Tag: destroyed

  • ಕಿಡಿಗೇಡಿಗಳಿಂದ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಪ್ರತಿಮೆ ಧ್ವಂಸ

    ಕಿಡಿಗೇಡಿಗಳಿಂದ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಪ್ರತಿಮೆ ಧ್ವಂಸ

    ಭೋಪಾಲ್: ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿರುವ ಘಟನೆ ಮಧ್ಯಪ್ರದೇಶದ ಜಬುವಾ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲಾ ಕೇಂದ್ರದಿಂದ 60 ಕಿ.ಮೀ ದೂರದಲ್ಲಿರುವ ತಾಂಡ್ಲಾ ಪಟ್ಟಣದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಈ ಕುರಿತಂತೆ ಪ್ರತಿಕ್ರಿಯಿಸಿದ ತಾಂಡ್ಲಾ ನಗರ ಪರಿಷತ್ತಿನ ಮುಖ್ಯ ಮುನ್ಸಿಪಲ್ ಅಧಿಕಾರಿ ಭರತ್ ಸಿಂಗ್ ಟ್ಯಾಂಕ್ ಅವರು, ಪ್ರಿಮೆಯ ಸಣ್ಣ ಭಾಗವನ್ನು ಹಾನಿ ಮಾಡಲಾಗಿದೆ. ಚಂದ್ರಶೇಖರ್ ಆಜಾದ್ ಅವರು ಹಿಡಿದುಕೊಂಡಿದ್ದ ಪಿಸ್ತೂಲಿನ ಭಾಗವನ್ನು ಧ್ವಂಸಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

    ಪೊಲೀಸರು ರಾತ್ರಿ ಹೊತ್ತು ಗಸ್ತು ತಿರುಗುತ್ತಿದ್ದ ವೇಳೆ ಪ್ರತಿಮೆಗೆ ಹಾನಿಯಾಗಿರುವುದನ್ನು ಗಮನಿಸಿದ್ದಾರೆ. ಇದೀಗ ಸಿಸಿಟಿವಿ ದೃಶ್ಯಗಳ ಮೂಲಕ ದುಷ್ಕರ್ಮಿಗಳನ್ನು ಗುರುತಿಸಲಾಗುತ್ತದೆ ಎಂದು ಸ್ಥಳೀಯ ಪೊಲೀಸ್ ಠಾಣೆ ಪ್ರಭಾರಿ ಕೌಶಲ್ಯ ಚೌಹಾಣ್ ಹೇಳಿದ್ದಾರೆ. ಇದನ್ನೂ ಓದಿ: ನೋ ಪಾರ್ಕಿಂಗ್ ಹಾವಳಿ ತಪ್ಪಿಸಲು ವ್ಹೀಲಿಂಗ್ ಕ್ಲಾಂಪ್ ಮೊರೆ- ಸ್ಥಳದಲ್ಲೇ ದಂಡ ವಸೂಲಿಗೆ ಪ್ಲಾನ್!

    ಈ ವಿಚಾರವಾಗಿ ಸ್ಥಳೀಯ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಚಂದ್ರಶೇಖರ್ ಆಜಾದ್ ಅವರ ಪ್ರತಿಮೆಯನ್ನು 2017ರಲ್ಲಿ ಅನಾವರಣಗೊಳಿಸಲಾಗಿದೆ. ಇದನ್ನೂ ಓದಿ: ರಾಜ್ಯಾದ್ಯಂತ ವರುಣನ ಅಬ್ಬರಕ್ಕೆ 11 ಜೀವಗಳು ಬಲಿ – ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್

    Live Tv
    [brid partner=56869869 player=32851 video=960834 autoplay=true]

  • 1,028 ಬಾಕ್ಸ್‌ಗಳಲ್ಲಿದ್ದ16 ಲಕ್ಷ ಮೌಲ್ಯದ ಮದ್ಯ ನಾಶ

    1,028 ಬಾಕ್ಸ್‌ಗಳಲ್ಲಿದ್ದ16 ಲಕ್ಷ ಮೌಲ್ಯದ ಮದ್ಯ ನಾಶ

    ಯಾದಗಿರಿ: ನಗರದ ಹೊರವಲಯದಲ್ಲಿರುವ ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತ ಮದ್ಯ ಸಂಗ್ರಹ ಆವರಣದಲ್ಲಿ ಮಾರಾಟವಾಗದೆ ಉಳಿದುಕೊಂಡಿದ್ದ 16 ಲಕ್ಷ ಮೌಲ್ಯದ ಮದ್ಯವನ್ನು ಅಧಿಕಾರಿಗಳು ಇಂದು ನಾಶಪಡಿಸಿದ್ದಾರೆ.

    ನಾಕ್ ಔಟ್ ಕಂಪನಿಯ ಪೋಸ್ಟರ್ ಗೋಲ್ಡ್, ಲಾಗರ್, ನಾಕೌಟ್ ಸ್ಟ್ರಾಂಗ್‍ಗೆ ಸೇರಿದ ಒಟ್ಟು 1,028 ಬಾಕ್ಸ್‌ಗಳಲ್ಲಿದ್ದ ಲಕ್ಷಕ್ಕೂ ಅಧಿಕ ಬಿಯರ್ ಬಾಟಲಿಗಳನ್ನು ನಾಶಪಡಿಸಲಾಗಿದೆ. ಯಾದಗಿರಿ ನಗರದ ಹೊರ ವಲಯದಲ್ಲಿರುವ ಅಬಕಾರಿ ಉಗ್ರಾಣದ ಮುಂಭಾಗದಲ್ಲಿ ಅಧಿಕಾರಿಗಳು ಅವಧಿ ಮುಗಿದಿದ್ದ ಈ ಮದ್ಯವನ್ನು ನಾಶಪಡಿಸಿದ್ದಾರೆ. ಜಾನುವಾರುಗಳಿಗೆ ಹಾಗೂ ಪರಿಸರಕ್ಕೆ ತೊಂದರೆ ಆಗದಂತೆ ಇಲಾಖೆಯಿಂದ ಅಗತ್ಯ ಮುಂಜಾಗ್ರತೆ ಕ್ರಮ ಕೂಡ ಕೈಗೊಳ್ಳಲಾಗಿತ್ತು.

    ಅಬಕಾರಿ ಇಲಾಖೆಯ ಉಪ ನೀರಿಕ್ಷರಾದ, ಶ್ರೀರಾಮ್ ರಾಠೋಡ್, ಮಳಿಗೆ ಅಬಕಾರಿ ನೀರಿಕ್ಷಕ ಪ್ರಕಾಶ ಮಾಕೊಂಡ ನೇತೃತ್ವದ ತಂಡ ಪರಿಸರಕ್ಕೆ ಹಾನಿ ಆಗದಂತೆ ಎಚ್ಚರಿಕೆ ವಹಿಸಿ ದೊಡ್ಡ ಗುಂಡಿ ತೆಗೆದು ಅದರಲ್ಲಿ ಮದ್ಯವನ್ನು ಸುರಿದು ನಂತರ ಮಣ್ಣು ಮುಚ್ಚಲಾಯಿತು.

    ಈ ಸಂದರ್ಭದಲ್ಲಿ ಮಳಿಗೆ ವ್ಯವಸ್ಥಾಪಕ ವಿ.ಡಿ.ವೆಂಕಟೇಶ್, ಸಹಾಯಕ ವ್ಯವಸ್ಥಾಪಕ ಅಡಿವೆಪ್ಪ ಭಜಂತ್ರಿ, ಎಮ್.ಎಸ್.ಪಾಟೀಲ್, ಶಿವರಾಜ್ ಕುಮಾರ್ ಮುಂಡರಗಿಮಠ, ದೇವಿಂದ್ರ ಗೋನಾಳ, ಹತ್ತಿಕುಣಿ ನಾಡ ಕಛೇರಿ ಉಪ ತಹಶೀಲ್ದಾರ್ ಬಸವರಾಜ ಮತ್ತು ಕಂಪನಿಯ ಪ್ರತಿನಿಧಿ ಶಿವಕುಮಾರ್ ಹೇರೂರು ಸೇರಿದಂತೆ ಇತರರು ಉಪಸ್ಥಿತರಿದ್ದರು.

  • ತಿಪ್ಪೆ ಸೇರುತ್ತಾ 200 ಕೋಟಿ ಮೌಲ್ಯದ 28 ಸಾವಿರ ಟನ್ ದ್ರಾಕ್ಷಿ

    ತಿಪ್ಪೆ ಸೇರುತ್ತಾ 200 ಕೋಟಿ ಮೌಲ್ಯದ 28 ಸಾವಿರ ಟನ್ ದ್ರಾಕ್ಷಿ

    ಚಿಕ್ಕಬಳ್ಳಾಪುರ: ಕೊರೊನಾ ವೈರಸ್‍ನಿಂದಾಗಿ ಜಿಲ್ಲೆಯ ದ್ರಾಕ್ಷಿ ಬೆಳೆಗಾರರು ನಲುಗಿ ಹೋಗುವಂತಾಗಿದೆ. ದ್ರಾಕ್ಷಿ ಖರೀದಿಗೆ ವರ್ತಕರು ಬಾರದ ಹಿನ್ನೆಲೆಯಲ್ಲಿ ಜಿಲ್ಲೆಯ ರೇಣುಮಾಕಲಹಳ್ಳಿಯಲ್ಲಿ ರೈತನೊಬ್ಬ ದ್ರಾಕ್ಷಿ ಕಟಾವು ಮಾಡಿ ಟ್ರ್ಯಾಕ್ಟರ್‌ಗೆ ತುಂಬಿಕೊಂಡು ಹೋಗಿ ತಿಪ್ಪೆಗೆ ಸುರಿದಿದ್ದಾನೆ.

    ಮುನಿಶಾಮಪ್ಪ ದ್ರಾಕ್ಷಿ ಹಣ್ಣನ್ನು ತಿಪ್ಪೆಗೆ ಸುರಿದಿದ್ದಾನೆ. ಕಟಾವಿಗೆ ಸಿದ್ಧವಾಗಿದ್ದ ದ್ರಾಕ್ಷಿ ಖರೀದಿಗೆ ವರ್ತಕರು ಯಾರೂ ಬರುತ್ತಿಲ್ಲ. ಟ್ರಾನ್ಸ್‌ಪೋರ್ಟ್ ಸಮಸ್ಯೆ ಸೇರಿದಂತೆ ಮಾರಾಟ ಸಮಸ್ಯೆಯಿಂದ ಖರೀದಿಗೆ ವರ್ತಕರು ಮುಂದಾಗುತ್ತಿಲ್ಲ. ಹೀಗಾಗಿ ಜಿಲ್ಲೆಯಾದ್ಯಾಂತ ಅದರಲ್ಲೂ ಪ್ರಮುಖವಾಗಿ ಚಿಕ್ಕಬಳ್ಳಾಪುರ ತಾಲೂಕಿನ ರೈತರು ಹೆಚ್ಚಾಗಿ ದ್ರಾಕ್ಷಿ ಬೆಳೆಯುತ್ತಾರೆ. ಹೀಗಾಗಿ ಜಿಲ್ಲೆಯಾದ್ಯಾಂತ ಸುಮಾರು 6000 ಎಕರೆ ಪ್ರದೇಶದಲ್ಲಿ ವರ್ಷಕ್ಕೆ ಎರಡು ಬೆಳೆ ತೆಗೆಯಲಾಗುತ್ತೆ.

    ಸದ್ಯ 2500 ಎಕರೆ ಪ್ರದೇಶದಲ್ಲಿ ಸರಿಸುಮಾರು 200 ಕೋಟಿ ಮೌಲ್ಯದ 40 ಸಾವಿರ ಟನ್ ದ್ರಾಕ್ಷಿ ಕಟಾವಿಗೆ ಸಿದ್ಧವಾಗಿದೆ. ಆದರೆ ಈಗ ಖರೀದಿಗೆ ವರ್ತಕರು ಬಾರದೆ ಇಷ್ಟೊಂದು ಟನ್ ದ್ರಾಕ್ಷಿ ತೋಟಗಳಲ್ಲೇ ಕೊಳೆಯುವಂತಾಗಿದೆ. ತೋಟದಲ್ಲಿ ಹಾಗೆ ಬಿಟ್ಟರೆ ಮುಂದಿನ ಬೆಳೆಗೆ ಸಂಕಷ್ಟ ಅಂತ ಕೆಲ ರೈತರು ಕಟಾವು ಮಾಡಿ ತಿಪ್ಪೆಗೆ ಸುರಿಯುತ್ತಿದ್ದಾರೆ. ಹೀಗಾಗಿ ಕೊರೊನಾದಿಂದ 200 ಕೋಟಿ ಮೌಲ್ಯದ ದ್ರಾಕ್ಷಿನೂ ತಿಪ್ಪೆ ಸೇರುತ್ತಾ ಎಂಬ ಆತಂಕ ರೈತರಲ್ಲಿ ಮೂಡಿದೆ.

    ಕೊರೊನಾ ಎಫೆಕ್ಟ್‌ನಿಂದ ಜಿಲ್ಲೆಯ ರೈತರು ತತ್ತರಿಸಿ ಹೋಗುತ್ತಿದ್ದಾರೆ. ಬ್ಯಾಂಕುಗಳಲ್ಲಿ ಲಕ್ಷಾಂತರ ರೂಪಾಯಿ ಸಾಲ ಮಾಡಿ, ಬರನಾಡಲ್ಲಿ ಬೆಳೆದ ಬೆಳೆಗಳು ಕಣ್ಣೆದುರೇ ನಾಶವಾಗುತ್ತಿರುವುದನ್ನು ನೋಡಿ ರೈತರ ಕಣ್ಣಲ್ಲಿ ಕಣ್ಣೀರು ತರಿಸುವಂತಿದೆ.

  • 20ಕ್ಕೂ ಹೆಚ್ಚು ಎಕರೆ ಕೊಯ್ಲಿಗೆ ಬಂದಿದ್ದ ಭತ್ತದ ಬೆಳೆ ನಾಶ

    20ಕ್ಕೂ ಹೆಚ್ಚು ಎಕರೆ ಕೊಯ್ಲಿಗೆ ಬಂದಿದ್ದ ಭತ್ತದ ಬೆಳೆ ನಾಶ

    ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುದುಗೂರು ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಈ ಪ್ರದೇಶದ ಸುಮಾರು 20ಕ್ಕೂ ಹೆಚ್ಚು ಎಕರೆಯಷ್ಟು ಪ್ರದೇಶದಲ್ಲಿ ಕೊಯ್ಲಿಗೆ ಬಂದಿದ್ದ ಭತ್ತದ ಬೆಳೆಯನ್ನು ಕಾಡಾನೆಗಳು ನಾಶಪಡಿಸಿವೆ.

    ರೈತರಾದ ಅಚ್ಚಯ್ಯ, ಸಣ್ಣಪ್ಪ, ಜವರೇಗೌಡ, ಬಸಪ್ಪ, ಚಿನ್ನಣ್ಣ ಸೇರಿದಂತೆ 25 ಕ್ಕೂ ಹೆಚ್ಚು ರೈತರ ಭತ್ತದ ಬೆಳೆಯನ್ನು ಕಾಡಾನೆಗಳು ನಾಶ ಮಾಡಿವೆ. ಇವಷ್ಟೆ ಅಲ್ಲದೆ ಕೆಸ, ಶುಂಠಿ, ತೆಂಗು, ಬಾಳೆ, ಅಡಿಕೆ ಬೆಳೆಗಳನ್ನು ಕೂಡ ನಾಶ ಪಡಿಸಿವೆ.

    ಹಲವಾರು ಬಾರಿ ಅರಣ್ಯ ಇಲಾಖೆಗೆ ಕಾಡಾನೆ ಹಾವಳಿಯನ್ನು ನಿಯಂತ್ರಿಸುವಂತೆ ರೈತರು, ಗ್ರಾಮಸ್ಥರು ಮನವಿ ಮಾಡಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಒಂದು ಬದಿಯಲ್ಲಿ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಲು ಕಾಯುತ್ತಿದೆ. ಆದರೆ ಮತ್ತೊಂದು ಕಡೆಯಿಂದ ಕಾಡಾನೆ ಹಿಂಡು ಅರಣ್ಯ ಇಲಾಖೆ ಅಧಿಕಾರಿಗಳ ಕಣ್ತಪ್ಪಿಸಿ ಗ್ರಾಮಗಳತ್ತ ಬರುತ್ತಿವೆ.

    ಹೀಗಾಗಿ ಕಾಡಾನೆ ಹಾವಳಿಯನ್ನು ವಿರೋಧಿಸಿ ನಾಲ್ಕು ಗ್ರಾಮಗಳ ನೂರಾರು ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಡಾನೆ ದಾಳಿ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಅರಣ್ಯ ಇಲಾಖೆಗೆ ರೈತರು ಎಚ್ಚರಿಕೆ ನೀಡಿದ್ದಾರೆ.