Tag: digitization

  • ಬೆಂಗಳೂರಿನ ಪೋಸ್ಟ್ ಮಾಸ್ಟರ್ ಕೆಲಸಕ್ಕೆ ಬಿಲ್ ಗೇಟ್ಸ್ ಫಿದಾ – ಡಿಜಿಟಲೀಕರಣಕ್ಕೆ ಮನಸೋತ ಪೋಸ್ಟ್ ವೈರಲ್

    ಬೆಂಗಳೂರಿನ ಪೋಸ್ಟ್ ಮಾಸ್ಟರ್ ಕೆಲಸಕ್ಕೆ ಬಿಲ್ ಗೇಟ್ಸ್ ಫಿದಾ – ಡಿಜಿಟಲೀಕರಣಕ್ಕೆ ಮನಸೋತ ಪೋಸ್ಟ್ ವೈರಲ್

    ಬೆಂಗಳೂರು: ಸಿಲಿಕಾನ್ ಸಿಟಿ ಪೋಸ್ಟ್ ಮಾಸ್ಟರ್ (Post Master) ಕೆಲಸಕ್ಕೆ ಮೈಕ್ರೋಸಾಫ್ಟ್ (Microsoft) ಸಹಸ್ಥಾಪಕ ಬಿಲ್‌ಗೇಟ್ಸ್ (Bill Gates) ಫಿದಾ ಆಗಿದ್ದು, ಭಾರತದ ಡಿಜಿಟಲೀಕರಣಕ್ಕೆ (Digitization) ಮನಸೋತು ಪೋಸ್ಟ್‌ವೊಂದನ್ನು ಹಾಕಿದ್ದಾರೆ. ಸದ್ಯ ಈ ಪೋಸ್ಟ್ ಎಲ್ಲೆಡೆ ವೈರಲ್ ಆಗುತ್ತಿದೆ.

    ಈ ಪೋಸ್ಟ್‌ನಲ್ಲಿ ಅಂಚೆ ಕಚೇರಿ ಪೋಸ್ಟ್ ಮಾಸ್ಟರ್ ಕುಸುಮಾರನ್ನು ಬಿಲ್ ಗೇಟ್ಸ್ ಹಾಡಿಹೊಗಳಿದ್ದು, ಆಕೆಯ ಜೊತೆ ನಗುನಗುತ್ತಾ ಮಾತನಾಡುತ್ತಿರುವ ಬಿಲ್ ಗೇಟ್ಸ್ ಆಕೆಯ ಕೆಲಸದ ಬಗ್ಗೆ ಲಿಂಕ್ಡ್ ಇನ್ ಅಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೇ ಕುಸುಮಾ ಮಾಡುವ ಕೆಲಸದ ಬಗ್ಗೆ ಹೆಚ್ಚು ತಿಳಿದುಕೊಳ್ಳುವ ಸಲುವಾಗಿ ಒಂದು ಲಿಂಕ್ ಅನ್ನು ಸಹಾ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ:‌ ‘ಶಕ್ತಿ’ ವಿರೋಧಿಸಿ ಕರ್ನಾಟಕ ಬಂದ್ – ಖಾಸಗಿ ಸಾರಿಗೆ ಒಕ್ಕೂಟದ ಜೊತೆಗಿನ ಸಭೆ ವಿಫಲ

    ಬಿಲ್ & ಮೆಲಿಂಡಾ ಗೇಟ್ಸ್ ಫೌಂಡೇಶನ್‌ನ ವೆಬ್‌ಸೈಟ್ ಲಿಂಕ್‌ನಲ್ಲಿ ವಿಡಿಯೋ ಪ್ರಕಟ ಮಾಡಿದ್ದು, ಭಾರತದಲ್ಲಿ ಡಿಜಿಟಲ್ ಬ್ಯಾಂಕಿಂಗ್ ಕಥೆ ಮತ್ತು ಯುವತಿಯ ವೃತ್ತಿಜೀವನದ ಹಾದಿ ಎಂಬ ಶೀರ್ಷಿಕೆಯಡಿ ಮಾಹಿತಿ ಪ್ರಕಟಿಸಲಾಗಿದೆ. ಭಾರತದಲ್ಲಿ ಅಳವಡಿಸಿರುವ ಡಿಜಿಟಲೀಕರಣಕ್ಕೆ ಬಿಲ್ ಗೇಟ್ಸ್ ಮನಸೋತಿದ್ದಾರೆ. ಇದನ್ನೂ ಓದಿ: ಬುಧವಾರ ಆಗದಿದ್ರೆ ಆ.27ಕ್ಕೆ ಚಂದ್ರಯಾನ-3 ಲ್ಯಾಂಡಿಂಗ್

    ಪೋಸ್ಟ್‌ನಲ್ಲಿ ಏನಿದೆ?
    ನನ್ನ ಭಾರತ ಪ್ರವಾಸದಲ್ಲಿ ನಾನು ನಂಬಲಾಗದ ಶಕ್ತಿಯೊಂದನ್ನು ಭೇಟಿಯಾದೆ. ಆ ಶಕ್ತಿಯೇ ಕುಸುಮಾ. ತನ್ನ ಸ್ಥಳೀಯ ಅಂಚೆ ಇಲಾಖೆಯಲ್ಲಿ ಅದ್ಭುತ ಕೆಲಸ ಮಾಡುತ್ತಿರುವ ಗಮನಾರ್ಹ ಯುವತಿ ಈಕೆ. ಹಣಕಾಸು ಅಭಿವೃದ್ಧಿಯನ್ನು ವೇಗಗೊಳಿಸಲು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಇದನ್ನೂ ಓದಿ: ಇನ್ಮುಂದೆ ಲಗೇಜ್‌ಗಳನ್ನು ಸಾಗಿಸಲು ರಸ್ತೆಗಿಳಿಯಲಿದೆ KSRTC ಲಾರಿ

    ಕುಸುಮಾರಂತಹ ಅಂಚೆ ಕಚೇರಿ ಪೋಸ್ಟ್ಮಾಸ್ಟರ್‌ಗಳು ಭಾರತದಾದ್ಯಂತ ಗ್ರಾಹಕರಿಗೆ ಬ್ಯಾಂಕಿಂಗ್ ಸೇವೆಗಳನ್ನು ನೀಡಲು ಸ್ಮಾರ್ಟ್‌ಫೋನ್ ಸಾಧನಗಳು ಮತ್ತು ಬಯೋಮೆಟ್ರಿಕ್‌ಗಳನ್ನು ಬಳಕೆ ಮಾಡುತ್ತಿರುವುದು ಗಮನಾರ್ಹ. ಆಕೆ ಕೇವಲ ಹಣಕಾಸು ಸೇವೆಗಳನ್ನು ಒದಗಿಸುತ್ತಿಲ್ಲ, ಬದಲಾಗಿ ತನ್ನ ಸಮುದಾಯಕ್ಕೆ ಭರವಸೆ ಮತ್ತು ಆರ್ಥಿಕ ಸಬಲೀಕರಣವನ್ನು ನೀಡುತ್ತಿದ್ದಾಳೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರು ಉತ್ತರ ಗೆಲ್ಲಲು ಡಿಕೆಶಿ ರಣತಂತ್ರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಗದ ರಹಿತವಾದ ಕೇರಳದ 3 ಕೋರ್ಟ್‌ – ಆ.1ರಿಂದ ಕೇರಳ ಹೈಕೋರ್ಟ್‌ನಲ್ಲೂ ಚಾಲನೆ

    ಕಾಗದ ರಹಿತವಾದ ಕೇರಳದ 3 ಕೋರ್ಟ್‌ – ಆ.1ರಿಂದ ಕೇರಳ ಹೈಕೋರ್ಟ್‌ನಲ್ಲೂ ಚಾಲನೆ

    ತಿರುವನಂತಪುರಂ: ತಂತ್ರಜ್ಞಾನ ಬೆಳೆದಂತೆ ಈಗ ಪ್ರತಿಯೊಬ್ಬರ ಕೈಯಲ್ಲೂ ಟಚ್‌ಸ್ಕ್ರೀನ್‌ ಮೊಬೈಲ್‌ಗಳಿವೆ. ಕಂಪ್ಯೂಟರ್‌ ಬಳಕೆಯೂ ಹೆಚ್ಚಾಗಿದೆ. ಡಿಜಿಟಲೀಕರಣ ಹಾಗೂ ಪರಿಸರ ಕಾಳಜಿ ಪ್ರೋತ್ಸಾಹಕ್ಕೆ ಕೇರಳದ ಮೂರು ಕೋರ್ಟ್‌ಗಳು ಮುಂದಾಗಿದ್ದು, ಕೋರ್ಟ್‌ಗಳಲ್ಲಿ ಕಾಗದ ರಹಿತ ನ್ಯಾಯಾಂಗ ವ್ಯವಸ್ಥೆ ಜಾರಿಗೆ ಮುನ್ನುಡಿ ಬರೆದಿವೆ.

