Tag: dhruva sarja

  • ಐ ಆ್ಯಮ್ ವೆರಿ ವೆರಿ ಕಾಸ್ಟ್ಲೀ ಅಂದ್ರು ಧ್ರುವ- ನೆರವೇರಿತು ‘ದುಬಾರಿ’ ಮುಹೂರ್ತ

    ಐ ಆ್ಯಮ್ ವೆರಿ ವೆರಿ ಕಾಸ್ಟ್ಲೀ ಅಂದ್ರು ಧ್ರುವ- ನೆರವೇರಿತು ‘ದುಬಾರಿ’ ಮುಹೂರ್ತ

    ಬೆಂಗಳೂರು: ಸಹೋದರ ಚಿರಂಜೀವಿ ಸರ್ಜಾ ಅಗಲಿಕೆಯ ಬಳಿಕ ಇದೀಗ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹೊಸ ಸಿನಿಮಾಗಳತ್ತ ಮುಖ ಮಾಡಿದ್ದಾರೆ. ಇಂದು ಹೊಸ ಸಿನಿಮಾವೊಂದಕ್ಕೆ ಮುಹೂರ್ತ ನೆರವೇರಿಸಿದ್ದಾರೆ.

    ಹೌದು. ಧ್ರುವ ನಟನೆಯ ಹೊಸ ಸಿನಿಮಾ ‘ದುಬಾರಿ’ಯ ಚಿತ್ರೀಕರಣ ಆರಂಭವಾಗಲಿದೆ. ಇಂದು ಬೆಳಗ್ಗೆ ಬೆಂಗಳೂರಿನ ನವರಂಗ್ ಬಳಿ ಇರುವ ವರಸಿದ್ಧಿವಿನಾಯಕ ದೇವಸ್ಥಾನದಲ್ಲಿ ಮುಹೂರ್ತ ಪೂಜೆ ನೆರವೇರಿಸಿದ್ದಾರೆ.

    ಮುಹೂರ್ತ ಪೂಜೆಯಲ್ಲಿ ನಟ ಧ್ರುವ ಸರ್ಜಾ, ನಿರ್ದೇಶಕ ನಂದಕಿಶೋರ್, ನಟಿ ತಾರಾ, ದೊಡ್ಡಣ್ಣ ಹಾಗೂ ಪ್ರಥಮ ಪಾಲ್ಗೊಂಡಿದ್ದರು. ಪೊಗರು ಚಿತ್ರದ ನಂತರ ಹೊಸ ಸಿನಿಮಾದ ಪೂಜೆಯನ್ನು ಸರಳವಾಗಿ ಚಿತ್ರತಂಡದ ಜೊತೆ ಮಾಡಿದ್ದಾರೆ. ಹೊಸ ಸಿನಿಮಾ ದುಬಾರಿ ಸೆಟ್ಟೇರಲಿದ್ದು, ಈ ಚಿತ್ರಕ್ಕೆ ನಂದ ಕಿಶೋರ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

    ಮುಹೂರ್ತದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಧ್ರುವ, ಇದು ನನ್ನ 5ನೇ ಸಿನಿಮಾವಾಗಿದೆ. ಸಿನಿಮಾ ಹೆಸರು ದುಬಾರಿ ಎಂದಾಗಿದ್ದು, ಇದರಲ್ಲಿ ಪೊಗರು ಸಿನಿಮಾದ ಟೆಕ್ನಿಷಿಯನ್ಸ್ ಕೆಲಸ ಮಾಡುತ್ತಿದ್ದಾರೆ. ಎಲ್ಲರೂ ಒಟ್ಟು ಸೇರಿ ಒಂದು ಹೊಸ ಸಿನಿಮಾ ಮಾಡ್ತಿದ್ದೀವಿ. ಮುಖ್ಯಪಾತ್ರದಲ್ಲಿ ದೊಡ್ಡಣ್ಣ ಅಪ್ಪಾಜಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ತಾರಾಮ್ಮ, ಚಂದನ್ ಶೆಟ್ಟಿ ಮೊದಲಾದವರು ಅಭಿನಯಿಸಲಿದ್ದಾರೆ. 10 ದಿನದಲ್ಲಿ ಫೋಟೋ ಶೂಟ್ ಇದ್ದು, ಗೆಟಪ್ ಚೇಂಜ್ ಇರುತ್ತೆ. ಡಿಸೆಂಬರ್ ಫಸ್ಟ್ ನಿಂದ ಶೂಟಿಂಗ್ ಆರಂಭವಾಗಲಿದೆ ಎಂದರು.

  • ಚಿರು ಮತ್ತೆ ಹುಟ್ಟಿ ಬರ್ತಾನೆಂದು ಅಂದೇ ಹೇಳಿದ್ದೆ, ಆ ಮಾತು ನಿಜವಾಗಿದೆ: ತಾರಾ

    ಚಿರು ಮತ್ತೆ ಹುಟ್ಟಿ ಬರ್ತಾನೆಂದು ಅಂದೇ ಹೇಳಿದ್ದೆ, ಆ ಮಾತು ನಿಜವಾಗಿದೆ: ತಾರಾ

    ಬೆಂಗಳೂರು: ಮೇಘನಾ ರಾಜ್ ಸರ್ಜಾಗೆ ಗಂಡು ಮಗು ಜನಿಸಿರುವುದು ಇಡೀ ಸ್ಯಾಂಡಲ್‍ವುಡ್‍ನಲ್ಲಿ ಸಂತಸವನ್ನುಂಟು ಮಾಡಿದ್ದು, ಈ ಕುರಿತು ನಟಿ ತಾರಾ ಅನುರಾಧಾ ಸಹ ಸಂತಸ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಚಿರು ಮತ್ತೆ ಹುಟ್ಟಿಬರ್ತಾನೆ ಎಂದು ಚಿರು ಸಾವಿನ ದಿನವೇ ನಾನು ಹೇಳಿದ್ದೆ. ಇವತ್ತು ಆ ಮಾತು ನಿಜವಾಗಿದೆ. ಚಿರು ಇದ್ದಿದ್ದರೆ ಅವನ ಖುಷಿಯನ್ನು ಹೇಳೋದಕ್ಕೆ ಸಾಧ್ಯವೇ ಇರುತ್ತಿರಲಿಲ್ಲ. ಆ ಮಟ್ಟಿಗೆ ಸಂತಸ ಪಡುತ್ತಿದ್ದ ಎಂದರು.

    ಮೇಘನಾ ಧೈರ್ಯವಂತೆ, ಚಿರು ಇಲ್ಲದ ದಿನಗಳು ಆಕೆಗೆ ಅದೆಷ್ಟು ಕಷ್ಟವಾಗಿತ್ತು ಎನ್ನುವುದನ್ನು ಹೇಳಲು ಸಾಧ್ಯವೇ ಇಲ್ಲ. ಈಗ ಮತ್ತೆ ಚಿರು ಬಂದಿದ್ದಾನೆ, ಮತ್ತೆ ಅವರ ಕುಟುಂಬದಲ್ಲಿ ನಗು ಬಂದಿದೆ. ನನಗೂ ತುಂಬಾ ಖುಷಿಯಾಗಿದೆ ಎಂದು ತಿಳಿಸಿದರು.

    ಚಿರು ಸ್ನೇಹಿತ ಪನ್ನಗಾಭರಣ ಮಾತನಾಡಿ, ಚಿರು ಮತ್ತೆ ಹುಟ್ಟಿ ಬರುತ್ತಾನೆ ಎಂಬ ನಿರೀಕ್ಷೆ ಇತ್ತು. ವಿಶೇಷ ಎಂದರೆ ಚಿರಂಜೀವಿ ಹಾಗೂ ಮೇಘನಾ ನಿಶ್ಚಿತಾರ್ಥದ ದಿನವೇ ಮಗು ಹುಟ್ಟಿರುವುದು ತುಂಬಾನೇ ಸಂತೋಷ ಆಯಿತು. ಚಿರು ಮತ್ತೆ ನಮಗೆಲ್ಲ ಸಿಕ್ಕ ಎಂದು ಖುಷಿಯಾಯಿತು. ಈ ತಿಂಗಳಲ್ಲೇ ಚಿರು ಸಹ ಹುಟ್ಟಿದ್ದು, ಅವನು ಅಂದುಕೊಂಡತೆಯೇ ಎಲ್ಲ ನೆರವೇರಿದೆ. ಮಗು ಮೇಲೆ ಅವನು ಏನೆಲ್ಲ ಕನಸು ಇಟ್ಟುಕೊಂಡಿದ್ದ ಅದನ್ನೆಲ್ಲ ನಾವು ಈಡೇರಿಸುತ್ತೇವೆ ಎಂದು ಖುಷಿಪಟ್ಟಿದ್ದಾರೆ.

  • ಮೇಘನಾ ಆಸೆಯಂತೆ ಹುಟ್ಟಿದ ತಕ್ಷಣ ಚಿರುಗೆ ಮಗು ತೋರ್ಸಿದ್ದೇವೆ: ಲಕ್ಷ್ಮಿ ಅಮ್ಮ

    ಮೇಘನಾ ಆಸೆಯಂತೆ ಹುಟ್ಟಿದ ತಕ್ಷಣ ಚಿರುಗೆ ಮಗು ತೋರ್ಸಿದ್ದೇವೆ: ಲಕ್ಷ್ಮಿ ಅಮ್ಮ

    ಬೆಂಗಳೂರು: ತುಂಬಾ ಸಂತೋಷವಾಗುತ್ತಿದೆ. ನನ್ನ ಮಗನನ್ನೇ ನೋಡಿದಂತೆ ಆಯ್ತು. ಈ ತಿಂಗಳಲ್ಲಿ ಹುಟ್ಟಿರೋದು ಖುಷಿಕೊಟ್ಟಿದೆ. ಚಿರು, ಧ್ರುವ ಸಹ ಇದೇ ತಿಂಗಳಲ್ಲಿ ಹುಟ್ಟಿದ್ದಾರೆ. ಇದೀಗ ಚಿರು ಮಗು ಸಹ ಅಕ್ಟೋಬರ್ ತಿಂಗಳಲ್ಲೇ ಜನನವಾಗಿದೆ ಎಂದು ಚಿರು ಸರ್ಜಾ ಅಜ್ಜಿ ಲಕ್ಷ್ಮಿ ಅಮ್ಮ ತಮ್ಮ ಮರಿ ಮೊಮ್ಮಗನ ಕುರಿತು ಸಂತಸ ಹಂಚಿಕೊಂಡಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿರು, ಧ್ರುವ ಹುಟ್ಟಿದ ತಿಂಗಳಲ್ಲೇ ಮಗು ಜನಿಸಿರುವುದು ತುಂಬಾ ಸಂತಸವನ್ನುಂಟು ಮಾಡಿದೆ. ಚಿರುವನ್ನೇ ನೋಡಿದಂತೆ ಆಗುತ್ತದೆ ಎಂದು ಅಮ್ಮಾಜಿ ಮಗುವಿನ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

    ಮೇಘನಾ ಚಿಕ್ಕಮ್ಮನ ಮಗ ತೇಜ್ ಸಹ ಈ ಸಂತಸ ಸುದ್ದಿ ಕುರಿತು ಮಾತನಾಡಿದ್ದು, ಇದುವರೆಗೂ ಯಾರನ್ನೂ ಈ ರೀತಿ ಸ್ವಾಗತಿಸಿಲ್ಲ. ಅದೇ ರೀತಿ ನಮ್ಮ ಮನೆಗೆ ಜೂನಿಯರ್ ಚಿರು ಎಂಟ್ರಿ ಕೊಟ್ಟಿದ್ದಾನೆ. ನನ್ನ ತಂಗಿ ತುಂಬಾ ಖುಷಿಯಾಗಿದ್ದಾಳೆ. ಮಗು ತುಂಬಾ ಕ್ಯೂಟ್ ಆಗಿದೆ. ಕಿತ್ತೂರು ರಾಣಿ ಚೆನ್ನಮ್ಮನ ಧೈರ್ಯ ನನ್ನ ತಂಗಿಗಿದೆ. ಕಷ್ಟಗಳನ್ನು ಧೈರ್ಯವಾಗಿ ನಿಭಾಯಿಸಿದ್ದಾಳೆ ಎಂದು ಸಂತಸ ಹಂಚಿಕೊಂಡರು.

    ಆಪರೇಷನ್ ಥಿಯೇಟರ್ ನಲ್ಲಿತ್ತು ಚಿರು ಫೋಟೋ
    ಮಗು ಹುಟ್ಟಿದ ತಕ್ಷಣ ಅಪ್ಪನ ಫೋಟೋ ನೋಡಬೇಕು. ಮೊದಲು ಚಿರುಗೆ ಮಗುವನ್ನು ತೋರಿಸಬೇಕು ಎಂಬುದು ಮೇಘನಾ ಆಸೆ ಆಗಿತ್ತು. ಹೀಗಾಗಿ ಚಿರಂಜೀವಿ ಫೋಟೋವನ್ನು ಆಸ್ಪತ್ರೆಯ ಕೊಠಡಿಯಲ್ಲಿ ಇರಿಸಲಾಗಿತ್ತು. ಮೇಘನಾ ಆಸೆಯಂತೆ ಮಗು ಹುಟ್ಟಿದ ತಕ್ಷಣ ಚಿರು ಫೋಟೋಗೆ ತೋರಿಸಲಾಗಿದೆ.

  • ಮಗುವನ್ನು ಹಿಡಿದ ತಕ್ಷಣ ನಮ್ಮ ಅಣ್ಣನ ಜೊತೆಗಿದ್ದಂತೆ ಫೀಲ್ ಆಯ್ತು – ಧ್ರುವ

    ಮಗುವನ್ನು ಹಿಡಿದ ತಕ್ಷಣ ನಮ್ಮ ಅಣ್ಣನ ಜೊತೆಗಿದ್ದಂತೆ ಫೀಲ್ ಆಯ್ತು – ಧ್ರುವ

    – ಪೇರೆಂಟ್ಸ್ ಮೀಟಿಂಗ್ ವಿಚಾರವನ್ನು ಹಂಚಿಕೊಂಡ ಧ್ರುವ

    ಬೆಂಗಳೂರು: ಅತ್ತಿಗೆಗೆ ಗಂಡು ಮಗು ಜನಿಸಿದ್ದು ತುಂಬಾ ಸಂತೋಷವಾಗಿದೆ. ಮಗುವನ್ನು ಮೊದಲು ಕೈಯಲ್ಲಿ ಹಿಡಿದಾಗ ನಮ್ಮಣ್ಣನ ಜೊತೆಗೆ ಇದ್ದ ಫೀಲ್ ಆಯ್ತು. ತುಂಬಾ ಖುಷಿಯಾಯಿತು ಎಂದು ನಟ ಧ್ರುವ ಸರ್ಜಾ ಜೂನಿಯರ್ ಚಿರಂಜೀವಿ ಸರ್ಜಾ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

    ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದ ವಿಚಾರ ತಿಳಿದು ಕೂಡಲೇ ಧ್ರುವಾ ಸರ್ಜಾ ಪತ್ನಿ ಪ್ರೇರಣಾ ಜೊತೆ ಖಾಸಗಿ ಆಸ್ಪತ್ರೆಗೆ ಆಗಮಿಸಿದರು. ಮೇಘನಾ ಇದ್ದ ಕೊಠಡಿಗೆ ಆಗಮಿಸಿ ಮಗುವನ್ನು ಎತ್ತಿ ಸಂತಸ ಪಟ್ಟರು.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಣ್ಣನಿಗೆ ಅತ್ತಿಗೆಗೆ ಗಂಡು ಮಗುವಾಗಿದೆ. ಅತ್ತಿಗೆ ಸಹ ಆರಾಮವಾಗಿದ್ದಾರೆ. ಎಲ್ಲರೂ ಅವರಿಗೆ ಆಶೀರ್ವಾದ ಮಾಡಬೇಕೆಂದು ಕರ್ನಾಟಕದ ಜನತೆಯಲ್ಲಿ ಕೇಳಿಕೊಳ್ಳುತ್ತೇನೆ. ಖುಷಿ ಹೆಚ್ಚಾಗಿದ್ದರಿಂದ ತುಂಬಾ ರೋಮಾಂಚನವಾಗಿತ್ತು. ಹೀಗಾಗಿ ಮಗುವನ್ನು ಕೈಯಲ್ಲಿ ಹಿಡಿದ ತಕ್ಷಣದ ಅನುಭವನ್ನು ಅಂದಾಜಿಸಲು ಸಾಧ್ಯವಾಗಲಿಲ್ಲ. ಆ ಫೀಲ್ ಗೊತ್ತಾಗಲಿಲ್ಲ ಎಂದು ಮಗುವನ್ನು ಮೊದಲು ಕೈಯಲ್ಲಿ ಹಿಡಿದಾಗಿನ ಅನುಭವವನ್ನು ಹಂಚಿಕೊಂಡರು.

    ಬೆಳ್ಳಿ ತೊಟ್ಟಿಲು ಖರೀದಿಸಿರುವುದು ಯಾರಿಗೂ ಗೊತ್ತಾಗಬಾರದು ಎಂದುಕೊಂಡಿದೆ. ಆದರೆ ಮಾಧ್ಯಮಗಳ ಮೂಲಕ ಬಹಿರಂಗವಾಯಿತು. ಮಗುವನ್ನು ಮೊದಲು ಕೈಯಲ್ಲಿ ಹಿಡಿದಾಗ ನಮ್ಮಣ್ಣನ ಜೊತೆಗೆ ಇದ್ದ ಫೀಲ್ ಆಯ್ತು. ಅಲ್ಲದೆ ಖುಷಿಯಾಯಿತು ಎಂದರು ಸಂತಸ ವ್ಯಕ್ತಪಡಿಸಿದರು.

    ನಾನು ಅಣ್ಣನಿಗೆ ರೇಗಿಸುತ್ತಿದ್ದೆ. ಮಕ್ಕಳಾಗುತ್ತವೆ ಎಲ್ಲಾ ಓಕೆ, ನಿನ್ನನ್ನು ಪೇರೆಂಟ್ಸ್ ಮೀಟಿಂಗ್ ಕರೆಯುತ್ತಾರಲ್ಲ. ಶಾಲೆಯಲ್ಲಿ ನಿನ್ನ ಮೇಲೆ ಹೆಚ್ಚು ದೂರುಗಳಿದ್ದವು. ಇನ್ನು ನಿನ್ನ ಮಕ್ಕಳದು ಬೇಜಾನ್ ಇರುತ್ತೆ ಮಚಾ ಎಂದಿದ್ದೆ. ಅವನು ನನಗೆ ಮಗಾನೇ ಆಗೋದು. ಅವನದ್ದು ಸಹ ಶಾಲೆಯಲ್ಲಿ ಬೇಜಾನ್ ದೂರುಗಳಿರುತ್ತವೆ ಎಂದು ಹೇಳಿದ್ದ. ಹಿಂದೆ ನಾವಿಬ್ಬರು ಮಾತನಾಡಿದ ವಿಚಾರ ಈ ಸಂದರ್ಭದಲ್ಲಿ ನೆನಪಾಗುತ್ತಿದೆ. ಮಗುವಿಗೆ ಹೆಸರಿಡುವ ಕುರಿತು ಇನ್ನೂ ಯಾವುದೇ ಮಾತುಕತೆ ನಡೆದಿಲ್ಲ. ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳುತ್ತೇನೆ ಎಂದು ಹೇಳಿದರು.

  • ಜೂ. ಚಿರುವನ್ನು ಎತ್ತಿ ಮುದ್ದಾಡಿದ ಧ್ರುವ ಸರ್ಜಾ

    ಜೂ. ಚಿರುವನ್ನು ಎತ್ತಿ ಮುದ್ದಾಡಿದ ಧ್ರುವ ಸರ್ಜಾ

    ಬೆಂಗಳೂರು: ಮೇಘನಾ ರಾಜ್‌ ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದು ಧ್ರುವ ಸರ್ಜಾ ಜೂನಿಯರ್‌ ಚಿರಂಜೀವಿಯನ್ನು ಎತ್ತಿ ಮುದ್ದಾಡಿದ್ದಾರೆ.

    ಬೆಳಗ್ಗೆ 11 ಗಂಟೆ 7 ನಿಮಿಷಕ್ಕೆ ಮೇಘನಾ ರಾಜ್‌ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.  ಮಗು ಜನಿಸಿದ ವಿಚಾರ  ತಿಳಿದು ಕೂಡಲೇ ಧ್ರುವ ಸರ್ಜಾ ಖಾಸಗಿ ಆಸ್ಪತ್ರೆಗೆ ಆಗಮಿಸಿ  ಮಗುವನ್ನು ಎತ್ತಿ ಸಂಭ್ರಮಿಸಿದ್ದಾರೆ.

    ಇನ್‌ಸ್ಟಾದಲ್ಲಿ ಧ್ರುವ ಅವರು ಬಾಯ್ ಬೇಬಿ‌ ಎಂದು ಬರೆದರೆ ಪತ್ನಿ ಪ್ರೇರಣಾ ಅವರು ಮೇಘನಾ ಚಿರು ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಎಂದು ಹೇಳಿದ್ದಾರೆ.

    ಸುಂದರ್ ರಾಜ್, ಪ್ರಮೀಳಾ , ಪನ್ನಗಾಭರಣ ಹಾಗೂ ಮೇಘನಾ ಸ್ನೇಹಿತರು ಖಾಸಗಿ ಆಸ್ಪತ್ರೆಯ ಬಳಿಯೇ ಇದ್ದು ಮೇಘನಾ ಆರೈಕೆ ಮಾಡುತ್ತಿದ್ದಾರೆ. ಗಂಡು ಮಗು ಜನನವಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

    ಅಕ್ಟೋಬರ್‌ ತಿಂಗಳಲ್ಲಿ ಸರ್ಜಾ ಕುಟುಂಬಕ್ಕೆ ವಿಶೇಷ ತಿಂಗಳು. ಇದರ ಜೊತೆ ಮೇಘನಾ ರಾಜ್‌ ಹಾಗೂ ಚಿರಂಜೀವಿ ಸರ್ಜಾ ನಿಶ್ಚಿತಾರ್ಥ ಮಾಡಿಕೊಂಡ ದಿನವೇ ಮಗು ಜನಿಸಿದ್ದು ವಿಶೇಷ. ಅಕ್ಟೋಬರ್‌ 17 ರಂದು ಚಿರಂಜೀವಿ ಸರ್ಜಾ ಹುಟ್ಟುಹಬ್ಬ ಆಗಿದ್ದರೆ ಅಕ್ಟೋಬರ್ 4ರಂದು ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಅವರ ಸೀಮಂತ ಶಾಸ್ತ್ರ ನೆರವೇರಿತ್ತು.

    ಮನೆಯಲ್ಲಿಯೇ ಸರಳವಾಗಿ ಸೀಮಂತ ಕಾರ್ಯಕ್ರಮವನ್ನು ಮಾಡಲಾಗಿತ್ತು. ಕುಟುಂಬದವರು ಮತ್ತು ಕೆಲ ಆಪ್ತರು ಮಾತ್ರ ಸೀಮಂತ ಶಾಸ್ತ್ರಕ್ಕೆ ಆಗಮಿಸಿದ್ದರು. ಜೊತೆಗೆ ಚಿರು ಇಲ್ಲ ಎಂಬ ನೋವು ಮೇಘನಾಗೆ ಕಾಡದಿರಲಿ ಎಂದು ಚಿರು ಅವರ ದೊಡ್ಡ ಫೋಟೋವನ್ನು ಪಕ್ಕದಲ್ಲೇ ಇಟ್ಟು ಸೀಮಂತ ಮಾಡಿದ್ದು ವಿಶೇಷವಾಗಿತ್ತು. ಈಗ ಆಸ್ಪತ್ರೆಯಲ್ಲೂ ಮೇಘನಾ ವಿಶ್ರಾಂತಿ ಪಡೆಯುತ್ತಿರುವ ವಾರ್ಡ್‌ನಲ್ಲಿ ಚಿರಂಜೀವಿ ಜೊತೆಗಿರುವ ಫೋಟೋಗಳನ್ನು ಹಾಕಲಾಗಿತ್ತು.

    ಬೆಳ್ಳಿ ತೊಟ್ಟಿಲು ಖರೀದಿ: ಮನೆಗೆ ಮುದ್ದಾದ ಮಗು ಬರುವ ಮುನ್ನವೇ ಧ್ರುವ ಸರ್ಜಾ ಅವರು ಬೆಳ್ಳಿ ತೊಟ್ಟಿಲು ಖರೀದಿಸಿದ್ದರು. ನವರತ್ನ ಜ್ಯೂವೆಲರ್ಸ್ ನಲ್ಲಿ ಸುಮಾರು 10 ಲಕ್ಷ ರೂ.ನೀಡಿ ಬೆಳ್ಳಿಯ ತೊಟ್ಟಿಲು ಜೊತೆಗೆ ಚಿನ್ನದ ಬಟ್ಟಲನ್ನು ಖರೀದಿ ಮಾಡಿದ್ದರು.

    ಅಕ್ಟೋಬರ್ 17 ರಂದು ಚಿರು ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಈ ವೇಳೆ ವಿಡಿಯೋ ಪೋಸ್ಟ್ ಮಾಡಿ ಶುಭ ಕೋರಿದ್ದ ಧ್ರುವ ಸರ್ಜಾ, ಹ್ಯಾಪಿ ಬರ್ತ್ ಡೇ ಚಿರು ಎಂದು ಬರೆದು ಹಾರ್ಟ್ ಸಿಂಬಲ್ ಹಾಕಿದ್ದರು. ಮೈ ಲವ್ ಫಾರ್ ಎವರ್, ಜೂನಿಯರ್ ಚಿರು ಕಮಿಂಗ್ ಸೂನ್ ಎಂದು ಬರೆದು ತೋಳುಗಳ ಎಮೋಜಿ ಹಾಕಿದ್ದರು.

  • ಮೇಘನಾ ರಾಜ್ ಡೆಲಿವರಿ- ಜೂನಿಯರ್ ಸರ್ಜಾ ಆಗಮನ

    ಮೇಘನಾ ರಾಜ್ ಡೆಲಿವರಿ- ಜೂನಿಯರ್ ಸರ್ಜಾ ಆಗಮನ

    – ನಿಶ್ಚಿತಾರ್ಥದ ದಿನವೇ ಗಂಡು ಮಗುವಿಗೆ ಜನನ

    ಬೆಂಗಳೂರು: ಚಿರಂಜೀವಿ ಸಂರ್ಜಾ ಪತ್ನಿ, ನಟಿ ಮೇಘನಾ ರಾಜ್ ಅವರಿಗೆ ಹೆರಿಗೆಯಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿಸಿದ್ದಾರೆ. ಇದರಿಂದಾಗಿ ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ನಿಶ್ಚಿತಾರ್ಥದ ದಿನವೇ ಮಗುವಿಗೆ ಜನ್ಮ ನೀಡಿರುವುದು ಇನ್ನೂ ವಿಶೇಷವಾಗಿದೆ.

    ಜೂನಿಯರ್ ಚಿರು ಕುರಿತು ಅಕ್ಟೋಬರ್ 16ರಂದು ಧ್ರುವ ಸರ್ಜಾ ವಿಡಿಯೋ ಮಾಡುವ ವೆಲ್ ಕಮ್ ಹೇಳಿದ್ದರು. ಅವರ ನಿರೀಕ್ಷೆಯಂತೆ ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಮೂಲಕ ಜೂನಿಯರ್ ಚಿರು ಆಗಮಿಸಿದಂತಾಗಿದೆ. ಇನ್ನೂ ವಿಶೇಷ ಎಂಬಂತೆ ಚಿರು, ಮೆಘನಾ ನಿಶ್ಚಿತಾರ್ಥದ ದಿನವೇ ಮರಿ ಚಿರು ಆಗಮನ ಸರ್ಜಾ ಕುಟುಂಬಸ್ಥರಲ್ಲಿ ತುಂಬಾ ಸಂತಸವನ್ನುಂಟು ಮಾಡಿದೆ. ಕುಟುಂಬ ಎಲ್ಲ ಸದಸ್ಯರು ಸಂಭ್ರಮಿಸುತ್ತಿದ್ದಾರೆ.

    ಚಿರಂಜೀವಿ ಸರ್ಜಾ ಜೂನ್ 7 ರಂದು ಹೃದಯಾಘಾತವಾಗಿ ವಿಧಿವಶರಾಗಿದ್ದಾರೆ. ಅವರು ಸಾವನ್ನಪ್ಪಿದ ದಿನವೇ ಮೇಘನಾ ರಾಜ್ ಸರ್ಜಾ ಗರ್ಭಿಣಿಯಾಗಿರುವ ಕುರಿತ ಸುದ್ದಿ ಹೊರ ಬಿದ್ದಿತ್ತು. ಅದಾದ ಬಳಿಕ ಅವರು ಮನೆಯಲ್ಲೇ ಕಾಲ ಕಳೆಯುವ ಮೂಲಕ ಕಾಳಜಿ ವಹಿಸಿದ್ದರು. ಈ ವೇಳೆ ಸ್ಯಾಂಡಲ್‍ವುಡ್‍ನ ಹಲವು ನಟ, ನಟಿಯರು ಗಣ್ಯರು ಹಾಗೂ ಸ್ನೇಹಿತರು ಮೇಘನಾ ಅವರನ್ನು ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದರು. ಇದೀಗ ಮೇಘನಾ ಅವರಿಗೆ ಮಗು ಹುಟ್ಟಿರುವುದರಿಂದ ಇಡೀ ಸ್ಯಾಂಡಲ್‍ವುಡ್‍ನಲ್ಲೇ ಸಂತಸ ಮನೆ ಮಾಡಿದೆ.

    ಈ ಹಿಂದೆ ನಟ ಧ್ರುವ ಸರ್ಜಾ ವಿಡಿಯೋ ಮೂಲಕ ಈ ಬಗ್ಗೆ ಸುಳಿವು ನೀಡಿದ್ದರು. ಜೂನಿಯರ್ ಚಿರು ಆಗಮನದ ಕುರಿತು ತಿಳಿಸಿ, ಸ್ವಾಗತಕ್ಕಾಗಿ ವಿಡಿಯೋವನ್ನು ಸಹ ಮಾಡಿದ್ದರು. ವಿಡಿಯೋದಲ್ಲಿ ಸರ್ಜಾ ಕುಟುಂಬದ ವಿವಿಧ ಹಿರಿಯರು ಹಾಗೂ ಗಣ್ಯರನ್ನು ಸಹ ತೋರಿಸಲಾಗಿತ್ತು. ಹ್ಯಾಪಿ ವೆಲ್ ಕಮ್ ಚಿರು ಎಂದು ಅರ್ಜುನ್ ಸರ್ಜಾ ಸಹ ಸ್ವಾಗತಿಸಿದ್ದರು. ಈ ವೀಡಿಯೋ ಕುರಿತು ಸಾಕಷ್ಟು ಚರ್ಚೆ ಸಹ ನಡೆದಿತ್ತು.

    ಅಕ್ಟೋಬರ್ 17 ಚಿರು ಹುಟ್ಟುಬ್ಬದ ದಿನವಾಗಿದ್ದು, ಇದೇ ದಿನ ಮೇಘನಾ ಜೂನಿಯರ್ ಚಿರುಗೆ ಜನ್ಮ ನೀಡಲಿದ್ದಾರಾ ಎಂಬ ಸುದ್ದಿ ಧ್ರುವ ಹಂಚಿಕೊಂಡ ವಿಡಿಯೋ ಬಳಿಕ ಹರಿದಾಡಿತ್ತು. ವಿಡಿಯೋ ಪೋಸ್ಟ್ ಮಾಡಿ ಸಾಲುಗಳನ್ನು ಬರೆದಿದ್ದ ಧ್ರುವ, ಹ್ಯಾಪಿ ಬರ್ತ್ ಡೇ ಚಿರು ಎಂದು ಹಾರ್ಟ್ ಸಿಂಬಲ್ ಹಾಕಿದ್ದರು. ಮೈ ಲವ್ ಫಾರ್ ಎವರ್, ಜೂನಿಯರ್ ಚಿರು ಕಮಿಂಗ್ ಸೂನ್ ಎಂದು ಬರೆದು ತೋಳುಗಳ ಎಮೋಜಿ ಹಾಕಿದ್ದರು. ಈ ಪೋಸ್ಟ್ ನ್ನು ಸರ್ಜಾ ಕುಟುಂಬದ ಬಹುತೇಕರಿಗೆ ಟ್ಯಾಗ್ ಮಾಡಲಾಗಿತ್ತು. ಕೊನೆಗೆ ಜೈ ಹನುಮಾನ್ ಎಂದಿದ್ದರು.

    https://www.youtube.com/watch?v=tQSph0Iav0A

    ಅಕ್ಟೋಬರ್ 4ರಂದು ಮೇಘನಾ ರಾಜ್ ಅವರ ಸೀಮಂತ ಶಾಸ್ತ್ರ ನೆರವೇರಿದೆ. ಮನೆಯಲ್ಲಿಯೇ ಸರಳವಾಗಿ ಸೀಮಂತ ಕಾರ್ಯಕ್ರಮವನ್ನು ಮಾಡಲಾಗಿದೆ. ಕುಟುಂಬದವರು ಮತ್ತು ಕೆಲ ಆಪ್ತರು ಮಾತ್ರ ಸೀಮಂತ ಶಾಸ್ತ್ರಕ್ಕೆ ಆಗಮಿಸಿದ್ದರು. ಜೊತೆಗೆ ಚಿರು ಇಲ್ಲ ಎಂಬ ನೋವು ಮೇಘನಾಗೆ ಕಾಡದಿರಲಿ ಎಂದು ಚಿರು ಅವರ ದೊಡ್ಡ ಫೋಟೋವನ್ನು ಪಕ್ಕದಲ್ಲೇ ಇಟ್ಟು ಸೀಮಂತ ಮಾಡಿದ್ದು ವಿಶೇಷವಾಗಿತ್ತು.

  • ಜೂನಿಯರ್ ಚಿರುಗೆ ಬೆಳ್ಳಿ ತೊಟ್ಟಿಲು, ಚಿನ್ನದ ಬಟ್ಟಲು ಖರೀದಿಸಿದ ಧ್ರುವ ಸರ್ಜಾ

    ಜೂನಿಯರ್ ಚಿರುಗೆ ಬೆಳ್ಳಿ ತೊಟ್ಟಿಲು, ಚಿನ್ನದ ಬಟ್ಟಲು ಖರೀದಿಸಿದ ಧ್ರುವ ಸರ್ಜಾ

    ಬೆಂಗಳೂರು: ಸರ್ಜಾ ಕುಟುಂಬ ಹಾಗೂ ಮೇಘನಾ ರಾಜ್ ಅವರು ಜೂನಿಯರ್ ಚಿರು ಆಗಮನದ ನಿರೀಕ್ಷೆಯಲ್ಲಿದ್ದು, ಮನೆಗೆ ಮುದ್ದಾದ ಮಗು ಬರುವ ಮುನ್ನವೇ ಧ್ರುವ ಸರ್ಜಾ ಅವರು ಬೆಳ್ಳಿ ತೊಟ್ಟಿಲು ಖರೀದಿಸಿದ್ದಾರೆ.

    ಇತ್ತೀಚೆಗೆಷ್ಟೇ ಮೇಘನಾ ಅವರಿಗೆ ಸೀಮಂತ ಸಮಾರಂಭ ನೆರವಿಸಿದ್ದ ಸರ್ಜಾ ಫ್ಯಾಮಿಲಿ ಅಕಾಲಿಕವಾಗಿ  ಕಣ್ಮರೆಯಾಗಿದ್ದ ಕನ್ನಡ ಯುವ ನಟ ಚಿರಂಜೀವಿ ಸರ್ಜಾ ಅವರು ಅಗಲಿಕೆಯ ನೋವಿನಿಂದ ಹೊರ ಬರುವ ಪ್ರಯತ್ನದಲ್ಲಿದೆ. ಇದೇ ವೇಳೆ ಆ ನೋವನ್ನು ಮರೆಸಲು ಜೂನಿಯರ್ ಚಿರುಗೆ ಸ್ವಾಗತವನ್ನು ಕೋರಲು ಸಿದ್ಧರಾಗಿದ್ದಾರೆ.

    ಮುದ್ದು ಮಗು ಮನೆಗೆ ಬರುವ ಮುನ್ನವೇ ಪ್ರೀತಿಯ ಅಣ್ಣನ ಮಗುವಿಗೆ ಭರ್ಜರಿ ಸ್ವಾಗತ ಕೋರಲು ಮುಂದಾಗಿರುವ ಧ್ರುವ ಸರ್ಜಾ, ಸುಮಾರು 10 ಲಕ್ಷ ರೂ. ಮೌಲ್ಯದ ಬೆಳ್ಳಿ ತೊಟ್ಟಲು ಖರೀದಿ ಮಾಡಿದ್ದಾರೆ. ನವರತ್ನ ಜ್ಯೂವೆಲರ್ಸ್ ನಲ್ಲಿ ಬೆಳ್ಳಿ ತೊಟ್ಟಿಲು ಖರೀದಿ ಮಾಡಲಾಗಿದ್ದು, ತೊಟ್ಟಿಲು ಜೊತೆಗೆ ಚಿನ್ನದ ಬಟ್ಟಲನ್ನು ಖರೀದಿ ಮಾಡಲಾಗಿದೆ.

    ಅಕ್ಟೋಬರ್ 17 ರಂದು ಚಿರು ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಈ ವೇಳೆ ವಿಡಿಯೋ ಪೋಸ್ಟ್ ಮಾಡಿ ಶುಭ ಕೋರಿದ್ದ ಧ್ರುವ ಸರ್ಜಾ, ಹ್ಯಾಪಿ ಬರ್ತ್ ಡೇ ಚಿರು ಎಂದು ಹಾರ್ಟ್ ಸಿಂಬಲ್ ಹಾಕಿದ್ದರು. ಮೈ ಲವ್ ಫಾರ್ ಎವರ್, ಜೂನಿಯರ್ ಚಿರು ಕಮಿಂಗ್ ಸೂನ್ ಎಂದು ಬರೆದು ತೋಳುಗಳ ಎಮೋಜಿ ಹಾಕಿದ್ದರು.

    ಉಳಿದಂತೆ ಅಕ್ಟೋಬರ್ 4ರಂದು ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಅವರ ಸೀಮಂತ ಶಾಸ್ತ್ರ ನೆರವೇರಿದೆ. ಮನೆಯಲ್ಲಿಯೇ ಸರಳವಾಗಿ ಸೀಮಂತ ಕಾರ್ಯಕ್ರಮವನ್ನು ಮಾಡಲಾಗಿದೆ. ಕುಟುಂಬದವರು ಮತ್ತು ಕೆಲ ಆಪ್ತರು ಮಾತ್ರ ಸೀಮಂತ ಶಾಸ್ತ್ರಕ್ಕೆ ಆಗಮಿಸಿದ್ದರು. ಜೊತೆಗೆ ಚಿರು ಇಲ್ಲ ಎಂಬ ನೋವು ಮೇಘನಾಗೆ ಕಾಡದಿರಲಿ ಎಂದು ಚಿರು ಅವರ ದೊಡ್ಡ ಫೋಟೋವನ್ನು ಪಕ್ಕದಲ್ಲೇ ಇಟ್ಟು ಸೀಮಂತ ಮಾಡಿದ್ದು ವಿಶೇಷವಾಗಿತ್ತು. ಆ ಬಳಿಕ ಸರ್ಜಾ ಕುಟುಂಬ ಕೂಡ ವಿಶೇಷವಾಗಿ ಸೀಮಂತ ಶಾಸ್ತ್ರ ನೆರವೇರಿಸಿತ್ತು.

  • ಅಣ್ಣನ ಹುಟ್ಟುಹಬ್ಬದಂದೇ ಧ್ರುವ ಹೊಸ ಸಿನಿಮಾದ ಸ್ಕ್ರಿಪ್ಟ್ ಪೂಜೆ

    ಅಣ್ಣನ ಹುಟ್ಟುಹಬ್ಬದಂದೇ ಧ್ರುವ ಹೊಸ ಸಿನಿಮಾದ ಸ್ಕ್ರಿಪ್ಟ್ ಪೂಜೆ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ, ಯುವ ಸಾಮ್ರಾಟ ದಿವಂಗತ ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬ ಇಂದು ಆಗಿದ್ದು, ಇದೇ ದಿನ ಸಹೋದರ ಧ್ರುವ ಸರ್ಜಾರ ಹೊಸ ಸಿನಿಮಾದ ಸ್ಕ್ರಿಪ್ಟ್ ಪೂಜೆ ನೆರವೇರಿದೆ.

    ಬೆಂಗಳೂರಿನ ಬಸವೇಶ್ವರ ನಗರದಲ್ಲಿರೋ ಗಣಪತಿ ದೇವಸ್ಥಾನದಲ್ಲಿ ಸ್ಕ್ರಿಪ್ಟ್ ಪೂಜೆ ನೆರೆವೇರಿಸಿದ್ದಾರೆ. ಅಣ್ಣನ ಹುಟ್ಟಿದ ದಿನವನ್ನ ಧ್ರುವ ಹೊಸ ಸಿನಿಮಾ ಅನೌನ್ಸ್ ಮಾಡುವ ಮೂಲಕ ಆಚರಿಸಿದ್ದಾರೆ.  ಇದನ್ನು ಓದಿ: ಹಳೆಯ ಫೋಟೋ ಹಂಚಿಕೊಂಡು ಅಣ್ಣನಿಗೆ ಧ್ರುವ ವಿಶ್

    ಧ್ರುವ ಹೊಸ ಸಿನಿಮಾಗೆ ನಂದಕಿಶೋರ್ ನಿರ್ದೇಶನ ಮಾಡಿದ್ದಾರೆ. ಈ ಮೂಲಕ ಪೊಗರು ಚಿತ್ರದ ಬಳಿಕ ಮತ್ತೊಮ್ಮೆ ಧ್ರುವ ಹಾಗೂ ನಂದಕಿಶೋರ್ ಜೊತೆಯಾಗಿದ್ದಾರೆ. ಈ ಚಿತ್ರ ಉದಯ್ ಕೆ ಮೆಹ್ತಾ ನಿರ್ಮಾಣದಲ್ಲಿ ಮೂಡಿ ಬರಲಿದೆ.  ಇದನ್ನು ಓದಿ: ಅವಳಿ ಮಕ್ಕಳು ಆದ್ರೂ ಆಗ್ಬೋದು: ನಸುನಕ್ಕ ಮೇಘನಾ

    ನವೆಂಬರ್ ನಿಂದ ಶೂಟಿಂಗ್ ಪ್ರಾರಂಭವಾಗಲಿದೆ. ಪ್ರತಿ ಸಿನಿಮಾ ಪೂಜೆ ಇದ್ದಾಗ ಧ್ರುವನ ಜೊತೆ ಇರುತ್ತಿದ್ದ ಚಿರಂಜೀವಿ ಸರ್ಜಾ, ಈ ವರ್ಷ ಅಣ್ಣ ಇಲ್ಲದಿದ್ದಕ್ಕೆ ಚಿರು ಬರ್ತ್ ಡೇ ದಿನವೇ ಹೊಸ ಚಿತ್ರದ ಸ್ಕ್ರಿಪ್ಟ್ ಪೂಜೆ ನೆರವೇರಿಸಿದ್ದಾರೆ. ಆದರೆ ಸಿನಿಮಾದ ಟೈಟಲ್ ಇನ್ನೂ ಫೈನಲ್ ಆಗಿಲ್ಲ.  ಇದನ್ನು ಓದಿ: ಕೇಕ್ ಕತ್ತರಿಸಿ, ಮಗುವನ್ನೆತ್ತಿ ಮುದ್ದಾಡಿದ ಚಿರು – ಕ್ಷತ್ರಿಯ ಟೀಸರಿನಲ್ಲಿದೆ ಡಬ್ಬಲ್ ಸರ್ಪ್ರೈಸ್

  • ಹುಟ್ಟಿದಾಗ ಕುಣಿದಾಡಿದ್ದೆ, ಆದ್ರೆ ಇಂದು ಈ ರೀತಿ ಸಾಲುಗಳನ್ನು ಬರೀತೀನಿ ಅಂದ್ಕೊಂಡಿರ್ಲಿಲ್ಲ: ಅರ್ಜುನ್ ಸರ್ಜಾ

    ಹುಟ್ಟಿದಾಗ ಕುಣಿದಾಡಿದ್ದೆ, ಆದ್ರೆ ಇಂದು ಈ ರೀತಿ ಸಾಲುಗಳನ್ನು ಬರೀತೀನಿ ಅಂದ್ಕೊಂಡಿರ್ಲಿಲ್ಲ: ಅರ್ಜುನ್ ಸರ್ಜಾ

    – ಗಣ್ಯರು, ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ

    ಬೆಂಗಳೂರು: ದಿವಂಗತ ನಟ ಚಿರಂಜೀವಿ ಸರ್ಜಾ ಅವರ 36ನೇ ವರ್ಷದ ಹುಟ್ಟುಹಬ್ಬಕ್ಕೆ ಸ್ಯಾಂಡಲ್‍ವುಡ್, ನಟ, ನಟಿಯರು ಹಾಗೂ ಗಣ್ಯರು ಶುಭ ಕೋರುತ್ತಿದ್ದು, ಅವರ ಮಾವ ಅರ್ಜುನ್ ಸರ್ಜಾ ಸಹ ಭಾವನಾತ್ಮಕ ಸಾಲುಗಳಿಂದ ಅಳಿಯನಿಗೆ ಶುಭಾಶಯ ತಿಳಿಸಿದ್ದಾರೆ.

    ಸಾಮಾಜಿಕ ಜಾಲತಾಣಗಳಲ್ಲಿ ಅರ್ಜುನ್ ಸರ್ಜಾ, ಸುದೀಪ್, ದರ್ಶನ್ ಸೇರಿದಂತೆ ಹಲವು ಗಣ್ಯರು ಚಿರು ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ಅರ್ಜುನ್ ಸರ್ಜಾ ಅವರು ಚಿರು ಹುಟ್ಟಿದ ಸಂದರ್ಭ, ಅವರು ತೀರಿದ ಬಳಿಕ ಅನುಭವಿಸುತ್ತಿರುವ ಸಂಕಟದ ಬಗ್ಗೆ ಬರೆದುಕೊಂಡಿದ್ದಾರೆ.

    ನಟ ಅರ್ಜುನ್ ಸರ್ಜಾ ಇನ್‍ಸ್ಟಾಗ್ರಾಮ್‍ನಲ್ಲಿ ಚಿರು ಫೋಟೋ ಹಾಕಿ ಪೋಸ್ಟ್ ಮಾಡಿದ್ದು, 36 ವರ್ಷಗಳ ಹಿಂದೆ ನೀನು ಹುಟ್ಟಿದಾಗ ಸಂತಸದಿಂದ ಕುಣಿದು ಕುಪ್ಪಳಿಸಿದ್ದೆ. ವಿಧಿಯ ಕ್ರೌರ್ಯವನ್ನು ನಾನು ನಂಬಿರಲಿಲ್ಲ. ನಿನ್ನ ಹುಟ್ಟುಹಬ್ಬದಂದು ಈ ರೀತಿಯ ಪದಗಳನ್ನು ಬರೆಯುತ್ತೇನೆಂದು ನನ್ನ ಹುಚ್ಚು ಕನಸುಗಳಲ್ಲಿಯೂ ಯೋಚಿಸಿರಲಿಲ್ಲ. ನನ್ನ ಸಂದೇಶದಲ್ಲಿ ಯಾವಾಗಲೂ ನೀನು ಜೊತೆಗಿರುತ್ತೀಯ ಮಗನೆ. ಲವ್ ಯು ಸೋ ಮಚ್ ಮೈ ಬೇಬಿ ಎಂದು ಬರೆದುಕೊಂಡಿದ್ದಾರೆ. ಅವರ ಪೋಸ್ಟ್ ಗೆ ಹಲವು ಅಭಿಮಾನಿಗಳು ಕಮೆಂಟ್ ಮಾಡಿ ಬೇಸರ ವ್ಯಕ್ತಪಡಿಸಿ, ಶುಭಾಶಯ ತಿಳಿಸಿದ್ದಾರೆ.

    ಕಿಚ್ಚ ಸುದೀಪ್ ಟ್ವೀಟ್ ಮಾಡಿ, ಅವನನ್ನು ಕಳೆದುಕೊಂಡ, ಅವನನ್ನು ತಿಳಿದಿದ್ದ ಹಾಗೂ ಪ್ರೀತಿಸಿದ್ದ ಎಲ್ಲರಿಂದಲೂ ಅವನು ತಪ್ಪಿಸಿಕೊಂಡಂತಾಗಿದೆ. ಯಾವಾಗಲೂ ನಗುವುದು ಹಾಗೂ ವಿಷಯಗಳನ್ನು ಬಂದ ರೀತಿಯಲ್ಲೇ ತೆಗೆದುಕೊಳ್ಳುವುದನ್ನು ಅವನಲ್ಲಿ ನೋಡಿದೆ. ಅವನು ಶಾಂತಿ ಹಾಗೂ ಸ್ವರ್ಗದಲ್ಲಿ ಸ್ಥಾನ ಪಡೆದಿದ್ದಾನೆ ಎಂಬುದು ನನಗೆ ಖಾತ್ರಿ ಇದೆ. ಲವ್ ಯು ಮೈ ಬ್ರದರ್ ಚಿರು, ಚೀಯರ್ಸ್ ಆನ್ ಯುವರ್ ಬರ್ಥ್ ಡೇ ಎಂದು ಬರೆದು ಹಾರ್ಟ್ ಸಿಂಬಾಲ್ ಹಾಕಿದ್ದಾರೆ.

    ನಟ ದರ್ಶನ್ ಚಿರು ಜೊತೆ ನಾಯಿ ಹಿಡಿದು ನಿಂತಿರುವ ಫೋಟೋ ಪೋಸ್ಟ್ ಮಾಡಿ ಶುಭಾಶಯ ತಿಳಿಸಿದ್ದಾರೆ. ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು ಚಿರು. ರಾಜಮಾರ್ತಾಂಡ ಚಿತ್ರದ ಇಂಟ್ರೋ ಸಾಂಗ್ ಇಂದು ಬಿಡುಗಡೆಯಾಗಿದೆ. ನೋಡಿ ಹರಸಿ ಎಂದು ಹೇಳಿದ್ದಾರೆ. ಹೀಗೆ ಹಲವು ಗಣ್ಯರು ಹಾಗೂ ನಟ, ನಟಿಯರು ಚಿರು ಹುಟ್ಟುಹಬ್ಬಕ್ಕೆ ವಿಶ್ ಮಾಡುತ್ತಿದ್ದಾರೆ.

    ಇಂದು ಬೆಳಗ್ಗೆ ಧ್ರುವ ಹಾಗೂ ಮೇಘನಾ ಸಹ ಫೋಟೋ ಹಾಕಿ ಚಿರು ಹಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ. ಚಿಕ್ಕ ವಯಸ್ಸಿನಲ್ಲಿ ಅಣ್ಣನೊಂದಿಗೆ ಇದ್ದ ಫೋಟೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಸ್ಟೇಟಸ್ ಹಾಕಿಕೊಂಡು ಧ್ರುವ ಸರ್ಜಾ ಅಣ್ಣನ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಹ್ಯಾಪಿ ಬರ್ಥ್ ಡೇ ಲವ್ ಯು ಫಾರ್ ಎವರ್ ಎಂದು ಬರೆದುಕೊಂಡಿದ್ದಾರೆ. ಚಿಕ್ಕ ವಯಸ್ಸಿನ ಮೂರು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಎರಡನೇ ಸ್ಟೇಟಸ್‍ನಲ್ಲಿ 3 ಫೋಟೋಗಳನ್ನು ಸೇರಿಸಿ ಸಣ್ಣವರಿದ್ದಾಗಿನ ಹಾಗೂ ಹಳೆಯ, ಇನ್ನೊಂದು ಇತ್ತೀಚಿನ ಫೋಟೋ ಪೋಸ್ಟ್ ಮಾಡಿದ್ದಾರೆ.

    ಮತ್ತೊಂದು ಚಿರಂಜೀವಿ ಸರ್ಜಾ ಅವರ ರಾಜಮಾರ್ತಾಂಡ ಸಿನಿಮಾದ ಟೈಟಲ್ ಟ್ರ್ಯಾಕ್ ಹಂಚಿಕೊಂಡಿದ್ದಾರೆ. ಈ ಮೂಲಕ ಅಣ್ಣನಿಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ನಿನ್ನೆಯೂ ವಿಡಿಯೋ ಪೋಸ್ಟ್ ಮಾಡಿದ್ದ ಧ್ರುವ ಜೂನಿಯರ್ ಚಿರು ಕಮಿಂಗ್ ಸೂನ್ ಎಂದು ಹೇಳಿದ್ದರು. ಈ ಮೂಲಕ ಅವರ ಹುಟ್ಟುಹಬ್ಬದಂತೆ ಜೂನಿಯರ್ ಚಿರು ಬರಲಿದ್ದಾರೆ ಎಂಬ ಸುಳಿವು ನೀಡಿದ್ದರು.

     

    View this post on Instagram

     

    Happy Birthday My World! @chirusarja I LOVE YOU! Forever and Always!

    A post shared by Meghana Raj Sarja (@megsraj) on

    ಚಿರು ಪತ್ನಿ ಮೆಘನಾ ರಾಜ್ ಸಹ ಫೋಟೋ ಹಂಚಿಕೊಂಡು ಸಾಲುಗಳನ್ನು ಬರೆದಿದ್ದು, ಹ್ಯಾಪಿ ಬರ್ತ್ ಡೇ ಮೈ ವಲ್ರ್ಡ್ ಐ ಲವ್ ಯು ಫಾರ್ ಎವರ್ ಆ್ಯಂಡ್ ಆಲ್‍ವೇಸ್ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಭಾವನಾತ್ಮಕವಾಗಿ ಶುಭಾಶಯ ಕೋರಿದ್ದಾರೆ.

  • ಹಳೆಯ ಫೋಟೋ ಹಂಚಿಕೊಂಡು ಅಣ್ಣನಿಗೆ ಧ್ರುವ ವಿಶ್

    ಹಳೆಯ ಫೋಟೋ ಹಂಚಿಕೊಂಡು ಅಣ್ಣನಿಗೆ ಧ್ರುವ ವಿಶ್

    – ಪ್ರೀತಿಯ ಜಗತ್ತಿಗೆ ಹ್ಯಾಪಿ ಹುಟ್ದಬ್ಬ ಅಂದ್ರು ಮೇಘನಾ

    ಬೆಂಗಳೂರು: ನಟ ಚಿರಂಜೀವಿ ಸರ್ಜಾ ಸಾವನ್ನಪ್ಪಿದ ಬಳಿಕ ಸರ್ಜಾ ಕುಟುಂಬದವರಿಗೆ ಇದು ಮೊದಲನೇ ಹುಟ್ಟುಹಬ್ಬವಾಗಿದ್ದು, ಅವರ ನೆನಪಿನಲ್ಲೇ 36ನೇ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಪತ್ನಿ ಮೇಘನಾ ರಾಜ್ ಸ್ಪೆಷಲ್ ವಿಡಿಯೋ ಹಂಚಿಕೊಂಡು ವಿಶ್ ಮಾಡಿದರೆ, ಧ್ರುವ ಚಿಕ್ಕ ವಯಸ್ಸಿನಲ್ಲಿ ಅಣ್ಣನೊಂದಿಗೆ ಕಾಲ ಕಳೆದ ಚಿತ್ರಗಳನ್ನು ಹಂಚಿಕೊಂಡು ಶುಭಾಶಯ ತಿಳಿಸಿದ್ದಾರೆ.

    ಚಿಕ್ಕ ವಯಸ್ಸಿನಲ್ಲಿ ಅಣ್ಣನೊಂದಿಗೆ ಇದ್ದ ಫೋಟೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಸ್ಟೇಟಸ್ ಹಾಕಿಕೊಂಡು ಧ್ರುವ ಸರ್ಜಾ ಅಣ್ಣನ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಹ್ಯಾಪಿ ಬರ್ಥ್ ಡೇ ಲವ್ ಯು ಫಾರ್ ಎವರ್ ಎಂದು ಬರೆದುಕೊಂಡಿದ್ದಾರೆ. ಚಿಕ್ಕ ವಯಸ್ಸಿನ ಮೂರು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಎರಡನೇ ಸ್ಟೇಟಸ್‍ನಲ್ಲಿ 3 ಫೋಟೋಗಳನ್ನು ಸೇರಿಸಿ ಸಣ್ಣವರಿದ್ದಾಗಿನ ಹಾಗೂ ಹಳೆಯ, ಇನ್ನೊಂದು ಇತ್ತೀಚಿನ ಫೋಟೋ ಪೋಸ್ಟ್ ಮಾಡಿದ್ದಾರೆ.

    ಮತ್ತೊಂದು ಚಿರಂಜೀವಿ ಸರ್ಜಾ ಅವರ ರಾಜಮಾರ್ತಾಂಡ ಸಿನಿಮಾದ ಟೈಟಲ್ ಟ್ರ್ಯಾಕ್ ಹಂಚಿಕೊಂಡಿದ್ದಾರೆ. ಈ ಮೂಲಕ ಅಣ್ಣನಿಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ನಿನ್ನೆಯೂ ವಿಡಿಯೋ ಪೋಸ್ಟ್ ಮಾಡಿದ್ದ ಧ್ರುವ ಜೂನಿಯರ್ ಚಿರು ಕಮಿಂಗ್ ಸೂನ್ ಎಂದು ಹೇಳಿದ್ದರು. ಈ ಮೂಲಕ ಅವರ ಹುಟ್ಟುಹಬ್ಬದಂತೆ ಜೂನಿಯರ್ ಚಿರು ಬರಲಿದ್ದಾರೆ ಎಂಬ ಸುಳಿವು ನೀಡಿದ್ದರು.

    ಚಿರು ಪತ್ನಿ ಮೆಘನಾ ರಾಜ್ ಸಹ ಫೋಟೋ ಹಂಚಿಕೊಂಡು ಸಾಲುಗಳನ್ನು ಬರೆದಿದ್ದು, ಹ್ಯಾಪಿ ಬರ್ತ್ ಡೇ ಮೈ ವಲ್ರ್ಡ್ ಐ ಲವ್ ಯು ಫಾರ್ ಎವರ್ ಆ್ಯಂಡ್ ಆಲ್‍ವೇಸ್ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಭಾವನಾತ್ಮಕವಾಗಿ ಶುಭಾಶಯ ಕೋರಿದ್ದಾರೆ.

     

    View this post on Instagram

     

    Happy Birthday My World! @chirusarja I LOVE YOU! Forever and Always!

    A post shared by Meghana Raj Sarja (@megsraj) on

    ನಿನ್ನೆ ವಿಡಿಯೋವನ್ನು ಸಹ ಮೇಘನಾ ಹಂಚಿಕೊಂಡಿದ್ದರು. ನಿನ್ನ ತಂದೆ ಸದಾ ಸಂಭ್ರಮ ನೀಡುವವರು ಪುಟಾಣಿ ಎಂದು ಬರೆದುಕೊಂಡಿದ್ದರು. ಇದಕ್ಕೂ ಮೊದಲು ಜೂ. ಚಿರುವಿಗೆ ಸ್ವಾಗತ ಕೋರಿ ಕುಟುಂಬಸ್ಥರು ಮಾಡಿರುವ ವೀಡಿಯೋವನ್ನು ಕೂಡ ಮೇಘನಾ ಹಾಗೂ ಧ್ರುವ ಸರ್ಜಾ ಶೇರ್ ಮಾಡಿಕೊಂಡಿದ್ದರು. ಈ ಕುರಿತು ಸಾಕಷ್ಟು ಚರ್ಚೆ ಸಹ ನಡೆದಿತ್ತು.

     

    View this post on Instagram

     

    @shalinismakeupprofile @makeover_by_raghu_nagaraj_n @classycaptures_official

    A post shared by Meghana Raj Sarja (@megsraj) on

    ಚಿರು ಹುಟ್ಟುಹಬ್ಬದ ವಿಶೇಷವಾಗಿ ಕುಟುಂಬಸ್ಥರು ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ನೆಲಗುಳಿ ಗ್ರಾಮದ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಕುಟುಂಬಸ್ಥರು ಚಿರು ಸಮಾಧಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ಚಿರಂಜೀವಿ ಸಮಾಧಿ ಬಳಿ ಧ್ರುವ ಸರ್ಜಾ ಅಜ್ಜಿ ಲಕ್ಷ್ಮಿ ದೇವಿ ಆಗಮಿಸಿ, ಮೊಮ್ಮಗನ ಸ್ಮಾರಕಕ್ಕೆ ಹೂವು ಹಾಕಿದ್ದಾರೆ.

    ಸಮಾಧಿ ಬಳಿ ಪೂಜೆ ಹಾಗೂ ಅನ್ನದಾನ ಕಾರ್ಯಕ್ರಮ ನಡೆಸಲಿದ್ದಾರೆ. ಇನ್ನು ನೋವಿನಲ್ಲೇ ಖುಷಿಯನ್ನ ಕೂಡ ಬರಮಾಡಿಕೊಳ್ಳಲು ಸರ್ಜಾ ಫ್ಯಾಮಿಲಿ ಸಜ್ಜಾಗಿದೆ. ಚಿರು ಬರ್ತ್ ಡೇಗೆ ರಾಜಮಾರ್ತಾಂಡ ಚಿತ್ರತಂಡ ಗಿಫ್ಟ್ ನೀಡಿದೆ. ಹಿರೋ ಇಂಟ್ರೊಡಕ್ಷನ್ ಸಾಂಗ್ ರಿಲೀಸ್ ಆಗಿದೆ. ಜೊತೆಗೆ ಕ್ಷತ್ರಿಯ ಚಿತ್ರ ಟೀಸರ್ ಕೂಡ ಇಂದೇ ಬಿಡುಗಡೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಚಿರಂಜೀವಿ ಸರ್ಜಾ(39) ಅವರು ಜೂನ್ 7ರಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಚಿರಂಜೀವಿ ಸರ್ಜಾ ಅವರಿಗೆ ಶನಿವಾರ ರಾತ್ರಿಯಿಂದ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಭಾನುವಾರ ಮಧ್ಯಾಹ್ನ 3:30ರ ಸುಮಾರಿಗೆ ಅಶೋಕಾ ಪಿಲ್ಲರ್ ಬಳಿ ಇರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.