Tag: Dharmendra Pradhan

  • ಹಿಜಬ್‌-ಕೇಸರಿ ಶಾಲು ವಿವಾದ – ಕೇಂದ್ರ ಶಿಕ್ಷಣ ಸಚಿವರ ಮಧ್ಯಪ್ರವೇಶಕ್ಕೆ ಒತ್ತಾಯ

    ಹಿಜಬ್‌-ಕೇಸರಿ ಶಾಲು ವಿವಾದ – ಕೇಂದ್ರ ಶಿಕ್ಷಣ ಸಚಿವರ ಮಧ್ಯಪ್ರವೇಶಕ್ಕೆ ಒತ್ತಾಯ

    ನವದೆಹಲಿ: ಕರ್ನಾಟಕದಲ್ಲಿ ತಲೆದೋರಿರುವ ದುರದೃಷ್ಟಕರ ಘಟನೆ ಹಿಜಬ್‌-ಕೇಸರಿ ಶಾಲು ವಿವಾದ ಕುರಿತು ಮಧ್ಯಪ್ರವೇಶಿಸಬೇಕು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರಿಗೆ ಕಮ್ಯುನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾ-ಮಾರ್ಕ್ಸಿಸ್ಟ್‌ ನಾಯಕ ಎಲಮರಮ್‌ ಕರೀಂ ಅವರು ಒತ್ತಾಯಿಸಿದ್ದಾರೆ.

    ಉಡುಪಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಬ್‌ ಧರಿಸಿದ್ದಕ್ಕಾಗಿ ತರಗತಿಗಳಿಗೆ ಹಾಜರಾಗುವ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಕೋಮು ಧ್ರುವೀಕರಣ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ಅನಗತ್ಯ ವಿವಾದ ಸೃಷ್ಟಿಸುತ್ತಿರುವುದನ್ನು ಗಮನಿಸಬಹುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಿಕ್ಷಣ ಸಂಸ್ಥೆಗಳಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಭಟನೆಗೆ ನಿಷೇಧ: ಕಮಲ್ ಪಂತ್

    ಈ ಬೆಳವಣಿಗೆ ಮುಸ್ಲಿಂ ಸಮುದಾಯದಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದೆ. ಇಲ್ಲಿಯವರೆಗೂ ಮುಸ್ಲಿಂ ಹುಡುಗಿಯರು ಯಾವುದೇ ಆಕ್ಷೇಪವಿಲ್ಲದೇ ತಲೆಗೆ ಹಿಜಬ್‌ ಧರಿಸುತ್ತಿದ್ದರು. ಅವರು ಸಾಮಾನ್ಯ ಸಮವಸ್ತ್ರ ನಿಯಮ ಅನುಸರಿಸುತ್ತಿಲ್ಲ ಎಂದು ಹೇಳಿ ಹಿಜಬ್‌ಗೆ ಅನುಮತಿಸುತ್ತಿಲ್ಲ ಎಂದು

    ಇಷ್ಟು ವರ್ಷಗಳಿಂದ ವಿದ್ಯಾರ್ಥಿನಿಯರು ಸಮವಸ್ತ್ರದ ಜೊತೆಗೆ ಹಿಜಾಬ್‌ ಧರಿಸುತ್ತಿದ್ದಾರೆ. ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಏಕರೂಪತೆ ಅನುಸರಿಸಲು ಶಿರಸ್ತ್ರಾಣದ ಬಣ್ಣವನ್ನು ಸಹ ಸೂಚಿಸಲಾಗಿದೆ. ಬೇರೆ ರೀತಿಯಲ್ಲಿ ಹೇಳುವುದಾದರೆ, ದಶಕಗಳವರೆಗೆ ಯಾವುದೇ ವಿವಾದಗಳಿಲ್ಲ. ಇದನ್ನು ಉದ್ದೇಶಪೂರ್ವಕವಾಗಿ ವಿಭಜನ್‌ ಮತ್ತು ಕೋಮು ಭಾವನೆಗಳನ್ನು ಕೆರಳಿಸಲು ತಯಾರಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಧರ್ಮ ಹೇಳಿದಂತೆ ಮೈತುಂಬ ಬಟ್ಟೆ ಹಾಕುವುದು ತಪ್ಪಾ: ರಾಯರೆಡ್ಡಿ ಪ್ರಶ್ನೆ

    ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಹಕ್ಕು ಪ್ರಾಥಮಿಕ ಕಾಳಜಿಯಾಗಿರಬೇಕು. ಜನರ ನಡುವೆ ದ್ವೇಷ ಮತ್ತು ವಿಭಜನೆಯನ್ನು ಹರಡುವ ಯಾವುದೇ ಕ್ರಮವನ್ನು ಕಠಿಣ ಕ್ರಮಗಳೊಂದಿಗೆ ವ್ಯವಹರಿಸಬೇಕು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿಮ್ಮ ಮಧ್ಯಪ್ರವೇಶ ಅವಶ್ಯಕ ಎಂದು ಕೇಂದ್ರ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿದ್ದಾರೆ.

  • ರಾಜ್ಯದಲ್ಲಿ ಇಂದಿನಿಂದ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ – ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಚಾಲನೆ

    ರಾಜ್ಯದಲ್ಲಿ ಇಂದಿನಿಂದ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ – ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಚಾಲನೆ

    ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಷ್ಠಾನಕ್ಕೆ ಕೇಂದ್ರ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಚಾಲನೆ ನೀಡಿದರು.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎನ್.ಇ.ಪಿ ಸಹಾಯವಾಣಿ, ಉನ್ನತ ಶಿಕ್ಷಣ ಅಂತರಾಷ್ಟೀಕರಣ , 2021- 22 ನೇ ಸಾಲಿಗೆ ಉನ್ನತ ಶಿಕ್ಷಣಕ್ಕೆ ಪ್ರವೇಶಾತಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಅಧ್ಯಕ್ಷ ಡಾ: ಕೆ.ಕಸ್ತೂರಿರಂಗನ್ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು.

    ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸಂಸದ ಪಿ.ಸಿ.ಮೋಹನ್, ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯ್ಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಇದನ್ನೂ ಓದಿ: ಆರು ಜಿಲ್ಲೆಗಳ ರಸ್ತೆಗೆ ದಿವಂಗತ ಕಲ್ಯಾಣ್ ಸಿಂಗ್ ಹೆಸರು

  • ಶ್ರವಣಬೆಳಗೊಳದಲ್ಲಿ ಜೈನ ಪ್ರವಾಸಿ ಸರ್ಕೀಟ್ ನಿರ್ಮಾಣ: ಯೋಗೇಶ್ವರ್

    ಶ್ರವಣಬೆಳಗೊಳದಲ್ಲಿ ಜೈನ ಪ್ರವಾಸಿ ಸರ್ಕೀಟ್ ನಿರ್ಮಾಣ: ಯೋಗೇಶ್ವರ್

    ಬೆಂಗಳೂರು: ಶ್ರವಣಬೆಳಗೊಳದಲ್ಲಿ ಜೈನ ಪ್ರವಾಸಿ ಸರ್ಕೀಟ್ ನಿರ್ಮಾಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.

    ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಒಡಿಶಾದಲ್ಲಿ ಕೋನಾರ್ಕ್ ಸೂರ್ಯ ದೇವಾಲಯದ ಇತಿಹಾಸ ಹೇಳುವ ಒಂದು ವಿನೂತನ ಪರಿಕಲ್ಪನೆಯನ್ನು ಪ್ರವಾಸಿಗರಿಗೆ ಒದಗಿಸಿದ್ದಾರೆ. ಪ್ರವಾಸಿಗರು ಸೂರ್ಯ ದೇವಾಲಯವನ್ನು ದರ್ಶನ ಮಾಡುವುದಕ್ಕೆ ಮುಂಚೆ ಅಲ್ಲಿ ನಿರ್ಮಾಣ ಮಾಡಿರುವ ಥಿಯೇಟರ್ ನಲ್ಲಿ ಸೂರ್ಯ ದೇವಾಲಯದ ಇತಿಹಾಸವನ್ನು ಚಲನಚಿತ್ರದ ಮೂಲಕ ತೋರಿಸಲಾಗುತ್ತದೆ. ನಂತರ, ಸೂರ್ಯ ದೇವಾಲಯ ದರ್ಶನ ಮಾಡಲಾಗುತ್ತದೆ. ಅದೇ ರೀತಿ ಜೈನ ಕಾಶಿ ಶ್ರವಣಬೆಳಗೊಳದಲ್ಲಿ ಇದೇ ಮಾದರಿಯಲ್ಲಿ ಬಾಹುಬಲಿಯ ಇತಿಹಾಸವನ್ನು ಹೇಳುವ ಒಂದು ಡಾಕ್ಯುಮೆಂಟರಿಯನ್ನು ನಿರ್ಮಾಣ ಮಾಡಿ ಅದನ್ನು ಥಿಯೇಟರ್‍ನಲ್ಲಿ ಪ್ರದರ್ಶಿಸಲಾಗುವುದು. ನಂತರ ಪ್ರವಾಸಿಗರು ಗೋಮಟೇಶ್ವರ ವೀಕ್ಷಣೆ ಮಾಡಲು ವ್ಯವಸ್ಥೆ ಕಲ್ಪಿಸಲಾಗುವುದು. ಈ ಮೂಲಕ ಪ್ರವಾಸಿಗರಿಗೆ ಬಾಹುಬಲಿಯ ಸಂಪೂರ್ಣ ಇತಿಹಾಸದ ಮಾಹಿತಿಯನ್ನು ನೀಡಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.

    ಮೈಸೂರು ವಸ್ತು ಪ್ರದರ್ಶನ ಕೇಂದ್ರದಲ್ಲಿ ಹೈಟೆಕ್ ಹಾಥ್ ವೇ ನಿರ್ಮಾಣ:
    ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಮೂಲಕ ಸಾಂಸ್ಕೃತಿಕ ನಗರಿ ಮೈಸೂರಿನ ದಸರಾ ವಸ್ತು ಪ್ರದರ್ಶನ ಮೈದಾನದಲ್ಲಿ ಅತ್ಯಾಧುನಿಕವಾದ ಕಲೆ, ಸಾಂಸ್ಕೃತಿ, ಜಾನಪದ ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಹಾಥ್ ವೇ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರವಾಸೋದ್ಯಮ ಸಚಿವ ಯೋಗೇಶ್ವರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ನಂದಿ ಬೆಟ್ಟಕ್ಕೆ ರೋಪ್ ವೇ: ಪ್ರವಾಸೋದ್ಯಮ ಇಲಾಖೆ ಸಭೆಯಲ್ಲಿ ನಿರ್ಧಾರ

    ಮೂರು ಹಂತಗಳಲ್ಲಿ ಈ ಬೃಹತ್ ಹಾಥ್ ವೇ ಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಅತೀ ಶೀಘ್ರದಲ್ಲಿ ಈ ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು ಕಾಮಗಾರಿಗೆ ಚಾಲನೆ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಂದಾಜು 100.00ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ.

    ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿಪಡಿಸಲು ಬಂಡವಾಳ ಆರ್ಕಷಿಸುವ ಸಂಬಂಧ THE INDIA EXPO-2023 ಬೃಹತ್ ಮೇಳವನ್ನು ಆಯೋಜಿಸಲು ಕಾರ್ಯೋನ್ಮಖರಾಗುವಂತೆ ಯೋಗೇಶ್ವರ್ ರವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರ ವಿಸ್ತರಣೆಗೆ ವಿಫುಲ ಅವಕಾಶಗಳಿವೆ. ಹೀಗಾಗಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚು ಉತ್ತೇಜನ ನೀಡಿ ದೇಶ ವಿದೇಶಗಳ ಪ್ರವಾಸಿಗರು ಆಗಮಿಸುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಅಂತರ್ ರಾಷ್ಟ್ರೀಯ ಪ್ರವಾಸಿ ಮೇಳವನ್ನು ಏರ್ಪಡಿಸುವ ಮೂಲಕ ಬಂಡವಾಳವನ್ನು ಆಕರ್ಷಿಸಬೇಕು ಎಂದರು.

    ಇದೇ ವೇಳೆ ONE IRIS ಕಂಪನಿಯವರು ಪ್ರವಾಸೋದ್ಯಮ ಮೇಳದ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಿದರು.

  • ಪೆಟ್ರೋಲ್‌, ಡೀಸೆಲ್‌ ತೆರಿಗೆ ಇಳಿಸಲ್ಲ – ಧರ್ಮೇಂದ್ರ ಪ್ರಧಾನ್‌

    ಪೆಟ್ರೋಲ್‌, ಡೀಸೆಲ್‌ ತೆರಿಗೆ ಇಳಿಸಲ್ಲ – ಧರ್ಮೇಂದ್ರ ಪ್ರಧಾನ್‌

    ನವದೆಹಲಿ: ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಸುವುದಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್‌ ಹೇಳಿದ್ದಾರೆ.

    ತೈಲಗಳ ಮೇಲಿರುವ ಅಬಕಾರಿ ಸುಂಕವನ್ನು ಕಡಿಮೆ ಮಾಡಲಾಗುತ್ತಾ ಎಂಬ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಕಳೆದ 300 ದಿನಗಳ ಪೈಕಿ 60 ದಿನಗಳ ಕಾಲ ಬೆಲೆ ಏರಿಕೆಯಾಗಿದೆ. ಹತ್ತಿರ ಹತ್ತಿರ 250 ದಿನಗಳ ಕಾಲ ನಾವು ಬೆಲೆಯನ್ನು ಏರಿಕೆ ಮಾಡಿಲ್ಲ, ಇಳಿಕೆಯೂ ಮಾಡಿಲ್ಲ ಎಂದು ಉತ್ತರಿಸಿದರು.

    ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಬೆಲೆ ಏರಿಕೆ ಮತ್ತು ಇಳಿಕೆ ಆಗುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳ ತೆರಿಗೆ ಮೂಲಕ ಸರ್ಕಾರಕ್ಕೆ ಸಂಪನ್ಮೂಲ ಬರುತ್ತದೆ. ಸಂಗ್ರಹಗೊಂಡ ತೆರಿಗೆಯನ್ನು ಅಭಿವೃದ್ಧಿ ಯೋಜನೆಗಳು, ಕಲ್ಯಾಣ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಮತ್ತೆ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ – ದರ ಹೆಚ್ಚಾಗುತ್ತಿರುವುದಕ್ಕೆ ಕಾರಣ ಏನು?

    ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆರಿಗೆ ಸಂಗ್ರಹದಲ್ಲಿ ಬಹಳ ಜಾಗರೂಕವಾಗಿದೆ. ಯಾಕೆಂದರೆ ಪ್ರತಿಯೊಬ್ಬರಿಗೂ ತಮ್ಮದೇ ಆದ ಅಭಿವೃದ್ಧಿ ಬದ್ಧತೆ ಇದೆ. ಈ ಕಾರಣಕ್ಕೆ ಈ ಮಾರ್ಗದಿಂದ ಕೆಲವು ಸಂಪನ್ಮೂಲಗಳು ಬೇಕಾಗುತ್ತದೆ. ಪೆಟ್ರೋಲಿಯಂ ಬೆಲೆ ತೆರಿಗೆ ಸಂಗ್ರಹವು ಗಣನೀಯ ಪ್ರಮಾಣದಲ್ಲಿ ರಾಜ್ಯ ಸರ್ಕಾರಗಳಿಗೆ ಸಂಗ್ರಹವಾಗುತ್ತದೆ ಎಂದು ಹೇಳಿದರು.

    ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ 2.50 ರೂ. ವ್ಯಾಟ್‌ ಕಡಿತ ಮಾಡುವಂತೆ ಕೇಂದ್ರ ಸರ್ಕಾರ ರಾಜ್ಯಗಳಲ್ಲಿ ಮನವಿ ಮಾಡಿಕೊಂಡಿದೆ ಎಂದು ತಿಳಿಸಿದರು.

    2018ರ ಅಕ್ಟೋಬರ್‌ 5 ರಂದು ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ 1.5 ರೂ ಅಬಕಾರಿ ಸುಂಕವನ್ನು ಕಡಿತಗಳಿಸಲಾಗಿದೆ. ಸಾರ್ವಜನಿಕ ತೈಲ ಕಂಪನಿಗಳು ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ತೈಲದ ಮೇಲೆ 1 ರೂ. ಅಬಕಾರಿ ಸುಂಕವನ್ನು ಕಡಿತ ಮಾಡಿದೆ ಎಂದು ಮಾಹಿತಿ ನೀಡಿದರು.

  • ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಆಸ್ಪತ್ರೆಗೆ ದಾಖಲು

    ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಆಸ್ಪತ್ರೆಗೆ ದಾಖಲು

    ನವದೆಹಲಿ: ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಈ ಸಂಬಂಧ ಮಂಗಳವಾರ ಸಂಜೆ ಟ್ವೀಟ್ ಮಾಡಿರುವ ಕೇಂದ್ರ ಸಚಿವರು, ನನಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ದೆಹಲಿ ಬಳಿಯ ಗುರುಗ್ರಾಮದ ಮೆಡಂತ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಆರೋಗ್ಯವಾಗಿರುವುದಾಗಿ ಅವರು ತಿಳಿಸಿದ್ದಾರೆ.

    ಭಾನುವಾರವಷ್ಟೇ ಗೃಹ ಸಚಿವ ಅಮಿತ್ ಶಾ ಅವರು ಕೊರೊನಾ ಪಾಸಿಟಿವ್ ಬಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಧರ್ಮೆಂದ್ರ ಪ್ರಧಾನ್ ಅವರಿಗೂ ಕೋವಿಡ್ 19 ದೃಢವಾಗಿದ್ದು, ಈ ಮೂಲಕ ಕೇಂದ್ರದ ಇಬ್ಬರು ಸಚಿವರಿಗೆ ಮಹಾಮಾರಿ ಕೊರೊನಾ ಒಕ್ಕರಿಸಿಕೊಂಡಿದೆ.

    ಶಾ ಅವರಿಗೆ ಕೊರೊನಾ ಬಂದಿರುವುದು ದೃಢವಾದ ಬಳಿಕ ಬುಧವಾರ ಕ್ಯಾಬಿನೆಟ್ ಸಭೆ ನಡೆದಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಪಸ್ಥಿತರಿದ್ದರು. ಈ ಹಿನ್ನೆಲೆಯಲ್ಲಿ ಸಭೆಗೆ ಭಾಗವಹಿಸಿದ ಎಲ್ಲರನ್ನೂ ಕೋವಿಡ್ 19 ಟೆಸ್ಟ್ ಮಾಡಿಕೊಳ್ಳುವಂತೆ ತಿಳಿಸಲಾಗಿತ್ತು. ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ವರದಿ ನೆಗೆಟಿವ್ ಎಂದು ಬಂದಿದ್ದು, ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಸ್ವತಃ ತಾವೇ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.

    ಸಭೆಯಲ್ಲಿ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ಮೋದಿ ಅಧಿಕೃತ ನಿವಾಸದಲ್ಲಿ ಎಲ್ಲಾ ಕ್ಯಾಬಿನೆಟ್ ಸಭೆಗಳು ಕೂಡ ಕಟ್ಟುನಿಟ್ಟಾದ ಕೊರೊನಾ ನಿಯಮದಂತೆ ನಡೆಯುತ್ತವೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆದರೆ ಈ ಸಭೆಯಲ್ಲಿ ಧರ್ಮೇಂದ್ರ ಪ್ರಧಾನ್ ಅವರು ಭಾಗವಹಿಸಿರಲಿಲ್ಲ. ಆದರೆ ಸಭೆಯ ಬಳಿಕ ಅವರು ಗೃಹ ಸಚಿವರನ್ನು ಭೇಟಿಯಾಗಿದ್ದರು ಎನ್ನಲಾಗಿದೆ.

    ಅಮಿತ್ ಶಾ, ಪ್ರಧಾನ್ ಅಲ್ಲದೆ ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ, ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರಿಗೂ ಕೊರೊನಾ ದೃಢವಾಗಿದೆ.

  • ವಿಐಎಸ್‍ಎಲ್ ಕಾರ್ಖಾನೆ ಪುನಶ್ಚೇತನಗೊಳಿಸಿ- ಕೇಂದ್ರ ಸಚಿವರಿಗೆ ಬಿಎಸ್‍ವೈ ಮನವಿ

    ವಿಐಎಸ್‍ಎಲ್ ಕಾರ್ಖಾನೆ ಪುನಶ್ಚೇತನಗೊಳಿಸಿ- ಕೇಂದ್ರ ಸಚಿವರಿಗೆ ಬಿಎಸ್‍ವೈ ಮನವಿ

    ನವದೆಹಲಿ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಭದ್ರಾವತಿ ಜನರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಹೀಗಾಗಿ ಬಂಡವಾಳ ಹಿಂತೆಗೆಯುವುದನ್ನು ಕೈ ಬಿಟ್ಟು ಕಾರ್ಖಾನೆ ಪುನಶ್ಚೇತನಕ್ಕೆ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಅವರಿಗೆ ಮನವಿ ಮಾಡಿದ್ದಾರೆ.

    ನವದೆಹಲಿಯಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ ಅವರನ್ನು ಸಿಎಂ ಯಡಿಯೂರಪ್ಪ ಭೇಟಿಯಾದರು. ಈ ವೇಳೆ ವಿಐಎಸ್‍ಎಲ್ ಬಂಡಾವಳ ಹಿಂತೆಗೆತ ಪ್ರಕ್ರಿಯೆಯನ್ನು ನಿಲ್ಲಿಸುವಂತೆ ಮನವಿ ಮಾಡಿಕೊಂಡರು.

    ವಿಐಎಸ್‍ಎಲ್ ಬಗ್ಗೆ ಶಿವಮೊಗ್ಗ ಮತ್ತು ಭದ್ರಾವತಿ ಭಾಗದ ಜನತೆಗೆ ಭಾವನಾತ್ಮಕ ಸಂಬಂಧವಿದೆ. ನೀತಿ ಆಯೋಗದ ಸಲಹೆಯಂತೆ ಬಂಡಾವಳ ಹಿಂತೆಗೆತಕ್ಕೆ ಚಾಲನೆ ನೀಡಲಾಗಿದೆ. ಆದರೆ ಈವರೆಗೂ ಯಾವುದೇ ಖಾಸಗಿ ಕಂಪನಿ ಬಂಡವಾಳ ಹೂಡಿಕೆಗೆ ಒಲವು ತೋರಿಲ್ಲ. ವಿಐಎಸ್‍ಎಲ್ ಉತ್ಪಾದಿಸುವ ಉಕ್ಕು ಉತ್ಕೃಷ್ಟ ಗುಣಮಟ್ಟದ ಕಬ್ಬಿಣವಾಗಿದ್ದು ದೇಶದಲ್ಲಿಯೇ ಹೆಸುರುವಾಸಿಯಾಗಿದೆ. ಹೀಗಾಗಿ ಬಂಡವಾಳ ಹಿಂತೆಗೆತವನ್ನು ಕೈಬಿಟ್ಟು ಕಾರ್ಖಾನೆ ಪುನಶ್ಚೇತನಕ್ಕೆ ಆದ್ಯತೆ ನೀಡಬೇಕು ಎಂದು ಸಿಎಂ ಕೇಳಿಕೊಂಡರು.

    ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಅವರ ಭೇಟಿಯ ವೇಳೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.

  • ಭಾರತ್ ಮಾತಾ ಕೀ ಜೈ ಎಂದವರಿಗೆ ಮಾತ್ರ ಭಾರತದಲ್ಲಿರಲು ಅವಕಾಶ – ಧರ್ಮೇಂದ್ರ ಪ್ರಧಾನ್

    ಭಾರತ್ ಮಾತಾ ಕೀ ಜೈ ಎಂದವರಿಗೆ ಮಾತ್ರ ಭಾರತದಲ್ಲಿರಲು ಅವಕಾಶ – ಧರ್ಮೇಂದ್ರ ಪ್ರಧಾನ್

    ಮುಂಬೈ: ಭಾರತ್ ಮಾತಾ ಕೀ ಜೈ ಎಂದವರಿಗೆ ಮಾತ್ರ ಭಾರತದಲ್ಲಿರಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

    ಪುಣೆಯಲ್ಲಿ ನಡೆದ ಎಬಿವಿಪಿಯ 54ನೇ ರಾಜ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಭಗತ್ ಸಿಂಗ್ ಹಾಗೂ ನೇತಾಜಿ ಸುಭಾಷ್ ಚಂದ್ರ ಭೋಸ್ ಅವರು ದೇಶಕ್ಕಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿಲ್ಲ ಎಂದು ಭಾವಿಸಿ ಕೆಲವರು ಭಾರತವನ್ನು ಧರ್ಮಶಾಲೆ ಮಾಡಲು ಹೊರಟಿದ್ದಾರೆ. ಇದರಿಂದ ಭಗತ್ ಸಿಂಗ್, ಸುಭಾಷ್ ಚಂದ್ರ ಭೋಸ್ ಅವರ ತ್ಯಾಗ ವ್ಯರ್ಥವಾಗುವುದಿಲ್ಲವೇ? ಅವರು ಏಕೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು ಎಂದು ನಾವು ನೆನೆಯಬೇಕಿದೆ. ಅಂದರೆ ನಾವು ಭಾರತವನ್ನು ಧರ್ಮಶಾಲೆಯನ್ನಾಗಿ ಪರಿವರ್ತಿಸಲು ಹೊರಟಿದ್ದೇವೆಯೇ ಎಂದು ಪ್ರಶ್ನಿಸಿದ್ದಾರೆ.

    ಯಾರು ಬರುತ್ತಾರೋ ಬಂದು ಇಲ್ಲಿ ನೆಲೆಸಲಿ. ಈ ಕುರಿತು ನಾವು ಸವಾಲು ಸ್ವೀಕರಿಸಲು ಸಿದ್ಧರಿದ್ದೇವೆ. ಆದರೆ ಭಾರತದಲ್ಲಿ ಇರಲು ಬಯಸುವವರು ಭಾರತ್ ಮಾತಾ ಕೀ ಜೈ ಎಂದು ಹೇಳುವುದನ್ನು ಕಡ್ಡಾಯಗೊಳಿಸಬೇಕಿದೆ. ನಾವಿದನ್ನು ಸ್ಪಷ್ಟಪಡಿಸಬೇಕು, ಅಂತಹವರಿಗೆ ಮಾತ್ರ ಭಾರತದಕಲ್ಲಿರಲು ಅವಕಾಶ ನೀಡಬೇಕಿದೆ ಎಂದು ತಿಳಿಸಿದ್ದಾರೆ.

    ಎನ್‍ಆರ್ ಸಿ ಹಾಗೂ ಸಿಎಎ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ್ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಧಾರ್ಮಿಕತೆ ಆಧಾರದ ಮೇಲೆ ಪೌರತ್ವ ನೀಡುವ ಕಾನೂನನ್ನು ಹಿಂಪಡೆಯಬೇಕೆಂದು ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ.

  • 70 ರೂ. ಪೆಟ್ರೋಲ್ ನಲ್ಲಿ ಯಾರಿಗೆ ಎಷ್ಟು ಪಾಲು? ಬೇರೆ ರಾಷ್ಟ್ರಗಳಲ್ಲಿ ಎಷ್ಟು ದರವಿದೆ?

    70 ರೂ. ಪೆಟ್ರೋಲ್ ನಲ್ಲಿ ಯಾರಿಗೆ ಎಷ್ಟು ಪಾಲು? ಬೇರೆ ರಾಷ್ಟ್ರಗಳಲ್ಲಿ ಎಷ್ಟು ದರವಿದೆ?

    ನವದೆಹಲಿ: ದೀಪಾವಳಿ ಹಬ್ಬದ ವೇಳೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

    ಅಮೆರಿಕದಲ್ಲಿ ಚಂಡಮಾರುತದಿಂದಾಗಿ ತೈಲ ಉತ್ಪಾದನೆ ಕಡಿಮೆಯಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗಿತ್ತು. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಸುಧಾರಣೆ ಕಾಣಲಿದ್ದು ದೀಪಾವಳಿ ವೇಳೆಗೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎಂದು ಅವರು ತಿಳಿಸಿದರು.

    ಜಿಎಸ್‍ಟಿ ವ್ಯಾಪ್ತಿಗೆ ತಂದರೆ ತೈಲ ಕಂಪೆನಿಗಳಿಗೆ ಲಾಭವಾಗಲಿದೆ ಎನ್ನುವ ಆರೋಪವನ್ನು ತಳ್ಳಿ ಹಾಕಿದ ಅವರು ಜಿಎಸ್‍ಟಿ ಅಡಿ ತೈಲಗಳು ಬಂದರೆ ಗ್ರಾಹಕರಿಗೆ ಲಾಭ ಆಗಲಿದೆ ಎಂದರು.

    ಪೆಟ್ರೋಲ್ ಬೆಲೆಯಲ್ಲಿ ಯಾರಿಗೆ ಎಷ್ಟು ಪಾಲು?
    ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ ಸೆಪ್ಟೆಂಬರ್ 13 ರಂದು 70.38 ರೂ. ಇತ್ತು. ಇದರಲ್ಲಿ 30.70 ರೂ. ಡೀಲರ್ ಶುಲ್ಕ, 21.48 ರೂ. ಅಬಕಾರಿ ಸುಂಕ 3.24 ರೂ. ಡೀಲರ್ ಕಮಿಷನ್, 14.96 ರೂ. ವ್ಯಾಟ್ ತೆರಿಗೆ ಇದೆ.

    ಡೀಸೆಲ್ ಬೆಲೆಯಲ್ಲಿ ಯಾರಿಗೆ ಎಷ್ಟು ಪಾಲು?
    ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಗೆ ಸೆಪ್ಟೆಂಬರ್ 13 ರಂದು 58.72 ರೂ.ಇತ್ತು. ಇದರಲ್ಲಿ 30.54 ರೂ. ಡೀಲರ್ ಶುಲ್ಕ, 17.33 ರೂ. ಅಬಕಾರಿ ಸುಂಕ 2.18 ರೂ. ಡೀಲರ್ ಕಮಿಷನ್, 8.67 ರೂ. ವ್ಯಾಟ್ ತೆರಿಗೆ ಇದೆ.

    ಬೇರೆ ದೇಶಗಳಲ್ಲಿ ಪೆಟ್ರೋಲ್, ಡೀಸೆಲ್, ಎಲ್‍ಪಿಜಿ ದರ ಎಷ್ಟಿದೆ?
    ಪೆಟ್ರೋಲ್: ಭಾರತ(ದೆಹಲಿ) 70.38 ರೂ., ಪಾಕಿಸ್ತಾನ 40.82 ರೂ., ಬಾಂಗ್ಲಾದೇಶ 69.16 ರೂ., ಶ್ರೀಲಂಕಾ 49.80 ರೂ., ನೇಪಾಳ 61.88 ರೂ. ಇದೆ.

    ಡೀಸೆಲ್: ಭಾರತ(ದೆಹಲಿ)58.72 ರೂ., ಪಾಕಿಸ್ತಾನ 47.15 ರೂ., ಬಾಂಗ್ಲಾದೇಶ 52.27 ರೂ., ಶ್ರೀಲಂಕಾ 40.43 ರೂ., ನೇಪಾಳ 46.72 ರೂ. ಇದೆ.

    14.2 ಕೆಜಿ ತೂಕದ ಎಲ್‍ಪಿಜಿ ಸಿಲಿಂಡರ್: ಭಾರತ 487 ರೂ., ಪಾಕಿಸ್ತಾನ 1081.32 ರೂ., ಬಾಂಗ್ಲಾದೇಶ 639.50 ರೂ., ಶ್ರೀಲಂಕಾ 638.68 ರೂ., ನೇಪಾಳ 836.62 ರೂ. ಇದೆ.

    ಪೆಟ್ರೋಲ್ ಜಿಎಸ್‍ಟಿ ಅಡಿ ಬರುತ್ತಾ?
    ಅಡುಗೆ ಅನಿಲ (ಎಲ್‍ಪಿಜಿ), ಸೀಮೆಎಣ್ಣೆ, ನಾಫ್ತಾ ಗಳಿಗೆ ಜಿಎಸ್‍ಟಿ ಅನ್ವಯವಾಗುತ್ತಿದೆ. ಆದರೆ ಡೀಸೆಲ್, ಪೆಟ್ರೋಲ್, ನೈಸರ್ಗಿಕ ಅನಿಲ, ಕಚ್ಚಾ ತೈಲ ಮತ್ತು ವಿಮಾನ ಇಂಧನವನ್ನು ಸದ್ಯಕ್ಕೆ ಜಿಎಸ್‍ಟಿಯಿಂದ ಹೊರಗೆ ಇಡಲಾಗಿದೆ. ರಾಜ್ಯ ಸರ್ಕಾರಗಳು ಮದ್ಯ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರವನ್ನು ಬಿಟ್ಟುಕೊಡಲು ಮುಂದಾಗದ ಹಿನ್ನೆಲೆಯಲ್ಲಿ ಇವುಗಳು ಜಿಎಸ್‍ಟಿ ವ್ಯಾಪ್ತಿಗೆ ಸೇರ್ಪಡೆಯಾಗಿಲ್ಲ.

    ಒಂದು ವೇಳೆ ಪೆಟ್ರೋಲ್ ಜಿಎಸ್‍ಟಿ ಅಡಿ ಬಂದರೆ ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಇಳಿಕೆಯಾಗುತ್ತದೆ. ಆದರೆ ಆದಾಯಕ್ಕೆ ಭಾರೀ ಹೊಡೆತ ಬೀಳುವ ಕಾರಣ ಜಿಎಸ್‍ಟಿ ವ್ಯಾಪ್ತಿಗೆ ಸೇರಿಸಲು ರಾಜ್ಯ ಸರ್ಕಾರಗಳು ಒಪ್ಪಿಗೆ ನೀಡಿಲ್ಲ.

    ಬೆಲೆ ಕಡಿಮೆಯಾಗಬಾರದು:
    ಪೆಟ್ರೋಲ್ ಬೆಲೆ ಕಡಿಮೆಯಾಗಬಾರದು ಎನ್ನುವ ವಾದವನ್ನು ಕೆಲವರು ಮಂಡಿಸುತ್ತಿದ್ದಾರೆ. ಒಂದು ವೇಳೆ ಭಾರೀ ಇಳಿಕೆಯಾದರೆ ಭಾರೀ ಸಂಖ್ಯೆಯಲ್ಲಿ ವಾಹನಗಳು ರಸ್ತೆಗೆ ಇಳಿಯಬಹುದು. ಇದರಿಂದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗುವುದಲ್ಲದೇ ವಾಯು ಮಾಲಿನ್ಯ ಹೆಚ್ಚಾಗುತ್ತದೆ. ಹೀಗಾಗಿ ಬೆಲೆ ಇಳಿಕೆಯಾಗಬಾರದು ಎನ್ನುವ ವಾದವನ್ನು ಕೆಲ ಆರ್ಥಿಕ ತಜ್ಞರು ಮಂಡಿಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಇಳಿಸುವ ಬದಲು ಸಾರ್ವಜನಿಕ ಸಾರಿಗೆಯ ಟಿಕೆಟ್ ಬೆಲೆಯನ್ನು ಇಳಿಸುವುದು ಉತ್ತಮ. ಇದರಿಂದಾಗಿ ಜನರು ಹೆಚ್ಚು ಸಾರ್ವಜನಿಕ ಸಾರಿಗೆ ಬಳಸುವಂತಾಗುತ್ತದೆ ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾರೆ.

    ತೈಲ ಬೆಲೆ ಏರಿಕೆ ವಿಚಾರದಲ್ಲಿ ವಿರೋಧ ಪಕ್ಷಗಳು ಈಗ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿದ್ದರೆ, ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಜಿಎಸ್‍ಟಿ ವ್ಯಾಪ್ತಿಗೆ ತಂದರೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಜಿಎಸ್‍ಟಿ ಅಡಿ ಪೆಟ್ರೋಲ್ ಬಂದ್ರೆ ಬೆಂಗ್ಳೂರಿನಲ್ಲಿ ಪ್ರತಿ ಲೀಟರ್‍ಗೆ 40 ರೂ.ಅಷ್ಟೇ!

  • ಮುಂದೆ ಇಳಿಕೆಯಾಗುತ್ತೆ, ದೇಶದೆಲ್ಲೆಡೆ ಏಕರೂಪದ ತೈಲ ದರ ನಿಗದಿಯಾಗಬೇಕಾದ್ರೆ ಜಿಎಸ್‍ಟಿ ವ್ಯಾಪ್ತಿಗೆ ತರಬೇಕು: ಪ್ರಧಾನ್

    ಮುಂದೆ ಇಳಿಕೆಯಾಗುತ್ತೆ, ದೇಶದೆಲ್ಲೆಡೆ ಏಕರೂಪದ ತೈಲ ದರ ನಿಗದಿಯಾಗಬೇಕಾದ್ರೆ ಜಿಎಸ್‍ಟಿ ವ್ಯಾಪ್ತಿಗೆ ತರಬೇಕು: ಪ್ರಧಾನ್

    ನವದೆಹಲಿ: ಅಮೆರಿಕವನ್ನು ಅಪ್ಪಳಿಸಿದ ಇರ್ಮಾ ಮತ್ತು ಹಾರ್ವೆ ಚಂಡಮಾರುತಗಳಿಂದ ತೈಲ ಬೆಲೆ ಏರಿಕೆಯಾಗಿದೆ ಎಂದು ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

    ಚಂಡಮಾರತುಗಳಿಂದಾಗಿ ತೈಲ ಬೆಲೆಯಲ್ಲಿ ಶೇ.20ರಷ್ಟು ಏರಿಕೆಯಾಗಿದ್ದು ಇದು ತಾತ್ಕಾಲಿಕ. ಆದರೆ ಜನರು ಭರಿಸಲಾಗದ ಮಟ್ಟಕ್ಕೆ ಏರಿಕೆ ಆಗಿಲ್ಲ. ಅಷ್ಟೇ ಅಲ್ಲದೇ ತೈಲ ಬೆಲೆಗಳ ನಿತ್ಯದ ಪರಿಷ್ಕರಣೆ ವಿಚಾರದಲ್ಲೂ ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

    ಮುಂದಿನ ದಿನಗಳಲ್ಲಿ ತೈಲ ಬೆಲೆ ಕಡಿಮೆಯಾಗಲಿದೆ. ದೇಶದ ಎಲ್ಲ ನಗರಗಳಲ್ಲಿ ತೈಲ ಬೆಲೆ ಏಕರೂಪದಲ್ಲಿ ಇರಬೇಕಿದ್ದರೆ ಅದನ್ನು ಜಿಎಸ್‍ಟಿ ವ್ಯಾಪ್ತಿಗೆ ತರುವುದೇ ಏಕೈಕ ಮಾರ್ಗ ಎಂದು ಅವರು ಹೇಳಿದರು.

    ತೈಲ ಬೆಲೆಯನ್ನು ಇಳಿಸಲು ಅಬಕಾರಿ ಸುಂಕವನ್ನು ಸರ್ಕಾರ ಕಡಿಮೆ ಮಾಡುತ್ತಾ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಬಕಾರಿ ಸುಂಕವನ್ನು ಕಡಿಮೆಗೊಳಿಸುವುದು ಹಣಕಾಸು ಸಚಿವಾಲಯಕ್ಕೆ ಬಿಟ್ಟ ವಿಚಾರ ಎಂದು ತಿಳಿಸಿದರು.

    ಪೆಟ್ರೋಲ್ ಬೆಲೆ ಮಂಗಳವಾರ 2014ರ ನಂತರದ ಗರಿಷ್ಠ ಮಟ್ಟಕ್ಕೇರಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಬೆಂಗಳೂರಿನಲ್ಲಿ 71.50 ರೂ., ಮುಂಬೈಯಲ್ಲಿ 80 ರೂ., ಚೆನ್ನೈ 73 ರೂ. ದೆಹಲಿಯಲ್ಲಿ 70 ರೂ.ಗೆ ಏರಿಕೆಯಾಗಿತ್ತು. ಜುಲೈ ನಂತರ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 7 ರೂ. ಏರಿಕೆಯಾಗಿದೆ.

    2014ರಿಂದ ಈವರೆಗೆ ಲೀಟರ್ ಪೆಟ್ರೋಲ್ ಮೇಲೆ 11.77 ರೂ. ಮತ್ತು ಡೀಸೆಲ್ ಮೇಲೆ 13.47 ರೂ. ರಷ್ಟು ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಹೇರಿದೆ. ಇದರಿಂದ 99,000 ಕೋಟಿ ರೂ. ಸಂಗ್ರಹಿಸುವ ಗುರಿಯನ್ನು ಸರ್ಕಾರ ಹೊಂದಿದೆ.

  • ಡೀಸೆಲ್ ಆಧಾರಿತ ಜೆನ್‍ಸೆಟ್ಸ್ ಗಳನ್ನು ಕರ್ನಾಟಕ ಬ್ಯಾನ್ ಮಾಡಬೇಕು: ಧರ್ಮೇಂದ್ರ ಪ್ರಧಾನ್

    ಡೀಸೆಲ್ ಆಧಾರಿತ ಜೆನ್‍ಸೆಟ್ಸ್ ಗಳನ್ನು ಕರ್ನಾಟಕ ಬ್ಯಾನ್ ಮಾಡಬೇಕು: ಧರ್ಮೇಂದ್ರ ಪ್ರಧಾನ್

    ಬೆಂಗಳೂರು: ಡೀಸೆಲ್ ಆಧಾರಿತ ಜೆನ್‍ಸೆಟ್ಸ್ ಗಳನ್ನು ಕರ್ನಾಟಕ ಬ್ಯಾನ್ ಮಾಡಬೇಕು. ಈ ನಿಟ್ಟಿನಲ್ಲಿ ಒಂದು ನೀತಿ ರೂಪಿಸಿ ಅಂತ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

    ಬೆಂಗಳೂರು ನಗರ ಅನಿಲ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಪ್ರಧಾನ್, ದಾಬೋಲ್- ಬೆಂಗಳೂರು ಅನಿಲ ಸಾಗಾಟ ಮಾರ್ಗ ಯೋಜನೆ ಪೂರ್ಣಗೊಂಡು ಬೆಂಗಳೂರಿಗೆ ಅನಿಲ ಪೂರೈಕೆಯಾಗುತ್ತಿದೆ. ಕೊಚ್ಚಿ-ಮಂಗಳೂರು ಅನಿಲ ಮಾರ್ಗ ಮುಂದಿನ ವರ್ಷದ ಅಂತ್ಯಕ್ಕೆ ಮುಗಿಯಲಿದೆ. ಚೆನ್ನೈ-ಬೆಂಗಳೂರು ಯೋಜನೆಯ ಪ್ರಸ್ತಾವನೆ ನಮ್ಮ ಮುಂದೆ ಇದೆ ಎಂದರು.

    ಮುಂದಿನ 5 ವರ್ಷಗಳಲ್ಲಿ 60 ಸಿಎನ್‍ಜಿ ಸ್ಟೇಷನ್‍ಗಳ ಸ್ಥಾಪಿಸಿ 1ಕೋಟಿ 32 ಲಕ್ಷ ಮನೆಗಳಿಗೆ ನಿರಂತರ ಅನಿಲ ಪೂರೈಕೆ ಮಾಡಲಾಗುತ್ತದೆ ಎಂದು ತಿಳಿಸಿದರು.

    ಪೆಟ್ರೋಲ್ ದರ ನಿತ್ಯ ನಿಗದಿ ವಿಚಾರದಲ್ಲಿ ಪೆಟ್ರೋಲಿಯಂ ಪಂಪ್‍ಗಳ ಮಾಲೀಕರು ಕೆಲವು ಸಮಸ್ಯೆಗಳು ಇರುವುದು ನಿಜ. ಪೆಟ್ರೋಲ್ ದರ ನಿತ್ಯ ನಿಗದಿ ವಿಚಾರದಲ್ಲಿ ಗ್ರಾಹಕನೇ ರಾಜ.ಇದರ ಬಗ್ಗೆ ಯಾರು ಕೂಡ ಆತಂಕ ಪಡಬೇಕಿಲ್ಲ ಎಂದರು.

    ಇದೇ ವೇಳೆ ಬೆಂಗಳೂರು ಹೊಗೆ ಮುಕ್ತ ನಗರವಾಗಿಸಲು ಸಿಎನ್‍ಜಿ ವ್ಯವಸ್ಥೆ ಜಾರಿಗೆ ತರುವಂತೆ ಕೇಂದ್ರ ಸಚಿವ ಅನಂತಕುಮಾರ್ ಒತ್ತಾಯ ಮಾಡಿದ್ರು.