Tag: dharam singh

  • ಸಜ್ಜನಿಕೆಯೇ ಮೈವೆತ್ತಿದಂತಿದ್ದ ಧರಂಸಿಂಗ್ ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾಗಿದ್ರು: ಸಿಎಂ

    ಸಜ್ಜನಿಕೆಯೇ ಮೈವೆತ್ತಿದಂತಿದ್ದ ಧರಂಸಿಂಗ್ ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾಗಿದ್ರು: ಸಿಎಂ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಟ್ವಟ್ಟರ್‍ನಲ್ಲಿ ಸಂತಾಪ ಸೂಚಿಸಿದ್ದಾರೆ.

    ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನ ಹಿರಿಯ ಮುಖಂಡ ಶ್ರೀ ಧರಂಸಿಂಗ್ ಅವರು ನಮ್ಮನ್ನಗಲಿದ ಸುದ್ದಿ ತೀವ್ರ ಆಘಾತ ತಂದಿದೆ. ಅವರ ಕುಟುಂಬ ಬಂಧುವರ್ಗಕ್ಕೆ ತೀವ್ರ ಸಂತಾಪಗಳು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

    ಸಜ್ಜನಿಕೆಯೇ ಮೈವೆತ್ತಿದಂತಿದ್ದ ಎನ್.ಧರಂಸಿಂಗ್ ಅವರು ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾಗಿದ್ದರು. ಸುಮಾರು ನಾಲ್ಕೂವರೆ ದಶಕದ ರಾಜಕೀಯ ಜೀವನದಲ್ಲಿ ಅಜಾತಶತ್ರುವಾಗಿದ್ದರು. ರಾಜಕೀಯ ಜೀವನದುದ್ದಕ್ಕೂ ಧರಂಸಿಂಗ್ ಅವರು ಪ್ರತಿನಿಧಿಸಿದ ಮೌಲ್ಯಗಳು ಅನುಕರಣೀಯ, ಅಪ್ಪಟ ಜನಾನುರಾಗಿಯಾಗಿದ್ದ ಅವರಲ್ಲಿ ಎಲ್ಲ ಜನಾಂಗದವರೂ ಅಪ್ರತಿಮ ನಾಯಕನನ್ನು ಕಂಡಿದ್ದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

    ಅಜಾತಶತ್ರು, ಅಪ್ಪಟ ಜನಾನುರಾಗಿ ನಾಯಕರಾದ ಶ್ರೀ ಎನ್. ಧರಂಸಿಂಗ್ ಅವರ ಅಗಲಿಕೆಯಿಂದ ನಾಡಿನ ಧೀಮಂತ ರಾಜಕಾರಣದ ಪರಂಪರೆ ಸೊರಗಿದೆ. ಶ್ರೀಯುತರಿಗೆ ನಾಡಿನ ಶೋಕತಪ್ತ ನಮನಗಳು ಎಂದು ಸಂತಾಪ ಸೂಚಿಸಿದ್ದಾರೆ.

  • ಧರಂ ಸಿಂಗ್ ಅಜಾತಶತ್ರು, ಯಾರನ್ನೂ ದ್ವೇಷಿಸುತ್ತಿರಲಿಲ್ಲ: ಹೆಚ್‍ಡಿಕೆ

    ಧರಂ ಸಿಂಗ್ ಅಜಾತಶತ್ರು, ಯಾರನ್ನೂ ದ್ವೇಷಿಸುತ್ತಿರಲಿಲ್ಲ: ಹೆಚ್‍ಡಿಕೆ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‍ನ ಹಿರಿಯ ಮುಖಂಡರಾಗಿದ್ದ ಧರಂ ಸಿಂಗ್ ಇಂದು ನಿಧನರಾದ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾದ್ಯಕ್ಷ ಹೆಚ್‍ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಹೆಚ್‍ಡಿಕೆ, ಇದೊಂದು ದುರದೃಷ್ಟಕರ ಸಂಗತಿ ಅಂದ್ರು. ನನ್ನ ಹಾಗೂ ಧರಂ ಸಿಂಗ್ ಅವರ ಹತ್ತಿರ ಸಂಪರ್ಕ ಬಂದಿದ್ದು ಸಮ್ಮಿಶ್ರ ಸರ್ಕಾರದ 20 ತಿಂಗಳು ಅವರು ಮುಖ್ಯಮಂತ್ರಿಯಾಗಿದ್ದಾಗ. ನನ್ನ ತಂದೆಯ ಒಡನಾಡಿ ಅವರು. ಬೇರೆ ಬೇರೆ ಪಕ್ಷದಲ್ಲಿದ್ದರೂ ತಂದೆಯವರಿಗೂ ಅವರಿಗೂ ಉತ್ತಮ ಸ್ನೇಹ, ಬಾಂಧವ್ಯವಿತ್ತು. ಬಹಳ ಒಡನಾಟವಿತ್ತು. ಧರಂ ಸಿಂಗ್ ಅವರು ಒಬ್ಬ ಅಜಾತಶತ್ರು ಎಂದು ಹೇಳಲು ಬಯಸುತ್ತೇನೆ. ರಾಜಕಾರಣದಿಂದ ಯಾರನ್ನೂ ದ್ವೇಷಿಸುತ್ತಿರಲಿಲ್ಲ. ಶತ್ರುಗಳು ಬಂದರೂ ಚೆನ್ನಾಗಿ ಮಾತನಾಡಿಸುತ್ತಿದ್ದರು. ಕೆಟ್ಟದ್ದು ಮಾಡಬೇಕೆಂದು ಬಂದ ಶತ್ರುಗಳೂ ಕೂಡ ಅವರ ನಡವಳಿಕೆ ನೋಡಿ ಬದಲಾಗುವಂತೆ ಅವರ ನಡವಳಿಕೆ ಇತ್ತು ಅಂದ್ರು.

    ಅವರು ರಾಜ್ಯದ ಒಬ್ಬ ಅಪರೂಪದ ರಾಜಕಾರಣಿ. ಒಂದು ದೊಡ್ಡ ಸಮಾಜದ ಹಿನ್ನೆಲೆ ಅಥವಾ ಬೆಂಬಲ ಇಲ್ಲದಿದ್ರೂ, ಅಲ್ಪಸಂಖ್ಯಾತರಾಗಿಯೂ ಸುದೀರ್ಘ ರಾಜಕಾರಣದಲ್ಲಿ ಯಶಸ್ಸು ಕಂಡ ಅಪರೂಪದ ರಾಜಕಾರಣಿ ಎಂದು ಅವರನ್ನು ಎಚ್‍ಡಿಕೆ ಬಣ್ಣಿಸಿದ್ರು.

    ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಕುಮಾರಸ್ವಾಮಿ ಮುಳುವಾದ ಎಂಬಂತ ಭಾವನೆ ಎಂದೂ ಅವರಲ್ಲಿ ಕಾಣಲಿಲ್ಲ. ಅವರು ಮುಖ್ಯಮಂತ್ರಿ ಸ್ಥಾನದಿಂದ ಇಳಿದು ನಾನು ಮುಖ್ಯಮಂತ್ರಿಯಾದಾಗ ಆಶೀರ್ವಾದ ಪಡೆಯಲು ಮನೆಗೆ ಹೋಗಿದ್ದೆ. ಈತ ನನ್ನನ್ನು ಇಳಿಸಿ ನನ್ನ ಸ್ಥಾನ ತುಂಬಿದ ಎಂಬ ಭಾವನೆ ಅವರ ಮುಖದಲ್ಲೂ ಕಾಣಲಿಲ್ಲ. ಒಳ್ಳೆ ಕೆಲಸ ಮಾಡಿ ಎಂದು ಖುಷಿಯಾಗಿಯೇ ಆಶೀರ್ವಾದ ಮಾಡಿ ಕಳಿಸಿದ್ರು ಅಂತ ಹೆಚ್‍ಡಿಕೆ ಹೇಳಿದ್ರು.

  • ತಂದೆಯವರ ಆರೋಗ್ಯ ಸುಧಾರಿಸಿತ್ತು, ನಿನ್ನೆ ರಾತ್ರಿ ನನ್ನ ಜೊತೆ ಮಾತನಾಡಿದ್ರು: ವಿಜಯ್ ಸಿಂಗ್

    ತಂದೆಯವರ ಆರೋಗ್ಯ ಸುಧಾರಿಸಿತ್ತು, ನಿನ್ನೆ ರಾತ್ರಿ ನನ್ನ ಜೊತೆ ಮಾತನಾಡಿದ್ರು: ವಿಜಯ್ ಸಿಂಗ್

    ಬೆಂಗಳೂರು: ಬುಧವಾರ ರಾತ್ರಿ ತಂದೆಯವರು ನನ್ನ ಜೊತೆ ಮಾತನಾಡಿದ್ದರು. ಆದರೆ ನಿಧನಕ್ಕೆ ನಿಜವಾದ ಕಾರಣ ಏನು ಎನ್ನುವುದು ನಮಗೆ ವೈದ್ಯರು ತಿಳಿಸಿಲ್ಲ ಎಂದು ಧರಂ ಸಿಂಗ್ ಪುತ್ರ ವಿಜಯ್ ಸಿಂಗ್ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು ಕಳೆದ ಮೂರು ತಿಂಗಳಿನಿಂದ ತಂದೆಯವರು ಬೆಂಗಳೂರಿನಲ್ಲಿದ್ದರು. ಚಿಕಿತ್ಸೆಯ ಬಳಿಕ ಆರೋಗ್ಯ ಸುಧಾರಣೆಯಾಗಿತ್ತು. ನಿನ್ನೆ ರಾತ್ರಿಯೂ ನನ್ನ ಜೊತೆ ಮಾತನಾಡಿದ್ದರು ಎಂದು ತಿಳಿಸಿದರು.

    ಇಂದು ಮೃತದೇಹವನ್ನು ಬೆಂಗಳೂರಿನ ನಿವಾಸಕ್ಕೆ ತೆಗೆದುಕೊಂಡು ಹೋಗುತ್ತೇವೆ. ನಾಳೆ ಕಲಬುರಗಿಯಲ್ಲಿ ಆಂತ್ಯ ಸಂಸ್ಕಾರ ಮಾಡಲಾಗುವುದು. ಎಲ್ಲ ಸಂಬಂಧಿಗಳಿಗೆ ಮತ್ತು ಅಭಿಮಾನಿಗಳಿಗೆ ಅಲ್ಲೇ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದರು.

    ಫೇಸ್ ಬುಕ್ ನಲ್ಲಿ ಸಿಎಂ ಸಂತಾಪ:  ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನ ಹಿರಿಯ ನೇತಾರ ಶ್ರೀ ಧರಂಸಿಂಗ್ ಅವರು ನಮ್ಮನ್ನಗಲಿದ ಸುದ್ಧಿ ತೀವ್ರ ಆಘಾತ ತಂದಿದೆ. ಅವರ ಕುಟುಂಬ, ಬಂಧುವರ್ಗಕ್ಕೆ ತೀವ್ರ ಸಂತಾಪಗಳು.  ಸಜ್ಜನಿಕೆಯೇ ಮೈವೆತ್ತಿದಂತಿದ್ದ ಎನ್.ಧರಂಸಿಂಗ್ ಅವರು ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾಗಿದ್ದರು. ಸುಮಾರು ಐದು ದಶಕದ ರಾಜಕೀಯ ಜೀವನದಲ್ಲಿ ಅಜಾತಶತ್ರುವಾಗಿದ್ದರು. ರಾಜಕೀಯ ಜೀವನದುದ್ದಕ್ಕೂ ಧರಂಸಿಂಗ್ ಅವರು ಪ್ರತಿನಿಧಿಸಿದ ಮೌಲ್ಯಗಳು ಅನುಕರಣೀಯ, ಅಪ್ಪಟ ಜನಾನುರಾಗಿಯಾಗಿದ್ದ ಅವರಲ್ಲಿ ಎಲ್ಲ ಧರ್ಮ, ಜಾತಿ, ಜನಾಂಗದವರೂ ಅಪ್ರತಿಮ ನಾಯಕನನ್ನು ಕಂಡಿದ್ದರು. ಅವರ ಅಗಲಿಕೆಯಿಂದ ನಾಡಿನ ಧೀಮಂತ ರಾಜಕಾರಣದ ಪರಂಪರೆ ಸೊರಗಿದೆ. ಶ್ರೀಯುತರಿಗೆ ನನ್ನ ಶೋಕತಪ್ತ ನಮನಗಳು.

    ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಧರಂ ಸಿಂಗ್ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಕಲಬುರಗಿ ಜಿಲ್ಲೆಯ, ಜೇವರ್ಗಿ ತಾಲೂಕಿನ, ನೇಲೋಗಿ ಗ್ರಾಮದಲ್ಲಿ 1936 ರಲ್ಲಿ ಜನಿಸಿದ ಧರಂ ಸಿಂಗ್, ಹೈದರಾಬಾದ್ ನ ಓಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಎಂಎ ಹಾಗೂ ಎಲ್‍ಎಲ್‍ಬಿ ಪದವಿಗಳನ್ನು ಪಡೆದಿದ್ದಾರೆ. ವಕೀಲರಾಗಿ ಸ್ವಲ್ಪ ಕಾಲ ಕಾರ್ಯ ನಿರ್ವಹಿಸಿದ ಮೇಲೆ 60 ರ ದಶಕದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರಾಗಿ ಸೇರ್ಪಡೆಯಾಗಿದ್ದರು.

     

     

  • ಧರಂ ಸಿಂಗ್ ನಿಧನದಿಂದ ಕಾಂಗ್ರೆಸ್‍ಗೆ ದೊಡ್ಡ ಹೊಡೆತ: ಶ್ಯಾಮನೂರು ಶಿವಶಂಕರಪ್ಪ

    ಧರಂ ಸಿಂಗ್ ನಿಧನದಿಂದ ಕಾಂಗ್ರೆಸ್‍ಗೆ ದೊಡ್ಡ ಹೊಡೆತ: ಶ್ಯಾಮನೂರು ಶಿವಶಂಕರಪ್ಪ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ತೀವ್ರ ಹೃದಯಾಘಾತದಿಂದ ಇಂದು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಧರಂ ಸಿಂಗ್ ಅವರ ಆಪ್ತರಾಗಿದ್ದ ಹಿರಿಯ ಮುಖಂಡ ಶ್ಯಾಮನೂರು ಶಿವಶಂಕರಪ್ಪ ಪಬ್ಲಿಕ್ ಟಿವಿ ಜೊತೆ ಮಾತನಾಡಿ ವಿಷಾದ ವ್ಯಕ್ತಪಡಿಸಿದ್ರು.

    ಅವರು ನನಗೆ ಸುಮಾರು 50 ವರ್ಷಗಳಿಂದ ಗೊತ್ತು. ಒಳ್ಳೇ ಮನುಷ್ಯ. ಎಲ್ಲರೊಂದಿಗೂ ಚೆನ್ನಾಗಿ ಬೆರೆಯುತ್ತಿದ್ದರು. ಧರಂ ಸಿಂಗ್ ಅವರ ನಿಧನ ಕಾಂಗ್ರೆಸ್‍ಗೆ ಇದೊಂದು ದೊಡ್ಡ ಹೊಡೆತ. ಅವರ ಆತ್ಮಕ್ಕೆ ದೇವರು ಶಾಂತಿ ಕೊಡಲಿ ಅಂದ್ರು.

    ಎಲ್ಲರೊಂದಿಗೂ ಪ್ರೀತಿಯಿಂದ ಮಾತನಾಡುತ್ತಿದ್ದರು. ಅದೇ ಅವರ ಒಳ್ಳೇ ಗುಣ. ಗುಲಬರ್ಗಾದಲ್ಲಿ ಪ್ರತಿ ಬಾರಿ ಚುನಾಯಿತರಾಗಿ ಬಂದಿದ್ದಾರೆ ಅಂತ ಹೇಳಿದ್ರು.

    ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಧರಂ ಸಿಂಗ್ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ  ಗುರುವಾರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

     ಕಲಬುರಗಿ ಜಿಲ್ಲೆಯ, ಜೇವರ್ಗಿ ತಾಲೂಕಿನ, ನೇಲೋಗಿ ಗ್ರಾಮದಲ್ಲಿ 1936 ರಲ್ಲಿ ಜನಿಸಿದ ಧರಂ ಸಿಂಗ್, ಹೈದರಾಬಾದ್ ನ ಓಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಎಂಎ ಹಾಗೂ ಎಲ್‍ಎಲ್‍ಬಿ ಪದವಿಗಳನ್ನು ಪಡೆದಿದ್ದಾರೆ. ವಕೀಲರಾಗಿ ಸ್ವಲ್ಪ ಕಾಲ ಕಾರ್ಯ ನಿರ್ವಹಿಸಿದ ಮೇಲೆ 60 ರ ದಶಕದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರಾದರು.

    ಜೇವರ್ಗಿ ವಿಧಾನಸಭಾ ಕ್ಷೇತ್ರದಿಂದ ಸತತ 7 ಬಾರಿ ಚುನಾಯಿತರಾಗಿದ್ದ ಇವರು 1980 ರಲ್ಲಿ ಗುಲ್ಬರ್ಗ ಕ್ಷೇತ್ರದಿಂದ ಲೋಕಸಭೆಗೆ ಸಹ ಚುನಾಯಿತರಾಗಿದ್ದರು.

    2004ರ ಮೇ 28 ರಿಂದ ಜನವರಿ 2016ರವರೆಗೆ ಧರಂ ಸಿಂಗ್ ಮುಖ್ಯಮಂತ್ರಿಯಾಗಿ ಕರ್ನಾಟಕವನ್ನು ಮುನ್ನಡೆಸಿದ್ದರು. ಮುಖ್ಯಮಂತ್ರಿಯಾಗುವ ಮೊದಲು ಕರ್ನಾಟಕ ಸರ್ಕಾರದಲ್ಲಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದರು.

    ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಲೋಕೋಪಯೊಗಿ ಖಾತೆಯನ್ನು ನಿರ್ವಹಿಸಿದ್ದರು. ಇದಕ್ಕಿಂತ ಮೊದಲು ಗೃಹ ಖಾತೆ, ಸಮಾಜ ಸುಧಾರಣಾ ಖಾತೆ, ಅಬಕಾರಿ ಖಾತೆ ಮೊದಲಾದ ಖಾತೆಗಳನ್ನು ನಿರ್ವಹಿಸಿದ್ದರು. ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ) ಯ ಅಧ್ಯಕ್ಷತೆಯನ್ನು ಸಹ ವಹಿಸಿದ್ದರು.

  • ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಧರಂ ಸಿಂಗ್ ವಿಧಿವಶ

    ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಧರಂ ಸಿಂಗ್ ವಿಧಿವಶ

    ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ಮುಖಂಡ ಧರಂ ಸಿಂಗ್(80) ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಧರಂ ಸಿಂಗ್ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ  ಗುರುವಾರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

    ಕಲಬುರಗಿ ಜಿಲ್ಲೆಯ, ಜೇವರ್ಗಿ ತಾಲೂಕಿನ, ನೇಲೋಗಿ ಗ್ರಾಮದಲ್ಲಿ 1936 ರಲ್ಲಿ ಜನಿಸಿದ ಧರಂ ಸಿಂಗ್, ಹೈದರಾಬಾದ್ ನ ಓಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಎಂಎ ಹಾಗೂ ಎಲ್‍ಎಲ್‍ಬಿ ಪದವಿಗಳನ್ನು ಪಡೆದಿದ್ದಾರೆ. ವಕೀಲರಾಗಿ ಸ್ವಲ್ಪ ಕಾಲ ಕಾರ್ಯ ನಿರ್ವಹಿಸಿದ ಮೇಲೆ 60 ರ ದಶಕದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರಾದರು.

    ಜೇವರ್ಗಿ ವಿಧಾನಸಭಾ ಕ್ಷೇತ್ರದಿಂದ ಸತತ 7 ಬಾರಿ ಚುನಾಯಿತರಾಗಿದ್ದ ಇವರು 1980 ರಲ್ಲಿ ಗುಲ್ಬರ್ಗ ಕ್ಷೇತ್ರದಿಂದ ಲೋಕಸಭೆಗೆ ಸಹ ಚುನಾಯಿತರಾಗಿದ್ದರು.

    2004ರ ಮೇ 28 ರಿಂದ ಜನವರಿ 2016ರವರೆಗೆ ಧರಂ ಸಿಂಗ್ ಮುಖ್ಯಮಂತ್ರಿಯಾಗಿ ಕರ್ನಾಟಕವನ್ನು ಮುನ್ನಡೆಸಿದ್ದರು. ಮುಖ್ಯಮಂತ್ರಿಯಾಗುವ ಮೊದಲು ಕರ್ನಾಟಕ ಸರ್ಕಾರದಲ್ಲಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದರು.

    ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಲೋಕೋಪಯೊಗಿ ಖಾತೆಯನ್ನು ನಿರ್ವಹಿಸಿದ್ದರು. ಇದಕ್ಕಿಂತ ಮೊದಲು ಗೃಹ ಖಾತೆ, ಸಮಾಜ ಸುಧಾರಣಾ ಖಾತೆ, ಅಬಕಾರಿ ಖಾತೆ ಮೊದಲಾದ ಖಾತೆಗಳನ್ನು ನಿರ್ವಹಿಸಿದ್ದರು. ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ) ಯ ಅಧ್ಯಕ್ಷತೆಯನ್ನು ಸಹ ವಹಿಸಿದ್ದರು.

  • ಉಸಿರಾಟದ ಸಮಸ್ಯೆ: ಮಾಜಿ ಸಿಎಂ ಧರಂಸಿಂಗ್ ಆಸ್ಪತ್ರೆಗೆ ದಾಖಲು

    ಉಸಿರಾಟದ ಸಮಸ್ಯೆ: ಮಾಜಿ ಸಿಎಂ ಧರಂಸಿಂಗ್ ಆಸ್ಪತ್ರೆಗೆ ದಾಖಲು

    ಬೆಂಗಳೂರು: ಕಾಂಗ್ರೆಸ್ಸಿನ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಧರಂಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಎನ್ ಧರಂಸಿಂಗ್, ಬುಧವಾರ ರಾತ್ರಿ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸದ್ಯ ತಜ್ಞ ವೈದ್ಯರಿಂದ ಮಾಜಿ ಸಿಎಂ ಧರಂಸಿಂಗ್‍ಗೆ ಚಿಕಿತ್ಸೆ ಮುಂದುವರೆದಿದೆ.

    ಧರಂ ಸಿಂಗ್ ಅವರಿಗೆ ಈ ಹಿಂದೆಯೂ ಉಸಿರಾಟದ ತೊಂದರೆಯಿದ್ದು, 2013ರ ಮೇ ತಿಂಗಳಲ್ಲಿ ಮಿಲ್ಲರ್ ರಸ್ತೆಯಲ್ಲಿರೋ ವಿಕ್ರಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಬಳಿಕ 2016ರ ಫೆಬ್ರವರಿಯಲ್ಲಿಯೂ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.