Tag: Dharma Keerthiraj

  • ದರ್ಶನ್ ಸರ್‌ಗೆ ಬೇಲ್ ಸಿಕ್ಕಿದ್ದು ಖುಷಿಯಾಯ್ತು: ‘ಬಿಗ್‌ ಬಾಸ್‌’ ಎಲಿಮಿನೇಷನ್‌ ಬಳಿಕ ಧರ್ಮ ರಿಯಾಕ್ಷನ್

    ದರ್ಶನ್ ಸರ್‌ಗೆ ಬೇಲ್ ಸಿಕ್ಕಿದ್ದು ಖುಷಿಯಾಯ್ತು: ‘ಬಿಗ್‌ ಬಾಸ್‌’ ಎಲಿಮಿನೇಷನ್‌ ಬಳಿಕ ಧರ್ಮ ರಿಯಾಕ್ಷನ್

    ದೊಡ್ಮನೆಯ (Bigg Boss Kannada 11) ಆಟದಿಂದ 57ದಿನಕ್ಕೆ ಧರ್ಮ ಕೀರ್ತೀರಾಜ್ (Dharma Keerthiraj) ಎಲಿಮಿನೇಟ್ ಆಗಿದ್ದಾರೆ. ಈ ಬೆನ್ನಲ್ಲೇ ಧರ್ಮ ಆಪ್ತ ದರ್ಶನ್‌ಗೆ (Darshan) ಜಾಮೀನು ಸಿಕ್ಕಿರುವ ಬಗ್ಗೆ ಹಾಗೂ ಕೇಸ್ ಕುರಿತು ಅವರು ರಿಯಾಕ್ಟ್ ಮಾಡಿದ್ದಾರೆ. ದರ್ಶನ್ ಸರ್‌ಗೆ ಬೇಲ್ ಸಿಕ್ಕಿದು ತುಂಬಾ ಖುಷಿಯಾಯ್ತು ಎಂದು ಧರ್ಮ ಮಾತನಾಡಿದ್ದಾರೆ.

    ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಹೊರಗಿನ ವಿಚಾರ ನಮಗೆ ತಿಳಿಯುತ್ತಿರಲಿಲ್ಲ. ಮನೆಗೆ ಬಂದಾಗ ಫಸ್ಟ್ ಗುಡ್ ನ್ಯೂಸ್ ಸಿಕ್ಕಿದ್ದೇ ದರ್ಶನ್ (Darshan) ಸರ್‌ಗೆ ಬೇಲ್ ಆದ ವಿಚಾರ ತಿಳಿಯಿತು. ಈ ವಿಚಾರ ಕೇಳಿ ಖುಷಿಯಾಯಿತು. ಜೊತೆಗೆ ಅವರಿಗೆ ಬೆನ್ನು ನೋವಿದೆ ಆಪರೇಷನ್ ಮಾಡಬೇಕು ಎಂದಿದ್ದು ಬೇಜರಾಯಿತು. ಇದನ್ನೂ ಓದಿ:ಸ್ನೇಹಿತರ ಜೊತೆ ನೇತ್ರಾಣಿಯಲ್ಲಿ ಡಾಲಿ ಸ್ಕೂಬಾ ಡೈವಿಂಗ್

    ಅವರ ಫಾರ್ಮ್‌ಹೌಸ್‌ನಲ್ಲಿ ಕುದುರೆ ಓಡಿಸುವಾಗ ಆವಾಗಲೇ ಅವರಿಗೆ ಬೆನ್ನು ನೋವಿತ್ತು. ಸ್ಟಂಟ್ ಮಾಡುವಾಗಲೂ ಅವರಿಗೆ ಬೆನ್ನಿಗೆ ಎಷ್ಟು ನೋವಾಗುತ್ತಿತ್ತು ಎಂಬುದು ಗೊತ್ತಾಗುತ್ತಿತ್ತು. ಈ ಸಲ ಸ್ವಲ್ವ ಜಾಸ್ತಿ ಆಗಿರೋದು ಕೇಳಿ ನೋವಾಗಿದೆ. ಅವರು ಬೇಗ ಗುಣಮುಖರಾಗಲಿ ಅಂತ ಆಶಿಸುತ್ತೇನೆ ಎಂದಿದ್ದಾರೆ ಧರ್ಮ.

    ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy Murder Case) ನೋಡಿದಾಗ ಕಾನೂನಿಗೆ ನಾವು ಯಾವಾಗಲೂ ತಲೆಬಾಗಲೇಬೇಕು. ಇದನ್ನು ಕೋರ್ಟ್ ನಿರ್ಧಾರ ಮಾಡುತ್ತೆ. ನನಗೆ ಒಂದು ಲೈಫ್ ಅಂತ ಕೊಟ್ಟಿರೋದು ದರ್ಶನ್ ಸರ್. ಸಿನಿಮಾರಂಗದಲ್ಲಿ ನಾನು ನಿಲ್ಲೋಕೆ ಅವರು ಕಾರಣ. ಅವರು ನನ್ನ ಶಕ್ತಿ. ನಾನು ದೇವರಲ್ಲಿ ಕೇಳಿಕೊಳ್ಳೋದು ಏನು ಅಂದರೆ ಇದೆಲ್ಲಾ ಆದಷ್ಟು ಬೇಗ ಸರಿ ಹೋಗಲಿ ಎಂದು ದರ್ಶನ್ ಕುರಿತು ನಟ ಮಾತನಾಡಿದ್ದಾರೆ.

    ಅಂದಹಾಗೆ, ದರ್ಶನ್ ನಟನೆಯ ‘ನವಗ್ರಹ’ (Navagraha) ಸಿನಿಮಾದಲ್ಲಿ ಧರ್ಮ ಅವರು ಚಾಕ್‌ಲೇಟ್ ಹೀರೋ ಆಗಿ ಕಾಣಿಸಿಕೊಂಡಿದ್ದರು. ಶರ್ಮಿಳಾ ಮಾಂಡ್ರೆಗೆ ಹೀರೋ ಆಗಿ ನಟಿಸಿದ್ದರು. ಈ ಚಿತ್ರದ ಮೂಲಕ ಧರ್ಮ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.

  • ಅನುಷಾ ಜೊತೆಗಿನ ಮದುವೆ ಪ್ರಪೋಸಲ್‌ಗೆ ಧರ್ಮ ಹೇಳೋದೇನು?

    ಅನುಷಾ ಜೊತೆಗಿನ ಮದುವೆ ಪ್ರಪೋಸಲ್‌ಗೆ ಧರ್ಮ ಹೇಳೋದೇನು?

    ‘ಬಿಗ್ ಬಾಸ್ ಕನ್ನಡ 11’ರ (Bigg Boss Kannada 11) ಆಟದಿಂದ ಧರ್ಮ ಕೀರ್ತಿರಾಜ್ (Dharma Keerthiraj) ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಬಿಗ್ ಬಾಸ್ ಆಟ, ಅನುಷಾ (Anusha Rai) ಒಡನಾಟ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚಾಕ್‌ಲೇಟ್ ಹೀರೋ ಧರ್ಮ ರಿಯಾಕ್ಟ್ ಮಾಡಿದ್ದಾರೆ. ಅನುಷಾ ಕುಟುಂಬದಿಂದ ಮದುವೆ (Wedding) ಪ್ರಪೋಸಲ್ ಬಂದ್ರೆ ನಟನ ಉತ್ತರವೇನು ಎಂಬುದರ ಬಗ್ಗೆ ಮಾತನಾಡಿದ್ದಾರೆ.

    ಧರ್ಮ ಮತ್ತು ಅನುಷಾ (Anusha Rai) ಬಿಗ್ ಬಾಸ್ ಮನೆಯಲ್ಲಿ ಒಡನಾಟ ನೋಡಿ ಅಭಿಮಾನಿಗಳು ಇವರು ರಿಯಲ್ ಲೈಫ್‌ನಲ್ಲೂ ಜೊತೆಯಾದ್ರೆ ಚೆನ್ನಾಗುತ್ತದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುತ್ತಿದ್ದರು. ಅಷ್ಟರ ಮಟ್ಟಿಗೆ ಈ ಜೋಡಿಯ ಮೇಲೆ ಫ್ಯಾನ್ಸ್‌ಗೆ ಕ್ರೇಜ್ ಇದೆ. ಹಾಗಾಗಿ ಮದುವೆ ಬಗ್ಗೆ ಧರ್ಮ ಪ್ರತಿಕ್ರಿಯೆ ನೀಡಿದ್ದಾರೆ.

    ಫ್ರೆಂಡ್ಸ್ ಅನ್ನೋದ್ದಕ್ಕೆ ನಾವಿಬ್ಬರು ಉದಾಹರಣೆ. ನನ್ನ ಮತ್ತು ಅನುಷಾ ಸ್ನೇಹ ಚೆನ್ನಾಗಿತ್ತು. ಫ್ಯಾನ್ಸ್ ಹೇಳ್ತಿದ್ದಾರೆ ನಾವು ಲವರ್ಸ್ ಅಂತ ಆದರೆ ಹಾಗೇ ನಮ್ಮೀಬ್ಬರ ನಡುವೆ ಏನು ಇಲ್ಲ. ನಮ್ಮದು ನಿಷ್ಕಲ್ಮಶ ಸ್ನೇಹ, ನಮ್ಮೀಬ್ಬರಿಗೂ ಪ್ರೀತಿ ಅನ್ನೋ ಭಾವನೆ ಇಲ್ಲ. ಸ್ನೇಹಿತರು ಹೇಗಿರಬೇಕು ಹಾಗೇ ಇದ್ದೀವಿ. ಬಿಗ್ ಬಾಸ್‌ನಲ್ಲಿ ಎಮೋಷನಲ್ ಆಗಿ ಬೆಂಬಲ ಬೇಕು. ಆ ರೀತಿಯಲ್ಲಿ ಅನುಷಾ ನನಗೆ ವಂಡಲ್‌ಫುಲ್ ಫ್ರೆಂಡ್ ನನಗೆ. ನೀವು ನಮ್ಮನ್ನ ಸಿನಿಮಾ ಮೂಲಕ ಜೊತೆಯಾಗಿ ನೋಡಬಹುದು. ಸಿನಿಮಾದಲ್ಲಿ ಕಪಲ್ ಆಗಿದ್ದೀವಿ. ಅಲ್ಲಿ ನೋಡಿ ನೀವು ನಮ್ಮನ್ನು ಬೆಂಬಲಿಸಬಹುದು ಎಂದಿದ್ದಾರೆ.

    ಅನುಷಾ ಕಡೆಯಿಂದ ಮದುವೆ ಪ್ರಪೋಸಲ್ ಬರಲ್ಲ. ಅವರ ಮನೆ ಕಡೆಯಿಂದಲೂ ಮದುವೆ ಸಂಬಂಧ ಬರಲ್ಲ. ಏನಾದರೂ ಮದುವೆ ಸಂಬಂಧ ಬಂದರೆ ಕೂಡ ಅದು ಆಗಲ್ಲ. ನಮ್ಮೀಬ್ಬರ ನಡುವೆ ಫ್ರೆಂಡ್‌ಶಿಪ್ ಟ್ಯಾಗ್ ತುಂಬಾ ಚೆನ್ನಾಗಿದೆ. ಅದು ಫ್ರೆಂಡ್ಸ್ ಆಗಿಯೇ ಉಳಿದುಕೊಂಡರೆ ಚೆನ್ನಾಗಿರುತ್ತೆ ಅನಿಸುತ್ತದೆ. ಮದುವೆ ರೂಪದಲ್ಲಿ ಕನೆಕ್ಟ್ ಆಗಲ್ಲ ಎಂದು ಧರ್ಮ ಮಾತನಾಡಿದ್ದಾರೆ.

  • ‘ಬಿಗ್ ಬಾಸ್’ ಮನೆಯಿಂದ ಅನುಷಾ ರೈ ಔಟ್‌

    ‘ಬಿಗ್ ಬಾಸ್’ ಮನೆಯಿಂದ ಅನುಷಾ ರೈ ಔಟ್‌

    ಕನ್ನಡ ಬಿಗ್ ಬಾಸ್ 11ರ (Bigg Boss Kannada 11) ಆಟ ರಂಗೇರಿದೆ. ಅಚ್ಚರಿ ಎಂಬಂತೆ ದೊಡ್ಮನೆಯ ಗಟ್ಟಿ ಸ್ಪರ್ಧಿಯಾಗಿರುವ ಅನುಷಾ ರೈ ಬಿಗ್ ಬಾಸ್ ಮನೆಯ ಆಟ‌ದಿಂದ ಔಟ್ ಆಗಿದ್ದಾರೆ.

    ಟಾಸ್ಕ್ ಅಂತ ಬಂದಾಗ ಬೇರೆ ಸ್ಪರ್ಧಿಗಳಿಗೆ ಸೆಡ್ಡು ಹೊಡೆದು ಅನುಷಾ ಆಟ ಆಡುತ್ತಿದ್ದರು. ಅದರೊಂದಿಗೆ ಧರ್ಮ ಅವರ ಜೊತೆಗಿನ ಸ್ನೇಹದ‌ ವಿಚಾರ ನಟಿ ಹೈಲೈಟ್ ಆಗಿದ್ದರು.

    ಮಹಾನುಭಾವರು, ಖಡಕ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅನುಷಾ ನಟಿಸಿದ್ದಾರೆ. ನಟ ಧರ್ಮ ಕೀರ್ತಿರಾಜ್ ಜೊತೆ ಮೂರು ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದ್ದಾರೆ.

  • ‘ಬಿಗ್ ಬಾಸ್’ ಮನೆಯೊಳಗೂ ಹೊರಗೂ ಧರ್ಮ, ಉಗ್ರಂ ಮಂಜುದ್ದೇ ಹವಾ- ಏನದು ಅಪ್‌ಡೇಟ್?

    ‘ಬಿಗ್ ಬಾಸ್’ ಮನೆಯೊಳಗೂ ಹೊರಗೂ ಧರ್ಮ, ಉಗ್ರಂ ಮಂಜುದ್ದೇ ಹವಾ- ಏನದು ಅಪ್‌ಡೇಟ್?

    ಸ್ಯಾಂಡಲ್‌ವುಡ್‌ನಲ್ಲಿ ‘ಟೆನೆಂಟ್’ (Tenant) ಚಿತ್ರದ ಟೀಸರ್ ಸದ್ದು ಮಾಡುತ್ತಿದೆ. ಈಗಾಗಲೇ ಶೂಟಿಂಗ್ ಮುಗಿಸಿರುವ ‘ಟೆನೆಂಟ್’ ಪ್ರಮೋಷನ್ ಅಂಗಳಕ್ಕೆ ಇಳಿದಿದೆ. ಸದ್ಯ ‘ಬಿಗ್ ಬಾಸ್’ (Bigg Boss Kannada 11) ಮನೆಯೊಳಗೆ ಇರುವ ನಟ ಧರ್ಮ ಕೀರ್ತಿರಾಜ್ (Dharma Keerthiraj) ಮತ್ತು ಉಗ್ರಂ ಮಂಜು (Ugramm Manju) ಮನೆ ಹೊರಗೂ ಟೆನೆಂಟ್‌ ಚಿತ್ರದ ಮೂಲಕ ಸದ್ದು ಮಾಡುತ್ತಿದ್ದಾರೆ.

    ‌’ಟೆನೆಂಟ್’ ಚಿತ್ರದಲ್ಲಿ ಧರ್ಮ, ಉಗ್ರಂ ಮಂಜು ಜೊತೆ ತಿಲಕ್, ರಾಕೇಶ್ ಮಯ್ಯ ಹಾಗೂ ಸೋನು ಗೌಡ (Sonu Gowda) ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾಗೆ ಶ್ರೀಧರ್ ಶಾಸ್ತ್ರಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ನಿರ್ದೇಶಕ ಶ್ರೀಧರ್ ಅವರಿಗೆ ಇದು ಮೊದಲ ಸಿನಿಮಾ. ಯುವ ನಿರ್ದೇಶಕನ ಪ್ರಯತ್ನಕ್ಕೆ ತಾರಾಬಳಗ ಸಾಥ್ ಕೊಟ್ಟಿದೆ. ಸದ್ಯ ರಿಲೀಸ್ ಆಗಿರುವ ಟೀಸರ್ ನೋಡಿದ್ರೆ, ಇದು ಚೊಚ್ಚಲ ಸಿನಿಮಾ ಅಂತ ಅನಿಸದ ಹಾಗೆ ಅಷ್ಟೆ ಅಚ್ಚುಕಟ್ಟಾಗಿ ಮಾಡಿದ್ದಾರೆ ನಿರ್ದೇಶಕರು. ಇದನ್ನೂ ಓದಿ:ಮಗನ ಲೇಟೆಸ್ಟ್‌ ಫೋಟೋ ಶೇರ್‌ ಮಾಡಿದ ‘ಹೆಬ್ಬುಲಿ’ ನಟಿ

    ಮಾಸ್ಟರ್ ಚಾಯ್ಸ್ ಕ್ರಿಯೇಶನ್ ನಡಿ ನಾಗರಾಜ್ ಟಿ ನಿರ್ಮಾಣ ಮಾಡಿರುವ ‘ಟೆನೆಂಟ್ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಸದ್ಯ, ಗಮನ ಸೆಳೆಯುತ್ತಿದೆ. ವಿಶೇಷ ಎಂದರೆ, ಈ ಟೀಸರ್ ಅನ್ನು ಸ್ಯಾಂಡಲ್‌ವುಡ್‌ನ ಅನೇಕ ಗಣ್ಯರು ಸೇರಿ ರಿಲೀಸ್ ಮಾಡಿದ್ದಾರೆ. ನಿರ್ದೇಶಕರಾದ ಶಶಾಂಕ್, ಪವನ್ ಒಡೆಯರ್, ಖ್ಯಾತ ಛಾಯಾಗ್ರಹಕರಾದ ಸತ್ಯ ಹೆಗ್ಡೆ, ಡಿಸೈನರ್ ಹಾಗೂ ವಿತರಕಿ ಸಚಿನ್ನಾ ಹೆಗ್ಗಾರ್, ಚಂದನ್ ಶೆಟ್ಟಿ, ನಟ, ನಿರ್ದೇಶಕ ವಿಕ್ಕಿ, ನಟ ನವೀಶ್ ಶಂಕರ್, ಸೇರಿದಂತೆ ಅನೇಕರು ರಿಲೀಸ್ ಮಾಡಿ ಸಿನಿಮಾತಂಡಕ್ಕೆ ಸಾಥ್ ನೀಡಿದ್ದಾರೆ.

    ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಟೆನೆಂಟ್’ ಸಿನಿಮಾದ ಟೀಸರ್ ಆಕರ್ಷಕವಾಗಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ‘ಕಣ್ ಕಣ್ಣ ಸಲಿಗೆ’ ಎಂದು ಲವರ್ ಬಾಯ್ ಆಗಿ ಮಿಂಚುತ್ತಿದ್ದ ನಟ ಧರ್ಮ ಕೀರ್ತಿರಾಜ್ ಈ ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ಮಿಂಚಿರುವುದು ವಿಶೇಷ. ಇನ್ನೂ ತಿಲಕ್ ರಾಜ್, ರಾಕೇಶ್ ಮಯ್ಯ ಹಾಗೂ ಸೋನು ಗೌಡ ವರ್ಷಗಳ ಬಳಿಕ ಮತ್ತೆ ತೆರೆಯ ಮೇಲೆ ಬರುತ್ತಿದ್ದಾರೆ. ಹಾಗಾಗಿಯೇ ಈ ಸಿನಿಮಾದ ಮೇಲೆ ಅವರಿಗೂ ಸಹಜವಾಗಿಯೇ ನಿರೀಕ್ಷೆ ಹೆಚ್ಚಾಗಿದೆ. ಟೀಸರ್‌ನಲ್ಲಿ ಎಲ್ಲರ ಪಾತ್ರಗಳು ಸಹ ಗಮನ ಸೆಳೆಯುತ್ತಿದೆ. ಅಂದಹಾಗೆ ಚಿತ್ರಕ್ಕೆ ಗಿರೀಶ್ ಹೊತೂರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಉಜ್ವಲ್ ಸಂಕಲನ, ಮನೋಹರ್ ಛಾಯಾಗ್ರಹಣ ಚಿತ್ರಕ್ಕಿದೆ.

  • BBK 11: ಕಂಟೆಂಟ್‌ಗೋಸ್ಕರ ಲವ್ ಆಗುತ್ತಾ?: ಚೈತ್ರಾಗೆ ಅನುಷಾ ಪ್ರಶ್ನೆ

    BBK 11: ಕಂಟೆಂಟ್‌ಗೋಸ್ಕರ ಲವ್ ಆಗುತ್ತಾ?: ಚೈತ್ರಾಗೆ ಅನುಷಾ ಪ್ರಶ್ನೆ

    ಬಿಗ್ ಬಾಸ್ ಮನೆಯ ‌(Bigg Boss Kannada 11) ಆಟ ಶುರುವಾಗಿ 10 ದಿನಗಳು ಕಳೆದಿವೆ. ಮೊದಲ ವಾರವೇ ಯಮುನಾ ಶ್ರೀನಿಧಿ ದೊಡ್ಮನೆಯಿಂದ ಕಿಕ್ ಔಟ್ ಆಗಿದ್ದಾರೆ. ಇದೆಲ್ಲದರ ನಡುವೆ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳ ನಡುವೆ ಲವ್ವಿ ಡವ್ವಿ ಶುರುವಾಗಿದೆ. ಧರ್ಮ (Dharma Keerthiraj) ಮತ್ತು ಐಶ್ವರ್ಯಾ (Aishwarya) ವಿಚಾರ ಮಾತನಾಡುತ್ತಾ ಕಂಟೆಂಟ್‌ಗೋಸ್ಕರ ಲವ್ ಆಗುತ್ತಾ? ಅಂತ ಚೈತ್ರಾಗೆ ಅನುಷಾ ಪ್ರಶ್ನಿಸಿದ್ದಾರೆ. ಇದನ್ನೂ ಓದಿ:ಹನಿಮೂನ್ ಫೋಟೋ ಶೇರ್ ಮಾಡಿ ಪತಿಗೆ ಸೋನಲ್ ಲವ್ಲಿ ವಿಶ್

    ದೊಡ್ಮನೆಯಲ್ಲಿ ಹೇಗೆ ಇದ್ದರೆ ವರ್ಕೌಟ್ ಆಗುತ್ತದೆ ಎನ್ನುವ ಪ್ರಶ್ನೆ ಚೈತ್ರಾ ಕುಂದಾಪುರ ಹಾಗೂ ನಟಿ ಅನುಷಾ ಮೂಡಿದೆ. ನನ್ನ ಜೊತೆ ಧರ್ಮ ಮಾತನಾಡಲು ಬಂದರೆ ಐಶ್ವರ್ಯಾ ಸಹಿಸಿಕೊಳ್ಳಲ್ಲ. ಐಶ್ವರ್ಯಾ ಮತ್ತು ಧರ್ಮ ಕೀರ್ತಿರಾಜ್ ಜೊತೆಯಾಗಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಧರ್ಮ ಅವರು ಐಶ್ವರ್ಯಾ ವಿಚಾರದಲ್ಲಿ ಪಾಸಿಟಿವ್ ಆಗಿ ಇದ್ದಾರೆ ಎಂದಿನಿಸುತ್ತಿದೆ. ಇಬ್ಬರೂ ಜೊತೆಯಾಗಿ ಅಡುಗೆ ಮಾಡೋದು ಹೀಗೆಯಲ್ಲಾ ನಡೆಯುತ್ತಿದೆ. ಕಂಟೆಂಟ್‌ಗೋಸ್ಕರ ಕೂಡ ಲವ್ ಆಗುತ್ತಾ? ಎಂದು ಅನುಷಾ (Anusha Rai) ಅವರು ಚೈತ್ರಾಗೆ (Chaithra Kundapura) ಪ್ರಶ್ನೆ ಕೇಳಿದ್ದಾರೆ. ಐಶ್ವರ್ಯಾ ಅವರು ಧರ್ಮ ಅವರ ಬಗ್ಗೆ ಆಸಕ್ತಿ ತೋರಿಸುತ್ತಿರುವ ರೀತಿ ನೋಡಿದ್ರೆ, ಇವರಿಬ್ಬರ ನಡುವೆ ಪ್ರೀತಿ ಮೂಡಿತೇ ಎನ್ನುವ ಪ್ರಶ್ನೆ ಅಲ್ಲಿರುವ ಸ್ಪರ್ಧಿಗಳಲ್ಲಿ ಮತ್ತು ಅಭಿಮಾನಿಗಳಲ್ಲಿಯೂ ಮೂಡಿದೆ.

    ಇದೇ ವೇಳೆ, ನಟಿ ಅನುಷಾ ವೈಯಕ್ತಿಕ ಬದುಕಿನ ಬಗ್ಗೆ ಮಾತನಾಡಿದ್ದಾರೆ. ನನಗೆ ಹೊರಗೆ ಬಾಯ್‌ಫ್ರೆಂಡ್ ಇಲ್ಲ. ಎಂಗೇಜ್‌ಮೆಂಟ್ ಕೂಡ ಆಗಿಲ್ಲ. ಯಾರಾದರೂ ಪ್ರೀತಿ (Love) ಕೊಡ್ತೀನಿ ಎಂದು ಬಂದರೆ ನಾನು ಅದಕ್ಕೆ ಯೆಸ್ ಎಂದು ಹೇಳುತ್ತೇನೆ. ಸರಿಯಾದ ವ್ಯಕ್ತಿ ಬಂದು ಅವನೇ ಕೇಳಿದರೆ ಯೆಸ್ ಎಂದು ಹೇಳುತ್ತೇನೆ ಎಂದಿದ್ದಾರೆ.

    ಇನ್ನೂ ಕೆಲವರು ಹೈಲೈಟ್ ಆಗಬೇಕು ಎಂಬ ಕಾರಣಕ್ಕೆ ಲವ್ ಮಾಡಿ ಗಿಮಿಕ್ ಮಾಡಿದ್ದು ಇದೆ. ದೊಡ್ಮನೆ ಆಟ ಮುಗಿದ ಮೇಲೆ ಒಬ್ಬರಿಗೊಬ್ಬರು ಗೊತ್ತೇ ಇಲ್ಲ ಎಂದು ಅನ್ನೋ ಹಾಗೆ ಇದ್ದಿದ್ದು ಇದೆ. ಹಾಗಾದ್ರೆ ಮುಂದಿನ ದಿನಗಳಲ್ಲಿ ಐಶ್ವರ್ಯಾ ಲವ್ ಧರ್ಮ ಲವ್ ಟ್ರ್ಯಾಕ್ ಯಾವ ರೀತಿಯಲ್ಲಿ ಸಾಗುತ್ತದೆ ಎಂಬುದನ್ನು ಕಾಯಬೇಕಿದೆ.

  • BBK 11: ಧರ್ಮ ಕೀರ್ತಿರಾಜ್‌ ಮೇಲೆ ಲವ್‌ ಆಯ್ತಾ?- ದೊಡ್ಮನೆಯಲ್ಲಿ ತ್ರಿಕೋನ ಪ್ರೇಮಕಥೆ

    BBK 11: ಧರ್ಮ ಕೀರ್ತಿರಾಜ್‌ ಮೇಲೆ ಲವ್‌ ಆಯ್ತಾ?- ದೊಡ್ಮನೆಯಲ್ಲಿ ತ್ರಿಕೋನ ಪ್ರೇಮಕಥೆ

    ಬಿಗ್ ಬಾಸ್ ಮನೆಯಲ್ಲಿ (Bigg Boss Kannada 11) ಪ್ರೀತಿ ಚಿಗುರಿ ಆ ನಂತರ ಬ್ರೇಕಪ್ ಕಾಮನ್ ಆಗಿದೆ. ಪ್ರತಿ ಸೀಸನ್‌ನಲ್ಲೂ ಕೂಡ ಒಂದಲ್ಲಾ ಒಂದು ಲವ್ ಸ್ಟೋರಿಗಳು ಸದ್ದು ಮಾಡುತ್ತಲೇ ಇರುತ್ತದೆ. ಈ ಬಾರಿ ಒಬ್ಬ ಹುಡುಗನ ಮೇಲೆ ಇಬ್ಬರೂ ಹುಡುಗಿಯರಿಗೆ ಕ್ರಶ್ ಆಗಿದೆ. ಟ್ರಯಾಂಗಲ್ ಲವ್ ಟ್ರ್ಯಾಕ್ ನಡೆಯುತ್ತಿದೆ. ಯಾರು ಅದು ಅಂತೀರಾ? ಅದು ಬೇರೆ ಯಾರೋ ಅಲ್ಲ, ಚಾಕ್‌ಲೇಟ್ ಹೀರೋ ಧರ್ಮ ಕೀರ್ತಿರಾಜ್ (Dharma Keerthiraj) ಲವ್ ಕಹಾನಿ. ಇದನ್ನೂ ಓದಿ:ಆರಾಮ್ ಅರವಿಂದ್ ಸ್ವಾಮಿ: ರೊಮ್ಯಾಂಟಿಕ್ ಹಾಡಿನಲ್ಲಿ ಅನೀಶ್ ತೇಜಶ್ವರ್

    ಬಿಗ್ ಬಾಸ್ ಕನ್ನಡ ಸೀಸನ್ 11 ಶೋನಲ್ಲಿ ಪ್ರೀತಿ, ಪ್ರೇಮ ಚಿಗುರುವ ಲಕ್ಷಣ ಕಾಣಿಸಿದೆ. ಈ ಮೊದಲು ಕೂಡ ಬಿಗ್ ಬಾಸ್ ಮನೆಯಲ್ಲಿ ಕೆಲವು ಸ್ಪರ್ಧಿಗಳ ನಡುವೆ ಲವ್ ಆಗಿತ್ತು. ಈಗ ಧರ್ಮ ಕೀರ್ತಿರಾಜ್ ಮತ್ತು ಐಶ್ವರ್ಯಾ (Aishwarya Shindogi)  ಅವರು ಪರಸ್ಪರ ಆಕರ್ಷಿತರಾಗುತ್ತಿದ್ದಾರೆ. ಅಷ್ಟೇ ಅಲ್ಲದೇ, ಅನುಷಾ ರೈ (Anusha Rai) ಕೂಡ ಇದೇ ಟ್ರ‍್ಯಾಕ್‌ನಲ್ಲಿ ಇದ್ದಾರೆ. ಹಾಗಾಗಿ ದೊಡ್ಮನೆಯಲ್ಲಿ ತ್ರಿಕೋನ ಪ್ರೇಮ ಶುರುವಾಗುವ ಸೂಚನೆ ಸಿಕ್ಕಿದೆ.

    ಆ ಕಡೆ ಅನುಷಾ ಜೊತೆ ಧರ್ಮ ಲವ್ವಿ ಡವ್ವಿ, ಈ ಕಡೆ ಐಶ್ವರ್ಯಾ ಜೊತೆನೂ ಲವ್ವಿ ಡವ್ವಿ. ಟೋಟಲಿ ಬಿಗ್ ಮನೆಯಲ್ಲಿ ಏನು ಆಗ್ತಿದೆ ಅನ್ನೋದು ಮನೆ ಮಂದಿಗೆ ಫುಲ್ ಕನ್‌ಫ್ಯೂಷನ್ ಆಗೋಗಿದೆ. ಧರ್ಮ ಅಂತೂ ಬಿಗ್ ಬಾಸ್ ಮನೆಯಲ್ಲಿ ಕೃಷ್ಣ ಆಗಿರೋದಂತೂ ಗ್ಯಾರಂಟಿ. ಯಾರಿಗೆ ಯಾರು ಸಿಕ್ತಾರೆ ಕೊನೆಯಲ್ಲಿ ಅನ್ನೋದೇ ಸದ್ಯದ ಕುತೂಹಲ.

  • ಸೆನ್ಸಾರ್ ಪಾಸ್: ಧರ್ಮ ಕೈಯಲ್ಲಿ ತಲ್ವಾರ್, ರೌಡಿ ಕಲ್ಕಿಯಾದ ಜೆಕೆ

    ಸೆನ್ಸಾರ್ ಪಾಸ್: ಧರ್ಮ ಕೈಯಲ್ಲಿ ತಲ್ವಾರ್, ರೌಡಿ ಕಲ್ಕಿಯಾದ ಜೆಕೆ

    ರ್ಮ ಕೀರ್ತಿರಾಜ್ (Dharma Keerthiraj) ಹಾಗೂ ಅದಿತಿ ಅಭಿನಯದ ‘ತಲ್ವಾರ್’ (Talwar) ಚಿತ್ರ ವೀಕ್ಷಿಸಿದ ಸೆನ್ಸಾರ್ (Censor) ಮಂಡಳಿಯು ಯಾವುದೇ ಕಟ್ಸ್ ಮತ್ತು ಮ್ಯೂಟ್ಸ್ ಇಲ್ಲದೆ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ. ಇದೊಂದು ವಿಭಿನ್ನ ರೌಡಿಸಂ ಕಥಾಹಂದರ ಹೊಂದಿರುವ ಸಿನಿಮಾಗಿದ್ದು,  ಈ ಚಿತ್ರದಲ್ಲಿ  ಕ್ಯಾಟ್ ಬರೀಸ್ ಎಂದೇ ಕರೆಸಿಕೊಳ್ಳುವ   ಧರ್ಮ ಕೀರ್ತಿರಾಜ್ ಖಳನಟನ  ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಧರ್ಮ ಕೀರ್ತಿರಾಜ್ ಅವರಿಗೂ ಈ ಸಿನಿಮಾ ಹೊಸ ಇಮೇಜ್ ಸಿಗುತ್ತದೆ ಎಂಬ ಭರವಸೆ ಇದೆ.

    ಕಥೆ, ಚಿತ್ರಕಥೆ  ಸಂಭಾಷಣೆ ಬರೆದು ರಾಘವ ಮುರಳಿ (Raghava Murali) ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಹಿಂದೆ ಮುಮ್ತಾಜ್ ಚಿತ್ರ ನಿರ್ದೇಶಿಸಿದ್ದ ರಾಘವ ಮುರಳಿ ಮತ್ತು ಧರ್ಮ ಕೀರ್ತಿರಾಜ್ ಕಾಂಬಿನೆಷನ್ ನ ಎರಡನೇ ಸಿನಿಮಾ ಇದು. ಈ ಚಿತ್ರದಲ್ಲಿ ಮಜಾಭಾರತ ಖ್ಯಾತಿಯ ಮಿನಿ ದರ್ಶನ್ ಎಂದೇ ಕರೆಸಿಕೊಳ್ಳುವ ಅವಿನಾಶ್ ಕೂಡ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶ ಪಡೆಯುತ್ತಿರುವ ಅವಿನಾಶ್, ಮುಖ್ಯ ಪಾತ್ರ ನಿರ್ವಹಿಸಿದ್ದಾರೆ.

    ಈ ಚಿತ್ರದ ಮತ್ತೊಂದು ವಿಶೇಷತೆ ಏನೆಂದರೆ ವಿಶೇಷ ಪಾತ್ರದಲ್ಲಿ ಜಯರಾಮ್ ಕಾರ್ತಿಕ್ (Jayaram Karthik) (JK) ಕಲ್ಕಿಯಾಗಿ ಕಾಣಿಸಿಕೊಂಡಿದ್ದಾರೆ. ಇವರು ಮಂಗಳೂರಿನ ರೌಡಿ ಕಲ್ಕಿ ಎಂಬ ಪಾತ್ರ ನಿರ್ವಹಿಸುತ್ತಿರುವುದು ವಿಶೇಷತೆಗಳಲ್ಲೊಂದು.

    ಈ ಚಿತ್ರ ಟಚ್ ಸ್ಟೋನ್ ಪಿಕ್ಚರ್ ಬ್ಯಾನರ್ ನಲ್ಲಿ ನಿರ್ಮಾಣವಾಗಿದ್ದು, ಸುರ್ನಳ್ಳಿ ಜಯರಾಮ್ ಅರ್ಪಿಸಿದ್ದಾರೆ. ಈ ಚಿತ್ರಕ್ಕೆ ಸುರೇಶ್ ಬೈರಸಂದ್ರ ಬಂಡವಾಳ ಹಾಕಿದ್ದಾರೆ, ಶ್ರೀನಗರ ಕಿಟ್ಟಿ ಅಭಿನಯದ ಬಹುಪರಾಕ್ ಚಿತ್ರಕ್ಕೆ  ಸಹ ನಿರ್ಮಾಪಕರಗಿದ್ದ ಇವರು ಈ ಚಿತ್ರವನ್ನು ತಮ್ಮ ಸ್ವಂತ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ಇವರು ಅನುಭವ ಇರುವ ಛಾಯಾಗ್ರಾಹಕರು ಆಗಿರುವುದರಿಂದ ಈ ಚಿತ್ರಕ್ಕೆ ತಾವೇ ಕ್ಯಾಮರಮಾನ್ ಆಗಿ ತಮ್ಮ ಕೈ ಚಳಕ ತೋರಿಸಿರುವುದು ಮತ್ತೊಂದು ವಿಶೇಷ.

    ಕೆ.ಬಿ. ಪ್ರವೀಣ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು, ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಈ ಚಿತ್ರದ ಹಾಡುಗಳ ಹಕ್ಕುಗಳನ್ನು ಈಗಾಗಲೇ ಸರಿಗಮ ಆಡಿಯೋ ಕಂಪನಿ ದೊಡ್ಡ ಮೊತ್ತಕ್ಕೆ ಖರೀದಿಸಿದೆ. ಈ ಚಿತ್ರದಲ್ಲಿ 5 ಭರ್ಜರಿ ಸಾಹಸ ದೃಶ್ಯಗಳಿವೆ.  ವಿನೋದ್, ಡ್ಯಾನಿ ಮತ್ತು ಕುಂಫು ಚಂದ್ರು ಅವರುಗಳು ಸಾಹಸ ನಿರ್ದೇಶನ ಮಾಡಿದ್ದಾರೆ.

    ಈ ಚಿತ್ರದ ಇನ್ನೊಂದು ವಿಶೇಷತೆ ಏನೆಂದರೆ, ‘ರೋಜ್ ಹಿಡಿದು ಲವ್ ಮಾಡಿದ್ರೆ ಪ್ರೀತಿಸಿದ ಇಬ್ಬರು ನೋವು ಪಡ್ತಾರೆ, ಆದರೆ ಲಾಂಗ್ ಇಡ್ಕೊಂಡು ಜೀವನ ಮಾಡಿದ್ರೆ ಆ ಲಾಂಗ್ ನಿಂದ ಅದೆಷ್ಟು ಫ್ಯಾಮಿಲಿ ಹಾಳಾಗ್ತವೆ ಎಂಬ ಸಂದೇಶವನ್ನು ಈ ಚಿತ್ರ ದಲ್ಲಿ ಹೇಳಲಾಗಿದೆ. ಇದು ರಕ್ತ ಹರಿಸುವ ರೌಡಿಸಂ ಚಿತ್ರವಾಗಿದ್ದರೂ, ಅಲ್ಲಲ್ಲಿ, ಎಮೋಷನ್ ಟಚ್ ಇದೆ ಎಂಬುದು ಚಿತ್ರ ತಂಡದ ಮಾತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ಯಾನ್ ಇಂಡಿಯಾ ‘ರೋನಿ’ ಸಿನಿಮಾಗೆ ಧರ್ಮ ಕೀರ್ತಿರಾಜ್ ಹೀರೋ

    ಪ್ಯಾನ್ ಇಂಡಿಯಾ ‘ರೋನಿ’ ಸಿನಿಮಾಗೆ ಧರ್ಮ ಕೀರ್ತಿರಾಜ್ ಹೀರೋ

    ವಿಭಿನ್ನ ಕಥಾಹಂದರ ಹೊಂದಿರುವ ’ರೋನಿ’ (Ronnie) ಚಿತ್ರದ ಮೋಷನ್ ಪೋಸ್ಟರ್‌ನ್ನು ಪ್ರಜ್ವಲ್‌ ದೇವರಾಜ್ ಮತ್ತು ಟೀಸರ್‌ನ್ನು ಖ್ಯಾತ ನಿರ್ಮಾಪಕಿ ಶೈಲಜಾನಾಗ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಮುಂಬೈನಲ್ಲಿ ಡಬ್ಬಿಂಗ್ ಹಕ್ಕುಗಳನ್ನು ಖರೀದಿಸುತ್ತಿದ್ದ ಹಿರಿಯ ಸಿನಿಪಂಡಿತ ಎಂ.ರಮೇಶ್ ಹಾಗೂ ಪವನ್‌ಕುಮಾರ್ ಮೊದಲಬಾರಿ ಕನ್ನಡ ಚಿತ್ರಕ್ಕೆ ಲಕ್ಷೀ ಗಣಪತಿ ಸ್ಟುಡಿಯೋಸ್ ಮತ್ತು ರೋಶಿಕಾ ಎಂಟರ್‌ಪ್ರೈಸಸ್ ಮೂಲಕ   ಬಂಡವಾಳ ಹೂಡಿದ್ದಾರೆ. ಕಿರಣ್.ಆರ್.ಕೆ ಅವರ ಕಥೆ,ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನವಿದೆ. ’ದ ಹಂಟರ್’ ಅಂತ ಅಡಿಬಹರದಲ್ಲಿ ಹೇಳಲಾಗಿದೆ.

    ಉನ್ನತ ಮಟ್ಟದ ಕೇಸ್ ನಡೆಯುವ ಕಥೆಯಲ್ಲಿ ಶ್ರೀಮಂತ ಹುಡುಗಿ ಮನೆಯಲ್ಲಿರುವ ಮೂವತ್ತು ಕೋಟಿ ದರೋಡೆ ಆಗುತ್ತದೆ. ಇದನ್ನು ತನಿಖೆ ನಡೆಸಲು ಎಸಿಪಿ ಅಧಿಕಾರಿಯೊಬ್ಬರು ನೇಮಕಗೊಳ್ಳುತ್ತಾರೆ. ಅವರಿಂದ ಇದನ್ನು ಹುಡುಕಲಾಗದ ಪರಿಸ್ಥಿತಿ ಒದಗಿ ಬಂದು ವರ್ಗಾವಣೆಗೊಳ್ಳುತ್ತಾರೆ. ನಂತರ ಕೇಸ್ ಸಿಸಿಬಿ ಅಧಿಕಾರಿಗೆ ಬರುತ್ತದೆ. ಇದರ ಮಧ್ಯೆ ಎರಡು ಕೊಲೆಗಳು ನಡೆಯುತ್ತದೆ. ಎರಡಕ್ಕೂ ಒಂದೇ ಸಾಮ್ಯತೆ ಇರುತ್ತದೆ. ಕೊಲೆ ಮಾಡಿದವರು ಯಾರು? ಇದಕ್ಕೆ ಸಂಬಂಧವೇನು? ಈಕೆಗೆ ನ್ಯಾಯ ಸಿಗುತ್ತದಾ? ನಾಲ್ಕು ಪಾತ್ರಗಳು ಇರಲಿದ್ದು ರೋನಿ ಯಾರು ಎನ್ನುವುದು ಕ್ಲೈಮಾಕ್ಸ್ ನಲ್ಲಿ ತಿಳಿಯುತ್ತದೆ.

    ಧರ್ಮ ಕೀರ್ತಿರಾಜ್ (Dharma Keerthiraj) ಸಿನಿಮಾದ ನಾಯಕ. ಬಾಂಬೆ ಮೂಲದ ರುತ್ವಿ ಪಟೇಲ್ (Ruthvi Patel) ನಾಯಕಿ. ಮತ್ತೊಂದು ಮುಖ್ಯ ಪಾತ್ರದಲ್ಲಿ ತಿಲಕ್ (Tilak) ಉಳಿದಂತೆ ಕೀರ್ತಿರಾಜ್, ವರ್ಧನ್, ರಘು ಪಾಂಡೇಶ್ವರ್, ಬಲರಾಜವಾಡಿ, ರತನ್‌ ಕರತಮಾಡ ಮುಂತಾದವರು ನಟಿಸಿದ್ದಾರೆ. ಮತ್ತೊಂದು ವಿಶೇಷ ಅಂದರೆ ಲಿಯೋ ಎನ್ನುವ ನಾಯಿ ಸಹ ಪ್ರಮುಖ ಪಾತ್ರ ನಿರ್ವಹಿಸಿದೆ.

    ಕವಿರಾಜ್-ಕಿನ್ನಾಳ್‌ರಾಜ್ ಸಾಹಿತ್ಯದ ಮೂರು ಹಾಡುಗಳಿಗೆ ಆಕಾಶ್‌ಪರ್ವ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ವೀನಸ್‌ ನಾಗರಾಜಮೂರ್ತಿ, ಸಂಕಲನ ವೆಂಕಿ.ಯುಡಿವಿ, ಸಾಹಸ ಕುಂಗುಫು ಚಂದ್ರು, ತಾಂತ್ರಿಕ ಮುಖ್ಯಸ್ಥ ಧರಂ.ಕೆ.ಸವಲಾನಿ ಅವರದಾಗಿದೆ. ಬೆಂಗಳೂರು, ಮಂಗಳೂರು ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಇದನ್ನೂ ಓದಿ:ಸಂಪತ್ ಪತ್ನಿ 5 ತಿಂಗಳ ಗರ್ಭಿಣಿ- ಸಹನಟನ ನೆನೆದು ಕಣ್ಣೀರಿಟ್ಟ ವೈಷ್ಣವಿ

    ಸಿನಿಮಾವು ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಸಿದ್ದಗೊಂಡಿದೆ. ಇದೇ ಸಂಸ್ಥೆಯು ಮತ್ತೊಂದು ಚಿತ್ರವನ್ನು ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದು ಪ್ರಜ್ವಲ್‌ ದೇವರಾಜ್ (Prajvaj Devaraj) ನಾಯಕರಾಗಿ ಆಯ್ಕೆಯಾಗಿದ್ದಾರೆ.

  • ತ್ರಿಕೋನ ಪ್ರೇಮಕಥೆಯ ‘ಓ ಮನಸೇ’ ಹಾಡು ರಿಲೀಸ್

    ತ್ರಿಕೋನ ಪ್ರೇಮಕಥೆಯ ‘ಓ ಮನಸೇ’ ಹಾಡು ರಿಲೀಸ್

    ವಿಜಯ ರಾಘವೇಂದ್ರ (Vijay Raghavendra), ಧರ್ಮ ಕೀರ್ತಿರಾಜ್ (Dharma Keerthiraj) ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಓ ಮನಸೇ’ (O Manase) ಚಿತ್ರದ ಹಾಡುಗಳು ಬಿಡುಗಡೆಯಾಗಿದೆ.  ಯೂಟ್ಯೂಬ್ ನಲ್ಲೂ ಹಾಡುಗಳು ಟ್ರೆಂಡ್ ಕ್ರಿಯೇಟ್ ಮಾಡಿದೆ. ಎಂ.ಎನ್ ಭೈರೆಗೌಡ, ಕೆ.ಹೆಚ್. ಧನಂಜಯ, ಕೆ.ವೆಂಕಟೇಶ್, ಸು.ಕಾ ರಾಮು, ಯುವರಾಜ್ ಕೆ.ಎ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

    ಇತ್ತೀಚೆಗೆ ನಡೆದ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ಮಾಪಕರು, ‘ಇದು ನಮ್ಮ ಬ್ಯಾನರ್ ನಲ್ಲಿ ನಿರ್ಮಿಸಿರುವ ಮೊದಲ ಸಿನಿಮಾ. ಮುಂದೆಯೂ ಜನರಿಗೆ ಸದಭಿರುಚಿ ಸಿನಿಮಾ ಕೊಡುವ ಉದ್ದೇಶದಿಂದ ಈ ಸಿನಿಮಾ ಮಾಡಲಾಗಿದೆ. ಒಂದು ಒಳ್ಳೆ ಸಿನಿಮಾ ಮಾಡಿದ ಖುಷಿ ನಮಗೆಲ್ಲಾ ಇದೆ. ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್ ಜೊತೆ ನಾಯಕಿಯಾಗಿ ಸಂಚಿತ ಪಡುಕೋಣೆ ಅದ್ಬುತವಾಗಿ ನಟಿಸಿದ್ದಾರೆ.  ಟ್ರೇಲರ್ ಗೆ ಯೂಟ್ಯೂಬ್‌ನಲ್ಲಿ ಒಳ್ಳೆ ರೆಸ್ಪಾನ್ಸ್ ಬಂದಿದೆ. ಈಗ ಹಾಡುಗಳು ಬಿಡುಗಡೆಯಾಗಿದೆ.  ನಮ್ಮ ಬ್ಯಾನರ್ ನಿಂದ ಇನ್ನು ಹತ್ತಾರು ಸಿನಿಮಾ ಮಾಡುವ ಯೋಜನೆ ಇದೆ’ ಎಂದು ಹೇಳಿದರು.

    ಈ ಮೊದಲು ‘ನವರಂಗಿ’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದ ಉಮೇಶ್ ಗೌಡ ಈಗ ಮೂರನೇ ಪ್ರಯತ್ನವಾಗಿ ‘ಓ ಮನಸೇ’ ನಿರ್ದೇಶನ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ‘ಈಗಾಗಲೇ ಚಿತ್ರದ ಟ್ರೇಲರ್‌ಗೆ ಪ್ರೇಕ್ಷಕರಿಂದ ಒಳ್ಳೆ ಪ್ರಶಂಸೆ ಸಿಕ್ಕಿದ್ದು, ಈಗ ಹಾಡುಗಳಿಗೂ ಒಳ್ಳೆ ರೆಸ್ಪಾನ್ಸ್ ಬರುತ್ತಿದೆ. ಇದೊಂದು ನೈಜಘಟನೆ ಆಧಾರಿತ ಸಿನಿಮಾ ಎಂಬುದು ವಿಶೇಷ’ ಎಂದು ಹೇಳಿದರು. ಇದನ್ನೂ ಓದಿ: ಕೊಡವ ಶೈಲಿಯಲ್ಲಿ ಮಿಂಚಿದ ನಟಿ ಶುಭ್ರ ಅಯ್ಯಪ್ಪ- ವಿಶಾಲ್ ಜೋಡಿ

    ಇದೇ ಸಂದರ್ಭದಲ್ಲಿ ಮಾತನಾಡಿದ ನಟ ವಿಜಯರಾಘವೇಂದ್ರ ‘ಸಿನಿಮಾ ಪ್ರಮೋಷನ್‌ನಲ್ಲಿ ಆಡಿಯೋ ಬಿಡುಗಡೆ ಎಂಬುದು ಮುಖ್ಯವಾದ ಹಂತ. ಸಿನಿಮಾ ಮಾಡೋದು ಮುಖ್ಯವಲ್ಲ ಜನರಿಗೆ ಅದನ್ನು ತಲುಪಿಸುವುದು ಮುಖ್ಯ. ನಿರ್ಮಾಪಕರು ಒಳ್ಳೆ ಪ್ರಯತ್ನ ಮಾಡಿದ್ದಾರೆ.ಇದರಲ್ಲಿ ನಾನು ಪೊಲೀಸ್ ಪಾತ್ರ ಮಾಡಿದ್ದು, ಚಿತ್ರದಲ್ಲಿ ಕಾಮಿಡಿ. ಆ್ಯಕ್ಷನ್, ಲವ್ ಹೀಗೆ ಎಲ್ಲಾ ಅಂಶಗಳಿವೆ.  ಇದು ನನಗೆ ಸ್ಪೆಷಲ್ ಸಿನಿಮಾ ಎನ್ನಬಹುದು’ ಎಂದರು.  ‘ಕೊರೋನಾ ಟೈಮ್‌ನಲ್ಲಿ ನನಗೆ ಈ ಸಿನಿಮಾ ಸಿಕ್ಕಿದ್ದು, ಕಮ್ ಬ್ಯಾಕ್ ಜರ್ನಿ ಎನ್ನಬಹುದು. ನಾನು ಈ ಚಿತ್ರದಲ್ಲಿ ಲವರ್ ಬಾಯ್ ಹಾಗೂ ನೆಗಟಿವ್ ಸೈಡ್ ಪಾತ್ರ ಮಾಡಿದ್ದೇನೆ’ ಎಂದು ನಾಯಕ ಧರ್ಮ ಕೀರ್ತಿರಾಜ್ ತಿಳಿಸಿದರು.   ‘ಇದು ತ್ರಿಕೋನ ಪ್ರೇಮ ಕಥೆ”  ಒಳಗೊಂಡ ಸಿನಿಮಾ.  ಈ ಚಿತ್ರದಲ್ಲಿ ನಟಿಸಿರುವ ಖುಷಿಯಿದೆ ಎಂದರು ನಾಯಕಿ ಸಂಚಿತಾ ಪಡುಕೋಣೆ (Sanchita Padukone).

    ಹಾಡುಗಳ ಬಿಡುಗಡೆ ಕಾರ್ಯಕ್ರಮಕ್ಕೆ ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ ಹರೀಶ್, ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ, ನಟಿ ಶಾನ್ವಿ ಶ್ರೀವಾತ್ಸವ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಅಣಜಿ ನಾಗರಾಜ್, ಪುಟ್ಟಣ್ಣ ಮುಂತಾದವರು ಅಥಿತಿಗಳಾಗಿ ಆಗಮಿಸಿದ್ದರು.  ಕವಿರಾಜ್, ಡಾ. ವಿ ನಾಗೇಂದ್ರ ಪ್ರಸಾದ್ ಹಾಡುಗಳನ್ನು ಬರೆದಿದ್ದು, ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ. ವಿಶೇಷವಾಗಿ ಎರಡು ಗೀತೆಗಳನ್ನು ಥೈಲ್ಯಾಂಡ್‌ನ ಸುಂದರ ಪರಿಸರದಲ್ಲಿ ಚಿತ್ರೀಕರಣ ಮಾಡಲಾಗಿದೆ. ಚಿತ್ರದಲ್ಲಿ ಒಟ್ಟು ಮೂರು ಹಾಡುಗಳಿದೆ.   ಬಂಡೆ ಚಂದ್ರು, ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಮಾಡಿದ್ದಾರೆ. ಉಳಿದಂತೆ ಚಿತ್ರಕ್ಕೆ ಎಂ.ಆರ್ ಸೀನು ಛಾಯಾಗ್ರಹಣ, ಶ್ರೀನಿವಾಸ್ ಬಾಬು ಸಂಕಲನ ಹಾಗೂ ಧನಂಜಯ ಅವರ ನೃತ್ಯ ನಿರ್ದೇಶನವಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಓ ಮನಸೇ’ ಚಿತ್ರದ ಟೀಸರ್ ರಿಲೀಸ್ : ತ್ರಿಕೋನ ಪ್ರೇಮ ಕಾವ್ಯ

    ‘ಓ ಮನಸೇ’ ಚಿತ್ರದ ಟೀಸರ್ ರಿಲೀಸ್ : ತ್ರಿಕೋನ ಪ್ರೇಮ ಕಾವ್ಯ

    ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್, ಸಂಚಿತಾ ಪಡುಕೋಣೆ ಪ್ರಮುಖಪಾತ್ರದಲ್ಲಿ ನಟಿಸಿರುವ  “ಓ ಮನಸೇ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಈ ಚಿತ್ರದ ಕುರಿತು ಮಾತನಾಡಿದರು. ನಾನು ಕೊರೋನ ಒಂದನೇ ಅಲೆ ಮುಗಿದ ಮೇಲೆ ನಿರ್ಮಾಪಕರಲೊಬ್ಬರಾದ ರಾಮು ಅವರ ಬಳಿ ಈ ಚಿತ್ರದ ಕಥೆ ಹೇಳಿದೆ. ಅವರಿಗೆ ಕಥೆ ಇಷ್ಟವಾಗಿ, ತಮ್ಮ‌ ಮಿತ್ರರ ಒಡಗೂಡಿ ಈ ಚಿತ್ರ ನಿರ್ಮಾಣಕ್ಕೆ ಮುಂದಾದರು. ಆನಂತರ ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್ ಅವರಿಗೆ ಚಿತ್ರದ ಕಥೆ ಹೇಳಲಾಯಿತು. ಅವರು ಸಹ ನಟಿಸಲು ಒಪ್ಪಿದರು. ಸಂಚಿತಾ ಪಡುಕೋಣೆ ನಾಯಕಿಯಾಗಿ ಆಯ್ಕೆಯಾದರು. ಲವ್ ಮತ್ತು ಕ್ರೈಮ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಮಡಿಕೇರಿ, ಗೋಣಿಕೊಪ್ಪ, ಕುಶಾಲನಗರ, ಬೆಂಗಳೂರು ಮುಂತಾದ ಕಡೆ 55 ದಿನಗಳ ಕಾಲ ನಡೆದಿದೆ. ಹಾಡುಗಳ ಚಿತ್ರೀಕರಣ ಥೈಲ್ಯಾಂಡ್ ನಲ್ಲಿ ಆಗಿದೆ. ಫೆಬ್ರವರಿಯಲ್ಲಿ ಚಿತ್ರ ತೆರೆಗೆ ಬರುವ ಸಾಧ್ಯತೆಯಿದೆ ಎಂದು ನಿರ್ದೇಶಕ ಉಮೇಶ್ ಗೌಡ ತಿಳಿಸಿದರು.

    ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದೇನೆ. ಈ ನಡುವೆ ಪೊಲೀಸ್ ಪಾತ್ರಗಳು ನನಗೆ ಹೆಚ್ಚು ಬರುತ್ತಿದೆ. ಮುಂದಿನ ಎರಡು ಚಿತ್ರಗಳಲ್ಲೂ ನನ್ನದು ಪೊಲೀಸ್ ಪಾತ್ರ. ಇದಕ್ಕೆ ಕಾರಣ “ಓ ಮನಸೇ” ತಂಡ ಎನ್ನಬಹುದು. ಏಕೆಂದರೆ ಕೊರೋನ ಸಮಯದಲ್ಲಿ ಬಿಡುವಿದಾಗ ಇವರು ಬಂದು ಈ ಚಿತ್ರದ ಕಥೆ ಹೇಳಿದರು. ಈ ಚಿತ್ರ ಒಪ್ಪಿದ ನಂತರ ಸಾಲುಸಾಲು ಚಿತ್ರಗಳನ್ನು ನಾನು ಒಪ್ಪಿಕೊಂಡೆ.  ತ್ರಿಕೋನ ಪ್ರೇಮಕಥೆ ಆಧಾರಿತ “ಓ ಮನಸೇ” ಚಿತ್ರವನ್ನು ತಾವು ನೋಡಿ ಹಾರೈಸಿ ಎಂದರು ವಿಜಯ ರಾಘವೇಂದ್ರ. ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುವ ಯುವಜನೋತ್ಸವಕ್ಕೆ ಮೋದಿ ಜೊತೆ ಅಕ್ಷಯ್ ಕುಮಾರ್‌ಗೆ ಆಹ್ವಾನ

    ಕೊರೋನ ಸಮಯದಲ್ಲಿ ಸಿನಿಮಾಗಳು ಕಡಿಮೆಯಾಗಿದ್ದವು. ಅಂತಹ ಸಮಯದಲ್ಲಿ ನಿರ್ಮಾಪಕರು ಕರೆದು ಈ ಚಿತ್ರದ ಅಡ್ವಾನ್ಸ್ ನೀಡಿದರು. ಅವರು ಕೊಟ್ಟ ಘಳಿಗೆ ಚೆನ್ನಾಗಿದೆ. ಆನಂತರ ಸಾಕಷ್ಟು ಚಿತ್ರಗಳು ಬಂದವು. ಈ ಚಿತ್ರದ ಬಗ್ಗೆ ಹೇಳಬೇಕಾದರೆ, ನಾಯಕಿಯನ್ನು ನಾನು ಹಾಗೂ ವಿಜಯ ರಾಘವೇಂದ್ರ ಇಬ್ಬರೂ ಪ್ರೀತಿಸುತ್ತೇವೆ. ಯಾರಿಗೆ ಸಿಗುತ್ತಾರೆ? ಎಂಬುದನ್ನು ಸಿನಿಮಾದಲ್ಲಿ ನೋಡಬೇಕು. ನಿರ್ದೇಶಕರು ಅದ್ಭುತವಾಗಿ ಚಿತ್ರ ಮಾಡಿದ್ದಾರೆ ಎಂದರು ಧರ್ಮ ಕೀರ್ತಿರಾಜ್.

    ನನಗೆ ಕನ್ನಡ ಚಿತ್ರದಲ್ಲಿ ನಟಿಸಲು ಬಹಳ ಆಸೆ. ನನ್ನನ್ನು ಈ ಚಿತ್ರದ ನಾಯಕಿಯಾಗಿ ಆಯ್ಕೆ ಮಾಡಿದ್ದ ನಿರ್ದೇಶಕ – ನಿರ್ಮಾಪಕರಿಗೆ ಧನ್ಯವಾದ ಎಂದರು ಸಂಚಿತಾ ಪಡುಕೋಣೆ. ನಿರ್ಮಾಪಕರಾದ ‌ಎಂ.ಎನ್ ಭೈರೇಗೌಡ, ಧನಂಜಯ್, ಯುವರಾಜು, ಸು.ಕಾ.ರಾಮು ಮತ್ತು ವೆಂಕಟೇಶ್ ಚಿತ್ರ ನಿರ್ಮಾಣದ ಕುರಿತು ಮಾತನಾಡಿದರು. ಧನು ಮಾಸ್ಟರ್ ನೃತ್ಯ ನಿರ್ದೇಶನದ ಬಗ್ಗೆ ಮಾಹಿತಿ ನೀಡಿದರು. ‌ ರಮೇಶ್ ಹಂಡ್ರಂಗಿ ಕಥೆ ಬರೆದಿದ್ದಾರೆ. ಎಂ.ಆರ್.ಸೀನು ಛಾಯಾಗ್ರಹಣ, ಶ್ರೀನಿವಾಸ್ ಪಿ‌ ಬಾಬು ಸಂಕಲನ ಹಾಗೂ ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ, ಬಂಡೆ ಚಂದ್ರು ಅವರ ಸಾಹಸ‌ ನಿರ್ದೇಶನವಿರುವ ಈ ಚಿತ್ರಕ್ಕೆ ಸಾಯಿಕೃಷ್ಣ ಸಂಭಾಷಣೆ ಬರೆದಿದ್ದಾರೆ. ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್, ಸಂಚಿತಾ ಪಡುಕೋಣೆ, ಹರೀಶ್ ರಾಯ್,  ಸಾಧುಕೋಕಿಲ, ಶೋಭ್ ರಾಜ್, ಕಿಲ್ಲರ್ ವೆಂಕಟೇಶ್, ವಾಣಿಶ್ರೀ, ಜಯರಾಮ್, ರುಶಿಕಾ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]