Tag: DGP Neelamani

  • ರೂಲ್ಸ್ ಮಾಡಿದ್ದ ಡಿಜಿಪಿ ನೀಲಮಣಿ ಅವರಿಂದಲೇ ನಿಯಮ ಉಲ್ಲಂಘನೆ!

    ರೂಲ್ಸ್ ಮಾಡಿದ್ದ ಡಿಜಿಪಿ ನೀಲಮಣಿ ಅವರಿಂದಲೇ ನಿಯಮ ಉಲ್ಲಂಘನೆ!

    ಬೆಂಗಳೂರು: ರೂಲ್ಸ್ ಮಾಡಿದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್ ರಾಜು ಅವರಿಂದಲೇ ನಿಯಮ ಉಲ್ಲಂಘನೆಯಾಗಿದ್ದು, ಈ ಮೂಲಕ ದೊಡ್ಡವರಿಗೊಂದು ನ್ಯಾಯ ಚಿಕ್ಕವರಿಗೊಂದು ನ್ಯಾಯವೇ ಎನ್ನುವ ಮಾತು ಕೇಳಿಬಂದಿದೆ.

    ಮಹಿಳಾ ಪೊಲೀಸ್ ಸಿಬ್ಬಂದಿ ಸೀರೆ ಉಟ್ಟು ಡ್ಯೂಟಿಗೆ ಬರಬಾರದು. ಕಡ್ಡಾಯವಾಗಿ ಶರ್ಟ್ ಮತ್ತು ಪ್ಯಾಂಟ್ ಇರುವ ಯೂನಿಫಾರ್ಮ್ ಹಾಕಿಕೊಂಡು ಕೆಲಸ ಮಾಡಬೇಕು. ಗರ್ಭಿಣಿ ಪೊಲೀಸ್ ಸಿಬ್ಬಂದಿಗೆ ಇನ್ ಶರ್ಟ್ ಇಂದ ವಿನಾಯಿತಿ ಕೊಟ್ಟು ಸುತ್ತೋಲೆ ಹೊರಡಿಸಲಾಗಿತ್ತು. ಈ ಸುತ್ತೋಲೆಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್ ರಾಜು ಅವರೇ ಹೊರಡಿಸಿದ್ದರು. ಇದನ್ನೂ ಓದಿ:  ಮಹಿಳಾ ಪೊಲೀಸರು ಸೀರೆ ಉಡುವಂತಿಲ್ಲ, ಕೈ ತುಂಬ ಬಳೆ ತೊಡುವಂತಿಲ್ಲ: ಹೊಸ ಡ್ರೆಸ್ ಕೋಡ್‍ನಲ್ಲಿ ಏನಿದೆ?

    ಅಂದಿನಿಂದ ಕಷ್ಟವಾದರು ಕೆಳಹಂತದ ಸಿಬ್ಬಂದಿಗಳು ಡಿಜಿ ಅಂಡ್ ಐಜಿಪಿಯ ಆದೇಶ ಪಾಲನೆ ಮಾಡುತ್ತಿದ್ದರು. ಆದರೆ ಈ ಸುತ್ತೋಲೆ ಹೊರಡಿಸಿದವರಿಂದಲೇ ಈಗ ರೂಲ್ಸ್ ಬ್ರೇಕ್ ಆಗಿದೆ. ಹೊಸ ವರ್ಷದ ಬಂದೋಬಸ್ತ್ ವೀಕ್ಷಣೆಗೆ ಬಂದಿದ್ದ ಡಿಜಿ ಅಂಡ್ ಐಜಿಪಿ ಮಫ್ತಿಯಲ್ಲಿ ಬಂದಿದ್ದರು. ಗೃಹ ಸಚಿವರು ಸ್ಥಳ ವೀಕ್ಷಣೆಯಲ್ಲಿದ್ದರೂ ಮೇಡಂ ಯೂನಿಫಾರ್ಮ್ ಧರಿಸಲಿಲ್ಲ.

    ದೊಡ್ಡವರೇ ಈ ರೀತಿ ತಾವು ಮಾಡಿದ ನಿಯಮವನ್ನು ಪಾಲಿಸಲಿಲ್ಲ. ಇಲಾಖೆಗೆ ಮುಖ್ಯಸ್ಥರು ಆಗಿರುವುದರಿಂದ ಅವರಿಗೆ ಯೂನಿಫಾರ್ಮ್ ಅವಶ್ಯಕತೆಯಿಲ್ಲ. ಆದರೆ ನೈತಿಕತೆ ಇಂದಾದರೂ ಯೂನಿಫಾರ್ಮ್ ಧರಿಸಬಹುದಿತ್ತು. ಅವರನ್ನು ನೋಡಿ ಕೆಳಹಂತದ ಸಿಬ್ಬಂದಿಗೆ ಸ್ಪೂರ್ತಿ ಬರಬೇಕಿತ್ತು ಎಂದು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಅಬಿಪ್ರಾಯಯವನ್ನು ವ್ಯಕ್ತಪಡಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಕ್ಷಣಾ ಕಾರ್ಯಾಚರಣೆ ಹೇಗೆ ನಡೆಯುತ್ತಿದೆ: ಮಾಹಿತಿ ನೀಡಿದ್ರು ಡಿಜಿಪಿ

    ರಕ್ಷಣಾ ಕಾರ್ಯಾಚರಣೆ ಹೇಗೆ ನಡೆಯುತ್ತಿದೆ: ಮಾಹಿತಿ ನೀಡಿದ್ರು ಡಿಜಿಪಿ

    ಮಡಿಕೇರಿ: ಕೊಡಗಿನಲ್ಲಿ ಆಗುತ್ತಿರುವ ರಕ್ಷಣಾ ಕಾರ್ಯಚರಣೆಯ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದ್ದಾರೆ.

    ಸುದ್ದಿಗೋಷ್ಠಿಯ ಹೈಲೈಟ್ಸ್:
    ಕೊಡಗಿನಲ್ಲಿ ಪ್ರವಾಹ ಶುರುವಾಗಿ ಇಂದಿಗೆ 10 ದಿನವಾಗಿದೆ. ಆಗಸ್ಟ್ 15ರ ರಾತ್ರಿಯಿಂದ ಪ್ರವಾಹ ಶುರುವಾಗಿದೆ ಎಂಬ ಸುದ್ದಿ ಬಂತ್ತು. 16ರ ಬೆಳಗ್ಗೆಯಿಂದ ಎಲ್ಲ ರಕ್ಷಣಾ ಕಾರ್ಯ ಆರಂಭಗೊಂಡು ನಂತರ ಮಧ್ಯಾಹ್ನ ಎಲ್ಲಾ ಹಿರಿಯ ಅಧಿಕಾರಿಗಳನ್ನು ಹಾಗೂ ರಕ್ಷಣಾ ಸಿಬ್ಬಂದಿಯನ್ನು ಕೊಡಗಿಗೆ ಕಳುಹಿಸಲಾಗಿದೆ. ಪ್ರವಾಹಕ್ಕೆ 10 ಜನ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಬಂದಿದ್ದು, ಈಗ ಅವರ ಮೃತದೇಹವನ್ನು ಹುಡುಕಿ ಅವರ ಅಂತ್ಯಸಂಸ್ಕಾರ ಕೂಡ ಆಗಿದೆ. ಅಲ್ಲದೇ ಮತ್ತೆ 10 ಜನರು ಕಾಣೆಯಾಗಿದ್ದಾರೆ ಎನ್ನುವ ದೂರು ದಾಖಲಾಗಿದೆ.

    ಗುರುವಾರ ಸಂಜೆ ಕಾಲೂರಿನಿಂದ ದಂಪತಿ ಬಂದು 7 ವರ್ಷದ ಮಗು ಕಣ್ಣ ಮುಂದೆಯೇ ನೀರಿನಲ್ಲಿ ಜಾರಿ ಬಿತ್ತು ಎಂದು ದೂರು ನೀಡಿದರು. ಬೆಳಗ್ಗೆಯಿಂದ ಆ ಮಗುವನ್ನು ಹುಡುಕುವ ಕಾರ್ಯ ನಡೆಯುತ್ತಿದೆ. ಅಪರಿಚಿತ ಶವ ಹಾಗೂ ಕಾಣೆಯಾಗಿದವರನ್ನು ಹುಡುಕಲು ದಿನಕ್ಕೆ 5 ರಕ್ಷಣಾ ತಂಡ ಹೋಗುತ್ತಿದೆ. ಸದ್ಯ ಕಾಣೆಯಾದವರನ್ನು ಹುಡುಕುವತ್ತ ನಮ್ಮ ಗಮನವಿದೆ. ಮೂರು ದಿನಗಳಿಂದ ಡ್ರೋನ್ ಮೂಲಕ ಮೃತದೇಹವನ್ನು ಹುಡುಕುತ್ತಿದ್ದೇವೆ. ಆದರೆ ಹವಾಮಾನ ಸರಿಯಿಲ್ಲದ ಕಾರಣ ಡ್ರೋನ್ ಬಳಸಲು ಸಾಧ್ಯವಾಗುತ್ತಿಲ್ಲ.

    ಸದ್ಯ ಎಲ್ಲ ರಕ್ಷಣಾ ಸಿಬ್ಬಂದಿ ರಸ್ತೆ ಮೂಲಕ ಕೂಡ ಹೋಗಿ ಜನರನ್ನು ಹುಡುಕುತ್ತಿದ್ದಾರೆ. ಅಲ್ಲದೇ ಯೋಧರ ತಂಡದಿಂದ ಶ್ವಾನವನ್ನು ಕರೆಸಿಕೊಂಡಿದ್ದೇವೆ. ಆ ಶ್ವಾನಕ್ಕೆ ಮೃತದೇಹ ಹುಡುಕುವ ಅಭ್ಯಾಸವಿಲ್ಲ. ಆದರೂ ನಾವು ಪ್ರಯತ್ನಿಸುತ್ತಿದ್ದೇವೆ. ನದಿಯಲ್ಲಿ ಬೋಟ್ ಮೂಲಕವೂ ಕಾರ್ಯಾಚರಣೆ ನಡೆಸಲಾಗುತ್ತಿದೆ.

    ಸದ್ಯ ಈಗ 43 ಪರಿಹಾರ ಕೇಂದ್ರದಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿ ನೆಲೆಸಿದ್ದಾರೆ. ಸದ್ಯ ಈಗ ಅವರಿಗೆ ಅಗತ್ಯ ವಸ್ತುಗಳು ಬಹಳಷ್ಟು ದೊರೆತಿದೆ. ಅವರು ಈಗ ತಮ್ಮವರನ್ನು ಹಾಗೂ ಆಸ್ತಿ, ಮನೆ ಕಳೆದುಕೊಂಡ ದುಃಖದಲ್ಲಿ ಇದ್ದಾರೆ. ಹಾಗಾಗಿ ಒಂದು ವೈದ್ಯರ ತಂಡ ಹಾಗೂ ಮನೋವಿಜ್ಞಾನಿಗಳ ತಂಡವನ್ನು ಕರೆಸಿ ಅವರ ಜೊತೆ ಮಾತನಾಡಿಸಿ ಅವರ ದುಃಖವನ್ನು ಕಡಿಮೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ.

    ಈಗ ಬಹಳ ಕಡೆ ಗುಡ್ಡಗಳು ಅಲ್ಲಲ್ಲಿ ಕುಸಿಯುತ್ತಿದೆ. ಈಗ ಮತ್ತೆ ಮಳೆ ಶುರುವಾಗಿದರಿಂದ ನಾವು ಹುಷಾರಾಗಿ ಇರಬೇಕಿದೆ. ಯಾವುದೇ ಮನೆಗಳು ಸ್ವಲ್ಪ ಅಪಾಯದಲ್ಲಿ ಇರುವುದು ಕಂಡು ಬಂದರೆ, ಅಲ್ಲಿದ್ದವರನ್ನು ಮನೆಯಿಂದ ಖಾಲಿ ಮಾಡಿಸಲಾಗುತ್ತಿದೆ. ರಕ್ಷಣಾ ತಂಡ ಎಲ್ಲವನ್ನೂ ನೋಡಿಕೊಳ್ಳುತ್ತಿದೆ. ಈಗ ಮತ್ತೆ ಗುಡ್ಡ ಕುಸಿತ ಶುರುವಾದರೆ, ಅದಕ್ಕೆ ನಾವು ಎಲ್ಲ ತಯಾರಿಗಳನ್ನು ನಡೆಸಿಕೊಂಡಿದ್ದೇವೆ. ಸದ್ಯ ನಾವು ಯಾವುದೇ ರಕ್ಷಣಾ ತಂಡವನ್ನು ವಾಪಸ್ ಕಳುಹಿಸಿಲ್ಲ. ಎಲ್ಲ ತಂಡ ತಮ್ಮ ಕಾರ್ಯಾಚರಣೆ ನಡೆಸುತ್ತಿದೆ.

    ಭೂ ಕುಸಿತಗೊಂಡ ಜೋಡುಪಾಲ ಭಾಗದಲ್ಲಿ ಮಂಗಳೂರಿನ ಎನ್‍ಡಿಆರ್‍ಎಫ್ ತಂಡ 200ಕ್ಕೂ ಹೆಚ್ಚು ಮಂದಿ ರಕ್ಷಿಸಿ ಸಂಪಾಜೆ ಪರಿಹಾರ ಕೇಂದ್ರದಲ್ಲಿ ಸುರಕ್ಷಿತವಾಗಿ ಇರಿಸಿದ್ದಾರೆ. ಪೊಲೀಸರಿಗೆ ಹಾಗೂ ರಕ್ಷಣಾ ಸಿಬ್ಬಂದಿಗೆ ವಾಹನ ಹಾಗೂ 17 ಸೀಟ್‍ನ ವ್ಯಾನ್ ಹಾಗೂ ಜೀಪ್‍ಗಳ ಅಗತ್ಯವಿತ್ತು. ಆ ವಾಹನಗಳನ್ನೆಲ್ಲಾ ನಾವು ಕಳುಹಿಸಿಕೊಟ್ಟಿದ್ದೇವೆ.

    ರಾಜ್ಯ ವಿಪತ್ತು ನಿರ್ವಹಣ ತಂಡ(ಎಸ್‍ಡಿಆರ್‍ಎಫ್) ತಂಡ ಕೂಡ ಆಗಸ್ಟ್ 16ರಿಂದಲೇ ಕಾರ್ಯಾಚರಣೆ ನಡೆಸುತ್ತಿದೆ. ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ಪೊಲೀಸರು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೇ ಮಾಧ್ಯಮ ಪ್ರತಿನಿಧಿಗಳು ಕೂಡ ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv