Tag: dhruva sarja

  • ಭಾರತ VS ನ್ಯೂಜಿಲೆಂಡ್‌ ‘ಫೈನಲ್‌’ ಫೈಟ್‌ – ಟೀಂ ಇಂಡಿಯಾ ಗೆಲುವಿಗೆ ಸ್ಯಾಂಡಲ್‌ವುಡ್‌ ತಾರೆಯರ ವಿಶ್‌

    ಭಾರತ VS ನ್ಯೂಜಿಲೆಂಡ್‌ ‘ಫೈನಲ್‌’ ಫೈಟ್‌ – ಟೀಂ ಇಂಡಿಯಾ ಗೆಲುವಿಗೆ ಸ್ಯಾಂಡಲ್‌ವುಡ್‌ ತಾರೆಯರ ವಿಶ್‌

    ಹೈವೋಲ್ಟೇಜ್ ಫೈನಲ್ ಪಂದ್ಯಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಬರೋಬ್ಬರಿ 25 ವರ್ಷಗಳ ಬಳಿಕ ಸೀಮಿತ ಓವರ್‌ಗಳ ಐಸಿಸಿ ಟೂರ್ನಿಯ ಫೈನಲ್ ಹಣಾಹಣಿಯಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ (New Zealand) ಮುಖಾಮುಖಿಯಾಗ್ತಿವೆ. ಹೀಗಾಗಿ ಚಂದನವನದ ತಾರೆಯರು (Sandalwood Stars) ಟೀಮ್ ಇಂಡಿಯಾದ (India) ಗೆಲುವಿಗಾಗಿ ಶುಭಹಾರೈಸಿದ್ದಾರೆ.

    ಭಾರತ ಮಾತೆ ಗೆದ್ದೆ ಗೆಲ್ಲುತ್ತಾರೆ. ನಮ್ಮ ಟೀಮ್ ಇಂಡಿಯಾ ಗೆದ್ದೆ ಗೆಲ್ಲುತ್ತದೆ. ಮುಂಚೆ ಕ್ರಿಕೆಟ್ ಆಡುತ್ತಿದ್ದೆ,ಈಗ ಬರೀ ನೋಡುತ್ತೇನೆ. ನಮ್ಮ ಭಾರತನೇ ಗೆಲ್ಲಲಿ ಆಲಿ ದಿ ಬೆಸ್ಟ್, ಜೈ ಆಂಜನೇಯ ಎಂದು ಧ್ರುವ ಸರ್ಜಾ (Dhruva Sarja) ಮಾತನಾಡಿದ್ದಾರೆ.‌ ಇದನ್ನೂ ಓದಿ:ಜಯಮಾಲಾ ಮಗಳ ಮದುವೆಯಲ್ಲಿ ಮಿಂಚಿದ್ದ ಆರೋಪಿ ರನ್ಯಾ ರಾವ್

    ಇಂಡಿಯಾ ವಿನ್ ಆಗೇ ಆಗುತ್ತಾರೆ. ನ್ಯೂಜಿಲೆಂಡ್ ಟೀಮ್ ಏನು ಕಮ್ಮಿಯಿಲ್ಲ. ಅವರು ಕೂಡ ಸ್ಟ್ರಾಂಗ್ ಇದ್ದಾರೆ. ಅವರ ಫೀಲ್ಡಿಂಗ್ ನೋಡಿದ್ರೆನೇ ಭಯ ಆಗುತ್ತದೆ. ಈ ಸಲ ಇಂಡಿಯಾ ಗೆಲ್ಲಬೇಕು ಅಂದರೆ, ಪ್ರತಿ ಬಾಲ್ 6 ರನ್ ಹೊಡೆಯಲೇಬೇಕು. 4 ರನ್ ಹೊಡೆದರೆ ಎದುರಾಳಿ ತಂಡ ಪಕ್ಕಾ ಹಿಡಿಯುತ್ತಾರೆ. ಹಾಗಾಗಿ ನಮ್ಮ ಟೀಮ್ ಇಂಡಿಯಾ ತಂಡ, ಪ್ರತಿ ಬಾಲ್ 6 ರನ್ ಹೊಡೆಯಲಿ ಎಂದು ದೇವರಲ್ಲಿ ಕೇಳಿಕೊಳ್ಳುತ್ತೇನೆ. ನಮ್ಮ ಭಾರತನೇ ಗೆಲ್ಲಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ಚಂದನ್ ಶೆಟ್ಟಿ (Chandan Shetty) ವಿಶ್ ಮಾಡಿದ್ದಾರೆ.

    ಆಲ್ ದಿ ಬೆಸ್ಟ್ ಟೀಮ್ ಇಂಡಿಯಾ. ಅವತ್ತಿನ ದಿನ ಯಾರು ಬೆಸ್ಟ್ ಇರುತ್ತಾರೋ ಅವರಿಗೆ ಗೆಲುವು ಸಿಗುತ್ತದೆ. ಗೆಲುವು ಮುಖ್ಯವಲ್ಲ, ಕ್ರೀಡಾ ಮನೋಭಾವ ಮುಖ್ಯ. ಆಟ ಆಡೋದು ಮುಖ್ಯ, ಚೆನ್ನಾಗಿ ಆಡೋದು ಮುಖ್ಯ. ಗೆಲುವು ಸೋಲು ಎಲ್ಲಾ ಇದ್ದಿದ್ದೇ. ಒಂದು ವೇಳೆ, ಮ್ಯಾಚ್ ಸೋತ್ರೆ ಟ್ರೋಲ್ ಮಾಡಬೇಡಿ ನಮ್ಮ ಆಟಗಾರರಿಗೆ. ಆಟ ಕೂಡ ಕಲೆ ತರನೇ ಜನರನ್ನು, ದೇಶವನ್ನು ಬೆಸೆಯಬೇಕು ಎಂದು ಬಹುಭಾಷಾ ನಟ ಕಿಶೋರ್ (Kishore) ಟೀಮ್ ಇಂಡಿಯಾಗೆ ಶುಭಕೋರಿದ್ದಾರೆ.

    ಇಂಡಿಯಾ ಹಾಗೂ ನ್ಯೂಜಿಲೆಂಡ್ ಮ್ಯಾಚ್ ಇದೆ ಇವತ್ತು. ಇಂಡಿಯಾಗೆ ಆಲ್ ದಿ ಬೆಸ್ಟ್. ನಮ್ಮ ದೇಶಕ್ಕೆ ಗೆಲುವು ಸಿಗಲಿ. ನಾನು ಕೂಡ ಕ್ರಿಕೆಟ್ ಅಭಿಮಾನಿ. ನಮ್ಮ ಟೀಮ್ ಇಂಡಿಯಾ ಚೆನ್ನಾಗಿ ಆಡಲಿ ಅಂತ ಕೇಳಿಕೊಳ್ಳುತ್ತೇನೆ ಎಂದು ನಟಿ ಅಂಕಿತಾ ಅಮರ್‌ (Ankitha Amar) ಹೇಳಿದ್ದಾರೆ.

    ಇವತ್ತು ಎಲ್ಲರೂ ಕೂಡ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಕ್ರಿಕೆಟ್ ಪಂದ್ಯಾವಳಿ ನೋಡೋಕೆ ಕಾಯ್ತಿದ್ದೀರಾ ಅಂತ. ಎಲ್ಲರಿಗೂ ನಿರೀಕ್ಷೆಯಿದೆ ಭಾರತನೇ ಗೆಲ್ಲಬೇಕು ಅಂತ. ಹಾಗಾಗಿ ಇವತ್ತಿನ ಕ್ರಿಕೆಟ್ ಮ್ಯಾಚ್‌ನ ಜಿದ್ದಾಜಿದ್ದಿಯಲ್ಲಿ ಭಾರತ ತಂಡ ಗೆದ್ದು ಬರಲಿ ಅಂತ ಆಶಿಸುತ್ತೇನೆ. ಆಲ್ ದಿ ಬೆಸ್ಟ್ ಇಂಡಿಯಾ ಟೀಮ್. ಗೆದ್ದು ಬಾ ಭಾರತ ಎಂದು‌ ‘ಬಿಗ್‌ ಬಾಸ್‌ ಕನ್ನಡ 11’ರ ಸ್ಪರ್ಧಿ ಚೈತ್ರಾ ಕುಂದಾಪುರ (Chaithra Kundapura) ಶುಭಕೋರಿದ್ದಾರೆ.

  • ಮಹಿಳೆಯ ಚಪ್ಪಲಿ ಎತ್ತಿ ಕೊಟ್ಟ ಧ್ರುವ ಸರ್ಜಾ- ಆ್ಯಕ್ಷನ್ ಪ್ರಿನ್ಸ್ ಸರಳತೆಗೆ ಫ್ಯಾನ್ಸ್ ಫಿದಾ

    ಮಹಿಳೆಯ ಚಪ್ಪಲಿ ಎತ್ತಿ ಕೊಟ್ಟ ಧ್ರುವ ಸರ್ಜಾ- ಆ್ಯಕ್ಷನ್ ಪ್ರಿನ್ಸ್ ಸರಳತೆಗೆ ಫ್ಯಾನ್ಸ್ ಫಿದಾ

    ಟ ಧ್ರುವ ಸರ್ಜಾ (Dhruva Sarja) ಅವರು ಸರಳ ವ್ಯಕ್ತಿ ಎಂಬುದಕ್ಕೆ ಜಯಮಾಲಾ ಮಗಳ ಆರತಕ್ಷತೆಯಲ್ಲಿ ನಡೆದ ಘಟನೆಯೊಂದು ಸಾಕ್ಷಿಯಾಗಿದೆ. ಸೌಂದರ್ಯ ದಂಪತಿಗೆ ಶುಭ ಕೋರಲು ವೇದಿಕೆಗೆ ಆಗಮಿಸುವಾಗ ಧ್ರುವ ಸರ್ಜಾ ತಲೆ ಭಾಗಿ ಮಹಿಳೆಯ ಚಪ್ಪಲಿ ಎತ್ತಿ ಕೊಟ್ಟಿದ್ದಾರೆ. ನಟನ ಸಿಂಪ್ಲಿಸಿಟಿ ಕಂಡು ಅಭಿಮಾನಿಗಳು ಹಾಡಿ ಹೊಗಳಿದ್ದಾರೆ.

    ಸೌಂದರ್ಯ ಆರತಕ್ಷತೆ ಸಂಭ್ರಮದಲ್ಲಿ ಪತ್ನಿ ಪ್ರೇರಣಾ ಜೊತೆ ಆಗಮಿಸಿದ ಧ್ರುವ ಸರ್ಜಾ ವೇದಿಕೆಯ ಬಳಿ ಮಹಿಳೆಯ ಚಪ್ಪಲಿ ಎತ್ತಿ ಕೊಟ್ಟಿದ್ದಾರೆ. ಸ್ಟಾರ್ ನಟ ಆಗಿದ್ರೂ ಸರಳತೆ ಮೆರೆದಿರುವ ಧ್ರುವ ಸರ್ಜಾ ನಡೆಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಸದ್ಯ ಧ್ರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಇದನ್ನೂ ಓದಿ:ಕ್ರೇಜಿ ಕ್ವೀನ್‌ ರಕ್ಷಿತಾ ಸಹೋದರನ ಆರತಕ್ಷತೆ ಸಂಭ್ರಮದಲ್ಲಿ ದರ್ಶನ್

    ನಿನ್ನೆ (ಫೆ.8) ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಜರುಗಿದೆ. ಈ ಕಾರ್ಯಕ್ರಮದಲ್ಲಿ ಅಂಬಿಕಾ, ಶುಭ ಪೂಂಜಾ, ರಾಧಿಕಾ ಕುಮಾರಸ್ವಾಮಿ, ಗಿರಿಜಾ ಲೋಕೇಶ್‌, ಸುಧಾರಾಣಿ ಸೇರಿದಂತೆ ಅನೇಕರು ಭಾಗಿಯಾಗಿ ಶುಭಕೋರಿದ್ದಾರೆ.

    ಇನ್ನೂ ‘ಕೆಡಿ’ ಸಿನಿಮಾದಲ್ಲಿ ಧ್ರುವ ಸರ್ಜಾ, ರೀಷ್ಮಾ ನಾಣಯ್ಯ, ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಸೇರಿದಂತೆ ಅನೇಕರು ನಟಿಸಿದ್ದಾರೆ.

  • ಜಯಮಾಲಾ ಪುತ್ರಿಯ ಅದ್ಧೂರಿ ಆರತಕ್ಷತೆ: ಸಿನಿ ತಾರೆಯರ ದಂಡು

    ಜಯಮಾಲಾ ಪುತ್ರಿಯ ಅದ್ಧೂರಿ ಆರತಕ್ಷತೆ: ಸಿನಿ ತಾರೆಯರ ದಂಡು

    ನ್ನಡ ಚಿತ್ರರಂಗದ ಹಿರಿಯ ನಟಿ ಜಯಮಾಲಾ (Jayamala) ಅವರ ಪುತ್ರಿ ಸೌಂದರ್ಯ (Soundarya) ಫೆ.7ರಂದು ಮದುವೆ ಅದ್ಧೂರಿಯಾಗಿ ಜರುಗಿದೆ. ಇಂದು (ಫೆ.8)ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೌಂದರ್ಯ ಹಾಗೂ ರುಷಭ್ ಆರತಕ್ಷತೆ ನಡೆಯುತ್ತಿದ್ದು, ಸ್ಯಾಂಡಲ್‌ವುಡ್ ನಟ, ನಟಿಯರು ಭಾಗಿಯಾಗಿ ಶುಭಕೋರಿದ್ದಾರೆ.

    ಸೌಂದರ್ಯ ಆರತಕ್ಷತೆ ಸಂಭ್ರಮದಲ್ಲಿ ಧ್ರುವ ಸರ್ಜಾ ದಂಪತಿ, ಡಾಲಿ ಧನಂಜಯ, ಗಿರಿಜಾ ಲೋಕೇಶ್, ರಾಧಿಕಾ ಕುಮಾರಸ್ವಾಮಿ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕರು ಭಾಗಿಯಾಗಿ ಶುಭಹಾರೈಸಿದ್ದಾರೆ. ಇದನ್ನೂ ಓದಿ:ಫ್ಯಾನ್ಸ್‌ಗೆ ಗುಡ್ ನ್ಯೂಸ್- ಚೊಚ್ಚಲ ಸಿನಿಮಾ ಘೋಷಿಸಿದ ‘ಬಿಗ್ ಬಾಸ್’ ಖ್ಯಾತಿಯ ಮೋಕ್ಷಿತಾ

    ಇಂದು ನಿನ್ನೆ ಸೌಂದರ್ಯ ಮದುವೆಯಲ್ಲಿ ನಟ ಯಶ್ ಹಾಗೂ ರಾಧಿಕಾ ದಂಪತಿ, ಅಂಜಲಿ, ಭಾರತಿ ವಿಷ್ಣುವರ್ಧನ್, ಅಂಬಿಕಾ, ಶ್ರುತಿ, ಸುಧಾರಾಣಿ, ಮಾಳವಿಕಾ ಸೇರಿದಂತೆ ಅನೇಕರು ಭಾಗಿಯಾಗಿ ಶುಭಕೋರಿದ್ದರು.

  • ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ತಾರೆಯರು

    ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ತಾರೆಯರು

    ಕರ ಸಂಕ್ರಾಂತಿ ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದು. ವರ್ಷದ ಮೊದಲ ಹಬ್ಬ ಇದಾಗಿದ್ದು, ಎಲ್ಲೆಡೆ ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಇದೀಗ ಸ್ಯಾಂಡಲ್‌ವುಲ್‌ನಲ್ಲೂ (Sandalwood) ಸಂಕ್ರಾಂತಿ ಸಂಭ್ರಮ ಮನೆ ಮಾಡಿದೆ. ಸೆಲೆಬ್ರಿಟಿಗಳು ಸಂಕ್ರಾಂತಿ ಹಬ್ಬವನ್ನು ಸಡಗರಿದಿಂದ ಆಚರಿಸಿದ್ದಾರೆ.

     

    View this post on Instagram

     

    A post shared by Rishab Shetty (@rishabshettyofficial)

    ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಮನೆಯಲ್ಲಿ ಸಂಕ್ರಾಂತಿ ಹಬ್ಬ ಜೋರಾಗಿದೆ. ಕುಂದಾಪುರದಲ್ಲಿ ಕುಟುಂಬದೊಂದಿಗೆ ಅದ್ಧೂರಿಯಾಗಿ ರಿಷಬ್ ಹಬ್ಬ ಸೆಲೆಬ್ರೇಟ್ ಮಾಡಿದ್ದಾರೆ. ಸಿನಿಮಾ ಕೆಲಸಕ್ಕೆ ಬ್ರೇಕ್ ಹಾಕಿ ಹಬ್ಬದ ಆಚರಣೆಯ ಫೋಟೋವನ್ನು ನಟ ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by Shwetha Srivatsav (@shwethasrivatsav)

    ನಟಿ ಶ್ವೇತಾ ಶ್ರೀವಾಸ್ತವ್ ಅವರು ಮಗಳೊಂದಿಗೆ ಕಾರ್ಕಳದಲ್ಲಿ ಹಬ್ಬ ಆಚರಿಸಿದ್ದಾರೆ. ನನ್ನ ಅಜ್ಜನ ಊರು ಕಾರ್ಕಳ. ಸುಗ್ಗಿ ಸಂಭ್ರಮ ಶುರುವಾಗಿದೆ. ನಿಮ್ಮ ಪ್ರಯತ್ನಗಳೆಲ್ಲವೂ ಫಲ ಕೊಡಲಿ. ಯಶಸ್ಸು ಹಾಗೂ ಸಂತೋಷ ನಿಮ್ಮ ಜೀವನದಲ್ಲಿ ತುಂಬಿರಲಿ ಎಲ್ಲರಿಗೂ ಮಕರ ಸಂಕ್ರಾಂತಿಯ ಶುಭಾಶಯಗಳು ಎಂದು ನಟಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

     

    View this post on Instagram

     

    A post shared by DU✨ (@divya_uruduga)

    ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ (Divya Uruduga) ಅವರು ‘ನಿನಗಾಗಿ’ ಸೀರಿಯಲ್ ಸೆಟ್‌ನಲ್ಲಿ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ.

    ಇನ್ನೂ ಧ್ರುವ ಸರ್ಜಾ ಫಾರಂ ಹೌಸ್‌ನಲ್ಲಿ ‘ಕೆಡಿ’ ಚಿತ್ರತಂಡ ಜೊತೆ ಹಬ್ಬ ಸೆಲೆಬ್ರೇಟ್ ಮಾಡಿದ್ದಾರೆ. ಡೈರೆಕ್ಟರ್ ಪ್ರೇಮ್, ರೀಷ್ಮಾ ನಾಣಯ್ಯ (Reeshma Nanaiah) ಜೊತೆ ಹಬ್ಬ ಸೆಲೆಬ್ರೇಟ್ ಮಾಡಿದ್ದಾರೆ. ಗೋವಿಗೆ ಪೂಜೆ ಮಾಡಿಸಿದ್ದಾರೆ.

  • ಕುಟುಂಬ ಜೊತೆಗಿನ ಫೋಟೋ ಹಂಚಿಕೊಂಡ ಧ್ರುವ- ಕ್ಯೂಟ್ ಫ್ಯಾಮಿಲಿ ಎಂದ ಫ್ಯಾನ್ಸ್

    ಕುಟುಂಬ ಜೊತೆಗಿನ ಫೋಟೋ ಹಂಚಿಕೊಂಡ ಧ್ರುವ- ಕ್ಯೂಟ್ ಫ್ಯಾಮಿಲಿ ಎಂದ ಫ್ಯಾನ್ಸ್

    ‘ಮಾರ್ಟಿನ್’ ನಟ ಧ್ರುವ ಸರ್ಜಾ (Dhruva Sarja) ಸಿನಿಮಾದಲ್ಲಿ ಅದಷ್ಟೇ ಬ್ಯುಸಿ ಇದ್ದರೂ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಕೆಲಸದ ನಡುವೆಯೂ ಕುಟುಂಬಕ್ಕೂ ಸಮಯ ಮೀಸಲಿಡುತ್ತಾರೆ. ಈಗ ಪತ್ನಿ ಮತ್ತು ಮಕ್ಕಳೊಂದಿಗಿನ ಸುಂದರ ಫೋಟೋ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಸ್ವಿಮ್ ಸೂಟ್ ಧರಿಸಿ ಹಾಟ್ ಅವತಾರ ತಾಳಿದ ಚೈತ್ರಾ ಆಚಾರ್

    2025ರ ಹೊಸ ವರ್ಷಕ್ಕೆ ಸ್ವಾಗತಿಸುತ್ತಾ ಧ್ರುವ ಫ್ಯಾಮಿಲಿ ಫೋಟೋವೊಂದನ್ನು ಶೇರ್ ಮಾಡಿ, 2024ರ ಎಲ್ಲಾ ಸುಂದರ ವಿಷಯಗಳಿಗಾಗಿ ದೇವರಿಗೆ ಧನ್ಯವಾದಗಳು ಎಂದು ಅಡಿಬರಹ ನೀಡಿದ್ದಾರೆ. ಈ ಫೋಟೋ ನೋಡಿ ಫ್ಯಾನ್ಸ್ ಕ್ಯೂಟ್ ಫ್ಯಾಮಿಲಿ ಎಂದು ಮೆಚ್ಚುಗೆ ಸೂಚಿಸಿದ್ದಾರೆ.


    ಇನ್ನೂ ಮಾರ್ಟಿನ್ ಸಿನಿಮಾದ ಬಳಿಕ ‘ಕೆಡಿ’ (KD) ಚಿತ್ರದ ರಿಲೀಸ್‌ಗೆ ಧ್ರುವ ಎದುರು ನೋಡ್ತಿದ್ದಾರೆ. ಸದ್ಯ ಈ ಚಿತ್ರದ ‘ಶಿವ ಶಿವ’ ಎಂಬ ಸಾಂಗ್ ರಿಲೀಸ್ ಆಗಿ ಪ್ರೇಕ್ಷಕರ ಮೆಚ್ಚುಗೆ ಪಡೆದಿದೆ.

    ಈ ಸಿನಿಮಾದಲ್ಲಿ ಧ್ರುವಗೆ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ (Reeshma Nanaiah) ನಾಯಕಿಯಾಗಿದ್ದಾರೆ. ಧ್ರುವ ಜೊತೆ ಸಂಜಯ್ ದತ್, ಶಿಲ್ಪಾ ಶೆಟ್ಟಿ, ರಮೇಶ್ ಅರವಿಂದ್ ಸೇರಿದಂತೆ ಅನೇಕರು ನಟಿಸಿದ್ದಾರೆ.

  • ಭಗವಂತ ನನ್ನಷ್ಟೂ ಆಯಸ್ಸನ್ನ ಶಿವಣ್ಣನಿಗೇ ಕೊಡಲಿ: ಧ್ರುವ ಸರ್ಜಾ

    ಭಗವಂತ ನನ್ನಷ್ಟೂ ಆಯಸ್ಸನ್ನ ಶಿವಣ್ಣನಿಗೇ ಕೊಡಲಿ: ಧ್ರುವ ಸರ್ಜಾ

    ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್‌ಗೆ (Shivarajkumar) ಇಂದು (ಡಿ.24) ಅಮೆರಿಕದಲ್ಲಿ ಸರ್ಜರಿ ನಡೆಯಲಿದ್ದು, ಈ ಕುರಿತು ಧ್ರುವ ಸರ್ಜಾ ರಿಯಾಕ್ಟ್ ಮಾಡಿದ್ದಾರೆ. ಶಿವಣ್ಣ ನಮ್ಮ ಇಂಡಸ್ಟ್ರಿಗೆ ಗಾಡ್ ಫಾದರ್, ಅವರ ಆರೋಗ್ಯ ಸುಧಾರಿಸಲಿ ಎಂದು ನಟ ಮಾತನಾಡಿದ್ದಾರೆ. ಇದನ್ನೂ ಓದಿ:ಡಿ.24ರಂದು ಶಿವಣ್ಣಗೆ ಸರ್ಜರಿ ಹಿನ್ನೆಲೆ ವಿಶೇಷ ಪೂಜೆ

    ಕಾರ್ಯಕ್ರಮವೊಂದರಲ್ಲಿ ಧ್ರುವ ಸರ್ಜಾ (Dhruva Sarja) ಮಾತನಾಡಿ, ಲಿವಿಂಗ್ ಲೆಜೆಂಡ್ ಶಿವಣ್ಣಗೆ ಆಪರೇಷನ್ ನಡೆಯುತ್ತಿದೆ. ಆ ಭಗವಂತ ನನಗೆಷ್ಟು ಆಯಸ್ಸು ಕೊಟ್ಟಿದ್ದಾನೋ ಅಷ್ಟೂ ಅವರಿಗೆ ಕೊಡಲಿ ಎಂದಿದ್ದಾರೆ. ಅವರು ನಮ್ಮ ಇಂಡಸ್ಟ್ರಿಗೆ ಗಾಡ್ ಫಾದರ್, ಅವರ ಆರೋಗ್ಯ ಸುಧಾರಿಸಲಿ ಎಂದು ಮಾತನಾಡಿದ್ದಾರೆ.

    ಇದೇ ವೇಳೆ ಡೈರೆಕ್ಟರ್ ಪ್ರೇಮ್ ಮಾತನಾಡಿ, ಯುಎಸ್‌ನಲ್ಲಿ ಶಿವಣ್ಣನ ಆಪರೇಷನ್ ಇದೆ. ಅವರಿಗೆ ಒಳ್ಳೆಯದಾಗಲಿ. ಅವರು ಮತ್ತೆ ಎನರ್ಜಿಟಿಕ್ ಆಗಿ ಬರಬೇಕು ಎಂದಿದ್ದಾರೆ. ಇದೇ ವೇಳೆ ದರ್ಶನ್‌ ಜೊತೆಗಿನ ಸಿನಿಮಾ ಕುರಿತು ಮಾತನಾಡಿ, ಅವರೊಂದಿಗೆ ಸಿನಿಮಾ ಮಾಡೇ ಮಾಡ್ತೀನಿ. ಅದರಲ್ಲೇನು ಡೌಟ್‌ ಇಲ್ಲ ಎಂದರು.

    ಅಂದಹಾಗೆ, ಮಿಯಾಮಿ ಕ್ಯಾನ್ಸರ್ ಇನಿಸ್ಟಿಟ್ಯೂಟ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ದಾಖಲಾಗಲಿರುವ ಶಿವರಾಜ್‌ಕುಮಾರ್‌ಗೆ ಅಲ್ಲಿ ಭಾರತ ಮೂಲದ ಮುರುಗೇಶ್ ನೇತೃತ್ವದ ತಜ್ಞವೈದ್ಯರ ತಂಡದಿಂದ ಚಿಕಿತ್ಸೆ ನಡೆಯಲಿದೆ. ಮಿಯಾಮಿ ಕ್ಯಾನ್ಸರ್ ಇನಿಸ್ಟಿಟ್ಯೂಟ್ ನೆಕ್ಸ್ಟ್‌ ಜನರೇಶನ್ ಕ್ಯಾನ್ಸರ್ ಚಿಕಿತ್ಸಾ ಆಸ್ಪತ್ರೆಯಾಗಿದ್ದು, ವೈದ್ಯಕೀಯ ಆರೈಕೆ, ಸಂಶೋಧನೆ, ಹಾಗೂ ಆಧುನಿಕ ತಂತ್ರಜ್ಞಾನಕ್ಕೆ ಹೆಸರುವಾಸಿಯಾಗಿದೆ.

    https://youtu.be/GAux59LoD7k?si=ezxndRDWVtMWh9os

    ವಿಶ್ವಮಾನ್ಯತೆ ಪಡೆದ ಆಂಕೋಲಾಜಿಸ್ಟ್‌ಗಳೆಂದು ಕರೆಯಲಾಗುವ ತಜ್ಞ ವೈದ್ಯರ ತಂಡ ಇದೆ. ಇವರು ಜಗತ್ತಿನ ಉನ್ನತ ಕ್ಯಾನ್ಸರ್ ಕೇಂದ್ರಗಳಿಂದ ನೇಮಕಗೊಂಡ ವೈದ್ಯರುಗಳಾಗಿದ್ದು, ಇಲ್ಲಿ ಶಸ್ತ್ರ ಚಿಕಿತ್ಸೆಯಿಂದ ಗುಣವಾಗುವ ಪ್ರಮಾಣ ಹೆಚ್ಚಿದೆ. ಈ ಕಾರಣಕ್ಕೆ ಹಲವು ದೇಶಗಳಿಂದ ಚಿಕಿತ್ಸೆಗೆ ಇಲ್ಲಿಗೆ ಆಗಮಿಸುತ್ತಿದ್ದಾರೆ. ಅತ್ಯಾಧುನಿಕ ಸುಧಾರಿತ ಲೇಸರ್ ತಂತ್ರಜ್ಞಾನ ಒಂದೇ ಸ್ಥಳದಲ್ಲಿ ಲಭ್ಯವಿದ್ದು ಪ್ರತಿಯೊಂದು ವಿಧದ ಕ್ಯಾನ್ಸರ್ ಚಿಕಿತ್ಸೆಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಈ ಕಾರಣಕ್ಕೆ ಶಿವರಾಜ್‌ಕುಮಾರ್ ಭರ್ತಿ ಒಂದು ತಿಂಗಳುಗಳ ಕಾಲ ಅಲ್ಲೇ ಚಿಕಿತ್ಸೆ ಪಡೆದು ಸ್ವದೇಶಕ್ಕೆ ಮರಳಲಿದ್ದಾರೆ.

  • ಕುಟುಂಬದ ಜೊತೆ ಗೋಶಾಲೆಗೆ ಧ್ರುವ ಸರ್ಜಾ ಭೇಟಿ

    ಕುಟುಂಬದ ಜೊತೆ ಗೋಶಾಲೆಗೆ ಧ್ರುವ ಸರ್ಜಾ ಭೇಟಿ

    ‘ಮಾರ್ಟಿನ್’ (Martin) ನಟ ಧ್ರುವ ಸರ್ಜಾ (Dhruva Sarja) ಅವರು ಸಿನಿಮಾ ಕೆಲಸಕ್ಕೆ ಬ್ರೇಕ್ ಸಿಕ್ಕ ಬೆನ್ನಲ್ಲೇ ಬೆಂಗಳೂರಿನ ಗೋಶಾಲೆಗೆ ಭೇಟಿ ನೀಡಿದ್ದಾರೆ. ಫ್ಯಾಮಿಲಿ ಜೊತೆ ಧ್ರುವ ಕಾಲ ಕಳೆದಿದ್ದಾರೆ. ಇದನ್ನೂ ಓದಿ:ಕಂದ ನನ್ನ ಒಡಲಲ್ಲಿ, ನಾನು ಅಮ್ಮನ ಮಡಿಲಲ್ಲಿ: ತಾಯ್ತನದ ಖುಷಿಯಲ್ಲಿ ಹರಿಪ್ರಿಯಾ

    ಬೆಂಗಳೂರಿನ ಗೋಶಾಲೆಯಲ್ಲಿ ಗೋವುಗಳ ಜೊತೆ ಧ್ರುವ ಕುಟುಂಬ ಸಮಯ ಕಳೆದಿದ್ದಾರೆ. ಗೋವುಗಳಿಗೆ ಮೇವು ತಿನಿಸಿ ಸಂಭ್ರಮಿಸಿದ್ದಾರೆ. ಇನ್ನೂ ಗೋಶಾಲೆಯ ಸೇವೆಗೆ ಧ್ರುವ ಸರ್ಜಾ ಕೈ ಜೋಡಿಸಿದ್ದಾರೆ. ತಿಂಗಳಿಗೆ ಎರಡು ಬಾರಿ ಗೋಶಾಲೆಗೆ ಧ್ರುವ ಕುಟುಂಬದ ಸದಸ್ಯರು ಭೇಟಿ ಕೊಡುತ್ತಾರೆ.

    ಅಂದಹಾಗೆ, `ಮಾರ್ಟಿನ್’ ರಿಲೀಸ್ ಬಳಿಕ ಡೈರೆಕ್ಟರ್ ಪ್ರೇಮ್ ನಿರ್ದೇಶನದ ‘ಕೆಡಿ’ (KD) ಸಿನಿಮಾಗಾಗಿ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಧ್ರುವಗೆ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ ನಾಯಕಿಯಾಗಿ ನಟಿಸಿದ್ದಾರೆ.

  • ಸುದೀಪ್ ತಾಯಿಗೆ ಅಂತಿಮ ನಮನ ಸಲ್ಲಿಸಿದ ಧ್ರುವ ಸರ್ಜಾ,ಗಣೇಶ್

    ಸುದೀಪ್ ತಾಯಿಗೆ ಅಂತಿಮ ನಮನ ಸಲ್ಲಿಸಿದ ಧ್ರುವ ಸರ್ಜಾ,ಗಣೇಶ್

    ಸ್ಯಾಂಡಲ್‌ವುಡ್ ನಟ ಸುದೀಪ್ (Sudeep) ತಾಯಿಯ ನಿಧನಕ್ಕೆ ಚಿತ್ರರಂಗದ ಮತ್ತು ರಾಜಕೀಯ ರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇದೀಗ ನಟ ಧ್ರುವ ಸರ್ಜಾ (Dhruva Sarja) ಮತ್ತು ಗಣೇಶ್ (Golden Star Ganesh) ಅವರು ಜೆಪಿ ನಗರದ ನಟನ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ:ಸುದೀಪ್ ತಾಯಿ ಅಂತಿಮ ದರ್ಶನದಲ್ಲಿ ಭಾಗಿಯಾದ ‘ಬಿಗ್ ಬಾಸ್’ ಸ್ಪರ್ಧಿಗಳು

    ಧ್ರುವ ಸರ್ಜಾ, ಗೋಲ್ಡನ್ ಸ್ಟಾರ್ ಗಣೇಶ್ ಅವರು ಸುದೀಪ್ ತಾಯಿ ಸರೋಜಾ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಅವರಷ್ಟೇ ಅಲ್ಲ, ಈ ವೇಳೆ ರಾಕ್‌ಲೈನ್ ವೆಂಕಟೇಶ್, ಉಮಾಪತಿ ಶ್ರೀನಿವಾಸ್, ಶ್ರೀನಗರ ಕಿಟ್ಟಿ, ಜೈ ಜಗದೀಶ್ ದಂಪತಿ, ಸುಂದರ ರಾಜ್, ಇಂದ್ರಜಿತ್ ಲಂಕೇಶ್, ಕೀರ್ತಿ ರಾಜ್, ಹೇಮಾ ಚೌಧರಿ ಸೇರಿದಂತೆ ಅನೇಕರು ಸರೋಜಾ ಅವರ ಅಂತಿಮ ದರ್ಶನ ಪಡೆದರು.

    ಅಂದಹಾಗೆ, ನ್ಯುಮೋನಿಯದಿಂದ ಬಳಲುತ್ತಿದ್ದ ಸುದೀಪ್ ತಾಯಿ ಇಂದು (ಅ.20) ಬೆಳಗ್ಗೆ ವಿಧಿವಶರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇನ್ನೂ ಇಂದು ಸಂಜೆ 7 ಗಂಟೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಸುದೀಪ್ ತಾಯಿಯ ಅಂತ್ಯಕ್ರಿಯೆ ನಡೆಯಲಿದೆ.

  • ‘ಆಪರೇಷನ್ ಡಿ’ ಚಿತ್ರದ ಟೀಸರ್ ರಿಲೀಸ್ : ಧ್ರುವ ಸರ್ಜಾ ಸಾಥ್

    ‘ಆಪರೇಷನ್ ಡಿ’ ಚಿತ್ರದ ಟೀಸರ್ ರಿಲೀಸ್ : ಧ್ರುವ ಸರ್ಜಾ ಸಾಥ್

    ಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅದ್ವಿತ ಫಿಲಂ ಫ್ಯಾಕ್ಟರಿ  ಹಾಗೂ ಮಸ್ಕ್ಯುಲರ್ ಗ್ರೂಪ್ ಲಾಂಛನದಲ್ಲಿ ಭಾರ್ಗವಿ ಮುರಳಿ ಹಾಗೂ ರಂಗನಾಥ್ ಬಿ ನಿರ್ಮಿಸಿರುವ ಹಾಗೂ ತಿರುಮಲೇಶ್ ವಿ ನಿರ್ದೇಶನದ “ಆಪರೇಶನ್ ಡಿ” ಚಿತ್ರದ ಟೀಸರ್ ಅನ್ನು ಬಿಡುಗಡೆ ಶುಭ ಹಾರೈಸಿದ್ದಾರೆ. ಇತ್ತೀಚೆಗೆ ನಡೆದ ಈ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ ತಿಳಿಸಿ, “ಆಪರೇಷನ್ ಡಿ” (Operation D) ಕುರಿತು ಮಾತನಾಡಿದರು.

    ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ ಎಂದು ಮಾತು ಆರಂಭಿಸಿದ ನಿರ್ದೇಶಕ ತಿರುಮಲೇಶ್ ವಿ, “ಆಪರೇಷನ್ ಡಿ” ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಮರ್ಡರ್ ಮಿಸ್ಟರಿ ಕಥೆ ಆಧರಿಸಿದ ಚಿತ್ರ. ಮರ್ಡರ್ ಮಿಸ್ಟರಿ ಆದರೂ, ಒಂದು ಕಡೆ ರಕ್ತ ಕಾಣುವುದಿಲ್ಲ ಹಾಗೂ ಆಕ್ಷನ್ ಸನ್ನಿವೇಶಗಳಿಲ್ಲ. 2018 – 19 ರಲ್ಲಿ ಹುಟ್ಟಿದ ಈ ಕಾಲ್ಪನಿಕ ಕಥೆ, 2022 ರಲ್ಲಿ ಸಿನಿಮಾ ರೂಪ ಪಡೆದುಕೊಂಡಿತ್ತು. ನನ್ನ ಕಥೆಯನ್ನು ಸಿನಿಮಾವಾಗಿಸಲು ಕುಟುಂಬದವರು ಹಾಗೂ ಮಿತ್ರರು ಸಹಕಾರಿಯಾದರು.

    ಸದ್ಯದಲ್ಲೇ ಸೆನ್ಸಾರ್ ಮುಂದೆ ಬರಲಿರುವ ಈ ಚಿತ್ರ ವರ್ಷದ ಕೊನೆಗೆ ತೆರೆಗೆ ಬರಲಿದೆ. ಇಂದು ಟೀಸರ್ ಬಿಡುಗಡೆಯಾಗಿದೆ. ಟೀಸರ್ ನಲ್ಲಿ ಬರುವ ನಾರಾಯಣ, ಲಕ್ಷ್ಮೀ ಹಾಗೂ ನಾರದ ಪಾತ್ರಗಳಿಗೆ  ನಿರ್ದೇಶಕ – ನಟ ಶ್ರೀನಿ, ನಟಿ ಸಂಗೀತಾ ಭಟ್ ಹಾಗೂ ಸುದರ್ಶನ್ ರಂಗಪ್ರಸಾದ್  ಧ್ವನಿ ನೀಡಿದ್ದಾರೆ. ಸಿರಿ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿರುವ ಟೀಸರ್ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಚಿತ್ರ ಚೆನ್ನಾಗಿ ಮೂಡಿಬರಲು ಚಿತ್ರತಂಡದವರ ಪಾಲು ಹೆಚ್ಚಿದೆ ಎಂದರು.‌

    ಚಿತ್ರದಲ್ಲಿ ನಾಲ್ಕು ಹಾಡುಗಳಿದೆ ಎಂದು ಸಂಗೀತ ನಿರ್ದೇಶಕಿ ವೇದಿಕ ತಿಳಿಸಿದರು. ಕೆಂಪಗಿರಿ ಹಾಗೂ ತಿರುಮಲೇಶ್ ತಲಾ ಒಂದು ಹಾಡು ಬರೆದಿದ್ದಾರೆ ಹಾಗೂ ಎರಡು ಹಾಡನ್ನು ವೇದಿಕ ಅವರೆ ಬರೆದಿದ್ದಾರೆ, ಭಾರ್ಗವಿ ಮುರಳಿ,  ರಂಗನಾಥ್  ಹಾಗೂ ಸುರೇಶ ಅವರು ನಿರ್ಮಾಣದ ಬಗ್ಗೆ ಮಾಹಿತಿ ನೀಡಿದರು. ಚಿತ್ರದಲ್ಲಿ ನಟಿಸಿರುವ ರುದ್ರೇಶ್ ಬೂದನೂರು, ಸುಹಾಸ್ ಆತ್ರೇಯ, ವಿನೋದ್ ದೇವ್, ಸ್ನೇಹ ಭಟ್, ಇಂಚರ ಭರತ್ ರಾಜ್, ಮಹೇಶ್ ಎಸ್ ಕಲಿ, ಶ್ರೀಧರ್, ಪೃಥ್ವಿ ಬನವಾಸಿ, ಶಿವಾನಂದ್,  ಸಂಚಯ ನಾಗರಾಜ್, ವೆಂಕಟಾಚಲ,  ಶಿವಮಂಜು,  ಕ್ರೇಜಿ ನಾಗರಾಜ್,  ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಸಂಕಲನಕಾರ ವಿಕ್ರಮ್ ಶ್ರೀಧರ್, ಛಾಯಾಗ್ರಾಹಕ ಕಾರ್ತಿಕ್ ಪ್ರಸಾದ್, ನೃತ್ಯನಿರ್ದೇಶಕ  ಜೈಹರಿಪ್ರಸಾದ್,  BGM ನೀಡಿರುವ ರಾಹುಲ್ ಅರ್ಜ ಕಲಾ ಸೇರಿದಂತೆ ಅನೇಕ ತಂತ್ರಜ್ಞರು ಪತ್ರಿಕಾಗೋಷ್ಠಿಯಲ್ಲಿದ್ದರು.

  • ಮೊದಲ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಧ್ರುವ ಸರ್ಜಾ ಪುತ್ರ

    ಮೊದಲ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಧ್ರುವ ಸರ್ಜಾ ಪುತ್ರ

    ‘ಮಾರ್ಟಿನ್’ ನಟ ಧ್ರುವ ಸರ್ಜಾ (Dhruva Sarja) ಅವರು ಮಗ ಹಯಗ್ರೀವ ಹುಟ್ಟುಹಬ್ಬವನ್ನು (Birthday) ಅದ್ಧೂರಿಯಾಗಿ ಆಚರಿಸಿದ್ದಾರೆ. ಆಪ್ತರ ಸಮ್ಮುಖದಲ್ಲಿ ಮಗನ ಮೊದಲ ವರ್ಷದ ಬರ್ತ್‌ಡೇ ಸೆಲೆಬ್ರೆಟ್ ಮಾಡಿದ್ದಾರೆ. ಇದನ್ನೂ ಓದಿ:ಜಾನಿ ಮಾಸ್ಟರ್ ಬಂಧನ: ಠಾಣೆ ಮುಂದೆ ಪತ್ನಿ ಹೈಡ್ರಾಮಾ

    ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಎರಡನೇ ಮಗ ಹಯಗ್ರೀವ (Hayagreeva) ಹುಟ್ಟುಹಬ್ಬವನ್ನು ನಿನ್ನೆ (ಸೆ.18) ಆಚರಿಸಿದ್ದಾರೆ. ಲೈಟ್ ಬಣ್ಣದ ಧಿರಿಸಿನಲ್ಲಿ ಹಯಗ್ರೀವ ಮುದ್ದಾಗಿ ಕಾಣಿಸಿಕೊಂಡಿದ್ದಾನೆ. ಈ ಕಾರ್ಯಕ್ರಮಕ್ಕೆ ನಟಿ ಮೇಘನಾ ರಾಜ್, ಅರ್ಜುನ್ ಸರ್ಜಾ ಕುಟುಂಬ ಮತ್ತು ‘ಮಜಾ ಟಾಕೀಸ್’ ಪವನ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

    ಇನ್ನೂ ಸಿನಿಮಾ ವಿಚಾರಕ್ಕೆ ಬರೋದಾದ್ರೆ ‘ಕೆಡಿ’ ಮತ್ತು ‘ಮಾರ್ಟಿನ್’ ಸಿನಿಮಾ ರಿಲೀಸ್‌ಗೆ ಸಿದ್ಧವಾಗಿದೆ. ಮೊದಲ ಸಿನಿಮಾ ಅದ್ಧೂರಿ ಚಿತ್ರದಿಂದ ಬ್ಯಾಕ್ ಟು ಬ್ಯಾಕ್ ಹಿಟ್ ಕೊಟ್ಟಿರುವ ಧ್ರುವ ನಟಿಸಿರುವ ಮುಂಬರುವ ಸಿನಿಮಾಗಳ ಮೇಲೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ.