Tag: Devendrappa

  • ಬಳ್ಳಾರಿ ಸಂಸದ ದೇವೇಂದ್ರಪ್ಪ ಮಗನಿಂದ ಪ್ರೀತಿ, ಸೆಕ್ಸ್‌ ಹೆಸರಲ್ಲಿ ವಂಚನೆ

    ಬಳ್ಳಾರಿ ಸಂಸದ ದೇವೇಂದ್ರಪ್ಪ ಮಗನಿಂದ ಪ್ರೀತಿ, ಸೆಕ್ಸ್‌ ಹೆಸರಲ್ಲಿ ವಂಚನೆ

    ಬೆಂಗಳೂರು: ಬಳ್ಳಾರಿಯ (Bellary) ಬಿಜೆಪಿ ಸಂಸದ ದೇವೇಂದ್ರಪ್ಪ (MP Devendrappa) ಪುತ್ರನಿಂದ ಪ್ರೀತಿ ಹೆಸರಲ್ಲಿ ವಂಚನೆಯ ಆರೋಪ ಕೇಳಿಬಂದಿದೆ. ಎಂಪಿ ದೇವೆಂದ್ರಪ್ಪ ಅವರ ಮಗನ ವಿರುದ್ಧ ಯುವತಿಯೊಬ್ಬಳು ಗಂಭೀರ ಆರೋಪ ಮಾಡಿದ್ದಾಳೆ.

    ಮೈಸೂರಿನಲ್ಲಿ (Mysuru) ಲೆಕ್ಚರರ್ ಆಗಿ ಕಾರ್ಯನಿರ್ವಹಿಸುತ್ತಿರುವ ರಂಗನಾಥ್ (Ranganath) ಬೆಂಗಳೂರು (Bengaluru) ಮೂಲದ ಯುವತಿಗೆ ವಂಚಿಸಿರುವುದಾಗಿ (Fraud) ಆರೋಪಿಸಲಾಗಿದೆ. ಒಂದೂವರೆ ವರ್ಷದ ಹಿಂದೆ ಸ್ನೇಹಿತರ ಮೂಲಕ 42 ವರ್ಷದ ರಂಗನಾಥ್‌ಗೆ 24 ವರ್ಷದ ಯುವತಿಯ ಪರಿಚಯವಾಗಿತ್ತು. ನಂತರ ಯುವತಿಯೊಂದಿಗೆ ರಂಗನಾಥ್ ಲವ್ವಿಡವ್ವಿ ಶುರುಮಾಡಿದ್ದರು ಎಂಬ ಆರೋಪ ಬಂದಿದೆ.

    ಕಳೆದ ಜನವರಿಯಲ್ಲಿ ಮೈಸೂರಿನ ಖಾಸಗಿ ಹೋಟೇಲ್ ಒಂದರಲ್ಲಿ ಇಬ್ಬರೂ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಬಳಿಕ ಯುವತಿ ರಂಗನಾಥ್‌ಗೆ ತನ್ನನ್ನು ಮದುವೆಯಾಗುವಂತೆ ಕೇಳಿಕೊಂಡಿದ್ದಳು. ಆದರೆ ಬಳಿಕ ರಂಗನಾಥ್ ಯುವತಿಯನ್ನು ಕಡೆಗಣಿಸಲು ಪ್ರಾರಂಭಿಸಿದ್ದರು. ನಿನ್ನನ್ನು ಮದುವೆ ಆಗಲ್ಲ, ಏನು ಮಾಡ್ತೀಯೋ ಮಾಡಿಕೋ ಎಂದು ರಂಗನಾಥ್ ಹೇಳಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾಳೆ. ಇದನ್ನೂ ಓದಿ: ಸೋಮಣ್ಣ ಕಾಂಗ್ರೆಸ್‌ಗೆ ಬಂದರೆ ಸ್ವಾಗತ ಮಾಡ್ತೀನಿ: ಪರಮೇಶ್ವರ್‌

    ಇದೆಲ್ಲದರ ಬಳಿಕ ಯುವತಿ ರಂಗನಾಥ್ ವಿಚಾರವನ್ನು ದೇವೇಂದ್ರಪ್ಪ ಅವರ ಗಮನಕ್ಕೆ ತಂದಿದ್ದಾಳೆ. ಆದರೆ ಯುವತಿಯ ವಿರುದ್ಧ ಎಂಪಿ ದೇವೇಂದ್ರಪ್ಪ ಗರಂ ಆಗಿದ್ದಾರೆ. ಕೊನೆಗೆ ಬೇರೆ ಯಾವ ದಾರಿಯೂ ಕಾಣದೆ ಸಂತ್ರಸ್ತೆ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ.

    ಇದೀಗ ಎಂಪಿ ದೇವೇಂದ್ರಪ್ಪ ಅವರ ಮಗ ರಂಗನಾಥ್ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: 15 ನಿಮಿಷದಲ್ಲಿ 4 ಕೊಲೆ, ಇದು ವಿಶ್ವ ದಾಖಲೆ – ಸ್ಟೇಟಸ್ ಹಾಕಿದಾತನಿಗೆ ಬಿಸಿ ಮುಟ್ಟಿಸಿದ ಪೊಲೀಸರು

  • ಎಸಿಬಿ ಬಲೆಗೆ ಬಿದ್ದ ದೇವೇಂದ್ರ ಅಮಾನತು

    ಎಸಿಬಿ ಬಲೆಗೆ ಬಿದ್ದ ದೇವೇಂದ್ರ ಅಮಾನತು

    ಬೆಂಗಳೂರು: ಬೊಮ್ಮನಹಳ್ಳಿ ಎಡಿಟಿಪಿ ದೇವೇಂದ್ರಪ್ಪ ಎಸಿಬಿ ದಾಳಿ ವಿಚಾರವಾಗಿ ಬಿಬಿಎಂಪಿ ಕಮೀಷನರ್ ಮಂಜುನಾಥ್ ಪ್ರಸಾದ್ ಅಮಾನತು ಆದೇಶ ಹೊರಡಿಸಿದರು.

    ಈ ಸಂಬಂಧ ಮಾತನಾಡಿ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಎಸಿಬಿ ತನಿಖಾ ವರದಿ ಬಂದ ಮೇಲೆ ತೀರ್ಮಾನ ಆಗಲಿದೆ. ಪಾಲಿಕೆ ಎಲ್ಲ ತೀರ್ಮಾನ ಕೈಗೊಳ್ಳಲು ಸಜ್ಜಾಗಿದೆ. ನಕಲಿ ಒಸಿ ನಕಲಿ ಸೀಲ್ ಹಾಕಲು ಮನೆಯಲ್ಲಿ ಇಟ್ಟಿದ್ದು, ಅನುಮತಿ ಇಲ್ಲದೇ ಕಟ್ಟಡ ಕಟ್ಟಿದ್ದವರಿಗೆ ಅನುಮತಿ ನೀಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಅಕ್ರಮ ಕಟ್ಟಡ ಮಾಲೀಕರಿಗೂ ಒಸಿ ಪಡೆಯಲು ಇಂತಹ ವ್ಯಕ್ತಿಗಳ ಬಳಸುತ್ತಿದ್ದ ಮಾಹಿತಿ ಇದೆ. ಈ ಮಾಲೀಕದ ವಿರುದ್ಧವು ಕ್ರಿಮಿನಲ್ ಕೇಸ್ ಹಾಕಲು ತೀರ್ಮಾನವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: 20 ಲಕ್ಷ ಹಣ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಬಿಬಿಎಂಪಿ ಅಧಿಕಾರಿ

    ಸದ್ಯ ಕಟ್ಟಡ ಒಸಿ ಇಲ್ಲದೇ ಜಲಮಂಡಳಿ, ಬೆಸ್ಕಾಂ ಸೇವೆ ಸಿಗಲ್ಲ. ಹೀಗಾಗಿ ನಕಲಿ ಸೀಲ್, ದಾಖಲೆ ಸೃಷ್ಟಿಸಿ ಒಸಿ ನೀಡುತ್ತಿದ್ದ ಎಂಬ ಮಾಹಿತಿಯೂ ಲಭ್ಯವಾಗಿದೆ. ಹೀಗಾಗಿ ಸರ್ಕಾರಿ ಕೆಲಸದಿಂದಲೇ ಈ ಅಧಿಕಾರಿ ವಜಾದ ಬಗ್ಗೆ ಆಲೋಚನೆ ಮಾಡಿ ತೀರ್ಮಾನ ಮಾಡಲಾಗುವುದು ಎಂದರು. ಇದನ್ನೂ ಓದಿ: ರಾಜ್ಯದ 7 ಭ್ರಷ್ಟರ ಮೇಲೆ ಎಸಿಬಿ ದಾಳಿ – ಕಂತೆ ಕಂತೆ ಹಣ ಎಣಿಸಿ ಅಧಿಕಾರಿಗಳು ಸುಸ್ತು

    ಕಟ್ಟಡವೊಂದಕ್ಕೆ ಓಸಿ ನೀಡಲು ದೇವೇಂದ್ರಪ್ಪ ಬರೋಬ್ಬರಿ 40 ಲಕ್ಷ ಹಣ ಕೇಳಿದ್ದರಂತೆ. ಅದರ ಅಡ್ವಾನ್ಸ್ ಹಣವಾಗಿ 20 ಲಕ್ಷ ಹಣ ತೆಗೆದುಕೊಳ್ಳೊವಾಗ ಎಸಿಬಿ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ನಂತರ ವಿಚಾರಣೆಗೆ ಒಳಪಡಿಸಿದಾಗ ಬಿಬಿಎಂಪಿ ಕಚೇರಿಯಲ್ಲೇ ಒಂದಷ್ಟು ನಗದು, ಕಾರಿನಲ್ಲಿ ಏಳುವರೇ ಲಕ್ಷ ಹಣ ಎಲ್ಲವೂ ಸಿಕ್ಕಿತ್ತು. ನಂತರ ಮನೆಯಲ್ಲಿ ಹುಡುಕಾಡಿದಾಗ ಎಸಿಬಿ ಅಧಿಕಾರಿಗಳಿಗೆ ಶಾಕ್ ಕಾದಿತ್ತು ಯಾಕೆಂದರೆ ಮನೆಯಲ್ಲಿ ಮಿನಿ ಬಾರ್ ಒಂದು ತೆರೆದುಕೊಂಡಿತ್ತು. ಇಲ್ಲಿ ವಿದೇಶಿ ಸೇರಿದಂತೆ 120 ಲೀಟರ್ ವಿವಿಧ ಬ್ರ್ಯಾಂಡ್ ನ ಎಣ್ಣೆ ಬಾಟಲ್‍ಗಳು ಪತ್ತೆಯಾಗಿವೆ. ಜೊತೆಗೆ ಬಿಬಿಎಂಪಿ ಕಚೇರಿಯಲ್ಲಿ ಇರಬೇಕಾದ ಬರೋಬ್ಬರಿ 480 ಫೈಲ್‍ಗಳು, ಹಿರಿಯ ಅಧಿಕಾರಿಗಳ ಹೆಸರಿನ ನಕಲಿ ಸೀಲು, ಸೈನ್‍ಗಳು, ವಿವಿಧ ಬ್ಯಾಂಕ್‍ಗಳ ಬೇನಾಮಿ ಅಕೌಂಟ್‍ಗಳು, ಆಸ್ತಿ ಪತ್ರಗಳು ದೊರೆತಿದೆ.