Tag: Diabetes

  • ರಂಜಾನ್ ಸಮಯದಲ್ಲಿ ಮಧುಮೇಹ ನಿರ್ವಹಣೆ ಹೇಗೆ?

    ರಂಜಾನ್ ಸಮಯದಲ್ಲಿ ಮಧುಮೇಹ ನಿರ್ವಹಣೆ ಹೇಗೆ?

    ವಿತ್ರ ರಂಜಾನ್ ತಿಂಗಳು ನಡೆಯುತ್ತಿರುವುದರಿಂದ, ಭಕ್ತರು ಇಡೀ ದಿನ ಉಪವಾಸ ಮಾಡುತ್ತಾರೆ, ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಏನನ್ನೂ ತಿನ್ನುವುದಿಲ್ಲ ಅಥವಾ ಕುಡಿಯುವುದಿಲ್ಲ. ಇಫ್ತಾರ್ ಆಚರಣೆಯ ಭಾಗವಾಗಿ ಉಪವಾಸವನ್ನು ಆಚರಿಸುವವರು ಸೂರ್ಯಾಸ್ತದ ನಂತರ ಉಪವಾಸವನ್ನು ಕೊನೆ ಮಾಡುತ್ತಾರೆ.

    ದೀರ್ಘ ಬಿಸಿಲಿನ ನಿರಂತರ 30 ದಿನಗಳ ಕಾಲ ಆಹಾರ ಅಥವಾ ನೀರನ್ನೂ ಸಹ ಸೇವಿಸದೆ ಉಪವಾಸ ಮಾಡುವುದು ನಿಜಕ್ಕೂ ಸವಾಲೇ ಸರಿ. ಆದ್ದರಿಂದ ಮಧುಮೇಹ ಹೊಂದಿರುವ ಜನರು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಹೆಚ್ಚಿನ ಕಾಳಜಿಯನ್ನು ತೆಗೆದುಕೊಳ್ಳಬೇಕು ಮತ್ತು ಸರಿಯಾದ ಆಹಾರ ಕ್ರಮವನ್ನು ಅನುಸರಿಸಬೇಕು.

    ಜ್ಯೋತಿದೇವ್ಸ್ ಮಧುಮೇಹ(ಡಯಾಬಿಟಿಸ್) ಸಂಶೋಧನಾ ಕೇಂದ್ರದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ಜೋತಿದೇವ್ ಕೇಶವದೇವ್, ಉಪವಾಸದ ಸಮಯದಲ್ಲಿ ಮಧುಮೇಹವು ನಿಯಮಿತವಾಗಿ ಮೇಲ್ವಿಚಾರಣೆ ಮಾಡುತ್ತಿರಬೇಕು. ರಕ್ತದಲ್ಲಿನ ಗ್ಲೂಕೋಸ್ ಮಟ್ಟಗಳು ಸಾಮಾನ್ಯ ಶ್ರೇಣಿಯಲ್ಲಿರಬೇಕಾದರೆ ಸಮತೋಲಿತ ಆಹಾರವನ್ನು ಸೇವಿಸಬೇಕಾಗುತ್ತದೆ ಎಂದು ಹೇಳುತ್ತಾರೆ.

    ಯಾವ ಆಹಾರ ಉತ್ತಮ?
    * ಕಾರ್ಬೋಹೈಡ್ರೇಟ್‍ಗಳನ್ನು ಸಮೃದ್ಧವಾಗಿ ಹೊಂದಿದ 1-2 ಖರ್ಜೂರಗಳು ಅಥವಾ ಹಾಲಿನಂತಹ ಆಹಾರದೊಂದಿಗೆ ಪ್ರಾರಂಭಿಸಬೇಕು. ನಂತರ ಬ್ರೌನ್ ರೈಸ್ ಮತ್ತು ಚಪಾತಿಗಳಂತಹ ಸಂಕೀರ್ಣ ಕಾರ್ಬೋಹೈಡ್ರೇಟ್‍ಗಳನ್ನು ಸೇವಿಸಬೇಕು. ಸೆಹ್ರಿ ಸಮಯದಲ್ಲಿ, ಏಕದಳ ಧಾನ್ಯಗಳು, ತರಕಾರಿಗಳನ್ನು ಸೇವಿಸಬಹುದು ಮತ್ತು ಅವುಗಳನ್ನು ಸಾಧ್ಯವಾದಷ್ಟು ತಡವಾಗಿ ತೆಗೆದುಕೊಳ್ಳಿ. ಪರ್ಯಾಯವಾಗಿ, ಮೀನು, ಟೋಫು ಮತ್ತು ಬೀಜಗಳಂತಹ ನೇರ ಪ್ರೋಟಿನ್‌ಗಳನ್ನು ಆರಿಸಿಕೊಳ್ಳಬಹುದು ಏಕೆಂದರೆ ಅವು ಶಕ್ತಿಯನ್ನು ಒದಗಿಸುತ್ತವೆ. ಕಡೆಯದಾಗಿ, ಮಲಗುವ ಮೊದಲು ಸೇವಿಸುವ ಒಂದು ಲೋಟ ಹಾಲು ಅಥವಾ ಹಣ್ಣು, ಬೆಳಿಗ್ಗೆ ತನಕ ಸಕ್ಕರೆ ಮಟ್ಟವನ್ನು ಕಾಪಾಡುತ್ತವೆ.

    * ವ್ಯಾಯಾಮ ದಿನಚರಿ: ನಿಮ್ಮ ವ್ಯಾಯಾಮದ ದಿನಚರಿಯನ್ನು ಮುಂದುವರಿಸುವ ಗುರಿಯನ್ನು ಇಟ್ಟುಕೊಳ್ಳಿ. ಆದರೆ ಉಪವಾಸದ ಸಮಯದಲ್ಲಿ ದೇಹಕ್ಕೆ ದಂಡನೆ ನೀಡುವ ವ್ಯಾಯಾಮ ಮಾಡುವುದನ್ನು ಕಡಿಮೆ ಮಾಡಿ. ನೀವು ನಡಿಗೆ ಅಥವಾ ಯೋಗದಂತಹ ಶಾಂತ ವ್ಯಾಯಾಮಗಳ ಮೇಲೆ ಗಮನವನ್ನು ಹರಿಸಬಹುದು.

    * ನಿದ್ರೆಯ ಸ್ವರೂಪಗಳು: ಸಾಕಷ್ಟು ನಿದ್ದೆ ಮಾಡುವುದು ಬಹಳ ಮುಖ್ಯ. ನಿದ್ರಾಹೀನತೆಯು ಹಸಿವಿನ ಹಾರ್ಮೋನುಗಳ ಮೇಲೆ ಪರಿಣಾಮ ಬೀರಬಹುದು. ಇದರಿಂದ ಸಮಯ-ನಿಬರ್ಂಧಿತ ಆಹಾರ ಸೇವನೆಯಲ್ಲಿ ಹೆಚ್ಚಿನ ಪ್ರಮಾಣದ ಕ್ಯಾಲೋರಿ ಆಹಾರಗಳನ್ನು ವಿರೋಧಿಸಲು ಕಷ್ಟವಾಗುತ್ತದೆ. ಚಯಾಪಚಯ ಪ್ರಕ್ರಿಯೆಗೆ ಕೂಡ ನಿದ್ರೆ ಮುಖ್ಯವಾಗಿದೆ. ಇದು ಮಧುಮೇಹ ನಿರ್ವಹಣೆಗೆ ಅಗತ್ಯವಾದ ರಕ್ತದಲ್ಲಿನ ಗ್ಲೂಕೋಸ್ ನಿಯಂತ್ರಣವನ್ನು ಸುಗಮಗೊಳಿಸುತ್ತದೆ ಎಂದು ಕಂಡುಬಂದಿದೆ.

  • ಅಪೌಷ್ಠಿಕತೆ, ಮಧುಮೇಹ ಖಾಯಿಲೆಯಿಂದ ಬಳಲುವವರಿಗೆ ಕ್ಷಯರೋಗದ ಸಾಧ್ಯತೆ ಹೆಚ್ಚು: ಡಾ. ಮಹೇಶ್ ಎಂ.ಜಿ

    ಅಪೌಷ್ಠಿಕತೆ, ಮಧುಮೇಹ ಖಾಯಿಲೆಯಿಂದ ಬಳಲುವವರಿಗೆ ಕ್ಷಯರೋಗದ ಸಾಧ್ಯತೆ ಹೆಚ್ಚು: ಡಾ. ಮಹೇಶ್ ಎಂ.ಜಿ

    ಕೊಪ್ಪಳ: ಕ್ಷಯರೋಗವು ಒಂದು ಸಾಂಕ್ರಾಮಿಕ ರೋಗವಾಗಿದ್ದು, ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಅದರಲ್ಲಿ ವಿಶೇಷವಾಗಿ ಅಪೌಷ್ಠಿಕತೆಯಿಂದ ಬಳಲುವವರಿಗೆ, ಮಧುಮೇಹ ಇತರೆ ಖಾಯಿಲೆಯಿಂದ ಬಳಲುವವರಿಗೆ ಹರಡುವ ಸಾಧ್ಯತೆ ಹೆಚ್ಚು ಇರುತ್ತದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಮಹೇಶ್ ಎಂ.ಜಿ ಹೇಳಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ, ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಆಯೋಜಿಸಿದ್ದ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ನಗರ ಪ್ರದೇಶದ ಕೊಳಚೆ ಪ್ರದೇಶ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿನ ಆಯ್ದ ಗ್ರಾಮಗಳಲ್ಲಿ ಕ್ಷಯರೋಗ ನಿರ್ಮೂಲನೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಅಂಗವಾಗಿ ನಗರದ ಬಸವೇಶ್ವರ ವೃತ್ತದಲ್ಲಿ ಎಲ್‍ಇಡಿ ವಾಹನಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಇದನ್ನೂ ಓದಿ: ಹೆಬ್ಬಾಳದಲ್ಲಿ ಸರಣಿ ಅಪಘಾತ – ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿ

    ಕ್ಷಯ ರೋಗದ ಬಗ್ಗೆ ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಒಂದು ವೇಳೆ ಚಿಕಿತ್ಸೆ ಪಡೆಯದಿದ್ದಲ್ಲಿ ಒಬ್ಬ ಕ್ಷಯರೋಗಿಯು 1 ವರ್ಷಕ್ಕೆ 10-15 ಜನರಿಗೆ ಕೆಮ್ಮುವುದರ ಮೂಲಕ ಸೀನುವುದರ ಮೂಲಕ ಪ್ರಸಾರ ಮಾಡುತ್ತಾನೆ. ಆದ್ದರಿಂದ ಕ್ಷಯರೋಗದ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.

    2 ವಾರಗಳಿಂದ ಸತತ ಕೆಮ್ಮು ಬರುವುದು, ಕಫದಲ್ಲಿ ರಕ್ತ ಬರುವುದು, ಸಾಯಂಕಾಲದ ವೇಳೆ ಜ್ವರ ಬರುವುದು, ತೂಕ ಕಡಿಮೆಯಾಗುವುದು, ಹಸಿವು ಆಗದೇ ಇರುವುದು ಇವು ಕ್ಷಯರೋಗದ ಲಕ್ಷಣಗಳಾಗಿದ್ದು, ಇವು ಯಾರಿಗಾದರು ಕಂಡು ಬಂದರೆ ತಕ್ಷಣ ತಮ್ಮ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷಿಸಿಕೊಂಡು, ಚಿಕಿತ್ಸೆ ಪಡೆದುಕೊಂಡು ಆರೋಗ್ಯ ಕೇಂದ್ರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.  ಇದನ್ನೂ ಓದಿ: ಚಾಮರಾಜನಗರ ಜಿಲ್ಲೆಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ

    ಪ್ರಧಾನ ಮಂತ್ರಿಗಳು 2025ಕ್ಕೆ ಕ್ಷಯಮುಕ್ತ ಭಾರತ ಮಾಡಲು ಪಣ ತೊಟ್ಟಿದ್ದಾರೆ. ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರದ ಸಲುವಾಗಿ ನಿಕ್ಷೆಯ ಪೋಷಣೆ ಅಭಿಯಾನ ದಡಿಯಲ್ಲಿ ಪ್ರತಿ ರೋಗಿಗೆ ಮಾಸಿಕ 500 ರೂ. ನೀಡಲಾಗುತ್ತಿದೆ. ರೋಗಿಯ ಮನೆಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ಶಿಕ್ಷಣ ನೀಡಲಾಗುತ್ತಿದೆ. ಸಾರ್ವಜನಿಕರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಇಲಾಖೆಯೊಂದಿಗೆ ಸಂಪರ್ಕದಲ್ಲಿರುವಂತೆ ಅವರು ತಿಳಿಸಿದರು.

  • ‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಬಿಡುಗಡೆ ಮಾಡಿದ ಸಿಎಂ

    ‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಬಿಡುಗಡೆ ಮಾಡಿದ ಸಿಎಂ

    ಬೆಂಗಳೂರು: ಮಧುಮೇಹ ನಿವಾರಣೆಗಾಗಿ ಪ್ರಾಚೀನ ಆಯುರ್ವೇದ ಚಿಕಿತ್ಸಾ ಪದ್ಧತಿಯ ಅಂಶಗಳನ್ನು ಒಳಗೊಂಡಿರುವ ಮಹತ್ವದ ಕೃತಿಯೊಂದನ್ನು ಹೊರತರಲಾಗಿದೆ. ಈ ಪುಸ್ತಕವನ್ನು ಖ್ಯಾತ ಆಯುರ್ವೇದ ತಜ್ಞ ಡಾ.ಮೃತ್ಯುಂಜಯ ಸ್ವಾಮಿ ಅವರು ಬರೆದಿರುವ ‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಇದಾಗಿದೆ. ಈ ಕೃತಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಇಂದು ಬಿಡುಗಡೆ ಮಾಡಿದರು.

    ಮಧುಮೇಹ ರೋಗಕ್ಕೆ ತುತ್ತಾಗಿರುವವರು, ಪ್ರಿ ಡಯಾಬಿಟಿಕ್ ಹಾಗೂ ಇನ್ಸುಲಿನ್ ಚಿಕಿತ್ಸೆಯಲ್ಲಿರುವವರಿಗೆ ಹೇಗೆ ಮಧುಮೇಹವನ್ನು ನಿವಾರಿಸಬಹುದು ಎನ್ನುವ ಅತ್ಯಂತ ಮಹತ್ವದ ಸಂಗತಿಗಳು ಈ ಕೃತಿಯಲ್ಲಿ ಅಡಗಿವೆ. ಇದನ್ನೂ ಓದಿ:  ಮನಸ್ಸಿಗೆ ಬಂದಂತೆ ಮಾಡಲು ಇದು ಪಾಕಿಸ್ತಾನ ಅಲ್ಲ: ಆರ್. ಅಶೋಕ್

    ಕೃತಿಯ ಲೇಖಕ ಡಾ.ಮೃತ್ಯುಂಜಯ ಸ್ವಾಮಿ ಮಾತನಾಡಿ, ಭಾರತ ದೇಶ ಮಧುಮೇಹದ ರಾಜಧಾನಿಯಾಗುವತ್ತ ದಾಪುಗಾಲು ಹಾಕುತ್ತಿದೆ. ಬದಲಾದ ಜೀವನಶೈಲಿಯಿಂದ ಬರುವ ಪ್ರಮುಖ ರೋಗಗಳಲ್ಲಿ ಮಧುಮೇಹ ಕೂಡ ಒಂದು. ಈ ರೋಗಕ್ಕೆ ತುತ್ತಾಗುವವರು ತಾವು ಸಾಯುವವರೆಗೂ ಮಾತ್ರೆಗಳನ್ನು ನುಂಗುತ್ತಲೇ ಇರಬೇಕು ಎನ್ನುವ ಸ್ಥಿತಿಯಾಗಿದೆ ಎಂದು ವಿವರಿಸಿದರು.

    ಆಧುನಿಕ ವೈದ್ಯಶಾಸ್ತ್ರದ ಪ್ರಕಾರ, ಮಧುಮೇಹವನ್ನು ನಿವಾರಿಸಲು ಸಾಧ್ಯವಿಲ್ಲ. ಕೇವಲ ಅದನ್ನು ನಿಭಾಯಿಸಲು ಮಾತ್ರ ಸಾಧ್ಯ ಎನ್ನುವ ಮಾತುಗಳು ಜನಜನಿತ. ಆದರೆ ನಮ್ಮ ಪಾರಂಪರಿಕ ಔಷಧ ಪದ್ಧತಿಯಲ್ಲಿ ಮಧುಮೇಹ ರೋಗವನ್ನು ಕೇವಲ ನಿಭಾಯಿಸುವುದಷ್ಟೇ ಅಲ್ಲ ದೇಹವನ್ನು ಮಧುಮೇಹದಿಂದ ಮುಕ್ತಗೊಳಿಸಹುದು ಎನ್ನುವ ಅಂಶಗಳು ಅಡಕವಾಗಿವೆ. ಆ ಅಂಶಗಳ ಆಧಾರದಲ್ಲಿ ಪುಸ್ತಕವನ್ನು ಬರೆಯಲಾಗಿದೆ ಎಂದರು.

    ಪುಸ್ತಕವನ್ನು ಲೋಕಾರ್ಪಣೆಗೊಳಿಸಿದ ಹರಿಹರ ವೀರಶೈವ ಲಿಂಗಾಯಿತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧೀಕಾರಿ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಸ್ವಾಮೀಜಿ ಅವರು ಮಾತನಾಡಿ, ಜೀವನಶೈಲಿ ರೋಗಗಳು ನಮ್ಮ ಯುವ ಜನಾಂಗದ ಬಹುಭಾಗದ ಜನರನ್ನು ಅನಾರೋಗ್ಯಕ್ಕೀಡು ಮಾಡುತ್ತಿವೆ. ಇದರಲ್ಲಿ ಹೆಚ್ಚು ಸಮಸ್ಯೆ ಉಂಟುಮಾಡುತ್ತಿರುವುದು ಮಧುಮೇಹ. ಈ ರೋಗಕ್ಕೆ ತುತ್ತಾಗಿರುವವರು ತಮ್ಮ ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಂಡಲ್ಲಿ ಅನೇಕ ಅನುಕೂಲಗಳನ್ನು ನಾವು ಯೋಗಭ್ಯಾಸದಲ್ಲಿ ಕಂಡಿದ್ದೇವೆ ಎಂದು ತಿಳಿಸಿದರು.

    ಈ ಪುಸ್ತಕದಲ್ಲಿ ಅಳವಡಿಸಿರುವಂತಹ ಪ್ರಾಚೀನ ಆರೋಗ್ಯ ಪದ್ಧತಿಗಳ ಅಂಶಗಳು ಹಾಗೂ ಯೋಗಭ್ಯಾಸದಂತಹ ಅಳವಡಿಕೆಗಳು ಬಹಳ ಉಪಯೋಗ. ಸ್ವತಃ ಆಯುರ್ವೇದ ವೈದ್ಯರಾಗಿರುವ ಡಾ.ಮೃತ್ಯುಂಜಯ ಅವರು ತಮ್ಮ ಪುಸ್ತಕದಲ್ಲಿ ತಾವು ಆಳವಾಗಿ ಅಧ್ಯಯನ ಮಾಡಿದ ಅಂಶಗಳನ್ನು ನಮೂದಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ‘ಬ್ಲಾಕ್‍ಚೈನ್’ ಮೂಲಕ ಮದುವೆಯಾದ ಭಾರತದ ಮೊದಲ ದಂಪತಿ!

    ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ಸಂಸ್ಥೆಯ ಚಕ್ರವರ್ತಿ ಸೂಲಿಬೆಲೆ ಮತ್ತಿತರರು ಉಪಸ್ಥಿತರಿದ್ದರು.

    ಅತಿ ಹೆಚ್ಚು ಮಾರಾಟವಾಗುತ್ತಿರುವ ಕೃತಿ: ಡಾ.ಮೃತ್ಯುಂಜಯ ಸ್ವಾಮಿ ಅವರ ಮೊದಲ ಪುಸ್ತಕ ‘ಏನ್ಷಿಯೆಂಟ್ ಸೀಕ್ರೆಟ್ ಆಫ್ ಹೆಲ್ದಿ ಲಿವಿಂಗ್’ ಕೃತಿಯು ಆಮೆಜಾನ್‍ನಲ್ಲಿ ಅತಿ ಹೆಚ್ಚು ಮಾರಾಟವಾಗುತ್ತಿರುವ ಕೃತಿಗಳಲ್ಲಿ ಒಂದಾಗಿದೆ. ಈ ಪುಸ್ತಕದಲ್ಲಿ ಮಧುಮೇಹವನ್ನು ನಿವಾರಿಸುವುದು, ಅದನ್ನು ಸುಲಭ ವಿಧಾನದಲ್ಲಿ ನಿಭಾಯಿಸುವುದು. ಹಾಗೆಯೇ ಅದಕ್ಕೆ ಬೇಕಾದ ಆಹಾರ ಪದ್ಧತಿ ಜೀವನ ಶೈಯಲ್ಲಿ ಆಗಬೇಕಾದ ಮಾರ್ಪಾಡು ಹೀಗೆ ಹತ್ತು ಹಲವು ಅಂಶಗಳನ್ನು ವಿಸ್ತøತವಾಗಿ ಚರ್ಚಿಸಲಾಗಿದೆ.

  • ಸಕ್ಕರೆ ಕಾಯಿಲೆ ಹೇಗೆ ಬರುತ್ತೆ? ಬಂದ್ರೆ ಏನು ಮಾಡಬೇಕು- ಇಲ್ಲಿದೆ ಸರಳ ಮಾರ್ಗ

    ಸಕ್ಕರೆ ಕಾಯಿಲೆ ಹೇಗೆ ಬರುತ್ತೆ? ಬಂದ್ರೆ ಏನು ಮಾಡಬೇಕು- ಇಲ್ಲಿದೆ ಸರಳ ಮಾರ್ಗ

    ತ್ತೀಚಿನ ದಿನಗಳಲ್ಲಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಸಾಮಾನ್ಯವಾಗಿ ಬಿಟ್ಟಿದೆ. ಚಿಕ್ಕ ಮಕ್ಕಳಿಂದ ದೊಡ್ಡ ವಯಸ್ಸಿವರೆಗೂ ಈ ಕಾಟ ತಪ್ಪಿದಲ್ಲ. ಸಕ್ಕರೆ ಕಾಯಿಲೆ ಹೇಗೆ ಬರುತ್ತೆ? ಅದನ್ನು ಹೇಗೆ ಗುರುತಿಸುವುದು ಎಂಬುದೇ ತಿಳಿದಿಲ್ಲ. ಅದಕ್ಕೆ ಇಲ್ಲಿ ಸರಳ ಮಾರ್ಗಗಳು ಅದನ್ನು ನಾವು ಮನೆಯಲ್ಲಿ ಹೇಗೆ ಗುರುತಿಸಬಹುದು. ಹೇಗೆ ಬಗೆಹರಿಸಿಕೊಳ್ಳಬಹುದು ಎಂಬುದಕ್ಕೆ ಈ ಸುದ್ದಿ ಓದಿ.

    ಮಧುಮೇಹಕ್ಕೆ ಮುಖ್ಯವಾಗಿ ಎರಡು ಕಾರಣ!

    ಒಂದು ಆಟೋಇಮ್ಮ್ಯೂನ್ ಕಾಯಿಲೆ. ಅಂದರೆ ದೇಹದ ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತೆ. ಈ ಖಾಯಿಲೆಯಿಂದ ದೇಹದ ಪ್ಯಾಂಕ್ರಿಯಾಸ್ ನಲ್ಲಿರುವ ಬೀಟಾ ಸೆಲ್ಸ್ ಅನ್ನು ಆಕ್ರಮಣ ಮಾಡಿ, ಸಂಪೂರ್ಣವಾಗಿ ನಾಶ ಮಾಡುತ್ತೆ. ಮಧುಮೇಹದಲ್ಲಿ ಇನ್ಸುಲಿನ್ ಉತ್ಪತ್ತಿ ಇರುವುದಿಲ್ಲ. ಈ ಪರಿಣಾಮ ಚಿಕ್ಕ ಮಕ್ಕಳಿಗೆ ಕಾಯಿಲೆ ಬರುವ ಸಾಧ್ಯತೆ ಹೆಚ್ಚಿರುತ್ತೆ. 15-16 ವರ್ಷ ಮೇಲ್ಪಟ್ಟವರಲ್ಲೂ ಸಹ ಈ ರೋಗ ಕಾಣಿಸಬಹುದು.

    ಎರಡನೇದು ಡಯಾಬಿಟೀಸ್. ಇದಕ್ಕೆ ಬಹಳ ರೀತಿಯ ಕಾರಣಗಳಿರುತ್ತೆ. ಬೊಜ್ಜು ಇದಕ್ಕೆ ಮುಖ್ಯ ಕಾರಣ. ಅದರಲ್ಲೂ ಹೊಟ್ಟೆಯ ಬೊಜ್ಜು ಅಥವಾ ಸೆಂಟ್ರಲ್ ಒಬೆಸಿಟಿ ಇಂದ ದೇಹದಲ್ಲಿ ಇನ್ಸುಲಿನ್ ಪ್ರತಿರೋಧ ಉಂಟಾಗುತ್ತೆ. ಇದರಿಂದ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗಿ ಈ ಸಮಸ್ಯೆ ಬರುತ್ತದೆ. ಇದಕ್ಕೆ ಮುಖ್ಯ ಕಾರಣ ಸ್ಥೂಲಕಾಯ. ಇದಲ್ಲದೆ ಬೆಳಗ್ಗೆ ಹೊತ್ತು ಮಲಗುವುದು, ರಾತ್ರಿ ಸರಿಯಾಗಿ ಮಲಗದೆ ಇರುವುದು. ಸರಿಯಾದ ಕ್ರಮದಲ್ಲಿ ಆಹಾರ ತಿನ್ನುದೆ ಇರುವುದು ಹಾಗು ದೇಹದ ತೂಕ ನಿಯಂತ್ರಣಕ್ಕೆ ಬಾರದಿರುವುದು. ಇದನ್ನೂ ಓದಿ: ರಾಜ್ಯದಲ್ಲಿಂದು 310 ಕೇಸ್, 6 ಸಾವು

    ಗುರುತಿಸುವುದು ಹೇಗೆ?

    * ಸಕ್ಕರೆ ಖಾಯಿಲೆ ಬಂದಾಗ ಅತಿಯಾದ ಬಾಯಾರಿಕೆಯಾಗುವುದು ಹಾಗೂ ಎಷ್ಟು ನೀರನ್ನು ಕುಡಿದರು ಸಹ ಬಾಯಾರಿಕೆ ಹೋಗುವುದಿಲ್ಲ.
    * ಹೆಚ್ಚು ಮೂತ್ರ ವಿಸರ್ಜನೆ, ದೇಹದಲ್ಲಿ ಆದ ಗಾಯ ಬೇಗ ವಾಸಿಯಾಗದಿರುವುದು
    * ರಾತ್ರಿ ಹೊತ್ತು ಗಾಡಿ ಓಡಿಸುವಾಗ ಕಣ್ಣು ಹೆಚ್ಚು ಮಂಜಾಗುವುದು
    * ಅತಿ ಬೇಗನೆ ದೇಹದ ತೂಕ ಇಳಿಯುವುದು ಕೂಡ ಮುಖ್ಯ ಲಕ್ಷಣಗಳು

    ಪರಿಹಾರ:


    ಬೆಂಡೆಕಾಯಿ: ಎರಡು ಬೆಂಡೆಕಾಯಿಯನ್ನು ಉದ್ದುದ್ದ ಕತ್ತರಿಸಿ ರಾತ್ರಿ ನೀರಿನಲ್ಲಿ ನೆನೆಸಬೇಕು. ಮರುದಿನ ಬೆಳಿಗ್ಗೆ ನೆನೆಹಾಕಿದ ನೀರಿನಿಂದ ಬೆಂಡೆಕಾಯಿಯನ್ನು ತೆಗೆದು, ಲೋಳೆಯ ನೀರನ್ನು ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಇದನ್ನು ಕ್ರಮವಾಗಿ ಮಾಡಿಕೊಂಡು ಬಂದರೆ ಸಕ್ಕರೆ ಖಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.

    ಹಾಗಲಕಾಯಿ: ಸಕ್ಕರೆ ಕಾಯಿಲೆಗೆ ರಾಮಬಾಣ ಹಾಗಲಕಾಯಿ ಎಂದರೆ ತಪ್ಪಾಗುವುದಿಲ್ಲ. ಇದನ್ನು ನಮ್ಮ ದಿನ ನಿತ್ಯದ ಆಹಾರ ಪದ್ದತಿಯಲ್ಲಿ ಹೆಚ್ಚಾಗಿ ಸೇವಿಸಿದರೆ ಸಕ್ಕರೆ ಅಂಶ ಬೇಗ ಕಡಿಮೆಯಾಗುತ್ತೆ. ಅಂದರೆ ಹಾಗಲಕಾಯಿ ಪಲ್ಯ, ಜ್ಯೂಸ್ ಅಥವಾ ಹಾಗಲಕಾಯಿ ಸಾಂಬಾರ್ ಮಾಡಿ ಸೇವಿಸುವುದರಿಂದ ಸಕ್ಕರೆ ಖಾಯಿಲೆ ಕಡಿಮೆಯಾಗುತ್ತೆ.

    ಮೆಂತ್ಯ: ಮೆಂತ್ಯ ಪುಡಿ, ಕರಿ ಜೀರಿಗೆ ಪುಡಿ ಹಾಗು ದನಿಯ ಪುಡಿ. ಈ ಮೂರನ್ನು ಸರಿ ಪ್ರಮಾಣದಲ್ಲಿ ಮಿಶ್ರಣ ಮಾಡಿ ಪ್ರತಿ ನಿತ್ಯ ಒಂದು ಲೋಟ ಬಿಸಿ ನೀರಿನಲ್ಲಿ ಕುಡಿಯುವುದರಿಂದ ರಕ್ತದಲ್ಲಿ ಸಕ್ಕರೆ ಅಂಶವನ್ನು ಕಡಿಮೆ ಮಾಡಲು ಸಹಾಯವಾಗುತ್ತೆ.

    ವ್ಯಾಯಾಮ: ಪ್ರತಿ ನಿತ್ಯ ಸಕ್ಕರೆ ಕಾಯಿಲೆ ಇರುವವರು 30-45 ನಿಮಿಷಗಳ ಕಾಲ ವ್ಯಾಯಾಮ ಮಾಡಲೇ ಬೇಕು. ವಾಕಿಂಗ್ ಮಾಡಬೇಕು. ಇದರಿಂದ ತಮ್ಮ ರಕ್ತ ಪ್ರಮಾಣ ನಿಯಂತ್ರಣಕ್ಕೆ ಬರಲು ಸಹಾಯವಾಗುತ್ತೆ. ಇದು ರೀಸೆಂಟ್ ಆರಿಜಿನ್ ಆಗಿದ್ದ ಪಕ್ಷದಲ್ಲಿ ಇದರಿಂದ ಬೇಗನೆ ಗುಣಮುಕ್ತರಾಗಬಹುದು. ಅದಷ್ಟು ಬೆವರನ್ನು ಆಚೆ ಹಾಕುವುದರಿಂದ ಸಕ್ಕರೆ ಕಾಯಿಲೆ ಕಡಿಮೆಯಾಗಲು ಸಹಾಯವಾಗುತ್ತೆ. ಇದನ್ನೂ ಓದಿ: ಕೊರೊನಾ ಜಾಗೃತಿಗಾಗಿ ಕಾಶ್ಮೀರ ಟು ಕನ್ಯಾಕುಮಾರಿ ರೈಡ್ ಆರಂಭಿಸಿದ ಯುವಕ

    ಜಂಕ್ ಫುಡ್, ಫಾಸ್ಟ್ ಫುಡ್ ಹಾಗು ರುಚಿಯಾಗಿದೆ ಎಂದು ಹೆಚ್ಚಾಗಿ ಹೊರಗಿನ ಆಹಾರ ತಿನ್ನುವುದು ಇವೆಲ್ಲವೂ ಕೂಡ ಸಕ್ಕರೆ ಖಾಯಿಲೆಗೆ ಕಾರಣವಾಗುತ್ತೆ. ಹಾಗಾಗಿ ಹೊರಗಿನ ಊಟ ಹೆಚ್ಚಾಗಿ ತಿನ್ನದೇ ಅಪರೂಪಕ್ಕೆ ಒಮ್ಮೆ ತಿಂದರೆ ಏನು ಸಮಸ್ಯೆ ಆಗುವುದಿಲ್ಲ ಎನ್ನುತ್ತಾರೆ ಮಧುಮೇಹ ತಜ್ಞರು.

  • ಕೊರೊನಾವೈರಸ್: ಮಧುಮೇಹಿಗಳು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು

    ಕೊರೊನಾವೈರಸ್: ಮಧುಮೇಹಿಗಳು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು

    ವಿಶ್ವವ್ಯಾಪಿ ಹರಡುತ್ತಿರುವ ಕೊರೊನಾವೈರಸ್ ಸೋಂಕನ್ನು ತಡೆಗಟ್ಟಲು ಜನರು ತುಂಬಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ. ಭಾರತವನ್ನು ಕೂಡ ಕಾಡುತ್ತಿರುವ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ದೇಶಾದ್ಯಂತ ಲಾಕ್‍ಡೌನ್ ಮಾಡಲಾಗಿದೆ. ಕೊರೊನಾವೈರಸ್ ಮಧುಮೇಹಿಗಳಿಗೆ ಸೋಂಕಿದರೆ ಗುಣವಾಗಲು ಕಷ್ಟವಾಗಿರುವ ಕಾರಣಕ್ಕೆ ಮಧುಮೇಹ ಇದ್ದವರು ಹೆಚ್ಚು ಜಾಗೃತರಾಗಿರಬೇಕು.

    ಮಧುಮೇಹಿಗಳ ದೇಹದಲ್ಲಿ ಗ್ಲೈಸೆಮಿಕ್ ನಿಯಂತ್ರಣ ಸಾಮರ್ಥ್ಯ ಕಡಿಮೆ ಇರುತ್ತದೆ. ಹೀಗಾಗಿ ಮಧುಮೇಹಿಗಳಿಗೆ ಕೊರೊನಾ ಸೋಂಕು ತಗುಲುವ ಸಾಮರ್ಥ್ಯ ಹೆಚ್ಚು ಎಂದು ಸಿಡಿಸಿ (Centers for Disease Control and Prevention) ಮಾಹಿತಿ ನೀಡಿದೆ. ರೋಗ ನಿರೋಧಕ ಶಕ್ತಿ ಕಡಿಮೆ ಇದ್ದವರಿಗೆ ಸೋಂಕು ತಗುಲಿದರೆ ಅವರ ಪರಿಸ್ಥಿತಿ ಜಿಂತಾಜನಕವಾಗುತ್ತದೆ. ಹೀಗಾಗಿ ಮಧುಮೇಹಿಗಳು ಕೆಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದು ಒಳ್ಳೆಯದು.

    ಅಮೆರಿಕದ ಡಯಾಬಿಟಿಕ್ ಅಸೋಸಿಯೇಷನ್ ಕೊರೊನಾ ವೈರಸ್ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಿದೆ. ಈ ವರದಿಯನ್ನು ನೋಡಿದಾಗ ವಯಸ್ಸಾದವರಿಗೆ, ಮಧುಮೇಹಿಗಳಿಗೆ, ಹೃದಯ ಹಾಗೂ ಇತರ ಶ್ವಾಸಕೋಶ ಸಮಸ್ಯೆ ಇರುವ ಮಂದಿಗೆ ಕೊರೊನಾವೈರಸ್ ಸೋಂಕಿನ ಅಪಾಯ ಹೆಚ್ಚು ಎಂಬುದು ತಿಳಿದುಬಂದಿದೆ. ಒಂದು ವೇಲೆ ಈ ಆರೋಗ್ಯ ಸಮಸ್ಯೆಗಳು ಇದ್ದವರಿಗೆ ಸೋಂಕು ತಟ್ಟಿದರೆ ಚೇತರಿಸಿಕೊಳ್ಳೋದು ಕಷ್ಟವಾಗುತ್ತದೆ ಎಂದು ತಿಳಿಸಿದೆ

    ಮಧುಮೇಹ ಕಾಯಿಲೆ ಬಂದರೆ ಅದನ್ನು ನಿಯಂತ್ರಿಸಬಹುದೇ ಹೊರತಾಗಿ ಅದರಿಂದ ಸಂಪೂರ್ಣ ಗುಣಮುಖರಾಗಲು ಸಾಧ್ಯವಿಲ್ಲ. ಹೀಗಾಗಿ ಸದ್ಯ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೊನಾವೈರಸ್ ದೇಹ ಹೊಕ್ಕದಂತೆ ಮಧುಮೇಹಿಗಳು ಎಚ್ಚರವಹಿಸಬೇಕು.

    ಅನುಸರಿಸಬೇಕಾದ ಕ್ರಮಗಳೇನು?

    1. ಮೊದಲು ಮಧುಮೇಹಿಗಳೂ ತೆಗೆದುಕೊಳ್ಳುತ್ತಿರುವ ಔಷಧಿಯ ಬಗ್ಗೆ ನಿಗವಹಿಸಬೇಕು. ಅವುಗಳ ಹೆಸರು ಹಾಗೂ ಡೋಸೇಜ್ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರಬೇಕು.

    2. ಒಂದು ತಿಂಗಳಿಗೆ ಬೇಕಾಗುವಷ್ಟು ಔಷಧಿಯನ್ನು ಮಧುಮೇಹಿಗಳು ತಂದು ಇಟ್ಟುಕೊಳ್ಳುವುದು ಒಳ್ಳೆಯದು, ಯಾಕೆಂದರೆ ಪದೇ ಪದೇ ಔಷಧಿಗಾಗಿ ಆಸ್ಪತ್ರೆ ಅಥವಾ ಮೆಡಿಕಲ್ ಶಾಪ್‍ಗೆ ಹೋಗೋದು ತಪ್ಪುತ್ತದೆ.

    3. ನಿಮ್ಮಗೆ ತಪಾಸಣೆ ನಡೆಸುವ ವೈದ್ಯರ ನಂಬರ್ ಇಟ್ಟುಕೊಂದು ಅಗ್ಯತ ಬಿದ್ದಾಗ, ಆರೋಗ್ಯದಲ್ಲಿ ಏರುಪೇರಾದಾಗ ಮಾತ್ರ ಕರೆ ಸಲಹೆ ಪಡೆಯಿರಿ.

    4. ಹ್ಯಾಂಡ್ ವಾಶ್, ಸೋಪ್ ಅಥವಾ ಸ್ಯಾನಿಟೈಸರ್‍ನಿಂದ ಆಗಾಗ ಕೈಗಳನ್ನು ತೊಳೆದುಕೊಳ್ಳೋದು ಒಳ್ಳೆಯದು. ದೇಹದಲ್ಲಿ ಸಕ್ಕರೆಯಂಶ ಕಡಿಮೆ ಆಗದಂತೆ ನೋಡಿಕೊಳ್ಳುವುದು ಅಗತ್ಯವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಗ್ಲೂಕೋಸ್ ಟ್ಯಾಬ್ಲೆಟ್ ಇಟ್ಟುಕೊಳ್ಳುವುದು ಒಳ್ಳೆಯದು.

    5. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಬಗ್ಗೆ ಗಮನ ಹರಿಸಿ. ದೇಹಕ್ಕೆ ಪೌಷ್ಟಿಕಾಂಶ ಸಿಗುವ ಆಹಾರ ಪಾನೀಯಗಳನ್ನು ಸೇವಿಸಿ, ಚೆನ್ನಾಗಿ ನಿದ್ರೆ ಮಾಡಿ, ವ್ಯಾಯಾಮ ಮಾಡಿ, ಸರಿಯಾದ ಸಮಯಕ್ಕೆ ಆಹಾರ ಸೇವಿಸಿ ಔಷಧಿಗಳನ್ನು ತೆಗೆದುಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಿ.

    ಸೋಂಕು ತಗುಲುವುದನ್ನು ತಡೆಗಟ್ಟಲು ಏನು ಮಾಡಬೇಕು?

    1. ನಿಮ್ಮ ಕೈಗಳನ್ನು ಸೋಪ್, ಹ್ಯಾಂಡ್ ವಾಶ್ ಬಳಸಿ ಆಗಾಗ ತೊಳೆದುಕೊಳ್ಳಿ. ಅಥವಾ ಆಗಾಗ ಸ್ಯಾನಿಟೈಸರ್ ಬಳಸುತ್ತಿರಿ.

    2. ಒಂದು ವೇಳೆ ನಿಮ್ಮ ಕೈಗಳಿಗೆ ವೈರಸ್ ತಗುಲಿದ್ದರೆ ಅದು ನಿಮ್ಮ ದೇಹವನ್ನು ಸೇರುವ ಸಾಧ್ಯತೆ ಇರುತ್ತದೆ. ಹೀಗಾಗಿ ಕಣ್ಣು, ಮೂಗು, ಬಾಯಿಯನ್ನು ಆಗಾಗ ಮುಟ್ಟದಿರಿ. ನೀವು ಮುಟ್ಟುವ ವಸ್ತುಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ.

    3. ಗುಂಪು ಗುಂಪಾಗಿ ಓಡಾಡಬೇಡಿ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ. ಯಾರಾದರೂ ಕೆಮ್ಮುತ್ತಿದ್ದರೆ, ಜ್ವರ ಇದ್ದರೆ ಅವರಿಂದ ದೂರವಿರಿ.

    4. ಒಂದು ವೇಲೆ ಜ್ವರ, ಕೆಮ್ಮು, ಉಸಿರಾಟದ ಸಮಸ್ಯೆ ಆದರೆ ತಕ್ಷಣ ವೈದ್ಯರ ಬಳಿ ಹೋಗಿ ತಪಾಸಣೆ ಮಾಡಿಸಿಕೊಳ್ಳಿ, ನಿರ್ಲಕ್ಷಿಸಿದರೆ ಅಪಾಯ ಆಗುವ ಸಾಧ್ಯತೆ ಹೆಚ್ಚಿರುತ್ತದೆ.

  • ಮಧುಮೇಹದಂಥ ಜೀವನಶೈಲಿ ಕಾಯಿಲೆಗೆ ಕ್ರೀಡೆಯೇ ಮದ್ದು: ಡಾ. ಅಶ್ವತ್ಥನಾರಾಯಣ

    ಮಧುಮೇಹದಂಥ ಜೀವನಶೈಲಿ ಕಾಯಿಲೆಗೆ ಕ್ರೀಡೆಯೇ ಮದ್ದು: ಡಾ. ಅಶ್ವತ್ಥನಾರಾಯಣ

    ಬೆಂಗಳೂರು: ಬೊಜ್ಜು, ಹೈಪರ್ ಟೆನ್ಶನ್, ಮಧುಮೇಹದಂಥ ಜೀವನಶೈಲಿಯ ಕಾಯಿಲೆಗೆ ಕ್ರೀಡೆಯೇ ಮದ್ದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.

    ‘ಡಯಾಬಿಟಿಸ್ ಇಂಡಿಯಾ 2020’ ಕಾರ್ಯಕ್ರಮದಲ್ಲಿ ಶುಕ್ರವಾರ ಭಾಗವಹಿಸಿ ಮಾತನಾಡಿದ ಡಾ. ಅಶ್ವತ್ಥನಾರಾಯಣ, “ಸಣ್ಣ ವಯಸ್ಸಿನವರಲ್ಲಿ ಕಾಣಿಸಿಕೊಳ್ಳುತ್ತಿರುವ ಮಧುಮೇಹ ಸಮಸ್ಯೆ ನಿಜಕ್ಕೂ ಕಳವಳಕಾರಿ, ಇದಕ್ಕೆ ಪರಿಹಾರ ಎಂದರೆ ಆಟೋಟದಲ್ಲಿ ತೊಡಗಿಕೊಳ್ಳುವುದು,” ಎಂದು ಸಲಹೆ ನೀಡಿದರು.

    “ಜೀವನಶೈಲಿಯ ಸಮಸ್ಯೆಯಿಂದ ಬರುವಂಥ ಸ್ಥೂಲಕಾಯ, ಹೈಪರ್ ಟೆನ್ಶನ್, ಮಧುಮೇಹದಂಥ ಎಲ್ಲ ಆರೋಗ್ಯ ಸಮಸ್ಯೆಗಳಿಗೆ ಕ್ರೀಡೆಯೇ ಪರಿಹಾರ. ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕ್ರೀಡೆಗೆ ಒತ್ತು ನೀಡಿ, ‘ಫಿಟ್ ಇಂಡಿಯಾ’ ಯೋಜನೆ ತಂದಿದೆ. ನಮ್ಮ ಸರ್ಕಾರ ಕ್ರೀಡೆಗೆ ಹೆಚ್ಚು ಒತ್ತು ನೀಡಿದ್ದು, ಕಾಯಿಲೆ ತಡೆ ಹಾಗೂ ನಿಯಂತ್ರಣಕ್ಕೆ ನಮ್ಮ ಕಡೆಯಿಂದ ಎಲ್ಲ ರೀತಿಯ ನೆರವು ನೀಡಲು ಬದ್ಧ,” ಎಂದು ಅವರು ಭರವಸೆ ಕೊಟ್ಟರು.

    “ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಜೀವನಶೈಲಿಯ ಆರೋಗ್ಯ ಸಮಸ್ಯೆ ನಿಯಂತ್ರಣ, ನಿವರ್ಹಣೆಯೇ ದೊಡ್ಡ ಸವಾಲು. ಭಾರತದಲ್ಲಿ 7.7 ಕೋಟಿ ಮಧುಮೇಹಿಗಳಿದ್ದು, ಇನ್ನು ಎಷ್ಟೋ ಜನರಿಗೆ ತಮಗೆ ಮಧುಮೇಹ ಇದೆ ಎಂಬ ವಿಷಯವೇ ಗೊತ್ತಿರುವುದಿಲ್ಲ. ಅಂಥವರನ್ನು ಪರೀಕ್ಷೆಗೆ ಒಳಪಡಿಸುವುದು ಒಂದು ರೀತಿಯ ಸವಾಲಾದರೆ, ಈಗಾಗಲೇ ಸಮಸ್ಯೆಯಿಂದ ಬಳಲುತ್ತಿರುವವರು ಕಾಯಿಲೆ ನಿಯಂತ್ರಣಕ್ಕೆ ಒತ್ತು ನೀಡದಿರುವುದು ಮತ್ತೊಂದು ಸವಾಲು. ಅಂಕಿ ಅಂಶಗಳ ಪ್ರಕಾರ ಶೇ.70ರಷ್ಟು ರೋಗಿಗಳು ಮಧುಮೇಹ ನಿಯಂತ್ರಿಸುವುದರಲ್ಲಿ ವಿಫಲರಾಗಿದ್ದಾರೆ. ಈ ನಿಟ್ಟಿನಲ್ಲಿ ಇಂಥ ಸಮಾವೇಶಗಳು ನಿಜಕ್ಕೂ ದೊಡ್ಡ ವ್ಯತ್ಯಾಸ ಮಾಡಬಲ್ಲದು. ಕಾಯಿಲೆ ಬಗ್ಗೆ ಅರಿವು ಮೂಡಿಸುವ ಜೊತೆಗೆ ವಿನೂತನ ಚಿಕಿತ್ಸಾ ವಿಧಾನಗಳ ಮೇಲೆ ಬೆಳಕು ಚೆಲ್ಲುವ ಮೂಲಕ ವೈದ್ಯರಿಗೂ ನೆರವಾಗುವುದು,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಕ್ರೀಡೆ ಈಗ ಪಠ್ಯಕ್ರಮ
    “ಸಣ್ಣ ವಯಸ್ಸಿನವರಲ್ಲಿ ಟೈಪ್-2 ಮಧುಮೇಹ ಸಮಸ್ಯೆ ಹೆಚ್ಚುತ್ತಿದ್ದು, ಇದಕ್ಕೆ ಮುಖ್ಯ ಕಾರಣ ಪರೀಕ್ಷಾ ಒತ್ತಡ. ಮೊಬೈಲ್, ವೀಡಿಯೋ ನೋಡುವ ಚಟ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ಮಕ್ಕಳು ಹೊರಗೆ ಆಡಲು ಹೋಗದಿರುವುದೇ ಈ ಸಮಸ್ಯೆಗೆ ಮೂಲ ಕಾರಣ. ಶಾಲೆಗಳಲ್ಲೂ ಕ್ರೀಡೆಗೆ ಹೆಚ್ಚಿನ ಅನುಕೂಲ ಇಲ್ಲದಿರುವುದೂ ಸಮಸ್ಯೆಗೆ ಮತ್ತೊಂದು ಕಾರಣ. ಎಷ್ಟೋ ಶಾಲೆಗಳಲ್ಲಿ ಮೈದಾನ ಇರುವುದಿಲ್ಲ. ಕೆಲ ಶಾಲೆಗಳಲ್ಲಿ ಮೈದಾನ ಇದ್ದರೂ ಆಡಲು ಕಳುಹಿಸುವುದಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಅರಿತು ಕೇಂದ್ರ ಸರ್ಕಾರ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯಡಿ, ಕ್ರೀಡೆಯೂ ಪಠ್ಯಕ್ರಮದ ಭಾಗವನ್ನಾಗಿಸಿದೆ. ಈ ಮೊದಲು ಕ್ರೀಡೆ ಪಠ್ಯೇತರ ಚಟುವಟಿಕೆ ಆಗಿತ್ತು. ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮಕ್ಕಳು ಕಲಿಕೆಯಲ್ಲೂ ಮುಂದಿರುತ್ತಾರೆ ಎಂಬ ವಿಷಯವನ್ನು ನಾವು ಮರೆಯುವಂತಿಲ್ಲ,” ಎಂದರು.

    ಆಯುಷ್ಮಾನ್ ಭಾರತ್
    “ದೇಶಾದ್ಯಂತ 1.5 ಲಕ್ಷ ಆಯುಷ್ಮಾನ್ ಉಪ ಕೇಂದ್ರಗಳಿದ್ದು, ಜೀವನ ಶೈಲಿಯಿಂದ ಬರುವಂಥ ಆರೋಗ್ಯ ಸಮಸ್ಯೆಗಳಿಗೆ ಇವು ಪರಿಹಾರ ಕೇಂದ್ರಗಳಾಗುತ್ತವೆ. ಮಧುಮೇಹ ಪರೀಕ್ಷಾ ಸೌಲಭ್ಯವೂ ಇಲ್ಲಿ ಲಭ್ಯವಿರಲಿದೆ. ಸರ್ಕಾರದ ಹಾಗೂ ವೈದ್ಯ ಸಮೂಹದ ಪ್ರತಿನಿಧಿಯಾಗಿ ಉತ್ತಮ ಜೀವನಶೈಲಿಯ ಮಹತ್ವವನ್ನು ಜನರಿಗೆ ತಲುಪಿಸುವ ಪ್ರಯತ್ನ ಮಾಡುತ್ತೇನೆ,” ಎಂದು ಅವರು ಹೇಳಿದರು.

  • ಮಧುಮೇಹ, ಬೊಜ್ಜು ತಡೆಯೋದಕ್ಕೆ ಸಂಸ್ಕೃತ ಮಾತಾಡಿ: ಬಿಜೆಪಿ ಸಂಸದ

    ಮಧುಮೇಹ, ಬೊಜ್ಜು ತಡೆಯೋದಕ್ಕೆ ಸಂಸ್ಕೃತ ಮಾತಾಡಿ: ಬಿಜೆಪಿ ಸಂಸದ

    ನವದೆಹಲಿ: ಮಧುಮೇಹ, ಬೊಜ್ಜಿನಂತಹ ಸಮಸ್ಯೆಗಳನ್ನು ತಡೆಯಲು ಸಂಸ್ಕೃತ ಮಾತನಾಡಿ ಎಂದ ಬಿಜೆಪಿ ಸಂಸದರೊಬ್ಬರ ಹೇಳಿಕೆ  ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಗುರುವಾರ ಸದನದಲ್ಲಿ ಸಂಸ್ಕೃತಕ್ಕೆ ಸಂಬಂಧಿಸಿದ ಸಂವಾದದಲ್ಲಿ ಮಾತನಾಡುವ ವೇಳೆ ಬಿಜೆಪಿ ಸಂಸದ ಗಣೇಶ್ ಸಿಂಗ್ ಅವರು ಈ ಹೇಳಿಕೆ ಕೊಟ್ಟಿದ್ದಾರೆ. ನೀವು ಸಕ್ಕರೆ ಕಾಯಿಲೆ ಬರದಂತೆ ನೋಡಿಕೊಳ್ಳಲು ಪ್ರಯತ್ನಿಸುತ್ತಿದ್ದೀರಾ? ಬೊಜ್ಜಿನ ಸಮಸ್ಯೆ ನಿಮ್ಮನ್ನು ಕಾಡುತ್ತಿದೆಯಾ? ಇದನ್ನೆಲ್ಲಾ ತಡೆಯಲು ನೀವು ನಿತ್ಯ ಸಂಸ್ಕೃತ ಮಾತನಾಡಿ. ಆಗ ಈ ಕಾಯಿಲೆಗಳು ನಿಮ್ಮನ್ನು ಕಾಡುವುದಿಲ್ಲ ಎಂದು ಗಣೇಶ್ ಸಿಂಗ್ ಹೇಳಿಕೆ ನೀಡಿದ್ದಾರೆ. ಸಂಸದರ ಈ ಹೇಳಿಕೆ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗಿದ್ದು, ನಗೆಪಾಟಲಿಗೆ ಕಾರಣವಾಗಿದೆ.

    ಅಮೆರಿಕ ಮೂಲದ ಸಂಸ್ಥೆಯೊಂದು ಈ ಬಗ್ಗೆ ಅಧ್ಯಯನ ನಡೆಸಿದೆ. ಪ್ರತಿದಿನ ಸಂಸ್ಕೃತದಲ್ಲಿ ಮಾತನಾಡುವುದರಿಂದ ಮನುಷ್ಯನ ನರಗಳಿಗೆ ಹೊಸ ಚೈತನ್ಯ ಸಿಗುತ್ತದೆ. ಇದರಿಂದ ಮಧುಮೇಹ ಹಾಗೂ ಬೊಜ್ಜು ಸಮಸ್ಯೆ ನಮ್ಮಿಂದ ದೂರ ಉಳಿಯುತ್ತದೆ ಎಂದು ಅಮೆರಿಕದವರ ಅಧ್ಯಯನದಿಂದ ಬೆಳಕಿಗೆ ಬಂದಿದೆ. ಆದ್ದರಿಂದ ಸಂಸ್ಕೃತ ಮಾತನಾಡಿ ನೀವು ಆರೋಗ್ಯವಾಗಿರಬಹುದು ಎಂದು ತಿಳಿಸಿದ್ದರು.

    ಅಷ್ಟೇ ಅಲ್ಲದೆ ಕಂಪ್ಯೂಟರ್ ಕೋಡಿಂಗ್ ಬಗ್ಗೆ ಕೂಡ ಪ್ರತಿಕ್ರಿಯಿಸಿ, ಸದ್ಯ ಕಂಪ್ಯೂಟರ್ ಕೋಡಿಂಗ್ ಇಂಗ್ಲಿಷ್‍ನಲ್ಲಿದೆ. ಆದರೆ ಅದನ್ನು ಸಂಸ್ಕೃತದಲ್ಲಿ ಮಾಡಿದರೆ ದೋಷವೆಂಬುದೇ ಇರುವುದಿಲ್ಲ. ಸಂಸ್ಕೃತ ಕಂಪ್ಯೂಟರ್ ಗೆ ಹೊಂದಾಣಿಕೆ ಆಗುವ ಸೂಕ್ತ ಭಾಷೆ ಎಂದರು ಅಭಿಪ್ರಾಯ ವ್ಯಕ್ತಪಡಿಸಿದರು.

    ಹಾಗೆಯೇ ವಿಶ್ವದ ಶೇ.97 ಭಾಷೆಗಳಿಗೆ ಸಂಸ್ಕೃತದ ಹಿನ್ನೆಲೆ ಇದೆ. ಕೆಲ ಇಸ್ಲಾಮಿಕ್ ಭಾಷೆಗಳ ಮೇಲೂ ಸಂಸ್ಕೃತ ಪ್ರಭಾವ ಬೀರಿದೆ. ಆದ್ದರಿಂದ ಸಂಸ್ಕೃತ ಭಾಷೆಯ ಹಿರಿಮೆ ದೊಡ್ಡದು ಎಂದು ಹೇಳಿದರು.

    ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಅವರು ಈ ಬಗ್ಗೆ ಮಾತನಾಡಿ, ಸಂಸ್ಕೃತ ಭಾಷೆಗೆ ಬೇಗ ಹೊಂದಿಕೊಳ್ಳಬಹುದು, ಅಲ್ಲದೆ ಸಂಸ್ಕೃತದಲ್ಲಿ ಒಂದು ವಾಕ್ಯವನ್ನು ಹಲವು ರೀತಿಯಲ್ಲಿ ಮಾತನಾಡಬಹುದು. ಅಷ್ಟೇ ಅಲ್ಲದೆ ಇಂಗ್ಲಿಷ್‍ನ ಹಲವು ಪದಗಳು ಸಂಸ್ಕೃತದಿಂದಲೇ ಬಂದಿದೆ. ಆದ್ದರಿಂದ ಈ ಪ್ರಾಚೀನ ಭಾಷೆಗೆ ಪ್ರಾಮುಖ್ಯತೆ ಕೊಡುವುದರಿಂದ ಬೇರೆ ಯಾವ ಭಾಷೆಗಳ ಮೇಲೂ ದುಷ್ಪರಿಣಾಮಗಳು ಬೀರುವುದಿಲ್ಲ ಎಂದಿದ್ದರು.

  • ತನಗಿದ್ದ ರೋಗದ ಬಗ್ಗೆ ಪ್ರಿಯಾಂಕ ಪತಿ ಭಾವನಾತ್ಮಕ ಪೋಸ್ಟ್

    ತನಗಿದ್ದ ರೋಗದ ಬಗ್ಗೆ ಪ್ರಿಯಾಂಕ ಪತಿ ಭಾವನಾತ್ಮಕ ಪೋಸ್ಟ್

    ಮುಂಬೈ: ಬಾಲಿವುಡ್ ದೇಸಿ ಗರ್ಲ್ ಪ್ರಿಯಾಂಕ ಚೋಪ್ರಾ ಪತಿ ನಿಕ್ ಜೋನಸ್ 14 ವರ್ಷಗಳ ಹಿಂದೆ ತಮ್ಮನ್ನು ಕಾಡಿದ್ದ ರೋಗದ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

    ಕೆಲವು ದಿನಗಳ ಹಿಂದೆ ಪ್ರಿಯಾಂಕ, ನನ್ನ ಪತಿ ಅಸ್ತಮಾದಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದರು. ಇದೀಗ ನಿಕ್ ಜೋನಸ್ ಚಿಕ್ಕ ವಯಸ್ಸಿನಲ್ಲಿಯೇ ಟೈಪ್-1 ಡಯಾಬಿಟಿಸ್ ನಿಂದ ಬಳಲುತ್ತಿದ್ದ ವಿಷಯವನ್ನು ಹಂಚಿಕೊಂಡು ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿಕೊಂಡಿದ್ದಾರೆ.

    ನಿಕ್ ಪೋಸ್ಟ್:
    14 ವರ್ಷಗಳ ಹಿಂದೆ ಇದೇ ದಿನದಂದು ನನಗೆ ಡಯಾಬಿಟಿಸ್ ಇರೋದು ಗೊತ್ತಾಯ್ತು. ಹೀಗಾಗಿ ಚಿಕ್ಕ ವಯಸ್ಸಿನಿಂದಲೇ ನನ್ನ ಆರೋಗ್ಯದ ಬಗ್ಗೆ ಗಮನ ಕೊಡುತ್ತಿದ್ದೇನೆ. ಧ್ಯಾನ, ವರ್ಕೌಟ್, ಪೌಷ್ಠಿಕಾಂಶ ಆಹಾರ ಸೇವೆನ ಪದ್ಧತಿಯನ್ನು ಅಳವಡಿಸಿಕೊಂಡಿದ್ದೇನೆ. ಬ್ಲಡ್ ಶುಗರ್ ಮತ್ತು ಇನ್ಸುಲಿನ್ ತೆಗೆದುಕೊಳ್ಳವುದರ ಬಗ್ಗೆ ಜಾಗೃತನಾಗಿರಬೇಕಾಗುತ್ತಿತ್ತು. ಈ ರೋಗ ಬಾಹ್ಯವಾಗಿ ಕಾಣದಿದ್ದರೂ ಆಂತರಿಕವಾಗಿ ನನ್ನನ್ನು ಕುಗ್ಗಿಸಿತ್ತು. ಡಯಾಬಿಟಿಸ್ ನನಗೆ ಒಂಟಿತನದ ಅನುಭವವನ್ನು ನೀಡಿತ್ತು.

    ಈ ಕಾರಣದಿಂದಲೇ 2015ರಲ್ಲಿ @BeyondType1 ಆರಂಭಿಸಿದೆ. ಈ ಮೂಲಕ ಡಯಾಬಿಟಿಸ್ ನಿಂದ ಬಳಲುವರಿಗೆ ಜೊತೆಯಾಗಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇನೆ. ನವೆಂಬರ್ ಡಯಾಬಿಟಿಸ್ ಜಾಗೃತಿ ತಿಂಗಳಾಗಿ ಆಚರಿಸಲಾಗುತ್ತದೆ. ಹಾಗಾಗಿ ನಮ್ಮೊಂದಿಗೆ ಸೇರಿ ನಿಮ್ಮ ನೋವುಗಳನ್ನು ಹಂಚಿಕೊಳ್ಳಿ. ಯಾವುದೇ ರೋಗವು ನಿಮ್ಮ ವ್ಯಕ್ತಿತ್ವದ ಮೇಲೆ ಪ್ರಭಾವ ಬೀರಲಾರದು.

    https://www.instagram.com/p/B4VZ-SLDpTB/

    ಗಾಯಕರಾಗಿರುವ ನಿಕ್ ಜೋನಸ್ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇವರು ತಮಗಿಂತ ಹಿರಿಯ ವಯಸ್ಸಿನ ಪ್ರಿಯಾಂಕರನ್ನ ಮದುವೆ ಆಗುವ ಮೂಲಕ ಸುದ್ದಿಯಾಗಿದ್ದರು.

  • ಡಯಾಬಿಟಿಸ್ ಔಷಧಿ ನೀಡ್ತೀವಿ ಎಂದು ಲಕ್ಷಾಂತರ ರೂ ವಂಚನೆ – ಆರೋಪಿ ಅಂದರ್

    ಡಯಾಬಿಟಿಸ್ ಔಷಧಿ ನೀಡ್ತೀವಿ ಎಂದು ಲಕ್ಷಾಂತರ ರೂ ವಂಚನೆ – ಆರೋಪಿ ಅಂದರ್

    ಬೆಂಗಳೂರು: ಡಯಾಬಿಟಿಸ್ ಖಾಯಿಲೆಗೆ ಔಷಧಿ ನೀಡುತ್ತೇವೆ ಎಂದು ಲಕ್ಷಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

    ರಾಮ್‍ಮೂರ್ತಿ ಬಂಧಿತ ಆರೋಪಿ. ವಾಸುದೇವ್ ಮೂರ್ತಿ ಎಂಬುವವರ ಬಳಿ ಆಯುರ್ವೇದ ಎಣ್ಣೆಗೆ ಚಿನ್ನ, ಬೆಳ್ಳಿ ಮತ್ತು ವಜ್ರ ಮಿಶ್ರಿತ ಭಸ್ಮವನ್ನು ಹಾಕಿ ಮಾಸಾಜ್ ಮಾಡಿದರೆ ಡಯಾಬಿಟಿಸ್ ಕಡಿಮೆಯಾಗುತ್ತದೆ ಎಂದು ಬುರುಡೆ ಬಿಟ್ಟು ಇದಕ್ಕಾಗಿ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಹಣ ಪಡೆದುಕೊಂಡಿದ್ದಾನೆ.

     

    ಶಾಂತಿನಗರದ ಕೆ.ಎಚ್ ರಸ್ತೆಯ ಆಯುರ್ವೇದ ಅಂಗಡಿಯಲ್ಲಿ ಎಣ್ಣೆ ಸಿಗುತ್ತೆ ಎಂದು ವಾಸುದೇವ್ ಅವರನ್ನು ಅಂಗಡಿ ಹತ್ತಿರ ಕರೆಸಿ ಅಲ್ಲಿಯೇ ಹಣ ಪಡೆದುಕೊಂಡಿದ್ದಾನೆ. ಇದಕ್ಕೆ ರಾಮ್ ಮೂರ್ತಿ ಮತ್ತು ಶಿವಾನಂದ್ ಬಾಲಾಜಿ ಎಂಬುವವರ ಕೂಡ ಸಾಥ್ ನೀಡಿದ್ದಾರೆ. ಆರೋಪಿಗಳ ಮಾತನ್ನು ನಂಬಿ ವಾಸುದೇವ್ ಹಣ ನೀಡಿದ್ದಾರೆ. ಆದರೆ ಆರೋಪಿಗಳು ಒಂದು ತಿಂಗಳಿನಲ್ಲಿ ಕಾಯಿಲೆಯೇ ವಾಸಿಯಾಗುತ್ತದೆ ಎಂದು ಹೇಳಿದ್ದರು. ಆದರೆ ಮೂರು ತಿಂಗಳಾದರೂ ಖಾಯಿಲೆ ವಾಸಿಯಾಗಿರಲ್ಲ.

    ಇದರಿಂದ ಅನುಮಾನಗೊಂಡ ವಾಸುದೇವ್ ಶಾಂತಿನಗರ ಆಯುರ್ವೇದ ಅಂಗಡಿಗೆ ಹೋದಾಗ ಅಂಗಡಿಗೆ ಬೀಗ ಹಾಕಿತ್ತು. ನಂತರ ಇದೊಂದು ಮೋಸದ ಜಾಲ ಎಂದು ಗೊತ್ತಾಗಿದೆ. ಇದೇ ರೀತಿ ಈ ಗ್ಯಾಂಗ್ ತುಂಬ ಜನರಿಗೆ ಮೋಸ ಮಾಡಿದೆ ಎನ್ನಲಾಗಿದೆ. ಸದ್ಯ ಓರ್ವ ಆರೋಪಿಯನ್ನು ಬಂಧಿಸಿರುವ ಪೊಲೀಸರು ಇನ್ನಿಬ್ಬರಿಗೆ ಬಲೆ ಬೀಸಿದ್ದಾರೆ.

  • ಮಧುಮೇಹಿಗಳಿಗೆ ರಾಮಬಾಣವಾಗಿರುವ ಜಂಬುನೇರಳೆ ಹಣ್ಣಿಗೆ ಭಾರೀ ಡಿಮ್ಯಾಂಡ್!

    ಮಧುಮೇಹಿಗಳಿಗೆ ರಾಮಬಾಣವಾಗಿರುವ ಜಂಬುನೇರಳೆ ಹಣ್ಣಿಗೆ ಭಾರೀ ಡಿಮ್ಯಾಂಡ್!

    -ಮಾರುಕಟ್ಟೆಯಲ್ಲಿ ನೇರಳೆ ಹಣ್ಣಿನ ಕಾರುಬಾರು!

    ಚಿಕ್ಕಬಳ್ಳಾಪುರ: ಇಲ್ಲಿಯ ಗಲ್ಲಿ ಗಲ್ಲಿಗಳಲ್ಲಿ ನೇರಳೆ ಹಣ್ಣಿನದ್ದೆ ಕಮಾಲ್. ಮಧುಮೇಹಿಗಳಿಗೆ ರಾಮಬಾಣವಾಗಿರುವ ಜಂಬುನೇರಳೆ ಹಣ್ಣಿಗೆ ಭಾರೀ ಡಿಮ್ಯಾಂಡ್ ಇದೆ. ಇದರಿಂದ ಬೆಳೆದ ರೈತರಿಗೂ ಲಾಭ ಸೇವಿಸಿದ ಗ್ರಾಹಕರಿಗೂ ಭಾರೀ ಲಾಭವಾಗಿದೆ.

    ನೇರಳೆ ಹಣ್ಣಿನಲ್ಲಿ ವಿವಿಧ ಔಷಧೀಯ ಗುಣಗಳಿವೆ. ಕೆಲವು ಕಾಯಿಲೆಗಳಿಗೆ ನೇರಳೆ ಹಣ್ಣು ರಾಮಬಾಣ ಅನ್ನೋ ಪ್ರಚಾರ ಆಗಿದ್ದೇ ತಡ, ಮಾರುಕಟ್ಟೆಯಲ್ಲಿ ಮುಗಿಬಿದ್ದು ನೇರಳೆ ಹಣ್ಣುಗಳನ್ನು ಕೊಂಡುಕೊಳ್ಳುತ್ತಿದ್ದಾರೆ. ಇದರಿಂದ ನೇರಳೆ ಬೆಳೆದ ರೈತರಿಗೆ ಜಣ ಜಣ ಕಾಂಚಣವಾದರೆ, ಗ್ರಾಹಕರು ಔಷಧಿಯುಕ್ತ ಹಣ್ಣು ತಿಂದ ಖುಷಿಪಡುತ್ತಿದ್ದಾರೆ.

    ಕಾಡು ಮೇಡು ಬೆಟ್ಟಗುಡ್ಡ, ರೈತರ ಬದುಗಳಲ್ಲಿ ಕಾಣಸಿಗುತ್ತಿದ್ದ ನೇರಳೆ ಹಣ್ಣನ್ನು ಕಂಡರೆ ಮೂಗು ಮುರಿಯುತ್ತಿದ್ದ ಕಾಲವೊಂದಿತ್ತು. ಆದರೆ ನೇರಳೆ ಹಣ್ಣಿನಲ್ಲಿ ಅಪರೂಪದ ಕಾಯಿಲೆಗಳನ್ನು ವಾಸಿಮಾಡಬಲ್ಲ, ಔಷಧೀಯ ಗುಣಗಳಿವೆ ಅನ್ನೋದು ಗೊತ್ತಾಗುತ್ತಿದ್ದಂತೆ, ನೇರಳೆ ಹಣ್ಣಿಗೆ ಬಾರೀ ಭಾರೀ ಡಿಮ್ಯಾಂಡ್ ಬಂದಿದೆ. ಮೇ ಹಾಗೂ ಜೂನ್ ತಿಂಗಳಲ್ಲಿ ಮಾತ್ರ ಲಭ್ಯವಿರುವ ನೇರಳೆ ಹಣ್ಣಿಗೆ ಮಾರುಕಟ್ಟೆಯಲ್ಲಿ ಭಾರೀ ಡಿಮ್ಯಾಂಡ್ ಬಂದ ಕಾರಣ ಚಿಕ್ಕಬಳ್ಳಾಪುರದ ಗಲ್ಲಿ ಗಲ್ಲಿಗಳಲ್ಲಿ ಸಣ್ಣ ಹಣ್ಣಿನ ಅಂಗಡಿಯಿಂದ ದೊಡ್ಡ ದೊಡ್ಡ ಹಣ್ಣಿನ ಅಂಗಡಿಗಳಲ್ಲೂ ನೇರಳೆ ಹಣ್ಣಿನದ್ದೇ ಕಾರುಬಾರು. ಕೆ.ಜಿ ನೇರಳೆ ಹಣ್ಣಿಗೆ ಇನ್ನೂರು ರೂಪಾಯಿಂದ ಮುನ್ನೂರು ರೂಪಾಯಿ ಕೊಟ್ಟು ಸಾರ್ವಜನಿಕರು ಖರೀದಿ ಮಾಡುತ್ತಿದ್ದಾರೆ.

    ನೇರಳೆ ಮರದ ಎಲೆ, ಕಾಯಿ, ತೊಗಟೆ, ಹಣ್ಣು, ಬೀಜ ಎಲ್ಲವೂ ಔಷಧೀಯ ಗುಣಗಳನ್ನು ಒಳಗೊಂಡಿದೆ. ಇದರಿಂದ ನೇರಳೆ ಮರಗಳನ್ನು ಬೆಳೆದ ರೈತರಿಗೆ ಪುಲ್ ಡಿಮ್ಯಾಂಡೋ ಡಿಮ್ಯಾಂಡ್. ಮೇ ಜೂನ್ ತಿಂಗಳಲ್ಲಿ ಹಣ್ಣಿಗೆ ಬಾರೀ ಬೇಡಿಕೆ ಬಂದು ಹಣ್ಣುಗಳ ವರ್ತಕರು ರೈತರ ತೋಟಗಳಿಗೆ ಬಂದು ಖರೀದಿಸುತ್ತಿದ್ದಾರೆ. ಇನ್ನು ಹೂ ಮೊಗ್ಗು ಇರುವಾಗಲೇ ನೇರಳೆ ಮರಗಳ ಗುತ್ತಿಗೆ ಪಡೆಯುತ್ತಾರೆ. ನೇರಳೆ ಮರಕ್ಕೆ ಬಂಗಾರದ ಬೆಲೆ ಬಂದ ಕಾರಣ, ಕಾಡು ಮೇಡುಗಳಲ್ಲಿ ಇರುತ್ತಿದ್ದ ನೇರಳೆ ಮರಗಳು ರೈತರ ಜಮೀನುಗಳಲ್ಲಿ ತೋಟಗಳಾಗಿ ಮಾರ್ಪಡುತ್ತಿವೆ. ಇನ್ನು ಚಿಕ್ಕಬಳ್ಳಾಪುರ ತೋಟಗಾರಿಕಾ ಇಲಾಖೆ, ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ, ಸಸಿಯಿಂದ ನಾಟಿ ಮಾಡೋವರೆಗೂ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದೆ.