Tag: Dhansika

  • ತೆರೆ ಕಾಣುವ ಮೊದಲೇ ಹೆಚ್ಚಿದ ಬೇಡಿಕೆ, ಮಲಯಾಳಂಗೆ ಡಬ್ ಆಯ್ತು ‘ಉದ್ಘರ್ಷ’

    ತೆರೆ ಕಾಣುವ ಮೊದಲೇ ಹೆಚ್ಚಿದ ಬೇಡಿಕೆ, ಮಲಯಾಳಂಗೆ ಡಬ್ ಆಯ್ತು ‘ಉದ್ಘರ್ಷ’

    ಥ್ರಿಲ್ಲರ್ ಸಿನಿಮಾಗಳ ಮಾಸ್ಟರ್ ಡೈರೆಕ್ಟರ್ ಸುನೀಲ್ ಕುಮಾರ್ ದೇಸಾಯಿ ದಶಕಗಳ ನಂತರ ಮತ್ತೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಮಾಡ್ತಾರೆ ಅಂದಾಗಲೇ ಅವರ ಅಭಿಮಾನಿಗಳಲ್ಲಿ ಪುಳಕವುಂಟಾಗಿತ್ತು. ಇನ್ನು ದೇಸಾಯಿ ಉದ್ಘರ್ಷ ಚಿತ್ರದ ಫಸ್ಟ್‌ಲುಕ್, ಫಸ್ಟ್‌ಲುಕ್ ಟೀಸರ್, ಪೋಸ್ಟರ್ಸ್ ಒಂದಕ್ಕೊಂದು ವಿಭಿನ್ನವಾಗಿದ್ದು ಚಿತ್ರ ರಸಿಕರ ನಿರೀಕ್ಷೆಯನ್ನು ಹೆಚ್ಚಿಸಿದೆ.


    ಈ ನಡುವೆ ಇದೇ ಮೊದಲ ಬಾರಿಗೆ ಸುನೀಲ್ ಕುಮಾರ್ ದೇಸಾಯಿ ಬಹು ಭಾಷಾ ಚಿತ್ರ ಮಾಡಿದ್ದು ಉದ್ಘರ್ಷ ಚಿತ್ರವನ್ನು ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಿದ್ದಾರೆ. ಅಲ್ಲದೇ, ತಮಿಳಿಗೆ ಉಚ್ಚಕಟ್ಟಂ ಅನ್ನೋ ಹೆಸರಿನಲ್ಲಿ ಡಬ್ ಕೂಡ ಮಾಡಿದ್ದಾರೆ. ಆದ್ರೆ, ಈಗ ಲೇಟೆಸ್ಟ್ ವಿಷಯವೆಂದರೆ, ದೇಸಾಯಿ ಚಿತ್ರಕ್ಕೆ ಮಲಯಾಳಂನಲ್ಲೂ ಬೇಡಿಕೆ ಬಂದಿದ್ದು, ಆ ಭಾಷೆಗೂ ಚಿತ್ರವನ್ನು ದೇಸಾಯಿ ಡಬ್ ಮಾಡಿದ್ದಾರೆ. ದೇಸಾಯಿ ಚಿತ್ರಗಳು ಈ ಹಿಂದೆಯೂ ಮಲಯಾಳಂಗೆ ಡಬ್ ಆಗಿದ್ದವು.

    ಈ ಬಗ್ಗೆ ವಿವರಣೆ ನೀಡಿರೋ ದೇಸಾಯಿ, ನನ್ನ ತರ್ಕ, ನಿಷ್ಕರ್ಷ, ಮರ್ಮ ಚಿತ್ರ ಈಗಾಗಲೇ ಮಲಯಾಳಂ ಭಾಷೆಗೆ ಡಬ್ ಆಗಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿವೆ. ಇದೇ ಹಿನ್ನೆಲೆಯಲ್ಲಿ ಮಲಯಾಳಂ ಇಂಡಸ್ಟ್ರೀಯಿಂದ ಉದ್ಘರ್ಷಕ್ಕೂ ಬೇಡಿಕೆ ಬಂದ ಹಿನ್ನೆಲೆ, ನಾವೇ ಡಬ್ಬಿಂಗ್ ಮಾಡಿಸುತ್ತಿದ್ದೇವೆ. ಈ ಗಾಗಲೇ ಕನ್ನಡ, ತೆಲುಗು, ತಮಿಳು ಡಬ್ಬಿಂಗ್ ಮುಗಿದಿದ್ದು ಮಲಯಾಳಂ ಭಾಷೆಯ ಡಬ್ಬಿಂಗ್ ಕಾರ್ಯವೂ ಭರದಿಂದ ಸಾಗಿದೆ ಅಂತಾ ಹೇಳಿದ್ದಾರೆ. ಅಲ್ಲದೇ, ಅವರೇ ಹೇಳುವಂತೆ ಶೀಘ್ರದಲ್ಲಿಯೇ ನಾಲ್ಕೂ ಭಾಷೆಗಳಲ್ಲಿ ಶೀಘ್ರದಲ್ಲಿಯೇ ಚಿತ್ರದ ಟ್ರೈಲರ್ ಅನ್ನು ರಿಲೀಸ್ ಮಾಡಲಾಗುತ್ತಿದೆಯಂತೆ.


