Tag: dhruva sarja

  • ಮುಂದಿನ ತಿಂಗಳು ಪತ್ನಿಗೆ ಡೆಲಿವರಿ ಡೇಟ್- 2ನೇ ಮಗುವಿನ ಬಗ್ಗೆ ಧ್ರುವ ಪ್ರತಿಕ್ರಿಯೆ

    ಮುಂದಿನ ತಿಂಗಳು ಪತ್ನಿಗೆ ಡೆಲಿವರಿ ಡೇಟ್- 2ನೇ ಮಗುವಿನ ಬಗ್ಗೆ ಧ್ರುವ ಪ್ರತಿಕ್ರಿಯೆ

    ಸ್ಯಾಂಡಲ್‌ವುಡ್ (Sandalwood) ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ಮೊದಲ ಪುತ್ರಿಗೆ ಒಂದು ವರ್ಷ ತುಂಬುವುದರೊಳಗೆ ಎರಡನೇ ಮಗುವಿನ ಆಗಮನದ ಬಗ್ಗೆ ಸಿಹಿಸುದ್ದಿ ಹಂಚಿಕೊಂಡಿದ್ದಾರೆ. ಈ ಬೆನ್ನಲ್ಲೇ ಧ್ರುವ ಸರ್ಜಾ ಮನೆ ಮುಂದೆ ಅಭಿಮಾನಿಗಳು ಜಮಾಯಿಸಿದ್ದಾರೆ. ನೆಚ್ಚಿನ ನಟನನನ್ನು ನೋಡಲು ದೂರ ಊರುಗಳಿಂದ ಭೇಟಿ ನೀಡಿದ್ದಾರೆ.

    ಆಗಸ್ಟ್ 25ರಂದು ತಮ್ಮ ಎರಡನೇ ಮಗುವಿನ ಆಗಮನದ ಬಗ್ಗೆ ಧ್ರುವ ಸರ್ಜಾ ದಂಪತಿ ಗುಡ್ ನ್ಯೂಸ್ ನೀಡಿದ್ದರು. ಇದೀಗ ಧ್ರುವ ಮನೆಗೆ ಭೇಟಿ ನೀಡಿ, ತಮ್ಮ ಹುಟ್ಟುಹಬ್ಬವನ್ನು ನೆಚ್ಚಿನ ನಟನ ಜೊತೆ ಸೆಲೆಬ್ರೇಟ್ ಮಾಡಿದ್ದಾರೆ. ಪ್ರತಿವಾರ ಭಾನುವಾರ ಅಭಿಮಾನಿಗಳಿಗೆ ಮೀಸಲಿಡುವ ಧ್ರುವ, ಕಳೆದ ಎರಡ್ಮೂರು ವಾರಗಳಿಂದ ಫ್ಯಾನ್ಸ್‌ಗೆ ಭೇಟಿ ನೀಡಿರಲಿಲ್ಲ. ಈಗ ಧ್ರುವ ಮನೆಗೆ ಭೇಟಿ ನೀಡಿ, ಫೋಟೋ ಕ್ಲಿಕ್ಕಿಸಿ, ಧ್ರುವ ನಟನೆಯ ಸಿನಿಮಾದ ಡೈಲಾಗ್ ಹೊಡೆದು ಸಂಭ್ರಮಿಸುತ್ತಿದ್ದಾರೆ. ಸಿನಿಮಾದ ಶೂಟಿಂಗ್ ಮುಗಿಸಿ ಇಂದು (ಆಗಸ್ಟ್‌ 27) ಅಭಿಮಾನಿಗಳಿಗೆ ಸಮಯ ನೀಡಿದ್ದಾರೆ. ಈ ಬಗ್ಗೆ ಧ್ರುವ ಸರ್ಜಾ ಮಾತನಾಡಿದ್ದಾರೆ. ಇದನ್ನೂ ಓದಿ:ದಿಗ್ಗಜರು- 2 ಸಿನಿಮಾಗಾಗಿ ಮತ್ತೆ ಜೊತೆಯಾಗ್ತಾರಾ ಸುದೀಪ್-‌ ದರ್ಶನ್?‌

    ದೂರ ಊರುಗಳಿಂದ ಬಂದಿರುವ ಅಭಿಮಾನಿಗಳನ್ನು ಭೇಟಿ ಮಾಡಿರೋದು ನನಗೆ ಖುಷಿ ಕೊಟ್ಟಿದೆ. ಅವರ ಹುಟ್ಟುಹಬ್ಬವನ್ನ ನನ್ನ ಜೊತೆ ಆಚರಿಸೋದು ನನಗೆ ಆಶೀರ್ವಾದ. ಎಷ್ಟೋ ತಾಯಂದಿರ ಆಶೀರ್ವಾದ ಸಿಕ್ತಿದೆ ಅನ್ನೋದು ಖುಷಿ. ಈ ಖುಷಿಯ ಜೊತೆಗೆ ಮನೆಗೆ ಮತ್ತೊಂದು ಮಗು ಬರುತ್ತಿದೆ. ಮುಂದಿನ ತಿಂಗಳು ಡೆಲಿವರಿ ಡೇಟ್ ಕೊಟ್ಟಿದ್ದಾರೆ. ಈಗಾಗಲೇ ಒಬ್ಬ ಮಗ ಇದ್ದಾನೆ ಮಗಳು ಇದ್ದಾಳೆ. ಯಾವುದೇ ಮಗು ಆದರೂ ನಮಗೆ ಖುಷಿನೇ ಎಂದು ಧ್ರುವ ಸರ್ಜಾ ಎರಡನೇ ಮಗುವಿನ ಆಗಮನದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

    ಅತ್ತಿಗೆ ಮೇಘನಾ (Meghana Raj) ಮತ್ತೆ ಸಿನಿಮಾ ಮಾಡ್ತಿರೋದು ಖುಷಿ ಕೊಟ್ಟಿದೆ. ಮದುವೆ ಆದ್ಮೇಲೆ ಬಹಳಷ್ಟು ಹೆಣ್ಣು ಮಕ್ಕಳು ಕೆಲಸ ಮಾಡುತ್ತಾರೆ. ನನ್ನ ಅತ್ತಿಗೆ ಕೂಡ ಕೆಲಸ ಮಾಡ್ತಿದ್ದಾರೆ ಅನ್ನೋದು ಹೆಮ್ಮೆಯ ವಿಚಾರ ಎಂದಿದ್ದಾರೆ. ಈ ಮೂಲಕ ಅತ್ತಿಗೆ ಮೇಘನಾ ನಟನೆಗೆ ಕಮ್‌ಬ್ಯಾಕ್‌ ಆಗಿರೋದರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 2ನೇ ಮಗುವಿನ ಆಗಮನ ಬಗ್ಗೆ ಸಿಹಿಸುದ್ದಿ ಕೊಟ್ರು ಧ್ರುವ ಸರ್ಜಾ ದಂಪತಿ

    2ನೇ ಮಗುವಿನ ಆಗಮನ ಬಗ್ಗೆ ಸಿಹಿಸುದ್ದಿ ಕೊಟ್ರು ಧ್ರುವ ಸರ್ಜಾ ದಂಪತಿ

    ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಬಗ್ಗೆ ಧ್ರುವ ಸರ್ಜಾ ಗುಡ್ ನ್ಯೂಸ್ ಹೇಳಿದ್ದಾರೆ. ಸ್ಪೆಷಲ್ ವಿಡಿಯೋ ಮೂಲಕ ಹೊಸ ಅತಿಥಿಯ (Second Baby) ಆಗಮನದ ಬಗ್ಗೆ ಅಪ್‌ಡೇಟ್ ಹಂಚಿಕೊಂಡಿದ್ದಾರೆ.

    ಕಳೆದ ವರ್ಷ ಅಕ್ಟೋಬರ್‌ನಲ್ಲಿ ಚೊಚ್ಚಲ ಮಗುವಿನ ಆಗಮನವಾಗಿದೆ. ಹೆಣ್ಣು ಮಗುವಿಗೆ ಪ್ರೇರಣಾ (Prerana) ಅವರು ಜನ್ಮ ನೀಡಿದ್ದರು. ಈಗ ಮತ್ತೆ ತಾಯ್ತನದ ಸಂಭ್ರಮದಲ್ಲಿದ್ದಾರೆ. ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಬಗ್ಗೆ ವಿಡಿಯೋ ಮೂಲಕ ಸಿಹಿಸುದ್ದಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:2023: ಅತ್ಯುತ್ತಮ ಸಿನಿಮಾ, ರಾಕೆಟ್ರಿ ದಿ ನಂಬಿ ಎಫೆಕ್ಟ್

    2019ರಲ್ಲಿ ಧ್ರುವ ಸರ್ಜಾ-ಪ್ರೇರಣಾ ಅವರು ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ಹಲವು ವರ್ಷಗಳ ಪ್ರೀತಿಗೆ ಮದುವೆ ಮುದ್ರೆ ಒತ್ತಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಣ್ಣ ಚಿರು ನಟನೆಯ ಕೊನೆಯ ಚಿತ್ರದ ಡಬ್ಬಿಂಗ್ ಮುಗಿಸಿದ ಧ್ರುವ ಸರ್ಜಾ

    ಅಣ್ಣ ಚಿರು ನಟನೆಯ ಕೊನೆಯ ಚಿತ್ರದ ಡಬ್ಬಿಂಗ್ ಮುಗಿಸಿದ ಧ್ರುವ ಸರ್ಜಾ

    ಚಿರಂಜೀವಿ ಸರ್ಜಾ (Chiranjeevi Sarja) ಅಭಿನಯದ ಕೊನೆಯ ಚಿತ್ರ ‘ರಾಜ ಮಾರ್ತಾಂಡ’ದ (Raja Marthanda) ಡಬ್ಬಿಂಗ್ (Dubbing)ಕೆಲಸವನ್ನು ಮಾಡಿಕೊಡುವುದಾಗಿ ಧ್ರುವ ಸರ್ಜಾ ಹೇಳಿಕೊಂಡಿದ್ದರು. ಅಣ್ಣನ ಪಾತ್ರಕ್ಕೆ ತಾವೇ ಡಬ್ ಮಾಡುವುದಾಗಿಯೂ ತಿಳಿಸಿದ್ದರು. ಇದೀಗ ಡಬ್ಬಿಂಗ್ ಕೆಲಸವನ್ನೂ ಧ್ರುವ ಸರ್ಜಾ ಪೂರ್ಣಗೊಳಿಸಿದ್ದಾರೆ. ಆ ವಿಡಿಯೋ ವೈರಲ್ ಕೂಡ ಆಗಿದೆ.

    ಚಿರು ಸರ್ ನಮ್ಮ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಳಿಸಿದ್ದರು. ಡಬ್ಬಿಂಗ್ ಮಾಡುವುದು ಮಾತ್ರ ಬಾಕಿಯಿತ್ತು. ಆನಂತರ ನಡೆಯ ಬಾರದ ನಟನೆ ನಡೆದದ್ದು ಎಲ್ಲರಿಗೂ ಗೊತ್ತೇ ಇದೆ. ನಾನು ಚಿರು ಅವರ ಪಾರ್ಥಿವ ಶರೀರ ನೋಡಲು ಹೋದಾಗ, ಧ್ರುವ ಸರ್ಜಾ (Dhruva Sarja) ಕೇಳಿದ ಮೊದಲ ಮಾತು, ಅಣ್ಣ ಡಬ್ಬಿಂಗ್ ಮುಗಿಸಿದ್ದಾರಾ? ನಾನು ಇಲ್ಲ ಅಂದೆ. ನಾನು ಮಾಡಿಕೊಡುತ್ತೀನಿ ಅಂದರು. ಹಾಗೆ ಟ್ರೇಲರ್ ಗೆ ಧ್ರುವ ಧ್ವನಿ ನೀಡಿದ್ದಾರೆ. ಮೇಘನಾರಾಜ್ ಹಾಗೂ ಸುಂದರರಾಜ್ ಅವರಂತೂ ನಮ್ಮ ಬೆಂಬಲಕ್ಕೆ ಸದಾ ಇದ್ದಾರೆ. ರಾಯನ್ ರಾಜ್ ಸರ್ಜಾ ಸಹ ನಮ್ಮ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರೆಲ್ಲರಿಗೂ ಧನ್ಯವಾದ ಎಂದಿದ್ದರು ನಿರ್ದೇಶಕ ರಾಮ್ ನಾರಾಯಣ್.

    ಅದೇನೊ ಗೊತ್ತಿಲ್ಲ. ಅವರು ನಟಿಸುವ ಬೇರೆ ಚಿತ್ರಗಳ ಸಂಭಾಷಣೆನ್ನು ಅಲ್ಲೇ ಹೇಳಿ, ಹತ್ತು ನಿಮಿಷಕ್ಕೆ ಮರೆತು ಹೋಗತ್ತಿದ್ದರು. ಆದರೆ ಈ ಚಿತ್ರದ ಸಂಭಾಷಣೆ ಮಾತ್ರ ಯಾವಾಗಲೂ ಹೇಳುತ್ತಿದ್ದರು. ಕೊನೆಗೆ ಚಿರು ಬಂದರೆ ನಾವೆಲ್ಲಾ ಆ ಡೈಲಾಗ್ ಹೇಳುತ್ತಿದ್ದೆವು. ಅಷ್ಟು ಈ ಚಿತ್ರವನ್ನು ಹಚ್ಚಿಕೊಂಡಿದ್ದರು. ಅವರಿಲ್ಲದ ಈ ಸಮಯದಲ್ಲಿ ಚಿತ್ರತಂಡಕ್ಕೆ ಬೆಂಬಲ ನೀಡಬೇಕಾಗಿರುವುದು ನಮ್ಮ ಕರ್ತವ್ಯ. ನಮ್ಮ ಎರಡು ಕುಟುಂಬಗಳ ಸಹಕಾರ ಚಿತ್ರಕ್ಕೆ ಇರಲಿದೆ ಎನ್ನುವುದು ಮೇಘನಾ ರಾಜ್ ಮಾತು. ಇದನ್ನೂ ಓದಿ:‘ಟೈಗರ್ ನಾಗೇಶ್ವರ್ ರಾವ್’ ಟೀಸರ್ ಔಟ್- ಮಾಸ್ ಆಗಿ ಎಂಟ್ರಿ ಕೊಟ್ಟ ರವಿತೇಜ

    ಗೀತರಚನೆಕಾರರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು  ಪ್ರಣವ್ ಗೌಡ.ಎನ್, ನಿವೇದಿತಾ ಹಾಗೂ ಶಿವಕುಮಾರ್ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಧರ್ಮವಿಶ್ ಹಿನ್ನೆಲೆ ಸಂಗೀತ, ಕೆ.ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು ಡಿ ವಿ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

     

    ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ‌ ಸಾತಿ, ಮೇಘಶ್ರೀ, ತ್ರಿವೇಣಿ (ಟಗರು) ಅಭಿನಯಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ (ಬಾಂಬೆ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಿರು ಕೊನೆಯ ಸಿನಿಮಾದಲ್ಲಿ ರಾಯನ್- ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮೇಘನಾ ರಾಜ್

    ಚಿರು ಕೊನೆಯ ಸಿನಿಮಾದಲ್ಲಿ ರಾಯನ್- ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮೇಘನಾ ರಾಜ್

    ‘ತತ್ಸಮ ತದ್ಭವ’ (Tatsama Tadbhava) ಸಿನಿಮಾ ಮೂಲಕ ನಟಿ ಮೇಘನಾ ರಾಜ್ (Meghana Raj) ಅವರು ಕಮ್‌ಬ್ಯಾಕ್ ಆಗಿದ್ದಾರೆ. ಚಿತ್ರದ ಮೊದಲ ಟೀಸರ್‌ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಇದರ ನಡುವೆ ಇತ್ತೀಚಿನ ಸಂದರ್ಶನದಲ್ಲಿ ಮೇಘನಾ ರಾಜ್ ಅವರು ಅಚ್ಚರಿಯ ಮಾಹಿತಿಯೊಂದನ್ನ ಬಿಚ್ಚಿಟ್ಟಿದ್ದಾರೆ. ಪತಿ ಚಿರು ಕೊನೆಯ ಸಿನಿಮಾದಲ್ಲಿ ರಾಯನ್ ರಾಜ್‌ ಸರ್ಜಾ ನಟಿಸಿದ್ದಾರಾ? ಎಂಬುದರ ಬಗ್ಗೆ ನಟಿ ಮಾತಾಡಿದ್ದಾರೆ.

    ಮೇಘನಾ ರಾಜ್ ಅವರು ಎಂದೂ ಕಾಣಿಸಿಕೊಂಡಿರದ ಪಾತ್ರದಲ್ಲಿ ‘ತತ್ಸಮ ತದ್ಭವ’ ಸಿನಿಮಾದಲ್ಲಿ ನಟಿಸಿದ್ದಾರೆ. ಕಮ್ ಬ್ಯಾಕ್ ಸಿನಿಮಾ ಆಗಿರೋ ಕಾರಣ, ಸಿನಿಮಾ ಬಗ್ಗೆ ತುಂಬಾನೇ ಹೈಪ್ ಕ್ರಿಯೇಟ್ ಮಾಡಿದೆ. ಇದರ ಪತಿ ಚಿರು ಸರ್ಜಾ ನಟನೆಯ ‘ರಾಜ ಮಾರ್ತಾಂಡ’ ಸಿನಿಮಾ ಯಾಕೆ ತಡವಾಗುತ್ತಿದೆ ಎಂದು ನಟಿ ಹೇಳಿದ್ದಾರೆ.

    ಪತಿ ಚಿರಂಜೀವಿ ಸರ್ಜಾ (Chiranjeevi Sarja) ಅವರು ಕೊನೆದಾಗಿ ನಟಿಸಿರುವ ಸಿನಿಮಾ ‘ರಾಜ ಮಾರ್ತಾಂಡ’ (Raja Marthanda) ಚಿತ್ರ. ಸರ್ಜಾ ಫ್ಯಾಮಿಲಿ ಭಾವನಾತ್ಮಕವಾಗಿ ಹತ್ತಿರವಾಗಿದೆ. ಧ್ರುವ ಸರ್ಜಾ ಚಿರು ಪಾತ್ರಕ್ಕೆ ಧ್ವನಿಯಾಗಿದ್ರೆ, ಪುತ್ರ ರಾಯನ್ ರಾಜ್ ಸರ್ಜಾ ಈ ಸಿನಿಮಾದ ಭಾಗವಾಗಿದ್ದಾರೆ. ರಾಯನ್ ಕೂಡ ತಂದೆಯ ಸಿನಿಮಾ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಈ ಬಗ್ಗೆ ಮೇಘನಾ ರಾಜ್ ಅವರು ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ:ಮನೀಷ್ ಮಲ್ಹೋತ್ರಾ ನಿರ್ದೇಶನದಲ್ಲಿ ಮೀನಾ ಕುಮಾರಿ ಬಯೋಪಿಕ್- ಕೃತಿ ಸನೋನ್ ನಾಯಕಿ?

    ಚಿರು- ಧ್ರುವಗೆ ಇಬ್ಬರ ಬಾಂಡಿಂಗ್ ತುಂಬಾನೇ ಚೆನ್ನಾಗಿತ್ತು. ಡಬ್ಬಿಂಗ್ ಮಾಡುವಾಗ ಧ್ರುವಗೆ ಸೀನ್ ನೋಡಿ ಡಬ್ ಮಾಡೋಕೆ ಕಷ್ಟವಾಗಿದೆ. ಸಿನಿಮಾ ಚೆನ್ನಾಗಿ ಬರಬೇಕು ಎಂಬ ಕಾರಣಕ್ಕೆ ಸಮಯ ತೆಗೆದುಕೊಂಡು ಕೆಲಸ ಮಾಡಿದ್ದಾರೆ.  ಧ್ರುವ ಸರ್ಜಾ ಇನ್ನೂ ಎಳಸು ಅಷ್ಟು ಶಕ್ತಿ ಇಲ್ಲ. ರಾಯನ್- ಅವನಿಗೂ ವ್ಯತ್ಯಾಸವಿಲ್ಲ ಎಂದು ಮೇಘನಾ ರಾಜ್ ಹೇಳಿದ್ದಾರೆ. ಸಿನಿಮಾ ಪ್ರಚಾರದಿಂದ ಹಿಡಿದು ರಿಲೀಸ್‌ ಆಗುವವರೆಗೂ ನನ್ನದು ಮತ್ತು ನನ್ನ ಕುಟುಂಬದ ಬೆಂಬಲವಿರುತ್ತದೆ ಎಂದು ಹೇಳಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಕೆಡಿ’ ಸಿನಿಮಾದಲ್ಲಿ ಧ್ರುವ ಸರ್ಜಾ:  ರೆಟ್ರೋ ಲುಕ್  ಫೋಟೋ ಲೀಕ್

    ‘ಕೆಡಿ’ ಸಿನಿಮಾದಲ್ಲಿ ಧ್ರುವ ಸರ್ಜಾ: ರೆಟ್ರೋ ಲುಕ್ ಫೋಟೋ ಲೀಕ್

    ಸ್ಯಾಂಡಲ್‌ವುಡ್‌ನ (Sandalwood) ಕ್ರಿಯೆಟಿವ್ ಡೈರೆಕ್ಟರ್ ಪ್ರೇಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ`ಕೆಡಿ’ (Kd Film) ಸಿನಿಮಾದ ಫೋಟೋವೊಂದು ಲೀಕ್ ಆಗಿದೆ. ಸದ್ಯ ಮೈಸೂರಿನಲ್ಲಿ ಚಿತ್ರದ ಶೂಟಿಂಗ್ ನಡೆದಿದ್ದು, ಈ ಭಾಗದ ಶೂಟಿಂಗ್ ನಲ್ಲಿ ಧ್ರುವ ಸರ್ಜಾ ರೆಟ್ರೋ ಲುಕ್ (Retro Look) ನಲ್ಲಿ ಕಂಡಿದ್ದಾರೆ. ಅಭಿಮಾನಿಗಳ ಮಧ್ಯ ಧ್ರುವ ಕಾಣಿಸಿಕೊಂಡಿರುವ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ರೆಟ್ರೋ ಲುಕ್ ನಲ್ಲಿ ಧ್ರುವ ಸಖತ್ ಆಗಿ ಕಾಣುತ್ತಾರೆ.

    ಕೆವಿಎನ್‌ ನಿರ್ಮಾಣದ ಧ್ರುವ ಸರ್ಜಾ (Dhruva Sarja) ಮತ್ತು ನಿರ್ದೇಶಕ ಪ್ರೇಮ್ (Director Prem) ಕಾಂಬಿನೇಷನ್ ಸಿನಿಮಾ ನಾನಾ ಕಾರಣಗಳಿಂದಾಗಿ  ಸಖತ್ ಸದ್ದು ಮಾಡ್ತಿದೆ. ಚಿತ್ರದ ಟೈಟಲ್ ಮೂಲಕ ಕ್ಯೂರಿಯಸ್ ಹುಟ್ಟು ಹಾಕಿರುವ ಈ ಸಿನಿಮಾ ಬಗ್ಗೆ ಫ್ಯಾನ್ಸ್ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ ಈ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಜೊತೆಗೆ ರವಿಚಂದ್ರನ್ (Ravichandran) ಕೂಡ ಇದ್ದಾರೆ. ಮೊನ್ನೆಯಷ್ಟೇ ರವಿಚಂದ್ರನ್ ಅವರ `ಕೆಡಿ’ ಸಿನಿಮಾದಲ್ಲಿನ ಫಸ್ಟ್ ಲುಕ್ ಬಿಡುಗಡೆಯಾಗಿ ಮೆಚ್ಚುಗೆ ಗಳಿಸಿತ್ತು. ಇದನ್ನೂ ಓದಿ:ಕೋಮಲ್ ಹುಟ್ಟುಹಬ್ಬಕ್ಕೆ ‘ರೋಲೆಕ್ಸ್’ ಪೋಸ್ಟರ್

    ಈ ಹಿಂದೆ ತಮ್ಮದೇ ಸಿನಿಮಾದಲ್ಲಿ ನಟಿಸಿದ್ದ ರೀಷ್ಮಾ ನಾಣಯ್ಯ (Reeshma Nanaiah) ಅವರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ ಪ್ರೇಮ್. ಕೆಡಿ ಸಿನಿಮಾದಲ್ಲಿ ರೀಷ್ಮಾ ಅವರು ಮಚ್‌ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸೂಪರ್ ಸ್ಟಾರ್‌ಗಳಿರುವ ತಾರಾಗಣ ಅಂದ್ರೆ ಅದು ಕೆಡಿ ಸಿನಿಮಾ. ಧ್ರುವ ಸರ್ಜಾ, ರವಿಚಂದ್ರನ್‌, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) , ಸಂಜಯ್ ದತ್ (Sanjay Dutt), ಹೀಗೆ ಸ್ಟಾರ್‌ಗಳನ್ನ ಸ್ಟಾರ್ ಡೈರೆಕ್ಟರ್ ನಿರ್ದೇಶಕ ಪ್ರೇಮ್ ನಿರ್ದೇಶನ ಮಾಡ್ತಿದ್ದಾರೆ. ವಿಭಿನ್ನ ಕಥೆ ಹೊತ್ತು, ಪ್ಯಾನ್ ಇಂಡಿಯಾ ಸಿನಿಮಾ ಹೊತ್ತು ತರುತ್ತಿದ್ದಾರೆ.

     

    1968ರಿಂದ 1978ರ ನಡುವೆ ನಡೆದ ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಈ ರೆಟ್ರೋ ಸಿನಿಮಾ ಕಟ್ಟಿಕೊಡಲಾಗ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಅದಕ್ಕೆ ತಕ್ಕಂತೆ ಸ್ಟಾರ್‌ಕಾಸ್ಟ್, ಮೇಕಿಂಗ್, ಪ್ರಮೋಷನ್ ಎಲ್ಲವೂ ಇರಲಿದೆ. ಈ ಚಿತ್ರಕ್ಕಾಗಿ ಕೇವಲ 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿ ಧ್ರುವ ಸರ್ಜಾ ನಟಿಸ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋಮಲ್ ನಟನೆಯ ‘ನಮೋ ಭೂತಾತ್ಮ 2’ ಚಿತ್ರದ ಟೀಸರ್ ರಿಲೀಸ್

    ಕೋಮಲ್ ನಟನೆಯ ‘ನಮೋ ಭೂತಾತ್ಮ 2’ ಚಿತ್ರದ ಟೀಸರ್ ರಿಲೀಸ್

    ಹಜ ಅಭಿನಯದ ಮೂಲಕ ಜನರ ಮನ ಗೆದ್ದಿರುವ ನಟ ಕೋಮಲ್ (Komal) ಕುಮಾರ್ ನಾಯಕರಾಗಿ ನಟಿಸಿರುವ ‘ನಮೋ ಭೂತಾತ್ಮ 2’ (Namo Bhutatma 2)  ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನೃತ್ಯ ನಿರ್ದೇಶಕ ಮುರಳಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಟ ಧ್ರುವ ಸರ್ಜಾ ಟೀಸರ್ (Teaser) ಬಿಡುಗಡೆ ಮಾಡಿದರು.

    ಟೀಸರ್ ಬಿಡುಗಡೆ ಮಾಡಿ ಮಾತನಾಡಿದ ಧ್ರುವ ಸರ್ಜಾ (Dhruva Sarja), ನಾನು ಮೊದಲಿನಿಂದಲೂ ಕೋಮಲ್ ಅವರ ಅಭಿಮಾನಿ. ಅವರ ಅಭಿನಯದ ಎಲ್ಲಾ ಚಿತ್ರಗಳನ್ನು ನೋಡಿದ್ದೇನೆ. ಈ ಚಿತ್ರದ ಬಿಡುಗಡೆಗೂ ಕಾಯುತ್ತಿದ್ದೇನೆ. ಮುರಳಿ (Muruli) ಮಾಸ್ಟರ್ ಸಹ ನನ್ನ ಚಿತ್ರಗಳ ಹಾಡುಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ನಮೋ ಭೂತಾತ್ಮ 2 ಸೂಪರ್ ಹಿಟ್ ಆಗಲಿ ಎಂದು ಹಾರೈಸಿದರು. ಇದನ್ನೂ ಓದಿ:ಕರಾವಳಿ ಬೆಡಗಿ ಕೃತಿ ಶೆಟ್ಟಿಗೆ ಸ್ಟಾರ್ ನಟನ ಪುತ್ರನಿಂದ ಟಾರ್ಚರ್

    ನಾನು ನಿರ್ಮಿಸಿ, ನಟಿಸಿದ್ದ, ಮುರಳಿ ಮಾಸ್ಟರ್ ನಿರ್ದೇಶಿಸಿದ್ದ ನಮೋ ಭೂತಾತ್ಮ ಚಿತ್ರದ ಮೊದಲ ಭಾಗ ಬಿಡುಗಡೆಯಾಗಿ ಹತ್ತು ವರ್ಷಗಳಾಗಿದೆ. ಆ ಚಿತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ನಂತರ ಮುರಳಿ ಮಾಸ್ಟರ್ ಹಾಗೂ ನಾನು ಇನ್ನೆರಡು ಚಿತ್ರಗಳ ಬಗ್ಗೆ ಚರ್ಚೆ ಮಾಡಿದ್ದೆವು. ಆದರೆ ಎಷ್ಟೋ ವರ್ಷಗಳ ಬಳಿಕ ಈ ನಮೋ  ಭೂತಾತ್ಮ 2 ಚಿತ್ರ ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ ಬರುತ್ತಿದೆ‌. ಮೊದಲಭಾಗಕ್ಕೆ ಭಯ ಹುಟ್ಟಿಸುವ ಸನ್ನಿವೇಶಗಳು ಹೆಚ್ಚಾಗಿದ್ದವು. ಆದರೆ ಈ ಚಿತ್ರದಲ್ಲಿ ಕಾಮಿಡಿ ಕೂಡ ಅರ್ಧ ಭಾಗದಷ್ಟಿರುತ್ತದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ ಎಂದು ನಾಯಕ ಕೋಮಲ್ ಕುಮಾರ್ ತಿಳಿಸಿದರು.

    2014ರಲ್ಲಿ ನನಗೆ ಕೋಮಲ್ ಅವರು ನಮೋ ಭೂತಾತ್ಮ ಚಿತ್ರ ನಿರ್ದೇಶಿಸಲು ಅವಕಾಶ ನೀಡಿದ್ದರು. ಆನಂತರ ಈಗ ನಮೋ ಭೂತಾತ್ಮ 2 ಚಿತ್ರದಲ್ಲಿ ಅವರ ಜೊತೆ ಮಾಡಿದ್ದೇನೆ. ನನ್ನ ಅಕ್ಕನ ಮಗ ಸಂತೋಷ್ ಶೇಖರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕೊರೋನ ಸಮಯದಲ್ಲೇ ಈ ಚಿತ್ರದ ಕಥೆ ಸಿದ್ದ ಮಾಡಿಕೊಂಡಿದ್ದೆ. ಆನಂತರ ಕೋಮಲ್ ಅವರಿಗೆ ನಾನು ಹಾಗೂ ಸಂತೋಷ್ ಹೋಗಿ ಈ ಚಿತ್ರದ ಕಥೆ ಹೇಳಿದ್ದೆವು. ಕೋಮಲ್ ಅವರು ನಟಿಸಲು ಒಪ್ಪಿದರು. ಚಿತ್ರಕ್ಕೆ ನಮೋ ಭೂತಾತ್ಮ 2 ಎಂದು ಹೆಸರಿಟ್ಟೆವು. ನನ್ನ ತಂಡದ ಸದಸ್ಯರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಇಂದು ಟೀಸರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ದೇಶಕ ಮುರಳಿ. ನಾಯಕಿ ಲೇಖಾ ಚಂದ್ರ, ಚಿತ್ರದಲ್ಲಿ ನಟಿಸಿರುವ ಜಿ.ಜಿ, ಮೋನಿಕಾ, ವರುಣ್ ರಾಜ್ ಹಾಗೂ ಚಿತ್ರದ ನಿರ್ಮಾಪಕ ಸಂತೋಷ್ ಶೇಖರ್ ಚಿತ್ರದ ಕುರಿತು ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ನೇಹಿತನ ಹುಟ್ಟುಹಬ್ಬಕ್ಕೆ 52 ಲಕ್ಷ ಮೌಲ್ಯದ ದುಬಾರಿ ಕಾರು ಗಿಫ್ಟ್‌ ನೀಡಿದ ‘ಮಾರ್ಟಿನ್‌’ ಹೀರೋ ಧ್ರುವ ಸರ್ಜಾ

    ಸ್ನೇಹಿತನ ಹುಟ್ಟುಹಬ್ಬಕ್ಕೆ 52 ಲಕ್ಷ ಮೌಲ್ಯದ ದುಬಾರಿ ಕಾರು ಗಿಫ್ಟ್‌ ನೀಡಿದ ‘ಮಾರ್ಟಿನ್‌’ ಹೀರೋ ಧ್ರುವ ಸರ್ಜಾ

    ಸ್ಯಾಂಡಲ್‌ವುಡ್ (Sandalwood) ನಟ ಧ್ರುವ ಸರ್ಜಾ ಅವರು ಆಪ್ತ ಸ್ನೇಹಿತನಿಗೆ ದುಬಾರಿ ಗಿಫ್ಟ್‌ವೊಂದನ್ನ ಕೊಟ್ಟಿದ್ದಾರೆ. ಧ್ರುವ ಸರ್ಜಾ (Dhruva Sarja)  ನಡೆಗೆ ಸ್ನೇಹಿತ್ ಅಚ್ಚರಿ ಪಟ್ಟಿದ್ದಾರೆ. ಅದಷ್ಟೇ ಅಲ್ಲ, ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ:ಯಶ್ ಸಿನಿಮಾಗಾಗಿ ಬೆಂಗಳೂರಿನಲ್ಲಿ ಬೀಡು ಬಿಟ್ಟ ಡೈರೆಕ್ಟರ್- ಇಲ್ಲಿದೆ ಗುಡ್ ನ್ಯೂಸ್

    ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ‘ಮಾರ್ಟಿನ್’, ‘ಕೆಡಿ’ (Kd Film) ಸಿನಿಮಾದ ಶೂಟಿಂಗ್ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಸಿನಿಮಾ ಬಿಟ್ಟು ತಮ್ಮ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಸ್ನೇಹಿತ ಅಶ್ವಿನ್, ಧ್ರುವ ಸರ್ಜಾ (Dhruva Sarja)  ಸಿನಿಮಾಗಳಿಗೆ ಸಂಬಂಧಿಸಿದ ಕೆಲಸಗಳನ್ನು ನೋಡಿಕೊಳ್ಳುತ್ತಾರೆ. ಇತ್ತೀಚೆಗೆ ಅಶ್ವಿನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಆ ದಿನದಂದು ಧ್ರುವ ಸರ್ಜಾ ದಿಢೀರನೇ ಕೊಟ್ಟ ಸರ್ಪ್ರೈಸ್ ಗಿಫ್ಟ್‌ಗೆ (Gift)  ಅವರ ಕಣ್ಣುಗಳು ಒದ್ದೆಯಾಗಿವೆ.

    ಸ್ಯಾಂಡಲ್‌ವುಡ್‌ನ ಸಕ್ಸಸ್‌ಫುಲ್ ನಟ ಧ್ರುವ ಸರ್ಜಾ, ನಟಿಸಿದ ಸಿನಿಮಾಗಳೆಲ್ಲವೂ ಯಶಸ್ಸು ಕಂಡಿವೆ. ಶೀಘ್ರದಲ್ಲೇ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ರಿಲೀಸ್ ಕೂಡ ಆಗುತ್ತೆ. ಹೀಗೆ ಸಿನಿಮಾಗಳಲ್ಲಿ ಬ್ಯುಸಿಯಾಗಿರೋ ನಟ ತನ್ನ ಆತ್ಮೀಯರ ಸುಖ-ಸಂತೋಷದಲ್ಲೂ ಭಾಗಿಯಾಗಿದ್ದಾರೆ. ತನ್ನ ಆತ್ಮೀಯ ಗೆಳೆಯ ಅಶ್ವಿನ್‌ಗೆ ದುಬಾರಿ ಮೊತ್ತ ಕಾರನ್ನು ಗಿಫ್ಟ್ ಮಾಡಿದ್ದಾರೆ. ಅಶ್ವಿನ್ ಹುಟ್ಟುಹಬ್ಬದಂದು, 52 ಲಕ್ಷ ರೂ. ದುಬಾರಿ ಬೆಲೆ ಬಾಳುವ ಕಾರನ್ನು ಧ್ರುವ ಸರ್ಜಾ ಉಡುಗೊರೆಯಾಗಿ ನೀಡಿದ್ದಾರೆ. ದುಬಾರಿ ಟೊಯೊಟಾ ಫಾರ್ಚುನರ್ (Toyota Fortuner) ಕಾರನ್ನು ನೀಡಿದ್ದಷ್ಟೇ ಅಲ್ಲ, ಬಾಲ್ಯದಲ್ಲೇ ನಿಧನರಾಗಿರೋ ಅಶ್ವಿನ್ ತಂದೆ-ತಾಯಿಯ ಫೋಟೋವನ್ನೂ ಹುಡುಕಿ ಕಾರಿನಲ್ಲಿಟ್ಟು ಗಿಫ್ಟ್ ಮಾಡಿದ್ದಾರೆ.

    ಧ್ರುವ ಸರ್ಜಾ ಖುದ್ದಾಗಿ ಅಶ್ವಿನ್ ಜೊತೆ ಶೋ ರೂಮ್‌ಗೆ ಬಂದಿದ್ದರು. ದುಬಾರಿ ಕಾರನ್ನು ಸರ್ಪ್ರೈಸ್ ಗಿಫ್ಟ್ ಮಾಡಿದ್ದರು. ಆ ಸಂದರ್ಭದಲ್ಲಿ ಅಶ್ವಿನ್ ಕಣ್ಣುಗಳು ಖುಷಿಗೆ ಒದ್ದೆಯಾಗಿದ್ದವು. ಇದೇ ವೇಳೆ ಶೋ ರೂಮ್‌ನಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಲಾಗಿದೆ. ಸಂಕಷ್ಟದಲ್ಲಿ ಅಶ್ವಿನ್‌ರನ್ನು ಕರೆತಂದು ತನ್ನ ಜೊತೆಯಲ್ಲೇ ಇಟ್ಟುಕೊಂಡಿದ್ದಾರೆ ಧ್ರುವ ಸರ್ಜಾ. ಅಲ್ಲದೆ ಅವರ ಜೀವನಕ್ಕೆ ದಾರಿಯನ್ನೂ ಮಾಡಿಕೊಟ್ಟಿದ್ದಾರೆ.

  • ನಟ ಚಿರಂಜೀವಿ ಸರ್ಜಾ 3 ನೇ ವರ್ಷದ ಪುಣ್ಯತಿಥಿ

    ನಟ ಚಿರಂಜೀವಿ ಸರ್ಜಾ 3 ನೇ ವರ್ಷದ ಪುಣ್ಯತಿಥಿ

    ಸ್ಯಾಂಡಲ್ ವುಡ್ ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ (Chiranjeevi Sarja) ಅವರ ಮೂರನೇ ವರ್ಷದ ಪುಣ್ಯತಿಥಿ (Punyatithi) ಇಂದು ಕಾರ್ಯಕ್ರಮ ನಡೆಯಿತು. ಬೆಂಗಳೂರು ಹೊರವಲಯದ ನೆಲಗುಳಿ ಬಳಿಯ ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿರುವ ಚಿರು ಸಮಾಧಿಗೆ ಪೂಜೆ ಸಲ್ಲಿಸುವ ಮೂಲಕ ಕುಟುಂಬಸ್ಥರು ಅಗಲಿದ ಚಿರುವನ್ನು ನೆನಪಿಸಿಕೊಂಡರು.

      

    ಚಿರು ಪತ್ನಿ ಮೇಘನಾ ರಾಜ್ (Meghana Raj), ಮೇಘನಾ ತಂದೆ-ತಾಯಿ, ಚಿರು ಪುತ್ರ ರಾಯನ್ (Rayan), ಚಿರು ಸಹೋದರ ಧ್ರುವ ಸರ್ಜಾ (Dhruva Sarja), ಹಾಗೂ ಚಿರು ತಂದೆ-ತಾಯಿ ಇಂದು ನಡೆದ ಪುಣ್ಯಸ್ಮರಣೆಯಲ್ಲಿ ಭಾಗಿಯಾಗಿದ್ದರು. ಚಿರು ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ ಕುಟುಂಬಸ್ಥರು, ಕೆಲ ಕ್ಷಣ ಭಾವುಕರಾದರು. ಈ ಸಂದರ್ಭದಲ್ಲಿ ನಟ ದುನಿಯಾ ವಿಜಯ್ ಕೂಡ ಆಗಮಿಸಿ ಅಗಲಿದ ಮಿತ್ರನ ಸಮಾಧಿಗೆ  ಪೂಜೆ ಸಲ್ಲಿಸಿದರು. ಇದನ್ನೂ ಓದಿ:ಮತ್ತೆ ಕಿರುತೆರೆಗೆ ಮರಳಿದ ‘ಬಿಗ್‌ ಬಾಸ್‌’ ಚೈತ್ರಾ ಹಳ್ಳಿಕೇರಿ

     

    ಚಿರು ಸಮಾಧಿಗೆ ಗುಡಿ ಕಟ್ಟಿಸಲಾಗಿದ್ದು ಸುತ್ತಲೂ ಕಾರಂಜಿಯ ಸಿಂಗಾರ ಮಾಡಲಾಗಿದೆ. ಅಭಿಮಾನಿಗಳು ಬಂದು ಹೋಗುವುದಕ್ಕೂ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದು ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಕೂಡ ಆಗಮಿಸಿ, ಪೂಜೆ ಸಲ್ಲಿಸಿದರು.

  • ಕ್ರೇಜಿಸ್ಟಾರ್ ಹುಟ್ಟುಹಬ್ಬಕ್ಕೆ ‘ಕೆಡಿ’ ಪೋಸ್ಟರ್ ರಿಲೀಸ್

    ಕ್ರೇಜಿಸ್ಟಾರ್ ಹುಟ್ಟುಹಬ್ಬಕ್ಕೆ ‘ಕೆಡಿ’ ಪೋಸ್ಟರ್ ರಿಲೀಸ್

    ರುನಾಡ ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ಹುಟ್ಟು ಹಬ್ಬದ (Birthday) ಸಂದರ್ಭದಲ್ಲಿ ಎರಡು ಸಿನಿಮಾಗಳ ಪೋಸ್ಟರ್ ರಿಲೀಸ್ ಆಗಿವೆ. ಜೋಗಿ ಪ್ರೇಮ್ ನಿರ್ದೇಶನದ ಕೆಡಿ (KD) ಚಿತ್ರದಲ್ಲಿ ರವಿಚಂದ್ರನ್ ನಟಿಸುತ್ತಿದ್ದು, ಆ ಸಿನಿಮಾದ ಪೋಸ್ಟರ್ (Poster) ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಜೊತೆಗೆ ದ ಜಡ್ಜ್ ಮೆಂಟ್ ಸಿನಿಮಾದಲ್ಲಿ ರವಿಚಂದ್ರನ್ ನಟಿಸಿದ್ದು ಆ ಸಿನಿಮಾ ಟೀಮ್ ಕೂಡ ಪೋಸ್ಟರ್ ರಿಲೀಸ್ ಮಾಡಿದೆ.

    ಕೆಲ ತಿಂಗಳ ಹಿಂದೆಯಷ್ಟೇ ರವಿಚಂದ್ರನ್ ಅವರ ಫಸ್ಟ್ ಲುಕ್ ಅನ್ನು ಕೆಡಿ ಟೀಮ್ ರಿಲೀಸ್ ಮಾಡಿತ್ತು. ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್ ರವಿಚಂದ್ರನ್ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಇದನ್ನೂ ಓದಿ:ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಕಮಲಿ’ ನಟಿ ಯಶಸ್ವಿನಿ

    ಕೆವಿಎನ್‌ ನಿರ್ಮಾಣದ ಧ್ರುವ ಸರ್ಜಾ (Dhruva Sarja) ಮತ್ತು ನಿರ್ದೇಶಕ ಪ್ರೇಮ್ (Director Prem) ಕಾಂಬಿನೇಷನ್ ಸಿನಿಮಾ `ಕೆಡಿ’ ಸಖತ್ ಸದ್ದು ಮಾಡ್ತಿದೆ. ಚಿತ್ರದ ಟೈಟಲ್ ಮೂಲಕ ಕ್ಯೂರಿಯಸ್ ಹುಟ್ಟು ಹಾಕಿರುವ ಈ ಸಿನಿಮಾ ಬಗ್ಗೆ ಫ್ಯಾನ್ಸ್ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ ಈ ಸಿನಿಮಾ ಮೂಲಕ ಮತ್ತೊಮ್ಮೆ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ.

    ಈಗಾಗಲೇ ಕೆಡಿ ಸಿನಿಮಾದ ಬಹುತೇಕ ಚಿತ್ರೀಕರಣ ಕೂಡ ಮುಗಿದಿದೆ ಎಂದು ಹೇಳಲಾಗುತ್ತಿದೆ. ಸಂಜಯ್ ದತ್ ಅವರ ಶೂಟಿಂಗ್ ವೇಳೆ ಅವರಿಗೆ ಸಣ್ಣಪುಟ್ಟ ಗಾಯಗಳಾಗಿತ್ತು. ಆ ನಂತರ ಚಿತ್ರೀಕರಣ ಸ್ವಲ್ಪ ದಿನದ ಮಟ್ಟಿಗೆ ನಿಲ್ಲಿಸಲಾಗಿತ್ತು. ಪ್ರೇಮ್ ಮತ್ತೆ ಈ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.