Tag: depression

  • ಮುಂಬೈನ ಯುವ ಕ್ರಿಕೆಟಿಗ ನೇಣಿಗೆ ಶರಣು

    ಮುಂಬೈನ ಯುವ ಕ್ರಿಕೆಟಿಗ ನೇಣಿಗೆ ಶರಣು

    ಮುಂಬೈ: 27 ವರ್ಷದ ಯುವ ಕ್ರಿಕೆಟ್ ಆಟಗಾರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮುಂಬೈನ 27 ವರ್ಷದ ಕ್ರಿಕೆಟಿಗ ಕರಣ್ ತಿವಾರಿ ಸೋಮವಾರ ರಾತ್ರಿ ತಮ್ಮ ಮಲಾಡ್ ಪ್ರದೇಶದಕ್ಕಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕರಣ್ ತಿವಾರಿ ಮುಂಬೈ ವೃತ್ತಿಪರ ಕ್ರಿಕೆಟ್ ತಂಡದ ಭಾಗವಾಗಿರಲಿಲ್ಲ. ಆದರೆ ಅವರು ಅವರಿಗೆ ನೆಟ್ ಬೌಲರ್ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ತಿವಾರಿ ವೃತ್ತಿಜೀವನದಲ್ಲಿ ಯಶಸ್ಸು ಸಿಗದೆ ಖಿನ್ನತೆಯಿಂದ ಬಳಲಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.

    ಕರಣ್ ತಿವಾರಿ ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದ್ದು, ತನ್ನ ತಾಯಿ ಮತ್ತು ಸಹೋದರನೊಂದಿಗೆ ಮುಂಬೈನ ಮಲಾಡ್ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಜೊತೆಗೆ ಕ್ರಿಕೆಟರ್ ಆಗಬೇಕು ಎಂಬ ಕನಸು ಕಂಡಿದ್ದ ತಿವಾರಿ ಮುಂಬೈನ ಹಲವಾರು ಕ್ಲಬ್‍ಗಳಿಗೆ ಆಡಿದ್ದರು. ಜೊತೆಗೆ ದೇಶೀಯ ಕ್ರಿಕೆಟ್ ಆಟಗಾರಿಗೆ ನೆಟ್ ಬಾಲ್ ಬೌಲರ್ ಆಗಿದ್ದರು. ಇದರಿಂದ ಮನನೊಂದಿದ್ದ ತಿವಾರಿ ತಮ್ಮ ಪ್ರತಿಭೆಯನ್ನು ತೋರಿಸಲು ಸರಿಯಾದ ಅವಕಾಶ ಸಿಗುತ್ತಿಲ್ಲ ಎಂದು ತಮ್ಮ ಆಪ್ತರಲ್ಲಿ ಹೇಳಿಕೊಂಡಿದ್ದರು.

    ಕೊರೊನಾ ಲಾಕ್‍ಡೌನ್ ನಂತರ ತಿವಾರಿ ಮನೆಯಿಂದ ಹೊರಗೆ ಬಾರದೇ ಖಿನ್ನತೆಗೆ ಒಳಗಾಗಿದ್ದರು. ಜೊತೆಗೆ ತನ್ನ ರಾಜಸ್ಥಾನದಲ್ಲಿರುವ ಗೆಳೆಯರಿಗೆ ಕರೆ ಮಾಡಿ ನಾನು ಏನನ್ನೂ ಸಾಧಿಸಲು ಆಗಲಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ನಂತರ ಸ್ನೇಹಿತರು ತಿವಾರಿ ಸಹೋದರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಆದರೆ ಸೋಮವಾರ ರಾತ್ರಿ 10.30ರ ಸುಮಾರಿಗೆ ಕರಣ್ ತಿವಾರಿ ತನ್ನ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಬಾಗಿಲು ಒಡೆದು ನೋಡಿದಾಗ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಕುರಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಹೇರ್ ಕಟ್ ಮಾಡಿಸಿದರೆ ಖಿನ್ನತೆಗೆ ಒಳಗಾಗಿದ್ದೇನೆಂಬ ಅರ್ಥವಲ್ಲ: ಸಿಂಧು ಲೋಕನಾಥ್ ಕಿಡಿ

    ಹೇರ್ ಕಟ್ ಮಾಡಿಸಿದರೆ ಖಿನ್ನತೆಗೆ ಒಳಗಾಗಿದ್ದೇನೆಂಬ ಅರ್ಥವಲ್ಲ: ಸಿಂಧು ಲೋಕನಾಥ್ ಕಿಡಿ

    ಬೆಂಗಳೂರು: ನಾನು ಬಾಯ್ಸ್ ರೀತಿಯ ಹೇರ್ ಕಟ್ ಮಾಡಿಸಿದ್ದೇನೆ ಹೊರತು ಖಿನ್ನತೆ ಒಳಗಾಗಿ ಕೂದಲನ್ನು ಕತ್ತರಿಸಿಕೊಂಡಿಲ್ಲ ಎಂದು ನಟಿ ಸಿಂಧು ಲೋಕನಾಥ್ ಅವರು ಹೇಳಿದ್ದಾರೆ.

    ಇತ್ತೀಚೆಗೆ ಸಿಂಧು ಲೋಕನಾಥ್ ಅವರು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಬಾಯ್ ಹೇರ್ ಕಟ್ ಮಾಡಿಸಿಕೊಂಡಿರುವ ಫೋಟೋ ಹಾಕಿ ಕೆಲ ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡಿದ್ದರು. ಇದನ್ನು ನೋಡಿದ ಕೆಲವರು ಸಿಂಧು ಖಿನ್ನತೆಗೆ ಒಳಗಾಗಿದ್ದಾರೆ. ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು.

    https://www.facebook.com/SindhuLoknath/posts/2625571134327685

    ಈಗ ಈ ವಿಚಾರವಾಗಿ ಮತ್ತೆ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ಸುಳ್ಳು ಸುದ್ದಿ ಹಬ್ಬಿಸಿದವರಿಗೆ ಕ್ಲಾಸ್ ತೆಗೆದುಕೊಂಡಿರುವ ಸಿಂಧು ಲೋಕನಾಥ್, ನಾನು ಕೂದಲನ್ನು ಕತ್ತರಿಸಿದ್ದೇನೆ ಎಂದರೆ ನಾನು ಅನಾರೋಗ್ಯಕ್ಕೆ ತುತ್ತಾಗಿದ್ದೇನೆ ಅಥವಾ ನಾನು ಖಿನ್ನತೆ ಒಳಗಾಗಿದ್ದೇನೆ ಎಂಬ ಅರ್ಥವಲ್ಲ. ನಾನು ಬೇರೆ ರೀತಿಯ ಹೇರ್ ಸ್ಟೈಲ್ ಮಾಡಲು ಇಷ್ಟಪಡುತ್ತೇನೆ ಅದಕ್ಕೆ ಬಾಯ್ ಕಟ್ ಮಾಡಿಸಿದ್ದೇನೆ ಎಂದಿದ್ದಾರೆ.

    https://www.facebook.com/SindhuLoknath/posts/2633693606848771

    ಪೋಸ್ಟ್‌ನಲ್ಲಿ ಏನಿದೆ?
    ನಾನು ಇಲ್ಲಿ ಪೋಸ್ಟ್ ಮಾಡಿರುವ ಕೆಲ ಫೋಟೋಗಳು ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದವರಿಗೆ, ನಾನು ಅನಾರೋಗ್ಯದಿಂದ ಬಳಲುತ್ತಿದ್ದೇನೆ ಎಂದು ತೋರಿಸಿದವರಿಗೆ. ಅಂಥವರಿಗೆ ನಾನು ಕೆಲ ಮಾತುಗಳನ್ನು ಹೇಳಲು ಬಯಸುತ್ತೇನೆ. ನಾನು ಕೂದಲನ್ನು ಕತ್ತರಿಸಿದ್ದೇನೆ ಎಂದರೆ ಅದರ ಅರ್ಥ ನಾನು ಅನಾರೋಗ್ಯಕ್ಕೆ ತುತ್ತಾಗಿದ್ದೇನೆ ಎಂಬುದಲ್ಲ. ನಾನು ಹೇರ್ ಕಟ್ ಮಾಡಿಸಿದರೆ ಖಿನ್ನತೆ ಒಗಾಗಿದ್ದೇನೆ ಎಂಬ ಅರ್ಥವಲ್ಲ ಅಥವಾ ಲಿಂಗ ಪಕ್ಷಪಾತ ಮಾಡುತ್ತೇನೆ ಎಂದಲ್ಲ. ನಾನು ಹೇರ್ ಕಟ್ ಮಾಡಿಸಿರುವುದು ಬೇರೆ ಸ್ಟೈಲ್‍ಗಾಗಿ ಎಂದು ಸಿಂಧು ಕಿಡಿಕಾರಿದ್ದಾರೆ.

    ನನ್ನ ಕತ್ತರಿಸಿದ ಕೂದಲ ಮೇಲೆ ವಿವಾದವನ್ನು ಹುಟ್ಟು ಹಾಕಿದವರಿಗೆ ನಾನು ಹೇಳುವುದೆನೆಂದರೆ. ನನ್ನ ಕೂದಲು ಮುಂಚೆಗಿಂತಲೂ ತುಂಬ ಚೆನ್ನಾಗಿ ಬೆಳೆಯುತ್ತದೆ. ನಾನು ಹಿಂದೆ ಹಾಕಿರುವ ಪೋಸ್ಟ್ ಅನ್ನು 10 ಬಾರಿ ಸರಿಯಾಗಿ ಓದಿ ಆಗ ನಿಮಗೆ ನಾನು ಏನನ್ನು ಬರೆದಿದ್ದೇನೆ ಎಂಬುದು ಅರ್ಥವಾಗುತ್ತದೆ. ನಿಮ್ಮ ಒಂದು ಉಪಯೋಗಕ್ಕಾಗಿ ಬೇರೆಯವರನ್ನು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಖಿನ್ನತೆಗೆ ಒಳಗಾಗಿದ್ದಾರೆ ಎಂದು ಇನ್ನೊಬ್ಬರ ವೈಯಕ್ತಿಕ ಜೀವನಕ್ಕೆ ತಲೆ ಹಾಕಬೇಡಿ. ಅದು ಅವರ ಇಮೇಜ್ ಅನ್ನು ಹಾಳು ಮಾಡುತ್ತದೆ ಎಂದು ಸಿಂಧು ತಿಳಿಸಿದ್ದಾರೆ.

    ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿ ವ್ಯಕ್ತಿಗಳನ್ನು ಖಿನ್ನತೆಯ ಕಡೆಗೆ ತಳ್ಳುವುದನ್ನು ಬಿಡಿ. ನಾನು ಮೌನವಾಗಿದ್ದೇನೆ ಎಂದು ನೀವು ನನ್ನ ಬಗ್ಗೆ ಸುಳ್ಳು ಸುದ್ದಿ ಮಾಡುವ ಸ್ವಾತಂತ್ರ್ಯವನ್ನು ತೆಗೆದುಕೊಂಡರೆ, ಅದರ ವಿರುದ್ಧ ಧ್ವನಿ ಎತ್ತುವ ಸ್ವಾಂತತ್ರ್ಯ ನನಗೂ ಇದೆ. ಈ ಕೊರೊನಾ ರೀತಿಯ ಸಮಯದಲ್ಲಿ ಒಳ್ಳೆಯ ಸುದ್ದಿಗಳನ್ನು ನೀಡಲು ಮುಂದಾಗಿ. ನಾನೂ ಕೂಡ ನನ್ನ ಒಳ್ಳೆಯ ವಿಚಾರವನ್ನು ಸುದ್ದಿ ಮಾಡಲು ಅನುಮತಿ ಕೊಟ್ಟಿದ್ದೇನೆ. ಆದರೆ ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ಸಿಂಧು ಖಾರವಾಗಿ ಪೋಸ್ಟ್ ಹಾಕಿದ್ದಾರೆ.

    ಇದರ ಜೊತೆಗೆ ಈ ಸುಳ್ಳು ಸುದ್ದಿಯನ್ನು ನಂಬಿ, ನನ್ನ ಆರೋಗ್ಯವನ್ನು ವಿಚಾರಿಸಲು ಕರೆ ಮಾಡಿದ ಜನರಿಗೆ ಮತ್ತು ನನ್ನ ಆರೋಗ್ಯದ ಬಗ್ಗೆ ಕಾಳಜಿ ಇರುವ ಎಲ್ಲರಿಗೂ ಧನ್ಯವಾದ. ನಾನೂ ಚೆನ್ನಾಗಿ ಇದ್ದೇನೆ ಎಂದು ಸಿಂಧು ಫುಟ್ ಬಾಲ್ ಆಡುತ್ತಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ.

  • ಸುಶಾಂತ್ ಸಾವಿನಿಂದ ಪ್ರೇರಣೆ – ಆತ್ಮಹತ್ಯೆ ಮಾಡಿಕೊಂಡ 16ರ ಬಾಲಕ

    ಸುಶಾಂತ್ ಸಾವಿನಿಂದ ಪ್ರೇರಣೆ – ಆತ್ಮಹತ್ಯೆ ಮಾಡಿಕೊಂಡ 16ರ ಬಾಲಕ

    – ಡೆತ್‍ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡ ಪೋರ

    ಲಕ್ನೋ: ಕಳೆದ ಭಾನುವಾರ ಮೃತಪಟ್ಟ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಿಂದ ಪ್ರೇರಣೆ ಪಡೆದು 16 ವರ್ಷದ ಬಾಕಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯ ಸುಭಾಷ್ ನಗರದಲ್ಲಿ ನಡೆದಿದೆ.

    10ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ತನ್ನ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೊತೆ ಬಾಲಕ ನಾನು ಹುಡುಗಿಯರ ತರ ಕಾಣುತ್ತೇನೆ ಎಂದು ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ ಹಾಗೂ ಆತನನ್ನು ಸ್ನೇಹಿತರು ಮತ್ತು ಸಂಬಂಧಿಕರು ಈ ವಿಚಾರವಾಗಿಯೇ ಆತನನ್ನು ನಿಂದಿಸುತ್ತಿದ್ದರು ಎನ್ನಲಾಗಿದೆ.

    ಮೃತ ಬಾಲಕ ಶುಭಾಷ್ ನಗರದಲ್ಲಿ ತನ್ನ ತಮ್ಮ ಮತ್ತು ತಂದೆಯ ಜೊತೆ ವಾಸವಾಗಿದ್ದ. ಹುಟ್ಟಿದಾಗಲಿನಿಂದ ಆತನ ನಡುವಳಿಕೆ ಹೆಣ್ಣು ಮಕ್ಕಳ ರೀತಿ ಇತ್ತು ಹಾಗೂ ಅವನು ಮೆಕಪ್ ಮಾಡಿಕೊಳ್ಳುತ್ತಿದ್ದ, ಹುಡುಗಿಯರ ರೀತಿ ಡ್ಯಾನ್ಸ್ ಮಾಡುತ್ತಿದ್ದ. ಇದನ್ನೇ ಗುರಿಯಾಗಿಸಿಕೊಂಡು ಆತನ ಸ್ನೇಹಿತರು ಅವನನ್ನು ಅವಮಾನ ಮಾಡುತ್ತಿದ್ದರು. ಇದರಿಂದ ಮನನೊಂದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಡೆತ್‍ನೋಟ್‍ನಲ್ಲಿ ಏನಿದೆ?
    ಸಾಯುವ ಮುನ್ನಾ ಡೆತ್‍ನೋಟ್ ಬರೆದಿರುವ ಬಾಲಕ, ತನ್ನ ತಂದೆಗೆ ಕ್ಷೆಮೆ ಕೇಳಿದ್ದಾನೆ. ನನಗೆ ಹುಡುಗಿಯರ ತರ ಮುಖವಿದೆ. ಜನರು ಅದನ್ನು ನೋಡಿ ನಗುತ್ತಾರೆ. ನನಗೇ ನಾನು ಹುಡುಗಿ ಎಂದು ಭಾಸವಾಗುತ್ತಿದೆ. ನನ್ನ ಜೀವನ ಕತ್ತಲೆ ಅನಿಸುತ್ತಿದೆ. ಅದಕ್ಕೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನಾನು ಮುಂದಿನ ಜನ್ಮದಲ್ಲಿ ಹೆಣ್ಣಾಗಿ ಹುಟ್ಟಲಿ ಎಂದು ಆಶೀರ್ವಾದ ಮಾಡಿ. ನಮ್ಮ ಮನೆಯಲ್ಲಿ ಮುಂದೆ ಹೆಣ್ಣು ಮಗು ಜನಿಸಿದರೆ ಅದು ನಾನೇ ಎಂದು ತಿಳಿದುಕೊಳ್ಳಿ ಎಂದು ಬರೆದಿದ್ದಾನೆ.

    ಈ ವಿಚಾರದ ಬಗ್ಗೆ ಮೃತನ ಚಿಕ್ಕ ತಮ್ಮ ಮಾಹಿತಿ ನೀಡಿದ್ದು, ನಟ ಸುಶಾಂತ್ ಅವರು ಸಾವಿನ ಬಳಿಕ ಅಣ್ಣ ಅದರ ಬಗ್ಗೆಯೇ ಹೆಚ್ಚು ಮಾತನಾಡುತ್ತಿದ್ದ. ಅವನು ಈ ರೀತಿ ಮಾಡಿಕೊಳ್ಳುವ ಹಿಂದಿನ ದಿನ ನನ್ನ ಬಳಿ ಸುಶಾಂತ್ ರೀತಿಯ ಒಳ್ಳೆಯ ನಟರೇ ಆತ್ಮಹತ್ಯೆ ಮಾಡಿಕೊಳ್ಳುವಾಗ ನಾವು ಯಾಕೆ ಮಾಡಿಕೊಳ್ಳಬಾರದು ಎಂದು ಹೇಳುತ್ತಿದ್ದ ಎಂದು ಹೇಳಿದ್ದಾನೆ.

    ನನ್ನ ಮಗ ಹೆಚ್ಚು ಅವನ ತಮ್ಮನ ಜೊತೆಯೇ ಇರುತ್ತಿದ್ದ. ನನ್ನ ಮಗ ಎಲ್ಲ ಹುಡುಗರಂತೆ ಸಾಮಾನ್ಯವಾಗಿಯೇ ಇದ್ದ. ಆದರೆ ನಮ್ಮ ಸಂಬಂಧಿಕರು ಸೇರಿದಂತೆ ಕೆಲವರು ಅವನು ಹುಡುಗಿಯ ತರ ಆಡುತ್ತಾನೆ ಎಂದು ತುಂಬ ಕಮೆಂಟ್ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.

  • ರಾಜ್ಯದಲ್ಲಿ ಕೊರೊನಾಗೆ ಮೂವರು ಬಲಿ – ಮದ್ಯ ಸಿಗದಕ್ಕೆ 13 ಸಾವು

    ರಾಜ್ಯದಲ್ಲಿ ಕೊರೊನಾಗೆ ಮೂವರು ಬಲಿ – ಮದ್ಯ ಸಿಗದಕ್ಕೆ 13 ಸಾವು

    ಬೆಂಗಳೂರು: ಕುಡುಕರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ದಾರಿ ಹಿಡಿಯುತ್ತಿರೋದು, ಕೊರೊನಾ ವೈರಸ್ ಲಾಕ್‍ಡೌನ್ ವೇಳೆ ಉದ್ಭವಿಸಿರುವ ಮತ್ತೊಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.

    ಕೊರೊನಾ ವೈರಸ್ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ದೇಶ ಲಾಕ್‍ಡೌನ್ ಆಗಿದೆ. ಹೀಗಾಗಿ ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮದ್ಯದಂಗಡಿಗಳು ಬಂದ್ ಆಗಿವೆ. ಇದರಿಂದ ಕುಡಿಯಲು ಮದ್ಯ ಸಿಗದೇ ಖಿನ್ನತೆಗೆ ಒಳಗಾಗಿ ಕಳೆದ ಆರು ದಿನಗಳಲ್ಲಿ ರಾಜ್ಯದ ಹಲವೆಡೆ ಒಟ್ಟು 13 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಇಂದು ಮೂವರು ಮದ್ಯ ಸಿಗದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಶಿವಮೊಗ್ಗ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಮದ್ಯವ್ಯಸನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮಲ್ಲೆಕುಪ್ಪ ಗ್ರಾಮದ ಎಂ.ಶಂಕರ (36) ಮದ್ಯೆ ಸಿಗದೆ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದರೆ, ಬಂಗಾರಪೇಟೆ ತಾಲೂಕಿನ ದೊಡ್ಡೂರು ಕರಪನಹಳ್ಳಿಯ 30 ವರ್ಷದ ಆನಂದ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾನೆ.

    ಉಡುಪಿ ಜಿಲ್ಲೆ ಒಂದರಲ್ಲೇ ಆರು ಮಂದಿ ಕುಡುಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನಲ್ಲಿ ಇಬ್ಬರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಕೋಲಾರ, ಹುಬ್ಬಳ್ಳಿ ಮತ್ತು ಬೀದರ್ ನಲ್ಲಿ ತಲಾ ಒಬ್ಬೊಬ್ಬರು ಆತ್ಮಹತ್ಯೆ ಮಾಡ್ಕೊಂಡಿದ್ದಾರೆ. ಮುಳಬಾಗಿಲಿನ ಮುದಿಗೆರೆ ಮತ್ತು ತುಮಕೂರಿನಲ್ಲಿ ತಲಾ ಒಬ್ಬರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾರೆ. ಈ ಮಧ್ಯೆ ಕುಡುಕರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಸಿಎಂ ಪಿಣರಯ್ ವಿಜಯನ್, ವೈದ್ಯರ ಚೀಟಿ ತಂದರೆ ಮದ್ಯ ವಿತರಣೆ ಮಾಡಿ ಎಂದು ಆದೇಶ ಹೊರಡಿಸಿದ್ದಾರೆ.

  • ಕೊರೊನಾ ತಗುಲಿರುವ ಶಂಕೆ – ವ್ಯಕ್ತಿ ನೇಣಿಗೆ ಶರಣು

    ಕೊರೊನಾ ತಗುಲಿರುವ ಶಂಕೆ – ವ್ಯಕ್ತಿ ನೇಣಿಗೆ ಶರಣು

    ಮಂಗಳೂರು: ಇಡೀ ವಿಶ್ವವನ್ನೇ ಕಾಡುತ್ತಿರುವ ಮಹಾಮಾರಿ ಕೊರೊನಾ ವೈರಸ್ ಸೋಂಕು ತನಗೆ ತಗಲಿದೆ ಎಂದು ಶಂಕಿಸಿ ವ್ಯಕ್ತಿಯೋಬ್ಬರು ನೇಣಿಗೆ ಶರಣಾಗಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಬ್ಬೆಟ್ಟುವಿನಲ್ಲಿ ಈ ಘಟನೆ ನಡೆದಿದೆ. ಅಬ್ಬೆಟ್ಟು ನಿವಾಸಿ ಸದಾಶಿವ ಶೆಟ್ಟಿ(56) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಪೆಟ್ರೋಲ್ ಬಂಕ್‍ನಲ್ಲಿ ಕೆಲಸ ಮಾಡುತ್ತಿದ್ದ ಸದಾಶಿವ ಅವರು ತನಗೆ ಕೊರೊನಾ ತಗಲಿದೆ ಎಂದು ಶಂಕಿಸಿ ಭಯಗೊಂಡಿದ್ದರು. ತನ್ನಿಂದ ಮನೆಯವರಿಗೂ ಈ ಸೋಂಕು ಹರಡಬಹುದೆಂಬ ಖಿನ್ನತೆಗೆ ಒಳಗಾಗಿದ್ದರು.

    ಈ ಖಿನ್ನತೆಯಿಂದಲೇ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಸದಾಶಿವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮನೆಯವರ ಬಳಿ ಸದಾಶಿವ ಅವರು ಹೇಳಿಕೊಂಡಿದ್ದರು ಎಂದು ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ವಿಶ್ವ ಆರ್ಥಿಕ ವೇದಿಕೆಯಲ್ಲಿ ಪ್ರಶಸ್ತಿ ಪಡೆದು ಡಿಪ್ರೆಷನ್ ಬಗ್ಗೆ ಬಿಚ್ಚಿಟ್ಟ ದೀಪಿಕಾ

    ವಿಶ್ವ ಆರ್ಥಿಕ ವೇದಿಕೆಯಲ್ಲಿ ಪ್ರಶಸ್ತಿ ಪಡೆದು ಡಿಪ್ರೆಷನ್ ಬಗ್ಗೆ ಬಿಚ್ಚಿಟ್ಟ ದೀಪಿಕಾ

    ನವದೆಹಲಿ: ಬಾಲಿವುಡ್‍ನ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಅವರಿಗೆ ಇತ್ತೀಚಿಗೆ ಸ್ವಿಟ್ಜರ್ಲ್ಯಾಂಡ್ ನ ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ಕ್ರಿಸ್ಟಲ್ ಅವಾರ್ಡ್ ನೀಡಿ ಗೌರವಿಸಲಾಗಿದೆ. ಈ ವೇದಿಕೆ ಮೇಲೆ ಪ್ರಶಸ್ತಿ ಪಡೆದ ಬಳಿಕ ದೀಪಿಕಾ ಡಿಪ್ರೆಷನ್ ಬಗ್ಗೆ ಬಿಚ್ಚಿಟ್ಟಿದ್ದಾರೆ.

    ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿದಕ್ಕಾಗಿ ದೀಪಿಕಾ ಅವರಿಗೆ ಕ್ರಿಸ್ಟಲ್ ಅವಾರ್ಡ್ 2020 ನೀಡಿ ಗೌರವಿಸಲಾಗಿದೆ. ಸ್ಟಾರ್ ನಟಿ ಮಾತ್ರವಲ್ಲದೆ ಸಮಾಜಮುಖಿ ಕಾರ್ಯಗಳನ್ನು ದೀಪಿಕಾ ಮಾಡುತ್ತಾ ಬಂದಿದ್ದಾರೆ. ಖಿನ್ನತೆಗೆ ಒಳಗಾದರಿಗೆ ಸಹಾಯ ಮಾಡುವ ಉದ್ದೇಶದಿಂದ 2015ರಲ್ಲಿ ‘ಲೀವ್ ಲವ್ ಲಾಫ್’ ಸಂಸ್ಥೆಯನ್ನು ದೀಪಿಕಾ ಸ್ಥಾಪಿಸಿದ್ದಾರೆ. ಈ ಮೂಲಕ ಖಿನ್ನತೆಗೆ ಒಳಗಾದವರು ಆ ಸಮಸ್ಯೆಯಿಂದ ಹೊರಬರಲು ಸಹಾಯ ಮಾಡುತ್ತಿದ್ದಾರೆ.

    ಪ್ರಶಸ್ತಿ ಸ್ವೀಕಾರ ಮಾಡಿ ಮಾತನಾಡಿದ ದೀಪಿಕಾ, ತಾವು ಖಿನ್ನತೆಗೆ ಒಳಗಾದ ಅನುಭವವನ್ನು ಹಂಚಿಕೊಂಡಿದ್ದಾರೆ. 2014ರಲ್ಲಿ ಪ್ರಾರಂಭವಾದ ಖಿನ್ನತೆ ಮತ್ತು ಆತಂಕದಿಂದ ಸಾಕಷ್ಟು ಬಾರಿ ಸಿನಿಮಾ ರಂಗವನ್ನು ತೊರೆಯುವ ನಿರ್ಧಾರ ಮಾಡಿದ್ದೆ. ಆದರೆ ನನ್ನ ತಾಯಿ ನನ್ನನ್ನು ಖಿನ್ನತೆಯಿಂದ ಹೊರಗೆ ಕರೆದುಕೊಂಡು ಬಂದರು. ಖಿನ್ನತೆ ಮತ್ತು ಆತಂಕಕ್ಕೆ ಚಿಕಿತ್ಸೆ ನೀಡಲಾಗುತ್ತೆ. ನನ್ನ ಅನುಭವದ ಪ್ರಕಾರ ಸ್ವೀಕಾರವು ಚೇತರಿಕೆಯ ಮೊದಲ ಹೆಜ್ಜೆಯಾಗಿದೆ ಎಂದು ದೀಪಿಕಾ ವೇದಿಕೆ ಮೇಲೆ ಮಾತನಾಡಿದರು.

    ತನ್ನ ಖಿನ್ನತೆಯ ಅನುಭವನ್ನು ಬಿಚ್ಚಿಡುತ್ತ ‘ಲೀವ್ ಲವ್ ಲಾಫ್’ ಫೌಂಡೇಶನ್ ಸ್ಥಾಪಿಸಿರುವ ಬಗ್ಗೆಯು ದೀಪಿಕಾ ಹೇಳಿದರು. ಖಿನ್ನತೆಯಿಂದ ಹೊರಬಂದ ನಂತರ 2015ರಲ್ಲಿ ಲೀವ್ ಲವ್ ಲಾಫ್’ ಫೌಂಡೇಶನ್ ಸ್ಥಾಪಿಸಿದೆ. ಬದಲಾವಣೆಯನ್ನು ಮಾಡುವುದು ಮತ್ತು ಕನಿಷ್ಠ ಒಂದು ಜೀವವನ್ನಾದರು ಉಳಿಸುವ ಉದ್ದೇಶದಿಂದ ಈ ಸಂಸ್ಥೆ ಸ್ಥಾಪಿಸಿದೆ. “ನೀವು ಖಂಡಿತ ಒಬ್ಬಂಟಿಯಲ್ಲ. ಮುಖ್ಯವಾಗಿ ಭರವಸೆ ಇರಬೇಕು ಎಂದು ದೀಪಿಕಾ ಹೇಳಿದರು.

    ಡಿಪ್ರೆಷನ್ ಬಗ್ಗೆ ದೀಪಿಕಾ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದ್ದು, ನೆಟ್ಟಿಗರು, ಅಭಿಮಾನಿಗಳು ದೀಪಿಕಾ ಮಾತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರ ಕಾರ್ಯಕ್ಕೆ ಭೇಷ್ ಎಂದಿದ್ದಾರೆ.

    https://www.instagram.com/p/B7jO4UfB-2J/?utm_source=ig_embed

  • ಒಂದೇ ಸೀರೆಗೆ ನೇಣು ಬಿಗಿದು ದಂಪತಿ ಆತ್ಮಹತ್ಯೆ

    ಒಂದೇ ಸೀರೆಗೆ ನೇಣು ಬಿಗಿದು ದಂಪತಿ ಆತ್ಮಹತ್ಯೆ

    ಶಿವಮೊಗ್ಗ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಆಗರದಳ್ಳಿ ಕ್ಯಾಂಪಿನಲ್ಲಿ ನಡೆದಿದೆ.

    ಸಂತೋಷ್ (32) ಹಾಗೂ ಪಾರ್ವತಿ (27) ಮೃತ ದಂಪತಿ. ಭಾನುವಾರ ಭೂಮಿ ಹುಣ್ಣಿಮೆ ಹಬ್ಬ ಇದ್ದಿದ್ದರಿಂದ ಮನೆಯವರಿಗೆಲ್ಲ ತಾವೇ ಅಡುಗೆ ಸಿದ್ಧಪಡಿಸಿದ್ದರು. ಭೂಮಿ ಪೂಜೆಗೆ ಮನೆಯವರನ್ನೆಲ್ಲ ಗದ್ದೆಗೆ ಕಳುಹಿಸಿ, ನೀವೆಲ್ಲ ಹೋಗಿ ಪೂಜೆ ಮಾಡುತ್ತೀರಿ. ನಾವು ನಂತರ ಬರುತ್ತೇವೆ ಎಂದು ಹೇಳಿ ಕಳುಹಿಸಿದ್ದರು.

    ಕುಟುಂಬಸ್ಥರು ಗದ್ದೆಗೆ ತೆರಳುತ್ತಿದ್ದಂತೆ ಮನೆಯಲ್ಲಿಯೇ ಸಂತೋಷ್ ಹಾಗೂ ಪಾರ್ವತಿ ಒಂದೇ ಸೀರೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರ ಶವವನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ನೀಡಲಾಯಿತು.

    ಈ ಘಟನೆ ಸಂಬಂಧ ಹೊಳೆ ಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಆತ್ಮಹತ್ಯೆಗೆ ಮಾನಸಿಕ ಖಿನ್ನತೆಯೇ ಕಾರಣನಾ ಅಥವಾ ಬೇರೆ ಕಾರಣ ಇರಬಹುದೋ ಎಂಬುದು ಪೊಲೀಸರ ತನಿಖೆ ನಡೆಸುತ್ತಿದ್ದಾರೆ.

  • ‘ನನ್ನ ಮನಸ್ಸೇ, ನನ್ನ ಶತ್ರು’ ಅಂತಾ ಬರೆದಿಟ್ಟು 5ನೇ ಮಹಡಿಯಿಂದ ಜಿಗಿದ ನಿರೂಪಕಿ

    ‘ನನ್ನ ಮನಸ್ಸೇ, ನನ್ನ ಶತ್ರು’ ಅಂತಾ ಬರೆದಿಟ್ಟು 5ನೇ ಮಹಡಿಯಿಂದ ಜಿಗಿದ ನಿರೂಪಕಿ

    ಹೈದರಾಬಾದ್: ನ್ಯೂಸ್ ನಿರೂಪಕಿ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಹೈದರಾಬಾದ್ ನ ಮೂಸಪೇಟ್‍ನಲ್ಲಿ ನಡೆದಿದೆ.

    ರಾಧಿಕಾ ರೆಡ್ಡಿ(36) ಆತ್ಮಹತ್ಯೆ ಮಾಡಿಕೊಂಡ ನಿರೂಪಕಿ. ರಾಧಿಕಾ ಖಿನ್ನತೆಯಿಂದ ಬಳಲುತ್ತಿದ್ದು, ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗಿದ ನಂತರ ನೇರವಾಗಿ ಟೆರೇಸ್‍ಗೆ ಹೋಗಿ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಕ್ಕಟ್ ಪಲ್ಲಿಯ ಸಬ್ ಇನ್ಸ್ ಪೆಕ್ಟರ್ ಮಜಿದ್ ತಿಳಿಸಿದ್ದಾರೆ.

    ರಾಧಿಕಾ 5ನೇ ಮಹಡಿಯಿಂದ ಜಿಗಿದ್ದಾಗ ಆಕೆಯ ತಲೆಗೆ ಗಂಭೀರ ಗಾಯಗಳಾಗಿದ್ದವು. ತೀವ್ರ ರಕ್ತಸ್ರಾವದಿಂದಾಗಿ ರಾಧಿಕಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಧಿಕಾ ಬ್ಯಾಗ್ ನಲ್ಲಿ ಡೆತ್ ನೋಟ್ ಸಿಕ್ಕಿದ್ದು, ನನ್ನ ಮನಸ್ಸೇ, ನನ್ನ ಶತ್ರು ಅಂತಾ ಬರೆದಿದ್ದಾರೆ ಎಂದು ಎಸ್‍ಐ ಮಜಿದ್ ಹೇಳಿದ್ದಾರೆ.

    6 ತಿಂಗಳ ಹಿಂದೆ ರಾಧಿಕಾ ಪತಿಯಿಂದ ವಿಚ್ಚೇದನ ಪಡೆದಿದ್ದರು. ವಿಚ್ಛೇದನದ ಬಳಿಕ ರಾಧಿಕಾ ತನ್ನ 14 ವರ್ಷದ ಬುದ್ಧಿಮಾಂದ್ಯ ಮಗನನ್ನು ತವರು ಮನೆಯಲ್ಲಿ ಬಿಟ್ಟು ಬಂದಿದ್ದರು. ಕೆಲಸದ ನಿಮಿತ್ತ ರಾಧಿಕಾ ಏಕಾಂಗಿಯಾಗಿ ಹೈದರಾಬಾದ್ ನಲ್ಲಿ ಉಳಿದುಕೊಂಡಿದ್ದರು. ವಿಚ್ಛೇದನದ ಬಳಿಕ ರಾಧಿಕಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಅಂತಾ ಪೊಲೀಸರು ತಿಳಿಸಿದ್ದಾರೆ.

    ಸದ್ಯ ಪೊಲೀಸರು ಈ ಕೇಸನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

  • ಒಂದೇ ಸೀರೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ವೈದ್ಯ ದಂಪತಿ ಆತ್ಮಹತ್ಯೆ!

    ಒಂದೇ ಸೀರೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ವೈದ್ಯ ದಂಪತಿ ಆತ್ಮಹತ್ಯೆ!

    ಮೈಸೂರು: ವೈದ್ಯ ದಂಪತಿ ಒಂದೇ ಸೀರೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಸರಸ್ವತಿಪುಂ 14ನೇ ಮೇನ್ ನಲ್ಲಿ ನಡೆದಿದೆ.

    ಡಾ. ಸತೀಶ್ ಹಾಗೂ ಡಾ. ವೀಣಾ ಆತ್ಮಹತ್ಯೆಗೆ ಶರಣಾದ ದಂಪತಿ. ಕುಕ್ಕರಹಳ್ಳಿ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇವರ ಮಗ ಮೃತಪಟ್ಟಿದ್ದ. ಏಕೈಕ ಮಗನ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ಇವರು ಇಂದು ಮಧ್ಯಾಹ್ನ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ.


    ಸತೀಶ್ ಹಾಗೂ ವೀಣಾ ಮಗನನ್ನು ಕಳೆದು ಕೊಂಡು ನೋವಿನಲ್ಲಿದ್ದರು. ಈ ನೋವಿನಿಂದ ಹೊರಬರಲು ಸಮಾಜಸೇವೆ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ನಂತರ ಇಂದು ಮಧ್ಯಾಹ್ನ ಸರಸ್ವತಿ ಪುರಂನ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

    ಸದ್ಯ ಘಟನಾ ಸ್ಥಳಕ್ಕೆ ಸರಸ್ವತಿಪುರಂ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

  • ಹೆಚ್ಚಿನ ಅಂಕ ನೀಡಲು ವಿದ್ಯಾರ್ಥಿನಿ ಬಳಿ ಕಿಸ್ ಕೇಳಿದ ಶಿಕ್ಷಕ

    ಹೆಚ್ಚಿನ ಅಂಕ ನೀಡಲು ವಿದ್ಯಾರ್ಥಿನಿ ಬಳಿ ಕಿಸ್ ಕೇಳಿದ ಶಿಕ್ಷಕ

    ಮುಂಬೈ: ಹೆಚ್ಚಿನ ಅಂಕ ನೀಡಲು ವಿದ್ಯಾರ್ಥಿನಿ ಬಳಿ ಶಿಕ್ಷಕನೊರ್ವ ಕಿಸ್ ಕೇಳಿದ ಘಟನೆ ಮುಂಬೈನಲ್ಲಿ ನಡೆದಿದೆ.

    35 ವರ್ಷದ ಶಿಕ್ಷಕನೊರ್ವ 17 ವರ್ಷದ ಕಾಮರ್ಸ್ ವಿದ್ಯಾರ್ಥಿನಿ ಬಳಿ ಕಿಸ್ ಕೇಳಿದ್ದು, ಇದ್ದರಿಂದ ಮನನೊಂದ ಯುವತಿ ಖಿನ್ನತೆಗೆ ಜಾರಿದ್ದಾಳೆ. ಅಷ್ಟೇ ಅಲ್ಲದೇ ಈ ಘಟನೆ ನಡೆದ ಎರಡು ವಾರಗಳ ನಂತರ ತನ್ನ ಕುಟುಂಬದವರ ಬಳಿ ಹೇಳಿಕೊಂಡಿದ್ದಾಳೆ.

    ನಗರದ ಪ್ರಸಿದ್ಧ ಕಾಲೇಜಿನಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಈ ಕಾಮುಕ ಮಾರ್ಚ್ 8ರಂದು ಯುವತಿಯ ಬಳಿ ನೀನು ನನಗೆ ಕಿಸ್ ಕೊಟ್ಟರೆ ಕಾಲೇಜಿನಲ್ಲಿ ನಡೆದ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ನೀಡುತ್ತೇನೆ ಎಂದು ಕೆಟ್ಟ ಆಫರ್ ನೀಡಿದ್ದಾನೆ.

    ಈ ಘಟನೆ ನಂತರ ಯುವತಿ ಮನನೊಂದು ಖಿನ್ನತೆಗೆ ಜಾರಿದ್ದಾಳೆ. ಬಳಿಕ ಆಕೆಯ ಕುಟುಂಬದವರು ಆಕೆಯ ವಿಚಿತ್ರ ವರ್ತನೆ ನೋಡಿ ಪ್ರಶ್ನಿಸಿದ್ದಾರೆ. ಆಗ ಯುವತಿ ನಡೆದ ಎಲ್ಲ ಘಟನೆ ಬಗ್ಗೆ ತನ್ನ ಕುಟುಂಬದವರ ಹತ್ತಿರ ಹೇಳಿದ್ದಾಳೆ ಎಂದು ಪಾಂಟ್‍ನಗರದ ಪೊಲೀಸ್ ಅಧಿಕಾರಿಯಾದ ರೋಹಿಣಿ ಕಾಳೆ ತಿಳಿಸಿದ್ದಾರೆ.

    ಪೊಲೀಸರು ಈ ಘಟನೆ ಬಗ್ಗೆ ಆದಷ್ಟು ಬೇಗ ತನಿಖೆ ನಡೆಸಲಿ ಎಂದು ಯುವತಿಯ ಪೋಷಕರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಸದ್ಯ ಶಿಕ್ಷಕನ ವಿರುದ್ಧ ಐಪಿಸಿ ಸೆಕ್ಷನ್ ಹಾಗೂ ಪೋಸ್ಕೋ ಕಾಯ್ದೆ ಅಡಿ ಲೈಂಗಿಕ ಕಿರುಕುಳ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಶಿಕ್ಷಕನನ್ನು ಬಂಧಿಸಿದ್ದಾರೆ.