Tag: dhruva sarja

  • ಕೊನೆಗೂ ಶೂಟಿಂಗ್ ಮುಗಿಸಿದ ಧ್ರುವ ನಟನೆಯ ಮಾರ್ಟಿನ್

    ಕೊನೆಗೂ ಶೂಟಿಂಗ್ ಮುಗಿಸಿದ ಧ್ರುವ ನಟನೆಯ ಮಾರ್ಟಿನ್

    ಮಾರ್ಟಿನ್ ಸಿನಿಮಾದ ಕಂಪ್ಲೀಟ್ ಶೂಟಿಂಗ್ ಅನ್ನು ಕೊನೆಗೂ ಮುಗಿಸಿದ್ದಾರೆ ನಿರ್ದೇಶಕರು. ಹಲವು ತಿಂಗಳಿಂದ ಈ ಚಿತ್ರದ ಶೂಟಿಂಗ್ ನಡೆಯುತ್ತಲೇ ಇತ್ತು. ಇದೀಗ ಬದಾಮಿಯಲ್ಲಿ ಕೊನೆಯ ಹಂತದ ಚಿತ್ರೀಕರಣ ಮಾಡುವ ಮೂಲಕ ಕುಂಬಳಕಾಯಿ ಒಡೆಯಲಾಗಿದೆ. ಧ್ರುವ ಸರ್ಜಾ (Dhruva Sarja) ನಟನೆಯ ಮಾರ್ಟಿನ್ ಸಿನಿಮಾ ಎಲ್ಲಿಗೆ ಬಂತು ಎಂದು ಅವರ ಅಭಿಮಾನಿಗಳು ಅನೇಕ ಸಲ ಕೇಳಿದ್ದಿದೆ. ಅದಕ್ಕೀಗ ಉತ್ತರ ಸಿಕ್ಕಿದೆ.

    ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಧ್ರುವ ಸರ್ಜಾ ನಟನೆಯ ಮಾರ್ಟಿನ್ (Martin) ಸಿನಿಮಾ ತೆರೆಗೆ ಬರಬೇಕಿತ್ತು. ಕೆಲ ತಿಂಗಳ ಹಿಂದೆ ಪ್ಯಾನ್ ಇಂಡಿಯಾ ಪ್ರೆಸ್ ಮೀಟ್ ಮಾಡಿ, ಮಾರ್ಟಿನ್ ಚಿತ್ರದ ಕೆಲವು ಅಪ್ ಡೇಟ್ ನೀಡಿತ್ತು ಚಿತ್ರತಂಡ. ಈಗ ಮತ್ತೆ ಅದರ ಅಪ್ ಡೇಟ್ ಕೇಳುತ್ತಿದ್ದಾರೆ ಫ್ಯಾನ್ಸ್. ಯಾವಾಗ ಸಿನಿಮಾ ಬಿಡುಗಡೆ ಮಾಡೋದು ಎನ್ನುವ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.

    ಈ ನಡುವೆ ಧ್ರುವ ಸರ್ಜಾ ನಟನೆಯ ಕೆಡಿ ಸಿನಿಮಾದ ಶೂಟಿಂಗ್ (Shooting) ಕೂಡ ಮುಗಿದಿದೆ. ಇದೇ ವರ್ಷ ರಿಲೀಸ್ ಮಾಡುವುದಾಗಿ ನಿರ್ದೇಶಕ ಪ್ರೇಮ್ ಘೋಷಣೆ ಮಾಡಿದ್ದಾರೆ. ಅದಕ್ಕೆ ಸಿದ್ಧತೆಯನ್ನೂ ಮಾಡಿಕೊಳ್ಳುತ್ತಿದ್ದಾರೆ. ಮೊದಲು ಯಾವ ಸಿನಿಮಾ ಬರಲಿದೆ ಎನ್ನುವ ಪ್ರಶ್ನೆ ಮೂಡಿದೆ.

     

    ಹೊಸ ವರ್ಷದ ದಿನದಂದು ಕೆಡಿ ಸಿನಿಮಾ ಇದೇ ವರ್ಷ ರಿಲೀಸ್ ಆಗಲಿದೆ ಎಂದು ಘೋಷಣೆ ಮಾಡುತ್ತಿದ್ದಂತೆಯೇ ಮಾರ್ಟಿನ್ ಬಗ್ಗೆ ಸಾಕಷ್ಟು ಅನುಮಾನಗಳು ಮೂಡಿವೆ. ಮಾರ್ಟಿನ್ ಗಿಂತ ಮುಂಚೆ ಕೆಡಿ ಸಿನಿಮಾ ರಿಲೀಸ್ ಆಗಲಿದೆ ಎನ್ನುವ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಕೆಡಿ ಸಿನಿಮಾದ ಚಿತ್ರೀಕರಣ ಪೂರ್ಣವಾಗಿದೆ. ಮಾರ್ಟಿನ್ ರಿಲೀಸ್ ಬಗ್ಗೆ ಚಿತ್ರತಂಡವೇ ಮಾಹಿತಿ ನೀಡಬೇಕಿದೆ.

  • ಶ್ರೀನಗರದಿಂದ ಶೂಟಿಂಗ್ ಮುಗಿಸಿ, ಬೆಂಗಳೂರಿಗೆ ವಾಪಸ್ಸಾದ ಧ್ರುವ ಸರ್ಜಾ

    ಶ್ರೀನಗರದಿಂದ ಶೂಟಿಂಗ್ ಮುಗಿಸಿ, ಬೆಂಗಳೂರಿಗೆ ವಾಪಸ್ಸಾದ ಧ್ರುವ ಸರ್ಜಾ

    ಮಾರ್ಟಿನ್ ಸಿನಿಮಾದ ಶೂಟಿಂಗ್ ಗಾಗಿ ಶ್ರೀನಗರಕ್ಕೆ (Srinagar) ಪ್ರಯಾಣ ಬೆಳೆಸಿದ್ದ ನಟ ಧ್ರುವ ಸರ್ಜಾ (Dhruva Sarja) ಮತ್ತು ಟೀಮ್ ಬೆಂಗಳೂರಿಗೆ ವಾಪಸ್ಸಾಗಿದೆ. ವಾರಗಳ ಹಿಂದೆಯಷ್ಟೇ ವಿಮಾನ ಏರಿದ್ದ ಮಾರ್ಟಿನ್ ಚಿತ್ರ ತಂಡ, (Martin Movie Team) ವಿಮಾನ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು.

    ಅಂತಿಮ ಚಿತ್ರೀಕರಣದಲ್ಲಿದ್ದ ಮಾರ್ಟಿನ್ ಚಿತ್ರತಂಡವು ಕಳೆದ ಸೋಮವಾರ ಸಂಜೆ ಸಾಂಗ್ ಶೂಟ್ಗಾಗಿ ದೆಹಲಿ ವಿಮಾನ ನಿಲ್ದಾಣದಿಂದ ಶ್ರೀನಗರ ವಿಮಾನ ನಿಲ್ದಾಣಕ್ಕೆಗೆ ಇಂಡಿಗೋ ವಿಮಾನದಲ್ಲಿ (Indigo Flight) ತೆರಳುತ್ತಿತ್ತು. ಸಂದರ್ಭದಲ್ಲಿ ಹವಾಮಾನ ವೈಪರೀತ್ಯದಿಂದ ವಿಮಾನವನ್ನು ಲ್ಯಾಂಡಿಂಗ್ ಮಾಡಲು ಸಾಧ್ಯವಾಗದೇ ಪೈಲಟ್ ಪರದಾಡಿದ್ದರು.

    ಸೀಟ್ಗಳು ನಡುಗಿದೆ, ಪ್ರಯಾಣಿಕರು ಗಾಬರಿ ಆಗಿದ್ದರು. ಕೊನೆಗೆ ಪೈಲಟ್ ಸಮಯ ಪ್ರಜ್ಞೆಯಿಂದ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿತ್ತು. ಘಟನೆಯ ಬಳಿಕ ಮಾರ್ಟಿನ್ ಚಿತ್ರತಂಡವು ವಿಮಾನ ಇಳಿಯುವ ಸಂದರ್ಭದಲ್ಲಿಯೇ ವೀಡಿಯೋ ಮಾಡಿಕೊಂಡು ವಿಮಾನದಲ್ಲಿ ಎದುರಾಗಿದ್ದ ಕೆಟ್ಟ ಸಂದರ್ಭವನ್ನು ವಿವರಿಸಿ ಮರು ಜನ್ಮ ಸಿಕ್ಕಿದೆ ಎಂದಿತ್ತು. ನನ್ನ ಜೀವಮಾನದಲ್ಲಿಯೇ ವಿಮಾನದಲ್ಲಿ ಮೊದಲ ಬಾರಿ ಅತ್ಯಂತ ಕೆಟ್ಟ ಅನುಭವವಾಯಿತು. ಸದ್ಯ ನಾವು ಸುರಕ್ಷಿತವಾಗಿದ್ದೇವೆ. ಥ್ಯಾಂಕ್ ಗಾಡ್, ಜೈ ಆಂಜನೇಯ ಎಂದು ಧ್ರುವ ಸರ್ಜಾ ಹೇಳಿದ್ದರು.

     

    ವಿಡಿಯೋದಲ್ಲಿ ಚಿತ್ರದ ನಿರ್ದೇಶಕ ಪಿ ಅರ್ಜುನ್, ನಾಯಕ ನಟಿ ಅನ್ವೇಶಿ ಜೈನ್, ನೃತ್ಯ ಸಂಯೋಜಕ ಇಮ್ರಾನ್ ಸರ್ಧಾರಿಯಾ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ಇದ್ದರು. ಬಗ್ಗೆ ನಟ ಧ್ರುವ ಸರ್ಜಾ ಸಹ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದರು. ಮೊದಲ ಬಾರಿಗೆ ಸಾವನ್ನು ಎದುರಿಸಿ ಮತ್ತೆ ಜೀವ ಸಿಕ್ಕಂತಾಗಿದೆ. ಇದು ನನ್ನ ತಂದೆ ತಾಯಿಯರ, ನನ್ನ ವಿಐಪಿಗಳ ಮತ್ತು ನನ್ನ ದೇವರು ಚಿರು ಅಣ್ಣನ ಅವರ ಸಂಪೂರ್ಣ ಆಶೀರ್ವಾದದ ಫಲ. ಇದು ಪುನರ್ಜನ್ಮವಾಗಿದೆ. ನಮಗೆಲ್ಲರಿಗೂ ಜೀವನವನ್ನು ಪೂರ್ಣವಾಗಿ ಬದುಕಲು ಅವಕಾಶ ಮತ್ತೆ ಸಿಕ್ಕಿದೆ. ಜೈ ಆಂಜನೇಯ ಎಂದು ಧ್ರುವ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ಪೋಸ್ಟ್ ಮಾಡಿದ್ದರು.

  • ವಿಮಾನ ದುರಂತದಿಂದ ಧ್ರುವ ಸೇಫ್‌- Thank God ಅಂದ್ರು ಮೇಘನಾ ರಾಜ್‌

    ವಿಮಾನ ದುರಂತದಿಂದ ಧ್ರುವ ಸೇಫ್‌- Thank God ಅಂದ್ರು ಮೇಘನಾ ರಾಜ್‌

    ಟ ಧ್ರುವ ಸರ್ಜಾ (Dhruva Sarja) ಅವರು ವಿಮಾನ ದುರಂತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ಬೆನ್ನಲ್ಲೇ ನಟಿ ಮೇಘನಾ ರಾಜ್ ಸರ್ಜಾ (Meghana Raj Sarja) ಪ್ರತಿಕ್ರಿಯೆ ನೀಡಿದ್ದಾರೆ. ಧ್ರುವ ಸರ್ಜಾ ಸೇಫ್ ಆಗಿದ್ದಾರೆ ಎಂದು ನಟಿ ತಿಳಿಸಿದ್ದಾರೆ. ಇದನ್ನೂ ಓದಿ:ಟಾಪ್‌ಲೆಸ್ ಅವತಾರದಲ್ಲಿ ಸೋನಾಲಿ- ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ ನಟಿ

    ಧ್ರುವ ಸರ್ಜಾ, ಎಪಿ ಅರ್ಜುನ್, ನಾಯಕಿ ವೈಭವಿ ಸೇರಿದಂತೆ ‘ಮಾರ್ಟಿನ್’ (Martin Film) ಚಿತ್ರ ತಂಡವಿದ್ದ ವಿಮಾನವು ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಸದ್ಯ ಚಿತ್ರತಂಡ ಸೇರಿದಂತೆ ವಿಮಾನ ಪ್ರಯಾಣಿಕರೆಲ್ಲಾ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದಾರೆ. ಈ ಘಟನೆ ಸಂಭವಿಸಿದ ಬೆನ್ನಲ್ಲೇ ಧ್ರುವ ಕುರಿತು ಅಭಿಮಾನಿಗಳಿಗೆ ಅಪ್‌ಡೇಟ್ ನೀಡಿದ್ದಾರೆ. ಈಗಷ್ಟೇ ಧ್ರುವ ಬಳಿ ಮಾತನಾಡಿದೆ. ಅವರು ಸೇಫ್ ಆಗಿದ್ದಾರೆ. ಮೇಲಿರುವ ದೈವಿಕ ಶಕ್ತಿಗಳಿಗೆ ಧನ್ಯವಾದಗಳು ಎಂದು ಮೇಘನಾ ರಾಜ್‌ ತಿಳಿಸಿದ್ದಾರೆ. ನಟಿಯ ಮಾತು ಕೇಳಿ ಫ್ಯಾನ್ಸ್‌ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

    ಅಂತಿಮ ಚಿತ್ರೀಕರಣದಲ್ಲಿದ್ದ ‘ಮಾರ್ಟಿನ್’ ಚಿತ್ರತಂಡವು ಸೋಮವಾರ (ಫೆ.19) ಸಂಜೆ ಸಾಂಗ್ ಶೂಟಿಂಗ್‌ಗಾಗಿ ದೆಹಲಿ ವಿಮಾನ ನಿಲ್ದಾಣದಿಂದ ಶ್ರೀನಗರ ವಿಮಾನ ನಿಲ್ದಾಣಕ್ಕೆಗೆ ಇಂಡಿಗೋ ವಿಮಾನದಲ್ಲಿ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಹವಾಮಾನ ವೈಪರೀತ್ಯದಿಂದ ವಿಮಾನವನ್ನು ಲ್ಯಾಂಡಿಂಗ್ ಮಾಡಲು ಸಾಧ್ಯವಾಗದೇ ಪೈಲಟ್ ಪರದಾಡಿದ್ದಾರೆ. ಇದನ್ನೂ ಓದಿ:ವಿಮಾನ ದುರಂತದಿಂದ ಕೂದಲೆಳೆ ಅಂತರದಲ್ಲಿ ಧ್ರುವ ಸರ್ಜಾ & ಮಾರ್ಟಿನ್ ಟೀಂ ಪಾರು!

     

    View this post on Instagram

     

    A post shared by Dhruva Sarja (@dhruva_sarjaa)

    ಸೀಟ್‌ಗಳು ನಡುಗಿದೆ, ಪ್ರಯಾಣಿಕರು ಗಾಬರಿ ಆಗಿದ್ದಾರೆ. ಕೊನೆಗೆ ಪೈಲಟ್‌ನ ಸಮಯ ಪ್ರಜ್ಞೆಯಿಂದ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಘಟನೆಯ ಬಳಿಕ ಮಾರ್ಟಿನ್ ಚಿತ್ರತಂಡವು ವಿಮಾನ ಇಳಿಯುವ ಸಂದರ್ಭದಲ್ಲಿಯೇ ವೀಡಿಯೋ ಮಾಡಿಕೊಂಡು ವಿಮಾನದಲ್ಲಿ ಎದುರಾಗಿದ್ದ ಕೆಟ್ಟ ಸಂದರ್ಭವನ್ನು ವಿವರಿಸಿ ಮರು ಜನ್ಮ ಸಿಕ್ಕಿದೆ ಎಂದಿದೆ. ನನ್ನ ಜೀವಮಾನದಲ್ಲಿಯೇ ವಿಮಾನದಲ್ಲಿ ಮೊದಲ ಬಾರಿ ಅತ್ಯಂತ ಕೆಟ್ಟ ಅನುಭವವಾಯಿತು. ಸದ್ಯ ನಾವು ಸುರಕ್ಷಿತವಾಗಿದ್ದೇವೆ. ಥ್ಯಾಂಕ್ ಗಾಡ್, ಜೈ ಆಂಜನೇಯ ಎಂದು ಧ್ರುವ ಸರ್ಜಾ ಹೇಳಿದ್ದು, ಇದಕ್ಕೆ ಮಾರ್ಟಿನ್ ತಂಡವೂ ದನಿಗೂಡಿಸಿದೆ.

    ಈ ವಿಡಿಯೋದಲ್ಲಿ ಚಿತ್ರದ ನಿರ್ದೇಶಕ ಎ ಪಿ ಅರ್ಜುನ್, ನಾಯಕ ನಟಿ ಅನ್ವೇಶಿ ಜೈನ್, ನೃತ್ಯ ಸಂಯೋಜಕ ಇಮ್ರಾನ್ ಸರ್ಧಾರಿಯಾ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ಇದ್ದಾರೆ. ಈ ಬಗ್ಗೆ ನಟ ಧ್ರುವ ಸರ್ಜಾ ಸಹ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಮೊದಲ ಬಾರಿಗೆ ಸಾವನ್ನು ಎದುರಿಸಿ ಮತ್ತೆ ಜೀವ ಸಿಕ್ಕಂತಾಗಿದೆ. ಇದು ನನ್ನ ತಂದೆ ತಾಯಿಯರ, ನನ್ನ ವಿಐಪಿಗಳ ಮತ್ತು ನನ್ನ ದೇವರು ಚಿರು ಅಣ್ಣನ ಅವರ ಸಂಪೂರ್ಣ ಆಶೀರ್ವಾದದ ಫಲ. ಇದು ಪುನರ್ಜನ್ಮವಾಗಿದೆ. ನಮಗೆಲ್ಲರಿಗೂ ಜೀವನವನ್ನು ಪೂರ್ಣವಾಗಿ ಬದುಕಲು ಅವಕಾಶ ಮತ್ತೆ ಸಿಕ್ಕಿದೆ. ಜೈ ಆಂಜನೇಯ ಎಂದು ಧ್ರುವ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ಪೋಸ್ಟ್ ಮಾಡಿದ್ದಾರೆ.

  • ವಿಮಾನ ದುರಂತದಿಂದ ಕೂದಲೆಳೆ ಅಂತರದಲ್ಲಿ ಧ್ರುವ ಸರ್ಜಾ & ಮಾರ್ಟಿನ್ ಟೀಂ ಪಾರು!

    ವಿಮಾನ ದುರಂತದಿಂದ ಕೂದಲೆಳೆ ಅಂತರದಲ್ಲಿ ಧ್ರುವ ಸರ್ಜಾ & ಮಾರ್ಟಿನ್ ಟೀಂ ಪಾರು!

    – ಪುನರ್ಜನ್ಮ ಎಂದು ನಟ ಪೋಸ್ಟ್

    ಸ್ಯಾಂಡಲ್‍ವುಡ್ ನಾಯಕ ನಟ ಧ್ರುವ ಸರ್ಜಾ (Dhruva Sarja) ಸೇರಿದಂತೆ ಮಾರ್ಟಿನ್ ಚಿತ್ರ ತಂಡವಿದ್ದ (Martin Movie Team) ವಿಮಾನವು ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಸದ್ಯ ಚಿತ್ರತಂಡ ಸೇರಿದಂತೆ ವಿಮಾನ ಪ್ರಯಾಣಿಕರೆಲ್ಲಾ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದಾರೆ.

    ಅಂತಿಮ ಚಿತ್ರೀಕರಣದಲ್ಲಿದ್ದ ಮಾರ್ಟಿನ್ ಚಿತ್ರತಂಡವು ಸೋಮವಾರ ಸಂಜೆ ಸಾಂಗ್ ಶೂಟ್‍ಗಾಗಿ ದೆಹಲಿ ವಿಮಾನ ನಿಲ್ದಾಣದಿಂದ ಶ್ರೀನಗರ ವಿಮಾನ ನಿಲ್ದಾಣಕ್ಕೆಗೆ ಇಂಡಿಗೋ ವಿಮಾನದಲ್ಲಿ (Indigo Flight) ತೆರಳುತ್ತಿತ್ತು. ಈ ಸಂದರ್ಭದಲ್ಲಿ ಹವಾಮಾನ ವೈಪರೀತ್ಯದಿಂದ ವಿಮಾನವನ್ನು ಲ್ಯಾಂಡಿಂಗ್ ಮಾಡಲು ಸಾಧ್ಯವಾಗದೇ ಪೈಲಟ್ ಪರದಾಡಿದ್ದಾರೆ. ಇದನ್ನೂ ಓದಿ: ನಟಿ ರಶ್ಮಿಕಾ ಸಂಚರಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ

    ಸೀಟ್‍ಗಳು ನಡುಗಿದೆ, ಪ್ರಯಾಣಿಕರು ಗಾಬರಿ ಆಗಿದ್ದಾರೆ. ಕೊನೆಗೆ ಪೈಲಟ್‍ನ ಸಮಯ ಪ್ರಜ್ಞೆಯಿಂದ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಘಟನೆಯ ಬಳಿಕ ಮಾರ್ಟಿನ್ ಚಿತ್ರತಂಡವು ವಿಮಾನ ಇಳಿಯುವ ಸಂದರ್ಭದಲ್ಲಿಯೇ ವೀಡಿಯೋ ಮಾಡಿಕೊಂಡು ವಿಮಾನದಲ್ಲಿ ಎದುರಾಗಿದ್ದ ಕೆಟ್ಟ ಸಂದರ್ಭವನ್ನು ವಿವರಿಸಿ ಮರು ಜನ್ಮ ಸಿಕ್ಕಿದೆ ಎಂದಿದೆ. ನನ್ನ ಜೀವಮಾನದಲ್ಲಿಯೇ ವಿಮಾನದಲ್ಲಿ ಮೊದಲ ಬಾರಿ ಅತ್ಯಂತ ಕೆಟ್ಟ ಅನುಭವವಾಯಿತು. ಸದ್ಯ ನಾವು ಸುರಕ್ಷಿತವಾಗಿದ್ದೇವೆ. ಥ್ಯಾಂಕ್ ಗಾಡ್, ಜೈ ಆಂಜನೇಯ ಎಂದು ಧ್ರುವ ಸರ್ಜಾ ಹೇಳಿದ್ದು, ಇದಕ್ಕೆ ಮಾರ್ಟಿನ್‌ ತಂಡವೂ ದನಿಗೂಡಿಸಿದೆ.

     

    View this post on Instagram

     

    A post shared by Dhruva Sarja (@dhruva_sarjaa)

    ಈ ವಿಡಿಯೋದಲ್ಲಿ ಚಿತ್ರದ ನಿರ್ದೇಶಕ ಎ ಪಿ ಅರ್ಜುನ್, ನಾಯಕ ನಟಿ ಅನ್ವೇಶಿ ಜೈನ್, ನೃತ್ಯ ಸಂಯೋಜಕ ಇಮ್ರಾನ್ ಸರ್ಧಾರಿಯಾ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ಇದ್ದಾರೆ. ಈ ಬಗ್ಗೆ ನಟ ಧ್ರುವ ಸರ್ಜಾ ಸಹ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಮೊದಲ ಬಾರಿಗೆ ಸಾವನ್ನು ಎದುರಿಸಿ ಮತ್ತೆ ಜೀವ ಸಿಕ್ಕಂತಾಗಿದೆ. ಇದು ನನ್ನ ತಂದೆ ತಾಯಿಯರ, ನನ್ನ ವಿಐಪಿಗಳ ಮತ್ತು ನನ್ನ ದೇವರು ಚಿರು ಅಣ್ಣನ ಅವರ ಸಂಪೂರ್ಣ ಆಶೀರ್ವಾದದ ಫಲ. ಇದು ಪುನರ್ಜನ್ಮವಾಗಿದೆ. ನಮಗೆಲ್ಲರಿಗೂ ಜೀವನವನ್ನು ಪೂರ್ಣವಾಗಿ ಬದುಕಲು ಅವಕಾಶ ಮತ್ತೆ ಸಿಕ್ಕಿದೆ. ಜೈ ಆಂಜನೇಯ ಎಂದು ಧ್ರುವ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ಪೋಸ್ಟ್ ಮಾಡಿದ್ದಾರೆ.

  • ಆಪ್ರೋ ಲುಕ್ ನಲ್ಲಿ ಧ್ರುವ ಸರ್ಜಾ: ಗೋವಾದಲ್ಲಿ ಕಾಣಿಸಿಕೊಂಡ ನಟ

    ಆಪ್ರೋ ಲುಕ್ ನಲ್ಲಿ ಧ್ರುವ ಸರ್ಜಾ: ಗೋವಾದಲ್ಲಿ ಕಾಣಿಸಿಕೊಂಡ ನಟ

    ಮಾರ್ಟಿನ್ ಚಿತ್ರಕ್ಕಾಗಿ ಹೊಸ ಅವತಾರ ಎತ್ತಿದ್ದಾರೆ ನಟ ಧ್ರುವ ಸರ್ಜಾ (Dhruva Sarja). ಮಾರ್ಟಿನ್ ಸಿನಿಮಾದ ಹಾಡಿನ ಚಿತ್ರೀಕರಣ ಗೋವಾದಲ್ಲಿ (Goa) ನಡೆಯುತ್ತಿದ್ದು, ಈ ಹಾಡಿಗಾಗಿ ಧ್ರುವ, ಆಪ್ರೋ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.  ಆ ಫೋಟೋವನ್ನು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆ ವಿಚಿತ್ರ ವೇಷ ಕಂಡು ಅನೇಕರು ಅಚ್ಚರಿ ವ್ಯಕ್ತ ಪಡಿಸಿದ್ದಾರೆ.

    ಮಾರ್ಟಿನ್ ಸಿನಿಮಾದ ಶೂಟಿಂಗ್ ಎಲ್ಲಿಗೆ ಬಂತು ಎಂದು ಅವರ ಅಭಿಮಾನಿಗಳು ಅನೇಕ ಸಲ ಕೇಳಿದ್ದಿದೆ. ಅದಕ್ಕೀಗ ಉತ್ತರ ಸಿಕ್ಕಿದೆ. ಕೊನೆಯ ಹಂತದ ಚಿತ್ರೀಕರಣ (Shooting) ಸದ್ಯ ನಡೆಯುತ್ತಿದ್ದು, ಧ್ರುವ ಸರ್ಜಾ ಭಾಗಿಯಾಗಿದ್ದಾರೆ. ಕೆಲ ದಿನಗಳ ಕಾಲ ಚಿತ್ರೀಕರಣ ನಡೆಯಲಿದ್ದು, ಅಲ್ಲಿಗೆ ಕುಂಬಳಕಾಯಿ ಒಡೆಯಲಾಗುತ್ತದೆ.

    ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಧ್ರುವ ಸರ್ಜಾ ನಟನೆಯ ಮಾರ್ಟಿನ್ (Martin) ಸಿನಿಮಾ ತೆರೆಗೆ ಬರಬೇಕಿತ್ತು. ಕೆಲ ತಿಂಗಳ ಹಿಂದೆ ಪ್ಯಾನ್ ಇಂಡಿಯಾ ಪ್ರೆಸ್ ಮೀಟ್ ಮಾಡಿ, ಮಾರ್ಟಿನ್ ಚಿತ್ರದ ಕೆಲವು ಅಪ್ ಡೇಟ್ ನೀಡಿತ್ತು ಚಿತ್ರತಂಡ. ಈಗ ಮತ್ತೆ ಅದರ ಅಪ್ ಡೇಟ್ ಕೇಳುತ್ತಿದ್ದರು ಫ್ಯಾನ್ಸ್. ಅದಕ್ಕೀಗ ಉತ್ತರ ಸಿಕ್ಕಿದೆ.

     

    ಈ ನಡುವೆ ಧ್ರುವ ಸರ್ಜಾ ನಟನೆಯ ಕೆಡಿ ಸಿನಿಮಾದ ಶೂಟಿಂಗ್ ಕೂಡ ಮುಗಿದಿದೆ. ಇದೇ ವರ್ಷ ರಿಲೀಸ್ ಮಾಡುವುದಾಗಿ ನಿರ್ದೇಶಕ ಪ್ರೇಮ್ ಘೋಷಣೆ ಮಾಡಿದ್ದಾರೆ. ಹೊಸ ವರ್ಷದ ದಿನದಂದು ಕೆಡಿ ಸಿನಿಮಾ ಇದೇ ವರ್ಷ ರಿಲೀಸ್ ಆಗಲಿದೆ ಎಂದು ಘೋಷಣೆ ಮಾಡುತ್ತಿದ್ದಂತೆಯೇ ಮಾರ್ಟಿನ್ ಬಗ್ಗೆ ಸಾಕಷ್ಟು ಅನುಮಾನಗಳು ಮೂಡಿವೆ. ಮಾರ್ಟಿನ್ ಗಿಂತ ಮುಂಚೆ ಕೆಡಿ ಸಿನಿಮಾ ರಿಲೀಸ್ ಆಗಲಿದೆ ಎನ್ನುವ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಕೆಡಿ ಸಿನಿಮಾದ ಚಿತ್ರೀಕರಣ ಪೂರ್ಣವಾಗಿದೆ.

  • ಮಾರ್ಟಿನ್: ಅಂತಿಮ ಹಂತದ ಚಿತ್ರೀಕರಣದಲ್ಲಿ ಧ್ರುವ ಸರ್ಜಾ

    ಮಾರ್ಟಿನ್: ಅಂತಿಮ ಹಂತದ ಚಿತ್ರೀಕರಣದಲ್ಲಿ ಧ್ರುವ ಸರ್ಜಾ

    ಧ್ರುವ ಸರ್ಜಾ (Dhruva Sarja) ನಟನೆಯ ಮಾರ್ಟಿನ್ ಸಿನಿಮಾ ಎಲ್ಲಿಗೆ ಬಂತು ಎಂದು ಅವರ ಅಭಿಮಾನಿಗಳು ಅನೇಕ ಸಲ ಕೇಳಿದ್ದಿದೆ. ಅದಕ್ಕೀಗ ಉತ್ತರ ಸಿಕ್ಕಿದೆ. ಕೊನೆಯ ಹಂತದ ಚಿತ್ರೀಕರಣ (Shooting) ಸದ್ಯ ನಡೆಯುತ್ತಿದ್ದು, ಧ್ರುವ ಸರ್ಜಾ ಭಾಗಿಯಾಗಿದ್ದಾರೆ. ಕೆಲ ದಿನಗಳ ಕಾಲ ಚಿತ್ರೀಕರಣ ನಡೆಯಲಿದ್ದು, ಅಲ್ಲಿಗೆ ಕುಂಬಳಕಾಯಿ ಒಡೆಯಲಾಗುತ್ತದೆ.

    ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಧ್ರುವ ಸರ್ಜಾ ನಟನೆಯ ಮಾರ್ಟಿನ್ (Martin) ಸಿನಿಮಾ ತೆರೆಗೆ ಬರಬೇಕಿತ್ತು. ಕೆಲ ತಿಂಗಳ ಹಿಂದೆ ಪ್ಯಾನ್ ಇಂಡಿಯಾ ಪ್ರೆಸ್ ಮೀಟ್ ಮಾಡಿ, ಮಾರ್ಟಿನ್ ಚಿತ್ರದ ಕೆಲವು ಅಪ್ ಡೇಟ್ ನೀಡಿತ್ತು ಚಿತ್ರತಂಡ. ಈಗ ಮತ್ತೆ ಅದರ ಅಪ್ ಡೇಟ್ ಕೇಳುತ್ತಿದ್ದಾರೆ ಫ್ಯಾನ್ಸ್. ಈ ನಡುವೆ ಧ್ರುವ ಸರ್ಜಾ ನಟನೆಯ ಕೆಡಿ ಸಿನಿಮಾದ ಶೂಟಿಂಗ್ ಕೂಡ ಮುಗಿದಿದೆ. ಇದೇ ವರ್ಷ ರಿಲೀಸ್ ಮಾಡುವುದಾಗಿ ನಿರ್ದೇಶಕ ಪ್ರೇಮ್ ಘೋಷಣೆ ಮಾಡಿದ್ದಾರೆ.

    ಹೊಸ ವರ್ಷದ ದಿನದಂದು ಕೆಡಿ ಸಿನಿಮಾ ಇದೇ ವರ್ಷ ರಿಲೀಸ್ ಆಗಲಿದೆ ಎಂದು ಘೋಷಣೆ ಮಾಡುತ್ತಿದ್ದಂತೆಯೇ ಮಾರ್ಟಿನ್ ಬಗ್ಗೆ ಸಾಕಷ್ಟು ಅನುಮಾನಗಳು ಮೂಡಿವೆ. ಮಾರ್ಟಿನ್ ಗಿಂತ ಮುಂಚೆ ಕೆಡಿ ಸಿನಿಮಾ ರಿಲೀಸ್ ಆಗಲಿದೆ ಎನ್ನುವ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಕೆಡಿ ಸಿನಿಮಾದ ಚಿತ್ರೀಕರಣ ಪೂರ್ಣವಾಗಿದೆ. ಮಾರ್ಟಿನ್ ಕೆಲಸದ ಬಗ್ಗೆ ಚಿತ್ರತಂಡವೇ ಮಾಹಿತಿ ನೀಡಬೇಕಿದೆ.

    ಧ್ರುವ ಸರ್ಜಾ ನಾಯಕನಾಗಿ ನಟಿಸುತ್ತಿರುವ ಕೆಡಿ ಸಿನಿಮಾದಲ್ಲಿ ಧ್ರುವ ಸರ್ಜಾ ಅವರ ಅಣ್ಣನಾಗಿ ರಮೇಶ್ ಅರವಿಂದ್ ನಟಿಸಲಿದ್ದಾರೆ. ತಾರಾಗಣದ ಕಾರಣದಿಂದಾಗಿಯೇ ಈ ಸಿನಿಮಾ ಕುತೂಹಲ ಮೂಡಿಸಿದ್ದು, ರವಿಚಂದ್ರನ್, ಸಂಜಯ್ ದತ್, ಶಿಲ್ಪಾ ಶೆಟ್ಟಿ ಹೀಗೆ ಹೆಸರಾಂತ ಕಲಾವಿದರೇ ತಾರಾಗಣದಲ್ಲಿದ್ದಾರೆ.

     

    ಈ ಹಿಂದೆ ತಮ್ಮದೇ ಸಿನಿಮಾದಲ್ಲಿ ನಟಿಸಿದ್ದ ರೀಷ್ಮಾ ನಾಣಯ್ಯ (Reeshma Nanaiah) ಅವರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ ಪ್ರೇಮ್. ಕೆಡಿ ಸಿನಿಮಾದಲ್ಲಿ ರೀಷ್ಮಾ ಅವರು ಮಚ್‌ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿದ್ದಾರೆ.

  • ಹೊಂಬಾಳೆ ಸಂಸ್ಥೆ ಬ್ಯಾನರ್ ನಲ್ಲಿ ಧ್ರುವ ಸರ್ಜಾ ಸಿನಿಮಾ

    ಹೊಂಬಾಳೆ ಸಂಸ್ಥೆ ಬ್ಯಾನರ್ ನಲ್ಲಿ ಧ್ರುವ ಸರ್ಜಾ ಸಿನಿಮಾ

    ಹೊಂಬಾಳೆಯ ಅದೊಂದು ನಿರ್ಧಾರ ಟಾಲಿವುಡ್‌ನಲ್ಲಿ ಸಂಚಲ ಮೂಡಿಸಿದೆ. ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾಗೆ ಹೊಂಬಾಳೆ ಸಂಸ್ಥೆ (Hombale Films) ಸಜ್ಜಾಗ್ತಿದೆ. ವಿಜಯ್ ಕಿರಂಗದೂರ್ ಮುಂದಿನ ಪ್ಲಾನ್ ಏನು..? ಟಾಲಿವುಡ್‌ನಲ್ಯಾಕೆ ಟಾಕ್ ಶುರುವಾಗಿದೆ? ಧ್ರುವ ಸಿನಿಮಾಗೆ (Dhruva Sarja) ಆ್ಯಕ್ಷನ್ ಕಟ್ ಹೇಳೋದು ಯಾರು..? ಹೇಗಿರಲಿದೆ ಧ್ರುವ ಸರ್ಜಾ ಮುಂದಿನ ಸಿನಿಮಾ ಅನ್ನೊ ಎಕ್ಸ್ಕ್ಲೂಸಿವ್ ಅಪ್‌ಡೇಟ್ ಇಲ್ಲಿದೆ.

    ಸಲಾರ್ ಸೂಪರ್ ಸಕ್ಸಸ್ ಸಂಭ್ರಮ ಸವಿದ ಹೊಂಬಾಳೆ ಟೀಮ್ ಈಗ ಮತ್ತೊಂದು ಮಹಾಯಜ್ಞಕ್ಕೆ ಸಜ್ಜಾಗ್ತಿದೆ. ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಮಾಡೋಕ್ಕೆ ರೆಡಿಯಾಗ್ತಿದೆ. ಧ್ರುವ ಸರ್ಜಾ ಜೊತೆ ಸಿನಿಮಾ ಮಾಡೋಕ್ಕೆ ಮೊದಲ ಹಂತದ ಮಾತು-ಕತೆ ಮುಗಿಸಿದೆ. ಫಸ್ಟ್ ಮೀಟಿಂಗ್‌ನಲ್ಲಿ ಒಂದಿಷ್ಟು ವಿಚಾರಗಳನ್ನ ಫೈನಲ್ ಮಾಡಿರುವ ನಿರ್ಮಾಣ ಸಂಸ್ಥೆ ಈಗ ಮುಂದುವರಿದ ಭಾಗದ ಕೆಲಸಗಳಲ್ಲಿ ಬ್ಯೂಸಿಯಾಗಿದೆ. ಹೊಂಬಾಳೆ ನೆಕ್ಸ್ಟ್ ಪ್ರಾಜೆಕ್ಟ್ ಪ್ಲಾನಿಂಗ್ ಸಿನಿ ಅಭಿಮಾನಿಗಳಿಗೆ ಹಬ್ಬದೂಟ ಬಡಿಸಲಿದೆ.

    ಕೆಜಿಎಫ್, ಕಾಂತಾರ, ಸಲಾರ್ ಮೂಲಕ ಸೂಪರ್ ಹಿಟ್ ಹೊಡೆದ ಹೊಂಬಾಳೆ ಕನ್ನಡ ಹೀರೋ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ನಿರ್ಧಾರ ಮಾಡ್ತು. ಹೊಂಬಾಳೆ ಈ ಬಾರಿ ಆಯ್ಕೆ ಮಾಡಿಕೊಂಡ ಹೀರೋ ಧ್ರುವಾ ಸರ್ಜಾ, ಮಾರ್ಟಿನ್ ಹೀರೋ ಜೊತೆಗೆ ಜನ ಮೆಚ್ಚುವ ಕಂಟೆಂಟ್ ತರುವ ನಿರ್ಧಾರ ನಿರ್ಮಾಪಕರದಾಗಿತ್ತು. ಇದರ ಭಾಗವಾಗಿ ಮಫ್ತಿ ಸಾರಥಿ ನರ್ತನ್ ಜೊತೆ ಕತೆ ಕೇಳುವ ಕೆಲಸ ಮಾಡಿ ಮುಗಿಸಿಯಾಗಿದೆ. ಸದ್ಯ ನರ್ತನ್ ಶಿವಣ್ಣನ ಭೈರತಿ ರಣಗಲ್ ಸಿನಿಮಾ ಮಾಡ್ತಿದ್ದಾರೆ.

    ಭೈರತಿ ರಣಗಲ್ ಬಳಿಕ ರಾಮ್ ಚರಣ್ ಜೊತೆಗೆ ಸಿನಿಮಾ ಮಾಡ್ತಾರೆ ಅನ್ನೊ ಟಾಕ್ ಇದೆ. ಆದ್ರೆ ಇನ್ನೂ ಅನೌನ್ಸ್ ಆಗಿಲ್ಲ. ಹಾಗೇನಾದ್ರು ನರ್ತನ್ ರಾಮ್‌ಚರಣ್ ಸಿನಿಮಾ ಮಾಡಿದ್ರೆ ಪ್ಲಾನ್ ಬಿಗೆ ಹೊಂಬಾಳೆ ರೆಡಿಯಾಗ್ತಿದೆ. ಜೂನಿಯರ್ ಎನ್‌ಟಿಆರ್ ಜೊತೆಗೆ ಸದ್ಯ ದೇವರ ಕೆಲಸ ಮುಗಿಸಿರುವ ಕೊರಟಾಲ ಶಿವ ಜೊತೆ ಕೂಡ ಸಿನಿಮಾ ಮಾಡುವ ತಯಾರಿ ಆಗ್ತಿದೆ. ದೇವರ ಮುಗಿದ್ಮೇಲೆ ಧ್ರುವ ಜೊತೆ ಶಿವ ಸೇರುವ ಲಕ್ಷಣಗಳು ಕೂಡ ಕಾಣಿಸ್ತಿದೆ. ಆದ್ರೆ ಇನ್ನೂ ಯಾವುದಕ್ಕೂ ಹೊಂಬಾಳೆ ಅಂತಿಮ ಷರ ಬರೆದಿಲ್ಲ.

    ಈ ಇಬ್ಬರು ಡೈರೆಕ್ಟರ್‌ಗಳಲ್ಲಿ ಧ್ರುವ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳೋವರು ಯಾರು ಅನ್ನೊದು ಸದ್ಯದ ಪ್ರಶ್ನೆ. ಪೊಗರು ಮೂಲಕ ಪ್ಯಾನ್ ಇಂಡಿಯದಲ್ಲಿ ಅದೃಷ್ಟ ಪರೀಕ್ಷೆ ಮಾಡಿದ್ರು ಧ್ರುವ. ಈಗ ಮಾರ್ಟಿನ್ ಮತ್ತು ಕೆಡಿ ಮೂಲಕ ಮತ್ತೆ ಬೇರೆ ಬೇರೆ ಭಾಷೆಗಳಲ್ಲಿ ಮಿಂಚಲು ಸಜ್ಜಾಗ್ತಿದ್ದರೆ. ಕೆಡಿ 2 ಬಗ್ಗೆ ಕೂಡ ಟಾಕ್ ಜೋರಾಗಿದೆ. ಜೋಗಿ ಪ್ರೇಮ್ ಕೂಡ ಪಾರ್ಟ್ 2 ಬಗ್ಗೆ ಕೆಲಸ ಮಾಡ್ತಿದ್ದಾರೆ. ಈ ವರ್ಷ ಧ್ರುವ ಸರ್ಜಾ ಅಭಿನಯದ 2 ಸಿನಿಮಾಗಳು ಥೇಟರ್‌ಗೆ ಎಂಟ್ರಿ ಕೊಡೋದು ಪಕ್ಕಾ ಆಗಿದೆ.

    ಮಾಸ್ ಅಭಿಮಾನಿ ಬಳಗ ಹೊಂದಿರುವ ಧ್ರುವ, ಸಿನಿಮಾಗಳನ್ನ ಅದ್ಬುತವಾಗಿ ನಿರ್ಮಿಸಿ ಜನರಿಗೆ ತಲುಪಿಸುವ ಹೊಂಬಾಳೆ ಸಂಸ್ಥೆ ಇವರಿಬ್ಬರ ಕಾಂಬೋ ಬಹಳಷ್ಟು ನಿರೀಕ್ಷೆಗಳನ್ನ ಹುಟ್ಟುಹಾಕಿದೆ. ಈ ಜೋಡಿ ಮೂಲಕ ಮತ್ತೊಂದು ಸೂಪರ್ ಡೂಪರ್ ಪ್ಯಾನ್ ಇಂಡಿಯಾ ಸಿನಿಮಾ ಬರಲಿ ಅನ್ನೊದು ಕನ್ನಡ ಸಿನಿಪ್ರೇಕ್ಷಕರ ನಿರೀಕ್ಷೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಅಫೀಶಿಯಲ್ ಅನೌನ್ಸ್ಮೆಂಟ್ ಕೂಡ ನಿಮ್ಮ ಮುಂದೆ ಬರಲಿದೆ. ಅಲ್ಲಿವರೆಗೆ ಪ್ರಶ್ನೆಗಳು ಪ್ರಶ್ನೆಗಳಾಗೆ ಉಳಿಯಲಿದೆ.

  • ಧ್ರುವ ಸರ್ಜಾ ಮಕ್ಕಳ ನಾಮಕರಣದಲ್ಲಿ ಭಾಗಿಯಾದ ಸಂಜಯ್ ದತ್

    ಧ್ರುವ ಸರ್ಜಾ ಮಕ್ಕಳ ನಾಮಕರಣದಲ್ಲಿ ಭಾಗಿಯಾದ ಸಂಜಯ್ ದತ್

    ನ್ನಡದ ಹೆಸರಾಂತ ನಟ ಧ್ರುವ ಸರ್ಜಾ (Dhruva Sarja) ಇಂದು ತಮ್ಮ ಇಬ್ಬರು ಮಕ್ಕಳ ನಾಮಕರಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಮಕ್ಕಳ ನಾಮಕರಣ ಸಮಾರಂಭಕ್ಕೆ ಸಾಕ್ಷಿಯಾಗಲು ಬಾಲಿವುಡ್ ನಿಂದ ಸಂಜಯ್ ದತ್ (Sanjay Dutt) ಆಗಮಿಸಿದ್ದರು. ಸಂಜಯ್ ಮತ್ತು ಧ್ರುವ ಕೆಡಿ ಸಿನಿಮಾದಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ.

    ಅಯೋಧ್ಯೆಯಲ್ಲಿ ಬಾಲರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಿರುವ ಈ ಹೊತ್ತಿನಲ್ಲಿ ನಟ ಧ್ರುವ ಸರ್ಜಾ ತಮ್ಮ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ್ದಾರೆ. ಮಗಳಿಗೆ ರುದ್ರಾಕ್ಷಿ ಮತ್ತು ಮಗನಿಗೆ ಹಯಗ್ರೀವ ಎಂದು ನಾಮಕರಣ ಮಾಡಿದ್ದಾರೆ. ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ನಾಮಕರಣ ಶಾಸ್ತ್ರ ನಡೆದಿದೆ.

    ಅಯೋಧ್ಯೆ ಬಾ;ಲರಾಮ ಪ್ರಾಣ ಪ್ರತಿಷ್ಠಾಪನೆ ವೇಳೆಯೇ ನಾಮಕರಣ ಶಾಸ್ತ್ರ ನಡೆದಿದ್ದು, ಮಕ್ಕಳಿಗೆ ವಿಶೇಷ ಮತ್ತು ಅರ್ಥಪೂರ್ಣವಾದ ಹೆಸರನ್ನೇ  ಇಟ್ಟಿದ್ದಾರೆ ಧ್ರುವ ಸರ್ಜಾ. ಧ್ರುವ ಸರ್ಜಾ ಅಂಡ್ ಫ್ಯಾಮಿಲಿ ಆಂಜನೇಯನ ಭಕ್ತರು. ಆಂಜನೇಯ ಗುಡಿಯನ್ನೇ ಈ ಕುಟುಂಬ ನಿರ್ಮಾಣ ಮಾಡಿದೆ. ಧ್ರುವ ಸಿನಿಮಾದಲ್ಲಿ ಹನುಮನ ಕುರಿತಾಗಿ ಸನ್ನಿವೇಶವೋ, ಹಾಡೋ ಇದ್ದೇ ಇರುತ್ತದೆ. ಹನುಮನ ಉಸಿರಾಗಿರುವ ರಾಮನ ಮಂದಿರ ಉದ್ಘಾಟನೆ ದಿನದಂದು ತಮ್ಮ ಪುತ್ರಿ ಹಾಗೂ ಪುತ್ರನಿಗೆ ನಾಮಕರಣ ಮಾಡಿದ್ದು ವಿಶೇಷ.

     

    ಇಂದು ಧ್ರುವ ಸರ್ಜಾ ಮಕ್ಕಳಿಗೆ ನಾಮಕರಣ ಮಾಡಿದ್ದರೆ, ಅನೇಕ ಮಹಿಳೆಯರು ಇಂದೇ ಹೆರಿಗೆ ಮಾಡಿಸುವಂತೆ ವೈದ್ಯರ ದುಂಬಾಲು ಬಿದ್ದಿರುವ ಘಟನೆಗಳು ನಡೆದಿವೆ. ರಾಮ ಮಂದಿರ ಉದ್ಘಾಟನೆ ದಿನವೇ ಹೆರಿಗೆ ಮಾಡಿಸಿಕೊಳ್ಳಲು ಹಲವರು ತಯಾರಿ ಕೂಡ ಮಾಡಿಕೊಂಡಿದ್ದರು. ಅಷ್ಟರ ಮಟ್ಟಿಗೆ ರಾಮ ಜನರ ಮನಸ್ಸಲ್ಲಿ ಬೇರೂರಿದ್ದಾನೆ.

  • ಮಗ ಮತ್ತು ಮಗಳಿಗೆ ಹೆಸರಿಟ್ಟ ನಟ ಧ್ರುವ ಸರ್ಜಾ: ಮೆಚ್ಚುವಂಥ ಹೆಸರು

    ಮಗ ಮತ್ತು ಮಗಳಿಗೆ ಹೆಸರಿಟ್ಟ ನಟ ಧ್ರುವ ಸರ್ಜಾ: ಮೆಚ್ಚುವಂಥ ಹೆಸರು

    ಯೋಧ್ಯೆಯಲ್ಲಿ ಬಾಲರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಿರುವ ಈ ಹೊತ್ತಿನಲ್ಲಿ ನಟ ಧ್ರುವ ಸರ್ಜಾ (Dhruva Sarja) ತಮ್ಮ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ್ದಾರೆ. ಮಗಳಿಗೆ ರುದ್ರಾಕ್ಷಿ (Rudrakshi) ಮತ್ತು ಮಗನಿಗೆ ಹಯಗ್ರೀವ (Hayagriva) ಎಂದು ನಾಮಕರಣ ಮಾಡಿದ್ದಾರೆ. ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ನಾಮಕರಣ ಶಾಸ್ತ್ರ ನಡೆದಿದೆ.

    ಅಯೋಧ್ಯೆ ಬಾ;ಲರಾಮ ಪ್ರಾಣ ಪ್ರತಿಷ್ಠಾಪನೆ ವೇಳೆಯೇ ನಾಮಕರಣ ಶಾಸ್ತ್ರ ನಡೆದಿದ್ದು, ಮಕ್ಕಳಿಗೆ ವಿಶೇಷ ಮತ್ತು ಅರ್ಥಪೂರ್ಣವಾದ ಹೆಸರನ್ನೇ  ಇಟ್ಟಿದ್ದಾರೆ ಧ್ರುವ ಸರ್ಜಾ. ಧ್ರುವ ಸರ್ಜಾ ಅಂಡ್ ಫ್ಯಾಮಿಲಿ ಆಂಜನೇಯನ ಭಕ್ತರು. ಆಂಜನೇಯ ಗುಡಿಯನ್ನೇ ಈ ಕುಟುಂಬ ನಿರ್ಮಾಣ ಮಾಡಿದೆ. ಧ್ರುವ ಸಿನಿಮಾದಲ್ಲಿ ಹನುಮನ ಕುರಿತಾಗಿ ಸನ್ನಿವೇಶವೋ, ಹಾಡೋ ಇದ್ದೇ ಇರುತ್ತದೆ. ಹನುಮನ ಉಸಿರಾಗಿರುವ ರಾಮನ ಮಂದಿರ ಉದ್ಘಾಟನೆ ದಿನದಂದು ತಮ್ಮ ಪುತ್ರಿ ಹಾಗೂ ಪುತ್ರನಿಗೆ ನಾಮಕರಣ ಮಾಡಿದ್ದು ವಿಶೇಷ.

     

    ಇಂದು ಧ್ರುವ ಸರ್ಜಾ ಮಕ್ಕಳಿಗೆ ನಾಮಕರಣ ಮಾಡಿದ್ದರೆ, ಅನೇಕ ಮಹಿಳೆಯರು ಇಂದೇ ಹೆರಿಗೆ ಮಾಡಿಸುವಂತೆ ವೈದ್ಯರ ದುಂಬಾಲು ಬಿದ್ದಿರುವ ಘಟನೆಗಳು ನಡೆದಿವೆ. ರಾಮ ಮಂದಿರ ಉದ್ಘಾಟನೆ ದಿನವೇ ಹೆರಿಗೆ ಮಾಡಿಸಿಕೊಳ್ಳಲು ಹಲವರು ತಯಾರಿ ಕೂಡ ಮಾಡಿಕೊಂಡಿದ್ದರು. ಅಷ್ಟರ ಮಟ್ಟಿಗೆ ರಾಮ ಜನರ ಮನಸ್ಸಲ್ಲಿ ಬೇರೂರಿದ್ದಾನೆ.

  • ರಾಮ ಮಂದಿರ ಉದ್ಘಾಟನೆ ದಿನವೇ ನಟ ಧ್ರುವ ಪುತ್ರಿಗೆ ನಾಮಕರಣ

    ರಾಮ ಮಂದಿರ ಉದ್ಘಾಟನೆ ದಿನವೇ ನಟ ಧ್ರುವ ಪುತ್ರಿಗೆ ನಾಮಕರಣ

    ಜನವರಿ 22ರ ದಿನಕ್ಕಾಗಿ ಇಡೀ ದೇಶಕ್ಕೆ ದೇಶವೇ ಕಾಯುತ್ತಿದೆ. ಅಂದು ಅಯೋಧ್ಯಯಲ್ಲಿ ರಾಮ ಮಂದಿರ (Rama Mandir) ಉದ್ಘಾಟನೆ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಭಾಗಿ ಆಗುವುದಕ್ಕಾಗಿ ಹಲವರು ತುದಿಗಾಲಲ್ಲಿ ನಿಂತಿದ್ದಾರೆ. ಕನ್ನಡ ಸಿನಿಮಾ ರಂಗದಿಂದಲೂ ಹಲವಾರು ಸಿಲೆಬ್ರಿಟಿಗಳು ಭಾಗಿ ಆಗುತ್ತಿದ್ದಾರೆ. ಈ ದಿನವೇ ನಟ ಧ್ರುವ ಸರ್ಜಾ (Dhruva Sarja) ತಮ್ಮ ಪುತ್ರಿಗೆ ನಾಮಕರಣ ಮಾಡಲಿದ್ದಾರೆ.

    ಧ್ರುವ ಸರ್ಜಾ ಅಂಡ್ ಫ್ಯಾಮಿಲಿ ಆಂಜನೇಯನ ಭಕ್ತರು. ಆಂಜನೇಯ ಗುಡಿಯನ್ನೇ ಈ ಕುಟುಂಬ ನಿರ್ಮಾಣ ಮಾಡಿದೆ. ಧ್ರುವ ಸಿನಿಮಾದಲ್ಲಿ ಹನುಮನ ಕುರಿತಾಗಿ ಸನ್ನಿವೇಶವೋ, ಹಾಡೋ ಇದ್ದೇ ಇರುತ್ತದೆ. ಹನುಮನ ಉಸಿರಾಗಿರುವ ರಾಮನ ಮಂದಿರ ಉದ್ಘಾಟನೆ ದಿನದಂದು ತಮ್ಮ ಪುತ್ರಿಗೆ ನಾಮಕರಣ ಮಾಡಲಿದ್ದಾರಂತೆ ಧ್ರುವ.

    ಧ್ರುವ ಸರ್ಜಾ ಮಗಳಿಗೆ ನಾಮಕರಣ ಮಾಡುತ್ತಿದ್ದರೆ, ಅನೇಕ ಮಹಿಳೆಯರು ಅಂದೇ ಹೆರಿಗೆ ಮಾಡಿಸುವಂತೆ ವೈದ್ಯರ ದುಂಬಾಲು ಬಿದ್ದಿರುವ ಘಟನೆಗಳು ನಡೆದಿವೆ. ರಾಮ ಮಂದಿರ ಉದ್ಘಾಟನೆ ದಿನವೇ ಹೆರಿಗೆ ಮಾಡಿಸಿಕೊಳ್ಳಲು ಹಲವರು ತಯಾರಿ ಕೂಡ ಮಾಡಿಕೊಂಡಿದ್ದಾರೆ. ಅಷ್ಟರ ಮಟ್ಟಿಗೆ ರಾಮ ಜನರ ಮನಸ್ಸಲ್ಲಿ ಬೇರೂರಿದ್ದಾನೆ.