Tag: Dhananjaya de Silva

  • Asia Cup 2023ː ಬಿಗಿ ಬೌಲಿಂಗ್‌ ಹಿಡಿತಕ್ಕೆ ಲಂಕಾ ಭಸ್ಮ – ಭಾರತಕ್ಕೆ 41 ರನ್‌ಗಳ ಭರ್ಜರಿ ಜಯ

    Asia Cup 2023ː ಬಿಗಿ ಬೌಲಿಂಗ್‌ ಹಿಡಿತಕ್ಕೆ ಲಂಕಾ ಭಸ್ಮ – ಭಾರತಕ್ಕೆ 41 ರನ್‌ಗಳ ಭರ್ಜರಿ ಜಯ

    ಕೊಲಂಬೊ: ಇಲ್ಲಿನ ಆರ್‌ ಪ್ರೇಮದಾಸ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯವು ಬೌಲರ್‌ಗಳ ಆಟಕ್ಕೆ ಸೀಮಿತವಾಗಿತ್ತು. ಇತ್ತಂಡಗಳಿಂದಲೂ ಸ್ಪಿನ್‌ ಬೌಲರ್‌ಗಳ ಕೈಚಳಕ ಜೋರಾಗಿತ್ತು. ಆದ್ರೆ ಚೇಸಿಂಗ್‌ನಲ್ಲಿ ಲಂಕಾ ವಿರುದ್ಧ ಬಿಗಿ ಹಿಡಿತ ಸಾಧಿಸಿದ ರೋಹಿತ್‌ ಪಡೆ 41 ರನ್‌ಗಳ ಜಯ ಸಾಧಿಸುವಲ್ಲಿ ಯಶಸ್ವಿಯಾಯಿತು.

    ರೋಹಿತ್‌ ಶರ್ಮಾ ಅರ್ಧಶತಕ ಬ್ಯಾಟಿಂಗ್‌ ನೆರವು ಹಾಗೂ ಕುಲ್ದೀಪ್‌ ಯಾದವ್‌ ಸ್ಪಿನ್‌ ಬೌಲಿಂಗ್‌ ದಾಳಿ ನೆರವಿನಿಂದ ಭಾರತ, ಶ್ರೀಲಂಕಾ ವಿರುದ್ಧ 41 ರನ್‌ಗಳ ಜಯ ಸಾಧಿಸಿದ್ದು, ಫೈನಲ್‌ ಕನಸು ಜೀವಂತವಾಗಿಸಿಕೊಂಡಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 49.1 ಓವರ್‌ಗಳಲ್ಲಿ 213 ರನ್‌ಗಳಿಗೆ ಆಲೌಟ್‌ ಆಯಿತು. 214 ರನ್‌ಗಳ ಸಾಧಾರಣ ಮೊತ್ತದ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ ಟೀಂ ಇಂಡಿಯಾ ಸ್ಪಿನರ್‌ಗಳ ದಾಳಿಗೆ ನಲುಗಿತು. 41.3 ಓವರ್‌ಗಳಲ್ಲಿ 172 ರನ್‌ಗಳಗೆ ಸರ್ವಪತನ ಕಂಡಿತು.

    ಚೇಸಿಂಗ್‌ ಆರಂಭಿಸಿದ ಲಂಕಾ ತಂಡ ಟೀಂ ಇಂಡಿಯಾ ಸ್ಪಿನ್‌ ಬೌಲಿಂಗ್‌ ದಾಳಿಗೆ ನಲುಗಿಹೋಗಿತ್ತು. 7 ಓವರ್‌ಗಳಲ್ಲಿ 26 ರನ್‌ಗಳಿಸಿ ಪ್ರಮುಖ 3 ವಿಕೆಟ್‌ಗಳನ್ನ ಕಳೆದುಕೊಂಡಿತ್ತು. 26 ಓವರ್‌ಗಳಲ್ಲಿ 104 ರನ್‌ಗಳಿಗೆ 6 ವಿಕೆಟ್‌ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು. ಪಾತುಮ್ ನಿಸ್ಸಾಂಕ 6 ರನ್‌, ದಿಮುತ್ ಕರುಣಾರತ್ನೆ 2 ರನ್‌, ಕುಸಲ್ ಮೆಂಡಿಸ್ 15 ರನ್‌, ಸದೀರ ಸಮರವಿಕ್ರಮ 17 ರನ್‌, ಚರಿತ್ ಅಸಲಂಕಾ 22 ರನ್‌ ಹಾಗೂ ದಸುನ್‌ ಶನಾಕ 9 ರನ್‌ಗಳಿಸಿ ವಿಕೆಟ್‌ ಕೈಚೆಲ್ಲಿದರು. ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಧನಂಜಯ ಡಿ ಸಿಲ್ವಾ ಹಾಗೂ ದುನಿತ್ ವೆಲ್ಲಲಾಗೆ ತಂಡಕ್ಕೆ ನೆರವಾದರು.

    ಧನಂಜಯ ಹಾಗೂ ದುನಿತ್‌ ಜೋಡಿ 7ನೇ ವಿಕೆಟ್‌ಗೆ 75 ಎಸೆತಗಳಲ್ಲಿ 63 ರನ್‌ಗಳ ಜೊತೆಯಾಟ ನೀಡಿತ್ತು. ಕೊನೆಯ ಹಂತ ತಲುಪುತ್ತಿದ್ದಂತೆ ಸ್ಪೋಟಕ ಆಟಕ್ಕೆ ಪ್ರಯತ್ನಿಸಿತ್ತು. ಅಷ್ಟರಲ್ಲೇ ಜಡೇಜಾ ಧನಂಜಯ್‌ ಸೆಲ್ವಾ ಆಟಕ್ಕೆ ಬ್ರೇಕ್‌ ಹಾಕಿದರು. ಸಿಲ್ವಾ 66 ಎಸೆತಗಳಲ್ಲಿ 5 ಬೌಂಡರಿಗಳೊಂದಿಗೆ 41 ರನ್‌ ಗಳಿಸಿ ಔಟಾಗುತ್ತಿದ್ದಂತೆ ಮಹೀಶ್‌ ತೀಕ್ಷಣ, ಕಸುನ್‌ ರಜಿತ ಹಾಗೂ ಮಹೇಶ್‌ ಪಥಿರಣ ವಿಕೆಟ್‌ ಒಪ್ಪಿಸಿದ್ರು. ಕೊನೆಯವರೆಗೂ ಹೋರಾಟ ನಡೆಸಿದ ದುನಿತ್‌ 46 ಎಸೆತಗಳಲ್ಲಿ 42 ರನ್‌ ಗಳಿಸಿ ಅಜೇಯರಾಗುಳಿದರು. ಅಂತಿಮವಾಗಿ ಶ್ರೀಲಂಕಾ 41.3 ಓವರ್‌ಗಳಲ್ಲಿ 172 ರನ್‌ಗಳಿಗೆ ಸರ್ವಪತನ ಕಂಡಿತು.

    ಟೀಂ ಇಂಡಿಯಾ ವಿರುದ್ಧ ಕುಲ್ದೀಪ್‌ ನಾಲ್ಕು ವಿಕೆಟ್‌ ಕಿತ್ತರೆ, ಜಸ್ಪ್ರೀತ್‌ ಬುಮ್ರಾ ಹಾಗೂ ರವೀಂದ್ರ ಜಡೇಜಾ ತಲಾ 2 ವಿಕೆಟ್‌ ಹಾಗೂ ಮೊಹಮ್ಮದ್‌ ಸಿರಾಜ್‌, ಹಾರ್ದಿಕ್‌ ಪಾಂಡ್ಯ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಆರಂಭಿಕರಾದ ರೋಹಿತ್‌ ಶರ್ಮಾ ಹಾಗೂ ಶುಭಮನ್‌ ಗಿಲ್‌ ಜೋಡಿ 15.1 ಓವರ್‌ಗಳಲ್ಲಿ 91 ರನ್‌ಗಳ ಜೊತೆಯಾಟ ನೀಡಿತು. ಶುಭಮನ್‌ ಗಿಲ್‌ 19‌ ರನ್‌ ಗಳಿಸಿ ಔಟಾದರು. ಈ ಬೆನ್ನಲ್ಲೇ ಪಾಕ್‌ ವಿರುದ್ಧ ಶತಕ ಸಿಡಿಸಿ ಮೆರೆದಾಡಿದ್ದ ಕೊಹ್ಲಿ ಕೇವಲ 3 ರನ್‌ಗಳಿಗೆ ಔಟಾದರು. ಆದ್ರೆ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್‌ ಕಿಶನ್‌ 61 ಎಸೆತಗಳಲ್ಲಿ 33 ರನ್ ಹಾಗೂ ಕೆ.ಎಲ್‌ ರಾಹುಲ್‌ 44 ಎಸೆತಗಳಲ್ಲಿ 39 ರನ್‌ ಬಾರಿಸುವ ಮೂಲಕ ಛೇರಿಕೆ ನೀಡಿದ್ದರು. ಇವರಿಬ್ಬರ ವಿಕೆಟ್‌ ಕಳೆದುಕೊಳ್ಳುತ್ತಿದ್ದಂತೆ ಟೀಂ ಇಂಡಿಯಾ ಒಂದೊಂದೇ ವಿಕೆಟ್‌ ಕಳೆದುಕೊಂಡಿತು. ಕೊನೆಯಲ್ಲಿ ಅಕ್ಷರ್‌ ಪಟೇಲ್‌ 26 ರನ್‌ಗಳ ನೆರವಿನಿಂದ ಟೀಂ ಇಂಡಿಯಾ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಮೊದಲ 15 ಓವರ್‌ಗಳಲ್ಲಿ 91 ರನ್‌ ಗಳಿಸಿದ್ದ ಭಾರತ 25 ಓವರ್‌ಗಳಲ್ಲಿ 128 ರನ್‌ ಗಳಿಸಿತ್ತು. ಬಳಿಕ ನಿಧಾನ ಗತಿ ಬ್ಯಾಟಿಂಗ್‌ ಆರಂಭಿಸಿದ ಟೀಂ ಇಂಡಿಯಾ 43 ಓವರ್‌ಗಳಲ್ಲಿ 186 ರನ್‌ಗಳಿಗೆ 9 ವಿಕೆಟ್‌ ಕಳೆದುಕೊಂಡಿತ್ತು. ಇದರಿಂದ 200 ರನ್‌ ಗಳಿಸುವುದೂ ಕಷ್ಟವಾಗಿತ್ತು. ಈ ವೇಳೆ ಅಕ್ಷರ್‌ ಪಟೇಲ್‌ ಜವಾಬ್ದಾರಿಯುತ ಆಟದಿಂದ 200ರ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಶ್ರೀಲಂಕಾ ಪರ ದುನಿತ್ ವೆಲ್ಲಲಾಗೆ 10 ಓವರ್‌ಗಳಲ್ಲಿ 40 ರನ್‌ ಬಿಟ್ಟುಕೊಟ್ಟು 5 ವಿಕೆಟ್‌ ಕಿತ್ತರೆ, ಚರಿತ್‌ ಹಸಲಂಕಾ 9 ಓವರ್‌ಗಳಲ್ಲಿ ಕೇವಲ 18 ರನ್‌ ಬಿಟ್ಟುಕೊಟ್ಟು 4 ವಿಕೆಟ್‌ ಉರುಳಿಸಿದರು. ಮಹೀಶ್‌ ತೀಕ್ಷಣ ಒಂದು ವಿಕೆಟ್‌ ಪಡೆದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶ್ರೀಲಂಕಾ ಕ್ರಿಕೆಟ್ ಆಟಗಾರನ ತಂದೆಯನ್ನು ಶೂಟ್ ಮಾಡಿ ಕೊಂದ ದುಷ್ಕರ್ಮಿಗಳು

    ಶ್ರೀಲಂಕಾ ಕ್ರಿಕೆಟ್ ಆಟಗಾರನ ತಂದೆಯನ್ನು ಶೂಟ್ ಮಾಡಿ ಕೊಂದ ದುಷ್ಕರ್ಮಿಗಳು

    ಕೊಲಂಬೊ: ಲಂಕಾ ರಾಷ್ಟ್ರೀಯ ಕ್ರಿಕೆಟ್ ತಂಡದ ಆಟಗಾರ ಧನಂಜಯ್ ಡಿ. ಸಿಲ್ವಾ ಅವರ ತಂದೆಯನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ.

    ಧನಂಜಯ್ ತಂದೆ ರಾಜನ್ ಕೊಲೆಯಾದವರು. ರಾಜನ್ ಸ್ಥಳೀಯ ರಾಜಕೀಯ ಮುಖಂಡರು ಸಹ ಆಗಿದ್ದು, ಕೊಲಂಬೊದ ರತ್ಮಾಲನ ಬಳಿ ಗುರುವಾರ ರಾತ್ರಿ ಗುಂಡು ಹಾರಿಸಿ ಕೊಲೆ ಮಾಡಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

    ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಸದ್ಯ ತಂದೆಯವರ ಕೊಲೆಯಾದ ಕಾರಣ 26 ವರ್ಷದ ಡಿ ಸಿಲ್ವಾ ಅವರು ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.

    ಈ ಕುರಿತು ಶ್ರೀಲಂಕಾ ಕ್ರಿಕೆಟ್ ಮಂಡಳಿ ಪ್ರತಿಕ್ರಿಯೆ ನೀಡಿದ್ದು, ಘಟನೆಯಿಂದ ಶಾಕ್ ಗೆ ಒಳಗಾಗಿದ್ದೇವೆ. ತಮ್ಮ ತಂಡದ ಆಟಗಾರ ಧನಂಜಯ್ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ. ಘಟನೆಯ ಕುರಿತು ಧನಂಜಯ್ ಅವರಿಗೆ ಬೇಕಾದ ಎಲ್ಲ ಸಹಾಯವನ್ನು ಸಹ ನೀಡುವುದಾಗಿ ತಿಳಿಸಿದೆ. ಪೂರ್ವ ನಿಗಧಿಯಂತೆ ಮೇ 15 ರ ಸಂಜೆ ಶ್ರೀಲಂಕಾ ತಂಡದ ಜೊತೆ ಸರಣಿಯಲ್ಲಿ ಭಾಗವಹಿಸಲು ಡಿ ಸಿಲ್ವಾ ತೆರಳಬೇಕಿತ್ತು.