Tag: DG IGP

  • ರಾಜ್ಯದ ಪ್ರಭಾರ ಡಿಜಿ & ಐಜಿಪಿಯಾಗಿ ಎಂ.ಎ.ಸಲೀಂ ನೇಮಕ

    ರಾಜ್ಯದ ಪ್ರಭಾರ ಡಿಜಿ & ಐಜಿಪಿಯಾಗಿ ಎಂ.ಎ.ಸಲೀಂ ನೇಮಕ

    ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಕನ್ನಡಿಗ ಎಂ.ಎ.ಸಲೀಂ (M.A.Saleem) ಅವರನ್ನು ರಾಜ್ಯದ ನೂತನ ಪ್ರಭಾರ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

    ಅಲೋಕ್ ಮೋಹನ್ ಅವರ ಜಾಗಕ್ಕೆ ಸಲೀಂ ಅಹಮದ್ ನೇಮಕಗೊಂಡಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಅಲೋಕ್ ಮೋಹನ್ ಅವರು ಏ.30ರಂದು ನಿವೃತ್ತರಾಗಿದ್ದರು. ಮೇ 21 ರ ವರೆಗೆ ಅವರ ಅವಧಿಯನ್ನು ಸರ್ಕಾರ ವಿಸ್ತರಿಸಿತ್ತು.

    ಕೇಂದ್ರ ಲೋಕಸೇವಾ ಆಯೋಗದಿಂದ ಮೂವರು ಶಾರ್ಟ್ ಲಿಸ್ಟ್ ಬಾರದ ಹಿನ್ನೆಲೆ ಪೂರ್ಣಾವಧಿ ಡಿಜಿ/ಐಜಿಪಿ ಆದೇಶ ಮಾಡದೇ ಸರ್ಕಾರ ಹೆಚ್ಚುವರಿ ಹೊಣೆ ಆದೇಶ ಮಾಡಿದೆ. ತಾಂತ್ರಿಕ ಸಮಸ್ಯೆ, ಕಾನೂನು ಅಡ್ಡಿ ಹಿನ್ನೆಲೆಯಲ್ಲಿ ಸರ್ಕಾರ ಜಾಣ ನಡೆ ಅನುಸರಿಸಿದೆ.

  • ಡಿಜಿ-ಐಜಿಪಿಯಾಗಿ ಅಲೋಕ್‌ ಮೋಹನ್‌ ನೇಮಕ

    ಡಿಜಿ-ಐಜಿಪಿಯಾಗಿ ಅಲೋಕ್‌ ಮೋಹನ್‌ ನೇಮಕ

    ಬೆಂಗಳೂರು: ಕರ್ನಾಟಕ ಪೊಲೀಸ್‌ ಮಹಾನಿರ್ದೇಶಕರಾಗಿ ಅಲೋಕ್‌ ಮೋಹನ್‌ (Alok Mohan) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಕೆಲ ತಿಂಗಳ ಹಿಂದೆ ಕರ್ನಾಟಕದ ಡಿಜಿ-ಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಅಲೋಕ್‌ ಮೋಹನ್‌ ಅವರನ್ನು ನಿಯೋಜಿಸಲಾಗಿತ್ತು. ಇದನ್ನೂ ಓದಿ: ಮುಂದಿನ ಜನ್ಮದಲ್ಲೂ ಅಂತಹ ತಮ್ಮ ಬೇಡ- ಡಿಕೆಶಿಗೆ ಹೆಚ್‍ಡಿಕೆ ಟಾಂಗ್

    ಪ್ರವೀಣ್ ಸೂದ್‌ ನಿರ್ಗಮನದ ಬಳಿಕ ಡಿಜಿ-ಐಜಿಪಿಯಾಗಿ (DG-IGP) ಅಲೋಕ್‌ ಮೋಹನ್‌ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿತ್ತು. ಈಗ ಆ ಸ್ಥಾನಕ್ಕೆ ಅವರನ್ನೇ ನೇಮಿಸಿ ಸರ್ಕಾರ ಆದೇಶಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೂತನ ಸರ್ಕಾರ ರಚನೆಯಾದ ಬೆನ್ನಲ್ಲೇ ಅಲೋಕ್‌ ಮೋಹನ್‌ಗೆ ಡಿಜಿ-ಐಜಿಪಿ ಹೊಣೆ

    ನೂತನ ಸರ್ಕಾರ ರಚನೆಯಾದ ಬೆನ್ನಲ್ಲೇ ಅಲೋಕ್‌ ಮೋಹನ್‌ಗೆ ಡಿಜಿ-ಐಜಿಪಿ ಹೊಣೆ

    ಬೆಂಗಳೂರು: ಐಪಿಎಸ್‌ ಅಧಿಕಾರಿ ಅಲೋಕ್‌ ಮೋಹನ್‌ (Alok Mohan) ಅವರಿಗೆ ಡಿಜಿ-ಐಜಿಪಿಯಾಗಿ ಅಲೋಕ್‌ ಮೋಹನ್‌ ಅವರಿಗೆ ಹೆಚ್ಚುವರಿ ಹೊಣೆ ನೀಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

    ಡಿಜಿಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಅವರನ್ನು ಸಿಬಿಐ ನಿರ್ದೇಶಕರಾಗಿ ನೇಮಕ ಮಾಡಲಾಯಿತು. ತೆರವಾಗಿದ್ದ ಸ್ಥಾನಕ್ಕೆ ಅಲೋಕ್‌ ಮೋಹನ್‌ ಅವರಿಗೆ ಹೆಚ್ಚುವರಿ ಹೊಣೆ ನೀಡಿ ನಿಯೋಜಿಸಲಾಗಿದೆ.

    ಕರ್ನಾಟಕ ನೂತನ ಸರ್ಕಾರ ರಚನೆಯಾದ ಬೆನ್ನಲ್ಲೇ ಈ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಿದರು. ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

  • ಪೊಲೀಸ್ ಮಹಾನಿರ್ದೇಶಕರ ನಿವೃತ್ತಿಯ ದಿನ ಹೇಗಿರುತ್ತೆ ಗೊತ್ತಾ?

    ಪೊಲೀಸ್ ಮಹಾನಿರ್ದೇಶಕರ ನಿವೃತ್ತಿಯ ದಿನ ಹೇಗಿರುತ್ತೆ ಗೊತ್ತಾ?

    ಬೆಂಗಳೂರು: ಅದು ಅಂತಿಂತ ಸಾಮಾನ್ಯ ಹುದ್ದೆಯಲ್ಲ. ಐಎಎಸ್‍ನಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆ ಹೇಗೋ ಐಪಿಎಸ್‍ನಲ್ಲಿ ಡಿಜಿ ಅಂಡ್ ಐಜಿಪಿ ಹುದ್ದೆಗಿರುವ ಮಹತ್ವ ಅಂತದ್ದು. ಐಪಿಎಸ್ ಆಗುವ ಪ್ರತಿಯೊಬ್ಬ ಅಧಿಕಾರಿಯ ಆಸೆ ಕೂಡ ಪೊಲೀಸ್ ಇಲಾಖೆಯ ಅತ್ಯುನ್ನತ ಹುದ್ದೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಬೇಕು ಎನ್ನುವುದು.

    ಡಿಜಿ ಅಂಡ್ ಐಜಿಪಿ ಪೋಸ್ಟ್ ನಲ್ಲಿದ್ದವರ ನಿವೃತ್ತಿಯ ದಿನ ಹೇಗಿರುತ್ತೆ ಗೊತ್ತಾ? ನಿಜಕ್ಕೂ ಇದು ಕುತೂಹಲವೇ ಸರಿ. ನಿವೃತ್ತಿಯ ದಿನದಂದು ಇಡೀ ಐಪಿಎಸ್ ಅಧಿಕಾರಿಗಳು ಡಿಜಿ ಕಚೇರಿಗೆ ಕ್ರಾಸ್ ಬೆಲ್ಟ್‌ನಲ್ಲಿ ಬಂದು ಗೌರವ ಸಲ್ಲಿಸುತ್ತಾರೆ. ಕೆಎಸ್‌ಆರ್‌ಪಿ ವತಿಯಿಂದ ಗಾರ್ಡ್ ಆಫ್ ಹಾನರ್ ಸಲ್ಲಿಸಲಾಗುತ್ತದೆ. ಅಷ್ಟೇ ಅಲ್ಲದೆ ಹಿರಿಯ ಅಧಿಕಾರಿಗಳ ಜೊತೆ ಅವತ್ತು ಟೀ ಕುಡಿಯುತ್ತಾರೆ. ಇದನ್ನೂ ಓದಿ: ಡಿಜಿ-ಐಜಿಪಿ ನೀಲಮಣಿ ಸೇರಿ ಮೂವರು ಐಪಿಎಸ್ ಅಧಿಕಾರಿಗಳು ನಿವೃತ್ತಿ

    ಡಿಜಿ ಕಚೇರಿಯನ್ನು ತಳಿರು ತೋರಣಗಳಿಂದ ಅಲಂಕೃತಗೊಳಿಸಿ, ಒಂದು ಜೀಪ್ ಅನ್ನು ಸಹ ಹೂಗಳಿಂದ ಅಲಂಕೃತಗೊಳಿಸುತ್ತಾರೆ. ಆ ಜೀಪ್‍ನ ಮುಂಭಾಗದಲ್ಲಿ ಎರಡೂ ಕಡೆ ಉದ್ದದ ಹಗ್ಗ ಕಟ್ಟುತ್ತಾರೆ. ಸಂಜೆ ವೇಳೆಗೆ ಅಲಂಕೃತ ಜೀಪ್‍ನಲ್ಲಿ ನಿರ್ಗಮಿತ ಡಿಜಿ ಅಂಡ್ ಐಜಿಪಿಯವರನ್ನ ನಿಲ್ಲಿಸಲಾಗುತ್ತದೆ. ಐಪಿಎಸ್ ಅಧಿಕಾರಿ ವರ್ಗ ತೇರು ಎಳೆದಂತೆ ಜೀಪನ್ನು ಎಳೆದುಕೊಂಡು ಹೋಗಿ ಡಿಜಿಯವರನ್ನು ಅವರ ಮನೆಗೆ ಬಿಡುತ್ತಾರೆ. ಇದೊಂಥಾರ ನೋಡಲು ರೋಮಾಂಚಕ ಅನುಭವ ಕೊಡುತ್ತದೆ. ಹೀಗೆ ನಿರ್ಗಮಿತ ಡಿಜಿ ಅಂಡ್ ಐಜಿಪಿಯವರ ಕೊನೆಯ ಸೇವಾ ದಿನವನ್ನ ಅವಿಸ್ಮರಣೀಯವಾಗಿ ನೋಡಿಕೊಳ್ಳಲಾಗುತ್ತದೆ. ಇದನ್ನೂ ಓದಿ: ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಪ್ರವೀಣ್ ಸೂದ್ ನೇಮಕ

  • ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಪ್ರವೀಣ್ ಸೂದ್ ನೇಮಕ

    ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಪ್ರವೀಣ್ ಸೂದ್ ನೇಮಕ

    ಬೆಂಗಳೂರು: ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಪ್ರವೀಣ್ ಸೂದ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

    ನೀಲಮಣಿ ಎನ್. ರಾಜು ಶುಕ್ರವಾರ ನಿವೃತ್ತರಾಗಿದ್ದು, ಅವರ ಸ್ಥಾನಕ್ಕೆ ಪ್ರವೀಣ್ ಸೂದ್ ಆಯ್ಕೆ ಆಗಿದ್ದಾರೆ. ಡಿಜಿ-ಐಜಿಪಿ ಹುದ್ದೆಯ ರೇಸ್‍ನಲ್ಲಿ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳಿದ್ದರು. ಸೇವಾ ಹಿರಿತನ ಹೊಂದಿರುವ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಎಎಂ ಪ್ರಸಾದ್, ಸಿಐಡಿ, ಡಿಜಿಪಿ ಪ್ರವೀಣ್ ಸೂದ್, ನೇಮಕಾತಿ ವಿಭಾಗದ ಡಿಜಿಪಿ ಪಿ.ಕೆ ಗರ್ಗ್ ಹೆಸರುಗಳು ಡಿಜಿ-ಐಜಿಪಿ ರೇಸ್‍ನಲ್ಲಿ ಕೇಳಿಬಂದಿತ್ತು.

    ಡಿಜಿ- ಐಜಿಪಿ ಹುದ್ದೆಗೆ ಸೇವಾ ಹಿರಿತನ ಹೊಂದಿರುವ ಈ ಮೂವರು ಹಿರಿಯ ಅಧಿಕಾರಿಗಳ ಹೆಸರುಗಳನ್ನು ರಾಜ್ಯ ಸರ್ಕಾರ ಕೇಂದ್ರ ಲೋಕಸೇವಾ ಆಯೋಗಕ್ಕೆ ಕಳಿಸಿಕೊಟ್ಟಿತ್ತು. ಈಗ ಕೇಂದ್ರ ಲೋಕಸೇವಾ ಆಯೋಗವು ಲಕೋಟೆ ಮೂಲಕ ಡಿಜಿ-ಐಜಿಪಿ ಹುದ್ದೆಗೆ ಆಯ್ಕೆ ಮಾಡಬೇಕಾದ ಹೆಸರುಗಳನ್ನು ಆಯ್ಕೆ ಮಾಡಿ ಕಳಿಸಿಕೊಟ್ಟಿದೆ.

    ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಕೇಂದ್ರ ಲೋಕಸೇವಾ ಆಯೋಗಕ್ಕೆ ಡಿಜಿ-ಐಜಿಪಿ ಹುದ್ದೆಗೆ ಆಯ್ಕೆ ಮಾಡಬೇಕಾದ ಸಂಭಾವ್ಯರ ಹೆಸರುಗಳನ್ನು ಆಯ್ಕೆ ಮಾಡಿತ್ತು.

    ಈ ಪೈಕಿ 1985 ಕೇಡರಿನ ಅಧಿಕಾರಿ ಎ.ಎಂ ಪ್ರಸಾದ್ ಅವರಿಗೆ ಇನ್ನೂ 9 ತಿಂಗಳ ಸೇವಾವಧಿ ಇದೆ. 1986ನೇ ಕೇಡರಿನ ಅಧಿಕಾರಿಗಳಾದ ಪ್ರವೀಣ್ ಸೂದ್ ಅವರಿಗೆ ಇನ್ನೂ 2 ವರ್ಷ ಸೇವಾವಧಿ ಉಳಿದಿದ್ರೆ, ಪಿ ಕೆ ಗರ್ಗ್ ಅವರಿಗೆ 1.5 ವರ್ಷ ಸೇವಾವಧಿ ಇದೆ.

    ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯವರಾದ ಪ್ರವೀಣ್ ಸೂದ್ ಬಿ.ಟೆಕ್ ಪದವಿ ಓದಿದ್ದು ಬೆಂಗಳೂರು ಕಮಿಷನರ್ ಆಗಿಯೂ ಕೆಲಸ ಮಾಡಿದ್ದಾರೆ. 1989 ಮೈಸೂರು ಎಎಸ್ಪಿಯಾಗಿ ವೃತ್ತಿ ಆರಂಭಿಸಿದ ಇವರು ಬಳ್ಳಾರಿ, ರಾಯಚೂರಿನಲ್ಲಿ ಎಸ್‍ಪಿ ಆಗಿ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ.

    1999 ರಲ್ಲಿ ಮಾರಿಷಸ್ ದೇಶದ ಪೊಲೀಸ್ ಸಲಹೆಗಾರರಾಗಿ ಮೂರು ವರ್ಷ ಸೇವೆ ಸಲ್ಲಿಸಿದ ಪ್ರವೀಣ್ ಸೂದ್ ಅವರಿಗೆ 1996 ರಲ್ಲಿ ಮುಖ್ಯಮಂತ್ರಿಗಳ ಪದಕ, 2002ರಲ್ಲಿ ಪೊಲೀಸ್ ಪದಕ, 2004-07 ರಲ್ಲಿ ಮೈಸೂರು ಕಮೀಷನರ್ ಆಗಿ ಸೇವೆ ಸಲ್ಲಿಸಿದ್ದಾರೆ.

    2008ರಲ್ಲಿ ಬೆಂಗಳೂರು ನಗರ ಸಂಚಾರ ವಿಭಾಗದ ಹೆಚ್ಚುವರಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದ ಇವರಿಗೆ 2011 ರಲ್ಲಿ ರಾಷ್ಟ್ರಪತಿಗಳ ಪದಕಕ್ಕೆ ಭಾಜನರಾಗಿದ್ದರು. 2013-14 ಕರ್ನಾಟಕ ಪೊಲೀಸ್ ಹೌಸಿಂಗ್ ಕಾರ್ಪೊರೇಷನ್ ಮ್ಯಾನೆಜಿಂಗ್ ಡೈರೆಕ್ಟರ್, 2017 ರಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

    ಕಮೀಷನರ್ ಆಗಿ ಹಲವು ಸುಧಾರಣೆ ತಂದಿದ್ದ ಪ್ರವೀಣ್ ಸೂದ್ ಬೆಂಗಳೂರು ನಾಗರೀಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿದ್ದರು. ನಮ್ಮ 100, ಪಿಂಕ್ ಹೊಯ್ಸಳ, ಸುರಕ್ಷಾ ಅಪ್ಲಿಕೇಶನ್ ಇವರು ಆಯುಕ್ತರಾಗಿದ್ದಾಗ ಜಾರಿಯಾಗಿತ್ತು.

  • ಬಾಂಬರ್ ಆದಿತ್ಯರಾವ್ ಮಾಸ್ಟರ್ ಪ್ಲಾನ್ ಕೇಳಿ ದಂಗಾದ ಬೆಂಗಳೂರು ಪೊಲೀಸರು

    ಬಾಂಬರ್ ಆದಿತ್ಯರಾವ್ ಮಾಸ್ಟರ್ ಪ್ಲಾನ್ ಕೇಳಿ ದಂಗಾದ ಬೆಂಗಳೂರು ಪೊಲೀಸರು

    ಬೆಂಗಳೂರು: ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿ ಶರಣಾಗಿರುವ ಆರೋಪಿ ಆದಿತ್ಯ ರಾವ್ ಮಾಸ್ಟರ್ ಪ್ಲಾನ್ ಕೇಳಿ ಪೊಲೀಸರೇ ಕಕ್ಕಾಬಿಕ್ಕಿಯಾಗಿದ್ದಾರೆ.

    ಹೌದು. ಮಂಗಳವಾರ ಬೆಳಗ್ಗೆ ಆದಿತ್ಯ ರಾವ್ ಬೆಂಗಳೂರಿನಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಶರಣಾಗಿದ್ದ. ಶರಣಾದ ನಂತರ ಬೆಂಗಳೂರಿನಲ್ಲೇ ಶರಣಾಗಿದ್ದು ಯಾಕೆ ಎನ್ನುವ ಪ್ರಶ್ನೆಗೆ ಆದಿತ್ಯ ರಾವ್ ನೀಡಿದ ಉತ್ತರವನ್ನು ಕೇಳಿ ಪೊಲೀಸರು ದಂಗಾಗಿದ್ದಾರೆ.

    ಯಾವುದೇ ಕೃತ್ಯ ಮಾಡಿದ ನಂತರ ಆರೋಪಿಗಳು ಪರಾರಿಯಾಗುವುದು ಸಾಮಾನ್ಯ ಸಂಗತಿ. ಆದರಲ್ಲೂ ಅಪರೂಪದ ಪ್ರಕರಣದಲ್ಲಿ ಆರೋಪಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ನ್ಯಾಯಾಲಯಕ್ಕೆ ಹಾಜರಾಗಿ ಶರಣಾಗುತ್ತಾರೆ ಹೊರತು ಡಿಜಿ ಐಜಿಪಿ ಕಚೇರಿಗೆ ಹಾಜರಾಗಿ ಶರಣಾಗುವುದಿಲ್ಲ. ಆದರೆ ಉಡುಪಿ ಮೂಲದ ಆದಿತ್ಯ ರಾವ್ ನೇರವಾಗಿ ಬೆಳಗ್ಗೆ ಬೆಂಗಳೂರಿನ ಡಿಜಿ ಕಚೇರಿಗೆ ಆಗಮಿಸಿ ಶರಣಾಗಿದ್ದನ್ನು ನೋಡಿ ಪೊಲೀಸರಲ್ಲಿ ಕುತೂಹಲ ಮೂಡಿಸಿತ್ತು. ಹೀಗಾಗಿ ಆತನ ಪ್ರಾಥಮಿಕ ವಿಚಾರಣೆಯಲ್ಲಿ ಈ ಬಗ್ಗೆ ಪೊಲೀಸರು ಪ್ರಶ್ನೆ ಕೇಳಿದ್ದಾರೆ. ಇದನ್ನೂ ಓದಿ: ಕುಟುಂಬದಿಂದಲೇ ಹೊರ ಹಾಕಿದ್ದೇವೆ, 2 ವರ್ಷದಿಂದ ಸಂಪರ್ಕ ಇಲ್ಲ – ಅಕ್ಷತ್ ರಾವ್

    ಈ ಪ್ರಶ್ನೆಗೆ ಆದಿತ್ಯ ರಾವ್, ಸಿಸಿಟಿವಿ ವಿಡಿಯೋ, ಫೋಟೋ ಬಿಡುಗಡೆ ಮಾಡಿದ ನಂತರ ಹೇಗೂ ಪೊಲೀಸರು ನನ್ನನ್ನು ಬಂಧಿಸುತ್ತಾರೆ ಎನ್ನುವುದು ಖಚಿತವಾಯಿತು. ಪೊಲೀಸರು ಬಂಧಿಸುವ ಮೊದಲು ನಾನೇ ಶರಣಾದರೆ ಉತ್ತಮ ಎಂಬ ತೀರ್ಮಾನಕ್ಕೆ ಬಂದೆ. ಬಂಧಿಸುವ ಮೊದಲು ನಾನು ದೊಡ್ಡ ಸುದ್ದಿಯಾಗಬೇಕು. ಮಂಗಳೂರಿನಲ್ಲಿ ಶರಣಾದರೆ ಅದಕ್ಕೆ ದೊಡ್ಡ ಮಟ್ಟದ ಪ್ರಚಾರ ಸಿಗುವುದಿಲ್ಲ. ದೊಡ್ಡ ಮಟ್ಟದ ಪ್ರಚಾರ ಪಡೆಯುವ ಆಸೆಯಿಂದಲೇ ನಾನು ಡಿಜಿ ಕಚೇರಿಯಲ್ಲಿ ಶರಣಾಗಿದ್ದೇನೆ ಎಂದು ಹೇಳಿದ್ದಾನೆ. ಆದಿತ್ಯ ರಾವ್ ತನ್ನ ಪ್ರಚಾರದ ತಂತ್ರವನ್ನು ಬಿಚ್ಚಿಡುತ್ತಿದ್ದಂತೆ ವಿಚಾರಣೆ ನಡೆಸುತ್ತಿದ್ದ ಪೊಲೀಸರು ಸಹ ಒಂದು ಕ್ಷಣ ಕಕ್ಕಾಬಿಕ್ಕಿ ಆಗಿದ್ದರು ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಅಪರಾಧ ಪ್ರಕರಣದ ಆರೋಪಿಗಳು ವೇಷ ಮರೆಸಿಕೊಂಡು ತಲೆ ಮರೆಸಿಕೊಳ್ಳುವುದೇ ಹೆಚ್ಚು. ಹಾಗಿರುವಾಗ ಆರೋಪಿಗಳು ಡಿಜಿ ಕಚೇರಿಗೆ ಆಗಮಿಸಿ ಶರಣಾಗಿದ್ದು ನೋಡಿಲ್ಲ ಎಂದು ಹಲವು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಒಬ್ಬನೇ ಬಾಂಬ್ ಫಿಕ್ಸ್ ಮಾಡಲು ಸಾಧ್ಯವಿಲ್ಲ, ಬೇರೆಯವ್ರ ಸಹಾಯದಿಂದ ಮಾಡಿದ್ದಾನೆ: ಖಾದರ್

    ಸೋಮವಾರ ರಾತ್ರಿಯೇ ಉಡುಪಿ ಬಿಟ್ಟಿದ್ದ ಆದಿತ್ಯ ರಾವ್, ಶಿವಮೊಗ್ಗಕ್ಕೆ ಹೋಗಿ ಅಲ್ಲಿಂದ ಲಾರಿಯಲ್ಲಿ ಬೆಂಗಳೂರು ತಲುಪಿದ್ದಾನೆ. ಮಂಗಳವಾರ ಬೆಳಗ್ಗೆ ಡಿಜಿಪಿ ನೀಲಮಣಿ ರಾಜು ಎದುರು ಶರಣಾಗಿದ್ದಾನೆ. ಕೂಡಲೇ ಪೊಲೀಸರು, ಆತನನ್ನ ಹಲಸೂರು ಗೇಟ್ ಠಾಣೆಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಿದರು. ಮಧ್ಯಾಹ್ನ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ನಂತರ 1ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಿ ಟ್ರಾನ್ಸಿಟ್ ವಾರೆಂಟ್ ಮೂಲಕ ಆರೋಪಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಕೂಡ ಪಡೆದರು. ಸಂಜೆ 7.30ರ ವಿಮಾನದಲ್ಲಿ ಮಂಗಳೂರಿಗೆ ಕರೆದೊಯ್ಯಲಾಯ್ತು. ಇದೀಗ ಸಿಸಿಬಿ ಕಚೇರಿಯಲ್ಲಿ ಆದಿತ್ಯನನ್ನು ಇರಿಸಲಾಗಿದ್ದು, ಇಂದು ಮಂಗಳೂರು ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ.

  • ಯಾರಾಗ್ತಾರೆ ಮುಂದಿನ ರಾಜ್ಯ ಪೊಲೀಸ್ ಮಹಾನಿರ್ದೇಶಕ?

    ಯಾರಾಗ್ತಾರೆ ಮುಂದಿನ ರಾಜ್ಯ ಪೊಲೀಸ್ ಮಹಾನಿರ್ದೇಶಕ?

    ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಸಮರ್ಥ ಅಧಿಕಾರಿ ಆಯ್ಕೆಗೆ ಸರ್ಕಾರ ಕಸರತ್ತು ಆರಂಭಿಸಿದೆ. ಹಾಲಿ ಡಿಜಿ-ಐಜಿಪಿ ನೀಲಮಣಿ ಎನ್ ರಾಜು ಅವರು ಇದೇ ತಿಂಗಳ 31ಕ್ಕೆ ನಿವೃತ್ತಿ ಹೊಂದಲಿದ್ದಾರೆ. ನೀಲಮಣಿ ಎನ್ ರಾಜು 2017ರ ಅಕ್ಟೋಬರ್‍ನಲ್ಲಿ ರಾಜ್ಯದ ಮೊದಲ ಮಹಿಳಾ ಡಿಜಿ-ಐಜಿಪಿಯಾಗಿ ನೇಮಕವಾಗಿದ್ದರು. ಇದೀಗ ನೀಲಮಣಿ ರಾಜು ನಿವೃತ್ತಿ ಹೊಂದಲಿರುವ ಹಿನ್ನೆಲೆಯಲ್ಲಿ ಡಿಜಿ ಐಜಿಪಿ ಆಯ್ಕೆಗೆ ರಾಜ್ಯ ಸರ್ಕಾರ ಮುಂದಾಗಿದೆ.

    ಡಿಜಿ-ಐಜಿಪಿ ಹುದ್ದೆಯ ರೇಸ್‍ನಲ್ಲಿ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳಿದ್ದಾರೆ. ಸೇವಾ ಹಿರಿತನ ಹೊಂದಿರುವ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಎಎಂ ಪ್ರಸಾದ್, ಸಿಐಡಿ, ಡಿಜಿಪಿ ಪ್ರವೀಣ್ ಸೂದ್, ನೇಮಕಾತಿ ವಿಭಾಗದ ಡಿಜಿಪಿ ಪಿ.ಕೆ ಗರ್ಗ್ ಹೆಸರುಗಳು ಡಿಜಿ-ಐಜಿಪಿ ರೇಸ್‍ನಲ್ಲಿ ಕೇಳಿಬಂದಿದೆ.

    ಡಿಜಿ- ಐಜಿಪಿ ಹುದ್ದೆಗೆ ಸೇವಾ ಹಿರಿತನ ಹೊಂದಿರುವ ಈ ಮೂವರು ಹಿರಿಯ ಅಧಿಕಾರಿಗಳ ಹೆಸರುಗಳನ್ನೂ ಈಗಾಗಲೇ ರಾಜ್ಯ ಸರ್ಕಾರ ಕೇಂದ್ರ ಲೋಕಸೇವಾ ಆಯೋಗಕ್ಕೆ ಕಳಿಸಿಕೊಟ್ಟಿದೆ. ಈ ಅಧಿಕಾರಿಗಳ ವೃತ್ತಿ ಬದುಕಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ಕೇಂದ್ರ ಲೋಕಸೇವಾ ಆಯೋಗಕ್ಕೆ ಸರ್ಕಾರ ರವಾನೆ ಮಾಡಿದೆ.

    ಸದ್ಯದಲ್ಲೇ ಕೇಂದ್ರ ಲೋಕಸೇವಾ ಆಯೋಗವು ಲಕೋಟೆ ಮೂಲಕ ಡಿಜಿ-ಐಜಿಪಿ ಹುದ್ದೆಗೆ ಆಯ್ಕೆ ಮಾಡಬೇಕಾದ ಹೆಸರುಗಳನ್ನು ಆಯ್ಕೆ ಮಾಡಿ ಕಳಿಸಿಕೊಡಲಿದೆ. ಯುಪಿಎಸ್‍ಸಿ ಲಕೋಟೆ ಬಂದ ಬಳಿಕ ರಾಜ್ಯ ಸರ್ಕಾರ ಹೊಸ ಡಿಜಿ-ಐಜಿಪಿ ಹುದ್ದೆಗೆ ಆಯ್ಕೆ ಮಾಡಲಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಕೇಂದ್ರ ಲೋಕಸೇವಾ ಆಯೋಗಕ್ಕೆ ಡಿಜಿ-ಐಜಿಪಿ ಹುದ್ದೆಗೆ ಆಯ್ಕೆ ಮಾಡಬೇಕಾದ ಸಂಭಾವ್ಯರ ಹೆಸರುಗಳನ್ನು ಆಯ್ಕೆ ಮಾಡಿತ್ತು.

    ಸದ್ಯ ಡಿಜಿ-ಐಜಿಪಿ ಹುದ್ದೆಯ ರೇಸ್‍ನಲ್ಲಿ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರು ಪ್ರಬಲವಾಗಿ ಕೇಳಿಬರ್ತಿದೆ. ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಎ.ಎಂ ಪ್ರಸಾದ್ ಮತ್ತು ಸಿಐಡಿ ಡಿಜಿಪಿ ಪ್ರವೀಣ್ ಸೂದ್ ಹೆಸರುಗಳು ಪ್ರಬಲವಾಗಿ ಕೇಳಿಬರುತ್ತಿದೆ.

    ಈ ಪೈಕಿ 1985 ಕೇಡರ್‍ನ ಅಧಿಕಾರಿ ಎ.ಎಂ ಪ್ರಸಾದ್ ಅವರಿಗೆ ಇನ್ನೂ 9 ತಿಂಗಳ ಸೇವಾವಧಿ ಇದೆ. 1986ನೇ ಕೇಡರ್‍ನ ಅಧಿಕಾರಿಗಳಾದ ಪ್ರವೀಣ್ ಸೂದ್ ಅವರಿಗೆ ಇನ್ನೂ 2 ವರ್ಷ ಸೇವಾವಧಿ ಉಳಿದಿದ್ರೆ, ಪಿ ಕೆ ಗರ್ಗ್ ಅವರಿಗೆ 1.5 ವರ್ಷ ಸೇವಾವಧಿ ಇದೆ.

  • ಡಿವೈಎಸ್‍ಪಿ ಪತ್ರ-ಯಾವುದೇ ತೊಂದರೆ ಇದ್ದರೂ ನೇರವಾಗಿ ನನ್ನನ್ನು ಭೇಟಿ ಮಾಡಿ: ಸಿಎಂ

    ಡಿವೈಎಸ್‍ಪಿ ಪತ್ರ-ಯಾವುದೇ ತೊಂದರೆ ಇದ್ದರೂ ನೇರವಾಗಿ ನನ್ನನ್ನು ಭೇಟಿ ಮಾಡಿ: ಸಿಎಂ

    ಬೆಂಗಳೂರು: ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ನನ್ನನ್ನು ಭೇಟಿ ಮಾಡಿ, ಆತುರ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ ಎಂದು ಸಿಎಂ ಕುಮಾರಸ್ವಾಮಿಯವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

    ಪೊಲೀಸ್ ಇಲಾಖೆಯಲ್ಲಿ ನಡೆಯುತ್ತಿರುವ ತಾರತಮ್ಯ ವಿಚಾರವಾಗಿ ಡಿವೈಎಸ್‍ಪಿಯವರು ಡಿಜಿಐಜಿಪಿಯವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಪ್ರತಿಕ್ರಿಯಿಸಿದ ಅವರು, ಡಿಜಿ ಅವರಿಗೆ ಪತ್ರ ಬರೆದಿರೋ ವಿಚಾರ ನನ್ನ ಗಮನಕ್ಕೂ ಬಂದಿದೆ. ಖುದ್ದು ಡಿಜಿ ನೀಲಮಣಿ ಎನ್ ರಾಜುರವನ್ನು ಕರೆಸಿ ಈ ಕುರಿತು ಚರ್ಚೆ ಮಾಡುವುದಾಗಿ ತಿಳಿಸಿದರು. ಇದನ್ನೂ ಓದಿ: ಒಂದು ದಿನ ರಜೆಗೆ ಡಿವೈಎಸ್‍ಪಿ ಪರದಾಟ – ರೊಚ್ಚಿಗೆದ್ದ ಡಿವೈಎಸ್‍ಪಿಯಿಂದ ಡಿಜಿಐಜಿಪಿಗೆ ಪತ್ರ

    ಈ ವೇಳೆ ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ವಿಚಾರ ಪತ್ರದಲ್ಲಿ ಉಲ್ಲೇಖ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಅಧಿಕಾರಿಗಳು ಸಮಸ್ಯೆ ಇದ್ದರೆ, ನೇರವಾಗಿ ನನ್ನ ಬಳಿ ಹೇಳಿಕೊಳ್ಳಿ. ನಮ್ಮ ಸರ್ಕಾರದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಮುಕ್ತ ಅವಕಾಶ ನೀಡಿದ್ದೇನೆ. ವಿಧಾನಸೌಧದ ಲಿಫ್ಟ್ ಮ್ಯಾನ್ ಕೂಡಾ ನನ್ನ ಬಳಿ ಸಮಸ್ಯೆ ಹೇಳಿಕೊಳ್ಳಬಹುದು. ಯಾರು ಆತುರದ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

    ಅಲ್ಲದೇ ಸಿಎಜಿ ವರದಿ ವಿಚಾರ ಇದು ನನ್ನ ಕಾಲದಲ್ಲಿ ನಡೆದಿಲ್ಲ. ಹಿಂದಿನ ಸರ್ಕಾರದಲ್ಲಿ ನಡೆದಿರುವುದರಿಂದ ಈ ಚರ್ಚೆ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

  • ಒಂದು ದಿನ ರಜೆಗೆ ಡಿವೈಎಸ್‍ಪಿ ಪರದಾಟ – ರೊಚ್ಚಿಗೆದ್ದ ಡಿವೈಎಸ್‍ಪಿಯಿಂದ ಡಿಜಿಐಜಿಪಿಗೆ ಪತ್ರ

    ಒಂದು ದಿನ ರಜೆಗೆ ಡಿವೈಎಸ್‍ಪಿ ಪರದಾಟ – ರೊಚ್ಚಿಗೆದ್ದ ಡಿವೈಎಸ್‍ಪಿಯಿಂದ ಡಿಜಿಐಜಿಪಿಗೆ ಪತ್ರ

    -ಗಣಪತಿ, ಕಲ್ಲಪ್ಪ ಕೇಸ್ ಬಗ್ಗೆಯೂ ಉಲ್ಲೇಖ!

    ಬೆಂಗಳೂರು: ಒಂದು ದಿನ ರಜೆ ಸಿಗದೆ ಡಿವೈಎಸ್‍ಪಿಯವರು ಪೊಲೀಸ್ ಇಲಾಖೆಯಲ್ಲಿ ನಡೆಯುತ್ತಿರುವ ಕಿರುಕುಳ ಹಾಗೂ ತಾರತಮ್ಯದ ಬಗ್ಗೆ ಡಿಜಿಐಜಿಪಿಗೆ ಪತ್ರ ಬರೆದು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

    ಡಿವೈಎಸ್‍ಪಿ ಅವರ ಮಗಳಿಗೆ ರಾಜ್ಯ ತಂಡವನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಮಗಳನ್ನು ತರಬೇತಿ ಕ್ಯಾಂಪ್‍ಗೆ ಬಿಟ್ಟು ಬರಲು 1 ದಿನದ ರಜೆಗಾಗಿ 9 ದಿನಗಳ ಮುನ್ನವೇ ರಜೆಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ರಜೆ ದೊರಕದ ಹಿನ್ನೆಲೆಯಲ್ಲಿ ಮೌಖಿಕವಾಗಿ ಹಿರಿಯ ಅಧಿಕಾರಿಗಳಿಗೆ ತಿಳಿಸಿ ಹೋಗಿದ್ದ ಡಿವೈಎಸ್‍ಪಿ. ಆದರೆ ಇದನ್ನು ಅಶಿಸ್ತು ಎಂದು ಪರಿಗಣಿಸಿ ಕಾರಣ ಕೇಳಿ ಅವರಿಗೆ ನೋಟಿಸ್ ನೀಡಲಾಗಿತ್ತು.

    23 ದಿನಗಳ ತರಬೇತಿಯಲ್ಲಿ ಕೇವಲ 1 ದಿನ ಮಾತ್ರ ರಜೆ ಹಾಕಿದ್ದೇನೆ. ಆದರೆ ಮತ್ತೊಬ್ಬ ಅಧಿಕಾರಿ ಅರ್ಜಿ ಸಹ ನೀಡದೆ ರಜೆ ಮೇಲೆ ಹೋಗಿದ್ರು, ಅವರು ಹಿರಿಯ ಅಧಿಕಾರಿ/ಸಲಹೆಗಾರರ ವೈಯಕ್ತಿಕ ಕೆಲಸಕ್ಕೆ ಹೋಗಿದ್ದರು. ಅಲ್ಲದೇ ಇನ್ನೂ ಕೆಲವರಿಗೆ 3-4 ದಿನ ಹೊರಗಡೆ ಹೋಗಲು ಅನುಮತಿ ನೀಡಲಾಗಿತ್ತು. ಆದರೆ ನನಗೆ 1 ದಿನವೂ ರಜೆ ಸಿಕ್ಕಿಲ್ಲ. ಇಲಾಖೆಯ ಈ ತಾರತಮ್ಯ ನೀತಿಯನ್ನು ಪ್ರಶ್ನಿಸಿ ಡಿಜಿ ಐಜಿಪಿಯಾದ ನೀಲಮಣಿ ಎನ್ ರಾಜುರವರರಿಗೆ ಪತ್ರ ಬರೆಯುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

    ಜೊತೆಗೆ ಮೃತ ಡಿವೈಎಸ್‍ಪಿ ಎಂಕೆ ಗಣಪತಿ ವಿಚಾರ ಸಹ ಪತ್ರದಲ್ಲಿ ಪ್ರಸ್ತಾಪ ಮಾಡಿದ್ದಾರೆ. ಸೆಪ್ಟೆಂಬರ್ 7ರಂದು ಎಂ.ಕೆ. ಗಣಪತಿ ಆತ್ಮಹತ್ಯೆಗೆ ಶರಣಾಗಿದ್ದರು, ಆದರೆ ಸೆಪ್ಟೆಂಬರ್ 8ರಂದು ಗಣಪತಿ ವಿರುದ್ಧದ ಆರೋಪಕ್ಕೆ ಕ್ಲೀನ್ ಚಿಟ್‍ನ್ನು ಇಲಾಖೆ ನೀಡಿತ್ತು. ಒಂದು ದಿನ ಮುಂಚಿತವಾಗಿ ಕ್ಲೀನ್ ಚಿಟ್ ನೀಡಿದ್ದರೆ ಗಣಪತಿಯವರು ಬದುಕಿರುತ್ತಿದ್ದರು. ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡು ಇಂದಿಗೆ ಎರಡು ವರ್ಷ ವಾಯ್ತು. ಅಲ್ಲದೇ ಕಲ್ಲಪ್ಪ ಹಂಡಿಬಾಗ್ ಪ್ರಕರಣದಲ್ಲೂ ಇಲಾಖೆ ಪ್ರಾಮಾಣಿಕ ತನಿಖೆ ನಡೆಸಲಿಲ್ಲ. ಇಲಾಖೆಯಲ್ಲಿನ ಕಿರುಕುಳದಿಂದ ಇಂತಹ ಘಟನೆಗಳು ಸಂಭವಿಸುತ್ತಿವೆ ಎಂದು ಬರೆದಿದ್ದಾರೆ.

    ನೀಲಮಣಿ ಎನ್ ರಾಜು ಡಿಜಿ & ಐಜಿಪಿಯಾಗಿ ಒಂದೂವರೆ ವರ್ಷವಾಯ್ತು ಈವರೆಗೂ ಅಧಿಕಾರಿ-ಸಿಬ್ಬಂದಿಯ ಕುಂದುಕೊರತೆಗಳನ್ನು ಆಲಿಸಿಲ್ಲ. ಅಲ್ಲದೇ ಡಿಜಿ ಐಜಿಪಿ ನೀಲಮಣಿ ರಾಜು ಅವರಿಗೆ ಸರಿಯಾಗಿ ಕನ್ನಡ ಬರುವುದಿಲ್ಲ. ಕನ್ನಡದಲ್ಲಿ ಬರೆದಿರುವ ಪತ್ರವನ್ನ ಓದಿ ಅರಗಿಸಿಕೊಳ್ಳೊದಕ್ಕೆ ಆಗಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದಯವಿಟ್ಟು ನೇರವಾಗಿ ಮಾತನಾಡಲಿಕ್ಕೆ ಅವಕಾಶ ಕೊಡಲು ಪತ್ರದಲ್ಲಿ ಮನವಿಮಾಡಿಕೊಂಡಿದ್ದಾರೆ.

    ಮೇಲಧಿಕಾರಿಗಳಿಂದ ಆಗುತ್ತಿರುವ ಕಿರುಕುಳದಿಂದ ಬೇಸತ್ತು 2017ರ ಡಿಸೆಂಬರ್‍ನಿಂದ ಈವರೆಗೆ ಒಟ್ಟು ನಾಲ್ಕು ಪತ್ರವನ್ನು ಡಿವೈಎಸ್‍ಪಿಯವರು ಬರೆದಿದ್ದಾರೆ. ಮೇಲಾಧಿಕಾರಿಗಳಿಂದ ಸರಿಯಾದ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಜೂನ್ 18ರಂದು ಮತ್ತೊಂದು ಪತ್ರವನ್ನು ನೇರವಾಗಿ ಡಿಜಿ ನೀಲಮಣಿಯವರಿಗೆ ಪತ್ರ ಬರೆದು ಭೇಟಿಗೆ ಯತ್ನಿಸಿದ್ದಾರೆ. ಭೇಟಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಪತ್ರ ಬರೆದಿದ್ದಾರೆ.