Tag: Diary

  • ಸ್ಟೈಲಿಶ್ ಸ್ಟಾರ್ ಅಲ್ಲು ದಿನಚರಿ: ಫ್ಯಾನ್ಸ್ ಜೊತೆ ಹಂಚಿಕೊಂಡಿದ್ದೇನು?

    ಸ್ಟೈಲಿಶ್ ಸ್ಟಾರ್ ಅಲ್ಲು ದಿನಚರಿ: ಫ್ಯಾನ್ಸ್ ಜೊತೆ ಹಂಚಿಕೊಂಡಿದ್ದೇನು?

    ಖ್ಯಾತ ನಟ ಅಲ್ಲು ಅರ್ಜುನ್ ಹಾಗೂ ಡ್ಯಾಷಿಂಗ್ ಡೈರೆಕ್ಟರ್ ಸುಕುಮಾರ್ (Sukumaran) ಮತ್ತೊಮ್ಮೆ ಬಾಕ್ಸಾಫೀಸ್ ಉಡೀಸ್ ಮಾಡೋದಿಕ್ಕೆ ಭರ್ಜರಿಯಾಗಿ ಸಜ್ಜಾಗಿದ್ದಾರೆ. ಪುಷ್ಪ ಮೂಲಕ ದಕ್ಷಿಣ ಧ್ರುವದಿಂದ ಉತ್ತರ ಧ್ರುವದವರೆಗೂ ಧಮಾಕ ಎಬ್ಬಿಸಿದ್ದ ಈ ಜೋಡಿ ಡಬಲ್ ಸಂಭ್ರಮದಲ್ಲಿ ತೇಲಾಡ್ತಿದೆ. 2 ರಾಷ್ಟ್ರಪ್ರಶಸ್ತಿಗಳು ಪುಷ್ಪ-ದಿ ರೈಸ್ ಸಿನಿಮಾಗೆ ಒಲಿದು ಬಂದಿವೆ. ಸೂರ್ಯ, ಧನುಷ್ ನಂತಹ ಸ್ಟಾರ್ಸ್ ಹಿಂದಿಕ್ಕೆ ಮಿಸ್ಟರ್ ಅಲ್ಲು ಅತ್ಯುತ್ತಮ ನಟ ಗರಿ ತಮ್ಮದಾಗಿಸಿಕೊಂಡ್ರೆ, ಅತ್ಯುತ್ತಮ ಸಂಗೀತ ನಿರ್ದೇಶಕನ ಪ್ರಶಸ್ತಿ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಪಾಲಾಗಿದೆ. ಈ ಖುಷಿ ಕ್ಷಣವನ್ನು ಪುಷ್ಪ ಟೀಂ ಸಂಭ್ರಮಿಸಿ ಕ್ಯಾಕಿ ಹಾಕ್ತಿದೆ.

    ರಾಷ್ಟ್ರಪ್ರಶಸ್ತಿ ತಮ್ಮ ಮಡಿಲು ಸೇರುವ ಆನಂದದಲ್ಲಿರುವ ಅಲ್ಲು ಅರ್ಜುನ್ ಫ್ಯಾನ್ಸ್ ಗೆ ಸರ್ ಪ್ರೈಸ್ ಗಿಫ್ಟ್ ಗಿಫ್ಟ್ ಕೊಟ್ಟಿದ್ದಾರೆ. ಸೀಕ್ವೆಲ್ ಶೂಟಿಂಗ್ ಎಲ್ಲಿಗೆ ಬಂತು ಗುರು? ಅಪ್ ಡೇಟ್ ಬೇಕು ಅಪ್ ಡೇಟ್ ಅನ್ನುತ್ತಿದ್ದವರಿಗೆ ಸ್ಟೈಲಿಶ್ ಡೈರೆಕ್ಟ್ ಆಗಿ ಪುಷ್ಪ-2 ಕೋಟೆ ಒಳಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲುಗಾರು ಹುಟ್ಟುಹಬ್ಬಕ್ಕೆ ಅನಾವರಣ ಪುಷ್ಪ-2 ಸಣ್ಣ ಟೀಸರ್ ಹಂಗಾಮ ಕ್ರಿಯೇಟ್ ಮಾಡಿತ್ತು. ಕಾಣೆಯಾಗಿದ್ದ ಪುಷ್ಪ ಹೊಸ ಅವತಾರದಲ್ಲಿ ಪ್ರತ್ಯಕ್ಷನಾಗುವ ಮೂಲಕ ಇನ್ಮುಂದೆ ನನ್ನಂದೇ ರೂಲ್ ಎಂಬ ಸಂದೇಶ ರವಾನಿಸಿದ್ದಾನೆ. ಪುಷ್ಪ ಸೀಕ್ವೆಲ್ ಎಂಟ್ರಿ ತುಣುಕು ಬಾಲಿವುಡ್ ಮಂದಿಯನ್ನು ಕಂಗೆಡಿಸಿತ್ತು. ಈಗ ರಿವೀಲ್ ಆಗಿರುವ ಪುಷ್ಪ-2 ಮೇಕಿಂಗ್ ಫ್ಯಾನ್ಸ್ ಎಕ್ಸೈಟ್ ಆಗುವಂತೆ ಮಾಡಿದೆ.

    ಅಲ್ಲು ಅರ್ಜುನ್ (Allu Arjun) ಪುಷ್ಪ-2 ಮೇಕಿಂಗ್ ಝಲಕ್ ಮಾತ್ರ ಹಂಚಿಕೊಂಡಿಲ್ಲ. ತಮ್ಮ ದೈನಂದಿನ ದಿನ ದಿನಚರಿ ಹೇಗಿ ಇರುತ್ತೇ ಅನ್ನೋದನ್ನು 2 ನಿಮಿಷ 20 ಸೆಕೆಂಡ್ ವಿಡಿಯೋ ತುಣುಕಿನಲ್ಲಿ ರಿವೀಲ್ ಮಾಡಿದ್ದಾರೆ. ಒಬ್ಬ ಸೆಲೆಬ್ರಿಟಿ ಲೈಫ್ ಸ್ಟೈಲ್ ಹೇಗಿರುತ್ತದೆ? ಅವ್ರ ಮನೆ ಕಾರು, ಗಾರ್ಡನ್, ಕ್ಯಾರವಾನ್ ಬಗ್ಗೆ ತಿಳಿದುಕೊಳ್ಳುವ ಕ್ಯೂರಿಯಾಸಿಟಿಯಂತೂ ಪ್ರತಿಯೊಬ್ಬ ಕಲಾಭಿಮಾನಿಗೂ ಇದ್ದೇ ಇರುತ್ತದೆ. ಆ ಕ್ಯೂರಿಯಾಸಿಟಿಯನ್ನ ತಣಿಸುವ ಕೆಲಸ ಮಾಡಿದ್ದಾರೆ ಮಿಸ್ಟರ್ ಬನ್ನಿಗಾರು. ಈ ಸ್ಪೆಷಲ್ ವಿಡಿಯೋ ಇನ್ ಸ್ಟಾಗ್ರಾಂ ಸಾಥ್ ಕೊಟ್ಟಿದೆ. ಇನ್ ಸ್ಟಾಗ್ರಾಂ ತಂಡ ಅಲ್ಲು ಅರ್ಜುನ್ ಮನೆಗೆ ಭೇಟಿ ಕೊಟ್ಟು ಅವ್ರ ದಿನ ನಿತ್ಯದ ಅಪ್ ಡೇಟ್ ಗಳನ್ನು ಶೂಟ್ ಮಾಡಿ ಫ್ಯಾನ್ಸ್ ಎದುರು ತಂದಿದೆ. ಸ್ವತಃ ಇನ್ ಸ್ಟಾಗ್ರಾಂ ತಂಡವೇ ಅಲ್ಲು ಅರ್ಜುನ್ ಮನೆಗೆ ಭೇಟಿ ಕೊಟ್ಟು ವಿಡಿಯೋ ಮಾಡಿದೆ. ಈ ವಿಶೇಷ ಗೌರವಕ್ಕೆ ಪಾತ್ರವಾಗಿರುವ ದಕ್ಷಿಣ ಭಾರತದ ಮೊದಲ ನಟ ಎಂಬ ಹೆಗ್ಗಳಿಕೆ ಕೂಡ ಅಲ್ಲು ಮಡಿಲು ಸೇರಿದೆ.

     

    View this post on Instagram

     

    A post shared by Instagram (@instagram)

    ಪುಷ್ಪರಾಜ ಬೆಳಗ್ಗೆ ಎದ್ದ ತಕ್ಷಣ ತಮ್ಮ ಮನೆಯ ಅಲ್ಲು ಗಾರ್ಡನ್ ನಲ್ಲಿ ಧಾನ್ಯ ಮಾಡಿ ಚಿಲ್ ಆಗ್ತಾರೆ. ಗಾರ್ಡನ್ ಒಂದು ರೌಂಡ್ ಆಗಿ ಕಾಫಿ ಕುಡಿದು ತಮ್ಮ ಕಾಸ್ಟ್ಲೀ ಕಾರ್ ಹತ್ತಿಕೊಂಡು ತಮ್ಮ ಮುದ್ದಿನ ಮಕ್ಕಳಿಗೆ ವಿಡಿಯೋ ಕಾಲ್ ಮಾಡ್ತಾರೆ. ಎಲ್ಲಿ ಇರಲಿ ಎಷ್ಟೇ ಬ್ಯುಸಿ ಇರಲಿ ಅಲ್ಲು ಮಿಸ್ ಮಾಡದೇ ಮಧ್ಯಾಹ್ನ 1 ಗಂಟೆ ಮಕ್ಕಳಿಗೆ ವಿಡಿಯೋ ಕಾಲ್ ಮಾಡೋದನ್ನ ಮಾತ್ರ ಮರೆಯೋದಿಲ್ಲ. ವಿಡಿಯೋ ಕಾಲ್ ಮಾಡ್ತಾ ಹೈದ್ರಾಬಾದ್ ರಾಮೋಜಿಸಿಟಿ ಫಿಲ್ಮ ಸಿಟಿ ತಲುಪ್ತಾರೆ. ಅಲ್ಲಿ ನೆರೆದಿದ್ದ ಫ್ಯಾನ್ಸ್ ಭೇಟಿ ಮಾಡಿ ಶೂಟಿಂಗ್ ಸೆಟ್ ಗೆ ಹಾಜರಾಗ್ತಾರೆ.

    ಶೂಟಿಂಗ್ ಸೆಟ್ ಗೆ ಎಂಟ್ರಿ ಕೊಡ್ತಿದ್ದಂತೆ ಸಿನಿಮಾಗೆ ಸಂಬಂಧಿಸಿದ ಕಾಸ್ಟ್ಯೂಮ್, ಪ್ರಾಪರ್ಟಿಸ್ ಆಯ್ಕೆ ಮಾಡಿಕೊಂಡ ನಂತ್ರ ಪುಷ್ಪರಾಜ್ ತಮ್ಮ ಕ್ಯಾರವಾನ್ ಗೆ ಪ್ರವೇಶಿಸ್ತಾರೆ. ಅಲ್ಲು ಕ್ಯಾರವಾನ್ ತಲುಪ್ತಿದ್ದಂತೆ ನಿರ್ದೇಶಕ ಸುಕುಮಾರ್ ನೆಚ್ಚಿನ ಡಾರ್ಲಿಂಗ್ ಮೀಟ್ ಮಾಡಿ ಹಗ್ ಮಾಡಿ ಆ ದಿನ ಸೀನ್ಸ್ ಬಗ್ಗೆ ಎಕ್ಸ್ ಪ್ಲೈನ್ ಮಾಡ್ತಾರೆ. ನಂತ್ರ ಮೇಕಪ್ ಹಚ್ಚಿಕೊಂಡು ಕ್ಯಾಮೆರಾ ಎದುರು ಪ್ರತ್ಯಕ್ಷರಾಗ್ತಾರೆ.

    ಅಲ್ಲು ಅರ್ಜುನ್ ಹಾಗೂ ಸುಕುಮಾರ್ ನಡುವೆ ಅದ್ಭುತವಾದ ಬಾಂಡಿಂಗ್ ಇದೆ. ಸುಕುಮಾರ್ ಸಿನಿಮಾ ಜರ್ನಿ ಶುರುವಾಗಿದ್ದು ಅಲ್ಲು ಜೊತೆನೇ. ಆರ್ಯ ಸಿನಿಮಾದ ಮೂಲಕ ಹಿಟ್ ಜೋಡಿಯಾದ ಸ್ಟೈಲಿಶ್ ಸ್ಟಾರ್ ಸುಕುಮಾರ್ ಆರ್ಯ-2 ನಂತ್ರ ಪುಷ್ಪ-1 ಈಗ ಪುಷ್ಪ-2 ನಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲು ಅರ್ಜುನ್ ನನ್ನ ಮೊದಲ ಹೀರೋ ಎಂದಿರುವ ಸುಕುಮಾರ್, ನನ್ನ ಗೆಳೆಯ ಅಂತಾನೂ ಹೇಳಿಕೊಂಡಿದ್ದಾರೆ.

    ಪುಷ್ಪ 2 ದಿ ರೂಲ್ಸ್ ಶೂಟಿಂಗ್ ಹೈದ್ರಾಬಾದ್ (Hyderabad) ನ ರಾಮೋಜಿ ಫಿಲ್ಮಂ ಸಿಟಿಯಲ್ಲಿ ಭರದಿಂದ ಸಾಗ್ತಿದೆ. ಈ ನಡುವೆಯೇ ಸೀಕ್ವೆಲ್ ರೈಟ್ಸ್ ಭಾರೀ ಮೊತ್ತಕ್ಕೆ ಸೇಲ್ ಆಗಿರುವ ಸುದ್ದಿ ಹೊರಬಿದ್ದಿದೆ. ಹಿಂದಿ ಬೆಲ್ಟ್ ನಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಹಕ್ಕು ಮಾರಾಟವಾಗಿದೆಯಂತೆ. ಪುಷ್ಪ ಮೊದಲ ಭಾಗ ಬಾಲಿವುಡ್ ಅಂಗಳದಲ್ಲಿ ಬಡಾ ಹಿಟ್ ಕಂಡಿತ್ತು. ಅಲ್ಲು ಆಕ್ಟಿಂಗ್, ಸುಕುಮಾರ್ ಟೇಕಿಂಗ್ ಗೆ ಹಿಂದಿ ಮಂದಿ ಫಿದಾ ಆಗಿದ್ದರು. ಬಾಲಿವುಡ್ ಚಿತ್ರಗಳಿಗೆ ಟಕ್ಕರ್ ಕೊಟ್ಟಿದ್ದ ಪುಷ್ಪ 2 ಗಾಗಿ ಬಂಗಾರದ ಬೇಡಿಕೆ ಬಂದಿದೆ. 200 ಕೋಟಿ ಮೊತ್ತಕ್ಕೆ ಹಿಂದಿ ರೈಟ್ಸ್ ಮಾರಾಟವಾಗಿದ್ದು, 75 ಕೋಟಿಗೆ ಆಡಿಯೋ ರೈಟ್ಸ್ ಸೇಲ್ ಆಗಿರುವ ಬಗ್ಗೆ ಸಿನಿ ಜಜಾರ್ ನಲ್ಲಿ ಹೊಸ ಬಜ್ ಓಡಾಡ್ತಿದೆ. ಹಾಗಿದ್ರೆ ಪುಷ್ಪ-2  ವರ್ಷ ತೆರೆಗೆ ಬರೋದಂತು ಡೌಟ್. ಮುಂದಿನ ವರ್ಷ ಮಾರ್ಚ್ 22ಕ್ಕೆ ಪುಷ್ಪರಾಜನ ಫೈಯರ್ ತೆರೆಯಲ್ಲಿ ಶುರುವಾಗಲಿದೆ ಎನ್ನಲಾಗ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೀರೆಕೋಡಿ ಜೈನಮುನಿ ಹತ್ಯೆ ಪ್ರಕರಣ – ಸ್ವಾಮೀಜಿಯ ಡೈರಿ ರಹಸ್ಯ ಕೆದಕುತ್ತಿರುವ ಪೊಲೀಸರು

    ಹೀರೆಕೋಡಿ ಜೈನಮುನಿ ಹತ್ಯೆ ಪ್ರಕರಣ – ಸ್ವಾಮೀಜಿಯ ಡೈರಿ ರಹಸ್ಯ ಕೆದಕುತ್ತಿರುವ ಪೊಲೀಸರು

    ಚಿಕ್ಕೋಡಿ: ಹೀರೆಕೋಡಿ (Hirekodi) ನಂದಿಪರ್ವತ ಆಶ್ರಮದ (Nandi Parvatha Ashram) ಜೈನಮುನಿ (Jain Muni) ಕಾಮಕುಮಾರ ಮಹಾರಾಜರ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ ಚಿಕ್ಕೋಡಿ (Chikkodi) ಪೊಲೀಸರು ಸ್ವಾಮೀಜಿಯ ಡೈರಿ (Diary) ರಹಸ್ಯವನ್ನು ಕೆದಕುತ್ತಿದ್ದಾರೆ.

    ಜೈನಮುನಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ನಾರಾಯಣ ಮಾಳಿ ಮತ್ತು ಎ2 ಆರೋಪಿ ಹಸನ್ ದಲಾಯತ್‌ನನ್ನು ಜುಲೈ 17ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಈ ಹಿನ್ನೆಲೆ ಡಿವೈಎಸ್ಪಿ ಬಸವರಾಜ್ ಯಲಿಗಾರ ಅವರ ನೇತೃತ್ವದಲ್ಲಿ ಆರೋಪಿಗಳ ತೀವ್ರ ವಿಚಾರಣೆಯನ್ನು ನಡೆಸುತ್ತಿದ್ದು, ಈಗಾಗಲೇ ಚಿಕ್ಕೋಡಿ ಪೊಲೀಸರು ಹಲವು ಟೆಕ್ನಿಕಲ್ ಎವಿಡೆನ್ಸ್‌ಗಳನ್ನು ಸಂಗ್ರಹಿಸಿದ್ದಾರೆ. ಇದನ್ನೂ ಓದಿ: ಬಾಲಕಿಯ ಅಪಹರಣಕ್ಕೆ ಯತ್ನಿಸಿದ್ದ ಆರೋಪಿ ಅರೆಸ್ಟ್ – ಕೃತ್ಯದ ಉದ್ದೇಶ ಕೇಳಿ ಪೊಲೀಸರೇ ಶಾಕ್

    ಆರೋಪಿಗಳು ಸ್ವಾಮೀಜಿಯ ಹತ್ಯೆ ಮಾಡಿದ್ದಲ್ಲದೇ ಅವರ ಡೈರಿಯನ್ನೂ ಸುಟ್ಟು ಹಾಕಿದ್ದರು. ಈ ಕುರಿತು ತೀವ್ರ ವಿಚಾರಣೆ ನಡೆಸಿದಾಗ ಆರೋಪಿಗಳು ಜೈನಮುನಿಯ ಪರ್ಸನಲ್ ಡೈರಿಯನ್ನು ಸುಟ್ಟು ಹಾಕಿದ ಸ್ಥಳವನ್ನು ತೋರಿಸಿದ್ದಾರೆ. ಈ ಹಿನ್ನೆಲೆ ಸುಟ್ಟ ಡೈರಿಯ ಬೂದಿಯನ್ನು ಎಫ್‌ಎಸ್‌ಎಲ್‌ಗೆ (FSL) ರವಾನಿಸಲು ಸಿದ್ಧತೆ ಮಾಡಲಾಗಿದೆ. ಬೆಂಗಳೂರಿನ (Bengaluru) ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಡೈರಿಯ ಬೂದಿಯನ್ನು ರವಾನಿಸಲು ಸಿದ್ಧತೆ ನಡೆಸಿದ್ದು, ಅದರೊಂದಿಗೆ ನಾಲ್ಕು ಮೊಬೈಲ್ ಫೋನ್‌ಗಳನ್ನು ಸಹಾ ಪ್ರಯೋಗಾಲಯಕ್ಕೆ ರವಾನೆ ಮಾಡಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಪತ್ನಿಯನ್ನು ಕೇಳದೆ ಅಡುಗೆಗೆ ಟೊಮೆಟೊ ಬಳಸಿದ ಪತಿ – ಕೋಪಗೊಂಡು ಮಗಳೊಂದಿಗೆ ಮನೆಬಿಟ್ಟ ಹೆಂಡತಿ

    ಜೈನಮುನಿಗಳು ಬಳಸುತ್ತಿದ್ದ ಎರಡು ಮೊಬೈಲ್ ಹಾಗೂ ಇಬ್ಬರು ಆರೋಪಿಗಳ ತಲಾ ಒಂದೊಂದು ಮೊಬೈಲ್ ಅನ್ನು ಎಫ್‌ಎಸ್‌ಎಲ್‌ಗೆ ರವಾನಿಸಲು ಸಿದ್ಧತೆ ನಡೆಸಲಾಗಿದೆ. ಮೊಬೈಲ್‌ನಲ್ಲಿ ಏನಾದರೂ ಸಾಕ್ಷ್ಯ ಇದೆಯಾ? ಯಾವಾಗೆಲ್ಲಾ ಕರೆ ಮಾಡಿದ್ದರು ಎಂಬ ಬಗ್ಗೆ ಪೊಲೀಸರು ಪಿನ್ ಟು ಪಿನ್ ಮಾಹಿತಿ ಪಡೆಯುತ್ತಿದ್ದಾರೆ. ಹಣಕಾಸಿನ ವ್ಯವಹಾರ, ಸಾಮಾಜಿಕ ಜಾಲತಾಣ ಬಳಕೆ ಹಾಗೂ ಕಾಲ್ ರೆಕಾರ್ಡ್, ಪೋಟೋ ಮತ್ತು ವಿಡಿಯೋ ಪತ್ತೆಗಾಗಿ ಮೊಬೈಲ್‌ಗಳನ್ನು ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಐಷಾರಾಮಿ ಜೀವನಕ್ಕಾಗಿ ಲಾರಿ ಕಳ್ಳತನ – ಆರೋಪಿ ಅರೆಸ್ಟ್

    ಆರೋಪಿಗಳನ್ನು ಕಸ್ಟಡಿಗೆ ಪಡೆದು ಇಂದಿಗೆ (ಗುರುವಾರ) ಮೂರು ದಿನಗಳಾಗಿದ್ದು, ಮೂರನೇ ದಿನವೂ ಪೊಲೀಸರು ತನಿಖೆ ಮುಂದುವರೆಸುತ್ತಿದ್ದಾರೆ. ಬುಧವಾರ ಆರೋಪಿಗಳನ್ನು ಕರೆದೊಯ್ದು ಪೊಲೀಸರು ಸ್ಥಳ ಮಹಜರು ಮಾಡಿದ್ದರು. ಅಲ್ಲದೇ ಇಡೀ ದಿನ ಘಟನೆ ನಡೆದ ಸ್ಥಳ, ಮೃತದೇಹ ರವಾನಿಸಿದ ಮಾರ್ಗ ಜೈನಮುನಿಗಳ ದೇಹ ತುಂಡರಿಸಿದ ಸ್ಥಳ, ಕಟಕಬಾವಿಯ ಕೊಳವೆಬಾವಿ ಇದ್ದ ಗದ್ದೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸುಟ್ಟು ಹಾಕಿದ ಡೈರಿಯಲ್ಲಿ ಏನಿತ್ತು ಎಂಬ ಬಗ್ಗೆ ಎ1 ಆರೋಪಿ ನಾರಾಯಣ್ ಇಲ್ಲಿಯವರೆಗೂ ಬಾಯ್ಬಿಟ್ಟಿಲ್ಲ. ಈ ಹಿನ್ನೆಲೆ ಹಿರೇಕೋಡಿ ಆಶ್ರಮದಿಂದ ಕಟಕಬಾವಿಯ ಕೊಳವೆಬಾವಿ ಇದ್ದ ಗದ್ದೆಯವರೆಗೂ ಹೋಗಿದ್ದ ಮಾರ್ಗವನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. 35 ಕಿಲೋಮೀಟರ್ ರಸ್ತೆ ಮಾರ್ಗದಲ್ಲಿ ಇರುವ ಸಿಸಿ ಕ್ಯಾಮೆರಾಗಳ ಪರಿಶೀಲನೆ ನಡೆಸಿದ್ದು, ಹಂತಕರು ಸಿಸಿಟಿವಿಯಲ್ಲಿ ಸೆರೆ ಸಿಕ್ಕಿದ್ದಾರಾ ಎಂಬ ಬಗ್ಗೆ ಪೊಲೀಸರು ಸಾಕ್ಷ್ಯ ಕಲೆ ಹಾಕುತ್ತಿದ್ದಾರೆ. ಇದನ್ನೂ ಓದಿ: ಅನಾರೋಗ್ಯ ಹಿನ್ನೆಲೆ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆತ್ಮೀಯ ಸಾವೇ, ನನ್ನ ಜೀವನದಲ್ಲಿ ಬಾ – IPS ಅಧಿಕಾರಿ ಹತ್ಯೆ ಆರೋಪಿ ಡೈರಿಯಲ್ಲಿತ್ತು ನೋವಿನ ಸಾಲು

    ಆತ್ಮೀಯ ಸಾವೇ, ನನ್ನ ಜೀವನದಲ್ಲಿ ಬಾ – IPS ಅಧಿಕಾರಿ ಹತ್ಯೆ ಆರೋಪಿ ಡೈರಿಯಲ್ಲಿತ್ತು ನೋವಿನ ಸಾಲು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಐಪಿಎಸ್‌ ಅಧಿಕಾರಿ (IPS officer) ಲೋಹಿಯಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಯ ಸಹಾಯಕನನ್ನು ಪೊಲೀಸರು ಬಂಧಿಸಿದ್ದಾರೆ.

    ಹಿರಿಯ ಪೊಲೀಸ್‌ ಅಧಿಕಾರಿ ಹೇಮಂತ್‌ ಕುಮಾರ್‌ ಲೋಹಿಯಾ ಅವರ ಕತ್ತು ಸೀಳಿ ಹತ್ಯೆ ಮಾಡಲಾಗಿತ್ತು. ಲೋಹಿಯಾ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಯಾಸಿರ್‌ ಅಹ್ಮದ್‌ (Yasir Ahmed) ಪೊಲೀಸರು ಬಂಧಿಸಿದ್ದಾರೆ. ಯಾಸಿರ್ ಈ ಕೊಲೆ ಪ್ರಕರಣದ ಪ್ರಮುಖ ಆರೋಪಿ ಎಂದು‌ ಹೇಳಲಾಗಿದೆ. ಇದನ್ನೂ ಓದಿ: ಮನೆಯಲ್ಲಿ ಕತ್ತು ಸೀಳಿ ಐಪಿಎಸ್‌ ಅಧಿಕಾರಿ ಹತ್ಯೆ

    ಕೊಲೆಯ ನಂತರ ಯಾಸಿರ್ ಪರಾರಿಯಾಗಿದ್ದ. ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಯಾಸಿರ್ ಅಹ್ಮದ್ ತೀವ್ರ ಖಿನ್ನತೆಯಿಂದ ಬಳಲುತ್ತಿದ್ದ ಎಂಬುದು ಪೊಲೀಸರ ವಿಚಾರಣೆಯಿಂದ ತಿಳಿದುಬಂದಿದೆ.

    ಹತ್ಯೆಗೂ ಮುನ್ನ ಅಧಿಕಾರಿ ಲೋಹಿಯಾ ಅವರು ತಮ್ಮ ಕಾಲಿಗೆ ಎಣ್ಣೆಯನ್ನು ಹಚ್ಚುತ್ತಿದ್ದರು. ನಂತರ ಒಡೆದ ಬಾಟಲ್‌ನಿಂದ ಅವರ ಕತ್ತನ್ನು ಸೀಳಿ ಹತ್ಯೆ ಮಾಡಲಾಗಿದೆ. ಕೊಲೆ ಬಳಿಕ ಶಂಕಿತ ಆರೋಪಿ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    POLICE JEEP

    ಯಾಸಿರ್‌ ಅಹ್ಮದ್ ಸುಮಾರು ಆರು ತಿಂಗಳಿನಿಂದ ಲೋಹಿಯಾ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ. ಆತ ಖಿನ್ನತೆಯಿಂದ ಬಳಲುತ್ತಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ಬಹಿರಂಗವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಟಿವಿ, ವೆಬ್‍ಸೈಟ್‍ಗಳಲ್ಲಿ ಬೆಟ್ಟಿಂಗ್ ಜಾಹೀರಾತು ಪ್ರಸಾರ ಮಾಡಬೇಡಿ: ಕೇಂದ್ರ ಖಡಕ್ ಸೂಚನೆ

    ಯಾಸಿರ್ ಮಾನಸಿಕ ಸ್ಥಿತಿಯನ್ನು ಪ್ರತಿಬಿಂಬಿಸುವ ಡೈರಿ ಸೇರಿದಂತೆ ಕೆಲವು ಸಾಕ್ಷ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ʼಆತ್ಮೀಯ ಸಾವೇ.. ನನ್ನ ಜೀವನದಲ್ಲಿ ಬಾʼ ಎಂದು ಒಂದು ಟಿಪ್ಪಣಿ ಬರೆಯಲಾಗಿದೆ. ʼಕ್ಷಮಿಸಿ, ನಾನು ಕೆಟ್ಟ ದಿನ, ವಾರ, ತಿಂಗಳು, ವರ್ಷ, ಜೀವನವನ್ನು ಹೊಂದಿದ್ದೇನೆʼ ಎಂದು ಡೈರಿಯಲ್ಲಿ ಬರೆದಿದೆ.

    ನನ್ನ ಜೀವನವನ್ನು ದ್ವೇಷಿಸುತ್ತೇನೆ. ಜೀವನವು ಕೇವಲ ದುಃಖ ಎಂದು ಬರೆಯಲಾಗಿದೆ. ಅಲ್ಲದೇ ಫೋನ್‌ ಬ್ಯಾಟರಿಯ ರೇಖಾಚಿತ್ರವನ್ನು ಬಿಡಿಸಿ ಅದರಲ್ಲಿ, ಪ್ರೀತಿ 0%, ಉದ್ವೇಗ 90%, ದುಃಖ 99% , ಹುಸಿನಗು 100% ಎಂದಿದೆ.

    Live Tv
    [brid partner=56869869 player=32851 video=960834 autoplay=true]

  • ಶಿಕ್ಷಕರ ನೇಮಕಾತಿ ಹಗರಣ – ಚಟರ್ಜಿ ಆಪ್ತೆಯ ಮನೆಯಲ್ಲಿ ಸ್ಫೋಟಕ ಮಾಹಿತಿಯಿರುವ ಡೈರಿ ಪತ್ತೆ

    ಶಿಕ್ಷಕರ ನೇಮಕಾತಿ ಹಗರಣ – ಚಟರ್ಜಿ ಆಪ್ತೆಯ ಮನೆಯಲ್ಲಿ ಸ್ಫೋಟಕ ಮಾಹಿತಿಯಿರುವ ಡೈರಿ ಪತ್ತೆ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ದಾಳಿಯ ವೇಳೆ ಕಪ್ಪು ಡೈರಿಯೊಂದನ್ನು ಪತ್ತೆ ಮಾಡಿದೆ.

    ಇಡಿ ಮೂಲಗಳ ಪ್ರಕಾರ ಡೈರಿಯು ಪಶ್ಚಿಮ ಬಂಗಾಳ ಸರ್ಕಾರದ ಉನ್ನತ ಶಿಕ್ಷಣ ಮತ್ತು ಶಾಲಾ ಶಿಕ್ಷಣ ಇಲಾಖೆಗೆ ಸೇರಿದ್ದಾಗಿದೆ. ಡೈರಿಯ 40 ಪುಟಗಳಲ್ಲಿ ಬರೆಯಲಾಗಿದ್ದು, ಅದರಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಹಲವು ರಹಸ್ಯಗಳು ಸೇರಿವೆ ಎಂದಿದೆ. ಇದನ್ನೂ ಓದಿ: ನಾನು ಮುಖ್ಯಮಂತ್ರಿ ಆಗಿದ್ದರೆ ಉಮೇಶ್ ಕತ್ತಿಯನ್ನ ನಿಮ್ಹಾನ್ಸ್ ಸೇರಿಸ್ತಿದ್ದೆ: ವಾಟಾಳ್ ನಾಗರಾಜ್

    ಟಿಎಂಸಿ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ಮನೆಗೆ ಶುಕ್ರವಾರ ರಾತ್ರಿ ಇಡಿ ದಾಳಿ ನಡೆಸಿ, ಬರೋಬ್ಬರಿ 20 ಕೋಟಿ ರೂ. ನಗದನ್ನು ವಶಪಡಿಸಿಕೊಂಡಿತ್ತು. ಮರುದಿನ ಶಿಕ್ಷಕರ ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಚಟರ್ಜಿ ಅವರನ್ನು ಇಡಿ ಬಂಧಿಸಿತ್ತು. ಇದನ್ನೂ ಓದಿ: ಲವ್ಲಿನಾ ಕೋಚ್‌ಗೆ ಕಾಮನ್ ವೆಲ್ತ್ ಗೇಮ್ಸ್ ಪ್ರವೇಶಿಸಲು ಮಾನ್ಯತೆ

    Live Tv
    [brid partner=56869869 player=32851 video=960834 autoplay=true]

  • ವಿದ್ಯಾರ್ಥಿನಿಯನ್ನೇ ಪ್ರೀತಿಸಿ ಮದ್ವೆಯಾದ ಶಿಕ್ಷಕ -ಪತ್ನಿಯನ್ನ ಕೊಂದು ಆತ್ಮಹತ್ಯೆಗೆ ಶರಣು

    ವಿದ್ಯಾರ್ಥಿನಿಯನ್ನೇ ಪ್ರೀತಿಸಿ ಮದ್ವೆಯಾದ ಶಿಕ್ಷಕ -ಪತ್ನಿಯನ್ನ ಕೊಂದು ಆತ್ಮಹತ್ಯೆಗೆ ಶರಣು

    ಲಕ್ನೋ: ಪ್ರೀತಿಸಿ ವಿದ್ಯಾರ್ಥಿನಿಯನ್ನು ಎರಡನೇ ಮದುವೆಯಾಗಿದ್ದ ಕೋಚಿಂಗ್ ಕ್ಲಾಸ್‍ನ ಶಿಕ್ಷಕನೊಬ್ಬ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

    ಕಾನ್ಪುರದ ಕಲ್ಯಾಣ್ ನಗರದಲ್ಲಿ ಈ ಘಟನೆ ನಡೆದಿದ್ದು, ನಮ್ರತಾ ಖಾನ್(22) ಕೊಲೆಯಾದಾಕೆ. ಶಹವಾನ್(42) ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಶಹವಾನ್ ಆತ್ಮಹತ್ಯೆಗೂ ಮುನ್ನ ಪತ್ನಿ ಹತ್ಯೆಗೆ ಕಾರಣವೇನು ಎಂಬುದನ್ನು ತನ್ನ ಡೈರಿಯಲ್ಲಿ ಬರೆದಿದ್ದಾನೆ.

    ಘಟನೆ ವಿವರ:
    ಶಹವಾನ್ ಬಿಟೆಕ್ ಮುಗಿಸಿ ಕಾನ್ಪುರದಲ್ಲಿ ಕೋಚಿಂಗ್ ಸೆಂಟರ್ ನಡೆಸುತ್ತಿದ್ದನು. ಇಲ್ಲಿಗೆ ಕೋಚಿಂಗ್‍ಗೆ ಬರುತ್ತಿದ್ದ ನಮ್ರತಾ ಖಾನ್ ವಿದ್ಯಾರ್ಥಿನಿ ಮೇಲೆ ಪ್ರೀತಿ ಹುಟ್ಟಿದ್ದು, ಕ್ರಮೇಣ ಪರಸ್ಪರ ಇಬ್ಬರ ಪ್ರೀತಿಸುತ್ತಿದ್ದರು. ನಂತರ ಇಬ್ಬರೂ ಕೆಲವು ದಿನಗಳ ಕಾಲ ಒಟ್ಟಿಗೆ ಇದ್ದು, ಬಳಿಕ ಮದುವೆಯಾಗಿದ್ದಾರೆ. ಮದುವೆಯಾದ ಆರಂಭದಲ್ಲಿ ಇಬ್ಬರು ತುಂಬಾ ಚೆನ್ನಾಗಿದ್ದರು. ಆದರೆ ದಿನ ಕಳೆದಂತೆ ಇಬ್ಬರ ಮಧ್ಯೆ ಭಿನ್ನಾಭಿಪ್ರಾಯ ಶುರುವಾಗಿದೆ. ಶಹಮಾನ್‍ಗೆ ಈಗಾಗಲೇ ಮದುವೆಯಾಗಿದ್ದು, ಮಕ್ಕಳೂ ಇದ್ದಾರೆ ಎಂದು ತಿಳಿದು ಬಂದಿದೆ.

    ನನ್ನ ಜೀವನಕ್ಕೆ 2016ರಲ್ಲಿ ನಮ್ರತಾ ಬಂದಳು. ಆಕೆಯನ್ನು ನಾನು ಮದುವೆಯಾದೆ. ನನಗೆ ಈಗಾಗಲೇ ಮದುವೆಯಾಗಿ, ಮಕ್ಕಳಿರುವ ಬಗ್ಗೆ ತಿಳಿಸಿದ್ದೆನು. ಆದರೂ ಆಕೆ ಒಪ್ಪಿ ನನ್ನ ಮದುವೆಯಾಗಿದ್ದಳು. ನಾನು ಮೊದಲನೇ ಹೆಂಡತಿಗೆ ವಿಚ್ಛೇದನ ನೀಡಿದ್ದೆನು. ವಿವಾಹದ ಬಳಿಕ ನಮ್ರತಾ ನನಗೆ ತುಂಬಾ ಹಿಂಸೆ ಕೊಡುತ್ತಿದ್ದಳು. ನಾನು ಏನೇ ಹೇಳಿದರೂ ಕೇಳುತ್ತಿರಲಿಲ್ಲ. ಮಲಗಿದ್ದಾಗ ಕೆಟ್ಟದಾಗಿ ಬೈಯುತ್ತಿದ್ದಳು. ನನ್ನ ಮಗ ನಮ್ಮ ಜೊತೆಯೇ ವಾಸವಿದ್ದನು. ಆತನಿಗೆ ಪ್ರತಿದಿನ ಹೊಡೆಯುತ್ತಿದ್ದಳು. ನನ್ನಿಂದ ಆತನನ್ನು ದೂರ ಮಾಡಲು ಪ್ರಯತ್ನಿಸುತ್ತಿದ್ದಳು. ಇದರಿಂದ ನೊಂದಿದ್ದ ನನಗೆ ಜೀವನ ಸಾಕಾಗಿದೆ ಎಂದು ಶಹವಾನ್ ಡೈರಿಯಲ್ಲಿ ಬರೆದಿದ್ದಾನೆ.

    ಪತ್ನಿಯ ನಡತೆಯಿಂದ ಬೇಸತ್ತಿದ್ದ ಶಹವಾನ್ ಕೊಲೆ ಮಾಡಲು ನಿರ್ಧರಿಸಿದ್ದು, ಅದರಂತೆಯೇ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ನಂತರ ಪೊಲೀಸ್ ಠಾಣೆಗೆ ಫೋನ್ ಮಾಡಿ ನಾನು ನನ್ನ ಪತ್ನಿಯನ್ನು ಕೊಲೆ ಮಾಡಿದ್ದೇನೆ. ಆಕೆಯ ಶವ ರೂಮ್‍ನಂಬರ್ 612 ರಲ್ಲಿದೆ ಎಂದು ಮಾಹಿತಿ ತಿಳಿಸಿದ್ದಾನೆ. ಮಾಹಿತಿ ತಿಳಿದ ತಕ್ಷಣವೇ ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಶಹವಾನ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದನು.

    ಈ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ. ಕೌಟುಂಬಿಕ ಕಲಹದಿಂದ ಪತ್ನಿಯನ್ನು ಕೊಲೆ ಮಾಡಿ ತಾನೂ ವಿಷ ಕುಡಿದು ಆತ್ಮಹತ್ಮೆ ಮಾಡಿಕೊಂಡಿದ್ದಾನೆ. ಆತ ಬರೆದಿರುವ ಡೈರಿಯಲ್ಲಿ ತನ್ನ ಸಾವಿನ ನಂತರ ಆಸ್ತಿಯನ್ನು ಮೊದಲ ಪತ್ನಿ ಹಾಗೂ ಮಕ್ಕಳಿಗೆ ನೀಡುವಂತೆ ತಿಳಿಸಿದ್ದಾನೆ. ಸದ್ಯಕ್ಕೆ ಆ ಡೈರಿಯನ್ನು ಕೈಬರಹ ತಜ್ಞರಿಗೆ ಪರಿಶೀಲನೆ ಮಾಡಲು ನೀಡಿದ್ದೇವೆ ಎಂದು ಪೊಲೀಸ್ ಅಧಿಕಾರಿ ಪ್ರಕರಣದ ಬಗ್ಗೆ ವಿವರಿಸಿದ್ದಾರೆ.

  • ಯಡಿಯೂರಪ್ಪಗೆ ಪೆನ್ ಡ್ರೈವ್ ಸಂಕಷ್ಟ!

    ಯಡಿಯೂರಪ್ಪಗೆ ಪೆನ್ ಡ್ರೈವ್ ಸಂಕಷ್ಟ!

    ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಪೆನ್ ಡ್ರೈವ್ ಸಂಕಷ್ಟ ಎದುರಾಗಿದೆ.

    ಯಡಿಯೂರಪ್ಪಗೆ ಸಂಬಂಧಿಸಿದ ಡೈರಿ, ಪೆನ್ ಡ್ರೈವ್ ಅನ್ನು ತನಿಖಾಧಿಕಾರಿ ಮತ್ತು ನ್ಯಾಯಾಲಯದ ಮುಂದೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಡೈರಿ, ಪೆನ್ ಡ್ರೈವ್ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದು, ನನಗೆ ಭದ್ರತೆ ಕೊಟ್ಟರೆ ಮಾತ್ರ ಪೆನ್ ಡ್ರೈವ್ ನೀಡುತ್ತೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:  ಬಿಎಸ್‍ವೈ ಡೈರಿ ಪ್ರಕರಣ- ಈಶ್ವರಪ್ಪ ಆಪ್ತ ವಿನಯ್ ಪ್ರತಿಕ್ರಿಯೆ

    ವಿನಯ್ ಬಳಿ ಯಡಿಯೂರಪ್ಪಗೆ ಸಂಬಂಧಪಟ್ಟ ಡೈರಿಯ ಅಸಲಿ ಪೆನ್ ಡ್ರೈವ್ ಇದೆಯಂತೆ. ರಾಜ್ಯ ಪೊಲೀಸರು ಭದ್ರತೆಯನ್ನು ನೀಡಿದರೆ ತನಿಖಾಧಿಕಾರಿ ಅಥವಾ ನ್ಯಾಯಾಲಯಕ್ಕೆ ಡೈರಿ ನೀಡುತ್ತೇನೆ ಎಂದು ತೀರ್ಮಾನ ಮಾಡಿದ್ದಾರೆ. ನನ್ನ ಬಳಿ ಪ್ರಮುಖ ಸಾಕ್ಷ್ಯಾಧಾರಗಳು ಇವೆ. ಅದನ್ನು ನಾನು ನ್ಯಾಯಾಲಯದ ಮುಂದೆ ಇಡಬೇಕು. ಆ ಸಾಕ್ಷ್ಯ ಬಯಲಾದ ಬಳಿಕ ನನ್ನ ಜೀವಕ್ಕೆ ಕುತ್ತು ಬರುತ್ತದೆ. ಈ ಹಿನ್ನೆಲೆಯಲ್ಲಿ ಭದ್ರತೆ ನೀಡುವಂತೆ ಇಂದು ಅಮೃತಹಳ್ಳಿ ಪೊಲೀಸ್ ಠಾಣೆಯ ಪೊಲೀಸರಿಗೆ ಪತ್ರ ನೀಡಿ ವಿನಯ್ ಮನವಿ ಮಾಡಿಕೊಳ್ಳಲಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ವಿನಯ್, ಯಡಿಯೂರಪ್ಪ ಅವರ ಪಿಎ ಸಂತೋಷ್ ನನ್ನನ್ನು ಕಿಡ್ನಾಪ್ ಮಾಡಿ ವಿಫಲವಾಗಿದ್ದನು. ಬಳಿಕ ಆತ ಪೊಲೀಸ್ ಠಾಣೆಗೆ ಕೆಲವು ಅಗತ್ಯವಾದ ಮಾಹಿತಿ, ಪೆನ್‍ಡ್ರೈವ್ ಇದಕ್ಕೋಸ್ಕರ ಕಿಡ್ನಾಪ್ ಮಾಡಿಸಿದೆ ಎಂದು ಹೇಳಿಕೆ ಕೊಟ್ಟಿದ್ದನು. ಈ ಆಧಾರದ ಮೇಲೆ ಪೊಲೀಸರು ನನಗೆ ಒಂದು ನೋಟಿಸ್ ನೀಡಿದ್ದರು ಎಂದು ಹೇಳಿದ್ರು.

    ನಿಮ್ಮ ಬಳಿ ಯಾವುದಾದರೂ ದಾಖಲಾತಿ ಇದ್ದರೆ ಅದನ್ನು ನಮಗೆ ಕೊಡಿ ಎಂದು ನೋಟಿಸ್‍ನಲ್ಲಿ ಕೇಳಿದ್ದಾರೆ. ಹೀಗಾಗಿ ನನ್ನ ಬಳಿಯಿರುವ ದಾಖಲಾತಿ, ಪೆನ್‍ಡ್ರೈವನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಕೊಡಲು ತೀರ್ಮಾನ ಮಾಡಿದ್ದೇನೆ. ಆದರೆ ಸೂಕ್ತ ದಾಖಲೆ ಕೊಡಲು ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಪೊಲೀಸರ ಬಳಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಆದರೆ ತನಿಖೆಯಲ್ಲಿರುವ ವಿಚಾರದ ವೇಳೆ ಮಾಹಿತಿಯನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ. ಸಂತೋಷ್ ಕಿಡ್ನಾಪ್ ಮಾಡಿರುವ ಕುರಿತು ಪೆನ್ ಡ್ರೈವ್ ನಲ್ಲಿ ಇದೆ. ಬೇರೆ ವಿಚಾರ ನನಗೆ ಗೊತ್ತಿಲ್ಲ ಎಂದು ತಿಳಿಸಿದ್ರು.

    ಪೊಲೀಸ್ ಭದ್ರತೆ ಏಕೆ?
    ಈಗಾಗಲೇ ಒಮ್ಮೆ ನಮ್ಮ ಮೇಲೆ ಹಲ್ಲೆ ನಡೆದಿದೆ. ಈಗ ಅಪರಿಚಿತ ವ್ಯಕ್ತಿಗಳು ಓಡಾಡುತ್ತಿದ್ದಾರೆ. ಪಿಎ ಸಂತೋಷ್ ಇನ್ನೂ ಕೂಡ ಯಡಿಯೂರಪ್ಪ ಅವರ ಬಳಿಯೇ ಇದ್ದಾರೆ. ಹೀಗಾಗಿ ಅವರು ಮತ್ತೆ ನನ್ನ ಮೇಲೆ ಹಲ್ಲೆ ಮಾಡುವ ಅನುಮಾನ ಇದೆ. ಈ ನಿಟ್ಟಿನಲ್ಲಿ ಪೊಲೀಸ್ ಭದ್ರತೆ ಕೋರಿರುವುದಾಗಿ ತಿಳಿಸಿದ್ದಾರೆ.

  • ದಾಳಿ ನಡೆಯದೇ ಇದ್ದರೂ ಬಿಎಸ್‍ವೈ ಡೈರಿ ಐಟಿಗೆ ಸಿಕ್ಕಿದ್ದು ಹೇಗೆ?

    ದಾಳಿ ನಡೆಯದೇ ಇದ್ದರೂ ಬಿಎಸ್‍ವೈ ಡೈರಿ ಐಟಿಗೆ ಸಿಕ್ಕಿದ್ದು ಹೇಗೆ?

    – ಇದು ನಕಲಿ ಡೈರಿ – ಬಿಎಸ್‍ವೈ
    – ಹಳೇ ತಗಡು ತಂದು ಕಾಂಗ್ರೆಸ್ ಆರೋಪ – ಗೋ ಮಧುಸೂದನ್

    ಬೆಂಗಳೂರು: ಲೋಕಸಭಾ ಚುನಾವಣೆಯ ಸಮಯದಲ್ಲಿ ಯಡಿಯೂರಪ್ಪನವರು ಬಿಜೆಪಿಗೆ ಮತ್ತು ಪಕ್ಷದ ನಾಯಕರಿಗೆ ಒಟ್ಟು 1800 ಕೋಟಿ ರೂ. ನೀಡಿದ್ದಾರೆ ಎಂದು ಬರೆಯಲ್ಪಟ್ಟಿರುವ ಡೈರಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

    ಕಾಂಗ್ರೆಸ್ ವಕ್ತಾರ ರಣ್‍ದೀಪ್ ಸುರ್ಜೆವಾಲಾ ಅವರು ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಬಿಜೆಪಿ ನಾಯಕರಿಗೆ ಹಣ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ ಈ ಡೈರಿ 2017ರಿಂದ ಆದಾಯ ತೆರಿಗೆ ಇಲಾಖೆಯಲ್ಲಿದೆ. ನರೇಂದ್ರ ಮೋದಿ ಅವರು ಯಾಕೆ ಈ ಡೈರಿ ವಿಚಾರವನ್ನು ಲೋಕಪಾಲರಿಗೆ ತನಿಖೆಗೆ ನೀಡಬಾರದು ಎಂದು ಪ್ರಶ್ನಿಸಿದ್ದಾರೆ. ಆದರೆ ಬಿಜೆಪಿ ಇದು ನಕಲಿ ಡೈರಿ ಆಗಿದ್ದು, ಮೋದಿ ಜನಪ್ರಿಯತೆ ಮುಂದೆ ಕುಗ್ಗಿ ಹೋಗಿರುವ ಕಾಂಗ್ರೆಸ್ ಜನರ ಮನಸ್ಸನ್ನು ತನ್ನತ್ತ ಸೆಳೆಯಲು ಸುಳ್ಳು ಡೈರಿಯನ್ನು ಬಿಡುಗಡೆ ಮಾಡಿದೆ ಎಂದು ಆರೋಪಿಸಿದೆ.

    ಆದಾಯ ತೆರಿಗೆ ಇಲಾಖೆಗೆ ಈ ಡೈರಿ ಸಿಗಬೇಕಾದರೆ ಬಿಎಸ್ ಯಡಿಯೂರಪ್ಪನವರ ನಿವಾಸದ ಮೇಲೆ ದಾಳಿ ನಡೆಸಬೇಕು. ಆದರೆ ಈ ಡೈರಿ ಐಟಿಗೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿಕ್ಕಿದೆ ಎಂದು ಕ್ಯಾರವನ್ ಹೇಳಿದೆ.

    ಡಿಕೆ ಶಿವಕುಮಾರ್ ಮನೆ ಮೇಲೆ ಆದಾಯ ತೆರಿಗೆ ದಾಳಿ ನಡೆಸಿದಾಗ ಈ ಡೈರಿ ಸಿಕ್ಕಿದೆ ಎಂದು ಕಾರವಾನ್ ತಿಳಿಸಿದೆ. ವಿಚಾರದ ಬಗ್ಗೆ ಡಿಕೆ ಶಿವಕುಮಾರ್ ಅವರನ್ನು ಡೈರಿಯ ಹಾಳೆಗಳನ್ನು ತೋರಿಸಿದಾಗ ಅವರು, ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು 2017ರಲ್ಲಿ ವಶಪಡಿಸಿಕೊಂಡರು ಎಂದು ತಿಳಿಸಿದ್ದಾರೆ ಎಂಬುದಾಗಿ ‘ಕ್ಯಾರವಾನ್’ ಹೇಳಿದೆ.

    ಬಿಎಸ್‍ವೈ ಹೇಳೋದು ಏನು?
    ಈ ಹಿಂದೆಯೇ ಐಟಿ ಅಧಿಕಾರಿಗಳು ತನಿಖೆ ಮಾಡಿ ದಾಖಲೆಗಳು ಸುಳ್ಳು ಎಂದು ತಿಳಿಸಿದ್ದರು. ಆದರೆ ಕಾಂಗ್ರೆಸ್ ನಾಯಕರು ಅಪಪ್ರಚಾರ ಮಾಡಲು, ಸುಳ್ಳು ಸುದ್ದಿಯನ್ನು ಹರಡಲು ಹೀಗೆ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್ ವಿರುದ್ಧ ಮಾನನಷ್ಟ ಮೊಕದ್ದಮೆ ದೂರು ನೀಡುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.

    ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೋ.ಮಧುಸೂದನ್ ಅವರು, ಕಾಂಗ್ರೆಸ್ ಆರೋಪ ಚುನಾವಣಾ ಗಿಮಿಕ್ ಆಗಿದೆ. ಹಳೇ ತಗಡು ತಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ. ಇಲ್ಲಿ ತನಕ ಯಡಿಯೂರಪ್ಪ ಮನೆ ಮೇಲೆ ಐಟಿ ದಾಳಿ ಆಗಿಯೇ ಇಲ್ಲ. ಅನ್ಯ ಪ್ರಕರಣದಲ್ಲಿ ಅವರ ಬರಹ ಎಂದು ಕೇಳಿಬಂದಾಗ ಐಟಿ ಯಡಿಯೂರಪ್ಪ ಅವರ ಕೈ ಬರಹ ತನಿಖೆ ನಡೆಸಿತ್ತು ಅಷ್ಟೇ. ಆಗ ಆ ಬರಹ ನಿಮ್ಮದ್ದಲ್ಲ ಎಂದು ಹೇಳಿತ್ತು. ಮದುವೆಯಾದವರು ನಾನು ನನ್ನ ಹೆಂಡತಿ ಮದುವೆ ಆಗಿದ್ದೇನೆ ಎಂದು ಬರೆದುಕೊಳ್ಳುತ್ತಾರಾ? ಸಂಸದೆ ಶೋಭಾ ಕರಂದ್ಲಾಜೆ ಸಹೋದರಿ ಎಂದು ಬಿ.ಎಸ್.ಯಡಿಯೂರಪ್ಪ ಹೇಳುತ್ತಾರೆ. ಆದರೆ ಈ ಡೈರಿಯಲ್ಲಿ ಅಸಹ್ಯಕರವಾಗಿ ಉಲ್ಲೇಖ ಮಾಡಿದ್ದಾರೆ ಎಂದರು.

    ಡೈರಿ ‘ಪಬ್ಲಿಕ್’ ಪ್ರಶ್ನೆಗಳು
    ಪ್ರಶ್ನೆ 1 – ಐಟಿ ರೈಡ್ ಮಾಡದಿದ್ದರೂ ಈ ಡೈರಿ ಸಿಕ್ಕಿದ್ದಾದ್ರೂ ಹೇಗೆ?
    ಪ್ರಶ್ನೆ 2 – ನಕಲಿ ಅನ್ನೋದಾದ್ರೆ ಈ ಡೈರಿಯನ್ನು ಐಟಿಗೆ ತಲುಪಿಸಿದಾದ್ರೂ ಯಾರು?
    ಪ್ರಶ್ನೆ 3 – 2017ರಿಂದ ಐಟಿ ವಶದಲ್ಲಿರೋ ಡೈರಿ ಅಸಲಿಯೋ? ನಕಲಿಯೋ?
    ಪ್ರಶ್ನೆ 4 – ತನಿಖೆ ನಡೆದು ನಕಲಿ ಅಂತ ಬಿಎಸ್‍ವೈ ಹೇಳಿದಾಗ ಡೈರಿ ಇದೆ ಅಂತ ಅರ್ಥವೇ?

  • ಎಲ್‍ಕೆ ಅಡ್ವಾಣಿ ರೀತಿಯಲ್ಲಿ ಡೈರಿಯಲ್ಲಿ ಹೆಸರಿರುವವರು ರಾಜೀನಾಮೆ ನೀಡ್ಬೇಕು – ಅಮೀನ್ ಮಟ್ಟು

    ಎಲ್‍ಕೆ ಅಡ್ವಾಣಿ ರೀತಿಯಲ್ಲಿ ಡೈರಿಯಲ್ಲಿ ಹೆಸರಿರುವವರು ರಾಜೀನಾಮೆ ನೀಡ್ಬೇಕು – ಅಮೀನ್ ಮಟ್ಟು

    ಬೆಂಗಳೂರು: ಎಲ್‍ಕೆ ಅಡ್ವಾಣಿ ರೀತಿಯಲ್ಲೇ ಡೈರಿಯಲ್ಲಿ ಹೆಸರಿರುವ ಸಚಿವರು ರಾಜೀನಾಮೆ ನೀಡಬೇಕು ಎಂದು ಸಿಎಂ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಅಭಿಪ್ರಾಯಪಟ್ಟಿದ್ದಾರೆ.

    ಈ ಬಗ್ಗೆ ತಮ್ಮ ಫೆಸ್‍ಬುಕ್ ಅಕೌಂಟ್‍ನಲ್ಲಿ ಪೋಸ್ಟ್ ಮಾಡಿರೋ ಅಮೀನ್ ಮಟ್ಟು, ಈ ಹಿಂದೆ ಹವಾಲಾ ಹಣ ಸ್ವೀಕರಿಸಿದವರ ಪಟ್ಟಿಯಲ್ಲಿ `ಎಲ್ ಕೆ ಎನ್’ ಎನ್ನುವ ಇನಿಷಿಯಲ್ ಇರುವುದು ಬಹಿರಂಗವಾಗಿ, ಅದು ಲಾಲ್ ಕೃಷ್ಣ ಅಡ್ವಾಣಿಯವರೇ ಎಂದು ಪ್ರಚಾರವಾಗತೊಡಗಿದಾಗ ನೊಂದುಕೊಂಡ ಅಡ್ವಾಣಿಯವರು ಅದೇ ದಿನ ಸಂಜೆ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಹಾರಾ-ಬಿರ್ಲಾ ಡೈರಿಯಲ್ಲಿ `ಗುಜರಾತ್ ಸಿಎಂ’ ಮಧ್ಯಪ್ರದೇಶ ಸಿಎಂ, ಚತ್ತೀಸ್ ಗಡ ಸಿಎಂ’ ಡೆಲ್ಲಿ ಸಿಎಂ ಅವರಿಗೆ ಹಣ ನೀಡಲಾದ ಎಂಟ್ರಿಗಳಿವೆಯಂತೆ. ಡೈರಿ ಹಾವಳಿ ಅತಿಯಾಯಿತು. ಇದನ್ನು ಕೊನೆಗೊಳಿಸಬೇಕಾದರೆ ಸನ್ಮಾನ್ಯ ನರೇಂದ್ರಮೋದಿಯವರು ತಮ್ಮದೇ ಪಕ್ಷದ ಮಾರ್ಗದರ್ಶಕ ಮಂಡಳಿಯ ಹಿರಿಯ ಸದಸ್ಯರಾದ ಎಲ್.ಕೆ.ಅಡ್ವಾಣಿಯವರ ಮಾದರಿಯನ್ನು ಅನುಸರಿಸಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅದರ ನಂತರ ಗೋವಿಂದರಾಜ್ ಅವರದ್ದೆನ್ನಲಾದ ಡೈರಿಯಲ್ಲಿರುವ ಹೆಸರಿನ ಎಲ್ಲ ರಾಜಕಾರಣಿಗಳು ಕ್ಷಣಮಾತ್ರವೂ ಸಮಯ ವ್ಯರ್ಥಮಾಡದೆ ರಾಜೀನಾಮೆ ಎಸೆದುಬಿಡಬೇಕು ಎಂದಿದ್ದಾರೆ.

    ಈ ಮಧ್ಯೆ ಇಂದು ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ನಡೆಯಲಿದ್ದು 4 ವರ್ಷ ಪೂರೈಸಿದ ಹಿರಿಯ ಸಚಿವರಿಗೆ ಸಂಪುಟದಿಂದ ಗೇಟ್‍ಪಾಸ್ ನೀಡೋ ನಿರೀಕ್ಷೆ ಇದೆ.

    ಅಮೀನ್ ಮಟ್ಟು ಫೇಸ್‍ಬುಕ್ ಪೋಸ್ಟ್ ನಲ್ಲಿ ಈ ರೀತಿ ಹೇಳಿದ್ದಾರೆ:

    ಕಳೆದ ಕೆಲವು ವರ್ಷಗಳಿಂದ ಈ ಸಿಕ್ರೇಟ್ ಡೈರಿಗಳ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗುತ್ತಲೇ ಇದೆ. ಜೈನ್ ಹವಾಲಾ ಡೈರಿ, ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಯು.ವಿ.ಸಿಂಗ್ ನೀಡಿದ ತನಿಖಾ ವರದಿಯಲ್ಲಿನ ಖಾರದಪುಡಿ ಮಹೇಶ್ ಡೈರಿ, ಇತ್ತೀಚೆಗೆ ಸಹರಾ ಮತ್ತು ಬಿರ್ಲಾ ಕಂಪೆನಿಗಳ ಕಚೇರಿಯಲ್ಲಿ ಸಿಕ್ಕಿದೆಯೆನ್ನಲಾದ ಡೈರಿ, ಇದೀಗ ಎಂಎಲ್‍ಸಿ ಗೋವಿಂದರಾಜ್ ಮನೆಯಲ್ಲಿ ವಶಪಡಿಸಿಕೊಳ್ಳಲಾಗಿದೆಯೆನ್ನಲಾದ ಡೈರಿ.
    ಜೈನ್-ಹವಾಲಾ ಡೈರಿಯಲ್ಲಿನ ಆರೋಪಿಗಳೆಲ್ಲರನ್ನೂ ಸುಪ್ರೀಂಕೋರ್ಟ್ ಖುಲಾಸೆಗೊಳಿಸಿದೆ. ಸಹಾರಾ-ಬಿರ್ಲಾ ಕಂಪೆನಿಗಳ ಡೈರಿ ಬಗ್ಗೆ ವಿಚಾರಣೆಯನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ. ಈಗ ಉಳಿದಿರುವುದು ನೈತಿಕತೆಯ ಆಧಾರದ ಪಾಪ ಪ್ರಾಯಶ್ಚಿತ. ಇದು ಹೇಗೆ ಎನ್ನುವುದು ಪ್ರಶ್ನೆ. ನೈತಿಕತೆಯ ಆಧಾರದ ಪಾಪ ಪ್ರಾಯಶ್ಚಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಪಾಲಿಸಿದ ರಾಜಧರ್ಮದ ಮಾರ್ಗವೊಂದಿದೆ. ಇದು ಸರಿಯಾದ ಮಾರ್ಗ ಎಂದೆನಿಸುತ್ತದೆ. ಹವಾಲಾ ಹಣ ಸ್ವೀಕರಿಸಿದವರ ಪಟ್ಟಿಯಲ್ಲಿ `ಎಲ್ ಕೆ ಎನ್’ ಎನ್ನುವ ಇನಿಷಿಯಲ್ ಇರುವುದು ಬಹಿರಂಗವಾಗಿ, ಅದು ಲಾಲ್ ಕೃಷ್ಣ ಅಡ್ವಾಣಿಯವರೇ ಎಂದು ಪ್ರಚಾರವಾಗತೊಡಗಿದಾಗ ನೊಂದುಕೊಂಡ ಅಡ್ವಾಣಿಯವರು ಅದೇ ದಿನ ಸಂಜೆ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

    `ರಾಜಕೀಯದಲ್ಲಿ ವಿಶ್ವಾಸಾರ್ಹತೆ ಮುಖ್ಯ, ಅಧಿಕಾರ ಅಲ್ಲ. ಈ ಆರೋಪದಿಂದ ಮುಕ್ತವಾಗುವವರೆಗೆ ಲೋಕಸಭೆ ಪ್ರವೇಶಿಸುವುದಿಲ್ಲ’ ಎಂದು ಅವರು ಶಪಥ ಮಾಡಿದ್ದರು. ಅನಂತರ ಡೈರಿಯಲ್ಲಿ ಹೆಸರಿದ್ದ ಅನೇಕ ರಾಜಕಾರಣಿಗಳು ಕೂಡಾ ರಾಜೀನಾಮೆ ನೀಡಬೇಕಾಯಿತು. ನೈತಿಕ ನಿಲುವುಗಳು ಮೇಲಿನಿಂದ ಕೆಳಕ್ಕೆ ಇಳಿದು ಬರಬೇಕು. ಈಗ ಚೆಂಡು ಸನ್ಮಾನ್ಯ ಪ್ರಧಾನಿ ನರೇಂದ್ರಮೋದಿಯವರ ಮನೆಯಂಗಳದಲ್ಲಿದೆ. ಸಹಾರಾ-ಬಿರ್ಲಾ ಡೈರಿಯಲ್ಲಿ `ಗುಜರಾತ್ ಸಿಎಂ’ ಮಧ್ಯಪ್ರದೇಶ ಸಿಎಂ, ಚತ್ತೀಸ್ ಗಡ ಸಿಎಂ’ ಡೆಲ್ಲಿ ಸಿಎಂ ಅವರಿಗೆ ಹಣ ನೀಡಲಾದ ಎಂಟ್ರಿಗಳಿವೆಯಂತೆ. ಡೈರಿ ಹಾವಳಿ ಅತಿಯಾಯಿತು. ಇದನ್ನು ಕೊನೆಗೊಳಿಸಬೇಕಾದರೆ ಸನ್ಮಾನ್ಯ ನರೇಂದ್ರಮೋದಿಯವರು ತಮ್ಮದೇ ಪಕ್ಷದ ಮಾರ್ಗದರ್ಶಕ ಮಂಡಳಿಯ ಹಿರಿಯ ಸದಸ್ಯರಾದ ಎಲ್.ಕೆ.ಅಡ್ವಾಣಿಯವರ ಮಾದರಿಯನ್ನು ಅನುಸರಿಸಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅದರ ನಂತರ ಗೋವಿಂದರಾಜ್ ಅವರದ್ದೆನ್ನಲಾದ ಡೈರಿಯಲ್ಲಿರುವ ಹೆಸರಿನ ಎಲ್ಲ ರಾಜಕಾರಣಿಗಳು ಕ್ಷಣಮಾತ್ರವೂ ಸಮಯ ವ್ಯರ್ಥಮಾಡದೆ ರಾಜೀನಾಮೆ ಎಸೆದುಬಿಡಬೇಕು.