Tag: Digambar Kamat

  • ಗೋವಾದಲ್ಲೂ ಆಪರೇಷನ್ ಕಮಲ ಸದ್ದು – ಇಬ್ಬರು ಕಾಂಗ್ರೆಸ್ ಶಾಸಕರ ಅನರ್ಹತೆ ಕೋರಿ ಸ್ಪೀಕರ್‌ಗೆ ಮನವಿ

    ಗೋವಾದಲ್ಲೂ ಆಪರೇಷನ್ ಕಮಲ ಸದ್ದು – ಇಬ್ಬರು ಕಾಂಗ್ರೆಸ್ ಶಾಸಕರ ಅನರ್ಹತೆ ಕೋರಿ ಸ್ಪೀಕರ್‌ಗೆ ಮನವಿ

    ಪಣಜಿ: ಮಹಾರಾಷ್ಟ್ರದ ಬಳಿಕ ಇದೀಗ ಗೋವಾದಲ್ಲಿ ರಾಜಕೀಯ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿದೆ. ಆಪರೇಷನ್ ಕಮಲದ ಭೀತಿಯ ಹಿನ್ನೆಲೆಯಲ್ಲಿ ಉಪ ಸಭಾಪತಿ ಹುದ್ದೆ ಚುನಾವಣೆಯ ಅಧಿಸೂಚನೆಯನ್ನೂ ರದ್ದುಗೊಳಿಸಲಾಗಿದೆ.

    40 ಸದಸ್ಯರ ಸದನದಲ್ಲಿ ಕಾಂಗ್ರೆಸ್‌ನ 11, ಬಿಜೆಪಿ 20, ಎಂಜಿಪಿ 2 ಹಾಗೂ ಮೂವರು ಪಕ್ಷೇತರ ಶಾಸಕರು ಇದ್ದಾರೆ. ಕಾಂಗ್ರೆಸ್‌ನ ಹಲವು ಶಾಸಕರನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಮುಂದಾಗಿದ್ದು, ಇದು ಮುಂದಿನ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸುಗಮ ದಾರಿ ಮಾಡಿಕೊಡುತ್ತದೆ ಎಂಬುದು ಬಿಜೆಪಿಯ ಗೇಮ್‌ಪ್ಲಾನ್ ಎಂದು ಹೇಳಲಾಗಿದೆ. ಇದನ್ನೂ ಓದಿ: ಕೆಆರ್‌ಎಸ್‌ನಿಂದ 50 ಸಾವಿರ ಕ್ಯೂಸೆಕ್‌ ನೀರು ಹೊರಕ್ಕೆ – ರಂಗನತಿಟ್ಟು ಪಕ್ಷಿಧಾಮದ ನಡುಗಡ್ಡೆಗಳು ಮುಳಗಡೆ

    ಇದೀಗ 11 ಶಾಸಕರ ಬಲ ಹೊಂದಿರುವ ಕಾಂಗ್ರೆಸ್ ಪಕ್ಷದಿಂದ ದಿಂಗಬರ್ ಕಾಮತ್ ಹಾಗೂ ಮೈಕೆಲ್ ಲೋಬೋ ಅವರನ್ನು ಪಕ್ಷಾಂತರ ವಿರೋಧಿ ಕಾಯ್ದೆ ಅಡಿಯಲ್ಲಿ ಅನರ್ಹಗೊಳಿಸಬೇಕು ಅಂದುಕೊಂಡಿದೆ. ವಿಧಾನಸಭೆಯ ಸಭಾಪತಿಗೂ ಮನವಿ ಸಲ್ಲಿಸಿದೆ.

    ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ದಿನೇಶ್ ಗುಂಡೂರಾವ್ ಹಾಗೂ ಲೋಬೋ ಅವರು ಆಡಳಿತಾರೂಢ ಬಿಜೆಪಿಯೊಂದಿಗೆ ಹೊಂದಾಣಿಕೆಯಿಂದ ಇದ್ದು, ಪಕ್ಷವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಪೊಲೀಸರೆಷ್ಟು ದಿನ ಕೆಲಸ ಮಾಡ್ತಾರೆ, ನೀವೇ ಅಂಗಡಿಗಳಲ್ಲಿ ಪಿಸ್ತೂಲ್ ಇಟ್ಟುಕೊಳ್ಳಿ – ವಿಕ್ರಮ್ ಸೈನಿ ವಿವಾದತ್ಮಕ ಹೇಳಿಕೆ

    ಕಾಂಗ್ರೆಸ್ ಈ ಹಿಂದೆ ಮೈಕೆಲ್ ಲೋಬೋ ಅವರನ್ನು ವಿರೋಧ ಪಕ್ಷದ ನಾಯಕ ಸ್ಥಾನದಿಂದ ತೆಗೆದುಹಾಕಿತು. ಅದರು ನಿನ್ನೆಯಷ್ಟೇ ತಾನು ಬಿಜೆಪಿಗೆ ಸೇರ್ಪಡೆಯಾಗುವುದಿಲ್ಲ. ಈ ರಾಜಕೀಯ ಬಿಕ್ಕಟ್ಟಿಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಆದಾಗ್ಯೂ ಸ್ಪಷ್ಟನೆ ಕಡೆಗಣಿಸಿದ ಕಾಂಗ್ರೆಸ್ ಉಸ್ತುವಾರಿ ರಾವ್, ಇಬ್ಬರೂ ಪಕ್ಷಾಂತರಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಇಬ್ಬರ ವಿರುದ್ಧ ಅನೇಕ ಪ್ರಕರಣಗಳು ಇರುವುದರಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಪಕ್ಷಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ಈಗಾಗಲೇ ಶಾಸಕ ದಿಗಂಬರ್ ಕಾಮತ್ ಅವರ ನೇತೃತ್ವದಲ್ಲಿ ಗೋವಾದ ಕಾಂಗ್ರೆಸ್ ಶಾಸಕರು ಬಂಡಾಯ ಏಳುವ ಅಂಚಿನಲ್ಲಿದ್ದು, ಕನಿಷ್ಠ 6 ರಿಂದ 10 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

    Live Tv
    [brid partner=56869869 player=32851 video=960834 autoplay=true]

  • 6 ರಿಂದ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆ?

    6 ರಿಂದ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆ?

    ಪಣಜಿ: ಶಾಸಕ ದಿಗಂಬರ್ ಕಾಮತ್ ಅವರ ನೇತೃತ್ವದಲ್ಲಿ ಗೋವಾದ ಕಾಂಗ್ರೆಸ್ ಶಾಸಕರು ಬಂಡಾಯ ಏಳುವ ಅಂಚಿನಲ್ಲಿದ್ದು, ಕನಿಷ್ಠ 6 ರಿಂದ 10 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

    ಈ ನಡುವೆ ಕಾಂಗ್ರೆಸ್ ಶಾಸಕ ಮೈಕಲ್ ಲೋಬೋ, ತಾನು ಬಿಜೆಪಿ ಸೇರುವುದಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಪಾಕ್ ಸೈನಿಕರಿಗೆ ಬಕ್ರೀದ್ ಶುಭಕೋರಿ ಸಿಹಿ ನೀಡಿದ ಭಾರತೀಯ ಯೋಧರು

    Congress

    ಬಿಜೆಪಿಯು ಕಾಂಗ್ರೆಸ್ ಶಾಸಕರಲ್ಲಿ ಗೊಂದಲ ಸೃಷ್ಟಿಸಿ ವದಂತಿ ಹಬ್ಬಿಸುತ್ತಿದೆ. ನಾನು ನನ್ನ ಮನೆಯಲ್ಲಿ ಕುಳಿತಿದ್ದೇನೆ. ಈ ಮಾತುಕತೆಗಳಲ್ಲಿ ಯಾವುದೇ ಸತ್ಯವಿಲ್ಲ. ವದಂತಿಗಳನ್ನು ಯಾರು ಹಬ್ಬಿಸುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಆದರೆ ನಾನು ಎಲ್ಲಿಗೂ ಹೋಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

    ಸದ್ಯ ಗೋವಾದಲ್ಲಿ ಕಾಂಗ್ರೆಸ್ ಶಾಸಕರ ಸಭೆ ಕರೆಯಲಾಗಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲವೆಂದು ಕಾಂಗ್ರೆಸ್ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಮೋದಿ ಸೋಲಿಸಲು ಕಾಂಗ್ರೆಸ್‌ನವರು ಪಾಕಿಸ್ತಾನದ ಬೆಂಬಲ ಕೇಳಿದ್ರು – ಪ್ರಹ್ಲಾದ್ ಜೋಶಿ

    40 ಸದಸ್ಯರ ಸದನದಲ್ಲಿ ಕಾಂಗ್ರೆಸ್‌ನ 11, ಬಿಜೆಪಿ 20, ಎಂಜಿಪಿ 2 ಹಾಗೂ ಮೂವರು ಪಕ್ಷೇತರ ಶಾಸಕರು ಇದ್ದಾರೆ. ಕಾಂಗ್ರೆಸ್‌ನ ಹಲವು ಶಾಸಕರನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಮುಂದಾಗಿದ್ದು, ಇದು 2024ರ ಚುನಾವಣೆಯಲ್ಲಿ ಬಿಜೆಪಿಗೆ ಸುಗಮ ದಾರಿ ಮಾಡಿಕೊಡುತ್ತದೆ ಎಂದು ಹೇಳಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಗೋವಾದಲ್ಲಿ ಬಿಜೆಪಿ ಸರ್ಕಾರ ರಚಿಸದಂತೆ ಎಲ್ಲಾ ಪ್ರಯತ್ನಕ್ಕೂ ಸಿದ್ಧ: ಕಾಂಗ್ರೆಸ್

    ಗೋವಾದಲ್ಲಿ ಬಿಜೆಪಿ ಸರ್ಕಾರ ರಚಿಸದಂತೆ ಎಲ್ಲಾ ಪ್ರಯತ್ನಕ್ಕೂ ಸಿದ್ಧ: ಕಾಂಗ್ರೆಸ್

    ಪಣಜಿ: ಗೋವಾದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಸಾಧ್ಯವಿರುವ ಎಲ್ಲಾ ಪರ್ಯಾಯ ಮಾರ್ಗಗಳನ್ನು ಪರಿಗಣಿಸುತ್ತೇವೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗಂಬರ್ ಕಾಮತ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ವಿಧಾನಸಭಾ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆದ್ದಿರುವ ಬಿಜೆಪಿಯು ಐವರು ಪಕ್ಷೇತರರ ಬೆಂಬಲವನ್ನು ಪಡೆದುಕೊಂಡಿದೆ. ಆದರೆ ಬಿಜೆಪಿಯೂ ಇನ್ನೂ ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿಲ್ಲ. ಹಕ್ಕು ಸಾಧಿಸಲು ವಿಫಲವಾಗಿರುವುದನ್ನು ಗಮನಿಸಿದರೆ ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದನ್ನು ಸೂಚಿಸುತ್ತದೆ ಎಂದರು.

    ಗೋವಾದಲ್ಲಿ ಕಾಂಗ್ರೆಸ್, ಬಿಜೆಪಿಯೇತರ ಪಕ್ಷನ್ನು ರಚಿಸಲು ಎಲ್ಲಾ ಆಯ್ಕೆಗೂ ಮುಕ್ತವಾಗಿದೆ. ಇದರಿಂದಾಗಿ ವಿಧಾನಸಭಾ ಚುನಾವಣೆಯ ತೀರ್ಪನ್ನು ಎತ್ತಿಹಿಡಿಯುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಇಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ

    ಹಲವು ಶಾಸಕರು ಕಾಂಗ್ರೆಸ್‍ಗೆ ಭೇಟಿ ನೀಡಿದ್ದು, ಸರ್ಕಾರ ರಚನೆಗೆ ಮುಂದಾಳತ್ವ ವಹಿಸುವಂತೆ ಒತ್ತಾಯಿಸಿದ್ದಾರೆ. ಎಲ್ಲಾ ಬಿಜೆಪಿಯೇತರ ಶಾಸಕರು ತಮ್ಮ ಬುದ್ಧಿವಂತಿಕೆಯನ್ನು ಬಳಸಿ ಮತ್ತು ಗೋವಾದ ಜನರು ಪೂರ್ಣ ಪ್ರಮಾಣದ ಬಿಜೆಪಿಯೇತರ ಸರ್ಕಾರವನ್ನು ಪಡೆಯಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ಮನವಿ ಮಾಡುತ್ತೇವೆ ಎಂದು ತಿಳಿಸಿದರು.

    ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನ ಹಾಗೂ ಕಾಂಗ್ರೆಸ್ 11 ಸ್ಥಾನಗಳನ್ನು ಗೆದ್ದಿತ್ತು. ಮಾರ್ಚ್ 10 ರಂದು ಫಲಿತಾಂಶಗಳನ್ನು ಪ್ರಕಟಿಸಲಾಯಿತು. ಇದನ್ನೂ ಓದಿ: ದೇಹದಾರ್ಢ್ಯ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದಲ್ಲಿ ಕಂಚಿನ ಪದಕ ಪಡೆದ ಲೋಕೇಶ್ ಪಟೇಲ್‍ಗೆ ಸನ್ಮಾನ