Tag: Dhoni Retirement

  • IPL 2024: ನಿವೃತ್ತಿ ಬಗ್ಗೆ ಮಹತ್ವದ ಸುಳಿವು ಕೊಟ್ಟ ಮಹಿ – ಅಭಿಮಾನಿಗಳಿಗೆ ಬಿಗ್‌ ಶಾಕ್‌!

    IPL 2024: ನಿವೃತ್ತಿ ಬಗ್ಗೆ ಮಹತ್ವದ ಸುಳಿವು ಕೊಟ್ಟ ಮಹಿ – ಅಭಿಮಾನಿಗಳಿಗೆ ಬಿಗ್‌ ಶಾಕ್‌!

    ಮುಂಬೈ: 16ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಬಳಿಕ ನಿವೃತ್ತಿ (Dhoni Retirement) ಸುಳಿವು ನೀಡಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ತಂಡದ ನಾಯಕ ಎಂ.ಎಸ್‌ ಧೋನಿ 2024ರ ಐಪಿಎಲ್‌ನಲ್ಲಿ ಪಾಲ್ಗೊಳ್ಳುವ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ.

    ಪ್ರಸಕ್ತ ವರ್ಷದ ಐಪಿಎಲ್‌ನಲ್ಲಿ ಸಿಎಸ್‌ಕೆ ಚಾಂಪಿಯನ್‌ ಆಗಿ ಹೊರಹೊಮ್ಮಿತು. ಐಪಿಎಲ್‌ ಬಳಿಕ ಧೋನಿ ಮೊಣಕಾಲು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿರುವ ಧೋನಿ, 2024ರ ಐಪಿಎಲ್‌ ಕುರಿತು ಮಾತನಾಡಿದ್ದಾರೆ. ಮಿನಿ ಹರಾಜಿಗೂ ಮುನ್ನ ಆಟಗಾರರ ಪಟ್ಟಿ ಸಲ್ಲಿಸುವಂತೆ ನವೆಂಬರ್‌ 15ರ ವರೆಗೆ ಗಡುವು ನೀಡಲಾಗಿದೆ. ಈ ನಡುವೆ ಮತ್ತೊಮ್ಮೆ ಧೋನಿ ತಮ್ಮ ನಿವೃತ್ತಿ ಬಗ್ಗೆ ಸುಳಿವು ಕೊಟ್ಟಿದ್ದಾರೆ.

    ಸಂದರ್ಶನವೊಂದರಲ್ಲಿ ಮಾತನಾಡಿರುವ ಮಹಿ, ನನಗೆ ಮೊಣಕಾಲಿನ ಶಸ್ತ್ರಚಿಕಿತ್ಸೆಯಾಗಿದೆ (Knee Surgery). ಎಲ್ಲವೂ ಅಂದುಕೊಂಡಂತೆ ನಡೆದರೆ, ನಾನು ಒಂದು ವರ್ಷ ಐಪಿಎಲ್‌ ಆಡುವುದನ್ನು ನೋಡುತ್ತೀರಿ. ಇಲ್ಲದಿದ್ದರೆ ಅಭಿಮಾನಿಗಳೊಂದಿಗೆ ಕುಳಿತು ಪಂದ್ಯವನ್ನು ವೀಕ್ಷಣೆ ಮಾಡುತ್ತೇನೆ ಎಂದು ಮುಗುಳ್ನಕ್ಕಿದ್ದಾರೆ. ಇದನ್ನೂ ಓದಿ: ಪಾಕ್‌ ತಂಡಕ್ಕೆ ಇನ್ಮುಂದೆ ಬಿರಿಯಾನಿ ಬಂದ್‌ – ಆನ್‌ಲೈನ್‌ನಲ್ಲಿ ಬುಕ್‌ ಮಾಡಿ ಸಿಕ್ಕಿಬಿದ್ದ ಆಟಗಾರರು

    ಧೋನಿ ಟೀಂ ಇಂಡಿಯಾ (Team India) ಬಳಿಕ ಅತೀ ಹೆಚ್ಚು ಭಾವನಾತ್ಮಕವಾಗಿ ಸಂಬಂಧ ಹೊಂದಿರುವ ತಂಡವೆಂದರೆ ಅದು ಚೆನ್ನೈ ಸೂಪರ್ ಕಿಂಗ್ಸ್ ತಂಡ. ಐಪಿಎಲ್ 2008ರಲ್ಲಿ ಆರಂಭವಾದ ಬಳಿಕ ಚೆನ್ನೈ ಪರ ಆಡುತ್ತಿರುವ ಧೋನಿ ವಿಶೇಷವಾದ ಸಂಬಂಧ ಚೆನ್ನೈ ತಂಡ ಮತ್ತು ತಮಿಳುನಾಡಿನ ಜನರೊಂದಿಗೆ ಹೊಂದಿದ್ದಾರೆ. 16ನೇ ಐಪಿಎಲ್‌ ಆವೃತ್ತಿಯಲ್ಲೇ ಮಹಿ ನಿವೃತ್ತಿ ಘೋಷಣೆ ಮಾಡುವ ಎಲ್ಲ ಸುಳಿವು ನೀಡಿದ್ದರು. 5ನೇ ಬಾರಿ ಟ್ರೋಫಿ ಗೆದ್ದ ಬಳಿಕ ಮಹಿ 2024ರ ಐಪಿಎಲ್‌ನಲ್ಲೂ ಆಡುವುದಾಗಿ ಘೋಷಣೆ ಮಾಡಿದರು. ಇದನ್ನೂ ಓದಿ: ವಿಶ್ವಕಪ್‌ನ ಟಾಪ್‌ 7 ತಂಡಗಳು 2025 ರ ಚಾಂಪಿಯನ್ಸ್‌ ಟ್ರೋಫಿಗೆ – ಪಾಕಿಸ್ತಾನ ಡೈರೆಕ್ಟ್‌ ಎಂಟ್ರಿ

    ಧೋನಿ ನಾಯಕತ್ವದಲ್ಲಿ ಚೆನ್ನೈ ತಂಡ 2010, 2011, 2018, 2021 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 2023ರ ಆವೃತ್ತಿಯಲ್ಲಿ ಚಾಂಪಿಯನ್‌ ಆಗಿದ್ದ ಗುಜರಾತ್‌ ಟೈಟಾನ್ಸ್‌ ತಂಡವನ್ನು ಬಗ್ಗು ಬಡಿದು ಚೆನ್ಮೈ 5ನೇ ಬಾರಿಗೆ ಚಾಂಪಿಯನ್‌ ಪಟ್ಟ ಅಲಂಕರಿಸಿತು. ಅಲ್ಲದೇ 2008, 2012, 2013, 2015, 2019ರಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿದೆ. ಇದನ್ನೂ ಓದಿ: IPL Champions: ಗುಡ್‌ನ್ಯೂಸ್‌ – ಸದ್ಯಕ್ಕಿಲ್ಲ ನಿವೃತ್ತಿ, ಮುಂದಿನ IPLನಲ್ಲೂ ಕಣಕ್ಕಿಳಿಯಲಿದ್ದಾರೆ ಮಹಿ

    16ನೇ ಆವೃತ್ತಿ ಐಪಿಎಲ್‌ ಬಳಿಕ ಮಹಿ, ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ, ನನಗೆ ನಿವೃತ್ತಿ ಘೋಷಿಸಲು ಇದು ನನಗೆ ಉತ್ತಮ ಸಮಯವಾಗಿದೆ. ಈ ವರ್ಷ ನಾನು ಎಲ್ಲೇ ಹೋಗಿದ್ದರು ನನ್ನ ಮೇಲೆ ಪ್ರೀತಿ ಮತ್ತು ವಾತ್ಸಲ್ಯ ತೋರಿಸಿದರು. ಎಲ್ಲರಿಗೂ ತುಂಬಾ ಧನ್ಯವಾದಗಳು ಎಂದು ಹೇಳುವುದು ಸುಲಭದ ವಿಷಯ. ಆದ್ರೆ ಕಠಿಣ ವಿಷಯವೆಂದರೆ ಇನ್ನೂ 9 ತಿಂಗಳು ಕಷ್ಟಪಟ್ಟು ಮುಂದಿನ ಐಪಿಎಲ್ ಆಡುವುದು. ಇದು ನನ್ನ ದೈಹಿಕ ಸಾಮರ್ಥ್ಯಕ್ಕೆ ಸುಲಭವಲ್ಲ. ಆದ್ರೆ ಅಭಿಮಾನಿಗಳಿಗೆ ಉಡುಗೊರೆಯಾಗಲಿದೆ ಎಂದು ತಿಳಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲಾಕ್‍ಡೌನ್ ಬಳಿಕ ಧೋನಿ ಪ್ಲಾನ್ ರಿವೀಲ್ ಮಾಡಿದ ಸಾಕ್ಷಿ..!

    ಲಾಕ್‍ಡೌನ್ ಬಳಿಕ ಧೋನಿ ಪ್ಲಾನ್ ರಿವೀಲ್ ಮಾಡಿದ ಸಾಕ್ಷಿ..!

    ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿಯ ಕುರಿತು ಭಾರೀ ಚರ್ಚೆ ನಡೆಯುತ್ತಿದೆ. ಕಳೆದ ಬುಧವಾರ ‘#DhoniRetires’ ಹ್ಯಾಶ್ ಟ್ಯಾಗ್ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗುವ ಮೂಲಕ ಭಾರೀ ಚರ್ಚೆಗೆ ಕಾರಣವಾಗಿತ್ತು. ಮರುದಿನ ಧೋನಿ ಪತ್ನಿ ಇದಕ್ಕೆ ಕೌಂಟರ್ ನೀಡುವ ಹಿನ್ನೆಲೆಯಲ್ಲಿ ‘#DhoniNeverRetire’ ಎಂದು ಟ್ಯಾಗ್ ಮಾಡಿ ಟ್ರೆಂಡ್ ಮಾಡಿದ್ದರು. ಆದರೆ ಧೋನಿ ನಿವೃತ್ತಿ ಕುರಿತು ಹಲವು ಆಟಗಾರು ತಮ್ಮ ಪ್ರತಿಕ್ರಿಯೆ ನೀಡಿದ್ದು, ವಿದಾಯದ ಪಂದ್ಯವನ್ನಾದರೂ ಆಡಲು ಅನುಮತಿ ನೀಡಬೇಕು ಎಂದು ಹೇಳಿದ್ದರು. ಆದರೆ ಇಂತಹ ಯಾವುದೇ ಸುದ್ದಿಗಳಿಗೆ ಇದುವರೆಗೂ ಧೋನಿ ಪ್ರತಿಕ್ರಿಯೆ ನೀಡಿಲ್ಲ.

    ಲಾಕ್‍ಡೌನ್ ಮುಕ್ತಾಯದ ಬಳಿಕ ಧೋನಿ ಪ್ಲಾನ್ ಏನು ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ. ಈ ಕುರಿತು ಸಾಕ್ಷಿ ಧೋನಿ ಪ್ರತಿಕ್ರಿಯೆ ನೀಡಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಇನ್‍ಸ್ಟಾ ಲೈವ್‍ನಲ್ಲಿ ಈ ಕುರಿತು ಮಾತನಾಡಿದ್ದಾರೆ. ಲಾಕ್‍ಡೌನ್ ಬಳಿಕ ಕ್ರಿಕೆಟ್ ಪಂದ್ಯಗಳಿದ್ದರೆ ಧೋನಿ ಆಡುತ್ತಾರೆ. ಒಂದೊಮ್ಮೆ ಮ್ಯಾಚ್ ಇಲ್ಲದಿದ್ದರೆ ನಾನು, ಧೋನಿ ಇಬ್ಬರೂ ಹಿಮ ಬೆಟ್ಟಗಳಲ್ಲಿ ವಿಹಾರ ನಡೆಸಬೇಕೆಂಬ ಯೋಜನೆ ಮಾಡಿದ್ದಾಗಿ ತಿಳಿಸಿದ್ದಾರೆ.

    ಉತ್ತರಖಂಡದ ಸಣ್ಣ ಹಳ್ಳಿಯೊಂದಕ್ಕೆ ಭೇಟಿ ನೀಡಲು ಪ್ಲಾನ್ ಮಾಡಿದ್ದೇವೆ. ಆ ಪ್ರದೇಶದಲ್ಲಿ ಹಿಮ ಹೆಚ್ಚಾಗಿರುತ್ತದೆ. ಧೋನಿಗೆ ಹಿಮ ಎಂದರೇ ಬಹಳ ಇಷ್ಟ. ಆದ್ದರಿಂದ ಕೆಲ ದಿನಗಳ ಸಮಯವನ್ನು ಅಲ್ಲಿಯೇ ಕಳೆಯುತ್ತೇವೆ. ಧೋನಿ ಡ್ರೈವಿಂಗ್ ಎಂದರೂ ಬಹಳ ಇಷ್ಟ. ರಸ್ತೆ ಮಾರ್ಗದಲ್ಲೇ ಪ್ರವಾಸ ಕೈಗೊಳ್ಳುತ್ತೇವೆ. ಇಂದಿಗೂ ಧೋನಿ ರಾಂಚಿ ಕ್ರೀಡಾಂಗಣಕ್ಕೆ ತರಬೇತಿಗೆ ತೆರಳುವ ವೇಳೆ ಸೆಲ್ಫ್ ಡ್ರೈವಿಂಗ್ ಮಾಡಿಕೊಂಡು ಹೋಗುತ್ತಾರೆ ಎಂದು ಸಾಕ್ಷಿ ತಿಳಿಸಿದ್ದಾರೆ.

     

    View this post on Instagram

     

    Holiday mode ! ❄️

    A post shared by Sakshi Singh Dhoni (@sakshisingh_r) on

    ಇದೇ ವೇಳೆ ಧೋನಿ ನಿವೃತ್ತಿ ಬಗ್ಗೆ ಮಾತನಾಡಿದ ಸಾಕ್ಷಿ, ಅಂದು ನನಗೆ ಸ್ನೇಹಿತೆಯೊಬ್ಬರು ಫೋನ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗುತ್ತಿರುವ ಬಗ್ಗೆ ಕೇಳಿದ್ದರು. ಅಂದು ಮಧ್ಯಾಹ್ನದಿಂದಲೇ #DhoniRetires ಟ್ರೆಂಡ್ ಆಗುತ್ತಿತ್ತು. ಪರಿಣಾಮ ನನಗೆ ಏನಾಗುತ್ತೆ ಎಂಬುದು ಅರ್ಥವಾಗಲಿಲ್ಲ. ಆ ಬಳಿಕ ಈ ಬಗ್ಗೆ ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದೆ. ಯಾರು ಏನು ಹೇಳಿದರೂ ನಾನು ಮಾಡಬೇಕು ಎಂದುಕೊಂಡಿದ್ದನ್ನು ಮಾಡಿದ್ದೇನೆ. ಅಷ್ಟಕ್ಕೆ ನನ್ನ ಕೆಲಸ ಮುಕ್ತಾಯವಾಗಿತ್ತು ಎಂದು ವಿವರಿಸಿದ್ದಾರೆ.

    ಇದೇ ಸಂದರ್ಭದಲ್ಲಿ ಧೋನಿಗೆ ಹೇರ್ ಸ್ಟೈಲ್ ಕುರಿತು ಮಾತನಾಡಿರುವ ಸಾಕ್ಷಿ, ಅದೃಷ್ಟ ಎಂಬಂತೆ ಧೋನಿ ಲಾಂಗ್ ಹೇರ್ ಸ್ಟೈಲ್ ವೇಳೆ ಅವರನ್ನು ನಾನು ನೋಡಿರಲಿಲ್ಲ. ಆರೆಂಜ್ ಬಣ್ಣದ ಹೇರ್ ಸ್ಟೈಲ್ ನೋಡಿದ್ದರೆ ಮತ್ತೆ ಅವರನ್ನು ಕಣ್ಣೆತ್ತಿ ನೋಡುತ್ತಿರಲಿಲ್ಲ. ದೈಹಿಕ ಸೌಂದರ್ಯದ ಬಗ್ಗೆ ಎಲ್ಲರಿಗೂ ಅವರದ್ದೇ ಅಭಿಪ್ರಾಯವಿರುತ್ತದೆ ಎಂದು ಸಾಕ್ಷಿ ಹೇಳಿದ್ದಾರೆ.

  • ಧೋನಿ ಭವಿಷ್ಯದ ಬಗ್ಗೆ ನಿಮ್ಮ ನಿಲುವೇನು?- ಸಂದರ್ಶನದಲ್ಲಿ ಸಿಎಸಿ ಟ್ರಿಕ್ಕಿ ಪ್ರಶ್ನೆ

    ಧೋನಿ ಭವಿಷ್ಯದ ಬಗ್ಗೆ ನಿಮ್ಮ ನಿಲುವೇನು?- ಸಂದರ್ಶನದಲ್ಲಿ ಸಿಎಸಿ ಟ್ರಿಕ್ಕಿ ಪ್ರಶ್ನೆ

    ಮುಂಬೈ: ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ಕನ್ನಡಿಗ ಸುನಿಲ್ ಜೋಶಿ ಆಯ್ಕೆಯಾಗಿರುವ ಸಂಗತಿ ಈಗಾಗಲೇ ತಿಳಿದಿದೆ. ಆದರೆ ಸಮಿತಿಯ ಸದಸ್ಯರ ಆಯ್ಕೆ ವೇಳೆ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ಕೇಳಿರುವ ಕೆಲ ಪ್ರಶ್ನೆಗಳು ಬಹಿರಂಗವಾಗಿದ್ದು, ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿಯ ಬಗ್ಗೆ ಸಂದರ್ಶನದಲ್ಲಿ ಪ್ರಶ್ನಿಸಲಾಗಿದೆ.

    ಆಯ್ಕೆ ಸಮಿತಿಗೆ ಆಯ್ಕೆಯ ಅಭ್ಯರ್ಥಿಗಳಾಗಿದ್ದ ಕರ್ನಾಟಕದ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ, ವೆಂಕಟೇಶ್ ಪ್ರಸಾದ್, ರಾಜೇಶ್ ಚೌವ್ಹಾಣ್, ಸುನಿಲ್ ಜೋಶಿ, ಹರ್ವಿಂದರ್ ಸಿಂಗ್ ಸಂದರ್ಶನದಲ್ಲಿ ಭಾಗಿಯಾಗಿದ್ದರು.

    ಆಯ್ಕೆ ಸಮಿತಿಯ ಸದಸ್ಯರು ಧೋನಿ ಅವರು ಟೀಂ ಇಂಡಿಯಾ ತಂಡಕ್ಕೆ ಕಮ್‍ಬ್ಯಾಕ್ ಮಾಡುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ. ಆದ್ದರಿಂದ ಸಂದರ್ಶನದ ಸಂದರ್ಭದಲ್ಲಿ ಧೋನಿ 2020ರ ಐಸಿಸಿ ಟಿ20 ಟೂರ್ನಿಗೆ ಆಯ್ಕೆ ಮಾಡುವ ಕುರಿತು ಪ್ರಶ್ನೆ ಮಾಡಲಾಗಿದೆ. ಇದೇ ವೇಳೆ ಅವರಿಗೆ ಬಿಸಿಸಿಐ ಆಯ್ಕೆ ಸಮಿತಿ ಸದಸ್ಯ ಅಥವಾ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥರಾಗ ಬೇಕೇ ಎಂಬ ಪ್ರಶ್ನೆಯನ್ನು ಕೇಳಲಾಗಿದೆ. ಅಂತಿಮವಾಗಿ ಕನ್ನಡಿಗ ಸುನಿಲ್ ಜೋಶಿ ಜೊತೆಗೆ ಹರ್ವಿಂದರ್ ಸಿಂಗ್ ಅವರಿಗೆ ಆಯ್ಕೆ ಸಮಿತಿಯಲ್ಲಿ ಅವಕಾಶ ನೀಡಲಾಗಿದೆ. ಅಂದಹಾಗೇ ದೇವಾಂಗ್ ಗಾಂಧಿ, ಶರಣ್‍ದೀಪ್ ಸಿಂಗ್, ಜತಿನ್ ಪರಾಂಜಪೆ ಆಯ್ಕೆ ಸಮಿತಿಯಲ್ಲಿದ್ದಾರೆ.

    ಕಳೆದ ವರ್ಷ ನಡೆದಿದ್ದ ಐಸಿಸಿ ವಿಶ್ವಕಪ್ ಸೆಮಿ ಫೈನಲ್ ಪಂದ್ಯದ ಬಳಿಕ ಧೋನಿ ಟೀಂ ಇಂಡಿಯಾ ಪರ ಆಡಿಲ್ಲ. ತಿಂಗಳುಗಳು ಕಳೆದರು ಧೋನಿ ಅವರ ನಿವೃತ್ತಿ ಅಥವಾ ಕಮ್‍ಬ್ಯಾಕ್ ಬಗ್ಗೆ ಯಾವುದೇ ಸ್ಪಷ್ಟನೆ ಲಭಿಸಿಲ್ಲ. ಇಂತಹ ಸಮಯದಲ್ಲಿ ಬಿಸಿಸಿಐ ಆಯ್ಕೆ ಸಮಿತಿಯ ಸದಸ್ಯರ ನೇಮಕ ನಡೆದಿದೆ. ಸದಸ್ಯರ ಸಾಮರ್ಥ್ಯ, ನೇರ ನಡೆ ತಿಳಿಯುವ ಸಲುವಾಗಿ ಸಿಎಸಿ ಕೆಲ ಸಾಮಾನ್ಯ ಪ್ರಶ್ನೆಗಳೊಂದಿಗೆ ಧೋನಿ ನಿವೃತ್ತಿಯ ಕುರಿತು ಪ್ರಶ್ನೆ ಮಾಡಿತ್ತು. ಸದಸ್ಯರು ಕೂಡ ಈ ಕುರಿತು ನೇರ ಉತ್ತರಗಳನ್ನು ನೀಡಿದ್ದಾರೆ.

    38 ವರ್ಷದ ರಾಂಚಿ ಕ್ರಿಕೆಟಿಗ ಧೋನಿ ಅವರನ್ನು ಬಿಸಿಸಿಐ 2019-20ರ ಒಪ್ಪಂದದಿಂದಲೂ ಕೈಬಿಟ್ಟಿತ್ತು. ಇದರ ಬೆನ್ನಲ್ಲೇ ಧೋನಿ ನಿವೃತ್ತಿಯ ಕುರಿತು ಪ್ರತಿಕ್ರಿಯೆ ನೀಡಿದ್ದ ಟೀಂ ಇಂಡಿಯಾ ಹೆಡ್‍ಕೋಚ್ ರವಿಶಾಸ್ತ್ರಿ, 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ತೋರುವ ಪ್ರದರ್ಶನ ಮತ್ತೆ ಟೀಂ ಇಂಡಿಯಾಗೆ ಧೋನಿ ಕಮ್‍ಬ್ಯಾಕ್ ಮಾಡುವ ಬಗ್ಗೆ ಸ್ಪಷ್ಟಪಡಿಸುತ್ತದೆ ಎಂದು ಹೇಳಿದ್ದರು.

    ಇತ್ತ ಸುನಿಲ್ ಜೋಶಿ ಅವರ ಆಯ್ಕೆ ಕುರಿತು ಪ್ರತಿಕ್ರಿಯೆ ನೀಡಿರುವ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ಸದಸ್ಯ ಮದನ್ ಲಾಲ್, ಮುಂದಿನ 1 ವರ್ಷದವರೆಗೆ ಪ್ರಸ್ತುತ ಆಯ್ಕೆ ಸಮಿತಿಯ ಕಾರ್ಯವೈಖರಿಯನ್ನು ಸಿಎಸಿ ನಿರ್ಣಯಿಸುತ್ತದೆ. ನಂತರ ಒಪ್ಪಂದವನ್ನು ವಿಸ್ತರಿಸಲು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಈ ಕೆಲಸಕ್ಕಾಗಿ ನಾವು ಇಬ್ಬರು ಅತ್ಯುತ್ತಮ ವ್ಯಕ್ತಿಗಳಾದ ಸುನಿಲ್ ಜೋಶಿ ಹಾಗೂ ಹರ್ವಿಂದರ್ ಸಿಂಗ್ ಆಯ್ಕೆ ಮಾಡಿದ್ದೇವೆ. ಸುನಿಲ್ ಜೋಶಿ ಅವರ ಆಲೋಚನೆ ಬಹಳ ಸ್ಪಷ್ಟವಾಗಿದೆ. ವಿಶೇಷವಾಗಿ ಅವರು ಬಹಳ ಅನುಭವಿ ಆಟಗಾರ. ಬಾಂಗ್ಲಾದೇಶದ ಕ್ರಿಕೆಟ್ ತಂಡದೊಂದಿಗೆ ಅವರು ಕೆಲಸ ಮಾಡಿದ್ದಾರೆ ಎಂದು ಮದನ್ ಲಾಲ್ ತಿಳಿಸಿದ್ದರು.

    ಮಾಜಿ ಎಡಗೈ ಸ್ಪಿನ್ನರ್ ಸುನಿಲ್ ಜೋಶಿ ಭಾರತ ಪರ 15 ಟೆಸ್ಟ್ ಹಾಗೂ 69 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್ ನಲ್ಲಿ 41 ವಿಕೆಟ್ ಮತ್ತು ಏಕದಿನ ಪಂದ್ಯಗಳಲ್ಲಿ 69 ವಿಕೆಟ್‍ಗಳನ್ನು ಪಡೆದಿದ್ದಾರೆ. ಜೋಶಿ ಹೈದರಾಬಾದ್ ಹಾಗೂ ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ತಂಡದ ಕೋಚ್ ಆಗಿ ಸೇವೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ಬಾಂಗ್ಲಾದೇಶ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸ್ಪಿನ್ ಬೌಲಿಂಗ್ ಕೋಚ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಉಳಿದಂತೆ ಹರ್ವಿಂದರ್ ಸಿಂಗ್ ಭಾರತದ ಪರ 3 ಟೆಸ್ಟ್ ಮತ್ತು 16 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅವರು ಪಂಜಾಬ್ ಮತ್ತು ರೈಲ್ವೆ ಪರ ದೇಶೀಯ ಕ್ರಿಕೆಟ್ ಆಡಿದ್ದಾರೆ.