Tag: Dhirendra Shastri

  • ನಾವು ಮಸೀದಿಗಳ ಮೇಲೆ ದೇವಾಲಯಗಳನ್ನ ನಿರ್ಮಿಸಲು ಬಯಸುವುದಿಲ್ಲ: ಓವೈಸಿಗೆ ಧೀರೇಂದ್ರ ಶಾಸ್ತ್ರಿ ಟಾಂಗ್

    ನಾವು ಮಸೀದಿಗಳ ಮೇಲೆ ದೇವಾಲಯಗಳನ್ನ ನಿರ್ಮಿಸಲು ಬಯಸುವುದಿಲ್ಲ: ಓವೈಸಿಗೆ ಧೀರೇಂದ್ರ ಶಾಸ್ತ್ರಿ ಟಾಂಗ್

    ನವದೆಹಲಿ: ಭಗವಾನ್‌ ರಾಮ ರಾಜಕೀಯದ ವಿಷಯವಲ್ಲ. ರಾಜಕಾರಣದಲ್ಲಿ ಧರ್ಮ ಇರಬೇಕು. ಆದರೆ ರಾಜಕೀಯದೊಂದಿಗೆ ಧರ್ಮ ಕೆಲಸ ಮಾಡುವುದಿಲ್ಲ ಎಂದು ಬಾಗೇಶ್ವರ ಧಾಮದ ಧೀರೇಂದ್ರ ಶಾಸ್ತ್ರಿ (Dhirendra Shastri) ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ (Ram Mandir) ಉದ್ಘಾಟನೆ ಕುರಿತು ಮಾತನಾಡಿದ ಅವರು, ಇದು ಎಲ್ಲಾ ಹಿಂದೂಗಳು ಮತ್ತು ಸನಾತನಿಗೆ ದೊಡ್ಡ ಗೆಲುವು. ಈ ಕಾರ್ಯಕ್ರಮವು ದೀಪಾವಳಿ ಹಬ್ಬಕ್ಕಿಂತ ಹೆಚ್ಚು ವಿಶೇಷವಾಗಿದೆ. ಪ್ರಪಂಚದಾದ್ಯಂತದ ಎಲ್ಲಾ ಭಗವಾನ್ ರಾಮ ಭಕ್ತರು ಈ ದಿನಕ್ಕಾಗಿ ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಮ್ಮ ಮಸೀದಿಯನ್ನ ಕಳೆದುಕೊಂಡಿದ್ದೇವೆ.. ನಿಮ್ಮ ಹೃದಯದಲ್ಲಿ ನೋವಿಲ್ಲವೇ: ಬಾಬ್ರಿ ಮಸೀದಿ ಬಗ್ಗೆ ಮುಸ್ಲಿಂ ಯುವಕರಿಗೆ ಓವೈಸಿ ಪ್ರಶ್ನೆ

    ಭಗವಾನ್ ರಾಮನು ಎಲ್ಲರಿಗೂ ಸೇರಿದವನು. ಭಗವಾನ್ ರಾಮ ಮಹಾನ್ ನಾಯಕ. ರಾಮಮಂದಿರ ನಿರ್ಮಾಣವಾಗುತ್ತಿರುವುದು ಜಾತೀಯತೆಗಾಗಿ ಅಲ್ಲ. ಎಲ್ಲ ರಾಮಭಕ್ತರ ನಂಬಿಕೆಗಾಗಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

    ಬಾಬ್ರಿ ಮಸೀದಿ ವಿವಾದ ಕುರಿತ ಓವೈಸಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇದು ಅವರ ಭಯವನ್ನು ತೋರಿಸುತ್ತದೆ. ನಾವು ಮಸೀದಿಗಳ ಮೇಲೆ ದೇವಾಲಯಗಳನ್ನು ನಿರ್ಮಿಸಲು ಬಯಸುವುದಿಲ್ಲ. ಆದರೆ ದೇವಾಲಯಗಳನ್ನು ಪುನರ್ನಿರ್ಮಿಸಲು ಬಯಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Ayodhya Ram Mandir: ಆನೆ, ಸಿಂಹ, ಹನುಮಾನ್, ಗರುಡ ಮೂರ್ತಿಗಳ ಫೋಟೋ ಬಿಡುಗಡೆ

    ಈಚೆಗೆ ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಅಸಾದುದ್ದೀನ್‌ ಓವೈಸಿ ಮಾತನಾಡಿ, ನಾವು ನಮ್ಮ ಮಸೀದಿಯನ್ನ ಕಳೆದುಕೊಂಡಿದ್ದೇವೆ. ಅಲ್ಲಿ ಏನಾಗುತ್ತಿದೆ ಎಂಬುದನ್ನು ನೋಡುತ್ತಿದ್ದೀರಿ. ನಿಮ್ಮ ಹೃದಯದಲ್ಲಿ ನೋವು ಇಲ್ಲವೇ ಎಂದು ಮುಸ್ಲಿಂ ಸಮುದಾಯದ ಯುವಕರಲ್ಲಿ ಪ್ರಶ್ನಿಸಿದ್ದರು.

  • ನನಗೆ ಬೆಂಬಲ ಕೊಡಿ.. ನಾನು ನಿಮಗೆ ಹಿಂದೂ ರಾಷ್ಟ್ರ ಕೊಡುತ್ತೇನೆ – ಧೀರೇಂದ್ರ ಶಾಸ್ತ್ರಿ

    ನನಗೆ ಬೆಂಬಲ ಕೊಡಿ.. ನಾನು ನಿಮಗೆ ಹಿಂದೂ ರಾಷ್ಟ್ರ ಕೊಡುತ್ತೇನೆ – ಧೀರೇಂದ್ರ ಶಾಸ್ತ್ರಿ

    ರಾಯ್ಪುರ್‌: ನನಗೆ ಬೆಂಬಲ ಕೊಡಿ.. ನಾನು ನಿಮಗೆ ಹಿಂದೂ ರಾಷ್ಟ್ರ (Hindu Nation) ಕೊಡುತ್ತೇನೆ ಎಂದು ಬಾಗೇಶ್ವರ ಧಾಮ (Bageshwar Dham) ಮುಖ್ಯಸ್ಥ ಧೀರೇಂದ್ರ ಶಾಸ್ತ್ರಿ (Dhirendra Shastri) ಹೇಳಿದ್ದಾರೆ. ಹಿಂದೂಗಳು ಬೆಂಬಲ ನೀಡಿ ಎಂದು ಕೇಳಿಕೊಂಡಿದ್ದಾರೆ.

    ನೇತಾಜಿ ಸುಭಾಷ್ ಚಂದ್ರ ಬೋಸ್ (Netaji Subhash Chandra Bose) ಅವರು “ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ. ನೀವು ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ನೀಡುತ್ತೇನೆ” ಎಂಬ ಘೋಷಣೆ ನೀಡಿದ್ದರು. ಆದರೆ ಇಂದು ನಾವು ಹಿಂದೂ ರಾಷ್ಟ್ರ ಮಾಡಬೇಕಾಗಿದೆ. ಇಂದು ನಾನು ಒಂದು ಘೋಷಣೆಯನ್ನು ನೀಡುತ್ತೇನೆ. ನೀವು ನನ್ನನ್ನು ಬೆಂಬಲಿಸಿ, ನಾನು ನಿಮಗೆ ಹಿಂದೂ ರಾಷ್ಟ್ರವನ್ನು ನೀಡುತ್ತೇನೆ ಎಂದು ಶಾಸ್ತ್ರೀ ಹಿಂದೂಗಳಿಗೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಹೈದರಾಬಾದ್ ವಿವಿ ಕ್ಯಾಂಪಸ್‌ನಲ್ಲಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ – ತನಿಖೆಗೆ ಆದೇಶ

    ಇದನ್ನು ಸಾಧಿಸಲು ಸನಾತನ ಧರ್ಮದ ಎಲ್ಲಾ ಜನರು ಒಗ್ಗೂಡಬೇಕು. ಒಟ್ಟಾಗಿ ಮುಂದೆ ಬರಬೇಕು. ಮೊದಲ ಪವಾಡವೆಂದರೆ ಇಂದು ಭಾರತದ ಹಿಂದೂಗಳು ಒಂದಾಗುತ್ತಿದ್ದಾರೆ. ಎರಡನೇ ಪವಾಡವನ್ನು ಬಾಗೇಶ್ವರ ಧಾಮದಲ್ಲಿ ನೋಡಬೇಕು. ನೀವೇ ಬಂದು ನೋಡಬೇಕು ಎಂದು ತಿಳಿಸಿದ್ದಾರೆ.

    ಮೂರನೆಯ ಪವಾಡ ಏನೆಂದರೆ, ನಿಮ್ಮಲ್ಲಿ ಸನಾತನದ ಒಂದು ತುಣುಕಾದರೂ ಇದ್ದರೆ, ನೀವು ನನ್ನನ್ನು ಬೆಂಬಲಿಸಿ. ನಾನು ನಿಮಗೆ ಹಿಂದೂ ರಾಷ್ಟ್ರವನ್ನು ನೀಡುತ್ತೇನೆ. ನಾನು ರಾಜಕಾರಣಿಯಾಗಲು ಬಯಸುವುದಿಲ್ಲ. ನಾನು ಯಾವುದೇ ಪಕ್ಷವನ್ನು ಹೊಂದುವುದಿಲ್ಲ. ನಾನು ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ. ನಾವು ನಮ್ಮ ಸನಾತನವಾದಿಗಳನ್ನು ಒಗ್ಗೂಡಿಸುವ ಬಗ್ಗೆ ಮಾತ್ರ ಮಾತನಾಡಬೇಕಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗಣರಾಜ್ಯೋತ್ಸವಕ್ಕೆ ಒಂದೇ ವಾರದಲ್ಲಿ ಕರ್ನಾಟಕದ ಟ್ಯಾಬ್ಲೋ ರೆಡಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k