ಮಾಡಿತ್ತು. ಆದರೆ ಕರ್ತವ್ಯವನ್ನು ಮರೆತು ಹಾಗೂ ಲಾಕ್‍ಡೌನ್ ಸಮಯದಲ್ಲಿ ಪಿಬಿ ರಸ್ತೆಯಲ್ಲಿನ ಬಿಲಾಲ್ ಕಾಂಪೌಂಡ್ ಆವರಣದಲ್ಲಿ ಸಿಬ್ಬಂದಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದರು.

    ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಕೆಟಿಜೆ ನಗರ ಪೊಲೀಸರು ದಾಳಿ ನಡೆಸಿ 7 ಜನ ಶಿಕ್ಷಣ ಇಲಾಖೆ ಸಿಬ್ಬಂದಿಯನ್ನು ಬಂಧಿಸಿದ್ದರು. ಅಲ್ಲದೆ ಕೆಟಿಜೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

  • ಜುಲೈ 1ರಿಂದ ಹಂತ ಹಂತವಾಗಿ ಶಾಲೆ ಆರಂಭಕ್ಕೆ ಪ್ಲಾನ್

    ಜುಲೈ 1ರಿಂದ ಹಂತ ಹಂತವಾಗಿ ಶಾಲೆ ಆರಂಭಕ್ಕೆ ಪ್ಲಾನ್

    ಬೆಂಗಳೂರು: ಕೊರೊನಾ ಸ್ಫೋಟದ ಮಧ್ಯೆ, ರಾಜ್ಯದಲ್ಲಿ ಜುಲೈ 1ರಿಂದ ಹಂತ ಹಂತವಾಗಿ ಶಾಲೆಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಜೂನ್ 8ರಿಂದಲೇ ದಾಖಲಾತಿ ಪ್ರಕ್ರಿಯೆಗಳು ಶುರುವಾಗಲಿವೆ.

    ಮೊದಲು ರಾಜ್ಯದಲ್ಲಿ ಶಾಲೆ ಪ್ರಾರಂಭ ಮಾಡುವ ಸಂಬಂಧ ಜೂನ್ 10ರಿಂದ ಮೂರು ದಿನಗಳ ಕಾಲ ಎಲ್ಲ ಶಾಲೆಗಳಲ್ಲಿ ಪೋಷಕರ, ಎಸ್‍ಡಿಎಂಸಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

    ಶಾಲೆಗಳ ಪ್ರಾರಂಭಕ್ಕೆ ಚಾಲನೆ ಕೊಟ್ಟಿರುವ ಸರ್ಕಾರ ಮೊದಲ ಹಂತವಾಗಿ ಶಾಲೆಗಳ ಕಚೇರಿ ಪ್ರಾರಂಭ ಮಾಡಲು ಅವಕಾಶ ನೀಡಿದೆ. ಜೂನ್ 5 ರಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಕಚೇರಿ ಪ್ರಾರಂಭಕ್ಕೆ ಸೂಚನೆ ನೀಡಲಾಗಿದೆ. ಜೂನ್ 8 ರಿಂದ ದಾಖಲಾತಿ ಪ್ರಕ್ರಿಯೆಗೆ ಸಿದ್ಧತೆ ಆರಂಭವಾಗಲಿದ್ದು, ಜೂನ್ 8ರಿಂದ ಖಾಸಗಿ ಶಾಲೆಗಳ ಕಚೇರಿ ಪ್ರಾರಂಭಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ನೀಡಿದೆ. ಅಲ್ಲದೇ ಜೂನ್ 15 ಒಳಗೆ ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಿ ಇಲಾಖೆಗೆ ಮಾಹಿತಿ ಕೊಡಲು ಶಿಕ್ಷಣ ಇಲಾಖೆ ಸೂಚಿಸಿದೆ.

    ಶಾಲೆ ಯಾವಾಗ ಓಪನ್? : ತರಗತಿ ಪ್ರಸ್ತಾಪಿತ ದಿನಾಂಕ

    • 4-7ನೇ ತರಗತಿ – ಜುಲೈ 1
    • 1-3ನೇ ತರಗತಿ – ಜುಲೈ 15
    • 8-10ನೇ ತರಗತಿ – ಜುಲೈ 15
    • ಪ್ರೀ ಸ್ಕೂಲ್ – ಜುಲೈ 20

    ಮೂರು ಮಾದರಿಯಲ್ಲಿ ಶಾಲೆಗಳ ಆರಂಭಿಸುವ ಬಗ್ಗೆ ಅಭಿಪ್ರಾಯ ಸಂಗ್ರಹ ಮಾಡಲಾಗಿದ್ದು, ಮಾದರಿ 1ರಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಎಂದಿನಂತೆ (ಹಿಂದಿನಂತೆ) ತರಗತಿಗಳನ್ನ ನಡೆಸುವುದು. 2 ಪಾಳಿಗಳಲ್ಲಿ ಶಾಲೆ ನಡೆಸುವುದು. ಅಂದರೆ ಬೆಳಗ್ಗೆ 8 ರಿಂದ ಮಧ್ಯಾಹ್ನ 12ರ ವರೆಗೂ ಹಾಗೂ ಮಧ್ಯಾಹ್ನ 1 ರಿಂದ ಸಂಜೆ 5 ವರೆಗೂ 2 ಪಾಳಿಯಲ್ಲಿ ಶಾಲೆ ನಡೆಸಲು ಸಲಹೆ ಪಡೆಯಲಿದೆ. ಮೂರನೇ ಅಂಶವಾಗಿ ದಿನ ಬಿಟ್ಟು ದಿನ ಶಾಲೆ ನಡೆಸುವುದು. ಅಂದರೆ ಶಾಲೆಯ ಒಟ್ಟು ತರಗತಿಯನ್ನು ವಿಭಾಗ ಮಾಡಿ ದಿನ ಬಿಟ್ಟು ದಿನ ಶಾಲೆ ನಡೆಸುವುದು. ಉದಾಹರಣೆಗೆ 1-5 ನೇ ತರಗತಿ ಒಂದು ದಿನ. 6-10 ನೇ ತರಗತಿ ಮತ್ತೊಂದು ದಿನ ನಡೆಸುವ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಸೂಚಿಸಲಾಗಿದೆ.

    ಇತ್ತ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಕಂಟೈನ್ಮೆಂಟ್ ಝೋನ್‍ಗಳಲ್ಲಿ ನಡೆಸಲ್ಲ. ಅಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ಸ್ಥಳಾಂತರಿಸಿ, ಅಲ್ಲಿ ನಿಗದಿಯಂತೆ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಒಂದು ವೇಳೆ ಪರೀಕ್ಷೆ ಸಮಯದಲ್ಲೇ ಎಕ್ಸಾಂ ಸೆಂಟರ್ ಇರುವ ಪ್ರದೇಶ ಕಂಟೈನ್ಮೆಂಟ್ ಝೋನ್ ಆದಲ್ಲಿ, ಆ ಭಾಗದ ಮಕ್ಕಳಿಗೆ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು ಎಂದು ತಿಳಿಸಿದರು. ಜೂನ್ 25ರಿಂದ ಶುರುವಾಗುವ ಪರೀಕ್ಷೆಯನ್ನು 8.48 ಲಕ್ಷ ಮಕ್ಕಳು ಬರೆಯಲಿದ್ದಾರೆ. ಕೊರೋನಾ ತಡೆ ಸಂಬಂಧ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದರು.

  • ಕೊರೊನಾ ಭೀತಿ- ಮಕ್ಕಳಿಗೆ ಜ್ವರ ಬಂದ್ರೆ ಕಡ್ಡಾಯ ರಜೆ

    ಕೊರೊನಾ ಭೀತಿ- ಮಕ್ಕಳಿಗೆ ಜ್ವರ ಬಂದ್ರೆ ಕಡ್ಡಾಯ ರಜೆ

    ಬೆಂಗಳೂರು: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರೋ ಕೊರೊನಾ ವೈರೆಸ್ ನಿಂದ ಸಾವಿರಾರು ಜನ ಸಾವನ್ನಪ್ಪಿದ್ದಾರೆ. ಸಾವಿರಾರು ಜನರು ಸಾವಿನ ಸನಿಹದಲ್ಲಿದ್ದಾರೆ. ಸಾವಿರಾರು ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಇಡೀ ವಿಶ್ವವೇ ಕರೋನಾ ತಡೆಗೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದೆ. ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಕೂಡಾ ಕೊರೊನಾ ವೈರಸ್ ತಡೆಗೆ ವಿಶೇಷ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

    ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯದ ಶಾಲೆಗಳಲ್ಲಿ ಯಾವುದೇ ಮಕ್ಕಳಿಗೆ ಜ್ವರದ ಲಕ್ಷಣ ಕಂಡು ಬಂದ್ರೆ ಆ ಮಕ್ಕಳಿಗೆ ಕಡ್ಡಾಯವಾಗಿ ರಜೆ ನೀಡಬೇಕು ಅಂತ ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದೆ. ಮಗುವಿಗೆ ಜ್ವರ ಕಡಿಮೆ ಆಗೋವರೆಗೂ ಕಡ್ಡಾಯ ರಜೆ ನೀಡಬೇಕು. ಅ ಮಗು ಸೂಕ್ತ ಚಿಕಿತ್ಸೆ ಪಡೆದು ಜ್ವರ ವಾಸಿಯಾದ ನಂತರವೇ ಮತ್ತೆ ಶಾಲೆಗೆ ಬರ ಮಾಡಿಕೊಳ್ಳಬೇಕು ಅಂತ ತಿಳಿಸಿದೆ. ಕೊರೊನಾ ಭೀತಿಯಿಂದ ಉಳಿದ ಮಕ್ಕಳಿಗೆ, ಪೋಷಕರಿಗೆ ಆತಂಕ ನಿವಾರಣೆ ಮಾಡೋ ನಿಟ್ಟಿನಲ್ಲಿ ಈ ಮಹತ್ವದ ಕ್ರಮವನ್ನ ಶಿಕ್ಷಣ ಇಲಾಖೆ ತೆಗೆದುಕೊಂಡಿದೆ. ಇದನ್ನೂ ಓದಿ:  ಕೊರೊನಾ ವೈರಸ್ ಎಫೆಕ್ಟ್ – ಮುಕೇಶ್ ಅಂಬಾನಿಗೆ 5.09 ಶತಕೋಟಿ ಡಾಲರ್ ನಷ್ಟ

    ಕೇವಲ ಮಕ್ಕಳು ಮಾತ್ರವಲ್ಲ, ಶಾಲೆಯಲ್ಲಿ ಶಿಕ್ಷಕರು, ಶಾಲಾ ಸಿಬ್ಬಂದಿ ಸೇರಿದಂತೆ ಯಾರಿಗೆ ಜ್ವರ ಕಂಡು ಬಂದರು ಅವರಿಗೆ ಕೂಡಲೇ ರಜೆ ಕೊಡಬೇಕು. ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಬೇಕು ಅಂತ ಎಲ್ಲಾ ಆಡಳಿತ ಮಂಡಳಿಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಸಂಪೂರ್ಣವಾಗಿ ಗುಣಮುಖವಾಗೋವರೆಗೆ ಎಲ್ಲರಿಗೂ ರಜೆ ಕೊಡಲು ಸೂಚನೆ ನೀಡಿದೆ. ಇಷ್ಟೇ ಅಲ್ಲ ಹಾಸ್ಟೆಲ್ ಗಳಲ್ಲಿ ಕೂಡಾ ವಿದ್ಯಾರ್ಥಿಗಳಿಗೆ ಜ್ವರ ಕಂಡು ಬಂದರೆ ಅವರನ್ನ ಪ್ರತ್ಯೇಕ ವಿಭಾಗದಲ್ಲಿ ಇರಿಸಬೇಕು. ಜ್ವರದಿಂದ ಬಳಲುತ್ತಿರೋ ಮಕ್ಕಳಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಕೊಡಿಸಬೇಕು. ಅ ವಿದ್ಯಾರ್ಥಿಗಳು ಸಂಪೂರ್ಣವಾಗಿ ಗುಣಮುಖರಾದ ನಂತರವೇ ಎಲ್ಲರ ಜೊತೆ ತೊಡಗಿಸಿಕೊಳ್ಳಲು ಅವಕಾಶ ನೀಡಬೇಕು ಅಂತ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಇದನ್ನೂ ಓದಿ: ಸೂರ್ಯನಿಗೆ ಟಾರ್ಚ್ ಬಿಟ್ಟ ನಂತ್ರ ಕೊರೊನಾಗೆ ಔಷಧಿ ಕಂಡು ಹಿಡಿದ ನಿತ್ಯಾನಂದ

  • ವಿದ್ಯಾರ್ಥಿಗಳಿಗೆ ಹುಳು ಮಿಶ್ರಿತ ಬಿಸಿಯೂಟ- ಮುಖ್ಯ ಶಿಕ್ಷಕ ಅಮಾನತು

    ವಿದ್ಯಾರ್ಥಿಗಳಿಗೆ ಹುಳು ಮಿಶ್ರಿತ ಬಿಸಿಯೂಟ- ಮುಖ್ಯ ಶಿಕ್ಷಕ ಅಮಾನತು

    ಮೈಸೂರು: ವಿದ್ಯಾರ್ಥಿಗಳಿಗೆ ಹುಳು ಮಿಶ್ರಿತ ಬಿಸಿಯೂಟ ನೀಡುವ ಮೂಲಕ ನಿರ್ಲಕ್ಷ್ಯ ತೋರಿದ್ದ ಮುಖ್ಯ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

    ಜಿಲ್ಲೆಯ ಹೆಚ್.ಡಿ ಕೋಟೆ ಪಟ್ಟಣದ ಆದರ್ಶ ಶಾಲೆಯ ಚಂದ್ರಶೇಖರ್ ಅಮಾನತುಗೊಂಡ ಮುಖ್ಯ ಶಿಕ್ಷಕ. ಹುಳು ಮಿಶ್ರಿತ ಬಿಸಿಯೂಟ ನೀಡಿದ್ದರಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ನಂತರ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಎರಡು ತಿಂಗಳ ಹಿಂದೆ ಈ ಘಟನೆ ಸಂಭವಿಸಿತ್ತು. ಇದಕ್ಕೆ ಮುಖ್ಯ ಶಿಕ್ಷಕನ ನಿರ್ಲಕ್ಷ್ಯವೇ ಕಾರಣ ಎಂದು ತನಿಖೆ ವೇಳೆ ತಿಳಿದು ಬಂದಿದ್ದು, ಘಟನೆ ಬಳಿಕ ಶಾಲೆಗೆ ಭೇಟಿ ನೀಡಿ ತನಿಖೆ ನಡೆಸಿದ್ದ ಜಿಲ್ಲಾಧಿಕಾರಿಗಳ ತಂಡ, ಹುಳು ಮಿಶ್ರಿತ ಬಿಸಿಯೂಟ ಬಡಿಸಿರುವುದು ಸಾಬೀತಾಗಿತ್ತು. ಹೀಗಾಗಿ ಮುಖ್ಯ ಶಿಕ್ಷಕನನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಜಾರಿ ಮಾಡಿದ್ದಾರೆ.

  • ಶುಲ್ಕದ ಮಾಹಿತಿ ಕೊಡಿ: ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಡೆಡ್ ಲೈನ್

    ಶುಲ್ಕದ ಮಾಹಿತಿ ಕೊಡಿ: ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಡೆಡ್ ಲೈನ್

    ಬೆಂಗಳೂರು: ಶಿಕ್ಷಣದ ಹೆಸರಲ್ಲಿ ಹಣ ಸುಲಿಗೆ ಮಾಡುತ್ತಿರೋ ಖಾಸಗಿ ಶಾಲೆಗಳ ಧನದಾಹಿತನಕ್ಕೆ ಬ್ರೇಕ್ ಹಾಕೋದಕ್ಕೆ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಹೀಗಾಗಿ 2020-21 ನೇ ಸಾಲಿಗೆ ಯಾವ ಯಾವ ಶಾಲೆಗಳು ಎಷ್ಟು ಶುಲ್ಕ ತೆಗೆದುಕೊಳ್ತೀರಾ ಅನ್ನೋ ಸಂಪೂರ್ಣ ಮಾಹಿತಿ ನೀಡಿ ಅಂತ ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಡೆಡ್ ಲೈನ್ ಕೊಟ್ಟಿದೆ.

    ಪ್ರತಿ ವರ್ಷ ಖಾಸಗಿ ಶಾಲೆಗಳು ಮನಸೋ ಇಚ್ಛೆ ಶುಲ್ಕಗಳನ್ನು ಪಡೆಯುತ್ತವೆ. ಕಂಪ್ಯೂಟರ್ ಫೀಸ್, ಸ್ಪೋಟ್ರ್ಸ್ ಫೀಸ್, ಲೈಬ್ರರಿ ಫೀಸ್ ಅದು ಇದು ಅಂತ ಸಿಕ್ಕ ಸಿಕ್ಕಿದ್ದಕ್ಕೆ ಶುಲ್ಕ ಹಾಕ್ತಾರೆ. ಇದೆಲ್ಲದ್ದಕ್ಕೂ ಕಡಿವಾಣ ಹಾಕೋಕೆ ಶಾಲೆಗಳ ಮೇಲೆ ನಿಗಾ ಇಡೋಕೆ ಇಲಾಖೆ ಮಾಹಿತಿ ಸಂಗ್ರಹ ಮಾಡ್ತಿದೆ. ಇದಕ್ಕಾಗಿ ಶುಲ್ಕದ ಮಾಹಿತಿಯನ್ನು ಜನವರಿ 31ರ ಒಳಗೆ ಕಡ್ಡಾಯವಾಗಿ ಕೊಡಿ ಅಂತ ಖಡಕ್ ಎಚ್ಚರಿಕೆ ನೀಡಿದೆ.

    ಮಾಹಿತಿ ಕೇಳೋದಕ್ಕೆ ಕಾರಣ ಏನು?
    ಶಿಕ್ಷಣ ಇಲಾಖೆ ಈಗಾಗಲೇ ಖಾಸಗಿ ಶಾಲೆಗಳಿಗೆ ಶುಲ್ಕ ಪಡೆಯುವ ಬಗ್ಗೆ ಆದೇಶ ಹೊರಡಿಸಿದೆ. ಇಂತಿಷ್ಟು ಶುಲ್ಕ ಪಡೆಯಬೇಕು. ಅದನ್ನ ಹೊರತು ಪಡಿಸಿ ಹೆಚ್ಚುವರಿ ಶುಲ್ಕ ಪಡೆಯಬಾರದು ಅಂತ ತಿಳಿಸಿದೆ. ಅಲ್ಲದೆ ಪ್ರತಿ ವರ್ಷ ಇಂತಿಷ್ಟೇ ಶೇಕಡವಾರು ಶುಲ್ಕ ಹೆಚ್ಚಳ ಮಾಡಬೇಕು ಅನ್ನೊ ನಿಯಮ ಮಾಡಿದೆ. ಬೆಂಗಳೂರು ನಗರ, ಪಾಲಿಕೆ ವ್ಯಾಪ್ತಿ, ಗ್ರಾಮೀಣ ಭಾಗದಲ್ಲಿ ಇಂತಿಷ್ಟು ಶುಲ್ಕ ಪಡೆಯಬೇಕು ಅಂತ ವಿಭಾಗ ಮಾಡಲಾಗಿದೆ. ಆದ್ರೆ ಯಾವ ಶಾಲೆಗಳು ಇದನ್ನ ಅನುಸರಿಸುತ್ತಿಲ್ಲ. ಹೀಗಾಗಿ ಶಾಲೆಗಳಿಂದಾನೇ ಮಾಹಿತಿ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳಲು ಈ ಮಾಹಿತಿ ಸಂಗ್ರಹ ಮಾಡ್ತಿದೆ.

    ಶಿಕ್ಷಣ ಇಲಾಖೆ ಮಾಹಿತಿ ನೀಡಲು ಈಗಾಗಲೇ ಎರಡು ಡೆಡ್ ಲೈನ್ ಕೊಟ್ಟಿತ್ತು. ಆದ್ರೆ ಬಹುತೇಕ ಶಾಲೆಗಳು ಮಾಹಿತಿ ಕೊಡದೇ ಆಟವಾಡಿಸುತ್ತಿವೆ. ಖಾಸಗಿ ಶಾಲೆಗಳ ವರ್ತನೆಗೆ ಸಿಡಿಮಿಡಿಗೊಂಡಿರೋ ಶಿಕ್ಷಣ ಇಲಾಖೆ ಈಗ ಕೊನೆ ಡೆಡ್ ಲೈನ್ ಕೊಟ್ಟಿದೆ. ಒಂದು ವೇಳೆ ಮಾಹಿತಿ ನೀಡದೇ ಹೋದ್ರೆ ಅಂತಹ ಶಾಲೆಗಳ ಮೇಲೆ ಕ್ರಮ ತೆಗೆದುಕೊಳ್ಳಲು ನಿರ್ಧಾರ ಮಾಡಿದೆ.

  • ಸುಸ್ಥಿರ ಅಭಿವೃದ್ಧಿಗೆ ಶಿಕ್ಷಣ ಇಲಾಖೆಯಿಂದ ಮಿಷನ್ 2030 ಯೋಜನೆ

    ಸುಸ್ಥಿರ ಅಭಿವೃದ್ಧಿಗೆ ಶಿಕ್ಷಣ ಇಲಾಖೆಯಿಂದ ಮಿಷನ್ 2030 ಯೋಜನೆ

    ಬೆಂಗಳೂರು: ಶೈಕ್ಷಣಿಕ ಕ್ಷೇತ್ರ ಮತ್ತು ಮಗುವಿನ ಅಭಿವೃದ್ಧಿ ಜೊತೆಗೆ ಸಮಾಜದ ಸಮಾನತೆಗೆ ಶಿಕ್ಷಣ ಇಲಾಖೆ “ಸುಸ್ಥಿರ ಅಭಿವೃದ್ದಿ ಮಿಷನ್ 2030” ನೂತನ ಕಾರ್ಯಕ್ರಮ ಅಳವಡಿಸಿಕೊಂಡಿದೆ. ರಾಜ್ಯದ ಪ್ರತಿ ಶಾಲೆಯಲ್ಲಿ ಮಗುವಿನ ಸುಸ್ಥಿರ ಅಭಿವೃದ್ಧಿ, ಮಗುವಿನ ವಿಕಸನವನ್ನ ಶಾಲೆ ಮಟ್ಟದಲ್ಲಿ ರೂಪಿಸುವುದು ಈ ಮಿಷನ್ ನ ಪ್ರಮುಖ್ಯ ಧ್ಯೆಯವಾಗಿದೆ.

    ವಿಶ್ವಸಂಸ್ಥೆಯು ಮಂಡಿಸಿರೋ ಈ ಸುಸ್ಥಿರ ಅಭಿವೃದ್ಧಿಗೆ ಭಾರತ ಸೇರಿದಂತೆ ವಿಶ್ವದ ಬಹುತೇಕ ದೇಶಗಳು ಒಪ್ಪಿಕೊಂಡಿವೆ. ಇದನ್ನ ಅಳವಡಿಸಿಕೊಳ್ಳುವ ಕೆಲಸ ಮಾಡ್ತಿದೆ. ಭಾರತ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ಸರ್ಕಾರವೂ ಈ ಸುಸ್ಥಿರ ಅಭಿವೃದ್ಧಿಯನ್ನ 2030ರ ವೇಳೆಗೆ ಸಾಕಾರ ಮಾಡಲು ಮಿಷನ್ 2030 ಯೋಜನೆ ಆರಂಭಿಸಿದೆ.

    ಸುಸ್ಥಿರ ಅಭಿವೃದ್ಧಿ ಎಂದರೇನು?
    ಸ್ವಾಭಾವಿಕವಾಗಿ ಸಿಗುವ ಮತ್ತು ಮಾನವ ನಿರ್ಮಿತ ಸಂಪನ್ಮೂಲಗಳನ್ನ ನಮಗೆ ಬೇಕಾದಷ್ಟು ಬಳಸಿಕೊಂಡು, ಬೇರೆ ಅವರಿಗೂ ಇದನ್ನು ಹಂಚೋದು ಇದರ ಮುಖ್ಯ ಉದ್ದೇಶವಾಗಿದೆ. ಒಟ್ಟಾರೆ ಸುಸ್ಥಿರ ಅಭಿವೃದ್ಧಿ ಎಂದರೆ ಬೆಳೆಸು, ಬಳಸು, ಉಳಿಸು ಅನ್ನೋದಾಗಿದೆ.

    ರಾಜ್ಯ ಸರ್ಕಾರ ಸುಸ್ಥಿರ ಅಭಿವೃದ್ಧಿಯನ್ನ ಶಾಲೆಗಳಲ್ಲಿ ಅಳವಡಿಸಲು ಮುಂದಾಗಿದೆ. ಶಾಲೆಗಳಲ್ಲಿ ಇದನ್ನ ಮಕ್ಕಳಿಗೆ ಅರ್ಥೈಸುವ ಮೂಲಕ ಮಗು ವಿಕಸನಕ್ಕೆ ಅನುಕೂಲ ಮಾಡಿಕೊಡೋದು ಇದರ ಉದ್ದೇಶ ಆಗಿದೆ. ಸುಸ್ಥಿರ ಅಭಿವೃದ್ಧಿಯಲ್ಲಿ 17 ಗುರಿಗಳನ್ನು ಹಾಕಿಕೊಳ್ಳಲಾಗಿದೆ. ಬಡತನದಿಂದ ಮುಕ್ತ, ಹಸಿವು ಮುಕ್ತ, ಉತ್ತಮ ಆರೋಗ್ಯ, ಗುಣಮಟ್ಟದ ಶಿಕ್ಷಣ, ಲಿಂಗಸಮಾನತೆ, ಸ್ಚಚ್ಚ ನೀರು ನೈರ್ಮಲ್ಯ ಹೀಗೆ 17 ಅಂಶಗಳ ಬಗ್ಗೆ ಜಾಗೃತಿ ಮೂಡಿಸಿ ಅವುಗಳ ಅಗತ್ಯತೆಗಳನ್ನು ಪರಿಚಯಿಸಿ ಮುಂದೆ ಸಮ ಸಮಾಜದ ನಿರ್ಮಾಣವೇ ಇದರ ಗುರಿಯಾಗಿದೆ.

  • ವಿಜ್ಞಾನದಲ್ಲಿ ಮಕ್ಕಳ ಆಸಕ್ತಿ ಹೆಚ್ಚಿಸಲು ಶಿಕ್ಷಣ ಇಲಾಖೆಯ ಹೊಸ ಪ್ರಯೋಗ

    ವಿಜ್ಞಾನದಲ್ಲಿ ಮಕ್ಕಳ ಆಸಕ್ತಿ ಹೆಚ್ಚಿಸಲು ಶಿಕ್ಷಣ ಇಲಾಖೆಯ ಹೊಸ ಪ್ರಯೋಗ

    ಕಲಬುರಗಿ: ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ವಿಜ್ಞಾನ ವಿಷಯ ಎಂದರೆ ಮಕ್ಕಳಿಗೆ ತುಂಬಾ ಕಠಿಣ ವಿಷಯ ಎಂಬ ಮಾತು ಚಾಲ್ತಿಯಲ್ಲಿದೆ. ಇದನ್ನು ಅರಿತ ಕಲಬುರಗಿ ಶಿಕ್ಷಣ ಇಲಾಖೆ ಕೇವಲ ಪಠ್ಯದಿಂದ ಮಕ್ಕಳನ್ನು ಈ ವಿಷಯದಲ್ಲಿ ಆಸಕ್ತಿ ಮೂಡಿಸಿದರೆ ಸಾಲದು ಎಂದು ಅರಿತು ಹೊಸ ಪ್ರಯೋಹಗಕ್ಕೆ ಮುಂದಾಗಿದೆ.

    ವಿಜ್ಞಾನ ವಿಷಯದ ಕಲಿಕೆಯಲ್ಲಿ ಮಕ್ಕಳ ಆಸಕ್ತಿ ಹೆಚ್ಚಿಸಲು ಕಲಬುರಗಿಯ ನಗರದ ಬಸವೇಶ್ವರ ಕಾಲೋನಿಯ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಮಕ್ಕಳ ವಿಜ್ಞಾನ ಹಬ್ಬವನ್ನು ಶಿಕ್ಷಣ ಇಲಾಖೆ ಆಯೋಜನೆ ಮಾಡಿತ್ತು. ಈ ಮೂಲಕ ಪಠ್ಯದಲ್ಲಿನ ವಿಷಯವನ್ನು ಪ್ರಾಯೋಗಿಕವಾಗಿ ತೋರಿಸಿ ಮಕ್ಕಳಲ್ಲಿ ಆಸಕ್ತಿ ಮೂಡುವಂತೆ ಮಾಡಿದೆ.

    ವಿಜ್ಞಾನ ಹಬ್ಬದ ಮೊದಲ ಅಂಗವಾಗಿ ಆಯೋಜಿಸಿದ ಜ್ಞಾನ ವಿಜ್ಞಾನ ಕಾರ್ಯಕ್ರಮದಲಿ ಇತ್ತೀಚೆಗೆ ಚಂದ್ರನ ಮೇಲೆ ಇಸ್ರೋ ಸಂಸ್ಥೆ ಉಡಾವಣೆ ಮಾಡಿದ ರಾಕೆಟ್ ಸೇರಿದಂತೆ ಗ್ರಹಣ, ಸೌರ ಮಂಡಲ ಹೇಗಿರುತ್ತೆ ಎಂಬಾತ ಹಲವು ವಿಷಯಗಳ ಚಿತ್ರಗಳನ್ನು ಬಿಡಿಸುವ ಮತ್ತು ಕ್ರಾಫ್ಟ್ ವರ್ಕ್ ಮೂಲಕ ವಿದ್ಯಾರ್ಥಿಗಳಿಗೆ ಕಲಿಸಲಾಗಿದೆ.

    ಒಟ್ಟು ಮೂರು ಜಿಲ್ಲಾ ಮಟ್ಟದ ಈ ಹಬ್ಬ ಮಕ್ಕಳಿಗೆ ಮನೋಲ್ಲಾಸ ನೀಡಿತ್ತು. ಮಾತ್ರವಲ್ಲ ಪಾಠ ಓದಿರೋದಕ್ಕಿಂತ ಹೆಚ್ಚಿನ ಜ್ಞಾನ ವೃದ್ಧಿಯಾದಂತಿತ್ತು. ಕಾರ್ಯಕ್ರಮದ ಬಗ್ಗೆ ಮಕ್ಕಳು ಕೂಡ ಸಂತಸ ವ್ಯಕ್ತಪಡಿಸಿದ್ದಾರೆ.

  • ಇನ್ಮುಂದೆ ಶಾಲೆಗಳಲ್ಲಿ ಪ್ರಾರ್ಥನೆಯ ಬಳಿಕ ಸಂವಿಧಾನ ಪ್ರಸ್ತಾವನೆ ವಾಚನ ಕಡ್ಡಾಯ

    ಇನ್ಮುಂದೆ ಶಾಲೆಗಳಲ್ಲಿ ಪ್ರಾರ್ಥನೆಯ ಬಳಿಕ ಸಂವಿಧಾನ ಪ್ರಸ್ತಾವನೆ ವಾಚನ ಕಡ್ಡಾಯ

    ಬೆಂಗಳೂರು: ಭಾರತದ ಸಂವಿಧಾನದ ಮಹತ್ವ ಕುರಿತು ಶಾಲಾ ಹಂತದಲ್ಲೇ ಮಕ್ಕಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಶಾಲೆಗಳಲ್ಲಿ ಪ್ರತಿನಿತ್ಯ ಪ್ರಾರ್ಥನೆಯ ಅವಧಿಯಲ್ಲಿ ಸಂವಿಧಾನದ ಪ್ರಸ್ತಾವನೆಯ ವಾಚನವನ್ನು ಕಡ್ಡಾಯಗೊಳಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

    ಸಂವಿಧಾನದ ಪ್ರಸ್ತಾವನೆಯನ್ನು ಓದಿ ಹೇಳುವ ಮತ್ತು ಉಪಸ್ಥಿತರೆಲ್ಲರೂ ಪುನರ್ ಉಚ್ಚರಿಸುವ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ಶಾಲಾ ವ್ಯಾಪ್ತಿಯಲ್ಲಿರುವ ಸಂವಿಧಾನ ತಜ್ಞರನ್ನು ಶಾಲೆಗೆ ಆಹ್ವಾನಿಸಿ ಅವರಿಂದ ವಿಶೇಷ ಉಪನ್ಯಾಸವನ್ನು ಏರ್ಪಡಿಸುವ ಮೂಲಕ ಮಕ್ಕಳಲ್ಲಿ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಬಗ್ಗೆ ಕ್ರಮ ಕೈಗೊಳ್ಳಲು ಸಹ ಸರ್ಕಾರ ಸೂಚಿಸಿದೆ.

    ನವೆಂಬರ್ 26 ರಂದು ಪ್ರತಿವರ್ಷ ಸಂವಿಧಾನದ ದಿನಾಚರಣೆ ಆಚರಿಸಲು ಸರಕಾರ ಈಗಾಗಲೇ ಆದೇಶ ಹೊರಡಿಸಿದೆ. ಇದರ ಮುಂದುವರಿದ ಭಾಗವಾಗಿ ಈಗ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆಯನ್ನೂ ವಾಚಿಸಲು ಆದೇಶಿಸಲಾಗಿದೆ. ಆ ಮೂಲಕ ಮಕ್ಕಳಲ್ಲಿ ಸಂವಿಧಾನದ ಮಹತ್ವ ಅರಿವಿಗೆ ಬರಲಿ ಎನ್ನುವುದು ಸರ್ಕಾರದ ಆಶಯವಾಗಿದೆ.

    ಪ್ರಸ್ತಾವನೆಯಲ್ಲಿ ಏನಿದೆ?
    “ಭಾರತದ ಪ್ರಜೆಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ, ಪ್ರಜಾಸತ್ತಾತ್ಮಕ, ಸಮಾಜವಾದಿ, ಜಾತ್ಯತೀತ, ಗಣರಾಜ್ಯವನ್ನಾಗಿ ನಿರ್ಮಿಸುವ ಸಲುವಾಗಿ ಮತ್ತು ಭಾರತದ ಸಮಸ್ತ ಪ್ರಜೆಗಳಿಗೆ, ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ದೊರಕುವಂತೆಯೂ ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ, ಮತ್ತು ಉಪಾಸನೆಗಳ ಸ್ವಾತಂತ್ರ್ಯ ದೊರಕುವಂತೆ ಮಾಡುವುದು, ಅಂತಸ್ತು ಮತ್ತು ಅವಕಾಶದಲ್ಲಿ ಸಮಾನತೆಯನ್ನು ಸಾಧಿಸುವ ಹಾಗೂ ಎಲ್ಲರಿಗೂ ವ್ಯಕ್ತಿ ಗೌರವ ದೊರಕಿ ರಾಷ್ಟ್ರದ ಐಕ್ಯತೆ ಮತ್ತು ಸಮಗ್ರತೆ ಇವುಗಳನ್ನು ವೃದ್ಧಿಗೊಳಿಸಿ, ಭ್ರಾತೃ ಭಾವನೆಯನ್ನು ಎಲ್ಲರಲ್ಲೂ ಬೆಳೆಸಲು ದೃಢ ಸಂಕಲ್ಪ ಮಾಡಿ ಈ ದಿನ ಅಂದರೆ ನವೆಂಬರ್ 26, 1949ರಂದು ಈ ಸಂವಿಧಾನವನ್ನು ಅಂಗೀಕರಿಸಿ ಶಾಸನ ಮಾಡಿ ನಮಗೆ ನಾವೇ ಅರ್ಪಿಸಿಕೊಂಡಿದ್ದೇವೆ”

  • ಸರ್ಕಾರಿ ನೌಕರರು ರಾಜಕೀಯ ಅಭಿಪ್ರಾಯ ಹಂಚಿಕೊಂಡರೆ ಶಿಸ್ತು ಕ್ರಮ

    ಸರ್ಕಾರಿ ನೌಕರರು ರಾಜಕೀಯ ಅಭಿಪ್ರಾಯ ಹಂಚಿಕೊಂಡರೆ ಶಿಸ್ತು ಕ್ರಮ

    ಗುವಾಹಟಿ: ಸರ್ಕಾರಿ ನೌಕರರು ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಅಭಿಪ್ರಾಯ ಹಂಚಿಕೊಂಡರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಅಸ್ಸಾಂ ಸರ್ಕಾರ ಸುತ್ತೋಲೆ ಹೊರಡಿಸಿದೆ.

    ಅಸ್ಸಾಂ ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕರು ಈ ರೀತಿಯ ವಿವಾದಿತ ಸುತ್ತೋಲೆ ಹೊರಡಿಸಿದ್ದು, ಫೇಸ್ಬುಕ್, ವಾಟ್ಸಪ್, ಟ್ವಿಟರ್ ಇನ್ಸ್ಟಾಗ್ರಾಂ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಟ್ಟಿದ್ದು, ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಚರ್ಚೆ ಮಾಡದಂತೆ ಆದೇಶಿಸಿದ್ದಾರೆ.

    ಈ ಸಕ್ರ್ಯೂಲರ್ ಅಸ್ಸಾಂ ಸರ್ಕಾರಿ ನೌಕರ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ. ಆದೇಶ ಉಲ್ಲಂಘಿಸಿದರೆ 1961 ರ ಅಸ್ಸಾಂ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಿದೆ. ಖಾಯಂ ಮಾತ್ರವಲ್ಲದೇ ಈ ಕ್ರಮವು ಗುತ್ತಿಗೆ ನೌಕರರಿಗೂ ಅನ್ವಯಿಸುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

    ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು, ಈ ಸಂಬಂಧ ಪ್ರಾಥಮಿಕ ಶಿಕ್ಷಣ ಇಲಾಖೆ ಈ ನಿರ್ಧಾರ ತೆಗೆದುಕೊಂಡಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ತೀವ್ರವಾಗಿ ಪ್ರತಿಭಟಿಸಿದ ಅಸ್ಸಾಂನ ಸ್ಥಳೀಯ ಜನರು, ಸಿಎಎಯಿಂದ ಅಸ್ಸಾಂನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ಹಿಂದೂಗಳಿಗೆ ಅನುಕೂಲವಾಗಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯಾದ್ಯಂತ ಈ ಸಂಖ್ಯೆ ಹೆಚ್ಚಿದ್ದು, ಬಾಂಗ್ಲಾದೇಶದಿಂದ ಬಾಂಗ್ಲಾ ಮಾತನಾಡುವ ಹಿಂದೂ ವಲಸಿಗರಿಗೆ ಪೌರತ್ವ ನೀಡಿದರೆ, ಅವರು ರಾಜ್ಯದಲ್ಲಿ ಅಸ್ಸಾಮಿ ಮಾತನಾಡುವ ಜನರನ್ನು ಮೀರಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಸಾಕಷ್ಟು ಜನರು ಟ್ವಿಟ್ಟರ್ ನಲ್ಲಿ ಈ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಇಲಾಖೆ ಸಿಬ್ಬಂದಿಗಳು ಸಾಮಾಜಿಕ ಮಾಧ್ಯಮ ಬಳಕೆಗೆ ನಿರ್ಬಂಧ ಹೇರಿರುವುದಕ್ಕೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಸಿಎಎ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸಿದ ನಂತರ ಅಸ್ಸಾಂನಲ್ಲಿ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದ್ದವು ಬಸ್ ಸೇರಿ ಸಾಕಷ್ಟು ಸಾರ್ವಜನಿಕ ಆಸ್ತಿ ಪಾಸ್ತಿಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು.