Tag: Dharmasthala Case

  • ಉಜಿರೆಯಲ್ಲಿ ಇದ್ದಿದ್ದಕ್ಕೆ ಬಚಾವಾದೆ, ಉಡುಪಿಯಲ್ಲಿ ಇದ್ದಿದ್ರೆ ಮಲ್ಪೆ ಬೀಚಲ್ಲಿ ಫುಟ್ಬಾಲ್ ಆಡಿಸ್ತಿದ್ದೆ – ಸಮೀರ್‌ಗೆ ಯಶ್‌ಪಾಲ್ ಸುವರ್ಣ ಎಚ್ಚರಿಕೆ

    ಉಜಿರೆಯಲ್ಲಿ ಇದ್ದಿದ್ದಕ್ಕೆ ಬಚಾವಾದೆ, ಉಡುಪಿಯಲ್ಲಿ ಇದ್ದಿದ್ರೆ ಮಲ್ಪೆ ಬೀಚಲ್ಲಿ ಫುಟ್ಬಾಲ್ ಆಡಿಸ್ತಿದ್ದೆ – ಸಮೀರ್‌ಗೆ ಯಶ್‌ಪಾಲ್ ಸುವರ್ಣ ಎಚ್ಚರಿಕೆ

    ಉಡುಪಿ: ನೀನು ಉಜಿರೆಯಲ್ಲಿ (Mangaluru) ಇದ್ದದ್ದಕ್ಕೆ ಬಚಾವಾದೆ, ಉಡುಪಿಯಲ್ಲಿ ಇದ್ದಿದ್ರೆ ಮಲ್ಪೆ ಬೀಚಿನಲ್ಲಿ ಫುಟ್ಬಾಲ್ ಆಡಿಸುತ್ತಿದ್ದೆ ಎಂದು ಶಾಸಕ ಯಶ್‌ಪಾಲ್ ಸುವರ್ಣ (Yashpal Suvarna) ಯೂಟ್ಯೂಬರ್ ಸಮೀರ್‌ಗೆ (Youtuber Sameer) ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

    `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಯೂಟ್ಯೂಬರ್ ಸಮೀರ್‌ಗೆ ನೇರ ಎಚ್ಚರಿಕೆ ಕೊಡುತ್ತೇನೆ. ನೀನು ಉಜಿರೆಯಲ್ಲಿ ಇದ್ದದ್ದಕ್ಕೆ ಬಚಾವಾದೆ. ಉಡುಪಿಯಲ್ಲಿ ಇರುತ್ತಿದ್ದರೆ ಮಲ್ಪೆ ಬೀಚಿನಲ್ಲಿ ಫುಟ್ಬಾಲ್ ಆಡಿಸುತ್ತಿದ್ದೆ. ನಿನ್ನನ್ನು ನಾವು ಫುಟ್ಬಾಲ್ ಮಾಡಿ ಆಡಿಸುತ್ತಿದ್ದೆವು. ಅಧಿವೇಶನ ಮುಗಿದ ಮೇಲೆ ಬರುತ್ತೇನೆ. ಸಮೀರ್ ಬಗ್ಗೆ ಒಳ್ಳೆಯ ಪ್ಲ್ಯಾನ್‌ ಮಾಡಿ, ಆತನನ್ನು ರಾಜ್ಯದಿಂದ ಓಡಿಸುತ್ತೇವೆ. ಕಾಂಗ್ರೆಸ್ ಹೈಕಮಾಂಡ್‌ನ ಒತ್ತಡದಿಂದ ಆತ ಬಂಧನವಾಗಿಲ್ಲ. ನಮ್ಮ ಸರ್ಕಾರ ಇರಲಿ, ಇರದೇ ಇರಲಿ. ನಮ್ಮದು ಹಿಂದೂ ಸಮಾಜದ ಪರ ವಾದ. ನಮ್ಮದು ಹಿಂದುತ್ವದ ಫ್ಯಾಕ್ಟರಿ, ಹಿಂದು ಸಮಾಜವನ್ನು ಒಡೆಯಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.ಇದನ್ನೂ ಓದಿ: ಸುಜಾತಾ ಭಟ್‌ರನ್ನು ಮೊದಲು ಪೊಲೀಸರು ವಶಕ್ಕೆ ಪಡೆದ ವಿಚಾರಣೆ ನಡೆಸಬೇಕು: ವಾಸಂತಿ ಸಹೋದರ ಒತ್ತಾಯ

    ಅಣ್ಣಪ್ಪ ಪಂಜುರ್ಲಿ ದೈವದ ಅನುಗ್ರಹವಾಗಿದೆ. ದೇವರ ಮಧ್ಯಸ್ಥಿಕೆಯಲ್ಲಿ ಎಲ್ಲ ಇತ್ಯರ್ಥ ಆಗುತ್ತದೆ. ಬಿಜೆಪಿ ಹೋರಾಟ ಒಂದು ಭಾಗ ಮಾತ್ರ. ಅಣ್ಣಪ್ಪ ಪಂಜುರ್ಲಿ ಎಲ್ಲರ ಮನೆಯ ದೇವರು. ಮೊಗವೀರ ಸಮುದಾಯದ ಪ್ರಾರ್ಥನೆ ಫಲ ಕೊಟ್ಟಿದೆ. ಕೋಟ್ಯಂತರ ದೈವಭಕ್ತರ ಪ್ರಾರ್ಥನೆ ಫಲಿಸಿದೆ. ಪರಶುರಾಮನ ಸೃಷ್ಟಿಯಲ್ಲಿ ಧರ್ಮಕ್ಕೆ ಗೆಲುವಾಗಿದೆ. ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿ ಕಣ್ಣು ಬಿಟ್ಟಿದ್ದಾರೆ. ಉಡುಪಿ ಕೃಷ್ಣ ಮುಖ್ಯಪ್ರಾಣ ಅನ್ಯಾಯಕ್ಕೆ ಶಿಕ್ಷೆ ಕೊಟ್ಟಿದ್ದಾರೆ ಎಂದು ಹೇಳಿದರು.

    ಹಿಂದೂ ಧರ್ಮದ ಷಡ್ಯಂತ್ರಕ್ಕೆ ಫಲಿತಾಂಶ ಹೊರಬೀಳಬೇಕಿದೆ. ಹಣಕಾಸಿನ ವಿಚಾರದಲ್ಲಿ ಧರ್ಮದ ಅವಹೇಳನಕ್ಕೆ ಶಿಕ್ಷೆ ಪ್ರಾಪ್ತಿಯಾಗಿದೆ. ಹಿಂದೂ ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ಬಳಸಿಕೊಂಡವರು ಶಿಕ್ಷೆ ಅನುಭವಿಸುತ್ತಿದ್ದಾರೆ. ಹಿಂದೆ ಬ್ರಿಟಿಷರ ದಬ್ಬಾಳಿಕೆ ನಡೆಯುತ್ತಿತ್ತು. ಈಗ ಕಮ್ಯುನಿಸ್ಟರ ಮಾನಸಿಕತೆ ದಬ್ಬಾಳಿಕೆ ಮಾಡುತ್ತಿದೆ. ಮತಾಂತರದ ದೊಡ್ಡ ಷಡ್ಯಂತ್ರವಿದು, ಸಂಸದ ಶಶಿಕಾಂತ್ ಸೆಂಥಿಲ್ ವಿರುದ್ಧ ಸಹ ವಿಚಾರಣೆಯಾಗಬೇಕು ಎಂದು ಆಗ್ರಹಿಸಿದರು.ಇದನ್ನೂ ಓದಿ: ಬೆಂಗಳೂರು – ಸಿಗಂದೂರು ನಡುವೆ ಕೆಎಸ್ಆರ್‌ಟಿಸಿ ನಾನ್ ಎಸಿ ಸ್ಲೀಪರ್ ಬಸ್ ಸಂಚಾರ ಆರಂಭ

  • ಸುಜಾತಾ ಭಟ್‌ರನ್ನು ಮೊದಲು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕು: ವಾಸಂತಿ ಸಹೋದರ ಒತ್ತಾಯ

    ಸುಜಾತಾ ಭಟ್‌ರನ್ನು ಮೊದಲು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕು: ವಾಸಂತಿ ಸಹೋದರ ಒತ್ತಾಯ

    ಮಡಿಕೇರಿ: ಸುಜಾತಾ ಭಟ್ (Sujatha Bhat) ಅವರು ಕ್ಷಣಕ್ಷಣಕ್ಕೂ ಒಂದೊಂದು ಹೇಳಿಕೆ ನೀಡುತ್ತಿರುವುದರಿಂದ ಆಕೆಯ ಹೇಳಿಕೆ ಬಗ್ಗೆ ಸಾಕಷ್ಟು ಅನುಮಾನಗಳು ಮೂಡುತ್ತಿವೆ. ನನ್ನ ಸಹೋದರಿ ವಸಂತಿ ಎಷ್ಟು ತಾಯಿಂದಿರಿಗೆ ಮಗಳು ಆಗಲು ಸಾಧ್ಯ. ಮೊದಲು ಸುಜಾತಾ ಭಟ್ ಅವರನ್ನು ಪೊಲೀಸರು ವಶಕ್ಕೆ ಪಡೆಯಬೇಕು ಎಂದು ವಾಸಂತಿ ಸಹೋದರ ಎಂ.ವಿಜಯ್ ಅಕ್ರೋಶ ಹೊರಹಾಕಿದ್ದಾರೆ.

    ಕೊಡಗಿನ ವಿರಾಜಪೇಟೆಯಲ್ಲಿ ‘ಪಬ್ಲಿಕ್ ಟಿವಿ’ಯೊಂದಿಗೆ ಮಾತಾನಾಡಿದ ಅವರು, ಈ ಧರ್ಮಸ್ಥಳ ಪ್ರಕರಣದ ಬಗ್ಗೆ ಹಾಗೂ ಸುಜಾತಾ ಭಟ್ ವಿಚಾರದ ಬಗ್ಗೆ ಪಬ್ಲಿಕ್ ಟಿವಿ ಎಳೆಎಳೆಯಾಗಿ ಅವರ ಮುಖವಾಡ ಬಿಚ್ಚುಡುತ್ತಿದೆ. ಹೀಗಾಗಿ, ಮೊದಲು ಪಬ್ಲಿಕ್ ಟಿವಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.‌ ಇದನ್ನೂ ಓದಿ: ಒಂದೊಂದೇ ಸತ್ಯಗಳು ಹೊರಗೆ ಬರ್ತಿದೆ: ವೀರೇಂದ್ರ ಹೆಗ್ಗಡೆ

    ಸುಜಾತಾ ಭಟ್ ದಿನಕ್ಕೊಂದು ಸುಳ್ಳು ಸೃಷ್ಟಿ ಮಾಡುತ್ತಿದ್ದಾರೆ. ರಾತ್ರಿ ಮಗಳು ಅಲ್ಲ ಅನ್ನುತ್ತಾರೆ, ಬೆಳಿಗ್ಗೆ ಮಗಳು ಎನ್ನುತ್ತಾರೆ. ಒಂದೊಂದು ಸಲ ಒಂದೊಂದು ರೀತಿಯ ಹೇಳಿಕೆ ನೀಡುತ್ತಾರೆ. ನನ್ನ ಸಹೋದರಿ ವಾಸಂತಿ ಎಷ್ಟು ಜನರಿಗೆ ಮಗಳು ಆಗಬೇಕು? ಎಲ್ಲರಿಗೂ ಮಗಳ ಇವಳು? ಎಲ್ಲಾ ಸುಳ್ಳು ಹೇಳುತ್ತ ಇದ್ದಾರೆ. ಈ ಹಿಂದೆ ಸುಜಾತಾ ಭಟ್ ಅವರು ವಿರಾಜಪೇಟೆಗೆ ಬಂದು ಡೆತ್‌ಸರ್ಟಿಫಿಕೇಟ್ ತೆಗೆದುಕೊಂಡು ಹೋಗಿದ್ದಾರೆ. ಯಾವಾಗ ಬಂದು ತೆಗೆದುಕೊಂಡು ಹೋಗಿದ್ದಾರೆ ಎಂದು ನನಗೆ ಮಾಹಿತಿ ಇಲ್ಲ. ಸುಜಾತಾ ಭಟ್ ಅವರ ಬಾಯಿಯಿಂದಲೇ ಮಾಧ್ಯಮಗಳ ಮುಖಾಂತರ ಕೇಳಿದ್ದೇನೆ. ವಾಸಂತಿ ಅವರ ಪಾಸ್‌ಪೋರ್ಟ್ ಚಿನ್ನಾಭರಣಗಳನ್ನು ಕದ್ದುಕೊಂಡು ಹೋಗಿದ್ದಾರೆ. ಅವರ ಪೋಟೊ ಆಲ್ಬಮ್, ಬಟ್ಟೆಗಳು ಸೇರಿದಂತೆ ಸುಮಾರು 15 ಲಕ್ಷದಷ್ಟು ಮೌಲ್ಯದ ವಸ್ತುಗಳನ್ನು ಕದ್ದಿದ್ದಾರೆ ಎಂದು ಆರೋಪಿಸಿದ್ದಾರೆ.

    2004 ರಿಂದ ರಂಗಪ್ರಸಾದ್ ಹಾಗೂ ಸುಜಾತಾ ಭಟ್ ಅವರೊಂದಿಗೆ ಸಂಬಂಧ ಇದೆ. ಸುಜಾತಾ ಭಟ್ ಅವರ ಮೇಲೆ ಸಾಕಷ್ಟು ಅನುಮಾನ ಇದೆ. ವಾಸಂತಿ ಸತ್ತ ಸಂದರ್ಭದಲ್ಲೇ ಅದು ಅನುಮಾನದ ಸಾವು‌ ಎಂದು ದೂರು ನೀಡಿದ್ದೆವು. ಸಿಬಿಐ ತನಿಖೆ ಆಗಿತ್ತು‌. ಅದರಲ್ಲಿ ಆತ್ಮಹತ್ಯೆ ಎಂದು ವರದಿ ಬಂದಿದೆ. ನನ್ನ ಬಳಿ ವಾಸಂತಿ ಭಟ್ ಅವರ ಹಲವಾರು ದಾಖಲೆಗಳು ಇವೆ. ಎಸ್‌ಐಟಿಗೆ ನೀಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ಅಣ್ಣ ಪೊಲೀಸರ ವಶಕ್ಕೆ

    ಸುಜಾತಾ ಭಟ್ ಅವರು ಒಂದಲ್ಲ ಒಂದು ಸುಳ್ಳು ಹೇಳಿಕೊಂಡು ಪ್ರಕರಣ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮೊದಲು ಪೊಲೀಸರು ಸುಜಾತಾ ಭಟ್ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸಬೇಕು ಎಂದು ವಿಜಯ್ ಒತ್ತಾಯಿಸಿದ್ದಾರೆ.

  • ಅನನ್ಯಾ ಭಟ್‌ ಫೋಟೋ ಕೇಳಿದಾಗ ಮಾಡೆಲ್‌ ಫೋಟೋ ಕಳಿಸಿದ್ದರು ಸುಜಾತ ಭಟ್: ಗಿರೀಶ್‌ ಮಟ್ಟಣ್ಣನವರ್‌

    ಅನನ್ಯಾ ಭಟ್‌ ಫೋಟೋ ಕೇಳಿದಾಗ ಮಾಡೆಲ್‌ ಫೋಟೋ ಕಳಿಸಿದ್ದರು ಸುಜಾತ ಭಟ್: ಗಿರೀಶ್‌ ಮಟ್ಟಣ್ಣನವರ್‌

    – ಫ್ಯಾಕ್ಟ್‌ಚೆಕ್‌ನಲ್ಲಿ ಸುಳ್ಳು ಅಂತಾ ಗೊತ್ತಾಯ್ತು!

    ಮಂಗಳೂರು: ಅನನ್ಯಾ ಭಟ್‌ (Ananya Bhat) ಫೋಟೋ ಕೇಳಿದಾಗ ಸುಜಾತ ಭಟ್ (Sujatha Bhat) ಮಾಡೆಲ್‌ ಫೋಟೋ ಕಳಿಸಿದ್ದಳು‌ ಎಂದು ಗಿರೀಶ್‌ ಮಟ್ಟಣ್ಣನವರ್‌ (Girish Mattannavar) ಹೇಳಿದ್ದಾರೆ.

    ಅನನ್ಯಾ ಭಟ್‌ ಕಟ್ಟು ಕತೆ ಎಂದಿದ್ದ ಸುಜಾತಾ ಭಟ್‌ ವಿಚಾರಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ. ಈ ಹಿಂದೆ ದೆಹಲಿಯಲ್ಲಿ ಸುಜಾತ ಭಟ್‌ ಅವರನ್ನು ಭೇಟಿಯಾಗಿದ್ದೆ. ಆಗ, ತಮ್ಮ ಮಗಳ ಮೇಲೆ ಅತ್ಯಾಚಾರ ನಡೆದಿದೆ. ನನಗೆ ನ್ಯಾ ಕೊಡಿಸಿ ಎಂದು ಸುಜಾತ ಭಟ್‌ ಹೇಳಿದ್ದಳು. ಆದರೆ ಮಗಳ ಫೋಟೋ ಕೇಳಿದಾಗ ಮಾಡೆಲ್‌ ಫೋಟೋ ಕಳಿಸಿದ್ದಳು. ಬಳಿಕ ಇದನ್ನೂ ಫ್ಯಾಕ್ಟ್‌ ಚೆಕ್‌ ಮಾಡ್ದೆ, ಆಗ ಸುಳ್ಳು ಎಂದು ಗೊತ್ತಾಯ್ತು. ಅಲ್ಲಿಂದ ನಾನು ಈ ಪ್ರಕರಣದಿಂದ ಅಂತರ ಕಾದುಕೊಂಡೆ ಎಂದಿದ್ದಾರೆ. ಇದನ್ನೂ ಓದಿ: ಅನಾರೋಗ್ಯ ಕಾರಣಕ್ಕೆ ಶನಿವಾರ ವಿಚಾರಣೆಗೆ ಬರಲ್ಲ, ಆ.29ಕ್ಕೆ ಹಾಜರಾಗ್ತೀನಿ: ಎಸ್‌ಐಟಿಗೆ ಸುಜಾತಾ ಭಟ್‌ ಪತ್ರ

    ಸುಜಾತ್ ಭಟ್ ಪದೇ ಪದೇ ಕರೆ ಮಾಡಿ ನ್ಯಾಯ ಕೊಡಿಸಿ ಎಂದು ಹೇಳುತ್ತಿದ್ದರು. ಆಗ ನಾನು ಜಯಂತ್‌ಗೂ ಕೂಡ ಹೇಳಿದ್ದೆ. ಈ ಬಗ್ಗೆ ತನಿಖೆ ನಡೆಯಲಿ, ಸತ್ಯ ಹೊರಗಡೆ ಬರಲಿ ಎಂದಿದ್ದಾರೆ. ಇದನ್ನೂ ಓದಿ: ಗಿರೀಶ್ ಮಟ್ಟಣ್ಣನವರ್ ಚಿತ್ರಕಥೆ, ಸಮೀರ್ ಸ್ಕ್ರೀನ್‌ಪ್ಲೇಗೆ ಬಲಿಯಾದ್ರಾ ಸುಜಾತ ಭಟ್?

  • ನನ್ನನ್ನು ಕಾರಲ್ಲಿ ಕೂಡಿ ಹಾಕಿ ಹೇಳಿಕೆ ಪಡೆದ್ರು – ಹೊಸ ಕಥೆ ಕಟ್ಟಿದ ಸುಜಾತ ಭಟ್!‌

    ನನ್ನನ್ನು ಕಾರಲ್ಲಿ ಕೂಡಿ ಹಾಕಿ ಹೇಳಿಕೆ ಪಡೆದ್ರು – ಹೊಸ ಕಥೆ ಕಟ್ಟಿದ ಸುಜಾತ ಭಟ್!‌

    ಮಂಗಳೂರು: ನನ್ನನ್ನು ಕಾರಲ್ಲಿ ಕೂಡಿ ಹಾಕಿ ಹೇಳಿಕೆ ಪಡೆದ್ರು ಎಂದು ಸುಜಾತ ಭಟ್ ಹೊಸ ಕಥೆ ಕಟ್ಟಿದ್ದಾಳೆ. ಇಂತವರ ಹೆಸರು ಹೇಳಿ ಅಂತ ಲಾಯರ್ ಒಬ್ಬರು ಒತ್ತಾಯ ಮಾಡಿದ್ರೂ ಎಂದಿದ್ದಾಳೆ.

    ತಿಮರೋಡಿ, ಮಟ್ಟಣ್ಣನವರ್ ಹೆಸರು ಹೇಳೋಕೆ ಹೇಳಿದ್ರು. ನಾವು ಬಚಾವ್ ಮಾಡ್ತಿವಿ ಅಂತ ಹೇಳಿದ್ರು. ಆದ್ರೆ, ಅನನ್ಯ ಭಟ್ ನನ್ನ ಮಗಳೇ, ನಾನು ಎಲ್ಲಾವನ್ನೂ ಎಸ್‌ಐಟಿ ಮುಂದೆ ಹೇಳ್ತೇನೆ. ಆಸ್ತಿ ವಿವಾದ ಇದೆ, ಹಾಗಾಂತ ಇದಕ್ಕೆ ನಾನು ಅದನ್ನ ತರಲ್ಲ. ಸಹಾಯ ಮಾಡ್ತೇನೆ ಅಂತ ಹೇಳಿದ್ರು, ಅದಕ್ಕೆ ಹಾಗಂದೆ ಎಂದಿದ್ದಾಳೆ. ಇದನ್ನೂ ಓದಿ: ನನಗೆ ಅನನ್ಯಾ ಭಟ್ ಅಂತ ಮಗಳಿರೋದು ಸತ್ಯ – ಕ್ಷಣಕ್ಕೊಂದು ದ್ವಂದ್ವ ಹೇಳಿಕೆ ನೀಡ್ತಿರೋ ಸುಜಾತ ಭಟ್

    ಸಂದರ್ಶನವೊಂದರಲ್ಲಿ ಆಸ್ತಿಗಾಗಿ ಅನನ್ಯಾ ಭಟ್‌ ಎಂಬ ಸುಳ್ಳು ಕಥೆ ಕಟ್ಟಿದೆ ಎಂದಿದ್ದಳು. ನನಗೆ ಹೀಗೆ ಸುಳ್ಳು ಹೇಳು ಎಂದು ಕೆಲವರು ಹೇಳಿ ಕೊಟ್ಟಿದ್ದರು. ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ ಇನ್ನಿತರರು ಹೇಳಿದ್ದರು. ಆಸ್ತಿ ಸಮಸ್ಯೆಯಿಂದ ಹೀಗೆ ಹೇಳಿದ್ದೆ. ಅದಕ್ಕೆ ನಾನು ಹೇಳಿಬಿಟ್ಟೆ ಎಂದು ಒಪ್ಪಿಕೊಂಡಿದ್ದಳು.

    ನಾನು ಟೆನ್ಷನ್‌ನಲ್ಲಿ ಇರುತ್ತೇನೆ. ನನ್ನ ಮಗಳು ಇದ್ದಳು, ಬಲವಂತ ಮಾಡಿಸಿ ಸುಳ್ಳು ಹೇಳಿಕೆ ಪಡೆದಿದ್ದಾರೆ. ಅದಕ್ಕೆ ನಾನು ಹಾಗಂದೆ ಎಂದಿದ್ದಾಳೆ. ಇದನ್ನೂ ಓದಿ: ಆಸ್ತಿಗೋಸ್ಕರ ಅನನ್ಯಾ ಭಟ್ ಕತೆ ಕಟ್ಟಿದ್ದೇನೆ – ತಪ್ಪೊಪ್ಪಿಕೊಂಡ ಸುಜಾತ ಭಟ್‌

  • ಆಸ್ತಿಗೋಸ್ಕರ ಅನನ್ಯಾ ಭಟ್ ಕತೆ ಕಟ್ಟಿದ್ದೇನೆ  –  ತಪ್ಪೊಪ್ಪಿಕೊಂಡ ಸುಜಾತ ಭಟ್‌

    ಆಸ್ತಿಗೋಸ್ಕರ ಅನನ್ಯಾ ಭಟ್ ಕತೆ ಕಟ್ಟಿದ್ದೇನೆ – ತಪ್ಪೊಪ್ಪಿಕೊಂಡ ಸುಜಾತ ಭಟ್‌

    ಮಂಗಳೂರು: ಧರ್ಮಸ್ಥಳದಲ್ಲಿ (Dharmasthala) ಭಾರೀ ಸಂಚಲನ ಸೃಷ್ಟಿಸಿದ್ದ ಅನನ್ಯಾ ಭಟ್‌ (Ananya Bhat) ನಾಪತ್ತೆ ಪ್ರಕರಣ ಇದೀಗ ಸುಳ್ಳು ಎಂದು ಗೊತ್ತಾಗಿದೆ. ಆಸ್ತಿಗಾಗಿ ಇಂತಹ ಸುಳ್ಳು ಕತೆ ಕಟ್ಟಿದೆ ಎಂದು ಸುಜಾತ ಭಟ್‌ (Sujatha Bhat) ಹೇಳಿಕೊಂಡಿದ್ದಾಳೆ.

    ನನಗೆ ಹೀಗೆ ಸುಳ್ಳು ಹೇಳು ಎಂದು ಕೆಲವರು ಹೇಳಿ ಕೊಟ್ಟರು ಎಂದು ಸಂದರ್ಶನವೊಂದರಲ್ಲಿ ಸುಜಾತ ಬಾಯ್ಬಿಟ್ಟಿದ್ದಾಳೆ. ಅನನ್ಯಾ ಭಟ್​ ಅಂತ ನನಗೆ ಮಗಳೇ ಇರಲಿಲ್ಲ. ಇಷ್ಟು ದಿನ ನಾನು ಸುಳ್ಳು ಹೇಳಿದ್ದೇನೆ. ಕೆಲವರು ನನಗೆ ಹೀಗೆ ಸುಳ್ಳು ಹೇಳು ಅಂತ ಹೇಳಿದ್ದರು ಅದಕ್ಕೆ ನಾನು ಹೇಳಿದ್ದೇನೆ ಎಂದಿದ್ದಾಳೆ. ಇದನ್ನೂ ಓದಿ: ನನಗೆ ಅನನ್ಯಾ ಭಟ್‌ ಅನ್ನೋ ಮಗಳೇ ಇರಲಿಲ್ಲ – ಉಲ್ಟಾ ಹೊಡೆದ ಸುಜಾತ ಭಟ್‌

    ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ ಇನ್ನಿತರರು ಹೇಳಿದ್ದರು. ಆಸ್ತಿ ಸಮಸ್ಯೆಯಿಂದ ಹೀಗೆ ಹೇಳು ಅಂತ ಅವರೆಲ್ಲಾ ಹೇಳಿದ್ದರು. ಅದಕ್ಕೆ ನಾನು ಹೇಳಿಬಿಟ್ಟೆ ಎಂದು ಒಪ್ಪಿಕೊಂಡಿದ್ದಾಳೆ.

    ನಾನು ದುಡ್ಡಿಗೊಸ್ಕರ ಡಿಮ್ಯಾಂಡ್ ಮಾಡಿಲ್ಲ. ನಾನು ಯಾರು ಕೂಡ ದುಡ್ಡು ಕೊಡ್ತೀನಿ ಅಂತ ಹೇಳಲಿಲ್ಲ. ನಮ್ಮ ಆಸ್ತಿ ಜೈನರಿಗೆ ಕೊಟ್ಟಿದ್ದರು. ಆದ್ರೆ, ನನ್ನ ಸಹಿ ಇಲ್ಲದೇ ಆಸ್ತಿಯನ್ನು ಹೇಗೆ ಕೊಟ್ರಿ ಅಂತ ಕೇಳಿದೆ. ನನ್ನ ತಾತನ ಆಸ್ತಿ ಅದು ಮೊಮ್ಮಕ್ಕಳಿಗೆ ಸಿಗಬೇಕಿತ್ತು ಅಷ್ಟೇ, ಅದಕ್ಕೆ ಹೀಗೆ ಮಾಡಿದ್ದೇನೆ ಎಂದಿದ್ದಾಳೆ.

    ನಾನು ಜನರ ಭಾವನೆಗಳ ಜೊತೆಗೆ ಆಟ ಆಡಿಲ್ಲ. ಅವರೆಲ್ಲಾ ಸೇರಿಕೊಂಡು ಪ್ರಚೋದಿಸುವಂತೆ ಮಾಡಿದ್ದರು. ಅನನ್ಯಾ ಭಟ್​ ಅನ್ನೋದೇ ಸುಳ್ಳು. ಧರ್ಮಸ್ಥಳ ದೇವರಿಗೆ ನಾನು ಧಕ್ಕೆ ತಂದಿಲ್ಲ. ನಾನು ಕೇಳುತ್ತಿರುವುದು ನನ್ನ ಆಸ್ತಿ ಅಷ್ಟೇ. ಆಸ್ತಿಗೋಸ್ಕರ ಅನನ್ಯಾ ಭಟ್​ ಕಥೆ ಕಟ್ಟಿದ್ದೇನೆ ಎಂದು ಹೇಳಿದ್ದಾಳೆ. ಇದನ್ನೂ ಓದಿ: ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಒದ್ದು ಒಳಗೆ ಹಾಕಿದ್ದೀವಿ: ಡಿಕೆಶಿ

  • ನನಗೆ ಅನನ್ಯಾ ಭಟ್‌ ಅನ್ನೋ ಮಗಳೇ ಇರಲಿಲ್ಲ – ಉಲ್ಟಾ ಹೊಡೆದ ಸುಜಾತ ಭಟ್‌

    ನನಗೆ ಅನನ್ಯಾ ಭಟ್‌ ಅನ್ನೋ ಮಗಳೇ ಇರಲಿಲ್ಲ – ಉಲ್ಟಾ ಹೊಡೆದ ಸುಜಾತ ಭಟ್‌

    • ಗಿರೀಶ್ ಮಟ್ಟಣ್ಣನವರ್, ಜಯಂತ್ ಒತ್ತಾಯಕ್ಕೆ ಸುಳ್ಳು ಹೇಳ್ದೆ

    ಮಂಗಳೂರು: ಅನನ್ಯಾ ಭಟ್‌ ನಾಪತ್ತೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಧರ್ಮಸ್ಥಳದಲ್ಲಿ ಅನಾಮಿಕನ ದೂರು ಹಾಗೂ ಸುಜಾತ ಭಟ್ ದೂರು ಭಾರೀ ಸಂಚಲನ ಸೃಷ್ಟಿಸಿತ್ತು. ಇದೀಗ ಏಕಾಏಕಿ ಸುಜಾತ ಭಟ್ ಉಲ್ಟಾ ಹೊಡೆದಿದ್ದಾಳೆ. ‘ನಾನು ಸುಳ್ಳು ಹೇಳಿದ್ದೇನೆ’, ನನಗೆ ಹೀಗೆ ಸುಳ್ಳು ಹೇಳು ಎಂದು ಕೆಲವರು ಹೇಳಿ ಕೊಟ್ಟರು ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾಳೆ.

    ಸಂದರ್ಶನದಲ್ಲಿ ಅನನ್ಯಾ ಭಟ್​ ಅಂತ ನನಗೆ ಮಗಳೇ ಇರಲಿಲ್ಲ. ಇಷ್ಟು ದಿನ ನಾನು ಸುಳ್ಳು ಹೇಳಿದ್ದೇನೆ. ಕೆಲವರು ನನಗೆ ಹೀಗೆ ಸುಳ್ಳು ಹೇಳು ಅಂತ ಹೇಳಿದ್ದರು ಅದಕ್ಕೆ ನಾನು ಹೇಳಿದ್ದೇನೆ. ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ ಇನ್ನಿತರರು ಹೇಳಿದ್ದರು. ಆಸ್ತಿ ಸಮಸ್ಯೆಯಿಂದ ಹೀಗೆ ಹೇಳು ಅಂತ ಅವರೆಲ್ಲಾ ಹೇಳಿದ್ದರು. ಅದಕ್ಕೆ ನಾನು ಹೇಳಿಬಿಟ್ಟೆ ಎಂದು ಒಪ್ಪಿಕೊಂಡಿದ್ದಾಳೆ. ಇದನ್ನೂ ಓದಿ: Dharmasthala Case | ವಿಚಾರಣೆಗೆ ಹಾಜರಾಗುವಂತೆ ಸುಜಾತ ಭಟ್‌ಗೆ SIT ನೋಟಿಸ್

    ನಾನು ದುಡ್ಡಿಗೊಸ್ಕರ ಡಿಮ್ಯಾಂಡ್ ಮಾಡಿಲ್ಲ. ನಾನು ಯಾರು ಕೂಡ ದುಡ್ಡು ಕೊಡ್ತೀನಿ ಅಂತ ಹೇಳಲಿಲ್ಲ. ನಮ್ಮ ಆಸ್ತಿ ಜೈನರಿಗೆ ಕೊಟ್ಟಿದ್ದರು. ಆದ್ರೆ, ನನ್ನ ಸಹಿ ಇಲ್ಲದೇ ಆಸ್ತಿಯನ್ನು ಹೇಗೆ ಕೊಟ್ರಿ ಅಂತ ಕೇಳಿದೆ. ನನ್ನ ತಾತನ ಆಸ್ತಿ ಅದು ಮೊಮ್ಮಕ್ಕಳಿಗೆ ಸಿಗಬೇಕಿತ್ತು ಅಷ್ಟೇ ಅದಕ್ಕೆ ಹೀಗೆ ಮಾಡಿದ್ದೇನೆ ಎಂದಿದ್ದಾಳೆ.

    ನಾನು ಜನರ ಭಾವನೆಗಳ ಜೊತೆಗೆ ಆಟ ಆಡಿಲ್ಲ. ಅವರೆಲ್ಲಾ ಸೇರಿಕೊಂಡು ಪ್ರಚೋದಿಸುವಂತೆ ಮಾಡಿದ್ದರು. ಅನನ್ಯಾ ಭಟ್​ ಅನ್ನೋದೇ ಸುಳ್ಳು. ಧರ್ಮಸ್ಥಳ ದೇವರಿಗೆ ನಾನು ಧಕ್ಕೆ ತಂದಿಲ್ಲ. ನಾನು ಕೇಳುತ್ತಿರುವುದು ನನ್ನ ಆಸ್ತಿ ಅಷ್ಟೇ. ಆಸ್ತಿಗೋಸ್ಕರ ಅನನ್ಯಾ ಭಟ್​ ಕಥೆ ಕಟ್ಟಿದ್ದೇನೆ ಎಂದು ಹೇಳಿದ್ದಾಳೆ. ಇದನ್ನೂ ಓದಿ: ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಒದ್ದು ಒಳಗೆ ಹಾಕಿದ್ದೀವಿ: ಡಿಕೆಶಿ

  • Dharmasthala Case | ವಿಚಾರಣೆಗೆ ಹಾಜರಾಗುವಂತೆ ಸುಜಾತ ಭಟ್‌ಗೆ SIT ನೋಟಿಸ್

    Dharmasthala Case | ವಿಚಾರಣೆಗೆ ಹಾಜರಾಗುವಂತೆ ಸುಜಾತ ಭಟ್‌ಗೆ SIT ನೋಟಿಸ್

    ಮಂಗಳೂರು: ಸ್ನೇಹಿತರ ಜೊತೆ ಧರ್ಮಸ್ಥಳಕ್ಕೆ (Dharmasthala) ಹೋಗಿದ್ದ ನನ್ನ ಮಗಳು ಕಾಣೆಯಾಗಿದ್ದಳು ಅಂತ ಎಸ್‌ಐಟಿ ಮುಂದೆ ಹೇಳಿಕೆ ನೀಡಿದ್ದ ಸುಜಾತಾ ಭಟ್ ವಿಚಾರದಲ್ಲಿ ಒಂದೊಂದೇ ಸತ್ಯಗಳು ಹೊರ ಬರುತ್ತಿವೆ. ತಮ್ಮ ಮಗಳು ಅಂತ ಸುಜಾತಾ ಭಟ್ ಫೋಟೋ ರಿಲೀಸ್ ಮಾಡುತ್ತಿದ್ದಂತೆ ಸಾಕಷ್ಟು ಹಲ್‌ಚಲ್ ಎದ್ದಿದೆ. ಯಾರದ್ದೋ ಮನೆಯ ಸೊಸೆ ಫೋಟೋ ತೋರಿಸಿ ತಮ್ಮ ಮಗಳು ಎನ್ನುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ವಸಂತಾ ಎಂಬುವವರ ಸಹೋದರ ನನ್ನ ತಂಗಿ ಫೋಟೋ ಬಳಸಿಕೊಂಡಿದ್ದಾರೆ ಅಂತ ಆರೋಪ ಮಾಡಿದ್ರು. ಇದೀಗ ಅನನ್ಯಾ ಭಟ್‌ ಅವರ ಪೂರ್ವಾಪರ ಕೆದಕಲು ಎಸ್‌ಐಟಿ ತಂಡ ಮುಂದಾಗಿದೆ, ಈ ಬೆನ್ನಲ್ಲೇ ಸುಜಾತಾ ಭಟ್‌ಗೆ (Sujatha Bhat) ನೋಟಿಸ್‌ ನೀಡಿದೆ.

    ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ (Belthangady SIT office) ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ ಸುಜಾತಾ ಭಟ್‌ ಅವರಿಗೆ ನೋಟಿಸ್‌ ನೀಡಿದೆ. ಬೆಳ್ತಂಗಡಿ ಕಚೇರಿ ಸಿಬ್ಬಂದಿ ಬೆಂಗಳೂರಿಗೆ ಬಂದು ನೋಟಿಸ್‌ ಜಾರಿಮಾಡಿದ್ದಾರೆ. ನೋಟೀಸ್ ಸ್ವೀಕರಿಸಿ ಶೀಘ್ರದಲ್ಲೇ ವಿಚಾರಣೆಗೆ ಬರೋದಾಗಿ ಸುಜಾತ ಭಟ್ ತಿಳಿಸಿದ್ದಾರೆ. ಇದನ್ನೂ ಓದಿ: ಇನ್ನೊಂದು ವಾರದಲ್ಲಿ ಮನೆ ಖಾಲಿ ಮಾಡೋದಾಗಿ ಹೇಳಿದ್ದಾರಂತೆ ಸಮೀರ್‌

    ಪ್ರಕರಣದ ಪೂರ್ವಾಪರ ಕೆದಕಿದ ತನಿಖಾ ತಂಡ
    ಅನನ್ಯಾ ಭಟ್ ನಾಪತ್ತೆ ಆಗಿದ್ದಾರೆ ಅನ್ನೋ ವಿಚಾರದಲ್ಲಿ ಇದೀಗ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಪ್ರಕರಣದ ಬೆನ್ನುಹತ್ತಿರೋ ಎಸ್‌ಐಟಿ ತಂಡ ಪ್ರಕರಣದ ಪೂರ್ವಾಪರ ಕೆದಕಲು ಮುಂದಾಗಿದೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್‌- ಮೊದಲ ಬಾರಿಗೆ ಮೌನ ಮುರಿದ ಸಿಎಂ

    ಈಗಾಗಲೇ ಅನನ್ಯಾ ಭಟ್ ಅಸ್ತಿತ್ವದ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಶಿವಮೊಗ್ಗ, ಬೆಂಗಳೂರು, ಉಡುಪಿಯಲ್ಲಿ ದಾಖಲೆ ಸಂಗ್ರಹಿಸಿದೆ. ಈ ಮಾಹಿತಿಗಳ ಆಧಾರದಲ್ಲಿ ಸುಜಾತ್ ಭಟ್‌ರನ್ನ ವಿಚಾರಣೆ ನಡೆಸುವ ಸಾಧ್ಯತೆ ಇದ್ದು, ವಿಚಾರಣೆ ಬಳಿಕ ಸುಜಾತ ಭಟ್ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ಎಡಪಂಥೀಯರು ಸಿಎಂ ಮನೆಯಲ್ಲೇ ಸಭೆ ಮಾಡಿ SIT ತನಿಖೆ ಶುರು ಮಾಡಿಸಿದ್ದಾರೆ: ಆರ್‌. ಅಶೋಕ್‌ ಕಿಡಿ

  • ಧರ್ಮಸ್ಥಳ ಪ್ರಕರಣ – ಕೇಂದ್ರ ಮಧ್ಯಸ್ಥಿಕೆ ವಹಿಸುವಂತೆ ಅಮಿತ್ ಶಾಗೆ ಸ್ವಾಮೀಜಿಗಳಿಂದ ಪತ್ರ

    ಧರ್ಮಸ್ಥಳ ಪ್ರಕರಣ – ಕೇಂದ್ರ ಮಧ್ಯಸ್ಥಿಕೆ ವಹಿಸುವಂತೆ ಅಮಿತ್ ಶಾಗೆ ಸ್ವಾಮೀಜಿಗಳಿಂದ ಪತ್ರ

    ಬೆಂಗಳೂರು: ಧರ್ಮಸ್ಥಳ (Dharmasthala) ಪರ ಈಗ ಹಲವು ಸ್ವಾಮೀಜಿಗಳು ಬ್ಯಾಟಿಂಗ್ ಮಾಡುತ್ತಿದ್ದು, ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸುವಂತೆ ಆಗ್ರಹಿಸಿ ಅಮಿತ್ ಶಾಗೆ (Amit Shah) ಪತ್ರ ಬರೆದ್ದಾರೆ.

    ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಇದರಲ್ಲಿ ರಾಷ್ಟ್ರ ವಿರೋಧಿ ಕೈಗಳು ಕೆಲಸ ಮಾಡುತ್ತಿವೆ. ಇದಕ್ಕೆ ಕಡಿವಾಣ ಹಾಕುವ ಕೆಲಸ ಕೇಂದ್ರದಿಂದ ಆಗಬೇಕಿದೆ. ಕೂಡಲೇ ಕೇಂದ್ರ ಮಧ್ಯಪ್ರವೇಶ ಮಾಡಬೇಕು ಎಂದು ಪತ್ರದಲ್ಲಿ ಸ್ವಾಮೀಜಿಗಳು ಮನವಿ ಮಾಡಿದ್ದಾರೆ. ಲಿಂಗಾಯತ ಮಠ, ಜೈನಮಠ, ಬ್ರಾಹ್ಮಣ ಮಠ ಸೇರಿ ಹಲವು ಮಠಾಧೀಶರು ಗೃಹಸಚಿವ ಅಮಿತ್ ಶಾ ಅವರ ಭೇಟಿಗೆ ಅವಕಾಶ ಕೇಳಿದ್ದಾರೆ. ಧರ್ಮಸ್ಥಳದಲ್ಲಿ ಏನೆಲ್ಲ ನಡೆಯುತ್ತಿದೆ ಅನ್ನೋದನ್ನ ವಿವರಿಸಲು ಅವಕಾಶ ಕೋರಿ ಪತ್ರವನ್ನ ಬರೆದಿದ್ದಾರೆ. ಇದನ್ನೂ ಓದಿ: ಮೈಸೂರು ಸ್ಯಾಂಡಲ್ ಸೋಪ್‌ ಪ್ರಚಾರಕ್ಕೆ 48.88 ಕೋಟಿ – ತಮನ್ನಾಗೆ 6.20 ಕೋಟಿ, ಯಾರಿಗೆ ಎಷ್ಟು?

    ಧಾರವಾಡದ ಶ್ರೀ ನವಗ್ರಹ ತೀರ್ಥಕ್ಷೇತ್ರ ಸ್ವಸ್ತಿ ಶ್ರೀ ಧರ್ಮಸೇನಾ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳು ಧರ್ಮಸ್ಥಳ ವಿಚಾರವಾಗಿ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಇದೇ 28 ರಂದು ಬೆಂಗಳೂರಿನಲ್ಲಿ ಮದುವೆಯಾಗಲಿದ್ದಾರೆ ಅನುಶ್ರೀ

    ಪತ್ರದಲ್ಲೇನಿದೆ?
    ಧರ್ಮಸ್ಥಳದಲ್ಲಿ ನಡೆಯುತ್ತಿರುವ ಘಟನೆಗಳು ರಾಜ್ಯ ಸರ್ಕಾರ ರಚಿಸಿದ ವಿಶೇಷ ತನಿಖಾ ತಂಡದ ತನಿಖೆಗೆ ಸಂಬಂಧಿಸಿದ ಎಲ್ಲಾ ಗೊಂದಲಗಳ ಬಗ್ಗೆ ನಿಮಗೆ ತಿಳಿದಿರಬೇಕು. ಈ ಎಲ್ಲಾ ಘಟನೆಗಳು ರಾಷ್ಟ್ರ ವಿರೋಧಿಗಳು, ಎಡಪಂಥೀಯರು, ನಗರ ನಕ್ಸಲರು, ವಿದೇಶಿ ಶಕ್ತಿಗಳು ಒಟ್ಟಾಗಿ ಶ್ರೀ ಕ್ಷೇತ್ರದ ಧರ್ಮ ನಿಷ್ಠೆಯನ್ನ ಕೆಣಕಲು ಕೆಲಸ ಮಾಡುತ್ತಿರುವ ಆಳವಾದ ಪಿತೂರಿಯಿಂದ ಉಂಟಾಗಿವೆ ಎಂಬುದನ್ನ ಗಮನಿಸುವುದು ತುಂಬಾ ನೋವಿನ ಸಂಗತಿ. ನಿಮಗೆ ತಿಳಿದಿರುವಂತೆ, ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಧಾನ ದೇವರು ಮಂಜುನಾಥೇಶ್ವರ ನಮ್ಮ ಭಾರತದ ಹಲವಾರು ಕೋಟಿ ನಾಗರಿಕರ ನಂಬಿಕೆ ಮತ್ತು ನಂಬಿಕೆಯ ಮೂಲವಾಗಿದ್ದಾರೆ. ಶ್ರೀ ಕ್ಷೇತ್ರವನ್ನು ಕೆಣಕುವ ಯಾವುದೇ ಪ್ರಯತ್ನವು ಅತ್ಯಂತ ಖಂಡನೀಯ ಮತ್ತು ಅಸಹನೀಯ. ಇದನ್ನೂ ಓದಿ: ಕಾಂಗ್ರೆಸ್ ನಾಯಕಿ ಕುಸುಮಾ ಮನೆ ಮೇಲೆ ಇಡಿ ದಾಳಿ

    ನಮ್ಮ ಸಾಮೂಹಿಕ ಆತ್ಮಸಾಕ್ಷಿಯು ತೀವ್ರವಾಗಿ ಜರ್ಜರಿತವಾಗಿದೆ ಮತ್ತು ನಾವು ಅಂತ್ಯವಿಲ್ಲದ ನೋವನ್ನ ಅನುಭವಿಸುತ್ತಿದ್ದೇವೆ. ಈ ರಾಷ್ಟ್ರ ವಿರೋಧಿಗಳ ಈ ಅತ್ಯಂತ ಖಂಡನೀಯ ಕೃತ್ಯವು ಖಂಡಿತವಾಗಿಯೂ ಈ ದೇಶದ ಸಾಮಾಜಿಕ ಮತ್ತು ಆಧ್ಯಾತ್ಮಿಕ ರಚನೆಯನ್ನು ಆಸ್ಥಿರಗೊಳಿಸುವ ಉದ್ದೇಶ ಹೊಂದಿದೆ. ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡವು ನಮ್ಮ ಧರ್ಮ ಮತ್ತು ಅದರ ನಂಬಿಕೆಗಳನ್ನು ರಕ್ಷಿಸಲು ಸಾಕಷ್ಟು ಕೆಲಸ ಮಾಡುತ್ತಿಲ್ಲ ಎಂದು ನಾವು ನೋವಿನಿಂದ ಕಂಡುಕೊಂಡಿರುವುದರಿಂದ, ಈ ಶಕ್ತಿಗಳು ನಮ್ಮ ಮಹಾನ್ ಭಾರತಕ್ಕೆ ಯಾವುದೇ ಹಾನಿ ಮಾಡದಂತೆ ತಡೆಯುವುದು ನಮ್ಮ ಸಾಮೂಹಿಕ ಜವಾಬ್ದಾರಿ ಎಂದು ನಾವು ಪರಿಗಣಿಸುತ್ತೇವೆ.

    ಇದಕ್ಕೆ ಸಂಬಂಧಪಟ್ಟಂತೆ ಲಿಂಗಾಯತ, ಜೈನ, ಬ್ರಾಹ್ಮಣ ಮತ್ತು ಇತರೆ ಮಠಗಳು ಸೇರಿದಂತೆ ವಿವಿಧ ಧರ್ಮಗಳ ಹಲವಾರು ಮಠಾಧೀಶರ ನಿಯೋಗವು, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಲ್ಲಾ ಘಟನೆಗಳು ಮತ್ತು ಈ ರಾಷ್ಟ್ರ ವಿರೋಧಿ ಶಕ್ತಿಗಳು ಉಂಟು ಮಾಡುವ ನಿರಂತರ ಹಾನಿಯಿಂದ ದೇಶದ ಸಾಮಾಜಿಕ ರಚನೆಗೆ ಆಗಿರುವ ಹಾನಿಯ ಬಗ್ಗೆ ವೈಯಕ್ತಿಕವಾಗಿ ನಿಮಗೆ ತಿಳಿಸಲು ನಿಮ್ಮನ್ನ ಭೇಟಿ ಮಾಡಲು ಬಯಸಿದ್ದೇವೆ. ಈ ನೋವಿನ ಘಟನೆಗಳಲ್ಲಿ ತುರ್ತಾಗಿ ಮಧ್ಯ ಪ್ರವೇಶಿಸಿ, ಕೋಟ್ಯಂತರ ಭಕ್ತರ ಹಿತಾಸಕ್ತಿಗಳನ್ನ ರಕ್ಷಿಸುವಂತೆ ನಾವು ನಿಮ್ಮನ್ನ ವಿನಂತಿಸುತ್ತೇವೆ. ಆದ್ದರಿಂದ ಮೇಲೆ ತಿಳಿಸಿದ ವಿಷಯಗಳ ಕುರಿತು ಪ್ರತಿನಿಧಿಸಲು ಸ್ವಾಮೀಜಿಗಳು ಮತ್ತು ವಿವಿಧ ಮಠಗಳ ಮುಖ್ಯಸ್ಥರ ನಿಯೋಗಕ್ಕೆ ತುರ್ತು ಬೇಟಿಗೆ ಅನುಮತಿ ಒದಗಿಸುವಂತೆ ನಿಮ್ಮಲ್ಲಿ ವಿನಂತಿಸಲಾಗಿದೆ ಎಂದು ಪತ್ರದಲ್ಲಿ ಬರೆದಿದ್ದಾರೆ.

  • ಇನ್ನೊಂದು ವಾರದಲ್ಲಿ ಮನೆ ಖಾಲಿ ಮಾಡೋದಾಗಿ ಹೇಳಿದ್ದಾರಂತೆ ಸಮೀರ್‌

    ಇನ್ನೊಂದು ವಾರದಲ್ಲಿ ಮನೆ ಖಾಲಿ ಮಾಡೋದಾಗಿ ಹೇಳಿದ್ದಾರಂತೆ ಸಮೀರ್‌

    – ಮೊದಲು ಬಳಸುತ್ತಿದ್ದ ಸಿಮ್‌ ಕಾರ್ಡನ್ನ ಸೋದರ ಸಂಬಂಧಿಗೆ ಕೊಟಿದ್ರಾ ʻಧೂತʼ?

    ಬೆಂಗಳೂರು: ಧರ್ಮಸ್ಥಳದ (Dharmasthala) ಬಗ್ಗೆ ಅಪಪ್ರಚಾರ ಮಾಡಿದ ಆರೋಪದ ಮೇಲೆ ಯೂಟ್ಯೂಬರ್ ಎಂ.ಡಿ ಸಮೀರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದಾಗ ಹತ್ತು ಹಲವು ವಿಚಾರಗಳು ತನಿಖೆಯಿಂದ ಬಯಲಾಗಿದೆ.

    ಈ ನಡುವೆ ಯೂಟ್ಯೂಬರ್ ಎಂ.ಡಿ ಸಮೀರ್ (Sameer MD) ಮುಂದಿನ ಒಂದು ವಾರದ ಒಳಗಾಗಿ ವಾಸ ವಿರುವ ಮನೆ ಖಾಲಿ ಮಾಡಲು ಮಾಲೀಕರ ಅನುಮತಿ ಅನ್ನೋದು ಕಂಡುಬಂದಿದೆ. ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಪ್ಪದಲ್ಲಿ ಮೊದಲು ವಾಸವಿದ್ದ ಆರೋಪಿ ಸಮೀರ್ 4 ವರ್ಷದಿಂದ ಬನ್ನೇರುಘಟ್ಟ ಠಾಣಾ (Bannerghatta Police Station) ವ್ಯಾಪ್ತಿಯ ಮನೆಯಲ್ಲಿ ವಾಸವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಧರ್ಮಸ್ಥಳಕ್ಕೆ ಹೋಗಲು ಭಯವಿದೆ – ಪೊಲೀಸರ ಮುಂದೆ ಹಲವು ಬೇಡಿಕೆ ಇಟ್ಟ ಸಮೀರ್‌

    ಆರೋಪಿ ಸಮೀರ್ ಆರಂಭದಲ್ಲಿ ತಾನು ಬಳಸುತ್ತಿದ್ದ ಫೋನ್ ನಂಬರ್ ಸಿಮ್‌ ಕಾರ್ಡನ್ನ ಅವರ ಕಸಿನ್ ಸಿಸ್ಟರ್‌ಗೆ ಕೊಟ್ಡಿದ್ದಾನೆ. ಧರ್ಮಸ್ಥಳ ಪೊಲೀಸರು ಬೆನ್ನು ಬಿದ್ದಿದ್ದಾರೆಂಬ ವಿಚಾರ ತಿಳಿದ ಆರೋಪಿ ಸಮೀರ್ ತಾನು ಬಳಸುತ್ತಿದ್ದ ನಂಬರ್ ಕಸಿನ್‌ ಸಿಸ್ಟರ್‌ಗೆ ಕೊಟ್ಟು ತಲೆಮರಿಸಿಕೊಂಡು ಧರ್ಮಸ್ಥಳ ಪೊಲೀಸರ ಕೈಗೆ ಸಿಗದೆ ಓಡಾಡುತ್ತಿದ್ದ ಅನ್ನೋದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.

    ಸಮೀರ್ ಕಸಿನ್ ಬೆಂಗಳೂರಿನಲ್ಲಿದ್ದ ಲೊಕೆಷನ್‌ ಬೆಂಗಳೂರಿನಲ್ಲಿ ತೋರಿಸುತ್ತಿದ್ದರಿಂದ ಧರ್ಮಸ್ಥಳ ಪೊಲೀಸರು ನಿನ್ನೆ ಸಮೀರ್ ನನ್ನ ಹುಡುಕಿಕೊಂಡು ಬೆಂಗಳೂರಿಗೆ ಬಂದು ಮನೆ ಸರ್ಚ್ ಮಾಡಿ ಬರಿಗೈಯಲ್ಲಿ ಹೋಗಿದ್ದರು. ಇದನ್ನೂ ಓದಿ: ಸಮೀರ್‌ಗೆ ತಪ್ಪದ ಸಂಕಷ್ಟ – ಕಡೂರು ಠಾಣೆಯಲ್ಲಿ ಮತ್ತೊಂದು ದೂರು!

  • ಸಮೀರ್‌ಗೆ ತಪ್ಪದ ಸಂಕಷ್ಟ – ಕಡೂರು ಠಾಣೆಯಲ್ಲಿ ಮತ್ತೊಂದು ದೂರು!

    ಸಮೀರ್‌ಗೆ ತಪ್ಪದ ಸಂಕಷ್ಟ – ಕಡೂರು ಠಾಣೆಯಲ್ಲಿ ಮತ್ತೊಂದು ದೂರು!

    ಚಿಕ್ಕಮಗಳೂರು: ಯೂಟ್ಯೂಬರ್ ಎಂ.ಡಿ ಸಮೀರ್ (MD Sameer) ವಿರುದ್ಧ ವಿಶ್ವ ಹಿಂದೂ ಪರಿಷತ್ (VHP) ಸದಸ್ಯ ಮಂಜು ಜೈನ್ ಅವರು ಚಿಕ್ಕಮಗಳೂರಿನ ಕಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಯ ನೀಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ. ಧರ್ಮಸ್ಥಳದ (Dharmasthala) ಬಗ್ಗೆ ಅಪಪ್ರಚಾರ ಮಾಡಿ ನಮ್ಮ ಭಾವನೆಗೆ ಧಕ್ಕೆ ತಂದಿದ್ದಾರೆ. ಅವರ ಮೇಲೆ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಹೇಶ್‌ ಶೆಟ್ಟಿ ತಿಮರೋಡಿ ಜೈಲಿಗೆ – 14 ದಿನ ನ್ಯಾಯಾಂಗ ಬಂಧನ

    ಕಡೂರು ಪೊಲೀಸರು ಮಂಜು ಜೈನ್‌ರಿಂದ ದೂರು ಪಡೆದು ಉನ್ನತ ಅಧಿಕಾರಿಗಳ ನಿರ್ದೇಶನದಂತೆ ಮುಂದಿನ ಕ್ರಮಕ್ಕೆ ಕಡೂರು ಪೊಲೀಸರು ಮುಂದಾಗಲಿದ್ದಾರೆ. ಇದನ್ನೂ ಓದಿ: ಯೂಟ್ಯೂಬರ್‌ ಸಮೀರ್‌ಗೆ ಜಾಮೀನು ಮಂಜೂರು

    ಇನ್ನು ಜಿಲ್ಲೆಯ ಕಳಸ ಪಟ್ಟಣದಲ್ಲೂ ಜೈನ್ ಸಮುದಾಯ (Jain Community) ಬೃಹತ್ ಪ್ರತಿಭಟನೆ ನಡೆಸಿ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.

    ಚಿಕ್ಕಮಗಳೂರು ನಗರದಲ್ಲೂ ಕೂಡ 2000ಕ್ಕೂ ಹೆಚ್ಚು ಜನ ಧರ್ಮಸ್ಥಳದ ಬಗ್ಗೆ ಪ್ರತಿಭಟನೆ ನಡೆಸಿ ಹಿಂದೂ ಧರ್ಮದ ಮೇಲೆ ದಬ್ಬಾಳಿಕೆ ಮಾಡಿ ಧರ್ಮಸ್ಥಳವನ್ನ ಅವಹೇಳನ ಮಾಡುತ್ತಿರುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದರು. ಇದನ್ನೂ ಓದಿ: ಧರ್ಮಸ್ಥಳಕ್ಕೆ ಹೋಗಲು ಭಯವಿದೆ – ಪೊಲೀಸರ ಮುಂದೆ ಹಲವು ಬೇಡಿಕೆ ಇಟ್ಟ ಸಮೀರ್‌