Tag: dheeren r rajkumar

  • ಗೀತಾ ಶಿವರಾಜ್‌ಕುಮಾರ್ ನಿರ್ಮಾಣದಲ್ಲಿ ಧೀರೆನ್‌ ಹೊಸ ಸಿನಿಮಾ

    ಗೀತಾ ಶಿವರಾಜ್‌ಕುಮಾರ್ ನಿರ್ಮಾಣದಲ್ಲಿ ಧೀರೆನ್‌ ಹೊಸ ಸಿನಿಮಾ

    ‘ವೇದ’, ‘ಭೈರತಿ ರಣಗಲ್’ ಸಿನಿಮಾ (Bhairathi Rangal) ಸಕ್ಸಸ್ ಬಳಿಕ ಮತ್ತೊಂದು ಹೊಸ ಚಿತ್ರ ನಿರ್ಮಾಣ ಮಾಡಲು ಗೀತಾ ಶಿವರಾಜ್‌ಕುಮಾರ್ (Geetha Shivarajkumar)  ಮುಂದಾಗಿದ್ದಾರೆ. ಈ ಬಾರಿ ದೊಡ್ಮನೆ ಕುಡಿ ಧೀರೆನ್ ಆರ್. ರಾಜ್‌ಕುಮಾರ್ (Dheeren R Rajkumar) ಹೊಸ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಸಿನಿಮಾಗೆ ‘ಶಾಖಾಹಾರಿ’ ಸಂದೀಪ್ ಸುಂಕದ್ ನಿರ್ದೇಶನ ಮಾಡುತ್ತಿದ್ದಾರೆ. ಇದನ್ನೂ ಓದಿ:‘ಪುಷ್ಪ 2’ ಪ್ರದರ್ಶನದ ವೇಳೆ ಕಾಲ್ತುಳಿತ: ವಿಷಾದ ವ್ಯಕ್ತಪಡಿಸಿದ ರಶ್ಮಿಕಾ ಮಂದಣ್ಣ

    ‘ಶಾಖಾಹಾರಿ’ ಎಂಬ ವಿಭಿನ್ನ ಸಿನಿಮಾ ಕೊಟ್ಟಂತಹ ಸಂದೀಪ್ ಜೊತೆ ಗೀತಾ ಶಿವರಾಜ್‌ಕುಮಾರ್ ಕೈಜೋಡಿಸಿದ್ದಾರೆ. ‘ಶಿವ 143’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಧೀರೆನ್ ಹೊಸ ಬಗೆಯ ಪಾತ್ರದಲ್ಲಿ ಮಿಂಚಲು ರೆಡಿಯಾಗಿದ್ದಾರೆ.

     

    View this post on Instagram

     

    A post shared by Geetha Pictures (@geethapictures)

    ಅಂದಹಾಗೆ, ಅದರೊಂದಿಗೆ ಧೀರೆನ್ ‘ಕೆಆರ್‌ಜಿ’ ಸಂಸ್ಥೆ ಜೊತೆ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಅವರಿಗೆ ಹೊಸ ಬಗೆಯ ಸ್ಟೋರಿಯಲ್ಲಿ ಮಿಂಚಲು ರೆಡಿಯಾಗಿದ್ದಾರೆ.

  • ಹೆಸರು ಬದಲಿಸಿಕೊಂಡ ಅಣ್ಣಾವ್ರ ಮೊಮ್ಮಗ ಧೀರೇನ್

    ಹೆಸರು ಬದಲಿಸಿಕೊಂಡ ಅಣ್ಣಾವ್ರ ಮೊಮ್ಮಗ ಧೀರೇನ್

    ರನಟ ರಾಜ್‌ಕುಮಾರ್ (Rajkumar) ಮೊಮ್ಮಗ ಧೀರೇನ್ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ನನ್ನ ಹೆಸರಿಗೆ ತಾತನ ಹೆಸರು ಸೇರಿಸಿಕೊಂಡು ಈ ಲೆಗ್ಗಸಿಯನ್ನು ಗೌರವಿಸುತ್ತೇನೆ ಎಂದು ಧೀರೇನ್ ತಿಳಿಸಿದ್ದಾರೆ. ಇದನ್ನೂ ಓದಿ:ರೇಣುಕಾಸ್ವಾಮಿ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆಯಿದೆ: ರಚಿತಾ ರಾಮ್

    Dheeren ramkumar,

    ರಾಜ್‌ಕುಮಾರ್ ಪುತ್ರಿ ಪೂರ್ಣಿಮಾ ಮತ್ತು ರಾಮ್ ಕುಮಾರ್ (Ram Kumar) ದಂಪತಿ ಪುತ್ರ ಧೀರೇನ್ ಹೆಸರು ಬದಲಾವಣೆ ಬಗ್ಗೆ ತಿಳಿಸಿದ್ದಾರೆ. ನನ್ನ ಹೆಸರಿನ ಮುಂದೆ ನನ್ನ ತಾತ ರಾಜ್‌ಕುಮಾರ್ ಅವರ ಹೆಸರನ್ನು ಸೇರಿಸಿಕೊಳ್ಳುವ ಮೂಲಕ ನಾನು ಡಾ. ರಾಜ್‌ಕುಮಾರ್ ಕುಟುಂಬದ ಲೆಗ್ಗಸಿಗೆ ಗೌರವ ಸೂಚಿಸುತ್ತಿದ್ದೇನೆ. ಡಾ.ರಾಜ್‌ಕುಮಾರ್ ಮೊಮ್ಮಗನಾಗಿರುವ ನಾನು ಅವರ ಹೆಸರನ್ನು ನನ್ನ ಹೆಸರಿನ ಮುಂದೆ ಸೇರಿಸಿಕೊಂಡು ಈ ಮೂಲಕ ಅವರ ಮನೆತನಕ್ಕೆ ಗೌರವ ಸೂಚಿಸುತ್ತಿದ್ದೇನೆ ಎಂದಿದ್ದಾರೆ.

    ಕಾನೂನಿನ ಪ್ರಕಾರ, ಹೆಸರನ್ನು ಬದಲಾಯಿಸಿಕೊಂಡು ಧೀರೇನ್ ರಾಮ್‌ಕುಮಾರ್ ಅವರು ಈಗ ಧೀರೇನ್ ಆರ್ ರಾಜ್‌ಕುಮಾರ್ (Dheeren R Rajkumar) ಆಗಿದ್ದಾರೆ.

    ಇದೀಗ ಕೆಆರ್‌ಜಿ ಬ್ಯಾನರ್‌ನ ಹೊಸ ಸಿನಿಮಾದಲ್ಲಿ ಧೀರೇನ್ ಆರ್ ರಾಜ್‌ಕುಮಾರ್ ನಾಯಕನಾಗಿ ನಟಿಸುತ್ತಿದ್ದಾರೆ. ಮತ್ತೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

    ಕಳೆದ ವರ್ಷ ‘ಶಿವ 143’ (Shiva 143) ಸಿನಿಮಾದಲ್ಲಿ ಧೀರೇನ್ ಹೀರೋ ಆಗಿ ಪಾದಾರ್ಪಣೆ ಮಾಡಿದ್ದರು. ಚಿತ್ರಕ್ಕೆ ಮಾನ್ವಿತಾ ಕಾಮತ್ (Manvita Kamat) ನಾಯಕಿಯಾಗಿ ನಟಿಸಿದ್ದರು.