Tag: Dhawan

  • ಭಾವೋದ್ವೇಗಕ್ಕೆ ಒಳಗಾದ ಧವನ್ – ‘ಹಾರ್ಟ್ ಬ್ರೇಕಿಂಗ್’ ಎಂದ ಸಚಿನ್

    ಭಾವೋದ್ವೇಗಕ್ಕೆ ಒಳಗಾದ ಧವನ್ – ‘ಹಾರ್ಟ್ ಬ್ರೇಕಿಂಗ್’ ಎಂದ ಸಚಿನ್

    ಲಂಡನ್: ವಿಶ್ವಕಪ್ ಟೂರ್ನಿಯ ನಡುವೆಯೇ ಗಾಯದ ಸಮಸ್ಯೆಯಿಂದ ಹೊರ ಬಂದಿರುವ ಟೀಂ ಇಂಡಿಯಾ ಆರಂಭಿಕ ಆಟಗಾರ ಧವನ್ ಅಭಿಮಾನಿಗಳಿಗೆ ಭಾವೋದ್ವೇಗದ ಸಂದೇಶ ನೀಡಿದ್ದಾರೆ. ಇತ್ತ ಧವನ್ ತಂಡದಿಂದ ಹೊರಗುಳಿದಿರುವುದು ಹಾರ್ಟ್ ಬ್ರೇಕಿಂಗ್ ಎಂದು ಸಚಿನ್ ಹೇಳಿದ್ದಾರೆ.

    ಟೂರ್ನಿಯಿಂದ ಧವನ್ ಹೊರ ಬರುತ್ತಿರುವ ಬಗ್ಗೆ ಬಿಸಿಸಿಐ ಬುಧವಾರದಂದು ಅಧಿಕೃತವಾಗಿ ದೃಢಪಡಿಸಿತ್ತು. ಆ ಬಳಿಕ ಸಾಮಾಜಿಕ ಜಾಲತಾಣ ಟ್ವಿಟ್ಟರಿನಲ್ಲಿ ಈ ಕುರಿತು ವಿಡಿಯೋ ಪೋಸ್ಟ್ ಮಾಡಿದ್ದ ಧವನ್ ಭಾವೋದ್ವೇಗಕ್ಕೆ ಒಳಗಾಗಿದ್ದರು.

    2019ರ ವಿಶ್ವಕಪ್ ಟೂರ್ನಿಯ ಭಾಗವಾಗಿರುವುದಿಲ್ಲ ಎಂದು ನಿಮಗೆ ತಿಳಿಸಲು ಬೇಸರವಾಗುತ್ತಿದ್ದು, ನನ್ನ ಹೆಬ್ಬೆರಳಿನ ಗಾಯ ಸಂಪೂರ್ಣವಾಗಿ ಗುಣವಾಗಿಲ್ಲ. ದೇಶಕ್ಕಾಗಿ ಟೂರ್ನಿಯಲ್ಲಿ ಆಡಬೇಕು ಎಂಬುವುದು ನನ್ನ ಆಸೆಯಾಗಿತ್ತು. ಸದ್ಯ ನಾನು ವಿಶ್ರಾಂತಿ ಪಡೆದು ಮುಂದಿನ ಟೂರ್ನಿಯ ಬಗ್ಗೆ ಯೋಚಿಸಬೇಕಿದೆ. ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಗೆಲ್ಲಲಿದೆ. ತಂಡವನ್ನು ಬೆಂಬಲಿಸುವ ಅಗತ್ಯವಿದ್ದು, ನಿಮ್ಮ ಪ್ರೀತಿ ಹಾಗೂ ಪ್ರಾರ್ಥನೆಗಳಿಗೆ ಧನ್ಯವಾದ. ಜೈ ಹಿಂದ್ ಎಂದು ಹೇಳಿದ್ದಾರೆ.

    ಧವನ್ ಅವರು ತಂಡದಿಂದ ಹೊರಗುಳಿಯುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿನ್, ನೀವು ಉತ್ತಮ ಪ್ರದರ್ಶನ ನೀಡಿದ್ದೀರಿ. ಇಂತಹ ಪ್ರಮುಖ ಟೂರ್ನಿಯ ನಡುವೆಯೇ ಗಾಯದ ಸಮಸ್ಯೆಗೆ ಉಂಟಾಗಿರುವುದು ‘ಹಾರ್ಟ್ ಬ್ರೇಕಿಂಗ್. ಈ ಹಿಂದಿಕ್ಕಿಂತಲೂ ಶಕ್ತಿಯಲ್ಲಿ ಮತ್ತೆ ವಾಪಸ್ ಬರುವ ನಂಬಿಕೆ ನನಗಿದೆ ಎಂದಿದ್ದಾರೆ. ಅಲ್ಲದೇ ಧವನ್ ಸ್ಥಾನದಲ್ಲಿ ಆಯ್ಕೆ ಆಗಿದ್ದ ರಿಷಬ್ ಪಂತ್‍ಗೆ ಶುಭ ಕೋರಿರುವ ಸಚಿನ್, ರಿಬಷ್ ತನ್ನನ್ನು ಸಾಬೀತು ಪಡಿಸಿಕೊಳ್ಳಲು ಇದಕ್ಕಿಂತ ದೊಡ್ಡ ವೇದಿಕೆ ಸಿಗುವುದಿಲ್ಲ ಎಂದಿದ್ದಾರೆ.

    ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಧವನ್ ಎಡಗೈ ಹೆಬ್ಬೆರಳಿಗೆ ಗಾಯವಾಗಿತ್ತು. ಆ ಬಳಿಕ ಮೂರು ವಾರಗಳ ಕಾಲ ಅವರು ಟೂರ್ನಿಗೆ ಅಲಭ್ಯ ಆಗಲಿದ್ದಾರೆ ಎಂದು ಬಿಸಿಸಿಐ ತಿಳಿಸಿತ್ತು. ಆದರೆ ಬುಧವಾರ ಗಾಯದ ತಪಾಸಣೆ ನಡೆಸಿದ ವೈದ್ಯರು ಧವನ್ ಅವರಿಗೆ ಸುದೀರ್ಘ ವಿಶ್ರಾಂತಿ ಅಗತ್ಯವಿರುವುದಾಗಿ ತಿಳಿಸಿದ್ದಾರೆ. ಟೀಂ ಇಂಡಿಯಾ ಶನಿವಾರ ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಗಾಯಗೊಂಡ್ರೂ ಜಿಮ್‍ನಲ್ಲಿ ಬೆವರಿಳಿಸಿದ ಧವನ್

    ಗಾಯಗೊಂಡ್ರೂ ಜಿಮ್‍ನಲ್ಲಿ ಬೆವರಿಳಿಸಿದ ಧವನ್

    ಲಂಡನ್: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೈ ಹೆಬ್ಬೆರಳಿಗೆ ಗಾಯ ಮಾಡಿಕೊಂಡು ತಂಡದಿಂದ ಹೊರಗುಳಿದಿರುವ ಟೀಂ ಇಂಡಿಯಾ ಆರಂಭಿಕ ಆಟಗಾರ ಧವನ್ ಜಿಮ್‍ನಲ್ಲಿ ಬೆವರಿಳಿಸಿದ್ದಾರೆ.

    ರೆಕ್ಕಗಳೊಂದಿಗೆ ಅಲ್ಲ.. ಸಂಕಲ್ಪದಿಂದ ಹಾರಾಡುತ್ತೇನೆ ಎಂದು ಟ್ವೀಟ್ ಮಾಡಿದ್ದ ಧವನ್, ಗಾಯದಿಂದ ಚೇತರಿಸಿಕೊಳ್ಳುತ್ತಿರುವಾಗಲೇ ವಿಶ್ರಾಂತಿ ಪಡೆಯದೆ ಫಿಟ್ನೆಸ್ ಕಾಯ್ದುಕೊಳ್ಳಲು ಜಿಮ್‍ನಲ್ಲಿ ಕಸರತ್ತು ಮಾಡಿದ್ದಾರೆ.

    33 ವರ್ಷದ ಧವನ್ ತಾವು ಜಿಮ್ ನಲ್ಲಿ ಬೆವರಿಳಿಸುತ್ತಿರುವ ವಿಡಿಯೋವನ್ನು ತಮ್ಮ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಸದ್ಯದ ಪರಿಸ್ಥಿತಿ ಒಂದು ಕೆಟ್ಟ ಕನಸಿನಂತೆ ಆಗುವ ಸಂದರ್ಭ ಎದುರಾಗಿದ್ದು, ಮತ್ತೆ ಚೇತರಿಸಿಕೊಳ್ಳುವ ಅವಕಾಶ ಇದೆ. ನಾನು ಬೇಗ ಗಾಯದಿಂದ ಚೇತರಿಸಿಕೊಳ್ಳುವಂತೆ ಶುಭ ಕೋರಿದ ಎಲ್ಲರಿಗೂ ಧನ್ಯವಾದ ಎಂದು ಟ್ವೀಟ್ ಮಾಡಿದ್ದಾರೆ.

    ಇತ್ತ ಗಾಯಗೊಂಡು 3 ವಾರಗಳ ಕಾಲ ಧವನ್ ವಿಶ್ರಾಂತಿ ಪಡೆದುಕೊಳ್ಳಲು ಸೂಚಿಸಿದ್ದರು. ಇಂಗ್ಲೆಂಡ್‍ನಲ್ಲಿ ತಂಡದೊಂದಿಗೆ ಉಳಿದುಕೊಂಡಿದ್ದಾರೆ. ಈ ಕುರಿತು ನಾಯಕ ಕೊಹ್ಲಿ ಸ್ಪಷ್ಟನೆ ನೀಡಿದ್ದು, ಧವನ್ ಕೈಗೆ ಕೆಲ ವಾರಗಳ ಕಾಲ ಚಿಕಿತ್ಸೆ ಬೇಕಾಗಿದ್ದು, ಟೂರ್ನಿಯ ಲೀಗ್ ಪಂದ್ಯಗಳ ಅಂತ್ಯದಲ್ಲಿ ಅಥವಾ ಸೆಮಿಸ್ ವೇಳೆಗೆ ಮತ್ತೆ ಲಭ್ಯವಾಗುವ ಅವಕಾಶವಿದೆ. ಧವನ್ ಮತ್ತೆ ಆಡಬೇಕು ಎಂದು ಕೋರಿಕೊಳ್ಳುತ್ತಿದ್ದೇನೆ. ನಮ್ಮ ಮುಂದಿನ ಚಿಂತನೆ ಭಾನುವಾರದ ಪಂದ್ಯದತ್ತ ಇದ್ದು, ಸಿದ್ಧತೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.

    ಇದಕ್ಕೂ ಮುನ್ನ ಪ್ರತಿಕ್ರಿಯೆ ನೀಡಿದ್ದ ಕೋಚ್ ಸಂಜಯ್ ಬಂಗಾರ್, ಧವನ್ ರನ್ನ ಟೂರ್ನಿಯಿಂದ ಕೈಬಿಡಲು ನಾವು ಸಿದ್ಧರಿಲ್ಲ ಎಂದಿದ್ದಾರೆ. ಇತ್ತ ಟೀಂ ಇಂಡಿಯಾ ಭಾನುವಾರ ಪಾಕಿಸ್ತಾನದೊಂದಿಗೆ ಸೆಣಸಲಿದ್ದು, ಜೂನ್ 22 ರಂದು ಆಘ್ಘಾನಿಸ್ತಾನದ ವಿರುದ್ಧ ಆಡಲಿದೆ.

  • ಮತ್ತೆ ವಾಪಸ್ ಆಗ್ತೇನೆ ಎಂದು ಕವಿತೆ ಹಂಚಿಕೊಂಡ ಧವನ್

    ಮತ್ತೆ ವಾಪಸ್ ಆಗ್ತೇನೆ ಎಂದು ಕವಿತೆ ಹಂಚಿಕೊಂಡ ಧವನ್

    ಲಂಡನ್: ವಿಶ್ವಕಪ್ ಟೂರ್ನಿಯ ಆಸೀಸ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡು ತಂಡದಿಂದ ಹೊರ ನಡೆದಿರುವ ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ಮತ್ತೆ ವಾಪಸ್ ಬರುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

    ಗಾಯಗೊಂಡ ಬಳಿಕ ಮೊದಲ ಬಾರಿಗೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಧವನ್, ಟ್ವಿಟ್ಟರ್ ನಲ್ಲಿ ಡಾ. ರಾಹತ್ ಇಂದೋರಿ ಅವರ ಕವಿತೆಯನ್ನು ಹಂಚಿಕೊಂಡಿದ್ದು, ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

    ಧವನ್ ಸದ್ಯ ತಂಡದಿಂದ ಹೊರಗುಳಿದಿದ್ದರು ಕೂಡ ಬಿಸಿಸಿಐ ಅವರನ್ನು ಇಂಗ್ಲೆಂಡ್‍ನಲ್ಲಿಯೇ ಉಳಿಸಿಕೊಂಡಿದೆ. ಆ ಮೂಲಕ ಬಹುಬೇಗ ಚೇತರಿಕೆಗೆ ಸಹಕಾರ ಆಗುವಂತೆ ತಜ್ಞ ವೈದ್ಯರಿಂದ ಸಲಹೆ ಪಡೆಯುತ್ತಿದ್ದಾರೆ. ಇತ್ತ ಧವನ್ ಸ್ಥಾನದಲ್ಲಿ ರಿಷಬ್ ಪಂತ್ ಟೀಂ ಇಂಡಿಯಾವನ್ನು ಕೂಡಿಕೊಳ್ಳಲಿದ್ದು, ಪಾಕಿಸ್ಥಾನದ ವಿರುದ್ಧದ ಪಂದ್ಯದಲ್ಲಿ ಅವಕಾಶ ಪಡೆಯುವ ಸಾಧ್ಯತೆ ಇದೆ. ಆದರೆ ಪಂತ್ ಅವಗಿಂತ ಹೆಚ್ಚಿನ ಅನುಭವ ಹೊಂದಿರುವ ದಿನೇಶ್ ಕಾರ್ತಿಕ್ ಆಡುವ 11 ಬಳಗದಲ್ಲಿ ಇದ್ದರು ಅಚ್ಚರಿ ಸಂಗತಿ ಏನು ಅಲ್ಲ.

    ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಪಂದ್ಯಕ್ಕೆ ಇಂದು ಟೀಂ ಇಂಡಿಯಾ ಆಟಗಾರರು ಅಭ್ಯಾಸ ನಡೆಸಿದ್ದು, ಈ ವೇಳೆ ಧವನ್ ಆಟಗಾರರೊಂದಿಗೆ ಕಾಣಿಸಿಕೊಂಡಿದ್ದರು. ಇತ್ತ ವಿಶ್ವಕಪ್ ಟೂರ್ನಿಗಳಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಆಡಿರುವ ಪಂದ್ಯಗಳಲ್ಲಿ 3 ಪಂದ್ಯಗಳಲ್ಲಿ ಗೆಲುವು ಪಡೆದಿದ್ದರೆ 4 ರಲ್ಲಿ ಸೋತಿದೆ.

    ವಿಶ್ವಕಪ್ ನಲ್ಲಿ 16 ವರ್ಷಗಳ ಹಿಂದೆ ಅಂದರೆ 2003 ರಲ್ಲಿ ಇತ್ತಂಡಗಳು ಮುಖಾಮುಖಿ ಆಗಿದ್ದವು. ದಕ್ಷಿಣ ಆಫ್ರಿಕಾದ ಸೆಂಚೂರಿಯನ್ ನಲ್ಲಿ ನಡೆದ ಪಂದ್ಯದಲ್ಲಿ ಭಾರತ 7 ವಿಕೆಟ್ ಗಳ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ 4 ವಿಕೆಟ್ ಕಿತ್ತಿದ್ದ ಜಹೀರ್ ಖಾನ್ ಪಂದ್ಯಶ್ರೇಷ್ಠ ಪ್ರಶಸ್ತಿಯ ಗೌರವಕ್ಕೆ ಪಾತ್ರರಾಗಿದ್ದರು.

  • ಲಂಕಾಗೆ 7 ವಿಕೆಟ್‍ಗಳ ಭರ್ಜರಿ ಜಯ

    ಲಂಕಾಗೆ 7 ವಿಕೆಟ್‍ಗಳ ಭರ್ಜರಿ ಜಯ

    ಓವಲ್: ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಬಿ ಗುಂಪಿನ ಪಂದ್ಯದಲ್ಲಿ ಭಾರತದ ವಿರುದ್ಧ  ಶ್ರೀಲಂಕಾ  7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದು, ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿದೆ.

    ಗೆಲ್ಲಲು 322 ರನ್‍ಗಳ ಕಠಿಣ ಸವಾಲನ್ನು ಪಡೆದ ಲಂಕಾ 48.4 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 322 ರನ್ ಗಳಿಸುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿದೆ.

    11 ರನ್ ಗಳಿಸಿದ್ದಾಗ ಮೊದಲ ವಿಕೆಟ್ ಕಳೆದುಕೊಂಡರೂ ಎರಡನೇ ವಿಕೆಟಿಗೆ 139 ಎಸೆತಗಳಲ್ಲಿ 159 ರನ್ ಜೊತೆಯಾಟವಾಡುವ ಮೂಲಕ ಗುಣತಿಲಕ ಮತ್ತು ಕುಸಲ್ ಮೆಂಡಿಸ್ ಭದ್ರ ಅಡಿಪಾಯ ಹಾಕಿದರು.

    ಗುಣತಿಲಕ 76 ರನ್(72 ಎಸೆತ, 7 ಬೌಂಡರಿ, 2ಸಿಕ್ಸರ್) ಸಿಡಿಸಿ ರನ್ ಔಟ್ ಔಟಾದರೆ, ಮೆಂಡಿಸ್ 89 ರನ್(93 ಎಸೆತ, 11 ಬೌಂಡರಿ, 1 ಸಿಕ್ಸರ್) ಸಿಡಿಸಿ ರನ್ ಔಟ್ ಆದರು.

    ಕುಸಲ್ ಪಿರೇರಾ 47 ರನ್‍ಗಳಿಸಿ ನಿವೃತ್ತರಾದರೆ, ಆಂಜಲೋ ಮಾಥ್ಯುಸ್ ಔಟಾಗದೇ 52 ರನ್(44 ಎಸೆತ, 6 ಬೌಂಡರಿ) ಗುಣರತ್ನೆ ಔಟಾಗದೇ 34 ರನ್(21 ಎಸೆತ, 2 ಬೌಂಡರಿ, 2 ಸಿಕ್ಸರ್) ಸಿಡಿಸಿ ತಂಡಕ್ಕೆ ಜಯವನ್ನು ತಂದುಕೊಟ್ಟರು.

    ಭುನವೇಶ್ವರ್ ಕುಮಾರ್ ಒಂದು ವಿಕೆಟ್ ಪಡೆದರೆ, ಭಾರತ 11 ಲೆಗ್ ಬೈ, 5 ವೈಡ್, 1 ನೋಬಾಲ್ ಎಸೆಯುವ ಮೂಲಕ ಇತರೆ ರೂಪದಲ್ಲಿ 17 ರನ್ ಬಿಟ್ಟುಕೊಟ್ಟಿತ್ತು.

    ರನ್ ಏರಿದ್ದು ಹೇಗೆ?
    50 ರನ್ – 10.3 ಓವರ್
    100 ರನ್ – 19.2 ಓವರ್
    150 ರನ್ – 25.4 ಓವರ್
    200 ರನ್ – 33.4 ಓವರ್
    250 ರನ್ – 40.3 ಓವರ್
    300 ರನ್ – 45.5 ಓವರ್
    322 ರನ್ – 48.4 ಓವರ್

    ಉತ್ತಮ ಮೊತ್ತ: ಟಾಸ್ ಸೋತು ಬ್ಯಾಟಿಂಗ್‍ಗೆ ಇಳಿದ ಶಿಖರ್ ಧವನ್ ಶತಕ, ರೋಹಿತ್ ಶರ್ಮಾ ಮತ್ತು ಧೋನಿ ಅವರ ಅರ್ಧಶತಕದಿಂದಾಗಿ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 321 ರನ್ ಗಳಿಸಿತ್ತು.

    ಶತಕದ ಜೊತೆಯಾಟ: ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಮೊದಲ ವಿಕೆಟ್‍ಗೆ 149 ಎಸೆತಗಳಲ್ಲಿ 138 ರನ್‍ಗಳ ಜೊತೆಯಾಟ ಆಡಿದರು. ಮಲಿಂಗ ಎಸೆತದಲ್ಲಿ ಔಟಾಗುವ ವೇಳೆ ರೋಹಿತ್ ಶರ್ಮಾ 78 ರನ್(79 ಎಸೆತ, 6 ಬೌಂಡರಿ, 3ಸಿಕ್ಸರ್) ಸಿಡಿಸಿದ್ದರು.

    ನಂತರ ಬಂದ ವಿರಾಟ್ ಕೊಹ್ಲಿ 5 ಎಸೆತದ ಎದುರಿಸಿ ಶೂನ್ಯಕ್ಕೆ ಔಟಾದರು. ಮೂರನೇ ವಿಕೆಟ್‍ಗೆ ಶಿಖರ್ ಧವನ್ ಮತ್ತು ಯುವರಾಜ್ 46 ಎಸೆತಗಳಲ್ಲಿ 40 ರನ್ ಜೊತೆಯಾಟ ಆಡಿದರು. ಇದರಲ್ಲಿ ಯುವರಾಜ್ ಪಾಲು 7 ರನ್.

    ಯುವರಾಜ್ ಔಟಾದ ಬಳಿಕ ಕ್ರೀಸಿಗೆ ಬಂದ ಧೋನಿ ಇನ್ನಿಂಗ್ಸ್ ಕಟ್ಟಲು ಆರಂಭಿಸಿದರು. ಧೋನಿ ಮತ್ತು ಧವನ್ 4ನೇ ವಿಕೆಟಿಗೆ 64 ಎಸೆತಗಳಲ್ಲಿ 82 ರನ್ ಪೇರಿಸಿದರು.

    ಶಿಖರ್ ಧವನ್ ಶತಕ: 69 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದ ಧವನ್ 112 ಎಸೆತಗಳಲ್ಲಿ ಏಕದಿನ ಕ್ರಿಕೆಟ್ ಬಾಳ್ವೆಯ 10 ನೇ ಶತಕ ಪೂರ್ಣಗೊಳಿಸಿದರು. ಅಂತಿಮವಾಗಿ 125 ರನ್(128 ಎಸೆತ, 6 ಬೌಂಡರಿ, 3ಸಿಕ್ಸರ್) ಗಳಿಸಿದ್ದಾಗ ಮೆಂಡಿಸ್‍ಗೆ ಕ್ಯಾಚ್ ನೀಡಿ ಔಟಾದರು.

    ಧೋನಿ 63 ರನ್(52 ಎಸೆತ, 7 ಬೌಂಡರಿ, 2ಸಿಕ್ಸರ್), ಕೇಧಾರ್ ಜಾಧವ್ ಔಟಾಗದೇ 25 ರನ್(13 ಎಸೆತ, 3 ಬೌಂಡರಿ, 1 ಸಿಕ್ಸರ್) ಸಿಡಿಸಿ ಕೊನೆಯಲ್ಲಿ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಕಾರಣ ತಂಡದ ಮೊತ್ತ 300 ರನ್‍ಗಳ ಗಡಿ ದಾಟಿತು. ಲಸಿತ್ ಮಾಲಿಂಗ, 2 ವಿಕೆಟ್ ಪಡೆದರೆ, ಲಕ್ಮಲ್, ಪ್ರದೀಪ್, ಪಿರೇರಾ ಗುಣರತ್ನೆ ತಲಾ ಒಂದೊಂದು ವಿಕೆಟ್ ಪಡೆದರು.

    ರನ್ ಏರಿದ್ದು ಹೀಗೆ:
    50 ರನ್ – 10.2 ಓವರ್
    100 ರನ್ – 19.2 ಓವರ್
    150 ರನ್- 27.1 ಓವರ್
    200 ರನ್ – 37.6 ಓವರ್
    250 ರನ್ – 42.4 ಓವರ್
    300 ರನ್ – 48.2 ಓವರ್
    321 ರನ್ – 50 ಓವರ್

    ಬಿ ಗುಂಪಿನ ಎಲ್ಲ ತಂಡಗಳು ಒಂದೊಂದು ಪಂದ್ಯವನ್ನು ಗೆದ್ದಿದೆ. ಜೂನ್ 11 ರಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ಮಧ್ಯೆ ಪಂದ್ಯ ನಡೆಯಲಿದ್ದು, ಈ ಪಂದ್ಯವನ್ನು ಭಾರತ ಗೆದ್ದಲ್ಲಿ ಸೆಮಿಫೈನಲ್ ಪ್ರವೇಶಿಸಲಿದೆ.

     

     

  • ಶಿಖರ್ ಧವನ್ 125 ರನ್: ಶ್ರೀಲಂಕಾಗೆ 322 ರನ್ ಗುರಿ

    ಶಿಖರ್ ಧವನ್ 125 ರನ್: ಶ್ರೀಲಂಕಾಗೆ 322 ರನ್ ಗುರಿ

    ಓವಲ್: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ಶ್ರೀಲಂಕಾಗೆ 322 ರನ್‍ಗಳ ಗುರಿಯನ್ನು ನೀಡಿದೆ.

    ಟಾಸ್ ಸೋತು ಬ್ಯಾಟಿಂಗ್‍ಗೆ ಇಳಿದ ಶಿಖರ್ ಧವನ್ ಶತಕ, ರೋಹಿತ್ ಶರ್ಮಾ ಮತ್ತು ಧೋನಿ ಅವರ ಅರ್ಧಶತಕದಿಂದಾಗಿ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 321 ರನ್ ಗಳಿಸಿದೆ.

    ಶತಕದ ಜೊತೆಯಾಟ: ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಮೊದಲ ವಿಕೆಟ್‍ಗೆ 149 ಎಸೆತಗಳಲ್ಲಿ 138 ರನ್‍ಗಳ ಜೊತೆಯಾಟ ಆಡಿದರು. ಮಲಿಂಗ ಎಸೆತದಲ್ಲಿ ಔಟಾಗುವ ವೇಳೆ ರೋಹಿತ್ ಶರ್ಮಾ 78 ರನ್(79 ಎಸೆತ, 6 ಬೌಂಡರಿ, 3ಸಿಕ್ಸರ್) ಸಿಡಿಸಿದ್ದರು.

    ನಂತರ ಬಂದ ವಿರಾಟ್ ಕೊಹ್ಲಿ 5 ಎಸೆತದ ಎದುರಿಸಿ ಶೂನ್ಯಕ್ಕೆ ಔಟಾದರು. ಮೂರನೇ ವಿಕೆಟ್‍ಗೆ ಶಿಖರ್ ಧವನ್ ಮತ್ತು ಯುವರಾಜ್ 46 ಎಸೆತಗಳಲ್ಲಿ 40 ರನ್ ಜೊತೆಯಾಟ ಆಡಿದರು. ಇದರಲ್ಲಿ ಯುವರಾಜ್ ಪಾಲು 7 ರನ್.

    ಯುವರಾಜ್ ಔಟಾದ ಬಳಿಕ ಕ್ರೀಸಿಗೆ ಬಂದ ಧೋನಿ ಇನ್ನಿಂಗ್ಸ್ ಕಟ್ಟಲು ಆರಂಭಿಸಿದರು. ಧೋನಿ ಮತ್ತು ಧವನ್ 4ನೇ ವಿಕೆಟಿಗೆ 64 ಎಸೆತಗಳಲ್ಲಿ 82 ರನ್ ಪೇರಿಸಿದರು.

    ಶಿಖರ್ ಧವನ್ ಶತಕ: 69 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದ ಧವನ್ 112 ಎಸೆತಗಳಲ್ಲಿ ಏಕದಿನ ಕ್ರಿಕೆಟ್ ಬಾಳ್ವೆಯ 10 ನೇ ಶತಕ ಪೂರ್ಣಗೊಳಿಸಿದರು. ಅಂತಿಮವಾಗಿ 125 ರನ್(128 ಎಸೆತ, 6 ಬೌಂಡರಿ, 3ಸಿಕ್ಸರ್) ಗಳಿಸಿದ್ದಾಗ ಮೆಂಡಿಸ್‍ಗೆ ಕ್ಯಾಚ್ ನೀಡಿ ಔಟಾದರು.

    ಧೋನಿ 63 ರನ್(52 ಎಸೆತ, 7 ಬೌಂಡರಿ, 2ಸಿಕ್ಸರ್), ಕೇಧಾರ್ ಜಾಧವ್ ಔಟಾಗದೇ 25 ರನ್(13 ಎಸೆತ, 3 ಬೌಂಡರಿ, 1 ಸಿಕ್ಸರ್) ಸಿಡಿಸಿ ಕೊನೆಯಲ್ಲಿ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಕಾರಣ ತಂಡದ ಮೊತ್ತ 300 ರನ್‍ಗಳ ಗಡಿ ದಾಟಿತು.

    ಲಸಿತ್ ಮಾಲಿಂಗ,  2 ವಿಕೆಟ್ ಪಡೆದರೆ, ಲಕ್ಮಲ್, ಪ್ರದೀಪ್, ಪಿರೇರಾ ಗುಣರತ್ನೆ ತಲಾ ಒಂದೊಂದು ವಿಕೆಟ್ ಪಡೆದರು.

    ರನ್ ಏರಿದ್ದು ಹೀಗೆ:
    50 ರನ್ – 10.2 ಓವರ್
    100 ರನ್ – 19.2 ಓವರ್
    150 ರನ್- 27.1 ಓವರ್
    200 ರನ್ – 37.6 ಓವರ್
    250 ರನ್ – 42.4 ಓವರ್
    300 ರನ್ – 48.2 ಓವರ್
    321 ರನ್ – 50 ಓವರ್