Tag: Dhivya Prakash

  • CCB ಅಧಿಕಾರಿಗಳ ಮುಂದೆ ಮೌನಾಚರಣೆ – ಚೈತ್ರಾಳ ಮುಂದಿರುವ ಆ 30 ಪ್ರಶ್ನೆಗಳೇನು?

    CCB ಅಧಿಕಾರಿಗಳ ಮುಂದೆ ಮೌನಾಚರಣೆ – ಚೈತ್ರಾಳ ಮುಂದಿರುವ ಆ 30 ಪ್ರಶ್ನೆಗಳೇನು?

    ಬೆಂಗಳೂರು: ಸಿಸಿಬಿ ಡ್ರಿಲ್ ತಪ್ಪಿಸಿಕೊಳ್ಳಲು ಬಾಯಲ್ಲಿ ನೊರೆ ಸೃಷ್ಟಿಸಿಕೊಂಡು ಮೂರ್ಛೆ ರೋಗದ ನಾಟಕವಾಡಿದ್ದ ವಂಚನೆ ಪ್ರಕರಣದ ಆರೋಪಿ ಚೈತ್ರಾ ಕುಂದಾಪುರ (Chaitra Kundapura) ಆಸ್ಪತ್ರೆ ಎಪಿಸೋಡ್‌ಗೆ ಬ್ರೇಕ್ ಬಿದ್ದಿದೆ. 3 ದಿನಗಳಿಂದ ವಿಕ್ಟೋರಿಯಾ ಆಸ್ಪತ್ರ‍್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಚೈತ್ರಾಳನ್ನ ಸೋಮವಾರ ಡಿಸ್ಚಾರ್ಜ್ ಮಾಡಲಾಗಿದೆ.

    ಆಸ್ಪೆçಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ ಪೊಲೀಸರು ಸಿಸಿಬಿ (CCB Police) ಕಚೇರಿಗೆ ಕರೆದೊಯ್ದಿದ್ದರು. ಇದೀಗ ಚೈತ್ರಾ ಆರೋಗ್ಯವಾಗಿದ್ದರು ಕೂಡ ತನಿಖಾಧಿಕಾರಿಗಳ ಮುಂದೆ ಮೌನಂ ಸಮ್ಮತ್ತಿ ಲಕ್ಷಣಂ ಎಂಬಂತೆ ಚೈತ್ರಾ ಮೌನ್ಯಕ್ಕೆ ಜಾರಿದ್ದಾಳೆ. ತನಿಖಾಧಿಕಾರಿಗಳ ಮುಂದೆ ಜಪ್ಪಯ್ಯ ಅಂದರೂ ಬಾಯ್ಬಿಡ್ತಿಲ್ಲ. ತನಿಖಾಧಿಕಾರಿಗಳ ಪ್ರಶ್ನೆಗೆ ಮೌನವೇ ಚೈತ್ರಾಳ ಉತ್ತರವಾಗಿದ್ದು, ಸುಸ್ತಾಗಿರುವಂತೆ ನಾಟಕವಾಡಲು ಶುರು ಮಾಡಿಕೊಂಡಿದ್ದಾಳೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ಮೇಲೆ ಮತ್ತೊಂದು FIR – ಸನಾತನ ಧರ್ಮ ಬಟ್ಟೆ ಮಳಿಗೆ ಪ್ರಕರಣದಲ್ಲೂ ವಂಚನೆ

    ಚೈತ್ರಾ ಮೌನಕ್ಕೆ ಜಾರಿರೋದ್ರಿಂದ ಉತ್ತರಿಸುವಂತೆ ಪ್ರಶ್ನಾವಳಿಗಳನ್ನ ಪಟ್ಟ ಮಾಡಿ ಸಿಸಿಬಿ ಕೊಟ್ಟಿದೆ. ರಿಕವರಿ ಮಾಡಿದ ಹಣ ಹೊರತುಪಡಿಸಿ ಉಳಿದ ಹಣದ ಎಲ್ಲಿ? ಸ್ವಾಮೀಜಿಗೆ ಎಷ್ಟು ಹಣ ಕೊಟ್ಟಿದ್ದಿರಿ? ಹೀಗೆ 30ಕ್ಕೂ ಹೆಚ್ಚು ಪ್ರಶ್ನಾವಳಿಗಳನ್ನ ಮಾಡಿ ಚೈತ್ರಾಗೆ ಉತ್ತರಿಸುವಂತೆ ಸೂಚಿಸಲಾಗಿದೆ. ಪ್ರಶ್ನಾವಳಿಗೂ ಸರಿಯಾಗಿ ಉತ್ತರ ಕೊಡಲು ನಿರಾಕರಿಸಿದ್ರೆ ಉಳಿದ ಆರೋಪಿಗಳ ಸಮ್ಮುಖದಲ್ಲಿ ವಿಚಾರಣೆ ಮಾಡಲು ಸಿಸಿಬಿ ತಯಾರಿ ಮಾಡಿಕೊಂಡಿದೆ. ಇದನ್ನೂ ಓದಿ: ಚೈತ್ರಾ ಕುಂದಾಪುರಗೆ ಪಿಟ್ಸ್ ಬಂದಿಲ್ಲ, ನೊರೆ ಅವರೇ ಮಾಡಿಕೊಂಡಿರೋದು: ಡಾ.ದಿವ್ಯಪ್ರಕಾಶ್

    ನಿನ್ನೆಯಷ್ಟೇ PMSSY ಆಸ್ಪತ್ರೆಯ ಸ್ಪೆಷಲ್ ಆಫೀಸರ್ ದಿವ್ಯ ಪ್ರಕಾಶ್ ಮಾತನಾಡಿ, ಎಲ್ಲ ತಪಾಸಣೆಯಲ್ಲೂ ನಾರ್ಮಲ್ ಇದೆ. ಇಸಿಜಿ ಕೂಡ ನಾರ್ಮಲ್ ಇದೆ. ನ್ಯೂರಾಲಾಜಿಸ್ಟ್, ಮನೋ ವೈದ್ಯರು ತಪಾಸಣೆ ಮಾಡಿದ್ದಾರೆ. ಎಲ್ಲರೂ ಕೂಡ ಸಮಸ್ಯೆ ಇಲ್ಲ. ಪಿಟ್ಸ್ ಬಗ್ಗೆ ಏನೂ ಕಂಡು ಬಂದಿಲ್ಲ, ನೊರೆಯನ್ನು ಅವರೇ ಸೃಷ್ಟಿ ಮಾಡಿಕೊಂಡಿದ್ದಾರೆ. ವೈದ್ಯರ ಸ್ಪಷ್ಟನೆ ಬಳಿಕ ಆಸ್ಪತ್ರೆ ಹಿಂಭಾಗದಿಂದ ಸಿಸಿಬಿ ಪೊಲೀಸರು ಚೈತ್ರಾಳನ್ನ ಸಿಸಿಬಿ ಕಚೇರಿಗೆ ಕರೆದೊಯ್ದಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 3 ದಿನಗಳ ಆಸ್ಪತ್ರೆ ನಾಟಕ ಬಂದ್ – ಆಸ್ಪತ್ರೆಯಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್‌

    3 ದಿನಗಳ ಆಸ್ಪತ್ರೆ ನಾಟಕ ಬಂದ್ – ಆಸ್ಪತ್ರೆಯಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್‌

    ಬೆಂಗಳೂರು: ವಿಚಾರಣೆ ಸಂದರ್ಭದಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದು, ಕಳೆದ ಮೂರು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರಳನ್ನ (Chaitra Kundapura) ವಿಕ್ಟೋರಿಯಾ ಆಸ್ಪತ್ರೆಯಿಂದ (Victoria Hospital) ಡಿಸ್ಚಾರ್ಜ್‌ ಮಾಡಲಾಗಿದೆ.

    ಸತತ ವೈದ್ಯಕೀಯ ತಪಾಸಣೆ ನಂತರ ಎಲ್ಲಾ ವರದಿಗಳು ನಾರ್ಮಲ್‌ ಬಂದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಿದ್ದು, ಅಲ್ಲಿಂದ ನೇರವಾಗಿ ಪೊಲೀಸರು ಸಿಸಿಬಿ (CCB Police) ಕಚೇರಿಗೆ ಕರೆತಂದಿದ್ದಾರೆ. ಚೈತ್ರಾಳ ತಲೆ ಹಾಗೂ ಮುಖಕ್ಕೆ ಮಾಸ್ಕ್‌ ಕಟ್ಟಿಸಿ ಆಸ್ಪತ್ರೆ ಹಿಂಬಾಗಿಲಿನಿಂದ ಪೊಲೀಸರು ಕರೆ ತಂದಿದ್ದಾರೆ. ಇದನ್ನೂ ಓದಿ: ಚೈತ್ರಾ ಕುಂದಾಪುರಗೆ ಪಿಟ್ಸ್ ಬಂದಿಲ್ಲ, ನೊರೆ ಅವರೇ ಮಾಡಿಕೊಂಡಿರೋದು: ಡಾ.ದಿವ್ಯಪ್ರಕಾಶ್

    ಇಂದಿನಿಂದಲೇ ವಿಚಾರಣೆ ನಡೆಸಲು ಎಲ್ಲಾ ಹಂತದ ಸಿದ್ಧತೆ ಮಾಡಿಕೊಂಡಿದ್ದಾರೆ. ಐದಾರು ದಿನಗಳ ಕಾಲ ಕಸ್ಟಡಿಯಲ್ಲಿ ವಿಚಾರಣೆ ನಡೆಸಿ, ನಂತರ ಸ್ಥಳ ಮಹಜರು ನಡೆಸಬೇಕು. ಬಳಿಕ ಉಳಿದ ಆರೋಪಿಗಳನ್ನೂ ಚೈತ್ರಾಳ ಮುಖಾಮುಖಿಯಾಗಿ ಕೂರಿಸಿ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಗಣೇಶ ಹಬ್ಬದಂದೇ ಇಸ್ರೋ ಗುಡ್‌ನ್ಯೂಸ್ – ಡೇಟಾ ಸಂಗ್ರಹಿಸಲು ಆರಂಭಿಸಿದ ಆದಿತ್ಯ L1

    ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರಳನ್ನ ಸಿಸಿಬಿ ಪೊಲೀಸರು ಸೆಪ್ಟೆಂಬರ್ 15 ರಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದರು. 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಳು. ತಕ್ಷಣವೇ ಆಕೆಯನ್ನ ವಿಕ್ಟೋರಿಯಾ ಟ್ರಾಮಾ ಕೇರ್ ಸೆಂಟರ್‌ಗೆ ದಾಖಲಿಸಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚೈತ್ರಾ ಕುಂದಾಪುರಗೆ ಪಿಟ್ಸ್ ಬಂದಿಲ್ಲ, ನೊರೆ ಅವರೇ ಮಾಡಿಕೊಂಡಿರೋದು: ಡಾ.ದಿವ್ಯಪ್ರಕಾಶ್

    ಚೈತ್ರಾ ಕುಂದಾಪುರಗೆ ಪಿಟ್ಸ್ ಬಂದಿಲ್ಲ, ನೊರೆ ಅವರೇ ಮಾಡಿಕೊಂಡಿರೋದು: ಡಾ.ದಿವ್ಯಪ್ರಕಾಶ್

    ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವ ವಿಚಾರದಲ್ಲಿ 5 ಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ (Chaitra Kundapura) ಆರೋಗ್ಯ ಚೆನ್ನಾಗಿದೆ ಎಂಬುದು ವೈದ್ಯಕೀಯ ತಪಾಸಣೆ ಬಳಿಕ ಸ್ಪಷ್ಟವಾಗಿದೆ.

    ಈ ಕುರಿತು ಮಾತನಾಡಿರುವ ವೈದ್ಯ ಡಾ.ದಿವ್ಯಪ್ರಕಾಶ್ (Dhivya Prakash), ಚೈತ್ರಾಳ ಆರೋಗ್ಯ ಎಲ್ಲಾ ತಪಾಸಣೆಯಲ್ಲೂ ನಾರ್ಮಲ್ ಇದೆ, ಇಸಿಜಿ ಕೂಡ ನಾರ್ಮಲ್ ಇದೆ. ನ್ಯೂರಾಲಾಜಿಸ್ಟ್, ಮನೋ ವೈದ್ಯರು ತಪಾಸಣೆ ಮಾಡಿದ್ದಾರೆ. ಎಲ್ಲೂ ಆರೋಗ್ಯ ಸಮಸ್ಯೆ ಕಂಡುಬಂದಿಲ್ಲ. ಇಂದೇ ಆಕೆಯನ್ನ ಡಿಸ್ಚಾರ್ಜ್ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸದ್ಯಕ್ಕೆ ಆಸ್ಪತ್ರೆಯಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್‌ ಇಲ್ಲ: ಬಾಲಾಜಿ ಪೈ

    ಚೈತ್ರಾಳ ಬಾಯಲ್ಲಿ ನೊರೆ ಬಂದ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದು ಫಂಕ್ಷನಲ್ ಆಗಿ ಆಗಿರೋದು. ಅವರೇ ಅದನ್ನ ಮಾಡಿಕೊಂಡಿರೋದು. ಪಿಟ್ಸ್ ಏನೂ ಬಂದಿಲ್ಲ. ಬೆಳಗ್ಗೆ ಸಿಸಿಬಿ ಅಧಿಕಾರಿಗಳು ವಿಚಾರಿಸಿದ್ದಾರೆ, ಆರೋಗ್ಯ ಚೆನ್ನಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ವಂಚನೆ ಪ್ರಕರಣ- ಇದುವರೆಗೂ 3 ಕೋಟಿಯಷ್ಟು ಮೌಲ್ಯದ ನಗದು, ಚಿನ್ನ ಜಪ್ತಿ

    ಇದೇ ವೇಳೆ ಪಿಟ್ಸ್ ಇತ್ತ ಎಂಬ ವಿಚಾರಕ್ಕೆ ಉತ್ತರಿಸಿದ ವೈದ್ಯರು, ಪಿಟ್ಸ್ ಪತ್ತೆ ಮಾಡೋದಕ್ಕೆ ಎಂಆರ್‌ಐ ಸ್ಕ್ಯಾನಿಂಗ್ ಮಾಡಿದ್ದೀವಿ. ಇಇಜಿ ಸ್ಕ್ಯಾನಿಂಗ್ ಕೂಡ ಮಾಡಿದ್ದೇವೆ ಎಲ್ಲಾ ನಾರ್ಮಲ್ ಇದೆ. ಸದ್ಯಕ್ಕೆ ಪಿಟ್ಸ್ ಕಂಡು ಬಂದಿಲ್ಲ. ನ್ಯೂರಾಲಾಜಿಸ್ಟ್ ಕೆಲವು ಮಾತ್ರೆ ಕೊಟ್ಟಿದ್ದಾರೆ ಎಂದು ವಿವರಿಸಿದ್ದಾರೆ.

    ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರಳನ್ನ ಸಿಸಿಬಿ ಪೊಲೀಸರು ಸೆಪ್ಟೆಂಬರ್ 15 ರಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದರು. 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಳು. ತಕ್ಷಣವೇ ಆಕೆಯನ್ನ ವಿಕ್ಟೋರಿಯಾ ಟ್ರಾಮಾ ಕೇರ್ ಸೆಂಟರ್‌ಗೆ ದಾಖಳಿಸಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]