Tag: Deputy Commissioner

  • ರಾಜಕೀಯ ಒತ್ತಡಕ್ಕೆ ಮಣಿದು ಆದೇಶ ನೀಡಿಲಾಗಿದೆ-ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಕೆ ಆರೋಪ ಕುರಿತು ಗಾಯತ್ರಿ ಸ್ಪಷ್ಟನೆ

    ರಾಜಕೀಯ ಒತ್ತಡಕ್ಕೆ ಮಣಿದು ಆದೇಶ ನೀಡಿಲಾಗಿದೆ-ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಕೆ ಆರೋಪ ಕುರಿತು ಗಾಯತ್ರಿ ಸ್ಪಷ್ಟನೆ

    ಬೆಂಗಳೂರು: ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಬಿಬಿಎಂಪಿ ಚುನಾವಣೆ ಗೆದ್ದ ಆರೋಪ ಎದುರಿಸುತ್ತಿರುವ ನಗರದ ಕೆಪಿ ಅಗ್ರಹಾರ ಪಾಲಿಕೆ ಸದಸ್ಯೆ ಗಾಯತ್ರಿ ಜಿಲ್ಲಾಧಿಕಾರಿ ಆದೇಶವನ್ನು ಪ್ರಶ್ನಿಸಿ ಸಿವಿಲ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

    ನಗರ ಜಿಲ್ಲಾಧಿಕಾರಿಗಳ ಆದೇಶ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕೀಯ ಒತ್ತಡದಿಂದ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ನನ್ನನ್ನು ಸಾಕಿದ್ದು ಅಜ್ಜಿ, ನನ್ನ ಅಪ್ಪ-ಅಮ್ಮ ಯಾರು ಎಂದು ಗೊತ್ತಿಲ್ಲ. ನನ್ನನ್ನು ನಾಯಕ ಎಂದಲೇ ಅಜ್ಜಿ ಶಾಲೆಯಲ್ಲಿ ನೋಂದಣಿ ಮಾಡಿಸಿದ್ದಾರೆ. ನನ್ನ ಪತಿ ನಾಯ್ಡು. ಅದರೆ ನನ್ನ ತವರು ಜಾತಿ ಹೋಗಲ್ಲ. ನಾವೇನು ಸುಳ್ಳು ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ರಾಜಕೀಯ ಒತ್ತಡ: ಕಾಂಗ್ರೆಸ್ ಸ್ಥಳೀಯ ಮುಖಂಡರ ಕುತಂತ್ರದಿಂದ ಈ ರೀತಿ ಅರೋಪ ಕೇಳಿ ಬರುತ್ತಿದೆ ಎಂದು ಪ್ರತ್ಯಾರೋಪ ಮಾಡಿದ ಗಾಯತ್ರಿ ಅವರು, ಶಾಲೆಯಲ್ಲಿ ಪೋಷಕರು ನೀಡಿರುವ ದಾಖಲೆ ಅನ್ವಯ ಜಾತಿ ಪ್ರಮಾಣ ಪತ್ರ ನೀಡಿರುತ್ತಾರೆ. ಇದೇ ಕಾರಣಕ್ಕಾಗಿ ನಾನು ಮೂರು ವರ್ಷದಿಂದ ಕೋರ್ಟ್ ಗೆ ಅಲೆಯುತ್ತಿದ್ದೇನೆ. ನಾನು ಸುಳ್ಳು ದಾಖಲೆ ನೀಡಿಲ್ಲ, ನ್ಯಾಯಕ್ಕಾಗಿ ಕಾನೂನು ಹೋರಾಟ ಮಾಡುತ್ತೇನೆ. ಸುಳ್ಳು ದಾಖಲೆ ನೀಡಿಲ್ಲ ಎಂದರು.

    ಏನಿದು ಪ್ರಕರಣ:
    ಕಾರ್ಪೊರೇಟರ್ ಎಂ ಗಾಯತ್ರಿ ಗಣೇಶ್‍ಗೆ ತಂದೆ-ತಾಯಿ, ಜಾತಿ ಬಗ್ಗೆ ಮಾಹಿತಿ ಇಲ್ಲ. ಇದೇ ಕಾರಣಕ್ಕೆ ನಾಯಕ ಜಾತಿ ಹೆಸರಿನಲ್ಲಿ ನಗರದ ಕೆಪಿ ಆಗ್ರಹಾರದಲ್ಲಿರುವ ಸಿದ್ದಲಿಂಗೇಶ್ವರ ಶಾಲೆಯಲ್ಲಿ ವ್ಯಾಸಂಗ ನಡೆಸಿರುವ ಕುರಿತು ದಾಖಲೆ ನೀಡಲಾಗಿತ್ತು. ಆದರೆ ಅವರ ಶೈಕ್ಷಣಿಕ ಆರ್ಹತೆ ಬಗ್ಗೆ ಶಾಲೆಯಲ್ಲಿ ಯಾವುದೇ ಪೂರಕ ಮಾಹಿತಿ ಲಭಿಸದ ಹಿನ್ನೆಲೆಯಲ್ಲಿ ಡಿಡಿಪಿಐ ಹಾಗೂ ಇತರೇ ಅಧಿಕಾರಿಗಳು ವರದಿ ನೀಡಿದ್ದು, ಈ ವರದಿ ಅನ್ವಯ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದರು.

  • ಅಧಿಕಾರಕ್ಕಾಗಿ ತಂದೆ-ತಾಯಿ ಗೊತ್ತಿಲ್ಲ ಅಂದ್ರು – ನಕಲಿ ಜಾತಿ ಪತ್ರ ನೀಡಿ ಸಿಕ್ಕಿಬಿದ್ರು ಅಗ್ರಹಾರದ ಗಾಯತ್ರಿ

    ಅಧಿಕಾರಕ್ಕಾಗಿ ತಂದೆ-ತಾಯಿ ಗೊತ್ತಿಲ್ಲ ಅಂದ್ರು – ನಕಲಿ ಜಾತಿ ಪತ್ರ ನೀಡಿ ಸಿಕ್ಕಿಬಿದ್ರು ಅಗ್ರಹಾರದ ಗಾಯತ್ರಿ

    ಬೆಂಗಳೂರು: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುವ ವೇಳೆ ಜಾತಿ ಪ್ರಮಾಣ ಪತ್ರ ನೀಡಿಕ್ಕೆ ಸರಿಯಾದ ದಾಖಲೆ ಇಲ್ಲದ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಕೆಪಿ ಅಗ್ರಹಾರ ಗಾಯತ್ರಿ ಅವರ ಜಾತಿ ಪ್ರಮಾಣ ಪತ್ರ ರದ್ದುಪಡಿಸಿ ಆದೇಶ ನೀಡಿದ್ದಾರೆ.

    ನಗರದ ಕೆಪಿ ಅಗ್ರಹಾರ ಕಾರ್ಪೊರೇಟರ್ ಎಂ ಗಾಯತ್ರಿ ಗಣೇಶ್ ಅವರ ಜಾತಿ ಪ್ರಮಾಣ ಪತ್ರ ರದ್ದು ಮಾಡಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಬಿಬಿಎಂಪಿ ಚುನಾವಣೆಯಲ್ಲಿ ಎಸ್‍ಟಿ ಮಹಿಳೆಗೆ ಮೀಸಲಾಗಿದ್ದ ಕೆಪಿ ಅಗ್ರಹಾರ ವಾರ್ಡ್ ನಿಂದ ಎಂ ಗಾಯತ್ರಿ ಅವರು ನಾಯಕ ಜನಾಂಗದ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸ್ಪರ್ಧಿಸಿ ಗೆಲುವು ಪಡೆದಿದ್ದರು. ಈ ವೇಳೆ ದಾಖಲೆ ಪರಿಶೀಲಿಸದೆ ತಹಶೀಲ್ದಾರ್ ರಾಮಲಕ್ಷ್ಮಣ್ ಜಾತಿ ಪ್ರಮಾಣಪತ್ರ ನೀಡಿದ್ದರು.

    ಏನಿದು ಪ್ರಕರಣ:
    ಕಾರ್ಪೊರೇಟರ್ ಎಂ ಗಾಯತ್ರಿ ಗಣೇಶ್‍ಗೆ ತಂದೆ-ತಾಯಿ, ಜಾತಿ ಬಗ್ಗೆ ಮಾಹಿತಿ ಇಲ್ಲ. ಇದೇ ಕಾರಣಕ್ಕೆ ನಾಯಕ ಜಾತಿ ಹೆಸರಿನಲ್ಲಿ ಶಾಲೆಯನ್ನು ಬಳಕೆ ಮಾಡಿ ಜಾತಿ ಪ್ರಮಾಣಪತ್ರ ಮಾಡಲಾಗಿದೆ. ನಗರದ ಕೆಪಿ ಆಗ್ರಹಾರದಲ್ಲಿರುವ ಸಿದ್ದಲಿಂಗೇಶ್ವರ ಶಾಲೆಯಲ್ಲಿ ವ್ಯಾಸಂಗ ನಡೆಸಿರುವ ಕುರಿತು ದಾಖಲೆ ಸೃಷ್ಟಿ ಮಾಡಲಾಗಿದ್ದು, ಆದರೆ ಅವರ ಶೈಕ್ಷಣಿಕ ಆರ್ಹತೆ ಬಗ್ಗೆ ಶಾಲೆಯಲ್ಲಿ ಯಾವುದೇ ಪೂರಕ ಮಾಹಿತಿ ಲಭಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಕ್ರಮಕೈಗೊಂಡಿದ್ದಾರೆ.

    ಬಿಬಿಎಂಪಿ ಚುನಾವಣೆ ಸ್ಪರ್ಧೆ ಮಾಡುವ ಉದ್ದೇಶದಿಂದಲೇ 1ನೇ ತರಗತಿಯಿಂದ 5ನೇ ತರಗತಿಯವರೆಗೆ ವ್ಯಾಸಂಗ ಮಾಡಿರುವಂತೆ ದಾಖಲೆ ಸೃಷ್ಟಿಸಲಾಗಿದ್ದು, ನಾಯಕ ಜಾತಿ ಪ್ರಮಾಣ ಪತ್ರ ಪಡೆಯಲು ಸಿದ್ದಲಿಂಗೇಶ್ವರ ಶಾಲೆ ಬಳಕೆ ಮಾಡಿದ್ದಾರೆ. 2015 ಜೂನ್ ನಲ್ಲಿ ಗಾಯಿತ್ರಿ ಅವರು ಜಾತಿ ಪ್ರಮಾಣ ಪತ್ರ ಪಡೆದಿದ್ದು, 2015 ಜುಲೈ ನಲ್ಲಿ ಬಿಬಿಎಂಪಿ ಚುನಾವಣೆ ನಡೆದಿತ್ತು. ಅಂದರೆ ಚುನಾವಣೆಯಲ್ಲಿ ಮೀಸಲಾತಿ ಘೋಷಣೆ ಆದ ಮೇಲೆ ಜಾತಿ ಪ್ರಮಾಣ ಪತ್ರ ಪಡೆಯಲಾಗಿದೆ ಎಂಬುದು ಕಾಣಸಿಗುತ್ತದೆ.

    ಶಾಲೆಯಲ್ಲಿ ವರ್ಗಾವಣೆ ಪ್ರಮಾಣ ಪತ್ರ ಪಡೆಯುವ ವೇಳೆಯೂ 5ನೇ ತರಗತಿ ಪಾಸ್ ಎಂದು ಬರೆಯಲಾಗಿದೆ. ಆದರೆ ದಾಖಲೆಯಲ್ಲಿ ಗಾಯಿತ್ರಿ ಅವರು 5ನೇ ತರಗತಿ ಅನುತ್ತೀರ್ಣ ಎಂದು ನಮೂದಿಸಲಾಗಿದೆ. ಈ ಕುರಿತು ಡಿಡಿಪಿಐ ಹಾಗೂ ಇತರೇ ಅಧಿಕಾರಿಗಳು ವರದಿ ನೀಡಿದ್ದು, ಈ ವರದಿ ಅನ್ವಯ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.

    ಒಂದೊಮ್ಮೆ ಈ ಕುರಿತು ಗಾಯಿತ್ರಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ರೂ ಸಹ ವರದಿಯ ಅನ್ವಯ ಅರ್ಜಿ ತಿರಸ್ಕೃತ ಗೊಳ್ಳುವ ಸಾಧ್ಯತೆಯೂ ಇದೇ. ಆರೋಪ ಸಾಬೀತಾದಲ್ಲಿ ಗಾಯಿತ್ರಿ ಅವರು ಈ ಅವಧಿಯಲ್ಲಿ ಪಡೆದಿರುವ ಎಲ್ಲಾ ಸೌಲಭ್ಯಗಳನ್ನ ಹಿಂದಿರುಗಿಸುವ ಅನಿವಾರ್ಯ ಎದುರಾಗಲಿದೆ. ಅಲ್ಲದೇ ಚುನಾವಣೆಯಲ್ಲಿ ಅಕ್ರಮ ನಡೆಸಿರುವ ಆರೋಪದಡಿ 6 ವರ್ಷ ಚುನಾವಣೆಗೆ ಮತ್ತೆ ಸ್ಪರ್ಧೆ ಮಾಡುವಂತಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಅನ್ನದ ಮೇಲೆ ಜೇನುಗೂಡಿನಂತೆ ಕುಳಿತುಕೊಳ್ತವೆ ನೋಣಗಳು: ಡಿಸಿ ಕಚೇರಿ ಮುಂದೆ ಗ್ರಾಮಸ್ಥರ ಪ್ರತಿಭಟನೆ

    ಅನ್ನದ ಮೇಲೆ ಜೇನುಗೂಡಿನಂತೆ ಕುಳಿತುಕೊಳ್ತವೆ ನೋಣಗಳು: ಡಿಸಿ ಕಚೇರಿ ಮುಂದೆ ಗ್ರಾಮಸ್ಥರ ಪ್ರತಿಭಟನೆ

    ದಾವಣಗೆರೆ: ನೋಣಗಳ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಕೋಳಿ ಪೌಲ್ಟ್ರಿ ಫಾರಂ ಅನ್ನು ತೆರವುಗೊಳಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹರಿಹರ ತಾಲೂಕಿನ ಕೆಂಚನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

    ನೋಣಗಳ ಹಾವಳಿಯಿಂದ ಕಂಗಾಲಾಗಿದ್ದು, ಸ್ಥಳೀಯ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂದೆ ಕುಳಿತು, ಕೋಳಿ ಫಾರಂ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    ಕೆಂಚನಹಳ್ಳಿ ಸಮೀಪದ ಗಿರೀಜಾ ರಮಣ್ ಪೌಲ್ಟ್ರಿ ಫಾರಂನಿಂದ ಗ್ರಾಮದಲ್ಲಿ ನೋಣ ಹೆಚ್ಚಾಗಿದ್ದು, ನಿತ್ಯವೂ ಅವುಗಳ ಕಾಟದಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಊಟ ಮಾಡಲು ಕುಳಿತರೂ, ನಿದ್ರೆಗೆ ಜಾರಿದರೂ, ಮನೆಯಿಂದ ಹೊರಗೆ, ಒಳಗೆ ಎಲ್ಲಿ ಇದ್ದರೂ ನೋಣ ಬಿಟ್ಟು ಬಿಡದೇ ಕಾಡುತ್ತಿವೆ.

    20 ವರ್ಷಗಳ ಹಿಂದೆ ರಮಣ ರೆಡ್ಡಿ ಎಂಬವರು ಬಿಸ್ಕೇಟ್ ಫ್ಯಾಕ್ಟರಿ ನೆಪ ಹೇಳಿ, ಕೋಳಿ ಫಾರಂ ಆರಂಭಿಸಿದರು. ವರ್ಷದಲ್ಲಿ ಎರಡ್ಮೂರು ತಿಂಗಳು ನೋಣಗಳ ಕಾಟ ಹೆಚ್ಚಾಗುತ್ತದೆ. ಇದರಿಂದಾಗಿ ಸಾಂಕ್ರಾಮಿಕ ಕಾಯಿಲೆ ಹರಡುತ್ತದೆ ಎನ್ನುವ ಭೀತಿ ಎದುರಾಗಿದ್ದು, ಗ್ರಾಮ ಬಿಟ್ಟು ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ.

    ಶಾಲೆಯಲ್ಲಿ ಮಕ್ಕಳಿಗಾಗಿ ತಯಾರಿಸಿದ ಬಿಸಿಯೂಟದಲ್ಲಿ ನೋಣ ಬೀಳದಂತೆ ಕಾದು ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಮಕ್ಕಳಂತು ಗೊತ್ತಿಲ್ಲದೆ ನೋಣಗಳು ಬಿದ್ದ ಆಹಾರವನ್ನು ಸೇವನೆ ಮಾಡವಂತಾಗಿದೆ. ಮನೆಗಳಲ್ಲಿ ಅಡುಗೆ ಸಿದ್ಧಪಡಿಸಿ, ಕೆಳಗೆ ಇಟ್ಟರೆ ಸಾಕು, ಪಾತ್ರೆಗಳ ಮೇಲೆ ಜೇನುಗೂಡಿನಂತೆ ನೋಣಗಳು ಕುಳಿತುಕೊಳ್ಳುತ್ತವೆ. ನಮ್ಮ ಸಮಸ್ಯೆಗೆ ಕೂಡಲೇ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

  • ಮಾಜಿ ಸೈನಿಕನಿಗೆ ಭೂಮಿ ನೀಡದ ಡಿಸಿ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲು

    ಮಾಜಿ ಸೈನಿಕನಿಗೆ ಭೂಮಿ ನೀಡದ ಡಿಸಿ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲು

    ರಾಯಚೂರು: ಜಿಲ್ಲೆಯ ಮಾಜಿ ಸೈನಿಕರೊಬ್ಬರಿಗೆ ಭೂಮಿ ನೀಡಬೇಕೆಂದು ಕಲಬುರಗಿ ಉಚ್ಚನ್ಯಾಯಾಲಯ ಆದೇಶ ನೀಡಿದ್ದರೂ, ನಿರ್ಲಕ್ಷ್ಯ ತೋರಿದ ಜಿಲ್ಲಾಧಿಕಾರಿ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಾಗಿದೆ.

    ಮಾಜಿ ಸೈನಿಕ ಪೌಲ್ ಮಿತ್ರ ಅವರಿಗೆ ಭೂಮಿ ನೀಡುವಂತೆ ಕೋರ್ಟ್ ಜಿಲ್ಲಾಧಿಕಾರಿ ಬಗಾದಿ ಗೌತಮ್‍ಗೆ ಆದೇಶ ನೀಡಿತ್ತು. ಆದರೆ ಜಿಲ್ಲೆಯಲ್ಲಿ ಜಮೀನಿನ ಕೊರತೆಯಿದ್ದು, ಪೌಲ್ ಮಿತ್ರ ಅವರಿಗೆ ಭೂಮಿ ನೀಡಲು ಸಾಧ್ಯವಿಲ್ಲ ಅಂತಾ ಬಗಾದಿ ಗೌತಮ್ ಹೇಳಿ, ನ್ಯಾಯಾಲಯದ ಆದೇಶವನ್ನ ಉಲ್ಲಂಘಿಸಿದ್ದರು.

    1962 ರಲ್ಲೇ ಭಾರತೀಯ ಸೈನ್ಯದಿಂದ ಪೌಲ್ ಮಿತ್ರ (93) ನಿವೃತ್ತಿಯಾಗಿದ್ದರು. ಸುಮಾರು ವರ್ಷಗಳಿಂದ ಭೂಮಿಗಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡಿ ಈಗ ನ್ಯಾಯಾಲಯದ ಮೆಟ್ಟಿಲೇರಿದ್ದರು.

    ಜಿಲ್ಲಾಧಿಕಾರಿ ವಿರುದ್ಧ ನ್ಯಾಯಾಂಗ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, ಆಗಸ್ಟ್ 6 ರಂದು ವಿಚಾರಣೆಗೆ ಹಾಜರಾಗುವಂತೆ ಬಗಾದಿ ಗೌತಮ್ ಅವರಿಗೆ ಉಚ್ಚನ್ಯಾಯಾಲಯ ದ್ವಿಸದಸ್ಯ ಪೀಠ ತಾಕೀತು ಮಾಡಿದೆ.

  • ಪಬ್ಲಿಕ್ ಹೀರೋ ಆಗಿದ್ದ ಅನಿರುದ್ಧ್ ಶ್ರವಣ್ ಚಿಕ್ಕಬಳ್ಳಾಪುರದ ಹೊಸ ಜಿಲ್ಲಾಧಿಕಾರಿ

    ಪಬ್ಲಿಕ್ ಹೀರೋ ಆಗಿದ್ದ ಅನಿರುದ್ಧ್ ಶ್ರವಣ್ ಚಿಕ್ಕಬಳ್ಳಾಪುರದ ಹೊಸ ಜಿಲ್ಲಾಧಿಕಾರಿ

    ಚಿಕ್ಕಬಳ್ಳಾಪುರ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅನಿರುದ್ಧ್ ಶ್ರವಣ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ.

    ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅನಿರುದ್ಧ್ ಶ್ರವಣ್ ಅವರು, ಜಿಲ್ಲೆಯ ಸಮಸ್ತ ಅಭಿವೃದ್ಧಿ, ಹಾಗೂ ಪಾರದರ್ಶಕ ಆಡಳಿತ ನಡೆಸಲು ಎಲ್ಲಾ ಕಾನೂನಾತ್ಮಕ ಕ್ರಮಗಳನ್ನ ಕೈಗೊಳ್ಳುವುದಾಗಿ ಭರವಸೆ ನೀಡಿದರು.

    ಇದೇ ವೇಳೆ ಜಿಲ್ಲೆಯ ಯಾವುದೇ ಅಭಿವೃದ್ಧಿ ಕಾರ್ಯಗಳ ಕುರಿತು ಸಾರ್ವಜನಿಕರು ನೇರ ಮಾಹಿತಿ ಪಡೆಯಬಹುದು. ಈ ವಿಚಾರದಲ್ಲಿ ಮಾಧ್ಯಮಗಳಿಗೂ ಹೆಚ್ಚಿನ ಜವಾಬ್ದಾರಿ ಇದೆ. ತಮ್ಮ ಕಾರ್ಯಕ್ಕೆ ಮಾಧ್ಯಮಗಳು ಸಹ ಸಹಕಾರ ನೀಡಬೇಕು. ಸರ್ಕಾರ ಕೈಗೊಳ್ಳುವ ಎಲ್ಲಾ ಯೋಜನೆಗಳು ಜನರಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತದೆ. ಜಿಲ್ಲೆಯಲ್ಲಿ 2 ವರ್ಷ ಸೇವೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ಪ್ರಮುಖ ಸಮಸ್ಯೆಗಳ ಪರಿಹಾರ ಕೈಗೊಳ್ಳುವ ಕಾರ್ಯ ಮಾಡಲಾಗುವುದು ಎಂದರು. ಇದೇ ವೇಳೆ ಜಿಲ್ಲೆಯ ಗಂಭೀರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

    ಈ ಹಿಂದೆ ಕಲಬುರಗಿ ಜಿಲ್ಲಾಪಂಚಾಯತ್ ಸಿಇಓ ಆಗಿ 2 ವರ್ಷ ಕಾರ್ಯನಿರ್ವಹಿದ್ದ ಅನಿರುದ್ಧ್ ಶ್ರವಣ್ ಅವರು ಉದ್ಯೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದರು. ಅಲ್ಲದೇ ಪಬ್ಲಿಕ್ ಟಿವಿಯ ಪಬ್ಲಿಕ್ ಹೀರೋ ಖ್ಯಾತಿಗೆ ಭಾಜನರಾಗಿದ್ದರು. ಬಳಿಕ ಅವರಿಗೆ ಜಿಲ್ಲಾಧಿಕಾರಿಯಾಗಿ ಬಡ್ತಿ ನೀಡಲಾಗಿದೆ.

    ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿದ್ದ ದೀಪ್ತಿ ಅದಿತ್ಯಾ ಕಾನಡೆ ಅವರು ದೀರ್ಘಾವಧಿ ರಜೆ ಪಡೆದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಅನಿರುದ್ಧ್ ಶ್ರವಣ್ ರನ್ನ ಸರ್ಕಾರ ನೇಮಕ ಮಾಡಿದೆ.

     

  • ಕೊಪ್ಪಳದ ಅಪರ ಜಿಲ್ಲಾಧಿಕಾರಿ ನಾಪತ್ತೆ!

    ಕೊಪ್ಪಳದ ಅಪರ ಜಿಲ್ಲಾಧಿಕಾರಿ ನಾಪತ್ತೆ!

    ಕೊಪ್ಪಳ: ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಮೇಲೆ ಹಲ್ಲೆ ಪ್ರಕರಣದಿಂದಾಗಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳು ನಾಪತ್ತೆಯಾಗಿದ್ದಾರೆ.

    ಅಪರ ಜಿಲ್ಲಾಧಿಕಾರಿ ರುದ್ರೇಶ್ ಘಾಳಿ ಕುಟುಂಬದವರು ಇದೇ ತಿಂಗಳು 3 ರಂದು ಗಣಿ ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ನಡೆದ ದಿನದಿಂದ ಅಪರ ಜಿಲ್ಲಾಧಿಕಾರಿಗಳು ಕಚೇರಿಯತ್ತ ಸುಳಿಯದೇ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

    ಕಳೆದ 20 ದಿನಗಳಿಂದ ರುದ್ರೇಶ್ ಘಾಳಿಯು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಕಚೇರಿಗೆ ಬಾರದೇ ಇರುವುದರಿಂದ ಅವರ ಕೊಠಡಿಗೆ ಬೀಗ ಹಾಕಲಾಗಿದೆ. ಇನ್ನು ರುದ್ರೇಶ್ ಘಾಳಿಯವರು ದೀರ್ಘರಜೆಯ ಮೇಲೆ ತೆರಳಿದ್ದಾರೆ ಎನ್ನಲಾಗುತ್ತಿದೆ. ಆದರೆ ಕೆಲವು ಮೂಲಗಳ ಪ್ರಕಾರ ರುದ್ರೇಶ್ ಘಾಳಿಯವರು ಕೊಪ್ಪಳದಿಂದ ಬೇರೆ ಕಡೆಗೆ ವರ್ಗಾವಣೆಯಾಗಲು ಬೆಂಗಳೂರಿನಲ್ಲೇ ಬೀಡುಬಿಟ್ಟಿದಾರೆಂಬ ಮಾತುಗಳು ಕೇಳಿಬಂದಿವೆ.

  • ಕರ್ತವ್ಯದ ಸಮಯ ಮರೆತ ವೈದ್ಯರಿಗೆ ನೋಟಿಸ್ ಜಾರಿ

    ಕರ್ತವ್ಯದ ಸಮಯ ಮರೆತ ವೈದ್ಯರಿಗೆ ನೋಟಿಸ್ ಜಾರಿ

    ಚಿತ್ರದುರ್ಗ: ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ವೈದ್ಯರಿಗೆ ಜಿಲ್ಲಾಧಿಕಾರಿಯೊಬ್ಬರು ನೋಟಿಸ್ ಜಾರಿಗೊಳಿಸಿದ ಘಟನೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

    ಜಿಲ್ಲಾ ವೈದ್ಯಾಧಿಕಾರಿ ಜಯಪ್ರಕಾಶ್, ಡಾ.ರವೀಂದ್ರ, ಡಾ.ಬಸವರಾಜ್, ಡಾ.ಮೋಹನ್, ಡಾ.ವೆಂಕಟೇಶ್, ಡಾ.ಸತೀಶ್ ಹಾಗೂ ಡಾ.ಆನಂದಪ್ರಕಾಶ್ ವಿರುದ್ಧ ಜಿಲ್ಲಾಧಿಕಾರಿ ವಿ.ವಿ.ಜೋತ್ನ್ನಾ ನೋಟಿಸ್ ನೀಡಿದ್ದಾರೆ.

    ಇಂದು ಬೆಳಗ್ಗೆ ನಗರದ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ, ಸುಮಾರು 10.30 ಗಂಟೆಯಾದರೂ ಆಸ್ಪತ್ರೆಗೆ ಹಾಜರಾಗದ 7 ವೈದ್ಯರ ವಿರುದ್ಧ ಗರಂ ಆಗಿದ್ದರು. ಅಷ್ಟೇ ಅಲ್ಲದೆ ಅವರಿಗೆ ನೋಟಿಸ್ ನೀಡಿದ್ದು, ಸಂಜೆಯ ಒಳಗಾಗಿ ನೋಟಿಸ್‍ಗೆ ಉತ್ತರ ನೀಡುವಂತೆ ಸೂಚಿಸಿದ್ದಾರೆ.

  • ಮಹಿಳಾ ಅಧಿಕಾರಿ ಮೇಲೆ ಅಪರ ಜಿಲ್ಲಾಧಿಕಾರಿ ಪತ್ನಿ ಮತ್ತು ಕುಟುಂಬಸ್ಥರಿಂದ ಮಾರಣಾಂತಿಕ ಹಲ್ಲೆ!

    ಮಹಿಳಾ ಅಧಿಕಾರಿ ಮೇಲೆ ಅಪರ ಜಿಲ್ಲಾಧಿಕಾರಿ ಪತ್ನಿ ಮತ್ತು ಕುಟುಂಬಸ್ಥರಿಂದ ಮಾರಣಾಂತಿಕ ಹಲ್ಲೆ!

    ಕೊಪ್ಪಳ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಮೇಲೆ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಪತ್ನಿ ಮತ್ತು ಕುಟುಂಬಸ್ಥರು ಸೇರಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.

    ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಕೃಷ್ಣವೇಣಿ ನಿನ್ನೆ ಕಚೇರಿ ಕೆಲಸದ ನಿಮಿತ್ತ ಎಡಿಸಿ ರುದ್ರೇಶ ಘಾಳಿ ಮನೆಗೆ ಹೋಗಿದ್ದರು. ಏಕಾಏಕಿ ರುದ್ರೇಶ ಘಾಳಿ ಪತ್ನಿ ಮತ್ತು ಅವರ ಜೊತೆಗಿದ್ದ 20 ಕ್ಕೂ ಹೆಚ್ಚು ಜನ ಸೇರಿಕೊಂಡು ನನ್ನ ಮೇಲೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ ಎಂದು ಕೃಷ್ಣವೇಣಿ ಆರೋಪಿಸಿದ್ದಾರೆ.

    ಆ ಸಂದರ್ಭದಲ್ಲಿ ಯಾರೂ ಕೂಡ ಕೃಷ್ಣವೇಣಿಯವರ ಸಹಾಯಕ್ಕೆ ಬಂದಿಲ್ಲ. ನಂತರ ಅವರ ಕಾರ್ ಡ್ರೈವರ್ ತಮ್ಮ ಗೆಳೆಯರಿಗೆ ಫೋನ್ ಮಾಡಿ ಕರೆಸಿದ್ದಾನೆ. ಹಲ್ಲೆಗೆ ಒಳಗಾದ ಅಧಿಕಾರಿ ಕೃಷ್ಣವೇಣಿಯವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾನೆ.

    ಈ ಘಟನೆ ನಡೆಯುತ್ತಿದಂತೆ ಅಪರ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸರ್ಕಾರಿ ಅಧಿಕಾರಿಯ ಮೇಲೆ ಈ ರೀತಿ ಹಲ್ಲೆ ನಡೆದರೂ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ.

  • “ಬಾರ್ ಹಠಾವ್, ಮಠ ಬಚಾವ್”- ತೋಂಟದಾರ್ಯ ಶ್ರೀ ಗಳಿಂದ ಜಾಥಾ

    “ಬಾರ್ ಹಠಾವ್, ಮಠ ಬಚಾವ್”- ತೋಂಟದಾರ್ಯ ಶ್ರೀ ಗಳಿಂದ ಜಾಥಾ

    ಗದಗ : ಧಾರ್ಮಿಕ ಕೇಂದ್ರಗಳ ಸುತ್ತಮುತ್ತಲಿನ ಬಾರ್ ಮತ್ತು ರೆಸ್ಟೋರೆಂಟ್‍ ಗಳನ್ನ ತೆರವುಗೊಳಿಸುವಂತೆ ತೋಂಟದಾರ್ಯ ಶ್ರೀಗಳ ನೇತೃತ್ವದಲ್ಲಿ ಜಾಥಾ ನಡೆಸಲಾಗಿದೆ.

    ಮಠದ ಆವರಣದಿಂದ ಆರಂಭವಾದ ಜಾತ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆಯಿತು. ಜಾಥಾ ವೇಳೆ ಮಾತನಾಡಿದ ಶ್ರೀಗಳು ಮಠ ಹಾಗೂ ಧಾರ್ಮಿಕ ಕೇಂದ್ರಗಳ ಸುತ್ತ-ಮುತ್ತ ಬಾರ್ ಮತ್ತು ರೆಸ್ಟೋರೆಂಟ್‍ ಗಳನ್ನ ತೆರವುಗೊಳಿಸುವಂತೆ ಆಗ್ರಹಿಸಿದರು.

    ತೋಂಟದಾರ್ಯ ಮಠದ ಡಾ. ಸಿದ್ದಲಿಂಗ ಮಹಾಸ್ವಾಮಿಗಳ ಜಾಥಾ ನೇತೃತ್ವ ವಹಿಸಿದ್ದರು. ಈ ವೇಳೆ “ಬಾರ್ ಹಠಾವ್, ಮಠ ಬಚಾವ್” ಎಂಬ ಪ್ರತಿಭಟನೆ ಘೋಷಣೆಯನ್ನು ಮಾಡಲಾಯಿತು. ಜಾಥಾ ಮೆರವಣಿಗೆಯಲ್ಲಿ ನಗರದ ತಿರಂಗಾ ಯುವಮೋರ್ಚಾ ಘಟಕ ಕಾರ್ಯಕರ್ತರು ಸೇರಿದಂತೆ ಹಲವು ಭಾಗವಹಿಸಿದ್ದರು.

    ತೋಂಟದಾರ್ಯ ಮಠದ ಸುತ್ತ-ಮುತ್ತ ಸುಮಾರು 6 ಮದ್ಯದ ಅಂಗಡಿಗಳಿದ್ದು ಮಠಕ್ಕೆ ಬರುವ ಭಕ್ತರಿಗೆ, ಮಹಿಳೆಯರಿಗೆ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಪತ್ರಿಭಟನಾಕಾರರು, ಮದ್ಯವೆಸನಿಗಳ ವರ್ತನೆಗೆ ಬೇಸತ್ತು ಸ್ವಾಮಿಜಿಗಳು, ಸಂಘಟಿಕರು, ಸಾರ್ವಜನಿಕರರು, ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

    ಮಠದ ಸುತ್ತಲಿನ ಸುಮಾರು 200 ಮೀಟರ್ ಒಳಗಿರುವ ಮದ್ಯದ ಅಂಗಡಿಗಳನ್ನ ಸ್ಥಳಾಂತರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮದ್ಯ ವ್ಯಾಪಾರಿಗಳು ಹಾಗೂ ಅಧಿಕಾರಿಗಳ ಒಳ ಒಪ್ಪಂದಿಂದ ಬಾರ್ ತೆರವಿಗೆ ಮುಂದಾಗುತ್ತಿಲ್ಲ ಎಂಬ ಗಂಭೀರ ಆರೋಪವನ್ನು ತೋಂಟದ ಶ್ರೀಗಳು ಮಾಡಿದ್ದಾರೆ.

  • ಮತ್ತೆ ಕರ್ತವ್ಯಕ್ಕೆ ಹಾಜರ್ – ತಮ್ಮ ಜಯದ ಬಗ್ಗೆ ರೋಹಿಣಿ ಸಿಂಧೂರಿ ಮಾತು

    ಮತ್ತೆ ಕರ್ತವ್ಯಕ್ಕೆ ಹಾಜರ್ – ತಮ್ಮ ಜಯದ ಬಗ್ಗೆ ರೋಹಿಣಿ ಸಿಂಧೂರಿ ಮಾತು

    ಹಾಸನ: ಯಾವುದೇ ಸರ್ಕಾರಗಳಿಗೆ 5 ವರ್ಷ ಕಾಲಾವಕಾಶ ಇರುವಂತೆ ಐಎಎಸ್ ಅಧಿಕಾರಿಗಳಿಗೂ ಕನಿಷ್ಟ ಅವಧಿವರೆಗೆ ಒಂದು ಕಡೆ ಕೆಲಸ ಮಾಡಲು ಬಿಡಬೇಕು ಎಂಬ ಸುಪ್ರೀಂಕೋರ್ಟ್ ನಿಯಮಾವಳಿ ಇದೆ. ಆ ಹಿನ್ನೆಲೆಯಲ್ಲಿ ನಾನೂ ಕಾನೂನು ಹೋರಾಟ ಮಾಡಿದೆ. ಇದರಲ್ಲಿ ಜಯ ಸಿಕ್ಕಿರುವುದು ಖುಷಿಯ ವಿಷಯ ಎಂದು ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.

    ಮೂರೂವರೆ ತಿಂಗಳ ಬಳಿಕ ಮತ್ತೆ ಹಾಸನ ಡಿಸಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು, ಹೈಕೋರ್ಟ್ ತೀರ್ಪು ಒಳ್ಳೆಯ ಬೆಳವಣಿಗೆ. ಜಿಲ್ಲಾಮಟ್ಟದ ಅಧಿಕಾರಿಗಳನ್ನು ಪದೇ ಪದೇ ವರ್ಗ ಮಾಡುವುದರಿಂದ ಒಳ್ಳೆ ಕೆಲಸ ಮಾಡಲು ಕಷ್ಟವಾಗಲಿದೆ. ನಾನು ಹಾಸನ ಜಿಲ್ಲೆಗೆ ಬಂದಾಗ ಏನೂ ಗೊತ್ತಿರಲಿಲ್ಲ. ಕಳೆದ 6 ತಿಂಗಳಲ್ಲಿ ಜಿಲ್ಲೆಯ ಆಗುಹೋಗು ತಿಳಿದುಕೊಂಡಿದ್ದೇನೆ. ಏನೇನು ಕಾರ್ಯಕ್ರಮ ಮಾಡಬಹುದು ಎಂಬ ದೊಡ್ಡ ಪಟ್ಟಿಯೇ ಇದೆ. ಹೀಗಿದ್ದಾಗ ವರ್ಗ ಮಾಡಿದ್ರೆ ಸರಿಕಾಣದು ಎಂದರು. ಇದನ್ನೂ ಓದಿ: ರೋಹಿಣಿ ಸಿಂಧೂರಿ ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ವರ್ಗ

    ನಾನು ಮಂಡ್ಯದಲ್ಲಿ ಸಿಇಓ ಆಗಿದ್ದಾಗ ಕೇವಲ ಮೂರು ತಿಂಗಳು ಆ ಹುದ್ದೆಯಲ್ಲೇ ಉಳಿಸಿದ್ದರೆ ಬಯಲು ಮುಕ್ತ ಶೌಚಾಲಯ ಯೋಜನೆ ಮುಗಿಸುತ್ತಿದ್ದೆನು. ಅಂದು ವರ್ಗ ಮಾಡಿದಾಗ ಬೇಸರವಾಗಿತ್ತು. ಸುಪ್ರೀಂ ನಿಯಮಾವಳಿ ಇದ್ದರೂ, ಏಕೆ ಪಾಲನೆಮಾಡುತ್ತಿಲ್ಲ ಎಂದು ಈಗ ಕಾನೂನು ಹೋರಾಟ ಮಾಡಬೇಕಾಯಿತು ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡರು. ತಮ್ಮನ್ನು ಮತ್ತೆ ಡಿಸಿಯಾಗಿ ಮುಂದುವರಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

    ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇರಬಹುದು. ಅದು ರಾಜಕೀಯ. ನಾನು ಹಾಸನ ಡಿಸಿಯಷ್ಟೆ. ನನ್ನ ಅಧಿಕಾರ ಮಿತಿಯಲ್ಲಿ ಏನೆಲ್ಲಾ ಮಾಡಬಹುದೋ ಅದನ್ನು ಉತ್ತಮವಾಗಿ ಮಾಡಲು ಪ್ರಯತ್ನಿಸುತ್ತೇನೆ. ನನ್ನ ಕಾರ್ಯಶೈಲಿ ಹಿಂದಿನಂತೆ ಇರಲಿದೆ. ಏಕಾಏಕಿ ಬದಲಾವಣೆ ಮಾಡಿಕೊಳ್ಳಲು ಆಗುವುದಿಲ್ಲ. ಯೋಜಿತ ಕೆಲಸ ಕಾರ್ಯಗಳನ್ನು ಯುದ್ಧೋಪಾದಿಯಲ್ಲಿ ಪೂರ್ಣಗೊಳಿಸಲು ಯತ್ನಿಸುವೆ ಎಂದರು.