    ಯಾರೆಲ್ಲ ನಟಿಸಿದ್ದಾರೆ ಗೊತ್ತಾ..?!
    ಇನ್ನು, ಚಿತ್ರದಲ್ಲಿ ಸಿಂಗಂ 3 ಖ್ಯಾತಿಯ ಠಾಕೂರ್ ಅನೂಪ್ ಸಿಂಗ್ ನಾಯಕ ನಟರಾಗಿ ನಟಿಸಿದ್ದರೆ, ತಮಿಳಿನ ಕಬಾಲಿ ಖ್ಯಾತಿಯ ಧನ್ಸಿಕಾ ಹಾಗೂ ನವ ನಟಿ ತಾನ್ಯಾ ಹೋಪ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಅಲ್ಲದೇ ಬಾಲಿವುಡ್ ವಿಲನ್ ಕಬೀರ್ ಸಿಂಗ್ ದುಹಾನ್, ತೆಲುಗಿನ ಬಾಹುಬಲಿ ಖ್ಯಾತಿಯ ಪ್ರಭಾಕರ್, ಶ್ರವಣ್ ರಾಘವೇಂದ್ರ, ವಂಶಿ ಕೃಷ್ಣ, ಶ್ರದ್ಧಾ ದಾಸ್ ಮುಂತಾದವರು ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬಹುಭಾಷಾ ತಾರೆ, ಕನ್ನಡಿಗ ಕಿಶೋರ್ ಮತ್ತೊಂದು ಪ್ರಮುಖ ಹಾಗೂ ವಿಶಿಷ್ಟ ಪಾತ್ರದಲ್ಲಿ ನಟಿಸಿದ್ದರೆ, ಹರ್ಷಿಕಾ ಪೂಣಚ್ಚ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಪಿ. ರಾಜನ್ ಹಾಗೂ ದಿವಂಗತ ವಿಷ್ಣುವರ್ಧನ್ ಅವರು ಕ್ಯಾಮರಾ ವರ್ಕ್ ಮಾಡಿದ್ದರೆ, ಹಿಂದಿಯ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಸಂಜೋಯ್ ಚೌಧುರಿ ಸಂಗೀತ ನೀಡಿದ್ದಾರೆ. ಇನ್ನು ಚಿತ್ರಕ್ಕೆ ನಿರ್ದೇಶಕ ದೇಸಾಯಿ ಅವರ ಸ್ನೇಹಿತ ಆರ್. ದೇವರಾಜ್ ಹಣ ಹೂಡಿದ್ದು, ರಾಜೇಂದ್ರ ಹಾಗೂ ಡಿ. ಮಂಜುನಾಥ್ ಸಹ ನಿರ್ಮಾಪಕರಾಗಿದ್ದಾರೆ. ಡಿ ಕ್ರಿಯೇಶನ್ಸ್ ಬ್ಯಾನರ್ ಅಡಿ ಚಿತ್ರ ಮೂಡಿ ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • #MeToo ಅಭಿಯಾನಕ್ಕೆ ಜೈ ಅಂದ್ರು ಕಬಾಲಿ ಬೆಡಗಿ ಧನ್ಸಿಕಾ

    #MeToo ಅಭಿಯಾನಕ್ಕೆ ಜೈ ಅಂದ್ರು ಕಬಾಲಿ ಬೆಡಗಿ ಧನ್ಸಿಕಾ

    #MeToo ಅಭಿಯಾನವೀಗ ಕನ್ನಡ ಚಿತ್ರರಂಗದಲ್ಲಿಯೂ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಈ ನಡುವೆಯೂ ಹಲವಾರು ನಟ ನಟಿಯರು ಇದರ ಪರ ಮತ್ತು ವಿರುದ್ಧವಾದ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ಉದ್ಘರ್ಷ ಚಿತ್ರದ ಮೂಲಕ ಕನ್ನಡಕ್ಕೆ ಬಂದಿರೋ ತಮಿಳು ಹುಡುಗಿ ಧನ್ಸಿಕಾ ಮಿ ಟೂ ಅಭಿಯಾನಕ್ಕೆ ತಮ್ಮ ಬೆಂಬಲ ಸೂಚಿಸಿದ್ದಾರೆ.

    ಮಿ ಟೂ ಎಂಬುದು ಮಹಿಳೆಯರ ಆತ್ಮಗೌರವ ಕಾಪಾಡಿಕೊಳ್ಳಲಾಗಿಯೇ ಹುಟ್ಟಿಕೊಂಡಿರೋ ಅಭಿಯಾನ. ಜನ್ಮ ನೀಡೋ ಹೆಣ್ಣನ್ನು ಗೌರವಿಸೋದು ಎಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಹುಟ್ಟಿಕೊಂಡಿರೋ ಮಿ ಟೂ ಅಭಿಯಾನ ಒಳ್ಳೆಯ ಉದ್ದೇಶ ಹೊಂದಿದೆ. ಲೈಂಗಿಕ ಕಿರುಕುಳ ಅನುಭವಿಸಿದ ಹೆಣ್ಣುಮಕ್ಕಳೆಲ್ಲ ಈ ಮೂಲಕ ತಮ್ಮ ಯಾತನೆಯನ್ನು ಹೇಳಿಕೊಳ್ಳುತ್ತಿದ್ದಾರೆ. ಇದಕ್ಕೆ ನಾನು ಬೆಂಬಲ ಸೂಚಿಸುತ್ತೇನೆ ಅಂತ ಧನ್ಸಿಕಾ ಹೇಳಿಕೊಂಡಿದ್ದಾರೆ.

    ಧನ್ಸಿಕಾ ತಮಿಳು ಚಿತ್ರರಂಗದಲ್ಲಿ ಬೇಡಿಕೆ ಹೊಂದಿರೋ ನಟಿ. ಈಕೆ ಕಬಾಲಿ ಚಿತ್ರದಲ್ಲಿ ರಜನೀಕಾಂತ್ ಅವರ ಪುತ್ರಿಯಾಗಿಯೂ ಅಭಿನಯಿಸಿದ್ದರು. ಇದೀಗ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ಉದ್ಘರ್ಷ ಚಿತ್ರದ ಮೂಲಕ ಕನ್ನಡದಲ್ಲಿಯೂ ಅಭಿನಯಿಸುತ್ತಿದ್ದಾರೆ. ಥ್ರಿಲ್ಲರ್ ಕಥೆ ಹೊಂದಿರೋ ಈ ಚಿತ್ರದ ಪಾತ್ರದ ಮೂಲಕ ಕನ್ನಡದಲ್ಲಿ ಮತ್ತೊಂದಷ್ಟು ಅವಕಾಶದ ನಿರೀಕ್ಷೆಯನ್ನೂ ಹೊಂದಿದ್ದಾರೆ.

     ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದರ್ಶನ್ ಅಭಿಮಾನಿಯಂತೆ ಉದ್ಘರ್ಷ ಹೀರೋ ಅನೂಪ್!

    ದರ್ಶನ್ ಅಭಿಮಾನಿಯಂತೆ ಉದ್ಘರ್ಷ ಹೀರೋ ಅನೂಪ್!

    ಬೆಂಗಳೂರು: ವಿಭಿನ್ನ ಪೋಸ್ಟರ್ ಮೂಲಕವೇ ಚಂದನವನದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಉದ್ಘರ್ಷ ಸಿನಿಮಾ ಹೊಸ ಆಲೋಚನೆಗಳನ್ನು ಪ್ರೇಕ್ಷಕರಲ್ಲಿ ಹುಟ್ಟು ಹಾಕಿತ್ತು. ಈ ಕುತೂಹಲಗಳನ್ನು ಮತ್ತಷ್ಟು ಹೆಚ್ಚು ಮಾಡಿ ಮೊದಲ ಬಾರಿಗೆ ಚಿತ್ರದ ತಂಡ ಮಾಧ್ಯಮಗಳ ಮುಂದೇ ಬಂದಿತ್ತು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಸುನಿಲ್ ದೇಸಾಯಿ ಅವರು, ಚಿತ್ರದ ಬಗ್ಗೆ ಈ ಸಂದರ್ಭದಲ್ಲಿ ಕಡಿಮೆ ಮಾತನಾಡುತ್ತೇನೆ. ಏಕೆಂದರೆ ಚಿತ್ರದ ನಾಯಕ ನಟ ಠಾಕೂರ್ ಅನೂಪ್ ಸಿಂಗ್ ಪರಿಚಯ ಮಾಡಬೇಕಿದೆ. ಅಲ್ಲದೇ ಚಿತ್ರಕ್ಕಾಗಿ ನಾನು ಅನೂಪ್ ಸಿಂಗ್ ಆಯ್ಕೆ ಮಾಡಿದ ಕುರಿತು ಹೇಳಬೇಕಿದೆ ಎಂದು ಮಾತು ಆರಂಭಿಸಿದರು.

    ಚಿತ್ರ ಕಥೆ ಸಿದ್ಧಗೊಂಡ ಬಳಿಕ ನಾಯಕನ ಹುಡುಕಾಟದಲ್ಲಿದ್ದೆ. ಆಕಸ್ಮಿಕವಾಗಿ ಠಾಕೂರ್ ಅನೂಪ್ ಸಿಂಗ್ ನಾನು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡೆವು. ಒಂದೇ ನೋಟದಲ್ಲಿ ನನ್ನ ಕಥೆಯ ನಾಯಕ ಅವರಲ್ಲಿ ಕಾಣಿಸಿದರು. ನನ್ನ ಸಿನಿಮಾಗೆ ನೀವು ನಾಯಕನಟರಾಗ ಬೇಕು ಎಂದು ಹೇಳುತ್ತಿದಂತೆ ಅನೂಪ್ ಅಚ್ಚರಿಗೊಳಗಾದರು. ಆದರೆ ಚಿತ್ರದ ಕಥೆ ಕೇಳಿದ ಮರುಕ್ಷಣದಲ್ಲಿ ಒಪ್ಪಿಕೊಂಡರು ಎಂದು ಚಿತ್ರ ನಾಯಕ ನಟನ ಹುಡುಕಾಟದ ಹಿಂದಿನ ಕುತೂಹಲ ಕಥೆ ಬಿಚ್ಚಿಟ್ಟರು.

    ಚಿತ್ರದ ಕಥೆಗೆ ಅಭಿನಯ ಮಾತ್ರವಲ್ಲದೇ ವಿಲನ್ ಲುಕ್ ಕೂಡ ಬೇಕಾಗಿದ್ದರಿಂದ ಅವರನ್ನೇ ಆಯ್ಕೆ ಮಾಡಲಾಯಿತು. ಚಿತ್ರದ ಕುರಿತು ಬಹಳ ಆತ್ಮವಿಶ್ವಾಸ ಇದ್ದು, ಸಿನಿ ರಸಿಕರು ನಮಗೇ ಬೆಂಬಲ ನೀಡುತ್ತಾರೆ. ಅನುಪ್ ಕೂಡ ನಾನು ಬಯಸಿದ್ದ ಅಂಶಗಳಿಗಿಂತ ಹೆಚ್ಚಿನದನ್ನು ಚಿತ್ರಕ್ಕೆ ನೀಡಿದ್ದಾರೆ. ಅವರ ಈ ಕೆಲಸ ಶೈಲಿ ಹಾಗೂ ಅವರಿಗೆ ಕೆಲಸ ಮಾಡಲು ಇರುವ ಹಠ ಎಲ್ಲರಿಗೂ ಇಷ್ಟವಾಗುತ್ತದೆ. ಚಿತ್ರೀಕರಣ ವೇಳೆ ಅವರು ಹಲವು ಬಾರಿ ಡ್ಯೂಪ್ ಇಲ್ಲದೇ ಸಾಹಸ ದೃಶ್ಯಗಳನ್ನು ನಡೆಸಿದ್ದಾರೆ. ಸಿನಿಮಾ ನೋಡಿದಾಗ ಅವರ ಶ್ರಮ ನಿಜವಾಗಿ ಅರಿವಾಗುತ್ತದೆ ಎಂದರು.

    ಇದೇ ವೇಳೆ ದರ್ಶನ್ ಬಗ್ಗೆ ಹಾಡಿ ಹೊಗಳಿದ ನಾಯಕ ಠಾಕೂರ್ ಅನೂಪ್ ಸಿಂಗ್, ನಾನು ದರ್ಶನ್ ಅವರ ದೊಡ್ಡ ಅಭಿಮಾನಿ. ಅವರ ಜೊತೆ ಯಜಮಾನ ಚಿತ್ರದಲ್ಲಿ ಅಭಿನಯಿಸಿದ್ದು ತುಂಬಾ ಖುಷಿ ತಂದಿದೆ. ಅವರು ಚಿತ್ರೀಕರಣಕ್ಕೆ ರಾಜನ ಹಾಗೆಯೇ ಬರುತ್ತಾರೆ, ರಾಜನ ಹಾಗೆಯೇ ಹೋಗುತ್ತಾರೆ. ಬಾಲಿವುಡ್‍ನ ಸಲ್ಮಾನ್ ಖಾನ್ ರೀತಿ, ಬಾದ್ ಷಾ ಅವರು. ನನ್ನ ಚಿತ್ರವನ್ನು ನೋಡಿ ಎಂದಿದ್ದಕ್ಕೆ, ತಮ್ಮ ಮೊಬೈಲ್ ನಂಬರ್ ಕೊಟ್ಟು ನಿನಗಾಗಿ ಬರುತ್ತೇನೆ ಎಂದು ಹೇಳಿದರು. ಅವರ ಸರಳ ವ್ಯಕ್ತಿತ್ವ ಕಂಡು ನನಗೆ ಹೆಮ್ಮೆಯಾಯಿತು ಎಂದು ಹೇಳಿದರು.

    ಉದ್ಘರ್ಷ ಚಿತ್ರ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು ಹಾಗು ಮಲಯಾಳಂನಲ್ಲಿ ಏಕಕಾಲದಲ್ಲಿ ಬಿಡುಗಡೆ ಮಾಡಲು ನಿರ್ದೇಶಕರು ಚಿಂತನೆ ನಡೆಸಿದ್ದಾರೆ. ಅದ್ದರಿಂದಲೇ ನಾಲ್ಕು ಭಾಷೆಗಳಲ್ಲಿ ನಟಿಸಿರುವ ಕಲಾವಿದರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅನೂಪ್ ಈಗಾಗಲೇ ದಕ್ಷಿಣ ಭಾರತದ ಚಿತ್ರರಂಗಕ್ಕೆ ಪರಿಚಿತರಾಗಿದ್ದು, ಕನ್ನಡ, ತಮಿಳು, ತೆಲುಗು ಸೇರಿದಂತೆ ಹಲವು ಸಿನಿಮಾಗಳಲ್ಲಿ ನಡೆಸಿದ್ದಾರೆ. ಕಬಾಲಿ ಚಿತ್ರದಲ್ಲಿ ರಜಿನಿಕಾಂತ್ ಪಕ್ಕ ಮಿಂಚಿದ್ದ ಧನ್ಸಿಕಾ, ತಾನ್ಯಾ ಹೋಪ್, ಕಬೀರ್ ಸಿಂಗ್ ದುಹಾನ್ ಹಾಗೂ ಬಾಹುಬಲಿ ಚಿತ್ರದಲ್ಲಿ ಕಾಲಕೇಯ ಪಾತ್ರದಲ್ಲಿ ನಟಿಸಿದ್ದ ಪ್ರಭಾಕರ್, ಶ್ರದ್ಧಾ ದಾಸ್ ಮುಂತಾದ ನಟರ ಬಹುದೊಡ್ಡ ಪಟ್ಟಿಯೇ ಈ ಚಿತ್ರದಲ್ಲಿ ಇದೆ.

    ಉಳಿದಂತೆ ಉದ್ಘರ್ಷ ಚಿತ್ರದಲ್ಲಿ ಚಿತ್ರದಲ್ಲಿ ಹರ್ಷಿಕಾ ಪೂಣಚ್ಚ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದೇವರಾಜ್ ನಿರ್ಮಾಣ ಮಾಡುತ್ತಿದ್ದಾರೆ. ಮಂಜುನಾಥ್, ತಿರುಮಲೈ, ರಾಜೇಂದ್ರ ಕುಮಾರ್ ಸಹ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ. ಚಿತ್ರಕ್ಕೆ ಸಂಜೋಯ್ ಚೌಧರಿ ಸಂಗೀತ, ವಿಷ್ಣು ವರ್ಧನ್ ಛಾಯಾಗ್ರಹಣ, ಕೆಂಪರಾಜು ಸಂಕಲನ ಹಾಗೂ ಖ್ಯಾತ ಸಾಹಸ ನಿರ್ದೇಶಕ ರವಿವರ್ಮ ಸಾಹಸ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv