Tag: Deputy director

  • ತೀರ್ಥಹಳ್ಳಿಯಲ್ಲಿ ಪ್ರತಿಮಾ ಅಂತ್ಯಕ್ರಿಯೆ – ಪುತ್ರನಿಂದ ತಾಯಿಯ ಚಿತೆಗೆ ಅಗ್ನಿಸ್ಪರ್ಶ

    ತೀರ್ಥಹಳ್ಳಿಯಲ್ಲಿ ಪ್ರತಿಮಾ ಅಂತ್ಯಕ್ರಿಯೆ – ಪುತ್ರನಿಂದ ತಾಯಿಯ ಚಿತೆಗೆ ಅಗ್ನಿಸ್ಪರ್ಶ

    ಶಿವಮೊಗ್ಗ: ಬೆಂಗಳೂರಿನಲ್ಲಿ ಹತ್ಯೆಯಾಗಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ (Department Of Mines And Geology) ಉಪ ನಿರ್ದೇಶಕಿ (Deputy Director) ಪ್ರತಿಮಾ (Prathima) ಅಂತ್ಯಕ್ರಿಯೆ (Funeral) ಇಂದು ಶಿವಮೊಗ್ಗ (Shivamogga) ಜಿಲ್ಲೆ ತೀರ್ಥಹಳ್ಳಿಯ (Thirthahalli) ಹಿಂದೂ ರುದ್ರಭೂಮಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಕುಟುಂಬಸ್ಥರು ನೆರವೇರಿಸಿದರು.

    ಪ್ರತಿಮಾ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ. ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯವರಾದ ಪ್ರತಿಮಾ ಉದ್ಯೋಗದ ನಿಮಿತ್ತ ಬೆಂಗಳೂರಿನ ಅಪಾರ್ಟ್ಮೆಂಟ್‌ವೊಂದರಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಪತಿ ಸತ್ಯನಾರಾಯಣ ಕೃಷಿಕರಾಗಿದ್ದ ಕಾರಣ ಪತಿ ಹಾಗು ಪುತ್ರ ಪಾರ್ಥ ತೀರ್ಥಹಳ್ಳಿಯಲ್ಲಿ ವಾಸವಾಗಿದ್ದರು. ಪ್ರತಿಮಾ ರಜಾ ದಿನಗಳಲ್ಲಿ ಆಗಾಗ ತೀರ್ಥಹಳ್ಳಿಗೆ ಬಂದು ಹೋಗುತ್ತಿದ್ದರು. ಇದನ್ನೂ ಓದಿ:‌ 2013 ರಿಂದ ದಲಿತ ಸಿಎಂ ಓಡ್ತಿದೆ, ಪಿಕ್ಚರ್‌ ರಿಲೀಸ್ ಆಗ್ತಿಲ್ಲ: ಸತೀಶ್ ಜಾರಕಿಹೊಳಿ

    ಸಣ್ಣ ವಯಸ್ಸಿನಲ್ಲೇ ಉನ್ನತ ಹುದ್ದೆಯಲ್ಲಿದ್ದ ಪ್ರತಿಮಾ ಇಲಾಖೆಯಲ್ಲಿ ಉತ್ತಮ ಹೆಸರು ಗಳಿಸಿದ್ದರು. ಪ್ರಾಮಾಣಿಕ ಅಧಿಕಾರಿ ಎನಿಸಿಕೊಂಡಿದ್ದರು. ಆದರೆ ಇಂತಹ ಅಧಿಕಾರಿ ಪ್ರತಿಮಾ ಅವರನ್ನು ಶನಿವಾರ ರಾತ್ರಿ ಅವರ ಅಪಾರ್ಟ್ಮೆಂಟ್‌ನಲ್ಲೇ ಕೊಲೆ ಮಾಡಿದ್ದಾರೆ. ಕೊಲೆಯಾಗಿದ್ದ ಪ್ರತಿಮಾ ಅವರ ಮರಣೋತ್ತರ ಶವ ಪರೀಕ್ಷೆ ನಂತರ ಕುಟುಂಬಸ್ಥರು ಪ್ರತಿಮಾ ಮೃತದೇಹವನ್ನು ಭಾನುವಾರ ರಾತ್ರಿ ಬೆಂಗಳೂರಿನಿಂದ ತೀರ್ಥಹಳ್ಳಿಗೆ ಕರೆತಂದಿದ್ದರು. ತೀರ್ಥಹಳ್ಳಿಯ ಸತ್ಯನಾರಾಯಣ ಅವರ ಮೂಲ ಮನೆಯಲ್ಲಿ ರಾತ್ರಿಯಿಂದ ಮುಂಜಾನೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಕಳೆದ ವಾರವಷ್ಟೇ ಗೃಹ ಪ್ರವೇಶವಾಗಿದ್ದ ನೂತನ ಮನೆಗೆ ಮುಂಜಾನೆ 10 ಗಂಟೆಗೆ ಹಳೆ ಮನೆಯಿಂದ ಹೊಸ ಮನೆಗೆ ಮೃತದೇಹ ಕೊಂಡೊಯ್ಯಲಾಯಿತು. ಅಲ್ಲಿ 10 ನಿಮಿಷಗಳ ಕಾಲ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಕೊಡಗಿನ ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ

    ನಂತರ ಪ್ರತಿಮಾ ಪಾರ್ಥಿವ ಶರೀರವನ್ನು ತುಂಗಾ ನದಿ ದಡದಲ್ಲಿರುವ ಹಿಂದೂ ರುದ್ರ ಭೂಮಿಗೆ ಕೊಂಡೊಯ್ಯಲಾಯಿತು. ಹಿಂದೂ ರುದ್ರಭೂಮಿಯಲ್ಲಿ ಪ್ರತಿಮಾ ಅವರಿಗೆ ಕುಟುಂಬಸ್ಥರು ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಿದರು. ತಾಯಿಯ ಚಿತೆಗೆ ಪುತ್ರ ಪಾರ್ಥ ಅಗ್ನಿ ಸ್ಪರ್ಶ ನೆರವೇರಿಸಿದ್ದಾನೆ. ಸದ್ಯದ ಪರಿಸ್ಥಿತಿಯಲ್ಲಿ ಪ್ರಾಮಾಣಿಕ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವುದು ಕಷ್ಟವಾಗಿದೆ. ಸರ್ಕಾರ ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು. ಇಂತಹ ಘಟನೆ ಮರುಕಳಿಸದಂತೆ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಮಾ ಕುಟುಂಬಸ್ಥರು ಹಾಗೂ ಸ್ಥಳೀಯರ ಆಗ್ರಹವಾಗಿದೆ. ಇದನ್ನೂ ಓದಿ: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಒಲವು ಕಂಡು ಮೋದಿಗೆ ನೋವಾಗಿದೆ: ಚಲುವರಾಯ ಸ್ವಾಮಿ

    ಒಟ್ಟಾರೆ ಬಾಳಿ ಬದುಕಬೇಕಾದ ವಯಸ್ಸಿನಲ್ಲಿ, ಇನ್ನು ಹಂತ ಹಂತವಾಗಿ ಉನ್ನತ ಹುದ್ದೆ ಅಲಂಕರಿಸುವ ಕನಸು ಕಂಡಿದ್ದ ಪ್ರತಿಮಾ ಕನಸು ಕಮರಿ ಹೋಗಿದೆ. ಇದನ್ನೂ ಓದಿ: ಉಚಿತ ಭಾಗ್ಯದಿಂದ ಪರಿಶಿಷ್ಟರ ಅಂತ್ಯಕ್ರಿಯೆಗೂ ಸರ್ಕಾರದ ಬಳಿ ದುಡ್ಡಿಲ್ಲ: ಬಿಎಸ್‌ವೈ

  • ಅಕ್ರಮ ಗಣಿಗಾರಿಕೆ ತಡೆದಿದ್ದೇ ಪ್ರತಿಮಾ ಕೊಲೆಗೆ ಕಾರಣವಾಯ್ತಾ? – ಹಲವು ಆಯಾಮಗಳಲ್ಲಿ ಪೊಲೀಸ್‌ ತನಿಖೆ

    ಅಕ್ರಮ ಗಣಿಗಾರಿಕೆ ತಡೆದಿದ್ದೇ ಪ್ರತಿಮಾ ಕೊಲೆಗೆ ಕಾರಣವಾಯ್ತಾ? – ಹಲವು ಆಯಾಮಗಳಲ್ಲಿ ಪೊಲೀಸ್‌ ತನಿಖೆ

    ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ (Pratima) ಅವರ ಕೊಲೆಯ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿದ್ದು, ಪೊಲೀಸರಿಂದ ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

    ಪ್ರತಿಮಾ ಈ ಹಿಂದೆ ಕಲ್ಲು ಕ್ವಾರಿಗಳ ಬಳಿ ಹೋಗಿ ಎಚ್ಚರಿಕೆ ನೀಡಿದ್ದರಂತೆ. ಅಲ್ಲದೇ ಅಕ್ರಮ ಗಣಿಗಾರಿಕೆ (Mining) ನಡೆಸುವ ಜಾಗದ ಮೇಲೆ ರೇಡ್‌ ಮಾಡುತ್ತಿದ್ದ ಪ್ರತಿಮಾ, ಸಹಜವಾಗಿಯೇ ಕೆಲವರೊಂದಿಗೆ ವಿರೋಧ ಸಹ ಕಟ್ಟಿಕೊಂಡಿದ್ದರಂತೆ. ಹಾಗಾಗಿ ವೃತ್ತಿಯಲ್ಲಿ ಯಾರಾದ್ರೂ ವೈಷಮ್ಯ ಹೊಂದಿದ್ರಾ? ಅಥವಾ ವೈಯಕ್ತಿಕ ಕಾರಣಗಳಿಗಾಗಿ ಕೊಲೆ ಮಾಡಿದ್ರಾ ಅನ್ನೋ ಆಯಾಮಗಳಲ್ಲೂ ಪೊಲೀಸರು ತನಿಖೆ (Police Investigation) ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    ಇದರಿಂದ ಅಕ್ರಮ ಗಣಿಗಾರಿಕೆ ತಡೆದಿದ್ದೇ ಕೊಲೆಗೆ ಕಾರಣನಾ? ಗಣಿಗಾರಿಕೆ ಪರವಾನಗಿ ನವೀಕರಣ ವಿಚಾರಕ್ಕೆ ಎಲ್ಲಿಯಾದ್ರೂ ಗಲಾಟೆಯಾಗಿತ್ತಾ? ಗಣಿಗಾರಿಕೆ ಪರವಾನಗಿ ಕೊಡುವ ವಿಚಾರದಲ್ಲಿ ವೈಷಮ್ಯ ಸಾಧಿಸಿ ಕೊಲೆ ಮಾಡಿದ್ರಾ? ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯಾರಾದರೂ ಕೊಲೆ ಮಾಡಿದ್ರಾ? ಅನ್ನೋ ಆಯಾಮಗಳಲ್ಲೂ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಉಪನಿರ್ದೇಶಕಿ ಹತ್ಯೆ ಪ್ರಕರಣ- ವಿಚ್ಛೇದನ ಪಡೆದಿದ್ರಿಂದ ಬೆಂಗಳೂರಲ್ಲಿ ಒಂಟಿಯಾಗಿದ್ದರು ಪ್ರತಿಮಾ

    ಪ್ರತಿಮಾ ಕರ್ತವ್ಯಕ್ಕೆ ಸೇರಿದ ನಂತರ ರಾಮನಗರದಲ್ಲಿ ಹೆಚ್ಚು ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಬೆಂಗಳೂರು ನಗರ ಜಿಲ್ಲೆಗೆ ವರ್ಗಾವಣೆಯಾಗಿದ್ದರು. ಬೇರೆ ಇಲಾಖೆ ಅಧಿಕಾರಿಗಳೊಂದಿಗೂ ಉತ್ತಮ ಒಡನಾಟ ಹೊಂದಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಸರ್ಕಾರದ ಕೆಲಸ ಪ್ರಾಮಾಣಿಕವಾಗಿ ಮಾಡಿದ್ದೇ ತಪ್ಪಾ?: ಕೊಲೆಯಾದ ಪ್ರತಿಮಾ ಸಹೋದರನ ಗೋಳಾಟ

    ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ (Deputy Director) ಪ್ರತಿಮಾ ತೀರ್ಥಹಳ್ಳಿ ಮೂಲದವರಾಗಿದ್ದು, ಸುಬ್ರಹ್ಮಣ್ಯಪುರದ (Subrahmanyapura) ದೊಡ್ಡಕಲ್ಲಸಂದ್ರ ಬಳಿಕ ಕುವೆಂಪು ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶನಿವಾರ (ನ.4) ರಾತ್ರಿ ಅವರನ್ನು ತಮ್ಮ ಮನೆಯಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಚಾಕು ಇರಿದು ಉಪನಿರ್ದೇಶಕಿಯ ಬರ್ಬರ ಹತ್ಯೆ

    ಕಳೆದ 8 ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪೂರ್ಣಿಮಾ ಶನಿವಾರ ರಾತ್ರಿ ಮನೆಯಲ್ಲಿ ಒಬ್ಬರೇ ಇದ್ದರು. ರಾತ್ರಿ 8 ಗಂಟೆ ವೇಳೆಗೆ ತಮ್ಮ ಡ್ರೈವರ್‌ ಕಚೇರಿಯಿಂದ ಮನೆಗೆ ಬಿಟ್ಟು ಬಂದಿದ್ದರು. ಭಾನುವಾರ (ನ.5) ಬೆಳಗ್ಗೆ 8 ಗಂಟೆಗೆ ಪ್ರತಿಮಾ ಸಹೋದರ ಕರೆ ಮಾಡಿದರೂ ಸ್ವೀಕರಿಸಿರಲಿಲ್ಲ. ಬಳಿಕ ಫ್ಲ್ಯಾಟ್ ಬಳಿ ಹೋಗಿ ನೋಡಿದಾಗ ಕೊಲೆಯಾದ ಘಟನೆ ಬೆಳಕಿಗೆ ಬಂದಿದೆ. ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಉಪನಿರ್ದೇಶಕಿ ಹತ್ಯೆ ಪ್ರಕರಣ- ವಿಚ್ಛೇದನ ಪಡೆದಿದ್ರಿಂದ ಬೆಂಗಳೂರಲ್ಲಿ ಒಂಟಿಯಾಗಿದ್ದರು ಪ್ರತಿಮಾ

    ಉಪನಿರ್ದೇಶಕಿ ಹತ್ಯೆ ಪ್ರಕರಣ- ವಿಚ್ಛೇದನ ಪಡೆದಿದ್ರಿಂದ ಬೆಂಗಳೂರಲ್ಲಿ ಒಂಟಿಯಾಗಿದ್ದರು ಪ್ರತಿಮಾ

    ಶಿವಮೊಗ್ಗ: ಬೆಂಗಳೂರಿನಲ್ಲಿ (Benagluru) ಹತ್ಯೆಯಾಗಿರುವ ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ (Deputy Director) ಪ್ರತಿಮಾ ಅವರು ತಮ್ಮ ಪತಿಯೊಂದಿಗೆ ವಿಚ್ಛೇದನ ಪಡೆದಿದ್ದು, ಈ ಹಿನ್ನೆಲೆ ಬೆಂಗಳೂರಿನಲ್ಲಿ ಒಂಟಿಯಾಗಿ ವಾಸವಿದ್ದರು. ಆದರೆ ಅಧಿಕಾರಿಯ ಹತ್ಯೆಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ.

    ತೀರ್ಥಹಳ್ಳಿ ತಾಲೂಕಿನ ಕೊಂಡ್ಲೂರು ಗ್ರಾಮದ ಸುಬ್ಬಣ್ಣ ಎಂಬವರ ಪುತ್ರಿ ಪ್ರತಿಮಾ, ತೀರ್ಥಹಳ್ಳಿಯಲ್ಲಿ ವ್ಯಾಸಂಗ ನಡೆಸಿದ್ದರು. ಕೆಪಿಎಸ್‌ಸಿ ನಡೆಸಿದ ಪರೀಕ್ಷೆಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ (FDA) ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸೇರ್ಪಡೆಯಾಗಿದ್ದರು. ನಂತರ ಅದೇ ಇಲಾಖೆಯಲ್ಲಿ ಉಪ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

    ಪ್ರತಿಮಾ ತೀರ್ಥಹಳ್ಳಿ ಮೂಲದ ಸತ್ಯನಾರಾಯಣ ಎಂಬುವರ ಜೊತೆ ವಿವಾಹವಾಗಿದ್ದರು. ಈ ದಂಪತಿಗೆ ಓರ್ವ ಪುತ್ರ ಸಹ ಇದ್ದ. ಆರಂಭದಲ್ಲಿ ಅನ್ಯೋನ್ಯವಾಗಿದ್ದ ಸಂಸಾರದಲ್ಲಿ ಬರುಬರುತ್ತಾ ಭಿನ್ನಾಭಿಪ್ರಾಯ ಉಂಟಾಗಿದೆ. ಹೀಗಾಗಿ ಈ ದಂಪತಿ ವಿಚ್ಛೇದನ ಪಡೆದಿತ್ತು. ವಿಚ್ಛೇದನದ ಬಳಿಕ ಪುತ್ರ ಪತಿಯ ಜೊತೆಯಲ್ಲೇ ವಾಸವಾಗಿದ್ದ. ಇದನ್ನೂ ಓದಿ: ಸರ್ಕಾರದ ಕೆಲಸ ಪ್ರಾಮಾಣಿಕವಾಗಿ ಮಾಡಿದ್ದೇ ತಪ್ಪಾ?: ಕೊಲೆಯಾದ ಪ್ರತಿಮಾ ಸಹೋದರನ ಗೋಳಾಟ

    ಗಂಡ-ಹೆಂಡತಿ ವಿಚ್ಛೇದನ ಪಡೆದಿದ್ದರಿಂದ ಪ್ರತಿಮಾ ಬೆಂಗಳೂರಿನಲ್ಲಿ ಒಂಟಿಯಾಗಿ ವಾಸವಾಗಿದ್ದರು. ತೀರ್ಥಹಳ್ಳಿಗೆ ಆಗಾಗ ಭೇಟಿ ನೀಡಿ ಪುತ್ರನನ್ನು ನೋಡಿಕೊಂಡು ಹೋಗುತ್ತಿದ್ದರು. ಅಲ್ಲದೇ ಪ್ರತಿಮಾ ಪತಿ ಸತ್ಯನಾರಾಯಣ ತೀರ್ಥಹಳ್ಳಿಯಲ್ಲಿ ಹೊಸ ಮನೆ ಕಟ್ಟಿಸಿದ್ದು, ನೂತನ ಮನೆಯ ಗೃಹ ಪ್ರವೇಶ ಸಮಾರಂಭ ಕಳೆದ ವಾರ ನಡೆದಿತ್ತು. ಈ ಗೃಹ ಪ್ರವೇಶ ಸಮಾರಂಭದಲ್ಲಿ ಪ್ರತಿಮಾ ಭಾಗವಹಿಸಿದ್ದರು.

    ವಿಚ್ಛೇದನ ಪಡೆದಿದ್ದರೂ ಮಗನ ನೋಡುವ ಸಲುವಾಗಿ ಆಗಾಗೆ ಪತಿಯ ಮನೆ ಬಳಿ ಹೋಗುತ್ತಿದ್ದರು. ಆದರೆ ಶನಿವಾರ ರಾತ್ರಿ ನಡೆದಿರುವ ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಮಾ ಕುಟುಂಬ ಆಗ್ರಹಿಸಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಚಾಕು ಇರಿದು ಉಪನಿರ್ದೇಶಕಿಯ ಬರ್ಬರ ಹತ್ಯೆ

  • ಸರ್ಕಾರದ ಕೆಲಸ ಪ್ರಾಮಾಣಿಕವಾಗಿ ಮಾಡಿದ್ದೇ ತಪ್ಪಾ?: ಕೊಲೆಯಾದ ಪ್ರತಿಮಾ ಸಹೋದರನ ಗೋಳಾಟ

    ಸರ್ಕಾರದ ಕೆಲಸ ಪ್ರಾಮಾಣಿಕವಾಗಿ ಮಾಡಿದ್ದೇ ತಪ್ಪಾ?: ಕೊಲೆಯಾದ ಪ್ರತಿಮಾ ಸಹೋದರನ ಗೋಳಾಟ

    ಬೆಂಗಳೂರು: ನನ್ನ ಸಹೋದರಿಯನ್ನು ಕೆಲಸದ ವಿಚಾರಕ್ಕೆ ಕೊಲೆ ಮಾಡಲಾಗಿದೆ. ಸರ್ಕಾರದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇ ತಪ್ಪಾ? ಎಂದು ಹತ್ಯೆಯಾದ ಉಪ ನಿರ್ದೇಶಕಿ ಪ್ರತಿಮಾ (Prathima) ಅವರ ಸಹೋದರ ಗೋಳಾಡಿದ್ದಾರೆ.

    ಗಣಿ ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ (Deputy Director) ತಿಮಾ ತೀರ್ಥಹಳ್ಳಿ ಮೂಲದವರಾಗಿದ್ದು, ಸುಬ್ರಹ್ಮಣ್ಯಪುರದ (Subrahmanyapur) ದೊಡ್ಡಕಲ್ಲಸಂದ್ರ ಬಳಿಕ ಕುವೆಂಪು ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಳೆದ ರಾತ್ರಿ ಅವರನ್ನು ತಮ್ಮ ಮನೆಯಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

    ಕಳೆದ 8 ವರ್ಷಗಳಿಂದ ಅದೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪೂರ್ಣಿಮಾ ಕಳೆದ ರಾತ್ರಿ ಮನೆತಲ್ಲಿ ಒಬ್ಬರೇ ಇದ್ದರು. ರಾತ್ರಿ 8 ಗಂಟೆ ವೇಳೆಗೆ ಅವರನ್ನು ಡ್ರೈವರ್ ಕಚೇರಿಯಿಂದ ಮನೆಗೆ ಬಿಟ್ಟು ಬಂದಿದ್ದರು. ಇಂದು ಬೆಳಗ್ಗೆ 8 ಗಂಟೆಗೆ ಪ್ರತಿಮಾ ಸಹೋದರ ಕರೆ ಮಾಡಿದರೂ ಅದನ್ನು ಸ್ವೀಕರಿಸಿರಲಿಲ್ಲ. ಬಳಿಕ ಫ್ಲ್ಯಾಟ್ ಬಳಿ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಚಾಕು ಇರಿದು ಉಪನಿರ್ದೇಶಕಿಯ ಬರ್ಬರ ಹತ್ಯೆ

    ಪ್ರತಿಮಾ ಅವರನ್ನು ಕಳೆದ ರಾತ್ರಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಇಂದು ಬೆಳಗ್ಗೆ 8:30ರ ವೇಳಗೆ ಘಟನೆ ಬೆಳಕಿಗೆ ಬಂದಿದೆ. ಇದೀಗ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಿಧಿ ನಿಕ್ಷೇಪ ತೋರಿಸುವುದಾಗಿ 16 ಲಕ್ಷ ರೂ. ನಾಮ – ವಂಚಿತರಿಂದ ಜ್ಯೋತಿಷಿಯ ಕಿಡ್ನಾಪ್

  • ಮತ್ತೆ ಹಳೇ ಪದ್ಧತಿಗೆ ಮರಳಿದ ರೇಷ್ಮೆ ಮಾರುಕಟ್ಟೆ – ರೈತರ ಗೋಳು ಕೇಳೋರು ಯಾರು?