    ಕೇರಳದ 3 ಕೋರ್ಟ್‌ಗಳಲ್ಲಿ ಕಾಗರ ರಹಿತ ಪ್ರಕ್ರಿಯೆ ಈಗಾಗಲೇ ಚಾಲ್ತಿಯಲ್ಲಿದೆ. ಕೇರಳ ಹೈಕೋರ್ಟ್ ಆ.1ರಿಂದ ಇದನ್ನು ಅಳವಡಿಸಿಕೊಂಡಿದೆ. ನ್ಯಾಯಾಂಗ ವ್ಯವಸ್ಥೆಯ ಯಾವುದೇ ಕಾರ್ಯ ಹಾಗೂ ಪ್ರಕ್ರಿಯೆಗಳು ಕಾಗದ ರಹಿತವಾಗಿ ನಡೆಯಲಿವೆ. ಇದನ್ನೂ ಓದಿ: ಇಂದು ಮಾಲ್ಡೀವ್ಸ್ ಅಧ್ಯಕ್ಷರನ್ನು ಭೇಟಿಯಾಗಲಿರುವ ಮೋದಿ

    ಈ ಕ್ರಮ ಪರಿಸರ ಸ್ನೇಹಿಯಾಗಿದೆ. ಸಮಯ ಉಳಿತಾಯ ಮತ್ತು ವೆಚ್ಚ ಕಡಿಮೆಗೊಳಿಸಲು ಸಹಕಾರಿಯಾಗಿದೆ. ದೊಡ್ಡ ದೊಡ್ಡ ಫೈಲ್‌ಗಳನ್ನು ಸಾಗಿಸುವ ಪರಿಪಾಠವೂ ತಪ್ಪುತ್ತದೆ ಎಂದು ಹೈಕೋರ್ಟ್‌ನ ಕ್ರಮವನ್ನು ವಕೀಲರು ಸ್ವಾಗತಿಸಿದ್ದಾರೆ.

    ಈ ಕ್ರಮದ ಬಗ್ಗೆ ಕೆಲವರು ಪ್ರಶ್ನಾರ್ಥಕವಾಗಿ ನೋಡುತ್ತಿದ್ದಾರೆ. ದಶಕಗಳಿಂದ ಪ್ರಕರಣಗಳ ಭೌತಿಕ ಫೈಲ್‌ಗಳಿಂದ ವಾದಿಸುತ್ತಿದ್ದವರಿಗೆ ಹೊಸ ವ್ಯವಸ್ಥೆಯು ಎಷ್ಟು ಸಹಾಯಕವಾಗಬಹುದು ಎಂದು ಕೇಳುತ್ತಿದ್ದಾರೆ. ಇದನ್ನೂ ಓದಿ: ಆಗಸ್ಟ್‌ 2 ವಿಶೇಷ ದಿನ; ನಾನು DP ಬದಲಾಯಿಸಿದ್ದೇನೆ, ನೀವೂ ಬದಲಾಯಿಸಿ – ಜನತೆಗೆ ಮೋದಿ ಕರೆ

    2017 ರಲ್ಲಿ ನಟಿಯೊಬ್ಬರ ಮೇಲಿನ ಹಲ್ಲೆ ಪ್ರಕರಣದಲ್ಲಿ ನಟ ದಿಲೀಪ್ ಅವರ ಪರ ವಾದ ಮಂಡಿಸುತ್ತಿರುವ ವಕೀಲ ಫಿಲಿಪ್ ಟಿ ವರ್ಗೀಸ್, ಹೈಕೋರ್ಟ್‌ ಕ್ರಮವನ್ನು ಸ್ವಾಗತಿಸಿದ್ದಾರೆ. ʻಈ ಕ್ರಮ ಕಾಗದ ಅಥವಾ ಭೌತಿಕ ಫೈಲ್‌ಗಳ ಬಳಕೆಯ ಮೇಲೆ ಸಂಪೂರ್ಣ ನಿಷೇಧವನ್ನು ಅರ್ಥೈಸುವುದಿಲ್ಲ. ಕಂಪ್ಯೂಟರ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸಲು ಆಗದವರು ಭೌತಿಕ ಫೈಲ್‌ಗಳನ್ನು ಬಳಸುವ ಆಯ್ಕೆಯನ್ನು ಹೊಂದಿರುತ್ತಾರೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭಾರತದ UPI ವ್ಯವಸ್ಥೆ ಅಳವಡಿಸಿಕೊಂಡ ನೇಪಾಳ

    ಕಠ್ಮಂಡು: ಭಾರತದ UPI ವ್ಯವಸ್ಥೆಯನ್ನು ನೇಪಾಳ ಅಳವಡಿಸಿಕೊಳ್ಳುತ್ತಿದ್ದು, ಮೊದಲ ದೇಶ ಎನಿಸಿಕೊಳ್ಳುತ್ತಿದೆ. ಇದು ನೆರೆಯ ದೇಶದ ಡಿಜಿಟಲ್ ಆರ್ಥಿಕತೆಯನ್ನು ಪರಿವರ್ತಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ(NPCI) ತಿಳಿಸಿದೆ.

    NPCI ಇಂಟರ್‌ನ್ಯಾಷನಲ್ ಪೇಮೆಂಟ್ಸ್ ಲಿಮಿಟೆಡ್(NIPL) NPCIಯ ಅಂತರಾಷ್ಟ್ರೀಯ ಅಂಗವಾಗಿದ್ದು, ನೇಪಾಳದಲ್ಲಿ ಸೇವೆಗಳನ್ನು ಒದಗಿಸಲು ಗೇಟ್‍ವೇ ಪೇಮೆಂಟ್ ಸರ್ವಿಸ್(GPS) ಹಾಗೂ ಮನಮ್ ಇನ್ಫೋಟೆಕ್‍ನೊಂದಿಗೆ ಕೈಜೋಡಿಸಿದೆ. ಇದನ್ನೂ ಓದಿ: ಸಂಜ್ಞಾ ಭಾಷೆ ಅರ್ಥಮಾಡಿಕೊಳ್ಳುವ ಎಐ ಮಾದರಿಯನ್ನು ಅಭಿವೃದ್ಧಿ ಪಡಿಸಿದ 20ರ ಯುವತಿ

    ಈ ಸಹಯೋಗದಿಂದ ನೇಪಾಳದಲ್ಲಿ ದೊಡ್ಡ ಡಿಜಿಟಲ್ ಸಾರ್ವಜನಿಕ ಸೇವೆ ಪೂರೈಕೆಯಾಗಲಿದೆ. ಇದು ವ್ಯಕ್ತಿಯಿಂದ ವ್ಯಕ್ತಿಗೆ(P2P) ಹಾಗೂ ವ್ಯಕ್ತಿಯಿಂದ ವ್ಯಾಪಾರಿ(P2M) ವಹಿವಾಟುಗಳನ್ನು ಉತ್ತೇಜಿಸುತ್ತದೆ ಎಂದು ಎನ್‍ಪಿಸಿಐ ತಿಳಿಸಿದೆ. ಇದನ್ನೂ ಓದಿ: ವಿರಾಟ್ ಅಭಿಮಾನಿಗಳಿಗಿಲ್ಲ ಗಡಿರೇಖೆ – ಪಾಕ್ ಕ್ರಿಕೆಟ್ ಲೀಗ್‍ನಲ್ಲಿ ರಾರಾಜಿಸಿದ ಕೊಹ್ಲಿ ಪೋಸ್ಟರ್

    ಭಾರತದ UPI ವ್ಯವಸ್ಥೆಯನ್ನು ಅಳವಡಿಸಿಕೊಂಡು ನಗದು ವಹಿವಾಟುಗಳನ್ನು ಡಿಜಿಟಲೀಕರಣವಾಗಿ ಬದಲಾವಣೆ ಮಾಡುತ್ತಿರುವ ಮೊದಲ ದೇಶ ನೇಪಾಳ ಎಂದು ತಿಳಿಸಿದೆ.

  • ಡಿಜಿಟಲೀಕರಣದಲ್ಲಿ ಭಾರತ ಅಮೆರಿಕಕ್ಕೂ ಮಾದರಿ: ಅಶ್ವತ್ಥನಾರಾಯಣ

    ಡಿಜಿಟಲೀಕರಣದಲ್ಲಿ ಭಾರತ ಅಮೆರಿಕಕ್ಕೂ ಮಾದರಿ: ಅಶ್ವತ್ಥನಾರಾಯಣ

    ಬೆಂಗಳೂರು: ಹಲವು ಇತಿಮಿತಿಗಳ ನಡುವೆಯೂ ಭಾರತದಲ್ಲಿ ಆಗಿರುವಷ್ಟು ಡಿಜಿಟಲೀಕರಣ ಪ್ರಪಂಚದ ಬೇರಾವ ದೇಶದಲ್ಲೂ ಆಗಿಲ್ಲ. ಈ ವಿಷಯದಲ್ಲಿ ದೇಶವು ಅಮೆರಿಕದಂತಹ ದೈತ್ಯರಾಷ್ಟ್ರಕ್ಕೂ ಮಾದರಿಯಾಗಿದ್ದು, ಇವತ್ತು ಇಡೀ ವಿಶ್ವವೇ ನಮ್ಮನ್ನು ಅನುಸರಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

    ಎಫ್‌.ಕೆ.ಸಿ.ಸಿ.ಐ ಏರ್ಪಡಿಸಿದ್ದ 14ನೇ ವರ್ಷದ ಮಂಥನ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದ ಅವರು, ದೇಶದಲ್ಲಿ ಅನಕ್ಷರತೆ, ಬಡತನ ಮತ್ತು ಮೂಲಸೌಲಭ್ಯಗಳ ಕೊರತೆ ಇನ್ನೂ ಇದೆ. ಇವೆಲ್ಲವನ್ನೂ ಕಿತ್ತೊಗೆಯಬೇಕೆಂದರೆ ತಂತ್ರಜ್ಞಾನಕ್ಕಿಂತ ಅತ್ಯುತ್ತಮ ಸಾಧನ ಇನ್ನೊಂದಿಲ್ಲ. ಇದನ್ನು ಅರಿತಿರುವ ಪ್ರಧಾನಿ ನರೇಂದ್ರ ಮೋದಿ, ಡಿಜಿಟಲೀಕರಣದ ಕ್ರಾಂತಿಯನ್ನೇ ಸಾಧಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಸಮವಸ್ತ್ರ ಜಾರಿ ಸಿ.ಡಿ.ಸಿ ನಿರ್ಧಾರ ಅಂದ್ರು ಎಜಿ- ಸೋಮವಾರ ಹೈಕೋರ್ಟ್‍ಗೆ ಮಧ್ಯಂತರ ಅರ್ಜಿ

    ಇಂದು ಬೆಂಗಳೂರು ಉದ್ಯಮಶೀಲತೆ, ತಂತ್ರಜ್ಞಾನ, ನವೋದ್ಯಮ, ನಾವೀನ್ಯತೆ, ಆವಿಷ್ಕಾರ ರಂಗಗಳಲ್ಲಿ ಜಗತ್ತಿನ ಅಗ್ರಮಾನ್ಯ 30 ನಗರಗಳಲ್ಲಿ ಒಂದಾಗಿದೆ. ದೇಶದಲ್ಲಂತೂ ಬೆಂಗಳೂರನ್ನು ಉಳಿದ ನಗರಗಳು ಅನುಸರಿಸುತ್ತಿವೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರವು ನಾವೀನ್ಯತಾ ಪ್ರಾಧಿಕಾರ ರಚನೆ ಸೇರಿದಂತೆ ಹತ್ತು‌ ಹಲವು ಉಪಕ್ರಮಗಳನ್ನು ಜಾರಿಗೆ ತಂದಿದ್ದು, ಉದ್ದಿಮೆಗಳ ಬೆಳವಣಿಗೆಗೆ ನಿರ್ಣಾಯಕ ಸಹಕಾರ ನೀಡುತ್ತಿದೆ ಎಂದರು. ಇದನ್ನೂ ಓದಿ: ವಿದ್ಯಾರ್ಥಿನಿಗೆ ಶರ್ಟ್ ಬಿಚ್ಚಿಕೊಡಲು ಮುಂದಾದ ಕಾಫಿನಾಡಿನ ಸರ್ಕಲ್ ಇನ್ಸ್‌ಪೆಕ್ಟರ್

    ಸಬ್ಸಿಡಿ, ಸಾಲ, ರಿಯಾಯಿತಿ ಮತ್ತು ವಿನಾಯಿತಿಗಳ ಆಧಾರದ ಮೇಲೆ ಉದ್ದಿಮೆಗಳನ್ನು ಬೆಳೆಸಲು ಸಾಧ್ಯವಿಲ್ಲ. ಜಾಗತಿಕ ಸ್ಪರ್ಧೆಯ ಈ ದಿನಮಾನದಲ್ಲಿ ಅತ್ಯುತ್ತಮ ಗುಣಮಟ್ಟವೊಂದೇ ನಮ್ಮ ಅಸ್ತಿತ್ವಕ್ಕೆ ಆಧಾರವಾಗಿದೆ. ಈಗ ಜಾರಿಗೆ ಬರುತ್ತಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಈ ನಿಟ್ಟಿನಲ್ಲಿ ದಾರಿದೀಪವಾಗಿದೆ ಎಂದು ತಿಳಿಸಿದರು.