Tag: digvijay singh

  • ಕಮಲ್‌ನಾಥ್‌ ಇಂದು, ಎಂದೆಂದಿಗೂ ಕಾಂಗ್ರೆಸ್‌ನಲ್ಲೇ ಇರುತ್ತಾರೆ: ದಿಗ್ವಿಜಯ್‌ ಸಿಂಗ್‌

    ಕಮಲ್‌ನಾಥ್‌ ಇಂದು, ಎಂದೆಂದಿಗೂ ಕಾಂಗ್ರೆಸ್‌ನಲ್ಲೇ ಇರುತ್ತಾರೆ: ದಿಗ್ವಿಜಯ್‌ ಸಿಂಗ್‌

    ನವದೆಹಲಿ: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ (Kamal Nath) ಅವರು ಬಿಜೆಪಿಗೆ ಜಂಪ್‌ ಮಾಡುತ್ತಾರೆ ಎಂಬ ವದಂತಿಗಳಿಗೆ ಇದೀಗ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ (Digvijay Singh) ಪ್ರತಿಕ್ರಿಯಿಸಿದ್ದಾರೆ.

    ಇಂದು ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಮಲ್ ನಾಥ್ ಅವರ ನಿಷ್ಠೆ ಕಾಂಗ್ರೆಸ್ (Congress) ಜೊತೆಗಿದೆ. ಕಮಲ್ ನಾಥ್ ಅವರು ಕಾಂಗ್ರೆಸ್ ನ ಭಾಗವಾಗಿದ್ದಾರೆ. ಹೀಗಾಗಿ ಅವರು ಯಾವತ್ತೂ ಬೇರೆ ಪಕ್ಷಕ್ಕೆ ಹಾರಲಾರರು. ಅವರು ಇಂದು, ಮುಂದೆ ಹಾಗೂ ಎಂದೆಂದಿಗೂ ಕಾಂಗ್ರೆಸ್‌ನಲ್ಲೇ ಇರುತ್ತಾರೆ ಎಂದು ಒತ್ತಿ ಹೇಳಿದರು.

    ಛಿಂದ್ವಾರ ಸಂಸದ, ಪುತ್ರ ನಕುಲ್‌ನಾಥ್ ಜೊತೆ ಸೇರಿ ಕಮಲ್‌ನಾಥ್ 12 ಕ್ಕೂ ಹೆಚ್ಚು ಶಾಸಕರ ಜೊತೆಗೆ ಬಿಜೆಪಿ (BJP) ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿದ್ದವು. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಫೆ.22ಕ್ಕೆ ಮಧ್ಯಪ್ರದೇಶ ಪ್ರವೇಶವಾಗುವ ಹೊತ್ತಲ್ಲೇ ಈ ವಿಚಾರ ಕೇಳಿಬಂದಿತ್ತು. ಇದನ್ನೂ ಓದಿ: ಕಾಂಗ್ರೆಸ್‌ಗೆ ಇಂದಿರಾ ಗಾಂಧಿ 3ನೇ ಮಗ ಶಾಕ್? – ಪುತ್ರನ ಜೊತೆ ಕಮಲ್‌ನಾಥ್ ಬಿಜೆಪಿ ಸೇರ್ಪಡೆ?

    ಸದ್ಯಕ್ಕೆ ಕಮಲ್ ನಾಥ್ ಕಡೆಯಿಂದ ಯಾವುದೇ ರೀತಿಯ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ ಪಕ್ಷವನ್ನು ಬದಲಾಯಿಸುವ ಕುರಿತು ಕಮಲ್‌ ನಾಥ್‌ ಅವರನ್ನು ಹೇಳಿದಾಗ ನೀವೆಲ್ಲ ಯಾಕೆ ಉತ್ಸುಕರಾಗಿದ್ದೀರಿ. ಹಂಗೆ ಏನಾದರೂ ಇದ್ದರೆ ಮಾಧ್ಯಮಗಳಿಗೆ ತಿಳಿಸಲಾಗುವುದು ಎಂದು ಹೇಳಿದರು.

  • ರಾಮಲಲ್ಲಾ ಮೂರ್ತಿ ಮಗುವಿನಂತೆ ಕಾಣುತ್ತಿಲ್ಲ- ಕೆಂಗಣ್ಣಿಗೆ ಗುರಿಯಾದ ದಿಗ್ವಿಜಯ ಸಿಂಗ್

    ರಾಮಲಲ್ಲಾ ಮೂರ್ತಿ ಮಗುವಿನಂತೆ ಕಾಣುತ್ತಿಲ್ಲ- ಕೆಂಗಣ್ಣಿಗೆ ಗುರಿಯಾದ ದಿಗ್ವಿಜಯ ಸಿಂಗ್

    ಭೋಪಾಲ್:‌ ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ಪ್ರತಿಷ್ಠಾಪನೆ ಮಾಡಲಿರುವ ರಾಮಲಲ್ಲಾ ಮೂರ್ತಿ (Pran Prathistha Ceremony) ಮಗುವಿನಂತೆ ಕಾಣುತ್ತಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್‌ ಹಿರಿಯ ನಾಯಕ ದಿಗ್ವಿಜಯ್‌ ಸಿಂಗ್‌ (Digvijay Singh) ಅವರು ಹೊಸ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

    ಈ ಸಂಬಂಧ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ನಾನು ಮೊದಲಿನಿಂದಲೂ ಹೇಳುತ್ತಿದ್ದೇನೆ, ವಿವಾದಿತ ರಾಮಲಲ್ಲಾನ ವಿಗ್ರಹವನ್ನು ನಾಶಪಡಿಸಿದ ವಿಗ್ರಹ ಎಲ್ಲಿದೆ? ಎರಡನೇ ಪ್ರತಿಮೆಯ ಅಗತ್ಯವೇನು? ನಮ್ಮ ಗುರು ಶಂಕರಾಚಾರ್ಯ ಸ್ವಾಮಿ, ಸ್ವರೂಪಾನಂದ ಜಿ ಮಹಾರಾಜ್ ಕೂಡ ರಾಮನ ವಿಗ್ರಹವನ್ನು ಸ್ಥಾಪಿಸಲು ಸಲಹೆ ನೀಡಿದ್ದರು. ರಾಮಜನ್ಮಭೂಮಿ ದೇವಸ್ಥಾನ ಮಗುವಿನ ರೂಪದಲ್ಲಿರಬೇಕು. ತಾಯಿ ಕೌಶಲ್ಯೆಯ ಮಡಿಲಲ್ಲಿರಬೇಕು. ಆದರೆ ದೇವಾಲಯದಲ್ಲಿ ಕುಳಿತಿರುವ ವಿಗ್ರಹವು ಮಗುವಿನಂತೆ ಕಾಣುತ್ತಿಲ್ಲ ಎಂದು ಬರೆದಿದ್ದಾರೆ.

    ಈ ರೀತಿ ಬರೆದುಕೊಳ್ಳುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ದಿಗ್ವಿಜಯ್‌ ಸಿಂಗ್‌ ವಿರುದ್ಧ ಬಿಜೆಪಿಗರು ಹಾಗೂ ರಾಮನ ಭಕ್ತರು ಸಿಡಿದೆದ್ದಿದ್ದಾರೆ. ಸಿಂಗ್‌ ಹೇಳಿಕೆಗೆ ಪರ-ವಿರೋಧ ಕಾಮೆಂಟ್‌ಗಳು ಬರುತ್ತಿದೆ. ಇದನ್ನೂ ಓದಿ: ಅಯೋಧ್ಯೆಯ ಬಾಲರಾಮನ ವಿಗ್ರಹದ ವಿಶೇಷತೆ ಏನು..?

    ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ಮೊದಲು ಅಂದರೆ ಗುರುವಾರ ಅಯೋಧ್ಯೆಯ ದೇವಾಲಯದ ಗರ್ಭಗುಡಿಯಲ್ಲಿ ಭಗವಾನ್ ರಾಮನ ವಿಗ್ರಹವನ್ನು ಇರಿಸಲಾಯಿತು. ತಡರಾತ್ರಿ ಗರ್ಭಗುಡಿಯಲ್ಲಿ ನಡೆದ ಪ್ರತಿಷ್ಠಾಪನಾ ಸಮಾರಂಭದಲ್ಲಿ ಮುಸುಕಿನಿಂದ ಮುಚ್ಚಲ್ಪಟ್ಟ ವಿಗ್ರಹದ ಮೊದಲ ಫೋಟೋವನ್ನು ಬಹಿರಂಗಪಡಿಸಲಾಯಿತು.

    ರಾಮಲಲ್ಲಾ ವಿಗ್ರಹವನ್ನು ಪ್ರಸಿದ್ಧ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ್ದಾರೆ. ವಿಗ್ರಹವು 51 ಇಂಚು ಎತ್ತರ ಮತ್ತು 1.5 ಟನ್ ತೂಕವಿದೆ. ಕಮಲದ ಮೇಲೆ ನಿಂತಿರುವ ಐದು ವರ್ಷದ ಮಗುವಿನಂತೆ ರಾಮನನ್ನು ವಿಗ್ರಹವು ಚಿತ್ರಿಸುತ್ತದೆ. ಈ ನಡುವೆ ಜನವರಿ 22 ರಂದು ನಿಗದಿಯಾಗಿರುವ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ತಯಾರಿಗಾಗಿ ಗುರುವಾರ ಅಯೋಧ್ಯಾ ನಗರವನ್ನು ರೋಮಾಂಚಕ ಹೂವುಗಳಿಂದ ಅಲಂಕರಿಸಲಾಗಿದೆ.

    ಜನವರಿ 22 ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಲಿದ್ದಾರೆ. ಲಕ್ಷ್ಮೀಕಾಂತ್ ದೀಕ್ಷಿತ್ ನೇತೃತ್ವದ ಅರ್ಚಕರ ತಂಡವು ಪ್ರಮುಖ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಿದೆ. ಸಮಾರಂಭಕ್ಕೆ ಹಲವಾರು ಸೆಲೆಬ್ರಿಟಿಗಳು ಮತ್ತು ಹೆಸರಾಂತ ವ್ಯಕ್ತಿಗಳನ್ನು ಸಹ ಆಹ್ವಾನಿಸಲಾಗಿದೆ.

  • ಪೊಲೀಸ್ ಕಾಲರ್ ಹಿಡಿದು ದಿಗ್ವಿಜಯ್ ಸಿಂಗ್ ರಂಪಾಟ

    ಪೊಲೀಸ್ ಕಾಲರ್ ಹಿಡಿದು ದಿಗ್ವಿಜಯ್ ಸಿಂಗ್ ರಂಪಾಟ

    ಭೋಪಾಲ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರು ಪೊಲೀಸ್ ಕಾಲರ್ ಹಿಡಿದು ರಂಪಾಟ ಮಾಡಿರುವ ವೀಡಿಯೋ ಸೊಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ದಿಗ್ವಿಜಯ್ ಸಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ನಡುವೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಸಂಬಂಧಿಸಿದಂತೆ ತೀವ್ರ ಪೈಪೋಟಿ ನಡೆಯುತ್ತಿದೆ. ಈ ನಡುವೆ ದಿಗ್ವಿಜಯ ಸಿಂಗ್ ಮತ್ತು ಶಾಸಕರಾದ ಆರಿಫ್ ಮಸೂದ್ ಮತ್ತು ಪಿಸಿ ಶರ್ಮಾ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭೋಪಾಲ್‍ನ ಜಿಲ್ಲಾ ಪಂಚಾಯತ್ ಕಚೇರಿಯ ಹೊರಗೆ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ.  ಇದನ್ನೂ ಓದಿ: ಬಿಡದಿಯ ನಿತ್ಯಾನಂದನ ಸ್ವರೂಪ ಎಂದು ಜನರನ್ನು ವಂಚಿಸುತ್ತಿದ್ದ ಸತ್ಯಾನಂದನಿಗೆ ಗೂಸಾ

    ಸರ್ಕಾರದ ಒತ್ತಡಕ್ಕೆ ಮಣಿದು ಪೊಲೀಸರು ಮತ್ತು ಆಡಳಿತ ವ್ಯವಸ್ಥೆ ಕೆಲಸ ಮಾಡುತ್ತಿದೆ ಎಂದು ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಆರೋಪಿಸಿದ್ದಾರೆ. ಇದರಿಂದ ಕೋಪಗೊಂಡ ಸಚಿವ ವಿಶ್ವಾಸ್ ಸಾರಂಗ್ ಅವರು ಕಾರಿನಿಂದ ಕೆಳಗಿಳಿದಾಗ ಕಾಂಗ್ರೆಸ್ ಬೆಂಬಲಿಗರು ಅವರನ್ನು ಸುತ್ತುವರಿದಿದ್ದಾರೆ. ಈ ವೇಳೆ ಸಾರಂಗ್ ಕಾಂಗ್ರೆಸ್ ಬೆಂಬಲಿಗರಿಗೆ ಈ ದಾದಾಗಿರಿ ಕೆಲಸ ನಡೆಯುವುದಿಲ್ಲ ಎಂದು ಹೇಳಿದರು. ಸಚಿವ ಸಾರಂಗ್ ಅವರ ಹೇಳಿಕೆಗೆ ಪರಿಸ್ಥಿತಿ ಉದ್ವಿಗ್ನಗೊಂಡು ಮಾತಿನ ಚಕಮಕಿ ನಡೆಯಿತು. ಆದರೆ, ಸಾಕಷ್ಟು ಪ್ರಯತ್ನಗಳ ನಂತರ ಪೊಲೀಸರು ಪರಿಸ್ಥಿಯನ್ನು ಹತೋಟಿಗೆ ತಂದರು.

    ಈ ಕುರಿತ ವೀಡಿಯೋದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಪಂಚಾಯತ್ ಕಚೇರಿಗೆ ಪ್ರವೇಶಿಸದಂತೆ ತಡೆಯಲು ಪೊಲೀಸರು ಪ್ರಯತ್ನಿಸುತ್ತಿರುವುದನ್ನು ಕಾಣಬಹುದಾಗಿದೆ. ಜೊತೆಗೆ ಒಬ್ಬ ಪೊಲೀಸ್ ಅಧಿಕಾರಿಯ ಕೊರಳಪಟ್ಟಿ ಹಿಡಿದು ದಿಗ್ವಿಜಯ್ ಸಿಂಗ್ ಹಿಂಸಾತ್ಮಕವಾಗಿ ತಳ್ಳಿರುವುದನ್ನು ಕಾಣಬಹುದು. ಇದನ್ನೂ ಓದಿ: ಪ್ರವೀಣ್ ಹತ್ಯೆ ಖಂಡಿಸಿ ರಾಜೀನಾಮೆ ಪರ್ವ – ಇದು ಹೇಡಿಗಳ ಲಕ್ಷಣ ಎಂದ ಈಶ್ವರಪ್ಪ

    ಬಿಜೆಪಿ ಮುಖಂಡ ಹಾಗೂ ರಾಜ್ಯ ಸಚಿವ ಭೂಪೇಂದ್ರ ಸಿಂಗ್ ಜಿಲ್ಲಾ ಪಂಚಾಯಿತಿ ಕಚೇರಿಗೆ ಆಗಮಿಸುತ್ತಿದ್ದಂತೆ ಪ್ರತಿಭಟನಾ ನಿರತ ಕಾಂಗ್ರೆಸ್ ಕಾರ್ಯಕರ್ತರು ಅವರ ವಾಹನವನ್ನು ಹಾದುಹೋಗಲು ಬಿಡಲಿಲ್ಲ. ದಿಗ್ವಿಜಯ್ ಸಿಂಗ್ ಮತ್ತು ಆರಿಫ್ ಮಸೂದ್ ಸಿಂಗ್ ಅವರ ಕಾರಿನ ಮುಂದೆ ನಿಂತು, ಪಂಚಾಯತ್ ಕಚೇರಿಗೆ ಸಚಿವರ ಪ್ರವೇಶವನ್ನು ತಡೆದರು. ಕೂಡಲೇ ಪರಿಸ್ಥಿತಿ ನಿಯಂತ್ರಿಸಲು ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಯಿತು. ಈ ವೇಳೆ ನೂಕುನುಗ್ಗಲು ಹೆಚ್ಚಾಗುತ್ತಿದ್ದಂತೆ ದಿಗ್ವಿಜಯ್ ಸಿಂಗ್ ಪೊಲೀಸ್ ಅಧಿಕಾರಿಯ ಕೊರಳಪಟ್ಟಿ ಹಿಡಿದು ತಳ್ಳಿರುವುದು ಕಂಡುಬಂದಿದೆ.

    ಭೋಪಾಲ್ ಸೇರಿದಂತೆ ಮಧ್ಯಪ್ರದೇಶದ ಹಲವು ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಸಮೀಕ್ಷೆಗಳು ಬಿಜೆಪಿ ಮತ್ತು ಕಾಂಗ್ರೆಸ್ ಎರಡಕ್ಕೂ ವಿಶ್ವಾಸಾರ್ಹತೆಯ ಪ್ರಶ್ನೆಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ದಿಗ್ವಿಜಯ್ ಸಿಂಗ್ ಸಹಿತ 6 ಮಂದಿಗೆ 1 ವರ್ಷ ಜೈಲು ಶಿಕ್ಷೆ

    ದಿಗ್ವಿಜಯ್ ಸಿಂಗ್ ಸಹಿತ 6 ಮಂದಿಗೆ 1 ವರ್ಷ ಜೈಲು ಶಿಕ್ಷೆ

    ಭೋಪಾಲ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಸೇರಿದಂತೆ ಆರು ಮಂದಿ ಆರೋಪಿಗಳಿಗೆ ಇಂದೋರ್ ವಿಶೇಷ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ನಂತರ ಜಾಮೀನನ್ನು ಸಹ ನೀಡಿದೆ.

    ಹೌದು, 2011ರಲ್ಲಿ ಭಾರತೀಯ ಜನತಾ ಯುವ ಮೋರ್ಚಾದ (ಬಿಜೆವೈಎಂ) ಪ್ರತಿಭಟನಾ ನಿರತ ಕಾರ್ಯಕರ್ತರೊಂದಿಗೆ ನಡೆದ ಸಂಘರ್ಷಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ದಿಗ್ವಿಜಯ್ ಸಿಂಗ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ನಂತರ ನ್ಯಾಯಾಲಯವು ಉಜ್ಜಯಿನಿ ಸಂಸದ ಪ್ರೇಮಚಂದ್ ಗುಡ್ಡು ಸೇರಿದಂತೆ ಎಲ್ಲಾ ಅಪರಾಧಿಗಳಿಗೆ ತಲಾ 25,000 ರೂ.ಗಳ ಶ್ಯೂರಿಟಿ ಮೇಲೆ ಜಾಮೀನು ನೀಡಿದೆ.  ಇದನ್ನೂ ಓದಿ: ನಿಶ್ಚಿತಾರ್ಥ ಮಾಡಿಕೊಂಡ ಸಂಜನಾ ಸಹೋದರಿ ನಿಕ್ಕಿ ಗಲ್ರಾನಿ

    ಈ ಕುರಿತಂತೆ ಮಾತನಾಡಿದ ಸರ್ಕಾರಿ ವಕೀಲ ವಿಮಲ್ ಕುಮಾರ್ ಮಿಶ್ರಾ, ಎಲ್ಲಾ ಆರೋಪಿಗಳಿಗೂ ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆ ವಿಧಿಸಲಾಗಿರುವುದರಿಂದ ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ ಎಂದು ಹೇಳಿದ್ದಾರೆ.

    ಮತ್ತೊಂದೆಡೆ ದಿಗ್ವಿಜಯ್ ಸಿಂಗ್ ಮತ್ತು ಮಾಜಿ ಸಂಸದ ಪ್ರೇಮಚಂದ್ ಗುಡ್ಡು ಅವರು ನ್ಯಾಯಾಲಯದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಲು ಇಷ್ಟಪಡುವುದಿಲ್ಲ. ಆದರೆ ಹೈಕೋರ್ಟ್‍ನಲ್ಲಿ ವಿಧಿಸಿರುವ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ತಿಳಿದರು. ಇದನ್ನೂ ಓದಿ: ಬೆಂಗಳೂರು ರಸ್ತೆಗೆ ಹೆವಿ ವೆಹಿಕಲ್‍ಗಳೇ ಕಂಟಕ- ಭಾರೀ ಗಾತ್ರದ ವಾಹನಗಳಿಂದ ರೂಲ್ಸ್ ಬ್ರೇಕ್

    ಇದು 10 ವರ್ಷಗಳ ಹಳೆಯ ಪ್ರಕರಣವಾಗಿದ್ದು, ಎಫ್‍ಐಆರ್‌ನಲ್ಲಿ ನನ್ನ ಹೆಸರಿಲ್ಲ. ಆದರೆ ರಾಜಕೀಯ ಒತ್ತಡದಿಂದ ನಂತರದಲ್ಲಿ ಹೆಸರನ್ನು ಸೇರಿಸಲಾಗಿದೆ. ನಾನು ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸುತ್ತೇನೆ ದಿಗ್ವಿಜಯ್ ಸಿಂಗ್ ಅವರು ಕಿಡಿಕಾರಿದ್ದಾರೆ.

    ಪೊಲೀಸರ ಪ್ರಕಾರ, 2011ರ ಜುಲೈ 17ರಂದು ಸಿಂಗ್ ಅವರ ಬೆಂಗಾವಲು ಪಡೆ ಉಜ್ಜಯಿನಿಯ ಜಿವಾಜಿಗಂಜ್ ಪ್ರದೇಶದ ಮೂಲಕ ಹಾದು ಹೋಗುತ್ತಿದ್ದಾಗ ಬಿಜೆವೈಎಂ ಕಾರ್ಯಕರ್ತರು ಕಪ್ಪು ಬಾವುಟವನ್ನು ತೋರಿಸಲು ಪ್ರಯತ್ನಿಸಿದರು. ಇದು ಘರ್ಷಣೆಗೆ ಕಾರಣವಾಯಿತು.

  • ಉಕ್ರೇನ್‍ನಿಂದ ಮರಳಿದ ವಿದ್ಯಾರ್ಥಿಗಳಿಗೆ ಸೀಟ್ ನೀಡಿ ಶುಲ್ಕವನ್ನು ಸರ್ಕಾರವೇ ಭರಿಸಲಿ: ದಿಗ್ವಿಜಯ್ ಸಿಂಗ್

    ಉಕ್ರೇನ್‍ನಿಂದ ಮರಳಿದ ವಿದ್ಯಾರ್ಥಿಗಳಿಗೆ ಸೀಟ್ ನೀಡಿ ಶುಲ್ಕವನ್ನು ಸರ್ಕಾರವೇ ಭರಿಸಲಿ: ದಿಗ್ವಿಜಯ್ ಸಿಂಗ್

    ಭೋಪಾಲ್: ಯುದ್ಧ ಪೀಡಿತ ಉಕ್ರೇನ್‍ನಿಂದ ತಾಯ್ನಾಡಿಗೆ ಮರಳಿದ ವಿದ್ಯಾರ್ಥಿಗಳಿಗೆ ಭಾರತದ ವಿವಿಧ ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡಲು ಪ್ರವೇಶ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಸಂಸದ ದಿಗ್ವಿಜಯ್ ಸಿಂಗ್ ಪತ್ರ ಬರೆದಿದ್ದಾರೆ.

    ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ದಿಗ್ವಿಜಯ್ ಸಿಂಗ್ ಅವರು, ಉಕ್ರೇನ್ ಮೂಲದ ವೈದ್ಯಕೀಯ ಕಾಲೇಜುಗಳಲ್ಲಿ ಓದಲು ಈಗಾಗಲೇ ಈ ವಿದ್ಯಾರ್ಥಿಗಳ ಪೋಷಕರು ಸಾಕಷ್ಟು ಹಣವನ್ನು ಖರ್ಚು ಮಾಡಿದ್ದಾರೆ ಮತ್ತು ಅಂತಹ ವಿದ್ಯಾರ್ಥಿಗಳ ಶುಲ್ಕವನ್ನು ಸರ್ಕಾರ ಭರಿಸಬೇಕೆಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‌ ದೇಶವಾಗಿ ಉಳಿಯುವುದೇ ಅನುಮಾನ: ಪುಟಿನ್‌ ನೇರ ಎಚ್ಚರಿಕೆ

    ದೇಶ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಯುಕ್ರೇನ್‍ನಿಂದ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳಿಗೆ ದೇಶದ ವಿವಿಧ ಖಾಸಗಿ ಮತ್ತು ಸರ್ಕಾರಿ ಕಾಲೇಜುಗಳಲ್ಲಿ ಎಂಬಿಬಿಎಸ್ ಕೋರ್ಸ್‍ಗಳನ್ನು ಮಾಡಲು ಪ್ರವೇಶ ನೀಡಲು ಕೇಂದ್ರವು ವಿಶೇಷ ಯೋಜನೆಯನ್ನು ರೂಪಿಸಬೇಕು ಎಂದು ತಿಳಿಸಿದ್ದಾರೆ.

    ರಷ್ಯಾದ ದಾಳಿಯಿಂದಾಗಿ ಉಕ್ರೇನ್‍ನ ವಿವಿಧ ವೈದ್ಯಕೀಯ ಕಾಲೇಜುಗಳು ಮತ್ತು ಸಂಸ್ಥೆಗಳು ಈಗಾಗಲೇ ನಾಶವಾಗಿವೆ. ಈ ನಿಟ್ಟಿನಲ್ಲಿ ಕೇಂದ್ರವು ನಿರ್ಧಾರ ತೆಗೆದುಕೊಂಡು ಈ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಅನಿಶ್ಚಿತತೆಯನ್ನು ಹೋಗಲಾಡಿಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಗಟ್ಸ್ ಇಲ್ಲ ಅನ್ನೋರು ಮೊದಲು ಉಕ್ರೇನ್ ಗಡಿವರೆಗೆ ತಲುಪಿ ಧಮ್ ತೋರಿಸಬೇಕಿತ್ತು: ಸುಜಯ್

  • ಗೋವು ಮಾತೆ ಅಲ್ಲ, ಗೋಮಾಂಸ ಸೇವನೆ ತಪ್ಪಲ್ಲ ಎಂದಿದ್ರು ಸಾವರ್ಕರ್‌: ದಿಗ್ವಿಜಯ್‌ ಸಿಂಗ್‌

    ಗೋವು ಮಾತೆ ಅಲ್ಲ, ಗೋಮಾಂಸ ಸೇವನೆ ತಪ್ಪಲ್ಲ ಎಂದಿದ್ರು ಸಾವರ್ಕರ್‌: ದಿಗ್ವಿಜಯ್‌ ಸಿಂಗ್‌

    ಭೋಪಾಲ್: ಗೋವು ನಮ್ಮ ತಾಯಿ ಅಲ್ಲ, ಗೋಮಾಂಸ ಸೇವನೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಾರ್ವಕರ್ ಅವರೇ ತಮ್ಮ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

    ಭೋಪಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಜನಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಹಿಂದುತ್ವ ಮತ್ತು ಹಿಂದೂ ಧರ್ಮಕ್ಕೆ ಯಾವುದೇ ಸಂಬಂಧವಿಲ್ಲ. ಗೋವು ನಮ್ಮ ಮಾತೆಯಲ್ಲ. ಗೋಮಾಂಸ ತಿನ್ನುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ವೀರ್ ಸಾರ್ವಕರ್ ಅವರ ಪುಸ್ತಕದಲ್ಲಿ ಬರೆದಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಜ.3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ: ಮೋದಿ

    ದಿಗ್ವಿಜಯ್ ಸಿಂಗ್ ಹೇಳಿಕೆ ಕುರಿತಂತೆ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ನಾಯಕರು ಯಾವಾಗಲೂ ಹಿಂದೂಗಳಿಗೆ ಮಾನಹಾನಿ ಮಾಡುವುದರಲ್ಲಿ ನಿರತರಾಗಿದ್ದಾರೆ. ಹಿಂದೂಗಳ ವಿರುದ್ಧ ಷಡ್ಯಂತ್ರ ಮಾಡಲು ಹಗಲಿರುಳು ಶ್ರಮಿಸುತ್ತಿರುವ ದಿಗ್ವಿಜಯ್ ಸಿಂಗ್ ಅವರೇ ಹಿಂದೂಗಳು ಮತ್ತು ಹಿಂದೂಸ್ತಾನದ ಅಭ್ಯುದಯಕ್ಕಾಗಿ ನೀವು ಶ್ರಮಿಸಿದ್ದರೆ, ಪಾಕಿಸ್ತಾನದಲ್ಲಿ ಜಿನ್ನಾ ಹುಟ್ಟುತ್ತಿರಲಿಲ್ಲ. ಭಯೋತ್ಪಾದನೆಯೂ ಇರುತ್ತಿರಲಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹಿಂದಿನ ಸರ್ಕಾರ ಹಣವನ್ನು ಕಬ್ರಿಸ್ತಾನ್‍ಗಳಿಗಾಗಿ ವ್ಯರ್ಥ ಮಾಡಿದೆ: ಯೋಗಿ ಆದಿತ್ಯನಾಥ್

    ಕೆಲವೊಮ್ಮೆ ಸಾವರ್ಕರ್ ಮತ್ತು ಇತರೆ ಮಹಾನ್ ಪುರುಷರ ಹೆಸರಿನಲ್ಲಿ ದಿಗ್ವಿಜಯ್ ಸಿಂಗ್ ಸುಳ್ಳು ಹೇಳಿಕೆಗಳನ್ನು ನೀಡುತ್ತಾರೆ. ದಿಗ್ವಿಜಯ್ ಸಿಂಗ್ ಅವರ ದೃಷ್ಟಿಯಲ್ಲಿ ಭಯೋತ್ಪಾದಕರು ದೇವರು. ಹೀಗಾಗಿ ದೇಶದ್ರೋಹಿಗಳಿಗೆ ಬಿರಿಯಾನಿ ತಿನ್ನಿಸುವ ಉದ್ದೇಶವನ್ನು ಹೊಂದಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

  • ಬೇಕಿದ್ರೆ ರಾಹುಲ್‌ ಗಾಂಧಿಯನ್ನು ಕಾಮಿಡಿ ಶೋಗೆ ಆಹ್ವಾನಿಸಿ: ಮಧ್ಯಪ್ರದೇಶ ಸಚಿವ ಲೇವಡಿ

    ಬೇಕಿದ್ರೆ ರಾಹುಲ್‌ ಗಾಂಧಿಯನ್ನು ಕಾಮಿಡಿ ಶೋಗೆ ಆಹ್ವಾನಿಸಿ: ಮಧ್ಯಪ್ರದೇಶ ಸಚಿವ ಲೇವಡಿ

    ಭೋಪಾಲ್: ಕಾಮಿಡಿಯನ್‌ ಕುಣಾಲ್‌ ಕಮ್ರಾ ಮತ್ತು ಮುನವ್ವರ್‌ ಫಾರೂಕಿ ಅವರನ್ನು ಸ್ಟ್ಯಾಂಡ್‌ ಅಪ್‌ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದ ಕಾಂಗ್ರೆಸ್‌ ನಾಯಕ ದಿಗ್ವಿಜಯ ಸಿಂಗ್‌ ವಿರುದ್ಧ ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್‌ ಮಿಶ್ರಾ ವಾಗ್ದಾಳಿ ನಡೆದಿದ್ದಾರೆ.

    ದಿಗ್ವಿಜಯ್‌ ಸಿಂಗ್‌ ಅವರು ಬೇಕಿದ್ದರೆ ರಾಹುಲ್‌ ಗಾಂಧಿ ಅವರನ್ನು ಕಾಮಿಡಿ ಶೋಗೆ ಆಹ್ವಾನಿಸಲಿ ಎಂದು ಸಚಿವ ನರೋತ್ತಮ್‌ ಮಿಶ್ರಾ ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಕರೆನ್ಸಿ ನೋಟುಗಳ ಮೇಲೆ ನೇತಾಜಿ ಫೋಟೋ ಮುದ್ರಿಸಿ: ಹರೇನ್ ಬಿಸ್ವಾಸ್ ಮನವಿ

    ಕೆಲವರು ಕಾರ್ಯಕ್ರಮಗಳನ್ನು ಆಯೋಜಿಸಿ ಹಿಂದೂ ಧರ್ಮದ ದೇವರುಗಳನ್ನು ಟೀಕಿಸಲು ಹೊರಟಿದ್ದಾರೆ. ಅಂತಹವರನ್ನು ಜೈಲಿಗೆ ಹಾಕುವುದು ಖಂಡಿತ. ಇತರರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಕೆಲಸ ಮಾಡಲು ಯಾರಿಗೂ ಅಧಿಕಾರ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.

    ಕುನಾಲ್‌ ಮತ್ತು ಮುನವ್ವರ್‌ ಅವರಿಂದ ಸ್ಟ್ಯಾಂಡ್‌ ಅಪ್‌ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್‌ ಸಿಂಗ್‌ ಟ್ವೀಟ್‌ ಮಾಡಿ ತಿಳಿಸಿದ್ದರು. ಇದಕ್ಕೆ ಹಿಂದೂ ಜನಜಾಗೃತಿ ಸಮಿತಿ ಸದಸ್ಯರು, ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಗಂಗಾ ನದಿ ಕೊಳಕು ಅಂತ ತಿಳಿದಿದ್ದಕ್ಕೆ ಯೋಗಿ ಸ್ನಾನ ಮಾಡಲಿಲ್ಲ: ಅಖಿಲೇಶ್ ಯಾದವ್

    ಕಾರ್ಯಕ್ರಮವನ್ನು ರದ್ದುಗೊಳಿಸಬೇಕು ಎಂದು ಸಚಿವ ಮಿಶ್ರಾ ಆಗ್ರಹಿಸಿದ್ದರು. ಪೊಲೀಸರು ನೋಟಿಸ್‌ ನೀಡಿದ ನಂತರ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು. ಇದಕ್ಕೆ ಕಾಂಗ್ರೆಸ್‌ ಹಾಗೂ ಕಾಮಿಡಿಯನ್‌ಗಳು ವಿರೋಧಿಸಿದ್ದರು.

  • ದಿಗ್ವಿಜಯ್ ಸಿಂಗ್, ಸಿದ್ದರಾಮಯ್ಯ, ಜಮೀರ್ ಪಾಕಿಸ್ತಾನದ ಪರ ಇರುವ ಕಾಂಗ್ರೆಸ್ಸಿಗರು: ಈಶ್ವರಪ್ಪ

    ದಿಗ್ವಿಜಯ್ ಸಿಂಗ್, ಸಿದ್ದರಾಮಯ್ಯ, ಜಮೀರ್ ಪಾಕಿಸ್ತಾನದ ಪರ ಇರುವ ಕಾಂಗ್ರೆಸ್ಸಿಗರು: ಈಶ್ವರಪ್ಪ

    -ಅರುಣ್ ಸಿಂಗ್ ಭೇಟಿಯ ನಂತರ ಬಿಜೆಪಿ ಅಸಮಾಧಾನ ಸರಿ ಹೋಗಲಿದೆ

    ಶಿವಮೊಗ್ಗ: ದಿಗ್ವಿಜಯ್ ಸಿಂಗ್, ಸಿದ್ದರಾಮಯ್ಯ ಹಾಗೂ ಜಮೀರ್ ಅಹಮದ್‍ರವರುಗಳು ಪಾಕಿಸ್ತಾನದ ಪರ ಇರುವ ಕಾಂಗ್ರೆಸ್ಸಿಗರು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ.

    ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ಟಿಕಲ್ 370ನ್ನು ರದ್ದು ಮಾಡುತ್ತೇವೆ ಎಂದು ದಿಗ್ವಿಜಯ್ ಸಿಂಗ್ ಹೇಳುತ್ತಾರೆ ಇದು ದಿಗ್ವಿಜಯ್ ಸಿಂಗ್ ಅವರ ರಾಷ್ಟ್ರದ್ರೋಹದ ಹೇಳಿಕೆ. ಅದೇ ರೀತಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೋವುಗಳನ್ನು ಪೂಜೆ ಮಾಡುತ್ತೇವೆ. ಅದೇ ರೀತಿ ಗೋವುಗಳನ್ನು ಹತ್ಯೆಯನ್ನು ಮಾಡುತ್ತೇವೆ ಎಂದು ಹೇಳುತ್ತಾರೆ. ಸಿದ್ದರಾಮಯ್ಯ ಅವರ ಈ ಹೇಳಿಕೆ ಪರ ಇದ್ದೇವೆ ಎಂದು ಜಮೀರ್ ಅಹಮದ್ ಹೇಳುತ್ತಾರೆ. ಹಾಗಾಗಿ, ಈ ಮೂರು ಜನ ಪಾಕಿಸ್ತಾನದ ಪರ ಇರುವವರು ಎಂದು ಸಚಿವ ಈಶ್ವರಪ್ಪನವರು ಕಿಡಿಕಾರಿದ್ದಾರೆ.

    ಕಾಂಗ್ರೆಸ್ ಹೇಳೋರು ಕೇಳೋರು ಇಲ್ಲದ ಪಕ್ಷ. ಈ ದೇಶದ ಗೋವಿನ ಬಗ್ಗೆ, ದೇಶದ ಭೂಮಿ ಕಾಶ್ಮೀರದ ಬಗ್ಗೆ ಗೌರವವಿಲ್ಲದ ಜನ ಕಾಂಗ್ರೆಸ್‍ನವರು. ಹೀಗಾಗಿಯೇ ಅವರು ಏನು ಬೇಕಾದರೂ ಹೇಳುತ್ತಾರೆ. ಆದರೆ ಬಿಜೆಪಿಯವರಿಗೆ ಹೇಳೋರು ಕೇಳೋರು ಇದ್ದಾರೆ ಎಂದರು.

    ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಇದೇ ಜೂ. 16, 17,18ಕ್ಕೆ ರಾಜ್ಯಕ್ಕೆ ಆಗಮಿಸುವ ಅರುಣ್ ಸಿಂಗ್ ಸಚಿವರು ಜೊತೆ ಹಾಗೂ ಕೋರ್ ಕಮಿಟಿ ಸಮಿತಿ ಸದಸ್ಯರ ಜೊತೆ ಸಭೆ ಮಾಡಲಿದ್ದಾರೆ. ಶಾಸಕರಿಗೂ ತಮ್ಮ ಅಭಿಪ್ರಾಯ ತಿಳಿಸಲು ಅವಕಾಶ ಇದೆ. ಇದು ಬಿಜೆಪಿ ಪಕ್ಷದ ವಿಶೇಷ. ಬಿಜೆಪಿಯಲ್ಲಿ ಹೇಳೋರು ಕೇಳೋರು ಇದ್ದಾರೆ ಎನ್ನುವುದಕ್ಕೆ ಅರುಣ್ ಸಿಂಗ್ ಬರುತ್ತಿರುವುದೇ ಸಾಕ್ಷಿ ಎಂದರು. ಜೊತೆಗೆ ಪಕ್ಷದಲ್ಲಿ ಕೆಲ ಗೊಂದಲಗಳಿವೆ ಆದರೆ ಅರುಣ್ ಸಿಂಗ್ ಬಂದು ಹೋದ ನಂತರ ಎಲ್ಲವೂ ಸರಿಯಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಶಿವಮೊಗ್ಗ ಜಿಲ್ಲೆಯಲ್ಲಿ ಜೂ.21 ರವರೆಗೆ ಲಾಕ್‍ಡೌನ್ ಮುಂದುವರಿಕೆ: ಸಚಿವ ಕೆ.ಎಸ್.ಈಶ್ವರಪ್ಪ

  • ದೇಶವಿರೋಧಿ ಚಿಂತನೆಯ ಕಾಂಗ್ರೆಸ್ ತನ್ನ ಹೆಸರು ಬದಲಿಸುವುದು ಸೂಕ್ತ: ಕ್ಯಾಪ್ಟನ್ ಗಣೇಶ್ ಕಾರ್ಣಿಕ್

    ದೇಶವಿರೋಧಿ ಚಿಂತನೆಯ ಕಾಂಗ್ರೆಸ್ ತನ್ನ ಹೆಸರು ಬದಲಿಸುವುದು ಸೂಕ್ತ: ಕ್ಯಾಪ್ಟನ್ ಗಣೇಶ್ ಕಾರ್ಣಿಕ್

    ಬೆಂಗಳೂರು: ಕಾಂಗ್ರೆಸ್ ಹಿರಿಯ ನೇತಾರ ದಿಗ್ವಿಜಯ್ ಸಿಂಗ್ ಅವರು, ಕಾಂಗ್ರೆಸ್ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಮ್ಮು- ಕಾಶ್ಮೀರಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ಕೊಡುವ ಮಾತನ್ನಾಡಿದ್ದಾರೆ. ಇದು ಕಾಂಗ್ರೆಸ್ ಟೂಲ್‍ಕಿಟ್‍ನ ಇನ್ನೊಂದು ಭಾಗವಾಗಿದೆ ಎಂದಿರುವ ರಾಜ್ಯ ಬಿಜೆಪಿ ಮುಖ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು, ದಿಗ್ವಿಜಯ ಸಿಂಗ್ ಅವರ ಹೇಳಿಕೆಯನ್ನು ಪಕ್ಷವು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ.

    ದೇಶದ ಪ್ರತಿಷ್ಠೆ ಮಣ್ಣು ಪಾಲು ಮಾಡುವುದು, ವಿಶ್ವವಂದ್ಯ ಪ್ರಧಾನಿಯವರ ಘನತೆಗೆ ಧಕ್ಕೆ ತರುವ ದುರುದ್ದೇಶ ಇದರ ಹಿಂದಿದೆ. ಟೂಲ್‍ಕಿಟ್ ವಿಷಯದಲ್ಲಿ ಈಗಾಗಲೇ ಬಿಜೆಪಿ, ಕಾಂಗ್ರೆಸ್ಸಿಗರ ದುರುದ್ದೇಶವನ್ನು ಜನರ ಗಮನಕ್ಕೆ ತಂದಿದೆ. ದಿಗ್ವಿಜಯ್ ಸಿಂಗ್ ಹೇಳಿಕೆಯಿಂದ ಆ ಪಕ್ಷವು ಚೀನಾ- ಪಾಕಿಸ್ತಾನದ ಜೊತೆ ನಿಂತಿರುವುದು ಸ್ಪಷ್ಟಗೊಳ್ಳುತ್ತದೆ. ಕಾಂಗ್ರೆಸ್ ಪಕ್ಷದ ಮುಖಂಡರು ಕ್ಲಬ್‍ಹೌಸ್ ಆ್ಯಪ್ ಮೂಲಕ ದೇಶವಿರೋಧಿ ಮಾತನ್ನಾಡುವ ನಾಚಿಗೆಗೆಟ್ಟ ಸಂದರ್ಶನ ನೀಡಿದ್ದು, ಆ ಪಕ್ಷವು ಪಾಕಿಸ್ತಾನದ ಪರ ಇರುವುದು ಸ್ಪಷ್ಟಗೊಳ್ಳುತ್ತಿದೆ. ಆದ್ದರಿಂದ ಕಾಂಗ್ರೆಸ್ಸಿನ ಹೆಸರನ್ನು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಐಎನ್‍ಸಿ) ಹೆಸರಿನ ಬದಲಾಗಿ ಆ್ಯಂಟಿ ನ್ಯಾಷನಲ್ ಕ್ಲಬ್‍ಹೌಸ್ ಎಂದು ಬದಲಿಸಿಕೊಳ್ಳಲಿ ಎಂದು ಅವರು ಒತ್ತಾಯಿಸಿದ್ದಾರೆ.

    ದಿಗ್ವಿಜಯ್ ಸಿಂಗ್ ಅವರು ಈ ಹಿಂದೆ ಪುಲ್ವಾಮಾ ದಾಳಿ ಇದೇನೂ ಗಂಭೀರ ವಿಚಾರವಲ್ಲ ಎಂದು ಹೇಳಿ ಪಾಕಿಸ್ತಾನದ ಕ್ರಮವನ್ನೇ ಸಮರ್ಥಿಸಲು ಮುಂದಾಗಿದ್ದರು. ಇದು ಭಯೋತ್ಪಾದಕರ ದಾಳಿ ಎಂದು ಒಪ್ಪಿಕೊಳ್ಳಲು ಅವರು ಸಿದ್ಧರಿರಲಿಲ್ಲ. ವಿದೇಶದ ಮಾಧ್ಯಮ ಪ್ರತಿನಿಧಿ ಜೊತೆ ಸಂದರ್ಶನದಲ್ಲಿ “ನರೇಂದ್ರ ಮೋದಿ ಅವರ ಅಧಿಕಾರ ಕಳೆದುಕೊಂಡರೆ” ಎಂಬ ಊಹಾತ್ಮಕ ಪ್ರಶ್ನೆಗೆ ದಿಗ್ವಿಜಯ್ ಸಿಂಗ್ ಅವರು ಈ ಉತ್ತರ ನೀಡಿರುವುದು ಕಾಂಗ್ರೆಸ್‍ನ ಪಾಕ್ ಪರ- ಚೀನಾಪರ ನೀತಿಯ ಪ್ರತಿಬಿಂಬದಂತಿದೆ. ಅಲ್ಲದೆ, ಜಮ್ಮು ಕಾಶ್ಮೀರದಲ್ಲಿ ಶಾಂತಿಯುತ ವಾತಾವರಣ ಬೇಡ ಎಂಬುದರ ಪ್ರತೀಕದಂತಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಕ್ಕಿಳಿಸಬೇಕು ಮತ್ತು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಈ ಹಿಂದೆ ಕಾಂಗ್ರೆಸ್ ಮುಖಂಡರಾದ ಮಣಿಶಂಕರ್ ಅಯ್ಯರ್ ಅವರೂ ಪಾಕಿಸ್ತಾನದಲ್ಲಿ ಸಂದರ್ಶನವೊಂದರಲ್ಲಿ ತಿಳಿಸಿದ್ದರು. 2014ರಲ್ಲಿ ಅಯ್ಯರ್ ಅವರು ಈ ಸಂದರ್ಶನ ಕೊಟ್ಟಾಗ ಈ ಹೇಳಿಕೆ ಕೇಳಿ ಟಿ.ವಿ. ಆಂಕರ್ ಆತಂಕಗೊಂಡಿದ್ದರು. ಇದರಲ್ಲಿ ನಮ್ಮ ಪಾತ್ರ ಏನಿದೆ ಎಂಬ ಪ್ರಶ್ನೆ ಮುಂದಿಟ್ಟಿದ್ದರು. ಇದು ಕಾಂಗ್ರೆಸ್ಸಿಗರ ಷಡ್ಯಂತ್ರವಲ್ಲದೆ ಮತ್ತೇನು? ಪಾಕಿಸ್ತಾನ ಪರ ಕಾಂಗ್ರೆಸ್ ಇರುವುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕೇ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 370ನೇ ವಿಧಿ ರದ್ದತಿ ಬಳಿಕ ಜಮ್ಮು ಕಾಶ್ಮೀರದಲ್ಲಿ ಶೇ.54ರಷ್ಟು ಉಗ್ರ ಚಟುವಟಿಕೆ ಇಳಿಕೆ

    ಮಣಿಶಂಕರ್ ಅಯ್ಯರ್ ಅವರು ಈ ಹಿಂದೆ ಜಮ್ಮು ಕಾಶ್ಮೀರವನ್ನು ಅಫಘಾನಿಸ್ತಾನಕ್ಕೆ ಹೋಲಿಸಿದ್ದರು ಎಂಬುದೂ ಗಮನಾರ್ಹ. ರಾಹುಲ್ ಗಾಂಧಿ ಅವರೂ 370ನೇ ವಿಧಿ ರದ್ದತಿ ಬಹುದೊಡ್ಡ ಪ್ರಮಾದ ಎಂದು ಟ್ವೀಟ್ ಮಾಡಿದ್ದರು. 2019ರ ಆಗಸ್ಟ್ ನಲ್ಲಿ ಈ ಟ್ವೀಟ್ ಮಾಡಲಾಗಿತ್ತು. ಜಮ್ಮು ಕಾಶ್ಮೀರದಲ್ಲಿ ಸಾವಿರಾರು ಜನರ ಹತ್ಯೆ ಆಗಿದೆ, ಜಮ್ಮು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವವೇ ಇಲ್ಲ ಎಂದಿದ್ದರು. ಇದಾದ ಎರಡು ದಿನಗಳ ಬಳಿಕ ಪಾಕಿಸ್ತಾನದ ರಾಷ್ಟ್ರಾಧ್ಯಕ್ಷರಾದ ಇಮ್ರಾನ್ ಖಾನ್ ಅವರು ಈ ಕುರಿತು ವಿಶ್ವಸಂಸ್ಥೆಗೆ ಪತ್ರ ಬರೆದಿದ್ದರು, ಜಮ್ಮು ಕಾಶ್ಮೀರದ ಪರಿಸ್ಥಿತಿ ಚೆನ್ನಾಗಿಲ್ಲ ಎಂಬ ರಾಹುಲ್ ಗಾಂಧಿ ಅವರ ಟ್ವೀಟ್ ಅನ್ನೂ ಅವರು ಉಲ್ಲೇಖಿಸಿದ್ದರು. ಇದು ಪಾಕಿಸ್ತಾನ ಮತ್ತು ಕಾಂಗ್ರೆಸ್ ನಡುವಿನ ಗುಪ್ತ ಒಪ್ಪಂದಕ್ಕೆ ಸಾಕ್ಷಿ ಅಲ್ಲವೇ ಎಂದು ಅವರು ಕೇಳಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರ ನಮಗೆ ರಾಷ್ಟ್ರೀಯತೆಯ ಪ್ರಶ್ನೆ: ಅಮಿತ್ ಶಾ

    ರಾಹುಲ್ ಗಾಂಧಿ ಅವರು ಕೋವಿಡ್ ಹೆಚ್ಚಳದ ಕುರಿತು 2020ರ ಫೆಬ್ರವರಿ 13ರಂದು ಟ್ವೀಟ್‍ನಲ್ಲಿ ಜಮ್ಮು -ಕಾಶ್ಮೀರವನ್ನು ಪಾಕಿಸ್ತಾನದ ಭಾಗ ಎಂದು ಭೂಪಟದಲ್ಲಿ ತೋರಿಸಿದ್ದರು. ಇದು ಕಾಂಗ್ರೆಸಿಗರ ದೇಶವಿರೋಧಿ ಚಿಂತನೆಯ ಭಾಗವಲ್ಲವೇ ಎಂದು ಅವರು ಪ್ರಶ್ನೆ ಮುಂದಿಟ್ಟಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿನ ನಿರ್ಬಂಧ ಹಿಂಪಡೆಯುವವರೆಗೆ ದ್ವಿಪಕ್ಷೀಯ ಮಾತುಕತೆ ಇಲ್ಲ- ಇಮ್ರಾನ್ ಖಾನ್

  • ರಾಮ ಮಂದಿರ ನಿರ್ಮಾಣಕ್ಕೆ ದಿಗ್ವಿಜಯ್ ಸಿಂಗ್ ದೇಣಿಗೆ

    ರಾಮ ಮಂದಿರ ನಿರ್ಮಾಣಕ್ಕೆ ದಿಗ್ವಿಜಯ್ ಸಿಂಗ್ ದೇಣಿಗೆ

    ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸಂಸದ ದಿಗ್ವಿಜಯ್ ಸಿಂಗ್ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. 1,11,111 ರೂ. ಮೌಲ್ಯದ ಚೆಕ್ ನ್ನು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೆಸರಲ್ಲಿ ನೀಡಿದ್ದಾರೆ.

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ದಿಗ್ವಿಜಯ್ ಸಿಂಗ್, ರಾಮ ಮಂದಿರ ನಿರ್ಮಾಣಕ್ಕೆ ಪಡೆಯುವ ದೇಣಿಗೆ ಸೌಹಾರ್ದಯುತವಾಗಿ ರಲಿ. ಈ ಹಿಂದೆ ದೇಣಿಗೆ ಪಡೆದುಕೊಂಡಿರುವ ವಿಶ್ವ ಹಿಂದೂ ಪರಿಷತ್ ಹಣಕಾಸಿನ ಮಾಹಿತಿಯನ್ನ ಜನರ ಮುಂದಿಡಲಿ ಎಂದು ಬರೆದಿದ್ದಾರೆ.

    ಕೆಲ ದಿನಗಳ ಹಿಂದೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯರಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ತನಾಥ್ ಸೇರಿದಂತೆ ಹಲವು ಮುಖಂಡರು ರಾಮ ಮಂದಿರಕ್ಕಾಗಿ ದೇಣಿಗೆ ನೀಡಿದ್ದಾರೆ. ದೇಶದ ಜನತೆ ಸಹ ತಮ್ಮ ಆರ್ಥಿಕ ಪರಿಸ್ಥಿತಿ ಅನುಗುಣವಾಗಿ ಮಂದಿರ ನಿರ್ಮಾಣದ ಧಾರ್ಮಿಕ ಕಾರ್ಯಕ್ಕೆ ಕೈ ಜೋಡಿಸುತ್ತಿದ್ದಾರೆ.