Tag: deputy mayor

  • ಕ್ಲೈಮ್ಯಾಕ್ಸ್ ಟ್ವಿಸ್ಟ್ – ಬಿಬಿಎಂಪಿ ಮೇಯರ್ ಹುದ್ದೆಗೆ ಬಿಜೆಪಿಯಿಂದ ಇಬ್ಬರು ಸ್ಪರ್ಧೆ

    ಕ್ಲೈಮ್ಯಾಕ್ಸ್ ಟ್ವಿಸ್ಟ್ – ಬಿಬಿಎಂಪಿ ಮೇಯರ್ ಹುದ್ದೆಗೆ ಬಿಜೆಪಿಯಿಂದ ಇಬ್ಬರು ಸ್ಪರ್ಧೆ

    ಬೆಂಗಳೂರು: ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಲ್ಲಿ ಭಾರೀ ಕಸರತ್ತು ನಡೆಯುತ್ತಿದೆ. ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಇಬ್ಬರು ನಾಮಪತ್ರ ಸಲ್ಲಿಕೆ ಮಾಡಿದರೆ, ಉಪಮೇಯರ್ ಸ್ಥಾನಕ್ಕೆ ಮೂವರು ನಾಮಪತ್ರ ಸಲ್ಲಿಸಿದ್ದಾರೆ.

    ಮೇಯರ್ ಹುದ್ದೆಗೆ ಬಿಜೆಪಿಯಿಂದ ಗೌತಮ್ ಕುಮಾರ್ ಜೈನ್, ಪದ್ಮನಾಭರೆಡ್ಡಿ ನಾಮಪತ್ರ ಸಲ್ಲಿಸಿದರೆ ಉಪ ಮೇಯರ್ ಹುದ್ದೆಗೆ ಮಹಾಲಕ್ಷ್ಮಿ ರವೀಂದ್ರ, ಗುರುಮೂರ್ತಿ ರೆಡ್ಡಿ, ಮೋಹನ್ ರಾಜ್ ನಾಮಪತ್ರ ಸಲ್ಲಿಸಿದ್ದಾರೆ.

    ಹೆಚ್ಚು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಬಿಜೆಪಿ ಸಭೆಯಲ್ಲಿ ಆರ್ ಅಶೋಕ್ ಹಾಗೂ ಅಶ್ವಥ್ ನಾರಾಯಣ ವಿರುದ್ಧ ಗರಂ ಆಗಿರುವ ಗೌತಮ್ ಜೈನ್, ಪಕ್ಷದ ಅಧಿಕೃತ ಅಭ್ಯರ್ಥಿ ನಾನು. ಆದರೆ ಪದ್ಮನಾಭ ರೆಡ್ಡಿ ಹೇಗೆ ನಾಮಪತ್ರ ಸಲ್ಲಿಸಿದರು ಎಂದು ಪ್ರಶ್ನಿಸಿದ್ದಾರೆ.

    ಅಲ್ಲದೆ ನನಗೆ ಪಕ್ಷದ ಹಿರಿಯರು, ಸಂಘಟನೆಯವರು ಎಲ್ಲರೂ ಸೇರಿ ನಾಮಪತ್ರ ಸಲ್ಲಿಸಲು ಹೇಳಿದ್ದಾರೆ. ಹೀಗಾಗಿ ಅವರ ಮುಖಾಂತರ ಬಂದು ನಾನು ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಇಬ್ಬರು ನಾಮಪತ್ರ ಸಲ್ಲಿಸಿದರೆ ಒಬ್ಬರನ್ನು ಆಯ್ಕೆ ಮಾಡುತ್ತಾರೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಗೌತಮ್ ಜೈನ್ ಹೇಳಿದ್ದಾರೆ. ಇದನ್ನೂ ಓದಿ: ಬಿಬಿಎಂಪಿ ಮೇಯರ್ ಅಭ್ಯರ್ಥಿ – ಬಿಎಸ್‍ವೈ ವಿರುದ್ಧ ಸೆಡ್ಡು ಹೊಡೆದು ಗೆದ್ದ ಕಟೀಲ್

    ಇತ್ತ ಪದ್ಮನಾಭ ರೆಡ್ಡಿ ಅವರು ಬಂಡಾಯವಾಗಿ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷ ನನಗೆ ನಾಮಪತ್ರ ಸಲ್ಲಿಸುವಂತೆ ಸೂಚನೆ ಕೊಟ್ಟಿದೆ. ಹೀಗಾಗಿ ನಾನು ನನ್ನ ಕಾರ್ಪೋರೇಟರ್ ಜೊತೆಗೆ ಬಂದು ನಾಮಪತ್ರ ಸಲ್ಲಿಸಿದ್ದೇನೆ. ಪಕ್ಷದ ಆದೇಶವನ್ನು ಪಾಲಿಸುವುದು ನಮ್ಮ ಕರ್ತವ್ಯ ಎಂದು ಹೇಳಿದ್ದಾರೆ.

    ಬಂಡಾಯದ ಬಗ್ಗೆ ಹೇಳಿದ್ದೇನು?
    ನನ್ನ ನಾಯಕರಾದ ನರೇಂದ್ರ ಮೋದಿ, ಬಿಎಸ್ ಯಡಿಯೂರಪ್ಪ, ಬೆಂಗಳೂರು ನಗರದ ನಾಯಕಾರದ ಆರ್ ಅಶೋಕ್ ಹಾಗೂ ಎಲ್ಲಾ ಶಾಸಕ, ಸಂಸದರು ಒಟ್ಟಾಗಿ ಶಿಸ್ತಿನ ಪಕ್ಷದಲ್ಲಿದ್ದೇವೆ. ಹೀಗಾಗಿ ಪಕ್ಷ ಆದೇಶ ಮಾಡಿದ್ದು ನಾಮಪತ್ರ ಸಲ್ಲಿಸಿದ್ದೇನೆ. ಒಟ್ಟಿನಲ್ಲಿ ಪಕ್ಷದ ಆದೇಶಕ್ಕೆ ತಲೆ ಬಾಗುತ್ತೇನೆ. ಇಲ್ಲಿ ಬಂಡಾಯದ ಪ್ರಶ್ನೆಯೇ ಇಲ್ಲ ಎಂದು ಪದ್ಮನಾಭ ರೆಡ್ಡಿ ಹೇಳಿದ್ದಾರೆ.

    ಗೌತಮ್ ನನ್ನ ಸಹೋದರ. ಅಂತಿಮವಾಗಿ ಅಭ್ಯರ್ಥಿ ಯಾರು ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ. ಅಷ್ಟಕ್ಕೂ ಇಬ್ಬರು ನಾಮಪತ್ರ ಸಲ್ಲಿಸಬಾರದೆಂದು ಕಾನೂನಿನಲ್ಲಿ ಇಲ್ಲವಲ್ವ. ಇಲ್ಲಿ ಬಂಡಾಯದ ಪ್ರಶ್ನೆ ಉದ್ಭವವಾಗಲ್ಲ. ನನ್ನ ಪಕ್ಷ ನಾಮಪತ್ರ ಸಲ್ಲಿಸಿ ಎಂದು ಹೇಳಿದೆ, ಅದಕ್ಕೆ ಸಲ್ಲಿಕೆ ಮಾಡಿದ್ದೇನೆ ಪದ್ಮನಾಭ ರೆಡ್ಡಿ ತಿಳಿಸಿದರು. ಇಡೀ ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ನಮ್ಮ ಬಿಜೆಪಿ ಪಕ್ಷವನ್ನು ಯಾರಿಂದಲೂ ಅಲ್ಲಾಡಿಸಲು ಸಾಧ್ಯವಿಲ್ಲ. ಹೀಗಾಗಿ ಕಾಂಗ್ರೆಸ್ಸಿನವರು ಇದರಿಂದ ಲಾಭ ಪಡೆಯುತ್ತಾರೆ ಅಂದುಕೊಂಡರೆ ಅದು ತಿರುಕನ ಕನಸಾಗಿರುತ್ತದೆ ಎಂದರು.

    ಒಟ್ಟಿನಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಗೌತಮ್ ಜೈನ್ ಅವರನ್ನು ನಾಮಪತ್ರ ಸಲ್ಲಿಕೆ ಮಾಡಲು ತಿಳಿಸಿದ್ರೆ, ಇತ್ತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪದ್ಮನಾಭ ರೆಡ್ಡಿಯವರನ್ನು ನಾಮ ಪತ್ರ ಸಲ್ಲಿಸುವಂತೆ ಸೂಚಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸತ್ಯನಾರಾಯಣ ನಾಮಪತ್ರ ಸಲ್ಲಿಕೆ ಮಾಡಿದರೆ ಉಪಮೇಯರ್ ಸ್ಥಾನಕ್ಕೆ ಗಂಗಮ್ಮ ನಾಮಪತ್ರ ಸಲ್ಲಿಸಿದ್ದಾರೆ.

  • ಬಿಬಿಎಂಪಿಗೂ ತಟ್ಟಿದ ಕಾಂಗ್ರೆಸ್-ಜೆಡಿಎಸ್ ವೈಮನಸ್ಸು

    ಬಿಬಿಎಂಪಿಗೂ ತಟ್ಟಿದ ಕಾಂಗ್ರೆಸ್-ಜೆಡಿಎಸ್ ವೈಮನಸ್ಸು

    – ಮಾಸಿಕ ಸಭೆಯಲ್ಲಿ ಮೇಯರ್ ಪಕ್ಕ ಕೂರಲ್ಲ: ಉಪಮೇಯರ್

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದೋಸ್ತಿಗಳ ಮಧ್ಯೆ ವೈಮನಸ್ಸಿನ ಬಿಸಿ ಈಗ ಬೆಂಗಳೂರು ಮಹಾನಗರ ಪಾಲಿಕೆಗೂ ತಟ್ಟಿದೆ.

    ಮೇಯರ್ ಗಂಗಾಬಿಕೆ ಹಾಗೂ ಉಪ ಮೇಯರ್ ಭದ್ರೇಗೌಡ ಮಧ್ಯೆ ಮತ್ತೆ ಶೀತಲ ಸಮರ ಶುರುವಾಗಿದೆ. ಹೀಗಾಗಿ ಪಾಲಿಕೆಯ ಮಾಸಿಕ ಸಭೆಯಲ್ಲಿ ಮೇಯರ್ ಅವರ ಪಕ್ಕದ ಕುರ್ಚಿಯಲ್ಲಿ ಕೂರದಿರಲು ಭದ್ರೇಗೌಡ ಅವರು ತೀರ್ಮಾನಿಸಿದ್ದಾರೆ.

    ನಾಗಪುರ ವಾರ್ಡಿನಲ್ಲಿ ಪಾಲಿಕೆಯ ಕಲ್ಯಾಣ ಕಾರ್ಯಕ್ರಮದ ಅಡಿ 50 ಮನೆಗಳ ನಿರ್ಮಾಣವಾಗಿತ್ತು. ಹೀಗಾಗಿ ಫಲಾನುಭವಿಗಳಿಗೆ ಮನೆಗಳ ಕೀಲಿ ಕೈ ಹಾಗೂ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹಾಗೂ ಮೇಯರ್ ಗಂಗಾಬಿಕೆ ಅವರಿಗೆ ಆಮಂತ್ರಣ ನೀಡಲಾಗಿತ್ತು. ಆದರೆ ಅವರು ಗೈರಾಗಿದ್ದು ಉಪ ಮೇಯರ್ ಭದ್ರೇಗೌಡ ಅವರ ಕೋಪಕ್ಕೆ ಕಾರಣವಾಗಿದೆ.

    ಕಾರ್ಯಕ್ರಮಕ್ಕೆ ಮೇಯರ್ ಮತ್ತು ಆಡಳಿತ ಪಕ್ಷದ ನಾಯಕರಿಗೆ ಆಮಂತ್ರಣ ನೀಡಿದ್ದೇನೆ. ಆದರೂ ಅವರು ಕಲ್ಯಾಣ ಕಾರ್ಯಕ್ರಮಗಳ ಉದ್ಘಾಟನೆಗೆ ಬಂದಿಲ್ಲ. ಕನಿಷ್ಠ ನಮಗೆ ಬರಲು ಸಾಧ್ಯವಾಗುತ್ತಿಲ್ಲ ಅಂತ ಫೋನ್ ಮಾಡಿ ಹೇಳಬಹುದಿತ್ತು. ಅವರಿಗೆ ಬೆಂಗಳೂರು ಅಭಿವೃದ್ಧಿ ಬಗ್ಗೆ ಕಾಳಜಿಯಿಲ್ಲ. ಮೇಯರ್ ಗಂಗಾಬಿಕೆ, ಆಡಳಿತ ಪಕ್ಷದ ನಾಯಕರು ಪರಿಶಿಷ್ಟ ಜನಾಂಗದ ವಿರೋಧಿಗಳು ಎಂದು ಭದ್ರೇಗೌಡ ಅಸಮಾಧಾನ ಹೊರ ಹಾಕಿದ್ದಾರೆ.

    ಮಾಸಿಕ ಸಭೆಗೆ ಮೇಯರ್ ಪಕ್ಕದಲ್ಲಿ ಕೂರುವುದಿಲ್ಲ ಎಂದು ಡಿಸಿಎಂ ಪರಮೇಶ್ವರ್ ಅವರಿಗೆ ಹೇಳಿದ್ದೇನೆ. ಅವರು ಹಾಗೆಲ್ಲಾ ಮಾಡಬೇಡಿ, ಮಾಸಿಕ ಸಭೆಗೂ ಮುನ್ನವೇ ನಾನು ಬಂದು ಮನೆಗಳನ್ನು ವೀಕ್ಷಣೆ ಮಾಡುತ್ತೇನೆ ಅಂತ ಹೇಳಿದ್ದಾರೆ. ಒಂದು ಅವರು ಮನೆಗಳನ್ನು ವೀಕ್ಷಣೆ ಮಾಡದಿದ್ದರೆ ನಾನು ಮಹಾಪೌರರ ಪಕ್ಕ ಕೂರುವುದಿಲ್ಲ ಎಂದು ಹೇಳಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಪಟ್ಟು ಬಿಡದೆ ಪವರ್ ತೋರಿದ ಸಿದ್ದರಾಮಯ್ಯ – `ಕೈ’ ಅಭ್ಯರ್ಥಿಗೆ ಒಲಿದ ಮೇಯರ್ ಪಟ್ಟ

    ಪಟ್ಟು ಬಿಡದೆ ಪವರ್ ತೋರಿದ ಸಿದ್ದರಾಮಯ್ಯ – `ಕೈ’ ಅಭ್ಯರ್ಥಿಗೆ ಒಲಿದ ಮೇಯರ್ ಪಟ್ಟ

    ಮೈಸೂರು: ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕೆ ನಡೆದ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪಟ್ಟು ಬಿಡದೆ ಕಾಂಗ್ರೆಸ್ ಅಭ್ಯರ್ಥಿಗೆ ಮೇಯರ್ ಪಟ್ಟ ಲಭಿಸುವಂತೆ ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಪುಷ್ಪಲತಾ ಜಗನ್ನಾಥ್ ಅವರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

    ಇಂದು ನಡೆದ ಚುನಾವಣೆಯಲ್ಲಿ ಪುಷ್ಪಲತಾ ಜಗನ್ನಾಥ್ ಅವರಿಗೆ 48 ಮತಗಳು ಲಭಿಸಿದ್ದು, ಈ ಮೂಲಕ 21 ನೇ ಅವಧಿಗೆ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಈ ಚುನಾವಣೆಯಲ್ಲಿ ಎದುರಾಳಿ ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರಾ ಅವರು 24 ಮತಗಳನ್ನು ಪಡೆದರು. ಪಾಲಿಕೆಯ ನೂತನ ಉಪ ಮೇಯರ್ ಆಗಿ ಜೆಡಿಎಸ್ ಅಭ್ಯರ್ಥಿ ಶಫಿ ಅಹಮದ್ ಆಯ್ಕೆಯಾದರು. ಇತ್ತ ತಮ್ಮ ಗೆಲುವು ಖಚಿತವಾಗುತ್ತಿದಂತೆ ಮೇಯರ್ ಪುಷ್ಪಲತಾ ಅವರು ಕೌನ್ಸಿಲ್ ಸಭಾಂಗದಲ್ಲಿ ಎಲ್ಲಾ ಸದಸ್ಯರ ಬಳಿಗೆ ಹೋಗಿ ಕೈ ಮುಗಿದು ಧನ್ಯವಾದ ಅರ್ಪಿಸಿದರು.

    ಈ ಚುನಾವಣೆಯ ಗೆಲುವು ಪುಷ್ಪಲತಾ ಅವರ ಗೆಲುವಾದರು ಇದರ ಹಿಂದಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ತಂತ್ರ ಫಲನೀಡಿದೆ ಎಂದು ಹೇಳಬಹುದು. ಇದರೊಂದಿಗೆ ಮೈತ್ರಿ ಸರ್ಕಾರದಲ್ಲಿ ಮೈತ್ರಿ ಕೂಟದ ಅಭ್ಯರ್ಥಿಗೆ ಜಯಭೇರಿ ಆಗಿದ್ದು, ತಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ ಎಂಬ ಸೂಚನೆ ನೀಡಲು ನಾಯಕರು ಯಶಸ್ವಿಯಾದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಇಂದು ಮೈಸೂರು ಮೇಯರ್-ಉಪಮೇಯರ್ ಚುನಾವಣೆ: ಕಾಂಗ್ರೆಸ್‍ಗೆ ಕುರ್ಚಿ ಸಾಧ್ಯತೆ

    ಇಂದು ಮೈಸೂರು ಮೇಯರ್-ಉಪಮೇಯರ್ ಚುನಾವಣೆ: ಕಾಂಗ್ರೆಸ್‍ಗೆ ಕುರ್ಚಿ ಸಾಧ್ಯತೆ

    ಮೈಸೂರು: ಇಲ್ಲಿನ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಇಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

    ಈ ನಡುವೆ ಮೇಯರ್ ಸ್ಥಾನ ನಮಗೆ ಬೇಕು, ನಮಗೆ ಬೇಕು ಅಂತ ದೋಸ್ತಿ ಪಕ್ಷಗಳೇ ಕಿತ್ತಾಡಿಕೊಂಡಿವೆ. ಸಚಿವ ಸಾ.ರಾ.ಮಹೇಶ್ ಮೇಯರ್ ಸ್ಥಾನ ನಮಗೆ ಬೇಕು, ಮೇಯರ್ ಸಿಗದಿದ್ದರೆ ನಾವು ಮುಂದಿನ ನಿರ್ಧಾರ ಮಾಡಬೇಕಾಗುತ್ತೆ ಎಂದು ಪರೋಕ್ಷವಾಗಿ ಬಿಜೆಪಿ ಜೊತೆ ಹೋಗುವ ಸುಳಿವು ನೀಡಿದ್ರು.

    ಸಾ.ರಾ.ಮಹೇಶ್ ಹೇಳಿಕೆ ನೀಡುತ್ತಿದ್ದಂತೆಯೇ ಅವರ ಕಚೇರಿಗೆ ಬಂದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಏನಪ್ಪ ಹೀಗಂತೀಯ ಅಂತ ಒಂದು ಗಂಟೆಗೂ ಹೆಚ್ಚು ಕಾಲ ಸಾರಾ ಜೊತೆ ಮಾತುಕತೆ ನಡೆಸಿದ್ರು. ಲೋಕಲ್ ಅಖಾಡಕ್ಕೆ ಇಳಿದ ಸಿದ್ದರಾಮಯ್ಯ ಸಹ ಮೇಯರ್ ಸ್ಥಾನ ನಮಗೇ ಬೇಕು ಎಂದು ಪಟ್ಟಿ ಹಿಡಿದಿದ್ದರು. ಹೀಗಾಗಿ ಮೈಸೂರು ನಿವಾಸದಿಂದಲೇ ಎಚ್.ಡಿ. ದೇವೇಗೌಡರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಮೇಯರ್ ಸ್ಥಾನ ಬಿಟ್ಟುಕೊಡುವಂತೆ ಮನವಿ ಮಾಡಿದ್ರು. ದೇವೇಗೌಡರು ಸಹ ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ. ಇದೀಗ ಮೇಯರ್ ಸ್ಥಾನ ಕಾಂಗ್ರೆಸ್‍ಗೆ ಪಕ್ಕಾ ಆಗಿದೆ.

    ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಒಮ್ಮೆ ನೋವಾಗಿದೆ. ಮೈತ್ರಿ ವೇಳೆ ಇದ್ದಕಿದ್ದಂತೆ ನಾಮಪತ್ರ ಸಲ್ಲಿಸಿ ತೊಂದರೆ ಕೊಟ್ಟಿದ್ದರು. ಅದಕ್ಕಾಗಿ ಈ ಬಾರಿ ಮೊದಲಿಗೆ ಜೆಡಿಎಸ್‍ಗೆ ಮೇಯರ್ ಸ್ಥಾನ ಬೇಕು ಎಂದು ಕೇಳಿದ್ದೇವೆ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಹೆಚ್ಚು ಮತ ಇರುವವರಿಗೇ ಮೇಯರ್ ಸ್ಥಾನ ಎಂದು ಹೇಳಿದ್ದಾರೆ. ಸದ್ಯ ಮೇಯರ್ ಆಯ್ಕೆ ಮಾಡುವ ಮತದಾರರ ಸಂಖ್ಯೆ ಜೆಡಿಎಸ್‍ನಲ್ಲಿ ಹೆಚ್ಚಿದೆ. ನಾವು ಈಗಾಗಲೇ ಬಿಬಿಎಂಪಿಯಲ್ಲೂ ಕಾಂಗ್ರೆಸ್ಸಿಗೆ ಅಧಿಕಾರ ಬಿಟ್ಟುಕೊಟ್ಟಿದ್ದೇವೆ. ಈಗ ನಮಗೆ ಅಧಿಕಾರ ಕೇಳುತ್ತಿದ್ದೇವೆ. ಬಿಜೆಪಿ ನಾಯಕರು ಈಗಾಗಲೇ ಜೆಡಿಎಸ್ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಕಾಂಗ್ರೆಸ್ಸಿಗೆ ಸಚಿವ ಸಾ.ರಾ.ಮಹೇಶ್ ನೇರವಾಗಿ ಟಾಂಗ್ ಕೊಟ್ಟಿದ್ದರು.

    ಜೆಡಿಎಸ್ ಸದಸ್ಯರು ಈಗಾಗಲೇ ರೆಸಾರ್ಟ್‍ಗೆ ತೆರಳಿದ್ದು, ನಮ್ಮ ಸದಸ್ಯರು ಕಾಂಗ್ರೆಸ್ಸಿನಂತೆ ಹೆದರಿಕೊಂಡು ರೆಸಾರ್ಟ್ ಗೆ ಹೋಗಿಲ್ಲ. ಎಲ್ಲರೂ ಕೂತು ಸಮಾಲೋಚನೆ ನಡೆಸಲು ನಾವೇ ಕಳುಹಿಸಿಕೊಟ್ಟಿದ್ದೇವೆ. ಶಾಸಕ ತನ್ವೀರ್ ಸೇಠ್ ಈಗಾಗಲೇ ಬಂದು ಭೇಟಿಯಾಗಿ ಹೋಗಿದ್ದಾರೆ. ಮಾತುಕತೆ ನಡೆಸಿ ಮತ್ತೊಮ್ಮೆ ಬರುವುದಾಗಿ ತಿಳಿಸಿದ್ದಾರೆ ಎಂದು ಸಚಿವ ಸಾ.ರಾ.ಮಹೇಶ್ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ಸುಳಿವು ಕೊಟ್ಟಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಉಪಮೇಯರ್ ಆಯ್ಕೆಯಾದ ಬಳಿಕ ಸಂತಸ ಹಂಚಿಕೊಂಡಿದ್ದ ರಮೀಳಾ ಉಮಾಶಂಕರ್

    ಉಪಮೇಯರ್ ಆಯ್ಕೆಯಾದ ಬಳಿಕ ಸಂತಸ ಹಂಚಿಕೊಂಡಿದ್ದ ರಮೀಳಾ ಉಮಾಶಂಕರ್

    -ಬೆಂಗಳೂರು ಅಭಿವೃದ್ಧಿಯ ಕನಸು ಕಂಡಿದ್ರು ರಮೀಳಾ ಉಮಾಶಂಕರ್

    ಬೆಂಗಳೂರು: ಸೆಪ್ಟೆಂಬರ್ 28ರಂದು ಉಪ ಮೇಯರ್ ಆಗಿ ಆಯ್ಕೆಯಾಗಿದ್ದ ಜೆಡಿಎಸ್ ನ ರಮೀಳಾ ಉಮಾಶಂಕರ್ ವಿಧಿವಶರಾಗಿದ್ದಾರೆ. ಉಪ ಮೇಯರ್ ಆಯ್ಕೆಯಾದ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿ ತಮ್ಮ ಕೆಲಸದ ಕಾರ್ಯವೈಖರಿ ಮತ್ತು ಗುರಿ ಏನು ಎಂಬುದನ್ನು ತಿಳಿಸಿದ್ದರು.

    ರಮೀಳಾ ಉಮಾಶಂಕರ್ ಹೇಳಿದ್ದು ಹೀಗೆ:
    ಪಕ್ಷದ ನಾಯಕರಾದ ಹೆಚ್.ಡಿ.ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಆಶೀರ್ವಾದ ಮಾಡಿ ನನ್ನನ್ನು ಕಳುಹಿಸಿದ್ದರು. ಹಾಗಾಗಿ ನಾನು ಉಪ ಮೇಯರ್ ಆಗಿ ಆಯ್ಕೆಯಾಗಿದ್ದೇನೆ. ಚುನಾವಣೆ ಸಂದರ್ಭದಲ್ಲಿ ಸ್ವಲ್ಪ ಮಾತಿನ ಚಕಮಕಿ ಏರ್ಪಟ್ಟಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಮುಂದಿನ ಒಂದು ವರ್ಷದ ಅವಧಿಯಲ್ಲಿ ಗುರಿ ಇಟ್ಟುಕೊಂಡು ಕೆಲಸ ಮಾಡಲು ಮುಂದಾಗಲಿದ್ದೇವೆ. ಮೇಯರ್ ಮತ್ತು ನಾನು ನಗರದಲ್ಲಿನ ಕಸ ವಿಲೇವಾರಿ ಮತ್ತು ರಸ್ತೆ ಗುಂಡಿಗಳನ್ನು ಮುಚ್ಚಲು ಪ್ರಯತ್ನ ಮಾಡುತ್ತೇವೆ. ನಮ್ಮ ಕೆಲಸಕ್ಕೆ ನಗರದ ಜನತೆಯ ಸಹಕಾರ ಖಂಡಿತ ನಮಗೆ ಬೇಕಿದೆ. ಮೇಯರ್ ಗಂಗಾಬಿಕೆ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಬರದಂತೆ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು.

    ಎಲ್ಲೋ ಒಂದು ಕಡೆ ಚುನಾವಣೆ ದಿನದಂದು ಗಲಭೆಗಳನ್ನು ನೋಡಿದಾಗ ಏನಾಗುತ್ತೋ ಎಂಬ ಗೊಂದಲವಿತ್ತು. ಮೇಯರ್ ಪಟ್ಟ ನನಗೆ ಸಿಗಬೇಕೆಂದು ಇದ್ದಿದ್ದರೆ ಸಿಗುತ್ತೆ ಅಂತಾ ಗೊತ್ತಿತ್ತು. ಮೇಯರ್ ಆಗಿ ಆಯ್ಕೆಗೊಂಡಿರುವುದು ಸಂತೋಷವನ್ನು ತಂದಿದೆ. ಮುಂದಿನ ದಿನಗಳಲ್ಲಿ ಕೆಳಮಟ್ಟದಲ್ಲಿಯೂ ಸಭೆಗಳನ್ನು ನಡೆಸುತ್ತೇನೆ. ನಗರದ ಜನತೆ ನನ್ನ ಬಳಿ ನೇರವಾಗಿ ಬಂದು ದೂರು ದಾಖಲಿಸಬಹುದು ಎಂದು ಮೇಯರ್ ಗಂಗಾಬಿಕೆ ಅವರು ಸಹ ಹೇಳಿದ್ದರು.

    ಕಾವೇರಿಪುರ ವಾರ್ಡ್ ನ ಕಾರ್ಪೊರೇಟರ್ ಆಗಿದ್ದ ರಮೀಳಾ ಉಮಾಶಂಕರ್, ತಡರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಿತ್ತನಹಳ್ಳಿಯಲ್ಲಿರುವ ಹೌಸಿಂಗ್ ಬೋರ್ಡ್‍ನಲ್ಲಿ ರಮೀಳಾ ಉಮಾಶಂಕರ್ ಅಂತ್ಯಕ್ರಿಯೆ ನಡೆಯಲಿದ್ದು, ಸದ್ಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಮೀಳಾ ಉಮಾಶಂಕರ್ ನಿಧನ ಹಿನ್ನೆಲೆ ಬಿಬಿಎಂಪಿಗೆ ರಜೆ ಘೋಷಣೆ ಮಾಡಲಾಗಿದೆ.

    ರಮೀಳಾ ಉಮಾಶಂಕರ್ ಕಳೆದ ಒಂದು ವಾರದ ಹಿಂದಷ್ಟೇ ಜೆಡಿಎಸ್ ವತಿಯಿಂದ ಉಪಮೇಯರ್ ಆಗಿದ್ದರು. ಬೆಂಗಳೂರು ಅಭಿವೃದ್ದಿ ಯ ಬಗ್ಗೆ ಸಾಕಷ್ಟು ಕನಸು ಕಂಡಿದ್ದ ರಮೀಳಾ ಅವರಿಗೆ ತಡರಾತ್ರಿ ರಾತ್ರಿ ಹೃದಯಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾರೆ. ಭಗವಂತ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ನೀಡಲಿ ಅಂತ ಶಾಸಕ ಗೋಪಾಲಯ್ಯ ಹೇಳಿದ್ದಾರೆ.

    ಇತ್ತ ಸಿಎಂ ಕುಮಾರಸ್ವಾಮಿ, ಮಾಜಿ ಮೇಯರ್ ಪದ್ಮಾವತಿ, ಸಂಪತ್ ರಾಜ್ ಸೇರಿದಂತೆ ಹಲವು ಗಣ್ಯರು ರಮೀಳಾರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ರಮೀಳಾ ಉಮಾಶಂಕರ್ ನಿಧನದ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ: ಸಿಎಂ ಎಚ್‍ಡಿಕೆ

    ರಮೀಳಾ ಉಮಾಶಂಕರ್ ನಿಧನದ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ: ಸಿಎಂ ಎಚ್‍ಡಿಕೆ

    ಬೆಂಗಳೂರು: ಹೃದಯಾಘಾತದಿಂದ ಬಿಬಿಎಂಪಿ ಉಪಮೇಯರ್ ರಮೀಳಾ ಉಮಾಶಂಕರ್ ಅವರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ರಮೀಳಾ ಅವರ ಸಾವಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ” ಬಿಬಿಎಂಪಿ ಉಪ ಮೇಯರ್ ರಮೀಳಾ ಉಮಾಶಂಕರ್ ನಿಧನದ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ. ನಿನ್ನೆಯಷ್ಟೆ ‘ನಮ್ಮ ಮೆಟ್ರೋ’ ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಭಾವಹಿಸಿದ್ದರು. ಅವರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರ ಅಗಲಿಕೆಗ ದುಃಖವನ್ನು ಭರಿಸುವ ಸ್ಥೈರ್ಯ ಅವರ ಕುಟುಂಬಕ್ಕೆ ಸಿಗಲಿ” ಎಂದು ಬರೆದುಕೊಂಡು ಸಂತಾಪ ಸೂಚಿಸಿದ್ದಾರೆ.

    ಉಪ ಮಹಾಪೌರರಾದ ರಮೀಳಾ ಉಮಾಶಂಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ನೋವುಂಟಾಗಿದೆ. ಅತೀ ಚಿಕ್ಕ ವಯಸ್ಸಿನಲ್ಲೇ ಸಮಾಜದ ಬಗ್ಗೆ ಉತ್ತಮ ಕಾಳಜಿ ಹೊಂದಿದ್ದ ಕ್ರಿಯಾಶೀಲಾ ಮಹಿಳೆ ಅವರು. ಉಪ ಮಹಾಪೌರರಾದ ಕೇವಲ ಒಂದೇ ವಾರದಲ್ಲಿ ಬೆಂಗಳೂರು ನಗರದಲ್ಲಿ ಉತ್ತಮ ಕೆಲಸ ಮಾಡಲು ಪ್ರಾರಂಭಿಸಿದ್ದರು. ಈ ದಿನ ಅವರ ಅಗಲಿಕೆಯಿಂದ ನಮ್ಮ ಪಕ್ಷಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ. ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ. ದೇವರು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಮಾಜಿ ಪ್ರಧಾನಿ ಎಚ್‍ಡಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ.

    ರಮೀಳಾ ಅವರಿಗೆ ತಡರಾತ್ರಿ ರಾತ್ರಿ ಹೃದಯಘಾತವಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ತಡರಾತ್ರಿ 12.45ರ ಸುಮಾರಿಗೆ ಸಾವನ್ನಪ್ಪಿದ್ದಾರೆ. ಉಪಮೇಯರ್ ರಮೀಳಾ ಅವರು ಶುಗರ್ ಹಾಗೂ ಅಸ್ತಮಾದಿಂದ ಬಳಲುತ್ತಿದ್ದರು. ರಮೀಳಾ ಅವರು ಚುನಾಚಣೆಗೂ ಮೊದಲು ಹಾಗೂ ನಂತರವೂ ಸಾಕಷ್ಟು ಒತ್ತಡದಲ್ಲಿದ್ದರು. ಗುರುವಾರ ಕೂಡ ಕೆಲಸದ ಒತ್ತಡ ಇದ್ದ ಕಾರಣ ಸಮಯಕ್ಕೆ ಸರಿಯಾಗಿ ಮಾತ್ರೆ ತೆಗೆದುಕೊಂಡಿರಲಿಲ್ಲ. ಹೀಗಾಗಿ ಹೃದಯಾಘಾತವಾಗಿದೆ ಅಂತ ಅವರ ಆಪ್ತ ವಲಯಗಳಿಂದ ತಿಳಿದುಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಕಳೆದ ವಾರವಷ್ಟೇ ಆಯ್ಕೆಯಾಗಿದ್ದ ಬಿಬಿಎಂಪಿ ಉಪಮೇಯರ್ ವಿಧಿವಶ

    ಕಳೆದ ವಾರವಷ್ಟೇ ಆಯ್ಕೆಯಾಗಿದ್ದ ಬಿಬಿಎಂಪಿ ಉಪಮೇಯರ್ ವಿಧಿವಶ

    ಬೆಂಗಳೂರು: ಬಿಬಿಎಂಪಿ ಉಪಮೇಯರ್ ರಮೀಳಾ ಉಮಾಶಂಕರ್ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ತಡ ರಾತ್ರಿ 12:45ರ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

    ಕಾವೇರಿಪುರ ವಾರ್ಡ್ ನ ಕಾರ್ಪೊರೇಟರ್ ಆಗಿದ್ದ ರಮೀಳಾ ಉಮಾಶಂಕರ್ ಅವರು ಕಳೆದ ವಾರವಷ್ಟೇ ಮೈತ್ರಿ ಸರ್ಕಾರದಲ್ಲಿ ಉಪಮೇಯರ್ ಆಗಿ ಆಯ್ಕೆಯಾಗಿದ್ದರು. ಪತ್ನಿಯ ಸಾವಿನ ಸುದ್ದಿ ಕೇಳಿ ಉಮಾಶಂಕರ್ ಕುಸಿದು ಬಿದ್ದರು.

    ಕಿತ್ತನಹಳ್ಳಿಯಲ್ಲಿರುವ ಹೌಸಿಂಗ್ ಬೋರ್ಡ್ ನಲ್ಲಿ ರಮೀಳಾ ಉಮಾಶಂಕರ್ ಅಂತ್ಯಕ್ರಿಯೆ ನಡೆಯಲಿದ್ದು, ಸದ್ಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಮೀಳಾ ಉಮಾಶಂಕರ್ ನಿಧನ ಹಿನ್ನೆಲೆ ಬಿಬಿಎಂಪಿಗೆ ರಜೆ ಘೋಷಣೆ ಮಾಡಲಾಗಿದೆ.

    ರಮೀಳಾ ಉಮಾಶಂಕರ್ ಕಳೆದ ಒಂದು ವಾರದ ಹಿಂದಷ್ಟೇ ಜೆಡಿಎಸ್ ವತಿಯಿಂದ ಉಪಮೇಯರ್ ಆಗಿದ್ದರು. ಬೆಂಗಳೂರು ಅಭಿವೃದ್ದಿ ಯ ಬಗ್ಗೆ ಸಾಕಷ್ಟು ಕನಸು ಕಂಡಿದ್ದ ರಮೀಳಾ ಅವರಿಗೆ ತಡರಾತ್ರಿ ರಾತ್ರಿ ಹೃದಯಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾರೆ. ಭಗವಂತ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ನೀಡಲಿ ಅಂತ ಶಾಸಕ ಗೋಪಾಲಯ್ಯ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಅಧಿಕಾರವಹಿಸಿಕೊಳ್ತಿದ್ದಂತೆ ಮೇಯರ್, ಉಪಮೇಯರ್ ರಿಂದ ದಿಢೀರ್ ಸಿಟಿರೌಂಡ್ಸ್

    ಅಧಿಕಾರವಹಿಸಿಕೊಳ್ತಿದ್ದಂತೆ ಮೇಯರ್, ಉಪಮೇಯರ್ ರಿಂದ ದಿಢೀರ್ ಸಿಟಿರೌಂಡ್ಸ್

    – ಪಾಲಿಕೆ ಸದಸ್ಯರ ಬೆವರಿಳಿಸಿದ ಗಂಗಾಂಬಿಕೆ

    ಬೆಂಗಳೂರು: ಬಿಬಿಎಂಪಿ ನೂತನ ಮೇಯರ್ ಹಾಗೂ ಉಪಮೇಯರ್ ಆಗಿ ಅಧಿಕಾರವಹಿಸಿಕೊಂಡ ಬೆನ್ನಲ್ಲೇ ಮಂಗಳವಾರ ರಾತ್ರಿ ದಿಢೀರ್ ನಗರ ಪ್ರದಕ್ಷಿಣೆ ಮಾಡಿದ್ದಾರೆ.

    ಮೇಯರ್ ಗಂಗಾಬಿಕೆ ಹಾಗೂ ಉಪಮೇಯರ್ ರಮೀಳ ಬೈಕ್‍ಗಳಲ್ಲಿ ಸಿಟಿ ರೌಂಡ್ಸ್ ಮಾಡಿದ್ದಾರೆ. ನಗರ ಪ್ರದಕ್ಷಿಣೆ ವೇಳೆ ಮೇಯರ್ ಗಂಗಾಬಿಕೆ ಅವರು ಪಾಲಿಕೆ ಅಧಿಕಾರಿಗಳನ್ನ ತರಾಟೆ ತೆಗೆದುಕೊಂಡಿದ್ದು, ಈಸ್ಟ್ ಜೋನ್ ಎಕ್ಸಿಕ್ಸ್ಯೂಟಿವ್ ಎಂಜಿನಿಯರ್ ಶಿವಪ್ರಕಾಶ್ ಬೆವರಿಳಿಸಿದ್ದಾರೆ. ಇದನ್ನೂ ಓದಿ: ಕುರ್ಚಿ ಮೇಲೆ ಬಸವಣ್ಣನ ಫೋಟೋ ಇಟ್ಟು, ಪೂಜೆ ಸಲ್ಲಿಸಿ ಅಧಿಕಾರ ವಹಿಸಿಕೊಂಡ ನೂತನ ಮೇಯರ್

    ರಾತ್ರಿ ಈಸ್ಟ್ ಜೋನ್ ನ ಕಸ್ತೂರಿ ಬಾ ರಸ್ತೆ, ಜಯಮಾಹಲ್, ಕನ್ನಿಂಗ್ ಹ್ಯಾಂ ರಸ್ತೆ ಮತ್ತು ಹೆಬ್ಬಾಳ ಸೇರಿ ಹಲವೆಡೆ ತಪಾಸಣೆ ಮಾಡಿದ್ದಾರೆ. ನಗರದ ಜಯಮಹಾಲ್ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ರಸ್ತೆಗುಂಡಿಗಳನ್ನ ಮುಚ್ಚಿದ್ದ ಗುತ್ತಿಗೆದಾರನಿಗೆ 1 ಲಕ್ಷ ರೂ. ದಂಡ ಹಾಕಿದ್ದಾರೆ. ಅಷ್ಟೇ ಅಲ್ಲದೇ ಇಂದು ಸಂಜೆಯೊಳಗಡೆ ಜಯಮಹಲ್ ರಸ್ತೆಗುಂಡಿಗಳನ್ನ ವೈಜ್ಞಾನಿಕವಾಗಿ ಮುಚ್ಚಿಸಿ ವರದಿ ನೀಡಬೇಕು ಅಂತ ಖಡಕ್ ಆಗಿ ಆದೇಶಿಸಿದ್ದಾರೆ.

    ಒಂದು ವೇಳೆ ಈ ಬಗ್ಗೆ ಅಸಡ್ಡೆ ತೋರಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠೀಣ ಕ್ರಮ ಜರಗಿಸುವುದಾಗಿ ಖಡಕ್ ವಾರ್ನ್ ಕೂಡ ಮಾಡಿದ್ದಾರೆ. ಮೇಯರ್ ಸಿಟಿ ರೌಂಡ್ಸ್ ವೇಳೆ ನಗರದಲ್ಲಿ ಅಕ್ರಮವಾಗಿ ಹೋಲ್ಡಿಂಗ್ಸ್ ಗಳನ್ನ ತೆರವು ಮಾಡಿಸಿದ್ದಾರೆ.

    ಸೆಪ್ಟೆಂಬರ್ 28 ರಂದು ನಡೆದ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯ ರಣರಂಗದ ಆಟದಲ್ಲಿ ಕಾಂಗ್ರೆಸ್ಸಿನ ಗಂಗಾಂಬಿಕೆ ಮೇಯರ್ ಆಗಿ ಆಯ್ಕೆಯಾಗಿದ್ದರೆ, ಉಪಮೇಯರ್ ಆಗಿ ಜೆಡಿಎಸ್ ನ ರಮೀಳಾ ಆಯ್ಕೆಯಾಗಿದ್ದರು. ಇವರಿಬ್ಬರೂ ಸೋಮವಾರ ಅಧಿಕಾರ ವಹಿಸಿಕೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=K3IuXehQ3sw

  • ಹೈಕೋರ್ಟ್ ನಿಂದ ಯಾವುದೇ ಸೂಚನೆ ಬರದಂತೆ ಕಾರ್ಯನಿರ್ವಹಿಸುವೆ- ಮೇಯರ್ ಗಂಗಾಂಬಿಕೆ

    ಹೈಕೋರ್ಟ್ ನಿಂದ ಯಾವುದೇ ಸೂಚನೆ ಬರದಂತೆ ಕಾರ್ಯನಿರ್ವಹಿಸುವೆ- ಮೇಯರ್ ಗಂಗಾಂಬಿಕೆ

    ಬೆಂಗಳೂರು: ಮುಂದಿನ ದಿನಗಳಲ್ಲಿ ಹೈಕೋರ್ಟ್ ನಿಂದ ಯಾವುದೇ ಸೂಚನೆ ಬರದಂತೆ ಎಚ್ಚೆತ್ತುಕೊಂಡು ಕಾರ್ಯನಿರ್ವಹಿಸುತ್ತೇವೆ ಎಂದು ಬಿಬಿಎಂಪಿ ನೂತನ ಮೇಯರ್ ಗಂಗಾಂಬಿಕೆ ಹೇಳಿದ್ದಾರೆ.

    ಮೇಯರ್ ಆಗಿ ಇಂದು ಆಯ್ಕೆಯಾದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗುತ್ತದೆ. ಅಕ್ಟೋಬರ್ ನಲ್ಲಿ ಭಾರೀ ಮಳೆಯಾಗಲಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತದೆ. ಈ ಕುರಿತು ಅಧಿಕಾರಿಗಳ ಜೊತೆ ತೆರಳಿ ಖುದ್ದಾಗಿ ಪರಿಶೀಲಿಸುತ್ತೇನೆ ಎಂದರು.

    ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿದ್ದೇವೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದ್ದು, ಇತರರಿಗೆ ನಾವೇ ಮಾದರಿಯಾಗಬೇಕು ಎಂದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ ಎಂದು ಹೇಳಿದರು.

    ಇದಕ್ಕೂ ಮುನ್ನ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ್ದ ಅವರು, ನಾನು ಹಾಗೂ ಉಪ ಮೇಯರ್ ಚರ್ಚೆ ಮಾಡಿ, ಆಡಳಿತ ನಡೆಸುತ್ತೇವೆ. ನಮ್ಮ ಮುಂದೆ ಅನೇಕ ಸಮಸ್ಯೆಗಳು ಇದ್ದರೂ, ಅವು ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿರುತ್ತದೆ. ಬಿಬಿಎಂಪಿಯ ಎಲ್ಲ ಸದಸ್ಯರ ಸಲಹೆ ಹಾಗೂ ಸೂಚನೆ ಪಡೆದುಕೊಂಡು ಕಾರ್ಯ ನಿರ್ವಹಿಸುತ್ತೇವೆ ಎಂದು ಭರವಸೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹೆಚ್ಚುತ್ತಿದೆ ಬಿಬಿಎಂಪಿ ಬೇಡಿಕೆ ಪಟ್ಟಿ: ದುಬಾರಿ ಕಾರ್ ಆಯ್ತು, ಈಗ ನಿವಾಸ ಬೇಕಂತೆ

    ಹೆಚ್ಚುತ್ತಿದೆ ಬಿಬಿಎಂಪಿ ಬೇಡಿಕೆ ಪಟ್ಟಿ: ದುಬಾರಿ ಕಾರ್ ಆಯ್ತು, ಈಗ ನಿವಾಸ ಬೇಕಂತೆ

    ಬೆಂಗಳೂರು: ದುಬಾರಿ ಕಾರು ಬೇಡಿಕೆ ಬೆನ್ನಲ್ಲೇ ಸಾರ್ವಜನಿಕರನ್ನು ಭೇಟಿ ಮಾಡಲು ಪ್ರತ್ಯೇಕ ನಿವಾಸ ಬೇಕು ಅಂತಾ ಬಿಬಿಎಂಪಿ ಅಧ್ಯಕ್ಷರು ಬೇಡಿಕೆ ಇಟ್ಟಿದ್ದಾರೆ.

    ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದುಂದುವೆಚ್ಚ ನಿಯಂತ್ರಣ ಮಾಡುವುದಾಗಿ ಹೇಳಿದ್ದರು. ಆದರೆ ಇತ್ತ ಬಿಬಿಎಂಪಿ ಅಧ್ಯಕ್ಷರು ತಮ್ಮ ದುಬಾರಿ ವೆಚ್ಚದ ಪಟ್ಟಿಯನ್ನು ಹೆಚ್ಚಿಸುತ್ತಿದ್ದಾರೆ. ಸಚಿವರಿಗೆ ಸಿಗುವ ಸವಲತ್ತುಗಳು ನಮಗೂ ಸಿಗಬೇಕೆಂದು ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷರು ನಿನ್ನೆಯಷ್ಟೇ ದುಬಾರಿ ವೆಚ್ಚದ ಕಾರಿನ ಬೇಡಿಕೆ ಇಟ್ಟಿದ್ದರು. ಈಗ ಮೇಯರ್, ಉಪ ಮೇಯರ್, ಕಮೀಷನರ್‍ಗಳಿಗೆ ನಿವಾಸಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತಾಗಿ ಬಿಬಿಎಂಪಿ ಮೇಯರ್ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ. ಈಗಾಗಲೇ ಬಿಬಿಎಂಪಿ ನಿವಾಸಕ್ಕೆ ಜಾಗ ಸಿದ್ಧವಾಗಿದೆ. ಇದನ್ನು ಓದಿ: 3 ಕೋಟಿ ರೂ. ವೆಚ್ಚದಲ್ಲಿ 12 ಕಾರು ಖರೀದಿಗೆ ಮುಂದಾದ ಬಿಬಿಎಂಪಿ!

    ಮೇಯರ್ ಹಾಗೂ ಉಪ ಮೇಯರ್ ಬೆಂಗಳೂರು ನಿವಾಸಿಗಳು ಪ್ರತಿ ವರ್ಷವೂ ಬದಲಾಗುತ್ತಾರೆ. ಹೀಗಾಗಿ ನಿವಾಸವನ್ನು ನೀಡಿದರೆ ಸರ್ಕಾರದ ಮೇಲೆ ಲಕ್ಷಾಂತರ ರೂಪಾಯಿ ಹೊರೆ ಬೀಳುತ್ತದೆ. ಹೀಗಾಗಿ ಪ್ರತ್ಯೇಕ ನಿವಾಸದ ಅವಶ್ಯಕತೆ ಇಲ್ಲ ಎಂದು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews