Tag: Deputy Chief Minister

  • ಪದವಿ ಗುಂಗಲ್ಲೇ ಪರಮೇಶ್ವರ್ – ಮೈತ್ರಿ ಸರ್ಕಾರ ಬಿದ್ದು 5 ದಿನವಾದ್ರೂ ತೆಗೆದಿಲ್ಲ ಬೋರ್ಡ್

    ಪದವಿ ಗುಂಗಲ್ಲೇ ಪರಮೇಶ್ವರ್ – ಮೈತ್ರಿ ಸರ್ಕಾರ ಬಿದ್ದು 5 ದಿನವಾದ್ರೂ ತೆಗೆದಿಲ್ಲ ಬೋರ್ಡ್

    ಬೆಂಗಳೂರು: ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಇನ್ನೂ ಉಪಮುಖ್ಯಮಂತ್ರಿ ಪದವಿ ಗುಂಗಲ್ಲೇ ಇದ್ದು, ಮೈತ್ರಿ ಬಿದ್ದು ಅಧಿಕಾರ ಕಳೆದುಕೊಂಡರೂ ತಮ್ಮ ಹುದ್ದೆಯ ಜಪವನ್ನೇ ಮಾಡುತ್ತಿದ್ದಾರೆ.

    ಶುಕ್ರವಾರ ಬಿ.ಎಸ್ ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕಾರ ಮಾಡುವ ಮೂಲಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದೆ. ಆದರೆ ಪರಮೇಶ್ವರ್ ಮಾತ್ರ ಇನ್ನೂ ಉಪಮುಖ್ಯಮಂತ್ರಿ ಬೋರ್ಡ್ ತೆಗೆಸಿಲ್ಲ. ಪರಮೇಶ್ವರ್ ಅಧಿಕಾರ ಕಳೆದುಕೊಂಡರೂ ಉಪಮುಖ್ಯಮಂತ್ರಿ ಎಂದು ತಮ್ಮ ಮನೆಯ ಮುಂದೆ ಬೋರ್ಡ್ ಇದೆ.

    ಪರಮೇಶ್ವರ್ ತಮ್ಮ ಸದಾಶಿವನಗರದ ಸರ್ಕಾರಿ ನಿವಾಸದ ಮುಂದೆ ಉಪಮುಖ್ಯಮಂತ್ರಿ ಎಂದು ಬರೆದಿರುವ ಬೋರ್ಡ್ ಹಾಕಿಕೊಂಡಿದ್ದಾರೆ. ಮೈತ್ರಿ ಸರ್ಕಾರ ಬಿದ್ದು 5 ದಿನ ಕಳೆದಿದೆ. ಆದರೂ ಬೋರ್ಡ್ ತೆಗೆದಿಲ್ಲ. ಡಾ.ಜಿ ಪರಮೇಶ್ವರ್, ಉಪಮುಖ್ಯಮಂತ್ರಿ, ಕರ್ನಾಟಕ ಸರ್ಕಾರ ಬೆಂಗಳೂರು ಎಂಬ ಬೋರ್ಡ್ ರಾರಾಜಿಸುತ್ತಿದೆ. ಸದ್ಯಕ್ಕೆ ಪರಮೇಶ್ವರ್ ಅವರು ಎಲ್ಲಿಗೂ ತೆರಳದೇ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಅಧಿಕಾರಿ ವಹಿಸಿಕೊಂಡಿದ್ದರು. ಈ ವೇಳೆ ಉಪಮುಖ್ಯಮಂತ್ರಿಯಾಗಿ ಡಾ.ಜಿ ಪರಮೇಶ್ವರ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಸಮ್ಮಿಶ್ರ ಸರ್ಕಾರ ವಿಶ್ವಾಸ ಮತಯಾಚನೆಯಲ್ಲಿ ಬಹುಮತ ಕಳೆದುಕೊಂಡು ಅಧಿಕಾರದಿಂದ ಕೆಳಗಿಳಿದಿದೆ. ಹೀಗಾಗಿ ಡಿಸಿಎಂ ಹುದ್ದೆಯನ್ನು ಪರಮೇಶ್ವರ್ ಅವರು ಕಳೆದುಕೊಂಡಿದ್ದಾರೆ.

  • ಶ್ರೀರಾಮುಲು ಡಿಸಿಎಂ, ದಡೆಸೂಗುರು ಸಚಿವರನ್ನಾಗಿ ಮಾಡಿ – ಕೊಪ್ಪಳದ ಜನತೆ ಒತ್ತಾಯ

    ಶ್ರೀರಾಮುಲು ಡಿಸಿಎಂ, ದಡೆಸೂಗುರು ಸಚಿವರನ್ನಾಗಿ ಮಾಡಿ – ಕೊಪ್ಪಳದ ಜನತೆ ಒತ್ತಾಯ

    ಕೊಪ್ಪಳ: ಹಿಂದುಳಿದ ನಾಯಕ ಬಿ.ಶ್ರೀರಾಮುಲು ಅವರನ್ನು ಉಪ ಮುಖ್ಯಮಂತ್ರಿಯನ್ನು ಮಾಡಲು ಮತ್ತು ಬಿ.ಎಸ್ ಯಡಿಯೂರಪ್ಪ ಅವರ ಮಾನಸ ಪುತ್ರ ಕನಕಗಿರಿ ಕ್ಷೇತ್ರದ ಶಾಸಕ ಬಸವರಾಜ ದಡೆಸೂಗುರು ಅವರನ್ನು ಸಚಿವರನ್ನಾಗಿ ಮಾಡಲು ಕೊಪ್ಪಳ ಜನತೆ ಒತ್ತಾಯಿಸಿದ್ದಾರೆ.

    ಶಾಸಕ ಬಸವರಾಜ ದಡೆಸೂಗುರು ಅವರಿಗೆ ಸಚಿವರ ಸ್ಥಾನ ನೀಡಲು ಒತ್ತಾಯಿಸಿ ಇಂದು ಕನಕಗಿರಿಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಬಸವರಾಜ ದಡೆಸೂಗುರು ಅಭಿಮಾನಿಗಳು ಘೋಷಣೆ ಕೂಗೂವ ಮೂಲಕ ಒತ್ತಾಯ ಮಾಡಿದರು.

     

    ವಿಧಾನಸಭೆ ಚುನಾವಣೆ ವೇಳೆ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ್ದ ಯಡಿಯೂರಪ್ಪ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಕನಕಗಿರಿ ಕ್ಷೇತ್ರವನ್ನು ದತ್ತು ಪಡೆದು ಅಭಿವೃದ್ಧಿ ಮಾಡುವುದಾಗಿ ಹೇಳಿದ್ದರು. ಅಷ್ಟೇ ಅಲ್ಲದೆ ಬಸವರಾಜ ದಡೆಸೂಗುರು ಅವರನ್ನು ನೀವು ಆಯ್ಕೆ ಮಾಡಿ ಶಾಸಕರನ್ನಾಗಿ ಕಳುಹಿಸಿ ನಾನು ಅವರಿಗೆ ಉನ್ನತ ಸ್ಥಾನವನ್ನು ನೀಡುತ್ತೇನೆ ಎಂದು ಸಚಿವ ಸ್ಥಾನ ನೀಡುವ ಬಗ್ಗೆ ಕ್ಷೇತ್ರದ ಜನರಿಗೆ ಸುಳಿವು ನೀಡಿದ್ದರು.

    ಇಂದು ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರ ಅಧಿಕಾರಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಇದರ ಬೆನ್ನಲ್ಲೇ ಕ್ಷೇತ್ರದ ಜನತೆಯಲ್ಲಿ ಅಂದು ಯಡಿಯೂರಪ್ಪ ನೀಡಿದ್ದ ಭರವಸೆ ಚಿಗುರೊಡೆದಿದೆ. ಯಡಿಯೂರಪ್ಪ ಅವರು ಅಂದು ಕೊಟ್ಟ ಮಾತಿನಂತೆ ನಮ್ಮ ಶಾಸಕರಿಗೆ ಇಂದು ಸಚಿವ ಸ್ಥಾನ ನೀಡಲಿ ಎಂದು ಕ್ಷೇತ್ರದ ಜನತೆ ಒತ್ತಾಯ ಮಾಡುತ್ತಿದ್ದಾರೆ. ಇದರ ಜೊತೆಗೆ ಈ ಭಾಗದ ಹಿಂದುಳಿದ ನಾಯಕರಾದ ಬಿ.ಶ್ರೀರಾಮುಲು ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಲು ಸಹ ಒತ್ತಾಯ ಮಾಡಿದ್ದಾರೆ.

  • ಹೆಚ್‍ಎಎಲ್ ನಲ್ಲಿ ಬಿಎಸ್‍ವೈ, ಪರಂ ಬೆಂಬಲಿಗರ ಜಟಾಪಟಿ

    ಹೆಚ್‍ಎಎಲ್ ನಲ್ಲಿ ಬಿಎಸ್‍ವೈ, ಪರಂ ಬೆಂಬಲಿಗರ ಜಟಾಪಟಿ

    ಬೆಂಗಳೂರು: ಹೆಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಡಿಸಿಎಂ ಜಿ.ಪರಮೇಶ್ವರ್ ಬೆಂಬಲಿಗರು ನಡುವೆ ಗಲಾಟೆ ನಡೆದಿದೆ.

    ಪಕ್ಷೇತರ ಶಾಸಕ ಹೆಚ್.ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆದುಕೊಂಡರು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಮುಂಬೈನತ್ತ ಹೊರಡಲು ಹೆಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಸ್ಥಳದಲ್ಲಿದ್ದ ಪರಮೇಶ್ವರ್ ಬೆಂಬಲಿಗರು ನಾಗೇಶ್ ಅವರನ್ನು ಕರೆದುಕೊಂಡು ಹೋಗಲು ಪ್ರಯತ್ನಿಸಿದ್ದಾರೆ.

    ಇತ್ತ ನಾಗೇಶ್ ಅವರಿಗಾಗಿ ವಿಶೇಷ ವಿಮಾನ ಸಿದ್ಧಪಡಿಸಿಕೊಂಡಿದ್ದ ಯಡಿತಯೂರಪ್ಪನವರ ಆಪ್ತ ಸಂತೋಷ್ ನಿಂತಿದ್ದರು. ಪರಮೇಶ್ವರ್ ಬೆಂಬಲಿಗರು ನಾಗೇಶ್ ಅವರನ್ನು ಕರೆದುಕೊಂಡು ಹೋಗಲು ಮುಂದಾಗುತ್ತಿದ್ದ ವೇಳೆ ಯಡಿಯೂರಪ್ಪ ಬೆಂಬಲಿಗರು ಅಡ್ಡಿಪಡಿಸಿದ್ದಾರೆ. ಈ ವೇಳೆ ಇಬ್ಬರು ನಾಯಕರ ಆಪ್ತರ ನಡುವೆ ಗಲಾಟೆ ನಡೆದಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಹೆಚ್‍ಎಎಲ್ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಪೊಲೀಸರು ಆಗಮಿಸುತ್ತಿದ್ದಂತೆ ಹೆಚ್.ನಾಗೇಶ್ ವಿಶೇಷ ವಿಮಾನದಲ್ಲಿ ಮುಂಬೈನತ್ತ ಹಾರಿದರು.

    ಪೊಲೀಸರ ಮೂಲಕ ಎಚ್‍ಎಎಲ್‍ನಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಯಾವ ಶಾಸಕರನ್ನೂ ವಿಶೇಷ ವಿಮಾನ ಹತ್ತಲು ಬಿಡದಂತೆ ಸೂಚಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ಬಿ.ಎಸ್.ಯಡಿಯೂರಪ್ಪ, ಶಾಸಕರನ್ನು ತಡೆಯಲು ನೀವ್ಯಾರು ಎಂದು ದಭಾಯಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ದೂರವಾಣಿ ಮೂಲಕ ಎಚ್‍ಎಎಲ್‍ನ ಹಿರಿಯ ಪೊಲೀಸ್ ಅಧಿಕಾರಿಗೆ ತರಾಟೆ ತೆಗೆದುಕೊಂಡಿದ್ದಾರೆ.

    ಮುಳುಬಾಗಿಲಿನಿಂದ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದ ನಾಗೇಶ್ ಅವರಿಗೆ ಬಳಿಕ ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಇದೀಗ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಅತೃಪ್ತರ ಗುಂಪು ಸೇರಲು ಮುಂದಾಗಿದ್ದಾರೆ.

  • ರಾಜ್ಯಪಾಲರು ಸೇರಿ ಎಲ್ಲ ನಾಯಕರೂ ಆಪರೇಷನ್ ಕಮಲದಲ್ಲಿ ಭಾಗಿ: ಪರಮೇಶ್ವರ್

    ರಾಜ್ಯಪಾಲರು ಸೇರಿ ಎಲ್ಲ ನಾಯಕರೂ ಆಪರೇಷನ್ ಕಮಲದಲ್ಲಿ ಭಾಗಿ: ಪರಮೇಶ್ವರ್

    ಬೆಂಗಳೂರು: ರಾಜ್ಯಪಾಲರೂ ಸೇರಿದಂತೆ ಎಲ್ಲ ನಾಯಕರೂ ಆಪರೇಷನ್ ಕಮಲ ನಡೆಸುವ ಕಾರ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಭಯ ಇದೆ ರಕ್ಷಣೆ ಕೊಡಿ ಎಂದು ಬರವಣಿಗೆಯಲ್ಲಿ ಕೊಟ್ಟಿದ್ದರೆ ಡಿಜಿ ಅವರಿಗೆ ಸೂಚನೆ ನೀಡಬಹುದಿತ್ತು. ಅದನ್ನು ಬಿಟ್ಟು ಪೊಲೀಸ್ ಆಯುಕ್ತರನ್ನು ಕರೆಸಿಕೊಂಡು ಅವರ ಜೊತೆಯಲ್ಲೇ ಕೂರಿಸಿಕೊಂಡು ಶಾಸಕರೊಂದಿಗೆ ಮಾತನಾಡುತ್ತೀರಿ ಎನ್ನುವುದಾದರೆ, ಕುದುರೆ ವ್ಯಾಪಾರಕ್ಕೆ ನೀವೇ ಕಾರಣೀಭೂತರು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

    ರಾಜ್ಯಪಾಲರೂ ಸೇರಿದಂತೆ ಎಲ್ಲ ಬಿಜೆಪಿ ಮುಖಂಡರು ಆಪರೇಷನ್ ಕಮಲದಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರ ವಿಶೇಷ ವಿಮಾನದ ಮೂಲಕ ಶಾಸಕರನ್ನು ಮುಂಬೈನ ರೆಸಾರ್ಟ್ ಗೆ ಕಳುಹಿಸಲಾಗಿದೆ. ಇದರ ಅರ್ಥ ಏನು, ಇಷ್ಟೆಲ್ಲ ಆದರೂ ಸಹ ನಮಗೆ ಸಂಬಂಧವಿಲ್ಲ ಅವರು ಏನಾದರೂ ಮಾಡಿಕೊಳ್ಳಲಿ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ. ಇದು ಹೇಗೆ ಸಾಧ್ಯ, ಅವರೇ ಆಪರೇಷನ್ ಮಾಡುತ್ತಿರುವುದು. ಬಿಜೆಪಿಯವರೇ ಸರ್ಕಾರವನ್ನು ಅಸ್ಥಿರ ಹಾಗೂ ಕುದುರೆ ವ್ಯಾಪಾರ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

    ರಿವರ್ಸ್ ಆಪರೇಷನ್ ಮಾಡುವ ಅಗತ್ಯ ಬಿದ್ದರೆ ಮಾಡಲೇಬೇಕಾಗುತ್ತದೆ. ಆದರೆ, ಈಗ ರಿವರ್ಸ್ ಆಪರೇಷನ್ ನಡೆಯುತ್ತಿರುವುದು ನನಗೆ ಗೊತ್ತಿಲ್ಲ. ಸದ್ಯ ಈ ಕುರಿತು ಚಿಂತನೆ ನಡೆಸಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

    ಬೆಂಗಳೂರು ಶಾಸಕರು ರಾಜೀನಾಮೆ ನೀಡಿರುವುದು ನನ್ನ ಬಗ್ಗೆ ಅಸಮಾಧಾನದಿಂದಲ್ಲ, ನಾನು ಎರಡು ಬಾರಿ ಬೆಂಗಳೂರು ಶಾಸಕರ ಸಭೆ ಕರೆದಿದ್ದೇನೆ. ಬಂದಿರುವ ಕುರಿತು ಹಾಜರಾತಿ ಇದೆ. ಯಾರು ಭಾಗವಹಿಸಿದ್ದಾರೆ, ಯಾರು ಭಾಗವಹಿಸಿಲ್ಲ, ಏನು ಮಾತನಾಡಿದ್ದಾರೆ ಎಂಬುದರ ಸಂಪೂರ್ಣ ಮಾಹಿತಿ ನನ್ನ ಬಳಿ ಇದೆ. ಅಲ್ಲದೆ, ಹಿಂದೆಂದಿಗಿಂತಲೂ ಈ ಬಾರಿ ಬೆಂಗಳೂರಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗಿದೆ. ಕಳೆದ ಬಾರಿ 8 ಸಾವಿರ ಕೋಟಿ ರೂ. ಕಳೆದ ಬಾರಿ ಈ ಬಾರಿ 11 ಸಾವಿರ ಕೋಟಿ ರೂ. ಅನುದಾನ ಕೊಡಿಸಿದ್ದೇನೆ. ಆದರೂ ರಾಜೀನಾಮೆ ನೀಡಿದ್ದಾರೆ. ನನ್ನ ಮೇಲಿನ ಅಸಮಾಧಾನದಿಂದ ರಾಜೀನಾಮೆ ನೀಡಿಲ್ಲ. ಬದಲಿಗೆ ಬಿಜೆಪಿಯವರ ಆಪರೇಷನ್‍ನಿಂದ ಈ ರೀತಿ ಮಾಡಿದ್ದಾರೆ.

    ಇಂದು ನಡೆದ ಈ ಉಪಹಾರ ಕೂಟ ಕೇವಲ ಇಡ್ಲಿ ದೋಸೆಗೆ ಸೀಮಿತವಾಗುವುದಿಲ್ಲ. ಸರ್ಕಾರ ಸ್ಥಿರಗೊಳಿಸುವ ಸಭೆಯಾಗಿದೆ. ಎಲ್ಲ ಹಿರಿಯ ನಾಯಕರು ಚರ್ಚಿಸಿ ಸೂಕ್ತ ತೀರ್ಮಾನ ಕೂಗೊಳ್ಳುತ್ತೇವೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

  • ಪ್ರಿಯಾಂಕ ಮಕ್ಕಳು ‘ಗರೀಬಿ ಹಠಾವೋ’ದ ಮುಂದಿನ ಹೋರಾಟಗಾರರು: ಯುಪಿ ಡಿಸಿಎಂ ವ್ಯಂಗ್ಯ

    ಪ್ರಿಯಾಂಕ ಮಕ್ಕಳು ‘ಗರೀಬಿ ಹಠಾವೋ’ದ ಮುಂದಿನ ಹೋರಾಟಗಾರರು: ಯುಪಿ ಡಿಸಿಎಂ ವ್ಯಂಗ್ಯ

    ಲಕ್ನೋ: ಉತ್ತರ ಪ್ರದೇಶ ಪೂರ್ವದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಮಕ್ಕಳು ‘ಗರೀಬಿ ಹಠಾವೋ’ದ ಮುಂದಿನ ಹೋರಾಟಗಾರರು ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ವ್ಯಂಗ್ಯವಾಡಿದ್ದಾರೆ.

    ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದ ಬಿಜೆಪಿ ಪ್ರಚಾರದಲ್ಲಿ ಮಾತನಾಡಿದ ಡಿಸಿಎಂ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಗರೀಬಿ ಹಠಾವೋ ಎಂದು ಹೇಳಿ ಹೊಸ ಆಂದೋಲವನ್ನೇ ಸೃಷ್ಟಿಸಿದರು. ಅದನ್ನು ಪುತ್ರ, ಮಾಜಿ ಪ್ರಧಾನಿ ರಾಜೀವ್ ಗಾಂಧಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಮುಂದುವರಿಸಿಕೊಂಡು ಅಧಿಕಾರಕ್ಕೆ ಬಂದರು. ಹೀಗಾಗಿ ಪ್ರಿಯಾಂಕಾ ಗಾಂಧಿ ಅವರ ಮಕ್ಕಳು ಕೂಡ ಗರೀಬಿ ಹಠಾವೋ ಎಂದು ಹೇಳಿಯೇ ರಾಜಕೀಯ ಪ್ರವೇಶ ಮಾಡುತ್ತಾರೆ ಎಂದು ಲೇವಡಿ ಮಾಡಿದರು.

    ದೇಶದಲ್ಲಿ ಬಡತನ ಇಲ್ಲವಾಗಿದೆಯೇ? ಸ್ವಾತಂತ್ರ್ಯ ನಂತರದ 70 ವರ್ಷಗಳ ಅವಧಿಯಲ್ಲಿ ಕಾಂಗ್ರೆಸ್ ಹೆಚ್ಚು ಕಾಲ ಅಧಿಕಾರದಲ್ಲಿತ್ತು. ಕಾಂಗ್ರೆಸ್‍ನವರು ಗರೀಬಿ ಹಠಾವೋ ಎಂದು ಹೇಳಿದರೇ ಹೊರತು ಬಡತನವನ್ನು ತೊಲಗಿಸಲಿಲ್ಲ. ದೇಶದಲ್ಲಿ ಬಡವರು ಬಡವರಾಗಿ, ಶ್ರೀಮಂತರು ಶ್ರೀಮಂತರಾಗಿಯೇ ಉಳಿದಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

    ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 1971ರಲ್ಲಿ ಗರೀಬಿ ಹಠಾವೋ ಅಭಿಯಾನ ಆರಂಭಿಸಿದರು. ಈ ಮೂಲಕ 1971ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 352 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, ಅಧಿಕಾರಕ್ಕೆ ಬಂದಿತ್ತು. ರಾಜೀವ್ ಗಾಂಧಿ ಅವರು ಕೂಡ ಗರೀಬಿ ಹಠಾವೋ ಅಭಿಯಾನವನ್ನು ಮುಂದುವರಿಸಿ ಪ್ರಧಾನಿಯಾಗಿದ್ದರು.

  • ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ ಸಚಿವ ರೇವಣ್ಣ

    ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ ಸಚಿವ ರೇವಣ್ಣ

    – ಪರಿಶಿಷ್ಟ ಜಾತಿ ನಾಯಕರು ಡಿಸಿಎಂ ಆಗಿರುವುದನ್ನ ಪಕ್ಷದವರೇ ಸಹಿಸಲ್ಲ
    – ಸಂಚು ಮಾಡಲು ಹೋದ್ರೆ ಕಾಂಗ್ರೆಸ್ ನಾಯಕರು ಏಟು ತಿಂತಾರೆ

    ಬೆಂಗಳೂರು: ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ದಲಿತ ನಾಯಕರು. ಅವರಿಂದ ಗೃಹ ಖಾತೆ ವಾಪಸ್ ಪಡೆಯಬಾರದಿತ್ತು ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಡಿಸಿಎಂ ಪರ ಬ್ಯಾಟ್ ಬೀಸಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಗೃಹ ಇಲಾಖೆಯಲ್ಲಿ ವರ್ಗಾವಣೆ ವಿಚಾರದಲ್ಲಿ ನಾನು ಹಸ್ತಕ್ಷೇಪ ಮಾಡಿಲ್ಲ. ಹೀಗೆ ಆರೋಪ ಮಾಡಿಯೇ ಕಾಂಗ್ರೆಸ್ ನಾಯಕರು ಇಂತಹ ಸ್ಥಿತಿಗೆ ಬಂದಿದ್ದಾರೆ. ನಾನು ಯಾವ ಇಲಾಖೆಯ ವರ್ಗಾವಣೆಯಲ್ಲಿಯೂ ಕೈ ಹಾಕಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ:
    ಪರಮೇಶ್ವರ್ ಅವರ ಮೇಲೆ ಕಾಂಗ್ರೆಸ್ ಶಾಸಕರೇ ಒತ್ತಡ ಹಾಕಿರಬಹುದು. ಆದರೆ ಗೃಹ ಖಾತೆ ಡಿಸಿಎಂ ಬಳಿ ಇರಬೇಕಿತ್ತು. ಪರಮೇಶ್ವರ್ ಅವರು ಆರು ತಿಂಗಳು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಗೃಹ ಖಾತೆ ತಪ್ಪಲು ನಾನೇ ಕಾರಣ ಅಂತ ಕಾಂಗ್ರೆಸ್ ಶಾಸಕರು ನನ್ನ ವಿರುದ್ಧ ಆರೋಪ ಮಾಡಿದ್ರೆ ಮಾಡಿಕೊಳ್ಳಲಿ. ಒಂದು ವೇಳೆ ನನ್ನ ಹಸ್ತಕ್ಷೇಪವಿದ್ದರೆ ಬಹಿರಂಗಪಡಿಸಲಿ ಎಂದು ಗುಡುಗಿದರು.

    ಕಾಂಗ್ರೆಸ್‍ನಲ್ಲಿ ಪರಿಶಿಷ್ಟ ಜಾತಿ ನಾಯಕರು ಡಿಸಿಎಂ ಆಗಿರುವುದನ್ನು ಪಕ್ಷದ ಸದಸ್ಯರೇ ಸಹಿಸಿಲ್ಲ. ಇದಕ್ಕೆ ನಾನೇನು ಮಾಡಲಿ. ಕಾಂಗ್ರೆಸ್ ನಾಯಕರು ಹೀಗೆ ಸಂಚು ಮಾಡಲು ಹೋದರೆ ಏಟು ತಿನ್ನುವ ಕಾಲ ಬರುತ್ತದೆ ಎಂದು ಆಕ್ರೋಶ ಹೊರಹಾಕಿದರು.

    ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಅದನ್ನು ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡ ಅವರು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಕುಳಿತು ತೀರ್ಮಾನ ಮಾಡುತ್ತಾರೆ. ನಾನೇನು ಮಾತನಾಡುವುದಿಲ್ಲ ಎಂದು ರೇವಣ್ಣ ಹೇಳಿದರು.

    ದೆಹಲಿಯಲ್ಲಿ ನಿನ್ನೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನು ಭೇಟಿ ಮಾಡಿದ್ದೇನೆ. ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿ ವಿಷಯವನ್ನು ಪ್ರಸ್ತಾಪಿಸಿದ್ದು, ಶೇ. 85 ಭೂಮಿ ವಶ, ಇನ್ನಿತರ ಕೆಲಸ ಆಗಿದೆ. ಕೂಡಲೇ ಕೆಲಸ ಪ್ರಾರಂಭ ಮಾಡುವಂತೆ ಮನವಿ ಸಲ್ಲಿಸಿರುವೆ ಎಂದ ಅವರು, ಅರಣ್ಯ ಇಲಾಖೆ ಸಭೆ ಮುಂದಿನ ತಿಂಗಳು 10ರಂದು ದೆಹಲಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

    ಹುಬ್ಬಳ್ಳಿ-ನವಲುಗುಂದ-ನರಗುಂದ ನೈಸ್ ರೋಡ್ 6 ಲೈನ್ ಮಾಡಲು ಯೋಜನೆ ಇದೆ. ಎರಡು ಲೈನ್ ರೋಡ್ ಈಗಾಗಲೇ ಪ್ರಾರಂಭವಾಗಿದೆ. ಹುಬ್ಬಳ್ಳಿ ನಗರ ರಸ್ತೆ ನಿರ್ಮಾಣದ ಯೋಜನೆಯ ಕುರಿತು ಚರ್ಚೆ ಮಾಡಿದ್ದೇವೆ. ಹಾಸನ- ಮಂಗಳೂರು ರಸ್ತೆ ಕಾಮಗಾರಿ, ಮೈಸೂರು-ಮಡಿಕೇರಿ-ಮಾಣಿ ರಸ್ತೆ ಕೆಲಸ ಬೇಗ ಪ್ರಾರಂಭ ಮಾಡಲು ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

    ಚಾರ್ಮಡಿ ಘಾಟ್ ರಸ್ತೆ ಆಗಲೀಕರಣಕ್ಕೆ 250 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿ, ಆದಷ್ಟು ಬೇಗ ಹಣ ಬಿಡುಗಡೆಗೆ, ಹಾಸನ-ಬೇಲೂರು ರಸ್ತೆ ನಿರ್ಮಾಣ ಹಾಗೂ ಚನ್ನರಾಯಪಟ್ಟಣ-ಮಡಿಕೇರಿ ರಸ್ತೆ ಕಾಮಗಾರಿ ಮನವಿ ಸಲ್ಲಿಸಿದ್ದೇನೆ. ಈ ನಿಟ್ಟಿನಲ್ಲಿ ಈಗಾಗಲೇ ಸರ್ವೆ ಆಗುತ್ತಿದೆ. ಈ ಕಾಮಗಾರಿಯ ಮೊತ್ತವು 600 ಕೋಟಿ ರೂ. ಪ್ರಾಜೆಕ್ಟ್ ಆಗಬಹುದು ಎಂದು ಮಾಹಿತಿ ನೀಡಿದರು.

    ಹಾಸನ-ಕೊಡಗು-ಚಿಕ್ಕಮಗಳೂರು ಕಾಫಿ ಬೆಳೆಗಾರರಿಗೆ ಶೇ. 50 ಪರಿಹಾರ ಕೊಡುವಂತೆ ಮನವಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.

    ರೇಲ್ವೇ ಇಲಾಖೆ:
    ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕಾಲದ ಯೋಜನೆಯಾಗಿರುವ ಅಂಕೋಲ ರೈಲ್ವೇ ಮಾರ್ಗ ಪ್ರಾರಂಭ ಹಾಗೂ ಚಿಕ್ಕಮಗಳೂರು-ಶಿವಮೊಗ್ಗ-ಶೃಂಗೇರಿ ರೇಲ್ವೇ ಮಾರ್ಗಕ್ಕೆ ಮನವಿ ಸಲ್ಲಿಸಲಾಗಿದೆ. ಅಷ್ಟೇ ಅಲ್ಲದೆ ಬೆಂಗಳೂರು ಸಬರ್ಬನ್ ರೈಲ್ ಕುರಿತು ಚರ್ಚೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ನೈಸ್ ವರದಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಸದನ ಸಮಿತಿ ವರದಿ ಸರ್ಕಾರದ ಹಂತದಲ್ಲಿ ಇದೆ. ಈ ಬಗ್ಗೆ ಚರ್ಚೆ ನಡೆಸಿ ಒಪ್ಪಿಗೆ ಸೂಚಿಸಲಾಗಿದೆ. ಈಗ ಯಾವ ಹಂತದಲ್ಲಿದೆ ಅಂತ ತಿಳಿದುಕೊಳ್ಳಬೇಕಿದ್ದು, ಕುಮಾರಸ್ವಾಮಿ ಅವರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪಕ್ಷದಲ್ಲಿ ಒಬ್ಬರಿಗೆ ಒಂದೇ ಸ್ಥಾನ – ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ : ಡಿಸಿಎಂ ಪರಮೇಶ್ವರ್

    ಪಕ್ಷದಲ್ಲಿ ಒಬ್ಬರಿಗೆ ಒಂದೇ ಸ್ಥಾನ – ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ : ಡಿಸಿಎಂ ಪರಮೇಶ್ವರ್

    ತುಮಕೂರು: ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಮುಗಿಯಲಿದ್ದು, ಸರ್ಕಾರದ ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಂತ್ರಿ ಪರಮೇಶ್ವರ್ ಅವರು ಹೇಳಿದ್ದಾರೆ.

    ಸ್ವಕ್ಷೇತ್ರ ಕೊರಟಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ಯಾರಿಗೆ ಎಷ್ಟು ಖಾತೆ ಎಂಬುದು ತೀರ್ಮಾನ ಆಗಿದೆ. ಪಕ್ಷದ ವರಿಷ್ಠರು ಮುಂದಿ ರಾಜಕೀಯ ಬೆಳವಣಿಗೆ ನೋಡಿ ತೀರ್ಮಾನ ಕೈಗೊಳ್ಳಲಿದ್ದಾರೆ. ಆದರೆ ನಮ್ಮ ಪಕ್ಷದಲ್ಲಿ ಒಬ್ಬರಿಗೆ ಒಂದೇ ಸ್ಥಾನ ನಿಯಮವಿದ್ದು, ಹಾಗೆಯೇ ಇನ್ನು ಮುಂದೆಯೂ ನಡೆಯುತ್ತದೆ ಎಂದರು.

    ಈ ಹಿಂದೆ ಸರ್ಕಾರದಲ್ಲಿ ಗೃಹಸಚಿವ ಸ್ಥಾನ ಪಡೆದಿದ್ದೆ ಆ ವೇಳೆ ಪಕ್ಷದ ಜವಾಬ್ದಾರಿ ನೀಡಲಾಯಿತು. ಈಗಲೂ ಪಕ್ಷದ ವರಿಷ್ಠರು ಯಾವ ಜವಾಬ್ದಾರಿಯನ್ನ ಕೊಟ್ಟರು ನಿಭಾಯಿಸುತ್ತೇನೆ. ಅಲ್ಲದೇ ನಮ್ಮ ಸರ್ಕಾರದ ಅವಧಿಯಲ್ಲಿ ನಿಗಧಿಯಾಗಿರುವ ಎಲ್ಲಾ ಯೋಜನೆಗಳು ಮೈತ್ರಿ ಸರಕಾರದಲ್ಲೂ ಮುಂದುವರೆಸುತ್ತೇವೆ ಎಂದು ತಿಳಿಸಿದರು.

    ಇದೇ ವೇಳೇ ರೈತರ ಸಾಲ ಮನ್ನಾ ಕುರಿತು ಪ್ರತಿಕ್ರಿಯೆ ನೀಡಿ, ಸಾಲ ಮನ್ನಾ ವಿಚಾರದಲ್ಲಿ ಎರಡೂ ಪಕ್ಷಗಳಲ್ಲಿ ಯಾವುದೇ ಗೊಂದಲ ಇಲ್ಲ. ಮನ್ನಾ ಅಂದರೆ ಎಲ್ಲವನ್ನೂ ಮನ್ನಾ ಮಾಡಲು ಸಾಧ್ಯವಿಲ್ಲ. ಬೆಳೆ ಸಾಲ, ಒಡವೆ ಸಾಲ, ಮದುವೆ ಸಾಲ, ಬೇರೆ ಬೇರೆ ರೀತಿ ವರ್ಗಗಗಳಿದೆ. ಹೀಗಾಗಿ ಸಾಲ ಮನ್ನಾ ರೈತನಿಗೆ ನೇರವಾಗಿ ಸಿಗುವ ಹಾಗೇ ಮಾಡಲಾಗುವುದು ಎಂದರು.

  • ರೋಷನ್ ಬೇಗ್‍ರನ್ನು ಡಿಸಿಎಂ ಮಾಡಿ: ಮುಸ್ಲಿಂ ಸಂಘಟನೆಗಳಿಂದ ಬೇಡಿಕೆ

    ರೋಷನ್ ಬೇಗ್‍ರನ್ನು ಡಿಸಿಎಂ ಮಾಡಿ: ಮುಸ್ಲಿಂ ಸಂಘಟನೆಗಳಿಂದ ಬೇಡಿಕೆ

    ಬೆಂಗಳೂರು: ನಮ್ಮ ಸಮುದಾಯದ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಮುಸ್ಲಿಂ ಸಂಘಟನೆಗಳ ಒಕ್ಕೂಟವು ಒತ್ತಾಯಿಸಿದೆ.

    ಈ ಹಿಂದೆ ವೀರಶೈವ ಸಮಾಜದ ಮುಖಂಡರು ತಮ್ಮ ಸಮಾಜದವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಮತ್ತು 5 ಮಂದಿ ಶಾಸಕರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದರು. ಈ ಬೆನ್ನಲ್ಲೆ, ಶಿವಾಜಿನಗರದ ಶಾಸಕ ಆರ್.ರೋಷನ್ ಬೇಗ್ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂದು ಮುಸ್ಲಿಂ ಸಂಘಟನೆಗಳ ಒಕ್ಕೂಟದ ಪ್ರಧಾನ ಸಂಚಾಲಕ ಸಮಿಉಲ್ಲಾ ಖಾನ್ ಒತ್ತಾಯಿಸಿದ್ದಾರೆ.

    ರಾಜಕೀಯದಲ್ಲಿ ಮುಸ್ಲಿಮರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ, ಕಾಂಗ್ರೆಸ್‍ನಿಂದ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರೋಷನ್ ಬೇಗ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

  • ಕೈ ಶಾಸಕಾಂಗ ಸಭೆಯಲ್ಲಿ ಲಿಂಗಾಯತ ಶಾಸಕರ ಅಸಮಾಧಾನ ಸ್ಫೋಟ!

    ಕೈ ಶಾಸಕಾಂಗ ಸಭೆಯಲ್ಲಿ ಲಿಂಗಾಯತ ಶಾಸಕರ ಅಸಮಾಧಾನ ಸ್ಫೋಟ!

    ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರದ ಆರಂಭಕ್ಕೂ ಮುನ್ನವೇ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಮಂತ್ರಿ ಸ್ಥಾನಕ್ಕಾಗಿ ನಾಯಕರ ನಡುವೆ ಜಟಾಪಟಿ ಆರಂಭವಾಗಿದೆ.

    ನೂತನ ಸರ್ಕಾರ ರಚನೆ ಸಂಬಂಧ ಇಂದು ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಎಂ.ಬಿ.ಪಾಟೀಲ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಅಥವಾ ಸಚಿವ ಸ್ಥಾನ ನೀಡುವ ಕುರಿತು ಜಟಾಪಟಿ ನಡೆದಿದೆ ಎಂದು ಕಾಂಗ್ರೆಸ್ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿದೆ.

    ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಕಾಂಗ್ರೆಸ್ ಪಕ್ಷಕ್ಕೆ ಲಭಿಸಿರುವುದರಿಂದ ಎಂಬಿ ಪಾಟೀಲ್ ಅವರಿಗೆ ಡಿಸಿಎಂ ಸ್ಥಾನ ನೀಡುವ ಕುರಿತು ಅಭಿಪ್ರಾಯ ವ್ಯಕ್ತವಾಗಿತ್ತು. ಆದರೆ ಈ ಸಲಹೆಗೆ ವಿಜಯಪುರದ ಇಬ್ಬರು ಲಿಂಗಾಯತ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ತಮ್ಮ ಮಾತಿಗೆ ಪಕ್ಷದ ನಾಯಕರು ಬೆಲೆ ನೀಡದೇ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಭೆಯಲ್ಲಿ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.

    ಪ್ರಮುಖವಾಗಿ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಹಾಗೂ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್ ರಾಜೀನಾಮೆಗೆ ಮುಂದಾಗಿದ್ದು, ಲಿಂಗಾಯತ ಪ್ರತ್ಯೇಕ ಧರ್ಮದ ಹೆಸರಲ್ಲಿ ಸಮುದಾಯವನ್ನು ಒಡೆದವರು ಎಂ.ಬಿ.ಪಾಟೀಲ್ ಎಂದು ಆರೋಪಿಸಿದ್ದಾರೆ. ಅಲ್ಲದೇ ಚುನಾವಣೆಯ ವೇಳೆ ಪ್ರತ್ಯೇಕ ಧರ್ಮಕ್ಕೆ ಬೆಂಬಲ ನೀಡದ ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಸ್ಪರ್ಧೆ ಮಾಡಿದ್ದ ಬೇರೆ ಪಕ್ಷದ ಅಭ್ಯರ್ಥಿಗಳಿಗೆ ಎಂಬಿ ಪಾಟೀಲ್ ಹಣ ಸಹಾಯ ಮಾಡಿ ಸೋಲಿಸುವ ಪ್ರಯತ್ನ ಮಾಡಿದ್ದಾರೆ ಎಂದು ಸಭೆಯಲ್ಲಿ ಲಿಂಗಾಯತ ಶಾಸಕರ ಆರೋಪ ಮಾಡಿದ್ದಾರೆ ಎನ್ನಲಾಗಿದೆ.

    ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈ ಸ್ಥಿತಿ ಬರಲು ಕಾರಣ ಎಂಬಿ ಪಾಟೀಲ್ ಕಾರಣ ಎಂದು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿರುವ ಶಾಸಕರು ಒಟ್ಟು 17 ಜನ ಲಿಂಗಾಯತ ಶಾಸಕರು ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರಲ್ಲಿ ಶಾಮನೂರು ಶಿವಶಂಕರಪ್ಪ ಅವರಿಗೆ ವಯಸ್ಸಾಗಿದೆ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಸದ್ಯ ಅವರವನ್ನು ಹೊರತುಪಡಿಸಿ ಯಾವುದೇ ಕಾರಣಕ್ಕೂ ಎಂಬಿ ಪಾಟೀಲ್ ಅವರಿಗೆ ಯಾವುದೇ ಸ್ಥಾನಮಾನ ಕೊಡಬಾರದು. ಉಳಿದ 15 ಲಿಂಗಾಯತ ಶಾಸಕರಲ್ಲಿ ಯಾರಿಗಾದರೂ ಸಚಿವ ಸ್ಥಾನ ಅಥವಾ ಉಪಮುಖ್ಯಮಂತ್ರಿ ಸ್ಥಾನ ನೀಡಿ ಎಂದು ಪಟ್ಟು ಹಿಡಿದಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.

    ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ವ್ಯಕ್ತವಾಗಿರುವ ಅಭಿಪ್ರಾಯವನ್ನ ಅಲಿಸಿರುವ ಕಾಂಗ್ರೆಸ್ ಮುಖಂಡರು ಈ ಕುರಿತು ಕೇಂದ್ರ ಹೈಕಮಾಂಡ್ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

    ವೀರಶೈವ ಲಿಂಗಾಯತರಿಂದ ಬೇಡಿಕೆ: ಲಿಂಗಾಯತರಿಗೆ ಉಪಮುಖ್ಯಮಂತ್ರಿ ಪಟ್ಟ ನೀಡಬೇಕು ಎನ್ನುವ ಕೂಗು ಸದ್ಯ ಜೋರಾಗಿದ್ದು, ಈ ಕುರಿತು ಲಾಬಿ ನಡೆಸಲು ಲಿಂಗಾಯತ ಸಮಾಜದ ಪ್ರಮುಖದ ಸ್ವಾಮೀಜಿಗಳೇ ಈಗ ಅಖಾಡಕ್ಕೆ ಇಳಿದಿದ್ದಾರೆ. ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಈಗಾಗಲೇ ನಮಗೆ ಸೋಲಾಗಿದ್ದು, ಸಚಿವರು ಸೋತಿದ್ದಾರೆ. ಈಗ ಆಗಿರುವ ನಷ್ಟವನ್ನು ಸರಿಪಡಿಸಲು ಸಮಾಜಕ್ಕೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕೆಂಬ ಆಗ್ರಹವನ್ನು ಮುಂದಿಟ್ಟಿದ್ದಾರೆ.

    ಒಂದು ವೇಳೆ ಉಪಮುಖ್ಯಮಂತ್ರಿ ಪಟ್ಟವನ್ನು ನೀಡದೇ ಇದ್ದರೆ 2019ರ ಲೋಕಸಭಾ ಚುನಾವಣೆಯಲ್ಲಿ ಏಟು ಬೀಳುವ ಸಾಧ್ಯತೆಯಿದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ. ಹೀಗಾಗಿ ಮುಂದೆ ಈ ಸಮಸ್ಯೆ ಆಗದೇ ಇರಲು ಉಪಮುಖ್ಯಮಂತ್ರಿ ಪಟ್ಟವನ್ನು ನೀಡುವಂತೆ ಲಿಂಗಾಯತರು ಬೇಡಿಕೆ ಇಟ್ಟಿದ್ದಾರೆ.

  • ನೂತನ ಸರ್ಕಾರದ ಮೇಲೆ ಹಿಡಿತ ಸಾಧಿಸಲು ಮುಂದಾದ ಸಿದ್ದರಾಮಯ್ಯ?

    ನೂತನ ಸರ್ಕಾರದ ಮೇಲೆ ಹಿಡಿತ ಸಾಧಿಸಲು ಮುಂದಾದ ಸಿದ್ದರಾಮಯ್ಯ?

    ಬೆಂಗಳೂರು: ಇನ್ನೆರಡು ದಿನಗಳಲ್ಲಿ ಅಸ್ತಿತ್ವಕ್ಕೆ ಬರಲಿರೋ ನೂತನ ಸರ್ಕಾರದ ಮೇಲೆ ಸಿದ್ದರಾಮಯ್ಯ ಹಿಡಿತ ಸಾಧಿಸಲು ಮುಂದಾಗಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ.

    ಎರಡು ಡಿಸಿಎಂ ಹುದ್ದೆ ಸೃಷ್ಟಿಸಬೇಕು ಎನ್ನುವ ಬೇಡಿಕೆಯ ಹಿಂದೆ ಇರೋದು ಮಾಜಿ ಸಿಎಂ ಸಿದ್ದರಾಮಯ್ಯ ಎನ್ನಲಾಗಿದೆ. ಅದರಲ್ಲೂ ನಾನು ಹೇಳಿದವರನ್ನೇ ಉಪಮುಖ್ಯಮಂತ್ರಿ ಮಾಡಬೇಕು ಎನ್ನುವ ಹಠಕ್ಕೆ ಬಿದ್ದಿದ್ದಾರೆ.

    ಸದ್ಯ ಡಿಸಿಎಂ ಸ್ಥಾನಕ್ಕೆ ಲಿಂಗಾಯತ ಸಮುದಾಯದಿಂದ ಎಂ.ಬಿ ಪಾಟೀಲ್ ಮತ್ತು ಶಾಮನೂರು ಶಿವಶಂಕರಪ್ಪ ಹೆಸರು ಕೇಳಿ ಬರುತ್ತಿದೆ. ಎಂ.ಬಿ ಪಾಟೀಲ್‍ರನ್ನು ಡಿಸಿಎಂ ಮಾಡಬಾರದು ಎಂದು ವೀರಶೈವರು ಹೇಳುತ್ತಿದ್ದರೆ, ಶಾಮನೂರು ಶಿವಶಂಕರಪ್ಪಗೆ ಕೊಡಬಾರದು ಎಂದು ಲಿಂಗಾಯತರು ಪಟ್ಟು ಹಿಡಿದಿದ್ದಾರೆ.

    ಸಿದ್ದರಾಮಯ್ಯ ಇದೇ ಅಂಶವನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲು ಮುಂದಾಗಿದ್ದು, ಎಸ್‍ಆರ್ ಪಾಟೀಲ್ ಹೆಸರನ್ನು ತೇಲಿ ಬಿಟ್ಟಿದ್ದಾರೆ. ಈ ಹಿಂದೆ ಎಸ್‍ಆರ್ ಪಾಟೀಲ್‍ರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿಸಲು ಸಹ ಸಿದ್ದರಾಮಯ್ಯ ಪ್ರಯತ್ನಿಸಿದ್ದರು.