Tag: DH Shankaramurthy

  • ಅಡ್ವಾಣಿಗೆ ಭಾರತ ರತ್ನ ನೀಡಿ- ಶಂಕರಮೂರ್ತಿಯಿಂದ ಪ್ರಧಾನಿಗೆ ಪತ್ರ

    ಅಡ್ವಾಣಿಗೆ ಭಾರತ ರತ್ನ ನೀಡಿ- ಶಂಕರಮೂರ್ತಿಯಿಂದ ಪ್ರಧಾನಿಗೆ ಪತ್ರ

    ಶಿವಮೊಗ್ಗ: ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವಂತೆ ವಿಧಾನ ಪರಿಷತ್‍ನ ಮಾಜಿ ಸಭಾಪತಿ ಡಿ.ಎಚ್ ಶಂಕರಮೂರ್ತಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

    ಎಲ್.ಕೆ.ಅಡ್ವಾಣಿ ಅವರು 7 ದಶಕಕ್ಕೂ ಹೆಚ್ಚು ಕಾಲದಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅಡ್ವಾಣಿ ಅವರ ಈ ಎಲ್ಲ ಜನಪರ ಸೇವೆ ಗುರುತಿಸಿ ರಾಷ್ಟ್ರದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ನೀಡಬೇಕು. ಇದು ರಾಜ್ಯದ ಸಾವಿರಾರು ಮಂದಿಯ ಅಭಿಲಾಷೆ ಸಹ ಆಗಿದೆ ಎಂದು ಡಿ.ಎಚ್ ಶಂಕರಮೂರ್ತಿ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.

    ಅಡ್ವಾಣಿಯವರು ಆರ್‍ಎಸ್‍ಎಸ್, ಭಾರತೀಯ ಜನಸಂಘ ಹಾಗೂ ಬಿಜೆಪಿ ಮೂಲಕ ತಾಯ್ನಾಡಿಗಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ ಹಾಗೂ ಕೊಡುಗೆ ನೀಡಿದ್ದಾರೆ. ಸಾರ್ವಜನಿಕ ಹಾಗೂ ತಮ್ಮ ವೈಯಕ್ತಿಕ ಬದುಕಿನಲ್ಲಿ ಅವರು ಪ್ರಾಮಾಣಿಕತೆ ಮೆರೆದಿದ್ದಾರೆ. ತಮ್ಮ ವಿಶಿಷ್ಠ ಜ್ಞಾನ ಹಾಗೂ ಅನುಭವದ ಮೂಲಕ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಮೂಲಕ ಭಾರತೀಯರು ಹೆಮ್ಮೆ ಪಡುವಂತೆ ಮಾಡಿದ್ದಾರೆ. ಅಲ್ಲದೆ ಅಡ್ವಾಣಿಯವರದ್ದು ಅಪರೂಪದ ವ್ಯಕ್ತಿತ್ವವಾಗಿದೆ. ಹೀಗಾಗಿ ಅವರಿಗೆ ಭಾರತ ರತ್ನ ನೀಡಬೇಕು ಎಂದು ಪತ್ರದಲ್ಲಿ ಕೇಳಿಕೊಂಡಿದ್ದಾರೆ.

    ಕಳೆದ ಐದು ದಶಕಗಳಿಂದ ನಾನು ಅವರನ್ನು ಹತ್ತಿರದಿಂದ ನೋಡಿದ್ದೇನೆ, ಲಕ್ಷಾಂತರ ಜನರ ರೀತಿ ನಾನೂ ಸಹ ಅಡ್ವಾಣಿಯರಿಗೆ ಹತ್ತಿರವಾಗಿದ್ದೆ. ಹೀಗಾಗಿ ನಾನು ಅವರನ್ನು ಹತ್ತಿರದಿಂದ ಬಲ್ಲೆ. ಅವರ ಸಾರ್ವಜನಿಕ ಭಾಷಣಗಳನ್ನು ಭಾಷಾಂತರ ಮಾಡುತ್ತಿದ್ದೆ ಎಂದು ಇದೇ ವೇಳೆ ನೆನಪಿಸಿಕೊಂಡಿದ್ದಾರೆ.

    ಎಲ್.ಕೆ.ಅಡ್ವಾಣಿಯವರಿಗೆ ಭಾರತ ರತ್ನ ನೀಡಬೇಕೆಂಬುದು ಪಕ್ಷದ ಸಾವಿರಾರು ಕಾರ್ಯಕರ್ತರು ಹಾಗೂ ಸಾಮಾನ್ಯ ಜನರ ಆಶಯವಾಗಿದೆ. ಅಡ್ವಾಣಿಯವರು ಭಾರತ ರತ್ನಕ್ಕೆ ಯೋಗ್ಯರು, ಸರಿಯಾದ ವ್ಯಕ್ತಿ ಹಾಗೂ ಎಲ್ಲ ಗೌರವಗಳನ್ನು ಹೊಂದುವ ಶ್ರೇಷ್ಠ ಗುಣಗಳನ್ನು ಹೊಂದಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿನ ಪಕ್ಷದ ಸಾವಿರಾರು ಕಾರ್ಯಕರ್ತರ ಪರವಾಗಿ ಅಡ್ವಾಣಿಯವರಿಗೆ ಭಾರತ ನೀಡಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತಿದ್ದೇನೆ ಎಂದು ಮನವಿ ಮಾಡಿದ್ದಾರೆ.

    ನಿನ್ನೆಯಷ್ಟೇ ಎಲ್.ಕೆ.ಅಡ್ವಾಣಿಯವರು 93ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಸ್ವತಃ ಪ್ರಧಾನಿ ನರೇಂದ್ರ ಮೋದಿ ಅಡ್ವಾಣಿಯವರ ನಿವಾಸಕ್ಕೆ ತೆರಳಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಈ ವೇಳೆ ಅಡ್ವಾಣಿಯವರ ಕಾಲು ಮುಟ್ಟಿ ನಮಸ್ಕರಿಸಿ ಮೋದಿ ಶುಭ ಕೋರಿದ್ದಾರೆ. ಟ್ವೀಟ್ ಮೂಲಕ ಸಹ ಮೋದಿ ಅಡ್ವಾಣಿಯವರಿಗೆ ಶುಭಾಶಯ ತಿಳಿಸಿ ನೀವೇ ನಮಗೆ ಸ್ಫೂರ್ತಿ ಎಂದಿದ್ದಾರೆ.

  • ನವ ಭಾರತ ನಿರ್ಮಾಣಕ್ಕೆ ಕಾಂಗ್ರೆಸ್ ಅಡ್ಡಿ: ಡಿ.ಎಚ್ ಶಂಕರಮೂರ್ತಿ

    ನವ ಭಾರತ ನಿರ್ಮಾಣಕ್ಕೆ ಕಾಂಗ್ರೆಸ್ ಅಡ್ಡಿ: ಡಿ.ಎಚ್ ಶಂಕರಮೂರ್ತಿ

    ಶಿವಮೊಗ್ಗ: ಧರ್ಮಾಧಾರಿತವಾಗಿ ಭಾರತವನ್ನು ಒಡೆದವರು ಕಾಂಗ್ರೆಸ್ಸಿಗರು. ಭಾರತ ಕಟ್ಟುವುದಕ್ಕೆ ಕಾಂಗ್ರೆಸ್ ಬಿಡುತ್ತಿಲ್ಲ. ಒಂದೇ ತಾಯಿಯ ಮಕ್ಕಳಾದ ಹಿಂದೂ, ಮುಸ್ಲಿಮರನ್ನು ಬೇರೆ ಮಾಡಿ ಭಾರತಕ್ಕೆ ಕಾಂಗ್ರೆಸ್ ದ್ರೋಹ ಮಾಡುತ್ತಿದೆ. ಪೌರತ್ವ ಕಾಯ್ದೆ ಯಾವ ಹಕ್ಕನ್ನೂ ಕಿತ್ತುಕೊಳ್ಳುವುದಿಲ್ಲ ಎಂದು ವಿಧಾನ ಪರಿಷತ್‍ನ ಮಾಜಿ ಸಭಾಪತಿ ಡಿ.ಎಚ್ ಶಂಕರಮೂರ್ತಿ ಕಾಂಗ್ರೆಸ್ ವಿರುದ್ಧ ಆರೋಪಿಸಿದರು.

    ತೀರ್ಥಹಳ್ಳಿಯ ತಾಲೂಕು ಕಚೇರಿ ಎದುರು ನಡೆದ ಪೌರತ್ವ ಕಾಯ್ದೆ ಬೆಂಬಲಿಸಿ ತಾಲೂಕು ಬಿಜೆಪಿ ಘಟಕ ಹಮ್ಮಿಕೊಂಡಿದ್ದ ಬೃಹತ್ ಜನ ಜಾಗೃತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ನಂತರ ಭಾರತ, ಪಾಕಿಸ್ತಾನವನ್ನು ಒಡೆದ ಕಾಂಗ್ರೆಸ್ ಇಂದು ರಾಜಕೀಯ ದುರುದ್ದೇಶದಿಂದ ದೇಶದಲ್ಲಿ ದ್ವೇಷದ ವಿಷ ಬೀಜ ಬಿತ್ತುತ್ತಿದೆ. ಅಖಂಡ ಭಾರತವನ್ನು ಧರ್ಮಾಧಾರಿತವಾಗಿ ಒಡೆಯುವುದು ಬೇಡ ಎಂದು ಮಹಾತ್ಮ ಗಾಂಧಿಜೀ, ಅಂಬೇಡ್ಕರ್ ಹಲವು ಬಾರಿ ಮನವಿ ಮಾಡಿದರೂ ಕಾಂಗ್ರೆಸ್ ಕೇಳಲಿಲ್ಲ. ಕಾಂಗ್ರೆಸ್ ಸುಳ್ಳನ್ನು ಬಂಡವಾಳ ಮಾಡಿಕೊಂಡಿದೆ. ದೇಶ ಕಟ್ಟುವ ಬದಲು ಛಿದ್ರ ಮಾಡುವ ಹುನ್ನಾರ ನಡೆಸುತ್ತಿದೆ. ಇನ್ನೊಮ್ಮೆ ದೇಶವನ್ನು ಒಡೆಯಲು ಧರ್ಮದ ಹೆಸರಿನಲ್ಲಿ ಜನರನ್ನು ಬೀದಿಗೆ ತಂದು ನಿಲ್ಲಿಸುತ್ತಿದೆ ಎಂದರು.

    ಪೌರತ್ವ ಕಾಯ್ದೆ ಮುಸ್ಲಿಮರು, ದಲಿತರು, ಹಿಂದುಳಿದ ವರ್ಗದವರಿಗೆ ತೊಂದರೆ ಉಂಟು ಮಾಡುತ್ತದೆ ಎಂದು ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳು ಅಪ ಪ್ರಚಾರದಲ್ಲಿ ತೊಡಗಿವೆ. ಕೇಂದ್ರ ಸರ್ಕಾರ ಪೌರತ್ವ ಕಾಯ್ದೆ ಜಾರಿಗೆ ತಂದಿದ್ದು, ಎಷ್ಟೇ ಪ್ರತಿರೋಧ ಎದುರಾದರೂ ವಾಪಸ್ ಪಡೆಯುವುದಿಲ್ಲ. ಬಿಜೆಪಿ ಮನೆ ಮನೆಗೆ ತೆರಳಿ ಪೌರತ್ವ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅಸ್ಸಾಂನಲ್ಲಿ ಎನ್‍ಆರ್ ಸಿ ನಿಯಮ ಜಾರಿಗೆ ತಂದರು. 1950ರಲ್ಲಿ ಪೌರತ್ವ ಪರ ಕಾಂಗ್ರೆಸ್ ನಿರ್ಣಯ ಕೈಗೊಂಡಿದೆ. ಈಗಿನ ಪ್ರಸ್ತುತ ಕಾಂಗ್ರೆಸ್ ಪೌರತ್ವ ವಿರೋಧಿಸಿ ನಿರ್ಣಯ ತೆಗೆದುಕೊಂಡಿದ್ದು ಇಂತಹ ದ್ವಂದ್ವ ನಿಲುವು ಏಕೆ ಎಂದು ಶಂಕರಮೂರ್ತಿ ಪ್ರಶ್ನಿಸಿದರು.

  • ಹೊರಟ್ಟಿಗೆ ಸಭಾಪತಿ ಸ್ಥಾನ ನೀಡಲು ಕಾಂಗ್ರೆಸ್ ನಿರ್ಧಾರ- ಕುತೂಹಲ ಮೂಡಿಸಿದೆ ಜೆಡಿಎಸ್ ನಡೆ

    ಹೊರಟ್ಟಿಗೆ ಸಭಾಪತಿ ಸ್ಥಾನ ನೀಡಲು ಕಾಂಗ್ರೆಸ್ ನಿರ್ಧಾರ- ಕುತೂಹಲ ಮೂಡಿಸಿದೆ ಜೆಡಿಎಸ್ ನಡೆ

    ಬೆಂಗಳೂರು: ವಿಧಾನ ಪರಿಷತ್ ಸಭಾಪತಿಗಳ ವಿರುದ್ಧದ ಅವಿಶ್ವಾಸ ನಿರ್ಣಯದ ಕ್ಲೈಮ್ಯಾಕ್ಸ್ ಇಂದು ನಡೆಯಲಿದ್ದು, ಕ್ಷಣಕ್ಷಣಕ್ಕೂ ರಾಜಕೀಯ ಲೆಕ್ಕಾಚಾರ ಬದಲಾಗ್ತಿದೆ. ಮುಖಭಂಗದಿಂದ ಪಾರಾಗಲು ಕಾಂಗ್ರೆಸ್ ಪಾಳಯದಿಂದ ಹೊಸ ದಾಳ ಉರುಳಿದೆ. ಸಭಾಪತಿ ಸ್ಥಾನವನ್ನು ಜೆಡಿಎಸ್‍ಗೆ ನೀಡಲು ಕಾಂಗ್ರೆಸ್ ಮುಂದಾಗಿದ್ದು, ಬಸವರಾಜ ಹೊರಟ್ಟಿಗೆ ನೀಡಲು ಸಮ್ಮತಿಸಿದೆ.

    ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ಕರೆಮಾಡಿ ಸಭಾಪತಿ ಶಂಕರಮೂರ್ತಿ ಅವರನ್ನ ಕೆಳಗಿಳಿಸಲು ಜೆಡಿಎಸ್ ಬೆಂಬಲ ಕೋರಿದ್ದಾರೆ. ಕಾಂಗ್ರೆಸ್ ನಿರ್ಣಯವನ್ನು ಬೆಂಬಲಿಸುವಂತೆ ಜೆಡಿಎಸ್‍ಗೆ ಸಚಿವ ಪರಮೇಶ್ವರ್ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ನಿರ್ಣಯ ಏನು? ಎಂಬ ಕುತೂಹಲ ಮೂಡಿಸಿದೆ

    ಜೆಡಿಎಸ್ ಬೆಂಬಲ ನಮಗೇ ಇದೇ ಎಂದು ಸಭಾಪತಿ ಡಿಹೆಚ್ ಶಂಕರಮೂರ್ತಿ ಸ್ಪಷ್ಟಪಡಿಸಿದ್ದಾರೆ. ನಮ್ಮ ಬೆಂಬಲ ಬಿಜೆಪಿಗೆ ಎಂದು ಕುಮಾರಸ್ವಾಮಿಯವರೇ ಹೇಳಿರುವಾಗ ಗೊಂದಲ ಏಕೆ ಎಂದು ಶಂಕರಮೂರ್ತಿ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಸ್‍ಗೆ ಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ತೀವ್ರ ಆಕ್ರೋಶ ಹೊರಹಾಕಿದ್ದಾರೆ

    ಕಾಂಗ್ರೆಸ್ ಸದಸ್ಯರ ಅವಿಶ್ವಾಸ ನಿರ್ಣಯದ ಬಳಿಕ ಮತದಾನ ಪ್ರಕ್ರಿಯೆ ನಡೆಯಲಿದೆ. ಈಗಾಗಲೇ ಮೂರು ಪಕ್ಷಗಳು ಸದನದಲ್ಲಿ ಕಡ್ಡಾಯವಾಗಿ ಇಂದು ಹಾಜರಿರುವಂತೆ ತಮ್ಮ ಶಾಸಕರಿಗೆ ವಿಪ್ ಜಾರಿ ಮಾಡಿದ್ದಾರೆ. ಈವರೆಗೂ ಯಾರಿಗೆ ಮತ ಹಾಕಬೇಕು ಅನ್ನೋದನ್ನ ಜೆಡಿಎಸ್ ಶಾಸಕರಿಗೆ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸೂಚಿಸಿಲ್ಲ. ಹೀಗಾಗಿ ಇಂದು ಪರಿಷತ್ ನಲ್ಲಿ ಬೇರೆ ಹೈಡ್ರಾಮಾ ನಡೆದರೂ ಅಚ್ಚರಿ ಪಡಬೇಕಿಲ್ಲ. ಸಂಖ್ಯಾಬಲದ ಪ್ರಕಾರ ಬಿಜೆಪಿ- ಜೆಡಿಎಸ್ ದೋಸ್ತಿ ಮುಂದುವರೆದ್ರೆ ಬಿಜೆಪಿಗೆ ಯಾವುದೇ ಆತಂಕವಿಲ್ಲ. ಒಂದು ವೇಳೆ ಜೆಡಿಎಸ್ ಕೊನೆ ಕ್ಷಣದಲ್ಲಿ ಉಲ್ಟಾ ಹೊಡೆದರೆ ಬಿಜೆಪಿಯಿಂದ ಸಭಾಪತಿ ಸ್ಥಾನ ಕೈ ತಪ್ಪಲಿದೆ.

    ಇವತ್ತಿನ ಪರಿಷತ್ ಅವಿಶ್ವಾಸ ನಿರ್ಣಯ ಪ್ರಕ್ರಿಯೆಯಲ್ಲಿ ಪಕ್ಷೇತರ ಅಭ್ಯರ್ಥಿಗಳು ಕಿಂಗ್ ಮೇಕರ್. ಸದ್ಯ 5 ಪಕ್ಷೇತರರ ಪೈಕಿ ಮೂರು ಸದಸ್ಯರು ಕಾಂಗ್ರೆಸ್ ಬೆಂಬಲಿತರಿದ್ದು, ಇಬ್ಬರು ಬಿಜೆಪಿ ಜೆಡಿಎಸ್ ಬೆಂಬಲಿತ ಸದಸ್ಯರಿದ್ದಾರೆ. ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡಿರುವ ಇಬ್ಬರಲ್ಲಿ ಒಬ್ಬರು ಹಿಂದೆ ಸರಿದರೂ ಬಿಜೆಪಿಗೆ ಸಭಾಪತಿ ಸ್ಥಾನ ಮಿಸ್ ಆಗಲಿದೆ. ಹೀಗಾಗಿ ಪಕ್ಷೇತರ ಅಭ್ಯರ್ಥಿಗಳು ಇಂದಿನ ಮತದಾನದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸಿದ್ದಾರೆ.

    ಪರಿಷತ್ ನಲ್ಲಿ ಒಟ್ಟಾರೆ 75 ಸದಸ್ಯರು ಇದ್ದಾರೆ. ಇತ್ತೀಚೆಗೆ ನಿಧನರಾದ ಬಿಜೆಪಿಯ ವಿಮಲಗೌಡರ ಸ್ಥಾನ ಹೊರತುಪಡಿಸಿದ್ರೆ ಒಟ್ಟಾರೆ ಸದನದಲ್ಲಿ ಸದ್ಯ ಸಂಖ್ಯಾಬಲ 74 ಆಗಲಿದೆ. ಇದರ ಅನ್ವಯ ಸರಳ ಬಹುಮತಕ್ಕೆ 38 ಸ್ಥಾನಗಳು ಅವಶ್ಯಕವಾಗಿದೆ. ಸದ್ಯ ಸದನದಲ್ಲಿ ಕಾಂಗ್ರೆಸ್ 33 , ಬಿಜೆಪಿ 22, ಜೆಡಿಎಸ್ 13 ,ಪಕ್ಷೇತರರು 5 ಸ್ಥಾನಗಳಿವೆ. ಸಭಾಪತಿಗಳ ಒಂದು ಸ್ಥಾನ ಇದೆ. ಕಾಂಗ್ರೆಸ್ ಜೊತೆ ಪಕ್ಷೇತರ ಮೂರು ಸದಸ್ಯರು ಗುರುತಿಸಿಕೊಂಡಿದ್ದು 33 ಕಾಂಗ್ರೆಸ್ ಸದಸ್ಯರ ಜೊತೆ 3 ಪಕ್ಷೇತರರು ಸೇರಿದ್ರೆ ಒಟ್ಟು 36 ಸ್ಥಾನವಾಗಲಿದೆ. ಇನ್ನು ಇಬ್ಬರು ಪಕ್ಷೇತರರು ಬಿಜೆಪಿ ಜೊತೆ ಗುರುತಿಸಿಕೊಂಡಿದ್ದು, ಬಿಜೆಪಿ 33 + ಜೆಡಿಎಸ್ 13 ಸೇರಿ ಒಟ್ಟು 37 ಸ್ಥಾನವಾಗಲಿದೆ. ಸಭಾಪತಿಗಳು ಬಿಜೆಪಿಯವರಾಗಿರೋದ್ರಿಂದ ಅವರ ಮತ ಬಿಜೆಪಿಗೆ ಸಿಗಲಿದ್ದು ಒಟ್ಟಾರೆ 38 ಸ್ಥಾನಗಳ ಮೂಲಕ ಬಿಜೆಪಿಗೆ ಸಭಾಪತಿ ಸ್ಥಾನ ದೊರೆಯಲಿದೆ.