Tag: deve gowda

  • ಜೆಡಿಎಸ್ ಜೊತೆ ಹೋಗಿ ನಮ್ಮ ಸಮಯ ವೇಸ್ಟ್ ಆಯ್ತು: ಮೊಯ್ಲಿ

    ಜೆಡಿಎಸ್ ಜೊತೆ ಹೋಗಿ ನಮ್ಮ ಸಮಯ ವೇಸ್ಟ್ ಆಯ್ತು: ಮೊಯ್ಲಿ

    ಚಿಕ್ಕಬಳ್ಳಾಪುರ: ನಮ್ಮ ಕಾರ್ಯಕರ್ತರು ಜೆಡಿಎಸ್ ಜೊತೆ ಹೋಗಿದ್ದಕ್ಕೆ ನಮ್ಮ ಸಮಯ ವ್ಯರ್ಥವಾಯಿತು. ಅವರ ಬೆಂಬಲ ಕೂಡ ನಮಗೆ ಸಿಗಲಿಲ್ಲ ಎಂದು ಮಾಜಿ ಸಿಎಂ ವೀರಪ್ಪಮೊಯ್ಲಿ ಹೇಳಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಜೊತೆ ಹೋಗಿ ನಾವು ಲೋಕಸಭಾ ಚುನಾವಣೆಯಲ್ಲಿ ಸೋತಿದ್ದೇವೆ. ಲೋಕಭೆಯಲ್ಲಿ ನಮಗೆ ಕಹಿ ಅನುಭವವಾಗಿದೆ. ಅದು ಮುಂದೆ ಆಗದಂತೆ ನೋಡಿಕೊಳ್ಳಬೇಕು. ನಮ್ಮ ಪಕ್ಷವನ್ನ ಸಂಘಟನೆ ಮಾಡಿ ಚುನಾವಣೆ ಎದುರಿಸಬೇಕು. ಮೇಲ್ನೋಟಕ್ಕೆ ಜೆಡಿಎಸ್ ಅವರ ಬೆಂಬಲ ನಮಗೆ ಸಿಗಲಿಲ್ಲ. ಅನೇಕ ಕಡೆ ನಮ್ಮ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸಪೋರ್ಟ್ ಮಾಡಲಿಲ್ಲ. ಜೊತೆಗೆ ನಮ್ಮ ಸಮಯವೂ ವ್ಯರ್ಥವಾಯಿತು ಎಂದು ವೀರಪ್ಪಮೊಯ್ಲಿ ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ.

    ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗುತ್ತೆ ಅನ್ನೋ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿ, ದೇವೆಗೌಡರು ಇಂದು ಒಂದು ಹೇಳುತ್ತಾರೆ, ನಾಳೆ ಒಂದು ಹೇಳುತ್ತಾರೆ. ಆದರೆ ನಾನು ದೇವೇಗೌಡರ ರೀತಿ ಹೇಳಿಕೆ ಕೊಡಲ್ಲ. ಹೀಗಾಗಿ ದೇವೇಗೌಡರ ಬಗ್ಗೆ ಮಾತನಾಡುವಷ್ಟು ದೊಡ್ಡವನೂ ನಾನಲ್ಲ ಎಂದು ಮೋಯ್ಲಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

    ಸರ್ಕಾರದ ಬಗ್ಗೆ ಮತದಾರರಿಗೆ ಒಳ್ಳೆಯ ಅಭಿಪ್ರಾಯ ಇಲ್ಲ. ಮೈತ್ರಿ ನಂಬಿ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಾಯಿತು. ಆದ್ದರಿಂದ ಮೈತ್ರಿ ಇಲ್ಲವಾಗಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುತ್ತಿತ್ತು. ಸಮ್ಮಿಶ್ರ ಸರ್ಕಾರ ಜನರ ಭಾವನೆಗಳಿಗೆ ಸ್ಪಂದಿಸದೇ ಇರುವುದು ಸಹ ಸೋಲಿಗೆ ಕಾರಣವಾಗಿದೆ. ಸರ್ಕಾರ ಉಳಿಸಿಕೊಳ್ಳಲು ಕೇವಲ ಹರಸಾಹಸ ಪಡುತ್ತಿದ್ದಾರೆ ಎಂದು ಸರ್ಕಾರದ ಬಗ್ಗೆ ಮೋಯ್ಲಿ ಅಸಾಮಾಧಾನ ವ್ಯಕ್ತಪಡಿಸಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಸೋತ ಮಂಡ್ಯದಲ್ಲೇ ಗೆಲುವು ಕಾಣಲು ನಿಖಿಲ್ ಪ್ರತಿಜ್ಞೆ

    ಸೋತ ಮಂಡ್ಯದಲ್ಲೇ ಗೆಲುವು ಕಾಣಲು ನಿಖಿಲ್ ಪ್ರತಿಜ್ಞೆ

    ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯ ಸೋಲಿನ ಬಳಿಕ ನಿಖಿಲ್ ಕುಮಾರಸ್ವಾಮಿ ಪ್ರತಿಜ್ಞೆ ಮಾಡಿದ್ದು, ಕಳೆದುಕೊಂಡಲ್ಲೇ ಪಡೆಯುವುದಕ್ಕೆ ಸಿಎಂ ಪುತ್ರ ಮೆಗಾ ಪ್ಲಾನ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

    ನಿಖಿಲ್ ಕುಮಾರಸ್ವಾಮಿ ಸೋತ ಮಂಡ್ಯ ನೆಲದಲ್ಲೇ ಗೆಲುವು ಕಾಣಲು ಪ್ರತಿಜ್ಞೆ ಮಾಡಿದ್ದು, ಈ ಬಗ್ಗೆ ತಾತ ದೇವೇಗೌಡರ ಬಳಿ ಹೇಳಿಕೊಂಡಿದ್ದಾರೆ. ನಿಖಿಲ್ ತಮ್ಮ ನೇತೃತ್ವದಲ್ಲಿ ಜೆಡಿಎಸ್ ಪಾದಯಾತ್ರೆಗೆ ಚಿಂತನೆ ಮಾಡಿದ್ದು, ಆಂಧ್ರ ಪ್ರದೇಶದಲ್ಲಿ ನಡೆದ ಜಗನ್ ಮಾದರಿ ಪಾದಯಾತ್ರೆಗೆ ನಿಖಿಲ್ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

    ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲು ಕಂಡಿದ್ದು, ಹೀಗಾಗಿ ಸೋಲು ಕಂಡ ಸ್ಥಳದಲ್ಲಿಯೇ ಎದ್ದು ಬರಲು ನಿಖಿಲ್‍ಗೆ ಯುವರಾಜನ ಪಟ್ಟ ಕಟ್ಟಿ ಪಕ್ಷ ಸಂಘಟನೆಯತ್ತ ಗೌಡರು ಮುಖ ಮಾಡಲು ತಂತ್ರ ರೂಪಿಸಿದ್ದಾರೆ. ಮೊಮ್ಮಗ ನಿಖಿಲ್‍ಗೆ ದೇವೇಗೌಡರು ಸಾಥ್ ನೀಡಿದ್ದು, ನಿಖಿಲ್ ಬೆನ್ನ ಹಿಂದೆ ತಾತ ನಿಲ್ಲುವ ಸಾಧ್ಯತೆಗಳಿವೆ. ಮಂಡ್ಯದಿಂದಲೇ ಪಾದಯಾತ್ರೆಯನ್ನ ಆರಂಭಿಸಿ ಪಕ್ಷ ಸಂಘಟನೆಗೂ ಪ್ಲಾನ್ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ಈಗಾಗಲೇ ದೇವೇಗೌಡರು ಕುಟುಂಬದವರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಒಂದೆಡೆ ಅಪ್ಪ ಗ್ರಾಮ ವಾಸ್ತವ್ಯ ಮಾಡುತ್ತಿದ್ದು, ಇನ್ನೊಂದು ಕಡೆ ಮಗ ನಿಖಿಲ್ ಪಾದಯಾತ್ರೆಯೊಂದಿಗೆ ದೇವೇಗೌಡರು ಮತ್ತೆ ತಮ್ಮ ಪಕ್ಷ ಕಟ್ಟಲು ಶುರು ಮಾಡಲಿದ್ದಾರೆ. ಜೊತೆಗೆ ಎರಡು ಕಾರ್ಯಕ್ರಮಗಳೊಂದಿಗೆ ಜೆಡಿಎಸ್‍ಗೆ ಶಕ್ತಿ ತುಂಬಲು ದೇವೇಗೌಡರಿಂದ ತಂತ್ರಗಾರಿಕೆ ರೂಪಿಸಿದ್ದಾರೆ ಎನ್ನಲಾಗಿದೆ.

    ಮಂಡ್ಯ, ಮೈಸೂರು, ಹಾಸನ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಕೋಲಾರ, ಬೆಂಗಳೂರು ನಗರ, ರಾಯಚೂರು ಜಿಲ್ಲೆಗಳಲ್ಲಿ ಮೊದಲ ಹಂತದ ಪಾದಯಾತ್ರೆ ಮಾಡುವ ಸಾಧ್ಯತೆಗಳಿವೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಸಿಎಂ ಗ್ರಾಮ ವಾಸ್ತವ್ಯ ಮೈತ್ರಿ ಸರ್ಕಾರಕ್ಕೆ ಲಾಭ – ಸಿದ್ದರಾಮಯ್ಯ

    ಸಿಎಂ ಗ್ರಾಮ ವಾಸ್ತವ್ಯ ಮೈತ್ರಿ ಸರ್ಕಾರಕ್ಕೆ ಲಾಭ – ಸಿದ್ದರಾಮಯ್ಯ

    ಹುಬ್ಬಳ್ಳಿ: ಇಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳು ಈ ಹಿಂದೆಯೇ ಮಾಡಿದ್ದರು. ಈಗಲೂ ಮಾಡುತ್ತಿದ್ದಾರೆ. ಈ ಕಾರ್ಯಕ್ರಮದಿಂದ ನಮ್ಮ ಮೈತ್ರಿ ಸರ್ಕಾರಕ್ಕೆ ಲಾಭವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ನಾನು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷರಿಗೆ ದೂರು ನೀಡಿದ್ದೇನೆ ಎಂದು ಯಾರು ಹೇಳಿದರು. ನಾನು ರಾಹುಲ್‍ಗಾಂಧಿ ಅವರನ್ನ ಮಾತ್ರ ಭೇಟಿಯಾಗಿದ್ದು, ಅವರು ಯಾರಿಗೂ ಏನು ಹೇಳಿಲ್ಲ, ನಾನು ಏನು ಹೇಳಿಲ್ಲ ಎಂದ ಮೇಲೆ ನೀವೇ ಏಕೆ ದೇವೇಗೌಡರು ಈ ರೀತಿ ಹೇಳಿರಬಹುದು, ರಾಹುಲ್ ಗಾಂಧಿ ಹಾಗೇ ಹೇಳಿರಬಹುದು ಎಂದು ಊಹೇ ಮಾಡಿಕೊಳ್ಳುತ್ತಿರಾ. ಈ ಊಹೇ ಪತ್ರಿಕೋದ್ಯಮ ಒಳ್ಳೆಯದಲ್ಲ ಎಂದರು.

    ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡರ ಮಧ್ಯಂತರ ಚುನಾವಣಾ ಹೇಳಿಕೆಯ ಬಗ್ಗೆ ಕೇಳಿದಾಗ, ಅವರು ಅ ಹೇಳಿಕೆಗೆ ಆಗಲೇ ಸ್ಪಷ್ಟನೆ ನೀಡಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಮೈಸೂರ ಕ್ಷೇತ್ರ ನಮಗೆ ಬೇಕು ಅಂದಿದ್ದು ನಿಜ. ಆದರೆ ತುಮಕೂರು ಕ್ಷೇತ್ರವನ್ನು ಒತ್ತಾಯ ಪೂರ್ವಕ ಅವರಿಗೆ ಕೊಟ್ಟಿಲ್ಲ. ತುಮಕೂರು ಅವರು ಕೇಳಿದರು ಅದಕ್ಕೆ ಬಿಟ್ಟುಕೊಡಲಾಗಿತ್ತು ಎಂದು ತಿಳಿಸಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಪ್ರಿಯಾಂಕ, ರಾಹುಲ್ ಮಕ್ಕಳಿದ್ದಂತೆ – ಸಂಸದ ಶ್ರೀನಿವಾಸ್‍ಪ್ರಸಾದ್

    ಪ್ರಿಯಾಂಕ, ರಾಹುಲ್ ಮಕ್ಕಳಿದ್ದಂತೆ – ಸಂಸದ ಶ್ರೀನಿವಾಸ್‍ಪ್ರಸಾದ್

    ಚಾಮರಾಜನಗರ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಗಾಂಧಿ ಮಕ್ಕಳಿದ್ದಂತೆ ಎಂದು ಸಂಸದ ಶ್ರೀನಿವಾಸ್‍ಪ್ರಸಾದ್ ಅವರು ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೇ ಪಾಪ ನಾನು ಇದ್ದಾಗ ಮಕ್ಕಳು ರಾಜಕೀಯಕ್ಕೆ ಬಂದಿದ್ದಾರೆ ಎಂದು ಪ್ರಿಯಾಂಕಗಾಂಧಿ ಮತ್ತು ರಾಹುಲ್‍ಗಾಂಧಿಯನ್ನು ವ್ಯಂಗ್ಯವಾಡಿದ್ದಾರೆ.

    ಬಹು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ಅವರಿಗೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವುದಕ್ಕೂ ಸ್ಥಾನ ಇಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ 44 ಸ್ಥಾನದಿಂದ ಈ ಬಾರಿ ಚುನಾವಣೆಯಲ್ಲಿ 52 ಸ್ಥಾನಕ್ಕೆ ಬಂದಿದ್ದಾರೆ. ಏಕೆ ಪ್ರಿಯಾಂಕಗಾಂಧಿ ಮತ್ತು ರಾಹುಲ್‍ಗಾಂಧಿ ಬಗ್ಗೆ ಮಾತಾನಾಡುತ್ತೀರಾ? ಅವರು ಮೊದಲು ಪಕ್ಷ ಸಂಘಟನೆ ಮಾಡುವ ಕಡೆ ಗಮನಹರಿಸಲಿ ಬಿಡಿ ಎಂದು ಹೇಳಿದರು.

    ಇದೇ ವೇಳೆ ಮೈತ್ರಿ ಸರ್ಕಾರದ ಬಗ್ಗೆ ಮಾತಾನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರು ಸಿದ್ದರಾಮಯ್ಯ ಬಗ್ಗೆ ಎಷ್ಟು ಸಲ ಅಸಮಾಧಾನ ತೋಡಿಕೊಂಡಿದ್ದಾರೆ ಎಂದು ಎಲ್ಲರಿಗೂ ಗೊತ್ತು. ಸಿದ್ದರಾಮಯ್ಯ ಅವರ ಮೇಲೆ ಚುನಾವಣೆ ಮುನ್ನವೇ ಅಸಮಾಧಾನ ತೋಡಿಕೊಂಡಿದ್ದಾರೆ. ಕುಮಾರ ಪರ್ವ ಆರಂಭ ಆಗಿದ್ದೆ ಚಾಮುಂಡೇಶ್ವರಿ ಕ್ಷೇತ್ರದಿಂದ. ಇದೆಲ್ಲವೂ ಲೋಕಸಭಾ ಫಲಿತಾಂಶದಲ್ಲಿ ಗೊತ್ತಾಗಿದೆ ಎಂದು ಹೇಳಿದರು.

    ದೇವೇಗೌಡರು ಸೋತು ಮನೆಗೆ ಹೋಗಿದ್ದು, ಮಂಡ್ಯದಲ್ಲಿ ಸೋತಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೊಂದು ಒಂದು ಸ್ಥಾನ ಬಂದಿರೋದು ಇಲ್ಲೇ ದೋಸ್ತಿ ಸರ್ಕಾರದ ಸಾಧನೆ ಏನು ಎನ್ನುವುದು ಗೊತ್ತಾಗುತ್ತದೆ ಎಂದು ತಿಳಿಸಿದರು.

  • ತುಮಕೂರಲ್ಲಿ ಸೋತಿದ್ದಕ್ಕೆ ಹೆಮ್ಮೆ ಇದೆ, ಮತ್ತೆ ಪಕ್ಷ ಕಟ್ತೀನಿ – ದೇವೇಗೌಡ

    ತುಮಕೂರಲ್ಲಿ ಸೋತಿದ್ದಕ್ಕೆ ಹೆಮ್ಮೆ ಇದೆ, ಮತ್ತೆ ಪಕ್ಷ ಕಟ್ತೀನಿ – ದೇವೇಗೌಡ

    ಬೆಂಗಳೂರು: ಲೋಕಸಭಾ ಕ್ಷೇತ್ರ ತುಮಕೂರಿನಲ್ಲಿ ಸೋತಿದಕ್ಕೆ ಹೆಮ್ಮೆ ಇದೆ. ಆದರೆ ನಾನು ಮತ್ತೆ ಪಕ್ಷ ಕಟ್ಟುತ್ತೇನೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ.

    ಬೆಂಗಳೂರಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆದ್ದವರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ದೇವೇಗೌಡರು, ನಿನ್ನೆ ರಾತ್ರಿಯಿಂದ ಆರೋಗ್ಯ ಸರಿಯಿಲ್ಲ. ನನ್ನ ಆರೋಗ್ಯ ನೋಡಿಕೊಳ್ಳುವುದಕ್ಕೆ ನಮ್ಮ ಮನೆಯಲ್ಲಿ 9 ಜನ ಡಾಕ್ಟರ್ಸ್ ಇದ್ದಾರೆ. ಆದರೆ ನಮ್ಮ ಪಕ್ಷದ ಆರೋಗ್ಯ ಸರಿ ಮಾಡುವುದು ನನ್ನ ಕೆಲಸವಾಗಿದೆ ಎಂದು ಹೇಳಿದ್ದಾರೆ.

    ತಾಲೂಕು ಮಟ್ಟದಲ್ಲಿ ಗೆದ್ದ ನಿಮ್ಮಿಂದಲೇ ನಾನು ಮತ್ತೆ ಪಕ್ಷ ಕಟ್ಟುತ್ತೇನೆ. ಪಕ್ಷದ ಸಂಘಟನೆ ಮಾಡುವುದಕ್ಕೆ ನಿಮ್ಮಿಂದಲೇ ಸಲಹೆ ಪಡೆದುಕೊಳ್ಳುತ್ತೇನೆ. ಚುನಾವಣೆಯಲ್ಲಿ ಸೋತಿದ್ದಕ್ಕೆ ಹೆಮ್ಮೆ ಇದೆ. ಎಲ್ಲಿ ಪೆಟ್ಟು ಬಿದ್ದಿದೆ ಎಂದು ಗೊತ್ತಾಯಿತು. ನಮ್ಮ ಸೋಲನ್ನ ಒಪ್ಪಿಕೊಳ್ಳೋಣ. ಆದರೆ ಸೋಲು ಒಪ್ಪಿಕೊಂಡು ಮನೆಯಲ್ಲಿ ಕೂರಲು ಆಗುವುದಿಲ್ಲ. ಪಕ್ಷ ಮತ್ತೆ ಕಟ್ಟುತ್ತೇನೆ. ಸರ್ಕಾರವನ್ನು ಕುಮಾರಸ್ವಾಮಿ ನಡೆಸಿಕೊಂಡು ಹೋಗುತ್ತಾರೆ ಎಂದು ದೇವೇಗೌಡರು ತಿಳಿಸಿದರು.

  • ರಾಜ್ಯಾಧ್ಯಕ್ಷ ಹುದ್ದೆಗೆ ವಿಶ್ವನಾಥ್ ರಾಜೀನಾಮೆ ನೀಡಲು ಸಿದ್ದರಾಮಯ್ಯ ಕಾರಣ – ಹೊರಟ್ಟಿ

    ರಾಜ್ಯಾಧ್ಯಕ್ಷ ಹುದ್ದೆಗೆ ವಿಶ್ವನಾಥ್ ರಾಜೀನಾಮೆ ನೀಡಲು ಸಿದ್ದರಾಮಯ್ಯ ಕಾರಣ – ಹೊರಟ್ಟಿ

    ಹುಬ್ಬಳ್ಳಿ: ಜೆಡಿಸ್‍ನ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಅವರನ್ನು ಸಮನ್ವಯ ಸಮಿತಿಗೆ ತೆಗೆದುಕೊಳ್ಳಲು ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಇಷ್ಟವಿರಲಿಲ್ಲ. ಇದರ ಬಗ್ಗೆ ವಿಶ್ವನಾಥ್ ಅವರಿಗೆ ಬೇಸರವಿತ್ತು. ಅದಕ್ಕೆ ಅವರು ರಾಜೀನಾಮೆ ನೀಡಿರಬಹುದು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.

    ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವನಾಥ್ ಈ ವಿಚಾರದ ಬಗ್ಗೆ ಜೆಡಿಸ್ ವರಿಷ್ಠ ದೇವೇಗೌಡರ ಗಮನಕ್ಕೆ ತಂದಿದ್ದರು. ಆದರೆ ಅವರು ಸರಿಯಾಗಿ ಸ್ಪಂದಿಸಿಲ್ಲ ಎಂಬ ಬೇಸರ ವಿಶ್ವನಾಥ್ ಅವರಿಗಿತ್ತು. ಅದ್ದರಿಂದ ರಾಜೀನಾಮೆ ನೀಡಿರಬಹುದು. ಎಚ್.ವಿಶ್ವನಾಥ್ ರಾಜೀನಾಮೆ ನೀಡಿದ್ದು ಸರಿಯಲ್ಲ ಎಂದು ಹೇಳಿದರು.

    ವಿಶ್ವನಾಥ್ ನನ್ನ ಬಳಿಯೂ ಸಿದ್ದರಾಮಯ್ಯನ ಬಗ್ಗೆ ಇದ್ದ ಅಸಮಾಧಾನ ವ್ಯಕ್ತಪಡಿಸಿದ್ದರು. ಅವರು ಇನ್ನು ಸ್ವಲ್ಪ ದಿನ ಜೆಡಿಎಸ್‍ನ ರಾಜ್ಯಾಧ್ಯಕ್ಷರಾಗಿ ಮುಂದುವರೆಯಬೇಕಿತ್ತು. ನಿನ್ನೆ ವಿಶ್ವನಾಥ್‍ಗೆ ಕರೆ ಮಾಡಿ ಮನವೊಲಿಸಲು ಯತ್ನಿಸಿದ್ದೆ. ಆದರೆ ವಿಶ್ವನಾಥ್ ಸಂಪರ್ಕಕ್ಕೆ ಸಿಗಲಿಲ್ಲ. ಅವರು ರಾಜೀನಾಮೆ ನೀಡಿದ್ದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಇದೇ ವೇಳೆ ಮೈತ್ರಿ ಸರ್ಕಾರದ ಬಗ್ಗೆ ಮಾತನಾಡಿದ ಬಸವರಾಜ್ ಹೊರಟ್ಟಿ, ಸರ್ಕಾರದ ರಚನೆ ವೇಳೆ ಹೇಳಿದಂತೆ ಕಾಂಗ್ರೆಸ್ ನಡೆದುಕೊಂಡಿಲ್ಲ. ವಿಧಾನಪರಿಷತ್ ಸಭಾಪತಿ ಸ್ಥಾನ ಜೆಡಿಎಸ್‍ಗೆ ನೀಡುವುದಾಗಿ ಹೇಳಿದ್ದರು. ಆದರೆ ಅಂತಿಮ ಕ್ಷಣದಲ್ಲಿ ಕಾಂಗ್ರೆಸ್ ಸಭಾಪತಿ ಸ್ಥಾನ ತೆಗೆದುಕೊಂಡಿತು. ಅಷ್ಟೇ ಅಲ್ಲದೇ ಸಮನ್ವಯದ ಸಮಿತಿಯಲ್ಲಿ ಎರಡು ಪಕ್ಷದ ರಾಜ್ಯಾಧ್ಯಕ್ಷರು ಇರಬೇಕಿತ್ತು. ಎಲ್ಲ ಹಂತದಲ್ಲೂ ಸಿದ್ದರಾಮಯ್ಯ ಸರ್ಕಾರದ ಮೇಲೆ ಹಿಡಿತ ಸಾಧಿಸುತ್ತಿದ್ದಾರೆ ಅದು ಮೈತ್ರಿ ಸರ್ಕಾರಕ್ಕೆ ಒಳ್ಳೆಯದಲ್ಲ ಎಂದರು.

    ನೀವು ರಾಜ್ಯಾಧ್ಯಕ್ಷರು ಆಗುತ್ತಿರಾ ಎಂದು ಕೇಳಿದಾಗ, ನಾನು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಅಧ್ಯಕ್ಷ ಸ್ಥಾನ ನಿರ್ವಹಿಸುವ ಶಕ್ತಿಯು ನನಲಿಲ್ಲ. ಬಂಡೆಪ್ಪ ಕಾಶೆಂಪೂರ್ ಅಂತವರು ಆ ಸ್ಥಾನಕ್ಕೆ ಸೂಕ್ತ ಎಂದು ಅವರು ಆಶಯ ವ್ಯಕ್ತಪಡಿಸಿದರು.

  • ಸುದ್ದಿಗೋಷ್ಠಿಗೂ ಮುನ್ನ ದೇವೇಗೌಡ್ರಿಗೆ ವಿಶ್ವನಾಥ್ ಪತ್ರ!

    ಸುದ್ದಿಗೋಷ್ಠಿಗೂ ಮುನ್ನ ದೇವೇಗೌಡ್ರಿಗೆ ವಿಶ್ವನಾಥ್ ಪತ್ರ!

    ಮೈಸೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಮಾಜಿ ಪ್ರಧಾನಿ ದೇವೇಗೌಡರಿಗೆ ಪತ್ರ ಬರೆದಿದ್ದಾರೆ.

    ಸುದ್ದಿಗೋಷ್ಠಿಗೂ ಮುನ್ನ ಮಾಜಿ ಪ್ರಧಾನಿಗೆ ಬರೆದ ಪತ್ರದಲ್ಲಿ ಪಕ್ಷದ ಹೊಣೆಗಾರಿಕೆಯಿಂದ ನನ್ನನ್ನು ಬಿಡುಗಡೆ ಮಾಡಿ ಹುಣಸೂರು ಕ್ಷೇತ್ರದ ಜನರಿಗೆ ಸೇವೆ ಮಾಡಲು ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

    ಪತ್ರದಲ್ಲಿ ಏನಿದೆ?
    ತಾವು ನನ್ನಲ್ಲಿ ವಿಶ್ವಾಸವಿಟ್ಟು ಜನತಾದಳ ರಾಜ್ಯಾಧ್ಯಕ್ಷನನ್ನಾಗಿ ನೇಮಕ ಮಾಡಿದ್ದು, ನನ್ನ ರಾಜಕೀಯ ಜೀವನದ ಬಹುಮುಖ್ಯ ಘಟ್ಟ ಎಂದೇ ನಾನು ಭಾವಿಸಿದ್ದೇನೆ. ಸ್ವಾಭಿಮಾನದ ಸಂಕೇತವಾಗಿ ನನ್ನ ಮಾತೃ ಪಕ್ಷ ಕಾಂಗ್ರೆಸ್‍ನಿಂದ ಹೊರ ಬರಬೇಕಾದ ಅನಿವಾರ್ಯತೆ ಎದುರಾಗಿ ಆಚೆ ಬಂದು ನಿಂತಾಗ, ನನ್ನ ಅಭಿಲಾಷೆಯಂತೆ ನನಗೆ ಹುಣಸೂರು ವಿಧಾನ ಸಭಾ ಕ್ಷೇತ್ರದ ಶಾಸಕನಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪುನರ್ ಜನ್ಮಕ್ಕೆ ಆಶೀರ್ವಾದಿಸಿದ್ದೀರಿ. ಅದಕ್ಕಾಗಿ ನಾನು ನಿಮಗೆ ಕೃತಜ್ಞನಾಗಿದ್ದೇನೆ.

    ಅಸಂಗತ ಸಂದರ್ಭದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾಯಿತು. ಸಾಲಮನ್ನಾದಂತಹ ಬೃಹತ್ ಯೋಜನೆಯನ್ನು ಹೆಗಲ ಮೇಲೆ ಹೊತ್ತ ಮುಖ್ಯಮಂತ್ರಿ ಆಡಳಿತದ ಅಭದ್ರತೆಯ ಸಂಕಷ್ಟದಲ್ಲೂ ಜನರ ನಡುವೆ ನಮ್ಮ ಕುಮಾರಣ್ಣ ಎಂಬ ಭಾವನಾತ್ಮಕ ಸಂಪ್ರೀತಿಯಲ್ಲಿದ್ದರು.

    ಒಂದರೆಡು ಇಲಾಖೆಗಳನ್ನು ಬಿಟ್ಟರೆ ನಿರೀಕ್ಷಿಸಿದ ಸಾಧನೆಗಳು ಸಾಧ್ಯವಾಗಿಲ್ಲ. ಈ ವಿಚಾರದಲ್ಲಿ ಪಕ್ಷದ ಅಧ್ಯಕ್ಷನಾಗಿ ನನಗೆ ನಿರಾಶೆಯಾಗಿದೆ ಎನ್ನಲು ಸಂಕಟವಾದರೂ ಹೇಳುವುದು ಅನಿವಾರ್ಯವಾಗಿದೆ. ಆದರೂ ಸಿಎಂ ಕುಮಾರಸ್ವಾಮಿ ಅವರು ತಮ್ಮ ಅನಾರೋಗ್ಯದ ಮತ್ತು ಮಿತ್ರರ ಕಿರುಕುಳದ ನಡುವೆಯೂ ಎಲ್ಲರ ವಿಶ್ವಾಸದಿಂದ ಶಕ್ತಿ ಮೀರಿ ಸರ್ಕಾರವನ್ನು ನಡೆಸುತ್ತಿದ್ದಾರೆ. ಸಾಮಾನ್ಯವಾಗಿ ಸರ್ಕಾರ ಅಧಿಕಾರದಲ್ಲಿದ್ದಾಗ ಮಂತ್ರಿಗಳಾದವರು, ಶಾಸಕರು ಪಕ್ಷದ ಮಟ್ಟಿಗೆ ಅಷ್ಟೊಂದು ಆಸಕ್ತಿಯನ್ನು ಹೊಂದಿರುವುದಿಲ್ಲ. ಪ್ರಭುತ್ವ ಮತ್ತು ಪಕ್ಷ ಜೋಡೆತ್ತಿನಂತೆ ಇರಬೇಕು. ಆದರೆ ಇಲ್ಲಿ ಅದು ಸಾಧ್ಯವಾಗುತ್ತಿಲ್ಲ.

    ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಡ ಸಮನ್ವಯ ಸಮಿತಿ ಕೇವಲ ನಾಮಕಾವಸ್ಥೆ ಸಮನ್ವಯ ಸಮಿತಿ ಆಯಿತೇ ಹೊರತು, ಎರಡೂ ಪಕ್ಷಗಳ ನಡುವೆ ಸಮನ್ವಯ ಸಾಧಿಸುವಲ್ಲಿ ಸಫಲವಾಗಲೇ ಇಲ್ಲ. ಸಮನ್ವಯ ಸಮಿತಿ ಸುಲಲಿತವಾಗಿ ಸರ್ಕಾರವನ್ನು ನಡೆಸಿಕೊಂಡು ಹೋಗುವ ದೃಷ್ಟಿಯಿಂದ ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ಈವರೆಗೂ ರೂಪಿಸಲು ಸಾಧ್ಯವಾಗಿಲ್ಲ. ಸಮನ್ವಯ ಸಮಿತಿಯಲ್ಲಿ ಜಾತ್ಯಾತೀತ ಜನತಾದಳದ ಅಧ್ಯಕ್ಷನಾದ ನನಗೆ ಅವಕಾಶವನ್ನೇ ನೀಡಲಿಲ್ಲ.

    ಸಮನ್ವಯ ಸಮಿತಿ ಸಿದ್ದರಾಮಯ್ಯನವರ ಕೈಗೊಂಬೆಯಂತೆ ಕಾರ್ಯನಿರ್ವಹಿಸಬೇಕಾದ ಪರಿಸ್ಥಿತಿ ಸೃಷ್ಠಿಯಾಯಿತೇ ಹೊರತು, ಸೌಹಾರ್ದಯುತ ವಾತಾವರಣದಲ್ಲಿ ನಿರಾತಂಕವಾಗಿ ಸರ್ಕಾರವನ್ನು ನಡೆಸಿಕೊಂಡು ಹೋಗುವ ಪ್ರಾಮಾಣಿಕ ಪ್ರಯತ್ನ ನಡೆಯಲೇ ಇಲ್ಲ. ಇಂತಹ ಸಂದರ್ಭದಲ್ಲಿ ಪಕ್ಷದ ಹೊಣೆಗಾರಿಕೆಯಿಂದ ನನ್ನನ್ನು ಬಿಡುಗಡೆ ಮಾಡಿ ಹುಣಸೂರು ಕ್ಷೇತ್ರದ ಜನರಿಗೆ ಸೇವೆ ಮಾಡಲು ಅನುಕೂಲ ಮಾಡಿಕೊಡಬೇಕೆಂದು ವಿನಮ್ರವಾಗಿ ಕೋರುತ್ತೇನೆ ಎಂದು ಪತ್ರದಲ್ಲಿ ವಿಶ್ವನಾಥ್ ಅವರು ಉಲ್ಲೇಖಿಸಿದ್ದಾರೆ.

  • ಮೈತ್ರಿ ಸರ್ಕಾರದ ಪರಿಸ್ಥಿತಿ ಹೆಂಡತಿ ಸತ್ತ ಗಂಡನ ಲವ್ ಮ್ಯಾರೇಜ್‍ನಂತಿದೆ – ಲಕ್ಷ್ಮಣ ಸವದಿ

    ಮೈತ್ರಿ ಸರ್ಕಾರದ ಪರಿಸ್ಥಿತಿ ಹೆಂಡತಿ ಸತ್ತ ಗಂಡನ ಲವ್ ಮ್ಯಾರೇಜ್‍ನಂತಿದೆ – ಲಕ್ಷ್ಮಣ ಸವದಿ

    ಬೆಳಗಾವಿ: ರಾಜ್ಯ ಮೈತ್ರಿ ಸರ್ಕಾರದ ಪರಿಸ್ಥಿತಿ ಗಂಡ ಬಿಟ್ಟ ಹೆಂಡತಿ ಮತ್ತು ಹೆಂಡತಿ ಸತ್ತ ಗಂಡನ ಲವ್ ಮ್ಯಾರೇಜ್‍ನಂತಿದೆ ಎಂದು ಅಥಣಿ ಮಾಜಿ ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.

    ಅಥಣಿ ಪಟ್ಟಣದಲ್ಲಿರುವ ತಮ್ಮ ಸ್ವಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸದ್ಯ ಹೊಸದಾಗಿ ಮದುವೆಯಾದ ಗಂಡ ಹೆಂಡತಿಯಂತಿದೆ. ಸರ್ಕಾರದಲ್ಲಿ ಒಬ್ಬರಿಗೊಬ್ಬರು ತಾಳ ತಂತಿ ಇಲ್ಲ ಹೊಂದಾಣಿಕೆ ಇಲ್ಲ ಎಂದು ಲೇವಡಿ ಮಾಡಿದರು.

    ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಸಹ ಯಾವುದೇ ಹೊಸ ಯೋಜನೆ ಇಲ್ಲ. ರಾಜ್ಯ ಸರ್ಕಾರದವರು ನರೇಗಾ ಯೋಜನೆಯಲ್ಲಿ ಕೆಲಸ ಮಾಡಿಸಿ ಅಂತ ಹೇಳುತ್ತಾರೆ. ಆದರೆ ಆ ಯೋಜನೆ ಕೇಂದ್ರ ಸರ್ಕಾರದ್ದು. ಹಾಗಾದರೆ ಇವರ ಕೊಡುಗೆ ಏನು ಎಂದು ಪ್ರಶ್ನಿಸಿವ ಮೂಲಕ ಮೈತ್ರಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ ಹಾಗೂ ಮಾಜಿ ಪ್ರಧಾನಿ ದೇವೇಗೌಡರಿಗೂ 20 ವರ್ಷಗಳ ಹಳೆಯ ರಾಜಕೀಯ ದ್ವೇಷವಿದೆ. 2004 ರಲ್ಲಿ ಸಿದ್ದರಾಮಯ್ಯಗೆ ಮುಖ್ಯಮಂತ್ರಿಯಾಗುವ ಅವಕಾಶವಿತ್ತು ಆದರೆ ದೇವೇಗೌಡರು ಅದಕ್ಕೆ ಅಡ್ಡಗಾಲು ಹಾಕಿ ಆ ಅವಕಾಶ ಕಸಿದುಕೊಂಡಿದ್ದರು. ತಮ್ಮಿಂದ ಸಿಎಂ ಸ್ಥಾನ ಕಸಿದಿದ್ದಕ್ಕೆ ಸಿದ್ದು ಅವರ ಜೊತೆ ಮೈತ್ರಿ ಮಾಡಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಆ ಒಂದು ಆಕ್ರೋಶದಿಂದಲೇ ಸಿದ್ದರಾಮಯ್ಯ ಗೌಡರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರ ರಾಜಕೀಯ ಒಳ ಸುಳಿವು ನೋಡಿದಾಗ ಇದೆಲ್ಲ ಗೊತ್ತಾಗುತ್ತದೆ ಎಂದು ಲಕ್ಷ್ಮಣ ಸವದಿ ಹೇಳಿದರು.

  • ‘ದಳಪತಿ’ ಸಾಮ್ರಾಜ್ಯದ ಯುವರಾಜ ಪಟ್ಟ ನಿಖಿಲ್‍ಗಾ, ಪ್ರಜ್ವಲ್‍ಗಾ?

    ‘ದಳಪತಿ’ ಸಾಮ್ರಾಜ್ಯದ ಯುವರಾಜ ಪಟ್ಟ ನಿಖಿಲ್‍ಗಾ, ಪ್ರಜ್ವಲ್‍ಗಾ?

    ಬೆಂಗಳೂರು: ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಗಿಂತಲೂ ಜೆಡಿಎಸ್ ‘ದಳಪತಿ’ ಸಾಮ್ರಾಜ್ಯದ ಯುವರಾಜ ಪಟ್ಟದ ಸಾರಥಿ ಯಾರು? ಯಾರಿಗೆ ಒಲಿಯುತ್ತೆ ಜೆಡಿಎಸ್‍ನ ಯುವರಾಜನ ಪಟ್ಟ ಎಂಬ ಪ್ರಶ್ನೆಯೊಂದು ಈಗ ಜೆಡಿಎಸ್ ಪಾಳ್ಯದಲ್ಲಿ ಶುರುವಾಗಿದೆ.

    ಹೌದು ಜೆಡಿಎಸ್ ಯುವಘಟಕದ ಮಧುಬಂಗಾರಪ್ಪ ಸ್ಥಾನವನ್ನು ಮೊಮ್ಮಕ್ಕಳಿಗೆ ನೀಡಲು ದೇವೇಗೌಡರು ಚಿಂತನೆ ಮಾಡಿದ್ದಾರೆ. ಆದರೆ ಈ ಸ್ಥಾನ ಮಂಡ್ಯದಲ್ಲಿ ಸೋತಾ ನಿಖಿಲ್‍ಗಾ ಇಲ್ಲಾ ಹಾಸನದಲ್ಲಿ ಗೆದ್ದ ಪ್ರಜ್ವಲ್‍ಗಾ? ಯಾವ ಮೊಮ್ಮಗನಿಗೆ ಗಿಫ್ಟ್ ಕೊಡ್ತಾರೆ ದೇವೇಗೌಡರು ಎಂದು ಎಲ್ಲರೂ ಎದುರು ನೋಡುವಂತಾಗಿದೆ.

    ಲೋಕಸಭಾ ಚುನಾವಣೆಯಲ್ಲಿ ಒಂದೇ ಒಂದು ಸೀಟು ಗೆದ್ದಿದ್ದು. ತುಮಕೂರಿನಲ್ಲಿ ತನ್ನ ಸೋಲು, ಮಂಡ್ಯದಲ್ಲಿ ಮೊಮ್ಮಗನ ಪರಾಭವ ಇವೆಲ್ಲವೂ ಮಾಜಿ ಪ್ರಧಾನಿ ದೇವೇಗೌಡರನ್ನು ಕಂಗೆಡಿಸಿದೆ. ಅದರಿಂದ ಪಕ್ಷದ ಬಲವರ್ಧನೆಯ ಬಗ್ಗೆ ಚಿಂತೆ ಮಾಡುತ್ತಿರುವ ಗೌಡರು ಈಗ ದಳಪತಿ ಸಾಮ್ರಾಜ್ಯದ ಯುವರಾಜನ ಪಟ್ಟವನ್ನು ಮಧುಬಂಗಾರಪ್ಪನವರ ಬದಲು ಮೊಮ್ಮಕ್ಕಳಿಗೆ ನೀಡಲು ಉತ್ಸುಕತೆ ತೋರಿದ್ದಾರೆ ಎನ್ನಲಾಗಿದೆ.

    ಮಂಡ್ಯದಲ್ಲಿ ಸೋತಾ ನಿಖಿಲ್ ಅವರಿಗೆ ಸಾರಥ್ಯ ವಹಿಸಿಕೊಳ್ಳುವಂತೆ ಅವರ ಬೆಂಬಲಿಗರು ಒತ್ತಾಯ ಮಾಡುತ್ತಿದ್ದಾರಂತೆ. ಆದರೆ ಪಕ್ಷ ಸಂಘಟನೆಯಲ್ಲಿ ಪ್ರಜ್ವಲ್ ಆಸಕ್ತಿ ತೋರಿಸಿರುವುದರಿಂದ ಪ್ರಜ್ವಲ್ ಹೆಸರು ಚಾಲ್ತಿಯಲ್ಲಿದೆ.

    ಸೋತ ಬಳಿಕವೂ ನಿಖಿಲ್ ಸುಮಲತಾ ಹಾಗೂ ಅಭಿಷೇಕ್‍ಗೆ ಹಾರೈಸಿದ ಪರಿ, ಮಂಡ್ಯದ ಜನರ ಜೊತೆ ಸದಾ ಇರುತ್ತೇನೆ ಎಂದು ನೀಡಿರುವ ಭರವಸೆ ನಿಖಿಲ್ ಇಮೇಜ್ ಬದಲಾಯಿಸಿದೆ. ನಿಖಿಲ್ ನಡೆ ಒಬ್ಬ ಪ್ರಬುದ್ಧ ರಾಜಕಾರಣಿಯಂತಿದೆ. ನೀವು ಸಿನಿಮಾ ಬಿಟ್ಟಾಕಿ ರಾಜಕೀಯದ ಅಖಾಡದಲ್ಲಿ ಫುಲ್ ಟೈಂ ತೊಡಗಿಸಿಕೊಳ್ಳಿ ಎಂದು ಅಭಿಮಾನಿಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ.

  • ಸಿದ್ದರಾಮಯ್ಯ ಮರಕೋತಿ ಆಟವಾಡಲು ಸರಿ: ಆಯನೂರು ಮಂಜುನಾಥ್ ವ್ಯಂಗ್ಯ

    ಸಿದ್ದರಾಮಯ್ಯ ಮರಕೋತಿ ಆಟವಾಡಲು ಸರಿ: ಆಯನೂರು ಮಂಜುನಾಥ್ ವ್ಯಂಗ್ಯ

    ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮರಕೋತಿ ಆಟವಾಡಲು ಸರಿ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ವ್ಯಂಗ್ಯವಾಡಿದ್ದಾರೆ.

    ಶಿವಮೊಗ್ಗ ಗ್ರಾಮಾಂತರ ಮತದಾರರಿಗೆ ಮತ್ತು ಸಾರ್ವಜನಿಕರಿಗೆ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ತಮ್ಮ ಘನತೆಗೆ ತಕ್ಕಂತೆ ಮಾತನಾಡದೇ, ಮೋದಿಯವರಿಂದ ಹಿಡಿದು ಯಡಿಯೂರಪ್ಪನವರೆಗೂ ಟೀಕಿಸಿ ಏಕಪಾತ್ರಾಭಿನಯ ಮಾಡಿದರು. ಈಗ ಮತದಾರರು ಅವರಿಗೆಲ್ಲರಿಗೂ ಒಳ್ಳೆಯ ಪಾಠ ಕಲಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ನಮ್ಮ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಸೋಲಿಸಲು ಮೈತ್ರಿಕೂಟದ ನಾಯಕರೆಲ್ಲರೂ ಶಿವಮೊಗ್ಗಕ್ಕೆ ಬಂದಿದ್ದರು. ಸಚಿವ ಡಿ.ಕೆ. ಶಿವಕುಮಾರ್ ಶಿವಮೊಗ್ಗಕ್ಕೆ ಬಂದು ಟೈರ್ ಟ್ಯೂಬ್ ಗಿರಾಕಿಯಾಗಿ ಬಿಟ್ಟಿದ್ದರು. ಅವರಿಗೂ ಮಧು ಬಂಗಾರಪ್ಪ ಚುನಾವಣೆಯಲ್ಲಿ ಸೋಲುತ್ತಾರೆ ಎಂದು ಮೊದಲೇ ಗೊತ್ತಿತ್ತು. ಆದರೆ ಮಧು ಬಂಗಾರಪ್ಪರ ಒತ್ತಾಯಕ್ಕೆ ಬಂದು ಪ್ರಚಾರ ಮಾಡಿ ಹೋದರು ಎಂದು ಡಿ.ಕೆ ಶಿವಕುಮಾರ್ ಅವರ ಕಲೆಳೆದರು.

    ಮಾಜಿ ಪ್ರಧಾನಿ ದೇವೇಗೌಡರು ಮತ್ತು ಸಿದ್ದರಾಮಯ್ಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಒಂದಂಕಿ ದಾಟಲು ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಈಗ ಅವರೇ ಒಂದೊಂದು ಅಂಕಿ ಇಟ್ಟುಕೊಂಡು ಅವಮಾನಕ್ಕೊಳಗಾಗಿದ್ದಾರೆ. ನಿಖಿಲ್ ಮಂಡ್ಯದಲ್ಲಿ ಸೋತರೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದ ಸಚಿವ ಪುಟ್ಟರಾಜು ಈಗ ಎಲ್ಲಿ ಹೋಗಿದ್ದಾರೆ. ಅದೇ ರೀತಿ ದೇವೇಗೌಡರು ಕೂಡ ಹೇಳಿಕೆ ನೀಡಿ ಈಗ ರಾಜೀನಾಮೆ ನೀಡದೆ ಚುನಾವಣೆಗೆ ನಿಂತು ಸೋತಿದ್ದಾರೆ ಎಂದು ಲೇವಡಿ ಮಾಡಿದರು.

    ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷದ ನಾಯಕರನ್ನು ತೊದಲರಿಗೆ ಹೋಲಿಸಿದ ಆಯನೂರು, ತೊದಲು ತೊದಲಾಗಿ ಮಾತನಾಡುವ ಕಾಂಗ್ರೆಸ್ ಹಾಗೂ ಜೆಡಿಎಸ್‍ನವರು ಇಬ್ಬರು ಈಗ ಮಾತನಾಡದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮೈತ್ರಿನಾಯಕರ ಕಾಲೆಳೆದರು.