Tag: devanand chauhan

  • ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಸ್ಥಳಾಂತರಕ್ಕೆ ಯತ್ನ – ನಡಹಳ್ಳಿ ವಿರುದ್ಧ ದೇವಾನಂದ ಚವ್ಹಾಣ್ ಗರಂ

    ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಸ್ಥಳಾಂತರಕ್ಕೆ ಯತ್ನ – ನಡಹಳ್ಳಿ ವಿರುದ್ಧ ದೇವಾನಂದ ಚವ್ಹಾಣ್ ಗರಂ

    ವಿಜಯಪುರ: ನಾಗಠಾಣ ಮತಕ್ಷೇತ್ರದಲ್ಲಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಆದರೆ ಇದರ ಸ್ಥಳಾಂತರಕ್ಕೀಗ ಹುನ್ನಾರ ನಡೆದಿದೆ ಎಂದು ನಾಗಠಾಣ ಶಾಸಕ ದೇವಾನಂದ್ ಚವ್ಹಾಣ್ ಆರೋಪಿಸಿದ್ದಾರೆ.

    ವಿಜಯಪುರದಲ್ಲಿ ಮಾತನಾಡಿದ ದೇವಾನಂದ್ ಚವ್ಹಾಣ್ , ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಕಳೆದ 32 ವರ್ಷಗಳಿಂದ ವಿಜಯಪುರದ ಹಿಟ್ನಳ್ಳಿ ಫಾರ್ಮ್ ನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಇದನ್ನೀಗ ಮುದ್ದೇಬಿಹಾಳ ತಾಲೂಕಿಗೆ ಸ್ಥಳಾಂತರಿಸಲು ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಕೃಷಿ ಸಚಿವ ಬಿ ಸಿ ಪಾಟೀಲರಿಗೆ ಮನವಿ ಮಾಡಿದ್ದಾರೆ.

    ಸದ್ಯ ಕೇಂದ್ರ ಸ್ಥಾನದಲ್ಲಿರುವುದರಿಂದ ಜಿಲ್ಲೆಯ ಎಲ್ಲ ಭಾಗದ ಜನರಿಗೆ ಅನುಕೂಲ ಆಗಿದೆ. ಮುದ್ದೇಬಿಹಾಳದಲ್ಲಿ ಸ್ಥಳಾಂತರ ಆಗುವುದರಿಂದ ಜಿಲ್ಲೆಯ ಉಳಿದ ಭಾಗದ ರೈತರಿಗೆ ತೊಂದರೆ ಆಗಲಿದೆ ಎಂದರು. ಅಲ್ಲದೆ ಒಂದು ವೇಳೆ ಕೃಷಿ ಸಚಿವರು ಸ್ಥಳಾಂತರಕ್ಕೆ ಆದೇಶಿಸಿದ್ರೆ ರೈತರೊಂದಿಗೆ ಬೀದಿಗಿಳಿದು ಉಗ್ರ ಹೋರಾಟ ಮಾಡೋದಾಗಿ ಶಾಸಕ ದೇವಾನಂದ್ ಎಚ್ಚರಿಕೆ ನೀಡಿದ್ದಾರೆ.

  • ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಭಯೋತ್ಪಾದಕ ಇದ್ದಂತೆ: ದೇವಾನಂದ ಚವ್ಹಾಣ್ ವಾಗ್ದಾಳಿ

    ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಭಯೋತ್ಪಾದಕ ಇದ್ದಂತೆ: ದೇವಾನಂದ ಚವ್ಹಾಣ್ ವಾಗ್ದಾಳಿ

    ವಿಜಯಪುರ: ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಭಯೋತ್ಪಾದಕ ಇದ್ದಂತೆ. ಅವರು ಕ್ಷೇತ್ರದಲ್ಲಿ ಏನೂ ಕೆಲಸ ಮಾಡಿಲ್ಲ ಎಂದು ನಾಗಠಾಣ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾಂಕೇತಿಕವಾಗಿ ಮೈತ್ರಿ ಅಭ್ಯರ್ಥಿ ಸುನಿತಾ ಚವ್ಹಾಣ್ ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ ಅವರು, ಅಕ್ಕ-ಕಾಕಾ-ಮಾಮಾ ಎಂದು ರಮೇಶ್ ಜಿಗಜಿಣಗಿ ರಾಜಕಾರಣ ಮಾಡಿದ್ದಾರೆ. ವಿಜಯಪುರಕ್ಕೆ ಅವರ ಕೊಡುಗೆ ಶೂನ್ಯ, ಯಾವುದೇ ಅಭಿವೃದ್ಧಿ ಮಾಡಿಲ್ಲ. ಎರಡು ಬಾರಿ ಅವಕಾಶ ನೀಡಿದರೂ ಪ್ರಯೋಜನ ಆಗಿಲ್ಲ. ಅಭಿವೃದ್ಧಿ ಮಾಡದೇ ಜಿಲ್ಲೆಗೆ ಜಿಗಜಿಣಗಿ ಭಯೋತ್ಪಾದಕ ಆಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಅಭಿವೃದ್ಧಿ ಮಾಡದವರು ಭಯೋತ್ಪಾದಕರು ಇದ್ದಂತೆ. ಜನರು ಜಿಗಜಿಣಗಿ ಅವರ ಮೇಲೆ ಭರವಸೆ ಇಟ್ಟು ಆಯ್ಕೆ ಮಾಡಿದ್ದರು. ಆದ್ರೆ ಅವರು ಜನರಿಗಾಗಿ ಯಾವ ಕೆಲಸ ಕೂಡ ಮಾಡಿಲ್ಲ. ಬಾಯಿ ಮಾತಿನಲ್ಲಿ ಜನರಿಗೆ ಭರವಸೆ ನೀಡಿ ಸುಮ್ಮನಾಗ್ತಾರೆ. ಇದೆಂಥ ರಾಜಕಾರಣ, ಅವರ ಸೋಲನ್ನು ಈಗಾಗಲೇ ಅವರೇ ಒಪ್ಪಿಕೊಂಡಿದ್ದಾರೆ ಎಂದು ದೇವಾನಂದ ಚವ್ಹಾಣ್ ಆಕ್ರೋಶ ಹೊರಹಾಕಿದರು.

  • ತಡರಾತ್ರಿವರೆಗೂ ಕಾದು ಕುಳಿತು ಅಕ್ರಮ ಮರಳು ವಾಹನಗಳನ್ನ ಪೊಲೀಸರಿಗೆ ಒಪ್ಪಿಸಿದ ಶಾಸಕ

    ತಡರಾತ್ರಿವರೆಗೂ ಕಾದು ಕುಳಿತು ಅಕ್ರಮ ಮರಳು ವಾಹನಗಳನ್ನ ಪೊಲೀಸರಿಗೆ ಒಪ್ಪಿಸಿದ ಶಾಸಕ

    ವಿಜಯಪುರ: ಜಿಲ್ಲೆಯಲ್ಲಿ ಅಕ್ರಮ ಮರಳು ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದ್ದು, ಆದರೆ ಇದನ್ನು ನೋಡಿದ ಶಾಸಕ ದೇವಾನಂದ ಚವ್ಹಾಣ ಖದ್ದು ಅಕ್ರಮ ಮರಳು ವಾಹನಗಳನ್ನ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.

    ಅಕ್ರಮ ಮರಳು ಮಾಫಿಯಾ ನೋಡಿಯು ನೋಡದಂತೆ ಪೊಲೀಸ್ ಇಲಾಖೆ ಸೇರಿದಂತೆ ಕಂದಾಯ ಇಲಾಖೆ ನಿದ್ರೆಗೆ ಜಾರಿತ್ತು. ಆದ್ದರಿಂದ ಈಗ ಫೀಲ್ಡ್ ಗೆ ಖುದ್ದು ವಿಜಯಪುರದ ನಾಗಠಾಣ ಶಾಸಕ ದೇವಾನಂದ ಚವ್ಹಾಣ ಇಳಿದಿದ್ದಾರೆ. ಸೋಮವಾರ ತಡರಾತ್ರಿ ನಾಗಠಾಣ ಮತಕ್ಷೇತ್ರದಲ್ಲಿ ಅಕ್ರಮ ಮರಳು ತುಂಬಿಕೊಂಡು ವಾಹನಗಳು ಹೋಗುತ್ತಿದ್ದವು. ಬಳಿಕ ತಡರಾತ್ರಿವರೆಗೂ ಕಾದು ಕುಳಿತು ವಾಹನಗಳನ್ನ ತಡೆದು ಶಾಸಕ ದೇವಾನಂದ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.

    ಇನ್ನು ವಾಹನದ ಚಾಲಕ ಪರಾರಿಯಾಗಿದ್ದು, ಸದ್ಯ ವಿಜಯಪುರ ಗ್ರಾಮೀಣ ಪೊಲೀಸರು ಮರಳು ವಾಹನ ಜಪ್ತಿ ಮಾಡಿ ವಶಕ್ಕೆ ಪಡೆದಿದ್ದಾರೆ. ಅಕ್ರಮ ಮರಳು ಮಾಫಿಯಾಗೆ ಬ್ರೇಕ್ ಹಾಕಲು ಖುದ್ದು ಶಾಸಕ ದೇವಾನಂದ ರಸ್ತೆಗಿಳಿದಿದ್ದು, ಸಾರ್ವಜನಿಕರು ಮೆಚ್ಚುಗೆ ಸೂಚಿಸಿದ್ದಾರೆ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv