Tag: Diganth

  • ಉತ್ತರಕಾಂಡ ಚಿತ್ರದಲ್ಲಿ ‘ಮಲ್ಲಿಗೆ’ಯಾದ ದೂದ್ ಪೇಡಾ ದಿಗಂತ್

    ಉತ್ತರಕಾಂಡ ಚಿತ್ರದಲ್ಲಿ ‘ಮಲ್ಲಿಗೆ’ಯಾದ ದೂದ್ ಪೇಡಾ ದಿಗಂತ್

    ಟ ದೂದ್ ಪೇಡಾ ದಿಗಂತ್ (Diganth) ಉತ್ತರಕಾಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಿರ್ಚಿ ಮಲ್ಲಿಗೆ ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಪೋಸ್ಟರ್ ನಲ್ಲಿನ ಅವರ ಖಡಕ್ ಲುಕ್ ಮೂಲಕ ಕುತೂಹಲ ಕೆರಳಿಸಿದ್ದಾರೆ.

    ಡಾಲಿ ಧನಂಜಯ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ, ಶಿವರಾಜ್ ಕುಮಾರ್ ಕಾಂಬಿನೇಷನ್ ನ ಉತ್ತರ ಕಾಂಡ (Uttarkanda) ಸಿನಿಮಾದಲ್ಲಿ ಚೈತ್ರಾ ಆಚಾರ್ಯ್ (Chaitra Acharya)  ಕೂಡ ನಟಿಸುತ್ತಿದ್ದಾರೆ. ಚೈತ್ರ ಆಚಾರ್ ಉತ್ತರಕಾಂಡ ತಾರಾಬಳಗಕ್ಕೆ ಸೇರ್ಪಡೆ ಆಗಿದ್ದು, ಇಂದು ಚಿತ್ರೀಕರಣದಲ್ಲೂ ಪಾಲ್ಗೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಅವರು ಲಚ್ಚಿ (Lacchi) ಎಂಬ ಒಂದು ಮುಖ್ಯ ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ.

    ಉತ್ತರಕಾಂಡ’ದ ಮುಹೂರ್ತ 2022ರಲ್ಲಿ ಆಗಿದ್ದು, ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ, ಹಾಗೂ ಚಿತ್ರವು ಉತ್ತರ ಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲ್ಯಾನಿಂಗ್ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ ಚಿತ್ರೀಕರಣ ವಿಳಂಬಗೊಂಡಿತು. ಆದರೆ ಇದೀಗ ಸರ್ವ ಸಿದ್ಧತೆಗಳೊಂದಿಗೆ ಏ.15 ರಿಂದ ಚಿತ್ರೀಕರಣ ಆರಂಭಗೊಂಡಿದ್ದು, ಚಿತ್ರತಂಡದವರು ಉತ್ಸುಕರಾಗಿದ್ದಾರೆ.

    ಉತ್ತರಕಾಂಡ ಒಂದು ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ನಟರಾಕ್ಷಸ ಡಾಲಿ‌ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರಕ್ಕೆ ರೋಹಿತ್ ಪದಕಿ ಆಕ್ಷನ್ ಕಟ್ ಹೇಳಿದ್ದು, ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ಕೆ.ಆರ್.ಜಿ.ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಿದ್ದಾರೆ.

  • ಪಕ್ಕದಲ್ಲಿ ಕೂರಿಸಿಕೊಂಡು ಚೈಲ್ಡ್ ವುಡ್ ಕ್ರಶ್ ಪರಿಚಯಿಸಿದ ಸಂಗೀತಾ

    ಪಕ್ಕದಲ್ಲಿ ಕೂರಿಸಿಕೊಂಡು ಚೈಲ್ಡ್ ವುಡ್ ಕ್ರಶ್ ಪರಿಚಯಿಸಿದ ಸಂಗೀತಾ

    ಬಿಗ್ ಬಾಸ್ ಮನೆಯಿಂದ ಆಚೆ ಬರುತ್ತಿದ್ದಂತೆಯೇ ಸಂಗೀತಾ ನಟನೆಯ ಸಿನಿಮಾವೊಂದು ಬಿಡುಗಡೆಗೆ ರೆಡಿಯಾಗುತ್ತಿದೆ. ನಿನ್ನೆಯಷ್ಟೇ ಆ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಈ ಸಮಯದಲ್ಲಿ ತಮ್ಮ ಚೈಲ್ಡ್ ವುಡ್ ಕ್ರಶ್ (Child Wood Crush) ಬಗ್ಗೆ ಮಾತನಾಡಿದ್ದಾರೆ ಸಂಗೀತಾ. ಅದು ಆ ಕ್ರಶ್ ಅವರನ್ನು ಪಕ್ಕದಲ್ಲೇ ಕೂರಿಸಿಕೊಂಡು ಪರಿಚಯಿಸಿದ್ದಾರೆ. ಸಂಗೀತಾ ಚೈಲ್ಡ್ ವುಡ್ ಕ್ರಶ್ ಬೇರೆ ಯಾರೂ ಅಲ್ಲ ದೂದ್ ಪೇಡಾ ದಿಗಂತ್ ಎನ್ನುವುದು ವಿಶೇಷ.

    ಕ್ರಶ್ ಜೊತೆ ಸಂಗೀತಾ ಸಿನಿಮಾ

    ರಘುವರ್ಧನ್ ನಿರ್ಮಾಣ ಮಾಡಿ  ರಾಘವೇಂದ್ರ ಎಂ. ನಾಯ್ಕ. ಆಕ್ಷನ್ ಕಟ್ ಹೇಳಿರುವ ‘ಮಾರಿ ಗೋಲ್ಡ್‘ (Marigold) ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಬಳಿಕ ಮಾತಿಗಿಳಿದ ನಿರ್ಮಾಪಕ ರಘುವರ್ಧನ್, ಗುಣವಂತ ಸೇರಿ ಹಲವು ಚಿತ್ರ ನಿರ್ದೇಶನ ಮಾಡಿದ್ದೇನೆ. ರಾಘವೇಂದ್ರ ನಾಯ್ಕ್ ಹೇಳಿದ ಕಥೆ ಇಷ್ಟವಾಯಿತು. ನಾನು ನಿರ್ಮಾಣ ಮಾಡುತ್ತೇನೆ. ನೀವೇ ನಿರ್ದೇಶನ ಮಾಡಿ ಎಂದು ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇನೆ. ಚಿತ್ರ ಅಂದುಕೊಂಡಿದ್ದಕ್ಕಿಂತ ಚೆನ್ನಾಗಿ ಮೂಡಿ ಬಂದಿದೆ. ನಾಯಕ ದಿಗಂತ್ (Diganth), ನಾಯಕಿ ಸಂಗೀತಾ (Sangeetha Sringeri) ಸಹಕಾರ ಅದ್ಬುವಾಗಿತ್ತು. ಎಲ್ಲಾ ಅಂದುಕೊಂಡಂತೆ ಆದರೆ ಮುಂದಿನ ತಿಂಗಳು ಎರಡನೇ ಅಥವಾ ಮೂರನೇ ವಾರ ಚಿತ್ರ ತೆರೆಗೆ ತರುವ ಉದ್ದೇಶವಿದೆ ಸಹಕಾರವಿರಲಿ ಎಂದರು.

    ನಿರ್ದೇಶಕ  ರಾಘವೇಂದ್ರ ಎಂ, ನಾಯ್ಕ್  ಮಾತನಾಡಿ,  ಮಾರಿ ಗೋಲ್ಡ್ ಗೋಲ್ಡ್ ಬಿಸ್ಕಟ್ ಮಾರಲು ಹೋದ 4 ಜನ ಹುಡುಗರ ಕಥೆ, ಚಿತ್ರದುರ್ಗ, ಬೆಂಗಳೂರು ಸಕಲೇಶಪುರ ಮತ್ತಿತರ ಕಡೆ ಚಿತ್ರೀಕರಣ ಮಾಡಲಾಗಿದೆ. ಕೋವಿಡ್ ಆದ ಮೇಲೆ ಆ ನಂತರದ ಬೆಳವಣಿಗೆಗಳು ಚಿತ್ರ ವಿಳಂಬಕ್ಕೆ ಕಾರಣವಾಯಿತು. ಈಗ ಬಿಡುಗಡೆಗೆ ಸಜ್ಜಾಗಿದೆ. ಟೀಸರ್ ಮೂಲಕ ಪ್ರಚಾರ ಆರಂಬಿಸಿದ್ದೇವೆ ಎಂದು ಹೇಳಿದರು. ಶುದ್ದ ಮನರಂಜನೆಗೆ ಒತ್ತು ನೀಡಿ ಚಿತ್ರ ಮಾಡಲಾಗಿದೆ. ಚಿತ್ರದ ಮೂಲಕ  ದಿಗಂತ್ ಅವರನ್ನು ಬೇರೆ ರೀತಿ ತೋರಿಸುವ ಪ್ರಯತ್ನ ಮಾಡಲಾಗಿದೆ‌. ಚಿತ್ರೀಕರಣಕ್ಕೂ ಮುನ್ನ ದಿಗಂತ್ ಅವರಿಗೆ ರಿಹಸರ್ಲ್ ಮಾಡಲಾಗಿದೆ. ಮನರಂಜನೆ ಡ್ರಾಮ ಮತ್ತು ಥ್ರಿಲ್ಲರ್ ಕಥೆ ಹೊಂದಿದೆ ಎಂದು ಮಾಹಿತಿ ನೀಡಿದರು.

    ನಟ ದಿಗಂತ್ ಮಾತನಾಡಿ, ಹೆಸರಾಂತ ನಿರ್ಮಾಪಕ ಹಣ ನೀಡಿದ್ದು, ಆದರೆ ಅದು ಅಲ್ಲಿಯೇ ನಿಂತಿದೆ. ಮಾರಿಗೋಲ್ಡ್ ಮೇಲೆ ನಿರ್ದೇಶಕರ ಜೊತೆ ಸಿನಿಮಾ ಮಾಡಬಹುದು. ಕಥೆ ಇಷ್ಡವಾಯಿತು, ಯಶ್ ಶೆಟ್ಟಿ, ಸಂಗೀತ ಶೆಟ್ಟಿ, ಸಂಪತ್, ಕಾಕ್ರೋಚ್ ಸುಧಿ, ಟ್ರೈಲರ್ ಇಷ್ಟವಾದರೆ ಎಲ್ಲರಿಗೂ ಹೇಳಿ, ಸಿನಿಮಾ ಗೆದ್ದರೆ ಮತ್ತಷ್ಟು ಮಾಡೋಣ ಎಂದಿದ್ದಾರೆ. ಚಿತ್ರದಲ್ಲಿ  ಬುದ್ದಿವಂತ ಸ್ಕಾಮರ್ ಪಾತ್ರ ಎಂದಿದ್ದಾರೆ. ನಟಿ ಸಂಗೀತಾ ಶೃಂಗೇರಿ ಮಾತನಾಡಿ, ನಟ ದಿಗಂತ್ ನನ್ನ ‌ ಚೈಲ್ಡ್ ವುಡ್ ಕ್ರಷ್. ಅದನ್ನು ಅವರಿಗೂ ಹೇಳಿದ್ದೇನೆ. ಎಲ್ಲವೂ ಊಹೆ ಮಾಡಿಕೊಂಡು ಸಿನಿಮಾ ಮಾಡಿದ್ದಾರೆ. ಛಾಯಾಗ್ರಾಹಕ ಚಂದ್ರಶೇಖರ್ ಉತ್ತಮವಾಗಿ ತೋರಿಸಿದ್ದಾರೆ‌. ಚಿತ್ರದಿಂದ ಸುಮಾರು‌ ವರ್ಷದ ಕನಸು ನನಸಾಗಿದೆ ಎಂದರು

    ಕಲಾವಿದ ಭಜರಂಗ ಶೆಟ್ಟಿ ಮಾತನಾಡಿ,  ಮಾರಿಗೋಲ್ಡ್‌ನಲ್ಲಿ ನಟಿಸಲು ಗೆಳೆಯ ಯಶ್ ಶೆಟ್ಟಿ ಕಾರಣ ಕೋವಿಡ್ ಸಮಯದಲ್ಲಿ ಊರಲ್ಲಿ‌ ಮೀನು ಹಿಡಿಯುತ್ತಿದ್ದೆ. ಬಳಿಕ ಕಾಕ್ರೋಚ್‌ ಸುಧಿ ಮಾತನಾಡಿದರು. ನಂತರ ನಿರ್ದೇಶಕರು ಮಾತನಾಡಿದ ಮಾಹಿತಿ ಹಂಚಿಕೊಂಡರು. ಸಂಭಾಷಣೆ ಬರೆದಿರುವ ರಘು ನಿಡವಳ್ಳಿ ವಿಭಿನ್ನ ಸಂಭಾಷಣೆ ಇದೆ ಎಂದರೆ ಸಂಗೀತ ನಿರ್ದೇಶಕ ವೀರ್ ಸಮರ್ಥ್ , ಚಿತ್ರದಲ್ಲಿ ಎರಡೆ ಹಾಡು ಇವೆ. ಇದೊಂದು ಥ್ರಿಲ್ಲರ್ ಸಿನಿಮಾ ಆಕ್ಷನ್ ಸಿನಿಮಾ, ಸಿನಿಮಾ‌ ಹಿಟ್ ಆದರೆ ದಿಗಂತ್ ಆಕ್ಷನ್ ಹೀರೋ ಆಗಲಿದ್ದಾರೆ. ಯೋಗರಾಜ್ ಭಟ್, ವಿಜಯ್ ಭರಮಸಾಗರ, ಕವಿರಾಜ್ ಹಾಡು ಬರೆದಿದ್ದಾರೆ. ಗೆಲವಿನ ಆಶಾಕಿರಣ ಇದೆ ಎಂದರು.

     

    ಛಾಯಾಗ್ರಾಹಕ ಚಂದ್ರಶೇಖರ್ ಹೊಸ ಜಾನರ್ ಸಿನಿಮಾ, ಥ್ರಿಲ್ಲರ್ ಸಿನಿಮಾ ಮಾಡಿರಲಿಲ್ಲ. ನಿರ್ಮಾಪಕ ರಘುವರ್ಧನ್ ಜೊತೆ ಗುಣವಂತದಲ್ಲಿ ಕೆಲಸ ಮಾಡಿದ್ದೆ. ಈಗ ಅವರ ನಿರ್ಮಾಣದಲ್ಲಿ ಕೆಲಸ ಮಾಡಿದ್ದೇವೆ ಎಂದರು. ಚಿತ್ರದಲ್ಲಿ ದಿಗಂತ್ ಮಂಚಾಲೆ, ಸಂಗೀತ ಶ್ರಂಗೇರಿ, ಸಂಪತ್ ಮೈತ್ರೇಯ, ಯಶ್ ಶೆಟ್ಟಿ, ಕಾಕ್ರೋಚ್ ಸುಧೀ, ವಜ್ರಾಂಗ್ ಶೆಟ್ಟಿ, ಬಾಲಾ ರಾಜವಾಡಿ, ಮಹಂತೇಶ್, ಸಂದೀಪ್ ಮಲಾನಿ ಮತ್ತಿತರರು ಚಿತ್ರದ ತಾರಾಬಳಗದಲ್ಲಿದ್ದಾರೆ.

  • ‘ಮಾರಿಗೋಲ್ಡ್’ ಹಿಂದೆ ಬಿದ್ದ ಸಂಗೀತಾ ಶೃಂಗೇರಿ: ಮಜವಾಗಿದೆ ಟೀಸರ್

    ‘ಮಾರಿಗೋಲ್ಡ್’ ಹಿಂದೆ ಬಿದ್ದ ಸಂಗೀತಾ ಶೃಂಗೇರಿ: ಮಜವಾಗಿದೆ ಟೀಸರ್

    ಘುವರ್ಧನ್ ನಿರ್ಮಾಣ ಮಾಡಿ  ರಾಘವೇಂದ್ರ ಎಂ. ನಾಯ್ಕ. ಆಕ್ಷನ್ ಕಟ್ ಹೇಳಿರುವ ‘ಮಾರಿ ಗೋಲ್ಡ್‘ (Marigold) ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಬಳಿಕ ಮಾತಿಗಿಳಿದ ನಿರ್ಮಾಪಕ ರಘುವರ್ಧನ್, ಗುಣವಂತ ಸೇರಿ ಹಲವು ಚಿತ್ರ ನಿರ್ದೇಶನ ಮಾಡಿದ್ದೇನೆ. ರಾಘವೇಂದ್ರ ನಾಯ್ಕ್ ಹೇಳಿದ ಕಥೆ ಇಷ್ಟವಾಯಿತು. ನಾನು ನಿರ್ಮಾಣ ಮಾಡುತ್ತೇನೆ. ನೀವೇ ನಿರ್ದೇಶನ ಮಾಡಿ ಎಂದು ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇನೆ. ಚಿತ್ರ ಅಂದುಕೊಂಡಿದ್ದಕ್ಕಿಂತ ಚೆನ್ನಾಗಿ ಮೂಡಿ ಬಂದಿದೆ. ನಾಯಕ ದಿಗಂತ್ (Diganth), ನಾಯಕಿ ಸಂಗೀತಾ (Sangeetha Sringeri) ಸಹಕಾರ ಅದ್ಬುವಾಗಿತ್ತು. ಎಲ್ಲಾ ಅಂದುಕೊಂಡಂತೆ ಆದರೆ ಮುಂದಿನ ತಿಂಗಳು ಎರಡನೇ ಅಥವಾ ಮೂರನೇ ವಾರ ಚಿತ್ರ ತೆರೆಗೆ ತರುವ ಉದ್ದೇಶವಿದೆ ಸಹಕಾರವಿರಲಿ ಎಂದರು.

    ನಿರ್ದೇಶಕ  ರಾಘವೇಂದ್ರ ಎಂ, ನಾಯ್ಕ್  ಮಾತನಾಡಿ,  ಮಾರಿ ಗೋಲ್ಡ್ ಗೋಲ್ಡ್ ಬಿಸ್ಕಟ್ ಮಾರಲು ಹೋದ 4 ಜನ ಹುಡುಗರ ಕಥೆ, ಚಿತ್ರದುರ್ಗ, ಬೆಂಗಳೂರು ಸಕಲೇಶಪುರ ಮತ್ತಿತರ ಕಡೆ ಚಿತ್ರೀಕರಣ ಮಾಡಲಾಗಿದೆ. ಕೋವಿಡ್ ಆದ ಮೇಲೆ ಆ ನಂತರದ ಬೆಳವಣಿಗೆಗಳು ಚಿತ್ರ ವಿಳಂಬಕ್ಕೆ ಕಾರಣವಾಯಿತು. ಈಗ ಬಿಡುಗಡೆಗೆ ಸಜ್ಜಾಗಿದೆ. ಟೀಸರ್ ಮೂಲಕ ಪ್ರಚಾರ ಆರಂಬಿಸಿದ್ದೇವೆ ಎಂದು ಹೇಳಿದರು. ಶುದ್ದ ಮನರಂಜನೆಗೆ ಒತ್ತು ನೀಡಿ ಚಿತ್ರ ಮಾಡಲಾಗಿದೆ. ಚಿತ್ರದ ಮೂಲಕ  ದಿಗಂತ್ ಅವರನ್ನು ಬೇರೆ ರೀತಿ ತೋರಿಸುವ ಪ್ರಯತ್ನ ಮಾಡಲಾಗಿದೆ‌. ಚಿತ್ರೀಕರಣಕ್ಕೂ ಮುನ್ನ ದಿಗಂತ್ ಅವರಿಗೆ ರಿಹಸರ್ಲ್ ಮಾಡಲಾಗಿದೆ. ಮನರಂಜನೆ ಡ್ರಾಮ ಮತ್ತು ಥ್ರಿಲ್ಲರ್ ಕಥೆ ಹೊಂದಿದೆ ಎಂದು ಮಾಹಿತಿ ನೀಡಿದರು.

    ನಟ ದಿಗಂತ್ ಮಾತನಾಡಿ, ಹೆಸರಾಂತ ನಿರ್ಮಾಪಕ ಹಣ ನೀಡಿದ್ದು, ಆದರೆ ಅದು ಅಲ್ಲಿಯೇ ನಿಂತಿದೆ. ಮಾರಿಗೋಲ್ಡ್ ಮೇಲೆ ನಿರ್ದೇಶಕರ ಜೊತೆ ಸಿನಿಮಾ ಮಾಡಬಹುದು. ಕಥೆ ಇಷ್ಡವಾಯಿತು, ಯಶ್ ಶೆಟ್ಟಿ, ಸಂಗೀತ ಶೆಟ್ಟಿ, ಸಂಪತ್, ಕಾಕ್ರೋಚ್ ಸುಧಿ, ಟ್ರೈಲರ್ ಇಷ್ಟವಾದರೆ ಎಲ್ಲರಿಗೂ ಹೇಳಿ, ಸಿನಿಮಾ ಗೆದ್ದರೆ ಮತ್ತಷ್ಟು ಮಾಡೋಣ ಎಂದಿದ್ದಾರೆ. ಚಿತ್ರದಲ್ಲಿ  ಬುದ್ದಿವಂತ ಸ್ಕಾಮರ್ ಪಾತ್ರ ಎಂದಿದ್ದಾರೆ. ನಟಿ ಸಂಗೀತಾ ಶೃಂಗೇರಿ ಮಾತನಾಡಿ, ನಟ ದಿಗಂತ್ ನನ್ನ ‌ ಚೈಲ್ಡ್ ವುಡ್ ಕ್ರಷ್. ಅದನ್ನು ಅವರಿಗೂ ಹೇಳಿದ್ದೇನೆ. ಎಲ್ಲವೂ ಊಹೆ ಮಾಡಿಕೊಂಡು ಸಿನಿಮಾ ಮಾಡಿದ್ದಾರೆ. ಛಾಯಾಗ್ರಾಹಕ ಚಂದ್ರಶೇಖರ್ ಉತ್ತಮವಾಗಿ ತೋರಿಸಿದ್ದಾರೆ‌. ಚಿತ್ರದಿಂದ ಸುಮಾರು‌ ವರ್ಷದ ಕನಸು ನನಸಾಗಿದೆ ಎಂದರು

    ಕಲಾವಿದ ಭಜರಂಗ ಶೆಟ್ಟಿ ಮಾತನಾಡಿ,  ಮಾರಿಗೋಲ್ಡ್‌ನಲ್ಲಿ ನಟಿಸಲು ಗೆಳೆಯ ಯಶ್ ಶೆಟ್ಟಿ ಕಾರಣ ಕೋವಿಡ್ ಸಮಯದಲ್ಲಿ ಊರಲ್ಲಿ‌ ಮೀನು ಹಿಡಿಯುತ್ತಿದ್ದೆ. ಬಳಿಕ ಕಾಕ್ರೋಚ್‌ ಸುಧಿ ಮಾತನಾಡಿದರು. ನಂತರ ನಿರ್ದೇಶಕರು ಮಾತನಾಡಿದ ಮಾಹಿತಿ ಹಂಚಿಕೊಂಡರು. ಸಂಭಾಷಣೆ ಬರೆದಿರುವ ರಘು ನಿಡವಳ್ಳಿ ವಿಭಿನ್ನ ಸಂಭಾಷಣೆ ಇದೆ ಎಂದರೆ ಸಂಗೀತ ನಿರ್ದೇಶಕ ವೀರ್ ಸಮರ್ಥ್ , ಚಿತ್ರದಲ್ಲಿ ಎರಡೆ ಹಾಡು ಇವೆ. ಇದೊಂದು ಥ್ರಿಲ್ಲರ್ ಸಿನಿಮಾ ಆಕ್ಷನ್ ಸಿನಿಮಾ, ಸಿನಿಮಾ‌ ಹಿಟ್ ಆದರೆ ದಿಗಂತ್ ಆಕ್ಷನ್ ಹೀರೋ ಆಗಲಿದ್ದಾರೆ. ಯೋಗರಾಜ್ ಭಟ್, ವಿಜಯ್ ಭರಮಸಾಗರ, ಕವಿರಾಜ್ ಹಾಡು ಬರೆದಿದ್ದಾರೆ. ಗೆಲವಿನ ಆಶಾಕಿರಣ ಇದೆ ಎಂದರು.

    ಛಾಯಾಗ್ರಾಹಕ ಚಂದ್ರಶೇಖರ್ ಹೊಸ ಜಾನರ್ ಸಿನಿಮಾ, ಥ್ರಿಲ್ಲರ್ ಸಿನಿಮಾ ಮಾಡಿರಲಿಲ್ಲ. ನಿರ್ಮಾಪಕ ರಘುವರ್ಧನ್ ಜೊತೆ ಗುಣವಂತದಲ್ಲಿ ಕೆಲಸ ಮಾಡಿದ್ದೆ. ಈಗ ಅವರ ನಿರ್ಮಾಣದಲ್ಲಿ ಕೆಲಸ ಮಾಡಿದ್ದೇವೆ ಎಂದರು. ಚಿತ್ರದಲ್ಲಿ ದಿಗಂತ್ ಮಂಚಾಲೆ, ಸಂಗೀತ ಶ್ರಂಗೇರಿ, ಸಂಪತ್ ಮೈತ್ರೇಯ, ಯಶ್ ಶೆಟ್ಟಿ, ಕಾಕ್ರೋಚ್ ಸುಧೀ, ವಜ್ರಾಂಗ್ ಶೆಟ್ಟಿ, ಬಾಲಾ ರಾಜವಾಡಿ, ಮಹಂತೇಶ್, ಸಂದೀಪ್ ಮಲಾನಿ ಮತ್ತಿತರರು ಚಿತ್ರದ ತಾರಾಬಳಗದಲ್ಲಿದ್ದಾರೆ.

     

    ಚಿತ್ರಕ್ಕೆ  ವೀ‌ರ್ ಸಮರ್ಥ್ ಸಂಗೀತ,  ರಘು ನಿಡುವಳ್ಳಿ  ಸಂಭಾಷಣೆಣ , ಕೆ.ಎಸ್. ಚಂದ್ರಶೇಖರ್  ಛಾಯಾಗ್ರಹಣ, ಕೆ.ಎಂ. ಪ್ರಕಾಶ್  ಸಂಕಲನ, ಪ್ರಶಾಂತ್ ಗೌಡ ಕಲೆ, ನೃತ್ಯ ಕಲೈ, ಸಾಹಸ ಅರ್ಜುನ್ ರಾಜ್ ಹಾಗೂ ನಿರ್ಮಾಣ ನಿರ್ವಹಣೆ: ಜೇವಿಯ‌ರ್ ಫರ್ನಾಂಡಿಸ್‌ ಚಿತ್ರಕ್ಕಿದೆ.

  • ಕಚಗುಳಿ ಇಟ್ಟ ಬ್ಯಾಚುಲರ್ ಪಾರ್ಟಿ ಝಲಕ್

    ಕಚಗುಳಿ ಇಟ್ಟ ಬ್ಯಾಚುಲರ್ ಪಾರ್ಟಿ ಝಲಕ್

    ಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿದ್ದ ‘ಕಿರಿಕ್ ಪಾರ್ಟಿ’ ತೆರೆಕಂಡು ಬರೋಬ್ಬರಿ ಏಳು ವರ್ಷಗಳಾಗಿವೆ. ಅದರ ಯಶಸ್ಸಿನ ಬಳಿಕ ಇಡೀ ತಂಡ ಬೇರೆ ಬೇರೆ ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿದ್ದು ಗೊತ್ತೇ ಇದೆ. ಇದೀಗ ಅವರೆಲ್ಲರೂ ಮತ್ತಷ್ಟು ಖ್ಯಾತರಾಗಿದ್ದಾರೆ. ಉನ್ನತ ಮಟ್ಟದಲ್ಲಿದ್ದಾರೆ… ಆದರೆ, ಆ ರೀತಿಯ ಯೂತ್ ಕಾಮಿಡಿ ಸ್ಟೋರಿ ಮತ್ತೊಂದು ಬರಲಿಲ್ಲವಲ್ಲ ಎಂಬ ಕೊರಗನ್ನು ನೀಗಿಸಲು ಮತ್ತದೇ ಬರಹಗಾರರ ತಂಡ ಸಜ್ಜಾಗಿದೆ. ಅವರೀಗ ‘ಬ್ಯಾಚುಲರ್ ಪಾರ್ಟಿ’ (Bachelor Party) ಕೊಡಲು ಸಜ್ಜಾಗಿದ್ದಾರೆ ಎಂಬುದು ವಿಶೇಷ.

    ಹೌದು. ‘ಕಿರಿಕ್ ಪಾರ್ಟಿ’ಯ ಬರಹಗಾರ ಅಭಿಜಿತ್ ಮಹೇಶ್, ಈಗಾಗಲೇ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಸೇರಿದಂತೆ ಅನೇಕರ ಸಿನಿಮಾಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ನಿರ್ದೇಶಕರಾಗಿ ಬಡ್ತಿ ಪಡೆದಿದ್ದು, ‘ಬ್ಯಾಚುಲರ್ ಪಾರ್ಟಿ’ಗೆ ಆಕ್ಷನ್ ಕಟ್ ಹೇಳಿದ್ದಾರೆ. ಕಚಗುಳಿಯಿಡುವ ಸಂಭಾಷಣೆಗೆ ಖ್ಯಾತರಾಗಿರುವ ಅಭಿ, ತಮ್ಮ ಮೊದಲ ಸಿನಿಮಾದಲ್ಲಿ ಯಾವ ರೀತಿ ಮೋಡಿ ಮಾಡಲಿದ್ದಾರೆ ಎಂಬುದಕ್ಕೆ ಸಿನಿಮಾ ಬಿಡುಗಡೆಯವರೆಗೂ ಕಾಯಬೇಕು. ಅದಕ್ಕೂ ಮುನ್ನ ‘ಬ್ಯಾಚುಲರ್ ಪಾರ್ಟಿ’ಯ ಮೊದಲ ಝಲಕ್ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

    ದಿಗಂತ್ (Diganth), ಲೂಸ್ ಮಾದ ಯೋಗಿ (Loose Mada Yogi) ಹಾಗೂ ಅಚ್ಯುತ್ ಕುಮಾರ್ (Achyut Kumar) ಪೋಸ್ಟರ್‌ನಲ್ಲಿದ್ದಾರೆ. ಅದರ ಹಿನ್ನೆಲೆಯಲ್ಲಿ ಬ್ಯಾಂಕಾಕ್‌ನ ಕೆಲವು ಸ್ಥಳಗಳನ್ನೂ ಕಾಣಬಹುದು. ವೀಲ್‌ಚೇರ್‌ನಲ್ಲಿ ಅಚ್ಯುತ್ ಕುಳಿತುಕೊಂಡಿದ್ದರೆ, ಅವರ ಹಿಂದೆ ಯೋಗಿ, ದಿಗಂತ್ ಓಡಿ ಬರುತ್ತಿರುವ ದೃಶ್ಯ ಸದ್ಯ ಗಮನ ಸೆಳೆಯುತ್ತಿದೆ. ಪೋಸ್ಟರ್‌ನಲ್ಲಿ ಇನ್ನೂ ಗಮನಾರ್ಹ ಅಂಶಗಳಿದ್ದು, ಅವೆಲ್ಲವೂ ಸಿನಿಮಾದ ಕಥೆಗೆ ಪೂರಕವಾಗಿದೆಯಾ ಎಂಬುದಕ್ಕೆ ಚಿತ್ರತಂಡ ಉತ್ತರಿಸಬೇಕಿದೆ. ವಿಶೇಷವೆಂದರೆ ಈ ಪೋಸ್ಟರ್‌ನ್ನು ಹ್ಯಾಂಡ್ ಸ್ಕೆಚ್ ಮೂಲಕ ಡಿಸೈನ್ ಮಾಡಲಾಗಿದೆ.

    ಬರೀ ಪೋಸ್ಟರ್ ಹರಿಬಿಡದೇ ಅದಕ್ಕೊಂದು ಸಣ್ಣ ವೀಡಿಯೋವೊಂದನ್ನು ರಿಲೀಸ್ ಮಾಡಿದೆ. ಅದರಲ್ಲೂ ಕೆಲವು ಅಂಶಗಳು ಗಮನ ಸೆಳೆಯುವಂತಿದ್ದು, ಹಿನ್ನೆಲೆ ಸಂಗೀತವೂ ಅಡಕವಾಗಿದೆ. ಇವೆಲ್ಲವೂ ರೀಲ್ಸ್‌ನಲ್ಲಿ ರಿಲೀಸ್ ಮಾಡಿರುವುದು ಮತ್ತೊಂದು ವಿಶೇಷ. ಕಣ್ಮನ ಸೆಳೆಯುವ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಿರುವ ಚಿತ್ರತಂಡ, ಥಿಯೇಟರ್‌ನಲ್ಲಿ ಇದರ ಅನುಭವ ಪಡೆಯಬೇಕು ಮತ್ತು ಚಿತ್ರಮಂದಿರಗಳಲ್ಲಿ ಕುಳಿತು ನಗೆಗಡಲಲ್ಲಿ ತೇಲುವ ಸಿನಿಮಾ ಇದಾಗಿದೆ ಎಂಬುದು ಚಿತ್ರತಂಡದ ಅನಿಸಿಕೆ.

     

    ಪರಂವಃ ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ಹಾಗೂ ಅಮಿತ್ ಗುಪ್ತ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಅರವಿಂದ್ ಛಾಯಾಗ್ರಹಣ, ಅರ್ಜುನ್ ರಾಮು ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ಪಾರ್ಟಿ ಬಗ್ಗೆ ರಕ್ಷಿತ್ ಶೆಟ್ಟಿ ಕೊಟ್ಟರು ಹೊಸ ಅಪ್ ಡೇಟ್

    ಪಾರ್ಟಿ ಬಗ್ಗೆ ರಕ್ಷಿತ್ ಶೆಟ್ಟಿ ಕೊಟ್ಟರು ಹೊಸ ಅಪ್ ಡೇಟ್

    ಕಿರಿಕ್ ಪಾರ್ಟಿ ನೆನಪುಗಳನ್ನು ಹಂಚಿಕೊಳ್ಳುತ್ತಲೇ ಮತ್ತೊಂದು ಪಾರ್ಟಿಯ ಹೊಸ ಅಪ್ ಡೇಟ್ ಕೊಡುವುದಾಗಿ ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ (Rakshit Shetty) ಹೇಳಿಕೊಂಡಿದ್ದರು. ಹೊಸ ವಿಷಯ ಏನಿರಬಹುದು ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ಕಿರಿಕ್ ಪಾರ್ಟಿ 2 ಸಿನಿಮಾದ ಬಗ್ಗೆ ಏನಾದರೂ ಹೇಳಬಹುದಾ ಎನ್ನುವ ನಿರೀಕ್ಷೆ ಕೂಡ ಇತ್ತು. ಎಲ್ಲದಕ್ಕೂ ಇದೀಗ ಉತ್ತರ ಸಿಕ್ಕಿದೆ.

    ಹೌದು, ರಕ್ಷಿತ್ ಶೆಟ್ಟಿ ಪಾರ್ಟಿ ಕುರಿತಾಗಿ ಅಪ್ ಡೇಟ್ ನೀಡಿದ್ದು, ತಮ್ಮದೇ ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ ಬ್ಯಾಚಲರ್ ಪಾರ್ಟಿ ಸಿನಿಮಾದ ಬಗ್ಗೆ ಅವರು ಬರೆದುಕೊಂಡಿದ್ದಾರೆ. ಕೂಡಲೇ ಹೊಸ ಪಾರ್ಟಿ ಕೊಡುವುದಾಗಿ ಅವರು ಹೊಸ ಸಿನಿಮಾದ ಬಗ್ಗೆ ಹೇಳಿಕೊಂಡಿದ್ದಾರೆ.

     

    ಬ್ಯಾಚುಲರ್ ಪಾರ್ಟಿ ಹಾಸ್ಯ ಪ್ರಧಾನವಾದ ಮನೋರಂಜನಾ ಚಿತ್ರವಾಗಿದ್ದು ದಿಗಂತ್ ಮಂಚಾಲೆ, ರಂಗಾಯಣ ರಘು, ಅಚ್ಯುತಕುಮಾರ್, ಸಿರಿ ರವಿಕುಮಾರ್ ಮುಂತಾದವರು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಹೆಚ್ಚಿನ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆದಿದೆ. ಅಭಿಜಿತ್ ಮಹೇಶ್ ಈ ಸಿನಿಮಾದ ನಿರ್ದೇಶಕರು.

  • ಈಗೆಲ್ಲಾ ಕಪ್ಪು ಕಪ್ಪಾಗಿರೋದೇ ಟ್ರೆಂಡ್‌- ಹಾಸ್ಟೆಲ್‌ ಹುಡುಗರಿಗೆ ದಿಗಂತ್‌ ಕ್ಲಾಸ್‌

    ಈಗೆಲ್ಲಾ ಕಪ್ಪು ಕಪ್ಪಾಗಿರೋದೇ ಟ್ರೆಂಡ್‌- ಹಾಸ್ಟೆಲ್‌ ಹುಡುಗರಿಗೆ ದಿಗಂತ್‌ ಕ್ಲಾಸ್‌

    ಸಿನಿ ದುನಿಯಾದಲ್ಲಿ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagidaare) ಸಿನಿಮಾ ಒಂದಲ್ಲಾ ಒಂದು ರೀತಿಯಲ್ಲಿ ಮೋಡಿ ಮಾಡುತ್ತಲೇಯಿದೆ. ಈಗಾಗಲೇ ಈ ಚಿತ್ರಕ್ಕೆ ಮೋಹಕ ತಾರೆ ರಮ್ಯಾ, ದಿಗಂತ್ (Diganth)ಸಾಥ್ ನೀಡಿದ್ದಾರೆ. ದಿಗಂತ್, ಚಿತ್ರದ ಪ್ರಮೋಷನ್ ಟೀಸರ್ ಮೂಲಕ ಗಮನ ಸೆಳೆದಿದ್ದಾರೆ. ಈ ಬೆನ್ನಲ್ಲೇ ಚಿತ್ರದ  ಟ್ರೈಲರ್‌ ರಿಲೀಸ್‌ಗೆ ಕೌಂಟ್ ಡೌನ್ ಶುರುವಾಗಿದೆ. ಈ ಬಾರಿ ಹಾಸ್ಟೆಲ್ ಹುಡುಗರ ಕಥೆಗೆ ಸ್ಯಾಂಡಲ್‌ವುಡ್ ಸ್ಟಾರ್ ತಾರೆಯರು ಕೂಡ ಸಾಥ್ ನೀಡಿದ್ದಾರೆ.

    ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಎಂಬ ಭಿನ್ನ ಟೈಟಲ್ ಮೂಲಕ ಸಿನಿಮಾ ತಂಡ ಗಮನ ಸೆಳೆಯುತ್ತಿದೆ. ಈಗಾಗಲೇ ಹಾಸ್ಟೆಲ್ ಹುಡುಗರು ಊರಿಗೆಲ್ಲಾ ಫೇಮಸ್ ಆಗಿದ್ದಾರೆ. ಅಪ್ಪು, ರಕ್ಷಿತ್ ಶೆಟ್ಟಿ, ಕಿಚ್ಚ ಸುದೀಪ್, ರಮ್ಯಾ(Ramya) ಸೇರಿದಂತೆ ಸೂಪರ್‌ಸ್ಟಾರ್‌ಗಳೆಲ್ಲರೂ ಹೊಸಬರಿಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಅಲ್ಲದೆ ರಿಷಬ್ ಶೆಟ್ಟಿ, ಶೈನ್ ಶೆಟ್ಟಿ, ದಿಗಂತ್ ಅಂತಹ ಕನ್ನಡ ತಾರೆಯರು ನಟಿಸಿದ್ದಾರೆ. ಇದನ್ನೂ ಓದಿ:‘ರಂಗಬಲಿ’ ಸಕ್ಸಸ್ ಮೀಟ್‌ನಿಂದ ನಾಗ ಶೌರ್ಯ ವಾಕ್ ಔಟ್

    ಹೊಸಬರ ಸಿನಿಮಾವೇ ಆಗಿದ್ದರೂ, ಕನ್ನಡ ತಾರೆಯರೆಲ್ಲರೂ ಹೊಸಬರ ಸಿನಿಮಾಗೆ ಸಪೋರ್ಟ್ ಮಾಡುತ್ತಿದ್ದಾರೆ. ಈಗ್ಯಾಕೆ ಈ ಮಾತು ಅಂದ್ರೆ, ಹಾಸ್ಟೆಲ್ ಹುಡುಗರ ಜೊತೆ ದೂದ್ ಪೇಡಾ ದಿಗಂತ್ ಸಾಥ್ ನೀಡಿದ್ದು, ಕಪ್ಪು ಕಪ್ಪಾಗಿರೋ ಸಿನಿಮಾ ಬಗ್ಗೆ ಸಖತ್ ಡೈಲಾಗ್ ಬಿಟ್ಟಿದ್ದಾರೆ. ಆದರೆ ದಿಗಂತ್ ರೋಲ್ ಬಗ್ಗೆ ಹಿಂಟ್ ಬಿಟ್ಟುಕೊಟ್ಟಿಲ್ಲ. ದಿಗಂತ್ (Actor Diganth) ಟೀಸರ್‌ನಲ್ಲಿ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಪ್ರಿಯರಿಗೆ ಇದು ಕಾಮಿಡಿ ಕಿಕ್ ಕೊಡ್ತಿದೆ ದಿಗಂತ್ ಲುಕ್ ಮ್ಯಾನರಿಸಂ, ಡೈಲಾಗ್ ಡಿಲೆವರಿ ಎಲ್ಲವೂ ಮಜವಾಗಿದೆ. ಈಗೆಲ್ಲ ಕಪ್ಪು ಕಪ್ಪಾಗಿರೋದೇ ಟ್ರೆಂಡ್.. ಆಗಲೇ ಜನ ಥಿಯೇಟರ್‌ಗೆ ಬರೋದು ಅಂತ ಹೇಳಿರೋ ಡೈಲಾಗ್ ಸಿನಿಪ್ರಿಯರಿಗೆ ಖುಷಿ ಕೊಟ್ಟಿದೆ. ಅಲ್ಲದೆ, ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಟ್ರೈಲರ್‌ಗೆ ಲೀಡ್ ಕೊಟ್ಟಿದೆ.

    ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಹಾಡು, ಟೀಸರ್‌ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಈಗ ಬೆನ್ನಲ್ಲೇ ಟ್ರೈಲರ್ ರಿಲೀಸ್ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆ. ಇದೇ ಜುಲೈ 10ರಂದು ಸಂಜೆ 6 ಗಂಟೆಗೆ ಸಿನಿಮಾ ಟ್ರೈಲರ್ ರಿಲೀಸ್ ಆಗಲಿದೆ. ಇದನ್ನು ದಿಗಂತ್ ವಿಡಿಯೋ ಮೂಲಕವೇ ಅನೌನ್ಸ್ ಮಾಡಲಾಗಿದೆ. ನಂದಿ ಲಿಂಕ್ಸ್ ಗ್ರೌಂಡ್‌ನಲ್ಲಿ ಅದ್ದೂರಿಯಾಗಿ ಟೀಸರ್ ಕಾರ್ಯಕ್ರಮ ಆಯೋಜಿಸಿದ್ದು, ಮುಖ್ಯ ಅತಿಥಿಗಳಾಗಿ ಅಶ್ವಿನಿ ಪುನೀತ್‌ರಾಜ್‌ಕುಮಾರ್, ಧ್ರುವ ಸರ್ಜಾ, ಕಾಂತಾರ ಸ್ಟಾರ್ ರಿಷಬ್(Rishab Shetty), ರಕ್ಷಿತ್ ಶೆಟ್ಟಿ (Rakshit Shetty) ಆಗಮಿಸುತ್ತಿದ್ದಾರೆ. ಸದ್ಯದಲ್ಲೇ ಹಾಸ್ಟೆಲ್ ಹುಡುಗರ ಕಥೆ ನಿಮ್ಮ ಮುಂದೆ ಬರಲಿದೆ.

    ಯೂತ್ ಸಬ್ಜೆಕ್ಟ್ ಕಥೆಯನ್ನೊಳಗೊಂಡ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶಿಸಿದ್ದಾರೆ. ಬಹುತೇಕ ರಂಗಭೂಮಿ ಪ್ರತಿಭೆಗಳು ನಟಿಸಿರುವ ಈ ಚಿತ್ರವನ್ನು ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲ್ಮಂಸ್ ಬ್ಯಾನರ್ ನಡಿ ಪ್ರಜ್ವಲ್ ಬಿ.ಪಿ. ವರುಣ್ ಕುಮಾರ್ ಗೌಡ , ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕೆ ಕಶ್ಯಪ್ ಬಂಡವಾಳ ಹೂಡಿದ್ದಾರೆ. ಪ್ರತಿ ಬಾರಿ ಯುನಿಕ್ ಕಾನ್ಸೆಪ್ಟ್ ಮೂಲಕ ಪ್ರಚಾರ ಮಾಡುತ್ತಿರುವ ಹಾಸ್ಟೆಲ್ ಹುಡುಗರ ಸಿನಿಮಾವನ್ನು ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಅರವಿಂದ್ ಛಾಯಾಗ್ರಹಣ, ಸುರೇಶ್ ಸಂಕಲನವಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೀರೋ ದಿಗಂತ್ ಮಿಸ್ಸಿಂಗ್ ಎಂದು ವಿಡಿಯೋ ಹಂಚಿಕೊಂಡ ಚಿತ್ರತಂಡ

    ಹೀರೋ ದಿಗಂತ್ ಮಿಸ್ಸಿಂಗ್ ಎಂದು ವಿಡಿಯೋ ಹಂಚಿಕೊಂಡ ಚಿತ್ರತಂಡ

    ದೂದ್ ಪೇಡ ದಿಗಂತ್ (Diganth) ನಟನೆಯ ‘ಎಡಗೈ ಅಪಘಾತಕ್ಕೆ ಕಾರಣ’ (edagai Apaghatakke  Karana) ಸಿನಿಮಾದ ಡಬ್ಬಿಂಗ್ (Dubbing) ಶುರುವಾಗಿದೆ. ರಾಧಿಕಾ ನಾರಾಯಣ್, ನಿಧಿ ಸುಬ್ಬಯ್ಯ, ಕೃಷ್ಣ ಹೆಬ್ಬಾಳೆ, ಧನು ಹರ್ಷ ತಮ್ಮ ಪಾತ್ರಗಳಿಗೆ ಮಾತು ಪೊಣಿಸಿದ್ದಾರೆ. ಆದರೆ ನಾಯಕ ದಿಗಂತ್ ಫೈಲ್ ಮಿಸ್ (Missing) ಆಗಿದೆ. ಹಾಗಿದ್ರೆ ದೂದ್ ಪೇಡೆ ಎಲ್ಲಿ? ಎಂಬ ವಿಡಿಯೋ ತುಣುಕನ್ನು ಚಿತ್ರತಂಡ ರಿವೀಲ್ ಮಾಡಿದೆ.

    ಸಸ್ಪೆನ್ಸ್ ಥ್ರಿಲ್ಲರ್ ಡ್ರಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರಕ್ಕೆ ಸಮರ್ಥ್ ಬಿ ಕಡ್ಕೋಲ್ ಆಕ್ಷನ್ ಕಟ್ ಹೇಳಿದ್ದು, ಗುರುದತ್ತ ಗಾಣಿಗ ಮತ್ತು ಸಮರ್ಥ್ ಜಂಟಿಯಾಗಿ ನಿರ್ಮಾಣ ಮಾಡಲಿದ್ದಾರೆ. ದಿಗಂತ್ ಗೆ ಜೋಡಿಯಾಗಿ ಯುವನಟಿ ಧನು ಹರ್ಷ ನಟಿಸಿದ್ದಾರೆ. ಅಭಿಮನ್ಯು ಸದಾನಂದ್ ಛಾಯಾಗ್ರಾಹಣ ಮಾಡಿದ್ದಾರೆ. ಇದನ್ನೂ ಓದಿ:‘ಸಲಾರ್’ ಅಡ್ಡಾಗೆ ಎಂಟ್ರಿ ಕೊಟ್ಟ ಕನ್ನಡದ ನಟ ಸೌರವ್ ಲೋಕಿ

    ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಚಿತ್ರಕ್ಕಿದೆ. ಈ ಸಿನಿಮಾದಲ್ಲಿ ಪ್ರತಿ ಕೆಲಸಕ್ಕೂ ಎಡಗೈ ಬಳಸುವವರ ಸಮಸ್ಯೆಗಳ ಬಗ್ಗೆಯೇ ತೋರಿಸಲಾಗಿದೆ. ಅವರು ದಿನನಿತ್ಯದ ಜೀವನದಲ್ಲಿ ಎದುರಿಸುವ ಸವಾಲುಗಳ ಕುರಿತಾಗಿಯೇ ಫೋಕಸ್ ಮಾಡಲಾಗಿದೆಯಂತೆ. ಸದ್ಯ ಎಡಗೈ ಅಪಘಾತಕ್ಕೆ ಕಾರಣ ಸಿನಿಮಾದ ಡಬ್ಬಿಂಗ್ ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲಿ ಚಿತ್ರ ತೆರೆಗೆ ಬರಲಿದೆ.

  • ದಿಗಂತ್ ಹುಟ್ಟು ಹಬ್ಬಕ್ಕೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಕ್ಯಾರೆಕ್ಟರ್ ಪೋಸ್ಟರ್

    ದಿಗಂತ್ ಹುಟ್ಟು ಹಬ್ಬಕ್ಕೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಕ್ಯಾರೆಕ್ಟರ್ ಪೋಸ್ಟರ್

    ಸ್ಯಾಂಡಲ್ ವುಡ್ ಅಂಗಳದ ದೂದ್ ಪೇಡ ದಿಗಂತ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅದರ ವಿಶೇಷವಾಗಿ ದಿಗಂತ್ ನಟಿಸುತ್ತಿರುವ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರತಂಡ ಕ್ಯಾರೆಕ್ಟರ್ ಪೋಸ್ಟರ್ ರಿವೀಲ್ ಮಾಡುವ ಮೂಲಕ ಚಿತ್ರದ ನಾಯಕ ನಟನಿಗೆ ಶುಭ ಕೋರಿದೆ.

    ದಿಗಂತ್ ಅವರ ಕ್ಯಾರೆಕ್ಟರ್ ಪೋಸ್ಟರ್ ರಿವೀಲ್ ಮಾಡುವ ಮೂಲಕ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರತಂಡ ಹುಟ್ಟುಹಬ್ಬಕ್ಕೆ ಶುಭ ಕೋರಿದೆ. ದಿಗಂತ್ ಅವರಿಗೆ ಇಲ್ಲಿವರೆಗೆ ಚಾಕೋಲೇಟ್ ಬಾಯ್. ರೋಮ್ಯಾಂಟಿಕ್ ಹೀರೋ ಇಮೇಜ್ ಇತ್ತು ಆದ್ರೆ ಈ ಸಿನಿಮಾದಿಂದ ಕಂಪ್ಲೀಟ್ ಡಿಫ್ರೆಂಟ್ ಇಮೇಜ್ ನಲ್ಲಿ ದಿಗಂತ್ ಕಾಣಸಿಗುತ್ತಾರೆ. ಬರ್ತ್ ಡೇ ಗೆ ಡಿಫ್ರೆಂಟ್ ಕ್ಯಾರೆಕ್ಟರ್ ಪೋಸ್ಟರ್ ಬಿಡುಗಡೆ ಮಾಡಬೇಕೆಂದು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದ್ವಿ ಅದರಂತೆ ಇಂದು ಅನಾವರಣ ಮಾಡಿದ್ದೇವೆ ಎಂದು ನಿರ್ದೇಶಕ ಸಮರ್ಥ್ ಬಿ ಕಡಕೊಳ್ ತಿಳಿಸಿದ್ದಾರೆ. ಇದನ್ನೂ ಓದಿ: ದಿವ್ಯಾಳ ಆಸೆಯಂತೆ ದೊಡ್ಮನೆಗೆ ಎಂಟ್ರಿ ಕೊಟ್ಟ ಅರವಿಂದ್ ಕೆ.ಪಿ

    ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು, ಜನವರಿ ಕೊನೆಯಲ್ಲಿ ಚಿತ್ರೀಕರಣ ಕಂಪ್ಲೀಟ್ ಆಗಲಿದೆ.  ಸಮರ್ಥ್ ಬಿ ಕಡಕೊಳ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚೊಚ್ಚಲ ಸಿನಿಮಾ ಇದಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾಹಂದರ ಚಿತ್ರದಲ್ಲಿದೆ. ಹೆಸರೇ ಹೇಳುವಂತೆ ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಚಿತ್ರವಿದು. ಚಿತ್ರದಲ್ಲಿ ದಿಗಂತ್ ಜೋಡಿಯಾಗಿ ನವನಟಿ ಧನು ಹರ್ಷ ನಟಿಸುತ್ತಿದ್ದು, ರಾಧಿಕಾ ನಾರಾಯಣ್, ನಿಧಿ ಸುಬ್ಬಯ್ಯ ಕೂಡ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

    ಹೈಫನ್ ಪಿಕ್ಚರ್ಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಚಿತ್ರವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಶೇಕಡಾ 90ರಷ್ಟು ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಚಿತ್ರದ ತಾರಾಗಣದಲ್ಲಿದ್ದಾರೆ. ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಸಿನಿಮಾಗಿದೆ.

    Live Tv
    [brid partner=56869869 player=32851 video=960834 autoplay=true]

  • ‘ಕಾಂತಾರ 2’ ಬರೋದು ಪಕ್ಕಾ : ನಟ ದಿಗಂತ್ ಬಿಚ್ಚಿಟ್ಟ ರಹಸ್ಯ

    ‘ಕಾಂತಾರ 2’ ಬರೋದು ಪಕ್ಕಾ : ನಟ ದಿಗಂತ್ ಬಿಚ್ಚಿಟ್ಟ ರಹಸ್ಯ

    ಕಾಂತಾರ ಸಿನಿಮಾ ಯಶಸ್ಸಿನ ನಂತರ ಕಾಂತಾರ 2 ಬರಲಿದೆ ಎಂಬ ಸುದ್ದಿ ದಟ್ಟವಾಗಿತ್ತು. ಆದರೆ, ಅಧಿಕೃತವಾಗಿ ಈ ಕುರಿತು ಯಾರೂ ಈವರೆಗೂ ಬಾಯಿ ಬಿಟ್ಟಿರಲಿಲ್ಲ. ಹಾಗಾಗಿ ಇದೊಂದು ಗಾಸಿಪ್ ಎಂದೇ ಭಾವಿಸಲಾಗಿತ್ತು. ಇದೇ ಮೊದಲ ಬಾರಿಗೆ ದಿಗಂತ್ ಈ ಗುಟ್ಟನ್ನು ರಟ್ಟು ಮಾಡಿದ್ದಾರೆ. ನಿರ್ದೇಶಕ ರಿಷಬ್ ಶೆಟ್ಟಿ ಅವರು ಕಾಂತಾರ 2 ಸಿನಿಮಾದ ಚಿತ್ರಕಥೆ ಬರೆಯುವುದರಲ್ಲಿ ಬ್ಯುಸಿಯಾಗಿದ್ದಾರೆ ಎಂದು ಹೇಳಿದ್ದಾರೆ.

    ಅಂದುಕೊಂಡಂತೆ ಆಗಿದ್ದರೆ ರಿಷಬ್ ಶೆಟ್ಟಿ ಅವರು, ದಿಗಂತ್ ಕಾಂಬಿನೇಷನ್ ನಲ್ಲಿ ಬ್ಯಾಚ್ಯುಲರ್ ಪಾರ್ಟಿ ಸಿನಿಮಾದಲ್ಲಿ ನಟಿಸಬೇಕಿತ್ತು. ಆದರೆ, ಈಗವರು ಆ ಸಿನಿಮಾದಿಂದ ಹೊರ ಬಂದಿದ್ದಾರೆ. ಸಿನಿಮಾದಲ್ಲಿ ನಟಿಸದೇ ಇರುವುದಕ್ಕೆ ಕಾರಣವನ್ನು ಸ್ವತಃ ದಿಗಂತ್ ಅವರೇ ಹೇಳಿಕೊಂಡಿದ್ದಾರೆ. ರಿಷಬ್ ಅವರು ಕಾಂತಾರ 2 ಸಿನಿಮಾದ ಕೆಲಸದಲ್ಲಿ ಬ್ಯುಸಿ ಆಗಿರುವುದರಿಂದ ನಟಿಸಲು ಆಗುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ.

    ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ಕಾಂಬಿನೇಷನ್ ನ ಕಾಂತಾರ ಸಿನಿಮಾ ಇದೀಗ ತುಳುವಿನಲ್ಲಿ ರಿಲೀಸ್ ಆಗುತ್ತಿದೆ. ಮೊನ್ನೆಯಷ್ಟೇ ತುಳು ಭಾಷೆಯ ಟ್ರೇಲರ್ ರಿಲೀಸ್ ಆಗಿದ್ದು ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ತುಳು ನಾಡಿನ ದೈವಾರಾಧನೆಯನ್ನೇ ಪ್ರಮುಖವಾಗಿಟ್ಟುಕೊಂಡು ಮಾಡಿರುವ ಸಿನಿಮಾ ಇದಾಗಿದ್ದರಿಂದ ಅತ್ಯಂತ ಭಕ್ತಿಯಿಂದಲೇ ಈ ಸಿನಿಮಾವನ್ನು ಸ್ವೀಕರಿಸಿದ್ದರು. ಇದೀಗ ಸಿನಿಮಾ ರಿಲೀಸ್ ಕೂಡ ಆಗಿದೆ.

    ಈಗಾಗಲೇ ತುಳು ಸಿನಿಮಾ ರಿಲೀಸ್ ದಿನಾಂಕವನ್ನು ಹೊಂಬಾಳೆ ಫಿಲ್ಮ್ಸ್ ಘೋಷಣೆ ಮಾಡಿದೆ. ಇದೇ ಡಿಸೆಂಬರ್ 2 ರಂದು ತುಳು ಭಾಷೆಯಲ್ಲಿ ಕಾಂತಾರ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಆಗುತ್ತಿದ್ದು, ಅದಕ್ಕೂ ಮುನ್ನ ಆಸ್ಟ್ರೇಲಿಯಾದಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ:ಪ್ರಭಾಸ್ ಲವ್ ಲೈಫ್ ಬಗ್ಗೆ ಸುಳಿವು ಕೊಟ್ಟ ವರುಣ್ ಧವನ್

    ಶುಕ್ರವಾರ, ಶನಿವಾರ ಮತ್ತು ಭಾನುವಾರ ಹಲವು ಶೋಗಳನ್ನು ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ಗಳಲ್ಲಿ ರಿಲೀಸ್ ಮಾಡಿದೆ ಡ್ರೀಮ್ಸ್ ಸ್ಕ್ರೀನ್ ಇಂಟರ್ ನ್ಯಾಷನಲ್ ಸಂಸ್ಥೆ. ಅಧಿಕೃವಾಗಿ ತನ್ನ ಪೇಜ್ ನಲ್ಲಿ ಯಾವೆಲ್ಲ ಶೋಗಳು ಎಷ್ಟು ಗಂಟೆಗೆ ಎಂದು ಬರೆದುಕೊಂಡಿದೆ. ನಿನ್ನೆ ಮತ್ತು ಇವತ್ತು ಒಳ್ಳೆಯ ಪ್ರತಿಕ್ರಿಯೆ ಕೂಡ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ನಾಳೆಯೇ ಜೀ ಕನ್ನಡದಲ್ಲಿ ಯೋಗರಾಜ್ ಭಟ್ಟರ ‘ಗಾಳಿಪಟ 2 ‘ ಹಾರಾಟ

    ನಾಳೆಯೇ ಜೀ ಕನ್ನಡದಲ್ಲಿ ಯೋಗರಾಜ್ ಭಟ್ಟರ ‘ಗಾಳಿಪಟ 2 ‘ ಹಾರಾಟ

    ಗಾಳಿಪಟ 2 (Gaalipata 2) ಈ ವರ್ಷ ಬಿಡುಗಡೆಗೊಂಡು ಭರ್ಜರಿಯಾಗಿ ಪ್ರೇಕ್ಷಕರ ಮನಗೆದ್ದ ಸೂಪರ್ ಹಿಟ್ ಸಿನಿಮಾ. ಕನ್ನಡ ಭಾಷಾ ವಿಶೇಷತೆ , ಅಸ್ಮಿತೆಯನ್ನು ಸಾರುವ ಈ ಚಿತ್ರ ಇದೇ ಶನಿವಾರ ಮತ್ತು ಭಾನುವಾರ ಸಂಜೆ 4:30ಕ್ಕೆ ಕನ್ನಡದ ನವೆಂಬರ್ 1 ಮನರಂಜನಾ ವಾಹಿನಿ ಜೀ ಕನ್ನಡದಲ್ಲಿ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಆಗಲಿದೆ.

    ತನ್ನ ವೀಕ್ಷಕರಿಗೆ ವಿಶೇಷ ಕಾರ್ಯಕ್ರಮಗಳು ನೀಡುವುದರ ಮೂಲಕ ಸದಾ ಮುಂಚೂಣಿಯಲ್ಲಿರುವ ಜೀ ಕನ್ನಡ ವಾಹಿನಿ ಈಗಾಗಲೇ ಹಲವಾರು ಸೂಪರ್ ಹಿಟ್ ಕನ್ನಡ ಸಿನಿಮಾಗಳನ್ನು ಪ್ರಸಾರ ಮಾಡಿದ್ದು ಇದೀಗ ಗಾಳಿಪಟ 2 ಚಲನಚಿತ್ರವನ್ನು ತನ್ನ ವೀಕ್ಷಕರ ಮುಂದಿಡಲು ಸಜ್ಜಾಗಿದೆ. ಇದನ್ನೂ ಓದಿ:Breaking-ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಮ್ಯೂಸಿಕ್ ಬಳಕೆ : ರಾಹುಲ್ ವಿರುದ್ಧ ಎಫ್ಐಆರ್‌

    ವಿಕಟ ಕವಿ, ಯೋಗರಾಜ್ ಭಟ್ (Yogaraj Bhatt) ನಿರ್ದೇಶನವಿರುವ ಈ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ (Ganesh) , ದಿಗಂತ್ (Diganth), ಪವನ್ ಕುಮಾರ್ (Pawan Kumar), ಹಿರಿಯನಟ ಅನಂತ್ ನಾಗ್ (Ananth Nag) , ಶರ್ಮಿಳಾ ಮಾಂಡ್ರೆ ಸೇರಿದಂತೆ ಇನ್ನೂ ಅನೇಕ ಜನಪ್ರಿಯ ಕಲಾವಿದರು ಅಭಿನಯಿಸಿದ್ದಾರೆ. ಇನ್ನು ಈ ಚಿತ್ರಕ್ಕೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯಾ ಅವರು ಸಂಗೀತ ಸಂಯೋಜನೆ ಮಾಡಿದ್ದು ಹಾಡುಗಳು ಸಂಗೀತಪ್ರಿಯರ ಹೃದಯಕ್ಕೆ ಹತ್ತಿರವಾಗಿರುವುದು ವಿಶೇಷ.

    ಅಳು, ನಗು ಸಂಬಂಧಗಳ ಮೌಲ್ಯವನ್ನು ತಿಳಿಸುವ ಬದುಕಿನ ಭಾವುಕತೆ ತೆರೆದಿಡುತ್ತಲೇ ತಾಜಾ ಅನುಭವ ನೀಡುವ ಸಿನಿಮಾ ಇದ್ದಾಗಿದ್ದು ಬಾಕ್ಸ್ ಆಫೀಸ್‌ನ್ನೂ ಲೂಟಿ ಮಾಡಿತ್ತು. ಅಷ್ಟೇ ಅಲ್ಲದೆ ಜೀ5 ನಲ್ಲೂ 100Cr+ ವೀಕ್ಷಣೆ ಪಡೆದ ಚಲನಚಿತ್ರವಾಗಿದೆ ಈ ಗಾಳಿಪಟ 2. ಇನ್ನೂ ಇದೇ ಶನಿವಾರ ಮತ್ತು ಭಾನುವಾರ ಸಂಜೆ 4:30ಕ್ಕೆ ನಿಮ್ಮ ನೆಚ್ಚಿನ ಜೀ ಕನ್ನಡ ವಾಹಿನಿಯಲ್ಲಿ  ಪ್ರಸಾರವಾಗಲಿದೆ.

    Live Tv
    [brid partner=56869869 player=32851 video=960834 autoplay=true]