Tag: Dhruv Sarja

  • ಅತ್ತಿಗೆಯ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತ ಧ್ರುವ ಸರ್ಜಾ : ‘ತತ್ಸಮ ತದ್ಭವ’ ಟ್ರೈಲರ್ ರಿಲೀಸ್

    ಅತ್ತಿಗೆಯ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತ ಧ್ರುವ ಸರ್ಜಾ : ‘ತತ್ಸಮ ತದ್ಭವ’ ಟ್ರೈಲರ್ ರಿಲೀಸ್

    ಮೇಘನಾ ರಾಜ್ ಸರ್ಜಾ (Meghana Raj) ಹಲವು ವರ್ಷಗಳ ನಂತರ ನಟಿಸಿರುವ ‘ತತ್ಸಮ ತದ್ಭವ’ (Tatsama Tadbhava) ಚಿತ್ರದ ಟ್ರೈಲರ್ (Trailer) ಇತ್ತೀಚೆಗೆ ಬಿಡುಗಡೆಯಾಯಿತು. ಧ್ರುವ ಸರ್ಜಾ (Dhruv Sarja) ಹಾಗೂ ಡಾಲಿ ಧನಂಜಯ (Dhananjay) ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೈಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಯಶಸ್ಸನ್ನು ಹಾರೈಸಿದರು. ಹಿರಿಯ ನಟ ಸುಂದರರಾಜ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಆನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.

    ನಾನು ಸಿನಿಮಾದಲ್ಲಿ ನಟಿಸಬಾರದು ಎಂದು ನಿರ್ಧರಿಸಿದಾಗ ಬಂದ ಸಿನಿಮಾವಿದು ಎಂದು ಮಾತು ಆರಂಭಿಸಿದ ಮೇಘನರಾಜ್ ಸರ್ಜಾ, ಈ ಚಿತ್ರ ಆರಂಭವಾಗಲು ಕಾರಣ ನನ್ನ ಪತಿ ಚಿರು. ಅವರಿಗೆ ಪ್ರಜ್ವಲ್ (Prajwal Devaraj) ಹಾಗೂ ಪನ್ನಗ ಅವರ ಜೊತೆ ಸೇರಿ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಬೇಕೆಂಬ ಆಸೆಯಿತ್ತು. ಆನಂತರ ಪನ್ನಗಾಭರಣ ಈ ಚಿತ್ರದ ಕಥೆಯನ್ನು ಹೇಳಲು ನಿರ್ದೇಶಕರನ್ನು ಮನೆಗೆ ಕಳುಹಿಸಿದರು. ಕಥೆ ಇಷ್ಟವಾಯಿತು. ಅಭಿನಯಿಸಿದ್ದೇನೆ. ಪನ್ನಗಾಭರಣ, ಸ್ಫೂರ್ತಿ ಅನಿಲ್ ಹಾಗೂ ಚೇತನ್ ನಂಜುಂಡಯ್ಯ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಪ್ರಜ್ವಲ್ ಅಭಿನಯಿಸಿದ್ದಾರೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ನಾನು ಈ ಚಿತ್ರ ಮಾಡಲು ಸಹಕಾರ ನೀಡಿದ ನನ್ನ ಎರಡು ಕುಟುಂಬಕ್ಕೆ ಧನ್ಯವಾದ. ಟ್ರೈಲರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಹಾಗೂ ಧನಂಜಯ ಅವರಿಗೆ ವಿಶೇಷ ಧನ್ಯವಾದ ಎಂದರು.

    ನಾನು ಈವರೆಗೂ ಮಾಡದ ಪಾತ್ರ ಈ ಚಿತ್ರದಲ್ಲಿ ಮಾಡಿದ್ದೇನೆ. ಬಹಳ ಇಷ್ಟಪಟ್ಟು ಮಾಡಿರುವ ಸಿನಿಮಾವಿದು. ಟ್ರೇಲರ್ ಗೆ ನಮ್ಮ ತಂದೆ ದೇವರಾಜ್ ಅವರು ಧ್ವನಿ ನೀಡಿದ್ದಾರೆ ಎಂದು ಪ್ರಜ್ವಲ್ ದೇವರಾಜ್ ತಿಳಿಸಿದರು. ತತ್ಸಮ ತದ್ಭವ ಒಂದು ಕ್ರೈಮ್ ಥ್ರಿಲ್ಲರ್ ಚಿತ್ರ. ಆದರೆ ಮಾಮೂಲಿ ಕ್ರೈಮ್ ಥ್ರಿಲ್ಲರ್ ಗಳಿಗಿಂತ ವಿಭಿನ್ನ. ನನ್ನ ಕಥೆ ಮೆಚ್ಚಿ ನಿರ್ಮಾಣ ಮಾಡಿರುವ ನಿರ್ಮಾಪಕರಿಗೆ, ಚಿತ್ರದಲ್ಲಿ ನಟಿಸಿರುವ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ನಾನು ಆಭಾರಿ ಎನ್ನುತ್ತಾರೆ ನಿರ್ದೇಶಕ ವಿಶಾಲ್ ಆತ್ರೇಯ.

    ನಾನು ಸಾಮಾನ್ಯವಾಗಿ ಭಾವುಕನಾಗುವುದಿಲ್ಲ. ಇಂದು ಏಕೋ ಗೊತ್ತಿಲ್ಲ ಸ್ವಲ್ಪ ಭಾವುಕನಾಗುತ್ತಿದ್ದೇನೆ ಎಂದು ಮಾತು ಪ್ರಾರಂಭಿಸಿದ ನಿರ್ಮಾಪಕ ಪನ್ನಗಾಭರಣ, ನಾನು ನಿರ್ಮಾಪಕನಾಗಬೇಕು ಅಂತ ಇರಲಿಲ್ಲ. ನಿರ್ಮಾಪಕನಾದೆ. ನನ್ನೊಟ್ಟಿಗೆ ಕೆಲವು ಸ್ನೇಹಿತರು ಕೈ ಜೋಡಿಸಿದರು. ಈಗ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಟ್ರೈಲರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಹಾಗೂ ಧನಂಜಯ ಅವರಿಗೆ ಧನ್ಯವಾದ. ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ ಎಂದರು.

    ಸಂಗೀತ ನಿರ್ದೇಶಕ ವಾಸುಕಿ ವೈಭವ್, ಛಾಯಾಗ್ರಾಹಕ ಶ್ರೀನಿವಾಸ ರಾಮಯ್ಯ, ಕೆ.ಆರ್.ಜಿ ಸ್ಟುಡಿಯೋಸ್ ಯೋಗಿ ಜಿ ರಾಜ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾಸ್ಟೆಲ್ ಹುಡುಗರ ಆಟ, ರಮ್ಯಾ ಮೇಡಂ ಪಾಠ: ಟ್ರೈಲರ್ ಸಖತ್

    ಹಾಸ್ಟೆಲ್ ಹುಡುಗರ ಆಟ, ರಮ್ಯಾ ಮೇಡಂ ಪಾಠ: ಟ್ರೈಲರ್ ಸಖತ್

    ಸೆಟ್ಟೇರಿದ ದಿನದಿಂದಲೂ ಭಾರೀ ಕುತೂಹಲ ಹೆಚ್ಚಿಸಿರುವ ಹಾಸ್ಟೆಲ್ ಹುಡುಗರು (Hostel Hudugaru) ಸಿನಿಮಾದ ಮೊದಲ ನೋಟ ಬಿಡುಗಡೆಯಾಗಿದೆ. ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಅದ್ಧೂರಿಯಾಗಿ ಟ್ರೈಲರ್ (Trailer) ಲಾಂಚ್ ಮಾಡಲಾಯಿತು. ಅಶ್ವಿನಿ ಪುನೀತ್ ರಾಜ್‌ಕುಮಾರ್, ರಿಷಬ್ ಶೆಟ್ಟಿ, ರಕ್ಷಿತ್‌ ಶೆಟ್ಟಿ, ಧ್ರುವ ಸರ್ಜಾ, ಪ್ರಮೋದ್ ಶೆಟ್ಟಿ ಸೇರಿದಂತೆ ಸ್ಯಾಂಡಲ್‌ವುಡ್ ತಾರೆಯರು ಕಾರ್ಯಕ್ರಮಕ್ಕೆ ಆಗಮಿಸಿ ತಂಡಕ್ಕೆ ಶುಭ ಹಾರೈಸಿದ್ದರು.

    ರಿಷಬ್ ಶೆಟ್ಟಿ (Rishabh Shetty) ಮಾತನಾಡಿ, ‘ನನ್ನ ಶಿಷ್ಯದಿಂದರೇ ಮಾಡಿರುವ ಸಿನಿಮಾ. ಅರವಿಂದ್, ಪ್ರಜ್ವಲ್ ಇವರೆಲ್ಲರನ್ನೂ ಲೂಸಿಯಾ ಸಮಯದಿಂದಲೂ ನೋಡಿಕೊಂಡು ಬರುತ್ತಿದ್ದೇನೆ. ತುಂಬಾ ಅದ್ಭುತ ಟೆಕ್ನಿಷಿಯನ್ಸ್. ಒಂದು ಸಿನಿಮಾದ ಕಥೆ ಇದೆ ಗೆಸ್ಟ್ ಅಪಿಯರೆನ್ಸ್ ಮಾಡ್ತೀರಾ ಅಂತಾ ಕೇಳಿದರು. ಕಥೆ ಏನೂ ಕೇಳಿಲ್ಲ. ಒಂದು ರಾತ್ರಿಯಷ್ಟೇ ಪಾತ್ರವನ್ನು ಚಿತ್ರೀಕರಿಸಲಾಯಿತು. ಪವನ್ ಇದ್ದರು. ಶೈನ್ ಇದ್ದರು, ಬಹಳ ಅದ್ಭುತವಾಗಿ ಶೂಟಿಂಗ್ ಅನುಭವ. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಒಂದು ಅದ್ಭುತ ತಂಡ. ಬೆಳೆಯುತ್ತಾ ಬೆಳೆಯುತ್ತಾ ಸಿನಿಮಾ ದೊಡ್ಡ ಸ್ಕೆಲ್ ಆಯ್ತು. 500 ಜನ ಕಲಾವಿದರನ್ನು ಕಂಪ್ಲೀಟ್ ನೈಟ್ ಸೀಕ್ವೆಲ್ ನಲ್ಲಿ ಶೂಟ್ ಮಾಡುವುದು ತುಂಬಾ ಚಾಲೆಂಜಿಂಗ್. ಇದೇ 21ಕ್ಕೆ ಸಿನಿಮಾ ಬರ್ತಿದೆ, ಥಿಯೇಟರ್ ಗೆ ಬಂದು ಸಿನಿಮಾ ನೋಡಿ. ನೀವು ಖಂಡಿತ ಎಂಜಾಯ್ ಮಾಡ್ತೀರ. ಅದ್ಭುತ ಸಿನಿಮಾ ಮಾಡಿದ್ದಾರೆ ‘ಎಂದರು.

    ಧ್ರುವ ಸರ್ಜಾ (Dhruv Sarja) ಮಾತನಾಡಿ, ‘ಒಬ್ಬ ಪ್ರೇಕ್ಷಕನಾಗಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ನೋಡಿದ್ದೇನೆ. ಈ ಸಿನಿಮಾ ನೋಡಿದಾಗ ನಾನು ನನ್ನ ಅಣ್ಣನನ್ನು ಮಿಸ್ ಮಾಡಿಕೊಂಡೆ. ಏಳೆಂಟು ವರ್ಷ ನಾವು ಹಾಸ್ಟೆಲ್ ನಲ್ಲಿ ಇದ್ದೆವು. ಅದನ್ನು ನೋಡಿದ ತಕ್ಷಣ ನಾವು ಹೀಗೆ ಇದ್ವಲ್ಲಾ ಅನಿಸಿತು. ನಿತಿನ್ ಅವರು ತುಂಬಾ ಚೆನ್ನಾಗಿ ಸಿನಿಮಾ ಶೂಟ್ ಮಾಡಿದ್ದಾರೆ. ನಾನು ನೋಡಿದಾಗ ರೀ ರೆಕಾರ್ಡಿಂಗ್ ಆಗಿರಲಿಲ್ಲ. ರೀ ರೆಕಾರ್ಡಿಂಗ್ ಆದ್ಮೇಲೆ ನೋಡಬೇಕೆಂಬ ಕುತೂಹಲವಿದೆ. ನಾನು ಪ್ರೀಮಿಯರ್ ಶೋ ನೋಡಲ್ಲ. ನಾನು ಫಸ್ಟ್ ಡೇ ಫಸ್ಟ್ ಶೋ ಸಿನಿಮಾವನ್ನು ಥಿಯೇಟರ್ ನಲ್ಲಿ ನೋಡುತ್ತೇನೆ. ಕಿರಿಕ್ ಪಾರ್ಟಿಯಂತೆ ಈ ಸಿನಿಮಾ ಕೂಡ ಸೂಪರ್ ಹಿಟ್ ಆಗಲಿ’ ಎಂದು ಶುಭ ಹಾರೈಸಿದರು.

    ರಕ್ಷಿತ್ ಶೆಟ್ಟಿ (Rakshit Shetty) ಮಾತನಾಡಿ, ‘ನಾನು ಈ ಪ್ರೋಗ್ರಾಂಗೆ ಗೆಸ್ಟ್ ಆಗಿ ಬಂದಿಲ್ಲ. ಯಾಕೆಂದ್ರೆ ನಾನು ಈ ಸಿನಿಮಾವನ್ನು ಪ್ರೆಸೆಂಟ್ ಮಾಡುತ್ತಿದ್ದೇನೆ. ಅಪ್ಪು ಸರ್ ಏನೇ ಶುರು ಮಾಡಿದರು.  ಅದ್ಭುತ ರಿಸ್ಟಲ್ ಕೊಡುತ್ತದೆ ಎಂಬ ನಂಬಿಕೆ. ನಮ್ಮ ಪರವಃ ಸ್ಟುಡಿಯೋಸ್ ನಮ್ಮ ಆಫೀಸ್ ಅನ್ನು ಅವರೇ ಉದ್ಘಾಟಿಸಿದ್ದರು. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದ ಫಸ್ಟ್ ಪೋಸ್ಟರ್ ಅವರೇ ಲಾಂಚ್ ಮಾಡಿದ್ದರು. ಈ ಸಿನಿಮಾವನ್ನು ನಾನು ಪ್ರೆಸೆಂಟ್ ಮಾಡಲು ತುಂಬಾ ಕಾರಣವಿದೆ. ನಾನು ಈ ಚಿತ್ರವನ್ನು ಎರಡು ಬಾರಿ ನೋಡಿದ್ದೇನೆ. 2 ಸಲ ನೋಡುವಾಗಲೂ ಅಷ್ಟೇ ಎಂಜಾಯ್ ಮಾಡಿದ್ದೇನೆ. ಸಿನಿಮಾವನ್ನು ಹಾಲಿವುಡ್ ರೇಂಜ್ ಗೆ ಶೂಟ್ ಮಾಡಲಾಗಿದೆ’ ಎಂದರು.

    ನಿರ್ದೇಶಕ ನಿತಿನ್ ಕೃಷ್ಣಮೂರ್ತಿ ಮಾತನಾಡಿ, ‘ಅಪ್ಪು ಸರ್ ಪೋಸ್ಟರ್ ಲಾಂಚ್ ಮಾಡಿಕೊಟ್ಟಿದ್ದರು. ಅಲ್ಲಿಂದಲೇ ಜರ್ನಿ ಶುರುವಾಗಿದ್ದು, ಈ ವೇದಿಕೆ ಹತ್ತಿದ್ದೇನೆ. ಆದ್ರೆ ಕೆಲಸ ಮಾಡಲು. ನಾನು ಟಿವಿ ಮಾಧ್ಯಮದಲ್ಲಿ ಕೆಲಸ ಮಾಡಿದವನು. ಈ ಚಿತ್ರ ಮಾಡಲು ಎರಡು ವರ್ಷ ಬೇಕಾಯ್ತು. ಮಳೆ, ಲಾಕ್ ಡೌನ್ ನಿಂದ ಸ್ವಲ್ಪ ಲೇಟ್ ಆಯ್ತು. ಇಷ್ಟು ದಿನ ಪ್ರೋಮೋ ಬಿಟ್ಟಿದ್ದೇವೆ. ಈಗ ಟ್ರೇಲರ್ ಬಂದಿದೆ. ಈ ಮೂವೀಗೆ 1000 ಜನ ರಂಗಭೂಮಿ ಕಲಾವಿದರನ್ನು ಬಿಟ್ಟು ಸ್ಯಾಂಡಲ್ ವುಡ್ ಇಂಡಸ್ಟ್ರೀ ಸಾಥ್ ಕೊಟ್ಟಿದೆ’ ಎಂದು ಸಂತಸ ಹಂಚಿಕೊಂಡರು.

    ನಿರ್ಮಾಪಕ ವರುಣ್ ಗೌಡ (Varun) ಮಾತನಾಡಿ, ಜುಲೈ 21ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ. ದಯವಿಟ್ಟು ಎಲ್ಲರೂ ಸಪೋರ್ಟ್ ಮಾಡಿ. ಇಷ್ಟು ದಿನ ಬೆಂಬಲ ಕೊಟ್ಟ ರೀತಿ ಮುಂದೆಯೂ ನಿಮ್ಮ ಬೆಂಬಲವಿರಲಿ ಎಂದರು. ಕಿರಿಕ್‌ ಮಾಡುವ ವಾರ್ಡನ್‌ ಕಾಟದಿಂದ ತಪ್ಪಿಸಿಕೊಳ್ಳಲು ಹಾಸ್ಟೆಲ್‌ ಹುಡುಗರು ಏನೆಲ್ಲಾ ಮಾಡುತ್ತಾರೆ. ಅದರಿಂದ ಮುಂದೆ ಏನು ಸಮಸ್ಯೆ ಅನುಭವಿಸುತ್ತಾರೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ.

    ಮೋಹಕತಾರೆ ರಮ್ಯಾ ಲೆಕ್ಚರರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಿಷಬ್ ಶೆಟ್ಟಿ, ಪವನ್ ಕುಮಾರ್, ಶೈನ್ ಶೆಟ್ಟಿ ಹಾಗೂ ದಿಗಂತ್ ಕೂಡ ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದಾರೆ. ಪುನೀತ್ ರಾಜ್ ಕುಮಾರ್, ರಕ್ಷಿತ್ ಶೆಟ್ಟಿ, ಸುದೀಪ್ ಸಾಥ್ ಕೊಟ್ಟಿರುವ ಈ ಸಿನಿಮಾಗೆ ನಿತಿನ್ ಕೃಷ್ಣಮೂರ್ತಿ ಆಕ್ಷನ್ ಕಟ್ ಹೇಳಿದ್ದಾರೆ. ಪ್ರಜ್ವಲ್ ಬಿಪಿ, ವರುಣ್ ಕುಮಾರ್ ಗೌಡ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕಶ್ಯಪ್ ಹಾಗೂ ಇನ್ನಿತರರು ಜೊತೆಗೆ ಸೇರಿ ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ ಸಿನಿಮಾವನ್ನು ನಿರ್ಮಿಸಿದ್ದಾರೆ. ಚಿತ್ರದ ಹಾಡುಗಳಿಗೆ ಅಜನೀಶ್‌ ಲೋಕನಾಥ್‌ ಸಂಗೀತ ನೀಡಿದ್ದಾರೆ. ರಕ್ಷಿತ್ ಶೆಟ್ಟಿ ತಮ್ಮದೇ ಪರವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸುತ್ತಿದ್ದು, ಇದೇ 21 ಕ್ಕೆ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರೇಮ್ ಮತ್ತು ಧ್ರುವ ಕಾಂಬಿನೇಷನ್ ಸಿನಿಮಾದ ಟೈಟಲ್ ಟೀಸರ್ ಲಾಂಚ್ ಗೆ ಸಂಜಯ್ ದತ್

    ಪ್ರೇಮ್ ಮತ್ತು ಧ್ರುವ ಕಾಂಬಿನೇಷನ್ ಸಿನಿಮಾದ ಟೈಟಲ್ ಟೀಸರ್ ಲಾಂಚ್ ಗೆ ಸಂಜಯ್ ದತ್

    ಜೋಗಿ ಪ್ರೇಮ್ (Prem) ಮತ್ತು ಧ್ರುವ ಸರ್ಜಾ (Dhruv Sarja) ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದ್ದು, ಈ ಸಿನಿಮಾದ ಟೈಟಲ್ ಟೀಸರ್ ಅನ್ನು ವಿಶೇಷ ರೀತಿಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಈ ಕಾರ್ಯಕ್ರಮವು ಅದ್ಧೂರಿಯಾಗಿ ನಡೆಯುತ್ತಿದ್ದು, ಭಾರತೀಯ ಸಿನಿಮಾ ರಂಗದ ಅನೇಕ ದಿಗ್ಗಜರು ಇದಕ್ಕೆ ಸಾಕ್ಷಿ ಆಗಲಿದ್ದಾರೆ. ಇದೇ  ಅಕ್ಟೋಬರ್ 20 ರಂದು ಕಾರ್ಯಕ್ರಮವು ಬೆಂಗಳೂರಿನಲ್ಲೇ ನಡೆಯುತ್ತಿದೆ.


    ಈಗಾಗಲೇ ಈ ಟೀಸರ್ (Title Teaser) ಲಾಂಚ್ ಮಾಡಲು ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ (Mohanlal) ಆಗಮಿಸಲಿದ್ದಾರೆ ಎಂದು ಪ್ರೇಮ್ ತಿಳಿಸಿದ್ದರು. ಮೋಹನ್ ಲಾಲ್ ಅವರನ್ನು ಭೇಟಿ ಮಾಡಿದ ಫೋಟೋವನ್ನೂ ಅವರು ಹಂಚಿಕೊಂಡಿದ್ದರು. ಇದೀಗ ಬಾಲಿವುಡ್ ಖ್ಯಾತ ನಟ ಸಂಜಯ್ ದತ್ತ (Sanjay Dutt) ಕೂಡ ಆಗಮಿಸಲಿದ್ದಾರೆ ಅಂದಿದ್ದಾರೆ. ಇಂದು ಮುಂಬೈನಲ್ಲಿ ಸಂಜಯ್ ದತ್ ಅವರನ್ನು ಪ್ರೇಮ್ ಭೇಟಿ ಮಾಡಿ ಆಹ್ವಾನಿಸಿದ್ದಾರೆ. ಇದನ್ನೂ ಓದಿ:ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಅಪ್ಪು ಕಪ್ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್

    ಭಾರತೀಯ ಸಿನಿಮಾ ರಂಗದ ಮೇರು ನಟರು ಮಾತ್ರವಲ್ಲ, ನಿನ್ನೆಯಷ್ಟೇ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರನ್ನೂ ಪ್ರೇಮ್ ಭೇಟಿ ಮಾಡಿದ್ದರು. ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಮುಖ್ಯಮಂತ್ರಿಗಳು ಕೂಡ ಈ ಕಾರ್ಯಕ್ರಮಕ್ಕೆ ಬರಲು ಒಪ್ಪಿಕೊಂಡಿದ್ದು, ಈ ಟೈಟಲ್ ಟೀಸರ್ ಕಾರ್ಯಕ್ರಮಕ್ಕೆ ಅವರೂ ಸಾಕ್ಷಿಯಾಗಲಿದ್ದಾರೆ.

    ಈಗಾಗಲೇ ಸಿನಿಮಾದ ಮುಹೂರ್ತ ಮೈಸೂರಿನಲ್ಲಿ ನಡೆದಿದೆ. ಇನ್ನಷ್ಟೇ ಚಿತ್ರೀಕರಣ ಶುರುವಾಗಬೇಕು. ಅದಕ್ಕಾಗಿ ಎಲ್ಲ ಸಿದ್ಧತೆಯನ್ನೂ ಚಿತ್ರತಂಡ ಮಾಡಿಕೊಂಡಿದೆ. ಅದಕ್ಕೂ ಮುನ್ನ ಟೈಟಲ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇಲ್ಲಿಂದ ಸಿನಿಮಾದ ಇತರ ಕೆಲಸಗಳು ಶುರುವಾಗಲಿವೆಯಂತೆ. ಪ್ರೇಮ್ ಸಿನಿಮಾಗಳು ಅಂದರೆ, ಅಲ್ಲೊಂದು ಅಬ್ಬರ ಇರಲೇಬೇಕು. ಆ ಅಬ್ಬರವೂ ಮೊದಲ ದಿನದಿಂದಲೇ ಶುರುವಾಗಿರುವುದು ಮತ್ತೊಂದು ವಿಶೇಷ.

    Live Tv
    [brid partner=56869869 player=32851 video=960834 autoplay=true]

  • ಧ್ರುವ ಸರ್ಜಾ  ಜೊತೆ ಸ್ಕ್ರೀನ್ ಶೇರ್ ಮಾಡ್ತಾರಾ ರವಿಮಾಮನ ಬೆಡಗಿ ಶಿಲ್ಪಾ ಶೆಟ್ಟಿ

    ಧ್ರುವ ಸರ್ಜಾ ಜೊತೆ ಸ್ಕ್ರೀನ್ ಶೇರ್ ಮಾಡ್ತಾರಾ ರವಿಮಾಮನ ಬೆಡಗಿ ಶಿಲ್ಪಾ ಶೆಟ್ಟಿ

    ವಿಚಂದ್ರನ್ ಜೊತೆ ‘ರಾಜಾ ರಾಜಾ..’ ಹಾಡಿಗೆ ಹೆಜ್ಜೆ ಹಾಕಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಮತ್ತೆ ಕನ್ನಡ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಮಾತು ಗಾಂಧಿನಗರದಲ್ಲಿ ಕೇಳಿ ಬರುತ್ತಿದೆ. ಗುಳಿಕೆನ್ನೆ ಹುಡುಗಿಯ ಜೊತೆ ಈಗಾಗಲೇ ಒಂದು ಹಂತದ ಮಾತುಕತೆ ಕೂಡ ನಡೆದಿದ್ದು, ಅವರು ಕೂಡ ಸ್ಯಾಂಡಲ್ ವುಡ್ ಗೆ ಮರಳುವ ಇಂಗಿತವನ್ನು ವ್ಯಕ್ತ ಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಅಂದುಕೊಂಡಂತೆ ನಡೆದರೆ, ಧ್ರುವ ಸರ್ಜಾ (Dhruv Sarja)  ನಟನೆಯ ಹೊಸ ಸಿನಿಮಾದಲ್ಲಿ ಶಿಲ್ಪಾ ಕಾಣಿಸಿಕೊಳ್ಳಲಿದ್ದಾರೆ.

    ಈಗಾಗಲೇ ಜೋಗಿ ಪ್ರೇಮ್ (Jogi Prem) ಮತ್ತು ಧ್ರುವ ಕಾಂಬಿನೇಷನ್ ನ ಹೊಸ ಸಿನಿಮಾದ ಘೋಷಣೆ ಆಗಿದೆ. ಏ.24 ರಂದು ಮೈಸೂರಿನ ಚಾಮುಂಡೇಶ್ವರ ದೇವಸ್ಥಾನದಲ್ಲಿ ಚಿತ್ರಕ್ಕೆ ಮುಹೂರ್ತ ಕೂಡ ನಡೆದಿದೆ. ಅಲ್ಲಿಂದ ಈ ಸಿನಿಮಾದ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ. ಇದೀಗ ಶಿಲ್ಪಾ ಶೆಟ್ಟಿ ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಯಾವ ಪಾತ್ರ, ಏನು ಅನ್ನುವ ವಿಚಾರ ಸದ್ಯಕ್ಕೆ ಸಸ್ಪೆನ್ಸ್. ಆದರೆ, ಸ್ಯಾಂಡಲ್ ವುಡ್ ಗೆ (Sandalwood)ಅವರು ಮರಳುವುದು ಪಕ್ಕಾ ಎಂದೇ ಹೇಳಲಾಗುತ್ತಿದೆ. ಇದನ್ನೂ ಓದಿ:ಟಿವಿ ಬಿಗ್ ಬಾಸ್ ಸೀಸನ್ 9ಕ್ಕೆ ಭರ್ಜರಿ ತಯಾರಿ: ಹೇಗಿದೆ ಗೊತ್ತಾ ದೊಡ್ಮನೆ?

    ಕೆಲವ ದಿನಗಳ ಹಿಂದಿಯಷ್ಟೇ ಬಾಲಿವುಡ್ ನ ಮತ್ತೋರ್ವ ಖ್ಯಾತ ನಟ ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಹರಡಿತ್ತು. ಈಗಾಗಲೇ ಕೆಜಿಎಫ್ ಸಿನಿಮಾದಲ್ಲಿ ಅಧೀರನಾಗಿ ಅಬ್ಬರಿಸಿರುವ ಸಂಜಯ್ ದತ್ (Sanjay Dutt), ಈ ಸಿನಿಮಾದಲ್ಲೂ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಸಿನಿಮಾ ತಂಡದಿಂದ ಈ ಕುರಿತು ಯಾವುದೇ ಮಾಹಿತಿ ಹೊರ ಬಿದ್ದಿಲ್ಲ. ಶಿಲ್ಪಾ ಶೆಟ್ಟಿ ಮತ್ತು ಸಂಜಯ್ ದತ್ ಕುರಿತು ಅಧಿಕೃತವಾಗಿ ಸಿನಿಮಾ ತಂಡವೇ ಹೇಳಬೇಕಿದೆ.

    ಸಿನಿಮಾ ಶೂಟಿಂಗ್ ಗಾಗಿ ಪ್ರೇಮ್ ಈಗಾಗಲೇ ಎಲ್ಲ ಸಿದ್ಧತೆಯನ್ನೂ ಮಾಡಿಕೊಂಡಿದ್ದಾರೆ. ಧ್ರುವ ಮಾರ್ಟಿನ್ ಸಿನಿಮಾದ ಕೊನೆ ಹಂತದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಮುಗಿಯುತ್ತಿದ್ದಂತೆಯೇ ಪ್ರೇಮ್ ಅವರು ತಮ್ಮ ಹೊಸ ಸಿನಿಮಾದ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಲಿದ್ದಾರೆ. ಆದಷ್ಟು ಬೇಗ ಸಿನಿಮಾ ಶುರುವಾಗಲಿದೆಯಂತೆ.

    Live Tv
    [brid partner=56869869 player=32851 video=960834 autoplay=true]

  • ಮೂವರು ಸರ್ಜಾ ಹೀರೋಗಳ ಜೊತೆ ದರ್ಶನ್ ಸಖತ್ ಸ್ಟೆಪ್

    ಮೂವರು ಸರ್ಜಾ ಹೀರೋಗಳ ಜೊತೆ ದರ್ಶನ್ ಸಖತ್ ಸ್ಟೆಪ್

    ಬೆಂಗಳೂರು: ಇದೊಂದು ಅಪರೂಪದ ಡ್ಯಾನ್ಸ್ ಆಗಿದ್ದು, ಸ್ಯಾಂಡಲ್‍ವುಡ್‍ನ ದಿಗ್ಗಜ ನಟರು ಒಟ್ಟಾಗಿ ಸೇರಿ ಸ್ಟೆಪ್ ಹಾಕಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್, ಆ್ಯಕ್ಷನ್ ಪ್ರಿನ್ಸ್ ಧ್ರುವ, ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಮತ್ತು ಚಿರಂಜೀವಿ ಸರ್ಜಾ ಒಟ್ಟಿಗೆ ಸೇರಿ ಒಂದೇ ಥರದ ಕೇಸರಿ ಬಣ್ಣದ ಬಟ್ಟೆಯನ್ನು ಧರಿಸಿ ಆಂಜನೇಯನಿಗೆ ನೃತ್ಯ ನಮನ ಸಲ್ಲಿಸಿದ್ದಾರೆ.

    ಅರ್ಜುನ್ ಸರ್ಜಾ ನಿರ್ದೇಶನದ `ಪ್ರೇಮಬರಹ’ ಚಿತ್ರದ ಹಾಡಿನ ಚಿತ್ರೀಕರಣವೊಂದು ಬೆಂಗಳೂರಿನ ಹಳೆಯ ಏರ್‍ಪೋರ್ಟ್ ರಸ್ತೆಯ ಬಳಿ ಇರುವ ಆಂಜನೇಯ ದೇವಸ್ಥಾನದಲ್ಲಿ ನಡೆಯುತ್ತಿದೆ. ಪ್ರೇಮಬರಹ ಚಿತ್ರದಲ್ಲಿ ದರ್ಶನ್, ಧ್ರುವ, ಚಿರಂಜೀವಿ ಹಾಗೂ ಅರ್ಜುನ್ ಸರ್ಜಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಹಾಡೊಂದಕ್ಕೆ ಸ್ಟೆಪ್ ಹಾಕಿದ್ದಾರೆ.

    ಆಂಜನೇಯ ವಿಗ್ರಹದ ಮುಂದೆ ಸೆಟ್ ನಿರ್ಮಾಣ ಮಾಡಿ ನಾಲ್ವರು ನಟರು ಮತ್ತು ಸಹ ನೃತ್ಯ ತಂಡ ಕೇಸರಿ ಬಣ್ಣದ ಬಟ್ಟೆ, ತಲೆಗೆ ಪಟ್ಟಿಯನ್ನು ಕಟ್ಟಿಕೊಂಡು, ಕೆಂಪು ಬಣ್ಣವನ್ನು ಮೈ, ಮುಖಕ್ಕೆ ಹಚ್ಚಿಕೊಂಡು “ರಾಮನ ಪಂಚಪ್ರಾಣ ಹನುಮ, ಹನುಮ’  ಎಂಬ ಹಾಡಿಗೆ ಸ್ಟೆಪ್ ಹಾಕಿದ್ದಾರೆ.

    ಪ್ರೇಮಬರಹ ಸಿನಿಮಾದಲ್ಲಿ ಅರ್ಜುನ್ ಸರ್ಜಾ ಮಗಳು ಐಶ್ವರ್ಯ ಅರ್ಜುನ್ ಮತ್ತು ಚಂದನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

  • ದಿಢೀರ್ 26 ಕೆ.ಜಿ ತೂಕವನ್ನು ಧ್ರುವ ಸರ್ಜಾ ಇಳಿಸಿದ್ದರ ರಹಸ್ಯ ಇಲ್ಲಿದೆ

    ದಿಢೀರ್ 26 ಕೆ.ಜಿ ತೂಕವನ್ನು ಧ್ರುವ ಸರ್ಜಾ ಇಳಿಸಿದ್ದರ ರಹಸ್ಯ ಇಲ್ಲಿದೆ

    ಬೆಂಗಳೂರು: ಸ್ಯಾಂಡಲ್‍ವುಡ್‍ನ ಆ್ಯಕ್ಷನ್ ಕಿಂಗ್ ನಟ ಧ್ರುವ ಸರ್ಜಾ ಹೊಸ ಸವಾಲನ್ನು ಸ್ವೀಕರಿಸಿ ಎದುರಿಸಲು ಸಿದ್ಧರಾಗಿದ್ದಾರೆ.

    `ಭರ್ಜರಿ’ ಸಿನಿಮಾದ ನಂತರ ಧ್ರುವ ಯಾವ ಸಿನಿಮಾ ಮಾಡುತ್ತಾರೆ ಎಂಬ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನಂದಕಿಶೋರ್ ನಿರ್ದೇಶನ ಮಾಡುತ್ತಿರುವ `ಪೊಗರು’ ಸಿನಿಮಾಕ್ಕೆ ಧ್ರುವ ಗ್ರೀನ್ ಸಿಗ್ನಲ್ ನೀಡಿದ್ದಾರೆ.

    ಸದ್ಯಕ್ಕೆ ಪೊಗರು ಚಿತ್ರೀಕರಣಕ್ಕೆ ಸಜ್ಜಾಗುತ್ತಿರುವ ನಿರ್ದೇಶಕರು ನಟನಿಗೆ ಒಂದು ಹೊಸ ಚಾಲೆಂಜ್ ಕೊಟ್ಟಿದ್ದಾರೆ. ಧ್ರುವ ಕೆಲಸದ ವಿಚಾರ ಬಂದರೆ ತುಂಬಾ ಶ್ರದ್ಧೆಯಿಂದ ಇರುತ್ತಾರೆ. ಚಿತ್ರದ ಪಾತ್ರಕ್ಕಾಗಿ 30 ಕೆಜಿ ತೂಕ ಇಳಿಸಿಕೊಳ್ಳಲು ನಿರ್ದೇಶಕರು ಸೂಚಿಸಿದ್ದರು. ಅದಕ್ಕಾಗಿ ಧ್ರುವ ವರ್ಕ್ ಔಟ್ ಮಾಡಿ ಬರೋಬ್ಬರಿ 26 ಕೆ.ಜಿ ತೂಕವನ್ನು ಕಡಿಮೆ ಮಾಡಿಕೊಂಡಿದ್ದಾರೆ.

    ಪೊಗರು ಸಿನಿಮಾದ ಫಸ್ಟ್ ಆಫ್ ನಲ್ಲಿ ಧ್ರುವ 8ನೇ ತರಗತಿ 12 ವರ್ಷದ ಬಾಲಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದ್ದರಿಂದ ಬಾಲಕನಂತೆ ಧ್ರುವ ಲುಕ್ ಬದಲಾಯಿಸಲು ನಿರ್ದೇಶಕ ನಂದಕಿಶೋರ್ ಮುಂದಾಗಿದ್ದಾರೆ. ಆದ್ದರಿಂದ ನಿರ್ದೇಶಕರು 30 ಕೆ.ಜಿ ತೂಕ ಕಡಿಮೆ ಮಾಡಿಕೊಳ್ಳಿ ಎಂದಾಕ್ಷಣ ಯಾವುದೇ ವಿರೋಧವಿಲ್ಲದೆ ಒಪ್ಪಿಗೆ ಸೂಚಿಸಿದ್ದು, ಈಗಾಗಲೇ 26 ಕೆಜಿ ತೂಕ ಕಡಿಮೆ ಮಾಡಿಕೊಂಡಿದ್ದಾರೆ.

    ಧ್ರುವ ಇನ್ನು ಕೆಲವೇ ದಿನಗಳಲ್ಲಿ ನಾಲ್ಕು ಕೆಜಿ ತೂಕ ಇಳಿಸಿಕೊಳ್ಳಲಿದ್ದಾರೆ. ನಂತರ ತೂಕ ಕಡಿಮೆಯಾದ ತಕ್ಷಣ ಚಿತ್ರೀಕರಣವನ್ನು ಪ್ರಾರಂಭ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ.

  • 50 ನೇ ದಿನ ಪೂರೈಸಿ ಸಾಗುತ್ತಿರುವ `ಭರ್ಜರಿ`ಯ ಕಲೆಕ್ಷನ್ ಎಷ್ಟು ಗೊತ್ತಾ?

    50 ನೇ ದಿನ ಪೂರೈಸಿ ಸಾಗುತ್ತಿರುವ `ಭರ್ಜರಿ`ಯ ಕಲೆಕ್ಷನ್ ಎಷ್ಟು ಗೊತ್ತಾ?

    ಬೆಂಗಳೂರು: ಎಲ್ಲೆಲ್ಲೂ ಸದ್ದು ಮಾಡುತ್ತಿದೆ ಭರ್ಜರಿ ಸಿನಿಮಾ. ಆಕ್ಷನ್ ಪ್ರಿನ್ಸ್ ಧ್ರುವ ಅಭಿನಯಿಸಿರುವ ಈ ಸಿನಿಮಾ ಇವತ್ತಿಗೆ 50 ನೇ ದಿನವನ್ನು ಪೂರೈಸಿ ಮುನ್ನುಗ್ಗುತ್ತಿದೆ.

    ನಟ ಧ್ರುವ ಅಭಿನಯಕ್ಕೆ ಪ್ರೇಕ್ಷಕರು ಜೈಕಾರ ಹಾಕಿದ್ದಾರೆ. ಇವರು ಮಾಡಿದ ಮೊದಲನೇ ಸಿನಿಮಾ `ಅದ್ಧೂರಿ’ ಯಿಂದಲ್ಲಿಯೇ ಕನ್ನಡ ಅಭಿಮಾನಿಗಳನ್ನು ತಮ್ಮತ್ತ ಸೆಳೆದಿದ್ದು, ಭರ್ಜರಿ ಅವರ ಮೂರನೇ ಸಿನಿಮಾವಾಗಿದೆ. ಅವರ ಅಭಿಮಾನಿಗಳು ಚಿತ್ರಕ್ಕೆ ದೊಡ್ಡ ಮಟ್ಟದ ಯಶಸ್ಸನ್ನೇ ತಂದುಕೊಟ್ಟಿದ್ದಾರೆ.

    ಮಲ್ಟಿಫ್ಲೆಕ್ಸ್ ನಲ್ಲಿ ಮಾತ್ರವಲ್ಲದೆ ಬಿ ಹಾಗೂ ಸಿ ಸೆಂಟರ್ ಗಳಲ್ಲಿ ಕೂಡ ಪ್ರೇಕ್ಷಕರಿಂದ ಚಿತ್ರಕ್ಕೆ ಸಖತ್ ಪ್ರತಿಕ್ರಿಯೆ ಸಿಕ್ಕಿದೆ. ಬಿಡುಗಡೆಯಾದ ದಿನದಿಂದ ಇಂದಿನವರೆಗೂ ದಾಖಲೆ ಮೊತ್ತದಲ್ಲಿ ಕಲೆಕ್ಷನ್ ಮಾಡುತ್ತಿದೆ. ಬಿಡುಗಡೆಯಾದ ಒಂದೇ ವಾರದಲ್ಲಿ ಹಾಕಿದ ಬಂಡವಾಳವನ್ನು ವಾಪಸ್ ಪಡೆದುಕೊಂಡಿದ್ದು, ಐವತ್ತು ದಿನಗಳಿಗೆ 69 ಕೋಟಿ ಗಳಿಕೆ ಮಾಡಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ.

    ಸಾಕಷ್ಟು ಕಾರಣಗಳಿಂದ ‘ಭರ್ಜರಿ’ ಸಿನಿಮಾ ತಡವಾಗಿ ಬಂದಿದ್ದರೂ ಈಗಿನ ಜನರೇಷನ್‍ಗೆ ತಕ್ಕಂತೆ ಸಿನಿಮಾ ಇರುವುದರಿಂದ ಪ್ರೇಕ್ಷಕರು ಚಿತ್ರವನ್ನು ಇಷ್ಟ ಪಟ್ಟಿದ್ದಾರೆ. ರಾಜ್ಯದ 129 ಸೆಂಟರ್ ನಲ್ಲಿ 50 ದಿನಗಳನ್ನು ಪೂರೈಸಿದೆ. ಸುಮಾರು ಹತ್ತು ವರ್ಷದ ನಂತರ ಇದೇ ಮೊದಲ ಬಾರಿಗೆ ಇಷ್ಟು ಸೆಂಟರ್ ನಲ್ಲಿ ಐವತ್ತು ದಿನಗಳು ಓಡಿರುವ ಸಿನಿಮಾಗಿದೆ.

    ಐವತ್ತು ದಿನಗಳನ್ನು ಪೂರೈಸಿರುವುದರಿಂದ ಸಿನಿಮಾ ತಂಡ ಇಂದು ಥಿಯೇಟರ್ ಬಳಿ ಹಬ್ಬದಂತೆ ಆಚರಣೆ ಮಾಡಿದೆ. ಮಧ್ಯಾಹ್ನದ ಶೋನಲ್ಲಿ ಧ್ರುವ ಅಭಿಮಾನಿಗಳ ಜೊತೆ ಸಿನಿಮಾ ನೋಡಿ ಸಿಹಿ ಹಂಚಿದ್ದಾರೆ. ಅಭಿಮಾನಿಗಳು ಖುಷಿಗಾಗಿ ರಕ್ತದಾನ, ಅನ್ನದಾನ ಮಾಡುವುದಕ್ಕೂ ಸಿದ್ಧತೆ ಮಾಡಿಕೊಂಡಿದ್ದಾರೆ. ಒಟ್ಟಾರೆ ‘ಭರ್ಜರಿ’ ಸಿನಿಮಾದ ಅದ್ದೂರಿ ಯಶಸ್ಸಿನಿಂದ ಧ್ರುವ ಸರ್ಜಾಗೆ ಮತ್ತಷ್ಟು ಬೇಡಿಕೆಯಾಗಿದೆ.

    ಚೇತನ್ ಕುಮಾರ್ ಅವರ ನಿರ್ದೇಶನ ಮಾಡಿದ್ದು, ನಟಿ ರಚಿತಾ ರಾಮ್, ಹರಿಪ್ರಿಯ ಕೂಡ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

    https://www.youtube.com/watch?v=6LgGIqjKHSg

    https://www.youtube.com/watch?v=NGmvPSFlobs