Tag: dhruva sarja

  • ಪ್ರಪಂಚವೇ ಎದುರಾದ್ರು ತಮ್ಮನಾಗಿ ದರ್ಶನ್ ಜೊತೆ ಇರುತ್ತೇನೆ- ವಿನೋದ್ ಪ್ರಭಾಕರ್

    ಪ್ರಪಂಚವೇ ಎದುರಾದ್ರು ತಮ್ಮನಾಗಿ ದರ್ಶನ್ ಜೊತೆ ಇರುತ್ತೇನೆ- ವಿನೋದ್ ಪ್ರಭಾಕರ್

    ಸ್ಟಾರ್ ನಟ ದರ್ಶನ್ (Darshan) ಮತ್ತು ಧ್ರುವ ಸರ್ಜಾ (Dhruva Sarja) ನಡುವೆ ಕೋಲ್ಡ್ ವಾರ್ ನಡೀತಾ ಇದೆ ಎನ್ನುವ ವಿಚಾರ ಹಲವು ದಿನಗಳಿಂದ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಕಾವೇರಿ ಹೋರಾಟ ಸಂದರ್ಭದಲ್ಲಿ ಧ್ರುವ- ದರ್ಶನ್ ಹತ್ತಿರದಲ್ಲೇ ಕುಳಿತುಕೊಂಡಿದ್ದರೂ ಇಬ್ಬರೂ ಮಾತನಾಡಲಿಲ್ಲ ಎನ್ನುವುದು ಇದಕ್ಕೆ ಸಾಕ್ಷಿಯಾಗಿತ್ತು. ಧ್ರುವ ಮತ್ತು ದರ್ಶನ್ ಅಭಿಮಾನಿಗಳು ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಆರೋಪ ಪ್ರತ್ಯಾರೋಪವನ್ನೂ ಮಾಡುತ್ತಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಧ್ರುವ ಪ್ರತಿಕ್ರಿಯೆ ನೀಡಿದ ಬೆನ್ನಲ್ಲೇ ದರ್ಶನ್ ಆಪ್ತ, ನಟ ವಿನೋದ್ ಪ್ರಭಾಕರ್ (Vinod Prabhakar) ಮಾತನಾಡಿದ್ದಾರೆ. ಇದನ್ನೂ ಓದಿ:ಬಿಕಿನಿ ಬಳಿಕ ಮತ್ತೆ ಬೋಲ್ಡ್ ಲುಕ್‌ನಲ್ಲಿ ‘ಗೀತಾ’ ಸೀರಿಯಲ್ ನಟಿ

    ದರ್ಶನ್-ಧ್ರುವ ಮನಸ್ತಾಪದ ಕುರಿತು ವಿನೋದ್ ಪ್ರಭಾಕರ್ ಮಾತನಾಡಿ, ಧ್ರುವ (Dhruva) ಏನಂದ್ರು ಅಂತ ನಾನು ಸಂಪೂರ್ಣವಾಗಿ ನೋಡಿಲ್ಲ. ಆದರೆ ಒಂದು ಮಾತು ಹೇಳೋಕೆ ಇಷ್ಟಪಡ್ತೀನಿ. ಇಡೀ ಪ್ರಪಂಷನೇ ಎದುರು ಬಂದರೂ ಸರಿ ಅಣ್ಣ ದರ್ಶನ್‌ಗೆ ಒಬ್ಬ ತಮ್ಮನಾಗಿ ಸದಾ ಇರುತ್ತೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

    ದರ್ಶನ್ ಜೊತೆಗಿನ ಮುನಿಸಿನ ಬಗ್ಗೆ ಮಾತನಾಡಿದ ಧ್ರುವ, ‘ದರ್ಶನ್ ನಮ್ಮ ಸೀನಿಯರ್ ಆಕ್ಟರ್. ಅವರ ಪ್ರಸೆನ್ಸ್, ಆಬ್ಸೆಂಟ್ ಅಲ್ಲೂ ಗೌರವ ಇದೆ. ಆದರೆ, ದರ್ಶನ್ ಅವ್ರಿಗೆ ಒಂದೆರಡು ಪ್ರಶ್ನೆ ಕೇಳಬೇಕಿದೆ. ಆ ಪ್ರಶ್ನೆಗಳನ್ನ ಕ್ಲಿಯರ್ ಮಾಡಿಕೊಳ್ಳದೇ ಮನಸ್ಸಲ್ಲೊಂದು, ಎದುರು ಒಂದು ಮಾತಾಡೋಕ್ ಆಗಲ್ಲ. ಮನಸ್ಸಲ್ಲಿ ಒಂದ್ ಇಟ್ಕೊಂಡು ಯಾರನ್ನೋ ಮೆಚ್ಚಿಸಲು ನಾಟಕ ಆಡುವ ಅವಶ್ಯಕತೆ ನನಗೆ ಇಲ್ಲ. ಆರ್ಟಿಫಿಸಿಯಲ್ ಆಗಿ ಫೇಕ್ ಆಗಿ ಇರೋಕ್ ನನಗೆ ಬರಲ್ಲ. ನಮ್ಗೂ ಸೆಲ್ಫ್ ರೆಸ್ಪೆಕ್ಟ್, ಸ್ವಾಭಿಮಾನ ಇದೆ ಅಲ್ವಾ. ದರ್ಶನ್ ಸೀನಿಯರ್ ಆಕ್ಟರ್. ಅವರ ಬಗ್ಗೆ ಗೌರವ ಇದ್ದೇ ಇರುತ್ತೆ’ ಎಂದು ಹೇಳುವ ಮೂಲಕ ಮತ್ತಷ್ಟು ಅನುಮಾನ ಮೂಡಿಸಿದ್ದಾರೆ ಧ್ರುವ.ಇದನ್ನೂ ಓದಿ:ದರ್ಶನ್ ಜೊತೆಗಿನ ಮನಸ್ತಾಪ: ಅವರಿಗೆ ಒಂದಷ್ಟು ಪ್ರಶ್ನೆ ಕೇಳಬೇಕಿದೆ ಎಂದ ಧ್ರುವ

    ಮುಂದುವರೆದು ಮಾತನಾಡಿದ ಧ್ರುವ, ‘ನಮ್ಮ ಸಿನಿಮಾಗಳಿಗೆ ಅವ್ರು ಡಬ್ಬಿಂಗ್ ಮಾಡಿಕೊಟ್ಟಿದ್ದಾರೆ. ಮನಸ್ಸಲ್ಲಿ ಒಂದು ಇಟ್ಕೊಂಡು ನಾಟಕ ಆಡೋಕ್ ನನಗೆ ಬರಲ್ಲ. ಅದು ನಾನಲ್ಲ ಅನ್ಸುತ್ತೆ. ನನಗೆ ದರ್ಶನ್ ಅವ್ರ ಬಳಿ ಕೇಳಲು ಕೆಲ ಪ್ರಶ್ನೆಗಳಿವೆ.ನಾನು ಅವರ ಬಳಿ ಮಾತನಾಡಿ ನೋಡ್ತೀನಿ. ಮನಸ್ತಾಪ ಕ್ಲಿಯರ್ ಆಗಬಹುದು, ಇಲ್ಲ ಆಗದೇ ಇರಬಹುದು. ಅದು ನಮ್ಮ ವೈಯಕ್ತಿಕ’ ಎಂದು ಹೇಳುವ ಮೂಲಕ ಮನಸ್ತಾಪ ಇರುವುದನ್ನು ಪರೋಕ್ಷವಾಗಿ ಅವರು ಒಪ್ಪಿಕೊಂಡಿದ್ದಾರೆ.

    ಧ್ರುವ ಮತ್ತು ದರ್ಶನ್ ಅವರ ಮನಸ್ತಾಪಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಅವರ ಮಧ್ಯ ಮತ್ತಷ್ಟು ಮನಸ್ತಾಪ ಆಗುವಂತೆ ಕೆಲವರು ಕುತಂತ್ರ ನಡೆಸಿದ್ದಾರಂತೆ. ಅವರಿಗೆ ಧ್ರುವ ಖಡಕ್ ವಾರ್ನಿಂಗ್ ನೀಡಿದ್ದಾರೆ. ‘ಈ ಬೆಳವಣಿಗೆ ಆದ್ಮೇಲೆ ನನ್ನ ಹೆಸರಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಆಗಿವೆ. ನಮ್ಮ ನಮ್ಮಲ್ಲೇ ವೈರಿಂಗ್ ಮಾಡ್ತಿದ್ದಾರೆ. ಈ ರೀತಿ ಮಾಡುವವರಿಗೆ ಒಂದು ರಿಕ್ವೆಸ್ಟ್. ದಯವಿಟ್ಟು ನನ್ನ ಹತ್ರ ತಗಲಾಕ್ಕೊಬೇಡಿ. ಫೇಕ್ ಆಕೌಂಟ್ ಕ್ರಿಯೇಟ್ ಮಾಡ್ತಿರೋರು ಎಚ್ಚರವಾಗಿರಿ’ ಎಂದು ಧ್ರುವ ಎಚ್ಚರಿಕೆಯನ್ನು ನೀಡಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಧ್ರುವ ಸರ್ಜಾ ಹುಟ್ಟುಹಬ್ಬಕ್ಕೆ ‘ಕೆಡಿ’ ಪೋಸ್ಟರ್ ರಿಲೀಸ್

    ಧ್ರುವ ಸರ್ಜಾ ಹುಟ್ಟುಹಬ್ಬಕ್ಕೆ ‘ಕೆಡಿ’ ಪೋಸ್ಟರ್ ರಿಲೀಸ್

    ಟ ಧ್ರುವ ಸರ್ಜಾ ಹುಟ್ಟುಹಬ್ಬಕ್ಕಾಗಿ (Birthday) ‘ಕೆಡಿ’ ಸಿನಿಮಾ ತಂಡ ಚಿತ್ರದ ಪೋಸ್ಟರ್ (Poster) ರಿಲೀಸ್ ಮಾಡುವ ಮೂಲಕ ಶುಭಾಶಯ ತಿಳಿಸಿದೆ. ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್‌ನ ಸಿನಿಮಾ ಇದಾಗಿದ್ದು, ಈ ಸಿನಿಮಾದಲ್ಲಿ ಧ್ರುವ ಹೊಸ ರೀತಿಯ ಪಾತ್ರವನ್ನು ಮಾಡಿದ್ದಾರೆ. ಆ ಪಾತ್ರದ ಹಿನ್ನೆಲೆಯಾಗಿಟ್ಟುಕೊಂಡು ಈ ಪೋಸ್ಟರ್ ಸಿದ್ಧ ಮಾಡಿದೆ ಚಿತ್ರತಂಡ.

    ಕ್ರಿಯೆಟಿವ್ ಡೈರೆಕ್ಟರ್ ಪ್ರೇಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ `ಕೆಡಿ’ (Kd Film) ಸಿನಿಮಾದ ಫೋಟೋವೊಂದು ಈ ಹಿಂದೆ ಲೀಕ್ ಆಗಿತ್ತು. ಮೈಸೂರಿನಲ್ಲಿ ಚಿತ್ರದ ಶೂಟಿಂಗ್ ನಡೆದಾಗ, ಆ ಭಾಗದ ಶೂಟಿಂಗ್‌ನಲ್ಲಿ ಧ್ರುವ ಸರ್ಜಾ ರೆಟ್ರೋ ಲುಕ್ (Retro Look) ನಲ್ಲಿ ಕಂಡಿದ್ದರು. ಅಭಿಮಾನಿಗಳ ಮಧ್ಯ ಧ್ರುವ ಕಾಣಿಸಿಕೊಂಡಿರುವ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ರೆಟ್ರೋ ಲುಕ್‌ನಲ್ಲಿ ಧ್ರುವ ಸಖತ್ ಆಗಿ ಕಂಡಿದ್ದರು.

    ಕೆವಿಎನ್‌ ನಿರ್ಮಾಣದ ಧ್ರುವ ಸರ್ಜಾ (Dhruva Sarja) ಮತ್ತು ನಿರ್ದೇಶಕ ಪ್ರೇಮ್ (Director Prem) ಕಾಂಬಿನೇಷನ್ ಸಿನಿಮಾ ನಾನಾ ಕಾರಣಗಳಿಂದಾಗಿ ಸಖತ್ ಸದ್ದು ಮಾಡ್ತಿದೆ. ಚಿತ್ರದ ಟೈಟಲ್ ಮೂಲಕ ಕ್ಯೂರಿಯಸ್ ಹುಟ್ಟು ಹಾಕಿರುವ ಈ ಸಿನಿಮಾ ಬಗ್ಗೆ ಫ್ಯಾನ್ಸ್ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ ಈ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಜೊತೆಗೆ ರವಿಚಂದ್ರನ್ (Ravichandran) ಕೂಡ ಇದ್ದಾರೆ. ಮೊನ್ನೆಯಷ್ಟೇ ರವಿಚಂದ್ರನ್ ಅವರ `ಕೆಡಿ’ ಸಿನಿಮಾದಲ್ಲಿನ ಫಸ್ಟ್ ಲುಕ್ ಬಿಡುಗಡೆಯಾಗಿ ಮೆಚ್ಚುಗೆ ಗಳಿಸಿತ್ತು. ಇದನ್ನೂ ಓದಿ:ಅಲ್ಲು ಬ್ಯುಸಿನೆಸ್ ಪಾರ್ಕ್ ನಲ್ಲಿ ಖ್ಯಾತ ನಟ ಅಲ್ಲು ರಾಮಲಿಂಗಯ್ಯ ಪ್ರತಿಮೆ

    ಈ ಹಿಂದೆ ತಮ್ಮದೇ ಸಿನಿಮಾದಲ್ಲಿ ನಟಿಸಿದ್ದ ರೀಷ್ಮಾ ನಾಣಯ್ಯ (Reeshma Nanaiah) ಅವರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ ಪ್ರೇಮ್. ಕೆಡಿ ಸಿನಿಮಾದಲ್ಲಿ ರೀಷ್ಮಾ ಅವರು ಮಚ್‌ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸೂಪರ್ ಸ್ಟಾರ್‌ಗಳಿರುವ ತಾರಾಗಣ ಅಂದ್ರೆ ಅದು ಕೆಡಿ ಸಿನಿಮಾ. ಧ್ರುವ ಸರ್ಜಾ, ರವಿಚಂದ್ರನ್‌, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) , ಸಂಜಯ್ ದತ್ (Sanjay Dutt) ಹೀಗೆ ಸ್ಟಾರ್‌ಗಳನ್ನ ಸ್ಟಾರ್ ಡೈರೆಕ್ಟರ್ ನಿರ್ದೇಶಕ ಪ್ರೇಮ್ ನಿರ್ದೇಶನ ಮಾಡ್ತಿದ್ದಾರೆ. ವಿಭಿನ್ನ ಕಥೆ ಹೊತ್ತು, ಪ್ಯಾನ್ ಇಂಡಿಯಾ ಸಿನಿಮಾ ಹೊತ್ತು ತರುತ್ತಿದ್ದಾರೆ.

     

    1968ರಿಂದ 1978ರ ನಡುವೆ ನಡೆದ ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಈ ರೆಟ್ರೋ ಸಿನಿಮಾ ಕಟ್ಟಿಕೊಡಲಾಗ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಅದಕ್ಕೆ ತಕ್ಕಂತೆ ಸ್ಟಾರ್‌ಕಾಸ್ಟ್, ಮೇಕಿಂಗ್, ಪ್ರಮೋಷನ್ ಎಲ್ಲವೂ ಇರಲಿದೆ. ಈ ಚಿತ್ರಕ್ಕಾಗಿ ಕೇವಲ 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿ ಧ್ರುವ ಸರ್ಜಾ ನಟಿಸ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದರ್ಶನ್ ಜೊತೆಗಿನ ಮನಸ್ತಾಪ: ಅವರಿಗೆ ಒಂದಷ್ಟು ಪ್ರಶ್ನೆ ಕೇಳಬೇಕಿದೆ ಎಂದ ಧ್ರುವ

    ದರ್ಶನ್ ಜೊತೆಗಿನ ಮನಸ್ತಾಪ: ಅವರಿಗೆ ಒಂದಷ್ಟು ಪ್ರಶ್ನೆ ಕೇಳಬೇಕಿದೆ ಎಂದ ಧ್ರುವ

    ಸ್ಯಾಂಡಲ್ ವುಡ್ ಹೆಸರಾಂತ ನಟ ದರ್ಶನ್ (Darshan) ಮತ್ತು ಧ್ರುವ ಸರ್ಜಾ (Dhruva Sarja) ನಡುವೆ ಕೋಲ್ಡ್ ವಾರ್ ನಡೀತಾ ಇದೆ ಎನ್ನುವ ವಿಚಾರ ಹಲವು ದಿನಗಳಿಂದ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಕಾವೇರಿ ಹೋರಾಟ ಸಂದರ್ಭದಲ್ಲಿ ಧ್ರುವ ಮತ್ತು ದರ್ಶನ್ ಹತ್ತಿರದಲ್ಲೇ ಕುಳಿತುಕೊಂಡಿದ್ದರೂ ಇಬ್ಬರೂ ಮಾತನಾಡಲಿಲ್ಲ ಎನ್ನುವುದು ಇದಕ್ಕೆ ಸಾಕ್ಷಿಯಾಗಿತ್ತು. ಧ್ರುವ ಮತ್ತು ದರ್ಶನ್ ಅಭಿಮಾನಿಗಳು ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಆರೋಪ ಪ್ರತ್ಯಾರೋಪವನ್ನೂ ಮಾಡುತ್ತಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಧ್ರುವ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

    ದರ್ಶನ್ ಜೊತೆಗಿನ ಮುನಿಸಿನ ಬಗ್ಗೆ ಮಾತನಾಡಿದ ಧ್ರುವ, ‘ದರ್ಶನ್ ನಮ್ಮ ಸೀನಿಯರ್ ಆಕ್ಟರ್. ಅವರ ಪ್ರಸೆನ್ಸ್, ಆಬ್ಸೆಂಟ್ ಅಲ್ಲೂ ಗೌರವ ಇದೆ. ಆದರೆ, ದರ್ಶನ್ ಅವ್ರಿಗೆ ಒಂದೆರಡು ಪ್ರಶ್ನೆ ಕೇಳಬೇಕಿದೆ. ಆ ಪ್ರಶ್ನೆಗಳನ್ನ ಕ್ಲಿಯರ್ ಮಾಡಿಕೊಳ್ಳದೇ ಮನಸ್ಸಲ್ಲೊಂದು, ಎದುರು ಒಂದು‌ ಮಾತಾಡೋಕ್ ಆಗಲ್ಲ.  ಮನಸ್ಸಲ್ಲಿ ಒಂದ್ ಇಟ್ಕೊಂಡು ಯಾರನ್ನೋ ಮೆಚ್ಚಿಸಲು ನಾಟಕ ಆಡುವ ಅವಶ್ಯಕತೆ ನನಗೆ ಇಲ್ಲ. ಆರ್ಟಿಫಿಸಿಯಲ್ ಆಗಿ ಫೇಕ್ ಆಗಿ ಇರೋಕ್ ನನಗೆ ಬರಲ್ಲ. ನಮ್ಗೂ ಸೆಲ್ಫ್ ರೆಸ್ಪೆಕ್ಟ್, ಸ್ವಾಭಿಮಾನ ಇದೆ ಅಲ್ವಾ. ದರ್ಶನ್ ಸೀನಿಯರ್ ಆಕ್ಟರ್. ಅವರ ಬಗ್ಗೆ ಗೌರವ ಇದ್ದೇ ಇರುತ್ತೆ’ ಎಂದು ಹೇಳುವ ಮೂಲಕ ಮತ್ತಷ್ಟು ಅನುಮಾನ ಮೂಡಿಸಿದ್ದಾರೆ ಧ್ರುವ.ಇದನ್ನೂ ಓದಿ:ಪತ್ನಿ ಜೊತೆ ಮಾಲ್ಡೀವ್ಸ್‌ನಲ್ಲಿ ‘ವಿಕ್ರಾಂತ್‌ ರೋಣ’ ನಟ

    ಮುಂದುವರೆದು ಮಾತನಾಡಿದ ಧ್ರುವ, ‘ನಮ್ಮ ಸಿನಿಮಾಗಳಿಗೆ ಅವ್ರು ಡಬ್ಬಿಂಗ್ ಮಾಡಿಕೊಟ್ಟಿದ್ದಾರೆ. ಮನಸ್ಸಲ್ಲಿ ಒಂದು ಇಟ್ಕೊಂಡು ನಾಟಕ ಆಡೋಕ್ ನನ್ಗೆ ಬರಲ್ಲ. ಅದು ನಾನಲ್ಲ ಅನ್ಸುತ್ತೆ. ನನಗೆ ದರ್ಶನ್ ಅವ್ರ ಬಳಿ ಕೇಳಲು ಕೆಲ ಪ್ರಶ್ನೆಗಳಿವೆ.ನಾನು ಅವರ ಬಳಿ ಮಾತನಾಡಿ ನೋಡ್ತೀನಿ. ಮನಸ್ತಾಪ ಕ್ಲಿಯರ್ ಆಗಬಹುದು, ಇಲ್ಲ ಆಗದೇ ಇರಬಹುದು. ಅದು ನಮ್ಮ ವೈಯಕ್ತಿಕ’ ಎಂದು ಹೇಳುವ ಮೂಲಕ ಮನಸ್ತಾಪ ಇರುವುದನ್ನು ಪರೋಕ್ಷವಾಗಿ ಅವರು ಒಪ್ಪಿಕೊಂಡಿದ್ದಾರೆ.

     

    ಧ್ರುವ ಮತ್ತು ದರ್ಶನ್ ಅವರ ಮನಸ್ತಾಪಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಅವರ ಮಧ್ಯ ಮತ್ತಷ್ಟು ಮನಸ್ತಾಪ ಆಗುವಂತೆ ಕೆಲವರು ಕುತಂತ್ರ ನಡೆಸಿದ್ದಾರಂತೆ. ಅವರಿಗೆ ಧ್ರುವ ಖಡಕ್ ವಾರ್ನಿಂಗ್ ನೀಡಿದ್ದಾರೆ. ‘ಈ ಬೆಳವಣಿಗೆ ಆದ್ಮೇಲೆ ನನ್ನ ಹೆಸರಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಆಗಿವೆ. ನಮ್ಮ ನಮ್ಮಲ್ಲೇ ವೈರಿಂಗ್ ಮಾಡ್ತಿದ್ದಾರೆ. ಈ ರೀತಿ ಮಾಡುವವರಿಗೆ ಒಂದು ರಿಕ್ವೆಸ್ಟ್. ದಯವಿಟ್ಟು ನನ್ನ ಹತ್ರ ತಗಲಾಕ್ಕೊಬೇಡಿ. ಫೇಕ್ ಆಕೌಂಟ್ ಕ್ರಿಯೇಟ್ ಮಾಡ್ತಿರೋರು ಎಚ್ಚರವಾಗಿರಿ’ ಎಂದು ಧ್ರುವ ಎಚ್ಚರಿಕೆಯನ್ನು ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಧ್ರುವ ಸರ್ಜಾ ಹುಟ್ಟುಹಬ್ಬ: ಹರಿದು ಬಂತು ಅಭಿಮಾನಿಗಳ ಸಾಗರ

    ಧ್ರುವ ಸರ್ಜಾ ಹುಟ್ಟುಹಬ್ಬ: ಹರಿದು ಬಂತು ಅಭಿಮಾನಿಗಳ ಸಾಗರ

    ನ್ನಡದ ಹೆಸರಾಂತ ಯುವ ನಟ ಧ್ರುವ ಸರ್ಜಾ (Dhruva Sarja) ಇಂದು ಅಭಿಮಾನಿಗಳ ಜೊತೆ ತಮ್ಮ ಹುಟ್ಟುಹಬ್ಬವನ್ನು (Birthday) ಆಚರಿಸಿಕೊಂಡರು. ನಾನಾ ಕಾರಣಗಳಿಂದಾಗಿ ಮೂರು ವರ್ಷಗಳಿಂದ ಧ್ರುವ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಈ ವರ್ಷ ಬೆಂಗಳೂರಿನ ಬಸವನಗುಡಿಯ ತಮ್ಮ ನಿವಾಸದಲ್ಲಿ ನಿನ್ನೆ ರಾತ್ರಿಯಿಂದಲೇ ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ರಾಜ್ಯದ ನಾನಾ ಭಾಗಗಳಿಂದ ಅಭಿಮಾನಿಗಳು ಅವರ ನಿವಾಸಕ್ಕೆ ಆಗಮಿಸಿದ್ದರು.

    ನೆಚ್ಚಿನ ನಟನನ್ನು ನೋಡಲು ರಾತ್ರಿಯಿಂದಲೇ ಅಭಿಮಾನಿಗಳು ಧ್ರುವ ಸರ್ಜಾ ಮನೆಯ ಮುಂದೆ ಜಮಾಯಿಸಿದ್ದರು. ನೆಚ್ಚಿನ ನಟನಿಗೆ ಶುಭಾಶಯಗಳನ್ನು ಕೋರಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಧ್ರುವ, ಈ ಹುಟ್ಟುಹಬಕ್ಕೆ ಅಣ್ಣನ (ಚಿರಂಜೀವಿ ಸರ್ಜಾ) (Chiranjeevi Sarja) ಸಿನಿಮಾ ರಿಲೀಸ್ ಆಗುತ್ತಿರುವುದೇ ದೊಡ್ಡ ವಿಚಾರ. ಮೂರು ವರ್ಷಗಳ ನಂತರ ಅಣ್ಣನ ಸಿನಿಮಾ ತೆರೆಗೆ ಬರುತ್ತಿದೆ. ಹುಟ್ಟುಹಬ್ಬಕ್ಕಿಂತ ಅದೇ ನನಗೆ ದೊಡ್ಡದು. ಅಣ್ಣನನ್ನು ತೆರೆಯ ಮೇಲೆ ನೋಡುವುದೇ ಒಂದು ಸಂಭ್ರಮ’ ಎಂದಿದ್ದಾರೆ. ಇದನ್ನೂ ಓದಿ:ರಾಮ್ ಪೋತಿನೇನಿ ಜೊತೆ ಅನುಪಮಾ ಪರಮೇಶ್ವರನ್ ಮದುವೆ

    ಈ ಹುಟ್ಟು ಹಬ್ಬಕ್ಕೆ ಚಿರಂಜೀವಿ ಸರ್ಜಾ ಅವರ ಸಿನಿಮಾ ರಿಲೀಸ್ ಆಗುತ್ತಿರುವುದು ಒಂದು ಕಡೆಯಾದರೆ, ಮತ್ತೊಂದು ಕಡೆ ಗಣೇಶನ ಹಬ್ಬದಂದು ಮನೆಗೆ ಧ್ರುವ ಅವರ ಪುತ್ರ ಬಂದಿದ್ದಾರೆ. ಹೀಗಾಗಿ ಡಬಲ್ ಉಡುಗೊರೆಯನ್ನೇ ಧ್ರುವ ಸರ್ಜಾ ಪಡೆದಿದ್ದಾರೆ. ಅಭಿಮಾನಿಗಳ ಜೊತೆ ಹುಟ್ಟುಹಬ್ಬವನ್ನು ಆಚರಿಸಿಕೊಂಡ ನಂತರ ಥಿಯೇಟರ್ ಗೆ ಬಂದು ಅಣ್ಣನ ಸಿನಿಮಾವನ್ನು ವೀಕ್ಷಿಸಲಿದ್ದಾರೆ ಧ್ರುವ.

     

    ಈ ಬಾರಿಯ ಹುಟ್ಟುಹಬ್ಬಕ್ಕೆ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದರು ಧ್ರುವ. ಕೇಕ್, ಹಾರ ತರುವ ಬದಲು ಪುಸ್ತಕಗಳನ್ನು ಉಡುಗೊರೆಯಾಗಿ ನೀಡುವಂತೆ ಅಭಿಮಾನಿಗಳನ್ನು ಕೇಳಿದ್ದರು. ಸಾಕಷ್ಟು ಅಭಿಮಾನಿಗಳು ಪುಸ್ತಕದ ಉಡುಗೊರೆಯೊಂದಿಗೆ ಧ್ರುವ ಮನೆಗೆ ಆಗಮಿಸಿದ್ದು ವಿಶೇಷವಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹುಟ್ಟು ಹಬ್ಬಕ್ಕೆ ಕೇಕ್, ಹಾರ ತರಬೇಡಿ ಪುಸ್ತಕ ತನ್ನಿ: ನಟ ಧ್ರುವ ಸರ್ಜಾ

    ಹುಟ್ಟು ಹಬ್ಬಕ್ಕೆ ಕೇಕ್, ಹಾರ ತರಬೇಡಿ ಪುಸ್ತಕ ತನ್ನಿ: ನಟ ಧ್ರುವ ಸರ್ಜಾ

    ನ್ನಡ ಸಿನಿಮಾ ನಟರು ತಮ್ಮ ಹುಟ್ಟು ಹಬ್ಬವನ್ನು ಹೊಸ ರೀತಿಯಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಸುದೀಪ್, ದರ್ಶನ್ ಸೇರಿದಂತೆ ಹಲವು ಕಲಾವಿದರು ತಮ್ಮ ಹುಟ್ಟು ಹಬ್ಬಕ್ಕೆ ಕೇಕ್, ಹಾರ ತರಬೇಡಿ ಎಂದು ಮನವಿ ಮಾಡಿಕೊಂಡಿದ್ದು ಇದೆ. ಆ ಹಣವನ್ನು ಅನಾಥಾಶ್ರಮಕ್ಕೂ, ವೃದ್ಧಾಶ್ರಮಕ್ಕೋ ಅಥವಾ ನಿಮ್ಮ ಕುಟುಂಬದ ಒಳ್ಳೆಯ ಕೆಲಸಕ್ಕೂ ಉಪಯೋಗಿಸಿಕೊಳ್ಳಿ ಎಂದಿದ್ದರು. ಇದೀಗ ಅದೇ ಹಾದಿಯಲ್ಲೇ ಧ್ರುವ ಸರ್ಜಾ ಕೂಡ ನಡೆಯುತ್ತಿದ್ದಾರೆ.

    ಕನ್ನಡದ ಹೆಸರಾಂತ ನಟ ಧ್ರುವ ಸರ್ಜಾ ಮೂರು ವರ್ಷಗಳ ನಂತರ ತಮ್ಮ ಹುಟ್ಟು ಹಬ್ಬವನ್ನು (Birthday) ಅಭಿಮಾನಿಗಳ ಜೊತೆ ಆಚರಿಸಲು ರೆಡಿಯಾಗಿದ್ದಾರೆ. ಅಕ್ಟೋಬರ್ 6ರಂದು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಧ್ರುವ, ಅಭಿಮಾನಿಗಳಿಗಾಗಿ (Fans) ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಹುಟ್ಟು ಹಬ್ಬಕ್ಕೆ ಬರುವವರು ಕೇಕ್, ಹಾರ, ತುರಾಯಿಗಳನ್ನು ತರಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

    ಅಕ್ಟೋಬರ್ 5ರಂದು ಧ್ರುವ ಮನೆಯ ಮುಂದೆಯೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಅಂದು ಅಭಿಮಾನಿಗಳು ಶಾಲಾ ಮಕ್ಕಳಿಗೆ ಬೇಕಾಗುವ ಸಾಮಗ್ರಿಗಳನ್ನು ಉಡುಗೊರೆ ರೂಪದಲ್ಲಿ ಕೊಡುವಂತೆ ಕೇಳಿಕೊಂಡಿದ್ದಾರೆ. ಪುಸ್ತಕ, ಬ್ಯಾಗ್, ಪೆನ್ನು ಹೀಗೆ ಅಗತ್ಯ ವಸ್ತುಗಳನ್ನು ಮಾತ್ರ ತನ್ನಿ ಎಂದು ಹೇಳಿಕೊಂಡಿದ್ದಾರೆ.

    ಹುಟ್ಟು ಹಬ್ಬಕ್ಕೂ ಮುನ್ನ ಅವರು ಮಾರ್ಟಿನ್ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿರಲಿದ್ದಾರೆ. ನಿರ್ದೇಶಕ ಎ.ಪಿ ಅರ್ಜುನ್ ಮತ್ತು ಧ್ರುವ ಸರ್ಜಾ (Dhruva Sarja) ಕಾಂಬಿನೇಷನ್ ನ ‘ಮಾರ್ಟಿನ್’ ಸಿನಿಮಾದ ಶೂಟಿಂಗ್ (Shooting) ಮುಗಿದಿದೆ ಎಂದು ಅಂದಾಜಿಸಲಾಗಿತ್ತು. ಬಿಡುಗಡೆಗೆ ಚಿತ್ರತಂಡ ಸಿದ್ಧವಾಗುತ್ತಿದೆ ಎಂದು ನಂಬಲಾಗಿತ್ತು. ಆದರೆ, ಅಭಿಮಾನಿಗಳ ಅಂದಾಜು ಸುಳ್ಳಾಗಿದೆ. ಚಿತ್ರತಂಡವೇ ಮಾಹಿತಿ ಕೊಟ್ಟಿರುವಂತೆ ಇನ್ನೂ ಮೂರು ಹಾಡುಗಳ ಶೂಟಿಂಗ್ ಬಾಕಿ ಇದೆಯಂತೆ. ಈ ವಾರ ಒಂದು ಹಾಡಿನ ಚಿತ್ರೀಕರಣಕ್ಕೂ ಚಿತ್ರತಂಡ ಸಿದ್ಧವಾಗಿದೆ.

    ಇತ್ತೀಚೆಗಷ್ಟೇ ಈ ಸಿನಿಮಾದ ಒಂದು ಹಾಡು ಚಿತ್ರೀಕರಣವಾಗಿತ್ತು. ಈ ಹಾಡಿನಲ್ಲಿ ಇಟಾಲಿಯನ್ ಸುಂದರಿ ಜಾರ್ಜಿಯಾ (Giorgia Andriani)  ಜೊತೆ ಧ್ರುವ ಸರ್ಜಾ ಹೆಜ್ಜೆ ಹಾಕಿದ್ದರು. ಈ ಮೂಲಕ ಬಾಲಿವುಡ್‌ ನಟಿ ಜಾರ್ಜಿಯಾ ಕನ್ನಡ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು.

     

    ಹೈದರಾಬಾದ್‌ನ ಅಲ್ಯೂಮಿನಿಯಂ ಫ್ಯಾಕ್ಟರಿಯಲ್ಲಿ ಸೆಟ್ ಹಾಕಿ ಬಿಂದಾಸ್ ಹಾಡಿಗೆ ಚಿತ್ರೀಕರಣ ಮಾಡಲಾತ್ತು. ಧ್ರುವ ಜೊತೆ ಜಾರ್ಜಿಯಾ ಆಂಡ್ರಿಯಾನಿ ಸಖತ್ ಸ್ಟೆಪ್ಸ್ ಹಾಕಿದ್ದರು. ದಕ್ಷಿಣ ಭಾರತ ಚಿತ್ರರಂಗದಲ್ಲಿ ಇದು ಆಕೆಯ ಮೊದಲ ಸಿನಿಮಾವಾಗಿದೆ. ಮಣಿ ಶರ್ಮಾ ಟ್ಯೂನ್ ಹಾಕಿರುವ ಹಾಡಿಗೆ ಇಮ್ರಾನ್ ಸರ್ದಾರಿಯಾ ಕೊರಿಯೋಗ್ರಫಿ ಮಾಡಿದ್ದಾರೆ. 300ಕ್ಕೂ ಹೆಚ್ಚು ಫಾರಿನ್ ಡ್ಯಾನ್ಸರ್ಸ್ ಹಾಡಿನಲ್ಲಿ ಕುಣಿದಿದ್ದಾರೆ. 3.5 ಕೋಟಿ ರೂ. ಬಜೆಟ್‌ನಲ್ಲಿ ಬಹಳ ಅದ್ದೂರಿಯಾಗಿ ಈ ಸಾಂಗ್ ಶೂಟಿಂಗ್ ನಡೆದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿಖಿಲ್ ಜೊತೆ ಮೊದಲ ಬಾರಿಗೆ ಕಾಣಿಸಿಕೊಂಡ ಧ್ರುವ ಸರ್ಜಾ

    ನಿಖಿಲ್ ಜೊತೆ ಮೊದಲ ಬಾರಿಗೆ ಕಾಣಿಸಿಕೊಂಡ ಧ್ರುವ ಸರ್ಜಾ

    ಟ ನಿಖಿಲ್ ಕುಮಾರ್ (Nikhil Kumar) ಸದ್ಯ ಶೂಟಿಂಗ್ (Shooting) ನಲ್ಲಿ ಸಖತ್ ಬ್ಯುಸಿ ಆಗಿದ್ದಾರೆ. ಅತ್ತ ರಾಜಕೀಯ ವಿಚಾರದಲ್ಲಿ ಓಡಾಟ, ಗಣ್ಯರ ಭೇಟಿ, ದೆಹಲಿ ಪ್ರವಾಸ ಹೀಗೆ ಒಂದಲ್ಲ ಒಂದು ಕೆಲಸದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಮತ್ತೊಂದು ಕಡೆ ಈಗಾಗಲೇ ಅನೌನ್ಸ್ ಮಾಡಿ ಶೂಟಿಂಗ್ ಶುರು ಮಾಡಿರೋ ಸಿನಿಮಾ ಕಂಪ್ಲೀಟ್ ಮಾಡಬೇಕಿದೆ. ನಿಖಿಲ್ ರಾಜಕೀಯ ಅಖಾಡಕ್ಕೆ ಅಧಿಕೃತವಾಗಿ ಎಂಟ್ರಿಕೊಡದೇ ಇದ್ದರೂ ಎಂಪಿ ಚುನಾವಣೆಗೆ ಬೇಕಿರೋ ಸದೃಢವಾದ ವೇದಿಕೆಯನ್ನ ಪಕ್ಷದ ಪರವಾಗಿ ತಾವೇ ಸಜ್ಜು ಮಾಡಬೇಕಿದೆ. ಹಾಗಾಗಿ ರಾಜಕೀಯ ಮತ್ತು ಸಿನಿಮಾ ಎರಡನ್ನೂ ಬ್ಯಾಲೆನ್ಸ್ ಮಾಡುವಲ್ಲಿ ಅವರು ನಿರತರಾಗಿದ್ದಾರೆ.

    ಸದ್ಯ ಲೈಕಾ ಸಂಸ್ಥೆ ನಿರ್ಮಾಣದ, ಲಕ್ಷ್ಮಣ್ ನಿರ್ದೇಶನದ ಚಿತ್ರದಲ್ಲಿ ನಿಖಿಲ್ ನಟಿಸುತ್ತಿದ್ದು ಚಿತ್ರದ ಸೆಕೆಂಡ್ ಶೆಡ್ಯೂಲ್ ಸ್ಟಾರ್ಟ್ ಆಗಿದೆ. ಐದು ತಿಂಗಳಲ್ಲಿ ಸಿನಿಮಾ ಕಂಪ್ಲೀಟ್ ಮಾಡಬೇಕು ಎನ್ನುವ ಟಾರ್ಗೆಟ್ ಇಟ್ಟುಕೊಂಡಿರುವ ಟೀಂ  ಬಿರುಸಿನಲ್ಲಿ ಶೂಟಿಂಗ್ ಮಾಡುತ್ತಿದೆ. ಈ ನಡುವೆ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದ ಜಾಗಕ್ಕೆ ನಟ ಆಕ್ಷನ್ ಪ್ರಿನ್ಸ್ ಧ್ರುವಾ ಸರ್ಜಾ ಸರ್ಪ್ರೈಸ್ ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ:ದೊಡ್ಮನೆ ಆಟಕ್ಕೆ ಜೊತೆಯಾಗ್ತಾರಾ ಮೇಘಾ ಶೆಟ್ಟಿ? ಕೊನೆಗೂ ಸಿಕ್ತು ಉತ್ತರ

    ನಿಖಿಲ್ ಹಾಗೂ ಧ್ರುವಾ ಸರ್ಜಾ (Dhruva Sarja) ಒಟ್ಟಿಗೆ ಕಾಣಿಸಿಕೊಂಡಿದ್ದು ತೀರ ಕಡಿಮೆ. ಆದರೆ ಇದೇ ಮೊದಲ ಬಾರಿಗೆ ಇಬ್ಬರು ಭೇಟಿ ಮಾಡಿ ಕೆಲ ಸಮಯ ಮಾತುಕತೆ ನಡೆಸಿದ್ದಾರೆ. ಇದೇ ಸಮಯದಲ್ಲಿ ನಿಖಿಲ್ ಅವರ ಹೊಸ ಸಿನಿಮಾ ಬಗ್ಗೆ ಹಾಗೂ ಧ್ರುವ ಅವರ ಮಾರ್ಟಿನ್ ಚಿತ್ರದ ಬಗ್ಗೆ  ಚರ್ಚಿಸಿದ್ದಾರೆ. ಇದಷ್ಟೇ ಅಲ್ಲದೇ ಇಬ್ಬರೂ ಒಂದಿಷ್ಟು ವೈಯಕ್ತಿಕ ವಿಚಾರಗಳ ಬಗ್ಗೆಯೂ ಮಾತನಾಡುತ್ತಾ ಕೆಲ ಸಮಯ ಕಳೆದಿದ್ದಾರೆ.

     

    ಅಪರೂಪಕ್ಕೆ ಸೆಟ್ ಗೆ ಬಂದ ಧ್ರುವ ಅವರನ್ನು ಕಂಡು ನಿಖಿಲ್ ಕೂಡ ಸರ್ಪ್ರೈಸ್ ಆಗಿದ್ದು ಅಪರೂಪದ ಗೆಳೆಯನನ್ನ ಪ್ರೀತಿಯಿಂದ ಬರಮಾಡಿಕೊಂಡು ಪ್ರೀತಿಯಿಂದ ಬೀಳ್ಕೊಟ್ಟಿದ್ದಾರೆ. ಒಟ್ಟಾರೆ ಈ ಇಬ್ಬರು ಸ್ಟಾರ್ ನಟರ ಭೇಟಿ ಅಭಿಮಾನಿಗಳಿಗೆ ಖುಷಿ ಕೊಡುವುದರ ಜೊತೆಗೆ ಕುತೂಹಲವನ್ನೂ ಹುಟ್ಟುಹಾಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ಕಾರುಣ್ಯ ಆಲೋಚನೆ:  ಅಂಗಾಂಗ ದಾನ ಶಿಬಿರಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್

    ನಟಿ ಕಾರುಣ್ಯ ಆಲೋಚನೆ: ಅಂಗಾಂಗ ದಾನ ಶಿಬಿರಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್

    ನೇಕ ವರ್ಷಗಳಿಂದ ಚಿತ್ರರಂಗದಲ್ಲಿ ನಟಿಯಾಗಿ ಗುರುತಿಸಿಕೊಂಡಿರುವ ನಟಿ ಕಾರುಣ್ಯ ರಾಮ್ (Karunya Ram) ಸದ್ಯ ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಕರ್ನಾಟಕ ಸಿಂಡಿಕೇಟ್ ಫೌಂಡೇಶನ್ ಹಾಗೂ ಕಿಮ್ಸ್ ಆಸ್ಪತ್ರೆಯ ಸಹಯೋಗದಲ್ಲಿ ಅಂಗಾಂಗ ದಾನ (Organ Donation) ಶಿಬಿರ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth Rajkumar) ಹಾಗೂ ಧ್ರುವ ಸರ್ಜಾ (Dhruva Sarja) ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದರು.

    ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ನಟಿ ಕಾರುಣ್ಯ ರಾಮ್, ‘ಅಂಗಾಂಗ ದಾನ ಮಾಡುವುದರಿಂದ ನಾವು ಸತ್ತ ಬಳಿಕವೂ ನಮ್ಮ ಉಪಯೋಗ ಆಗುತ್ತದೆ. ಅಂಗಾಂಗ ದಾನದಿಂದ ಪುಣ್ಯ ಸಿಗುತ್ತೆ, ಎಲ್ಲರೂ ಅಂಗಾಂಗ ದಾನ ಮಾಡಿ’ ಎಂದು ಮನವಿ ಮಾಡಿದರು. ಇದನ್ನೂ ಓದಿ:ಯಾವ ಬಾಲಿವುಡ್ ಹೀರೋಯಿನ್‌ಗೂ ಕಮ್ಮಿಯಿಲ್ಲದಂತೆ ಮಿಂಚಿದ ಮೇಘಾ ಶೆಟ್ಟಿ

    ನಂತರ ಮಾತನಾಡಿದ ಧ್ರುವ ಸರ್ಜಾ, ‘ಅನೇಕರಿಗೆ ನಾವು ಯೂಸ್ ಲೆಸ್ ಅಂತ ಹೇಳುತ್ತಿರುತ್ತೇವೆ. ಆದರೆ ಯಾರು ಯೂಸ್ ಲೆಸ್ ಅಲ್ಲ. ಯೂಸ್ಡ್ ಲೆಸ್ ಅಷ್ಟೇ. ಅಂಗಾಂಗ ದಾನ ಮಾಡಿ ಇನ್ನೊಬ್ಬರಿಗೆ ಉಪಯೋಗ ಆಗುತ್ತೆ. ನಾವು ಸತ್ತ ಮೇಲೂ ಇನ್ನೊಬ್ಬರಿಗೆ ಉಪಯೋಗ ಆಗುತ್ತೆ ಎಂದರೆ ಯಾಕೆ ಮಾಡಬಾರದು. ಎಲ್ಲರೂ ದಯವಿಟ್ಟು ಇದಕ್ಕೆ ಕೈ ಜೋಡಿಸಿ. ನಿಮ್ಮ ಪಕ್ಕದವರಿಗೂ ಹೇಳಿ. ಇಂಥ ಶಿಬಿರಗಳನ್ನು ಎಲ್ಲಾ ಕಡೆ ಮಾಡಬೇಕು, ಹೆಚ್ಚು ಹೆಚ್ಚು ಆಗಬೇಕು’ ಎಂದರು.

    ಕಾರ್ಯಕ್ರಮದಲ್ಲಿ ಸುಮಾರು 700 ರಿಂದ 1000 ಮಂದಿ ಅಂಗಾಂಗ ದಾನ ಪ್ರತಿಗೆ ಸಹಿ ಮಾಡಿದರು. ಈ ಕಾರ್ಯಕ್ರಮದಲ್ಲಿ ಹೆಲ್ತ್ ಅಂಡ್ ವೆಲ್ತ್ ಜಾಯಿಂಟ್ ಡೈರೆಕ್ಟರ್, ಕಿಮ್ಸ್ ಅಧ್ಯಕ್ಷರು, ಆರ್ಗನ್ ಡೊನೇಷನ್ ಡಿಪಾರ್ಟ್ಮೆಂಟ್  ಭಾಗಿಯಾಗಿತ್ತು. ಕರ್ನಾಟಕ ಸಿಂಡಿಕೇಟ್ ಫೌಂಡೇಶನ್ ನ ಫೌಂಡರ್ ಸಂತೋಷ್  ಕೂಡ ಭಾಗಿಯಾಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ- ಧ್ರುವ ಸರ್ಜಾ

    ಕಾವೇರಿ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ- ಧ್ರುವ ಸರ್ಜಾ

    ಕಾವೇರಿ ಹೋರಾಟ (Cauvery) ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಚಿತ್ರರಂಗದ ನಟ-ನಟಿಯರು ಕಾವೇರಿ ಹೋರಾಟಕ್ಕೆ ಸಾಥ್ ನೀಡುತ್ತಿಲ್ಲ ಎನ್ನುವ ಕೂಗು ಎದ್ದಿದೆ. ಈ ಬೆನ್ನಲ್ಲೇ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ಪ್ರತಿಕ್ರಿಯೆ ನೀಡಿದ್ದಾರೆ. ಕಾವೇರಿ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಮಾತನಾಡಿದ್ದಾರೆ.

    ಕಲಾವಿದ ಅನ್ನೋದನ್ನ ಬಿಟ್ಟು, ಕನ್ನಡಿಗನಾಗಿ ರೈತನ ಮಗನಾಗಿ ಮಾತನಾಡುತ್ತೇನೆ. ನಮ್ಮ ಕಲಾವಿದರ ಸಂಘದಿಂದ ಅನಂತ್‌ನಾಗ್ (Ananthnag), ರವಿಚಂದ್ರನ್, ಜಗ್ಗೇಶ್(Jaggesh), ಶಿವಣ್ಣ ಅವರು ಒಂದು ನಿರ್ಧಾರ ಕೈಗೊಂಡು ಕಾವೇರಿ ಹೋರಾಟಕ್ಕೆ ಕರೆ ನೀಡಿದರೆ, ಅವರ ಮಾರ್ಗದರ್ಶನದಲ್ಲಿ ನಾವು ನಡೆಯುತ್ತೇವೆ. ಇದನ್ನೂ ಓದಿ:‘ಗಟ್ಟಿಮೇಳ’ ಖ್ಯಾತಿಯ ರಕ್ಷ್ ರಾಮ್ ಹೊಸ ಸಿನಿಮಾಗೆ ಇಂದು ಮುಹೂರ್ತ

    ಕಾವೇರಿ ಸಮಸ್ಯೆ ಇವಾಗಿನಿಂದ ಇರೋದಲ್ಲ, ಸುಮಾರು ವರ್ಷಗಳಿಂದ ಇದೆ. ಚಿತ್ರರಂಗದ ಹಿರಿಯ ನಟರಿದ್ದಾರೆ. ಅವರು ನಿರ್ಧರಿಸಲಿ ನಾವು ಜೊತೆಗೆ ಇರುತ್ತೇವೆ ಎಂದು ಧ್ರುವ ಮಾತನಾಡಿದ್ದಾರೆ. ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಕೂಡ ಸದಾ ಇದೆ ಎಂದು ನಟ ಸಹಮತ ಸೂಚಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಕೆಡಿ’ ಚಿತ್ರದಲ್ಲಿ ಧ್ರುವ ಸರ್ಜಾ ಅಣ್ಣನಾಗಿ ಎಂಟ್ರಿ ಕೊಟ್ಟ ರಮೇಶ್ ಅರವಿಂದ್

    ‘ಕೆಡಿ’ ಚಿತ್ರದಲ್ಲಿ ಧ್ರುವ ಸರ್ಜಾ ಅಣ್ಣನಾಗಿ ಎಂಟ್ರಿ ಕೊಟ್ಟ ರಮೇಶ್ ಅರವಿಂದ್

    ಜೋಗಿ ಪ್ರೇಮ್ (Prem) ಅಡ್ಡಾದಿಂದ ಬ್ರೇಕಿಂಗ್ ಸುದ್ದಿಯೊಂದು ಬಂದಿದೆ. ಪ್ರೇಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಕೆಡಿ’ (KD) ಚಿತ್ರ ತಂಡಕ್ಕೆ ಮತ್ತೋರ್ವ ಖ್ಯಾತ ನಟನ ಆಗಮನವಾಗಿದ್ದು, ಧ್ರುವ ಸರ್ಜಾ (Dhruva Sarja) ಜೊತೆ ಇದೇ ಮೊದಲ ಬಾರಿಗೆ ರಮೇಶ್ ಅರವಿಂದ್  (Ramesh Aravind) ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಮಾಹಿತಿಯನ್ನು ಸ್ವತಃ ಪ್ರೇಮ್ ಅವರೇ ಬಹಿರಂಗ ಪಡಿಸಿದ್ದಾರೆ.

    ಧ್ರುವ ಸರ್ಜಾ ನಾಯಕನಾಗಿ ನಟಿಸುತ್ತಿರುವ ಕೆಡಿ ಸಿನಿಮಾದಲ್ಲಿ ಧ್ರುವ ಸರ್ಜಾ ಅವರ ಅಣ್ಣನಾಗಿ ರಮೇಶ್ ಅರವಿಂದ್ ನಟಿಸಲಿದ್ದಾರೆ. ಸದ್ಯದಲ್ಲೇ ತಮ್ಮ ಭಾಗದ ಚಿತ್ರೀಕರಣದಲ್ಲೂ ಅವರು ಭಾಗಿಯಾಗಲಿದ್ದಾರೆ. ತಾರಾಗಣದ ಕಾರಣದಿಂದಾಗಿಯೇ ಈ ಸಿನಿಮಾ ಕುತೂಹಲ ಮೂಡಿಸಿದ್ದು, ರವಿಚಂದ್ರನ್, ಸಂಜಯ್ ದತ್, ಶಿಲ್ಪಾ ಶೆಟ್ಟಿ ಹೀಗೆ ಹೆಸರಾಂತ ಕಲಾವಿದರೇ ತಾರಾಗಣದಲ್ಲಿದ್ದಾರೆ.

    ಹಿಂದೆ ತಮ್ಮದೇ ಸಿನಿಮಾದಲ್ಲಿ ನಟಿಸಿದ್ದ ರೀಷ್ಮಾ ನಾಣಯ್ಯ (Reeshma Nanaiah) ಅವರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ ಪ್ರೇಮ್. ಕೆಡಿ ಸಿನಿಮಾದಲ್ಲಿ ರೀಷ್ಮಾ ಅವರು ಮಚ್ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸೂಪರ್ ಸ್ಟಾರ್ಗಳಿರುವ ತಾರಾಗಣ ಅಂದ್ರೆ ಅದು ಕೆಡಿ ಸಿನಿಮಾ. ಧ್ರುವ ಸರ್ಜಾ, ರವಿಚಂದ್ರನ್‌, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) , ಸಂಜಯ್ ದತ್ (Sanjay Dutt), ಹೀಗೆ ಸ್ಟಾರ್ಗಳನ್ನ ಸ್ಟಾರ್ ಡೈರೆಕ್ಟರ್ ನಿರ್ದೇಶಕ ಪ್ರೇಮ್ ನಿರ್ದೇಶನ ಮಾಡ್ತಿದ್ದಾರೆ. ವಿಭಿನ್ನ ಕಥೆ ಹೊತ್ತು, ಪ್ಯಾನ್ ಇಂಡಿಯಾ ಸಿನಿಮಾ ಹೊತ್ತು ತರುತ್ತಿದ್ದಾರೆ.

     

    1968ರಿಂದ 1978 ನಡುವೆ ನಡೆದ ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ರೆಟ್ರೋ ಸಿನಿಮಾ ಕಟ್ಟಿಕೊಡಲಾಗ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಅದಕ್ಕೆ ತಕ್ಕಂತೆ ಸ್ಟಾರ್ಕಾಸ್ಟ್, ಮೇಕಿಂಗ್, ಪ್ರಮೋಷನ್ ಎಲ್ಲವೂ ಇರಲಿದೆ. ಚಿತ್ರಕ್ಕಾಗಿ ಕೇವಲ 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿ ಧ್ರುವ ಸರ್ಜಾ ನಟಿಸ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಣೇಶ ಹಬ್ಬದಂದು ಮಗ ಮನೆಗೆ ಬಂದಿದ್ದಾನೆ- ಧ್ರುವ ಸರ್ಜಾ

    ಗಣೇಶ ಹಬ್ಬದಂದು ಮಗ ಮನೆಗೆ ಬಂದಿದ್ದಾನೆ- ಧ್ರುವ ಸರ್ಜಾ

    ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ (Dhruva Sarja) ಅವರು ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಗಣೇಶ ಹಬ್ಬದಂದು (Ganesha Festival) ಧ್ರುವ ಪತ್ನಿ ಪ್ರೇರಣಾ(Prerana) ಗಂಡು ಮಗುವಿಗೆ(Baby Boy)  ಜನ್ಮ ನೀಡಿದ್ದಾರೆ. ಇದೇ ಖುಷಿಯಲ್ಲಿ ಮಾಧ್ಯಮಕ್ಕೆ ನಟ ಪ್ರತಿಕ್ರಿಯೆ ನೀಡಿದ್ದಾರೆ.

    ಮಗನ ಆಗಮನದ ಸಂತಸದ ಬಗ್ಗೆ ಧ್ರುವ ಮಾತನಾಡಿ, ಗಣೇಶ ಹಬ್ಬದ ದಿನ ಮನೆಗೆ ಮಗ ಬಂದಿದ್ದಾನೆ. ಮನೆಯಲ್ಲಿ ಎಲ್ಲರೂ ಖುಷಿಯಾಗಿದ್ದಾರೆ. ಮಗ ಹುಟ್ಟಿದ ತಕ್ಷಣ ಫೋನ್ ತೆಗೆದು ಚಿರು ನಂಬರ್‌ಗೆ ಡಯಲ್ ಮಾಡಲು ಹೋಗಿದ್ದೆ, 2 ನಿಮಿಷ ಬೇಕಾಯ್ತು ಸುಧಾರಿಸಿಕೊಳ್ಳಲು ಎಂದು ನಟ ಭಾವುಕರಾಗಿದ್ದಾರೆ. ಇದನ್ನೂ ಓದಿ:‘ಯಂಗ್ ಮ್ಯಾನ್’ ಇದು ಸಿಂಗಲ್ ಟೇಕ್ ಸಿನಿಮಾ

    ಇವತ್ತು 11 ಕಡೆ ಗಣೇಶನ ದರ್ಶನ ಮಾಡಲು ಹೋಗಬೇಕಿತ್ತು. ಆದರೆ ಮುಂದೆ ಮಾಡ್ತಿನಿ, ಮಗನ ಆಗಮನ ಖುಷಿ ಕೊಟ್ಟಿದೆ. ತಾಯಿ ಮತ್ತು ಮಗ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಧ್ರುವ ಮಾತನಾಡಿದ್ದಾರೆ.

    ಧ್ರುವ ಸರ್ಜಾ ಪತ್ನಿ ಪ್ರೇರಣಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರಿನ ಬಸವನಗುಡಿಯ ಖಾಸಗಿ ಆಸ್ಪತ್ರೆಯಲ್ಲಿ ಮಗುವಿನ ಜನನವಾಗಿದೆ. ಮೊನ್ನೆಯಷ್ಟೇ ಪ್ರೇರಣಾ ಅವರ ಸೀಮಂತ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನೆರವೇರಿಸಿದ್ದರು. ಈ ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗುವಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]