    ಮತ್ತೆ ಹಳೇ ಪದ್ಧತಿಗೆ ಮರಳಿದ ರೇಷ್ಮೆ ಮಾರುಕಟ್ಟೆ – ರೈತರ ಗೋಳು ಕೇಳೋರು ಯಾರು?

    ರಾಮನಗರ: ಆರ್.ಟಿ.ಜಿ.ಎಸ್ (ರಿಯಲ್ ಟೈಮ್ ಗ್ರಾಸ್ ಸೆಟಲ್ಮೆಂಟ್ ) ಮೂಲಕ ರೈತರ ಖಾತೆಗೆ ನೇರವಾಗಿ ಹಣ ಪಾವತಿಸುವ ರಾಜ್ಯದ ಮೊದಲ ಮಾರುಕಟ್ಟೆ ಎಂಬ ಖ್ಯಾತಿಗಳಿಸಿದ್ದ ರಾಮನಗರದ ರೇಷ್ಮೆ ಮಾರುಕಟ್ಟೆ ಇದೀಗ ಆರ್.ಟಿ.ಜಿ.ಎಸ್ ಸ್ಥಗಿತಗೊಳಿಸುವ ಮೂಲಕ ಹಳೆ ಪದ್ಧತಿ ನೇರವಾಗಿ ಹಣವನ್ನ ರೈತರ ಕೈಗೆ ನೀಡುವ ವ್ಯವಸ್ಥೆಗೆ ಜಾರುವ ಮೂಲಕ ರೇಷ್ಮೆ ರೈತರನ್ನ ಸಂಕಷ್ಟಕ್ಕೆ ದೂಡಿದೆ. ಅದು ಕೂಡಾ ಮಾರುಕಟ್ಟೆಯ ಉಪನಿರ್ದೆಶಕ ಆಸ್ಪತ್ರೆಗೆ ದಾಖಲಾಗಿದ್ದಕ್ಕೆ ಇದೀಗ ಹಳೇ ಪದ್ಧತಿಯನ್ನು ಮತ್ತೆ ಆರಂಭಿಸಲಾಗಿದೆ.

    ಏಷ್ಯಾದ ಅತೀ ದೊಡ್ಡ ರೇಷ್ಮೆ ಮಾರುಕಟ್ಟೆ ಎಂಬ ಖ್ಯಾತಿಯನ್ನ ಗಳಿಸಿರುವ ರಾಮನಗರದ ಮಾರುಕಟ್ಟೆ ಇದೀಗ ಪುನಃ ಹಳೆಯ ಕೆಲಸಕ್ಕೆ ಕೈ ಹಾಕಿದ್ದು, ರೇಷ್ಮೆಗೂಡು ಮಾರಾಟ ಮಾಡಿದ ರೈತರಿಗೆ ನೇರವಾಗಿ ಹಣವನ್ನ ನೀಡುವಂತಹ ಕೆಲಸವನ್ನ ಮಾಡ್ತಿದೆ. ಆರ್.ಟಿ.ಜಿ.ಎಸ್ ಸ್ಥಗಿತವಾಗಿರೋದ್ರಿಂದ ರೈತರಿಗೆ ಸಾಕಷ್ಟು ಅನಾನುಕೂಲಗಳು ಎದುರಾಗಿವೆ. ಅದರಲ್ಲೂ ಆರ್.ಟಿ.ಜಿ.ಎಸ್ ಅಳವಡಿಸಿಕೊಂಡಿದ್ದ ವೇಳೆ ಡೀಲರ್ಸ್‍ಗಳು ಹಣವನ್ನು ಮಾರುಕಟ್ಟೆಯಲ್ಲಿ ಕಟ್ಟಿ ನಂತರ ಗೂಡು ಖರೀದಿ ಮಾಡುತ್ತಿದ್ದರು. ಆದ್ರೆ ಇದೀಗ ಸರಿಯಾದ ಸಮಯಕ್ಕೆ ಮಾರುಕಟ್ಟೆಗೆ ಹಣವನ್ನು ಸಹ ಕಟ್ಟುತ್ತಿಲ್ಲ. ಅಲ್ಲದೇ ರೈತರ ರೇಷ್ಮೆಗೂಡನ್ನು ಬಿಡ್ ಮಾಡಿ ನಂತರ ತೂಕವನ್ನೂ ಮಾಡದೇ ದಿನನಿತ್ಯ ರೈತರನ್ನ ಕಾಯಿಸ್ತಿದ್ದಾರೆ. ಗೂಡು ಮಾರಾಟವಾದ ನಂತರವೂ ಹಣವಿಲ್ಲದೇ ರೈತರು ಮಾರುಕಟ್ಟೆಯಲ್ಲಿಯೇ ಅಲೆದಾಡುವಂತಾಗಿದೆ.

    ರೇಷ್ಮೆ ಮಾರುಕಟ್ಟೆಯ ಉಪನಿರ್ದೇಶಕರಾದ ಮುನ್ಷಿ ಬಸಯ್ಯ ಕಳೆದ 15 ದಿನಗಳ ಹಿಂದೆ ರಾಮನಗರದಲ್ಲಿ ಕಚೇರಿ ಕಾರ್ಯ ಮುಗಿಸಿ ಬೆಂಗಳೂರಿನಲ್ಲಿನ ಮನೆಗೆ ತರಳುವ ವೇಳೆ ಅಪಘಾತ ಸಂಭವಿಸಿದೆ. ಬಸ್‍ನಿಂದ ಇಳಿದು ರಸ್ತೆ ದಾಟುವ ವೇಳೆ ಮತ್ತೊಂದು ಬಸ್ ಡಿಕ್ಕಿ ಹೊಡೆದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಆಸ್ಪತ್ರೆಗೆ ದಾಖಲಾದ ದಿನದಿಂದ ಇಲ್ಲಿಂದಿನ ತನಕ ಆನ್‍ಲೈನ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ. ಉಪನಿರ್ದೇಶಕರು ತಮ್ಮ ಆರೋಗ್ಯ ಸುಧಾರಣೆಯಾಗುವ ತನಕ ರೈತರು ಮಾತ್ರ ಹಣಕ್ಕಾಗಿ ಮಾರುಕಟ್ಟೆಯನ್ನು ಸುತ್ತುವುದೇ ಕಾಯಕವಾಗಲಿದೆ.

    ಮಾರುಕಟ್ಟೆಯ ಉಪನಿರ್ದೇಶಕ ಮುನ್ಷಿ ಬಸಯ್ಯ ಹೊರತು ಪಡಿಸಿದ್ರೆ ಯಾವೊಬ್ಬ ಅಧಿಕಾರಿಗೂ, ಮಾರುಕಟ್ಟೆಯ ಉಸ್ತುವಾರಿ ನೋಡಿಕೊಳ್ತಿರುವ ವಿಶೇಷ ಅಧಿಕಾರಿಗೂ ಸಹ ಆರ್.ಟಿ.ಜಿ.ಎಸ್ ಮೂಲಕ ರೈತರಿಗೆ ಹಣ ಪಾವತಿಸುವುದು ತಿಳಿದಿಲ್ಲ. ಹಾಗಾಗಿ ರೈತರಿಗೆ ಆರ್.ಟಿ.ಜಿ.ಎಸ್ ಮೂಲಕ ಹಣವನ್ನ ನೀಡುವಂತಹ ವ್ಯವಸ್ಥೆಗೆ ಬ್ರೇಕ್ ಹಾಕಲಾಗಿದೆ. ದಿನನಿತ್ಯ ಮಾರುಕಟ್ಟೆಯಲ್ಲಿ 40 ಟನ್‍ನಷ್ಟು ರೇಷ್ಮೆಗೂಡಿನ ವಹಿವಾಟು ನಡೆಯುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಿಂದ ಅಲ್ಲದೇ ಹೊರ ರಾಜ್ಯಗಳಿಂದಲೂ ಸಹ ರೈತರು ಮಾರುಕಟ್ಟೆಗೆ ಗೂಡನ್ನು ದಿನನಿತ್ಯ ತಂದು ಮಾರಾಟ ಮಾಡ್ತಿದ್ದು, ಇತ್ತ ಆರ್.ಟಿ.ಜಿ.ಎಸ್ ಇಲ್ಲದೇ, ಅತ್ತ ಸರಿಯಾದ ಸಮಯಕ್ಕೆ ನೇರವಾಗಿ ಹಣ ಕೂಡಾ ಸಿಗದೇ ಪರದಾಡುವಂತಾಗಿದೆ.

    ಬೆಳೆದ ರೇಷ್ಮೆ ಬೆಳೆಗೆ ಬೆಲೆ ಕುಸಿತವಾಗ್ತಿದ್ದು ರೈತರು ಒಂದೆಡೆ ರೇಷ್ಮೆ ಸಹವಾಸ ಬೇಡ ಎಂಬಂತಾಗಿದ್ದಾರೆ. ಅದ್ರೆ ಇದೀಗ ಉತ್ತಮ ಬೆಲೆ ಇದ್ದು ಬೆಳೆದ ಬೆಳೆ ಮಾರಾಟ ಮಾಡಿದ್ರು ಸರಿಯಾಗಿ ಹಣ ಮಾತ್ರ ರೈತರ ಕೈಗೆ ಸಿಕ್ತಿಲ್ಲ. ಹೀಗಾಗಿ ಡಿಡಿ ಒಬ್ಬರಿಗೆ ಆರ್.ಟಿ.ಜಿ.ಎಸ್ ಗೊತ್ತಿದ್ರೆ ಸಾಲದು ಬೇರೆ ಅಧಿಕಾರಿಗಳಿಗೂ ಅದರ ಮಾಹಿತಿ ಇರಬೇಕು ಈ ಬಗ್ಗೆ ರೇಷ್ಮೆ ಇಲಾಖೆ ಕ್ರಮ ತೆಗೆದುಕೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ.

  • ಲಂಚಬಾಕ ಮಹಿಳಾ ಅಧಿಕಾರಿ ಎಸಿಬಿ ಬಲೆಗೆ

    ಲಂಚಬಾಕ ಮಹಿಳಾ ಅಧಿಕಾರಿ ಎಸಿಬಿ ಬಲೆಗೆ

    ಮಡಿಕೇರಿ: ಆಕೆ ಇಲಾಖೆಯೊಂದರ ಅತ್ಯುನ್ನತ ಅಧಿಕಾರಿ. ತನ್ನ ದಕ್ಷ ಕರ್ತವ್ಯದಿಂದ ಆ ಇಲಾಖೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕಾದ ಆ ಮಹಿಳಾ ಅಧಿಕಾರಿ ಬಿದ್ದಿದ್ದು ಮಾತ್ರ ದುಡ್ಡಿನ ಹಿಂದೆ. ಹಣ ಕೊಟ್ರೆ ಮಾತ್ರ ಕೆಲಸ ಅನ್ನೋ ಗುರಿ ಇಟ್ಕೊಂಡಿದ್ದ ಆ ಲಂಚಬಾಕ ಮೇಡಂ ಕೊನೆಗೂ ಲಾಕ್ ಆಗಿದ್ದಾಳೆ.

    ಕೊಡಗು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಾಯಾದೇವಿ ಗಲಗಲಿ ವಿರುದ್ಧ ಲಂಚಬಾಕತನ ಅಲ್ಲದೇ ಅನೇಕ ದೂರುಗಳಿದ್ರೂ ಎಲ್ಲೂ ಸಿಕ್ಕಿಬಿದ್ದಿರಲಿಲ್ಲ. ಆದ್ರೆ ಶನಿವಾರ 20 ಸಾವಿರ ರೂಪಾಯಿ ಲಂಚ ಪಡೆಯೋವಾಗ ಎಸಿಬಿ ಖೆಡ್ಡಾಕ್ಕೆ ಬಿದ್ದಿದ್ದಾಳೆ.

    ನಳಿನಿ ಎಂಬವರ ಪತಿ 8 ತಿಂಗಳ ಹಿಂದೆ ಅನುಮಾನಾಸ್ಪದವಾಗಿ ಕೊಲೆಯಾಗಿದ್ರು. ನಳಿನಿ ಪತಿ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ರಿಂದ ಮಾನವೀಯ ನೆಲೆಯಲ್ಲಿ ಇಲಾಖೆಯಿಂದ 4.25 ಲಕ್ಷ ಪರಿಹಾರ ಘೋಷಣೆಯಾಗಿತ್ತು. ಆದ್ರೆ ಇಲಾಖೆಯ ಅಧಿಕಾರಿಯಾದ ಮಾಯಾದೇವಿ ಗಲಗಲಿ ಈ ಹಣ ಕೊಡದೇ ಸತಾಯಿಸುತ್ತಿದ್ದಳು. ಕೊನೆಗೆ ಡೀಲ್ ಕುದುರಿಸಿ 30 ಸಾವಿರಕ್ಕೆ ಬೇಡಿಕೆ ಇಟ್ಟಿದ್ದಳು. ಅದ್ರ ಮೊದಲ ಕಂತಾಗಿ 20 ಸಾವಿರ ಪಡೆಯೋವಾಗ ಮಾಯಾದೇವಿ ಸಿಕ್ಕಿಬಿದ್ದಿದ್ದಾಳೆ. ಪ್ರಕರಣದ ಮಾಹಿತಿ ಪಡೆದ ಸಚಿವ ಸಾ.ರಾ.ಮಹೇಶ್ ಕೂಡಲೇ ಅಮಾನತಿಗೆ ಸೂಚಿಸಿದ್ದಾರೆ.

    ಈ ಮಧ್ಯೆ ಲಂಚಕೋರ ಅಧಿಕಾರಿ ಮಾಯಾದೇವಿ ಅನಾರೋಗ್ಯ ಕಾರಣ ನೀಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೊಸ ಡ್ರಾಮ ನಡೆಸಿದ್ದಾಳೆ. ಒಟ್ಟಿನಲ್ಲಿ ಇಂತಹ ಲಂಚಬಾಕ ಅಧಿಕಾರಿಗಳಿಗೆ ಸರ್ಕಾರ ತಕ್ಕ ಶಿಕ್ಷೆ ಕೊಡಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews