Tag: Department of Mines and Earth Sciences

  • ಕ್ವಾರಿಯಲ್ಲಿ ಸ್ಫೋಟ ಪ್ರಕರಣ – ಮಾಲೀಕ ಸೇರಿ 7 ಜನ ಅರೆಸ್ಟ್

    ಕ್ವಾರಿಯಲ್ಲಿ ಸ್ಫೋಟ ಪ್ರಕರಣ – ಮಾಲೀಕ ಸೇರಿ 7 ಜನ ಅರೆಸ್ಟ್

    ಕೋಲಾರ: ಕೆ.ಬಿ ಹೊಸಹಳ್ಳಿಯ (KB Hosahalli) ಕಲ್ಲು ಕ್ವಾರಿಯಲ್ಲಿ ಬ್ಲಾಸ್ಟಿಂಗ್ ವೇಳೆ ಕಾರ್ಮಿಕ ಸಾವಿಗೀಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ವಾರಿ (Quarry) ಮಾಲೀಕ ಸೇರಿ ಏಳು ಜನರನ್ನು ವೇಮಗಲ್ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

    ಕ್ವಾರಿ ಮಾಲೀಕ ಅಬ್ದುಲ್ ರೆಹಮಾನ್, ಮ್ಯಾನೇಜರ್ ದೇವರಾಜ್ ಸೇರಿ ಒಟ್ಟು ಏಳು ಜನರನ್ನು ಬಂಧಿಸಲಾಗಿದೆ. ತಲೆ ಮರೆಸಿಕೊಂಡಿರುವ ಉಳಿದ ನಾಲ್ಕು ಜನರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಅಲ್ಲದೆ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ (Department of Mines and Earth Sciences) ಅಧಿಕಾರಿಗಳು ಹಾಗೂ ಕೋಲಾರ (Kolar) ಎಸ್‍ಪಿ ನಾರಾಯಣ್ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಶವ ಸಂಸ್ಕಾರದ ವೇಳೆ ಕುತ್ತಿಗೆಯಲ್ಲಿ ಹಗ್ಗದ ಗುರುತು ಪತ್ತೆ – ಈಗ ಕೊಲೆ ಕೇಸ್ ದಾಖಲು

    ಬುಧವಾರ ರಾತ್ರಿ ನಡೆದ ಸ್ಫೋಟದಲ್ಲಿ ಯಾದಗಿರಿ (Yadgir) ಮೂಲದ ಕಾರ್ಮಿಕ ಸೋಮು ಜಾದವ್ ಎಂಬ ಕಾರ್ಮಿಕ ಸಾವನ್ನಪ್ಪಿದ್ದ. ಘಟನೆಯಲ್ಲಿ ಗೋಪಿ ಎಂಬುವರಿಗೆ ಗಂಭೀರ ಗಾಯವಾಗಿತ್ತು. ಈ ಸಂಬಂಧ ಜಿಲೆಟಿನ್ ಸ್ಫೋಟದಲ್ಲಿ ನಿರ್ಲಕ್ಷ್ಯ ವಹಿಸಿದ್ದ ಕ್ವಾರಿ ಮಾಲೀಕ ಸೇರಿದಂತೆ ಎಂಜಿನಯರ್‍ಗಳು ಹಾಗೂ ಇನ್ನಿತರ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಐಪಿಎಲ್ ಬೆಟ್ಟಿಂಗ್ ಹಣಕ್ಕಾಗಿ ಯುವಕನ ಕೊಲೆ